Tag: ಯುದ್ಧನೌಕೆ

  • ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

    ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

    – ರೇಖಾಚಿತ್ರ, ಧ್ವನಿ ರೆಕಾರ್ಡಿಂಗ್‌ ಸಮೇತ ಮಾಹಿತಿ ಹಂಚಿಕೊಂಡಿದ್ದ‌ ಸ್ಪೈ

    ಮುಂಬೈ: ಆಪರೇಷನ್‌ ಸಿಂಧೂರ ಬಳಿಕ ದೇಶದಲ್ಲಿ ಪಾಕಿಸ್ತಾನ (Pakistan) ಪರ ಬೇಹುಗಾರಿಕೆ ನಡೆಸುತ್ತಿದ್ದವರ ಬಗ್ಗೆ ಹದ್ದಿನ ಕಣ್ಣಿಡಲಾಗಿದೆ. ಹೀಗಾಗಿ ಕಳೆದ ಎರಡು ವಾರಗಳಲ್ಲಿ ಸುಮಾರು 20 ಮಂದಿ ಬೇಹುಗಾರರ (Spying) ಹೆಡೆಮುರಿ ಕಟ್ಟಲಾಗಿದೆ. ಒಂದು ದಿನದ ಹಿಂದೆಯಷ್ಟೇ ಐಎಸ್‌ಐ ಅಧಿಕಾರಿಗಳಿಗೆ ಭಾರತದ ಸಿಮ್‌ ಕಾರ್ಡ್‌ಗಳನ್ನ ಪೂರೈಸುತ್ತಿದ್ದ ರಾಜಸ್ಥಾನದ ವ್ಯಕ್ತಿಯನ್ನ ಬಂಧಿಸಲಾಗಿತ್ತು. ಇಂದು ಥಾಣೆಯಲ್ಲಿ ಮತ್ತೊರ್ವ ವ್ಯಕ್ತಿಯನ್ನ ಬಂಧಿಸಲಾಗಿದೆ.

    ಥಾಣೆಯ ಕಲ್ವಾ ನಿವಾಸಿಯಾದ ಮೆಕ್ಯಾನಿಕಲ್ ಎಂಜಿನಿಯರ್ (Mechanical Engineer) ರವೀಂದ್ರ ವರ್ಮಾ (27) ಬಂಧಿತ ಆರೋಪಿ. ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ (ATS) ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ರವೀಂದ್ರನನ್ನ ಬಂಧಿಸಲಾಗಿದೆ.

    ಪೊಲೀಸರ ಪ್ರಕಾರ, ಫೇಸ್‌ಬುಕ್‌ನಲ್ಲಿ ಮಹಿಳೆಯಂತೆ ಡ್ರಾಮಾ ಮಾಡ್ತಿದ್ದ ಪಾಕಿಸ್ತಾನಿ ಏಜೆಂಟ್‌ನಿಂದ (Pakistani Agent) ಹನಿಟ್ರ್ಯಾಪ್‌ಗೆ ರವೀಂದ್ರ ಒಳಗಾಗಿದ್ದ. ಬಳಿಕ ಹಣದ ಆಮಿಷ ಒಡ್ಡಿ ಆತನಿಂದ ಸೂಕ್ಷ್ಮ ಮಾಹಿತಿಗಳನ್ನ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

    ಈತ 2024 ರಿಂದ ಪಾಕಿಸ್ತಾನಿ ಏಜೆಂಟ್‌ನೊಂದಿಗೆ ಸಂಪರ್ಕದಲ್ಲಿದ್ದ. ದೇಶದ ಯುದ್ಧನೌಕೆಗಳು, ಜಲಾಂತರ್ಗಾಮಿ ನೌಕೆಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನ ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳಿಗೆ ನೀಡಿದ್ದ. ರೇಖಾಚಿತ್ರಗಳು ಮತ್ತು ಆಡಿಯೋ ರೆಕಾರ್ಡಿಂಗ್‌ ಸಮೇತ ಪಾಕಿಸ್ತಾನಿ ಗುಪ್ತಚರ ಆಪರೇಟಿವ್ (POI)ಗೆ ಮಾಹಿತಿ ಹಂಚಿಕೊಂಡಿದ್ದ. ಇದಕ್ಕೆ ಪ್ರತಿಯಾಗಿ ವಿದೇಶಗಳಲ್ಲಿನ ವಿವಿಧ ಬ್ಯಾಂಕ್‌ ಖಾತೆಗಳಿಂದ ಭಾರೀ ಮೊತ್ತದ ಹಣ ಪಡೆದುಕೊಂಡಿದ್ದ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ತನಿಖೆ ಸಮಯದಲ್ಲಿ ಉದ್ದೇಶಪೂರ್ವಕವಾಗಿಯೇ ರವೀಂದ್ರ ವರ್ಮಾ ಸೂಕ್ಷ್ಮ ಮಾಹಿತಿಯನ್ನ ಪಾಕ್‌ ಏಜೆಂಟ್‌ಗಳೊಂದಿಗೆ ಹಂಚಿಕೊಂಡಿದ್ದಾನೆ ಎಂಬುದೂ ಗೊತ್ತಾಗಿದೆ ಎಂದು ವರದಿಗಳು ತಿಳಿಸಿವೆ.

    ವರ್ಮಾ ರಕ್ಷಣಾ ತಂತ್ರಜ್ಞಾನ ಸಂಸ್ಥೆಯಲ್ಲಿ ಜೂನಿಯರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಇದೇ ಕಾರಣದಿಂದ ದಕ್ಷಿಣ ಮುಂಬೈನಲ್ಲಿರುವ ನೇವಲ್ ಡಾಕ್‌ಯಾರ್ಡ್‌ಗೆ ಪ್ರವೇಶಿಸಲು ಅಧಿಕಾರವಿತ್ತು. ಅಲ್ಲದೇ ಈತ ನೌಕಾ ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳಲ್ಲಿಯೂ ಪ್ರಯಾಣಿಸುತ್ತಿದ್ದ. ಡಾರ್ಕ್‌ಯಾರ್ಡ್‌ಗೆ ಮೊಬೈಲ್‌ ಕೊಂಡೊಯ್ಯಲು ಅನುಮತಿ ಇಲ್ಲದಿದ್ದ ಕಾರಣ ರೇಖಾ ಚಿತ್ರಗಳನ್ನ ರೆಡಿ ಮಾಡಿಕೊಂಡಿದ್ದ. ಅಲ್ಲಿಂದ ಆಚೆಬಂದ ನಂತರ ವಾಯ್ಸ್‌ ರೆಕಾರ್ಡಿಂಗ್‌ ಮಾಡಿ ರೇಖಾ ಚಿತ್ರಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಎಟಿಎಸ್ ಸೋಮವಾರದ ವರೆಗೆ ಕಸ್ಟಡಿಗೆ ಪಡೆದು ವಿಚಾರಣೆ ಮುಂದುವರಿಸಿದೆ.

  • ಭಾರತೀಯ ನೌಕಾಪಡೆಗೆ ಆನೆ ಬಲ – ಸ್ವದೇಶಿ ನಿರ್ಮಿತ 3 ಹೊಸ ಅಸ್ತ್ರ ಸೇರ್ಪಡೆ

    ಭಾರತೀಯ ನೌಕಾಪಡೆಗೆ ಆನೆ ಬಲ – ಸ್ವದೇಶಿ ನಿರ್ಮಿತ 3 ಹೊಸ ಅಸ್ತ್ರ ಸೇರ್ಪಡೆ

    ಮುಂಬೈ: ಭಾರತೀಯ ನೌಕಾಪಡೆಗೆ (Indian Navy) ಮೂರು ಹೊಸ ಅಸ್ತ್ರ ಸೇರ್ಪಡೆಯಾಗಿವೆ. ಸ್ವದೇಶಿ ನಿರ್ಮಿತ ಯುದ್ಧನೌಕೆಗಳಾದ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗುರಿ ಮತ್ತು ಜಲಾಂತರ್ಗಾಮಿ ಐಎನ್‌ಎಸ್ ವಾಘ್‌ಷೀರ್ (Vaghsheer) ಇಂದು ದೇಶಸೇವೆಗೆ ಅರ್ಪಣೆಗೊಂಡಿವೆ.

    ಮುಂಬೈನ ನೌಕಾನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ (Narendra Modi) ಇವುಗಳನ್ನು ಸೇನೆಗೆ ಹಸ್ತಾಂತರಿಸಿದರು. ನೆಟ್‌ವರ್ಕ್ ಸೆಂಟ್ರಿಕ್ ಸಾಮರ್ಥ್ಯದ ಐಎನ್‌ಎಸ್ ಸೂರತ್, ಜಗತ್ತಿನಲ್ಲೇ ದೊಡ್ಡ, ಅತ್ಯಾಧುನಿಕ ಡೆಸ್ಟ್ರಾಯರ್‌ ಯುದ್ಧನೌಕೆಗಳಲ್ಲಿ ಒಂದಾಗಿದೆ. ಐಎನ್‌ಎಸ್ ನೀಲಗಿರಿ.. ಸ್ಟೆಲ್ತ್ ಫ್ರಿಗೆಟ್ ಪ್ರಾಜೆಕ್ಟ್‌ನ ಮೊದಲ ಯುದ್ಧ ನೌಕೆಯಾಗಿದೆ.

    ಇನ್ನೂ ಐಎನ್‌ಎಸ್ ವಾಘ್‌ಷೀರ್‌ನ್ನು ಫ್ರಾನ್ಸ್‌ನ ನೇವಲ್ ಗ್ರೂಪ್ ಸಹಕಾರದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಅತ್ತ, ಫ್ರಾನ್ಸ್‌ಗೆ ಸೇರಿದ ಅಣು ಜಲಾಂತರ್ಗಾಮಿ ನೆಲೆಗಳ ದತ್ತಾಂಶ ಸೋರಿಕೆ ಆಗಿರೋದು ಭಾರೀ ಕಳವಳಕ್ಕೆ ಕಾರಣವಾಗಿದೆ. ಈ ಸಬ್‌ಮೆರಿನ್ ರಷ್ಯಾ ಸನಿಹಕ್ಕೆ ಗಸ್ತಿಗೆ ಹೋಗಬೇಕಿತ್ತು. ಈ ದತ್ತಾಂಶ ಮಾಸ್ಕೋ ಕೈ ಸೇರಿದ್ರೆ, ಅಣು ಜಲಾಂತರ್ಗಾಮಿಯ ಪರಿಸ್ಥಿತಿ ಏನಾಗಬೇಡ ಎಂದು ಫ್ರಾನ್ಸ್ ಆತಂಕಗೊಂಡಿದೆ.

    ಚೀನಾಗೆ ಪ್ರತ್ಯುತ್ತರ:
    ಸದ್ಯ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಈ ಮೂರು ಅಸ್ತ್ರಗಳು ಚೀನಾಕ್ಕೆ ಪ್ರತ್ಯತ್ತರ ನೀಡಿದೆ ಎನ್ನಲಾಗುತ್ತಿದೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಚೀನಾ ಒಟ್ಟು 148 ಯುದ್ಧ ನೌಕೆಗಳನ್ನು ಸೇನೆಗೆ ಸೇರ್ಪಡೆ ಮಾಡಿದೆ. ಅಲ್ಲದೇ ಪಾಕಿಸ್ತಾನ ಚೀನಾ ಸಹಾಯದಿಂದ 50 ಹಡುಗಳನ್ನು ನಿರ್ಮಿಸಲು ಮುಂದಾಗಿದೆ. ಈ ಬೆಳವಣಿಗೆಯ ನಡುವೆ ಭಾರತ 2 ಯುದ್ಧನೌಕೆ ಹಾಗೂ ಒಂದು ಜಲಾಂತರ್ಗಾಮಿ ಸೇನೆಗೆ ಸೇರ್ಪಡೆಗೊಳಿಸಿದೆ.

  • ಕರಾಚಿಯಲ್ಲಿ ಬೀಡುಬಿಟ್ಟ ಚೀನಾದ ಜಲಾಂತರ್ಗಾಮಿ, ಯುದ್ಧನೌಕೆ – ಭಾರತಕ್ಕೆ ಇದರ ಸಂದೇಶವೇನು?

    ಕರಾಚಿಯಲ್ಲಿ ಬೀಡುಬಿಟ್ಟ ಚೀನಾದ ಜಲಾಂತರ್ಗಾಮಿ, ಯುದ್ಧನೌಕೆ – ಭಾರತಕ್ಕೆ ಇದರ ಸಂದೇಶವೇನು?

    ಇಸ್ಲಾಮಾಬಾದ್‌: ಚೀನಾದ ಯುದ್ಧನೌಕೆಗಳು (Chinese Warships), ಜಲಾಂತರ್ಗಾಮಿಗಳು ಮತ್ತು ಸೇನಾ ಬೆಂಬಲ ವ್ಯವಸ್ಥೆಯು ಪಾಕಿಸ್ತಾನದ ಕರಾಚಿ ಬಂದರಿನಲ್ಲಿ (Karachi Port) ಬೀಡಿಬಿಟ್ಟಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

    ಮಿಲಿಟರಿ ತರಬೇತಿ ನೆಪದಲ್ಲಿ ಚೀನಾ ತನ್ನ ಜಲಾಂತರ್ಗಾಮಿ ಮತ್ತು ಯುದ್ಧನೌಕೆಗಳನ್ನು ಪಾಕಿಸ್ತಾನದ ಕರಾಚಿ ಬಂದರಲ್ಲಿ ಬೀಡುಬಿಟ್ಟಿದೆ. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೆ ಸಂಬಂಧಿಸಿದ ಸೆಟಲೈಟ್‌ (ಉಪಗ್ರಹ) ಆಧಾರಿತ ಚಿತ್ರಗಳನ್ನು ಜಾಲತಾಣದಲ್ಲಿ ಹರಿದಾಡುತ್ತಿವೆ. ಸದ್ಯ ಭಾರತ-ಚೀನಾ (India-China) ನಡುವೆ ಅರುಣಾಚಲ ಪ್ರದೇಶದ ಗಡಿವಿವಾದದ ನಡುವೆ ಕರಾಚಿಯಲ್ಲಿ ಚೀನಾದ ಯುದ್ಧನೌಕೆಗಳು ಕಂಡುಬಂದಿರುವುದು ಅನುಮಾನ ಮೂಡಿಸಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ದೀಪದಿಂದ ಎಣ್ಣೆ ಕದ್ದ ಮಕ್ಕಳು; ವೀಡಿಯೋ ಹಂಚಿಕೊಂಡ ಅಖಿಲೇಶ್‌ ಯಾದವ್‌

    ಸೀ ಗಾರ್ಡಿಯನ್ -3 (Sea Guardian-3) ಸೇನಾ ಎಕ್ಸರ್‌ಸೈಸ್‌, ಹಿಂದೂ ಮಹಾಸಾಗರದಲ್ಲಿ ಚೀನಾ ತನ್ನ ಕಡಲ ಅಸ್ತಿತ್ವವನ್ನು ಗಮನಾರ್ಹವಾಗಿ ವಿಸ್ತರಿಸಿದ ಸಮಯದಲ್ಲಿ ಬಂದಿವೆ. ಇದು ಆಫ್ರಿಕಾದ ಹಾರ್ನ್‌ನಲ್ಲಿರುವ ಜಿಬೌಟಿಯಲ್ಲಿ ಪ್ರಮುಖ ನೆಲೆಯ ನಿರ್ಮಾಣವನ್ನೂ ಒಳಗೊಂಡಿದೆ. ಜೊತೆಗೆ ಪಾಕಿಸ್ತಾನ ನೌಕಾಪಡೆಗೆ ಇತ್ತೀಚೆಗೆ 4 ಟೈಪ್-054 A/P ಫ್ರಿಗೇಟ್‌ಗಳನ್ನು ಪ್ರಾದೇಶಿಕ ನೌಕಾಪಡೆಗಳಿಗೆ ಮಾರಾಟ ಮಾಡಿದ್ದೂ ಸಹ ಇದರಲ್ಲೇ ಸೇರಿದೆ.

    ಕಳೆದ ವರ್ಷದ ಹಿಂದೂ ಮಹಾಸಾಗರದಲ್ಲಿ ಹಲವಾರು ಚೀನಿ ಕಣ್ಗಾವಲು ಮತ್ತು ಸಾಗರ ಸಮೀಕ್ಷೆ ಹಡಗುಗಳು ಪತ್ತೆಯಾಗಿದ್ದವು. ಈ ತಿಂಗಳ ಆರಂಭದಲ್ಲಿ, ಚೀನಾದ ಸಾಗರ ಸಂಶೋಧನಾ ಹಡಗು, ಶಿಯಾನ್ 6 ಕೊಲಂಬೊದಲ್ಲಿ ಬಂದಿಳಿದಿತ್ತು. ಆದರೀಗ ವ್ಯಾಪಕವಾದ ಜಲಾಂತರ್ಗಾಮಿ ಕಾರ್ಯಾಚರಣೆಗಳನ್ನ ಸಕ್ರಿಯಗೊಳಿಸಲು ಬಂಗಾಳ ಕೊಲ್ಲಿ ಸೇರಿದಂತೆ ಹಿಂದೂ ಮಹಾಸಾಗರವನ್ನೂ ಚೀನಾ ಬಳಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಸೇನೆ ಗಡಿಯಲ್ಲಿ ಹಿಮಾಲಯದಂತೆ ಅಚಲವಾಗಿ ನಿಂತಿರುವವರೆಗೂ ಭಾರತ ಸುರಕ್ಷಿತ: ಮೋದಿ

    ಕರಾಚಿಯಲ್ಲಿ ಬೀಡು ಬಿಟ್ಟಿರುವ ಯುದ್ಧ ಸಾಧನಗಳ ಪೈಕಿ ಚೀನಾದ ಟೈಪ್-039 ಡೀಸೆಲ್-ಎಲೆಕ್ಟ್ರಿಕ್ ಜಲಾಂತರ್ಗಾಮಿ ನೌಕೆ ಕೂಡ ಇದೆ. ಈ ಜಲಾಂತರ್ಗಾಮಿ ನೌಕೆಯು ನೌಕಾ ರಹಸ್ಯಗಳನ್ನು ನಿಕಟವಾಗಿ ಊಹಿಸಬಲ್ಲದು. ಅರಬ್ಬಿ ಸಮುದ್ರದಲ್ಲಿ ಹಡಗುಗಳ ಉಪಸ್ಥಿತಿಯು, ತಮ್ಮ ಹೋಮ್‌ಪೋರ್ಟ್‌ಗಳಿಂದ ಹಲವಾರು ಸಾವಿರ ಕಿಮೀ ದೂರದಲ್ಲಿರುವ ನೌಕಾ ಆಸ್ತಿಗಳನ್ನು ನಿಯಂತ್ರಿಸಲು, ಬೀಜಿಂಗ್‌ನ ವಿಶ್ವಾಸ ವೃದ್ಧಿಸಲು ಈ ಜಲಾಂತರ್ಗಾಮಿ ಕಾರಣವಾಗಿದೆ. 2013ರಿಂದೀಚೆಗೆ ಚೀನಾ ಸೇನೆಯು 8 ಬಾರಿ ಹಿಂದೂ ಮಹಾಸಾಗರದಲ್ಲಿ ಜಲಾಂತರ್ಗಾಮಿಗಳನ್ನು ನಿಯೋಜಿಸಿದೆ ಎಂದು ವರದಿಯಾಗಿದೆ.

    2015ರ ಏಪ್ರಿಲ್‌ನಲ್ಲಿ ಪಾಕಿಸ್ತಾನ ಸರ್ಕಾರವು 5 ಶತಕೋಟಿ ಡಾಲರ್‌ ಮೌಲ್ಯದ ಒಪ್ಪಂದಕ್ಕೆ ಟೈಪ್‌-039 ಜಲಾಂತರ್ಗಾಮಿ ನೌಕೆಗಳ 8 ರೂಪಾಂತರಗಳನ್ನು ಖರೀದಿಸಲು ಒಪ್ಪಿಕೊಂಡಿತ್ತು. ಸದ್ಯ 4 ಜಲಾಂತರ್ಗಾಮಿ ನೌಕೆಗಳನ್ನು ಕರಾಚಿ ಶಿಪ್‌ಯಾರ್ಡ್ ಮತ್ತು ಇಂಜಿನಿಯರಿಂಗ್ ವರ್ಕ್ಸ್ ನಿರ್ಮಿಸುವ ಸಾಧ್ಯತೆಗಳಿವೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಹೋಟೆಲಿನಲ್ಲಿ‌ ನಾಲ್ವರು ಕಾಮುಕರಿಂದ ಗ್ಯಾಂಗ್‌ರೇಪ್‌ – ಸಹಾಯಕ್ಕಾಗಿ ಕಣ್ಣೀರಿಟ್ಟ ಸಂತ್ರಸ್ತೆ, ಐವರು ಅರೆಸ್ಟ್

  • ಭಾರತದ ಜಲಗಡಿಗೆ ಬಂದಿದ್ದ ಪಾಕ್ ಯದ್ಧನೌಕೆಯನ್ನು ಓಡಿಸಿದ ಡಾರ್ನಿಯರ್

    ಭಾರತದ ಜಲಗಡಿಗೆ ಬಂದಿದ್ದ ಪಾಕ್ ಯದ್ಧನೌಕೆಯನ್ನು ಓಡಿಸಿದ ಡಾರ್ನಿಯರ್

    ಗಾಂಧಿನಗರ: ಪಾಕಿಸ್ತಾನದ ನೌಕಾಪಡೆಯ ಯುದ್ಧನೌಕೆಯು ಸಮುದ್ರದ ಗಡಿ ರೇಖೆಯನ್ನು ದಾಟಿ ಭಾರತೀಯ ಜಲಪ್ರದೇಶವಾದ ಗುಜರಾತ್ ಕರಾವಳಿಯನ್ನು ಪ್ರವೇಶಿಸಿತ್ತು. ಭಾರತೀಯ ಕರಾವಳಿ ಕಾವಲು ಪಡೆಯ ಡಾರ್ನಿಯರ್ ವಿಮಾನ ಪತ್ತೆ ಹಚ್ಚಿ ವಾಪಸ್ ತೆರಳುವಂತೆ ಸೂಚಿಸಿದೆ.

    ಮೂಲಗಳ ಪ್ರಕಾರ, ಜುಲೈ ತಿಂಗಳಲ್ಲೇ ಪಾಕಿಸ್ತಾನದ ನೌಕಾಪಡೆಯ ಹಡಗು ಭಾರತದ ಜಲಭಾಗವನ್ನು ಪ್ರವೇಶಿಸಿತ್ತು. ಭಾರತೀಯ ಜಲಪ್ರದೇಶವನ್ನು ಪ್ರವೇಶಿಸಿದ ಸ್ವಲ್ಪ ಸಮಯದಲ್ಲಿ ನೌಕೆಯನ್ನು ಡಾರ್ನಿಯರ್ ವಿಮಾನದ ಕಣ್ಗಾವಲು ಪತ್ತೆ ಮಾಡಿತ್ತು.

    ಭಾರತದ ಜಲಪ್ರದೇಶದಲ್ಲಿ ಪಾಕಿಸ್ತಾನದ ಯುದ್ಧನೌಕೆಗಳ ಉಪಸ್ಥಿತಿಯ ಬಗ್ಗೆ ವಿಮಾನವು ಕಮಾಂಡ್ ಕೇಂದ್ರಕ್ಕೆ ಮಾಹಿತಿ ರವಾನಿಸಿತ್ತು. ಪಾಕಿಸ್ತಾನದ ಯುದ್ಧನೌಕೆಗೆ ಗಡಿ ದಾಟಿರುವ ಬಗ್ಗೆ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಯುದ್ಧ ನೌಕೆಗೆ ವಾಪಸ್ ಹೋಗುವಂತೆ ತಿಳಿಸಿದ್ದರೂ ಕ್ಯಾಪ್ಟನ್‍ನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಕೊನೆಗೂ ಭಾರತದ ಭದ್ರತಾ ಪಡೆ ಪಾಕ್‍ನ ನೌಕಾಪಡೆಯನ್ನು ಹಿಮ್ಮೆಟ್ಟಿಸಿದೆ.

    ಈ ಹಿನ್ನೆಲೆಯಲ್ಲಿ ಭಾರತೀಯ ಕರಾವಳಿ ಕಾವಲುಪಡೆ ಮತ್ತು ಭಾರತೀಯ ವಾಯುಪಡೆಯು ಗುಜರಾತ್ ಕರಾವಳಿಯುದ್ದಕ್ಕೂ ಯಾವುದೇ ತೊಂದರೆ ಬರದಂತೆ ತಡೆಯಲು ನಿಗಾ ಇರಿಸಿದೆ. ಇತ್ತೀಚಿಗೆ ಪಾಕಿಸ್ತಾನದಿಂದ ಭಾರತಕ್ಕೆ ಮಾದಕ ವಸ್ತು ಬರುವುದು ಹಾಗೂ ಭಯೋತ್ಪಾದನೆ ಚಟುವಟಿಕೆಗಳು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಕಣ್ಗಾವಲಿಗೆ ಹೊಸ ಧ್ರುವ ಹೆಲಿಕಾಪ್ಟರ್ ಅನ್ನು ಸೇರ್ಪಡೆ ಮಾಡಿದ್ದರು. ಇದನ್ನೂ ಓದಿ: ಆರೋಗ್ಯ ಸೇತು ಕಾರ್ಯ ನಿರ್ವಹಿಸುತ್ತಿಲ್ಲ – ವೈಯಕ್ತಿಕ ಮಾಹಿತಿಗಳ ಕತೆಯೇನು?

    ಭಾರತೀಯ ನೌಕಾಪಡೆಯು ಸಮುದ್ರ ಗಡಿ ಕಾನೂನುಗಳ ಬಗ್ಗೆ ತುಂಬಾ ಕಟ್ಟುನಿಟ್ಟಾಗಿದೆ. ಗಡಿಯಿಂದ 5 ನಾಟಿಕಲ್ ಮೈಲುಗಳ ಒಳಗೆ ಮೀನುಗಾರಿಕೆ ನಡೆಸಲು ತಮ್ಮದೇ ದೇಶದ ಮೀನುಗಾರರಿಗೂ ಸಹ ಅನುಮತಿಸುವುದಿಲ್ಲ. ಇದನ್ನೂ ಓದಿ: ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಮಹಿಳೆ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಕ್ಷಣಮಾತ್ರದಲ್ಲಿ ಎದುರಾಳಿಯನ್ನು ಹೊಡೆದುರಳಿಸಬಲ್ಲ ರಷ್ಯಾದ ಕ್ಷಿಪಣಿ – ಉಡಾವಣೆ ಯಶಸ್ವಿ

    ಕ್ಷಣಮಾತ್ರದಲ್ಲಿ ಎದುರಾಳಿಯನ್ನು ಹೊಡೆದುರಳಿಸಬಲ್ಲ ರಷ್ಯಾದ ಕ್ಷಿಪಣಿ – ಉಡಾವಣೆ ಯಶಸ್ವಿ

    ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರಿದಿದೆ. ಈ ಮಧ್ಯೆ ಪಾಶ್ಚಿಮಾತ್ಯ ದೇಶಗಳು ರಷ್ಯಾ ವಿರುದ್ಧ ನಿರಂತರವಾಗಿ ನಿರ್ಬಂಧನೆಗಳನ್ನು ವಿಧಿಸುತ್ತಲೇ ಇವೆ. ಇಂತಹ ಪರಿಸ್ಥಿತಿಯಲ್ಲಿ ಮಿಂಚಿನ ವೇಗದ ಹೈಪರ್ಸಾನಿಕ್ ಪರಮಾಣು ಕ್ಷಿಪಣಿಯನ್ನು ರಷ್ಯಾ ಉಡಾಯಿಸಿದ್ದು, ದೃಶ್ಯಾವಳಿಗಳನ್ನು ರಷ್ಯಾ ಬಿಡುಗಡೆ ಮಾಡಿದೆ. ರಷ್ಯಾ ಹಂಚಿಕೊಂಡಿರುವ ಈ ಫೋಟೋ ಎದುರಾಳಿ ದೇಶಗಳ ಮೇಲೆ ಒಂದೇ ಹೊಡೆತದಲ್ಲಿ ದಾಳಿ ನಡೆಸಬಲ್ಲದು ಎಂಬುದನ್ನು ಪ್ರದರ್ಶಿಸಿದೆ.

    ಶ್ವೇತ ಸಮುದ್ರದಿಂದ ಯುದ್ಧನೌಕೆ ಉಡಾವಣೆ: ಮ್ಯಾಕ್ 9 `ಜಿರ್ಕಾನ್’ ಅಥವಾ `ಸಿರ್ಕಾನ್’ ಹೆಸರಿನ ಈ ಕ್ಷಿಪಣಿಯನ್ನು ಬಿಳಿ ಸಮುದ್ರದಲ್ಲಿ ಅಡ್ಮಿರಲ್ ಗೋರ್ಶ್ಕೋವ್ ಯುದ್ಧನೌಕೆಯಿಂದ ಉಡಾವಣೆ ಮಾಡಲಾಗಿದೆ. ಯುದ್ಧದ ನಡುವೆಯೇ ಈ ದೃಶ್ಯಾವಳಿಗಳನ್ನು ಬಿಡುಗಡೆ ಮಾಡುವ ಉದ್ದೇಶವೆಂದರೆ ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಒಂದು ವೇಳೆ ಯಾವುದೇ ದೇಶ ಹಸ್ತಕ್ಷೇಪ ಮಾಡಿದರೆ, ನಂತರ ಈ ಪರಮಾಣು ಕ್ಷಿಪಣಿಗಳನ್ನು ಬಳಸಲಾಗುವುದು ಎಂಬುದನ್ನು ರಷ್ಯಾ ತೋರಿಸಿದೆ. ಇದನ್ನೂ ಓದಿ: ಜುಲೈ – ಆಗಸ್ಟ್‌ನಲ್ಲೇ ಭಾರತಕ್ಕೆ ಎದುರಾಗಲಿದೆ ವಿದ್ಯುತ್ ಕೊರತೆ – CREA ವರದಿ ಹೇಳಿದ್ದೇನು?

    ಮಿಂಚಿನ ವೇಗ: ಇತ್ತೀಚೆಗಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಈ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿ ಎಂದು ಘೋಷಿಸಿದ್ದರು. ಇದೇ ವರ್ಷ ಈ ಕ್ಷಿಪಣಿಯನ್ನು ಸೇನೆಗೆ ಸೇರ್ಪಡೆ ಮಾಡಲಾಗಿದೆ. ಪಾಶ್ಚಿಮಾತ್ಯ ದೇಶಗಳ ಬಳಿ ಈ ಕ್ಷಿಪಣಿಗಳಿಗೆ ಯಾವುದೇ ಉತ್ತರವಿಲ್ಲ ಎಂದು ರಷ್ಯಾ ತಜ್ಞರು ಹೇಳುತ್ತಾರೆ. ರಷ್ಯಾದ ಜಿರ್ಕಾನ್ ಹೈಪರ್ಸಾನಿಕ್ ಕ್ಷಿಪಣಿ ಪರೀಕ್ಷೆಯ ನಂತರ ಅದರ ರಹಸ್ಯ ವೈಶಿಷ್ಟ್ಯಗಳು ಬಹಿರಂಗಗೊಂಡಿವೆ ಎಂದು ರಷ್ಯಾ ಮಾಧ್ಯಮಗಳು ಮಾಹಿತಿ ಪ್ರಸಾರ ಮಾಡಿವೆ. ಇದನ್ನೂ ಓದಿ: 4 ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ನಾಪತ್ತೆ

    ಹೀಗಿದೆ ವೇಗದ ಮಿತಿ: ಸಿರ್ಕಾನ್ ಹೈಪರ್ಸಾನಿಕ್ ಕ್ರೂಸ್ ಕ್ಷಿಪಣಿಯು ಶ್ವೇತ ಸಮುದ್ರದಲ್ಲಿ ಸುಮಾರು 1,000 ಕಿಮೀ ದೂರದಲ್ಲಿರುವ ನೌಕೆಯನ್ನು ಉಡಾಯಿಸುವ ಗುರಿ ಹೊಂದಿದೆ. ಕ್ಷಿಪಣಿಯು ಶಬ್ದದ ವೇಗಕ್ಕಿಂತ 9 ಪಟ್ಟು ವೇಗದಲ್ಲಿ ಹಾರುವ ಸಾಮರ್ಥ್ಯ ಹೊಂದಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

  • ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ

    ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ

    ವಾಷಿಂಗ್ಟನ್‌: ರಷ್ಯಾದ ಹಲವಾರು ಯುದ್ಧನೌಕೆಗಳು ಕ್ರೈಮಿಯಾವನ್ನು ತೊರೆದು ಒಡೆಸ್ಸಾಗೆ ಹೋಗುತ್ತಿವೆ. ಅಲ್ಲದೇ ಉಕ್ರೇನ್‍ನ ಮೂರನೇ ಅತಿದೊಡ್ಡ ನಗರದ ಮೇಲೆ ಯುದ್ಧ ನೌಕೆಯಿಂದಲೂ   ದಾಳಿ ನಡೆಸಬಹುದು ಎಂದು ಅಮೇರಿಕಾದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇಂದು ಮುಂಜಾನೆ ಖರ್ಸನ್ ನಗರವನ್ನು ರಷ್ಯಾ ಪಡೆಗಳು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇದಾದ ಬಳಿಕ ಕ್ರೈಮಿಯಾ ಬರುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಒಂದು ವಾರದೊಳಗೆ 1 ಮಿಲಿಯನ್ ಜನ ಉಕ್ರೇನ್‍ನಿಂದ ಪಲಾಯನ: ವಿಶ್ವಸಂಸ್ಥೆ

    ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ 8 ನೇ ದಿನದಂದು, ಕ್ರೈಮಿಯಾದಿಂದ ರಷ್ಯಾದ ಯುದ್ಧನೌಕೆಗಳು ಈಗ ಉಕ್ರೇನಿಯನ್ ನಗರವಾದ ಒಡೆಸ್ಸಾ ಕಡೆಗೆ ಚಲಿಸುತ್ತಿವೆ ಎಂದು ಯುಎಸ್ ಅಧಿಕಾರಿಯೊಬ್ಬರು ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದ ಹರ್ಷ ಕುಟುಂಬಕ್ಕೆ ಎಲೆಕ್ಷನ್ ಟಿಕೆಟ್ ವಿಚಾರ- ಗೃಹ ಸಚಿವರು ಹೇಳಿದ್ದೇನು..?

    ಇಂದು ಮುಂಜಾನೆ ರಷ್ಯಾದ ಪಡೆಗಳು ಬಂದರು ನಗರವಾದ ಖರ್ಸನ್ ಅನ್ನು ವಶಪಡಿಸಿಕೊಂಡಿದೆ. ಆದರೆ ಇದನನು ಉಕ್ರೇನ್ ಅಧಿಕಾರಿಗಳು ನಿರಾಕರಿಸಿದ್ದಾರೆ. ಇದಾದ ಬಳಿಕ ಇದೀಗ ರಷ್ಯಾದ ಪಡೆಗಳು ಕಪ್ಪು ಸಮುದ್ರದ ಬಳಿ ಒಡೆಸ್ಸಾ ಬಂದರು ನಗರವನ್ನು ಆಕ್ರಮಿಸಲು ಯೋಜಿಸುತ್ತಿವೆ ಎಂದು ತಿಳಿಸಿದ್ದಾರೆ.