Tag: ಮೌಲ್ಯಮಾಪನ

  • ಬೋರ್ಡ್ ಎಕ್ಸಾಂನಲ್ಲಿ `ಐ ಲವ್ ಯೂ ಪೂಜಾ’ ಎಂದು ಬರೆದ ವಿದ್ಯಾರ್ಥಿ!

    ಬೋರ್ಡ್ ಎಕ್ಸಾಂನಲ್ಲಿ `ಐ ಲವ್ ಯೂ ಪೂಜಾ’ ಎಂದು ಬರೆದ ವಿದ್ಯಾರ್ಥಿ!

    ಲಕ್ನೋ: ವಿದ್ಯಾರ್ಥಿಯೊಬ್ಬ ತಾನು ಪ್ರೀತಿಯಲ್ಲಿ ಬಿದ್ದ ಕಾರಣ ಪರೀಕ್ಷೆಗೆ ಓದಲು ಸಾಧ್ಯವಾಗಿಲ್ಲ ಎಂದು ಉತ್ತರ ಪತ್ರಿಕೆಯಲ್ಲಿ ಬರೆದಿಟ್ಟು ಉತ್ತೀರ್ಣಗೊಳಿಸುವಂತೆ ಮನವಿ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಬೋರ್ಡ್ ಪರೀಕ್ಷೆ ಮೌಲ್ಯ ಮಾಪನದ ವೇಳೆ ಬೆಳಕಿಗೆ ಬಂದಿದೆ.

    ಉತ್ತರ ಪ್ರದೇಶದ ಶಿಕ್ಷಣ ಕ್ಷೇತ್ರದಲ್ಲಿ ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಸೂಚಿಸಿದ್ದ ಸಿಎಂ ಯೋಗಿ ಆದಿತ್ಯನಾಥ್ ಅದೇಶದ ಬಳಿಕ ಲಕ್ಷ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಸದ್ಯ ಬೋರ್ಡ್ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಆಂಭವಾಗಿದ್ದು, ವಿದ್ಯಾರ್ಥಿಗಳು ವಿಚಿತ್ರ ಉತ್ತರಗಳನ್ನು ಬರೆದು ಪರೀಕ್ಷೆಯಲ್ಲಿ ಉತೀರ್ಣ ಮಾಡಲು ಕೇಳಿಕೊಂಡಿದ್ದಾರೆ.

    ಕೆಲ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯೊಂದಿಗೆ ಹಣವನ್ನು ಇಟ್ಟು ಉತೀರ್ಣ ಮಾಡಲು ಅಮಿಷ ಒಡ್ಡಿದ್ದಾರೆ. ಅಲ್ಲದೇ ತನಗೆ ತಾಯಿ ಇಲ್ಲ, ಈ ಬಾರಿ ಪರೀಕ್ಷೆಯಲ್ಲಿ ನಾನು ಅನುತ್ತೀರ್ಣವಾದರೆ ತಂದೆ ತನ್ನನ್ನು ಕೊಲೆ ಮಾಡುವುದಾಗಿ ಮತ್ತೊಬ್ಬ ವಿದ್ಯಾರ್ಥಿ ಬರೆದಿದ್ದಾನೆ. ರಸಾಯನಶಾಸ್ತ್ರ ಪರೀಕ್ಷೆಯಲ್ಲಿ ತನ್ನ ಪ್ರೇಮದ ಬಗ್ಗೆ ಬರೆದಿದ್ದು, ತಾನು ಪ್ರೀತಿ ಮಾಡುವ ಯುವತಿಯ ಹೆಸರು ಹಾಗೂ ಹೃದಯದ ಚಿಹ್ನೆ ಬರೆದಿಟ್ಟಿದ್ದಾನೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಿಕ್ಷಕರೊಬ್ಬರು ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕರ ಅನುಕಂಪ ಪಡೆಯಲು ಈ ರೀತಿ ಮಾಡಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಹಣ ಅಮಿಷ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ಉತ್ತರ ಪ್ರದೇಶದ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗೆ ಮಾರ್ಚ್ 17 ರಿಂದ ಮಾಲ್ಯ ಮಾಪನ ಆರಂಭವಾಗಿದ್ದು, 248 ಕೇಂದ್ರಗಳಲ್ಲಿ ನಡೆಯುತ್ತಿದೆ. ಸುಮಾರು 5.5 ಕೋಟಿ ಉತ್ತರ ಪತ್ರಿಗಳನ್ನು 1.46 ಲಕ್ಷ ಶಿಕ್ಷಕರು ಮೌಲ್ಯ ಮಾಪನ ಮಾಡುತ್ತಿದ್ದಾರೆ.

    ಬೋರ್ಡ್ ಪರೀಕ್ಷೆಯ ಫಲಿತಾಂಶ ಏಪ್ರಿಲ್ ಮೂರನೇ ವಾರದಲ್ಲಿ ಬಿಡುಗಡೆಯಾಗುವ ಸಂಭವವಿದೆ ಎಂದು ಯುಪಿ ಶಿಕ್ಷಣ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಉತ್ತರ ಪ್ರದೇಶ ಬೋರ್ಡ್ ಪರೀಕ್ಷೆಯ ಸ್ಟ್ರಿಕ್ಟ್ ರೂಲ್ಸ್ ಗೆ ಹೆದರಿ 10 ಲಕ್ಷ ವಿದ್ಯಾರ್ಥಿಗಳು ಗೈರು!

  • ಇಂದಿನಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭ

    ಇಂದಿನಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭ

    ಬೆಂಗಳೂರು: ಮುಂಜಾಗ್ರತೆ, ಭಾರೀ ಭದ್ರತೆಯಿಂದ ಯಾವುದೇ ಅವಾಂತರವಿಲ್ಲದೆ ಅಂತ್ಯವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಇಂದಿನಿಂದ ಆರಂಭವಾಗಲಿದೆ.

    ಮೌಲ್ಯಮಾಪನಕ್ಕೆ ಪಿಯುಸಿ ಬೋರ್ಡ್ ಸಿದ್ಧತೆ ಮಾಡಿಕೊಂಡಿದ್ದು, ರಾಜ್ಯಾದ್ಯಂತ 48 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಮಂಗಳೂರು, ದಾವಣಗೆರೆ ಯಲ್ಲಿ ಮೌಲ್ಯಮಾಪನ ಕೇಂದ್ರಗಳನ್ನ ಮಾಡಲಾಗಿದೆ.

    ಈ ಬಾರಿ 21 ಸಾವಿರ ಉಪನ್ಯಾಸಕರು ಮೌಲ್ಯಮಾಪನದಲ್ಲಿ ಭಾಗವಹಿಸಲಿದ್ದಾರೆ. 15 ದಿನಗಳ ಕಾಲ ಮೌಲ್ಯಮಾಪನ ನಡೆಯಲಿದೆ. ಅಂದುಕೊಂಡಂತೆ ಎಲ್ಲವೂ ನಡೆದ್ರೆ ಮೌಲ್ಯಮಾಪನ ಪ್ರಕ್ರಿಯೆ ಮುಗಿಸಿ ಮೇ 10 ಕ್ಕೆ ಫಲಿತಾಂಶ ನೀಡಲು ಪಿಯುಸಿ ಬೋರ್ಡ್ ನಿರ್ಧರಿಸಿದೆ.

  • ಮೌಲ್ಯಮಾಪನ ಬಹಿಷ್ಕರಿಸಿದ್ರೆ ಜೈಲು ಶಿಕ್ಷೆ – ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

    ಮೌಲ್ಯಮಾಪನ ಬಹಿಷ್ಕರಿಸಿದ್ರೆ ಜೈಲು ಶಿಕ್ಷೆ – ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

    ಬೆಂಗಳೂರು: ಮೌಲ್ಯಮಾಪನ ಬಹಿಷ್ಕರಿಸುವ ಉಪನ್ಯಾಸಕರು, ಶಿಕ್ಷಕರಿಗೆ ಜೈಲು ಶಿಕ್ಷೆ ಹಾಗೂ ಮೌಲ್ಯಮಾಪನ ಬಹಿಷ್ಕಾರ ಬೆಂಬಲಿಸುವ ಸಂಘಟನೆಗಳ ಮೇಲೂ ಕ್ರಮ ಕೂಗೊಳ್ಳುವ ಬಗ್ಗೆ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಮಂಡಿಸಿದ ಮಹತ್ವದ ಮಸೂದೆ ಅಂಗೀಕಾರವಾಗಿದೆ.

    ವಿಧಾನಸಭೆಯಲ್ಲಿ ಕರ್ನಾಟಕ ಶಿಕ್ಷಣ ತಿದ್ದುಪಡಿ ಮಸೂದೆ ಅಂಗೀಕಾರವಾಗಿದ್ದು, ಬಜೆಟ್ ಅಧಿವೇಶನದ ವೇಳೆ ಪರಿಷತ್‍ನಲ್ಲಿ ಅಂಗೀಕಾರ ಪಡೆದುಕೊಳ್ಳಲು ಸರ್ಕಾರದ ನಿರ್ಧಾರಿಸಿದೆ.

    ವಿಧೇಯಕದ ಅಂಶಗಳು: 
    * ವಿಧೇಯಕದ 23 ಡಿ ತಿದ್ದುಪಡಿ.
    * ಮೌಲ್ಯಮಾಪಕ ಮೌಲ್ಯಮಾಪನದ ಮೇಲ್ವಿಚಾರಣೆ ಜವಾಬ್ದಾರಿ ಹೊತ್ತವರು ಮೌಲ್ಯಮಾಪನ ಸ್ಕೀಂ ಉಲ್ಲಂಘನೆ ಮಾಡುವಂತಿಲ್ಲ.
    * ಮೌಲ್ಯಮಾಪನ ಬಹಿಷ್ಕಾರ ಮಾಡುವಂತಿಲ್ಲ ಹಾಗೂ ಮೌಲ್ಯಮಾಪಕರು, ಮೇಲ್ವೀಚಾರಕರಿಗೆ ಕೆಲಸ ಮಾಡದಂತೆ ಯಾರೂ ಪ್ರಚೋದನೆ ಮಾಡುವಂತಿಲ್ಲ. ಅಂದ್ರೆ ಪ್ರತಿಭಟನೆ ಮಾಡುವಂತೆ ಪ್ರಚೋದಿಸುವಂತಿಲ್ಲ.
    * ಹೀಗೆ ಮಾಡಿದ್ರೆ ಮೌಲ್ಯಮಾಪನ ಬಹಿಷ್ಕಾರ ಮಾಡಿದವರಿಗೂ, ಪ್ರಚೋದನೆ ನೀಡುವವರಿಗೂ ಐದು ವರ್ಷ ವಿಸ್ತರಿಸಬಹುದಾದ ಜೈಲು ಶಿಕ್ಷೆ, ಐದು ಲಕ್ಷ ರೂ.ವರೆಗೆ ಜುಲ್ಮಾನೆ.
    * ಅಥವಾ ಜುಲ್ಮಾನೆ ಶಿಕ್ಷೆ ಎರಡೂ ವಿಧಿಸುವ ಕಾನೂನು.

    ರಾಜ್ಯ ಸರ್ಕಾರದ ಈ ನಡೆಗೆ ಉಪನ್ಯಾಸಕರ ಸಂಘದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೋರಾಟ ಮಾಡಿದ್ರೆ ಜೈಲಿಗೆ ಹಾಕೋದು ಎಷ್ಟು ಸರಿ? ಸರ್ಕಾರ ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡ್ತಿದೆ. ನಮ್ಮ ಬೇಡಿಕೆ ಈಡೇರಿಸದೆ ಕಾನೂನು ಪ್ರಯೋಗಿಸಿ ನಮ್ಮನ್ನ ನಿಯಂತ್ರಣ ಮಾಡಲು ಮುಂದಾಗಿದೆ. ಈ ವಿಧೇಯಕ ಒಪ್ಪಲು ಸಾಧ್ಯವಿಲ್ಲ. ಇದು ಶಿಕ್ಷಕರಿಗೆ ಮಾಡ್ತಿರುವ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮೊದಲು ನಮ್ಮ ಬೇಡಿಕೆ ಈಡೇರಿಸಿ ಅಮೇಲೆ ಕಾನೂನು ತನ್ನಿ. ನಿರಂತರ ಹೋರಾಟ ಮಾಡಿದ್ರೂ ಭರವಸೆ ಈಡೇರಿಸುತ್ತಿದ್ದೀರಾ? ಕೊಟ್ಟ ಮಾತು ಉಳಿಸಿಕೊಳ್ಳಿ ಎಂದು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಹಾಗೂ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಶ್ರೀಕಂಠೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ವಿಧೇಯಕ ವಾಪಸ್ ಪಡೆಯದಿದ್ರೆ ಹೋರಾಟ ಮಾಡಬೇಕಾಗುತ್ತೆ ಅಂತ ಉಪನ್ಯಾಸಕರು ಎಚ್ಚರಿಕೆ ನೀಡಿದ್ದಾರೆ.