Tag: ಯಾವ ಮೋಹನ ಮುರಳಿ ಕರೆಯಿತು

  • ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾದ ಟೈಟಲ್ ಸಾಂಗ್ ರಿಲೀಸ್

    ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾದ ಟೈಟಲ್ ಸಾಂಗ್ ರಿಲೀಸ್

    ಹೆಸರಾಂತ ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ ‘ಯಾವ ಮೋಹನ ಮುರಳಿ ಕರೆಯಿತು’ (Yaava Mohana Murali Kareyitu) ಎಂಬ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ವಿ.ನಾಗೇಂದ್ರಪ್ರಸಾದ್ ಬರೆದಿರುವ ‘ಯಾವ ಮೋಹನ ಮುರಳಿ ಕರೆಯಿತು’ ಟೈಟಲ್  (Title) ಸಾಂಗ್ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

    ಅಂಗವಿಕಲ ಹುಡುಗಿ  ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರವಿದು. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿದೆ. ಆದರೆ ಈ ಕಥೆ ವಿಭಿನ್ನ. ಅನಿಲ್ ಸಿ.ಜೆ ಸಂಗೀತ ನೀಡಿರುವ ಎಲ್ಲಾ ಹಾಡುಗಳು ಚೆನ್ನಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ವಿಶ್ವಾಸ್ ಕೃಷ್ಣ ತಿಳಿಸಿದರು .

    ನಾನು ಮೂಲತಃ ಉದ್ಯಮಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಹಾಡು ಬಿಡುಗಡೆ ಮಾಡಿಕೊಟ್ಟ ಉಮಾಪತಿ ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ಶರಣಪ್ಪ ಗೌರಮ್ಮ. ಚಿತ್ರದ ಪ್ರಮುಖ ಪಾತ್ರಧಾರಿ ಬೇಬಿ ಪ್ರಕೃತಿ, ನಾಯಕ ಮಾಧವ (Madhava), ನಾಯಕಿ ಸ್ವಪ್ನ ಶೆಟ್ಟಿಗಾರ್, ಪಟೇಲ್ ವರುಣ್ ರಾಜ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

     

    ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಅನಿಲ್ ಸಿ ಜೆ, ಟೈಟಲ್ ಸಾಂಗ್ ಕುರಿತು ವಿ.ನಾಗೇಂದ್ರ ಪ್ರಸಾದ್ ಮಾತನಾಡಿದರು. ಆನಂದ್ ಆಡಿಯೋ ಶ್ಯಾಮ್, ಗೀತರಚನೆಕಾರ ಗೌಸ್ ಫಿರ್ ಹಾಗೂ ರಾಕಿ (ಶ್ವಾನ) ಟ್ರೈನರ್ ಸ್ವಾಮಿ  ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.  ರಾಕಿ(ಶ್ವಾನ) ಸಹ ವೇದಿಕೆ ಮೇಲೆ ಕುಳಿತು ಸಮಾರಂಭ ವೀಕ್ಷಿಸಿದ್ದು ವಿಶೇಷವಾಗಿತ್ತು.

  • ಕನ್ನಡದಲ್ಲಿ ಬರುತ್ತಿದೆ ಮತ್ತೊಂದು ಶ್ವಾನದ ಪ್ರೀತಿ ಕಥೆ

    ಕನ್ನಡದಲ್ಲಿ ಬರುತ್ತಿದೆ ಮತ್ತೊಂದು ಶ್ವಾನದ ಪ್ರೀತಿ ಕಥೆ

    ವಿ ಗೋಪಾಲಕೃಷ್ಣ ಅಡಿಗರು ಬರೆದಿರುವ ‘ಯಾವ ಮೋಹನ ಮುರಳಿ ಕರೆಯಿತು’ (Yaava Mohana Murali Kareyitu) ಎಂಬ ಹಾಡು ಬಹಳ ಜನಪ್ರಿಯ. ಈಗ ಈ ಹಾಡಿನ ಮೊದಲ ಸಾಲು ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚಿಗೆ ‘ಯಾವ ಮೋಹನ ಮುರಳಿ ಕರೆಯಿತು’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ  ಉಪಾಧ್ಯಕ್ಷರಾದ ಶಿಲ್ಪ ಶ್ರೀನಿವಾಸ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

    ಯಾವ ಮೋಹನ ಮುರಳಿ ಕರೆಯಿತು ಮನುಷ್ಯ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರ. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿದೆಯಾದರೂ ಇದು ಸ್ವಲ್ಪ ಭಿನ್ನ. ಭರವಸೆಯ ಹುಡುಕಾಟದಲ್ಲಿರುವ ಅಂಗವಿಕಲ ಹುಡುಗಿಗೆ ಪ್ರೀತಿ ಅರಸಿ ಹೊರಟಿರುವ ಶ್ವಾನ ಸಿಗುತ್ತದೆ. ಇಬ್ಬರ ನಡುವೆ ಉತ್ತಮ ಬಾಂಧವ್ಯವಿರುತ್ತದೆ. ಆ ಸಮಯದಲ್ಲಿ ಇವರಿಬ್ಬರ ನಡುವೆ ಮತ್ತೊಬ್ಬ ವ್ಯಕ್ತಿ ಪ್ರವೇಶಿಸುತ್ತಾನೆ. ನಂತರ ಏನಾಗುತ್ತದೆ ಎಂಬುದೆ ಚಿತ್ರದ ಕಥೆ. ಈಗಾಗಲೇ ಚಿತ್ರೀಕರಣ ಮುಗಿದು ಬಿಡುಗಡೆಗೆ ಸಿದ್ದವಾಗಿದೆ. ಮೂರು ಹಾಡುಗಳಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರವೆಂದರು ನಿರ್ದೇಶಕ (Vishwas Krishna) ವಿಶ್ವಾಸ್ ಕೃಷ್ಣ. ಇದನ್ನೂ ಓದಿ:ಅಭಿಷೇಕ್ ಅಂಬರೀಶ್ ಮದುವೆ : ಭಾಗಿಯಾಗಲಿದೆ ತಾರಾ ದಂಡು

    ನಾನು ಉದ್ಯಮಿ‌. ಕಿಕ್ ಬಾಕ್ಸಿಂಗ್ ನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದೇನೆ.  ಸಿನಿಮಾ ಬಗ್ಗೆ ಅಷ್ಟು ಗೊತ್ತಿಲ್ಲ. ಸಾಹಿತಿ ಗೌಸ್ ಫಿರ್ ಅವರ ಮೂಲಕ ನಿರ್ದೇಶಕರ ಪರಿಚಯವಾಯಿತು. ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದು ನಿರ್ಮಾಪಕ ಶರಣಪ್ಪ ಗೌರಮ್ಮ(Sharanappa Gouramma)  ತಿಳಿಸಿದರು.

    ಚಿತ್ರದ ಪ್ರಮುಖ ಪಾತ್ರಧಾರಿ ಬೇಬಿ ಪ್ರಕೃತಿ, ನಾಯಕ ಮಾಧವ, ನಾಯಕಿ ಸ್ವಪ್ನಾ ಶೆಟ್ಟಿಗಾರ್, ಪಟೇಲ್ ವರುಣ್ ರಾಜ್ ಹಾಗೂ ಸಂಗೀತ ನಿರ್ದೇಶಕ ಅನಿಲ್ ಸಿ ಜೆ ಚಿತ್ರದ ಕುರಿತು ಮಾತನಾಡಿದರು. ಪತ್ರಿಕಾಗೋಷ್ಠಿಗೆ ರಾಕಿ(ಶ್ವಾನ) ಕೂಡ ಆಗಮಿಸಿತ್ತು. ರಾಕಿ ಟ್ರೈನರ್ ಸ್ವಾಮಿ, ರಾಕಿಯ ದಿನಚರಿ ಬಗ್ಗೆ ವಿವರಣೆ ನೀಡಿದರು.