Tag: ಯಾಗ

  • ದೇಶದ ಒಳಿತಿಗೆ ಕೃಷ್ಣಮಠದಲ್ಲಿ ಧನ್ವಂತರಿ ಯಾಗ- 8 ಋತ್ವಿಜರು ಮಾತ್ರ ಭಾಗಿ

    ದೇಶದ ಒಳಿತಿಗೆ ಕೃಷ್ಣಮಠದಲ್ಲಿ ಧನ್ವಂತರಿ ಯಾಗ- 8 ಋತ್ವಿಜರು ಮಾತ್ರ ಭಾಗಿ

    ಉಡುಪಿ: ಮಹಾಮಾರಿ ಕೊರೊನಾ ವಿರುದ್ಧ ಉಡುಪಿ ಕೃಷ್ಣಮಠದಲ್ಲಿ ಧನ್ವಂತರಿ ಮಹಾಯಾಗ ನಡೆಯುತ್ತಿದೆ. ಪರ್ಯಾಯ ಅದಮಾರು ಮಠ ನೇತೃತ್ವದಲ್ಲಿ ಯಾಗ ಆರಂಭವಾಗಿದ್ದು, ಕೇವಲ ಏಳು ಮಂದಿ ಋತ್ವಿಜರು ಮಾತ್ರ ಮಹಾ ಯಾಗದಲ್ಲಿ ಪಾಲ್ಗೊಂಡರು.

    ಕರೊನಾದ ಭೀತಿ ಆರಂಭವಾದ ಸಂದರ್ಭದಲ್ಲಿ ಶ್ರೀಕೃಷ್ಣ ಮಠ ಧನ್ವಂತರಿ ಮಹಾಯಾಗ ಕೈಗೊಳ್ಳುವ ಚಿಂತನೆ ನಡೆಸಿತ್ತು. ಐದು ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಮಠಕ್ಕಿತ್ತು. ಆದರೆ ದೇಶ ಲಾಕ್‍ಡೌನ್ ಆಗಿರುವುದರಿಂದ ಭಕ್ತರು ಸೇರಬಾರದು ಎಂದು ಜಿಲ್ಲಾಡಳಿತ ಕೃಷ್ಣ ಮಠಕ್ಕೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭಕ್ತರು ಮನೆಯಲ್ಲೇ ಇರಬೇಕೆಂದು ಮಠ ಪ್ರಕಟಣೆ ಹೊರಡಿಸಿತು.

    ಶುಕ್ರವಾರ ಪ್ರಾತಃ ಕಾಲದಲ್ಲಿ ಆರಂಭವಾದ ಧನ್ವಂತರಿ ಮಹಾಯಾಗದಲ್ಲಿ ಋತ್ವಿಜರು ಮಾತ್ರ ಪಾಲ್ಗೊಂಡಿದ್ದಾರೆ. ಒಬ್ಬ ಭಕ್ತರೂ ಯಾಗದಲ್ಲಿ ಪಾಲ್ಗೊಂಡಿಲ್ಲ. ಮಠದ ಸಿಬ್ಬಂದಿ ಕೂಡ ಯಾಗದ ಚೌಕಟ್ಟಿನ ಒಳಗೆ ಪ್ರವೇಶ ಮಾಡಿಲ್ಲ.

    ಇಡೀ ವಿಶ್ವಕ್ಕೆ ಮಹಾಮಾರಿ ವೈರಸ್ ಆವರಿಸಿದೆ ಕೃಷ್ಣಮಠ ಮತ್ತು ಆದಮಾರು ಮಠಾಧೀಶರು ಧನ್ವಂತರಿ ಮಹಾಯಾಗ ಮಾಡುವ ಸಂಕಲ್ಪವನ್ನು ಮಾಡಿದ್ದಾರೆ. ಧನ್ವಂತರಿ ಎಂದರೆ ಸಂಸಾರಕ್ಕೆ ಓದಿದಂತಹ ದುಃಖವನ್ನು ಪರಿಹರಿಸುವ ದೇವರು ಎಂಬ ಅರ್ಥ ಇದೆ. ಇದೀಗ ಭಾರತ ಎಂಬ ಕುಟುಂಬಕ್ಕೆ ಮಹಾಮಾರಿ ವೈರಸ್ ಆವರಿಸಿದೆ. ಕರಣದ ವಿರುದ್ಧ ಭಾರತ ಏನು ಮಾಡುತ್ತಿದೆ ಎಂದು ಇಡೀ ವಿಶ್ವ ಕಾತುರದಿಂದ ಕಾಯುತ್ತಿದೆ. ಹಾಗಾಗಿ ಭಾರತದಲ್ಲಿ ಕೈಗೊಂಡ ನಿರ್ಧಾರಗಳಿಂದ ವೈರಸ್‍ನ ಪ್ರಭಾವ ಕಡಿಮೆ ಆಗಲಿ ಎಂದು ಪ್ರಾರ್ಥಿಸಲಾಯಿತು.

    ದೇಶದ ಜನತೆಗೆ ಮತ್ತು ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗಾಗಿ ಪೂರ್ಣಾಹುತಿ ಸಂದರ್ಭ ಪ್ರಾರ್ಥನೆ ನಡೆದಿದೆ. ಅದಮಾರು ಮಠಾಧೀಶರಾದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಪರ್ಯಾಯ ಸ್ವಾಮೀಜಿ ಈಶಪ್ರಿಯ ತೀರ್ಥ ಸ್ವಾಮೀಜಿ ಸೋದೆ ಮಠಾಧೀಶರು ಕಾಣಿಯೂರು ಶ್ರೀಗಳು ಧನ್ವಂತರಿ ಮಹಾ ಯಾಗದಲ್ಲಿ ಪಾಲ್ಗೊಂಡರು. ಕೃಷ್ಣಮಠದ ವ್ಯವಸ್ಥಾಪಕ ಗೋವಿಂದರಾಜ್ ಶ್ರೀಕೃಷ್ಣ ಸೇವಾ ಸಮಿತಿಯ ಪ್ರದೀಪ್, ರಾಮಚಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.

  • ಯಶ್ ದಂಪತಿಯಿಂದ ಶತ್ರು ಸಂಹಾರ ಯಾಗ

    ಯಶ್ ದಂಪತಿಯಿಂದ ಶತ್ರು ಸಂಹಾರ ಯಾಗ

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 2’ ಅಡ್ಡಾ ಬಿಟ್ಟು ದೇವರ ಮೊರೆ ಹೋಗಿದ್ದು, ಪತ್ನಿ ರಾಧಿಕಾ ಮತ್ತು ಕುಟುಂಬದವರ ಜೊತೆ ಸೇರಿ ಶತ್ರು ಸಂಹಾರ ಯಾಗವನ್ನು ಮಾಡಿಸುತ್ತಿದ್ದಾರೆ.

    ಯಶ್ ಕುಟುಂಬ ಮಲ್ಲೇಶ್ವರಂನಲ್ಲಿರುವ ದುರ್ಗಾ ರಾಧಾ-ಕೃಷ್ಣ ದೇವಸ್ಥಾನದಲ್ಲಿ ಪೂಜೆ ಮಾಡಿಸುತ್ತಿದ್ದಾರೆ. ಇಂದು ಬೆಳಗ್ಗೆ ಸುಮಾರು 10.30ರಿಂದ ಪೂಜೆ ಮಾಡಿಸುತ್ತಿದ್ದಾರೆ. ಸದ್ಯಕ್ಕೆ ಯಶ್ ದಂಪತಿ ಮಾರ್ಕಂಡೇಯ ಹೋಮ ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಅಪಕಂಟಕ ಮತ್ತು ಶತ್ರು ನಾಶಕ್ಕೆ ಮಾರ್ಕಂಡೇಯ ಹೋಮ ಮಾಡಿಸಲಾಗುತ್ತದೆ. ಹೋಮದಲ್ಲಿ ಯಶ್, ರಾಧಿಕಾ, ಯಶ್ ತಂದೆ ಮತ್ತು ತಾಯಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಇಂದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ದೇವಸ್ಥಾನದ ಸಿಬ್ಬಂದಿ ಪ್ರವೇಶ ತಡೆಹಿಡಿದಿದ್ದಾರೆ.

    ಮತ್ತೊಂದೆಡೆ ಯಶ್ ಮತ್ತು ರಾಧಿಕಾ ತಮ್ಮ ಪುತ್ರನಿಗೆ ಸರಳವಾಗಿ ನಾಮಕರಣ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಯಶ್ ಇದ್ದಕ್ಕಿದ್ದಂತೆ ಕೆಜಿಎಫ್ ಸಿನಿಮಾ ಶೂಟಿಂಗ್‍ನಿಂದ ಬಂದು ಮಾರ್ಕಂಡೇಯ ಹೋಮ ಮಾಡಿಸುತ್ತಿರುವುದು ಯಾಕೆ ಎಂಬ ಗೊಂದಲ ಅಭಿಮಾನಿಗಳಲ್ಲಿ ಮೂಡಿದೆ.

    ಸದ್ಯಕ್ಕೆ ಯಶ್ ಬಹುನಿರೀಕ್ಷಿತ ‘ಕೆಜಿಎಫ್ ಚಾಪ್ಟರ್-2’ ಸಿನಿಮಾದ ಶೂಟಿಂಗ್‍ನಲ್ಲಿ ಬ್ಯುಸಿಯಿದ್ದಾರೆ. ಮೈಸೂರಿನಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಅಲ್ಲಿಂದ ಬೆಂಗಳೂರಿಗೆ ಬಂದು ಇಂದು ಶತ್ರು ಸಂಹಾರ ಯಾಗದ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

  • ಐದು ದಿನಗಳ ಕಾಲ ಶೃಂಗೇರಿಯಲ್ಲಿ ದೊಡ್ಡ ಗೌಡರ ಯಾಗ

    ಐದು ದಿನಗಳ ಕಾಲ ಶೃಂಗೇರಿಯಲ್ಲಿ ದೊಡ್ಡ ಗೌಡರ ಯಾಗ

    ಚಿಕ್ಕಮಗಳೂರು: ರಾಜಕೀಯವಾಗಿ ಒಂದಲ್ಲ ಒಂದು ರೀತಿ ಹಿನ್ನೆಡೆ ಕಾಣುತ್ತಿರುವ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಹೊಸ ವರ್ಷದ ಆರಂಭದಲ್ಲಿ ಶಕ್ತಿ ದೇವತೆ ಶೃಂಗೇರಿಯ ಶಾರದಾಂಬೆಯ ಮೊರೆ ಹೋಗಿದ್ದಾರೆ. ಪತ್ನಿ ಜೊತೆ ಶೃಂಗೇರಿಗೆ ಆಗಮಿಸಿರುವ ದೊಡ್ಡಗೌಡರು ಮಂಗಳವಾರದವರೆಗೂ ಶಾರದಾಂಬೆ ಸನ್ನಿಧಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಮಂಗಳವಾರ ಯಾಗದ ಪೂರ್ಣಾಹುತಿ ನಡೆಯಲಿದ್ದು, ಅಂದು ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಇಡೀ ಕುಟುಂಬ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

    ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ದೊಡ್ಡ ಗೌಡರು ಶಾರದಾಂಬೆ ಮೊರೆ ಹೋಗುವುದು ಮಾಮೂಲಿ. ಇದೀಗ 5 ದಿನಗಳ ಕಾಲ ಶಾರದೆ ಸನ್ನಿಧಿಯಲ್ಲಿ ಗೌಡರು ಯಾಗ ಕೈಗೊಂಡಿರುವುದು ಭವಿಷ್ಯದಲ್ಲಿ ಮಹತ್ವದ ನಿರ್ಧಾರದ ಮುನ್ಸೂಚನೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ. ಸಂಕ್ರಾಂತಿಯ ಮರುದಿನವೇ ಶೃಂಗೇರಿಗೆ ಆಗಮಿಸಿದ ಗೌಡರು, ಭಾರತಿ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಶ್ರೀ ವಿಧುಶೇಖರ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಐದು ದಿನಗಳ ಕಾಲ ವಿಶೇಷ ಪೂಜೆ-ಹೋಮ-ಹವನದ ಬಳಿಕ ಹಿಂದಿರುಗಲಿದ್ದಾರೆ. ವಿಶೇಷ ಪೂಜೆ ಹಾಗೂ ಯಾಗಗಳನ್ನು ನಡೆಸುವ ದೇವೇಗೌಡರು, ಶಾರದಾಂಬೆಯಲ್ಲಿ ಏನನ್ನು ಬೇಡಿಕೊಳ್ಳುತ್ತಾರೆ, ಯಾವುದರ ಸಂಕಲ್ಪ ಮಾಡಲಿದ್ದಾರೆ ಎನ್ನುವುದು ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ.

    2018ರಲ್ಲಿ ಮೈತ್ರಿ ಸರ್ಕಾರ ರಚನೆಯಾಗುವ ಮೊದಲು ದೇವೇಗೌಡರ ಕುಟುಂಬ ಶಾರದಾಂಬೆ ಸನ್ನಿಧಿಯಲ್ಲಿ 11 ದಿನಗಳ ಕಾಲ ನಡೆದ ಅತಿರುದ್ರ ಮಹಾಯಾಗ ನಡೆಸಿದರು. 2018ರ ಜನವರಿ 4 ರಿಂದ 15ರವರೆಗೆ ಈ ಯಾಗ ನಡೆದಿತ್ತು. ಇದಾದ ಕೆಲವೇ ತಿಂಗಳಲ್ಲಿ ಕುಮಾರಸ್ವಾಮಿ 2ನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಬಳಿಕ ಕುಮಾರಸ್ವಾಮಿ ಪ್ರಮಾಣ ವಚನಕ್ಕೂ ಮೊದಲು ನಿಯೋಜಿತ ಸಿಎಂ ಆಗಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಸಿಎಂ ಆದ ಬಳಿಕವೂ ಕುಮಾರಸ್ವಾಮಿ ಹಾಗೂ ದೇವೇಗೌಡರು ನಾಲ್ಕೈದು ಬಾರಿ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದ್ದರು. ಸಮ್ಮಿಶ್ರ ಸರ್ಕಾರ ಬೀಳುವ ಸಂದರ್ಭದಲ್ಲಿ ರಾಜಕೀಯದ ಹಗ್ಗಜಗ್ಗಾಟದಲ್ಲೂ ದೇವೇಗೌಡರ ಕುಟುಂಬ ಸರ್ಕಾರ ಉಳಿಸಲು ಇದೇ ಶಾರದಾಂಬೆ ಮೊರೆ ಹೋಗಿದ್ದರು.


    ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರದ ಉಪ ಚುನಾವಣೆಯಲ್ಲೂ ಜೆಡಿಎಸ್ ಸೋತು ಪಕ್ಷಕ್ಕೆ ತೀವ್ರ ಹಿನ್ನೆಡೆಯಾಗಿದೆ. ಹಾಗಾಗಿ ದೊಡ್ಡಗೌಡ್ರು ಮತ್ತೊಮ್ಮೆ ಪಕ್ಷ ಸಂಘಟನೆಗೆ ಪಣ ತೊಟ್ಟಿದ್ದಾರೆ. ಈ ಹಿನ್ನೆಲೆ ಜೆಡಿಎಸ್ ಬಲವರ್ಧನೆಗೆ ಪಣ ತೊಟ್ಟ ಗೌಡರು ಶಕ್ತಿ ಕೊಡು ತಾಯಿ ಎಂದು ಮತ್ತೊಮ್ಮೆ ಶಾರದಾಂಬೆ ಸನ್ನಿಧಿಯಲ್ಲಿ ವಿಶೇಷ ಪೂಜೆ-ಹೋಮ-ಹವನ ಸೇರಿದಂತೆ ಯಾಗಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗ್ತಿದೆ.

  • 1008 ಕೆಜಿಯ ಮೆಣಸಿನಕಾಯಿ ಯಾಗ

    1008 ಕೆಜಿಯ ಮೆಣಸಿನಕಾಯಿ ಯಾಗ

    ದಾವಣಗೆರೆ: ಅಮಾವಾಸ್ಯೆಯ ಪ್ರಯುಕ್ತ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿಯಲ್ಲಿ 1008 ಕೆಜಿ ಮೆಣಸಿನಕಾಯಿಯ ಯಾಗ ಮಾಡಲಾಗಿದೆ.

    ಶನಿವಾರ ಸುಭಂಜಪ್ಪ ಎಂಬವರ ಹೊಲದಲ್ಲಿ ಖಾಸಗಿ ಕಂಪನಿಯೊಂದರ ಸಹಯೋಗದೊಂದಿಗೆ ತೀಕ್ಷ್ಣ ಪ್ರತ್ಯಂಗಿರ ದೇವಿಗಾಗಿ 1008 ಕೆಜಿ ಒಣ ಮೆಣಸಿನಕಾಯಿ ಬಳಸಿ ಯಾಗ ನಡೆಸಲಾಯಿತು. ಗುರೂಜಿ ಅಘೋರ ಟೀನ್ ಗಣಪತಿ ರ್ಯಾಟ್ ಅವರಿಂದ ಹೋಮಕ್ಕೆ ಚಾಲನೆ ನೀಡಲಾಗಿತ್ತು.

    ಅಂದುಕೊಂಡ ಬೇಡಿಕೆಗಳ ಈಡೇರಿಕೆಗಾಗಿ ಈ ಯಾಗವನ್ನು ಮಾಡುಲಾಗುತ್ತಿದು, ಅಮಾವಾಸ್ಯೆಯ ದಿನ ಯಾಗ ಮಾಡಿ ಮೆಣಸಿನಕಾಯಿಯನ್ನು ಹೋಮ ಕುಂಡದಲ್ಲಿ ಹಾಕಬೇಕು ಆಗ ಇಷ್ಟಾರ್ಥ ಸಿದ್ದಿಯಾಗುತ್ತದೆ ಎಂಬ ನಂಬಿಕೆಯನ್ನು ಜನರು ಹೊಂದಿದ್ದಾರೆ. ಲೋಕ ಕಲ್ಯಾಣಕ್ಕಾಗಿ ಪುರಾತನ ಕಾಲದಲ್ಲಿಯೂ ಈ ಹೋಮ ನಡೆಸಲಾಗುತ್ತಿತ್ತು. ಭಕ್ತರು ಭಕ್ತಿಯಿಂದ ಹೋಮಕ್ಕೆ ಪೂಜೆ ಸಲ್ಲಿಸಿ ಬುಟ್ಟಿಗಳಲ್ಲಿ ತಂದ ಮೆಣಸಿನಕಾಯಿಯನ್ನು ಅಗ್ನಿ ಕುಂಡಕ್ಕೆ ಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜಕೀಯ ದಂಗೆ ಬೆನ್ನಲ್ಲೇ ಪ್ರತಿಶೂಲಿಕಾ ಯಾಗ – ಕಂಟಕದಿಂದ ಪಾರಾಗ್ತಾರ ಮುಖ್ಯಮಂತ್ರಿ?

    ರಾಜಕೀಯ ದಂಗೆ ಬೆನ್ನಲ್ಲೇ ಪ್ರತಿಶೂಲಿಕಾ ಯಾಗ – ಕಂಟಕದಿಂದ ಪಾರಾಗ್ತಾರ ಮುಖ್ಯಮಂತ್ರಿ?

    – ಹೋಮದ ವಿಶೇಷತೆ ಏನು?

    ಚಿಕ್ಕಮಗಳೂರು: ದೊಡ್ಡ ಗೌಡರ ಕುಟುಂಬ ಶೃಂಗೇರಿಯಲ್ಲಿ ನಡೆಸಿದ ಯಾಗಕ್ಕೆ ವಿಘ್ನ ಉಂಟಾದ ಹಿನ್ನೆಲೆಯೇ ಕುಮಾರಸ್ವಾಮಿಗೆ ಅಧಿಕಾರದಲ್ಲಿ ತೊಡಕೆಂದು ಭಾವಿಸಿರೋ ದೇವೇಗೌಡರು ಇಂದು ಶೃಂಗೇರಿಯಲ್ಲಿ ದೋಷ ನಿವಾರಣೆಗೆಂದು ಪ್ರತಿಶೂಲಿಕಾ ಯಾಗ ಮಾಡಿಸಲಿದ್ದಾರೆ.

    ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೆಂದು ಶೃಂಗೇರಿ ಶಾರದಾಂಭೆ ಸನ್ನಿಧಿಯಲ್ಲಿ ಜನವರಿ 3 ರಿಂದ 14ರವರೆಗೆ 11 ದಿನ ಅತಿರುದ್ರ ಮಹಾಯಾಗ ನಡೆಸಿದ್ದರು. ಆದ್ರೆ, ಯಾಗದ 7 ನೇ ದಿನ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ತಾಯಿ ಮೃತರಾಗಿದ್ರು. ಹೀಗಾಗಿ ಯಾಗದ ಮಧ್ಯದಲ್ಲೇ ಅಂತ್ಯ ಸಂಸ್ಕಾರದಲ್ಲಿ ದೇವೇಗೌಡರ ಕುಟುಂಬ ಭಾಗಿಯಾಗಿತ್ತು. ಬಳಿಕ ದೊಡ್ಡಗೌಡರ ಕುಟುಂಬ ಪುನಃ ಯಾಗದಲ್ಲಿ ಪಾಲ್ಗೊಂಡಿತ್ತು.

    ಸಾವಿನ ಸೂತಕದಿಂದ ಯಾಗಕ್ಕೆ ವಿಘ್ನ ಉಂಟಾಗಿದೆ. ಅದಕ್ಕಾಗಿಯೇ ಕುಮಾರಸ್ವಾಮಿಗೆ ಪದೇ ಪದೇ ತೊಂದರೆ ಎದುರಾಗುತ್ತಿದೆ ಎಂದು ಗೌಡರ ಕುಟುಂಬ ಭಾವಿಸಿದೆಯಂತೆ. ಹೀಗಾಗಿಯೇ ಇಂದು ಸಿಎಂ ಸೇರಿದಂತೆ ದೇವೇಗೌಡರ ಕುಟುಂಬ ಶೃಂಗೇರಿಯಲ್ಲಿ ದೋಷ ನಿವಾರಣೆಗೆ ಪೂಜೆ ಮಾಡಿದ್ದಾರೆ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ದೇವೇಗೌಡರು, ಚನ್ನಮ್ಮ ಹಾಗೂ ರೇವಣ್ಣ ಈ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ರು. ಕುಮಾರಸ್ವಾಮಿ ನಿಯೋಜಿತ ಸಿಎಂ ಆಗಿದ್ದಾಗ್ಲೂ ಇಲ್ಲೇ ಏಕ ಚಂಡಿಕಾ ಯಾಗ ನಡೆಸಲಾಗಿತ್ತು. ಈಗ ಶೃಂಗೇರಿ ಮಠದ ಪೀಠಾಧಿಪತಿಗಳನ್ನು ಸಿಎಂ ಕುಟುಂಬ ಭೇಟಿ ಮಾಡಿದೆ.


    ಪ್ರತ್ಯಂಗಿರಾ ಹೋಮದ ವಿಶೇಷತೆ ಏನು..?
    * ಪ್ರತ್ಯಂಗಿರಾ ಹೋಮದಿಂದ ರಾಜ್ಯ ಗೆಲ್ಲುವ ಶಕ್ತಿ
    * ಯುದ್ಧಕ್ಕೂ ಮೊದಲು ರಾಜ ಮಹಾರಾಜರು ಮಾಡುತ್ತಿದ್ದ ಯಾಗವಿದು
    * ಶತ್ರುಸಂಹಾರಕ್ಕಾಗಿ ಗ್ರಾಮದ ಹೊರಗೆ ಹೋಗಿ ಮಾಡುತ್ತಿದ್ದ ಹೋಮ
    * ಪ್ರತ್ಯಂಗಿರಾ ಹೋಮ ಮಾಡಿದ ಚಕ್ರವರ್ತಿಗಳು ಯುದ್ಧದಲ್ಲಿ ಸೋತ ಉದಾಹರಣೆ ಕಡಿಮೆ
    * ಹದಿನಾರು ಪುರೋಹಿತರು ಶಕ್ತಿ ದೇವತೆ ಆವಾಹನೆ ಮಾಡಿ ಶತ್ರು ಸಂಹಾರ ಮಾಡುವ ಪೂಜೆ
    * ಹದಿನಾರು ಪದಾರ್ಥಗಳನ್ನು ಕುಂಡಕ್ಕೆ ಹಾಕಿ ಪ್ರತ್ಯಂಗಿರಾ ಹೋಮ
    * ಹೋಮ ಕುಂಡಕ್ಕೆ ಮುಷ್ಟಿಯ ಮೂಲಕವೇ ದೃವ್ಯಗಳನ್ನು ಹಾಕಲಾಗುತ್ತೆ.
    * ಹದಿನಾರು ಬಗೆಯ ಅನ್ನವನ್ನು ಮಾಡಿ ದೇವಿಗೆ ನೈವೇದ್ಯ ಅರ್ಪಿಸಲಾಗುತ್ತೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಐತಿಹಾಸಿಕ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆಯಿತು ಪುಷ್ಪ ಯಾಗ!

    ಐತಿಹಾಸಿಕ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆಯಿತು ಪುಷ್ಪ ಯಾಗ!

    ಬೆಂಗಳೂರು: ಆಷಾಢ ಮಾಸ ಹಿನ್ನೆಲೆಯಲ್ಲಿ ಆನೇಕಲ್‍ನ ಐತಿಹಾಸಿಕ ಶ್ರೀ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪುಷ್ಪ ಯಾಗವನ್ನ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿಸಲಾಯಿತು.

    ಸುಮಾರು 10 ಕ್ಕೂ ಹೆಚ್ಚು ವಿವಿಧ ರೀತಿಯ 150 ಕೆಜಿ ಪುಷ್ಪಗಳನ್ನ ಬಳಸಿ ಈ ಪುಷ್ಪಯಾಗವನ್ನ ನಡೆಸಲಾಯಿತು. ಮಂತ್ರ ಪುಷ್ಪಗಳಿಂದ ಪುರೋಹಿತರು ಶ್ರೀ ತಿಮ್ಮರಾಯಸ್ವಾಮಿ ಉತ್ಸವ ಮೂರ್ತಿಗೆ ಹೂಗಳನ್ನ ಸಮರ್ಪಣೆ ಮಾಡಿದರು.

     

    ಆನೇಕಲ್‍ನ ಹಲವು ಭಕ್ತರು ಯಾಗ ಮಾಡಲು ಪುಷ್ಪಗಳನ್ನ ದೇವಾಲಯಕ್ಕೆ ನೀಡಿದ್ದರು. ಅಲ್ಲದೇ ಸುಮಾರು 2 ಗಂಟೆಗಳ ಕಾಲ ವೇದ ಮಂತ್ರ ಘೋಷಣೆಯೊಂದಿಗೆ ಅಪರೂಪದ ಪುಷ್ಪ ಯಾಗವನ್ನ ನಡೆಸಲಾಯಿತು. ತಿಮ್ಮರಾಯಸ್ವಾಮಿ ದೇವಾಲಯದ ಈ ಅಪರೂಪದ ವಿದ್ಯಮಾನವನ್ನ ಸಾವಿರಾರು ಜನ ಕಣ್ಣು ತುಂಬಿಕೊಳ್ಳುವ ಮೂಲಕ ದೇವರ ಕೃಪೆಗೆ ಪಾತ್ರರಾದರು.

  • ಹಿಂದೂ ಯಜ್ಞ-ಯಾಗಾದಿಗಳ ಬಗ್ಗೆ ಕೆ.ಎಸ್ ಭಗವಾನ್ ವ್ಯಂಗ್ಯ

    ಹಿಂದೂ ಯಜ್ಞ-ಯಾಗಾದಿಗಳ ಬಗ್ಗೆ ಕೆ.ಎಸ್ ಭಗವಾನ್ ವ್ಯಂಗ್ಯ

    ಮೈಸೂರು: ವಿಚಾರವಾದಿ ಕೆ.ಎಸ್. ಭಗವಾನ್ ಮತ್ತೆ ಹಿಂದೂ ಆಚಾರ ಪದ್ಧತಿಗಳ ವಿರುದ್ಧ ಕಿಡಿಕಾರಿದ್ದಾರೆ.

    ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭಗವಾನ್, ಹಿಂದೂ ಯಜ್ಞ ಯಾಗದಿಗಳ ಬಗ್ಗೆ ವ್ಯಂಗ್ಯ ವಾಡಿದರು. ಜನರೂ ಅದರಲ್ಲೂ ರಾಜಕಾರಣಿಗಳು ಕೈಗೆ ದಾರ ಕಟ್ಟಿಕೊಳ್ಳುತ್ತಾರೆ. ನಿಜವಾಗಿಯೂ ಆ ದಾರಕ್ಕೆ ಶಕ್ತಿ ಇದೆಯಾ ಎಂದು ಪ್ರಶ್ನಿಸಿದ್ರು.

    ದಾರಕ್ಕೆ ಶಕ್ತಿ ಇದೆ ಅಂತಾದ್ರೆ ಪಾಕಿಸ್ತಾನ ಹಾಗೂ ಚೈನಾದ ಬಾರ್ಡರ್‍ಗೆ ಹೋಗಿ. ಅಲ್ಲಿ ನಿಮ್ಮ ದಾರ ಪ್ರದರ್ಶನ ಮಾಡಿ. ಶತ್ರುಗಳು ಓಡಿ ಹೋಗ್ತಾರಾ? ಓಡಿ ಹೋಗುವುದಾದರೆ ಬಾರ್ಡರ್‍ನಲ್ಲೇ ಹೋಮ ಮಾಡಿ. ಅಲ್ಲಿಯೇ ಕುಳಿತು ಯಜ್ಞ ಯಾಗಾದಿಗಳನ್ನು ಮಾಡಿ ಎಂದು ವ್ಯಂಗ್ಯವಾಡಿದರು.

    ಇದೆಲ್ಲವೂ ಕೂಡ ಕೇವಲ ಮೂಢನಂಬಿಕೆ. ನಮ್ಮ ದೇಶವನ್ನು ಇಂದು ಪಂಚಾಂಗ ಆಳುತ್ತಿದೆ. ಮೊದಲು ಇದನ್ನ ತಡೆಯಯವ ಕೆಲಸ ಆಗಬೇಕಿದೆ. ದಾರ, ಹೋಮದಿಂದ ಎಲ್ಲವೂ ಸಾಧ್ಯವಾದರೆ ನಾನೇ ಮೊದಲು ಯಾಗ ಆರಂಭಿಸುತ್ತೇನೆ. ಹೋಮ ಹವನದಿಂದ ಶತ್ರುಗಳು ಓಡಿ ಹೋದರೆ ನಾನೇ ಯಾಗ ಮಾಡುತ್ತೇನೆ. ಮಿಲಿಟರಿಗೆ ಕೊಡುವ ಹಣವೆಲ್ಲ ಯಾಗಕ್ಕೆ ಖರ್ಚು ಮಾಡಲಿ. ಯೋಧರೆಲ್ಲ ವಾಪಾಸ್ ಬರಲಿ. ಯಜ್ಞದ ಮೂಲಕವೇ ಶತ್ರುಗಳನ್ನ ಸದೆ ಬಡೆಯೋಣ ಎಂದು ಹಿಂದೂ ಸಂಪ್ರದಾಯದ ಬಗ್ಗೆ ಭಗವಾನ್ ಕುಟುಕಿದರು.

  • ಮಳೆ ನಿಲ್ಲಲಿ ಎಂದು ಬೆಂಗ್ಳೂರಲ್ಲಿ ಶರಭ ಯಾಗ

    ಮಳೆ ನಿಲ್ಲಲಿ ಎಂದು ಬೆಂಗ್ಳೂರಲ್ಲಿ ಶರಭ ಯಾಗ

    ಬೆಂಗಳೂರು: ಮಳೆ ಬಂದಿಲ್ಲ ಅಂದರೆ ಜಪ ತಪ, ಯಾಗ, ಹೋಮ, ಹಾವನ, ಕತ್ತೆ-ಕಪ್ಪೆಗಳ ಮದುವೆ ಮಾಡುತ್ತಿದ್ದ ಜನರು ಈಗ ಸಾಕು ಈ ಮಳೆಯ ಅವಾಂತರ ಅಂತಾ ವರುಣನ ಆರ್ಭಟವನ್ನು ನಿಲ್ಲಿಸಲು ಶರಭ ಯಾಗವನ್ನು ಮಾಡುತ್ತಿದ್ದಾರೆ.

    ಕಳೆದ ಎರಡೂವರೆ ತಿಂಗಳಲ್ಲಿ ನಿರಂತರವಾಗಿ ಸುರಿದ ಮಳೆಗೆ ಜನರು ಅಬ್ಬಾ! ಸಾಕು ಈ ಮಳೆ ಅಂತಾ ಭಯದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ಮಳೆಯಿಂದ ಜನರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಲಕ್ಷ್ಮೀ ಶ್ರೀನಿವಾಸ್ ಗುರೂಜಿ ಅವರು ಕಳೆದ ಮೂರು ದಿನಗಳಿಂದ ಒಂದು ಗುಹೆಯಲ್ಲಿ ಕುಳಿತು ಪ್ರಾರ್ಥನೆ ಮಾಡುತ್ತಾ ಶರಭ ಯಾಗವನ್ನು ಮಾಡುತ್ತಿದ್ದಾರೆ.

    ಶರಭ ಯಾಗವನ್ನು ಶರಭದೇವರ ಹೆಸರಿನಲ್ಲಿ ಮಾಡುತ್ತಾರೆ. ಪಂಚಭೂತಗಳ ನಿಯಂತ್ರಣವನ್ನು ಈ ಶರಭ ಯಾಗದಿಂದ ಮಾಡಬಹುದು. ಮಳೆ ಬರಿಸಲು ಪ್ರಜ್ಜನ್ನ ಯಾಗ ಮಾಡುತ್ತಾರೆ. ಈ ಶರಭ ಯಾಗದಿಂದ ಮಳೆಯನ್ನು ನಿಲ್ಲಿಸಬಹುದು ಹಾಗೂ ಮಳೆಯನ್ನು ತಡೆಯಲುಬಹುದು. ಈ ಹಿಂದೆ ರಾಜರೂ ಈ ಯಾಗವನ್ನು ಮಾಡುಸುತ್ತಿದ್ದರು. ನಾವು ಈ ಯಾಗ ಮಾಡಿ ಮಳೆ ನಿಲ್ಲಿಸಿದ ಉದಾಹರಣೆಗಳು ಇದೆ ಅಂತಾ ಲಕ್ಷ್ಮೀ ಶ್ರೀನಿವಾಸ್ ಗುರೂಜಿ ಹೇಳಿದ್ದಾರೆ.

    ಈ ವರ್ಷದ ದಾಖಲೆಯ ಮಳೆ ಅನೇಕ ತೊಂದರೆಗಳನ್ನು ಮಾಡಿದೆ. ಅತಿವೃಷ್ಠಿಯಿಂದ ಜನರ ಜೀವನ ಅಸ್ತವ್ಯಸ್ತವಾಗಿದ್ದು, ಇನ್ನೂ ಸುಧಾರಿಸಿಕೊಳ್ಳುತ್ತಿದ್ದಾರೆ. ಅಕ್ಟೋಬರ್ 18ರ ನಂತರ ಮಳೆ ಕಡಿಮೆಯಾಗುತ್ತೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.