Tag: ಮೋಹನ್ ಕುಮಾರ್

  • ಬೆಂಗಳೂರು ಐಕಾನ್ ಆಗಿ ಗಾಯಕ ಮೋಹನ್, ನಟ ಮಾಸ್ಟರ್ ಆನಂದ್ ಆಯ್ಕೆ

    ಬೆಂಗಳೂರು ಐಕಾನ್ ಆಗಿ ಗಾಯಕ ಮೋಹನ್, ನಟ ಮಾಸ್ಟರ್ ಆನಂದ್ ಆಯ್ಕೆ

    ತದಾರರಿಗೆ ಜಾಗೃತಿ ಮೂಡಿಸುವುದಕ್ಕಾಗಿ ಬೃಹತ್ ಬೆಂಗಳೂರು (Bangalore) ಮಹಾನಗರ ಪಾಲಿಕೆ (BBMP) ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ. ಅದರಲ್ಲೂ ಬೆಂಗಳೂರು ವ್ಯಾಪ್ತಿಯಲ್ಲಿ ಈಗಾಗಲೇ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಅದರ ಭಾಗವಾಗಿ ಇದೀಗ ಬೆಂಗಳೂರು ಐಕಾನ್ ಗಳೆಂದು (Icon)  ಐವರು ಪ್ರಮುಖ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

    ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿರುವಂತಹ ಐದು ವ್ಯಕ್ತಿಗಳನ್ನು ಬೆಂಗಳೂರು ಐಕಾನ್ ಹೆಸರಿನಲ್ಲಿ ಆಯ್ಕೆ ಮಾಡಲಾಗಿದ್ದು, ಇವರು ಬೆಂಗಳೂರಿನ ಮತದಾರರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ. ಹೆಚ್ಚು ಮತದಾನ ಆಗುವಂತೆ ನೋಡಿಕೊಳ್ಳಲಿದ್ದಾರೆ. ಈ ಐವರಲ್ಲಿ ಕನ್ನಡ ಸಿನಿಮಾ ರಂಗದ ಒಬ್ಬರು ಗಾಯಕರನ್ನು ಮತ್ತು ನಟರನ್ನು ಬಿಬಿಎಂಪಿ ಆಯ್ಕೆ ಮಾಡಿಕೊಂಡಿದೆ. ಇದನ್ನೂ ಓದಿ:ನಮ್ಮ ನಡುವೆ ಏನಿಲ್ಲ, ಡಾಲಿಗೆ ಹೆಣ್ಣು ಕೊಡುತ್ತಿಲ್ಲ: ನಟಿ ಅಮೃತಾ

    ಬಾಲ್ಯದಿಂದಲೂ ಸಿನಿಮಾ ರಂಗದಲ್ಲಿ ಸಕ್ರೀಯರಾಗಿರುವ ಮಾಸ್ಟರ್ ಆನಂದ್ಅ (Master Anand)ವರನ್ನು ಬೆಂಗಳೂರು ಐಕಾನ್ ಎಂದು ಗುರುತಿಸಿರುವ ಬಿಬಿಎಂಪಿ, ಇವರ ಮೂಲಕ ಮತದಾನದ ಜಾಗೃತಿಗೆ ಮುಂದಾಗುತ್ತಿದೆ. ಕನ್ನಡ ಕಿರುತೆರೆ ಮತ್ತು ಹಿರಿತೆರೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಆನಂದ್, ಈಗಾಗಲೇ ಅನೇಕ ಸಮಾಜಮುಖಿ ಕೆಲಸಗಳಿಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

    ಶಿವರಾಜ್ ಕುಮಾರ್ ನಟನೆಯ ವೇದ ಸಿನಿಮಾದಲ್ಲಿ ಜುಂಜಪ್ಪ ಗೀತೆಯನ್ನು ಹಾಡಿರುವ ಗಾಯಕ ಮೋಹನ್ ಕುಮಾರ್ (Mohan Kumar) ಕೂಡ ಬೆಂಗಳೂರು ಐಕಾನ್ ಆಗಿ ಆಯ್ಕೆ ಮಾಡಲಾಗಿದೆ. ಕಾಡುಗೊಲ್ಲರ  ಹಾಡುಗಳನ್ನು ಹಾಡುತ್ತಾ ಗಮನ ಸೆಳೆದಿರುವ ಮೋಹನ್ ಅವರಿಗೆ ಇತ್ತೀಚೆಗಷ್ಟೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯು ಅತ್ಯುತ್ತಮ ಗಾಯಕ ಪ್ರಶಸ್ತಿ ನೀಡಿ ಗೌರವಿಸಿತ್ತು.

  • ಯಕ್ಷಗಾನ ರಂಗಸ್ಥಳದಲ್ಲೇ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ಕುಮಾರ್

    ಯಕ್ಷಗಾನ ರಂಗಸ್ಥಳದಲ್ಲೇ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ಕುಮಾರ್

    ಮಂಗಳೂರು: ಯಕ್ಷಗಾನ ನಡೆಯುತ್ತಿರುವಾಗಲೇ ಪ್ರಖ್ಯಾತ ವೇಷಧಾರಿ ಮೋಹನ ಕುಮಾರ್ ಅಮ್ಮುಂಜೆಯವರು ರಂಗಸ್ಥಳದಲ್ಲಿಯೇ ತಲೆತಿರುಗಿ ಬಿದ್ದಿರುವ ಘಟನೆ ಸೋಮವಾರ ರಾತ್ರಿ ಮೂಡುಬಿದಿರೆ ತಾಲೂಕಿನ ಅಲಂಗಾರು ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆದಿದೆ.

    ದಕ್ಷಿಣ ಕನ್ನಡದ ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ನಿನ್ನೆ ರಾತ್ರಿ ಕರ್ಣಪರ್ವ ಯಕ್ಷಗಾನ ನಡೆಯುತ್ತಿತ್ತು. ಮೋಹನ ಕುಮಾರ್ ಅಮ್ಮುಂಜೆಯವರು ಕರ್ಣಪರ್ವದ ಅರ್ಜುನ ಪಾತ್ರಧಾರಿಯಾಗಿದ್ದರು.

    ಅರ್ಜುನ – ಕರ್ಣ ಪಾತ್ರಗಳ ಮುಖಾಮುಖಿಯಾಗಿ ವಾಕ್ಸಮರ ನಡೆಯುತ್ತಿತ್ತು. ಈ ಸಂದರ್ಭ ನಿಂತಿದ್ದ ಅರ್ಜುನ ಪಾತ್ರಧಾರಿ ಮೋಹನ ಕುಮಾರ್ ಅಮ್ಮುಂಜೆಯವರು ಸ್ವಲ್ಪ ಓಲಾಡುವಂತೆ ಆಗಿ ಏಕಾಏಕಿ ಎರಡು ಹೆಜ್ಜೆ ಮುಂದೆ ಬಂದು ಮುಗ್ಗರಿಸಿ ಬಿದ್ದಿದ್ದಾರೆ. ಇದನ್ನೂ ಓದಿ : ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಬೊಮ್ಮಾಯಿ ಆದೇಶ

    ರಂಗಸ್ಥಳದಲ್ಲಿದ್ದ ಹಿಮ್ಮೇಳ-ಮುಮ್ಮೇಳದ ಕಲಾವಿದರು ಒಂದು ಕ್ಷಣಕ್ಕೆ ಏನಾಗುತ್ತಿದೆ ಎಂದು ತಿಳಿಯದೆ ಗಾಬರಿಗೊಂಡಿದ್ದಾರೆ. ಬಳಿಕ ಸ್ವಲ್ಪ ಉಪಚಾರ ಮಾಡಿದ ಕೊಂಚ ಹೊತ್ತಿನಲ್ಲಿಯೇ ಮೋಹನ ಕುಮಾರ್ ಅಮ್ಮುಂಜೆಯವರು ಚೇತರಿಕೆ ಕಂಡಿದ್ದಾರೆ. ಬಳಿಕ ಯಕ್ಷಗಾನ ಸಾಂಗವಾಗಿ ನಡೆದಿದೆ..

  • ಕೊರೊನಾ ಸ್ಫೋಟ, ಮುಂದಿನ 15 ದಿನ ಎಚ್ಚರ: ಕೊಡಗು ಜಿಲ್ಲಾ ವೈದ್ಯಾಧಿಕಾರಿ ಆತಂಕ

    ಕೊರೊನಾ ಸ್ಫೋಟ, ಮುಂದಿನ 15 ದಿನ ಎಚ್ಚರ: ಕೊಡಗು ಜಿಲ್ಲಾ ವೈದ್ಯಾಧಿಕಾರಿ ಆತಂಕ

    – ಜಿಲ್ಲೆಯಲ್ಲಿ ವೈದ್ಯರ ಕೊರತೆ ಹೆಚ್ಚಿದೆ
    – ಜಿಲ್ಲೆಗೆ ಬೆಂಗಳೂರಿನಿಂದ ಬಂದವರಿಂದಲೇ ಕಂಟಕ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಮುಂದಿನ 15 ದಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕೊಡಗು ಜಿಲ್ಲಾ ವೈದ್ಯಾಧಿಕಾರಿ ಮೋಹನ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.

    ಕೊರೊನಾ ಸ್ಫೋಟ ಸಾಧ್ಯತೆ: ಮುಂದಿನ ಹದಿನೈದು ದಿನ ಕೊಡಗಿಗೆ ಕಂಟಕ ಎದುರು ಅಗುತ್ತದೆ. ಕೊಡಗು ಜಿಲ್ಲೆಯಲ್ಲಿರುವ ಜನಸಂಖ್ಯೆ ಸುಮಾರು ಆರೂವರೆ ಲಕ್ಷ. ಆದ್ರೆ ಬೆಂಗಳೂರಿನಿಂದ ಬಂದಿರುವ ಜನರು ಹಳ್ಳಿ ಸೇರಿಕೊಂಡಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುವ ಸಾಧ್ಯತೆಗಳು ದಟ್ಟವಾಗಿದ್ದು, ಮುಂದಿನ 15 ದಿನ ಎಚ್ಚರಿಕೆಯಿಂದಿರಬೇಕೆಂದು ಮೋಹನ್ ಕುಮಾರ್ ಹೇಳಿದ್ದಾರೆ.

    ಜಿಲ್ಲೆಯಲ್ಲಿ ವೈದ್ಯರ ಕೊರತೆ: ಜಿಲ್ಲೆಯಲ್ಲಿ ವೈದ್ಯರ ಕೊರತೆ ಹೆಚ್ಚಾಗಿದೆ. ಪಿಜಿಷಿಯನ್, ಅನಸ್ತೆಷ್ಟಿಸ್ ಇಲ್ಲವೇ ಇಲ್ಲ. ಇಡೀ ಜಿಲ್ಲೆಗೆ ಇರೋದೆ ಒಬ್ಬರು ಪಿಜಿಷಿಯನ್. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲೂ ವೈದ್ಯರ ಕೊರತೆ ಕಾಡುತ್ತಿದೆ. ಅಷ್ಟೇ ಅಲ್ಲದೇ ಸೋಂಕಿನಿಂದ ಗಂಭೀರವಾಗಿ ಬಳಲುವವರ ಚಿಕಿತ್ಸೆಗೂ ವೈದ್ಯರ ಕೊರತೆ ಹೆಚ್ಚಿದೆ. ಕೋವಿಡ್ ಇಷ್ಟೊಂದು ಹೆಚ್ಚಲು ಬೆಂಗಳೂರಿನಿಂದ ಬಂದವರೇ ಕಾರಣ ಎಂದರು.

    ಆಸ್ಪತ್ರೆಗೆ ಬನ್ನಿ: ಸೋಂಕಿನ ಲಕ್ಷಣಗಳು ಕಾಣಿಸಿಕೊಂಡರೂ ತಕ್ಷಣವೇ ಆಸ್ಪತ್ರೆಗೆ ಬರುತ್ತಿಲ್ಲ. ತಮ್ಮ ಆರೋಗ್ಯ ಬಿಗಡಾಯಿಸಿದ ಬಳಿಕ ಆಸ್ಪತ್ರೆಗೆ ಬರುತ್ತಿದ್ದಾರೆ. ಅಷ್ಟರಲ್ಲಿ ಇಡೀ ಮನೆಯವರಿಗೆ ಸೋಂಕು ಹರಡಿಸುತ್ತಿದ್ದಾರೆ. ಇದು ಕೊಡಗಿನಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚೋದಕ್ಕೆ ಕಾರಣವಾಗಿದೆ. ಜನರೇ ಎಚ್ಚೆತ್ತುಕೊಳ್ಳದಿದ್ರೆ ಮತ್ತಷ್ಟು ಕಂಟಕ ಜಿಲ್ಲೆಗೆ ಎದುರಾಗಲಿದೆ ಎಂದು ಅತಂಕ ವ್ಯಕ್ತಪಡಿಸಿದರು.

  • ಸ್ವಂತ ಖರ್ಚಿನಲ್ಲಿ ಶಾಲೆಗೆ, ಗ್ರಾಮಕ್ಕೆ ಬೆಳಕು ತಂದ್ರು ಶಿಕ್ಷಕ ಮೋಹನ್ ಕುಮಾರ್

    ಸ್ವಂತ ಖರ್ಚಿನಲ್ಲಿ ಶಾಲೆಗೆ, ಗ್ರಾಮಕ್ಕೆ ಬೆಳಕು ತಂದ್ರು ಶಿಕ್ಷಕ ಮೋಹನ್ ಕುಮಾರ್

    ರಾಯಚೂರು: ಏನೂ ಇಲ್ಲದ ಜಾಗದಲ್ಲಿ ಸುಂದರ ಶಾಲೆಯನ್ನ ಕಟ್ಟಿ “ಮಕ್ಕಳ ಕಾಡು” ಅಂತ ಹೆಸರಿಟ್ಟು ಮಾದರಿ ಶಾಲೆಯನ್ನಾಗಿ ಮಾಡುವ ಮೂಲಕ ಶಿಕ್ಷಕ ಮೋಹನ್ ಕುಮಾರ್ ಪಬ್ಲಿಕ್ ಹೀರೋ ಆಗಿದ್ದಾರೆ.

    ಜಿಲ್ಲೆಯ ಮಾನ್ವಿ ತಾಲೂಕಿನ ಕೊರವಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿರುವ ಮೋಹನ್ ಕುಮಾರ್ ಸ್ವಂತ ಖರ್ಚಿನಲ್ಲಿ ಶಾಲೆಗೆ ವಿದ್ಯುತ್ ಅಳವಡಿಸಿ ಗ್ರಾಮಕ್ಕೆ ಬೆಳಕಾಗಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾದ ಇವರು ಮೂಲತಃ ಮಂಡ್ಯದವರು. ಮೋಹನ್ ಕುಮಾರ್ ಅವಿರತ ಶ್ರಮದಿಂದ ಇಂದು ಈ ಸರ್ಕಾರಿ ಪ್ರಾಥಮಿಕ ಪಾಠ ಶಾಲೆ ಜಿಲ್ಲೆಗೆ ಮಾದರಿಯಾಗಿದೆ. ಯಾವ ಖಾಸಗಿ ಶಾಲೆಗೂ ಕಮ್ಮಿಯಿಲ್ಲದಂತೆ ಸರ್ಕಾರಿ ಶಾಲೆಯನ್ನು ತಿದ್ದಿ ತೀಡಿದ್ದಾರೆ. ಮೋಹನ್ ಕುಮಾರ್ ಅವರ ಕೆಲಸವನ್ನು ಮೆಚ್ಚಿದ ಗ್ರಾಮಸ್ಥರು ಶಾಲೆಯ ಅಭಿವೃದ್ಧಿಗಾಗಿ ತಮ್ಮ ಕೈಲಾದಷ್ಟು ದಾನ ಮಾಡಲು ಮುಂದಾಗಿದ್ದಾರೆ.

    ಶಾಲೆಗೆ ಸ್ವಂತ ಖರ್ಚಿನಲ್ಲಿ ವಿದ್ಯುತ್ ವ್ಯವಸ್ಥೆ ಮಾಡಿರೋ ಮೋಹನ್ ಕುಮಾರ್ ಈಗ ಗ್ರಾಮಕ್ಕೂ ಬೆಳಕಾಗಿದ್ದಾರೆ. ಸತತ ಆರು ಕಡೆ ಬೋರ್‍ವೆಲ್ ಕೊರೆಸಿ ವಿಫಲರಾದರೂ ಛಲ ಬಿಡದೆ, ಶಾಲೆಯಿಂದ ಒಂದು ಕಿ.ಮೀ ದೂರದಲ್ಲಿ ಬೋರ್‍ವೆಲ್ ಕೊರೆಸಿ ಕುಡಿಯುವ ನೀರಿನ ಬವಣೆ ನೀಗಿಸಲು ಶ್ರಮಿಸಿದ್ದಾರೆ. ಶಾಲೆಯ ಆವರಣದಲ್ಲಿ ಮಕ್ಕಳಿಂದಲೇ ಬೆಳೆಸುತ್ತಿರುವ ಗಿಡಗಳಿಗೆ ಹನಿ ನೀರಾವರಿ ಮೂಲಕ ನೀರುಣಿಸಲಾಗ್ತಿದೆ. ಮೊದಲೆಲ್ಲಾ ಖಾಸಗಿ ಶಾಲೆಗಳತ್ತ ಮುಖ ಮಾಡಿದವರು ಈಗ ಸರ್ಕಾರಿ ಶಾಲೆಗೆ ಜೈ ಎನ್ನುತ್ತಿದ್ದಾರೆ. ಈಗ 234 ಮಕ್ಕಳು ಈ ಶಾಲೆಯಲ್ಲಿ ಕಲಿಯುತ್ತಿದ್ದು, ಇದಕ್ಕೆ ಶಿಕ್ಷಕ ಮೋಹನ್ ಅವರೇ ಕಾರಣ ಎಂದು ಗ್ರಾಮಸ್ಥರು ಶಿಕ್ಷಕರು ಕೆಲಸವನ್ನು ಶ್ಲಾಘಿಸುತ್ತಿದ್ದಾರೆ.

    ಶಾಲೆಯಲ್ಲಿ ಕೇವಲ 5 ಕೊಠಡಿ ಇರುವುದರಿಂದ ದಾನಿಗಳ ನೆರವಿನಿಂದ ಮೋಹನ್ ಕುಮಾರ್ ಸದ್ಯ ಗುಡಿಸಲು ಮಾದರಿಯ ಕೆಲ ಶಾಲಾ ಕೊಠಡಿ ನಿರ್ಮಿಸಿದ್ದಾರೆ. ಜನಪ್ರತಿನಿಧಿಗಳ ಬೆನ್ನುಬಿದ್ದು 300 ಮೀಟರ್ ಕಾಂಪೌಂಡ್, ಗೇಟ್ ವ್ಯವಸ್ಥೆ ಮಾಡಿಸಿದ್ದಾರೆ. ಅಷ್ಟೇ ಅಲ್ಲದೆ ಇನ್ಫೋಸಿಸ್‍ನವರು ಈ ಶಾಲೆಗೆ 5 ಕಂಪ್ಯೂಟರ್ ನೀಡಿದ್ದಾರೆ, ಸೆಲ್ಕೋಸೋಲಾರ್ ಕಂಪನಿ ಸ್ಮಾರ್ಟ್ ಕ್ಲಾಸ್ ಅಳವಡಿಸಿದ್ದಾರೆ. ಈ ಶಾಲೆಗೆ ಬರುತ್ತಿರುವ ಪ್ರತಿ ಮಕ್ಕಳಿಗೂ ಐಡಿ ಕಾರ್ಡ್ ನೀಡಿ ಶಿಸ್ತುಪಾಲನೆ ಮಾಡಲಾಗುತ್ತಿದೆ.

    ಶಾಲೆಯ ಏಳಿಗೆಗಾಗಿ ಹಾಗೂ ಮಕ್ಕಳನ್ನ ಶಾಲೆಗೆ ಕರೆತರಬೇಕು ಅನ್ನೋ ಕಾರಣಕ್ಕೆ ಶಾಲಾ ಅಭಿವೃದ್ದಿಗೆ ಮುಂದಾದ ಶಿಕ್ಷಕ ಮೋಹನ್ ಈಗ ಎಲ್ಲರಿಗೂ ಮಾದರಿಯಾಗಿದ್ದಾರೆ.

    https://www.youtube.com/watch?v=Gvhdclsw3GU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸೈನೆಡ್ ಮೋಹನ್‍ಗೆ ಗಲ್ಲುಶಿಕ್ಷೆ ಇಲ್ಲ: ಸಾಯೋವರೆಗೂ ಜೈಲು ಶಿಕ್ಷೆ

    ಸೈನೆಡ್ ಮೋಹನ್‍ಗೆ ಗಲ್ಲುಶಿಕ್ಷೆ ಇಲ್ಲ: ಸಾಯೋವರೆಗೂ ಜೈಲು ಶಿಕ್ಷೆ

    ಬೆಂಗಳೂರು: ಸೈನೆಡ್ ಮೋಹನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಕೆಳ ನ್ಯಾಯಾಲಯ ನೀಡಿದ್ದ ಗಲ್ಲು ಶಿಕ್ಷೆಯನ್ನು ರದ್ದು ಪಡಿಸಿ ಜೀವಾವಧಿ ಶಿಕ್ಷೆಗೆ ಇಳಿಸಿದೆ.

    ನಾಲ್ಕು ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಮೋಹನ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮಳೀಮಠ್, ನ್ಯಾ ಜಾನ್ ಮೈಕೆಲ್ ಕುನ್ನಾ ಅವರಿದ್ದ ವಿಭಾಗೀಯ ಪೀಠ, ಸೈನೆಡ್ ಮೋಹನ್ ಕುಮಾರ್ ಸಮಾಜಕ್ಕೆ ಮಾರಕ. ಹೀಗಾಗಿ ಈತ ಸಾಯುವವರೆಗೂ ಜೈಲಿನಲ್ಲಿರಬೇಕು ಎಂದು ಆದೇಶ ನೀಡಿದರು.

    20 ಯುವತಿಯರನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿ ಸೈನೆಡ್ ನೀಡಿ ಕೊಲೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಮೋಹನ್ ಕುಮಾರ್‍ಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2013ರ ಡಿಸೆಂಬರ್ 21ರಂದು ಗಲ್ಲುಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿದ್ದ ಮೋಹನ್ ಕುಮಾರ್‍ಗೆ ಹೈಕೋರ್ಟ್ ರಿಲೀಫ್ ನೀಡಿ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದೆ.

    ತಾನೇ ವಾದಿಸಿದ್ದ:
    ವಿಚಾರಣೆ ವೇಳೆ ನನ್ನ ವಿರುದ್ಧದ ಆರೋಪಗಳಿಗೆ ಯಾವುದೇ ಸಾಕ್ಷ್ಯಇಲ್ಲ. ನಾನು ಅತ್ಯಾಚಾರ ನಡೆಸಿದ್ದಕ್ಕೆ ಪುರಾವೆಯೇ ಇಲ್ಲ. ನಾನು ಸೈನೆಡ್ ತಿನ್ನಿಸಿ ಸಾಯಿಸಿದ್ದೇನೆ ಎಂದು ವಕೀಲರು ವಾದಿಸಿದ್ದಾರೆ. ಆದರೆ ಪ್ರಯೋಗಾಲಯದಲ್ಲಿ ನಾನು ನಾನು ಸೈನೆಡ್ ನೀಡಿ ಕೊಲೆ ಮಾಡಿದ್ದೇನೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ. ಸೈನೆಡ್ ಸೇವಿಸಿದ್ದರೆ ಹೃದಯ ಬಡಿತ ನಿಂತುಹೋಗಿ ನರಗಳು ಹೆಪ್ಪುಗಟ್ಟಿ ಸಾವನ್ನಪ್ಪುತ್ತಾರೆ. ಆದರೆ ವರದಿಯಲ್ಲಿ ಈ ಯಾವುದೇ ವಿವರಗಳು ಇಲ್ಲ ಎಂದು ವಾದಿಸಿದ್ದ.

    ಸುಮಾರು 25ಕ್ಕೂ ಹೆಚ್ಚು ಖಾಲಿ ಪೇಪರ್ ಗಳಿಗೆ ನನ್ನ ಸಹಿ ಮಾಡಿಸಿಕೊಂಡು ಪೊಲೀಸರು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಹೀಗಾಗಿ ಕೋರ್ಟ್ ನೀಡಿರುವ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದ.

    2004ರಿಂದ 2009ರ ಅವಧಿಯಲ್ಲಿ 20 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಸೈನೆಡ್ ಮೋಹನ್ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ವಾದಿಸಿದ್ದರು. ಬಂಟ್ವಾಳ ಮೂಲದ ಶಿಕ್ಷಕನಾದ ಮೋಹನ್ 2002ರಲ್ಲಿ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದ.