Tag: ಯುಗಾದಿ ಹಬ್ಬ

  • ಯುಗಾದಿ, ರಂಜಾನ್‍ಗೆ ಸಾಲುಸಾಲು ರಜೆ – ಕೆಎಸ್‌ಆರ್‌ಟಿಸಿಯಿಂದ 2275 ವಿಶೇಷ ಬಸ್ ವ್ಯವಸ್ಥೆ

    ಯುಗಾದಿ, ರಂಜಾನ್‍ಗೆ ಸಾಲುಸಾಲು ರಜೆ – ಕೆಎಸ್‌ಆರ್‌ಟಿಸಿಯಿಂದ 2275 ವಿಶೇಷ ಬಸ್ ವ್ಯವಸ್ಥೆ

    ಬೆಂಗಳೂರು: ಯುಗಾದಿ ಹಬ್ಬಕ್ಕೆ ನಗರದಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಜನರಿಗೆ ಕೆಎಸ್‌ಆರ್‌ಟಿಸಿ (KSRTC) ಗುಡ್‍ನ್ಯೂಸ್ ಕೊಟ್ಟಿದೆ. ಯುಗಾದಿ (Ugadi), ರಂಜಾನ್ (Ramzan) ಹಬ್ಬದ ಸಾಲುಸಾಲು ರಜೆಗಳಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದ್ದು ಬೆಂಗಳೂರಿನಿಂದ ಹೆಚ್ಚುವರಿ ಬಸ್‍ಗಳನ್ನು ರಸ್ತೆಗಿಳಿಸಲು ನಿಗಮ ಮುಂದಾಗಿದೆ.

    ಒಟ್ಟು 2275 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ನಾಲ್ಕು ನಿಗಮಗಳು ನಿರ್ಧರಿಸಿದ್ದು, ರಜೆ ಹಿನ್ನೆಲೆ ಊರಿಗೆ ಹಾಗೂ ಪ್ರವಾಸಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ. ಕೆಎಸ್‌ಆರ್‌ಟಿಸಿಯಿಂದ 1,750ಬಸ್, ಎನ್‍ಡಬ್ಲ್ಯೂಕೆಎಸ್‍ಆರ್‌ಟಿಸಿಯ 145 ಬಸ್, ಕೆಕೆಆರ್‌ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ರಾತ್ರಿ ಆಪರೇಷನ್, ಹೆಚ್‍ಡಿಕೆಗೆ ಶಾಕ್ ಕೊಟ್ಟ ಡಿಕೆ ಬ್ರದರ್ಸ್ – ʻಕೈʼ ಹಿಡಿದ ಚನ್ನಪಟ್ಟಣದ 9 ಜೆಡಿಎಸ್‌ ಸದಸ್ಯರು

    ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಕೆಂಪೇಗೌಡ ನಿಲ್ದಾಣ, ಸ್ಯಾಟ್‍ಲೈಟ್ ನಿಲ್ದಾಣ, ಶಾಂತಿನಗರದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ ಸೇರಿದಂತೆ ಹಲವು ಸ್ಥಳಗಳಿಗೆ ವಿಶೇಷ ಬಸ್ ಸೇವೆ ಮಾಡಲಾಗಿದೆ. ಅಲ್ಲದೇ ನೆರೆರಾಜ್ಯ ಹೈದರಾಬಾದ್, ಚೆನ್ನೈ, ಗೋವಾ ಪಣಜಿ, ಶಿರಡಿ, ಎರ್ನಾಕುಲಂಗೆ ವಿಶೇಷ ಬಸ್ ಸೇವೆ ಇರಲಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

    ಸಾಲು ಸಾಲು ರಜೆ
    ಏ.7 ಭಾನುವಾರ, 9 ಮಂಗಳವಾರ ಯುಗಾದಿ ಹಬ್ಬ, ಗುರುವಾರ ರಂಜಾನ್ ಇದೆ. ಏ. 13 ಎರಡನೇ ಶನಿವಾರ ರಜೆ ಹಾಗೂ 14 ರಂದು ಭಾನುವಾರದ ರಜೆ ಇದೆ. ಕೆಲವರು ರಜೆ ಹಾಕಿ ಊರಿಗೆ ತೆರಳಲು ತಯಾರಿ ನಡೆಸಿದ್ದಾರೆ. ಏ.7ರಿಂದ 14ರ ವರೆಗೆ ಒಟ್ಟು 5 ರಜೆಗಳು ಸಿಗಲಿದೆ. ವಿದ್ಯಾರ್ಥಿಗಳಿಗೆ ರಜೆ ಶುರುವಾದ ಕಾರಣ ಮಕ್ಕಳ ಜೊತೆ ಪ್ರವಾಸಕ್ಕೆ ತೆರಳಲು ತಯಾರಿ ನಡೆಸಿರುವ ಪೋಷಕರಿಗೆ ಇದು ಅನುಕೂಲವಾಗಲಿದೆ. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್‌ನಿಂದ ಅಖಾಡದಲ್ಲಿ ಗುಪ್ತ್ ರಿಪೋರ್ಟ್ ಟೀಂ!

  • ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ- ಐತಿಹಾಸಿಕ ದೇವಾಲಯದಲ್ಲಿ ಕೌತುಕ

    ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ- ಐತಿಹಾಸಿಕ ದೇವಾಲಯದಲ್ಲಿ ಕೌತುಕ

    ಬಳ್ಳಾರಿ: ಯುಗಾದಿ ಹಬ್ಬ (Ugadi Festival) ಭಾರತೀಯರ ಹೊಸ ವರ್ಷದ ಮೊದಲ ಹಬ್ಬ. ಈ ವಿಶೇಷ ದಿನದಂದು ವಿಜಯನಗರ ಜಿಲ್ಲೆಯ ಹಳ್ಳಿಯಲ್ಲಿ ಸೂರ್ಯನ ಕೌತುಕವೊಂದು ನಡೆಯುತ್ತೆ. ಸಾವಿರ ವರ್ಷ ಇತಿಹಾಸ ಇರುವ ಲಿಂಗಕ್ಕೆ ಸೂರ್ಯ ರಶ್ಮಿ ನೇರವಾಗಿ ಬೀಳುತ್ತದೆ. ಹೀಗಾಗಿ ಇಲ್ಲಿನ ಭಕ್ತರು ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ.

    ಯುಗಾದಿ ಹಬ್ಬವನ್ನು ಹಿಂದು ಸಂಸ್ಕೃತಿ ಪ್ರಕಾರ, ಹೊಸ ವರ್ಷವಾಗಿ ಆಚರಣೆ ಮಾಡಲಾಗುತ್ತೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದ ಕಟ್ಟಿ ಬಸವೇಶ್ವರ ದೇವಸ್ಥಾನದಲ್ಲಿ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಈ ದೇವಸ್ಥಾನದಲ್ಲಿ ಯುಗಾದಿ ವೇಳೆ ಎರಡ್ಮೂರು ದಿನಗಳ ಕಾಲ ಸೂರ್ಯ ರಶ್ಮಿ ಲಿಂಗದ ಮೇಲೆ ಬೀಳುತ್ತದೆ. ಆದರೆ ಹಬ್ಬದ ದಿನ ಮಾತ್ರ ಸೂರ್ಯೋದಯವಾಗುತ್ತಿದ್ದಂತೆ ನೇರವಾಗಿ ಹೊಂಗಿರಣಗಳು ಲಿಂಗದ ಮೇಲೆ ಬೀಳುತ್ತದೆ.

    ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಈ ದೇವಸ್ಥಾನವನ್ನು ನಿರ್ಮಾಣ ಮಾಡಲಾಗಿದೆ. ಸೂರ್ಯನ ಚಲನೆ ಆಧಾರದ ಮೇಲೆ ನಿರ್ಮಿಸಲಾಗಿರುವ ವಿಶಿಷ್ಟ ವಾಸ್ತುಶಿಲ್ಪ ಹೊಂದಿರುವ ಈ ದೇವಾಲಯ ಪ್ರತಿವರ್ಷ ಯುಗಾದಿಯ ದಿನ ಈ ಅಚ್ಚರಿಗೆ ಕಾರಣವಾಗುತ್ತಿದೆ. ದೇವಸ್ಥಾನದಲ್ಲಿ ಯುಗಾದಿ ಹಬ್ಬದ ದಿನದಂದು, ವಿಶೇಷ ಪೂಜೆ ಮಾಡಲಾಗುತ್ತದೆ. ನೂರಾರು ಭಕ್ತರು ಸೂರ್ಯನ ಮೊದಲ ಕಿರಣ ಶಿವಲಿಂಗದ ಮೇಲೆ ಬೀಳುವ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಾರೆ.

    ವರ್ಷಕ್ಕೆ ಒಂದು ಬಾರಿ ನಡೆಯುವ ಈ ದೇವಸ್ಥಾನದ ಕುತೂಹಲವನ್ನು ಜನರು ಕಾತುರದಿಂದ ಎದರು ನೋಡುತ್ತಾರೆ. ಶತಮಾನದ ಇತಿಹಾಸ ಇರುವ ಈ ದೇವಾಲಯ ಖಗೋಳ ಕೌತುಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಸಮುದಾಯ ನಂಬದೇ ಅಭಿವೃದ್ಧಿ ಕೆಲಸದಿಂದ ಜಯ: ಇದು ಕಲಬುರಗಿ ವಿಶೇಷತೆ

  • ಮುಷ್ಕರ ವಾಪಸ್‌ – ಸಾರಿಗೆ ನೌಕರರ ಒಕ್ಕೂಟದಲ್ಲೇ ಭಿನ್ನಮತ ಸ್ಫೋಟ

    ಮುಷ್ಕರ ವಾಪಸ್‌ – ಸಾರಿಗೆ ನೌಕರರ ಒಕ್ಕೂಟದಲ್ಲೇ ಭಿನ್ನಮತ ಸ್ಫೋಟ

    ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಮುಷ್ಕರ ವಿಚಾರದಲ್ಲಿ ಸಾರಿಗೆ ನೌಕರರ ಒಕ್ಕೂಟದಲ್ಲೇ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಇದರಿಂದ ಯುಗಾದಿ ಹಬ್ಬಕ್ಕೂ (Ugadi Festival) ಮುನ್ನಾ ದಿನವೇ ಅಂದರೆ ಮಾ.21ಕ್ಕೆ 8 ಟ್ರೇಡ್ ಯೂನಿಯನ್‌ಗಳು ಕರೆ ಕೊಟ್ಟಿದ್ದ ಮುಷ್ಕರ ವಾಪಸ್ ಪಡೆಯಲಾಗಿದೆ.

    ಮಾರ್ಚ್ 21 ರಂದು ನಾಲ್ಕು ನಿಗಮಗಳ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದ ಅನಂತ ಸುಬ್ಬರಾವ್ (Anantha Subbarao) ನೇತೃತ್ವದ ಜಂಟಿ ಕ್ರಿಯಾ ಸಮಿತಿ ಮುಷ್ಕರ ವಾಪಸ್ ಪಡೆದುಕೊಂಡಿದ್ದು, ಇದಕ್ಕೆ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ವಿರೋಧ ವ್ಯಕ್ತಪಡಿಸಿದೆ. ಮುಷ್ಕರ ವಾಪಸ್‌ ಪಡೆದಿರುವ ಬಗ್ಗೆ ಕೆಎಸ್‌ಆರ್‌ಸಿಟಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ಸ್ಪಷ್ಟನೆ ನೀಡಿದೆ. ಆದರೆ ಇದಕ್ಕೆ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಚಂದ್ರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾ.24ರಂದು ಮುಷ್ಕರ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಿವಾದದ ನಡುವೆಯೂ `ಉರಿಗೌಡ – ನಂಜೇಗೌಡ’ ಚಿತ್ರೀಕರಣಕ್ಕೆ ಮುಹೂರ್ತ ಫಿಕ್ಸ್!

    ಜಂಟಿ ಕ್ರಿಯಾಸಮಿತಿ ಶೇ.20 ರಷ್ಟು ವೇತನ ಹೆಚ್ಚಿಸುವಂತೆ ಒತ್ತಾಯಿಸಿತ್ತು. ಆದರೆ ಶುಕ್ರವಾರ ರಾಜ್ಯ ಸರ್ಕಾರ ಶೇ.15 ರಷ್ಟು ವೇತನ ಹೆಚ್ಚಿಸಿ ಆದೇಶ ಹೊರಡಿಸಿತ್ತು. ವೇತನ ಹೆಚ್ಚಿಸುವ ಭರವಸೆ ಜೊತೆಗೆ ಈ ಹಿಂದಿನ ಎರಡು ಸಾರಿಗೆ ಮುಷ್ಕರದ ವೇಳೆ ವಜಾಗೊಂಡಿದ್ದ ನೌಕರರನ್ನ ಮರುನೇಮಕ ಮಾಡಿಕೊಳ್ಳುವುದು ಹಾಗೂ 3 ವರ್ಷದ ವೇತನ ಬಡ್ತಿ ಹೆಚ್ಚಳಕ್ಕೂ ಸಮ್ಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೆಎಸ್ಆರ್‌ಟಿಸಿ ಎಂಡಿ ಅನ್ಬುಕುಮಾರ್ ಜೊತೆಗೆ ನಡೆದ ಸಾರಿಗೆ ಮುಖಂಡರ ಸಭೆಯಲ್ಲಿ ಮುಷ್ಕರ ವಾಪಸ್‌ ಪಡೆಯಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಮಾ.25ರಂದು ಮತ್ತೆ ಮೋದಿ ರಾಜ್ಯಕ್ಕೆ – ಬೆಂಗಳೂರಿನಲ್ಲಿ ಮೆಗಾ ರೋಡ್‌ ಶೋಗೆ ಮುಹೂರ್ತ ಫಿಕ್ಸ್‌

    ಈ ಕುರಿತು ಪಬ್ಲಿಕ್‌ ಟಿವಿಯೊಂದಿಗೆ ಮಾತನಾಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್, ಸರ್ಕಾರ ಹೊರಡಿಸಿದ ಆದೇಶದಲ್ಲಿ ಬೇಡಿಕೆ ಈಡೇರಿಲ್ಲ. ಅರಿಯರ್ಸ್, ವೇತನ ಹೆಚ್ಚಳ ವಿಚಾರವಾಗಿ ಗೊಂದಲ ಇತ್ತು. ಶೇ.15 ಏರಿಕೆ ಮಾಡಿದ ಕೂಡಲೇ ಜಂಟಿ‌ ಕ್ರಿಯಾ ಸಮಿತಿ ಯಾವುದೇ ಕಾನೂನಡಿಯಲ್ಲಿ ಪ್ರಕ್ರಿಯೆಗಳನ್ನ ಪಾಲನೆ ಮಾಡದೇ ಮುಷ್ಕರ ವಾಪಸ್ ಪಡೆದಿದ್ದಾರೆ. ಇವರ ನಡೆ ನೋಡಿದ್ರೆ 24ರ ಮುಷ್ಕರ ದಾರಿ ತಪ್ಪಿಸುವ ಹುನ್ನಾರ ಅನಿಸುತ್ತಿದೆ. ಇವರು ಸರ್ಕಾರದ ಜೊತೆ ಏನು ಮಾತುಕತೆ ನಡೆಸಿದ್ದಾರೋ ಗೊತ್ತಿಲ್ಲ. ಸರ್ಕಾರದ ಆದೇಶ ಪ್ರತಿ ಬರುವ ತನಕ ನಾವು ಕಾದು ನೋಡುತ್ತೇವೆ. ಒಂದೊಮ್ಮೆ ಆದೇಶದಲ್ಲಿ ನಮ್ಮ ಬೇಡಿಕೆ ಈಡೇರಿಕೆ ಬಗ್ಗೆ ಸ್ಪಷ್ಟತೆ ಇದ್ದರೆ, ಮುಷ್ಕರ ವಾಪಸ್ ಪಡೆಯುತ್ತೇವೆ. ಇಲ್ಲದಿದ್ದರೇ ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ ಪಡೆಯುವ ಮಾತೇ ಇಲ್ಲ. ಮಾರ್ಚ್ 24 ರಂದು ಸಾರಿಗೆ ನೌಕರರ ಮುಷ್ಕರ ಮಾಡ್ತೇವೆ ಎಂದು ತಿಳಿಸಿದ್ದಾರೆ.

  • ಯುಗಾದಿ ನಂತರ ಮೆಗಾ ಆಪರೇಷನ್‌ಗೆ `ಕೈ’ ಪಾಳಯ ಸಿದ್ಧತೆ?

    ಯುಗಾದಿ ನಂತರ ಮೆಗಾ ಆಪರೇಷನ್‌ಗೆ `ಕೈ’ ಪಾಳಯ ಸಿದ್ಧತೆ?

    ಬೆಂಗಳೂರು: ಯುಗಾದಿ ಹಬ್ಬದ (Ugadi Festival) ನಂತರ 20 ಪ್ರಮುಖ ಬಿಜೆಪಿ (BJP) ನಾಯಕರು ಹಾಗೂ ಶಾಸಕರ ಆಪರೇಷನ್‌ಗೆ ಕಾಂಗ್ರೆಸ್ (Congress) ಪಾಳಯದಲ್ಲಿ ಸಿದ್ಧತೆ ನಡೆದಿದೆ ಎನ್ನಲಾಗಿದೆ.

    ವಲಸಿಗ ಸಚಿವರೂ ಸೇರಿದಂತೆ ಹಾಲಿ ಶಾಸಕರು ಹಾಗೂ ಆಯ್ದ ಪ್ರಮುಖ ನಾಯಕರನ್ನ ಕರೆತರುವ ಕಸರತ್ತು ಜೋರಾಗಿ ನಡೆದಿದೆ. ತೆರಮರೆಯಲ್ಲಿ ನಡೆದ ಮಾತುಕತೆಗೆ ತೆರೆ ಎಳೆಯಲು ಕಾಂಗ್ರೆಸ್ ಯುಗಾದಿ ಹಬ್ಬಕ್ಕೆ ಡೆಡ್ ಲೈನ್ ಹಾಕಿಕೊಂಡಿದೆ. ಇದನ್ನೂ ಓದಿ: ಮಾನವ ಹಕ್ಕುಗಳನ್ನು ಬಳಸಿ ನಮ್ಮಲ್ಲಿ ಇರಲು ಸಾಧ್ಯವಿಲ್ಲ: ಅಕ್ರಮ ವಲಸಿಗರ ನಿಯಂತ್ರಣಕ್ಕೆ ಮುಂದಾದ ಬ್ರಿಟನ್

    ಈ ಬಾರಿ ಕೈ ನಾಯಕರು ದೊಡ್ಡ ಮಟ್ಟದ ವಲಸೆ ನಿರೀಕ್ಷೆ ಮಾಡುತ್ತಿದ್ದಾರೆ. ಸಂಖ್ಯಾಬಲ ಹೆಚ್ಚಿಸಿಕೊಂಡು 2023 ರಲ್ಲಿ ಅಧಿಕಾರ ಹಿಡಿಯೋದಕ್ಕೆ ಪಕ್ಕಾ ಲೆಕ್ಕಾಚಾರ ಮಾಡಿದೆ. ಅದಕ್ಕಾಗಿ ಬಿಜೆಪಿ (BJP), ಜೆಡಿಎಸ್‌ನ (JDS) ಪ್ರಮುಖ ನಾಯಕರು ಬರಲು ಮನಸ್ಸು ಮಾಡಿದ್ರೆ, ಅವರನ್ನ ಕರೆತರಲು ಕೈ ಪಾಳಯ ಲೆಕ್ಕಾಚಾರ ಮಾಡಿಕೊಂಡಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಹೆಂಡತಿ ಕೋಪ ಮಾಡಿಕೊಂಡಿದ್ದಾಳೆ – ಅತ್ತೆ ಮನೆಯಲ್ಲಿ ಹೋಳಿ ಆಚರಿಸೋಕೆ 10 ದಿನ ರಜೆ ಕೇಳಿದ ಇನ್ಸ್‌ಪೆಕ್ಟರ್‌

    ಸಾಧ್ಯವಾದಷ್ಟು ಮಟ್ಟಿಗೆ ಯುಗಾದಿ ಹಬ್ಬದ ಆಸುಪಾಸಿನಲ್ಲೇ ಪಕ್ಷ ಸೇರ್ಪಡೆ ಮಾಡಿಕೊಳ್ಳುವುದು ಕೈ ಪಾಳಯದ ಲೆಕ್ಕಾಚಾರ. ಆದ್ದರಿಂದ ಪಕ್ಷ ಸೇರ್ಪಡೆ ಬಗ್ಗೆ ಒಲವು ತೋರಿದವರು, ಕಾಂಗ್ರೆಸ್ ನಾಯಕರೇ ಆಹ್ವಾನ ಕೊಟ್ಟವರು ಎಲ್ಲರಿಗೂ ಯುಗಾದಿಯ ಡೆಡ್ ಲೈನ್ ನೀಡಲಾಗಿದೆ. ಯುಗಾದಿ ಮುಗಿಯುತ್ತಿದ್ದಂತೆ ಅಧಿಕೃತವಾಗಿ ಪಕ್ಷ ಸೇರ್ಪಡೆಗೆ ಆಸಕ್ತಿ ತೋರಿದರೆ ಬನ್ನಿ, ತಡವಾದರೆ ನಮಗೂ ಕಷ್ಟವಾಗಲಿದೆ ಎಂಬ ಸಂದೇಶ ರವಾನಿಸಲಾಗಿದೆ. ಮಾತುಕತೆ ನಡೆಸಿದವರು `ಕೈ’ ಪಾಳಯ ಸೇರ್ಪಡೆಗೆ ಒಪ್ಪಿದರೆ ಯುಗಾದಿಗೆ ಕಾಂಗ್ರೆಸ್‌ನಿಂದ ಮೆಗಾ ಆಪರೇಷನ್ ಫಿಕ್ಸ್ ಎಂದು ಆಪ್ತ ವಲಯದಲ್ಲಿ ಸದ್ದು ಕೇಳಿಬರುತ್ತಿದೆ.

  • ಯುಗಾದಿ ಸ್ಪೆಷಲ್ – ಬೇವು, ಬೆಲ್ಲ ಮಾಡುವ ವಿಧಾನ

    ಯುಗಾದಿ ಸ್ಪೆಷಲ್ – ಬೇವು, ಬೆಲ್ಲ ಮಾಡುವ ವಿಧಾನ

    ಹೊಸ ವರ್ಷದ ಆರಂಭದ ಸಂಕೇತವಾಗಿ ಯುಗಾದಿ ಹಬ್ಬ ಬರುತ್ತಿದೆ. ಹಬ್ಬದ ತಯಾರಿಗೆ ಈಗಾಗಲೇ ಮನೆಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಯುಗಾದಿ ಎಂದರೆ ಸಿಹಿ-ಕಹಿಯ ಹಬ್ಬವಾಗಿದೆ. ಹಾಗಾಗಿ ಈ ಹಬ್ಬದಲ್ಲಿ ಬೇವು-ಬೆಲ್ಲ ಮಾಡುವುದು ಸಂಪ್ರದಾಯ. ಆದ್ದರಿಂದ ನಿಮಗಾಗಿ ಸಿಂಪಲ್ ಆಗಿ ಬೇವು ಬೆಲ್ಲ ಮಾಡುವ ವಿಧಾನ ಇಲ್ಲಿದೆ. ಇದನ್ನೂ ಓದಿ: ಬೇವು-ಬೆಲ್ಲದ ಸಮರಸವೇ ಜೀವನ ಎಂದು ಸಾರುವ ಹಬ್ಬವೇ ಯುಗಾದಿ

    ಬೇಕಾಗುವ ಸಾಮಾಗ್ರಿ
    1. ಹುರಿಗಡಲೆ- 2 ಚಮಚ
    2. ಬೆಲ್ಲ- 1 ಚಮಚ
    3. ಒಣ ಕೊಬ್ಬರಿ ತುರಿ- 2 ಚಮಚ
    4. ಬೇವಿನ ಹೂವಿನ ದಳಗಳು -ಸ್ವಲ್ಪ ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ವಿಶೇಷ ಪಾನಕ

    ಮಾಡುವ ವಿಧಾನ:
    * ಮೊದಲಿಗೆ ಹುರಿಗಡಲೆಯನ್ನು ಮಿಕ್ಸಿ ಜಾರಿಗೆ ಹಾಕಿ ರುಬ್ಬಿಕೊಂಡು ಪುಡಿ ಮಾಡಿಕೊಳ್ಳಬೇಕು.
    * ನಂತರ ಬೆಲ್ಲವನ್ನು ಸಣ್ಣದಾಗಿ ಪುಡಿ ಮಾಡಿಕೊಳ್ಳಿ.
    * ಒಣಕೊಬ್ಬರಿಯನ್ನು ಸಣ್ಣದಾಗಿ ತುರಿದುಕೊಳ್ಳಬೇಕು.
    * ಬೇವು ಸೊಪ್ಪಿನಲ್ಲಿನ ಕೇವಲ ಹೂವಿನ ದಳಗಳನ್ನು ಮಾತ್ರ ಬಿಡಿಸಿಟ್ಟುಕೊಳ್ಳಬೇಕು. ಇಲ್ಲಿ ಎಲೆಗಳ ಬದಲಾಗಿಯೇ ಹೂವಿನ ದಳ ತೆಗೆದುಕೊಳ್ಳಲಾಗಿರುತ್ತದೆ.
    * ಮೊದಲಿಗೆ ಹುರಿಗಡಲೆ ಪೌಡರ್‍ಗೆ ಬೇವು ಹೂವಿನ ದಳಗಳನ್ನು ಹದವಾಗಿ ಮಿಶ್ರಣ ಮಾಡಿಕೊಳ್ಳಬೇಕು.
    * ನಂತರ ಕೊಬ್ಬರಿ ತುರಿ ಹಾಕಿ ಕಲಸಿಕೊಳ್ಳಿ.
    * ಕೊನೆಗೆ ಬೆಲ್ಲದ ಪುಡಿಯನ್ನು ಮಿಶ್ರಣದಲ್ಲಿ ಸೇರಿಸಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿಕೊಂಡರೆ ಯುಗಾದಿ ಹಬ್ಬ ಆಚರಿಸಲು ಬೇವು-ಬೆಲ್ಲ ರೆಡಿ ಇದನ್ನೂ ಓದಿ: ಬೇವು-ಬೆಲ್ಲ ತಿಂದು ಯುಗಾದಿಯ ವಿಶೇಷತೆ ತಿಳಿಯಿರಿ

  • ಯುಗಾದಿ ಹಬ್ಬಕ್ಕೆ ವಿಶೇಷ ಪಾನಕ

    ಯುಗಾದಿ ಹಬ್ಬಕ್ಕೆ ವಿಶೇಷ ಪಾನಕ

    ವಸಂತ ಋತುವಿನ ಆಗಮನ ಕಾಲದಲ್ಲಿ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ಯುಗಾದಿ ಹಬ್ಬ ಸಮೃದ್ಧಿಯನ್ನು ಸೂಚಿಸುತ್ತದೆ. ಈ ಹಬ್ಬಕ್ಕೆ ವಿಶೇಷವೆಂದು ರುಚಿಯಾದ ಸ್ವೀಟ್‍ಗಳನ್ನು ಮಾಡಲಾಗುತ್ತದೆ. ಹಬ್ಬದ ವಿಶೇಷವಾಗಿ ಸಾಂಪ್ರದಾಯಿಕ ಖಾದ್ಯವನ್ನು ತಯಾರಿಸಲಾಗುತ್ತದೆ. ಯುಗಾದಿ ಹಬ್ಬದಂದು ಬೇವು-ಬೆಲ್ಲವನ್ನು ತಿನ್ನುವುದು ಆಚರಣೆ. ಇದೇ ಬೇವು-ಬೆಲ್ಲದಿಂದ ಸ್ಪೆಷಲ್ ಪಾನಕ ತಯಾರಿಸುವ ವಿಧಾನ ಇಲ್ಲಿದೆ.

    ಬೇಕಾಗುವ ಸಾಮಾಗ್ರಿಗಳು:
    1. ಬೇವಿನ ಹೂವು – ಸ್ವಲ್ಪ
    2. ದ್ರಾಕ್ಷಿ – 4-5
    3. ಮಾವಿನ ಕಾಯಿ – 3 ಚಮಚ
    4. ಬೆಲ್ಲ – ಅರ್ಧ ಕಪ್
    5. ಬಾಳೆಹಣ್ಣು – ಒಂದು
    6. ಹುರಿಗಡಲೆ ಹಿಟ್ಟು – ಅರ್ಧ ಪಕ್
    7. ಹುಣಸೆ ಹಣ್ಣಿನ ರಸ – 1 ಕಪ್
    8. ಕತ್ತರಿಸಿದ ಕಲ್ಲಂಗಡಿ- 4, 5 ಪೀಸ್
    9. ಶುಂಠಿ ಪೌಡರ್ – ಚಿಟಿಕೆ
    10. ಉಪ್ಪು – ರುಚಿಗೆ ತಕ್ಕಷ್ಟು
    11. ಬಾದಾಮಿ, ಗೋಡಂಬಿ ಮತ್ತು ಕಲ್ಲು ಸಕ್ಕರೆ -ಸ್ವಲ್ಪ

    ಬೇವು ಬೆಲ್ಲದ ಪಾನಕ ಮಾಡುವ ವಿಧಾನ:
    * ಒಂದು ಕಪ್ ಹುಣಸೆ ಹಣ್ಣಿನ ರಸವನ್ನು ದೊಡ್ಡ ಪಾತ್ರೆಗೆ ಹಾಕಿ, ಅದಕ್ಕೆ ಬೆಲ್ಲ ಮತ್ತು ಕಲ್ಲು ಸಕ್ಕರೆ ಹಾಕಿ ನೆನೆಯಲು ಬಿಡಿ.
    * ಹುಣಸೆ ಹಣ್ಣು, ಬೆಲ್ಲ ಮತ್ತು ಕಲ್ಲು ಸಕ್ಕರೆಯ ಮಿಶ್ರಣಕ್ಕೆ 2 ಚಮಚ ಹುರಿಗಡಲೆ ಹಿಟ್ಟು ಹಾಕಿ ಗಂಟು ಬರದಂತೆ ಬೆರೆಸಿ.
    * ಇತ್ತ ಮಾವಿನ ಕಾಯಿ, ದ್ರಾಕ್ಷಿ, ಕಲ್ಲಂಗಡಿ, ಬಾಳೆಹಣ್ಣು, ಬಾದಾಮಿ, ಗೋಡಂಬಿಯನ್ನು ಸಣ್ಣದಾಗಿ ಕತ್ತರಿಸಿಕೊಳ್ಳಿ. (ಮಾವಿನ ಕಾಯಿ ಕಾಯಿಯನ್ನು ಕೊಬ್ಬರಿ ತುರಿಯಂತೆ ಮಾಡಿಕೊಳ್ಳುವುದು ಉತ್ತಮ)

    * ಹುಣಸೆ ಹಣ್ಣಿನ ಮಿಶ್ರಣಕ್ಕೆ ಚಿಕ್ಕದಾಗಿ ಕತ್ತರಿಸಿಕೊಂಡಿರುವ ಎಲ್ಲ ಹಣ್ಣುಗಳನ್ನು ಒಂದೊಂದಾಗಿ ಹಾಕುತ್ತಾ ಹೋಗಬೇಕು.
    * ಈ ಮಿಶ್ರಣಕ್ಕೆ ಒಂದರಿಂದ ಎರಡು ಗ್ಲಾಸ್ ನೀರನ್ನು ಬೆರೆಸಿಕೊಳ್ಳಿ.
    * ನೀರು ಸೇರಿಸಿದ ಬಳಿಕ ಸ್ವಲ್ಪ ಶುಂಠಿ ಪೌಡರ್, ಸ್ವಲ್ಪ ಉಪ್ಪು ಹಾಕಿ, ಕೊನೆಯದಾಗಿ ಬೇವಿನ ಹೂಗಳನ್ನು ಹಾಕಿದರೆ ಬೇವು-ಬೆಲ್ಲದ ಪಾನಕ ಸಿದ್ದವಾಗುತ್ತದೆ.

  • ಯುಗಾದಿ ಹಬ್ಬಕ್ಕೆ ಕಾಯಿ ಹೋಳಿಗೆ

    ಯುಗಾದಿ ಹಬ್ಬಕ್ಕೆ ಕಾಯಿ ಹೋಳಿಗೆ

    ಯುಗಾದಿ ಹಬ್ಬ ಹತ್ತಿರ ಬರುತ್ತಿದೆ. ಮನೆಯಲ್ಲಿ ಸಿಹಿಯಾದ ತಿಂಡಿಗಳನ್ನು ಮಾಡಬೇಕು. ಹಬ್ಬ ಎಂದರೆ ಮೊದಲಿಗೆ ನೆನಪಿಗೆ ಬರುವುದೆ ಹೋಳಿಗೆ. ಬೇಳೆ ಹೋಳಿಗೆ ತಿಂದು ಬೇಸರವಾಗಿದ್ರೆ ಈ ಬಾರಿ ಮನೆಯೆಲ್ಲಿ ಕಾಯಿ ಹೋಳಿಗೆ ಮಾಡಿ ಸವಿಯಿರಿ. ಇಲ್ಲಿದೆ ಮಾಡುವ ವಿಧಾನ…

    ಬೇಕಾಗುವ ಸಾಮಗ್ರಿಗಳು:
    * ಕಾಯಿ- 3 ಕಪ್
    * ಬೆಲ್ಲ- 2 ಕಪ್
    * ಹುರಗಡಲೆ- 1 ಟೇಬಲ್ ಸ್ಪೂನ್
    * ಗಸಗಸೆ- 2 ಟೀ ಸ್ಪೂನ್
    * ಏಲಕ್ಕಿ ಪುಡಿ – 1 ಟೀ ಸ್ಪೂನ್
    * ಹೋಳಿಗೆ ರವೆ- ಕಾಲು ಕೆಜಿ
    * ಮೈದಾಹಿಟ್ಟು- 100 ಗ್ರಾಂ
    * ಅರಿಶಿನ- 1 ಟೀ ಸ್ಪೂನ್
    * ಅಡುಗೆ ಎಣ್ಣೆ- 1 ಕಪ್
    * ಉಪ್ಪು ರುಚಿಗೆ ತಕ್ಕಷ್ಟು

    ಮಾಡುವ ವಿಧಾನ:
    * ಒಂದು ಅಗಲವಾದ ಪಾತ್ರೆಗೆ ಹೋಳಿಗೆ ರವೆ, ಮೈದಾಹಿಟ್ಟು, ಅರಿಶಿನ, ಉಪ್ಪು ಹಾಕಿ ಸ್ವಲ್ಪ ನೀರು ಹಾಕಿಕೊಳ್ಳುತ್ತಾ ಹಿಟ್ಟನ್ನು ಕಲಸುತ್ತಾ ಬನ್ನಿ. ಹಿಟ್ಟು ಮೃದುವಾಗಿರಬೇಕು, ಹೆಚ್ಚು ಗಟ್ಟಿಗಿದ್ರೆ ಹೋಳಿಗೆ ಲಟ್ಟಿಸುವುದು ಕಷ್ಟವಾಗುತ್ತದೆ.
    * ಈ ಮಿಶ್ರಣಕ್ಕೆ ಸ್ವಲ್ಪ ಎಣ್ಣೆ ಸೇರಿಸಿ ಮೃದುವಾಗಿರುವಂತೆ ಕಲಸಿ ಒಂದು ಪಾತ್ರೆಗೆ ಹಾಕಿ 1 ಗಂಟೆ ಸಮಯ ಮುಚ್ಚಿ ಇಟ್ಟಿರಬೇಕು.

    * ಒಂದು ಮಿಕ್ಸಿ ಜಾರಿಗೆ ಕಾಯಿತುರಿ, ಹುರಿಗಡೆಲೆ ಹಾಕಿ 2 ಸ್ಪೂನ್ ನೀರು ಹಾಕಿ ಸಣ್ಣದಾಗಿ ರುಬ್ಬಿಕೊಳ್ಳಬೇಕು.
    * ಒಲೆ ಮೇಲೆ ಒಂದು ಪಾತ್ರೆಗೆ ಬೆಲ್ಲ, ನೀರು ಹಾಕಿ ಕುದಿಸಿ. ಬೆಲ್ಲ ಕರಗಿ ನೀರು ಕುದಿಯುವಾಗ ಅದಕ್ಕೆ ರುಬ್ಬಿರುವ ಕಾಯಿ ಮಿಶ್ರಣವನ್ನು ಹಾಕಬೇಕು.
    * ಏಲಕ್ಕಿ ಪುಡಿ ಹಾಕಿ ಕಲಸಿ. ಈ ಮಿಶ್ರಣ ಬಣ್ಣ ಬದಲಾಗಿ ಗಟ್ಟಿಯಾಗಿ ಬರುವವರೆಗೆ ಸಣ್ಣ ಉರಿ ಬೆಂಕಿಯಲ್ಲಿ ಬೇಯಿಸಬೇಕು. ಇದಕ್ಕೆ ಗಸಗಸೆ, ಏಲಕ್ಕಿ ಹಾಕಿ ಮಿಶ್ರಣವನ್ನು ಸಿದ್ಧಪಡಿಸಿಕೊಳ್ಳಬೇಕು.

    * ಊರ್ಣಕ್ಕೆ ಸಣ್ಣ ಸಣ್ಣ ಉಂಡೆಯನ್ನಾಗಿ ಮಾಡಿಟ್ಟುಕೊಳ್ಳಿ.
    * ಕೈಗೆ ಎಣ್ಣೆ ಸವರಿಕೊಂಡು ತೆಗೆದುಕೊಂಡು ಹಿಟ್ಟನ್ನು ಕೈಯಲ್ಲಿ ಸ್ವಲ್ಪ ಅಗಲ ಮಾಡಿ ಊರ್ಣವನ್ನು ಅದರೊಳಗೆ ಇಟ್ಟು ಹೋಳಿಗೆ ಪೇಪರ್ ಮೇಲೆ ಇಟ್ಟು ಲಟ್ಟಿಸಿ.
    * ತವಾ ಬಿಸಿಯಾದ ಮೇಲೆ ಹಾಕಿ ಎರಡು ಕಡೆ ಬೇಯಿಸಿದ್ರೆ ಕಾಯಿ ಹೋಳಿಗೆ ಸವಿಯಲು ಸಿದ್ಧವಾಗುತ್ತದೆ. ಬಿಸಿಯಾದ ತುಪ್ಪದೊಂದಿಗೆ ಹೋಳಿಗೆಯನ್ನು ಸವಿಯ ಬಹುದಾಗಿದೆ.

  • ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಟ್ಟ ಮೆಗಾಸ್ಟಾರ್- ಯುಗಾದಿ ಸಿಹಿಗೆ ಅಭಿಮಾನಿಗಳು ಫಿದಾ

    ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಟ್ಟ ಮೆಗಾಸ್ಟಾರ್- ಯುಗಾದಿ ಸಿಹಿಗೆ ಅಭಿಮಾನಿಗಳು ಫಿದಾ

    ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅಭಿಮಾನಿಗಳಿಗೆ ಹತ್ತಿರವಾಗುವ ನಿಟ್ಟಿನಲ್ಲಿ ಚಿರಂಜೀವಿ ಅವರು ಈ ಪ್ರಯತ್ನಕ್ಕೆ ಮುಂದಾಗಿದ್ದು, ಅಭಿಮಾನಿಗಳು ಇದಕ್ಕೆ ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

    ಈ ಸಮಯದಲ್ಲಿ ಮೆಗಾ ಸ್ಟಾರ್ ಇಂತಹ ನಿರ್ಧಾರ ಯಾಕೆ ಕೈಗೊಂಡರು ಎಂಬುದು ಇನ್ನೂ ತಿಳಿದಿಲ್ಲ. ಆದರೆ ಮೆಗಾಸ್ಟಾರ್ ಚಿರಂಜೀವಿ ಸಾಮಾಜಿಕ ಜಾಲತಾಣಗಳಿಗೆ ಎಂಟ್ರಿ ಕೊಟ್ಟಿದ್ದರಿಂದ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.

    ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಅವರು ಟ್ವಿಟ್ಟರ್ ಹಾಗೂ ಇನ್‍ಸ್ಟಾಗ್ರಾಮ್ ಗಳಲ್ಲಿ ಖಾತೆ ತೆರೆದಿದ್ದು, ಈ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರಲು ಹಾಗೂ ಹತ್ತಿರವಾಗಲು ಪ್ರಯತ್ನ ನಡೆಸಿದ್ದಾರೆ. ಸಿನಿಮಾ, ರಾಜಕೀಯ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದರೂ ಚಿರಂಜೀವಿ ಅವರು ಈ ವರೆಗೆ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದಿದ್ದರು.

    ಇದೀಗ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರಲು ಹಾಗೂ ಸಿನಿಮಾಗಳ ಕುರಿತು ಮಾಹಿತಿ ಹಂಚಿಕೊಳ್ಳಲು ಈ ನಿರ್ಧಾರ ಕೈಗೊಂಡಿದ್ದಾರಂತೆ. ಈ ನಿರ್ಧಾರ ಅಭಿಮಾನಿಗಳಿಗೆ ಖುಷಿ ತಂದಿದ್ದು, ಲಕ್ಷಾಂತರ ಜನ ಅವರನ್ನು ಹಿಂಬಾಲಿಸುತ್ತಿದ್ದಾರೆ.

    ಯುಗಾದಿ ಹಬ್ಬದ ದಿನದಂದು ಇದೀಗ ಇನ್‍ಸ್ಟಾಗ್ರಾಮ್ ಹಾಗೂ ಟ್ವಿಟ್ಟರ್ ಖಾತೆಯನ್ನು ತೆರೆದಿದ್ದಾರೆ. ಈ ವಿಷಯವನ್ನು ಕೋನಿಡೇಲ ಪ್ರೊಡಕ್ಷನ್ಸ್ ನ ಅಧಿಕೃತ ಟ್ವಿಟ್ಟರ್ ಖಾತೆ ಮೂಲಕ ಬಹಿರಂಗಪಡಿಸಲಾಗಿದೆ. ಇನ್‍ಸ್ಟಾಗ್ರಾಮ್ ನಲ್ಲಿ ಚಿರಂಜೀವಿಕೋನಿಡೇಲ ಹೆಸರಿನಲ್ಲಿ ಖಾತೆ ತೆರೆದಿದ್ದು, ಈಗಾಗಲೇ 4 ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಕರಾಗಿದ್ದಾರೆ. ಚಿರಂಜೀವಿ ಅವರು ಇದುವರೆಗೆ ಕೇವಲ ಒಂದು ಫೋಟೋವನ್ನು ಮಾತ್ರ ಹಂಚಿಕೊಂಡಿದ್ದಾರೆ.

    ಇನ್ನು ಟ್ವಟ್ಟರ್ ನಲ್ಲಿಯೂ ಆಕ್ಟಿವ್ ಆಗಿರುವ ಚಿರಂಜೀವಿ ಅವರಿಗೆ ಒಂದೇ ದಿನಕ್ಕೆ 86 ಸಾವಿರಕ್ಕೂ ಅಧಿಕ ಫಾಲೋವರ್ಸ್ ಆಗಿದ್ದಾರೆ. ಅಲ್ಲದೆ ಚಿರು ಕೊರೊನಾ ಕುರಿತು ಮೊದಲ ಟ್ವೀಟ್ ಮಾಡಿದ್ದಾರೆ. ದೇಶದಿಂದ ಕೊರೊನಾ ಮಹಾಮಾರಿ ತೊಲಗಿಸಲು ಎಲ್ಲರೂ ಕೈ ಜೋಡಿಸಬೇಕಿದೆ. ಯಾರೂ ಮನೆಯಿಂದ ಹೊರ ಬರಬೇಡಿ ಎಂದು ಕೇಳಿಕೊಂಡಿದ್ದಾರೆ. ಇದರೊಂದಿಗೆ ಯುಗಾದಿ ಹಬ್ಬದ ಶುಭ ಕೋರಿರುವ ಚಿರು ಎಲ್ಲರೂ ಮನೆಗಳಲ್ಲೇ ಇದ್ದು, ಈ ಸೋಂಕು ಹರಡದಂತೆ ಎಚ್ಚರವಹಿಸೋಣ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಇನ್ನು ಎರಡನೇ ಟ್ವೀಟ್‍ನಲ್ಲಿ ಆರ್‍ಆರ್‍ಆರ್ ಸಿನಿಮಾದ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ.

    ಸದ್ಯ ಚಿರು ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆಚಾರ್ಯ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಕೊರೊನಾ ಭೀತಿಯಿಂದಾಗಿ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ. ಇದೇ ಸಮಯದಲ್ಲಿ ಚಿರಂಜೀವಿ ಅವರು ಸಾಮಾಜಿಕ ಜಾಲತಾಣಗಳಿಗೆ ಎಂಟ್ರಿ ಕೊಟ್ಟಿದ್ದಾರೆ.

  • ಕೊರೊನಾ ತೊಲಗಿದ್ಮೇಲೆ ಹಬ್ಬ ಆಚರಿಸೋಣ ಎಂದ ಪ್ರಣೀತಾ

    ಕೊರೊನಾ ತೊಲಗಿದ್ಮೇಲೆ ಹಬ್ಬ ಆಚರಿಸೋಣ ಎಂದ ಪ್ರಣೀತಾ

    ಬೆಂಗಳೂರು: ಸ್ಯಾಂಡಲ್‍ವುಡ್ ಕ್ಯೂಟ್ ಬೆಡಗಿ ಪೊರ್ಕಿ ಖ್ಯಾತಿಯ ಪ್ರಣೀತಾ ಸುಭಾಶ್ ಅವರು ಬಾಲಿವುಡ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದರ ಮಧ್ಯೆಯೇ ಮನೆಯವರೊಂದಿಗೆ ಸಿಂಪಲ್ ಆಗಿ ಹಬ್ಬನವನ್ನು ಆಚರಿಸಿದ್ದಾರೆ. ಈ ವೇಳೆ ಅಭಿಮಾನಿಗಳಿಗೂ ಸಲಹೆ ನೀಡಿದ್ದು, ಕೊರೊನಾ ವಿರುದ್ಧದ ಹೋರಾಟ ಮುಗಿಯುವ ವರೆಗೆ ಹೆಚ್ಚು ಜನ ಸೇರಿ ಹಬ್ಬ ಆಚರಿಸುವುದು ಬೇಡ ಎಂದು ಕರೆ ನೀಡಿದ್ದಾರೆ.

    ಪ್ರಣೀತಾ ಅವರು ಪೊರ್ಕಿ ಸಿನಿಮಾ ನಂತರ ಸ್ಯಾಂಡಲ್‍ವುಡ್‍ನಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ಆದರೆ ತಮಿಳು ಹಾಗೂ ಬಾಲಿವುಡ್ ನಲ್ಲಿ ಅವರಿಗೆ ಅವಕಾಶ ಹುಡುಕಿಕೊಂಡು ಬಂತು. ಹೀಗಾಗಿ ತಮಿಳು ಹಾಗೂ ಹಿಂದಿಯಲ್ಲಿ ಬ್ಯುಸಿಯಾಗಿದ್ದಾರೆ. ಪ್ರಸ್ತುತ ಹಿಂದಿಯ ಹಂಗಾಮಾ-2 ಸಿನಿಮಾದಲ್ಲಿ ಪ್ರಣೀತಾ ಬ್ಯುಸಿಯಾಗಿದ್ದು, ಕೊರೊನಾ ವೈರಸ್ ಹಿನ್ನೆಲೆ ಚಿತ್ರೀಕರಣವನ್ನು ಬಂದ್ ಮಾಡಲಾಗಿದೆ. ಹೀಗಾಗಿ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ.

    https://www.instagram.com/p/B-JKcd3g7JV/

    ಕುಟುಂಬದ ಜೊತೆಗೆ ಹಬ್ಬವನ್ನೂ ಆಚರಿಸಿರುವ ಅವರು ಸಡಗರದಿಂದ ಆಚರಿಸದೇ ಸಿಂಪಲ್ ಆಗಿ ಹಬ್ಬ ಮಾಡಿದ್ದಾರೆ. ಇದರ ಜೊತೆಗೆ ಅಭಿಮಾನಿಗಳಿಗೂ ಸಲಹೆ ನೀಡಿದ್ದು, ಯಾವುದೇ ಕಾರಣಕ್ಕೂ ಹೆಚ್ಚು ಜನ ಸೇರಿ ಹಬ್ಬ ಆಚರಿಸಬೇಡಿ, ಇದೀಗ ಪರಿಸ್ಥಿತಿ ತುಂಬಾ ಗಂಭೀರವಾಗಿದ್ದು, ಸ್ವಯಂ ದಿಗ್ಬಂಧನ ವಿಧಿಸಿಕೊಳ್ಳಬೇಕಿದೆ. ಹೀಗಾಗಿ ಈ ವರ್ಷ ಸಾಧಾರಣವಾಗಿ ಹಬ್ಬ ಆಚರಿಸಿ ಕೊರೊನಾ ಪಿಡುಗು ತೊಲಗಿದ ಮೇಲೆ ಸಂಭ್ರಮದಿಂದ ಹಬ್ಬ ಆಚರಿಸಬಹುದು ಎಂದು ಕರೆ ನೀಡಿದ್ದಾರೆ.

    ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಯುಗಾದಿ ನಮ್ಮ ಹಿಂದೂಗಳ ಹೊಸ ವರ್ಷ, ಈ ಹಬ್ಬದಲ್ಲಿ ಬೇವು ಬೆಲ್ಲದ ಮೂಲಕ ಸುಖ ದುಃಖಗಳನ್ನು ಸಮನಾಗಿಸ್ವೀಕರಿಸುವುದಾಗಿದೆ. ಬೇವು ನಮ್ಮ ಕಷ್ಟ ಹಾಗೂ ದುಃಖಗಳನ್ನು ಪ್ರತಿನಿಧಿಸಿದರೆ, ಬೆಲ್ಲ ನಮ್ಮ ಸಂತಸದ ಕ್ಷಣಗಳನ್ನು ಸೂಚಿಸುತ್ತಿದೆ. ನಮ್ಮ ಜೀವನದಲ್ಲಿ ಇವೆರಡೂ ಬಹಳ ಮುಖ್ಯ. ಇದೀಗ ನಾವು ಮನೆಯಲ್ಲಿ ದಿಗ್ಬಂಧನದಲ್ಲಿದ್ದೇವೆ. ಹೀಗಾಗಿ ಸರಳವಾಗಿ ಹಬ್ಬ ಆಚರಿಸೋಣ. ನಾನೂ ಸಹ ನಮ್ಮ ಕುಟುಂಬದವರೊಂದಿಗೆ ಸಾಧಾರಣವಾಗಿ ಹಬ್ಬ ಆಚರಿಸುತ್ತಿದ್ದೇನೆ. ನೀವೂ ಅದನ್ನೇ ಪಾಲಿಸಿ. ಹೀಗೇ ನಾವು ಸ್ವಯಂ ದಿಗ್ಬಂಧನ ವಿಧಿಸಿಕೊಂಡರೆ ಕೊರೊನಾ ವಿರುದ್ಧದ ಹೋರಾಟದಲ್ಲಿ ಜಯಗಳಿಸುತ್ತೇವೆ. ಅವತ್ತೇ ಹಬ್ಬವನ್ನು ಸಂಭ್ರಮದಿಂದ ಆಚರಿಸೋಣ. ಈಗ ನಡೆಯುತ್ತಿರುವುದನ್ನು ಬೇವು ತಿಂದ ಸಂದರ್ಭ ಎಂದು ಭಾವಿಸಬೇಕು. ಹೀಗಾಗಿ ಸಿಂಪಲ್ ಯುಗಾದಿಯ ಶುಭಾಯಶ ಎಂದು ವಿಡಿಯೋ ಪೋಸ್ಟ್‍ನಲ್ಲಿ ತಿಳಿಸಿದ್ದಾರೆ.

    ಪ್ರಣೀತಾ ಅವರು ಸದ್ಯ ಹಿಂದಿಯ ಹಂಗಾಮಾ-2 ಚಿತ್ರದಲ್ಲಿ ನಟಿಸುತ್ತಿದ್ದು, ಇದರಲ್ಲಿ ಮಿಝಾನ್ ಜಫ್ರಿ, ಪರೇಷ್ ರಾವಲ್ ಹಾಗೂ ಶಿಲ್ಪಾ ಶೆಟ್ಟಿ ಯವರ ಜೊತೆಗೆ ಪ್ರಣೀತಾ ಸಹ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಸಿನಿಮಾದ ಪೋಸ್ಟರ್ ಸಾಕಷ್ಟು ಸದ್ದು ಮಾಡುತ್ತಿದ್ದು, ಕಾಮಿಡಿ ಸಿನಿಮಾ ಕುರಿತ ಕುತೂಹಲ ಹೆಚ್ಚಾಗಿದೆ. ಈ ಚಿತ್ರವನ್ನು ಪ್ರಿಯದರ್ಶನ್ ನಿರ್ದೇಶಿಸುತ್ತಿದ್ದಾರೆ.

    ಕನ್ನಡದ ಪೊರ್ಕಿ ಸೇರಿದಂತೆ ತಮಿಳಿನ ಸಗುನಿ, ತೆಲುಗಿನ ಅತ್ತಾರಿಂಟಿಕಿ ದಾರೆದಿ ಸೇರಿದಂತೆ ವಿವಿಧ ಸಿನಿಮಾಗಳಲ್ಲಿ ಪ್ರಣೀತಾ ನಟಿಸಿದ್ದಾರೆ. ಇದೀಗ ಹಾಸ್ಯ ಪ್ರಧಾನ ಬಾಲಿವುಡ್ ಚಿತ್ರ ಹಂಗಾಮಾ-2ದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

  • ಮತ್ತೆ ಕನ್ನಡಿಗರ ಮನ ಗೆದ್ದ ಅನುಷ್ಕಾ ಶೆಟ್ಟಿ – ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯ

    ಮತ್ತೆ ಕನ್ನಡಿಗರ ಮನ ಗೆದ್ದ ಅನುಷ್ಕಾ ಶೆಟ್ಟಿ – ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯ

    ಹೈದರಾಬಾದ್: ಕನ್ನಡದ ಬೆಡಗಿ ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಕನ್ನಡದಲ್ಲಿಯೇ ಯುಗಾದಿ ಹಬ್ಬಕ್ಕೆ ಶುಭ ಕೋರುವ ಮೂಲಕ ಮತ್ತೊಮ್ಮೆ ಎಲ್ಲರ ಮನ ಗೆದ್ದಿದ್ದಾರೆ.

    ಅನುಷ್ಕಾ ತಮ್ಮ ಇನ್‍ಸ್ಟಾದಲ್ಲಿ, “ಯುಗಾದಿ ಶುಭಾಶಯಗಳು. ನಿಮಗೂ ಹಾಗು ನಿಮ್ಮ ಕುಟುಂಬದ ಎಲ್ಲರಿಗೂ ಈ ಯುಗಾದಿಯು ಸಂತೋಷ ಹಾಗೂ ಸಮೃದ್ಧತೆನ್ನು ತರಲಿ. ನಾವೆಲ್ಲರೂ ಈ ಸಮಯವನ್ನು ಕುಟುಂಬದೊಂದಿಗೆ ಆನಂದಿಸೋಣ. ಸರ್ಕಾರದ ಆದೇಶದಂತೆ ಎಲ್ಲರೂ ಮನೆಯಲ್ಲೇ ಇರಿ ಸುರಕ್ಷಿತವಾಗಿರಿ ಎಂದು ವಿನಂತಿಸುತ್ತೇನೆ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಅನುಷ್ಕಾ ಅವರ ಪೋಸ್ಟ್ ಗೆ ಅಭಿಮಾನಿಗಳು ಕನ್ನಡದಲ್ಲಿಯೇ ಕಮೆಂಟ್ ಮಾಡುವ ಮೂಲಕ ಯುಗಾದಿ ಹಬ್ಬಕ್ಕೆ ಶುಭ ಕೋರಿದ್ದಾರೆ.

     

    View this post on Instagram

     

    ಯುಗಾದಿ ಶುಭಾಶಯಗಳು ???? ನಿಮಗೂ ಹಾಗು ನಿಮ್ಮ ಕುಟುಂಬದ ಎಲ್ಲರಿಗೂ ಈ ಯುಗಾದಿಯು ಸಂತೋಷ ಹಾಗು ಸಮೃದ್ಧತೆನ್ನು ತರಲಿ. ನಾವೆಲ್ಲರೂ ಈ ಸಮಯವನ್ನು ಕುಟುಂಬದೊಂದಿಗೆ ಆನಂದಿಸೋಣ. ಸರಕಾರದ ಆದೇಶದಂತೆ ಎಲ್ಲರೂ ಮನೆಯಲ್ಲೇ ಇರಿ ಸುರಕ್ಷಿತವಾಗಿರಿ ಎಂದು ವಿನಂತಿಸುತ್ತೇನೆ???? #HappyUgadi #Statyindoor #Staysafe Ugadi wishes to all ???? Let this ugadi bring happiness & prosperity to you and your family. Let us all enjoy this time with family. I request everyone to obey the Government’s orders to stay at home and stay safe???? #HappyUgadi #Statyindoor #Staysafe

    A post shared by AnushkaShetty (@anushkashettyofficial) on

    ಈ ಹಿಂದೆ ಅನುಷ್ಕಾ ತಮ್ಮ ತಾಯಿಗೆ ಕನ್ನಡದಲ್ಲಿ ಹುಟ್ಟುಹಬ್ಬ ಶುಭಾಶಯ ತಿಳಿಸುವ ಮೂಲಕ ಕೋಟ್ಯಂತರ ಕನ್ನಡಿಗರ ಮನಸ್ಸು ಗೆದ್ದಿದ್ದರು. ತಮ್ಮ ತಾಯಿ ಪ್ರಫುಲ್ಲಾ ಅವರ ಹುಟ್ಟುಹಬ್ಬದ ದಿನದಂದು ತಾಯಿ ಹಾಗೂ ಇತರೆ ಕುಟುಂಬಸ್ಥರೊಂದಿಗೆ ಅನುಷ್ಕಾ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದರು. ಫೋಟೋ ಹಾಕಿ ಅದಕ್ಕೆ, “ಜನ್ಮ ದಿನದ ಹಾರ್ದಿಕ ಶುಭಾಶಯಗಳು ಅಮ್ಮಾ” ಎಂದು ಬರೆದಿದ್ದರು.

     

    View this post on Instagram

     

    ಜನ್ಮದಿನದ ಹಾರ್ದಿಕ ಶುಭಾಶಯಗಳು ಅಮ್ಮಾ ????????????????????❤️

    A post shared by AnushkaShetty (@anushkashettyofficial) on

    ಮಂಗಳೂರು ಮೂಲದವರಾದ ನಟಿ ಅನುಷ್ಕಾ ಶೆಟ್ಟಿ ಅವರು ಹೆಚ್ಚು ನಟಿಸಿದ್ದು ಮಾತ್ರ ತೆಲುಗು, ತಮಿಳು ಸಿನಿಮಾದಲ್ಲಿ. ಆದರೆ ಅನುಷ್ಕಾ ಕನ್ನಡ ಪ್ರೇಮ, ತಾಯ್ನಾಡಿಗೆ ಮಿಡಿಯುವ ಪ್ರೀತಿ ಮಾತ್ರ ಕಿಂಚಿತ್ತು ಕಡಿಮೆಯಾಗಿಲ್ಲ. ಈ ಹಿಂದೆ ಅನುಷ್ಕಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಂಕ್ರಾಂತಿ ಹಬ್ಬಕ್ಕೆ ಕನ್ನಡದಲ್ಲಿ ಶುಭಾಶಯ ಬರೆದು ಅಭಿಮಾನಿಗಳ ಮನಗೆದ್ದಿದ್ದರು. ಅನುಷ್ಕಾ ಅವರ ಪೋಸ್ಟ್‍ಗೆ ಕನ್ನಡಿಗರು ಫಿದಾ ಆಗಿದ್ದರು.

    ಅನುಷ್ಕಾ ಶೆಟ್ಟಿ `ನಿಶಬ್ದಂ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಹೇಮಂತ್ ಮಧುಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಈಗಾಗಲೆ ಟೀಸರ್ ಮತ್ತು ಪೋಸ್ಟರ್‍ಗಳ ಮೂಲಕ ಸಿನಿಮಾ ಬಹಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಸ್ವೀಟಿ ಹೊಸ ಚಿತ್ರದಲ್ಲಿ ಹೇಗೆ ಮೋಡಿ ಮಾಡಲಿದ್ದಾರೆ ಎಂದು ನೋಡಲು ಅಭಿಮಾನಿಗಳು ಕಾತುರದಿಂದ ಕಾದ ಕುಳಿತಿದ್ದಾರೆ.