Tag: ಮ್ಯಾಜಿಸ್ಟ್ರೇಟ್‌ ಕೋರ್ಟ್‌

  • ಆಸ್ತಿ, ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ: ದರ್ಶನ್‌ಗೆ ಜೈಲೂಟ ಫಿಕ್ಸ್‌ – ಕೋರ್ಟ್‌ ಹೇಳಿದ್ದೇನು?

    ಆಸ್ತಿ, ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ: ದರ್ಶನ್‌ಗೆ ಜೈಲೂಟ ಫಿಕ್ಸ್‌ – ಕೋರ್ಟ್‌ ಹೇಳಿದ್ದೇನು?

    ಬೆಂಗಳೂರು: ಗೆಳತಿ ಪವಿತ್ರಾಗೌಡಗೆ (Pavithra Gowda) ಅಶ್ಲೀಲ ಸಂದೇಶ ರವಾನಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಜೈಲು ಸೇರಿರುವ ನಟ ದರ್ಶನ್‌ಗೆ (Darshan) ಜೈಲೂಟ ಫಿಕ್ಸ್ ಆಗಿದೆ.

    ಮನೆಯೂಟ (Home Food), ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ (Maagsitrate Court) ವಜಾಗೊಳಿಸಿದೆ. ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಅರ್ಜಿ ವಜಾ ಬೆನ್ನಲ್ಲೇ ಜುಲೈ 29 ರಂದು ಹೈಕೋರ್ಟ್‌ನಲ್ಲಿ (High Court) ಅರ್ಜಿ ಸಲ್ಲಿಸಲು ದರ್ಶನ್ ಪರ ವಕೀಲರು ನಿರ್ಧರಿಸಿದ್ದಾರೆ.

    ಅರ್ಜಿ ವಜಾಗೊಂಡ ವಿಷಯ ಜೈಲಾಧಿಕಾರಿ ದರ್ಶನ್‌ಗೆ ತಿಳಿಸುತ್ತಿದ್ದಂತೆ ಬೇಸರ ವ್ಯಕ್ತಪಡಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಕಳೆದ ನಾಲ್ಕು ದಿನಗಳಿಂದ ಜ್ವರ ಹಿನ್ನೆಲೆ ಜೈಲು ಹಿರಿಯ ವೈದ್ಯಾಧಿಕಾರಿಗಳು ದರ್ಶನ್‌ಗೆ ಚಿಕಿತ್ಸೆ ನೀಡ್ತಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆ – ಫಲಾನುಭವಿಗಳಿಗೆ 1 ಲಕ್ಷ ರೂ. ಹೊರೆ ಕಡಿಮೆ ಮಾಡಲು ನಿರ್ಧಾರ

    ದರ್ಶನ್ ಅರ್ಜಿ ತಿರಸ್ಕಾರದ 16 ಪುಟಗಳ ಆದೇಶ ಪ್ರತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ದರ್ಶನ್ ಮನೆ ಊಟದ ಅರ್ಜಿ ವಜಾಗೊಳ್ಳಲು ಹಲವಾರು ಕಾರಣಗಳನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ ಕೊಟ್ಟಿದೆ. ಇದನ್ನೂ ಓದಿ: Rashtrapati Bhavan| ದರ್ಬಾರ್ ಹಾಲ್, ಅಶೋಕ್ ಹಾಲ್ ಇನ್ಮುಂದೆ ಗಣತಂತ್ರ, ಅಶೋಕ ಮಂಟಪವಾಗಿ ಮರುನಾಮಕರಣ

    ಕೋರ್ಟ್ ಹೇಳಿದ್ದೇನು?
    ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ.

    ದರ್ಶನ್ ವಿಚಾರದಲ್ಲಿ ಮೂಲಭೂತ ಹಕ್ಕಿಗೆ ಧಕ್ಕೆ ಕಂಡು ಬಂದಿಲ್ಲ. ಜೈಲಿನ ಊಟ ಕಳಪೆ ಗುಣಮಟ್ಟ ಎಂಬ ಆರೋಪ ಕೇಳಿಬಂದಿಲ್ಲ. ದರ್ಶನ್‌ಗೆ ಜೈಲಿನಲ್ಲಿ ಮೂಲಭೂತ ಸೌಕರ್ಯ ಒದಗಿಸಲಾಗಿದೆ.

    ಮನುಷ್ಯನಿಗೆ ಬೇಕಾದ ಪೌಷ್ಠಿಕಾಂಶ ಜೈಲಿನ ಊಟ ಒಳಗೊಂಡಿದೆ. ನ್ಯಾಯಾಂಗ ಬಂಧನ ದಿನದಿಂದಲೇ ಆರೋಗ್ಯ (Health) ಸಮಸ್ಯೆ ಒಪ್ಪಲಾಗಲ್ಲ. ದರ್ಶನ್ ಬೆಡ್ ರೆಸ್ಟ್‌ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ. ಬೇರೇನೂ ಹೇಳಿಲ್ಲ. ಪ್ರೋಟಿನ್ ಡಯಟ್ ಕೊಡಬೇಕೆಂದು ವೈದ್ಯರು ಹೇಳಿಲ್ಲ.

    ವಿಶೇಷ ಡಯಟ್ ಆಹಾರ ನೀಡಬೇಕಾದ್ರೆ ಜೈಲು ವೈದ್ಯರ ಒಪ್ಪಿಗೆ ಬೇಕಾಗುತ್ತದೆ. ದರ್ಶನ್ ವಿಚಾರದಲ್ಲಿ ವೈದ್ಯರು ವಿಶೇಷ ಆಹಾರಕ್ಕೆ ಶಿಫಾರಸು ಮಾಡಿಲ್ಲ. ದರ್ಶನ್ ಬೆನ್ನು ನೋವು ಹಾಗೂ ಕಾಲು ನೋವಿನಿಂದ ಬಳಲುತ್ತಿರುವ ಕಾರಣ ಬೆಡ್ ರೆಸ್ಟ್‌ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಉಳಿದಂತೆ ಬೇರೆ ಸಮಸ್ಯೆಗಳಿಲ್ಲ.

    ವ್ಯಕ್ತಿ ಸಮಾಜದ ಉನ್ನತ ಸ್ಥಾನದಲ್ಲಿದ್ದರೂ ಜೈಲಿನಲ್ಲಿ ತಾರತಮ್ಯ ಮಾಡಲಾಗುವುದಿಲ್ಲ. ಇಲ್ಲಿ ಎಲ್ಲರೂ ಸಮಾನರೇ. ಜಾತಿ ಧರ್ಮ ಅಸ್ತಿ ಅಂತಸ್ತು ಲೆಕ್ಕಕ್ಕೆ ಬರುವುದಿಲ್ಲ.

     

  • ದರ್ಶನ್‌ಗೆ ಜೈಲೂಟವೇ ಗತಿ

    ದರ್ಶನ್‌ಗೆ ಜೈಲೂಟವೇ ಗತಿ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲು ಸೇರಿರುವ ನಟ ದರ್ಶನ್‌ (Darshan) ಜೈಲೂಟವನ್ನೇ ಸೇವಿಸಬೇಕಿದೆ.

    ಮನೆಯಿಂದ ಊಟ (Home Cooked Food) ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಜುಲೈ 25ಕ್ಕೆ ಆದೇಶ  ಕಾಯ್ದಿರಿಸಿದೆ. ದರ್ಶನ್‌ ಪರ ಮತ್ತು ಪೊಲೀಸರ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು ಜುಲೈ 25 ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದರು.

    ದರ್ಶನ್‌ ಪರ ವಕೀಲರ ವಾದ ಏನಿತ್ತು?
    ಆರೋಪಿಗೆ ಜೈಲಿನಲ್ಲಿ ಇರುವಾಗ ಮನೆಯ ಊಟ ಪಡೆಯಬಹುದು. ಇದು ವಿಚಾರಣಾಧೀನ ಕೈದಿಯ ಹಕ್ಕು. ಜೈಲಿನ ನಿಯಮಗಳಲ್ಲಿ ಇದರ ಉಲ್ಲೇಖ ಇದೆ. ಆರೋಪಿಗೆ ಕೆಲವೊಂದು ನಿಬಂಧನೆಗಳನ್ನು ಹೇಳಿ ಅವಕಾಶ ಕೊಡಿಸಬಹುದು. ತಮ್ಮದೇ ವೆಚ್ಚದಲ್ಲಿ ಇದನ್ನು ಪಡೆಯಲು ಅವಕಾಶವನ್ನು ಹೊಂದಿಸಲಾಗಿದೆ. ಕೊಲೆಯ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ

    ಸೆಕ್ಷನ್ 30 ರ ಪ್ರಕಾರ ಜೈಲಿನಲ್ಲಿ ಇರುವ ಆರೋಪಿ ಮನೆಯ ಊಟ ಪಡೆಯಬಹುದು. ಅಲ್ಲದೇ ಮನೆಯಿಂದ ಹಾಸಿಗೆ ವ್ಯವಸ್ಥೆ ಮತ್ತು ಪುಸ್ತಕಗಳನ್ನು ಹೊಂದುವ ಅವಕಾಶ ಇದೆ . ಈ ಎಲ್ಲಾ ಅವಕಾಶಗಳನ್ನು ಆರೋಪಿಗಳಿಗೆ ಒದಗಿಸಿಕೊಡಬಹುದು.

    ಮರಣ ದಂಡನೆ ಹೊಂದಿದ ಅಪರಾಧಿಗೂ ಕೆಲ ಅವಕಾಶ ಇದೆ. ಅಲ್ಲದೇ ದರ್ಶನ್ ಅವರು ಸಿನಿಮಾದ ನಟರಾಗಿರುವ ಕಾರಣ ಅತಿ ಹೆಚ್ಚಿನ ಪ್ರಚಾರ ಸಿಗುತ್ತಿದೆ. ಹೀಗಾಗಿ ಜೈಲಿನ ಅಧಿಕಾರಿಗಳು ಮನೆಯ ಊಟವನ್ನು ನೀಡುವುದಕ್ಕೆ ನಿರಾಕರಣೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಇದರಿಂದ ಹಿಂದೆ ಸರಿಯುತ್ತಿದ್ದಾರೆ.

    ಈ ಹಿಂದೆ ಕುಖ್ಯಾತ ಆರೋಪಿ ಚಾರ್ಲ್ಸ್ ಶೋಭರಾಜ್‌ಗೆ ಕೂಡ ಮನೆಯ ಊಟ ಕಲ್ಪಿಸಲಾಗಿತ್ತು. ಯಾವಾಗ ಆರೋಪಿ, ಅಪರಾಧಿ ಎಂದು ಕೋರ್ಟ್‌ ಶಿಕ್ಷೆ ನೀಡುತ್ತದೋ ಅಲ್ಲಿಯವರೆಗೆ ಈ ಎಲ್ಲಾ ಅವಕಾಶವನ್ನು ಬಳಸಿಕೊಳ್ಳಬಹುದು.

    ಪೊಲೀಸರ ಪರ ವಾದ ಏನಿತ್ತು?
    ಆಹಾರ ಅಜೀರ್ಣವಾಗುತ್ತಿದೆ. ಪುಡ್ ಪಾಯಿಸನ್ ಆಗಿದೆ, ಭೇದಿ ಆಗುತ್ತಿದೆ ಎಂದು ಮೆಡಿಕಲ್ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಆದರೆ ಒಂದು ಒಂದು ಬಾರಿಯೂ ಭೇದಿ ಆಗಿದೆ ಎಂದು ಆಸ್ಪತ್ರೆಯಲ್ಲಿ ದರ್ಶನ್‌ ಚಿಕಿತ್ಸೆ ಪಡೆದಿಲ್ಲ

    ದರ್ಶನ್ ಅವರು ಮುರಿದಿರುವ ಕೈ ಬಗ್ಗೆ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್‌ ಅವರಿಗೆ ಈಗ ವೈರಲ್‌ ಫೀವರ್‌ ಇದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನಲ್ಲಿ ದರ್ಶನ್ ಅವರಿಗೆ ಮೂರು ತಿಂಗಳ ಹಿಂದೆ ಆರ್ಥೋ ಅಪರೇಷನ್ ಆಗಿತ್ತು. ಜೈಲಿನಲ್ಲಿ ಬಂದಾಗ ಅದರ ನೋವು ಪ್ರಾರಂಭವಾಗಿದ್ದು ಇದಕ್ಕೆ ಎಕ್ಸ್ ರೇ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

    ಜೈಲಿನ ನಿಯಮಗಳ ಪ್ರಕಾರ ಮನೆಯ ಊಟ ಎನ್ನುವುದರ ಬಗ್ಗೆ ಉಲ್ಲೇಖ ಇಲ್ಲ. ಅನಾರೋಗ್ಯದ ಸಮಯದಲ್ಲಿ ಮಾತ್ರ ವಿಶೇಷ ಊಟ ನೀಡಬಹುದು ಹೊರತು ಮನೆಯ ಊಟವನ್ನೇ ನೀಡಬೇಕು ಎಲ್ಲೂ ಉಲ್ಲೇಖ ಮಾಡಿಲ್ಲ. ಅನಾರೋಗ್ಯದ ವೇಳೆ ವಿಶೇಷ ಕಾಳಜಿ ಆಹಾರ ನೀಡಬೇಕು. ವಾರದಲ್ಲಿ ಒಮ್ಮೆ ಮಾತ್ರ ಮಾಂಸಾಹಾರದ ಊಟ ಕೊಡಬಹುದು. ಅದನ್ನು ಬಿಟ್ಟು ಪ್ರತಿ ದಿನ ಬಿರಿಯಾನಿ ತಿನ್ನಬೇಕು ಎಂದರೆ ನೀಡಲು ಸಾಧ್ಯವಿಲ್ಲ. ಹೀಗಾಗಿ ಮನೆಯ ಊಟವನ್ನು ನೀಡುವಂತೆ ಇಲ್ಲ.

    ಆರೋಪಿಗೆ ಭೇದಿ ಆಗುತ್ತಿದ್ದರೆ ಉಪ್ಪು ಖಾರ ಇಲ್ಲದ ಸಾತ್ವಿಕ ಆಹಾರ ನೀಡಬೇಕು. ಕುಡಿಯಲು ಬಿಸಿ ನೀರು ಬೇಕು ಅಂದರೆ ಜ್ವರ ಇದ್ದಾಗ ಮಾತ್ರ ನೀಡ್ತಾರೆ. ಅದನ್ನ ಬಿಟ್ಟು ಪ್ರತಿ ದಿನ ಸ್ನಾನ ಮಾಡಲು ಬಿಸಿ ನೀರು ಕೊಡಲು ಸಾಧ್ಯವಿಲ್ಲ. ಅನಾರೋಗ್ಯ ಇದ್ದರೆ 15 ದಿನ ಮಾತ್ರ ವಿಶೇಷವಾಗಿ ಅವಕಾಶ ನೀಡಬಹುದು.