Tag: ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್

  • ಅರಮನೆಯಲ್ಲಿ ವಿಜಯ ದಶಮಿ ಸಂಭ್ರಮ

    ಅರಮನೆಯಲ್ಲಿ ವಿಜಯ ದಶಮಿ ಸಂಭ್ರಮ

    ಮೈಸೂರು: ಅರಮನೆಯಲ್ಲಿ ವಿಜಯ ದಶಮಿ ಸಂಭ್ರಮ ಮನೆ ಮಾಡಿದೆ. ಮುಂಜಾನೆ 4.40ರಿಂದ ಅರಮನೆಯಲ್ಲಿ ಹೋಮ ಆರಂಭವಾಗಿದೆ.

    ಹೋಮಕ್ಕೆ ಯದುವೀರ್ ಒಡೆಯರ್ ಅವರಿಂದ ಪೂರ್ಣಾಹುತಿ. 5.45ಕ್ಕೆ ಆನೆ ಕುದುರೆ ಹಸುಗಳ ಆಗಮನವಾಗಿದೆ. 6.13 ರಿಂದ 6.32ರವರೆಗೆ ಪೂಜಾ ಕೈಂಕರ್ಯ ನೇರವೇರಿದೆ. ಖಾಸಾ ಆಯುಧಗಳಿಗೆ ಯದುವೀರ್ ರಿಂದ ಉತ್ತರ ಪೂಜೆ. ಉತ್ತರ ಪೂಜೆ ನಂತರ ಶಮಿ ಪೂಜೆ ನಂತರ ಚಾಮುಂಡಿ ದೇವಿ ವಿಗ್ರಹ ಕನ್ನಡಿ ತೊಟ್ಟಿಯಿಂದ ಚಾಮುಂಡಿ ತೊಟ್ಟಿಗೆ ರವಾನೆ ಮಾಡಲಾಗಿದೆ.

    ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್: ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಜಯಯಾತ್ರೆ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಿದರು. ಮುಂಜಾನೆ 5.45ಕ್ಕೆ ಅರಮನೆಯ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸುಗಳಿಗೆ ಪೂಜೆ ನೆರವೇರಿಸಲಾಯಿತು. ಬಳಿಕ ಬೆಳಗ್ಗೆ 7.20ರಿಂದ 7.40ರವರೆಗೆ ಅರಮನೆ ರಾಜಪುರೋಹಿತರ ಸಮ್ಮುಖದಲ್ಲಿ ವಿಜಯದಶಮಿ ಮೆರವಣಿಗೆ ನಡೆಸಿದ ಯದುವೀರ್ ಒಡೆಯರ್, ಅರಮನೆ ಮುಖ್ಯದ್ವಾರದಿಂದ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇಗುಲದವರೆಗೂ ಮೆರವಣಿಗೆ ಮೂಲಕ ತೆರಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು.

    ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2021 ವಿಜೃಂಬಣೆಯಿಂದ ಆಚರಿಸಲಾಗುತ್ತಿದೆ. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಕೆಂಪು ಸೀರೆಯುಡಿಸಿ ಅಲಂಕಾರ ಮಾಡಲಾಗಿದೆ. ಬೆಳ್ಳಿ ರಥದ ಮೂಲಕ ತಾಯಿ ಚಾಮುಂಡೇಶ್ವರಿಯನ್ನು ಕರೆದೊಯ್ಯುಲಾಗಿದೆ. ಸಚಿವ ಎಸ್.ಟಿ.ಸೋಮಶೇಖರ್‌ ಪುಷ್ಪಾರ್ಚನೆ ಮಾಡಿ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಶಾಸಕರಾದ ರಾಮದಾಸ್, ಜಿ.ಟಿ.ದೇವೇಗೌಡ, ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದರು. 8 ಗಂಟೆಗೆ ಚಾಮುಂಡಿ ಬೆಟ್ಟದಿಂದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಅರಮನೆಗೆ ಬರಲಿದೆ. ತಾಯಿಯನ್ನು ಸ್ವಾಗತಿಸಲು ಭಕ್ತರು ಉತ್ಸುಕರಾಗಿದ್ದಾರೆ. ಬೆಟ್ಟದ ಪಾದದಿಂದ ಅರಮನೆಯ ರಸ್ತೆಯ ವರೆಗೆ ಬಣ್ಣ-ಬಣ್ಣದ ರಂಗೋಲಿಯನ್ನು ಹಾಕಲಾಗಿದೆ. ದೇವರ ನೈವೇದ್ಯಕ್ಕೆ ನವಧಾನ್ಯ ಉಸ್ಲಿ ನವರಾತ್ರಿ ಸ್ಪೆಷಲ್

    ಜನಪದ ಕಲಾತಂಡಗಳೊಂದಿಗೆ ಸ್ಟೆಪ್ ಹಾಕಿದ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಜಾನಪದ ಕಲಾ ತಂಡಗಳ ಜೊತೆಗೆ ನೃತ್ಯ ಮಾಡಿ ಕಂಸಾಳೆ ಬಡಿದು ಹುರುಪು ತುಂಬಿದ್ದಾರೆ. ಅರಮನೆಯಂಗಳದಲ್ಲಿರುವ ಜಾನಪದ ಕಲಾ ತಂಡದ ಜೊತೆಗೆ ವೀರಗಾಸೆ ಕತ್ತು ಗುರಾಣಿ ಹಿಡಿದು ಉಸ್ತುವಾರಿ ಸಚಿವರು ಕುಣಿದ ಕುಪ್ಪಳಿಸಿದ್ದಾರೆ. ಸರಳ ದಸರಾದಲ್ಲಿ ಅದ್ದೂರಿ ಸ್ಟಪ್ ಹಾಕಿದ ಸೋಮಶೇಖರ್ ಎಲ್ಲಾ ಜಾನಪದ ಕಲಾ ತಂಡಗಳೊಂದಿಗೆ  ಸ್ಟೆಪ್ಸ್ ಹಾಕಿದ್ದಾರೆ. ಈ ವೇಳೆ ಎಸ್‍ಟಿಎಸ್ ಅವರಿಗೆ ಮೈಸೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ಸಾಥ್ ನೀಡಿದ್ದಾರೆ.

    ಜಯಮಾರ್ತಂಡ ದ್ವಾರದ ಮೂಲಕ ಚಾಮುಂಡೇಶ್ವರಿ ಉತ್ಸವ ಮೂರ್ತಿ ಅರಮನೆ ಆವರಣ ಪ್ರವೇಶಿಸಿದೆ. ಜಾನಪದ ಕಲಾತಂಡಗಳ ಸಮ್ಮುಖದಲ್ಲಿ ತಾಯಿ ಉತ್ಸವ ಮೂರ್ತಿಗೆ ಪೂರ್ಣ ಕುಂಭ ಸ್ವಾಗತ ಮಾಡಲಾಗಿದೆ. ಅಂಬಾವಿಲಾಸ ಅರಮನೆ ದ್ವಾರ ಪ್ರವೇಶಿಸಿದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಾಂಪ್ರದಾಯ ಪೂಜೆ ವಿಧಿವಿಧಾನ ಮೂಲಕ ಉತ್ಸವ ಮೂರ್ತಿ ಬರ ಮಾಡಿಕೊಂಡ ಅರಮನೆ ಅರ್ಚಕರು ಉತ್ಸವ ಮೂರ್ತಿ ಅಂಬಾವಿಲಾಸ ಅರಮನೆಗೆ ಶಿಫ್ಟ್ ಮಾಡಲಾಗಿದೆ. ದಸರಾ ಕಾರ್ಯಕ್ರಮಗಳು ಸಂಪ್ರದಾಯ ಬದ್ಧವಾಗಿ  ನಡೆಯುತ್ತಿವೆ.

  • ನಾಳೆ ಅಂಬಾ ವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್- ಕೃಷ್ಣದತ್ತ ಒಡೆಯರ್ ಸಿಂಹಾಸನಾರೋಹಣ

    ನಾಳೆ ಅಂಬಾ ವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್- ಕೃಷ್ಣದತ್ತ ಒಡೆಯರ್ ಸಿಂಹಾಸನಾರೋಹಣ

    ಮೈಸೂರು: ನಾಳೆ ಒಂದೆಡೆ ನಾಡ ಹಬ್ಬ ದಸರಾಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ಸಿಕ್ಕಿದರೆ. ಇತ್ತ ನಾಳೆ ಬೆಳಗ್ಗೆಯೇ ಅಂಬಾ ವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಜರುಗಲಿದ್ದು, ಗತ ಕಾಲದ ವೈಭವ ಮರುಕಳಿಸಲಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನರೋಹಣ ಮಾಡಿ ದರ್ಬಾರ್ ನಡೆಸಲಿದ್ದಾರೆ.

    ರಾಜಾಧೀರಾಜ, ರಾಜ ಮಾರ್ತಾಂಡ, ರಾಜ ಕುಲತಿಲಕ, ರಾಜ ಮಾರ್ತಾಂಡ, ಯದುವೀರ್ ಪರಾಕ್, ಬಹು ಪರಾಕ್, ಹೀಗೆ ನಾಳೆ ಮೈಸೂರಿನ ಅಂಬಾ ವಿಲಾಸ ಅರಮನೆಯಲ್ಲಿ ವಂಧಿ ಮಾಧಗರು ಬಹುಪರಾಕ್ ಕೂಗುವ ಶಬ್ದ ಕೇಳಲಿದೆ. ಮತ್ತೊಂದು ಕಡೆ ರಾಜಗಾಂಭೀರ್ಯದಿಂದ ಸಿಂಹಾನದ ಕಡೆ ಯದುವಂಶದ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಜ್ಜೆ ಇಡುತ್ತಾರೆ. ಹಿಂದೆ ರಾಜ ಮಹಾರಾಜರು ನಡೆಸುತ್ತಿದ್ದ ದರ್ಬಾರು ಮಾದರಿಯಲ್ಲೇ ಇಂದಿಗೂ ದಸರೆಯ ಸಂದರ್ಭದಲ್ಲಿ ಸಂಪ್ರದಾಯ ಬದ್ಧವಾಗಿ ಅರಮನೆಯಲ್ಲಿ ರಾಜವಂಶಸ್ಥರು ಖಾಸಗಿ ದರ್ಬಾರ್ ನಡೆಸಿಕೊಂಡು ಬರುತ್ತಿದ್ದಾರೆ. ಇದನ್ನೂ ಓದಿ: ಸ್ವರ್ಣ ನದಿಗೆ ಬಾಗಿನ ಅರ್ಪಿಸಿದ ಸುನಿಲ್ ಕುಮಾರ್

    ಗುರುವಾರ ಏಳನೇ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ರಾಜ ಪೋಷಾಕು ಧರಿಸಿದ ಯದುವೀರ್, ದರ್ಬಾರ್ ಹಾಲ್ ಪ್ರವೇಶಿಸುತ್ತಿದ್ದಂತೆ ದರ್ಬಾರಿಗಳು ಬಹು ಪರಾಕ್ ಕೂಗಿಲಿದ್ದಾರೆ. ಸಿಂಹಾಸನದ ಬಳಿ ತೆರಳಿದ ನಂತರ ಯದುವೀರ್ ಸಿಂಹಾಸನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ, ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಮಂಗಳಾರತಿ ಮಾಡಲಿದ್ದಾರೆ. ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ, ನಂತರ ಅವರು ಸಿಂಹಾಸನಾರೂಢರಾಗಲಿದ್ದಾರೆ. ಇದೇ ವೇಳೆ ಪತ್ನಿ ತ್ರಿಷಿಕಾ ಕುಮಾರಿ ಯದುವೀರ್ ಪಾದಗಳಿಗೆ ಪುಷ್ಪಾರ್ಚನೆ ಮಾಡಿ, ಪತ್ನಿ ಬಳಿಕ ದಿವಾನರು ಸಿಂಹಾಸನದ ಮುಂದೆ ನಿಂತು ನಡುಬಾಗಿಸಿ ವಂದಿಸುತ್ತಾರೆ.

    ಇದಾದ ನಂತರ ಅರಮನೆಯ ದೇವಸ್ಥಾನಗಳು, ಚಾಮುಂಡಿ ಬೆಟ್ಟ ಸೇರಿದಂತೆ ಹಲವು ದೇವಸ್ಥಾನಗಳಿಂದ ತಂದಿದ್ದ ಪ್ರಸಾದವನ್ನು ಒಡೆಯರ್‍ಗೆ ನೀಡಲಾಗುತ್ತದೆ. ಈ ವೇಳೆ ಎಲ್ಲ ಪ್ರಸಾದವನ್ನು ಶ್ರದ್ಧಾ ಭಕ್ತಿಯಿಂದ ಯದುವೀರ್ ಸ್ವೀಕರಿಸುತ್ತಾರೆ. ನಂತರ ಮೈಸೂರು ರಾಜ್ಯ ಗೀತೆಯನ್ನು ನುಡಿಸಲಾಗುತ್ತದೆ. ಈ ವೇಳೆ ರತ್ನ ಖಚಿತ ಸಿಂಹಾಸನದ ಮೇಲೆ ನಿಂತ ಯದುವೀರ್ ಸೆಲ್ಯೂಟ್ ಮಾಡಿ ರಾಜ್ಯ ಗೀತೆಗೆ ಗೌರವ ಸಲ್ಲಿಸಲಿದ್ದಾರೆ. ರಾಜ್ಯ ಗೀತೆ ಮುಗಿದ ನಂತರ ಸಿಂಹಾಸನದಿಂದ ಇಳಿದು ಖಾಸಗಿ ದರ್ಬಾರನ್ನು ಮುಕ್ತಾಯಗೊಳಿಸುತ್ತಾರೆ. ಯದುವೀರ್ ಅವರು ಖಾಸಗಿ ದರ್ಬಾರ್ ನಡೆಸುವ ಮುನ್ನ ಅರಮನೆಯಲ್ಲಿ ಬೆಳಗಿನ ಜಾವದಿಂದಲೇ ಪೂಜಾ ವಿಧಿ ವಿಧಾನಗಳು ಜರುಗುತ್ತವೆ. ಮಂಗಳ ಸ್ನಾನ ನೆರವೇರಿಸಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಯದುವೀರ್ ಅವರಿಗೆ ಕಂಕಣ ಧಾರಣೆ ಮಾಡಲಾಗುತ್ತದೆ. ಇದಾದ ಬಳಿಕ ಆರಮನೆಗೆ ಪಟ್ಟದ ಆನೆ, ಕುದರೆ, ಹಸುವನ್ನು ಕರೆಸಿ ಪೂಜೆ ಸಲ್ಲಿಸಲಾಗುತ್ತದೆ. ಇದನ್ನೂ ಓದಿ: ಜ್ಞಾನಪೀಠ ಯಾರಿಗೆ ಸಿಕ್ಕರೂ ಸಂತೋಷ: ಹಿರಿಯ ಕವಿ ಚನ್ನವೀರ ಕಣವಿ


    ಸುಮಾರು 1 ಗಂಟೆ ಮೈಸೂರು ಅರಮನೆಯಲ್ಲಿ ನಾಳೆ ಗತಕಾಲದ ವೈಭವ ಮರುಕಳಿಸಲಿದ್ದು, ರಾಜರ ಕಾಲದ ಆಳ್ವಿಕೆ ಮಾದರಿಯಲ್ಲಿ ದರ್ಬಾರ್ ನಡೆಯಲಿದೆ. ಇದನ್ನು ಕಣ್ತುಂಬಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ಈ ಬಾರಿ ಅರಮನೆಯಲ್ಲೂ 10 ದಿನಗಳ ಕಾಲ ಸರಳವಾಗಿ ದಸರಾ ದರ್ಬಾರ್ ನಡೆಯಲಿದೆ.

  • ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಯಲ್ಲೇ ಉತ್ತಮ ಶಿಕ್ಷಣ ದೊರೆಯುತ್ತೆ: ಯದುವೀರ್

    ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಯಲ್ಲೇ ಉತ್ತಮ ಶಿಕ್ಷಣ ದೊರೆಯುತ್ತೆ: ಯದುವೀರ್

    ಮಂಡ್ಯ: ಪ್ರಸಕ್ತ ದಿನಮಾನಗಳಲ್ಲಿ ಮಕ್ಕಳಿಗೆ ಶಿಕ್ಷಣ ಎನ್ನುವುದು ಬಹಳ ಮುಖ್ಯ. ಆದ್ದರಿಂದ ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಅಗತ್ಯವಾಗಿ ಬೇಕಾದ ಶಿಕ್ಷಣವನ್ನು ಕೊಡಿಸಿ ಎಂದು ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕರೆ ನೀಡಿದ್ದಾರೆ.

    ಜಿಲ್ಲೆಯ ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದ ಮಾದರಿ ಸರ್ಕಾರಿ ಶಾಲೆಯನ್ನು ಉದ್ಘಾಟಿಸಿ ಮಾತಾನಾಡಿದ ಯದುವೀರ್ ಅವರು, ಮಕ್ಕಳಿಗೆ ಶಿಕ್ಷಣ ಎನ್ನುವುದು ಬಹಳ ಮುಖ್ಯವಾದದ್ದು. ಬದುಕನ್ನು ರೂಪಿಸಿಕೊಳ್ಳುವಲ್ಲಿ ಶಿಕ್ಷಣ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಗಮಹರಿಸಬೇಕು. ಸದ್ಯ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲೇ ಉತ್ತಮವಾದ ಶಿಕ್ಷಣ ದೊರಕುತ್ತಿದೆ. ಆದಷ್ಟು ಸರ್ಕಾರಿ ಶಾಲೆಗಳ ಕಡೆಗೆ ಪೋಷಕರು ಹೆಚ್ಚು ಒತ್ತು ನೀಡಬೇಕು ಎಂದರು.

    ಕಬ್ಬಾರೆ ಗ್ರಾಮದಲ್ಲಿ ಇದ್ದ ಸರ್ಕಾರಿ ಶಾಲೆಯೊಂದು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿತ್ತು. ಈ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಬೇಕೆಂದು, ಶಾಲೆಯ ಹಳೆಯ ವಿದ್ಯಾರ್ಥಿಗಳು ಒಂದಾಗಿದ್ದರು. ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಬೇಕೆಂದು ಬೆಂಗಳೂರಿನ ಎಂಟೆಕ್ ಖಾಸಗಿ ಕಂಪನಿಯನ್ನು ಹಳೆಯ ವಿದ್ಯಾರ್ಥಿಗಳು ಕೇಳಿಕೊಂಡಿದ್ದರು. ಇದ್ದಕ್ಕೆ ಸ್ಪಂದಿಸಿದ ಕಂಪನಿಯವರು ಶಾಲೆಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಿ ಮಾದರಿ ಶಾಲೆಯನ್ನಾಗಿ ಮಾಡಿದ್ದಾರೆ.

    ಈ ಮಾದರಿ ಶಾಲೆಯನ್ನು ಇಂದು ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಗಿಡಕ್ಕೆ ನೀರು ಹಾಕಿ ನಂತರ ದೀಪ ಬೆಳಗುವ ಮೂಲಕ ಶಾಲೆಯನ್ನು ಉದ್ಘಾಟನೆ ಮಾಡಿದರು. ಈ ವೇಳೆ ಮಂಡ್ಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೋಭಾಕರಾಣಿ, ಎಂಟೆಕ್ ಕಂಪನಿಯ ಮುಖ್ಯಸ್ಥರು, ಹಳೆಯ ವಿದ್ಯಾರ್ಥಿಗಳು ಸೇರಿದಂತೆ ಇತರರು ಹಾಜರಿದ್ದರು.

  • ಹುಟ್ಟುಹಬ್ಬದ ಸಂಭ್ರಮದಲ್ಲಿ ಮೈಸೂರು ಮಹಾರಾಜರು

    ಹುಟ್ಟುಹಬ್ಬದ ಸಂಭ್ರಮದಲ್ಲಿ ಮೈಸೂರು ಮಹಾರಾಜರು

    ಮೈಸೂರು: ರಾಜವಂಶಸ್ಥ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಖಾಸಗಿ ರೇಸಾರ್ಟಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.

    ಇಂದು ಯದುವೀರ್ ಅವರು 27ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಬಂಡೀಪುರ ಖಾಸಗಿ ರೆಸಾರ್ಟಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಪತ್ನಿ ತ್ರಿಶಿಕಾ ಹಾಗೂ ಅರಣ್ಯ ಸಿಬ್ಬಂದಿ ಜೊತೆ ಸರಳವಾಗಿ ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಾರೆ.

    ಈ ಶುಭದಿನದಂದು ತಮ್ಮ ಮಹಾರಾಜರಿಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರೀತಿಯಿಂದ ಶುಭಕೋರಿ ಹಾರೈಸಿದ್ದಾರೆ.

  • ಸಂಘ-ಸಂಸ್ಥೆಗಳ ಜೊತೆ ಅರಮನೆ ನಂಟು ಮುಂದುವರಿಯಲಿದೆ- ಯದುವೀರ್

    ಸಂಘ-ಸಂಸ್ಥೆಗಳ ಜೊತೆ ಅರಮನೆ ನಂಟು ಮುಂದುವರಿಯಲಿದೆ- ಯದುವೀರ್

    ಶಿವಮೊಗ್ಗ: ಮೈಸೂರು ಸಂಸ್ಥಾನದಿಂದ ಆರಂಭಗೊಂಡ ಸಂಘ-ಸಂಸ್ಥೆಗಳ ಜೊತೆ ಅರಮನೆ ನಂಟು ಮುಂದುವರಿಯಲಿದೆ ಎಂದು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

    ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘಕ್ಕೆ 55 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಶೇಷವಾಗಿ ಸಂಸ್ಥಾಪಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷರಾದ ಸುಧಾಕರ್ ಎಸ್ ಶೆಟ್ಟಿ, ಜೆ.ಆರ್.ವಾಸುದೇವ ಭಾಗಿಯಾಗಿದ್ದರು.

    ಈ ಸಂದರ್ಭದಲ್ಲಿ ಮಾತನಾಡಿದ ಯದುವೀರ್, ಮೈಸೂರು ಸಂಸ್ಥಾನ ತನ್ನ ಕರ್ತವ್ಯವನ್ನು ಎಂದಿಗೂ ಮೆರೆಯಲ್ಲ. ರಾಜ್ಯದಲ್ಲಿ ಕೈಗಾರಿಕಾ ಸಂಘದ ಬೆಳವಣಿಗೆಯಲ್ಲಿ ಸಂಸ್ಥಾನ ಮಹತ್ವದ ಪಾತ್ರ ವಹಿಸಿದೆ. ಜನರು ಅರಮನೆಯಿಂದ ಅಂತರ ಕಾಯ್ದುಕೊಳ್ಳುವ ಅಗತ್ಯವಿಲ್ಲ. ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆಗಳು ಇಂದಿಗೂ ಯಶಸ್ವಿಯಾಗಿ ನಡೆಯುತ್ತಿರುವ ಶ್ರೇಯಸ್ಸು ಸಿಬ್ಬಂದಿ ವರ್ಗಕ್ಕೆ ಸಲ್ಲುತ್ತದೆ. ಹಾಗೆಯೇ ಮುಂದಿನ ವರ್ಷ ಜಯಚಾಮರಾಜೇಂದ್ರ ಒಡೆಯರ್ ಅವರ ಶತಮಾನೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲು ಯೋಚಿಸಿದ್ದೇವೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಜಪಡೆಗೆ ಆರೈಕೆ ಮಾಡಿದ್ರು ಯದುವಂಶದ ಮಹಾರಾಜ

    ಗಜಪಡೆಗೆ ಆರೈಕೆ ಮಾಡಿದ್ರು ಯದುವಂಶದ ಮಹಾರಾಜ

    ಮೈಸೂರು: ದಸರಾದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆರೈಕೆ ಮಾಡಿದ್ದಾರೆ.

    ದಸರಾ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಅರ್ಜುನ ಅಂಡ್ ಟೀಂನ ಆನೆಗಳಿಗೆ ಮೈಸೂರು ಮಹಾರಾಜರು ಖುದ್ದು ಆರೈಕೆ ಮಾಡಿದರು. ಈ ವೇಳೆ ಅರ್ಜುನ ಆನೆಗೆ ಕಬ್ಬು, ಬೆಲ್ಲ ಹಾಗೂ ಬಾಳೆ ಹಣ್ಣನ್ನು ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ದಸರಾದಲ್ಲಿನ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಯು ವಿಶ್ವದಲ್ಲಿಯೇ ಪ್ರಖ್ಯಾತಿ ಪಡೆದುಕೊಂಡಿದೆ. ಈ ಬಾರಿಯು ಸಹ ಅರ್ಜುನ ದೇವಿ ಚಾಮುಂಡೇಶ್ವರಿಯನ್ನು ಹೊರಲಿದ್ದಾನೆ. ಹೀಗಾಗಿ ಅರ್ಜುನ ಹಾಗೂ ಇತರೆ ಆನೆಗಳಿಗೆ ಹೆಚ್ಚಿನ ಆರೈಕೆ ಮಾಡಲಾಗುತ್ತಿದೆ.

    ಈ ಕುರಿತು ತಮ್ಮ ಫೇಸ್ ಬುಕ್ ನಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿರುವ ಅವರು, ಮೈಸೂರಿನ ಸಂಸ್ಕೃತಿ ಹಾಗೂ ಸಂಪ್ರದಾಯ ಪರಂಪರೆಗಳಲ್ಲಿ ಆನೆಗಳು ಪ್ರಮುಖ ಪಾತ್ರ ವಹಿಸುತ್ತವೆ. ದಸರಾ ಮಹೋತ್ಸವಕ್ಕೆ ಆಗಮಿಸಿರುವ ಅರ್ಜುನ ಹಾಗೂ ಇತರೆ ಆನೆಗಳ ಗಜಪಡೆಯನ್ನು ನೋಡಿ, ಅವುಗಳಿಗೆ ಆಹಾರ ನೀಡಿದ್ದಕ್ಕೆ ತುಂಬಾ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇಶದ ಅಭಿವೃದ್ಧಿ ಮಾಡಲು 5 ವರ್ಷ ಸಾಲಲ್ಲ – ಪ್ರಧಾನಿ ಮೋದಿ ಪರ ಯದುವೀರ್ ಬ್ಯಾಟಿಂಗ್

    ದೇಶದ ಅಭಿವೃದ್ಧಿ ಮಾಡಲು 5 ವರ್ಷ ಸಾಲಲ್ಲ – ಪ್ರಧಾನಿ ಮೋದಿ ಪರ ಯದುವೀರ್ ಬ್ಯಾಟಿಂಗ್

    ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ ಮಾಡಲು 5 ವರ್ಷಗಳ ಅವಧಿ ಸಾಲುವುದಿಲ್ಲ. ಅವರಿಗೆ ಮತ್ತಷ್ಟು ಅವಕಾಶಗಳು ಸಿಗಬೇಕು ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

    ಸರ್ಕಾರದ ಸಾಧನೆಯ ಪುಸ್ತಕ ತೆಗೆದುಕೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಕುರಿತ ಮಾಹಿತಿ ನೀಡಿದ್ದಾರೆ. ಆದರೆ ಈ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದುವರಿಸಲು ಇನ್ನು ಕೆಲ ಅವಕಾಶಗಳು ಬೇಕಿದೆ. ಈ ನಿಟ್ಟಿನಲ್ಲಿ ಒಳ್ಳೆಯ ಕೆಲಸಕ್ಕೆ ನಾವೆಲ್ಲ ಬೆಂಬಲಿಸಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಕಿಂಗ್ ಸ್ಟಾರ್ ಯಶ್‍ರನ್ನ ಭೇಟಿ ಮಾಡಿದ ಶ್ರೀರಾಮುಲು

    2019 ರ ಲೋಕಾಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರದಲ್ಲಿ ಮೋದಿ ನಾಯಕತ್ವದ ಸರ್ಕಾರ ಮಾಡಿರುವ ಅಭಿವೃದ್ಧಿ ಸಯೋಜನೆಗಳ ಬಗ್ಗೆ ದೇಶದ ಗಣ್ಯರಿಗೆ ತಿಳಿಸಲು ಮುಂದಾಗಿದ್ದಾರೆ. ಇದರ ಭಾಗವಾಗಿ ರಾಜ್ಯ ಬಿಜೆಪಿ ನಾಯಕರು ಕೂಡ ತಮ್ಮ ಸಂಪರ್ಕದಲ್ಲಿರುವ ಗಣ್ಯರಿಗೆ ಸರ್ಕಾರ ಸಾಧನೆ ವಿವರಿಸುವ ಪುಸ್ತಕ ನೀಡಿ ಮಾಹಿತಿ ನೀಡುತ್ತಿದ್ದಾರೆ. ಸದ್ಯ ಬಿಜೆಪಿ ಮುಖಂಡ ರಾಮ್‍ದಾಸ್ ಸೇರಿದಂತೆ ಹಲವು ಮುಖಂಡರು ಒಡೆಯರ್ ಅವರನ್ನು ಭೇಟಿ ಮಾಡಿದ್ದರು. ಕಳೆದ ಕೆಲ ದಿನಗಳ ಹಿಂದೆ ಶಾಸಕ ಶ್ರೀರಾಮುಲು ಅವರು ಸಹ ನಟ ಯಶ್ ರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರದ ಸಾಧನೆಗಳನ್ನ ವಿವರಿಸಿದ್ದರು.

  • ಮನಸಿನ ಮಾತು ಹಂಚಿಕೊಳ್ಳಲು ಬ್ಲಾಗ್ ಆರಂಭಿಸಿದ ಯದುವೀರ್ ಒಡೆಯರ್

    ಮನಸಿನ ಮಾತು ಹಂಚಿಕೊಳ್ಳಲು ಬ್ಲಾಗ್ ಆರಂಭಿಸಿದ ಯದುವೀರ್ ಒಡೆಯರ್

    ಮೈಸೂರು: ತಮ್ಮ ಮನಸಿನ ಮಾತನ್ನು ಹಂಚಿಕೊಂಡು ಜನರ ಜೊತೆ ಬೆರೆಯಲು ಮೈಸೂರಿನ ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ‘ಭೇರುಂಡ’ ಎಂಬ ಹೆಸರಿನ ಬ್ಲಾಗ್ ಆರಂಭಿಸಿದ್ದಾರೆ.

    ಇಷ್ಟು ದಿನ ಸಾಮಾಜಿಕ ಜಾಲತಾಣಗಳಲ್ಲಿ ಕೇವಲ ಫೋಟೋಗಳನ್ನು ಅಪ್ಲೋಡ್ ಮಾಡಿ ಜನರ ಜೊತೆ ಸಂಪರ್ಕದಲ್ಲಿದ್ದ ಮಹಾರಾಜರು ಈಗ ತಮ್ಮ ಬರವಣಿಗೆಯ ಮೂಲಕ ಜನರ ಜೊತೆ ಬೆರೆಯಲು ಮುಂದಾಗಿದ್ದು ವೆಬ್‍ಸೈಟ್‍ನಲ್ಲಿ ಬ್ಲಾಗ್ ಆರಂಭಿಸಿ ಇವತ್ತು ಮೊದಲ ಸುದ್ದಿಪತ್ರವನ್ನು ಪ್ರಕಟಿಸಿದ್ದಾರೆ.

    ದಸರಾ ವಿಶೇಷಾಂಕದ ಸುದ್ದಿಪತ್ರ ಬಿಡುಗಡೆ ಮಾಡಿದ ಮಹಾರಾಜರು, ಇದು ಉದ್ಘಾಟನೆಯ ಸುದ್ದಿ ಪತ್ರ ಎಂದು ಬ್ಲಾಗ್ ನಲ್ಲಿ ಹೇಳಿದ್ದಾರೆ. ಉದ್ಘಾಟನಾ ಪತ್ರದ ಹೆಸರಿನಲ್ಲಿ ಮೊದಲ ಪತ್ರ ಒಂದನ್ನು ಬರೆದಿದ್ದಾರೆ. ಈ ಪತ್ರ ನಿಮಗೆಲ್ಲ ನಮ್ಮ ಪ್ರಾಥಮಿಕ ಮಾಹಿತಿ ನೀಡಲಿದೆ. ರಾಜಮನೆತನದ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ತಿಳಿಸಲಿದೆ. ಈ ಬ್ಲಾಗ್ ಮೂಲಕ ನಮ್ಮ ಕಾರ್ಯಕ್ರಮಗಳು ನಿಮಗೆ ತಿಳಿಯಲಿದೆ ಎಂದು ಬರೆದಿದ್ದಾರೆ.

    ರಾಜಮನೆತನದ ಕಾರ್ಯಕ್ರಮಗಳಲ್ಲಿ ಈ ಸೇವೆಯು ಒಂದು ಭಾಗ. ನಾವು ನೀವು ಪರಸ್ಪರ ಅರ್ಥ ಮಾಡಿಕೊಳ್ಳಲು ಈ ಪತ್ರ ನಾಂದಿಯಾಗಲಿದೆ. ನನಗೆ ಬರವಣಿಗೆ ಇಷ್ಟವಾಗಿದ್ದರಿಂದ ನನ್ನ ಆಲೋಚನೆಗಳನ್ನು ಈ ಮೂಲಕ ಹಂಚಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಬ್ಲಾಗ್ ನೋಡಲು ಕ್ಲಿಕ್ ಮಾಡಿ: www.ykcwadiyar.in

    ಇದನ್ನೂ ಓದಿ: ಪತ್ನಿ ಹೆಸ್ರಲ್ಲಿ ಸೋಷಿಯಲ್ ಮೀಡಿಯಾ ಖಾತೆ ತೆರೆಯೋ ಮಂದಿಗೆ ಯದುವೀರ್ ಖಡಕ್ ವಾರ್ನಿಂಗ್

     

  • ಆರು ದಶಕಗಳ ಬಳಿಕ ಬೆಳೆಯುತ್ತಿದೆ ಯದುವಂಶದ ಕುಡಿ: ಅರಮನೆಯಲ್ಲಿ ನಡೆಯಿತು ಸೀಮಂತ ಸಂಭ್ರಮ!

    ಆರು ದಶಕಗಳ ಬಳಿಕ ಬೆಳೆಯುತ್ತಿದೆ ಯದುವಂಶದ ಕುಡಿ: ಅರಮನೆಯಲ್ಲಿ ನಡೆಯಿತು ಸೀಮಂತ ಸಂಭ್ರಮ!

    ಮೈಸೂರು: ಮೈಸೂರು ರಾಜವಂಶದಲ್ಲಿ ಸುಮಾರು ಆರು ದಶಕಗಳ ಬಳಿಕ ಯದುವಂಶದ ಕುಡಿಯೊಂದು ಮಹಾರಾಣಿ ತ್ರಿಷಿಕಾ ಕುಮಾರಿ ಅವರ ಹೊಟ್ಟೆಯಲ್ಲಿ ಬೆಳೆಯುತ್ತಿದ್ದು, ಮಹಾರಾಣಿಯ ಸೀಮಂತ ಕಾರ್ಯಕ್ರಮ ಭಾನುವಾರ ನಡೆಯಿತು.

    ತ್ರಿಷಿಕಾ ಕುಮಾರಿ ಸಿಂಗ್ ಅವರ ಸೀಮಂತ ಕಾರ್ಯಕ್ರಮವು ಬೆಳಗ್ಗೆ 11.45ರ ಶುಭಲಗ್ನದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ರಾಜಮಾತೆ ಪ್ರಮೋದಾ ದೇವಿ ಒಡೆಯರ್, ಯದುವೀರ್ ತಂದೆ ತಾಯಿ, ತ್ರಿಷಿಕಾ ಕುಮಾರಿ ಅವರ ತಂದೆ ತಾಯಿ ಹಾಗೂ ಎರಡು ಕುಟುಂಬಗಳ ಸಂಬಂಧಿಕರು ಭಾಗವಹಿಸಿದ್ದರು.

    ಪರಕಾಲ ಮಠದ ಶ್ರೀಗಳ ಹಾಗೂ 10 ಮಂದಿ ರಾಜ ಪುರೋಹಿತರ ಸಮ್ಮುಖದಲ್ಲಿ ನಡೆದ ಸೀಮಂತ ಕಾರ್ಯಕ್ರಮದಲ್ಲಿ ಮೊದಲಿಗೆ ವೇದ ಉನಿಷತ್ತುಗಳನ್ನು ಪಟನೆ ಮಾಡಲಾಯಿತು. ನಂತರ 9 ಮಂದಿ ಮುತೈದೆಯರು ತ್ರಿಷಿಕಾ ಕುಮಾರಿ ಅವರಿಗೆ ಮಡಿಲಕ್ಕಿ ಹಾಕಿ ಆಶೀರ್ವಾದ ಮಾಡಿದರು.

    ಸೀಮಂತ ಕಾರ್ಯಕ್ರಮ ನಡೆದ ಸ್ಥಳವೂ ಸಂಪೂರ್ಣವಾಗಿ ಹೂವಿನಿಂದ ಅಲಂಕಾರ ಮಾಡಿ 9 ಬಗೆಯ ಹಣ್ಣುಗಳು, ತಿಂಡಿ ತಿನಿಸುಗಳು, ಬಳೆ, ಹೂ, ಎಲೆ ಅಡಿಕೆ ಎಲ್ಲವನ್ನೂ ಇಡಲಾಗಿತ್ತು. ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ಈ ಸೀಮಂತ ಕಾರ್ಯ ನಡೆದ ಬಳಿಕ 15 ಬಗೆಯ ತಿನಿಸುಗಳ ಭೋಜನವನ್ನು ಸವಿದರು.

    ಕಳೆದ ವರ್ಷ ಇದೇ ವೇಳೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಸಮ್ಮುಖದಲ್ಲಿ ದತ್ತು ಪುತ್ರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಜಸ್ಥಾನದ ರಾಜಮನೆತನದ ತ್ರಿಷಿಕಾಕುಮಾರಿ ಅವರ ವಿವಾಹ ಅರಮನೆಯಲ್ಲಿ ಅದ್ಧೂರಿಯಾಗಿ ನಡೆದಿತ್ತು.