-ರಾಜಧಾನಿಯಲ್ಲೂ ಗುಜರಾತ್ ಇತಿಹಾಸ ರಿಪೀಟ್ ಆಗೇಬಿಡುತ್ತಾ..?
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಕರ್ನಾಟಕ ವಿಧಾನಸಭಾ ಚುಣಾವಣೆಯ (Karnataka Election 2023) ಕೊನೆಯ ದಿನದ ಪ್ರಚಾರ ಮುಗಿಸಿದ್ದಾರೆ. ಇದೀಗ ಪ್ರಧಾನಿ ಬಂದು ಹೋದ ಮೇಲೆ ಬಿಜೆಪಿ ಗೆದ್ದೇ ಗೆಲ್ಲುತ್ತೆ ಅನ್ನೋ ವಿಶ್ವಾಸ ಕಮಲ ಪಾಳದಲ್ಲಿ ಮೂಡಿದೆ.
ಸಿಲಿಕಾನ್ ಸಿಟಿಯಲ್ಲಿ ಮೋದಿ 40 ಕಿ.ಮೀ ಮೆಗಾ ರೋಡ್ ಎಫೆಕ್ಟ್ ಏನು? ರಾಜಧಾನಿಯಲ್ಲೂ ಗುಜರಾತ್ ಇತಿಹಾಸ ರಿಪೀಟ್ ಆಗೇಬಿಡುತ್ತಾ? ಬೆಂಗಳೂರಿನ ಮೇಲೆ ಬಿಜೆಪಿ ಮತ್ತೆ ಹಿಡಿತ ಸಾಧಿಸಲು ರಹದಾರಿಯಾಗುತ್ತಾ ನಮೋ ರೋಡ್ ಶೋ..? ಅನ್ನೋ ಬಗ್ಗೆ ಬಿಜೆಪಿ ನಾಯಕರು ಲೆಕ್ಕಾಚಾರ ಹಾಕುತ್ತಿದ್ದಾರೆ. ಇದನ್ನೂ ಓದಿ: ಮೋದಿ ರೋಡ್ಶೋ; `ಜೈ ಬಜರಂಗಿ’ ಪೋಸ್ಟರ್ ಹಿಡಿದು ಗಮನ ಸೆಳೆದ ಮುಸ್ಲಿಂ ಮಹಿಳೆ
ಬೆಂಗಳೂರಿನಲ್ಲಿ ಗುಜರಾತ್ನ ಅಹಮದಾಬಾದ್ ಮಾದರಿಯ ರೋಡ್ ಶೋ ನಡೆಸಿದ್ದ ಮೋದಿ ಸಕ್ಸಸ್ ತಂದುಕೊಟ್ಟಿದ್ದರು. ಬೆಂಗಳೂರಿನಲ್ಲೂ ಅದೇ ಪ್ರಮಾಣದ ಸಕ್ಸಸ್ ತಂದುಕೊಡುವ ನಿರೀಕ್ಷೆಯನ್ನ ಹುಟ್ಟುಹಾಕಿದ್ದಾರೆ. ಗುಜರಾತ್ ರೋಡ್ ಶೋ ಹಿಸ್ಟರಿ ಇಲ್ಲೂ ಮರುಕಳಿಸುವ ಭರವಸೆಯಲ್ಲಿ ಬಿಜೆಪಿ ಇದೆ.
ಈ ಬಾರಿ ಚುನಾವಣೆಯಲ್ಲಿ ಹಳೆ ಮೈಸೂರು ಹಾಗೂ ಬೆಂಗಳೂರು ನಗರವನ್ನ ಹೆಚ್ಚಾಗಿ ಟಾರ್ಗೆಟ್ ಮಾಡಿರುವ ಬಿಜೆಪಿ ಬಹುಮತದ ಡಬಲ್ ಎಂಜಿನ್ ಸರ್ಕಾರ ಸ್ಥಾಪಿಸುವ ನಿರೀಕ್ಷೆ ಹೊಂದಿದೆ. ಸೋಮವಾರ (ಮೇ 8) ಬಹಿರಂಗಪ್ರಚಾರಕ್ಕೆ ತೆರೆ ಬೀಳಲಿದ್ದು, ಯಾವ ಪಕ್ಷದ ಹಣೆಬರಹ ಹೇಗಿದೆ ಅನ್ನೋದನ್ನ ಕಾದುನೋಡಬೇಕಿದೆ.
ಬೆಳಗಾವಿ: ದೇಶದಲ್ಲಿ ಕರ್ನಾಟಕವನ್ನ ನಂ.1 ರಾಜ್ಯ ಮಾಡಲು ಬಿಜೆಪಿ (BJP) ಯೋಜನೆ ರೂಪಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.
ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ʻಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ನಾಡಿನ ಜನರಿಗೆ ನನ್ನ ನಮಸ್ಕಾರಗಳುʼ ಎನ್ನುತ್ತಾ ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ನಾನು ಮೊದಲು ನಿಮ್ಮೆಲ್ಲರ ಕ್ಷಮೆ ಕೇಳುವೆ, ಬರಲು ಸ್ವಲ್ಪ ತಡವಾಯಿತು ಎಂದು ಕ್ಷಮೆ ಕೋರಿದರು.
ಮುಂದುವರಿದು, ಕಳೆದ 4 ದಿನಗಳಿಂದ ಕರ್ನಾಟಕದ ವಿವಿಧೆಡೆ ಭೇಟಿ ನೀಡಿದ್ದೇನೆ. ಈ ಸಲ ಪೂರ್ಣ ಬಹುಮತದ ಬಿಜೆಪಿ ಸರ್ಕಾರ ಬರುತ್ತದೆ. ಯುವಕರು, ಮಹಿಳೆಯರು, ರೈತರು, ಕಾರ್ಮಿಕರು, ನಗರ, ಹಳ್ಳಿ ಸೇರಿ ಎಲ್ಲ ಕಡೆ ಉತ್ಸಾಹ ಇದೆ. 4 ದಿಕ್ಕಿನಿಂದಲೂ ಒಂದೇ ಧ್ವನಿ ಕೇಳಿ ಬರುತ್ತಿದೆ. ʻಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರʼ ಎಂಬುದು ಕೇಳಿ ಬರುತ್ತಿದೆ. ಮತದಾನಕ್ಕೆ ಒಂದೇ ವಾರ ಬಾಕಿ ಇದೆ. ಡಬಲ್ ಇಂಜಿನ್ ಸರ್ಕಾರ ಪುನರಾಯ್ಕೆಯ ಶಂಖನಾದ ಜನರಿಂದ ಕೇಳಿ ಬಂದಿದೆ. ಇದಕ್ಕೆಲ್ಲ ಕಾರಣ ಬಡವರ, ಮಧ್ಯಮವರ್ಗದ ವಿಶ್ವಾಸ ಗಳಿಸಿದ್ದು ಎಲ್ಲರ ವಿಶ್ವಾಸ ಗಳಿಸಿದ್ದೆ ಇದಕ್ಕೆಲ್ಲ ಕಾರಣ ಎಂದು ಹೇಳಿದರು. ಇದನ್ನೂ ಓದಿ: ಎಸಿಎಫ್ ಆಯ್ಕೆ ಮುಸುಕಿನ ಗುದ್ದಾಟ – ಸ್ಪರ್ಧಾಕಾಂಕ್ಷಿಗಳ ಹಿತ ಕಾಯುವಂತೆ KSCEAA ಒತ್ತಾಯ
ಕರ್ನಾಟಕದಲ್ಲಿ ಈಗ ವಿಮಾನ ನಿಲ್ದಾಣ, ಆಧುನಿಕ ರೈಲ್ವೆ ನಿಲ್ದಾಣಗಳು ಆಗುತ್ತಿವೆ. ಕರ್ನಾಟಕವನ್ನು ನಂ.1 ಮಾಡಲು ಬಿಜೆಪಿ ಯೋಜನೆ ರೂಪಿಸಿದೆ. ಹಾಗಾಗಿ ಬಿಜೆಪಿಗೆ ಮತ ಹಾಕಿದರೆ, ದೇಶದಲ್ಲೇ ಕರ್ನಾಟಕವನ್ನು ನಂ.1 ಮಾಡಲು ಮತ ಹಾಕಿದಂತೆ ಎಂದು ಎಚ್ಚರಿಸಿದರು.
ಕರ್ನಾಟಕದ ಜನ ಕಾಂಗ್ರೆಸ್, ಜೆಡಿಎಸ್ನ ಶಾರ್ಟ್ ಕಟ್ ಸರ್ಕಾರದ ಬಗ್ಗೆ ಎಚ್ಚರಬಾಗಿರಬೇಕು. ಶಾರ್ಟ್ ಕಟ್ ರಾಜಕಾರಣ ಮಾಡುವುದು ಅಂದ್ರೆ ಸಮಾಜವನ್ನು ವಿಭಜಿಸಿದಂತೆ. ಇಂತಹ ರಾಜಕೀಯ ಮಾಡುವವರು ಒಡೆದು ಆಳುವ ನೀತಿ ಅನುಸರಿಸಿದಂರತೆ. ಇದು ವಿಕಾಸದ ದಾರಿ ಆಗುವುದಿಲ್ಲ. ಈ ಶಾರ್ಟ್ ಕಟ್ ರಾಜಕಾರಣದಿಂದ ಅಭಿವೃದ್ಧಿ ಆಗುವುದಿಲ್ಲ. ಹಿಂದೆಲ್ಲ ಅವರು ಮಾಡಿರಬಹುದು. ಆದರೆ, ಇದು 3ನೇ ಪೀಳಿಗೆಯ ಸಮಾಜ ಇದೆ. ಈ ಯುವ ಪೀಳಿಗೆ ಶಾರ್ಟ್ ಕಟ್ ನವರ ಕೈಗೆ ಅಧಿಕಾರ ಕೊಡುವುದಿಲ್ಲ. ದೇಶದಲ್ಲಿ ಅಸಮಾನತೆ ಹೋಗಲಾಡಿಸಿದ್ದು ಬಿಜೆಪಿ ಸರ್ಕಾರ, ಕರ್ನಾಟಕದಲ್ಲಿ ಬಿಜೆಪಿ ಸಮತೋಲನದ ಆಡಳಿತ ಮಾಡುತ್ತಿದೆ. ಒಗ್ಗಟ್ಟಿನಲ್ಲಿ ಕರ್ನಾಟಕ ಸರ್ಕಾರದ ಭವಿಷ್ಯ ಇದೆ ಎಂಬುದನ್ನ ಅರಿತು, ನೀವೆಲ್ಲರೂ ಬಿಜೆಪಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು.
ಜನಸೇವೆಯೇ ಜನಾರ್ಧನ ಸೇವೆ. ಬಿಜೆಪಿ ನಿಮ್ಮ ಸೇವಕನಂತೆ ಕೆಲಸ ಮಾಡುತ್ತದೆ. ನಾನು ಸೇವಕನಂತೆ ಕೆಲಸ ಮಾಡುತ್ತಿರುವೆ. ಆದ್ರೆ ಕಾಂಗ್ರೆಸ್ ಸೇವೆ ದೆಹಲಿಯಲ್ಲಿನ ಕುಟುಂಬದ ಮೇಲೆ ಇದೆ. ಕಾಂಗ್ರೆಸ್ ರಿಮೋಟ್ ಇರುವುದು ದೆಹಲಿಯ ಒಂದು ಕುಟುಂಬದ ಮನೆಯಲ್ಲಿ. ಜೆಡಿಎಸ್ ಒಂದು ಪರಿವಾರದ ಪ್ರೈವೆಟ್ ಲಿಮಿಟೆಡ್ ಕಂಪನಿ. ಆದರೆ ಮೋದಿಗೆ ಈ ಕುಟುಂಬ ರಾಜಕಾರಣ ಗೊತ್ತಿಲ್ಲ. ಜನರೇ ನನ್ನ ಪರಿವಾರ, ನನ್ನ ಕುಟುಂಬ. ಜನರ ಸುಖ-ದುಃಖಗಳೇ ನನಗೆ ನನ್ನ ಕುಟುಂಬದ ಸುಖ-ದುಃಖಗಳಿದ್ದಂತೆ ಎಂದು ಭಾವುಕರಾದರು. ಇದನ್ನೂ ಓದಿ: ಭಕ್ತ ಅಂತ ಹೇಳಿಕೊಳ್ಳೋದಲ್ಲ ಆಂಜನೇಯನ ತರ ಕೆಲಸ ಮಾಡಬೇಕು: ಡಿಕೆಶಿಗೆ ಸುಧಾಕರ್ ತಿರುಗೇಟು
ಕಾಂಗ್ರೆಸ್ ನೇತೃತ್ವದ ಸರ್ಕಾರಗಳನ್ನ ಎಲ್ಲ ಕಡೆ ತಿರಸ್ಕಾರ ಮಾಡಲಾಗಿದೆ. ದೇಶದಲ್ಲಿ ಮೂರು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಇದೆ. ಜೆಡಿಎಸ್ ಮೂರು ಜಿಲ್ಲೆಯ ಪಕ್ಷ. 2018ರಲ್ಲಿ ಅವರೊಂದಿಗೆ ಸೇರಿ ಸರ್ಕಾರ ಮಾಡಿದ್ದರು. ಕಾಂಗ್ರೆಸ್ ಮುಳುಗುತ್ತಿರುವ ಹಡಗಾಗಿದೆ. ಇವರಿಗೆ ತಮ್ಮ ಭವಿಷ್ಯ ನಿರ್ಮಾಣವೇ ಗೊತ್ತಿಲ್ಲ. ಇಂಥವರು ಜನರ ಭವಿಷ್ಯ ನಿರ್ಮಾಣ ಮಾಡುತ್ತಾರಾ. ನಾನು ಹೇಳುತ್ತಿರುವುದು ಕೇವಲ ಭಾಷಣದ ಮಾತುಗಳಲ್ಲ. ಈ ಹಿಂದೆಯೂ ನುಡಿದಂತೆ ನಡೆದಿದ್ದೇನೆ. ಇವತ್ತು ಮೆಡಿಕಲ್, ತಾಂತ್ರಿಕ ಸ್ಪರ್ಧಾತ್ಮಕ ಪರೀಕ್ಷೆ, ಎಲ್ಲ ಭರ್ತಿ ಪರೀಕ್ಷೆಗಳು ಸ್ಥಳೀಯ ಭಾಷೆಯಲ್ಲಿ ಆಗುತ್ತಿವೆ. ಇದನ್ನೆಲ್ಲ ಜನರಿಗಾಗಿ ನಾವು ಮಾಡಿದ್ದೇವೆ ಎಂದು ತಮ್ಮ ಸರ್ಕಾರದ ಸಾಧನೆಗಳನ್ನ ಪ್ರಸ್ತುತಪಡಿಸಿದರು.
ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಅದ್ಧೂರಿ ರೋಡ್ಶೋ ನಡೆಸಿರುವ ಪ್ರಧಾನಿ ಮೋದಿ ಅವರು ಭಾನುವಾರ ಮೈಸೂರಿನ ವಿವಿಧೆಡೆ ರೋಡ್ ಶೋ (Modi Roadshow) ನಡೆಸುತ್ತಿದ್ದು, ವಿವಿಧ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
5 ಕ್ಷೇತ್ರಗಳ ಮತದಾರರ ಮನ ಗೆಲ್ಲಲು ಅಖಾಡಕ್ಕಿಳಿದಿರುವ ಮೋದಿ ದಸರಾ ಜಂಬೂ ಸವಾರಿ ಮಾರ್ಗದಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಗನ್ಹೌಸ್ ವೃತ್ತದಿಂದ ರೋಡ್ ಶೋ ಆರಂಭವಾಗಲಿದ್ದು, ಅದಕ್ಕೂ ಮುನ್ನ ಜೆಎಸ್ಎಸ್ ವಿದ್ಯಾಪೀಠದ ಮುಂಭಾಗದಲ್ಲಿರುವ ಬಸವ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: ಮೋದಿ ʻಮನ್ ಕಿ ಬಾತ್ʼ100ನೇ ಸಂಚಿಕೆ ಇಂದು ಪ್ರಸಾರ
ರೋಡ್ ಶೋಗೆ ಸಜ್ಜಾದ ಮೈಸೂರು: ಮೈಸೂರಿನ 5 ಕ್ಷೇತ್ರಗಳನ್ನ ಗುರಿಯಾಗಿಸಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸಂಸ್ಕೃತ ಪಾಠ ಶಾಲೆ ಸರ್ಕಲ್, ಕಾಪೋರೇಷನ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ಕೆ.ಆರ್ ಸರ್ಕಲ್ ಆಯುರ್ವೇದ ಸರ್ಕಲ್, ಹಳೆ ಆರ್ಎಂಸಿ, ಹೈವೆ ಸರ್ಕಲ್, ಮಿಲೀನಿಯಂ ಸರ್ಕಲ್ ವರೆಗೆ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ ನಾಗರೀಕರಿಗೆ ಕೂರಲು ದೇವರಾಜ ಮಾರುಕಟ್ಟೆ, ಹಳೆ ಎಪಿಎಂಸಿ ಸರ್ಕಲ್, ಗನ್ ಹೌಸ್ ಸೇರಿದಂತೆ 5 ಕಡೆ ವ್ಯವಸ್ಥೆ ಮಾಡಲಾಗಿದೆ. ಸುಮಾರು 1 ಗಂಟೆ ಸಮಯದಲ್ಲಿ 4 ಕಿಮೀ ರ್ಯಾಲಿ ನಡೆಯಲಿದೆ. ಸಕಲ ಸಿದ್ಧತೆಗಳೊಂದಿಗೆ ಅಧಿಕಾರಿಗಳು ಕಾದು ಕುಳಿತಿದ್ದಾರೆ.
ಬೇಲೂರಿನಿಂದ ಸೇನಾ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಮೋದಿ, ಸಂಜೆ 5.30ಕ್ಕೆ ಮೈಸೂರಿನ ಓವೆಲ್ ಮೈದಾನಕ್ಕೆ ಬರಲಿದ್ದಾರೆ. 5.45 ರಿಂದ ಮೋದಿ ರೋಡ್ ಶೋ ಆರಂಭವಾಗಲಿದೆ. ರೋಡ್ ಶೋ ಮುಗಿಸಿ ರಿಂಗ್ ರಸ್ತೆ ಮಾರ್ಗವಾಗಿ ಮಂಡಕಳ್ಳಿ ವಿಮಾನ ನಿಲ್ದಾಣ ತಲುಪಲಿರುವ ಮೋದಿ, ವಿಶೇಷ ವಿಮಾನದ ಮೂಲಕ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಇದನ್ನೂ ಓದಿ: ಓಲ್ಡ್ ಮೈಸೂರೇ ಮೋದಿ ಟಾರ್ಗೆಟ್- ಒಂದೇ ದಿನ 4 ಜಿಲ್ಲೆಗಳಲ್ಲಿ ನಮೋ ಮಿಂಚಿನ ಸಂಚಾರ
ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಮಾರ್ಗಗಳಲ್ಲಿ ಬೆಳಗ್ಗೆ 12 ರಿಂದ ರಾತ್ರಿ 8 ಗಂಟೆವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅದಕ್ಕಾಗಿ ಪರ್ಯಾಯ ಮಾರ್ಗಗಳನ್ನ ಕಲ್ಪಿಸಲಾಗಿದೆ. ಇದನ್ನೂ ಓದಿ: ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ – ಕನ್ನಡದಲ್ಲೇ ಮೋದಿ ಘೋಷಣೆ
ಯಾವ್ಯಾವ ರಸ್ತೆಗಳಲ್ಲಿ ಸಂಚಾರ ನಿರ್ಬಂಧ?
– ಕೌಟಿಲ್ಯ ಸರ್ಕಲ್ ನಿಂದ ಮುಡಾ ಜಂಕ್ಷನ್ ವರೆಗಿನ ರಾಧಕೃಷ್ಣ ಮಾರ್ಗ.
– ಮುಡಾ ಸರ್ಕಲ್ ನಿಂದ ರಾಮಸ್ವಾಮಿ ಸರ್ಕಲ್ ವರೆಗಿನ ಜೆಎಲ್ಬಿ ರಸ್ತೆ.
– ರಾಮಸ್ವಾಮಿ ಸರ್ಕಲ್ ನಿಂದ ಗನ್ ಹೌಸ್ ವರೆಗಿನ ಚಾಮರಾಜ ಜೋಡಿ ರಸ್ತೆ.
– ಬಸವೇಶ್ವರ ವೃತ್ತದಿಂದ ಹೈವೆ ವೃತ್ತದವರೆಗಿನ ಸಯ್ಯಾಜಿರಾವ್ ರೋಡ್.
– ಹೈವೇ ಸರ್ಕಲ್ ನಿಂದ ಎಲ್ಐಸಿ ಸರ್ಕಲ್ ವರೆಗಿನ ನೆಲ್ಸನ್ ಮಂಡೇಲ ರಸ್ತೆ.
– ಎಲ್ಐಸಿ ಸರ್ಕಲ್ ನಿಂದ ಕೆಂಪೇಗೌಡ ವೃತ್ತದವರೆಗಿನ ಹಳೇ ಮೈಸೂರು ಬೆಂಗಳೂರು ರಸ್ತೆ.
– ಕೆಂಪೇಗೌಡ ಸರ್ಕಲ್ ನಿಂದ ಮೈಸೂರು ವಿಮಾನ ನಿಲ್ದಾಣದವರೆಗಿನ ರಿಂಗ್ ರಸ್ತೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ (ಏ.29) ಬೆಂಗಳೂರಿನಲ್ಲಿ ರೋಡ್ಶೋ (Modi Roadshow) ನಡೆಸಲಿರುವ ಹಿನ್ನೆಲೆಯಲ್ಲಿ ಮದುವೆಗೆ ತೆರಳಲು ಮದುಮಗನಿಗೆ ಅನುಮತಿಯೇ ಇಲ್ಲದಂತಾಗಿತ್ತು.
ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಅದ್ಧೂರಿ ಪ್ರಚಾರಕ್ಕಾಗಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಮೋದಿ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ನಂತರ ಬಿಐಇಸಿ ನಿಂದ ನೈಸ್ ರಸ್ತೆ ಮೂಲಕ ಮಾಗಡಿ ರಸ್ತೆವರೆಗೆ ರೋಡ್ ಶೋ ನಡೆಲಿದ್ದಾರೆ. ಆದ್ರೆ ಮಾಗಡಿ ರೋಡ್ ನಲ್ಲಿರೋ ಅಕ್ಷಯ್ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 29, 30 ರಂದು ಮದುವೆ ನಿಗದಿಯಾಗಿದ್ದು, ಮದುವೆಗೆ ತೆರಳಲು ಮಧುಮಗನಿಗೆ ಅನುಮತಿ ನಿರಾಕರಿಸಲಾಗಿತ್ತು. ಇದನ್ನೂ ಓದಿ: ಪರಮೇಶ್ವರ್ ಮೇಲೆ ಕಲ್ಲು ತೂರಾಟ ಖಂಡನೀಯ: ಯಡಿಯೂರಪ್ಪ ಕಿಡಿ
ವಧು ಮಮತಾ ಹಾಗೂ ವರ ರುದ್ರೇಶ್ ನಡುವೆ ಮದುವೆ ನಿಶ್ಚಯವಾಗಿತ್ತು. ಮಧುಮಗ ಕಲ್ಯಾಣ ಮಂಟಪಕ್ಕೆ ತೆರಳಲು ಕಾರಿನಲ್ಲಿ ಕಳಶದೊಂದಿಗೆ ಬಂದಿದ್ದ. ಈ ವೇಳೆ ಪೊಲೀಸರು ಕಾರನ್ನು ತಡೆದು ನಿಲ್ಲಿಸಿದ್ದರು. ಕೊನೆಗೆ ಇವತ್ತು ನನ್ನ ಮದುವೆಯಿದೆ, ನಾನು ಹೋಗಲೇಬೇಕು ಬಿಡಿ ಎಂದು ವರ ಕೇಳಿಕೊಂಡಿದ್ದಾನೆ. ನಂತರ ಪೊಲೀಸರು ಮಧುಮಗ ಮತ್ತು ಅವನ ಕುಟುಂಬಸ್ಥರನ್ನು ಕಳುಹಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಸೋನಿಯಾ, ರಾಹುಲ್ ಗಾಂಧಿ ಹೇಳಿಕೊಟ್ಟಂತೆ ಖರ್ಗೆ ಮಾತಾಡಿದ್ದಾರೆ: ಜೆ.ಪಿ ನಡ್ಡಾ
ಬೆಂಗಳೂರು: ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಂಗಳೂರು ಪ್ರವಾಸದಲ್ಲಿದ್ದು, ವೈಟ್ ಫೀಲ್ಡ್ – ಕೆ.ಆರ್.ಪುರಂ ನಡುವಿನ ವೈಟ್ಫೀಲ್ಡ್ ಕಾಡುಗೋಡಿ ಮೆಟ್ರೋ ನಿಲ್ದಾಣಕ್ಕೆ (Whitefield Metro Station) ಚಾಲನೆ ನೀಡಲಿದ್ದಾರೆ. ಆದ್ದರಿಂದ ವೈಟ್ಫೀಲ್ಡ್ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನ ಸಂಪೂರ್ಣ ನಿರ್ಬಂಧಿಸಲಾಗಿದೆ.
ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30ರ ವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿರ್ಬಂಧಿಸಿದ್ದು, ವೈಟ್ ಫೀಲ್ಡ್ ಸುತ್ತಮುತ್ತ ಸಂಚರಿಸುವವರಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.
ಎಲ್ಲೆಲ್ಲಿ ನಿರ್ಬಂಧ?
ವರ್ತೂರು ಕೋಡಿಯಿಂದ ಹೋಫ್ ಫಾರಂ ಜಂಕ್ಷನ್ ಮೂಲಕ ಕನ್ನಮಂಗಲ ಗೇಟ್ ವರೆಗೆ, ಚನ್ನಸಂದ್ರದಿಂದ ಹೋಫ್ ಫಾರಂ ಮೂಲಕ ಹೂಡಿ ಸರ್ಕಲ್ ವರೆಗೆ ಹಾಗೂ ಕುಂದಲಹಳ್ಳಿ ರಸ್ತೆಯಿಂದ ವೈದೇಹಿ ಅಸ್ಪತ್ರೆ ಮೂಲಕ ಹೋಫ್ ಫಾರಂ ಜಂಕ್ಷನ್ ವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಒಳಮೀಸಲಾತಿ ಹಂಚಿಕೆ; ಪ್ರತ್ಯೇಕ ಮೀಸಲಾತಿ ರದ್ದು – EWS ಕೋಟಾ ವ್ಯಾಪ್ತಿಗೆ ಮುಸ್ಲಿಮರು
ಎಲ್ಲೆಲ್ಲಿ ಪರ್ಯಾಯ ಮಾರ್ಗ?
ಏರ್ಪೋರ್ಟ್ ರಸ್ತೆಗೆ ಹೋಗುವವರು ವರ್ತೂರು ಕೋಡಿಯಿಂದ ಕುಂದಲಹಳ್ಳಿ ಬ್ರಿಡ್ಜ್ ಮೂಲಕ ಹಳೇ ಏರ್ಪೋರ್ಟ್ ರಸ್ತೆ ತಲುಪಬಹುದಾಗಿದೆ. ವರ್ತೂರು ಕೋಟಿ ತಲುಪುವವರು ಚನ್ನಸಂದ್ರ ವೃತ್ತದಿಂದ ನಾಗೊಂಡನಹಳ್ಳಿ, ಇಮ್ಮಡಿಹಳ್ಳಿ ಹಗದೂರು ಮೂಲಕ ತಲುಪಬಹುದು. ಚನ್ನಸಂದ್ರ ತಲುಪುವವರು ಕಾಟಂನಲ್ಲೂರು ಕ್ರಾಸ್ ನಿಂದ ಶೀಗೆಹಳ್ಳಿ ಗೇಟ್, ಕಾಡುಗೋಡಿ ನಾಲಾರಸ್ತೆ ಮೂಲಕ ತಲುಪಬಹುದು.
ಅಲ್ಲದೇ ಕುಂದಲಹಳ್ಳಿಗೆ ಹೋಗಬೇಕಾದವರು ಹೂಡಿ ಸರ್ಕಲ್ ನಿಂದ ಗ್ರಾಫೈಟ್ ರಸ್ತೆ ಮೂಲಕ ತಲುಪಬಹುದು. ಕಾಟಂನಲ್ಲೂರು ಕ್ರಾಸ್ಗೆ ಹೋಗುವವರು ಹೂಡಿ ಸರ್ಕಲ್ ನಿಂದ ಅಯ್ಯಪ್ಪನಗರ, ಭಟ್ಟರಹಳ್ಳಿ-ಮೇಡಹಳ್ಳಿ ಮೂಲಕ ಕಾಟಂನಲ್ಲೂರು ಕ್ರಾಸ್ ತಲುಪಬಹುದಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ ವಿಚಾರ ತಿಳಿದು ಹೈಕೋರ್ಟ್ಗೆ ಓಲೆಕಾರ್ ಅರ್ಜಿ
ಪ್ರಧಾನಿ ನರೇಂದ್ರ ಮೋದಿ ಆಗಮನದ ಸಮಯದಲ್ಲಿ ಸಂಚಾರ ದಟ್ಟಣೆಯಾಗದಂತೆ ನೋಡಿಕೊಳ್ಳಲು ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.