Tag: ಯುಆರ್ ಸಭಾಪತಿ

  • ಉಡುಪಿಯ ಮಾಜಿ ಶಾಸಕ ಯುಆರ್ ಸಭಾಪತಿ ನಿಧನ

    ಉಡುಪಿಯ ಮಾಜಿ ಶಾಸಕ ಯುಆರ್ ಸಭಾಪತಿ ನಿಧನ

    ಉಡುಪಿ: ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಉಡುಪಿಯ ಮಾಜಿ ಶಾಸಕ ಯುಆರ್ ಸಭಾಪತಿ (U.R.Sabhapathi) ಭಾನುವಾರ ನಿಧನರಾಗಿದ್ದಾರೆ.

    1980-1990ರ ದಶಕದಲ್ಲಿ ಕರಾವಳಿಯ ಪ್ರಭಾವಿ ನಾಯಕ ಎಂದೇ ಗುರುತಿಸಿಕೊಂಡಿದ್ದ ಯುಆರ್ ಸಭಾಪತಿ (71) ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇವರು ಉಡುಪಿ (Udupi) ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಕೆಸಿಪಿಯಿಂದ (KCP) ಶಾಸಕರಾಗಿದ್ದ ಇವರು 1999ರಲ್ಲಿ ಕಾಂಗ್ರೆಸ್ (Congress) ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: ಪ್ರೀತಿಯ ವ್ಯಕ್ತಿಯಿಂದ ಸಿಎಂ ಸಿದ್ದರಾಮಯ್ಯಗೆ Rado ವಾಚ್ ಗಿಫ್ಟ್

    ಬಂಗಾರಪ್ಪನವರ ಅನುಯಾಯಿಯಾಗಿದ್ದ ಸಭಾಪತಿ, ಆಸ್ಕರ್ ಫರ್ನಾಂಡಿಸ್ ರಾಜಕೀಯ ಪ್ರವೇಶಕ್ಕೂ ಪ್ರೇರಣೆಯಾಗಿದ್ದರು. ಅಷ್ಟೇ ಅಲ್ಲದೇ ರಾಷ್ಟ್ರೀಯ ಜನತಾದಳ ಮತ್ತು ಜಾತ್ಯಾತೀತ ಜನತಾದಳದೊಂದಿಗೂ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಮತದಾರರಿಗೆ ಅವಮಾನ ಮಾಡಿದೆ – ಸಿಎಂ, ಡಿಸಿಎಂ ಕ್ಷಮೆಗೆ ಆಗ್ರಹಿಸಿದ ಈಶ್ವರಪ್ಪ

  • ಕರಾವಳಿಯ ಮೀನುಗಾರ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಪ್ಲಾನ್

    ಕರಾವಳಿಯ ಮೀನುಗಾರ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಪ್ಲಾನ್

    ಉಡುಪಿ: ಕರಾವಳಿಯ ಪ್ರಬಲ ಮತದಾರ ಸಮುದಾಯವಾದ ಮೀನುಗಾರರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಐಡಿಯಾ ಮಾಡಿದೆ.

    ಕರಾವಳಿಯ ಪ್ರಬಲ ಮತದಾರ ಸಮುದಾಯವಾದ ಮೀನುಗಾರರನ್ನು ತನ್ನತ್ತ ಸೆಳೆಯಲು ರಾಹುಲ್ ಗಾಂಧಿ ಅವರನ್ನ ಕುಮಟಾಕ್ಕೆ ಕರೆತಂದು ಮೊಗವೀರರ ಬೃಹತ್ ಸಮಾವೇಶ ನಡೆಸಲು ಪ್ಲಾನ್ ಮಾಡಿಕೊಂಡಿದ್ದಾರೆ.

    ನವೆಂಬರ್ 21 ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಣ್ಕಿಯ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಕರ್ನಾಟಕ ಪ್ರದೇಶ ಮೀನುಗಾರ ಕಾಂಗ್ರೆಸ್ ಸಮಾವೇಶದ ಉಸ್ತುವಾರಿ ಹೊತ್ತುಕೊಂಡಿದೆ. ಉಡುಪಿಯಲ್ಲಿ ಮಾಜಿ ಶಾಸಕ ಯುಆರ್ ಸಭಾಪತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

    ಒಂದು ಲಕ್ಷ ಮೀನುಗಾರರು ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ಕೇಂದ್ರ ಸಂಪುಟದಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಮಂತ್ರಿ ಸ್ಥಾನ ಕೊಡಬೇಕು. ಮೀನುಗಾರರ ಸಮುದಾಯವನ್ನು ಎಸ್‍ಟಿ ಪಂಗಡಕ್ಕೆ ಸೇರಿಸಬೇಕು. ಹೀಗೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಸಮಾವೇಶದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಯುಆರ್ ಸಭಾಪತಿ ಹೇಳಿದ್ದಾರೆ.