Tag: ಮೋಹನ ಲಿಂಬಿಕಾಯಿ

  • ಮೋಹನ್ ಲಿಂಬಿಕಾಯಿಯಷ್ಟು ರಾಜಕೀಯ ಜ್ಞಾನ ನನಗೆ ಇಲ್ಲ : ಸಭಾಪತಿ ಹೊರಟ್ಟಿ

    ಮೋಹನ್ ಲಿಂಬಿಕಾಯಿಯಷ್ಟು ರಾಜಕೀಯ ಜ್ಞಾನ ನನಗೆ ಇಲ್ಲ : ಸಭಾಪತಿ ಹೊರಟ್ಟಿ

    ಧಾರವಾಡ: ಮೋಹನ್ ಲಿಂಬಿಕಾಯಿಯಷ್ಟು ರಾಜಕೀಯ ಜ್ಞಾನ ನನಗೆ ಇಲ್ಲ, ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ನನಗೆ ಬಿಜೆಪಿಗೆ ಯಾರು ಕರೆದಿದ್ದಾರೆ, ಯಾರು ಬಿಟ್ಟಿದ್ದಾರೆ ಎನ್ನುವುದು ಈಗ ಯಾಕೆ, ಚುನಾವಣೆ ಬರಲಿ, ಬಂದಾಗ ಎಲ್ಲವೂ ಗೊತ್ತಾಗುತ್ತದೆ. ನನಗೆ ಬಿಜೆಪಿಗೆ ಕರೆದವರು ಸುಮ್ಮನೆ ಕುಳಿತಿದ್ದೇಕೆ ಎಂದು ನನಗೂ ಗೊತ್ತಿಲ್ಲ, ಬೇರೆ ವಿಷಯ ಇದ್ದರೇ ಹೇಳಿ, ಆ ವಿಷಯ ಯಾಕೆ ಎಂದಿದ್ದಾರೆ. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆಯು ಅಲ್ಪಸಂಖ್ಯಾತರ ವಿರೋಧಿ ಕ್ರಮ: ಮುಸ್ಲಿಂ ಕಾನೂನು ಮಂಡಳಿ

    ಕಳೆದ ಸ್ವಲ್ಪ ದಿನ ಹಿಂದೆಯಷ್ಟೇ ಬಿಜೆಪಿ ಮುಖಂಡ ಮೋಹನ್ ಲಿಂಬಿಕಾಯಿ, ಹೊರಟ್ಟಿ ಬಿಜೆಪಿ ಸೇರಲ್ಲ. ಅಲ್ಲದೇ ಅವರಿಗೆ ಯಾರೂ ಕೂಡಾ ನಮ್ಮ ಪಕ್ಷಕ್ಕೆ ಆಹ್ವಾನ ನೀಡಿಲ್ಲ ಎಂದು ಹೇಳಿದರು. ಸದ್ಯ ಹೊರಟ್ಟಿ ಆ ಬಗ್ಗೆ ಈಗ ಏನೂ ಬೇಡ ಎಂದು ಹೇಳುವ ಮೂಲಕ ಜಾರಿಕೊಂಡರು. ಇದನ್ನೂ ಓದಿ: ಹನುಮಾನ್ ಚಾಲೀಸಾ ವಿಚಾರದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ: ಸಂಜಯ್ ರಾವತ್

    ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ ವಿಚಾರವಾಗಿ ಮಾತನಾಡಿದ ಅವರು, ಈಗಲಾದರೂ ಸತ್ಯ ಹೊರಬರುತ್ತದೆ ಎಂಬ ಆಶಾಭಾವನೆ ಬಂದಿದೆ. ಪ್ರಕರಣದಲ್ಲಿ ಕರ್ನಾಟಕ ವಿವಿ ಮೌಲ್ಯಮಾಪನ ಕುಲಸಚಿವ ನಾಗರಾಜ್ ವಿಚಾರಣೆ ನಡೆದಿದೆ. ಈಗ ಅವರನ್ನು ಕರೆಸಿದ್ದಾರೆ. ಆ ವಿಚಾರಣೆಯ ಫಲಿತಾಂಶ ಬರಲಿ ಎಂದರು.

    ಫಲಿತಾಂಶ ಬರುವವರೆಗೂ ನಾವೇನು ಹೇಳುವುದಕ್ಕೆ ಆಗುವುದಿಲ್ಲ, ಮೇಲ್ನೋಟಕ್ಕೆ ಆರೋಪ ಕಂಡು ಬಂದಾಗ ವಿಚಾರಣೆಗೆ ಕರೆದಿರುತ್ತಾರೆ. ಇಂಥವೆಲ್ಲ ಬಹಳ ದಿನಗಳಿಂದ ನಡೆದಿದ್ದವು, ಇನ್ನು ಮುಂದೆ ನಡೆಯಬಾರದು, ಸರ್ಕಾರ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ನಡು ರಸ್ತೆಯಲ್ಲಿ ಜಡೆ ಜಗಳ – ಎರಡು ಗುಂಪಿನ ವಿದ್ಯಾರ್ಥಿನಿಯರ ಜಗಳ ಬಿಡಿಸಲು ಜನ ಹರಸಾಹಸ

    ನಂಬಿಕೆ ಎನ್ನುವುದು ಮುಖ್ಯ, ತನಿಖೆ ಮಾಡುವವರು ಸರಿಯಾದ ರೀತಿಯ ತನಿಖೆ ಮಾಡಬೇಕು. ಇಲ್ಲದೇ ಹೋದಲ್ಲಿ ನಾಳೆ ಅವರ ಮೇಲೂ ಬರುತ್ತದೆ. ಪರೀಕ್ಷೆ ಎಂದರೆ ಎಷ್ಟೋ ಜನ ಜೀವ ತ್ಯಾಗ ಮಾಡಿ ಓದಿರುತ್ತಾರೆ. ಅಂಥವರಿಗೆ ಏನೂ ಮಾಡಬಾರದು, ತಪ್ಪು ಮಾಡಿದವರು ಒಂದಲ್ಲ ಒಂದು ದಿನ ಸಿಗುತ್ತಾರೆ. ಯಾವುದೇ ವ್ಯಕ್ತಿ ಇರಲಿ, ನಂಬಿಕೆ ಎನ್ನುವುದು ಮುಖ್ಯ, ಆ ನಂಬಿಕೆಗೆ ದ್ರೋಹ ಮಾಡುವುದು ಸರಿಯಲ್ಲ. ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

  • ಸತ್ಯದರ್ಶನ ಸಭೆ ನಡೆಸಲು ಬಿಡಲ್ಲ: ಮೋಹನ್ ಲಿಂಬಿಕಾಯಿ

    ಸತ್ಯದರ್ಶನ ಸಭೆ ನಡೆಸಲು ಬಿಡಲ್ಲ: ಮೋಹನ್ ಲಿಂಬಿಕಾಯಿ

    ಹುಬ್ಬಳ್ಳಿ: ಮೂರುಸಾವಿರ ಮಠದ ಉತ್ತರಾಧಿಕಾರಿ ವಿಚಾರಕ್ಕೆ ಸಂಬಂಧಿಸಿದಂತೆ ಫೆ. 23ರಂದು ಸತ್ಯದರ್ಶನ ಸಭೆ ನಡೆಸಲು ವಿರೋಧ ವ್ಯಕ್ತವಾಗುತ್ತಿದ್ದು, ಮೂರುಸಾವಿರ ಮಠದ ಉನ್ನತಾಧಿಕಾರ ಸಮಿತಿ ಸದಸ್ಯರೂ ಆಗಿರುವ ಮೋಹನ್ ಲಿಂಬಿಕಾಯಿ ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಈ ಕುರಿತು ಪ್ರತಿಕ್ರಿಯಸಿದ ಅವರು, ಮೂರು ಸಾವಿರ ಮಠದ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಯಾರೋ ಬಂದು ಸಭೆ ನಡೆಸುತ್ತೇವೆ ಅಂದರೆ ಅವಕಾಶ ಕೊಡುವುದಿಲ್ಲ. ಫೆ.23ರಂದು ಸತ್ಯದರ್ಶನ ಸಭೆ ನಡೆಸಲು ಬಿಡುವುದಿಲ್ಲ ಎಂದು ಮೋಹನ್ ಲಿಂಬಿಕಾಯಿ ಹೇಳಿದ್ದಾರೆ.

    ಹುಬ್ಬಳ್ಳಿಯ ಮೂರು ಸಾವಿರ ಮಠದ ಉತ್ತರಾಧಿಕಾರಿಯನ್ನಾಗಿ ತಮ್ಮನ್ನೇ ನೇಮಕ ಮಾಡಬೇಕೆಂಬುದರ ಕುರಿತು ಬಾಲೇಹೊಸುರಿನ ದಿಂಗಾಲೇಶ್ವರ ಸ್ವಾಮೀಜಿ ಇದೇ ಭಾನುವಾರ ಮಠದ ಆವರಣದಲ್ಲಿ ಸತ್ಯ ದರ್ಶನ ಸಭೆ ಕರೆದಿದ್ದಾರೆ. ಆದರೆ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದು, ಸಭೆ ನಡೆಸಲು ಅವಕಾಶ ನೀಡುವುದಿಲ್ಲವೆಂದು ಹಲವರು ಪಟ್ಟು ಹಿಡಿದಿದ್ದಾರೆ. ಇದೀಗ ಮೋಹನ್ ಲಿಂಬಿಕಾಯಿಯವರು ಸಹ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

    ಹಾಲಿ ಪೀಠಾಧ್ಯಕ್ಷ ಮೂಜಗು ಸ್ವಾಮೀಜಿ ಮಠವನ್ನು ನಡೆಸಲು ಸಮರ್ಥರಿದ್ದಾರೆ. ಯಾರೋ 52 ಜನ ಸಹಿ ಹಾಕಿದ ತಕ್ಷಣ ಉತ್ತರಾಧಿಕಾರಿ ನೇಮಕ ಆಗುವುದಿಲ್ಲ. ಸರ್ವಾಧಿಕಾರಿಯಂತೆ ಉತ್ತರಾಧಿಕಾರಿ ನೇಮಕ ನಡೆಯುವುದಿಲ್ಲ ಎಂದು ಮೋಹನ್ ಲಿಂಬಿಕಾಯಿ ಸ್ಪಷ್ಟಪಡಿಸಿದ್ದಾರೆ.