Tag: ಮೋರ್ಬಿ ದುರಂತ

  • ಮೋರ್ಬಿ ಸೇತುವೆ ದುರಂತ – ಅರ್ಧದಷ್ಟು ತಂತಿಗಳಿಗೆ ತುಕ್ಕು ಹಿಡಿದಿದ್ದೇ ಕಾರಣ: ತನಿಖಾ ವರದಿ

    ಮೋರ್ಬಿ ಸೇತುವೆ ದುರಂತ – ಅರ್ಧದಷ್ಟು ತಂತಿಗಳಿಗೆ ತುಕ್ಕು ಹಿಡಿದಿದ್ದೇ ಕಾರಣ: ತನಿಖಾ ವರದಿ

    ಗಾಂಧಿನಗರ: ಕಳೆದ ವರ್ಷ ಬರೋಬ್ಬರಿ 135 ಜನರ ಸಾವಿಗೆ ಕಾರಣವಾದ ಗುಜರಾತ್‌ನ (Gujarat) ಮೋರ್ಬಿಯಲ್ಲಿನ ಸೇತುವೆ ದುರಂತದ (Morbi Bridge Tragedy) ಕೆಲವು ನಿಜ ಅಂಶಗಳು ತನಿಖಾ ವರದಿಯಲ್ಲಿ ಬಯಲಾಗಿದೆ. ತೂಗು ಸೇತುವೆಯ ಕೆಲವು ತಂತಿಗಳು ಮೊದಲೇ ಮುರಿದಿದ್ದು, ಹಲವು ತುಕ್ಕು ಹಿಡಿದಿದ್ದವು ಎಂದು ತನಿಖೆಯ ವರದಿ ತಿಳಿಸಿದೆ.

    ಮೋರ್ಬಿ ಸೇತುವೆ ದುರಂತದ ತನಿಖೆಯನ್ನು ಗುಜರಾತ್ ಸರ್ಕಾರ ವಿಶೇಷ ತನಿಖಾ ತಂಡಕ್ಕೆ (SIT) ವಹಿಸಿತ್ತು. ಇದೀಗ ಎಸ್‌ಐಟಿ ಸೇತುವೆ ದುರಸ್ತಿ, ನಿರ್ವಹಣೆ ಹಾಗೂ ಕಾರ್ಯಾಚರಣೆಯಲ್ಲಿ ಹಲವು ಲೋಪಗಳನ್ನು ಪತ್ತೆ ಮಾಡಿದೆ.

    ಮಚ್ಚು ನದಿಯ ಮೇಲೆ 1887ರಲ್ಲಿ ಆಗಿನ ಆಡಳಿತಗಾರರು ನಿರ್ಮಿಸಿದ್ದ ಸೇತುವೆಯ 2 ಮುಖ್ಯ ಕೇಬಲ್‌ಗಳಲ್ಲಿ ಒಂದು ಕೇಬಲ್‌ನಲ್ಲಿ ತುಕ್ಕಿನ ಸಮಸ್ಯೆಯಿತ್ತು. ಅದರ ಅರ್ಧದಷ್ಟು ತಂತಿಗಳಿಗೆ ತುಕ್ಕು ಹಿಡಿದಿತ್ತು. ಇದು ಕಳೆದ ವರ್ಷ ಅಕ್ಟೋಬರ್ 30 ರಂದು ದುರಂತ ಸಂಭವಿಸಲು ಕಾರಣವಾಗಿರುವ ಸಾಧ್ಯತೆಯಿದೆ. ನದಿಯ ಮೇಲ್ಭಾಗದ ಮುಖ್ಯ ಕೇಬಲ್ ತುಂಡಾಗಿರುವುದೂ ದುರಂತಕ್ಕೆ ಕಾರಣ ಎಂದು ಎಸ್‌ಐಟಿ ತಿಳಿಸಿದೆ. ಇದನ್ನೂ ಓದಿ: ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

    ಸೇತುವೆಯ ಪ್ರತಿಯೊಂದು ಕೇಬಲ್ ಅನ್ನು 7 ಎಳೆಗಳಿಂದ ರಚಿಸಲಾಗಿದ್ದು, ಅವು ಉಕ್ಕಿನ ತಂತಿಗಳಾಗಿವೆ. ಈ ಕೇಬಲ್ ಅನ್ನು ರೂಪಿಸಲು ಒಟ್ಟು 49 ತಂತಿಗಳನ್ನು 7 ಎಳೆಗಳಲ್ಲಿ ಒಟ್ಟಿಗೆ ಜೋಡಿಸಲಾಗಿದೆ. 49 ತಂತಿಗಳಲ್ಲಿ 22 ತುಕ್ಕು ಹಿಡಿದಿರುವುದು ಗಮನಿಸಲಾಗಿದೆ. ಇದು ಘಟನೆಗೂ ಮೊದಲೇ ಮುರಿದು ಹೋಗಿರುವುದನ್ನು ಸೂಚಿಸುತ್ತದೆ ಎಂದು ವರದಿಯಲ್ಲಿ ತಿಳಿಸಿದೆ.

    ಇನ್ನು ಸೇತುವೆ ನವೀಕರಣದ ಸಮಯದಲ್ಲಿ ಹಳೆಯ ಸಸ್ಪೆಂಡರ್‌ಗಳನ್ನು (ಕೇಬಲ್‌ಗಳನ್ನು ಸಂಪರ್ಕಿಸುವ ಸ್ಟೀಲ್ ರಾಡ್‌ಗಳು) ಹೊಸ ಸಸ್ಪೆಂಡರ್‌ಗಳೊಂದಿಗೆ ಬೆಸುಗೆ ಹಾಕಲಾಗಿದೆ ಎಂಬುದನ್ನು ಎಸ್‌ಐಟಿ ಕಂಡುಹಿಡಿದಿದೆ. ಆದ್ದರಿಂದ ಸಸ್ಪೆಂಡರ್‌ಗಳ ನಡವಳಿಕೆ ಬದಲಾಗಿದ್ದು, ದುರಂತ ಸಂಭವಿಸಲು ಕಾರಣವಾಗಿದೆ ಎಂದು ಉಲ್ಲೇಖಿಸಿದೆ.

    ದುರಂತ ಸಂಭವಿಸುವ ಸಂದರ್ಭ ಸೇತುವೆ ಮೇಲೆ 300 ಜನರಿದ್ದರು. ಇದು ಸೇತುವೆ ಭಾರವನ್ನು ಹೊರುವ ಸಾಮರ್ಥ್ಯಕ್ಕಿಂತಲೂ ಹೆಚ್ಚಾಗಿದೆ. ಆದರೂ ಸೇತುವೆಯ ನೈಜ ನಾಮರ್ಥ್ಯವನ್ನು ಪ್ರಯೋಗಾಲಯದ ವರದಿಗಳಿಂದ ದೃಢೀಕರಿಸಲಾಗುವುದು ಎಂದು ತಿಳಿಸಲಾಗಿದೆ. ಇದನ್ನೂ ಓದಿ: 9 ಪ್ರಶ್ನೆಗಳಿಗೆ ಉತ್ತರ ಕೊಡಿ: ರೂಪಾಗೆ ರೋಹಿಣಿ ಅಭಿಮಾನಿಗಳ ಪ್ರಶ್ನೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೋರ್ಬಿ ದುರಂತ: 1 ಲಕ್ಷ ರೂ. ದಂಡ ಪಾವತಿಸಿ – ಪುರಸಭೆ ವಿರುದ್ಧ ಹೈಕೋರ್ಟ್ ಗರಂ

    ಮೋರ್ಬಿ ದುರಂತ: 1 ಲಕ್ಷ ರೂ. ದಂಡ ಪಾವತಿಸಿ – ಪುರಸಭೆ ವಿರುದ್ಧ ಹೈಕೋರ್ಟ್ ಗರಂ

    ಗಾಂಧೀನಗರ: 135 ಜನರ ಸಾವಿಗೆ ಕಾರಣವಾದ ಗುಜರಾತ್‍ನ ಮೋರ್ಬಿ ತೂಗು ಸೇತುವೆ (Morbi Bridge) ದುರಂತಕ್ಕೆ ಸಂಬಂಧಿಸಿದಂತೆ ಮೋರ್ಬಿ ಪುರಸಭೆಯನ್ನು (MMC) ಗುಜರಾತ್ ಹೈಕೋರ್ಟ್ (Gujarat High Court) ಇಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ.

    ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಪುರಸಭೆ ಪ್ರತಿಕ್ರಿಯೆ ನೀಡಲು ವಿಫಲವಾದ ಬೆನ್ನಲ್ಲೇ ಅಫಿಡವಿಟ್ ಸಲ್ಲಿಸಿ ಇಲ್ಲವೇ 1 ಲಕ್ಷ ರೂ. ದಂಡ (Fine) ಪಾವತಿಸಿ ಎಂದು ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಜೆ ಶಾಸ್ತ್ರಿ ಅವರಿದ್ದ ಪೀಠ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಭಾರತದಲ್ಲಿ ವಾಸ ಮಾಡುವ ಪ್ರತಿಯೊಬ್ಬರು ಹಿಂದೂಗಳೇ: ಮೋಹನ್ ಭಾಗವತ್

    ಈ ದುರ್ಘಟನೆಯನ್ನು ಲಘುವಾಗಿ ಪರಿಗಣಿಸಬೇಡಿ ಈ ಹಿಂದೆ ಕೇಳಿದ್ದ ಪ್ರಶ್ನೆಗೆ ಉತ್ತರ ಇನ್ನೂ ಕೊಟ್ಟಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಒಂದೋ ಅಫಿಡವಿಟ್ ಸಲ್ಲಿಸಿ ಇಲ್ಲವೇ 1 ಲಕ್ಷ ರೂ. ದಂಡ ಪಾವತಿಸಿ ಎಂದು ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಎಂಎಂಸಿ ಪರ ವಕೀಲರಿಗೆ ತಾಕೀತು ಮಾಡಿದರು. ವಕೀಲರು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಧೀಶರು ಗರಂ ಆದರು.

    ಅಕ್ಟೋಬರ್ 30 ರಂದು ದುರಂತದ ಕುರಿತಾಗಿ ಸ್ವಯಂಪ್ರೇರಿತವಾಗಿ ಹೈಕೋರ್ಟ್ ಪ್ರಕರಣ ದಾಖಲಿಸಿಕೊಂಡಿತ್ತು. ಈ ದುರಂತಕ್ಕೆ ಸರ್ಕಾರ ಅದರ ಮುಖ್ಯ ಕಾರ್ಯದರ್ಶಿ, ಮೋರ್ಬಿ ನಗರ ಪಾಲಿಕೆ, ನಗರಾಭಿವೃದ್ಧಿ ಇಲಾಖೆ, ರಾಜ್ಯ ಗೃಹ ಇಲಾಖೆ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗವನ್ನು ಹೊಣೆಗಾರರನ್ನಾಗಿ ಮಾಡುವಂತೆ ನಿರ್ದೇಶಿಸಿತ್ತು. ಇದನ್ನೂ ಓದಿ: ಗುಜರಾತ್‍ನ ಮೋರ್ಬಿ ದುರಂತ- ಉತ್ತರವಿಲ್ಲದ ಐದು ಪ್ರಶ್ನೆಗಳು

    ನೋಟಿಸ್ ಜಾರಿ ಮಾಡಿದ್ದರೂ ಪುರಸಭೆ ನ್ಯಾಯಾಲಯದ ಮುಂದೆ ಹಾಜರಾಗದೆ ಅತಿ ಬುದ್ಧಿವಂತಿಕೆ ತೋರುತ್ತಿದೆ ಎಂದು ಪೀಠ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿತ್ತು. ಪುರಸಭೆ ಜಿಲ್ಲಾಧಿಕಾರಿ ವ್ಯಾಪ್ತಿಗೆ ಬರಲಿದ್ದು ಅವರು ಚುನಾವಣಾ ಕರ್ತವ್ಯದಲ್ಲಿದ್ದಾರೆ. ಅವರಿಗೆ ನೋಟಿಸ್ ನೀಡುವ ಬದಲು ಪುರಸಭೆಗೆ ನೋಟಿಸ್ ನೀಡಲಾಗಿತ್ತು. ಹೀಗಾಗಿ ನ್ಯಾಯಾಲಯಕ್ಕೆ ಹಾಜರಾಗಲು ವಿಳಂಬವಾಯಿತು ಎಂದು ವಕೀಲರು ವಿವರಿಸಿದ್ದರು. ಖಾಸಗಿ ಗುತ್ತಿಗೆದಾರರೊಡನೆ ಈ ಮೊದಲ ಒಪ್ಪಂದದ ಅವಧಿ ಮುಕ್ತಾಯಗೊಂಡ ನಂತರವೂ ಮೂರು ವರ್ಷಗಳವರೆಗೂ ಮೋರ್ಬಿ ತೂಗು ಸೇತುವೆಯ ನಿರ್ವಹಣೆಗೆ ಏಕೆ ಅನುಮತಿ ನೀಡಲಾಗಿತ್ತು ಎಂದು ಕೋರ್ಟ್ ಪ್ರಶ್ನಿಸಿತ್ತು.

    Live Tv
    [brid partner=56869869 player=32851 video=960834 autoplay=true]