Tag: ಯುಗಾದಿ ಹಬ್ಬ

  • ಯುಗಾದಿ ಸಂಭ್ರಮ – ಬ್ಯಾಚುಲರ್‌ ಹುಡುಗರು, ದೂರವೇ ಉಳಿದವರ ಸಡಗರ

    ಯುಗಾದಿ ಸಂಭ್ರಮ – ಬ್ಯಾಚುಲರ್‌ ಹುಡುಗರು, ದೂರವೇ ಉಳಿದವರ ಸಡಗರ

    ಮನೆಮಂದಿಯೆಲ್ಲ ಒಂದಾಗಲು ಹಬ್ಬವೊಂದು ನೆಪ. ಓದು, ಉದ್ಯೋಗದ ಕಾರಣಕ್ಕೆ ದೂರವೇ ಉಳಿದವರನ್ನು ಹಬ್ಬ ಊರು ಅಥವಾ ಮನೆಗೆ ಕರೆಸಿಕೊಳ್ಳುತ್ತದೆ. ಆದ್ರೆ ಅನಿವಾರ್ಯ ಕಾರಣಕ್ಕೆ ಊರಿಗೆ ಹೋಗಲಾಗದಿದ್ದರೆ ಮಾತ್ರ ಜೊತೆಗಿರದ ಭಾವವೊಂದು ಪರಿಪರಿಯಾಗಿ ಕಾಡಿಬಿಡುತ್ತದೆ ಅಲ್ಲವೇ ಹಾಗೆಯೇ ಈ ಯುಗಾದಿ ಹಬ್ಬವೂ ಹಾಗೆಯೇ ಇರಬೇಕಲ್ಲವೇ.

    ಚೈತ್ರಮಾಸದ ಮೊದಲ ದಿನವೆಂದರೆ ಹಾಗೇ ಹೊಸ ಮಾಸದ ಘಮಲು, ಹೊಸ ಭರವಸೆಯ ಕನಸು. ಹಳೆಯದೆಲ್ಲವ ಅಳಿಸಿ, ಹೊಸತಾಗುವ ಈ ಹಬ್ಬ ವರ್ಷಾರಂಭದ ಸಂಕೇತ. ಇದು ಹಿಂದೂಗಳ ಹೊಸ ವರ್ಷವೆಂಬ ಯುಗಾದಿ ಹಬ್ಬದ ಹೆಗ್ಗುರುತು.

    ಬೇವು ಬೆಲ್ಲ, ಹೋಳಿಗೆ ತುಪ್ಪದ ಸಿಹಿ ಊಟದ ರುಚಿ, ಹಬ್ಬಕ್ಕೆ ಖರೀದಿಸಿದ ಹೊಸ ಬಟ್ಟೆ ಊರಿನ ಕಟ್ಟೆಯ ಮೇಲೆ ಕುಳಿತು ಮಾತನಾಡುತ್ತಿದ್ದ ಮಾತುಕತೆ, ಗೆಳೆಯರೆಲ್ಲ ಕೂಡಿದ ನೆನಪಿಗೆ ಹಳೆಯ ಆಟ, ಹೊಸದಾಗಿ ಮದುವೆ ಆದ ಸ್ನೇಹಿತನ ಕಾಲೆಳೆಯುವುದು, ಮದುವೆ ಫಿಕ್ಸ್ ಆದ ಕ್ಲಾಸ್‌ಮೇಟ್ ಹುಡುಗಿಯ ಶಾಲೆಯ ಕಥೆ ಎಲ್ಲಾ ಮಿಸ್ ಆದಂತಹ ಭಾವ. ಆದರೆ ಹಬ್ಬ ಅಂದ್ರೆ ಹಬ್ಬಾನೇ ಅಲ್ವಾ? ಹಬ್ಬಕ್ಕೆ ಊರಿಗೆ ಹೋಗಲಾಗದೇ, ಅಲ್ಲಿ ಮಾಡುತ್ತಿದ್ದ ಹಬ್ಬವನ್ನು ಇನ್ಯಾವುದೋ ಊರಲ್ಲಿ, ಪುಟ್ಟ ಕೊಣೆಯಲ್ಲಿ ಉಳಿದು ಮಾಡುವ ಆಸೆ ಮೂಡುವುದೇ ಇಲ್ಲ.

    ಆದ್ರೆ ಈ ಬೆಂಗಳೂರಿನಂತಹ ಮಹಾನಗರಗಳ ಅಪಾರ್ಟ್‌ಮೆಂಟ್‌ನಲ್ಲಿದ್ದರೆ ಅದೊಂದು ಪುಟ್ಟ ಊರು ಇದ್ದ ಹಾಗೆ. ಅಲ್ಲಿನ ಮನೆಗಳ ಕೆಲವರು ಊರಿಗೆ ಹೋಗಿದ್ದರೆ ಉಳಿದವರದ್ದೆಲ್ಲ ಸೇರಿ ಒಂದು ಹಬ್ಬ ಎಲ್ಲಿಂದಲೋ ಬಂದವರು ಒಂದು ಕಡೆ ನಿಂತವರು. ಒಂದೊಂದು ಊರಿನಲ್ಲಿ ಒಂದೊಂದು ಥರದ ಹಬ್ಬ ಆ ಎಲ್ಲಾ ಆಚರಣೆಗಳು ಸೇರಿದ ಹಬ್ಬ ಇವರದ್ದು. ಹಬ್ಬದ ಹಿಂದಿನ ರಾತ್ರಿ ಹೊತ್ತಿಗಾಗಲೇ ಊರಿಗೆ ಹೋದವರು, ಹೋಗದೇ ಉಳಿದವರ ಪಟ್ಟಿ ಸಿಕ್ಕಿಬಿಡುತ್ತದೆ.

    ಹೋದವರ ಸ್ಟೇಟಸ್‌ಗಳಲ್ಲಿ ಊರಿನ ಒಂದು ಚಿತ್ರ, ಯುಗಾದಿ ಹಬ್ಬಕ್ಕೆ ಶುಭಾಶಯ ಕೋರುವ ಮೆಸೇಜು ಈ ರೀತಿ ಇದ್ದರೆ, ಊರಿಗೆ ಹೋಗದವರ ಮೊಬೈಲ್‌ಗಳು ಕೂಡ ಬಿಝಿಯಾಗುತ್ತವೆ. ಒಬ್ಬೊಬ್ಬರೇ ಇರುವವರು ಒಂದು ಕಡೆ ಸೇರಲು ಪ್ಲ್ಯಾನ್‌ ರೆಡಿಯಾಗುತ್ತದೆ.

    ಇನ್ನೂ ಬ್ಯಾಚ್ಯುಲರ್‌ ಲೈಫು ನೋಡೋದಾದ್ರೆ ಅವರಿಗೆ ಸಿಗುವ ಹಬ್ಬದಡುಗೆಯ ರುಚಿಯೇ ಬೇರೆ. ಬಾಡಿಗೆ ಮನೆಯಲ್ಲಿ ಓನರ್‌ಗಳು ಕೊಡುವ ಬೇವು, ಬೆಲ್ಲದ ತಿಂದು ಸಂಜೆ ಹೊತ್ತಿಗೆ ಒಂದಿಷ್ಟು ಹೋಳಿಗೆ ಊಟ. ಹೇಗೋ ಅಕ್ಕಪಕ್ಕದ ಮನೆಯವರು ಕೊಟ್ಟಿದ್ದನ್ನೆಲ್ಲ ಸೇರಿಸಿ ಹಬ್ಬ ಮುಗಿಸುತ್ತಾರೆ. ಬೆಳಗ್ಗೆಯಿಂದ ಸಂಜೆವರೆಗೆ ಏನೆಲ್ಲಾ ಆಯ್ತು.. ಅಂತ ಒಂದು ಸುತ್ತು ನೆನೆಸಿಕೊಂಡು ಹಾಗೇ ಕ್ಲಿಕ್ಕಿಸಿಕೊಂಡ ಒಂದೆರಡು ಫೋಟೋಗಳನ್ನ ಸ್ಟೇಟಸ್‌ ಹಾಕಿ, ಮಾರನೆ ದಿನ ಬೆಳಗ್ಗೆ 7 ಗಂಟೆ ಶಿಫ್ಟ್‌ ಕೆಲಸಕ್ಕೆ ಹೋಗುವ ಧಾವಂತಕ್ಕೆ ಯುಗಾದಿ ಹಬ್ಬ ಮುಗಿದೇ ಹೋಗಿರುತ್ತದೆ.

  • ಉಚ್ಛಾಟನೆ ಬಳಿಕ ವಿಜಯಪುರಕ್ಕೆ ಯತ್ನಾಳ್ ಆಗಮನ – ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ; ಹೋಮ, ಹವನ

    ಉಚ್ಛಾಟನೆ ಬಳಿಕ ವಿಜಯಪುರಕ್ಕೆ ಯತ್ನಾಳ್ ಆಗಮನ – ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ; ಹೋಮ, ಹವನ

    ವಿಜಯಪುರ: ಯುಗಾದಿ ಪಾಡ್ಯ ಹಿನ್ನೆಲೆ ಬಿಜೆಪಿಯಿಂದ (BJP) ಉಚ್ಛಾಟನೆಯಾದ ಬಳಿಕ ಮೊದಲ ಬಾರಿಗೆ ವಿಜಯಪುರ ನಗರಕ್ಕೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ (Basanagouda Patil Yatnal) ಆಗಮಿಸಿದ್ದಾರೆ.

    ಬೆಂಗಳೂರಿನಿಂ‌ದ (Bengaluru) ತಡರಾತ್ರಿ ಪ್ರಯಾಣ ಬೆಳೆಸಿ ವಿಜಯಪುರಕ್ಕೆ ಆಗಮಿಸಿದ್ದಾರೆ. ವಿಜಯಪುರದ ಪ್ರಸಿದ್ಧ ಸಿದ್ದೇಶ್ವರ ದೇವಸ್ಥಾನದಲ್ಲಿ ಯತ್ನಾಳ್ ಹಾಗೂ ಕುಟುಂಬ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪತ್ನಿ ಶೈಲಜಾ ಹಾಗೂ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಅಮಾಯಕರ ಜೀವ ಬಲಿ ಪಡೆಯುತ್ತಲೇ ಇದೆ ಬಿಬಿಎಂಪಿ ಕಸದ ಲಾರಿ – 4 ವರ್ಷಗಳಲ್ಲಿ ಸಾಲು ಸಾಲು ಅಪಘಾತ

    ಪೂಜೆ ಬಳಿಕ ಮಂಗಳಾರತಿ ಕಾರ್ಯಕ್ರಮ ಮುಗಿಸಿದ್ದಾರೆ. ನಂತರ ಇದೀಗ ಪ್ರತಿ ವರ್ಷ ಯುಗಾದಿ ಪಾಡ್ಯಾದಂದು ನಡೆಸುವ ಹೋಮ ಹವನ ಪೂಜೆ ಕಾರ್ಯಗಳಲ್ಲಿ ಭಾಗಿ ಆಗಿದ್ದಾರೆ. ಇದನ್ನೂ ಓದಿ: ಯುಗಾದಿ ಹಬ್ಬದ ದೇಸಿ ಸೊಗಡು, ಗ್ರಾಮೀಣ ಕ್ರೀಡೆಗಳ ಗಮ್ಮತ್ತು!

    ಹೋಮ ಮುಗಿದ ನಂತರ ಸಿದ್ದೇಶ್ವರ ಸಂಸ್ಥೆಯಿಂದ ನಿರ್ಮಿಸಿರೋ ದಾಸೋಹ ನಿಲಯ ಹಾಗೂ ಕಟ್ಟಡ ಉದ್ಘಾಟನೆ ಪೂಜಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: Myanmar Earthquake | ಭೀಕರ ಭೂಕಂಪಕ್ಕೆ 1,600ಕ್ಕೂ ಹೆಚ್ಚು ಮಂದಿ ಬಲಿ – 3,000ಕ್ಕೂ ಅಧಿಕ ಮಂದಿಗೆ ಗಾಯ

  • ಯುಗಾದಿ ಸಂಭ್ರಮ – ಬೆಲೆ ಏರಿಕೆ ನಡುವೆಯೂ ಖರೀದಿ ಬರಾಟೆ ಜೋರು!

    ಯುಗಾದಿ ಸಂಭ್ರಮ – ಬೆಲೆ ಏರಿಕೆ ನಡುವೆಯೂ ಖರೀದಿ ಬರಾಟೆ ಜೋರು!

    ಬೆಂಗಳೂರು: ಯುಗಾದಿ (Ugadi festival), ಹೊಸತೊಡಕು, ರಂಜಾನ್‌ ಹೀಗೆ ಸಾಲು ಸಾಲು ಹಬ್ಬದ ಸಂಭ್ರಮ ಊರೆಲ್ಲ ತುಂಬಿಕೊಳ್ಳುತ್ತಿದೆ. ಮಾರುಕಟ್ಟೆಯಲ್ಲೂ ಇದು ವ್ಯಾಪಿಸತೊಡಗಿದ್ದು, ಹೂವು, ಹಣ್ಣು ಹಂಪಲು ದರ ಗಗನಮುಖಿಯಾಗಿದೆ. ಅತ್ತ ಬೆಲೆ ಏರಿಕೆ ಬಗ್ಗೆ ತಲೆ ಕೆಡಿಸಿಕೊಳ್ಳದ ಜನ ಖರೀದಿ ಬರಾಟೆ ಜೋರಾಗಿ ನಡೆಸುತ್ತಿದ್ದಾರೆ.

    ಬೆಲೆ ಏರಿಕೆ ನಡುವೆಯೂ ಗ್ರಾಹಕರು ಮಾರುಕಟ್ಟೆಗೆ ದಾಂಗುಡಿಯಿಟ್ಟು ಖರೀದಿ ಬರಾಟೆ ನಡೆಸಿದ್ದಾರೆ. ಕೆಲವರು ಅಲ್ಲಲ್ಲಿ ಚೌಕಾಸಿ ಮಾಡಿ ರೇಟು ಗಿಟ್ಟಿಸಿಕೊಂಡು ಹೇಗೂ ಹಬ್ಬದ ಸಾಮಗ್ರಿ ಖರೀದಿಸುತ್ತಿದ್ದಾರೆ. ಶನಿವಾರ ರಾತ್ರಿಯಿಂದಲೂ ಹಬ್ಬದ ಖರೀದಿ ಜೋರಾಗಿದ್ದು, ವ್ಯಾಪಾರಿಗಳೂ ಹರ್ಷಗೊಂಡಿದ್ದಾರೆ. ಇದನ್ನೂ ಓದಿ: ಯುಗಾದಿ ಹಿಂದೂಗಳ ಹೊಸ ವರ್ಷ, ಹಸಿರಿಗೆ ಹೊಸ ಉಸಿರಿನ ಹಬ್ಬ

    ಬೆಂಗಳೂರು (Bengaluru) ನಗರದ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿಯೂ ಮಾವು ಮತ್ತು ಬೇವಿನ ಸೊಪ್ಪಿನ ರಾಶಿ ಇರಿಸಲಾಗಿದ್ದು, ಜನರು ಸಂಭ್ರಮದಿಂದ ಖರೀದಿಸುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿ ಕಂಡುಬರುತ್ತಿದೆ. ಕೆ.ಆ‌ರ್.ಮಾರುಕಟ್ಟೆ, ಯಶವಂತಪುರ, ಗಾಂಧಿ ಬಜಾರ್, ಮಲ್ಲೇಶ್ವರ, ಬಸವನಗುಡಿ, ಜಯನಗರ, ವಿಜಯನಗರ, ಮಡಿವಾಳ, ಕೆ.ಆರ್.ಪುರ, ಯಲಹಂಕ, ಕೆಂಗೇರಿ ಸೇರಿದಂತೆ ನಗರದ ವಿವಿಧೆಡೆ ಮಾರುಕಟ್ಟೆಯಲ್ಲಿ ಜನಜಂಗುಳಿ ಇನ್ನೂ ಮುಂದುವರಿದಿದೆ. ಜನರು ಹಬ್ಬಕ್ಕೆ ಬೇಕಾದ ಮಾವು ಮತ್ತು ಬೇವಿನ ಸೊಪ್ಪು, ಹೂವು, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದಾರೆ.

    ನಗರದ ಬಟ್ಟೆ ಅಂಗಡಿಗಳು, ಆಭರಣ ಮಳಿಗೆಗಳಲ್ಲೂ ಖರೀದಿ ಜೋರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಎರಡು-ಮೂರು ದಿನಗಳಿಂದ ಹೂವಿನ ವ್ಯಾಪಾರ ಗರಿಗೆದರಿದ್ದು, ಮಲ್ಲಿಗೆ, ಗುಲಾಬಿ ಸೇರಿದಂತೆ ಕೆಲ ಹೂವಿನ ದರಗಳು ಕೊಂಚ ಏರಿಕೆಯಾಗಿವೆ. ಅಲ್ಲದೇ ಈ ಬಾರಿ ಕನಕಾಂಬರ ಹೂವಿನ ಬೆಳೆ ಚೆನ್ನಾಗಿ ಬಂದಿದ್ದು, ಬೇಡಿಕೆಗಿಂತ ಪೂರೈಕೆ ಹೆಚ್ಚಾಗಿದೆ. ಇದರಿಂದಾಗಿ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಬೆಲೆ ಸ್ವಲ್ಪ ಕಡಿಮೆಯಿದೆ ಅನ್ನುತ್ತಾರೆ ವ್ಯಾಪಾರಿಗಳು. ಇದನ್ನೂ ಓದಿ: ಅಮಾಯಕರ ಜೀವ ಬಲಿ ಪಡೆಯುತ್ತಲೇ ಇದೆ ಬಿಬಿಎಂಪಿ ಕಸದ ಲಾರಿ – 4 ವರ್ಷಗಳಲ್ಲಿ ಸಾಲು ಸಾಲು ಅಪಘಾತ

    ನಗರವಾಸಿಗಳಲ್ಲಿ ಹಲವರು ಊರುಗಳಿಗೆ ತೆರಳಿದ್ದಾರೆ. ತಿಂಗಳಾಂತ್ಯಕ್ಕೆ ಹಬ್ಬ ಬಂದಿದ್ದರಿಂದ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಗ್ರಾಹಕರ ಸಂಖ್ಯೆ ಕಡಿಮೆಯಿದೆ. ಇದರಿಂದಾಗಿ ಮಾರುಕಟ್ಟೆಗಳಲ್ಲಿ ವ್ಯಾಪಾರ ಕಡಿಮೆ ಆಗಿದೆ. ಮಲ್ಲಿಗೆ ಮೊಗ್ಗು, ಗುಲಾಬಿ ದರವು ಕಳೆದ ಮೂರು ದಿನಗಳಿಂದ ಏರಿಕೆ ಕಂಡಿದ್ದು, ಉಳಿದ ಹೂವುಗಳ ದರವು ಈ ಬಾರಿ ಹೆಚ್ಚಳವಾಗಿಲ್ಲ ಎಂದು ವ್ಯಾಪಾರಿಗಳು ಹೇಳುತ್ತಾರೆ. ಇದನ್ನೂ ಓದಿ: Myanmar Earthquake | ಭೀಕರ ಭೂಕಂಪಕ್ಕೆ 1,600ಕ್ಕೂ ಹೆಚ್ಚು ಮಂದಿ ಬಲಿ – 3,000ಕ್ಕೂ ಅಧಿಕ ಮಂದಿಗೆ ಗಾಯ

  • ಯುಗಾದಿ ಹಿಂದೂಗಳ ಹೊಸ ವರ್ಷ, ಹಸಿರಿಗೆ ಹೊಸ ಉಸಿರಿನ ಹಬ್ಬ

    ಯುಗಾದಿ ಹಿಂದೂಗಳ ಹೊಸ ವರ್ಷ, ಹಸಿರಿಗೆ ಹೊಸ ಉಸಿರಿನ ಹಬ್ಬ

    ಯುಗಾದಿ.. ಇದು ಹಿಂದೂಗಳ ಹೊಸ ವರ್ಷ, ಚಂದ್ರಮಾನ ಪಂಚಾಂಗದ ಪ್ರಕಾರ ಹೊಸ ವರ್ಷ ಪ್ರಾರಂಭವಾಗಿದ್ದು ಈ ದಿನ. ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪದ ದಿನವನ್ನು ಹಿಂದೂಗಳ ಪ್ರಕಾರ ಹೊಸ ವರ್ಷದ ಮೊದಲ ದಿನವೆಂದು ಆಚರಿಸಲಾಗುತ್ತದೆ.

    ಹಿಂದೂ ಪಂಚಾಂಗದಲ್ಲಿ ಚೈತ್ರ ಮಾಸದಿಂದಲೇ ವರ್ಷದ ಆರಂಭವಾಗುತ್ತದೆ. ಈ ಹಬ್ಬ ಚಂದ್ರಮಾನ ಪಂಚಾಂಗವನ್ನು ಅನುಸರಿಸುತ್ತದೆ. ಇನ್ನು ಬ್ರಹ್ಮ ಯುಗಾದಿಯ ದಿನ ಇಡೀ ಬ್ರಹ್ಮಾಂಡವನ್ನೇ ಸೃಷ್ಟಿಸಿದನು ಎನ್ನಲಾಗುತ್ತದೆ. ಹೀಗಾಗಿ ಯುಗಾದಿ ಹಬ್ಬವನ್ನು ಹೊಸ ವರ್ಷದ ಅಥವಾ ಹೊಸ ಪ್ರಾರಂಭದ ಸಂಕೇತವಾಗಿ ಆಚರಿಸಲಾಗುತ್ತದೆ.

    ಗ್ರಹಗತಿಗಳ ಪ್ರಕಾರ, ಯುಗಾದಿಯ ದಿನ ಸೂರ್ಯನು ಮೇಷ ರಾಶಿಗೆ ಪ್ರವೇಶಿಸುತ್ತಾನೆ. ಈ ಮೂಲಕ ಸೂರ್ಯ ಮತ್ತು ಚಂದ್ರರ ಹೊಸ ಚಕ್ರ ಪ್ರಾರಂಭಗೊಳ್ಳುತ್ತದೆ.

    ನೈಸರ್ಗಿಕವಾಗಿ ಯುಗಾದಿ ಹಬ್ಬವು ಹೊಸತನ ತಂದು ಕೊಡುತ್ತದೆ. ಚೈತ್ರ ಮಾಸದಲ್ಲಿ ವಸಂತ ಋತು ಪ್ರಾರಂಭವಾಗಿ, ನಿಸರ್ಗದಲ್ಲಿಯೂ ಹೊಸತನ ಹುಟ್ಟಿಕೊಳ್ಳುತ್ತದೆ. ಹೊಸ ಎಲೆಗಳು, ಚಿಗುರು ಹಾಗೂ ಇಡೀ ಪ್ರಕೃತಿ ಹಸಿರಿನಿಂದ ಕಂಗೊಳಿಸುತ್ತದೆ. ಹಸಿರಿಗೂ ಉಸಿರು ನೀಡುವ ಈ ಹಬ್ಬ ಯುಗಾದಿಯಾಗಿದೆ.

    ಯುಗಾದಿಯಂದು ಪಂಚಾಂಗ ಶ್ರವಣ, ಜ್ಯೋತಿಷಿಗಳು ಹೊಸ ವರ್ಷದ ಭವಿಷ್ಯವನ್ನು ಯುಗಾದಿ ಎಂದು ಪ್ರಾರಂಭಿಸುತ್ತಾರೆ. ಯುಗಾದಿಯನ್ನು ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ವಸಂತ ಕಾಲದ ಜೊತೆ ಜೊತೆಗೆ ಹೊಸ ಬೆಳೆಗಳಿಗೆ ನಾಂದಿ ಹಾಡುತ್ತದೆ.

    ಐತಿಹಾಸಿಕವಾಗಿ ಹೇಳುವುದಾದರೆ, ಶಾಲಿವಾಹನ ಇದೇ ದಿನದಂದು ವಿಜಯ ಸಾಧಿಸಿ ತನ್ನ ಆಡಳಿತವನ್ನು ಪ್ರಾರಂಭಿಸುತ್ತಾನೆ. ಹೀಗಾಗಿ ಯುಗಾದಿಯೆಂದು ಶಾಲಿವಾಹನ ಶಕೆ ಪ್ರಾರಂಭವಾಯಿತು. ಹೀಗೆ ಯುಗಾದಿ ಹಲವು ಹೊಸತನಗಳಿಗೆ ಹೊಸ ಹುರುಪನ್ನು ಹಾಗೂ ನವಚೇತನವನ್ನು ನೀಡುವ ಮೂಲಕ ಹೊಸ ವರ್ಷಕ್ಕೆ ಬುನಾದಿಯಾಗುತ್ತದೆ.

    ಎಲ್ಲರೂ ಸಂಭ್ರಮದಿಂದ ಆಚರಿಸುವ ಈ ಯುಗಾದಿ ಎಲ್ಲರಲ್ಲೂ ಹೊಸ ಆರಂಭಕ್ಕೆ ದಾರಿ ಮಾಡಿಕೊಡಲಿ, ಹಿಂದೂಗಳ ಹೊಸ ವರ್ಷ ಎಲ್ಲರ ಮನೆ-ಮನಗಳಲ್ಲಿ ಹೊಸತನ್ನು ತರಲಿ.

    ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು!

  • ಯುಗಾದಿ ಹಬ್ಬದ ದೇಸಿ ಸೊಗಡು, ಗ್ರಾಮೀಣ ಕ್ರೀಡೆಗಳ ಗಮ್ಮತ್ತು!

    ಯುಗಾದಿ ಹಬ್ಬದ ದೇಸಿ ಸೊಗಡು, ಗ್ರಾಮೀಣ ಕ್ರೀಡೆಗಳ ಗಮ್ಮತ್ತು!

    ಚೈತ್ರಮಾಸದ ಮೊದಲ ದಿನವೆಂದರೆ ಹಾಗೇ ಹೊಸ ಮಾಸದ ಘಮಲು, ಹೊಸ ಭರವಸೆಯ ಕನಸು. ಹಳೆಯದೆಲ್ಲವ ಅಳಿಸಿ, ಹೊಸತಾಗುವ ಈ ಹಬ್ಬ ವರ್ಷಾರಂಭದ ಸಂಕೇತ.

    ಮಾಗೀಯ ಕಾಲ ಮುಗಿದು ಬೇಸಿಗೆ ಬರುತ್ತಿದ್ದಂತೆ ಪ್ರಕೃತಿ ಮೈದುಂಬಿಕೊಳ್ಳುವುದರೊಂದಿಗೆ, ಹಬ್ಬ ಬಂದೇಬಿಡುತ್ತೆ. ವಸಂತಮಾಸ ಬರಲು ಸೃಷ್ಟಿಯು ಚಿಗುರಿ ಹೂವು ಮಿಡಿಗಳನ್ನು ಹೊತ್ತು ನಿಲ್ಲುತ್ತದೆ. ದುಂಬಿಗಳು ಝೇಂಕರಿಸಿ ಮೊಗ್ಗು, ಹೂವುಗಳೊಡನೆ ನರ್ತಿಸುತ್ತದೆ. ಕೋಗಿಲೆಯು ಚಿಗುರು ಮೆದ್ದು ಕಂಠ ಪರಿಶುದ್ಧವಾಗಿ ಹಾಡುತ್ತದೆ. ಸಕಲ ಸೃಷ್ಟಿಯೇ ಪ್ರಾಯ ತುಂಬಿ ಕುಲು ಕುಲು ನಗುತ್ತದೆ. ಯುಗಾದಿಗೆ ಆಮಿಸುವ ಸಂಕೇತ ಇದು. ಇದನ್ನೂ ಓದಿ: ಬೇವು – ಬೆಲ್ಲ ಸಿಹಿ, ಕಹಿಯ ಸಮಾನ ಹಂಚಿಕೆ ಬಾಳಿಗೊಂದು ಸವಿ ಪಾಠ

    ಗ್ರಾಮೀಣ ಕ್ರೀಡೆಗಳ ಗಮ್ಮತ್ತು
    ಯುಗಾದಿ ಸಂದರ್ಭದಲ್ಲಿ ಹಲವು ಆಟಗಳ ಮೂಲಕ ಜನಪದರು ತಮ್ಮ ಕಷ್ಟ ಸುಖ ಹಂಚಿಕೊಳ್ಳುತ್ತಾರೆ. ಹೊಲದಲ್ಲಿ ದುಡಿದು ರಾಶಿ ಮಾಡಿ ಹೊಸ ಬೆಳೆಯನ್ನು ಮನೆ ತುಂಬಿಸಿಕೊಂಡ ನಮ್ಮ ರೈತಾಪಿ ಜನರು ಯುಗಾದಿ ಬರುವ ಹೊತ್ತಿಗೆ ನಿರಾಳವಾಗಿರುತ್ತಾರೆ. ಹಬ್ಬದ ಸಂದರ್ಭದಲ್ಲಿ ಹಲವಾರು ಜನಪದ ಆಟಗಳು ಗರಿಗೆದರುತ್ತವೆ. ಇದನ್ನೂ ಓದಿ: ಹೊಸ ವರುಷ.. ಹೊಸ ಹರುಷದ ಯುಗಾದಿ ಮತ್ತೆ ಬಂದಿದೆ

    ಲಗೋರಿ, ಕಬಡ್ಡಿ, ಚೌಕಾಬಾರ, ಬಟ್ಟೆ ಚಂಡಾಟ, ಚಿನ್ನಿದಾಂಡು, ಬುಗರಿ, ಕುಂಟೆಬಿಲ್ಲೆ, ಸರಗೆರಿ, ಅದೆಷ್ಟೋ ದೂರದಲ್ಲಿ ತೆಂಗಿನ ಕಾಯಿ ಕಟ್ಟಿ ಕಲ್ಲಿನಿಂದ ಹೊಡೆಯುವುದು, ಗೋಲಿ ಆಟ, ಇತ್ತೀಚಿನ ದಿನಗಳಲ್ಲಿ ಇಸ್ಪೀಟು ಹೀಗೆ ಹತ್ತಾರು ಆಟಗಳನ್ನು ಸಣ್ಣವರು ದೊಡ್ಡವರೆನ್ನದೇ ಆಡುತ್ತಾರೆ. ಆಟದ ಸೋಲು ಗೆಲುವುಗಳು ಬರುವ ವರ್ಷದ ಸೋಲು ಗೆಲುವುಗಳನ್ನು ನಿರ್ಣಯಿಸುತ್ತದೆಂಬ ನಂಬಿಕೆ ಜನಪದರಲ್ಲಿದೆ. ಇದನ್ನೂ ಓದಿ: ಯುಗಾದಿ ಸ್ಪೆಷಲ್;‌ ಆರೋಗ್ಯಕರ ಪಚಡಿ ರೆಸಿಪಿ!

    ಹೊನ್ನೆತ್ತು
    ಕೆಲವು ಹಳ್ಳಿಗಳಲ್ಲಿ ಎತ್ತುಗಳನ್ನು ಓಡಿಸುವ ಆಟವಾಡುತ್ತಾರೆ. ಚೆನ್ನಾಗಿ ಮೇಯಿಸಿದ ಒಂದು ಎತ್ತಿನ ಕೊಂಬಿಗೆ ಐದಣವನ್ನು ಬಟ್ಟೆಯಿಂದ ಕಟ್ಟಿ ಅದರ ಹಗ್ಗ ಮೂಗುದಾರ ಬಿಚ್ಚಿ ರಂಗದ ಮುಂದೆ ನಿಲ್ಲಿಸಲಾಗುತ್ತದೆ. ನಂತರ ಅದನ್ನು ಜನರ ಸಮ್ಮುಖದಲ್ಲಿ ಕೆಣಕಿ ಓಡಿಸುತ್ತಾರೆ. ಹೀಗೆ ಓಡುವ ಎತ್ತನ್ನು ಕಟ್ಟುಮಸ್ತಾದ ಯುವಕರು ಓಡಾಡಿಸಿಕೊಂಡು ಹಿಡಿದು ನಿಲ್ಲಿಸಿದ್ರೆ, ಕಟ್ಟಿದ ಐದಣ ಸಿಗೋದಲ್ಲದೇ ಊರಲ್ಲಿ ಅವರ ಪ್ರತಿಷ್ಠೆಯು ಹೆಚ್ಚಾಗುತ್ತದೆ. ಈ ಆಟಕ್ಕೆ ಹೊನ್ನೆತ್ತು ಎನ್ನುತ್ತಾರೆ, ಜಲ್ಲಿಕಟ್ಟು ಆಟಕ್ಕೆ ಸಮ.

    ಹೀಗೆ ಪ್ರತಿ ವರ್ಷ ಹಿಂದೂಗಳ ಹೊಸವರ್ಷವಾದ ಈ ಹಬ್ಬದಲ್ಲಿ ಪ್ರಕೃತಿ ಚಿಗುರಿನೊಂದಿಗೆ ಜನ ಹೊಸ ಹೊಸ ಸಂಕಲ್ಪಗಳನ್ನು ಕಟ್ಟಿಕೊಳ್ಳುವುದು, ಹೊಸ ಜೀವನಕ್ಕೆ ಮುನ್ನುಡಿ‌ ಬರೆಯುವುದು ಈ ಹಬ್ಬದ ಉದ್ದೇಶವೆಂದು ಜನ ನಂಬುತ್ತಾರೆ. ‌ಇಂತಹ ನಂಬಿಕೆ ಜನಪದ ಕ್ರೀಡೆಗಳಲ್ಲಿ ಇಂದಿಗೂ ಮಿಳಿತಗೊಂಡಿದೆ. ಇದನ್ನೂ ಓದಿ: ಯುಗಾದಿ ವಿಶೇಷ – ಏನಿದು ಗುಡಿಪಾಡ್ವ? ಯಾಕೆ ಈ ಆಚರಣೆ?

  • ಯುಗಾದಿ ಹಬ್ಬವನ್ನು ಬೇರೆ ಬೇರೆ ರಾಜ್ಯಗಳಲ್ಲಿ ಹೇಗೆಲ್ಲಾ ಆಚರಿಸುತ್ತಾರೆ?

    ಯುಗಾದಿ ಹಬ್ಬವನ್ನು ಬೇರೆ ಬೇರೆ ರಾಜ್ಯಗಳಲ್ಲಿ ಹೇಗೆಲ್ಲಾ ಆಚರಿಸುತ್ತಾರೆ?

    ಯುಗಾದಿ ಎಂದರೆ ಹಿಂದೂ ಪಂಚಾಂಗದ ಪ್ರಕಾರ ಹೊಸ ವರ್ಷದ ಮೊದಲ ದಿನ. ಯುಗಾದಿ (Ugadi) ಎಂಬ ಪದವು ಸಂಸ್ಕೃತದಿಂದ ಬಂದಿದೆ. ಹಿಂದೂಗಳು ಈ ದಿನವನ್ನು ಹೊಸ ವರ್ಷವಾಗಿ ಆಚರಿಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯುಗಾದಿಯು ಒಂದು ಪ್ರಮುಖ ವಿಶ್ವ ಚಕ್ರದ ಆರಂಭವನ್ನು ಸೂಚಿಸುತ್ತದೆ. ಯುಗಾದಿಯನ್ನು ವಿಶೇಷವಾಗಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಜನರು ಆಚರಿಸುತ್ತಾರೆ.

    ಕರ್ನಾಟಕದಲ್ಲಿ ಯುಗಾದಿ ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಯುಗಾದಿ ಎಂದು ಆಚರಿಸಿದರೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವ (Gudi Padwa), ತಮಿಳುನಾಡಿನಲ್ಲಿ ಪುತಂಡು, ಪಂಜಾಬ್‌ನಲ್ಲಿ ಬೈಸಾಕಿ, ಕೇರಳದಲ್ಲಿ ವಿಷು ಎಂದು ಆಚರಿಸಲಾಗುತ್ತದೆ. ಇದನ್ನೂ ಓದಿ: ಹೊಸ ವರುಷ.. ಹೊಸ ಹರುಷದ ಯುಗಾದಿ ಮತ್ತೆ ಬಂದಿದೆ

    ಆಂಧ್ರಪ್ರದೇಶ ಮತ್ತು ತೆಲಂಗಾಣದ ಯುಗಾದಿ

    ಪೂಜೆ ಮತ್ತು ಅಭ್ಯಂಗ ಸ್ನಾನದೊಂದಿಗೆ ಪ್ರಾರಂಭವ ಹಬ್ಬದ ಆಚರಣೆ. ಮನೆಗಳನ್ನು ಸ್ವಚ್ಛಗೊಳಿಸಿ ಮಾವಿನ ಎಲೆ ತೋರಣ ಮತ್ತು ರಂಗೋಲಿಗಳಿಂದ ಅಲಂಕರಿಸಲಾಗುತ್ತದೆ. ಮುಂದೆ ಪಂಚಾಂಗ ಓದುವಿಕೆಯೊಂದಿಗೆ ವರ್ಷದ ಒಳಿತುಗಳ ಬಗ್ಗೆ ತಿಳಿಯುತ್ತಾರೆ. ಜೀವನದ ವಿವಿಧ ಅನುಭವಗಳನ್ನು ಪ್ರತಿನಿಧಿಸುವ ಆರು ರುಚಿಗಳನ್ನು ಹೊಂದಿರುವ ʻಯುಗಾದಿ ಪಚಡಿʼ ಎಂಬ ಸಾಂಕೇತಿಕ ಖಾದ್ಯವನ್ನು ತಯಾರಿಸಲಾಗುತ್ತದೆ. ಇದನ್ನೂ ಓದಿ: ಯುಗಾದಿ ಸ್ಪೆಷಲ್;‌ ಆರೋಗ್ಯಕರ ಪಚಡಿ ರೆಸಿಪಿ!

    ಕರ್ನಾಟಕದ ಯುಗಾದಿ

    ಯುಗಾದಿಯಂದು ಪ್ರಾರ್ಥನೆ ಮತ್ತು ಎಣ್ಣೆ ಸ್ನಾನದೊಂದಿಗೆ ದಿನವನ್ನು ಆರಂಭಿಸುತ್ತಾರೆ. ನಂತರ ಬೇವು ಮತ್ತು ಬೆಲ್ಲದ ಸೇವಿಸುತ್ತಾರೆ. ಇದು ಜೀವನದ ಸಿಹಿ ಮತ್ತು ಕಹಿ ಕ್ಷಣಗಳನ್ನು ಸಂಕೇತಿಸುತ್ತದೆ. ಅಂದು ದೇವಾಲಯಗಳಿಗೆ ತೆರಳಿ ಒಳಿತಿಗಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ.

    ಮಹಾರಾಷ್ಟ್ರ ಮತ್ತು ಗೋವಾದ ಗುಡಿ ಪಾಡ್ವ

    ವಸಂತ ಋತುವಿನ ಆಗಮನ ಮತ್ತು ರಬಿ ಬೆಳೆಗಳ ಕೊಯ್ಲಿಗೆ ಸೂಚಿಸುವ ಹಬ್ಬದಂದು ಮನೆಗಳಲ್ಲಿ ಗುಡಿ ಅಂದರೆ ಧ್ವಜ ಹಾರಿಸುವ ಮೂಲಕ ಹಬ್ಬವನ್ನು ಆಚರಿಸುತ್ತಾರೆ. ದುಷ್ಟಶಕ್ತಿಗಳನ್ನು ದೂರವಿಡುತ್ತದೆ ಎಂದು ನಂಬಲಾದ ಗುಡಿಯನ್ನು ಉದ್ದವಾದ ಬಿದಿರಿನ ಕೋಲಿನ ಮೇಲೆ ಹಳದಿ, ಹಸಿರು ಅಥವಾ ಕೆಂಪು ಬಣ್ಣದ ರೇಷ್ಮೆ ಬಟ್ಟೆಯಿಂದ ಕಟ್ಟಲಾಗುತ್ತದೆ. ಗುಡಿಯ ಮೇಲೆ ಬೇವಿನ ಎಲೆ, ಮಾವಿನ ಎಲೆ, ಹೂವು ಮತ್ತು ಸಕ್ಕರೆ ಹರಳುಗಳ ಹಾರವನ್ನು ಹಾಕಿ, ತಲೆಕೆಳಗಾದ ಕಂಚು, ಬೆಳ್ಳಿ ಅಥವಾ ತಾಮ್ರದ ಕಲಶದಿಂದ ಅಲಂಕರಿಸುವ ಮೂಲಕ ಆಚರಿಸುತ್ತಾರೆ. ಇದನ್ನೂ ಓದಿ: ಯುಗಾದಿ ವಿಶೇಷ – ಏನಿದು ಗುಡಿಪಾಡ್ವ? ಯಾಕೆ ಈ ಆಚರಣೆ?

    ತಮಿಳುನಾಡಿನ ಪುತಂಡು

    ತಮಿಳರು ಹೊಸ ವರ್ಷವನ್ನು ಸ್ವಾಗತಿಸಲು ಮನೆಗಳನ್ನು ಸ್ವಚ್ಛಗೊಳಿಸುತ್ತಾರೆ. ಹಳೆಯ ವಸ್ತುಗಳನ್ನು ಎಸೆದು, ಮನೆಯ ಮುಂದೆ ರಂಗೋಲಿಯನ್ನು ಬಿಡಿಸುತ್ತಾರೆ. ಹೊಸ ಬಟ್ಟೆಗಳನ್ನು ಧರಿಸುತ್ತಾರೆ. ʻಮಾಂಗ ಪಚಡಿʼ ಎಂಬ ವಿಶೇಷ ಪದಾರ್ಥವನ್ನು ತಯಾರಿಸುತ್ತಾರೆ. 

    ಕೇರಳದ ವಿಷು

    ಕೇರಳದಲ್ಲಿ ಈ ಹಬ್ಬದಂದು ದೇವರ ಕೋಣೆಯಲ್ಲಿ ʻವಿಷು ಕಣಿʼ ಇಡುವ ಸಂಪ್ರದಾಯವಿದೆ. ವಿಷುಕಣಿ ವಿಷು ಹಬ್ಬದ ಪ್ರಮುಖ ಭಾಗವಾಗಿದೆ. ವಿಷು ಹಬ್ಬದ ಹಿಂದಿನ ದಿನವೇ ಮನೆಯನ್ನು ಶುಚಿಗೊಳಿಸಿ ಶೃಂಗಾರ ಮಾಡುತ್ತಾರೆ. ದೇವರ ಕೋಣೆಯಲ್ಲಿ ಕಣಿ ಕಾಣಲು ಬೇಕಾದ ವಸ್ತುಗಳನ್ನು ತಯಾರು ಮಾಡುತ್ತಾರೆ. ದೇವರ ವಿಗ್ರಹ, ಫಲ ವಸ್ತುಗಳು, ನವ ಧಾನ್ಯ, ಹೊಸ ಬಟ್ಟೆ, ಧನ ಇತ್ಯಾದಿಯನ್ನು ಹೊಸ ಮಡಿಕೆಯಲ್ಲಿ ಅಥವಾ ಉರುಳಿ ಪಾತ್ರೆಯಲ್ಲಿ ಬೆಳ್ತಿಗೆ ಅಕ್ಕಿ, ತೆಂಗಿನಕಾಯಿ ಹಾಗೂ ಕನ್ನಡಿಯನ್ನು ಇಡುತ್ತಾರೆ. ಇದನ್ನೂ ಓದಿ: ಬೇವು – ಬೆಲ್ಲ ಸಿಹಿ, ಕಹಿಯ ಸಮಾನ ಹಂಚಿಕೆ ಬಾಳಿಗೊಂದು ಸವಿ ಪಾಠ

    ಈ ರೀತಿಯಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆಯಾದ ಆಚರಣೆಗಳ ಮೂಲಕ ಯುಗಾದಿ ಹಬ್ಬವನ್ನು ಜನರು ಸಂಭ್ರಮದಿಂದ ಆಚರಿಸುತ್ತಾರೆ. ನವ ಸಂವತ್ಸರದ ಯುಗಾದಿಯು ಕೆಡುಕನ್ನು ಹೋಗಲಾಡಿಸಿ ಒಳಿತನ್ನು ತರುತ್ತದೆ ಎಂಬುದು ಜನರ ನಂಬಿಕೆಯಾಗಿದೆ.

  • ಯುಗಾದಿ, ರಂಜಾನ್‌ ಹಬ್ಬದ ಹಿನ್ನೆಲೆ ಮಾ.31ರ ವರೆಗೆ ವಿಶೇಷ ಬಸ್‌ – ಇಲ್ಲಿದೆ ಡಿಟೇಲ್ಸ್‌

    ಯುಗಾದಿ, ರಂಜಾನ್‌ ಹಬ್ಬದ ಹಿನ್ನೆಲೆ ಮಾ.31ರ ವರೆಗೆ ವಿಶೇಷ ಬಸ್‌ – ಇಲ್ಲಿದೆ ಡಿಟೇಲ್ಸ್‌

    ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ (KSRTC) ವತಿಯಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್‌ 28, 29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ (Bengaluru) ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿವೆ.

    ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ನೀಡಿದ್ದು, ಮಾರ್ಚ್‌ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್‌ 31 ರಂದು ರಂಜಾನ್ ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ ಅನುಕೂಲಕ್ಕಾಗಿ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ. ಈ ಹೆಚ್ಚುವರಿ ಬಸ್‌ಗಳು ಮೆಜೆಸ್ಟಿಕ್, ಶಾಂತಿನಗರ, ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ. ಇದನ್ನೂ ಓದಿ: ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ

    ಮೆಜೆಸ್ಟಿಕ್‌ನಿಂದ…
    ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಈ ವಿಶೇಷ ಬಸ್‌ ಸಂಚರಿಸಲಿವೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ – ಗಂಡನ ಹಿಂಸೆ ತಾಳಲಾರದೆ ತವರು ಸೇರಿದ್ದ ಪತ್ನಿ

    ಸ್ಯಾಟಲೈಟ್‌ ಬಸ್‌ ನಿಲ್ದಾಣದಿಂದ
    ಮಂಡ್ಯ,ರಾಮನಗರ, ಕುಶಾಲನಗರ, ಚಾಮರಾಜನಗರ, ಕೊಡಗು, ವೀರಾಜಪೇಟೆ, ಪಿರಿಯಾಪಟ್ಟಣಕ್ಕೆ ಬಸ್ ಗಳು ಲಭ್ಯವಿರಲಿದೆ. ಇದನ್ನೂ ಓದಿ: ಪತ್ನಿ ತುಂಡರಿಸಿ ಸೂಟ್‍ಕೇಸ್‍ಗೆ ತುಂಬಿ, ಪುಣೆಯಲ್ಲಿ ವಿಷ ಸೇವಿಸಿದ್ದ ಹಂತಕ!

    ಶಾಂತಿನಗರ ಬಸ್ ನಿಲ್ದಾಣದಿಂದ
    ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಝಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.

  • ಯುಗಾದಿ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ಸೆಲೆಬ್ರಿಟಿಸ್

    ಯುಗಾದಿ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ಸೆಲೆಬ್ರಿಟಿಸ್

    ಯುಗಾದಿ (Ugadi Festival) ಎಂದರೆ ಹೊಸ ಆರಂಭ. ನಾಡಿನೆಲ್ಲೆಡೆ ಯುಗಾದಿ ಹಬ್ಬವನ್ನ ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಿಂದೂಗಳ ಪಾಲಿಗೆ ಯುಗಾದಿ ಅಂದ್ರೆ ಹೊಸ ಸಂವತ್ಸರದ ಆರಂಭ. ಯುಗಾದಿ ಹಬ್ಬದಂದು ಬೇವು ಬೆಲ್ಲ ಸವಿದು ಕಷ್ಟ ಸುಖವನ್ನ ಸಮವಾಗಿ ಸ್ವೀಕರಿಸಲು ಎಲ್ಲರೂ ಸಜ್ಜಾಗುತ್ತಾರೆ. ಸ್ಯಾಂಡಲ್‌ವುಡ್ ತಾರೆಯರು (Sandalwood Stars) ಕೂಡ ತಮ್ಮ ಮನೆಯಲ್ಲೂ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ.

    ನ್ಯಾಷನಲ್ ಸ್ಟಾರ್ ಯಶ್ (Yash) ಮತ್ತು ರಾಧಿಕಾ ಪಂಡಿತ್ (Radhika Pandit) ಮನೆಯಲ್ಲಿ ಯುಗಾದಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಕುಟುಂಬದ ಜೊತೆ ಖುಷಿಯಿಂದ ಸೆಲೆಬ್ರೇಟ್ ಮಾಡಿದ್ದಾರೆ. ಜೋಡಿಯ ಸುಂದರ ಫೋಟೋವನ್ನು ಶೇರ್ ಮಾಡಿ ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಶುಭಕೋರಿದ್ದಾರೆ.

    ಕನ್ನಡತಿ, ಟಾಲಿವುಡ್‌ನಲ್ಲಿ ಮಿಂಚುತ್ತಿರುವ ‘ರ‍್ಯಾಂಬೋ’ ಬೆಡಗಿ ಆಶಿಕಾ ರಂಗನಾಥ್ ಮನೆಯಲ್ಲೂ ಕೂಡ ಹಬ್ಬದ ಸಂಭ್ರಮ ಮನೆ ಮಾಡಿದೆ. ಶೂಟಿಂಗ್‌ಗೆ ಬ್ರೇಕ್ ಯುಗಾದಿ ಹಬ್ಬವನ್ನು ನಟಿ ಆಚರಿಸಿದ್ದಾರೆ.

    ಬಿಗ್ ಬಾಸ್ ಖ್ಯಾತಿಯ ನಮ್ರತಾ ಗೌಡ ಮನೆಯಲ್ಲಿಯೂ ಕೂಡ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದೆ. ಮನೆ ಮಂದಿಯ ಜೊತೆ ಹಬ್ಬದೂಟ ಮಾಡಿ ಸಂಭ್ರಮಿಸಿದ್ದಾರೆ.

    ಹೊಸ ಜೋಡಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಭುವನ್ ಅವರಿಗೂ ಈ ವರ್ಷ ಯುಗಾದಿ ಸಖತ್ ಸ್ಪೆಷಲ್. ಹಬ್ಬದ ನಡುವೆ ದೇವಸ್ಥಾನಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಬೇವು ಬೆಲ್ಲದಂತೆ ಜೀವನದಲ್ಲಿ ಬರುವ ಸಿಹಿ ಕಹಿಯನ್ನು ಸಮನಾಗಿ ಸ್ವೀಕರಿಸೋಣ. ಯುಗಾದಿ ಹಬ್ಬದ ಶುಭಾಶಯಗಳು ಎಂದು ಕಾಟೇರ ನಟಿ ಆರಾಧನಾ ರಾಮ್ (Aradhana Ram) ಶುಭ ಕೋರಿದ್ದಾರೆ. ಇದನ್ನೂ ಓದಿ:ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ನಟಿ ದಿವ್ಯಾ ಉರುಡುಗ

    ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ಈ ನೂತನ ವರ್ಷ ನಿಮಗೆ ಹೆಚ್ಚು ಆನಂದ ಮತ್ತು ಸಮೃದ್ಧಿಯನ್ನು ತಂದಿರಲಿ. ಹೊಸ ಪ್ರಾರಂಭಗಳಿಗೆ ಹಾಗೂ ಹೊಸ ಅನುಭವಗಳಿಗೆ ಮುಂದೆ ಸಿದ್ಧವಾಗಿರಿ. ಹೊಸ ಸಂವತ್ಸರದ ಹಾರೈಕೆಯೊಂದಿಗೆ ನಮ್ಮ ಯುಗಾದಿ ಹಬ್ಬದ ಶುಭಾಶಯಗಳು ಎಂದು ನಭಾ ನಟೇಶ್ (Nabha Natesh) ಹಾರೈಸಿದ್ದಾರೆ.

    ಯುಗಾದಿಯ ಶುಭಾಶಯಗಳು. ಈ ಹಬ್ಬದಲ್ಲಿ ನಿಮ್ಮ ಜೀವನಕ್ಕೆ ಸಮೃದ್ಧಿ, ಆನಂದ ಮತ್ತು ಆಶೀರ್ವಾದಗಳು ಬರಲಿ. ಹೊಸ ವರ್ಷವನ್ನು ಸಮೃದ್ಧಿಯಿಂದ ಸ್ವಾಗತಿಸೋಣ ಎಂದು ತುಪ್ಪದ ಬೆಡಗಿ ರಾಗಿಣಿ (Ragini) ಶುಭಹಾರೈಸಿದ್ದಾರೆ.

  • ಮರೆಯದಂಥ ಸವಿಸವಿ ಗಳಿಗೆ ತಂದಿತು ʻಯುಗಾದಿʼ

    ಮರೆಯದಂಥ ಸವಿಸವಿ ಗಳಿಗೆ ತಂದಿತು ʻಯುಗಾದಿʼ

    – ಯುಗಾದಿ ಎಂದರೆ ದೇಸಿ ಆಟಗಳ ಕಂಪು – ಪ್ರಾದೇಶಿಗ ಸೊಗಡಿನ ಇಂಪು

    ನವ ವಸಂತದ ಆಗಮನವಾಗುತ್ತಿದ್ದಂತೆ ಪ್ರಕೃತಿಯಲ್ಲೂ ಹೊಸತನದ ಸಂಭ್ರಮ. ಈ ಸಮಯದಲ್ಲಿ ಪ್ರಕೃತಿಯಲ್ಲೂ ತಾಜಾ ಪರಿಮಳದ ಸೊಗಡು ಆವರಿಸುತ್ತದೆ. ಇದೇ ಸಂದರ್ಭದಲ್ಲಿ ಬರುವ ಯುಗಾದಿ ಹಬ್ಬಕ್ಕೆ ಪ್ರಾದೇಶಿಕ ಆಚರಣೆಯ ಸೊಗಡು ಕೂಡ ಸೇರಿ ಬೀರುವ ಕಂಪು ಎಂದೆಂದಿಗೂ ನಿತ್ಯ ನೂತನ. ಹಾಗಾಗಿಯೇ ಯುಗಾದಿ ಹಬ್ಬವನ್ನ (Ugadi Festival) ಹಿಂದೂಗಳ ಹೊಸ ವರ್ಷವೆಂದು ಆಚರಿಸಲಾಗುತ್ತದೆ. ಈ ಹಬ್ಬ ಜನರಲ್ಲಿ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ.

    ಯುಗಾದಿ ಹಬ್ಬದ ಸಂಭ್ರಮ ಹೆಚ್ಚಿಸುವ ಪ್ರಕೃತಿಯ ಕಂಪಿಗೆ ಪ್ರಾದೇಶಿಕ ಸೊಗಡು ಸೇರಿದರೆ ಇನ್ನಷ್ಟು ಹಿತ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಅದರಲ್ಲೂ ಪ್ರತಿ ವಿಷಯದಲ್ಲಿ ವೈವಿಧ್ಯತೆಯಲ್ಲಿ ಏಕತೆ ಸಾರುವ ಭಾರತದಲ್ಲಿ ಯುಗಾದಿಯ ಆಚರಣೆ ಕೂಡ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಭಿನ್ನವಾಗಿರುತ್ತದೆ. ಆಯಾ ಪ್ರಾದೇಶಿಕತೆ ಮತ್ತು ಸ್ಥಳೀಯ ಸೊಗಡನ್ನು ತಮ್ಮದಾಗಿಸಿಕೊಂಡು ಪ್ರಾದೇಶಿಕ ರೀತಿಯಲ್ಲಿ ಆಚರಿಸಲ್ಪಡುವ ಯುಗಾದಿ, ಆ ಭಾಗದ ಗ್ರಾಮೀಣ ಸೊಗಡನ್ನು ಇತರರಿಗೆ ಪಸರಿಸುತ್ತದೆ. ಈ ಮೂಲಕ ಸ್ಥಳೀಯ ಸೊಗಡಿನ ಹಬ್ಬದ ಘಮಲು ಆ ಸ್ಥಳೀಯತೆ ಮೀರಿ, ಪ್ರದೇಶ, ಜಿಲ್ಲೆಗಳಿಗೆ ಪಸರಿಸಿ ಗಮನ ಸೆಳೆಯುತ್ತದೆ.

    ಇಂಥ ಸ್ಥಳೀಯ ಸೊಗಡಿನ ಯುಗಾದಿಯಲ್ಲಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಆಚರಣೆ ಪ್ರಮುಖವಾದದ್ದು. ಅಪ್ಪಟ ದೇಸಿ ಶೈಲಿಯಲ್ಲಿ ಆಚರಿಸಲ್ಪಡುವ ಈ ಭಾಗದ ಯುಗಾದಿಯಲ್ಲಿ ಹೊಸ ವರ್ಷದ ಸಂಭ್ರಮ, ನಳನಳಿಸುವ ಪ್ರಕೃತಿ ಮತ್ತು ದೇಸಿ ಸೊಗಡು ಮನೆಮಾಡಿರುತ್ತವೆ. ಆ ಕಡೆ ಗುಡಿ ಪಾಡ್ವ ಎಂದೂ ಕರೆಯಲ್ಪಡುವ ಯುಗಾದಿಗೆ ಮಹಾರಾಷ್ಟ್ರ ಭಾಗದ ಪ್ರಭಾವವೂ ಇದೆ.

    ದೇಸಿ ಆಟಗಳ ಸಿಹಿ-ಕಹಿ ನೆನಪು:
    ಯುಗಾದಿ ಸಂದರ್ಭದಲ್ಲಿ ಆಡುವ ಹಲವು ಆಟಗಳ ಮೂಲಕ ಜನಪದರು ತಮ್ಮ ಕಷ್ಟ ಸುಖ ಹಂಚಿಕೊಳ್ಳುತ್ತಾರೆ. ಹೊಲದಲ್ಲಿ ದುಡಿದು ರಾಶಿ ಮಾಡಿ ಹೊಸ ಬೆಳೆಯನ್ನು ಮನೆ ತುಂಬಿಸಿಕೊಂಡ ನಮ್ಮ ರೈತರು ಯುಗಾದಿ ಬರುವ ಹೊತ್ತಿಗೆ ನಿರಾಳವಾಗಿರುತ್ತಾರೆ. ಹಬ್ಬದ ಸಂದರ್ಭದಲ್ಲಿ ಹಲವಾರು ಜನಪದ ಆಟಗಳು ಗರಿಗೆದರುತ್ತವೆ. ಲಗೋರಿ, ಕಬಡ್ಡಿ, ಚೌಕಾಬಾರ, ಬಟ್ಟೆ ಚಂಡಾಟ, ಚಿನ್ನಿದಾಂಡು, ಬುಗರಿ, ಕುಂಟೆಬಿಲ್ಲೆ, ಸರಗೆರಿ ಹೀಗೆ ಹತ್ತಾರು ಆಟಗಳನ್ನು ವಯಸ್ಸಿನ ಅಂತರವಿಲ್ಲದೇ ಆಡುತ್ತಾರೆ. ಆಟದ ಸೋಲು-ಗೆಲುವುಗಳು ಬರುವ ವರ್ಷದ ಸೋಲು ಗೆಲುವುಗಳನ್ನು ನಿರ್ಣಯಿಸುತ್ತದೆ ಎಂಬ ನಂಬಿಕೆಯೂ ಜನಪದರಲ್ಲಿ ಇದೆ.

  • ಯುಗಾದಿ ಚಂದ್ರನ ದರ್ಶನ – ಏನಿದರ ಮಹತ್ವ?

    ಯುಗಾದಿ ಚಂದ್ರನ ದರ್ಶನ – ಏನಿದರ ಮಹತ್ವ?

    ಹಿಂದೂ ಧರ್ಮದ (Hindu Religion) ಬಹುತೇಕ ಆಚರಣೆಗಳು ಪ್ರಕೃತಿಯೊಂದಿಗೆ ಸಂಬಂಧ ಹೊಂದಿವೆ. ಅದೇ ರೀತಿ ಯುಗಾದಿ ಹಬ್ಬ (Ugadi Festival) ಸಹ ಪ್ರಕೃತಿ ವಸಂತ ಕಾಲದ ಉತ್ತುಂಗದಲ್ಲಿದ್ದಾಗ ಆಚರಿಸುವ ವಿಶೇಷ ಹಬ್ಬವಾಗಿದೆ. ಈ ಸಮಯದಲ್ಲಿ ಪ್ರಕೃತಿಯೇ ಹಸಿರು, ಹೂವಿನ ತಳಿರು ತೋರಣ ಕಟ್ಟಿ ಸಂಭ್ರಮಿಸುತ್ತಿರುತ್ತದೆ. ಈ ಹಬ್ಬದಂದು ಸಂಜೆ ಚಂದ್ರನ (Moon) ದರ್ಶನಕ್ಕೆ ಸಹ ವಿಶೇಷ ಮಹತ್ವವಿದೆ.

    ಗಣಪತಿ ತನ್ನ ವಾಹನ ಇಲಿಯನ್ನೇರಿ ಹೋಗುತ್ತಿದ್ದಾಗ ಆಯತಪ್ಪಿ ಬೀಳುತ್ತಾನೆ. ಇದನ್ನು ಕಂಡು ಆಕಾಶದಲ್ಲಿದ್ದ ಚಂದ್ರ ನಗುತ್ತಾನೆ. ಇದನ್ನು ನೋಡಿದ ಗಣೇಶ, ಚೌತಿಯ ದಿನ ಚಂದ್ರನನ್ನು ನೋಡಿದರೆ ಅಪವಾದ ಬರಲಿ ಎಂದು ಶಾಪ ನೀಡುತ್ತಾನೆ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಶಾಪ ವಿಮೋಚನೆಗೆ ಯುಗಾದಿ ಚಂದ್ರನ ದರ್ಶನ ಮಾಡಬೇಕು ಎಂಬ ನಂಬಿಕೆ ಇದೆ.

    ಚಂದ್ರ ಶುದ್ಧತೆ, ಬುದ್ಧಿವಂತಿಕೆಯ ಸಂಕೇತ

    ಹಿಂದೂ ಧರ್ಮದ ಪ್ರಕಾರ, ಚಂದ್ರ ನವಗ್ರಹಗಳಲ್ಲಿ ಒಬ್ಬ, ಶುದ್ಧತೆ, ಬುದ್ಧಿವಂತಿಕೆ ಹಾಗೂ ಉತ್ತಮ ನಡವಳಿಕೆಯ ಸಂಕೇತವಾಗಿ ಆತನನ್ನು ಬಿಂಬಿಸಲಾಗುತ್ತದೆ. ಅಂತಹ ಚಂದ್ರನನ್ನು ವರ್ಷದ ಆದಿ ಪರ್ವವಾದ ಯುಗಾದಿಯಂದು ದರ್ಶನ ಪಡೆದರೆ, ಇಡೀ ವರ್ಷವೆಲ್ಲಾ ಸುಖ-ಸಂತೋಷದಿಂದ ಇರುತ್ತಾರೆ ಎಂಬ ನಂಬಿಕೆ ಇದೆ. ಇದೇ ನಂಬಿಕೆಯಿಂದ ಹಿಂದಿನಿಂದಲೂ ಯುಗಾದಿ ಚಂದ್ರನನ್ನು ನೋಡುವುದು ವಾಡಿಕೆಯಾಗಿದೆ. ಯುಗಾದಿಯ ಹಿಂದಿನ ದಿನ ಅಮಾವಾಸ್ಯೆಯಲ್ಲಿ ಬರುವುದರಿಂದ ಮರು ದಿನ ಚಂದ್ರನ ದರ್ಶನಕ್ಕೆ ಪುಣ್ಯ ಮಾಡಿರಬೇಕು!

    ಚಂದ್ರ ದರ್ಶನದಿಂದ ಮಳೆ-ಬೆಳೆ ಲೆಕ್ಕಾಚಾರ

    ಯುಗಾದಿ ದಿನದಂದು ಕಾಣಿಸುವ ಚಂದ್ರನನ್ನು ಆಧರಿಸಿ ಹಿಂದೆ ಆ ವರ್ಷದ ಮಳೆ-ಬೆಳೆ, ರೋಗ-ರುಜಿನಗಳು, ಏಳು-ಬೀಳುಗಳ ಬಗ್ಗೆ ಚಿಂತನೆ ಮಾಡುತ್ತಿದ್ದರು. ಯುಗಾದಿಯಂದು ಚಂದ್ರನು ಅತ್ಯಂತ ಚಿಕ್ಕದಾಗಿ ಸಣ್ಣ ಗೆರೆಯ ರೀತಿಯಲ್ಲಿ ಕಾಣ ಸಿಗುತ್ತಾನೆ. ಇದನ್ನು ಆಧರಿಸಿ ವರ್ಷದ ಭವಿಷ್ಯವನ್ನು ನಿರ್ಧರಿಸುತ್ತಿದ್ದರು. ಅದಕ್ಕೆಂದೇ ಹೊಸ ವರ್ಷದ ಪಂಚಾಂಗವನ್ನು ಪಠಿಸಿ, ಅನಂತರ ಚಂದ್ರ ದರ್ಶನವನ್ನು ಮಾಡಲಾಗುತ್ತದೆ.