Tag: ಯಶಸ್ವಿ

  • ನಟಿ ಅದಿತಿ ಪ್ರಭುದೇವ ಮದುವೆ ಡೇಟ್ ಫಿಕ್ಸ್

    ನಟಿ ಅದಿತಿ ಪ್ರಭುದೇವ ಮದುವೆ ಡೇಟ್ ಫಿಕ್ಸ್

    ಸ್ಯಾಂಡಲ್‌ವುಡ್‌ನ ಬಹುಬೇಡಿಕೆ ನಟಿ ಅದಿತಿ ಪ್ರಭುದೇವ(Aditi Prabhudeva) ಹಸೆಮಣೆ(Wedding) ಏರಲು ಸಜ್ಜಾಗಿದ್ದಾರೆ. ಸಾಕಷ್ಟು ಸಿನಿಮಾ ನಟಿಸಿ ಸೈ ಎನಿಸಿಕೊಂಡಿರುವ ನಾಯಕಿ ಅದಿತಿ ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದೆ. ಅದಿತಿ ಮತ್ತು ಯಶಸ್ವಿ(Yashasvi) ಜೋಡಿಯ ಮದುವೆ ಆಮಂತ್ರಣ ಪ್ರತಿಕೆ ಕೂಡ ಇದೀಗ ಲಭ್ಯವಾಗಿದೆ.

     

    View this post on Instagram

     

    A post shared by ADITI PRABHUDEVA (@aditiprabhudeva)

    ಕಿರುತೆರೆಯ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟ ಶ್ಯಾನೆ ಟಾಪ್ ಪ್ರತಿಭೆ ಅದಿತಿ ಪ್ರಭುದೇವ ಧೈಯಂ, ಬಜಾರ್, ಸಿಂಗಂ, ರಂಗನಾಯಕಿ, ಓಲ್ಡ್ಮಾಂಕ್ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವಾಗಲೇ ನಿಶ್ಚಿತಾರ್ಥ ಸುದ್ದಿಯ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಜೊತೆಗೆ ಶಾಕ್ ನೀಡಿದ್ದರು. ಈಗ ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಇದನ್ನೂ ಓದಿ:ಸಂಬರ್ಗಿಯನ್ನು ಮನೆಗೆ ಕಳುಹಿಸಿ- ಕನ್ನಡಪರ ಹೋರಾಟಗಾರರ ಪಟ್ಟು

    ಉದ್ಯಮಿ ಮತ್ತು ಕಾಫಿ ಪ್ಲಾಂಟರ್ ಆಗಿರುವ ಯಶಸ್ವಿ ಜೊತೆ ಇದೇ ನವೆಂಬರ್ 27ರಂದು ಮದುವೆ ಆಗುತ್ತಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರುತ್ತಿದ್ದಾರೆ. ಇದೇ ತಿಂಗಳು ವಿವಾಹವಿರುವುದರಿಂದ ನಟನೆಯಿಂದ ಬ್ರೇಕ್ ಪಡೆಯಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಒಲವೇ ಜೀವನ ಲೆಕ್ಕಾಚಾರ ಅಂತಿದ್ದಾರೆ ಯುವ ಜೋಡಿ

    ಒಲವೇ ಜೀವನ ಲೆಕ್ಕಾಚಾರ ಅಂತಿದ್ದಾರೆ ಯುವ ಜೋಡಿ

    ಹೊಸಬರೇ ಸೇರಿಕೊಂಡು ’ಲೆಕ್ಕಾಚಾರ’ ಎನ್ನುವ ಸಿನಿಮಾವನ್ನು ಸಿದ್ದಪಡಿಸಿದ್ದಾರೆ. ಈ ಹಿಂದೆ ’ಸಖತ್ ರಿಸ್ಕ್ ’ಎನ್ನುವ ಚಿತ್ರ ನಿರ್ದೇಶನ ಮಾಡಿರುವ ಎಂ.ಜಿ.ರಾಜು ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಸೀಮಾ ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ರಾಜೇಶ್‌ಗೌಡ ಮತ್ತು ಗಗನ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.

    ಇಬ್ಬರು ಪ್ರೇಮಿಗಳ ಮುಗ್ದ ಪ್ರೇಮಕಥೆ, ಪ್ರೀತಿಯಲ್ಲಿ ಲೆಕ್ಕಾಚಾರ ಸಹಜ. ಆದರೆ ಪ್ರೇಮದಲ್ಲಿ ಲೆಕ್ಕಾಚಾರವಿದ್ದರೆ ಅದು ನಿಜವಾದ ಪ್ರೀತಿಯಲ್ಲ. ನಿಷ್ಕಲ್ಮಶವಾಗಿರುವುದೇ ಪ್ರೀತಿ. ಒಲವೇ ಜೀವನ ಲೆಕ್ಕಾಚಾರ. ನಾಲ್ಕು ಹುಡುಗರು ಗ್ಯಾರೇಜ್‌ದಲ್ಲಿ ಕೆಲಸ ಮಾಡುತ್ತಾ ಪ್ರೀತಿಯಲ್ಲಿ ಬೀಳುತ್ತಾರೆ. ಅವರುಗಳ ಲೆಕ್ಕಾಚಾರ ಏನಾಗುತ್ತದೆ ಎಂಬುದು ಒಂದು ಏಳೆಯ ಸಾರಾಂಶವಾಗಿದೆ. ನಾಲ್ಕು ಹಾಡುಗಳಿಗೆ ಸಾಹಿತ್ಯ ಸಂಗೀತ ಒದಗಿಸಿರುವ ಕಾರ್ತಿಕ್‌ವೆಂಕಟೇಶ್ ಅವರು ಗ್ಯಾಪ್ ನಂತರ ರಾಜೇಶ್‌ಕೃಷ್ಣನ್-ಅನುರಾಧಭಟ್ ಜೋಡಿಯಲ್ಲಿ ಗೀತೆಯನ್ನು ಹಾಡಿಸಿರುವುದು ವಿಶೇಷ. ಇದನ್ನೂ ಓದಿ:ದಿಗಂತ್ ಗೆ ಮೂರು ಗಂಟೆಗಳ ಶಸ್ತ್ರ ಚಿಕಿತ್ಸೆ : ಅಬ್ಸರ್ವೇಶನ್ ನಲ್ಲಿ ನಟ

    ಹುಡುಗಿಯರನ್ನು ರೇಗಿಸಿಕೊಂಡು ಕಾಲ ಕಳೆಯುವ ಹುಡುಗನಾಗಿ ಹರೀಶ್ ನಾಯಕ. ಬೆಂಗಳೂರಿನ ಯಶಸ್ವಿ..ಸಿ.ಆರ್ ನಾಯಕಿ. ಇವರೊಂದಿಗೆ ಕುಮಾರ್.ಎಂ.ಎಸ್., ಪ್ರೀತಂ, ಹರ್ಷಿತಾ, ಬಲರಾಂ, ಚಂದ್ರು ಮುಂತಾದವರು ನಟಿಸಿದ್ದಾರೆ. ಬೆಂಗಳೂರು, ಉಡುಪಿ, ಮೂಡಿಗೆರೆ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಛಾಯಾಗ್ರಹಣ ರಾಜೇಶ್‌ಗೌಡ-ಗಗನ್, ಸಂಕಲನ ದುರ್ಗಾಪ್ರಸಾದ್.ಪಿ.ಎಸ್, ಸಾಹಸ ರಾಮ್‌ದೇವ್, ನೃತ್ಯ ಪ್ರಶಾಂತ್ ಅವರದಾಗಿದೆ. ಪ್ರಚಾರದ ಸಲುವಾಗಿ ಮೊನ್ನೆ ಆಡಿಯೋ ಬಿಡುಗಡೆ ಸಮಾರಂಭ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೆಗೌಡ, ಗಾಯಕಿ ಸಮನ್ವಿತಾಶರ್ಮಾ, ಸಿರಿಚಿಕ್ಕಣ್ಣ ಹಾಜರಿದ್ದು ತಂಡಕ್ಕೆ ಶುಭ ಹಾರೈಸಿದರು. ಸಿರಿ ಮ್ಯೂಸಿಕ್ ಸಂಸ್ಥೆಯು ಹಾಡುಗಳನ್ನು ಹೊರ ತಂದಿದೆ. ಇದಕ್ಕೂ ಮುನ್ನ ಹಾಡುಗಳು ಮತ್ತು ಟ್ರೈಲರ್‌ನ್ನು ತೋರಿಸಲಾಯಿತು.

    Live Tv

  • ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕಿದ್ದ 16 ರೈಲ್ವೇ ಸಿಬ್ಬಂದಿ ರಕ್ಷಣೆ

    ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕಿದ್ದ 16 ರೈಲ್ವೇ ಸಿಬ್ಬಂದಿ ರಕ್ಷಣೆ

    ಹಾಸನ: ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ 16 ರೈಲ್ವೇ ಸಿಬ್ಬಂದಿ ರಕ್ಷಣೆಗೆ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಟ್ರಕ್ಕಿಂಗ್ ಮೂಲಕ ಸಾಗಿ ಅಪಾಯದಲ್ಲಿ ಸಿಲುಕಿದ್ದ ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ.

    ಸಕಲೇಶಪುರ ಎಸಿ ನೇತೃತ್ವದ ತಂಡ ಟ್ರೆಕ್ಕಿಂಗ್ ಪರಿಣಿತರೊಂದಿಗೆ ನಡೆದು ಹೋಗಿ ಎಡಕುಮರಿ ಬಳಿ ಗುಡ್ಡ ಕುಸಿದಿಂದ ಸಿಲುಕಿದ್ದ ರೈಲ್ವೇ ಸಿಬ್ಬಂದಿಯನ್ನು ರಕ್ಷಿಸಿ ಪಟ್ಟಣಕ್ಕೆ ಕರೆತಂದಿದ್ದಾರೆ. ಅಪಾಯದಲ್ಲಿ ಸಿಲುಕಿದ್ದ 16 ಮಂದಿ ಸಿಬ್ಬಂದಿಯ ಆರೋಗ್ಯ ಉತ್ತಮವಾಗಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಸಕಲೇಶಪುರ ಉಪವಿಭಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ತಿಳಿಸಿದ್ದಾರೆ.

    ಬೆಂಗಳೂರು- ಮಂಗಳೂರು ಸಂಪರ್ಕದ ರೈಲು ಮಾರ್ಗದಲ್ಲಿ ಸಿಲುಕಿರುವ ಎಲ್ಲಾ ಸಿಬ್ಬಂದಿಗಳನ್ನು ರಕ್ಷಿಸಲು ತಂಡ ಕಾಗಿನೆರಿ ಮೂಲಕ ತೆರಳಿದ್ದರು. ಈ ಮೊದಲು ಸಿಬ್ಬಂದಿಯನ್ನು ಹೆಲಿಕಾಪ್ಟರ್ ಕಾರ್ಯಾಚರಣೆ ನಡೆಸಿ ರಕ್ಷಿಸಲು ಉದ್ದೇಶಿಸಲಾಗಿತ್ತು. ಆದರೆ ಹೆಲಿಕಾಪ್ಟರ್ ಕಾರ್ಯಾಚರಣೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಟ್ರಕ್ಕಿಂಗ್ ಮಾರ್ಗದ ಮೂಲಕ ತೆರಳಿ ಸಿಬಂದಿ ರಕ್ಷಣೆ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ತಹಸೀಲ್ದಾರ್, ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಉಪವಿಭಾಗಾಧಿಕಾರಿಗಳು ಭಾಗವಹಿಸಿದ್ದರು. ಸದ್ಯ ಎಲ್ಲಾ ರಕ್ಷಿಸಲಾದ ಎಲ್ಲಾ ಸಿಬ್ಬಂದಿಯನ್ನು ಸಕಲೇಶಪುರ ಪಟ್ಟಣಕ್ಕೆ ಕರೆದ್ಯೊಯಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವ್ಯಕ್ತಿಯ ಹೊಟ್ಟೆಯಿಂದ 600ಕ್ಕೂ ಹೆಚ್ಚು ಮೊಳೆ ಹೊರತೆಗೆದ ವೈದ್ಯರು!

    ವ್ಯಕ್ತಿಯ ಹೊಟ್ಟೆಯಿಂದ 600ಕ್ಕೂ ಹೆಚ್ಚು ಮೊಳೆ ಹೊರತೆಗೆದ ವೈದ್ಯರು!

    ಕೊಲ್ಕತ್ತಾ: ಅಪರೂಪದ ಶಸ್ತ್ರಚಿಕಿತ್ಸೆಯೊಂದರಲ್ಲಿ ವೈದ್ಯರು ಮಾನಸಿಕ ಅಸ್ವಸ್ಥ ವ್ಯಕ್ತಿಯ ಹೊಟ್ಟೆಯಿಂದ 600 ಕ್ಕೂ ಹೆಚ್ಚು ಕಬ್ಬಿಣದ ಮೊಳೆಗಳನ್ನ ಹೊರತೆಗೆದಿರೋ ಘಟನೆ ಕೊಲ್ಕತ್ತಾದಲ್ಲಿ ನಡೆದಿದೆ.

    ರಾಜ್ಯದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಈ ಶಸ್ತ್ರಚಿಕ್ತೆಯನ್ನು ಮಾಡಿ ಯಶಸ್ವಿಯಾಗಿದ್ದು, ಈಗ ರೋಗಿಗೆ ಯಾವುದೇ ತೊಂದರೆ ಇಲ್ಲ, ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ರೋಗಿಯ ಕುಟುಂಬಸ್ಥರು ಕಳೆದ ತಿಂಗಳು ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ರೋಗಿಗೆ ಯುಎಸ್‍ಜಿ ಟೆಸ್ಟ್ ಮಾಡಿಸಿದ ನಂತರ ರೋಗಿಯ ಹೊಟ್ಟೆಯಲ್ಲಿ ಬಹಳಷ್ಟು ಮೊಳೆಗಳು ಇರುವುದು ಕಂಡುಬಂದಿತ್ತು.

    ರೋಗಿ ಒಬ್ಬ ಮಾನಸಿಕ ಅಸ್ವಸ್ಥರಾಗಿದ್ದು, ಅನ್ಯ ವಸ್ತುಗಳನ್ನು ನುಂಗುವ ಅಭ್ಯಾಸವನ್ನು ಹೊಂದಿದ್ದರು. ಆದರೆ ಅವರ ಹೊಟ್ಟೆಯಲ್ಲಿ ಬಹಳಷ್ಟು ಮೊಳೆಗಳು ಇರಬಹುದು ಎಂದು ಕಲ್ಪನೆಯನ್ನು ಸಹ ಮಾಡಿರಲಿಲ್ಲ ಎಂದು ರೋಗಿಯ ಸಂಬಂಧಿ ತಿಳಿಸಿದ್ದಾರೆ.

    ಈ ಶಸ್ತ್ರಚಿಕಿತ್ಸೆ ಮಾಡುವುದು ತುಂಬಾ ಅಪಾಯಕಾರಿಯಾಗಿತ್ತು. ಆದರೂ ನಾವು ರಿಸ್ಕ್ ತೆಗೆದುಕೊಂಡು ಯಶಸ್ವಿಯಾಗಿ ಆಪರೇಷನ್ ಮಾಡಿದ್ದೇವೆ. ಈಗ ರೋಗಿ ಆರೋಗ್ಯವಾಗಿದ್ದಾರೆ. ಆದರೆ ಅಚ್ಚರಿ ಎಂದರೆ ತುಂಬಾ ದಿನಗಳ ಕಾಲ ಮೊಳೆಗಳು ಹೊಟ್ಟೆಯಲ್ಲಿದ್ದರೂ ಇದರಿಂದ ರೋಗಿಗೆ ಒಂದು ಸಣ್ಣ ಗಾಯವೂ ಆಗಿಲ್ಲ. ಜೊತೆಗೆ ಮೊಳೆಗಳು ಚುಚ್ಚಿಕೊಂಡಿಲ್ಲ ಎಂದು ವೈದ್ಯಕೀಯ ತಂಡದ ನೇತೃತ್ವ ವಹಿಸಿದ ಶಸ್ತ್ರಚಿಕಿತ್ಸಕ ಸಿದ್ಧಾರ್ಥ ಬಿಸ್ವಾಸ್ ಅವರು ಹೇಳಿದ್ದಾರೆ.

    ರೋಗಿಯ ಹೊಟ್ಟೆ ಸಾಮಾನ್ಯಕ್ಕಿಂತ ದೊಡ್ಡದಾಗಿತ್ತು. ಅದರ ತುಂಬಾ ಬರಿ ಮೊಳೆಗಳೇ ತುಂಬಿದ್ದವು. ನಾವು ಆಪರೇಷನ್ ಮಾಡುವಾಗ ಅವರ ಹೊಟ್ಟೆಯ ಒಂದು ಭಾಗದಲ್ಲಿ ಕುಯ್ದು ಒಂದು ಮ್ಯಾಗ್ನೆಟ್ ಬಳಸಿಕೊಂಡು ಒಂದೊಂದೇ ಮೊಳೆಗಳನ್ನು ಹೊರತೆಗೆದೆವು. ಒಟ್ಟಾರೆ 600 ಮೊಳೆಗಳಿದ್ದವು. ರೋಗಿ ನುಂಗಿದ್ದ ಎಲ್ಲಾ ಮೊಳೆಗಳನ್ನು ಹೊರತೆಗೆದಿದ್ದೇವೆ ಎಂದು ಡಾ.ಸಿದ್ಧಾರ್ಥ ಅವರು ಖಚಿತಪಡಿಸಿದ್ದಾರೆ.