Tag: ಯಾಸಿನ್ ಮಲಿಕ್

  • ಉಗ್ರ ಹಫೀಜ್‌ ಸಯೀದ್‌ ಜೊತೆ ಸಭೆ ನಡೆಸಿದ್ದಕ್ಕೆ ಸಿಂಗ್‌ ನನಗೆ ಥ್ಯಾಂಕ್ಸ್‌ ಹೇಳಿದ್ದರು: ಭಯೋತ್ಪಾದಕ ಯಾಸಿನ್ ಮಲಿಕ್

    ಉಗ್ರ ಹಫೀಜ್‌ ಸಯೀದ್‌ ಜೊತೆ ಸಭೆ ನಡೆಸಿದ್ದಕ್ಕೆ ಸಿಂಗ್‌ ನನಗೆ ಥ್ಯಾಂಕ್ಸ್‌ ಹೇಳಿದ್ದರು: ಭಯೋತ್ಪಾದಕ ಯಾಸಿನ್ ಮಲಿಕ್

    – ಭಾರತದ ಸರ್ಕಾರದ ಕೋರಿಕೆ ಮೇಲೆ ಪಾಕ್‌ನಲ್ಲಿ ಉಗ್ರರ ಜೊತೆ ಸಭೆ
    – ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಮಲಿಕ್‌ ಉಲ್ಲೇಖ

    ನವದೆಹಲಿ: ಲಷ್ಕರ್-ಎ-ತೈಬಾ ((LeT) ಸಂಸ್ಥಾಪಕ ಮತ್ತು 26/11 ದಾಳಿಯ ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ನನ್ನು (Hafiz Saeed) ಭೇಟಿಯಾದ ನಂತರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ವೈಯಕ್ತಿಕವಾಗಿ ತನಗೆ ಧನ್ಯವಾದ ಹೇಳಿದ್ದರು ಎಂದು ಭಯೋತ್ಪಾದಕ ಯಾಸಿನ್ ಮಲಿಕ್ (Yasin Malik) ಹೇಳಿದ್ದು ಈಗ ದೇಶದಲ್ಲಿ ಬಿರುಗಾಳಿ ಎಬ್ಬಿಸಿದೆ.

    ಹೌದು. ಉಗ್ರರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಸದ್ಯ ತಿಹಾರ್‌ ಜೈಲಿನಲ್ಲಿರುವ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ (JKLF) ಭಯೋತ್ಪಾದಕ ಯಾಸಿನ್ ಮಲಿಕ್ 2006 ರಲ್ಲಿ ಪಾಕಿಸ್ತಾನದಲ್ಲಿ ಹಫೀಜ್ ಸಯೀದ್‌ನನ್ನು ಭೇಟಿಯಾಗಿದ್ದ.

    ಹಫೀಜ್ ಸಯೀದ್‌ ಭೇಟಿಯ ಬಳಿಕ ಮನಮೋಹನ್‌ ಸಿಂಗ್‌ ಅವರು ನನಗೆ ವೈಯಕ್ತಿಕವಾಗಿ ಧನ್ಯವಾದ ಹೇಳಿದ್ದರು ಎಂದು ಯಾಸಿನ್ ಮಲಿಕ್ ಆಗಸ್ಟ್ 25 ರಂದು ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾನೆ. ಈ ಭೇಟಿಯನ್ನು ನಾನು ನಿಗದಿ ಮಾಡಿರಲಿಲ್ಲ. ಬದಲಾಗಿ ಹಿರಿಯ ಭಾರತೀಯ ಗುಪ್ತಚರ ಅಧಿಕಾರಿಗಳ ಕೋರಿಕೆಯ ಮೇರೆಗೆ ಉಗ್ರರ ಜೊತೆ ಸಭೆ ಮಾಡಿದ್ದೆ ಎಂದು ತಿಳಿಸಿದ್ದಾನೆ.

    ಉಗ್ರ ಯಾಸಿನ್‌ ಮಲಿಕ್‌ ಕೈ ಕುಲುಕುತ್ತಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌
    ಉಗ್ರ ಯಾಸಿನ್‌ ಮಲಿಕ್‌ ಕೈ ಕುಲುಕುತ್ತಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌

    ಅಫಿಡವಿಟ್‌ನಲ್ಲಿ ಹೇಳಿದ್ದೇನು?
    2005 ರಲ್ಲಿ ಕಾಶ್ಮೀರದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಬಳಿಕ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದೆ. ಈ ಭೇಟಿಗೂ ಮೊದಲು ಆಗಿನ ಗುಪ್ತಚರ ದಳದ (ಐಬಿ) ವಿಶೇಷ ನಿರ್ದೇಶಕ ವಿ.ಕೆ. ಜೋಶಿ ಅವರು ದೆಹಲಿಯಲ್ಲಿ ನನ್ನನ್ನು ಭೇಟಿ ಮಾಡಿದ್ದರು.

    ಈ ಭೇಟಿಯ ಸಂದರ್ಭದಲ್ಲಿ ಪಾಕಿಸ್ತಾನ ರಾಜಕೀಯ ನಾಯಕರನ್ನು ಮಾತ್ರವಲ್ಲದೇ ಉಗ್ರ ಸಂಘಟನೆಗಳ ಜೊತೆ ಮಾತನಾಡಿ ಶಾಂತಿಗೆ ಸಹಕಾರ ನೀಡುವಂತೆ ಕೇಳಿಕೊಳ್ಳಬೇಕು ಎಂದು ಅವರು ನನ್ನ ಜೊತೆ ವಿನಂತಿ ಮಾಡಿದ್ದರು. ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಶಾಂತಿ ಪ್ರಯತ್ನದ ಭಾಗವಾಗಿ ಈ ಕೆಲಸ ಮಾಡಬೇಕು ಎಂದು ಕೇಳಿಕೊಂಡಿದ್ದರು. ಇದನ್ನೂ ಓದಿ:  ಭಾರತದ ಸಿಂಧೂರ ದಾಳಿಗೆ ಮಸೂದ್ ಕುಟುಂಬ ಕಳೆದುಕೊಂಡ – ಪಾಕ್ ಉಗ್ರ ಇಲ್ಯಾಸ್ ಸಾಕ್ಷ್ಯ

    ಮಾತುಕತೆಯ ವೇಳೆ ಭಯೋತ್ಪಾದಕ ನಾಯಕರ ಜೊತೆ ಮಾತುಕತೆ ನಡೆಸದ ಹೊರತು ಶಾಂತಿ ಮಾತುಕತೆ ಪೂರ್ಣವಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೆ. ಸರ್ಕಾರದ ವಿನಂತಿಯ ಮೇರೆಗೆ ಪಾಕಿಸ್ತಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಯೀದ್ ಮತ್ತು ಯುನೈಟೆಡ್ ಜಿಹಾದ್ ಕೌನ್ಸಿಲ್‌ನ ಇತರ ನಾಯಕರನ್ನು ಭೇಟಿ ಮಾಡಲು ಒಪ್ಪಿಕೊಂಡಿದ್ದೆ.

    ಉಗ್ರರ ಜೊತೆ ಸಭೆ ನಡೆಸಿ ನಾನು ಫೆಬ್ರವರಿ, 2006 ರಲ್ಲಿ ಭಾರತಕ್ಕೆ ಮರಳಿದೆ. ಮರಳಿದ ಬಳಿಕ ಐಬಿ ವಿಶೇಷ ನಿರ್ದೇಶಕ ವಿ ಕೆ ಜೋಶಿ ಅವರು ಮಾತುಕತೆಯ ಭಾಗವಾಗಿ ಹೋಟೆಲ್‌ನಲ್ಲಿ ನನ್ನನ್ನು ಭೇಟಿಯಾಗಿ ಪ್ರಧಾನಿಗೆ ತಕ್ಷಣ ವಿವರಿಸುವಂತೆ ವಿನಂತಿಸಿದರು. ಅಂದು ಸಂಜೆ ನಾನು ಆಗಿನ ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂ.ಕೆ. ನಾರಾಯಣನ್ ಅವರ ಸಮ್ಮುಖದಲ್ಲಿ ಮನಮೋಹನ್‌ ಸಿಂಗ್‌ ಅವರನ್ನು ಭೇಟಿಯಾದೆ.

    ಈ ಸಭೆಯಲ್ಲಿ ಪಾಕಿಸ್ತಾನದ ಉಗ್ರರ ಜೊತೆ ಮಾತುಕತೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ನಾನು ತೋರಿಸಿದ ಪ್ರಯತ್ನ, ತಾಳ್ಮೆ ಮತ್ತು ಸಮರ್ಪಣೆಗೆ ಸಿಂಗ್ ಅವರು ನನಗೆ ವೈಯಕ್ತಿಕವಾಗಿ ಧನ್ಯವಾದ ಅರ್ಪಿಸಿದರು. ಮನಮೋಹನ್‌ ಸಿಂಗ್ ನನ್ನ ಕೈ ಕುಲುಕಿ “ಕಾಶ್ಮೀರದಲ್ಲಿ ಅಹಿಂಸಾತ್ಮಕ ಚಳವಳಿಯ ಪಿತಾಮಹ” ಎಂದು ನನ್ನನ್ನು ಕರೆದರು.

    ಮನ ಮೋಹನ್‌ ಸಿಂಗ್‌ ಮಾತ್ರವಲ್ಲ ಮಲಿಕ್ ತನ್ನ ಅಫಿಡವಿಟ್‌ನಲ್ಲಿ, ಅಟಲ್ ಬಿಹಾರಿ ವಾಜಪೇಯಿ, ಸೋನಿಯಾ ಗಾಂಧಿ, ಪಿ ಚಿದಂಬರಂ, ಐಕೆ ಗುಜ್ರಾಲ್ ಮತ್ತು ರಾಜೇಶ್ ಪೈಲಟ್ ಸೇರಿದಂತೆ ಹಲವಾರು ಉನ್ನತ ರಾಜಕೀಯ ನಾಯಕರೊಂದಿಗಿನ ಮಾತುಕತೆಯ ಬಗ್ಗೆ ಉಲ್ಲೇಖಿಸಿದ್ದಾನೆ.

    1990 ರಲ್ಲಿ ನನ್ನ ಬಂಧನದ ನಂತರ, ವಿಪಿ ಸಿಂಗ್, ಚಂದ್ರಶೇಖರ್, ಪಿವಿ ನರಸಿಂಹ ರಾವ್, ಎಚ್‌ಡಿ ದೇವಗೌಡ, ಇಂದರ್ ಕುಮಾರ್ ಗುಜ್ರಾಲ್, ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಇದ್ದಾಗಲೂ ನಾನು ಸರ್ಕಾರದ ಜೊತೆ ಮಾತನಾಡುತ್ತಿದ್ದೆ. ಅಧಿಕಾರದಲ್ಲಿರುವ ಸರ್ಕಾರಗಳಿಂದ ನಾನು ಸಹಾಯ ಪಡೆದುಕೊಂಡಿದ್ದೆ ಮತ್ತು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಮಾತನಾಡುತ್ತಿದ್ದೆ ಎಂದಿದ್ದಾನೆ.

    1990 ರ ಜನವರಿಯಲ್ಲಿ ಶ್ರೀನಗರದಲ್ಲಿ ನಾಲ್ವರು ಭಾರತೀಯ ವಾಯುಪಡೆಯ ಅಧಿಕಾರಿಗಳನ್ನು ಕೊಂದ ಆರೋಪ ಮಲಿಕ್ ಮೇಲಿದೆ. ಮಾಜಿ ಕೇಂದ್ರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬಿಯಾ ಸಯೀದ್ ಅವರ ಅಪಹರಣ, 1990 ರಲ್ಲಿ ಕಾಶ್ಮೀರದಲ್ಲಿ ಪಂಡಿತರ ನರಮೇಧ ಮಾಡಿರುವ ಆರೋಪವೂ ಈತನ ಮೇಲಿದೆ.

    ಆಗಸ್ಟ್ 11 ರಂದು, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಮರಣದಂಡನೆ ವಿಧಿಸುವಂತೆ ಕೇಳಿದೆ. ನ್ಯಾಯಾಲಯವು ಯಾಸಿನ್ ಮಲಿಕ್‌ಗೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿ ಪ್ರಕರಣವನ್ನು ನವೆಂಬರ್ 10ಕ್ಕೆ ಮುಂದೂಡಿದೆ.

    2022 ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಯಾಸಿನ್ ಮಲಿಕ್, ದೇಶದ ಸಾರ್ವಭೌಮತ್ವಕ್ಕೆ ಬೆದರಿಕೆಯೊಡ್ಡುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿತ್ವಕ್ಕೆ ನಿಕಟ ಸಂಬಂಧ ಹೊಂದಿದ್ದಾನೆ ಎಂದು ಕೇಂದ್ರ ಸರ್ಕಾರ ಹೇಳಿದೆ.

  • ಸಂಸತ್‌ನಲ್ಲಿ ಯಾಸಿನ್‌ ಬಗ್ಗೆ ಚರ್ಚಿಸಿ: ರಾಹುಲ್‌ಗೆ ಪತ್ನಿ ಮುಶಾಲ್ ಹುಸೈನ್ ಪತ್ರ

    ಸಂಸತ್‌ನಲ್ಲಿ ಯಾಸಿನ್‌ ಬಗ್ಗೆ ಚರ್ಚಿಸಿ: ರಾಹುಲ್‌ಗೆ ಪತ್ನಿ ಮುಶಾಲ್ ಹುಸೈನ್ ಪತ್ರ

    ನವದೆಹಲಿ: ಸಂಸತ್‌ ಅಧಿವೇಶನದಲ್ಲಿ ಯಾಸಿನ್‌ ಮಲಿಕ್ (Yasin Malik) ಬಗ್ಗೆ ಚರ್ಚೆ ಮಾಡಬೇಕೆಂದು ಕೋರಿ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರಿಗೆ ಯಾಸಿನ್‌ ಪತ್ನಿ ಮುಶಾಲ್ ಹುಸೈನ್ ಮಲಿಕ್ (Mushaal Hussein Mullick) ಪತ್ರ ಬರೆದಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಶಾಂತಿ ನೆಲೆಸುವಂತೆ ಮಾಡುವುದು ಯಾಸಿನ್ ಮಲಿಕ್‌ಗೆ ಮಾತ್ರ ಸಾಧ್ಯ ಎಂದ ಪತ್ನಿ ಪತ್ರದಲ್ಲಿ ತಿಳಿಸಿದ್ದಾರೆ.

    ಪಾಕಿಸ್ತಾನಿ ಚಿತ್ರಕಲಾ ಕಲಾವಿದೆ ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿರುವ ಮುಶಾಲ್ ಹುಸೈನ್ ಮಾನವ ಹಕ್ಕುಗಳು ಮತ್ತು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಪ್ರಧಾನ ಮಂತ್ರಿಯ ವಿಶೇಷ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಜೈಶಂಕರ್‌ ಸುದ್ದಿಗೋಷ್ಠಿ ಪ್ರಸಾರ – ಕೆನಡಾದಲ್ಲಿ ಆಸ್ಟ್ರೇಲಿಯಾ ಟುಡೇ ಬ್ಯಾನ್‌

    ರಾಹುಲ್‌ಗೆ ಪತ್ರ ಬರೆದಿದ್ದಕ್ಕೆ ಬಿಜೆಪಿ ಕಿಡಿಕಾರಿದೆ. ಜಮ್ಮು ಕಾಶ್ಮೀರದಲ್ಲಿ ಅಮಾಯಕರನ್ನು ಕೊಂದವರು ಇಂದು ರಾಹುಲ್ ಗಾಂಧಿಗೆ ಪತ್ರ ಬರೆಯುತ್ತಿದ್ದಾರೆ. ಇವರೆಲ್ಲಾ ರಾಹುಲ್ ಗಾಂಧಿ ಬೆಂಬಲ ಕೇಳುತ್ತಿರುವುದು ಯಾಕೆ ಎಂದು ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯಾ ಪ್ರಶ್ನಿಸಿದ್ದಾರೆ.

    ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಯಾಸಿನ್ ಮಲಿಕ್ ಅವರ ಪತ್ನಿ ರಾಹುಲ್ ಗಾಂಧಿಗೆ ಪತ್ರ ಬರೆದಿರುವುದರಲ್ಲಿ ಆಶ್ಚರ್ಯ ಏನಿಲ್ಲ. ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ವಾಯುಪಡೆಯ ಅಧಿಕಾರಿಗಳನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದಲ್ಲಿ ಮಲಿಕ್‌ ದೋಷಿಯಾಗಿದ್ದಾನೆ. ಡಾ ಮನಮೋಹನ್ ಸಿಂಗ್ ಆತನನ್ನು ತಮ್ಮ ಸಲಹೆಗಾರರನ್ನಾಗಿ ನೇಮಿಸಿದ್ದರು ಮತ್ತು ದೆಹಲಿ ಮಾಧ್ಯಮಗಳು ಆತನನ್ನು ‘ಯೂತ್ ಐಕಾನ್’ ಎಂದು ಗೌರವಿಸುತ್ತಿವೆ. ಕಾಂಗ್ರೆಸ್ ಯಾವಾಗಲೂ ಭಯೋತ್ಪಾದಕರ ಜೊತೆ ನಿಂತಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

    ಜಮ್ಮು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್‌ಎಫ್) ಮುಖ್ಯಸ್ಥ ಯಾಸಿನ್‌ ಮಲಿಕ್‌ನನ್ನು ದೇಶದ್ರೋಹ ಆರೋಪದ ಅಡಿ ಎನ್‌ಐಎ ಬಂಧಿಸಿದೆ. ಜಮ್ಮು ಕಾಶ್ಮೀರದಲ್ಲಿ ಪಂಡಿತರ ನರಮೇಧ ಪ್ರಕರಣದಲ್ಲಿ ಭಾಗಿಯಾಗಿರುವ ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಈತನಿಗೆ ಗಲ್ಲು ಶಿಕ್ಷೆ ವಿಧಿಸುಂತೆ ಎನ್‌ಐಎ ಕೋರ್ಟ್‌ ಮನವಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್‌ ಮಲಿಕ್‌ ದೆಹಲಿ ಹೈಕೋರ್ಟ್‌ನಲ್ಲಿ ವಾದಿಸುತ್ತಿದ್ದಾನೆ.

     

  • ತಿಹಾರ್‌ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ – ಯಾಸಿನ್‌ ಮಲಿಕ್‌ ಆಸ್ಪತ್ರೆಗೆ ದಾಖಲು

    ತಿಹಾರ್‌ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ – ಯಾಸಿನ್‌ ಮಲಿಕ್‌ ಆಸ್ಪತ್ರೆಗೆ ದಾಖಲು

    ನವದೆಹಲಿ: ತಿಹಾರ್‌ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಯಾಸಿನ್‌ ಮಲಿಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ರಕ್ತದ ಒತ್ತಡದಲ್ಲಿ ಏರುಪೇರಾದ ಕಾರಣ ಯಾಸಿನ್‌ ಮಲಿಕ್‌ನನ್ನು ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ತನಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿಲ್ಲ ಎಂದು ವೈದ್ಯರಿಗೆ ಯಾಸಿನ್‌ ಪತ್ರ ಬರೆದಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಸದನದಲ್ಲಿ ಕಾಗದ ಎಸೆದ ಆಪ್ ಸಂಸದ ಅಮಾನತು

    ತನ್ನ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ಆರೋಪಿಸಿ ಮಲಿಕ್ ಜುಲೈ 22 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

    ಮಲಿಕ್ ಕಳೆದ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಐವಿ ಮೂಲಕ ದ್ರವಾಹಾರವನ್ನು ನೀಡಲಾಗುತ್ತಿದೆ. ವೈದ್ಯರು ಮಲಿಕ್‌ ಆರೋಗ್ಯವನ್ನು ನಿಯಮಿತವಾಗಿ ತಪಾಸಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಚಟರ್ಜಿ ನನ್ನ ಮನೆಯನ್ನು ಮಿನಿ ಬ್ಯಾಂಕ್ ಆಗಿ ಬಳಸಿಕೊಂಡಿದ್ದರು: ಆಪ್ತೆ ಅರ್ಪಿತಾ

    ಸ್ವಾತಂತ್ರ್ಯ ಹೋರಾಟದ ಹೆಸರಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ನಿಧಿ ಸಂಗ್ರಹಿಸುತ್ತಿದ್ದ ಆರೋಪದಡಿ ಮಲಿಕ್‌ ಜೈಲುಪಾಲಾಗಿದ್ದು, ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

    ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

    ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‍ನನ್ನು ಬೆಂಬಲಿಸಿ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಟ್ವೀಟ್ ಮಾಡಿದ್ದಕ್ಕೆ ಭಾರತೀಯ ಕ್ರಿಕೆಟಿಗ ಅಮಿತ್ ಮಿಶ್ರಾ ಕಿಡಿಕಾರಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರವನ್ನು ಬೆಂಬಲಿಸಿದ್ದಕ್ಕಾಗಿ ಮಲಿಕ್‍ಗೆ ಮರಣದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬುಧವಾರ ನ್ಯಾಯಾಲಯವನ್ನು ಒತ್ತಾಯಿಸಿತ್ತು. ಇದನ್ನೂ ಓದಿ: ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    ಈ ಬಗ್ಗೆ ಟ್ವೀಟ್ ಮಾಡಿದ್ದ ಅಫ್ರಿದಿ, ಮಾನವ ಹಕ್ಕುಗಳ ದುರುಪಯೋಗದ ವಿರುದ್ಧ ವಿಮರ್ಶಾತ್ಮಕ ಧ್ವನಿಗಳನ್ನು ಮೌನಗೊಳಿಸಲು ಭಾರತದ ನಿರಂತರ ಪ್ರಯತ್ನಗಳು ನಿಷ್ಪ್ರಯೋಜಕವಾಗಿದೆ. ಯಾಸಿನ್ ಮಲಿಕ್ ವಿರುದ್ಧದ ಆರೋಪಗಳು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಕ್ಕೆ ಅಡ್ಡಿಯಾಗದಿರಲಿ. ಕಾಶ್ಮೀರಿ ನಾಯಕರ ವಿರುದ್ಧ ಅನ್ಯಾಯ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ನಿಗಾ ಇಡುವಂತೆ ವಿಶ್ವಸಂಸ್ಥೆಗೆ ಒತ್ತಾಯಿಸುತ್ತೇವೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

    ಇದಕ್ಕೆ ಪ್ರತ್ಯುತ್ತರವಾಗಿ, ಅಮಿತ್ ಮಿಶ್ರಾ ಅವರು ಟ್ವೀಟ್ ಮಾಡಿ, ಆತ್ಮೀಯ ಶಾಹಿದ್ ಅಫ್ರಿದಿ ಅವರೇ ಯಾಸಿನ್ ಮಲಿಕ್ ಸ್ವತಃ ನ್ಯಾಯಾಲಯದ ದಾಖಲೆಯಲ್ಲಿ ತಪ್ಪೋಪ್ಪಿಕೊಂಡಿದ್ದಾನೆ. ನಿಮ್ಮ ಜನ್ಮದಿನಾಂಕದಂತೆ ಎಲ್ಲವೂ ದಾರಿತಪ್ಪಿಸುವುದಿಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಭಾರಿ ಭದ್ರತೆಯಲ್ಲಿದ್ದ ಯಾಸಿನ್ ಮಲಿಕ್ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ), 18 (ಭಯೋತ್ಪಾದನಾ ಕೃತ್ಯ ಎಸಗಲು ಸಂಚು) ಮತ್ತು 20 (ಭಯೋತ್ಪಾದನಾ ಸಂಘಟನೆಯ ಸದಸ್ಯನಾಗಿರುವುದು), ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 (ಅಪರಾಧ ಸಂಚು) ಮತ್ತು 124 (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕೋರ್ಟ್ ವಿಚಾರಣೆಯಲ್ಲಿ ಕೃತ್ಯದ ಬಗ್ಗೆ ಯಸಿನ್ ಮಲಿಕ್ ತಪ್ಪೊಪ್ಪಿಕೊಂಡಿದ್ದ. ಎನ್‍ಐಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

  • ಯಾಸಿನ್ ಮಲಿಕ್ ಕರಾಳ ಇತಿಹಾಸ ಏನು? ಏನೇನು ಅಪರಾಧ ಎಸಗಿದ್ದ?

    ಯಾಸಿನ್ ಮಲಿಕ್ ಕರಾಳ ಇತಿಹಾಸ ಏನು? ಏನೇನು ಅಪರಾಧ ಎಸಗಿದ್ದ?

    ನವದೆಹಲಿ: ಕಳೆದೊಂದು ವಾರದಿಂದ ಯಾಸಿನ್ ಮಲಿಕ್ ಹೆಸರು ಭಾರೀ ಚರ್ಚೆಯಲ್ಲಿದೆ. ಪ್ರತ್ಯೇಕ ಕಾಶ್ಮೀರ ಹೋರಾಟಗಾರನಾಗಿದ್ದ ಈತನಿಗೆ ಎನ್‍ಐಎ ವಿಶೇಷ ಕೋರ್ಟ್ ಬುಧವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಹತ್ತು ಲಕ್ಷ ರೂ. ದಂಡ ವಿಧಿಸಿದೆ. ಒಂದು ಸಮಯದಲ್ಲಿ ಇಡೀ ಕಾಶ್ಮೀರವನ್ನೇ ನಡುಗಿಸಿದ ಇಂಡಿಯಾದ ಈ ಮೊಸ್ಟ್ ವಾಟೆಂಡ್ ಕ್ರಿಮಿನಲ್ ಅರೆಸ್ಟ್ ಆಗಿದ್ದ. ಈತನ ಇತಿಹಾಸವೇ ಒಂದು ರೋಚಕ ವಿಚಾರ ಅಷ್ಟಕ್ಕೂ ಯಾರು ಈ ಯಾಸಿನ್ ಮಲೀಕ್, ಏನು ಈತನ ಕರಾಳ ಇತಿಹಾಸ? ಜೀವಾವಧಿ ಶಿಕ್ಷೆ ವಿಧಿಸಲು ಕಾರಣಗಳೇನು ಎನ್ನುವ ಪೂರ್ತಿ ವಿವರ ಇಲ್ಲಿದೆ.

    ಯಾಸಿನ್ ಮಲಿಕ್ ಮೇಲೆ ಎನ್‍ಐಎ ಪೊಲೀಸರು ಹಲವು ಆರೋಪಗಳನ್ನು ಹೊರಿಸಿ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದರು. ಒಂದು ಸಮಯದಲ್ಲಿ ಕಾಶ್ಮೀರದಲ್ಲಿ ಅಟ್ಟಹಾಸ ಮೆರೆದಿದ್ದ ಈ ನಾಯಕ ಎನ್‍ಐಎ ಮುಂದೆ ತನ್ನೇಲ್ಲ ತಪ್ಪುಗಳನ್ನು ಒಪ್ಪಿಕೊಂಡು ಶರಣಾಗಿದ್ದಾನೆ. ಇದನ್ನೂ ಓದಿ: ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರೆ: ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯದ ಜೊತೆ ಒಪ್ಪಂದ 

    ಅಪರಾಧಗಳೇನು?
    ಯಾಸಿನ್ ಮಲಿಕ್, ಒಬ್ಬ ಸಾಮಾನ್ಯ ಅಪರಾಧಿಯಲ್ಲ. ಈತ ಭಾರತದ ಭಯೋತ್ಪಾದಕರ ಪಟ್ಟಿಯಲ್ಲಿದ್ದ ಮೋಸ್ಟ್ ವಾಟೆಂಡ್ ಕ್ರಿಮಿನಲ್. ಮಾಜಿ ಉಗ್ರಗಾಮಿಯಾಗಿದ್ದ ಈಗ, ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕನಾಗಿದ್ದಾನೆ. ಇವನು ಭಾರತ ಮತ್ತು ಪಾಕಿಸ್ತಾನದಿಂದ ಕಾಶ್ಮೀರವನ್ನು ಪ್ರತ್ಯೇಕಿಸಬೇಕೆಂದು ಹೋರಾಟ ನಡೆಸಿದ್ದ. ಜಮ್ಮು-ಕಾಶ್ಮೀರ ಲಿಬರೇಶನ್ ಫ್ರಂಟ್‍ನ ಅಧ್ಯಕ್ಷನಾಗಿದ್ದ ಮಲಿಕ್, ಕಾಶ್ಮೀರ ಕಣಿವೆಯಲ್ಲಿ ಸಶಸ್ತ್ರ ಉಗ್ರಗಾಮಿತ್ವವನ್ನು ಮುನ್ನಡೆಸ್ತಿದ್ದ.

    ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಈತನನ್ನು ಬಂಧಿಸಿದ್ದ ಎನ್‍ಐಎ ಪೊಲೀಸರು, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ(ಯುಎಪಿಎ) ಸೆಕ್ಷನ್ 16(ಭಯೋತ್ಪಾದನೆ), 17(ಭಯೋತ್ಪಾದನೆಗೆ ದೇಣಿಗೆ ಸಂಗ್ರಹ), 18(ಭಯೋತ್ಪಾದಕ ಕೃತ್ಯಕ್ಕೆ ಸಂಚು) ಹಾಗೂ 20(ಭಯೋತ್ಪಾದಕ ಸಂಘಟನೆ ಸದಸ್ಯ) ಸೆಕ್ಷನ್ 120-ಬಿ(ಅಪರಾಧ ಸಂಚು) ಮತ್ತು ಭಾರತೀಯ ದಂಡಸಂಹಿತೆಯ 124-ಎ(ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಿದ್ದರು.

    ಇತಿಹಾಸವೇನು?
    ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ನಿಷೇಧಿತ ಹಿಜ್ಬುಲ್ ಮುಜಾಹಿದ್ದೀನ್, ದುಖ್ತರನ್-ಎ-ಮಿಲ್ಲತ್ ಮತ್ತು ಇತರ ಸದಸ್ಯರಿಗೆ ಈತ ಸಹಾಯ ಮಾಡುತ್ತಿದ್ದ. ಭಯೋತ್ಪಾದಕ ಚಟುವಟಿಕೆಗಳಿಗೆ ಅಕ್ರಮ ಮಾರ್ಗಗಳ ಮೂಲಕ ದೇಶ ಮತ್ತು ವಿದೇಶದಿಂದ ಹಣವನ್ನು ಸಂಗ್ರಹಿಸುತ್ತಿದ್ದ. ಕಲ್ಲು ತೂರಾಟ, ಸೇನಾ ಸಿಬ್ಬಂದಿಗಳ ಮೇಲೆ ದಾಳಿ ಮತ್ತು ಸಾರ್ವಜನಿಕ ಆಸ್ತಿ ನಾಶ ಮಾಡುವ ಪ್ರಕಣಗಳ ಹಿಂದಿನ ರೂವಾರಿಯೂ ಆಗಿದ್ದ.

    Yasin Malik: 10 facts to know about the JKLF chief

    ಹುರಿಯತ್ ನಾಯಕರ ಜೊತೆ ಸೇರಿ ‘ಜಾಯಿಂಟ್ ರೆಸಿಸ್ಟೆನ್ಸ್ ಲೀಡರ್‍ಶಿಪ್’ ಎಂಬ ಗುಂಪನ್ನು ರಚಿಸಿದ್ದ. ಇದರ ಅಡಿಯಲ್ಲಿ ಕಾಶ್ಮೀರದಲ್ಲಿ ಪ್ರತಿಭಟನೆಗಳು, ಮುಷ್ಕರಗಳು, ಸ್ಥಗಿತಗಳು, ರಸ್ತೆ ತಡೆಗಳು ಮತ್ತು ಕಣಿವೆಯಲ್ಲಿ ಶಾಂತಿಗೆ ಭಂಗ ತರುವ ಇತರ ಚಟುವಟಿಕೆಗಳನ್ನು ನಡೆಸಲು ಜನರಿಗೆ ನಿರ್ದೇಶನಗಳನ್ನು ನೀಡುತ್ತಿದ್ದ. 1990ರಲ್ಲಿ ಐಎಎಫ್ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣ ಮತ್ತು 1989 ರಲ್ಲಿ ಆಗಿನ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬಯ್ಯ ಸಯೀದ್ ಅವರ ಅಪಹರಣಕ್ಕೆ ಸಂಬಂಧಿಸಿದಂತೆ ಸಿಬಿಐನಲ್ಲಿ ದಾಖಲಾದ ಎರಡು ಪ್ರಕರಣಗಳಲ್ಲಿ ಮಲಿಕ್ ಸಹ ಆರೋಪಿಯಾಗಿದ್ದಾನೆ. ಇದನ್ನೂ ಓದಿ:  ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರ ಅರೆಸ್ಟ್ 

    ಹೀಗೆ ಸಾಲು ಸಾಲು ಕುಕೃತ್ಯಗಳನ್ನು ನಡೆಸಿದ್ದ ಈತನನ್ನು 2017ರಲ್ಲಿ ಬಂಧಿಸಿ ತನಿಖೆ ನಡೆಸಲಾಗಿತ್ತು. ಬಳಿಕ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಈ ಎಲ್ಲ ಆರೋಪಗಳಿಗೂ ಪ್ರತಿರೋಧ ಒಡ್ಡದೇ ಆರೋಪಗಳನ್ನು ಒಪ್ಪಿಕೊಂಡಿದ್ದಾನೆ.

  • ಮತ್ತೆ ವಿಷ ಚಿಮ್ಮಿದ ಶಾಹಿದ್ ಅಫ್ರಿದಿ

    ಮತ್ತೆ ವಿಷ ಚಿಮ್ಮಿದ ಶಾಹಿದ್ ಅಫ್ರಿದಿ

    ಇಸ್ಲಾಮಾಬಾದ್: ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಿದ ಆರೋಪದಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ಪರ ಪಾಕಿಸ್ತಾನದ ಮಾಜಿ ಆಲ್‍ರೌಂಡರ್ ಆಟಗಾರ ಶಾಹಿದ್ ಅಫ್ರಿದಿ ಬ್ಯಾಟಿಂಗ್ ನಡೆಸಿದ್ದಾರೆ.

    ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಅಫ್ರಿದಿ, ಮಾನವ ಹಕ್ಕುಗಳ ದುರುಪಯೋಗದ ವಿರುದ್ಧ ವಿಮರ್ಶಾತ್ಮಕ ಧ್ವನಿಗಳನ್ನು ಮೌನಗೊಳಿಸಲು ಭಾರತದ ನಿರಂತರ ಪ್ರಯತ್ನಗಳು ನಿಷ್ಪ್ರಯೋಜಕವಾಗಿದೆ. ಯಾಸಿನ್ ಮಲಿಕ್ ವಿರುದ್ಧದ ಆರೋಪಗಳು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಕ್ಕೆ ಅಡ್ಡಿಯಾಗದಿರಲಿ. ಕಾಶ್ಮೀರ ನಾಯಕರ ವಿರುದ್ಧ ಅನ್ಯಾಯ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ನಿಗಾ ಇಡುವಂತೆ ಯುಎನ್‍ (ವಿಶ್ವಸಂಸ್ಥೆ) ಗೆ ಒತ್ತಾಯಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

    ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಸೇರಿದಂತೆ ವಿವಿಧ ಪ್ರಕರಣಗಳು ಯಾಸಿನ್ ಮಲಿಕ್ ಮೇಲೆ ದಾಖಲಾಗಿತ್ತು. ತನ್ನ ಮೇಲೆ ದಾಖಲಾದ ಆರೋಪಗಳ ಸಂಬಂಧ ಮೇ 10 ರಂದು ಕೋರ್ಟ್‍ನಲ್ಲಿ ಮಲಿಕ್ ತಪ್ಪೊಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮಲಿಕ್‍ಗೆ ಮರಣದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಕೋರ್ಟ್‍ಗೆ ಮನವಿ ಮಾಡಿತ್ತು. ಈ ಬಗ್ಗೆ ವಿಚಾರಣೆ ಪೂರ್ಣಗೊಳಿಸಿ ಇಂದು ರಾಷ್ಟ್ರೀಯ ತನಿಖಾದಳದ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10,00,000 ರೂ. ದಂಡ ವಿಧಿಸಿದೆ. ಇದನ್ನೂ ಓದಿ: ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    https://twitter.com/SAfridiOfficial/status/1529357436733337600

    ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಭಾರಿ ಭದ್ರತೆಯಲ್ಲಿದ್ದ ಯಾಸಿನ್ ಮಲಿಕ್ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ), 18 (ಭಯೋತ್ಪಾದನಾ ಕೃತ್ಯ ಎಸಗಲು ಸಂಚು) ಮತ್ತು 20 (ಭಯೋತ್ಪಾದನಾ ಸಂಘಟನೆಯ ಸದಸ್ಯನಾಗಿರುವುದು), ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 (ಅಪರಾಧ ಸಂಚು) ಮತ್ತು 124 (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿದೆ.

  • ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

    ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

    ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ದೋಷಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸಿನ್ ಮಲಿಕ್‌ಗೆ ರಾಷ್ಟ್ರೀಯ ತನಿಖಾದಳದ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10,00,000 ರೂ. ದಂಡ  ವಿಧಿಸಿದೆ.

    ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಸೇರಿದಂತೆ ವಿವಿಧ ಪ್ರಕರಣಗಳು ಯಾಸಿನ್ ಮಲಿಕ್ ಮೇಲೆ ದಾಖಲಾಗಿತ್ತು. ತನ್ನ ಮೇಲೆ ದಾಖಲಾದ ಆರೋಪಗಳ ಸಂಬಂಧ ಮೇ 10ರಂದು ಕೋರ್ಟ್‌ನಲ್ಲಿ ಮಲಿಕ್ ತಪ್ಪೊಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮಲಿಕ್‌ಗೆ ಮರಣದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಕೋರ್ಟ್‌ಗೆ ಮನವಿ ಮಾಡಿತ್ತು. ಇದನ್ನೂ ಓದಿ: ಯಾಸಿನ್ ಮಲಿಕ್ ಮರಣದಂಡನೆ ನೀಡಿ – ನ್ಯಾಯಾಯಲಕ್ಕೆ ಎನ್‌ಐಎ ಮನವಿ

    ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಹಾಗೂ ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು. ಇದನ್ನೂ ಓದಿ: ಹೆಲ್ಮೆಟ್ ಧರಿಸದಿದ್ರೆ 3 ತಿಂಗಳು ಲೈಸನ್ಸ್ ರದ್ದು

    ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ:
    ಯಾಸಿನ್ ಮಲಿಕ್ ಬಗ್ಗೆ ನ್ಯಾಯಾಲಯ ತೀರ್ಪು ಹೊರಬೀಳುವ ಹಿನ್ನೆಲೆ ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿದೆ. ನಗರದಲ್ಲಿ ಕಲ್ಲು ತೂರಾಟದಂತಹ ಕೃತ್ಯಗಳನ್ನು ತಡೆಗಟ್ಟಲು ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಶ್ರೀನಗರಲ್ಲಿ ಇಂಟರ್‌ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.

  • ಯಾಸಿನ್ ಮಲಿಕ್ ಮರಣದಂಡನೆ ನೀಡಿ – ನ್ಯಾಯಾಯಲಕ್ಕೆ ಎನ್‌ಐಎ ಮನವಿ

    ಯಾಸಿನ್ ಮಲಿಕ್ ಮರಣದಂಡನೆ ನೀಡಿ – ನ್ಯಾಯಾಯಲಕ್ಕೆ ಎನ್‌ಐಎ ಮನವಿ

    ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ದೋಷಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸೀನ್ ಮಲಿಕ್‌ಗೆ ಮರಣ ದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮನವಿ ಮಾಡಿದೆ.

    ಬುರ್ಹಾನ್‌ವಾನಿ ಎನ್‌ಕೌಂಟರ್ ಆದ 30 ನಿಮಿಷಗಳಲ್ಲಿ ನನ್ನನ್ನು ಬಂಧಿಸಲಾಯಿತು. ಅಟಲ್ ಬಿಹಾರಿ ವಾಜಪೇಯಿ ಅವರು ನನಗೆ ಪಾಸ್‌ಪೋರ್ಟ್ ಮಂಜೂರು ಮಾಡಿದ್ದರು ಹಾಗೂ ನಾನು ಅಪರಾಧಿ ಅಲ್ಲ ಎಂಬ ಕಾರಣಕ್ಕೆ ನನಗೆ ಹೇಳಿಕೆ ನೀಡಲು ಭಾರತ ಅವಕಾಶ ಮಾಡಿಕೊಟ್ಟಿತು ಎಂದು ಯಾಸಿನ್ ಮಲಿಕ್ ನ್ಯಾಯಾಲಯದಲ್ಲಿ ಹೇಳಿದ್ದಾನೆ. ಇದನ್ನೂ ಓದಿ: ಬರಾಮುಲ್ಲಾದಲ್ಲಿ ಎನ್‌ಕೌಂಟರ್ – 3 ಭಯೋತ್ಪಾದಕರ ಹತ್ಯೆ, ಪೊಲೀಸ್ ಹುತಾತ್ಮ,

    1994ರಲ್ಲಿ ನಾನು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಗಾಂಧಿಯವರ ತತ್ವಗಳನ್ನು ಅನುಸರಿಸುತ್ತಿದ್ದೆ. ನಾನು ಕಾಶ್ಮೀರದಲ್ಲಿ ಅಹಿಂಸಾತ್ಮಕ ರಾಜಕೀಯ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ.

    ನಾನು ಈ ಹಿಂದೆ 7 ಪ್ರಧಾನಿಗಳೊಂದಿಗೆ ಕೆಲಸ ಮಾಡಿದ್ದೇನೆ. ಕಳೆದ 24 ವರ್ಷಗಳಲ್ಲಿ ಯಾವುದೇ ಭಯೋತ್ಪಾದನಾ ಚಟುವಟಿಕೆ ಅಥವಾ ಹಿಂಸಾಚಾರಗಳಲ್ಲಿ ಭಾಗಿಯಾಗಿದ್ದರೆ ಅದನ್ನು ಸಾಬೀತುಪಡಿಸಲಿ ಎಂದು ಭಾರತೀಯ ಗುಪ್ತಚರ ಇಲಾಖೆಗೆ ಸವಾಲು ಹಾಕಿದ್ದಾನೆ. ಇದನ್ನೂ ಓದಿ: ಶೂಟೌಟ್‍ಗೂ ಮೊದಲೇ ಇನ್‍ಸ್ಟಾಗ್ರಾಮ್‍ನಲ್ಲಿ ಗನ್‍ಗಳ ಚಿತ್ರ ಪೋಸ್ಟ್ ಮಾಡಿದ್ದ ಆರೋಪಿ

    ನಾನು ರಾಜಕೀಯದಿಂದ ನಿವೃತ್ತಿ ಹೊಂದಿ, ಮರಣದಂಡನೆಯನ್ನು ಸ್ವೀಕರಿಸುತ್ತೇನೆ ಎಂದು ಮಲಿಕ್ ಹೇಳಿದ್ದಾನೆ. ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ಯಾಸಿನ್ ಮಲಿಕ್ ತಪ್ಪೊಪ್ಪಿಕೊಂಡ ಹಿನ್ನೆಲೆ ಎನ್‌ಐಎ ಕೋಟ್ ಅವರನ್ನು ದೋಷಿ ಎಂದು ಘೋಷಿಸಿದೆ. ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಸೇರಿದಂತೆ ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು.

  • 30 ವರ್ಷದ ಕೇಸ್ ಓಪನ್ – ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ಅರೆಸ್ಟ್

    30 ವರ್ಷದ ಕೇಸ್ ಓಪನ್ – ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ಅರೆಸ್ಟ್

    ಶ್ರೀನಗರ: ದೇಶದ ಲಾಭವನ್ನು ಪಡೆಯುತ್ತಾ ಉಗ್ರರಿಗೆ ಸಹಕಾರ ನೀಡುವವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಿ ಎನ್ನುವ ಆಗ್ರಹದ ಬೆನ್ನಲ್ಲೇ ಸಿಬಿಐ 30 ವರ್ಷದ ಹಿಂದಿನ ಪ್ರಕರಣವನ್ನು ಮತ್ತೆ ಓಪನ್ ಮಾಡಿ ಜಮ್ಮು ಕಾಶ್ಮೀರದ ಪ್ರತ್ಯೇಕತವಾದಿ ನಾಯಕ, ಜಮ್ಮು ಕಾಶ್ಮೀರದ ಲಿಬರೇಷನ್ ಫ್ರಂಟ್ ಮುಖ್ಯಸ್ಥ, ಯಾಸಿನ್ ಮಲಿಕ್ ನನ್ನು ಬಂಧಿಸಿ ಜೈಲಿಗಟ್ಟಿದೆ.

    ಫೆ.22 ರ ರಾತ್ರಿ ಮೈಸುಮಾ ಪ್ರದೇಶದ ಮನೆಯಿಂದ ಆತನನ್ನು ಬಂಧಿಸಿ ಕೊಥಿಬಾಗ್ ಪೊಲೀಸ್ ಠಾಣೆಯ ಜೈಲಿನಲ್ಲಿ ಇಡಲಾಗಿತ್ತು. ಸಾರ್ವಜನಿಕ ಸುರಕ್ಷತಾ ಕಾಯ್ದೆಯ (ಪಿಎಸ್‍ಎ) ಅಡಿ ಈ ಪ್ರಕರಣವನ್ನು ಸಿಬಿಐ ದಾಖಲಿಸಿದ್ದು, ಸದ್ಯ ಈತನನ್ನು ಕೋಟ್ ಬಲ್ವಾಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.

    https://twitter.com/ShobhaBJP/status/1103579632333275137

    ಯಾಸಿನ್ ಮಲಿಕ್ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರಿ ಓಪನ್ ಮಾಡಲು ಸಿಬಿಐ ಜಮ್ಮು ಕಾಶ್ಮೀರ ಹೈಕೋರ್ಟ್ ನಲ್ಲಿ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಈ ಪ್ರಕರಣವನ್ನು ಜಮ್ಮುವಿನಿಂದ ಶ್ರೀನಗರಕ್ಕೆ ವರ್ಗಾಯಿಸಲು ಅನುಮತಿ ನೀಡುವಂತೆ ಕೇಳಿಕೊಂಡಿದೆ. ಜಮ್ಮು ಕಾಶ್ಮೀರ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆ ಗೀತಾ ಮಿತ್ತಲ್ ಈ ಸಂಬಂಧ ಒಂದು ದಿನದಲ್ಲಿ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಲು ಮಲ್ಲಿಕ್ ಗೆ ಸೂಚಿಸಿದ್ದಾರೆ. ಮುಂದಿನ ಅರ್ಜಿ ವಿಚಾರಣೆ ಮಾರ್ಚ್ 11 ರಂದು ನಡೆಯಲಿದೆ.

    ಏನಿದು ಪ್ರಕರಣ?
    1990 ರಲ್ಲಿ ಐವರು ವಾಯುಸೇನೆಯ ಯೋಧರನ್ನು ಕಿಡ್ನಾಪ್ ಮಾಡಿ ಕೊಲೆಗೈದಿರುವ ಹಾಗೂ ಜಮ್ಮು ಕಾಶ್ಮೀರದ ಮಾಜಿ ಸಿಎಂ ರುಬಿಯಾ ಸೈಯಾದ್ ಮಗಳನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಪ್ರಮುಖ ಯಾಸೀನ್ ಮಲ್ಲಿಕ್ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ನ್ಯಾ. ನೀಲಕಂಠ ಗಂಜು ಅವರ ಕೊಲೆ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ. ಜಮ್ಮು ಕಾಶ್ಮೀರದ ಲಿಬರೇಷನ್ ಫ್ರಂಟ್ ಮುಖ್ಯಸ್ಥನಾಗಿದ್ದ ಮಾಕ್ಬುಲ್ ಭಟ್‍ಗೆ ನ್ಯಾ. ನೀಲಕಂಠ ಗಂಜು ಮರಣದಂಡನೆ ಶಿಕ್ಷೆ ವಿಧಿಸಿದ್ದರು. ಆತನನ್ನ 1984 ಫೆ.11 ರಂದು ನೇಣಿಗೇರಿಸಲಾಗಿತ್ತು.

    ಫೆ.14ರ ಪುಲ್ವಾಮಾದ ಉಗ್ರರ ದಾಳಿಯ ಬಳಿಕಯಲ್ಲಿ 40 ಸಿಆರ್ ಪಿಎಫ್ ಯೋಧರ ಹುತ್ಮಾತರಾದ ಮರುದಿನವೇ ಸರ್ಕಾರ ಬಹುದೊಡ್ಡ ಸರ್ಚ್ ಆಪರೇಷನ್ ನಡೆಸಿ ಪ್ರತ್ಯೇಕವಾದಿಗಳನ್ನು ಬಂಧಿಸಿತ್ತು. ಅಲ್ಲದೇ ಫೆ.17 ರಂದು ಪ್ರತ್ಯೇಕವಾದಿಗಳಿಗೆ ನೀಡಿದ್ದ ಪೊಲೀಸ್ ಭದ್ರತೆಯನ್ನು ಸರ್ಕಾರ ಹಿಂಪಡೆದಿತ್ತು.

    ಪುಲ್ವಾಮಾ ದಾಳಿಗೂ ಮುನ್ನ ದೇಶದಲ್ಲಿ ಇರುವ ಪ್ರತ್ಯೇಕವಾದಿಗಳು ಪಾಕಿಸ್ತಾನ ಹಾಗೂ ಐಸಿಸ್ ನಿಂದ ಹಣ ಸಂದಾಯ ಆಗಿರುವ ಬಗ್ಗೆ ತನಿಖೆ ನಡೆಯುತ್ತಿದ್ದು, ಫೆ.26 ರಂದು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಅಧಿಕಾರಿಗಳು ಶ್ರೀನಗರ ಯಾಸಿನ್ ಮಲಿಕ್ ಮನೆಯ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ಸಂಗ್ರಹಿಸಿತ್ತು.

    ಪಿಎಸ್‍ಎ ಕಾಯ್ದೆ ಏನು ಹೇಳುತ್ತೆ?
    ಸಾರ್ವಜನಿಕರ ಸುರಕ್ಷತಾ ಕಾಯ್ದೆ(ಪಿಎಸ್‍ಎ) ಅಡಿ ಪ್ರಕರಣ ದಾಖಲಾದರೆ ಆ ವ್ಯಕ್ತಿಯನ್ನು 6 ತಿಂಗಳ ಕಾಲ ನ್ಯಾಯಾಲಯಕ್ಕೆ ಹಾಜರು ಪಡಿಸುವ ಅಗತ್ಯ ಇರುವುದಿಲ್ಲ. 2 ವರ್ಷಗಳ ಕಾಲ ನ್ಯಾಯಾಂಗ ಸಹ ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv