Tag: ಯದುವೀರ್

  • ಮಾರುಕಟ್ಟೆ ಕಟ್ಟಡದ ಬಗ್ಗೆ ತಿಳಿಯಲು ಸಾಮಾನ್ಯರಂತೆ ಬಂದ ಯದುವೀರ್ ದಂಪತಿ -ವಿಡಿಯೋ ನೋಡಿ

    ಮಾರುಕಟ್ಟೆ ಕಟ್ಟಡದ ಬಗ್ಗೆ ತಿಳಿಯಲು ಸಾಮಾನ್ಯರಂತೆ ಬಂದ ಯದುವೀರ್ ದಂಪತಿ -ವಿಡಿಯೋ ನೋಡಿ

    ಮೈಸೂರು: ರಾಜವಂಶಸ್ಥ ಯದುವೀರ್ ಒಡೆಯರ್ ನಗರದ ದೇವರಾಜ ಮಾರುಕಟ್ಟೆಗೆ ತಮ್ಮ ಪತ್ನಿ ತ್ರಿಷಿಕಾ ಅವರ ಜೊತೆ ಭೇಟಿ ನೀಡಿದ್ದರು.

    ಮಾರುಕಟ್ಟೆ ಕಟ್ಟಡ ಕೆಡುವ ವಿಚಾರದಲ್ಲಿ ರಾಜಮನೆತನ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಮಾರುಕಟ್ಟೆ ಕಟ್ಟಡದ ಸ್ಥಿತಿ ತಿಳಿಯಲು ಪತ್ನಿ ಸಮೇತರಾಗಿ ಯದುವೀರ್ ಮಾರುಕಟ್ಟೆಗೆ ಭೇಟಿ ನೀಡಿದ್ದರು. ಮಾರುಕಟ್ಟೆಯಲ್ಲಿ ಯದುವೀರ್ ದಂಪತಿ ಕಂಡು ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಅಚ್ಚರಿಗೊಂಡರು.

    ಸಾಮಾನ್ಯರಂತೆ ಮಾರುಕಟ್ಟೆಯಲ್ಲಿ ಓಡಾಡಿದ ಯದುವೀರ್ ದಂಪತಿ, ವ್ಯಾಪಾರಿಗಳ ಬಳಿ ಮಾತುಕತೆ ನಡೆಸಿ ಕಟ್ಟಡದ ಬಗ್ಗೆ ಮಾಹಿತಿ ಪಡೆದರು. ಮಾರುಕಟ್ಟೆಯ ವ್ಯಾಪಾರಿಗಳ ಅಂಗಡಿಯ ಮುಂದೆ ಕುಳಿತು ಅವರ ಬಳಿ ಮಾತನಾಡಿದ್ದಾರೆ.

    ಇದೇ ವೇಳೆ ಮಾರುಕಟ್ಟೆಯಲ್ಲಿ ಸೊಪ್ಪು, ಹಣ್ಣು ಮತ್ತು ತರಕಾರಿ ಖರೀದಿಸಿದ್ದರು. ವ್ಯಾಪಾರಿಗಳು ಅವರಿಂದ ಹಣ ಪಡೆಯಲು ನಿರಾಕರಿಸಿದ್ದರು. ಆದರೂ ತ್ರಿಷಿಕಾ ಅವರು ಬಲವಂತವಾಗಿ ಹಣವನ್ನು ನೀಡಿದ್ದಾರೆ. ಬಳಿಕ ಮಾರುಕಟ್ಟೆ ಹೊರಗೆ ಬಂದು ಗುರು ಸ್ವೀಟ್‍ನಲ್ಲಿ ಮೈಸೂರು ಪಾಕ್ ಖರೀದಿಸಿದರು. ರಾಜವಂಶಸ್ಥರ ಸರಳತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಡಾ.ರಾಜ್ ಹುಟ್ಟುಹಬ್ಬ: ಹಳೆಯ ನೆನಪು ಮೆಲುಕು ಹಾಕಿದ ಒಡೆಯರ್

    ಡಾ.ರಾಜ್ ಹುಟ್ಟುಹಬ್ಬ: ಹಳೆಯ ನೆನಪು ಮೆಲುಕು ಹಾಕಿದ ಒಡೆಯರ್

    ಮೈಸೂರು: ಇಂದು ನಟಸಾರ್ವಭೌಮ ಡಾ. ರಾಜ್‍ಕುಮಾರ್ ಅವರ 90ನೇ ಜಯಂತಿಯಾಗಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೆಳೆಯ ನೆನಪನ್ನು ಮೆಲುಕು ಹಾಕಿದ್ದಾರೆ.

    ಯದುವೀರ್ ಅವರು ತನ್ನ ತಾತ ಜಯಚಾಮರಾಜ ಒಡೆಯರ್ ಅವರು ಡಾ. ರಾಜ್‍ಕುಮರ್ ಅವರಿಗೆ ಸನ್ಮಾನಿಸುತ್ತಿರುವ ಫೋಟೋ ಜೊತೆ ಶುಭಾಶಯ ತಿಳಿಸಿದ್ದಾರೆ. ನಟಸಾರ್ವಭೌಮ, ಕನ್ನಡ ಚಿತ್ರರಂಗದ ಧ್ರುವತಾರೆ ಎಂದು ಯದುವೀರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಸ್ಮರಿಸಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?
    ಕನ್ನಡ ಚಲನಚಿತ್ರರಂಗದ ಮೇರು ನಟ, ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ನಟಸಾರ್ವಭೌಮ ಡಾ. ರಾಜ್‍ಕುಮಾರ್ ಅವರ 90ನೇ ಜನ್ಮದಿನದಂದು ಅವರನ್ನು ಸ್ಮರಿಸುತ್ತಿದ್ದೇವೆ. ಡಾ. ರಾಜ್‍ಕುಮಾರ್ ಅವರು ಶ್ರೀಮನ್ ಮಹಾರಾಜ ಜಯಚಾಮರಾಜ ಒಡೆಯರವರಿಂದ ಗೌರವಿಸಲ್ಪಡುತ್ತಿರುವುದು ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

  • ಅಪ್ಪನ ತೊಡೆ ಮೇಲೆ ಯುವರಾಜ – ವರ್ಧಂತಿಗೆ ಯದುವೀರ್ ವಿಶ್

    ಅಪ್ಪನ ತೊಡೆ ಮೇಲೆ ಯುವರಾಜ – ವರ್ಧಂತಿಗೆ ಯದುವೀರ್ ವಿಶ್

    ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತನ್ನ ಮಗ ಯುವರಾಜ ಆಧ್ಯವೀರ್ ಗೆ ವರ್ಧಂತಿಯ(ಹುಟ್ಟುಹಬ್ಬ) ಶುಭಾಶಯವನ್ನು ಕೋರಿದ್ದಾರೆ.

    ಯದುವೀರ್ ಅವರು ಫೇಸ್‍ಬುಕ್ ನಲ್ಲಿ ಮಗ ತೊಡೆಯ ಮೇಲೆ ಕುಳಿತಿರುವ ಫೋಟೋ ಹಾಕಿ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. ಫೋಟೋದಲ್ಲಿ  ಆಧ್ಯವೀರ್ ತುಂಟತನದಿಂದ ಕ್ಯಾಮೆರಾಗೆ ಪೋಸ್ ಕೊಟ್ಟಿರುವ ರೀತಿಯಲ್ಲಿ ಕಂಡು ಬಂದಿದೆ.

    ಅರಮನೆಯ ಸಂಪ್ರದಾಯದ ಪ್ರಕಾರ ಹುಟ್ಟುಹಬ್ಬವನ್ನು ಆಧ್ಯವೀರ್ ಹುಟ್ಟಿದ ಸ್ವಲ್ಪ ದಿನಗಳ ನಂತರ ಆಚರಿಸಲಾಗುತ್ತದೆ. ಅದರಂತೆಯೇ ವರ್ಧಂತಿಯು ಡಿಸೆಂಬರ್ 26 ರಂದು ಇದ್ದರೂ ಇಂದು ಆಚರಿಸಿದ್ದಾರೆ. ಈ ಬಗ್ಗೆ ಯದುವೀರ್ ಅವರು ಫೇಸ್‍ಬುಕ್ ನಲ್ಲಿ ತಿಳಿಸಿದ್ದಾರೆ.

    ಪೋಸ್ಟ್:
    “ಯುವರಾಜ ಶ್ರೀ ಆಧ್ಯವೀರ್ ನರಸಿಂಹರಾಜ ಒಡೆಯರ್ ಅವರ ವರ್ಧಂತಿಯಂದು ಅವರಿಗೆ ಶುಭ ಕೋರುತ್ತೇವೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಅವರಿಗೆ ಉತ್ತಮ ಆರೋಗ್ಯ ಹಾಗು ಐಶ್ವರ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇವೆ. ಯುವರಾಜರ ವರ್ಧಂತಿಯು 26 ಡಿಸೆಂಬರ್ 2018 ರಂದು ಇದ್ದರೂ, ಮೈಸೂರು ಅರಮನೆಯ ಸಂಪ್ರದಾಯದ ಪ್ರಕಾರ ಮೊದಲನೆಯ ವರ್ಧಂತಿಯನ್ನು ಹೆಚ್ಚಿಸುವ ಪದ್ಧತಿ ಇರುವುದರಿಂದ, ಅವರ ವರ್ಧಂತಿಯನ್ನು ಇಂದು ಆಚರಿಸಲಾಗುತ್ತಿದೆ” ಎಂದು ಬರೆದು ಮಗನ ಜೊತೆಯಿರುವ ಫೋಟೋ ಹಾಕಿ ಪೋಸ್ಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಕ್ಕಳೊಂದಿಗೆ ಮಗುವಾದ ಯದುವೀರ್ ಒಡೆಯರ್

    ಮಕ್ಕಳೊಂದಿಗೆ ಮಗುವಾದ ಯದುವೀರ್ ಒಡೆಯರ್

    ಮೈಸೂರು: ಸಾಂಸ್ಕೃತಿಕ ನಗರಿಯ ಮೈಸೂರಿನ ಅರಮನೆ ಆವರಣದಲ್ಲಿ ಭಾನುವಾರ ಬರೀ ಮಕ್ಕಳದೇ ಕಲರವ ಕೇಳಿ ಬಂದಿದ್ದು, ಯದುವೀರ್ ಮಕ್ಕಳೊಂದಿಗೆ ಮಗುವಾಗಿದ್ದಾರೆ.

    ಮಕ್ಕಳ ಜೊತೆ ರಾಜವಂಶಸ್ಥರಾದ ಯದುವೀರ್ ಅವರು ಬೆರೆತು ಮಕ್ಕಳ ಸಂತೋಷ ಹೆಚ್ಚಿಸಿದರು. ಮಕ್ಕಳ ದಿನಾಚರಣೆ ಅಂಗವಾಗಿ ಭೇರುಂಡ ಸಂಸ್ಥೆ ವತಿಯಿಂದ ಅರಮನೆಯ ಆವರಣದಲ್ಲಿ ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.

    ಭೇರುಂಡ ಸಂಸ್ಥೆಯ ಸ್ಥಾಪಕ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಿತ್ರಕ್ಕೆ ಬಣ ತುಂಬುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಮ್ಮ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದರು.

    ಸದ್ಯ ಚಿತ್ರಕಲಾ ಸ್ಪರ್ಧೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಮಕ್ಕಳ ಕುಂಚದಲ್ಲಿ ಮೈಸೂರಿನ ಐತಿಹಾಸಿಕ ತಾಣಗಳು ಹಾಗೂ ಪ್ರಾಕೃತಿಕ ಚಿತ್ರಗಳು ಮೂಡಿ ಬಂದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪುತ್ರನ ಜೊತೆಗಿದ್ದ ಪತ್ನಿಯ ಫೋಟೋ ಹಾಕಿ ವರ್ಧಂತಿಯ ಶುಭ ಕೋರಿದ್ರು ಯದುವೀರ್

    ಪುತ್ರನ ಜೊತೆಗಿದ್ದ ಪತ್ನಿಯ ಫೋಟೋ ಹಾಕಿ ವರ್ಧಂತಿಯ ಶುಭ ಕೋರಿದ್ರು ಯದುವೀರ್

    ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಕಾ ಮತ್ತು ಮಗ ಆದ್ಯವೀರ್ ನ ಮುದ್ದಾದ ಫೋಟೋ ಹಾಕಿ ಶುಭಾಶಯ ಕೋರಿದ್ದಾರೆ.

    ಪ್ರುತನ ಜೊತೆ ಪತ್ನಿ ತ್ರಿಶಿಕಾ ಕುಮಾರಿ ಇರುವ ಫೋಟೋವನ್ನು ಪೋಸ್ಟ್ ಮಾಡಿ ಅವರಿಗೆ ವರ್ಧಂತಿಯ ಶುಭಾಶಯವನ್ನು ಯದುವೀರ್ ಕೋರಿದ್ದಾರೆ. ಪತ್ನಿ ಮತ್ತು ಆದ್ಯವೀರ್ ಮಾತ್ರವಲ್ಲದೇ ಫೋಟೋದಲ್ಲಿ ಆನೆ ಅರ್ಜುನ ಕೂಡ ಇದ್ದಾನೆ.

    ಯದುವೀರ್ ಅವರು, “ನನ್ನ ಧರ್ಮಪತ್ನಿಯಾದ, ಸನ್ನಿಧಾನ ಸವಾರಿಯವರು ಮಹಾರಾಣಿ ಶ್ರೀಮತಿ ತ್ರಿಶಿಕಾ ಕುಮಾರಿ ಒಡೆಯರ್ ಅವರ ವರ್ಧಂತಿಯಂದು ಶುಭ ಕೋರುತ್ತೇನೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಅವರಿಗೆ ಸಮಸ್ತ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ” ಅಂತ ಬರೆದುಕೊಂಡಿದ್ದಾರೆ.

    ಅರ್ಜುನ ಆನೆಯ ಮುಂದೆ ತ್ರಿಶಿಕಾ ಅವರು ಅವರು ಮಗ ಆದ್ಯವೀರ್ ಜೊತೆ ಇದ್ದ ಸಂತಸದ ಕ್ಷಣದಲ್ಲಿ ಈ ಫೋಟೋವನ್ನು ಸೆರೆ ಹಿಡಿಯಲಾಗಿದೆ. ಈ ಫೋಟೋದಲ್ಲಿ ಆದ್ಯವೀರ್ ಮುದ್ದಾಗಿ ನಗುತ್ತಿರುವುದು ಸೆರೆಯಾಗಿದೆ. ಇವರಿಬ್ಬರ ನಗುವನ್ನು ಆನೆ ಅರ್ಜುನ ಕೂಡ ನೋಡುತ್ತಾ ನಿಂತಿರುವ ರೀತಿ ಕಾಣುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೈಸೂರಿನಲ್ಲಿ ಖಾಸಗಿ ದರ್ಬಾರ್ ನ ಕೊನೆ ದಿನ- ವಜ್ರಮುಷ್ಠಿ ಕಾಳಗ, ವಿಜಯಯಾತ್ರೆಗೆ ಸಿದ್ಧತೆ

    ಮೈಸೂರಿನಲ್ಲಿ ಖಾಸಗಿ ದರ್ಬಾರ್ ನ ಕೊನೆ ದಿನ- ವಜ್ರಮುಷ್ಠಿ ಕಾಳಗ, ವಿಜಯಯಾತ್ರೆಗೆ ಸಿದ್ಧತೆ

    ಮೈಸೂರು: ರಾಜಮಾತೆ ಪ್ರಮೋದಾದೇವಿ ಒಡೆಯರ್ ತಾಯಿ ಮತ್ತು ನಾದಿನಿ ನಿಧನದಿಂದ ರದ್ದಾಗಿದ್ದ ವಜ್ರಮುಷ್ಠಿ ಕಾಳಗ, ವಿಜಯಯಾತ್ರೆ ಮೆರವಣಿಗೆ ಇಂದು ನಡೆಯಲಿದೆ.

    ಬೆಳಗ್ಗೆ 8.45ಕ್ಕೆ ಅರಮನೆಗೆ ಪಟ್ಟದ ಆನೆ, ಕುದುರೆ, ಹಸುಗಳಿಗೆ ಪೂಜೆ ಸಲ್ಲಿಕೆಯಾಗಲಿದ್ದು, 9.10 ರಿಂದ 10.15ರ ಒಳಗೆ ವಜ್ರಮುಷ್ಠಿ ಕಾಳಗ ನಡೆಯಲಿದೆ. ಕಾಳಗ ಮುಗಿದ ನಂತ್ರ ಬೆಳ್ಳಿ ರಥದಲ್ಲಿ ಮಹಾರಾಜ ಯದುವೀರ್ ವಿಜಯಯಾತ್ರೆ ನಡೆಸಲಿದ್ದಾರೆ.

    ವಿಜಯಯಾತ್ರೆಯ ನಂತರ ಯದುವೀರ್ ಅರಮನೆಯೊಳಗಿನ ಭುವನೇಶ್ವರಿ ದೇವಾಲಯದಲ್ಲಿ ಬನ್ನಿ ಪೂಜೆ ಮಾಡಲಿದ್ದು, ನಂತ್ರ ಮೆರವಣಿಗೆ ಅರಮನೆಯತ್ತ ಸಾಗಲಿದೆ. ಅಲ್ಲಿಗೆ ಈ ವರ್ಷದ ದಸರಾ ಖಾಸಗಿ ದರ್ಬಾರ್ ಮುಕ್ತಾಯವಾಗಲಿದೆ. ಈ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ವಿಜಯದಶಮಿ ದಿನವೇ ಅವರ ಪುತ್ರ ನಿಧನರಾಗಿ ಕಾರ್ಯಕ್ರಮ ರದ್ದಾಗಿ, ನಂತರದಲ್ಲಿ ಆಚರಿಸಲಾಗಿತ್ತು. ಇದಾದ ಬಳಿಕ ಇದೇ ಮೊದಲ ಬಾರಿಗೆ ಯದುವಂಶದಲ್ಲಿ ಇಂತಹ ದಿನ ಮರುಕಳಿಸಿದೆ. ಇದನ್ನೂ ಓದಿ: ಭಾವುಕರಾದ ಯದುವೀರ್ ಒಡೆಯರ್

    ದಸರಾ ದಿನ ಸಮಸ್ತ ನಾಡಿನ ಜನತೆಯೂ ಜಂಬೂಸವಾರಿಗೆ ಕಾತುರದಿಂದ ಕಾಯುತ್ತಿದ ವೇಳೆ ಪ್ರಮೋದಾ ದೇವಿ ಅವರ ತಾಯಿ ವಿಧಿವಶರಾಗಿದ್ದರು. ರಾಜವಂಶಸ್ಥೆ ಪ್ರಮೋದಾ ದೇವಿ ಅವರ ತಾಯಿ ಪುಟ್ಟಚಿನ್ನಮ್ಮಣಿ(98) ಅವರು ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಇದೇ ದಿನ ಒಡೆಯರ್ ಕುಟುಂಬದಲ್ಲಿ ಮತ್ತೊಂದು ಸಾವು ಸಂಭವಸಿತ್ತು. ದಿ.ಶ್ರೀಕಂಠದತ್ತ ಒಡೆಯರ್ ಸಹೋದರಿ ವಿಶಾಲಾಕ್ಷಿ ಅವರು ವಿಧಿವಶರಾಗಿದ್ದರು.

    ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಶಾಲಾಕ್ಷಿ (58) ಅವರು ಶುಕ್ರವಾರ ಸಂಜೆ ವೇಳೆಗೆ ಕೊನೆಯುಸಿರೆಳೆದಿದ್ದರು. ಅನಾರೋಗ್ಯದಿಂದ ವಿಶಾಲಾಕ್ಷಿ ಅವರು ಬಳಲುತ್ತಿದ್ದರು ಎನ್ನಲಾಗಿದ್ದು, ಕಳೆದ 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=BsIcolSBl8Y

    https://www.youtube.com/watch?v=fV9i0nABh6U

  • ಭಾವುಕರಾದ ಯದುವೀರ್ ಒಡೆಯರ್

    ಭಾವುಕರಾದ ಯದುವೀರ್ ಒಡೆಯರ್

    ಮೈಸೂರು: ದಸರಾ ಹಬ್ಬದ ದಿನವೇ ಯದುವಂಶದ ಇಬ್ಬರು ನಿಧನರಾಗಿದ್ದು, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಫೇಸ್‍ಬುಕ್ ಮೂಲಕ ಸಂತಾಪ ಸೂಚಿಸಿದ್ದಾರೆ.

    ಶುಕ್ರವಾರ ಚಾಮರಾಜ ಒಡೆಯರ್ ಅವರ ಸಹೋದರಿ ವಿಶಾಲಾಕ್ಷಿ ದೇವಿ ಮತ್ತು ರಾಜವಂಶಸ್ಥೆ ಪ್ರಮೋದಾ ದೇವಿ ಅವರು ತಾಯಿ ಪುಟ್ಟರತ್ನಮ್ಮಣ್ಣಿ ನಿಧನ ಹೊಂದಿದ್ದರು. ಹೀಗಾಗಿ ಯದುವೀರ್ ಭಾವುಕರಾಗಿ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿ ಸಂದೇಶವನ್ನು ಹಾಕಿದ್ದಾರೆ. ಮೊದಲಿಗೆ ಅಜ್ಜಿ ಬಗ್ಗೆ ಮತ್ತು ನಂತರ ತಮ್ಮ ಅತ್ತೆಯ ಬಗ್ಗೆ ಬರೆದು ಫೋಟೋ ಹಾಕಿ ವಿಷಾದಿಸಿದ್ದಾರೆ.

    ಯದುವೀರ್ ಫೋಸ್ಟ್
    ಸ್ನೇಹಿತರೆ, “ನನ್ನ ಅಜ್ಜಿಯವರಾದ ಪುಟ್ಟರತ್ನಮ್ಮಣ್ಣಿ ಅವರು ನಮ್ಮನ್ನು ಅಗಲಿದ್ದಾರೆಂದು ತಿಳಿಸಲು ವಿಷಾದಿಸುತ್ತೇನೆ. ಅವರು ಶಾಂತ ಸ್ವಭಾವದವರಾಗಿದ್ದು, ನನ್ನ ಜವಾಬ್ದಾರಿಯನ್ನು ವಹಿಸಿದಾಗ ತುಂಬು ಹೃದಯದಿಂದ ಸ್ವಾಗತಿಸಿದ್ದರು. ಅವರು ನನ್ನ ತಾಯಿ ಮಹಾಸನ್ನಿಧಾನ ಸವಾರಿ ರಾಜಮಾತೆ ಪ್ರಮೋದಾ ದೇವಿ ಒಡೆಯರವರಿಗೆ ಬಹಳ ಹತ್ತಿರವಾಗಿದ್ದರು ಹಾಗೂ ಅವರೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದ್ದರು. ಅವರು ನಮ್ಮಿಂದ ದೂರವಾಗಿರುವುದು ಬಹಳ ದುಃಖದ ಸಂಗತಿಯಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಮಹಾರಾಜಕುಮಾರಿ ವಿಶಾಲಾಕ್ಷಿ ದೇವಿಯವರು ನಮ್ಮನ್ನು ಅಗಲಿದ್ದಾರೆಂದು ತಿಳಿಸಲು ವಿಷಾದಿಸುತ್ತೇನೆ” ಎಂದು ಅಜ್ಜಿಯ ಬಗ್ಗೆ ಬರದಿದ್ದಾರೆ.

    “ವಿಶಾಲಾಕ್ಷಿ ದೇವಿ ಅವರು ಶ್ರೀಮನ್ ಮಹಾರಾಜ ಜಯಚಾಮರಾಜ ಒಡೆಯರ್ ಮತ್ತು ತ್ರಿಪುರಸುಂದರಮ್ಮಣ್ಣಿ ಅವರಿಗೆ 1962 ರಲ್ಲಿ ಜನಿಸಿದ್ದರು. ಅವರ ತಂದೆಯ ಹಾಗೆಯೇ ಮಹಾರಾಜಕುಮಾರಿ ಅವರು ಕೂಡ ವನ್ಯಜೀವಿಗಳ ಸಂರಕ್ಷಣೆಯಲ್ಲಿ ತಮ್ಮನ್ನು ಹೆಚ್ಚು ತೊಡಗಿಸಿಕೊಂಡಿದ್ದರು ಮತ್ತು ಈ ಕ್ಷೇತ್ರದಲ್ಲಿ ಅವರ ಕೊಡುಗೆ ಅಪಾರವಾದದ್ದು. ಅವರು ಹಲವಾರು ಚಿರತೆಗಳು ಹಾಗು ಆನೆಗಳನ್ನು ತಮ್ಮ ಅರಣ್ಯದ ವಾಸಸ್ಥಾನಕ್ಕೆ ಮರಳಲು ಸಹಾಯ ಮಾಡಿದ್ದರು. ಅವರೊಂದಿಗೆ ಬಂಡೀಪುರದಲ್ಲಿ ಕಳೆದ ಕ್ಷಣಗಳು ಅವರೊಂದಿಗಿನ ನನ್ನ ಅತ್ಯುತ್ತಮ ನೆನಪುಗಳಾಗಿವೆ. ಅವರು ನಮ್ಮಿಂದ ದೂರವಾಗಿರುವುದು ಬಹಳ ದುಃಖದ ಸಂಗತಿಯಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತನ್ನ ಅತ್ತೆಯ ಬಗ್ಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಳೆ ಮೈಸೂರು ಭಾಗದ ಬ್ರಾಂಡ್ ಅಂಬಾಸಿಡರ್ ಆದ್ರು ಯದುವೀರ್

    ಹಳೆ ಮೈಸೂರು ಭಾಗದ ಬ್ರಾಂಡ್ ಅಂಬಾಸಿಡರ್ ಆದ್ರು ಯದುವೀರ್

    ಮೈಸೂರು: ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈಗ ಹಳೆ ಮೈಸೂರು ಭಾಗದ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ.

    ಯದುವೀರ್ ಅವರಿಗೆ ಪ್ರವಾಸೋದ್ಯಮ ಇಲಾಖೆ ಸರ್ಕಾರ ಬ್ರಾಂಡ್ ಅಂಬಾಸಿಡರ್ ಆಗುವಂತೆ ಮನವಿ ಮಾಡಿತ್ತು. ಈ ಕುರಿತು ಸ್ವತಃ ಸಚಿವ ಸಾ ರಾ ಮಹೇಶ್ ಅವರು ಪ್ರಸ್ತಾಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಮಾಡಿದ್ದ ಮನವಿಗೆ ಯದುವೀರ್ ಪ್ರತಿಕ್ರಿಯಿಸಿದ್ದಾರೆ.

    ಯದುವೀರ್ ಅವರು ದಕ್ಷಿಣ ಭಾರತದ ಮಾದರಿಯಲ್ಲಿ ಹಳೆ ಮೈಸೂರಿನ ಅಭಿವೃದ್ಧಿಗೆ ಚಿಂತನೆ ನಡೆಸಿದ್ದು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಮತ್ತು ಕೊಡಗು ಭಾಗದ ಪ್ರವಾಸೋದ್ಯಮ ರಾಯಭಾರಿಯಾಗಲು ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಪತ್ರದ ಮೂಲಕ ಯದುವೀರ್ ಸಾ.ರಾ. ಮಹೇಶ್ ಅವರಿಗೆ ತಿಳಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    ತಾವು ಮೈಸೂರು ಅರಮನೆಗೆ ಭೇಟಿ ನೀಡಿ, ನಮ್ಮ ಅಭಿನಂದನೆಗಳು ತಿಳಿಸಿದ್ದಕ್ಕೆ ಅಭಿನಂದನೆಗಳು. ಮೈಸೂರು ಜಿಲ್ಲೆಯ ಪ್ರವಾಸೋದ್ಯಮ ರಾಯಭಾರಿಯಾಗುವಂತೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನನ್ನ ಕೃತಜ್ಞತೆ. ನನ್ನ ನಗರಕ್ಕೆ ಸೇವೆ ಸಲ್ಲಿಸುವ ಹಾಗೂ ಮೈಸೂರು ನಗರವನ್ನು ದಕ್ಷಿಣ ಭಾರತದ ಪ್ರವಾಸೋದ್ಯಮ ಕೇಂದ್ರವಾಗಿ ಮಾಡುವ ಕಾರ್ಯದಲ್ಲಿ ಪಾಲ್ಗೊಳ್ಳುವ ಅವಕಾಶ ನನಗೆ ದೊರೆತಿರುವುದು ಸಂತೋಷದ ವಿಷಯ.

    ಈ ಕಾರ್ಯವನ್ನು ಸಾಧಿಸಲು ನನಗೆ ಸ್ಪಷ್ಟ ಉದ್ದೇಶಗಳನ್ನು ಹಾಗೂ ಖಚಿತವಾದ ಗುರಿಯನ್ನು ಹೊಂದಿರುವ ಅಗತ್ಯವಿದೆ. ನಾವು ಈ ನಿಟ್ಟಿನಲ್ಲಿ ರಚನಾತ್ಮಕವಾಗಿ ಹಾಗೂ ಪರಸ್ಪರ ಹಿತಾಸಕ್ತಿಗಳಿಗೆ ಅನುಗುಣವಾಗಿ ಮುಂದುವರಿಯುವ ಸಲುವಾಗಿ ತಾವು ತಮ್ಮ ವಿಭಾಗದ ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಏರ್ಪಡಿಸಿದರೆ ಉತ್ತಮ. ಈ ಉದ್ದೇಶವನ್ನು ಕಾರ್ಯರೂಪಕ್ಕೆ ತರುವ ಸಲುವಾಗಿ ಪ್ರವಾಸೋದ್ಯಮ ವಿಭಾಗದೊಂದಿಗೆ ಕಾರ್ಯೋನ್ಮುಖನಾಗುವ ದಿನವನ್ನು ಎದುರು ನೋಡುತ್ತಿದ್ದೇನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅರಮನೆ ಅಂಗಳದಲ್ಲಿ ಸ್ಯಾಂಡಲ್ ವುಡ್ ನಟರ ಕಲರವ

    ಅರಮನೆ ಅಂಗಳದಲ್ಲಿ ಸ್ಯಾಂಡಲ್ ವುಡ್ ನಟರ ಕಲರವ

    ಮೈಸೂರು: ಈ ಬಾರಿಯ ದಸರಾ ಹಬ್ಬದ ಸಿದ್ಧತೆಗಳು ನಡೆಯುತ್ತಿರುವ ನಡುವೇ ಸ್ಯಾಂಡಲ್ ವುಡ್ ನಟರ ದಂಡು ಮೈಸೂರು ಅರಮನೆ ಅಂಗಳಕ್ಕೆ ಆಗಮಿಸಿದ್ದು, ಹಬ್ಬದ ಸಂಭ್ರಮಕ್ಕೂ ಮುನ್ನವೇ ಸಂತಸ ವಾತಾರಣ ನಿರ್ಮಾಣವಾಗಲು ಕಾರಣವಾಯಿತು.

    ಚಾಲೆಂಜಿಗ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಪ್ರಜ್ವಲ್ ದೇವರಾಜ್, ಹಾಸ್ಯ ನಟರಾದ ವಿಶ್ವ, ಮಂಡ್ಯ ರಮೇಶ್ ಸೇರಿದಂತೆ ಹಲವು ನಟರು ಇಂದು ಅರಮನೆ ಆವರಣಕ್ಕೆ ಆಗಮಿಸಿದ್ದರು. ಈ ವೇಳೆ ಗಜಪಡೆ ಕಂಡು ಖುಷಿ ಪಟ್ಟರು. ಅಂಬಾರಿ ಆನೆ ಅರ್ಜುನನ್ನು ಕಂಡ ದರ್ಶನ್, ಅದರ ಮೈಸವರಿ ಖುಷಿ ಪಟ್ಟರು. ಬಳಿಕ ಗಜಪಡೆಯೊಂದಿಗೆ ಆಗಮಿಸಿರುವ ಕಾವಾಡಿ ಮತ್ತು ಮಾವುತರ ಕುಟುಂಬಸ್ಥರನ್ನ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.

    ನಟ ದರ್ಶನ್ ಇದೇ ವೇಳೆ ಮಾವುತರು ಮತ್ತು ಕಾವಾಡಿ ಕುಟುಂಬಕ್ಕೆ ಆತಿಥ್ಯ ಕಾರ್ಯಕ್ರಮ ಆಯೋಜಿಸಿದ್ದರು. ಈ ಆತಿಥ್ಯ ಕಾರ್ಯಕ್ರಮದಲ್ಲಿ ಸಿನಿತರೆಯಾರರೊಂದಿಗೆ ರಾಜವಂಶಸ್ಥ ಯದುವೀರ್ ಕೂಡ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಕಾರ್ಯಕ್ರಮದಲ್ಲಿ ಎಲ್ಲರೊಂದಿಗೆ ಊಟ ಮಾಡುವ ಮೂಲಕ ನಟರು ತಮ್ಮ ಸರಳತೆ ಮೆರೆದರು.

    ಈ ವೇಳೆ ಮಾತನಾಡಿದ ಯದುವೀರ್, ನಟ ದರ್ಶನ್ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಎಲ್ಲರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಸಂತಸ ತಂದಿದೆ. ಈ ಬಾರಿ ಅರಮನೆಯಲ್ಲಿ ದಸರಾ ಕಾರ್ಯಕ್ರಮಗಳು ಎಂದಿನಂತೆ ನಡೆಯಲಿದ್ದು, ಆದ್ಯವೀರ್ ಕೂಡ ಈ ಬಾರಿಯ ದಸರಾ ಕ್ಷಣಗಳಿಗೆ ಭಾಗಿಯಾಗುತ್ತಿರುವುದು ಮತ್ತಷ್ಟು ಸಂತಸ ತಂದಿದೆ. ಅಕ್ಟೋಬರ್ 10 ರಿಂದ ಅರಮನೆಯಲ್ಲಿ ದಸರಾ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು, ವಿಜಯ ದಶಮಿ 19ಕ್ಕೆ ನಿಗಧಿಯಾಗಿದೆ. ಪ್ರತಿ ವರ್ಷದಂತೆ ಎಲ್ಲಾ ಕಾರ್ಯಕ್ರಮಗಳು ನಡೆಯುತ್ತವೆ. ಅಲ್ಲದೇ ದಸರಾ ಕಾರ್ಯಕ್ರಮಗಳು ಈಗಾಗಲೇ ಚುರುಕುಗೊಂಡಿವೆ ಎಂದು ತಿಳಿಸಿದರು.

    ಆತಿಥ್ಯ ಕಾರ್ಯಕ್ರಮದ ಬಳಿಕ ನಟ ದರ್ಶನ್ ಹಾಗೂ ಯದುವೀರ್, ಮಾವುತ ಮತ್ತು ಕಾವಾಡಿ ಕುಟುಂಬಸ್ಥರಿಗೆ ಹೊಸ ಬಟ್ಟೆ, ಬೆಡ್ ಶೀಟ್, ಮಕ್ಕಳಿಗೆ ಶಾಲಾ ಬ್ಯಾಗ್ ವಿತರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಮೊದಲ ದಸರಾಗೆ ಸಜ್ಜಾದ ಆದ್ಯವೀರ್ – ಈಗ ಅರಮನೆ ಒಡೆಯರ್ ಹೀಗಿದ್ದಾರೆ

    ಮೊದಲ ದಸರಾಗೆ ಸಜ್ಜಾದ ಆದ್ಯವೀರ್ – ಈಗ ಅರಮನೆ ಒಡೆಯರ್ ಹೀಗಿದ್ದಾರೆ

    ಮೈಸೂರು: ಐತಿಹಾಸಿಕ ಹಬ್ಬ ದಸರಾಗೆ ನಾಡಿನ ಜನತೆ ಸಿದ್ಧರಾಗುತ್ತಿದ್ದಾರೆ. ಇತ್ತ ಗಜಪಡೆಗಳು ಕೂಡ ಸಜ್ಜಾಗುತ್ತಿದ್ದು, ಯದುವಂಶದ ಆದ್ಯವೀರ್ ನರಸಿಂಹರಾಜ ಒಡೆಯರ್ ಕೂಡ ತನ್ನ ಮೊದಲ ದಸರಾ ಹಬ್ಬಕ್ಕೆ ತಯಾರಾಗುತ್ತಿದ್ದಾರೆ.

    ಆದ್ಯವೀರ್ ಡಿಸೆಂಬರ್ 6 2017ರಲ್ಲಿ ಜನಿಸಿದ್ದರು. ಆದ್ದರಿಂದ ಆದ್ಯವೀರ್ ಗೆ ಇದೇ ಮೊದಲ ದಸರವಾಗಿದೆ. ಈ ಬಾರಿಯ ದಸರಾ ವಿಶೇಷವಾಗಿದೆ. ಆದ್ದರಿಂದ ಮೈಸೂರಿನ ಸಂಸ್ಥಾನದ ಯದುವಂಶಕ್ಕೆ ಸುಮಾರು 6 ದಶಕಗಳಿಂದ ಸಂತಾನ ಇರಲಿಲ್ಲ. ಆದರೆ ಕಳೆದ ವರ್ಷ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಗೆ ಆದ್ಯವೀರ್ ಜನಿಸುವ ಮೂಲಕ ರಾಜಮನೆತನಕ್ಕೆ ಸಂತಾನ ಪ್ರಾಪ್ತಿಯಾಗಿತ್ತು. ಈ ಸಂತಸವನ್ನು ಇಡೀ ನಾಡಿನ ಜನತೆಯೂ ಸಂಭ್ರಮಿಸಿತ್ತು.

    ಆದ್ಯವೀರ್ ಜನಿಸಿ ಸುಮಾರು ಒಂಭತ್ತು ತಿಂಗಳಾಗಿದೆ. ಇದುವರೆಗೂ ಅವರ ಫೋಟೋ ಎಲ್ಲಿಯೂ ಲಭ್ಯವಾಗಿರಲಿಲ್ಲ. ಆದರೆ ಈಗ ಅವರು ಹೇಗಿದ್ದಾರೆ ಎಂಬುದನ್ನು ಈ ಫೋಟೋ ಮೂಲಕ ತಿಳಿಯಬಹುದು. ಆದ್ಯವೀರ್ ಅವರು ತಮ್ಮ ತಾಯಿ ತ್ರಿಷಿಕಾ ಅವರ ಆರೈಕೆಯಲ್ಲಿದ್ದಾರೆ.

    ಈಗಾಗಲೇ ದಸರಾಗೆ ಅರ್ಜುನ ಮತ್ತು ತಂಡ ಅರಮನೆಗೆ ಬಂದಿದ್ದು, ಅವುಗಳಿಗೆ ಪೌಷ್ಠಿಕ ಆಹಾರ ನೀಡುವ ಮೂಲಕ ಆರೈಕೆ ಮಾಡಲಾಗುತ್ತಿದೆ. ಪ್ರತಿದಿನ ಆನೆಗಳಿಗೆ ರಸ್ತೆಗಳಲ್ಲಿ ತಾಲೀಮು ನಡೆಯುತ್ತಿದೆ. ತೂಕವನ್ನು ಕೂಡ ಅಳತೆ ಮಾಡಲಾಗಿದೆ. ಇತ್ತೀಚೆಗಷ್ಟೆ ಅರ್ಜುನ ಮತ್ತು ತಂಡದ ಆನೆಗಳು ಅರಮನೆ ಮುಂದೆ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದವು. ನಾಡಿನ ಹಬ್ಬವಾದ ದಸರಾಗೆ ಸಕಲ ಸಿದ್ಧತೆ ಕೂಡ ನಡೆಯುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv