Tag: ಮೊಹ್ಸಿನ್ ನಖ್ವಿ

  • ಏಪ್ಯಾ ಕಪ್ ಗೆದ್ದ ಭಾರತಕ್ಕೆ ವಿಶ್, ಬಳಿಕ ಟ್ವಿಸ್ಟ್ ಕೊಟ್ಟ ನಖ್ವಿ!

    ಏಪ್ಯಾ ಕಪ್ ಗೆದ್ದ ಭಾರತಕ್ಕೆ ವಿಶ್, ಬಳಿಕ ಟ್ವಿಸ್ಟ್ ಕೊಟ್ಟ ನಖ್ವಿ!

    ಮುಂಬೈ: ಏಷ್ಯಾಕಪ್ (Asia Cup) ಟ್ರೋಫಿ ಹಿಂದಿರುಗಿಸುವಂತೆ ಬಿಸಿಸಿಐ (BCCI) ಇಮೇಲ್ ಪತ್ರಕ್ಕೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqwi) ಪ್ರತಿಕ್ರಿಯಿಸಿದ್ದಾರೆ. ಟ್ರೋಫಿ ಗೆದ್ದ ಟೀಂ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸಿರುವ ನಖ್ವಿ ಕೊನೆಯಲ್ಲಿ ಟ್ವಿಸ್ಟ್ ಕೊಟ್ಟಿದ್ದಾರೆ. `ಬಿಸಿಸಿಐ ಅಥವಾ ತಂಡದ ಯಾರಾದ್ರೂ ಬಂದು ಟ್ರೋಫಿ ಪಡೆಯಬಹುದು’ ಅಂತ ಹೇಳಿದ್ದಾರೆ.

    ಮಂಗಳವಾರ (ಅ.21) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮೊಹ್ಸಿನ್ ನಖ್ವಿಗೆ ಏಷ್ಯಾ ಕಪ್ ಟ್ರೋಫಿ ಹಸ್ತಾಂತರಿಸುವಂತೆ ಇಮೇಲ್ ಮೂಲಕ ಪತ್ರ ಬರೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಏಪ್ಯಾ ಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ತಿಳಿಸುತ್ತೇನೆ. ಬಿಸಿಸಿಐ ಅಥವಾ ಭಾರತ ತಂಡದ ಯಾರಾದರೂ ಬಂದು ತೆಗೆದುಕೊಂಡು ಹೋಗಬಹುದು. ಅಲ್ಲದೇ ಭಾರತ ತಂಡಕ್ಕೆ ಏಷ್ಯಾ ಕಪ್ ಟ್ರೋಫಿಯನ್ನು ನೀಡಬೇಕೆಂದು ಬಯಸಿದರೆ, ದುಬೈನಲ್ಲಿ ಇನ್ನೊಮ್ಮೆ ಪ್ರಶಸ್ತಿ ವಿತರಿಸಲು ಕಾರ್ಯಕ್ರಮ ಆಯೋಜಿಸುವಂತೆ ಕೇಳಿಕೊಂಡಿದ್ದಾರೆ.ಇದನ್ನೂ ಓದಿ: ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸಿ – ಮೊಹ್ಸಿನ್‌ ನಖ್ವಿಗೆ ಬಿಸಿಸಿಐ ವಾರ್ನಿಂಗ್‌

    ಮೂಲಗಳ ಪ್ರಕಾರ, ಭಾರತಕ್ಕೆ ನಾನು ಟ್ರೋಫಿ ನೀಡುವುದಿಲ್ಲ, ಅದರ ಬದಲು ನವೆಂಬರ್ ಮೊದಲ ವಾರದಲ್ಲಿ ಕಾರ್ಯಕ್ರಮ ಆಯೋಜಿಸುತ್ತೇವೆ. ಭಾರತ ತಂಡದ ಯಾರಾದರೂ ಬಂದು ಟ್ರೋಫಿ ಪಡೆಯಬಹುದು ಎಂದು ತಿಳಿಸಿದ್ದಾರೆ. ನಖ್ವಿ ಪ್ರತಿಕ್ರಿಯೆನ್ನು ಬಿಸಿಸಿಯ ನಿರಾಕರಿಸಿದ್ದು, ನಮಗೆ ಏಷ್ಯಾ ಕಪ್ ಟ್ರೋಫಿಯೇ ಬೇಡ ಎನ್ನುವ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಜೊತೆಗೆ ಈ ಕುರಿತು ಐಸಿಸಿ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆಯಿದೆ.

    ಕಳೆದ ಸೆಪ್ಟೆಂಬರ್ 28ರಂದು ನಡೆದ ಟಿ೨೦ ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ, ಪಾಕ್ ವಿರುದ್ಧ ೫ ವಿಕೆಟ್‌ಗಳ ಜಯ ಸಾಧಿಸಿತು. ಆದ್ರೆ ನಖ್ವಿ ಅವರಿಂದ ಟ್ರೋಫಿ ಪಡೆಯಲು ಟೀಂ ಇಂಡಿಯಾ ನಿರಾಕರಿಸಿತು. ಹೀಗಾಗಿ ನಖ್ವಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಿಂದ ಹೊರಟರು ಜೊತೆಗೆ ಟ್ರೋಫಿಯನ್ನ ತೆಗೆದುಕೊಂಡು ಹೋದರು. ಹೀಗಾಗಿ ಭಾರತ ತಂಡ ಗೆದ್ದಿರುವ ಟ್ರೋಫಿಯನ್ನ ಹಿಂದಿರುಗಿಸುವಂತೆ ಹೇಳಿದೆ.

    ಟ್ರೋಫಿ ಎಲ್ಲಿದೆ?
    ಸದ್ಯ ಭಾರತ ಗೆದ್ದಿರುವ ಏಷ್ಯಾಕಪ್ ಟ್ರೋಫಿ ದುಬೈನ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಕಚೇರಿಯಲ್ಲೇ ಇದೆ. ತಮ್ಮ ಅನುಮತಿಯಿಲ್ಲದೇ ಯಾರೋ ಟ್ರೋಫಿಯನ್ನ ಹಸ್ತಾಂತರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ನಖ್ವಿಯವರ ಆಪ್ತ ಮೂಲದ ಪ್ರಕಾರ, ಟ್ರೋಫಿ ದುಬೈನ ಎಸಿಸಿ ಕಚೇರಿಯಲ್ಲಿದೆ. ತನ್ನ ಅನುಮತಿಯಿಲ್ಲದೇ ಯಾರಿಗೂ ಟ್ರೋಫಿ ಹಸ್ತಾಂತರಿಸಬಾರದು. ಒಂದು ವೇಳೆ ಹಸ್ತಾಂತರಿಸಬೇಕಿದ್ರೆ, ನಾನೇ ಭಾರತ ತಂಡ ಅಥವಾ ಬಿಸಿಸಿಐಗೆ ವೈಯಕ್ತಿಕವಾಗಿ ಟ್ರೋಫಿ ಹಸ್ತಾಂತರಿಸೋದಾಗಿ ಹೇಳಿದ್ದಾರೆ.ಇದನ್ನೂ ಓದಿ: ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

  • ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸಿ – ಮೊಹ್ಸಿನ್‌ ನಖ್ವಿಗೆ ಬಿಸಿಸಿಐ ವಾರ್ನಿಂಗ್‌

    ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸಿ – ಮೊಹ್ಸಿನ್‌ ನಖ್ವಿಗೆ ಬಿಸಿಸಿಐ ವಾರ್ನಿಂಗ್‌

    ಮುಂಬೈ: ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸುವಂತೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI), ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ACC) ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಮೊಹ್ಸಿನ್‌ ನಖ್ವಿಗೆ (Mohsin Naqvi) ಅಧಿಕೃತವಾಗಿ ಇ-ಮೇಲ್‌ ಪತ್ರ ಬರೆದಿದೆ.

    ಕಳೆದ ಸೆಪ್ಟೆಂಬರ್‌ 28ರಂದು ನಡೆದ ಟಿ20 ಏಷ್ಯಾಕಪ್‌ (Asia Cup ) ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ, ಪಾಕ್‌ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿತು. ಆದ್ರೆ ನಖ್ವಿ ಅವರಿಂದ ಟ್ರೋಫಿ ಪಡೆಯಲು ಟೀಂ ಇಂಡಿಯಾ ನಿರಾಕರಿಸಿತು. ಹೀಗಾಗಿ ನಖ್ವಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಿಂದ ಹೊರಟರು ಜೊತೆಗೆ ಟ್ರೋಫಿಯನ್ನ ತೆಗೆದುಕೊಂಡು ಹೋದರು. ಹೀಗಾಗಿ ಭಾರತ ತಂಡ ಗೆದ್ದಿರುವ ಟ್ರೋಫಿಯನ್ನ ಹಿಂದಿರುಗಿಸುವಂತೆ ಹೇಳಿದೆ.

    ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಬಿಸಿಸಿಐ ನಖ್ವಿ ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದೆ. ಅವರ ಕಡೆಯಿಂದ ಯಾವುದೇ ಉತ್ತರ ಬರದಿದ್ದರೆ, ಐಸಿಸಿಗೆ (ICC) ದೂರು ನೀಡುವುದಾಗಿ ಎಚ್ಚರಿಸಿದೆ.

    ಟ್ರೋಫಿ ಎಲ್ಲಿದೆ?
    ಸದ್ಯ ಭಾರತ ಗೆದ್ದಿರುವ ಏಷ್ಯಾಕಪ್‌ ಟ್ರೋಫಿ ದುಬೈನ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಕಚೇರಿಯಲ್ಲೇ ಇದೆ. ತಮ್ಮ ಅನುಮತಿಯಿಲ್ಲದೇ ಯಾರೋ ಟ್ರೋಫಿಯನ್ನ ಹಸ್ತಾಂತರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ನಖ್ವಿಯವರ ಆಪ್ತ ಮೂಲದ ಪ್ರಕಾರ, ಟ್ರೋಫಿ ದುಬೈನ ಎಸಿಸಿ ಕಚೇರಿಯಲ್ಲಿದೆ. ತನ್ನ ಅನುಮತಿಯಿಲ್ಲದೇ ಯಾರಿಗೂ ಟ್ರೋಫಿ ಹಸ್ತಾಂತರಿಸಬಾರದು. ಒಂದು ವೇಳೆ ಹಸ್ತಾಂತರಿಸಬೇಕಿದ್ರೆ, ನಾನೇ ಭಾರತ ತಂಡ ಅಥವಾ ಬಿಸಿಸಿಐಗೆ ವೈಯಕ್ತಿಕವಾಗಿ ಟ್ರೋಫಿ ಹಸ್ತಾಂತರಿಸೋದಾಗಿ ಹೇಳಿದ್ದಾರೆ.

  • ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

    ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

    ಇಸ್ಲಾಮಾಬಾದ್: ಏಷ್ಯಾ ಕಪ್‌ನಲ್ಲಿ (Asia Cup 2025) ಭಾರತದ ವಿರುದ್ಧದ ನಿಲುವಿಗಾಗಿ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಮುಖ್ಯಸ್ಥ ಹಾಗೂ ಸಚಿವ ಮೊಹ್ಸಿನ್‌ ನಖ್ವಿಯನ್ನು (Mohsin Naqvi) ಗೌರವಿಸಲು ಪಾಕಿಸ್ತಾನ ಸರ್ಕಾರ ಮುಂದಾಗಿದೆ.

    ದುಬೈನಲ್ಲಿ ನಡೆದ ಏಷ್ಯಾ ಕಪ್ ಫೈನಲ್ ಪಂದ್ಯದ ನಂತರ ನಖ್ವಿ ಅವರ ಕ್ರಮಗಳು ವ್ಯಾಪಕ ಟೀಕೆಗೆ ಗುರಿಯಾಗಿದ್ದರೂ, ಈಗ ಅವರನ್ನು ಪಾಕಿಸ್ತಾನದಲ್ಲಿ ಸನ್ಮಾನಿಸಲಾಗುವುದು. ಕರಾಚಿಯಲ್ಲಿ ಔಪಚಾರಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಯೋಜಿಸಲಾಗಿದೆ ಎಂದು ವರದಿಯಾಗಿದೆ. ಅಲ್ಲಿ ನಖ್ವಿ ಅವರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಪಿಪಿಪಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಇನ್ನೂ ಅಂತಿಮಗೊಳಿಸಿಲ್ಲ. ಇದನ್ನೂ ಓದಿ: ಬಿಸಿಸಿಐ ಮುಂದೆ ಮಂಡಿಯೂರಿದ ಪಾಕ್‌ ಸಚಿವ – ಕದ್ದೊಯ್ದಿದ್ದ ಏಷ್ಯಾ ಕಪ್‌ ವಾಪಸ್‌

    ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿತ್ತು. ನಂತರ ನಖ್ವಿ ಏಷ್ಯಾ ಕಪ್ ಟ್ರೋಫಿಯನ್ನು ವಿಜೇತರ ಪದಕಗಳ ಜೊತೆಗೆ ತಮ್ಮ ಹೋಟೆಲ್ ಕೋಣೆಗೆ ತೆಗೆದುಕೊಂಡು ಹೋದರು. ವ್ಯಾಪಕ ಟೀಕೆ ಬಳಿಕ ಟ್ರೋಫಿ ಮತ್ತು ಪದಕಗಳನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಲಾಗಿದೆ. ಆದರೆ, ಅವುಗಳನ್ನು ಯಾವಾಗ ಮತ್ತು ಹೇಗೆ ಭಾರತಕ್ಕೆ ತಲುಪಿಸಲಾಗುತ್ತದೆ ಎಂಬುದರ ಕುರಿತು ಯಾವುದೇ ಮಾಹಿತಿಯಿಲ್ಲ.

    ಕ್ರಿಕೆಟ್ ವಲಯದಲ್ಲಿ ನಖ್ವಿಯವರ ನಡೆಗೆ ಖಂಡಿಸಿದ್ದರೂ, ಏಷ್ಯಾ ಕಪ್‌ನಲ್ಲಿ ಭಾರತದ ವಿರುದ್ಧ ಇಂತಹ ನಿಲುವನ್ನು ತೆಗೆದುಕೊಂಡಿದ್ದಕ್ಕಾಗಿ ಅವರು ಶಹೀದ್ ಜುಲ್ಫಿಕರ್ ಅಲಿ ಭುಟ್ಟೋ ಎಕ್ಸಲೆನ್ಸ್ ಚಿನ್ನದ ಪದಕವನ್ನು ಸ್ವೀಕರಿಸಲಿದ್ದಾರೆ. ಕರಾಚಿಯಲ್ಲಿ ಔಪಚಾರಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಯೋಜಿಸಲಾಗಿದ್ದು, ಅಲ್ಲಿ ನಖ್ವಿ ಅವರಿಗೆ ಚಿನ್ನದ ಪದಕವನ್ನು ನೀಡಿ ಗೌರವಿಸಲಾಗುವುದು ಎಂದು ವರದಿಯಾಗಿದೆ. ಪಿಪಿಪಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಅವರನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಲು ಆಹ್ವಾನಿಸಲಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಇದನ್ನೂ ಓದಿ: ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

    ಸಿಂಧ್ ಮತ್ತು ಕರಾಚಿ ಬ್ಯಾಸ್ಕೆಟ್‌ಬಾಲ್ ಅಸೋಸಿಯೇಷನ್‌ಗಳ ಅಧ್ಯಕ್ಷ ವಕೀಲ ಗುಲಾಮ್ ಅಬ್ಬಾಸ್ ಜಮಾಲ್ ಅವರು ನಖ್ವಿ ಅವರನ್ನು ಸನ್ಮಾನಿಸಲಾಗುವುದು ಎಂದು ಘೋಷಿಸಿದ್ದಾರೆ. ಭಾರತದೊಂದಿಗೆ ರಾಜಕೀಯ ಮತ್ತು ಕ್ರೀಡಾ ಬಿಕ್ಕಟ್ಟಿನ ಸಮಯದಲ್ಲಿ ನಖ್ವಿಯವರ ಕ್ರಮಗಳು ರಾಷ್ಟ್ರೀಯ ಹೆಮ್ಮೆಯನ್ನು ಪುನಃಸ್ಥಾಪಿಸಿವೆ ಎಂದು ಜಮಾಲ್ ಹೇಳಿದ್ದಾರೆ.

  • ಬಿಸಿಸಿಐ ಮುಂದೆ ಮಂಡಿಯೂರಿದ ಪಾಕ್‌ ಸಚಿವ – ಕದ್ದೊಯ್ದಿದ್ದ ಏಷ್ಯಾ ಕಪ್‌ ವಾಪಸ್‌

    ಬಿಸಿಸಿಐ ಮುಂದೆ ಮಂಡಿಯೂರಿದ ಪಾಕ್‌ ಸಚಿವ – ಕದ್ದೊಯ್ದಿದ್ದ ಏಷ್ಯಾ ಕಪ್‌ ವಾಪಸ್‌

    ಮುಂಬೈ: ಬಿಸಿಸಿಐ ಮುಂದೆ ಕೊನೆಗೂ ಪಾಕ್‌ ಸಚಿವ, ಎಸಿಸಿ ಮುಖ್ಯಸ್ಥ ಮೊಹ್ಸಿನ್‌ ನಖ್ವಿ (Mohsin Naqvi) ಮಂಡಿಯೂರಿದ್ದಾರೆ. ಏಷ್ಯಾ ಕಪ್‌ ಟ್ರೋಫಿಯನ್ನು ಯುಎಇ ಕ್ರಿಕೆಟ್‌ ಮಂಡಳಿಗೆ ವಾಪಸ್‌ ಕೊಟ್ಟಿದ್ದಾರೆ.

    ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಿ ಏಷ್ಯಾ ಕಪ್‌ (Asia Cup) ಟ್ರೋಪಿ ಜಯಿಸಿತು. ಆದರೆ, ಪಾಕ್‌ ಸಚಿವ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ಭಾರತ ತಂಡ ನಿರಾಕರಿಸಿತು. ಈ ವೇಳೆ, ಟ್ರೋಫಿ ಕೊಡದೇ ಪಾಕ್‌ ಸಚಿವ ಉದ್ಧಟತನ ತೋರಿದರು. ಈ ಬೆಳವಣಿಗೆ ಸಾಕಷ್ಟು ವಿವಾದ ಸೃಷ್ಟಿಸಿತು. ಇದನ್ನೂ ಓದಿ: ಪಾಕ್‌ ಸಚಿವನಿಂದ ಏಷ್ಯಾಕಪ್‌ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಟೀಂ ಇಂಡಿಯಾ

    ಏಷ್ಯಾ ಕಪ್‌ ಟ್ರೋಫಿ ಕಳ್ಳತನ ಮಾಡಿದ್ದಾರೆಂಬ ಅಪವಾದವನ್ನೂ ನಖ್ವಿ ಹೊತ್ತುಕೊಂಡರು. ಟ್ರೋಫಿಯನ್ನು ಟೀಂ ಇಂಡಿಯಾ ಕ್ಯಾಪ್ಟನ್‌ ಕಚೇರಿಗೆ ಬಂದು ತೆಗೆದುಕೊಂಡು ಹೋಗಬಹುದು ಎಂಬಂತಹ ದರ್ಪದ ಮಾತುಗಳನ್ನು ಆಡಿದ್ದರು.

    ನಖ್ವಿ ನಡೆಯನ್ನು ಖಂಡಿಸಿದ ಬಿಸಿಸಿಐ, ಪಾಕ್‌ ಜೊತೆಗೆ ಕ್ರಿಕೆಟ್‌ ಪಂದ್ಯವಾಡುವ ಯಾವ ತಂಡದ ಜೊತೆಗೂ ಭಾರತದ ತಂಡ ಆಟವಾಡಲ್ಲ ಎಂದು ಖಡಕ್‌ ಸಂದೇಶ ರವಾನಿಸಿತು. ಬಿಸಿಸಿಐನಿಂದ ಹೇಳಿಕೆ ಹೊರಬಿದ್ದ ಬೆನ್ನಲ್ಲೇ, ಕದ್ದೊಯ್ದಿದ್ದ ಕಪ್‌ನ್ನು ನಖ್ವಿ ಹಿಂದಿರುಗಿಸಿದ್ದಾರೆ. ಇದನ್ನೂ ಓದಿ: ಚೆಕ್‌ ಹರಿದು ಎಸೆದ ಪಾಕ್‌ ಕ್ಯಾಪ್ಟನ್‌ ದುರಹಂಕಾರ – ಗೆದ್ರೂ ಟ್ರೋಫಿ ಇಲ್ಲದೇ ಸಂಭ್ರಮಿಸಿದ ಭಾರತ!

    ನವೆಂಬರ್‌ನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ದೂರು ಸಲ್ಲಿಸುವುದಾಗಿ ಭಾರತ ಬೆದರಿಕೆ ಹಾಕಿತ್ತು. ‘ಟ್ರೋಫಿ ಮತ್ತು ಪದಕಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವ ಹಕ್ಕನ್ನು ನೀಡುವುದಿಲ್ಲ. ಇದು ಅತ್ಯಂತ ದುರದೃಷ್ಟಕರ ಮತ್ತು ಕ್ರೀಡಾ ಮನೋಭಾವಕ್ಕೆ ವಿರುದ್ಧವಾಗಿದೆ. ಟ್ರೋಫಿ ಮತ್ತು ಪದಕಗಳನ್ನು ಆದಷ್ಟು ಬೇಗ ಭಾರತಕ್ಕೆ ಹಿಂದಿರುಗಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಬಿಸಿಸಿಐ ತಿಳಿಸಿತ್ತು.

  • ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

    ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

    ದುಬೈ: ಏಷ್ಯಾಕಪ್‌ ಫೈನಲ್‌ ಮುಗಿದ ಬಳಿಕವೂ ಹೈಡ್ರಾಮಾ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಟ್ರೋಫಿ ಎತ್ತಿಕೊಂಡು ಹೋಗಿ ಟ್ರೋಲ್‌ ಆದ ಬೆನ್ನಲ್ಲೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಮುಖ್ಯಸ್ಥ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಹೊಸ ನಾಟಕ ಆಡಲು ಆರಂಭಿಸಿದ್ದಾರೆ.

    ನಾನು ಟ್ರೋಫಿಯನ್ನು ಟೀಂ ಇಂಡಿಯಾಗೆ ನೀಡುತ್ತೇನೆ. ಆದರೆ ‘ಔಪಚಾರಿಕ ಸಮಾರಂಭ’ವನ್ನು ಆಯೋಜಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದನ್ನೂ ಓದಿ: 1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ

    ತನ್ನ ಕೈಯಿಂದ ಟ್ರೋಫಿ ಪಡೆಯಲು ಭಾರತ ನಿರಾಕರಿಸಿದ ಬೆನ್ನಲ್ಲೇ ನಖ್ವಿ ಎಸಿಸಿ ಈ ಹೊಸ ಷರತ್ತನ್ನು ನಖ್ವಿ ಇರಿಸಿದ್ದಾರೆ. ಆದರೆ ಈ ರೀತಿಯ ಕಾರ್ಯಕ್ರಮ ನಡೆಯದ ಟ್ರೋಫಿ ಹೇಗೆ ಭಾರತಕ್ಕೆ ಹೇಗೆ ಹಸ್ತಾಂತರವಾಗುತ್ತದೆ ಎನ್ನುವುದೇ ಸದ್ಯ ಕುತೂಹಲ. ಇದನ್ನೂಓದಿ: Asia Cup 2025 | ಚಾಂಪಿಯನ್‌ ಭಾರತ ತಂಡಕ್ಕೆ ಬಿಸಿಸಿಐನಿಂದ 21 ಕೋಟಿ ಗಿಫ್ಟ್‌

    ನಖ್ವಿ ನಡೆ ವಿರುದ್ಧ ಐಸಿಸಿಗೆ ದೂರು ನೀಡಲು ಬಿಸಿಸಿಐ ನಿರ್ಧರಿಸಿದೆ. ಟೀಂ ಇಂಡಿಯಾದ ನಿಲುವನ್ನು ಬಿಸಿಸಿಐ ಸಮರ್ಥಿಸಿಕೊಂಡಿದೆ. ನಮ್ಮ ವಿರುದ್ಧ ಯುದ್ಧ ನಡೆಸುತ್ತಿರುವ ವ್ಯಕ್ತಿಯಿಂದ ಭಾರತ ಟ್ರೋಫಿ ಸ್ವೀಕರಿಸಲು ಸಾಧ್ಯವಿಲ್ಲ. ಟ್ರೋಫಿ ಮತ್ತು ಪದಕಗಳನ್ನು ಆದಷ್ಟು ಬೇಗ ಭಾರತಕ್ಕೆ ಹಿಂದಿರುಗಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಅಂದಿದೆ. ಹೀಗಾಗಿ ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಪ್ರತಿಭಟಿಸಲು ಬಿಸಿಸಿಐ ನಿರ್ಧರಿಸಿದೆ.

  • T20 World Cup: ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಕ್ರಿಕೆಟಿಗರಿಗೆ ಲಕ್ಷ ಲಕ್ಷ ಬಹುಮಾನ ಘೋಷಿಸಿದ ಪಾಕ್‌!

    T20 World Cup: ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಕ್ರಿಕೆಟಿಗರಿಗೆ ಲಕ್ಷ ಲಕ್ಷ ಬಹುಮಾನ ಘೋಷಿಸಿದ ಪಾಕ್‌!

    – ಈ ಬಾರಿ ಪಾಕ್‌ ವಿಶ್ವಕಪ್‌ ಗೆಲ್ಲಲಿದೆ, ಇದು ದೇವರ ಇಚ್ಛೆ ಎಂದ ಪಿಸಿಬಿ ಮುಖ್ಯಸ್ಥ

    ಇಸ್ಲಾಮಾಬಾದ್‌: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಪಾಕಿಸ್ತಾನ ದಯನೀಯ ಸ್ಥಿತಿ ತಲುಪಿದೆ. ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ. 1 ಕಿಲೋ ಗೋಧಿ ಹಿಟ್ಟಿಗೆ 800 ಪಾಕಿಸ್ತಾನಿ ರೂ.ಗಳು, 1 ರೊಟ್ಟಿಯ ಬೆಲೆ 25 ಪಾಕಿಸ್ತಾನಿ ರೂ. ತಲುಪಿದೆ. ಪೆಟ್ರೋಲ್‌ ದರವಂತು ಹೇಳತೀರದಾಗಿದೆ. ಹೀಗಿದ್ದರೂ ಕ್ರಿಕೆಟ್‌ ಆಟಗಾರರಿಗೆ (Pak Cricketers) ಬಂಪರ್‌ ಬಹುಮಾನ ಘೋಷಿಸಿದೆ.

    ಹೌದು. ಜೂನ್‌ ತಿಂಗಳಲ್ಲಿ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ (T20 World Cup) ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಗೆದ್ದರೆ ತಂಡದ ಪ್ರತಿ ಆಟಗಾರನಿಗೂ 1 ಲಕ್ಷ US ಡಾಲರ್‌ (ಭಾರತದ ರೂಪಾಯಿ 83.44 ಲಕ್ಷ ರೂ.) ಬಹುಮಾನ ನೀಡುವುದಾಗಿ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಘೋಷಣೆ ಮಾಡಿದೆ.

    ಪಾಕ್‌ ತಂಡವು ಐರ್ಲೆಂಡ್‌ ಮತ್ತು ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಗೆ ಹೊರಡುವ ಮುನ್ನ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ (Mohsin Naqvi) ಆಟಗಾರರೊಂದಿಗೆ 2 ಗಂಟೆಗಳ ಕಾಲ ಸಮಾಲೋಚನೆ ನಡೆಸಿದರು. ಈ ವೇಳೆ ಬಹುಮಾನದ ಮೊತ್ತವನ್ನು ಘೋಷಣೆ ಮಾಡಿದರಲ್ಲದೇ ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿಯುವ ಘನತೆಗೆ ಹೋಲಿಸಿದ್ರೆ, ಈ ಹಣ ಏನೇನು ಅಲ್ಲ. ಆದ್ದರಿಂದ ಟಿ20 ವಿಶ್ವಕಪ್‌ ಗೆದ್ದರೆ ತಂಡದ ಪ್ರತಿಯೊಬ್ಬ ಆಟಗಾರನಿಗೂ 100,000 ಯುಎಸ್‌ ಡಾಲರ್‌ ಬಹುಮಾನ ನೀಡುವುದಾಗಿ ಘೋಷಿಸಿದ್ದೇವೆ ಎಂದು ತಿಳಿಸಿದರು.

    ಇದೇ ವೇಳೆ ಆಟಗಾರರಿಗೆ ಖಡಕ್‌ ಸೂಚನೆ ನೀಡಿದ ಪಿಸಿಬಿ ಮುಖ್ಯಸ್ಥ, ಸದ್ಯಕ್ಕೆ ನೀವು ಯಾರ ಬಗ್ಗೆಯೂ ಕಾಳಜಿ ವಹಿಸಬೇಡಿ, ತಂಡಕ್ಕಾಗಿ, ದೇಶಕ್ಕಾಗಿ ಆಡುವ ಬಗ್ಗೆ ಮಾತ್ರ ಗಮನಹರಿಸಿ. ತಂಡದಲ್ಲಿ ಎಲ್ಲಾ ಆಟಗಾರರು ಒಗ್ಗಟ್ಟಾಗಿದ್ದಾರೆ, ವೇಗಿ ಶಾಹೀನ್ ಶಾ ಆಫ್ರಿದಿ ಉತ್ತಮ ಪ್ರದರ್ಶನ ನೀಡುತ್ತಾರೆ ಎಂಬ ಭರವಸೆಯೂ ನಮಗಿದೆ. ಈ ಸಲ ಟ್ರೋಫಿ ಗೆಲ್ಲಬೇಕು ಎಂಬುದು ದೇವರ ಇಚ್ಚೆ. ಖಚಿತವಾಗಿ ನಮ್ಮ ತಂಡ ಗೆಲುವು ಸಾಧಿಸುತ್ತದೆ. ಈ ದೇಶವು ನಿಮ್ಮ ಮೇಲೆ ಸಾಕಷ್ಟು ನಿರೀಕ್ಷೆಯಿಟ್ಟಿದೆ. ಅವುಗಳನ್ನು ಯಾವುದೇ ಕಾರಣಕ್ಕೂ ಹುಸಿಗೊಳಿಸಬಾರದು ಎಂದು ಸಲಹೆ ನೀಡಿದರು.

    ಇದೇ ವೇಳೆ ವಿಕೆಟ್‌ ಕೀಪರ್‌-ಬ್ಯಾಟರ್‌ ಮೊಹಮ್ಮದ್‌ ರಿಜ್ವಾನ್‌ ಟಿ20 ಕ್ರಿಕೆಟ್‌ನಲ್ಲಿ 3,000 ರನ್‌ ಪೂರೈಸಿದ್ದರ ನೆನಪಿಗಾಗಿ ಕೆಲ ಆಟಗಾರರಿಗೆ ಪಾಕ್‌ ತಂಡದ ಜೆರ್ಸಿಯನ್ನು ವಿತರಿಸಲಾಯಿತು.