Tag: ಮೊಹಮ್ಮದ್ ಖಾಲಿದ್

  • ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ: ಖಾಲಿದ್ ಆಕ್ರೋಶ

    ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ: ಖಾಲಿದ್ ಆಕ್ರೋಶ

    ಬೆಂಗಳೂರು: ಎಲ್ಲಾ ಮುಸ್ಲಿಮರನ್ನು ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ ವ್ಯಕ್ತಪಡಿಸಿದರು.

    ಕುಕ್ಕೆ ಸುಬ್ರಹ್ಮಣ್ಯದ (Kukke Sri Subrahmanya Swami Temple) ಚಂಪಾಷಷ್ಠಿಯಲ್ಲಿ ಮುಸ್ಲಿಂ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಮಾತನಾಡಿದ ಅವರು, ಮುಸ್ಲಿಂ ಧರ್ಮದ ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಯಾವೊಬ್ಬ ಮುಸ್ಲಿಮರು ಅವರ ಪರವಾಗಿ ನಿಲ್ಲುವುದಿಲ್ಲ. ಬೇರೆ ಧರ್ಮಗಳಲ್ಲಿ ತಪ್ಪು ಮಾಡಿದವರ ಪರವಾಗಿ ನಿಲ್ಲುವುದನ್ನು ನಾವು ನೋಡಿದ್ದೇವೆ. ಮುಸ್ಲಿಂ ಮಹಿಳೆ ಮೇಲೆ ರೇಪ್ ಮಾಡಿದ 12 ಜನರು ಜೈಲಿಂದ ಹೊರಗಡೆ ಬಂದಾಗ ಸ್ವಾಗತ ಮಾಡಿದ್ದಾರೆ. ಮುಸ್ಲಿಂ ಅವರನ್ನು ಕೊಂದು ಜೈಲಿಂದ ಹೊರಗಡೆ ಬಂದವರನ್ನ ರಾಜಾತಿಥ್ಯ ನೀಡಿ, ರಾಜಕೀಯ ವ್ಯಕ್ತಿಯಾಗಿ ಬೆಳೆಸಿದ್ದಾರೆ ಎಂದು ಕಿಡಿಕಾರಿದರು.

    ಮುಸ್ಲಿಂ ಸಮುದಾಯದಲ್ಲಿ ಒಂದು ತಪ್ಪು ಮಾಡ್ತೇವೆ. ತಪ್ಪು ನಡೆದಾಗ ಮೌನವಾಗಿ ಇರುತ್ತೇವೆ. ಮುಸ್ಲಿಂ ವ್ಯಾಪಾರ ವಿರೋಧ ಮಾಡ್ತೀರಾ ಅಂದ್ರೆ, ಮುಸ್ಲಿಂ ರಾಷ್ಟ್ರಗಳಿಂದ ನೀವು ಯಾವುದನ್ನು ಖರೀದಿ ಮಾಡಬೇಡಿ ಎಂದ ಅವರು, ಒಂದು ಸಮಾಜ ಶಾಂತಿ ಇರಬೇಕು ಅಂದರೆ ಎಲ್ಲಾ ಜಾತಿಯರು ಚೆನ್ನಾಗಿರಬೇಕು. ಅದು ಅವಶ್ಯಕತೆ ಹಾಗೂ ಅನಿವಾರ್ಯತೆ ಕೂಡವಾಗಿದೆ. ಇಲ್ಲಾಂದ್ರೆ ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಕಿಡಿಕಾರಿದರು.

    kukke subramanya

    ಮುಸ್ಲಿಂ ವ್ಯಾಪಾರ ಬಹಿಷ್ಕಾರ : ರಾಜ್ಯದ ಕರಾವಳಿಯಲ್ಲಿ ಕಳೆದ ವರ್ಷ ಶುರುವಾಗಿದ್ದ ಧರ್ಮ ದಂಗಲ್ ಮತ್ತೆ ಸದ್ದು ಮಾಡ್ತಿದೆ. ಇಷ್ಟು ದಿನ ತಣ್ಣಗಿದ್ದ ಧರ್ಮದ ವಿಚಾರಗಳು ಇದೀಗ ಬಾಂಬ್ ಸ್ಫೋಟದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿಯ ಕುಕ್ಕೆ ಸುಬ್ರಹ್ಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ. ಇದನ್ನೂ ಓದಿ: ಮತ್ತೆ ಧರ್ಮ ದಂಗಲ್ ಶುರು- ಕುಕ್ಕೆಯಲ್ಲಿ ಷಷ್ಠಿ ವೇಳೆ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ

    ಕುಕ್ಕೆ ಸುಬ್ರಹ್ಮಣ್ಯದ ಜಾತ್ರಾ ಮಹೋತ್ಸವವಾದ ಚಂಪಾ ಷಷ್ಠೀಯ ಸಂದರ್ಭದಲ್ಲಿ ದೇವಸ್ಥಾನದ ವಠಾರದಲ್ಲಿ ಸಾಕಷ್ಟು ಸಂಖ್ಯೆಯ ತಾತ್ಕಾಲಿಕ ವ್ಯಾಪಾರ ಮಳಿಗೆಗಳನ್ನು ಹಾಕಲಾಗುತ್ತದೆ. ಪ್ರತಿವರ್ಷ ಹಿಂದೂ ಮುಸ್ಲಿಂ ಸೇರಿದಂತೆ ಎಲ್ಲಾ ಜಾತಿ ಧರ್ಮದವರೂ ಇಲ್ಲಿ ವ್ಯಾಪಾರ ನಡೆಸುತ್ತಿದ್ದರು. ಆದರೆ ಈ ಬಾರಿ ಹಿಂದೂ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ವ್ಯಾಪಾರ ನಡೆಸದಂತೆ ತಡೆಯಲು ಪ್ರಯತ್ನಿಸಿದ್ದಾರೆ. ಇದು ಚರ್ಚೆಗೆ ವೇದಿಕೆಯಾಗಿದ್ದು ಪರ-ವಿರೋಧಗಳು ಆರಂಭಗೊಂಡಿದೆ. ಇದನ್ನೂ ಓದಿ: ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್‌ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

    Live Tv
    [brid partner=56869869 player=32851 video=960834 autoplay=true]

  • ಸಮಾಜದಲ್ಲಿ ಬಿರುಕು ಮೂಡಿಸುತ್ತಿರುವ ಮುತಾಲಿಕ್‍ಗೆ MP ಅಥವಾ MLA ಸೀಟ್ ಫಿಕ್ಸ್ ಆದ್ರೆ ಸುಮ್ಮನಿರುತ್ತಾರೆ: ಮೊಹಮ್ಮದ್ ಖಾಲಿದ್

    ಸಮಾಜದಲ್ಲಿ ಬಿರುಕು ಮೂಡಿಸುತ್ತಿರುವ ಮುತಾಲಿಕ್‍ಗೆ MP ಅಥವಾ MLA ಸೀಟ್ ಫಿಕ್ಸ್ ಆದ್ರೆ ಸುಮ್ಮನಿರುತ್ತಾರೆ: ಮೊಹಮ್ಮದ್ ಖಾಲಿದ್

    ಬೆಂಗಳೂರು: ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಬಿರುಕು ಮೂಡಿಸಿ ಅದರಿಂದ ರಾಜಕೀಯ ಲಾಭ ಪಡೆಯಲು ಪ್ರಮೋದ್ ಮುತಾಲಿಕ್ ಹೀಗೆ ಅಭಿಯಾನ ಮಾಡುತ್ತಿದ್ದಾರೆ. ಅವರಿಗೆ ಎಂಪಿ ಅಥವಾ ಎಂಎಲ್‍ಎ ಸೀಟ್ ಫಿಕ್ಸ್ ಆದರೆ ಸುಮ್ಮನಿರುತ್ತಾರೆ ಎಂದು ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಖಾಲಿದ್ ಅಭಿಪ್ರಾಯಪಟ್ಟಿದ್ದಾರೆ.

    ಈ ಬಗ್ಗೆ ವೀಡಿಯೋ ಒಂದನ್ನು ಬಿಡುಗಡೆ ಮಾಡಿರುವ ಅವರು, ಅಕ್ಷಯ ತೃತೀಯ ದಿನ ಚಿನ್ನವನ್ನು ಹಿಂದೂ ವ್ಯಾಪಾರಿಗಳ ಬಳಿಯೇ ಕೊಂಡುಕೊಳ್ಳಿ ಯಾವುದೇ ಕಾರಣಕ್ಕೂ ಮುಸ್ಲಿಂ ಸಮುದಾಯದ ಚಿನ್ನದ ಅಂಗಡಿಯಲ್ಲಿ ಖರೀದಿಸಬೇಡಿ ಎಂದು ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. ಇದಕ್ಕೆ ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನ ಮೂಡಿದೆ. ಪ್ರಮೋದ್ ಮುತಾಲಿಕ್ ಹೋರಾಟದಲ್ಲಿ ಸತ್ವ ಇಲ್ಲ. ಅವರು ಚುನಾವಣೆಯ ಟಿಕೆಟ್ ಆಸೆಗಾಗಿ ಈ ಹೋರಾಟ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್ – ಮೌಲ್ವಿ, ಪತಿಯ ಸಹೋದರರಿಂದಲೇ ರೇಪ್

    ಚುನಾವಣೆಯಲ್ಲಿ ಟಿಕೆಟ್ ಪಡೆಯಲು ಹೋರಾಟ, ಹೋರಾಟ ಎಂದು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಅವರ ವೈಯಕ್ತಿಕ ಲಾಭ ಬೇಕಾಗಿದೆ. ಸಮಾಜ ಶಾಂತಿ ಕೆಡಿಸಲು ಮುತಾಲಿಕ್ ಪ್ರಯತ್ನಿಸುತ್ತಿದ್ದಾರೆ. ದಯವಿಟ್ಟು ಅವರಿಗೆ ಟಿಕೆಟ್ ನೀಡಿ ಆಗ ಈ ಹೋರಾಟ ಅಂತ್ಯವಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಸಿದ್ದರಾಮಯ್ಯನನ್ನು ನಾವು ಗೆಲ್ಲಿಸ್ತೀವಿ: ಎಚ್.ವಿಶ್ವನಾಥ್

    HIJAB

    ಚಿನ್ನವನ್ನು ವಿದೇಶದಿಂದ ಭಾರತ ರಫ್ತು ಮಾಡುತ್ತಿದೆ. ಅದೂ ಕೂಡ ಮುಸ್ಲಿಂ ರಾಷ್ಟ್ರಗಳಿಂದ ಹಾಗಾಗಿ ಈ ಬಗ್ಗೆ ಗಮನಕೊಡಿ ಮುತಾಲಿಕ್ ಹೋರಾಟದ ಬಗ್ಗೆ ಗಮನಕೊಡಬೇಡಿ ಎಂದು ಕಿಡಿಕಾರಿದ್ದಾರೆ.

    ರಾಜ್ಯದಲ್ಲಿ ಹಿಜಬ್‍ನಿಂದ ಶುರುವಾದ ಹಿಂದೂ ಮುಸ್ಲಿಮರ ನಡುವಿನ ತಿಕ್ಕಾಟ ದಿನದಿಂದ ದಿನಕ್ಕೆ ಬೇರೆ ಬೇರೆ ಸ್ವರೂಪ ಪಡೆಯುತ್ತ ಸಾಗುತ್ತಿದೆ. ಹಿಜಬ್ ಬಳಿಕ ಯುಗಾದಿಯ ಹೊಸತೊಡಗಿಗೆ ಮುಸ್ಲಿಮರು ಕಟ್ ಮಾಡುವ ಹಲಾಲ್ ಕಟ್ ಬ್ಯಾನ್ ಮಾಡಿ ಜಟ್ಕಾ ಕಟ್ ಅಭಿಯಾನ ಶುರು ಮಾಡಿದ್ದ ಹಿಂದೂ ಪರ ಸಂಘಟನೆಗಳು ಇದೀಗ ಮುಸ್ಲಿಂ ಸಮುದಾಯದ ಚಿನ್ನದ ಅಂಗಡಿ ವಿರುದ್ಧ ಅಭಿಯಾನ ಆರಂಭಿಸಿದ್ದಾರೆ.