Tag: ಮ್ಯಾಕ್ಸ್‌ ಸಿನಿಮಾ

  • ಏ.16ಕ್ಕೆ ಕಾದಿದೆ ಕಿಚ್ಚನಿಂದ ಬಿಗ್‌ ಸರ್ಪ್ರೈಸ್-‌ ಸುದೀಪ್‌ ಕಟ್ಟು ಮಸ್ತಾದ ಬಾಡಿ ನೋಡಿ ಫ್ಯಾನ್ಸ್‌ ಫಿದಾ

    ಏ.16ಕ್ಕೆ ಕಾದಿದೆ ಕಿಚ್ಚನಿಂದ ಬಿಗ್‌ ಸರ್ಪ್ರೈಸ್-‌ ಸುದೀಪ್‌ ಕಟ್ಟು ಮಸ್ತಾದ ಬಾಡಿ ನೋಡಿ ಫ್ಯಾನ್ಸ್‌ ಫಿದಾ

    ಸ್ಯಾಂಡಲ್‌ವುಡ್‌ ನಟ ಸುದೀಪ್‌ (Sudeep) ಮ್ಯಾಕ್ಸ್‌ ಚಿತ್ರದ ಬಳಿಕ ಹೊಸ ಸಿನಿಮಾದ ತಯಾರಿಯಲ್ಲಿ ಬ್ಯುಸಿಯಾಗಿದ್ದರು. ಇದರ ನಡುವೆ ಕಟ್ಟು ಮಸ್ತಾದ ವರ್ಕೌಟ್‌ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಬಿಗ್‌ ನ್ಯೂಸ್‌ ಕೊಟ್ಟಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಕೇಸ್: ದರ್ಶನ್ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ

    ಹೊಸ ಸಿನಿಮಾಗಾಗಿ ಸುದೀಪ್ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ. ಕಟ್ಟು ನಿಟ್ಟಾಗಿ ಡಯಟ್ ಫಾಲೋ ಮಾಡಿ ಸಖತ್ ಆಗಿ ಬಾಡಿ ಬೀಲ್ಡ್ ಮಾಡಿದ್ದಾರೆ. ಅವರ ಈ ವರ್ಕೌಟ್ ಫೋಟೋ ನೋಡಿ ಫ್ಯಾನ್ಸ್ ಬೆರಗಾಗಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ನಟನ ಈ ಪೋಸ್ಟ್‌ ಸಖತ್‌ ವೈರಲ್‌ ಆಗ್ತಿದೆ.ಇದನ್ನೂ ಓದಿ:ಗೋಲ್ಡ್ ರಾಣಿಗೆ ಮತ್ತೆ ಶಾಕ್ ಕೊಟ್ಟ ಪತಿ – ವಿಚ್ಛೇದನಕ್ಕೆ ಅರ್ಜಿ

     

    View this post on Instagram

     

    A post shared by KicchaSudeepa (@kichchasudeepa)

    ಅದಷ್ಟೇ ಅಲ್ಲ, ವರ್ಕೌಟ್ ಫೋಟೋ ಶೇರ್ ಮಾಡಿ ಏ.16 ಎಂದು ಸುದೀಪ್ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಹಾಗಾಗಿ ಇದು ಮುಂದಿನ ಚಿತ್ರದ ಬಗ್ಗೆ ಅಪ್‌ಡೇಟ್ ಎಂದೇ ಫ್ಯಾನ್ಸ್ ಊಹಿಸಿದ್ದಾರೆ.

    ‘ಮಾಕ್ಸ್’ (Max) ಚಿತ್ರದ ಬಳಿಕ ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲ ರಂಗ ಬಾಷಾ’ ಸಿನಿಮಾಗಾಗಿ ನಟ ತಯಾರಿ ಮಾಡಿಕೊಳ್ತಿದ್ದಾರೆ. ಅದಕ್ಕಾಗಿ ಸುದೀಪ್ ದೇಹ ದಂಡಿಸಿದ್ದಾರೆ. ಇದೇ ಏ.16ರಂದು ಈ ಚಿತ್ರ ಸೆಟ್ಟೇರಲಿದೆ ಎಂದು ಹೇಳಲಾಗ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಸಿಗುವವರೆಗೂ ಕಾಯಬೇಕಿದೆ.

  • ಬಾಲ್ಯದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ: ‘ಮಾಣಿಕ್ಯ’ ನಟಿ ವರಲಕ್ಷ್ಮೀ ಕಣ್ಣೀರು

    ಬಾಲ್ಯದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ: ‘ಮಾಣಿಕ್ಯ’ ನಟಿ ವರಲಕ್ಷ್ಮೀ ಕಣ್ಣೀರು

    ನ್ನಡದ ‘ಮಾಣಿಕ್ಯ’ (Maanikya) ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ತಮಗಾದ ಲೈಂಗಿಕ ಕಿರುಕುಳ ನೆನೆದು ಕಾರ್ಯಕ್ರಮವೊಂದರಲ್ಲಿ ಕಣ್ಣೀರಿಟ್ಟಿದ್ದಾರೆ. ನಿಮ್ಮ ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಅರಿವು ಮೂಡಿಸಿ ಎಂದು ಪೋಷಕರಿಗೆ ನಟಿ ಮನವಿ ಮಾಡಿದ್ದಾರೆ. ಇದನ್ನೂ ಓದಿ:‘ನಿನ್ನ ಪ್ರತಿಯೊಂದು ಹೆಜ್ಜೆಯಲ್ಲೂ ನನ್ನ ಪಾಲಿರಲಿ’ ಎನ್ನುತ್ತಿದ್ದಾರೆ ಸಪ್ತಮಿ ಗೌಡ

    ವರಲಕ್ಷ್ಮಿ ಬಹುಭಾಷೆಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದಾರೆ. ಇದೀಗ ಅವರು ‘ಡ್ಯಾನ್ಸ್ ಜೋಡಿ ಡ್ಯಾನ್ಸ್’ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿದ್ದಾರೆ. ಇದರ ಪ್ರೋಮೋ ಇದೀಗ ರಿಲೀಸ್ ಆಗಿದೆ. ಆ ಪ್ರೋಮೋದಲ್ಲಿ ಮಹಿಳಾ ಸ್ಪರ್ಧಿಯೊಬ್ಬರು ತಾವು ಎದುರಿಸಿದ ಕಹಿ ಅನುಭವಗಳ ಬಗ್ಗೆ ಡ್ಯಾನ್ಸ್ ಮೂಲಕ ತೋರಿಸಿದ್ದಾರೆ. ಇದನ್ನು ನೋಡಿ ವರಲಕ್ಷ್ಮಿ ಭಾವುಕರಾಗಿದ್ದಾರೆ.

    ಬಾಲ್ಯದಲ್ಲಿ ನಾನು ಕೂಡ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ, ನನ್ನ ಕಥೆಯೂ ನಿನ್ನ ಕಥೆಯೂ ಒಂದೇ ಎಂದಿದ್ದಾರೆ ನಟಿ. ಪೋಷಕರು ಅವರ ಕೆಲಸದಲ್ಲಿ ನಿರತರಾಗಿದ್ದರು. ಹಾಗಾಗಿ ನಾನು ಚಿಕ್ಕವಳಿದ್ದಾಗ ನನ್ನನ್ನು ಬೇರೆಯವರ ಮನೆಯಲ್ಲಿ ಬಿಟ್ಟು ಹೋಗುತ್ತಿದ್ದರು. ಆಗ 5ರಿಂದ 6 ಜನ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು. ನಿನ್ನ ಸ್ಟೋರಿ ನನ್ನ ಸ್ಟೋರಿ ಎರಡು ಒಂದೆ. ನನಗೆ ಮಕ್ಕಳಿಲ್ಲ ಆದರೆ ನಾನು ಪೋಷಕರಿಗೆ ಹೇಳುವುದಿಷ್ಟೇ, ನಿಮ್ಮ ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಅರಿವು ಮೂಡಿಸಿ ಎಂದು ವೇದಿಕೆಯಲ್ಲಿ ವರಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ.

    ಅಂದಹಾಗೆ, ಇನ್ನೂ ಕಳೆದ ವರ್ಷ ಜುಲೈನಲ್ಲಿ ಉದ್ಯಮಿ ನಿಕೋಲಾಯ್ ಜೊತೆ ನಟಿ ವರಲಕ್ಷ್ಮಿ ಹೊಸ ಬಾಳಿಗೆ ಕಾಲಿಟ್ಟರು. ವಿದೇಶದಲ್ಲಿ ಇಬ್ಬರ ಮದುವೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.

  • ನಿಮ್ಮ ಬೆಂಬಲದಿಂದ ಸವಾಲುಗಳನ್ನು ಎದುರಿಸುವ ಹುಮ್ಮಸ್ಸು ನೀಡಿದೆ- ಫ್ಯಾನ್ಸ್‌ಗೆ ಸುದೀಪ್‌ ಥ್ಯಾಂಕ್ಸ್

    ನಿಮ್ಮ ಬೆಂಬಲದಿಂದ ಸವಾಲುಗಳನ್ನು ಎದುರಿಸುವ ಹುಮ್ಮಸ್ಸು ನೀಡಿದೆ- ಫ್ಯಾನ್ಸ್‌ಗೆ ಸುದೀಪ್‌ ಥ್ಯಾಂಕ್ಸ್

    ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ (Sudeep) ಅವರು ಜ.31ಕ್ಕೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 29 ವರ್ಷಗಳು ಪೂರೈಸಿವೆ. ಹಾಗಾಗಿ ಪ್ರೋತ್ಸಾಹಿಸಿ ಬೆಂಬಲಿಸಿದ ಫ್ಯಾನ್ಸ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಸುದೀಪ್ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ:‘ಅಂಕಲ್, ಆಂಟಿ ಲವ್‌ಸ್ಟೋರಿ’ ಎಂದು ಟ್ರೋಲ್ ಮಾಡಿದವರಿಗೆ ತಕ್ಕ ಉತ್ತರ ಕೊಟ್ಟ ಗೌತಮಿ

    ಸುದೀಪ್ ಪೋಸ್ಟ್‌ನಲ್ಲಿ 29 ವರ್ಷಗಳು.. ಈವರೆಗಿನ ನನ್ನ ಈ ಸುದೀರ್ಘ ಪ್ರಯಾಣಕ್ಕಾಗಿ ನನ್ನಲ್ಲಿ ಕೃತಜ್ಞತಾ ಭಾವನೆ ಇದೆ. ಅಭಿಮಾನಿಗಳನ್ನು ರಂಜಿಸೋದು, ಪ್ರತಿನಿಧಿಸುವ ಕತೆಗಳಿಗೆ ನಾನು ಪಾತ್ರವಾಗುವುದು ನನ್ನ ಪಾಲಿಗೆ ಅತ್ಯಂತ ಗೌರವದ ಕೆಲಸ. ನಿಮ್ಮಿಂದ ಸಿಕ್ಕಿರುವ ಸತತ ಪ್ರೀತಿ, ಬೆಂಬಲ ನನ್ನಲ್ಲಿ ಸ್ಫೂರ್ತಿ ತುಂಬುತ್ತಲೇ ಬರುತ್ತಿದೆ. ಅಂಥ ಡೆಡಿಕೇಟೆಡ್ ಅಭಿಮಾನಿಗಳನ್ನು ಹೊಂದಿರೋದು ನನ್ನ ಸೌಭಾಗ್ಯ ಎಂದಿದ್ದಾರೆ.

    ನೀವು ನೀಡುತ್ತಿರುವ ಬೆಂಬಲದಿಂದಲೇ ಪ್ರತಿ ಸವಾಲುಗಳನ್ನು ಎದುರಿಸುವ ಹುಮ್ಮಸ್ಸು ನೀಡಿದೆ. ಅದ್ಯಾವ ಮಟ್ಟಿಗೆ ಅರ್ಥಪೂರ್ಣವಾಗಿದೆ ಎಂದು ವ್ಯಕ್ತಪಡಿಸಲು ನನ್ನಿಂದ ಸಾಧ್ಯವಿಲ್ಲ. ಈ ಅದ್ಭುತವಾದ ಪ್ರಯಾಣದ ಭಾಗವಾಗಿದ್ದಕ್ಕಾಗಿ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದಷ್ಟೇ ನಾನು ಹೇಳಬಲ್ಲೇ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚ ಬರೆದುಕೊಂಡಿದ್ದಾರೆ.

    https://youtu.be/3gYUPQBGmRw?si=NM4UCwKqresE3f_C

    ಇನ್ನೂ ಸುದೀಪ್ ಅವರು ‘ಸ್ಪರ್ಶ’ ಸಿನಿಮಾದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟರು. ಆ ನಂತರ ಹುಚ್ಚ, ನಂದಿ, ಕಾಶಿ, ತಿರುಪತಿ, ಹುಬ್ಬಳ್ಳಿ, ಗೂಳಿ, ವೀರ ಮದಕರಿ, ಕೆಂಪೇಗೌಡ ಇತ್ತೀಚಿನ ‘ಮ್ಯಾಕ್ಸ್’ (Max Film) ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.

  • ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಕಿಚ್ಚ

    ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಕಿಚ್ಚ

    ಚಿತ್ರದುರ್ಗ: ಕನ್ನಡ ಚಿತ್ರರಂಗದಲ್ಲಿ (Kannada Film Industry) ಸದಾ ಒಗ್ಗಟ್ಟು ಹೀಗೆ ಇರಲಿ ಎಂದು ಬಯಸೋನು ನಾನು ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಒಗ್ಗಟ್ಟಿನ ಮಂತ್ರ ಜಪಿಸಿದರು.

    ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ಮ್ಯಾಕ್ಸ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಕೋಟೆನಾಡು ಚಿತ್ರದುರ್ಗದಲ್ಲಿ (Chitradurga) ಅದ್ಧೂರಿಯಾಗಿ ನಡೆಯಿತು. ಈ ವೇಳೆ ನಗರದ ಜಗದ್ಗುರು ಜಯದೇವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅವರ ದುರ್ಗದ ಸಹಸ್ರಾರು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ವಲಸೆ ಹೆಚ್ಚಲಿದೆ – ನಾರಾಯಣಮೂರ್ತಿ ಆತಂಕ

    ಹುಚ್ಚ ಸಿನಿಮಾದಿಂದ ಪ್ರಾರಂಭವಾದ ನಟ ಸುದೀಪ್ ಹಾಗೂ ಚಿತ್ರದುರ್ಗದೊಂದಿಗಿನ ಅವರ ನಂಟಿನ ವಿಶೇಷ ವೀಡಿಯೋವನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು. ಇದೇ ವೇಳೆ ಚಿತ್ರದುರ್ಗದಲ್ಲಿ ಸುದೀಪ್ ಅವರ ‘ಮ್ಯಾಕ್ಸ್’ ಸಿನಿಮಾ ಟ್ರೈಲರ್ ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ – ಕಾರ್ಯಕರ್ತರನ್ನು ಕಂಡು ಸಿ.ಟಿ ರವಿ ಭಾವುಕ

    ಈ ವೇಳೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಕಿಚ್ಚ, ಈ ಹಿಂದೆ ದುರ್ಗಕ್ಕೆ ಬರುತ್ತೇನೆ ಎಂದು ಮಾತು ಕೊಟ್ಟಿದ್ದೆ. ಒಬ್ಬನೇ ಬಂದಿಲ್ಲ. ಈಗ ಕುಟುಂಬ ಸಮೇತ ಬಂದಿದ್ದೇನೆ. ಹಾಗೆಯೇ ಚಿತ್ರದುರ್ಗಕ್ಕೆ ಪ್ರತಿಸಲ ಬರುವಾಗಲೂ ಬಹಳ ಸಂತೋಷವಾಗುತ್ತದೆ. ಹುಚ್ಚ ಸಿನಿಮಾ ಯಾರೂ ಮರೆಯಲು ಸಾಧ್ಯವಿಲ್ಲ. ಅಂಥದ್ದೊಂದು ಪ್ರೀತಿಯನ್ನು ಚಿತ್ರದುರ್ಗ ಕೊಟ್ಟಿದೆ ಎಂದು ಸ್ಮರಿಸಿದರು. ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ರಾಹುಲ್‌ಗೆ ಕೋರ್ಟ್‌ ಸಮನ್ಸ್‌

    ಜೊತೆಗೆ ಕನ್ನಡ ಚಿತ್ರರಂಗ ಒಗ್ಗಟ್ಟಾಗಿ ಇರೋದನ್ನು ನೋಡೋನು ನಾನು. ನಮ್ಮಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿವೆ. ಹೀಗಾಗಿ ನೀವೆಲ್ಲರೂ ಹೊಸ ಪ್ರತಿಭೆಗಳಿಗೆ ಸಪೋರ್ಟ್ ಮಾಡಬೇಕು ಎಂದರು. ಇದನ್ನೂ ಓದಿ: ಗಣರಾಜ್ಯೋತ್ಸವ ಪರೇಡ್‌ಗೆ ಮತ್ತೆ ದೆಹಲಿ ಟ್ಯಾಬ್ಲೋ ತಿರಸ್ಕಾರ – ಆಪ್‌, ಬಿಜೆಪಿ ನಡುವೆ ವಾಗ್ವಾದ

    ಈ ಕಾರ್ಯಕ್ರಮದಲ್ಲಿ ಸುದೀಪ್ ಪತ್ನಿ ಪ್ರಿಯಾ ಸುದೀಪ್, ಮಗಳು ಸಾನ್ವಿ, ಅಕ್ಕನ ಮಗ ಸಂಚಿತ್ ಕೂಡಾ ಭಾಗವಹಿಸಿದ್ದರು. ಇವರೊಂದಿಗೆ ನಾಯಕ ನಟರಾದ ಯುವ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್, ನಿರ್ದೇಶಕರಾದ ಎ.ಪಿ.ಅರ್ಜುನ್, ರೋಹಿತ್ ಪದಕಿ, ಅನೂಪ್ ಭಂಡಾರಿ, ಶ್ರೇಯಸ್ ಮಂಜು, ನಿರೂಪ್ ಭಂಡಾರಿ ಮತ್ತಿತರರು ಭಾಗವಹಿಸಿದ್ದರು. ಇದನ್ನೂ ಓದಿ: ಮಂಡ್ಯ| ಮೂರು ದಿನಗಳ ಅಕ್ಷರ ಜಾತ್ರೆಗೆ ತೆರೆ

    ನಟ ಯುವ ರಾಜ್‌ಕುಮಾರ್ ಹಾಗು ಡಾಲಿ ಧನಂಜಯ ಕೂಡ ಸುದೀಪ್ ಅವರ ಮೇಲೆ ಅವರ ಅಭಿಮಾನಿಗಳು ತೋರಿದ ಪ್ರೀತಿ ಹಾಗೂ ಅಭಿಮಾನಕ್ಕೆ ಫುಲ್ ಫಿದಾ ಆದರು. ಸುದೀಪ್ ಅವರ ಒಗ್ಗಟ್ಟಿನ ಗುಣವನ್ನು ಶ್ಲಾಘಿಸಿದರು. ಇದನ್ನೂ ಓದಿ: ಉಪನ್ಯಾಸಕನ ಮೇಲೆ ವಿದ್ಯಾರ್ಥಿ, ಪೋಷಕರಿಂದ ಹಲ್ಲೆ – ದೂರು ದಾಖಲು

  • ಬಿಗ್‌ ಬಾಸ್‌ ಶೋಗೆ ಸುದೀಪ್ ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟು?- ನಟ ಹೇಳೋದೇನು?

    ಬಿಗ್‌ ಬಾಸ್‌ ಶೋಗೆ ಸುದೀಪ್ ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟು?- ನಟ ಹೇಳೋದೇನು?

    ನ್ನಡದ ಸ್ಟಾರ್ ನಟ ಸುದೀಪ್‌ ಬೇಡಿಕೆ ನಟನಾಗಿ ಬಹುಭಾಷೆಗಳಲ್ಲಿ ಸದ್ದು ಮಾಡುತ್ತಿದ್ದಾರೆ.  ಇಂದಿಗೂ ಸುದೀಪ್ ನಟನೆ ಮತ್ತು ನಿರೂಪಣೆಗೆ ದೊಡ್ಡ ಮಟ್ಟದ ಅಭಿಮಾನಿಗಳ ಬಳಗವಿದೆ. ಇದರ ನಡುವೆ ನಟ ಇಂಟರೆಸ್ಟಿಂಗ್‌ ವಿಚಾರವೊಂದನ್ನು ರಿವೀಲ್‌ ಮಾಡಿದ್ದಾರೆ. ಬಿಗ್ ಬಾಸ್ 10 ಸೀಸನ್ ಮುಗಿಸಿ 11ನೇ (Bigg Boss Kannada 11) ಸೀಸನ್‌ಗೆ ಲಗ್ಗೆ ಇಡುತ್ತಿರುವ ಕಾರ್ಯಕ್ರಮಕ್ಕೆ ಸುದೀಪ್ ಪಡೆದುಕೊಳ್ಳುತ್ತಿರುವ ಸಂಭಾವನೆ (Salary) ಎಷ್ಟು? ಎಂಬುದರ ಬಗ್ಗೆ ನಟ ತಿಳಿಸಿದ್ದಾರೆ. ಇದನ್ನೂ ಓದಿ:ಆ ದೊಡ್ಡ ಸ್ಟಾರ್ ಜೊತೆ ನಟಿಸುತ್ತಿಲ್ಲ: ಸಿಮ್ರಾನ್ ಫುಲ್ ಗರಂ..!

    ಬಿಗ್ ಬಾಸ್ ಸುದ್ದಿಗೋಷ್ಠಿಯಲ್ಲಿ ಈ ಶೋಗೆ ಪಡೆದುಕೊಳ್ಳುತ್ತಿರುವ ಸಂಭಾವನೆ ಕುರಿತು ನಟನಿಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ನಟ ಪ್ರತಿಕ್ರಿಯಿಸಿ, ನನ್ನ ತಟ್ಟೆ ಎಷ್ಟು ಅಗಲ ಇದೆಯೋ ನಾನಷ್ಟು ಊಟ ಮಾಡುತ್ತೇನೆ. ನನಗೆ ಯೋಗ್ಯತೆ ಎಷ್ಟು ಇದೆಯೋ ನಾನಷ್ಟೇ ದುಡಿಯೋದು ಎಂದಿದ್ದಾರೆ. ಇದು ನನ್ನ ಹೊಸ ಅಧ್ಯಾಯ ಎಂದು ಸುದೀಪ್ ನಕ್ಕಿದ್ದಾರೆ.

    ಈ ಸೀಸನ್ ನಾನು ಮಾಡಲ್ಲ ಅಂತ ಹೇಳಿದ್ದು ಸಂಭಾವನೆ ಕಾರಣಕ್ಕೆ ಅಲ್ಲ. ನಾನು ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇನೆ. ನನಗೆ ತುಂಬಾ ಸುಸ್ತು ಆಗ್ತಾ ಇತ್ತು. ತುಂಬಾ ಟ್ರಾವೆಲ್ ಆಗುತ್ತಿತ್ತು. ಅದನ್ನು ನಾನು ತಂಡಕ್ಕೆ ತಿಳಿಸಿದ್ದೆ, ಆದರೆ ಅವರೇ ನಾನು ಈ ಶೋ ಮಾಡುವಂತೆ ಕೇಳಿಕೊಂಡರು. 10 ವರ್ಷ ಬಿಗ್ ಬಾಸ್‌ಗೆ ಕೆಲಸ ಮಾಡಿದ್ದೇನೆ. 28 ವರ್ಷ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿದ್ದೀನಿ ಅಂದ್ಮೇಲೆ ಒಳ್ಳೆಯ ಸಂಭಾವನೆಯೇ ಪಡೆದುಕೊಳ್ಳುತ್ತಿರುತ್ತೇನೆ ಅಲ್ವಾ? ಎಂದು ನಗುತ್ತಾ ಸುದೀಪ್ ಉತ್ತರಿಸಿದ್ದಾರೆ. ಆದರೆ ಪಡೆದುಕೊಳ್ಳುತ್ತಿರುವ ಸಂಭಾವನೆ ಬಗ್ಗೆ ಮಾತ್ರ ಯಾವುದೇ ಮಾಹಿತಿ ಅವರು ಬಿಟ್ಟು ಕೊಟ್ಟಿಲ್ಲ.

    ಅಂದಹಾಗೆ, ಸೆ.29ರಂದು ಸಂಜೆ 6ಕ್ಕೆ ಗ್ರ‍್ಯಾಂಡ್ ಆಗಿ ಲಾಂಚ್ ಆಗುತ್ತಿದ್ದು, ಪ್ರತಿದಿನ ರಾತ್ರಿ 9.30ಕ್ಕೆ ಶೋ ಪ್ರಸಾರವಾಗಲಿದೆ ಎಂದು ವಾಹಿನಿ ತಿಳಿಸಿದೆ. ಕಿಚ್ಚನ ನಯಾ ಖದರ್ ನೋಡೋಕೆ ಫ್ಯಾನ್ಸ್ ಕೂಡ ಕಾಯ್ತಿದ್ದಾರೆ.

    ಬಿಗ್ ಬಾಸ್ ಬರಲಿರುವ ಕೆಲ ಸ್ಪರ್ಧಿಗಳ ಹೆಸರು ಸದ್ದು ಮಾಡುತ್ತಿದೆ. ಮೋಕ್ಷಿತಾ ಪೈ, ಹುಲಿ ಕಾರ್ತಿಕ್, ಸುಕೃತಾ ನಾಗ್, ಕಿರುತೆರೆ ನಟಿ ಅಮೂಲ್ಯ, ಭವ್ಯಾ ಗೌಡ, ವರ್ಷಾ ಕಾವೇರಿ ಸೇರಿದಂತೆ ಅನೇಕರು ಹೆಸರು ಚಾಲ್ತಿಯಲ್ಲಿದೆ. ಯಾರೆಲ್ಲಾ ದೊಡ್ಮನೆ ಬರುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

  • BB Season 11 | ಬೇರೆಯವರನ್ನು ನೋಡ್ಬೇಕು ಅಂತಾ ನಾನು ವೇಟ್ ಮಾಡ್ತಾ ಇದೀನಿ: ಸುದೀಪ್

    BB Season 11 | ಬೇರೆಯವರನ್ನು ನೋಡ್ಬೇಕು ಅಂತಾ ನಾನು ವೇಟ್ ಮಾಡ್ತಾ ಇದೀನಿ: ಸುದೀಪ್

    ಬೆಂಗಳೂರು: ಈ ಬಾರಿಯ ಬಿಗ್ ಬಾಸ್ (Bigg Boss) ರಿಯಾಲಿಟಿ ಶೋ ನಿರೂಪಣೆಯನ್ನು ಸುದೀಪ್ ಮಾಡಲ್ವಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ಸುದೀಪ್ ಅವರು ನೀಡಿದ ಹೇಳಿಕೆಯಿಂದ ಈ ಪ್ರಶ್ನೆ ಈಗ ಸೃಷ್ಟಿಯಾಗಿದೆ.

    ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ ಕೆಲವು ದಿನಗಳಲ್ಲೇ ಸೀಸನ್ 11 (Season 11) ಆರಂಭವಾಗಲಿದೆ. ಇಲ್ಲಿಯವರೆಗೂ ನಡೆದ 10 ಸೀಸನ್‌ಗಳನ್ನು ನಟ ಅಭಿನಯ ಚಕ್ರವರ್ತಿ ಸುದೀಪ್ (Abhinaya Chakravarty Sudeep) ನಿರೂಪಕರಾಗಿ ನಡೆಸಿಕೊಂಡು ಬಂದಿದ್ದರು.ಇದನ್ನೂ ಓದಿ: ಕೋರ್ಟ್ ಆದೇಶ ಪಾಲಿಸದ ಮಸ್ಕ್ – ಬ್ರೆಜಿಲ್‍ನಲ್ಲಿ ಎಕ್ಸ್ ಸೇವೆ ಸ್ಥಗಿತ

    ಕಳೆದ ಕೆಲವು ದಿನಗಳಿಂದ ಬಿಗ್ ಬಾಸ್ ಸೀಸನ್ 11ರ ನಿರೂಪಕ ಬದಲಾಗುವ ಕುರಿತು ಸುದ್ದಿ ಎಲ್ಲೆಡೆ ಹಬ್ಬಿತ್ತು ಆದರೆ ಇದಕ್ಕೆ ಸಂಬಂಧಿಸಿದಂತೆ ವಾಹಿನಿಯಾಗಲಿ, ನಟ ಸುದೀಪ್ ಆಗಲಿ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿರಲಿಲ್ಲ.

    ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್, ಬಿಗ್ ಬಾಸ್ ಸೀಸನ್ -11 ಕ್ಕೆ ಬೇರೆಯವರೂ ಬರಲಿ ಅಂತಾ ಕಾಯ್ತಾ ಇದೀನಿ. ಬಿಗ್ ಬಾಸ್‌ನ 10 ಸೀಸನ್‌ಗಳನ್ನು ನಾನು ಡೆಡಿಕೇಟ್ ಮಾಡಿದ್ದೀನಿ. ಕಳೆದ 10 ಸೀಸನ್‌ಗಳನ್ನು ನಾನು ನಡೆಸಿಕೊಂಡು ಬಂದಿದ್ದೀನಿ. ನಾನು ಬಿಗ್ ಬಾಸ್ ನಡೆಸಿಕೊಡ್ತೀನಿ ಅಂತಾ ಎಲ್ಲರಿಗೂ ಗೊತ್ತಿದೆ. ಆದರೆ ನಾನು ಹೇಗೆ ನಡೆಸಿಕೊಡುತ್ತಿದ್ದೆ ಅಂತಾ ಯಾರಿಗಾದರೂ ಗೊತ್ತಿದ್ಯಾ? ಬಿಗ್ ಬಾಸ್‌ಗಾಗಿ ನಾನು ಎಲ್ಲಿದ್ದರೂ ಬರಬೇಕಾಗುತ್ತದೆ. ಬಿಗ್ ಬಾಸ್ ನಡೆಸಬೇಕಾದರೆ ಅದರ ಹಿಂದಿನ ಸ್ಥಿತಿ ಹೇಗಿರುತ್ತದೆ ಅಂತಾ ನನಗೆ ಗೊತ್ತಿದೆ ಎಂದು ಬಿಚ್ಚಿಟ್ಟರು.ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ನರ್ಸ್‌ ಮೇಲೆ ಅತ್ಯಾಚಾರ – 59ರ ವ್ಯಕ್ತಿ ಬಂಧನ

    ಈ ಸಂದರ್ಭದಲ್ಲಿ ಸಿನಿಮಾಗೆ ನ್ಯಾಯ ಕೊಡಬೇಕಾ? ಅಥವಾ ಬಿಗ್ ಬಾಸ್ ಶೋಗೆ ನ್ಯಾಯ ಕೊಡಬೇಕಾ? ಎಂದು ಪ್ರಶ್ನಿಸಿದರು. ಸುದೀಪ್ ಅವರು ಈ ಮಾತನ್ನು ಆಡಿದ ಬೆನ್ನಲ್ಲೇ ಈ ಬಾರಿಯ ಶೋನದಲ್ಲಿ ನಿರೂಪಣೆ ಮಾಡ್ತಾರೋ ಇಲ್ವೋ ಪ್ರಶ್ನೆ ಎದುರಾಗಿದೆ. ಮಾಧ್ಯಮಗೋಷ್ಠಿಯಲ್ಲಿ ನಾನು ಶೋ ನಡೆಸಿಕೊಡುತ್ತೇನೆ ಅಥವಾ ನಡೆಸಿಕೊಡುವುದಿಲ್ಲ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟವಾದ ಉತ್ತರ ನೀಡಿಲ್ಲ. ವಾಹಿನಿ ಸಹ ಈ ವಿಚಾರದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಹೀಗಾಗಿ ಬಿಗ್ ಬಾಸ್ ಆರಂಭವಾಗುವವರೆಗೂ ಕುತೂಹಲ ಮುಂದುವರಿಯಲಿದೆ.

  • ನಾನು ಸುದೀಪ್ ಅವರ ದೊಡ್ಡ ಅಭಿಮಾನಿ: ‘ಮ್ಯಾಕ್ಸ್’ ನಟಿ ಸಂಯುಕ್ತಾ ಹೊರನಾಡ್

    ನಾನು ಸುದೀಪ್ ಅವರ ದೊಡ್ಡ ಅಭಿಮಾನಿ: ‘ಮ್ಯಾಕ್ಸ್’ ನಟಿ ಸಂಯುಕ್ತಾ ಹೊರನಾಡ್

    ಲೈಫು ಇಷ್ಟೇನೆ, ಟೋಬಿ ಸಿನಿಮಾ ಖ್ಯಾತಿಯ ಸಂಯುಕ್ತಾ ಹೊರನಾಡ್ ‘ಮ್ಯಾಕ್ಸ್’ ಚಿತ್ರದಲ್ಲಿ ಸುದೀಪ್ ಜೊತೆ ನಟಿಸಿದ್ದು, ಚಿತ್ರೀಕರಣ ಅನುಭವದ ಬಗ್ಗೆ ಹಂಚಿಕೊಂಡಿದ್ದಾರೆ. ನಾನು ಕಿಚ್ಚ ಸುದೀಪ್ ಅವರ ದೊಡ್ಡ ಅಭಿಮಾನಿ ಎಂದು ಸಂಯುಕ್ತಾ ಮಾತನಾಡಿದ್ದಾರೆ. ಇದನ್ನೂ ಓದಿ:‘ಕ್ಯಾ ಲಫ್ಡಾ’ ಅಂತಾ ಹೆಜ್ಜೆ ಹಾಕಿದ ರಾಮ್ ಪೋತಿನೇನಿ, ಕಾವ್ಯಾ ಥಾಪರ್

    ನಾನು ಸುದೀಪ್ ಸರ್ ಅವರ ದೊಡ್ಡ ಅಭಿಮಾನಿ. ನಾನು ಈ ಹಿಂದೆ ‘ಜಿಗರ್‌ಥಂಡ’ ಸಿನಿಮಾದಲ್ಲಿ ಅವರ ಜೊತೆ ಕೆಲಸ ಮಾಡಿದ್ದೇನೆ. ಸರ್ ಕೆಲಸ ಮಾಡುವಾಗ ಸಿನಿಮಾ ಮೇಕಿಂಗ್‌ನಲ್ಲೂ ಭಾಗಿಯಾಗುತ್ತಿದ್ದರು. ಅವರ ಎನರ್ಜಿ, ಸಿನಿಮಾ ಮೇಲೆ ಅವರಿಗಿರುವ ಪ್ರೀತಿ ಮಾತ್ರ ಅದ್ಭುತ. ಅವರ ಜೊತೆ ನಾನು ತೆರೆಹಂಚಿಕೊಂಡಿರೋದಕ್ಕೆ ಖುಷಿಯಿದೆ ಎಂದು ಸಂಯುಕ್ತಾ ಹೊರನಾಡ್ (Samyukta Hornad) ಸಂತಸ ವ್ಯಕ್ತಪಡಿಸಿದ್ದಾರೆ.

    ‘ಮ್ಯಾಕ್ಸ್’ ಸಿನಿಮಾ ಈಗೀನ ಕಾಲಕ್ಕೆ ತಕ್ಕಂತೆ ಇದೆ. ಚಿತ್ರದಲ್ಲಿ ದೊಡ್ಡ ಮಟ್ಟದ ಸ್ಟಂಟ್ಸ್ ಕೂಡ ಇದೆ. ಬಾಡಿ ಡಬಲ್ ಬಳಸದೆ ಸುದೀಪ್‌ ಸರ್ ತಾವೇ ಸ್ಟಂಟ್ಸ್ ಮಾಡಿದ್ದಾರೆ. ಈ ಚಿತ್ರ ಫ್ಯಾನ್ಸ್‌ಗೆ ಪೈಸಾ ವಸೂಲ್ ಸಿನಿಮಾ ಆಗಿದೆ. ‘ಮ್ಯಾಕ್ಸ್’ ಸಿನಿಮಾ ನಿಜಕ್ಕೂ ಎಲ್ಲರಿಗೂ ಇಷ್ಟವಾಗುತ್ತದೆ ಎಂದು ನಟಿ ಮಾತನಾಡಿದ್ದಾರೆ.

    ‘ಮ್ಯಾಕ್ಸ್’ (Max Film) ಸಿನಿಮಾದಲ್ಲಿ ಸುದೀಪ್ (Sudeep) ಜೊತೆ ಸಂಯುಕ್ತಾ ಹೊರನಾಡ್, ವರಲಕ್ಷ್ಮಿ ಶರತ್‌ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಸದ್ಯ ಚಿತ್ರದ ಮೊದಲ ಟೀಸರ್ ಇತ್ತೀಚೆಗೆ ರಿಲೀಸ್ ಆಗಿ ಸಖತ್ ಸದ್ದು ಮಾಡಿತ್ತು. ಸುದೀಪ್ ಮಾಸ್ ಅವತಾರಕ್ಕೆ ಫ್ಯಾನ್ಸ್ ಫಿದಾ ಆಗಿದ್ದರು. ಈಗ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

  • ‘ಮ್ಯಾಕ್ಸ್’ ಚಿತ್ರದ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್- ಸಿನಿಮಾ ಕಥೆ ಬಗ್ಗೆ ಶುರುವಾಯ್ತು ಚರ್ಚೆ

    ‘ಮ್ಯಾಕ್ಸ್’ ಚಿತ್ರದ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್- ಸಿನಿಮಾ ಕಥೆ ಬಗ್ಗೆ ಶುರುವಾಯ್ತು ಚರ್ಚೆ

    ಕಿಚ್ಚ ಸುದೀಪ್ (Kichcha Sudeep) ನಟನೆಯ ‘ಮ್ಯಾಕ್ಸ್’ (Max Film) ಜು.16ರಂದು ಬಹುಭಾಷೆಗಳಲ್ಲಿ ಟೀಸರ್ ರಿಲೀಸ್ ಆಗಿ ಭರ್ಜರಿ ರೆಸ್ಪಾನ್ಸ್ ಪಡೆದಿದೆ. ಎಲ್ಲಾ ಭಾಷೆಯಲ್ಲೂ ಮಾಕ್ಸ್ ಚಿತ್ರದ ಟೀಸರ್ ಝಲಕ್‌ ನೋಡಿ ಫಿದಾ ಆಗಿದ್ದಾರೆ. ಈ ಬೆನ್ನಲ್ಲೇ ಮ್ಯಾಕ್ಸ್ ಸಿನಿಮಾ ಕಥೆ ಹೇಗಿರಬಹುದು ಎಂದೆಲ್ಲಾ ಚರ್ಚೆ ಶುರುವಾಗಿದೆ. ಇದನ್ನೂ ಓದಿ:ಧ್ಯಾನ್, ಸದಾ ನಟನೆಯ ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ

    ಪ್ಯಾನ್ ಇಂಡಿಯಾ ಚಿತ್ರವಾದ ‘ಮ್ಯಾಕ್ಸ್’ ಒಂದು ಮಾಸ್ ಚಿತ್ರವಾಗಿದ್ದು, ಟೀಸರ್‌ನಲ್ಲಿರುವ ಡೈಲಾಗ್ ತುಣುಕುಗಳು ಈಗಾಗಲೇ ಭರ್ಜರಿ ಸದ್ದು ಮಾಡಿ, ಸಿನಿ ಪ್ರೇಕ್ಷಕರು ಚಿತ್ರದ ಬರುವಿಕೆಯನ್ನು ಎದುರು ನೋಡುವಂತೆ ಮಾಡಿದೆ. ಬಾ ಬಾ ಬ್ಲಾಕ್ ಶಿಪ್ ಹ್ಯಾವ್ ಯೂ ಎನಿ ಕ್ಲೂ ಎಂದು ಖಡಕ್ ಡೈಲಾಗ್ ಹೇಳುವ ಮೂಲಕ ಸುದೀಪ್ ಮಸ್ತ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

    ಮಾಸ್- ಗಾಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುದೀಪ್‌ರನ್ನು ಕಂಡು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಟೀಸರ್‌ನಲ್ಲಿನ ಆ್ಯಕ್ಷನ್ ದೃಶ್ಯಗಳು ಮೈ ಜುಂ ಎನ್ನಿಸುವಂತಿದ್ದು ಮಾಸ್ ಅಭಿಮಾನಿಗಳ ಕಣ್ಮನ ಸೆಳೆದಿದೆ. ಸದ್ಯ ಚಿತ್ರದ ಟೀಸರ್‌ ಮಿಲಿಯನ್‌ಗಟ್ಟಲೇ ವಿವ್ಸ್‌ ಪಡೆದು ಮುನ್ನುಗ್ಗುತ್ತಿದೆ. ಕಿಚ್ಚನ ಅವತಾರಕ್ಕೆ ಭರ್ಜರಿ ರೆಸ್ಪಾನ್ಸ್‌ ಸಿಕ್ಕಿದೆ.

    ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ‘ಮ್ಯಾಕ್ಸ್’ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮಿ ಶರತ್ ಕುಮಾರ್ (Varalaxmi Sarathkumar), ಸಂಯುಕ್ತ ಹೊರನಾಡು (Samyukta Hornad), ಪ್ರಮೋದ್ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮತ್ತು ಸುದೀಪ್‌ ಅವರ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

  • ‘ಮ್ಯಾಕ್ಸ್’ ಆಟ ಶುರು- ಮಾಸ್‌ ಆಗಿ ಎಂಟ್ರಿ ಕೊಟ್ಟ ಕಿಚ್ಚ ಸುದೀಪ್

    ‘ಮ್ಯಾಕ್ಸ್’ ಆಟ ಶುರು- ಮಾಸ್‌ ಆಗಿ ಎಂಟ್ರಿ ಕೊಟ್ಟ ಕಿಚ್ಚ ಸುದೀಪ್

    ಹುನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ (Max Film) ಇಂದು (ಜು.16) ಟೀಸರ್ ಬಿಡುಗಡೆ ಮಾಡಿ ಎಲ್ಲೆಡೆ ಸದ್ದು ಮಾಡುತ್ತಿದೆ. ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಅವರನ್ನು ಕಂಡು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಟೀಸರ್‌ನಲ್ಲಿನ ಆ್ಯಕ್ಷನ್ ದೃಶ್ಯಗಳು ಮೈ ಜುಂ ಎನ್ನಿಸುವಂತಿದ್ದು ಮಾಸ್ ಅಭಿಮಾನಿಗಳ ಕಣ್ಮನ ಸೆಳೆದಿದೆ. ಇದನ್ನೂ ಓದಿ:ಕಾಮಿಡಿ ಸ್ಟಾರ್ ಈಗ ಸ್ಯಾಂಡಲ್‌ವುಡ್‌ನ ಬೇಡಿಕೆಯ ಖಡಕ್ ವಿಲನ್

    ಪ್ಯಾನ್ ಇಂಡಿಯಾ ಚಿತ್ರವಾದ `ಮ್ಯಾಕ್ಸ್’ ಒಂದು ಮಾಸ್ ಚಿತ್ರವಾಗಿದ್ದು, ಟೀಸರ್‌ನಲ್ಲಿರುವ ಡೈಲಾಗ್ ತುಣುಕುಗಳು ಈಗಾಗಲೇ ಭರ್ಜರಿ ಸದ್ದು ಮಾಡಿ, ಸಿನಿ ಪ್ರೇಕ್ಷಕರು ಚಿತ್ರದ ಬರುವಿಕೆಯನ್ನು ಎದುರು ನೋಡುವಂತೆ ಮಾಡಿದೆ. ಬಾ ಬಾ ಬ್ಲ್ಯಾಕ್ ಶಿಪ್ ಹ್ಯಾವ್ ಯೂ ಎನಿ ಕ್ಲೂ ಎಂದು ಖಡಕ್ ಡೈಲಾಗ್ ಹೇಳುವ ಮೂಲಕ ಸುದೀಪ್ ಮಸ್ತ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

    ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ‘ಮ್ಯಾಕ್ಸ್’ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ.

    ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

  • ಜು.16ರಂದು ಸಿಗಲಿದೆ ‌’ಮ್ಯಾಕ್ಸ್‌’ ಚಿತ್ರದ ಅಪ್‌ಡೇಟ್‌- ಕಿಚ್ಚ ಕೊಟ್ರು ಗುಡ್‌ ನ್ಯೂಸ್

    ಜು.16ರಂದು ಸಿಗಲಿದೆ ‌’ಮ್ಯಾಕ್ಸ್‌’ ಚಿತ್ರದ ಅಪ್‌ಡೇಟ್‌- ಕಿಚ್ಚ ಕೊಟ್ರು ಗುಡ್‌ ನ್ಯೂಸ್

    ಸ್ಯಾಂಡಲ್‌ವುಡ್ ನಟ ಸುದೀಪ್ (Sudeep) ನಟನೆಯ ‘ಮ್ಯಾಕ್ಸ್’ (Max) ಸಿನಿಮಾದ ಚಿತ್ರೀಕರಣ ಮುಗಿದಿದೆ. ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ಭರದಿಂದ ನಡೆಯುತ್ತಿವೆ. ಇದರ ನಡುವೆ ‘ಮ್ಯಾಕ್ಸ್’ ಸಿನಿಮಾದ ಬಗ್ಗೆ ಏನು ಅಪ್‌ಡೇಟ್ ಸಿಗದೇ ಕಾಯುತ್ತಿದ್ದ ಫ್ಯಾನ್ಸ್‌ಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ.

    ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಜುಲೈ 16ರಂದು ಮಧ್ಯಾಹ್ನ 12:34ಕ್ಕೆ ಬಿಗ್ ಅಪ್‌ಡೇಟ್ ಸಿಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಸಿನಿಮಾ ಬಗೆಗಿನ ಸುದ್ದಿ ಏನೆಂದು ಜು.16ರವರೆಗೂ ಕಾಯಬೇಕಿದೆ. ಇದನ್ನೂ ಓದಿ:‘ಕೆಂಡ’ ಟ್ರೈಲರ್‌ನಲ್ಲಿ ಕಂಡು ಕೇಳರಿಯದ ಕಥೆಯ ಸುಳಿವು!

    ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.

    ಅಂದಹಾಗೆ, 2022ರಲ್ಲಿ ತೆರೆಕಂಡ `ವಿಕ್ರಾಂತ್ ರೋಣ ಚಿತ್ರದ ನಂತರ ಸುದೀಪ್ ಗ್ಯಾಪ್ ತೆಗೆದುಕೊಂಡರು. ಬಿಗ್ ಬಾಸ್ ಶೋ ಸೇರಿದಂತೆ ಇತರೆ ಕೆಲಸಗಳಲ್ಲಿ ಬ್ಯುಸಿಯಾದರು. ಹಾಗಾಗಿ ಮ್ಯಾಕ್ಸ್ ಚಿತ್ರ ನೋಡೋಕೆ ಅಭಿಮಾನಿಗಳು ಕಾಯ್ತಿದ್ದಾರೆ.