Tag: ಯುಪಿ

  • ಮತಾಂತರಕ್ಕೆ ‘ಮಿಟ್ಟಿ, ಕಾಜಲ್‌, ದರ್ಶನ್‌’ ಅಂತ ಕೋಡ್‌ ವರ್ಡ್‌ ಬಳಸುತ್ತಿದ್ದ ಛಂಗೂರ್‌ ಬಾಬಾ

    ಮತಾಂತರಕ್ಕೆ ‘ಮಿಟ್ಟಿ, ಕಾಜಲ್‌, ದರ್ಶನ್‌’ ಅಂತ ಕೋಡ್‌ ವರ್ಡ್‌ ಬಳಸುತ್ತಿದ್ದ ಛಂಗೂರ್‌ ಬಾಬಾ

    ಲಕ್ನೋ: ಮತಾಂತರ ಮಾಸ್ಟರ್‌ಮೈಂಡ್‌ ಛಂಗೂರ್‌ ಬಾಬಾನ (Chhangur Baba) ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ಮತಾಂತರಕ್ಕಾಗಿ ಹಲವಾರು ಕೋಡ್‌ ವರ್ಡ್‌ಗಳನ್ನು ಬಳಸಿರುವುದು ಬಯಲಾಗಿದೆ.

    ‘ಪ್ರಾಜೆಕ್ಟ್, ಮಿಟ್ಟಿ ಪಲಟ್ನಾ, ಕಾಜಲ್ ಲಗಾನಾ ಮತ್ತು ದರ್ಶನ’ ಇವು ಜಮಾಲುದ್ದೀನ್‌ ಅಲಿಯಾಸ್‌ ಛಂಗೂರ್‌ ಬಾಬಾ ಬಳಸುತ್ತಿದ್ದ ಕೋಡ್‌ ವರ್ಡ್‌ಗಳು. ಹೆಚ್ಚಾಗಿ ಮಹಿಳೆಯರನ್ನು, ಪ್ರೋತ್ಸಾಹ ಧನ, ಆರ್ಥಿಕ ನೆರವು, ಮದುವೆಯ ಭರವಸೆ, ಬೆದರಿಕೆ ಮೂಲಕ ಮತಾಂತರಕ್ಕೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಮತಾಂತರ ಮಾಸ್ಟರ್‌ಮೈಂಡ್‌ ಛಂಗುರ್ ಬಾಬಾನ 5 ಕೋಟಿ ಮೌಲ್ಯದ ಮನೆ ಉಡೀಸ್‌ – ಬುಲ್ಡೋಜರ್‌ನಿಂದ ನೆಲಸಮ

    ಮಹಿಳೆಯರ ಮತಾಂತರಕ್ಕೆ ಪ್ರಾಜೆಕ್ಟ್‌, ಮಿಟ್ಟಿ ಪಲಟ್ನಾ ಎಂದರೆ ಧಾರ್ಮಿಕ ಮತಾಂತರ. ಕಾಜಲ್‌ ಲಗಾನಾ ಎಂದರೆ ಕುಶಲತೆ, ದರ್ಶನ ಎಂದರೆ ಸಂತ್ರಸ್ತೆ ಎಂದು ಸಂತ್ರಸ್ತರು ಎಂದು ಛಂಗೂರ್‌ ಬಾಬಾ ಉಲ್ಲೇಖಿಸುತ್ತಿದ್ದ.

    ಈ ವಿವರಗಳನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಶನಿವಾರ ಬಹಿರಂಗಪಡಿಸಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಛಂಗೂರ್ ಬಾಬಾಗೆ ಸಂಬಂಧಿಸಿದ 18 ಬ್ಯಾಂಕ್ ಖಾತೆಗಳಿಂದ 68 ಕೋಟಿ ರೂ.ಗಳ ವಹಿವಾಟು ನಡೆದಿದೆ. ಮೂರು ತಿಂಗಳ ಅವಧಿಯಲ್ಲಿ ಈ ಖಾತೆಗಳಲ್ಲಿ ಸುಮಾರು 7 ಕೋಟಿ ರೂ.ಗಳನ್ನು ಜಮಾ ಮಾಡಲಾಗಿದೆ. ಇದನ್ನೂ ಓದಿ: ಸೈಕಲ್‌ನಲ್ಲಿ ತಾಯತ ಮಾರುತ್ತಿದ್ದ ಧಾರ್ಮಿಕ ಮತಾಂತರ ಗ್ಯಾಂಗ್‌ನ ಜಮಾಲುದ್ದೀನ್‌ ಈಗ 106 ಕೋಟಿ ರೂ. ಒಡೆಯ

    ಜು.5 ರಂದು, ಧಾರ್ಮಿಕ ಮತಾಂತರ ಮಾಸ್ಟರ್‌ಮೈಂಡ್ ಛಂಗೂರ್ ಬಾಬಾ ಮತ್ತು ಆತನ ಸಹಾಯಕಿ ನೀತು ಅಲಿಯಾಸ್ ನಸ್ರೀನ್ ಇಬ್ಬರನ್ನೂ ಬಂಧಿಸಲಾಯಿತು. ಈ ಇಬ್ಬರು ನೇಪಾಳದ ಗಡಿಯಲ್ಲಿರುವ ಬಲರಾಂಪುರ ಜಿಲ್ಲೆಯ ಮಾಧಪುರ ನಿವಾಸಿಗಳು. ಜಲಾಲುದ್ದೀನ್ ವಿರುದ್ಧ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದ್ದು, ಪೊಲೀಸರು ಆತನ ಬಂಧನಕ್ಕೆ 50,000 ರೂ. ನಗದು ಬಹುಮಾನ ಘೋಷಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

  • ಲಂಚವಾಗಿ 5 ಕೆಜಿ ಆಲುಗಡ್ಡೆಗೆ ಬೇಡಿಕೆಯಿಟ್ಟಿದ್ದ ಸಬ್‌ ಇನ್‌ಸ್ಪೆಕ್ಟರ್‌ ಅಮಾನತು

    ಲಂಚವಾಗಿ 5 ಕೆಜಿ ಆಲುಗಡ್ಡೆಗೆ ಬೇಡಿಕೆಯಿಟ್ಟಿದ್ದ ಸಬ್‌ ಇನ್‌ಸ್ಪೆಕ್ಟರ್‌ ಅಮಾನತು

    ಲಕ್ನೋ: ಲಂಚವಾಗಿ 5 ಕೆಜಿ ಆಲುಗಡ್ಡೆಗೆ (Potatoes) ಬೇಡಿಕೆಯಿಟ್ಟಿದ್ದ ಸಬ್‌ಇನ್‌ಸ್ಪೆಕ್ಟರ್‌ ಒಬ್ಬರನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಕನೌಜ್‌ನಲ್ಲಿ ನಡೆದಿದೆ.

    ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಪೊಲೀಸ್ ಅಧಿಕಾರಿ ರಾಮ್ ಕೃಪಾಲ್ ಸಿಂಗ್ ಲಂಚ ಕೇಳಿರುವ ಆರೋಪದ ಆಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಲಂಚಕ್ಕಾಗಿ ‘ಆಲೂಗಡ್ಡೆ’ ಎಂಬ ಪದವನ್ನು ಕೋಡ್‌ ಆಗಿ ಬಳಸಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಿದೆ. ಇದನ್ನೂ ಓದಿ: ಈ ಗ್ರಾಮದಲ್ಲಿ ಧೂಮಪಾನ ಮಾಡುವಂತಿಲ್ಲ, ಅರ್ಧಂಬರ್ಧ ಬಟ್ಟೆ ಧರಿಸುವಂತಿಲ್ಲ – ಯಾಕೆ ಗೊತ್ತಾ?

    ಸೌರಿಖ್ ಪೊಲೀಸ್ ಠಾಣೆ ವ್ಯಾಪ್ತಿಯ ಭವಲ್‌ಪುರ ಚಾಪುನ್ನಾ ಚೌಕಿಯಲ್ಲಿ ನಿಯೋಜನೆಗೊಂಡಿದ್ದ ಸಬ್‌ಇನ್‌ಸ್ಪೆಕ್ಟರ್‌ನನ್ನು ಅಮಾನತುಗೊಳಿಸಿ ಕನೌಜ್ ಎಸ್‌ಪಿ ಅಮಿತ್ ಕುಮಾರ್ ಆನಂದ್ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಇಲಾಖಾ ತನಿಖೆಗೂ ಸೂಚಿಸಲಾಗಿದೆ.

    ವೈರಲ್ ಆಡಿಯೋದಲ್ಲಿ ಆರೋಪಿ ಪೋಲೀಸ್‌, ರೈತರೊಬ್ಬರಿಂದ 5 ಕೆಜಿ ಆಲೂಗಡ್ಡೆಗೆ ಬೇಡಿಕೆ ಇಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ಕಷ್ಟ ಎಂದು ರೈತ ಹೇಳುತ್ತಾರೆ. 5 ಕೆಜಿ ಬದಲಿಗೆ 2 ಕೆಜಿ ನೀಡುತ್ತೇನೆಂದು ರೈತರ ಹೇಳುತ್ತಾರೆ. ಅದಕ್ಕೆ ಪೊಲೀಸ್‌ ಅಧಿಕಾರಿ ಕೋಪಗೊಂಡು, ಕೊನೆಗೆ 3 ಕೆಜಿಗೆ ಒಪ್ಪಂದ ಅಂತಿಮವಾಗುತ್ತದೆ. ಇದನ್ನೂ ಓದಿ: Wayanad Landslides | ವಯನಾಡಿಗೆ ಮೋದಿ ಭೇಟಿ – ದುರಂತ ಭೂಮಿಯಲ್ಲಿ ವೈಮಾನಿಕ ಸಮೀಕ್ಷೆ

  • ಗ್ರೇಸ್‌ ಹ್ಯಾರಿಸ್‌ ಸ್ಫೋಟಕ ಅರ್ಧಶತಕ – ಯುಪಿಗೆ 6 ವಿಕೆಟ್‌ಗಳ ಭರ್ಜರಿ ಜಯ

    ಗ್ರೇಸ್‌ ಹ್ಯಾರಿಸ್‌ ಸ್ಫೋಟಕ ಅರ್ಧಶತಕ – ಯುಪಿಗೆ 6 ವಿಕೆಟ್‌ಗಳ ಭರ್ಜರಿ ಜಯ

    ಬೆಂಗಳೂರು: ಗ್ರೇಸ್‌ ಹ್ಯಾರಿಸ್‌ (Grace Harris) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಯುಪಿ ವಾರಿಯರ್ಸ್‌ (UP Warriorz), ಗುಜರಾತ್‌ ಜೈಂಟ್ಸ್‌ (Gujarat Giants) ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ.

    ಟಾಸ್‌ ಸೋತು ಮೊದಲ ಬ್ಯಾಟ್‌ ಮಾಡಿದ ಗುಜರಾತ್‌ ಜೈಂಟ್ಸ್‌ 5 ವಿಕೆಟ್‌ ನಷ್ಟಕ್ಕೆ 142 ರನ್‌ ಗಳಿಸಿತು. ಸುಲಭದ ಸವಾಲನ್ನು ಬೆನ್ನಟ್ಟಿದ ಯುಪಿ ವಾರಿಯರ್ಸ್‌ 15.4 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 143 ರನ್‌ ಹೊಡೆಯುವ ಮೂಲಕ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿತು.

    ಯುಪಿ ಪರ ಗ್ರೇಸ್‌ ಹ್ಯಾರಿಸ್‌ ಔಟಾಗದೇ 60 ರನ್‌ (33 ಎಸೆತ, 9 ಬೌಂಡರಿ, 2 ಸಿಕ್ಸರ್‌) ಹೊಡೆದರೆ ಆರಂಭಿಕ ಆಟಗಾರ್ತಿ, ನಾಯಕಿ ಅಲಿಸ್ಸಾ ಹೀಲಿ 33 ರನ್‌ (21 ಎಸೆತ, 7 ಬೌಂಡರಿ) ಹೊಡೆದರು. ಇದನ್ನೂ ಓದಿ: ಐದನೇ ಬಾರಿಗೆ ಬೆಂಗಳೂರಿನಲ್ಲಿ ಬಾಂಬ್‌ ಸ್ಟೋಟ: ಹಿಂದೆ ಎಲ್ಲೆಲ್ಲಿ ಸಂಭವಿಸಿತ್ತು?

    ಗುಜರಾತ್‌ ಜೈಂಟ್ಸ್‌ ಪರ ಆಶ್ಲೀಗ್ ಗಾರ್ಡ್ನರ್ 30 ರನ್‌ (17 ಎಸೆತ, 4 ಬೌಂಡರಿ, 1 ಸಿಕ್ಸರ್)‌, ಫೋಬೆ ಲಿಚ್ಫೀಲ್ಡ್ 35 ರನ್‌ (26 ಎಸೆತ, 4 ಬೌಂಡರಿ, 1 ಸಿಕ್ಸರ್‌) ಹೊಡೆದರು.

    ಸದ್ಯ ಡಬ್ಲ್ಯೂಪಿಎಲ್‌ (WPL) ಅಂಕ ಪಟ್ಟಿಯಲ್ಲಿ ತಲಾ 4 ಅಂಕಗಳನ್ನು ಪಡೆದಿದ್ದರೂ ನೆಟ್‌ ರನ್‌ ರೇಟ್‌ ಆಧಾರದಲ್ಲಿ ಡೆಲ್ಲಿ ಮೊದಲ ಸ್ಥಾನ ಪಡೆದರೆ ಆರ್‌ಸಿಬಿ ಎರಡನೇ ಸ್ಥಾನ ಪಡೆದಿದೆ. ಯುಪಿ, ಮುಂಬೈ ಅನುಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದಿದೆ. ಆಡಿರುವ ಮೂರು ಪಂದ್ಯಗಳನ್ನು ಸೋತಿರುವ ಗುಜರಾತ್‌ 0 ಅಂಕದೊಂದಿಗೆ ಐದನೇ ಸ್ಥಾನದಲ್ಲಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಕೇಸ್‌ – ಓರ್ವ ವಶಕ್ಕೆ

  • ಪಾಕ್ ಹೊಗಳುವ ಹಾಡು ಹಾಕಿದ ಇಬ್ಬರ ವಿರುದ್ಧ ಕೇಸ್

    ಪಾಕ್ ಹೊಗಳುವ ಹಾಡು ಹಾಕಿದ ಇಬ್ಬರ ವಿರುದ್ಧ ಕೇಸ್

    ಲಕ್ನೋ: ಪಾಕಿಸ್ತಾನವನ್ನು ಹೊಗಳುವ ಹಾಡನ್ನು ಹಾಕಿದ ಇಬ್ಬರು ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

    ಯುಪಿಯ ಬರೇಲಿಯಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಫೋನ್‍ನಲ್ಲಿ ಪಾಕಿಸ್ತಾನವನ್ನು ಹೊಗಳುವ ಹಾಡನ್ನು ಹಾಕಿಕೊಂಡಿದ್ದರು. ಈ ರೀತಿ ಮಾಡುವುದು ರಾಷ್ಟ್ರೀಯ ಏಕೀಕರಣಕ್ಕೆ ಅಡ್ಡಿಪಡಿಸಿದಂತೆ ಎಂಬ ಆರೋಪದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೈಕ್‍ಗೆ ಲಾರಿ ಡಿಕ್ಕಿ – ಫಾರ್ಮಾ ಕಂಪನಿ ನೌಕರ ಸಾವು

    PAK

    ಪಾಕಿಸ್ತಾನವನ್ನು ಹೊಗಳುವ ಹಾಡನ್ನು ಹಾಕಬೇಡಿ ಎಂದು ಆಕ್ಷೇಪ ವ್ಯಕ್ತಪಡಿಸಿದರೂ, ಅವರು ಮತ್ತೆ ಮತ್ತೆ ಅದೇ ಕೆಲಸ ಮಾಡುತ್ತಾರೆ ಎಂದು ಗ್ರಾಮಸ್ಥರಾದ ಆಶಿಶ್ ದೂರಿನಲ್ಲಿ ತಿಳಿಸಿದ್ದಾರೆ. ಈ ದೂರಿನ ಆಧಾರದ ಮೇರೆಗೆ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಈ ವ್ಯಕ್ತಿಗಳು ಸಿಂಘೈ ಮುರಾವಾನ್ ಗ್ರಾಮದ ನಿವಾಸಿಗಳು ಎಂದು ಪೊಲೀಸರು ವಿವರಿಸಿರು.

    ನಡೆದಿದ್ದೇನು?
    ಆರೋಪಿಗಳು ಗ್ರಾಮದಲ್ಲಿ ಬೇರೆಯವರಿಗೂ ಕೇಳಿಸುವಂತೆ ಪಾಕಿಸ್ತಾನ್ ಹೊಗಳುವ ಹಾಡನ್ನು ಜೋರಾಗಿ ಹಾಕಿಕೊಂಡಿದ್ದಾರೆ. ಇದನ್ನು ಆಕ್ಷೇಪಿಸಿ ಆಶಿಶ್ ಪ್ರಶ್ನಿಸುತ್ತಾರೆ. ಈ ಹಿನ್ನೆಲೆ ಇಬ್ಬರ ನಡುವೆ ಜಗಳ ಪ್ರಾರಂಭವಾಗಿದೆ. ಘಟನೆಯ ವೀಡಿಯೋವನ್ನು ಫೋನ್‍ನಲ್ಲಿ ಸೆರೆಹಿಡಿಯಲಾಗಿದ್ದು, ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಳ್ಳಲಾಗಿದೆ.

    ಇದು ಪೊಲೀಸರ ಗಮನಕ್ಕೂ ಬಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೋ ವೈರಲ್ ಆದ ಬಳಿಕ ಆಶಿಶ್ ಆರೋಪಿಗಳ ವಿರುದ್ಧ ದೂರನ್ನು ನೀಡಿದ್ದಾರೆ ಎಂದು ಬರೇಲಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜ್‍ಕುಮಾರ್ ಅಗರ್‍ವಾಲ್ ತಿಳಿಸಿದರು. ಇದನ್ನೂ ಓದಿ:  ರಾಯಬಾಗದಲ್ಲಿ ಆರನೇ ವಾರಕ್ಕೆ ಕಾಲಿಟ್ಟ ‘ಕನ್ನೇರಿ’ ಚಿತ್ರ – ಪ್ರೇಕ್ಷಕರಿಂದ ಸಂಭ್ರಮಾಚರಣೆ

    ರಾಷ್ಟ್ರೀಯ ಏಕೀಕರಣಕ್ಕೆ ಅಡ್ಡಿಪಡಿಸುವ ಕೃತ್ಯಗಳಿಗೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 153 ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

  • ಮೊದಲ ದಿನದಿಂದ ಗೆಲುವು ಸ್ಪಷ್ಟವಾಗಿದೆ: ಯುಪಿ ಡಿಸಿಎಂ ಸೋಲಿಸಿದ ಪಲ್ಲವಿ ಪಟೇಲ್

    ಮೊದಲ ದಿನದಿಂದ ಗೆಲುವು ಸ್ಪಷ್ಟವಾಗಿದೆ: ಯುಪಿ ಡಿಸಿಎಂ ಸೋಲಿಸಿದ ಪಲ್ಲವಿ ಪಟೇಲ್

    ಲಕ್ನೋ: ಸಮಾಜವಾದಿ ಪಕ್ಷದ ಮೈತ್ರಿಕೂಟದ ಸವಾಲನ್ನು ಬದಿಗೊತ್ತಿ ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ದಿನವೇ ನಮ್ಮ ಗೆಲುವು ಸ್ಪಷ್ಟವಾಗಿತ್ತು ಎಂದು ಕೇಶವ್ ಮೌರ್ಯ ಅವರನ್ನು ಸೋಲಿಸಿದ ಪಲ್ಲವಿ ಪಟೇಲ್ ತಿಳಿಸಿದರು.

    ಯುಪಿಯಲ್ಲಿ ಗೆದ್ದ ಬಳಿಕ ಮೊದಲಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಪಲ್ಲವಿ ಅವರು, ಸಿರತುದಲ್ಲಿನ ನನ್ನ ಗೆಲುವು ಮೊದಲ ದಿನದಿಂದ ಸ್ಪಷ್ಟವಾಗಿತ್ತು. ಏಕೆಂದರೆ ಮೌರ್ಯ ಮತ್ತು ಅವರ ಕುಟುಂಬವು ಸೃಷ್ಟಿಸಿದ ಅವ್ಯವಸ್ಥೆಯಿಂದ ಸಿರತುವಿನ ಜನರು ನೋವಿನಲ್ಲಿ ಮುಳುಗಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಸಭಾಪತಿ ಮೇಲೆ FIR ಹಾಕಿದ ಅಧಿಕಾರಿಯನ್ನ ಅಮಾನತು ಮಾಡಿ – ಪಕ್ಷಾತೀತವಾಗಿ ಒತ್ತಾಯ

    ಪಲ್ಲವಿ ಹಿನ್ನೆಲೆ:
    ಪಲ್ಲವಿ ಪಟೇಲ್ ಹೈದರಾಬಾದ್‍ನಲ್ಲಿ ಕೆಲಸ ಮಾಡುತ್ತಿದ್ದ ಸೈಂಟಿಸ್ಟ್ ಆಗಿದ್ದರು. 2009ರಲ್ಲಿ ಪಲ್ಲವಿ ತಂದೆ ಮತ್ತು ಅಪ್ನಾ ದಳದ ಸಂಸ್ಥಾಪಕ ಸೋನೆಲಾಲ್ ಪಟೇಲ್ ಅವರ ಮರಣದ ನಂತರ 2009 ರಲ್ಲಿ ತಮ್ಮ ವೃತ್ತಿಯನ್ನು ತೊರೆದು ರಾಜಕೀಯಕ್ಕೆ ಸೇರಿದ್ದರು.

    ಪಟೇಲ್ ಅವರ ಮರಣದ ನಂತರ, ಪಲ್ಲವಿ ಪಟೇಲ್ ಅವರ ತಾಯಿ ಕೃಷ್ಣಾ ಪಟೇಲ್ ಪಕ್ಷದ ಮುಖ್ಯಸ್ಥರಾದರು. 2014 ರ ಲೋಕಸಭಾ ಚುನಾವಣೆಯಲ್ಲಿ, ಅವರ ಸಹೋದರಿ ಮತ್ತು ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಪೂರ್ವ ಯುಪಿಯ ಮಿರ್ಜಾಪುರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರು.

    ಗೆದ್ದ ಸ್ವಲ್ಪದಿನಗಳ ಬಳಿಕ ಅನುಪ್ರಿಯಾ ಪಟೇಲ್ ಪ್ರತ್ಯೇಕ ಬಣವನ್ನು ರಚಿಸುವುದರೊಂದಿಗೆ ಪಕ್ಷವು ಬೇರ್ಪಟ್ಟಿತು. ನಂತರ ಅಪ್ನಾ ದಳ, ಬಿಜೆಪಿ ಜೊತೆ ಸೇರಿಕೊಂಡಿತು. 2019 ರಲ್ಲಿ ಲೋಕಸಭೆಗೆ ಮರು ಚುನಾಯಿತರಾದ ಕೇಂದ್ರ ಸಚಿವರಿಗೆ ನನ್ನ ಸಹೋದರಿಯೇ ಪ್ರಚಾರ ಮಾಡಿದರು. ಈ ವೇಳೆ ಸಿರತುದಲ್ಲಿ ನನ್ನ ವಿರುದ್ಧವೇ ಪ್ರಚಾರ ಮಾಡಲು ಮುಂದಾಗಿದ್ದರು ಎಂದು ವಿವರಿಸಿದರು.

    ನನ್ನ ಸಹೋದರಿ ನನ್ನ ವಿರುದ್ಧವೇ ಪ್ರಚಾರ ಮಾಡಿರುವುದಕ್ಕೆ ನನಗೆ ಯಾವುದೇ ಬೇಸರಗಳಿಲ್ಲ. ಅವರು ಯಾವುದೂ ಒತ್ತಡದಲ್ಲಿರಬೇಕು. ಈ ಪ್ರಚಾರದಿಂದ ನನಗೆ ಯಾವುದೇ ಸಮಸ್ಯೆಗಳಿಲ್ಲ. ಆದರೆ ಆಕೆ ಪ್ರಚಾರವು ನನಗೆ ಕೆಲವು ರೀತಿಯಲ್ಲಿ ಒಳ್ಳೆಯದೆ ಆಗಿದೆ. ಅದಕ್ಕಾಗಿ ನಾನು ಅವಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ತನ್ನ ಸಹೋದರಿಯೊಂದಿಗಿನ ಸಂಬಂಧದ ಬಗ್ಗೆ ಹೇಳಿದರು. ಇದನ್ನೂ ಓದಿ: ಯಾರೇ ಲಂಚ ಕೇಳಿದರೂ ಆಡಿಯೋ – ವೀಡಿಯೋ ನನಗೇ ಕಳುಹಿಸಿ: ಪಂಜಾಬ್ ಸಿಎಂ

    ಕೇಶವ್ ಮೌರ್ಯ ವಿರುದ್ಧ 7,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸಿರತುದಿಂದ ಮೊದಲ ಬಾರಿಗೆ ಪಲ್ಲವಿ ಗೆದ್ದಿದ್ದಾರೆ. ಈ ವೇಳೆ ಸಿರತ್ತುನಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಗದ್ದಲ ಸೃಷ್ಟಿಸುತ್ತಿದ್ದ ಎರಡೂ ಕಡೆಯ ಬೆಂಬಲಿಗರನ್ನು ಚದುರಿಸಲು ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿ ಹಲವು ಬಾರಿ ಬಲಪ್ರಯೋಗ ಮಾಡಬೇಕಾಯಿತು.

  • ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ

    ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ

    ಲಕ್ನೋ: ಉಕ್ರೇನ್‍ನಿಂದ ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳದ ಸಿಎಂ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಗುರುವಾರ ತರಾಟೆಗೆ ತೆಗೆದುಕೊಂಡರು.

    ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್‍ಪಿ) ಪರವಾಗಿ ಪ್ರಚಾರ ಮಾಡುವಾಗ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರವು ಉಕ್ರೇನ್‍ನಲ್ಲಿರುವ ಭಾರತೀಯರನ್ನು ಯುದ್ಧದ ಮಧ್ಯೆ ತಮ್ಮಷ್ಟಕ್ಕೆ ಬಿಡುತ್ತಿದೆ. ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ ಮೋದಿ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಬಿಚ್ಚಿಟ್ಟ ಜನಾರ್ದನ ರೆಡ್ಡಿ ಪುತ್ರ!

    ಇದೀಗ ಏನಾಗುತ್ತಿದೆ ನೋಡಿ. ಉಕ್ರೇನ್‍ನಲ್ಲಿ ಯುದ್ಧ ನಡೆಯುತ್ತಿದೆ. ಮೋದಿ ಇಲ್ಲಿ(ಯುಪಿ) ಸಭೆಗಳನ್ನು ಮಾಡುತ್ತಿದ್ದಾರೆ. ಯಾವುದು ಮುಖ್ಯ? ನಮ್ಮ ಭಾರತೀಯರನ್ನು ಮತ್ತು ವಿದ್ಯಾರ್ಥಿಗಳನ್ನು ಮರಳಿ ಕರೆತರುವುದು ಮುಖ್ಯವಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಯುದ್ಧವು ಪ್ರಾರಂಭವಾಗಲಿದೆ ಎಂದು ಮೂರು ತಿಂಗಳ ಮೊದಲೇ ತಿಳಿದಿದ್ದರೆ, ನೀವು ಭಾರತೀಯರನ್ನು ಉಕ್ರೇನ್‍ನಿಂದ ಏಕೆ ಮರಳಿ ಕರೆತರಲಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಲುನೋವು ತಾಳಲಾಗದೆ ಮರ್ಮಾಂಗವನ್ನೆ ಕತ್ತರಿಸಿಕೊಂಡ!

  • ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ: ಯೋಗಿ ಆದಿತ್ಯನಾಥ್

    ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ: ಯೋಗಿ ಆದಿತ್ಯನಾಥ್

    ಲಕ್ನೋ: ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸಮಾಜವಾದಿ ಪಕ್ಷದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

    ‘ಜನ್ ವಿಶ್ವಾಸ ಯಾತ್ರೆ’ ಯಲ್ಲಿ ಯುಪಿಯ ಕೌಶಂಬಿಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿತ್ತು. ಆದರೆ ಈಗ ನಮ್ಮ ಸರ್ಕಾರ ಕಲ್ಯಾಣ ಯೋಜನೆಗಳಿಗೆ ಹಣವನ್ನು ಖರ್ಚು ಮಾಡಲಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಕೋಟ್ಯಂತರ ರೂ. ದುರುಪಯೋಗ ಪಡಿಸಿಕೊಳ್ಳಲಾಗುತ್ತಿತ್ತು. ಆದರೆ ನಮ್ಮ ಸರ್ಕಾರ ಸಂಪೂರ್ಣ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದರು. ಇದನ್ನೂ ಓದಿ: ನಾನು ’24 ಕ್ಯಾರೆಟ್ ಕಾಂಗ್ರೆಸ್ಸಿಗ’, ಪಕ್ಷದೊಂದಿಗೆ ಯಾವುದೇ ಅಸಮಾಧಾನವಿಲ್ಲ: ಗುಲಾಂ ನಬಿ ಆಜಾದ್

    ಕೋವಿಡ್-19 ಲಸಿಕೆಗಳನ್ನು ಪ್ರತಿಪಕ್ಷಗಳು ವಿರೋಧಿಸುವ ಮೂಲಕ ಮಾನವೀಯತೆಯ ವಿರುದ್ಧ ಅಪರಾಧ ಎಸಗಿವೆ. ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ. ಅವರಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಹಿಂದೆ ಅವರಿಗೆ ಜನರನ್ನು ಕಾಯಲು ಅವಕಾಶ ಸಿಕ್ಕಿತ್ತು. ಆದರೆ ಅವರು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಅದಕ್ಕೆ ಈಗ ಅವರು ಜನರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದು, ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು.

    ಪಿಯೂಷ್ ಜೈನ್ ಅವರ ಮೇಲೆ ಕೇಂದ್ರೀಯ ಸಂಸ್ಥೆಗಳು ಇತ್ತೀಚೆಗೆ ದಾಳಿ ನಡೆಸಿದ್ದು, ಅವರ ಬಳಿ ಒಟ್ಟು 177.45 ಕೋಟಿ ನಗದು ಪತ್ತೆಯಾಗಿತ್ತು. ಈ ಹಿನ್ನೆಲೆ ಕಾನ್ಪುರದ ಉದ್ಯಮಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಐದು ವರ್ಷಗಳ ಕಾಲ ಅಧಿಕಾರದಿಂದ ಹೊರಗುಳಿದಿದ್ದರೂ, ಇಂದಿಗೂ ಅವರ ಮನೆಯ ಗೋಡೆಗಳಿಂದ ಕೋಟಿಗಟ್ಟಲೆ ಕರೆನ್ಸಿ ನೋಟುಗಳು ಹೊರಬರುತ್ತಿವೆ. ಇದನ್ನು ನೀವು ಸಹ ನೋಡಬಹುದು ಎಂದು ಟೀಕಿಸಿದರು.

    ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನರಿಗೆ ನೀಡುತ್ತಿರುವ ಉಚಿತ ಆಹಾರದ ಹಣವನ್ನು, ಹಿಂದಿನ ಸರ್ಕಾರ ಭ್ರಷ್ಟಾಚಾರಕ್ಕೆ ಬಳಸುತ್ತಿತ್ತು ಎಂದು ಕಿಡಿಕಾರಿದರು. ಇದನ್ನೂ ಓದಿ: ಬಂಗಾಳದ ಐವರು ಬಿಜೆಪಿ ಶಾಸಕರು ಪಕ್ಷ ತೊರೆಯಬಹುದು: ಬಾಬುಲ್ ಸುಪ್ರಿಯೋ

    ತಮ್ಮ ಸರ್ಕಾರದ ಸಾಧನೆಗಳನ್ನು ವಿವರಿಸಿದ ಅವರು, ಕೌಶಾಂಬಿಯಲ್ಲಿ ಸುಮಾರು 50,000 ಕುಟುಂಬಗಳಿಗೆ ಹೊಸ ಮನೆಗಳನ್ನು ಮಂಜೂರು ಮಾಡಲಾಗಿದೆ. ಮೊದಲು ಕಾವೇರಿ ಯಾತ್ರೆಗೆ ನಿರ್ಬಂಧವಿತ್ತು, ಆದರೆ ನಮ್ಮ ಸರ್ಕಾರ ಯಾತ್ರೆಗೆ ಬೇಕಾದ ಅನುಕೂಲವನ್ನು ಮಾಡಿಕೊಟ್ಟಿದೆ. ಈ ಹಿಂದೆ ಪ್ರಯಾಗ್‍ರಾಜ್‍ನ ಕುಂಭದಲ್ಲಿ ಕಾಲ್ತುಳಿತವಾಗಿತ್ತು. ಈಗ ಪ್ರಯಾಗ್‍ರಾಜ್‍ನಲ್ಲಿ ಕುಂಭ ಆಯೋಜಿಸಿದಾಗ, ಯಾವುದೇ ರೀತಿಯ ಅಪಾಯವು ಆಗಲಿಲ್ಲ. ಈ ಸಿದ್ಧತೆಗಳನ್ನು ನೋಡಿದ ಪ್ರಪಂಚದ ಎಲ್ಲ ಭಾಗಗಳ ಭಕ್ತರು ಶ್ಲಾಘಿಸಿದ್ದಾರೆ ಎಂದು ತಿಳಿಸಿದರು.

  • ಶೀಘ್ರವೇ ಅಲಹಾಬಾದ್ ಹೆಸರು ಪ್ರಯಾಗ್‍ರಾಜ್ ಆಗುತ್ತೆ: ಯೋಗಿ

    ಶೀಘ್ರವೇ ಅಲಹಾಬಾದ್ ಹೆಸರು ಪ್ರಯಾಗ್‍ರಾಜ್ ಆಗುತ್ತೆ: ಯೋಗಿ

    ಲಕ್ನೋ: ಅಲಹಾಬಾದ್ ಜಿಲ್ಲೆಯ ಹೆಸರನ್ನ ಶೀಘ್ರವೇ ಪ್ರಯಾಗ್‍ರಾಜ್ ಎಂದು ಬದಲಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

    ಮುಂದಿನ ವರ್ಷ ನಡೆಯಲಿರುವ ಮಹಾ ಕುಂಭ ಮೇಳದ ಚರ್ಚೆಯಲ್ಲಿ ಮಾತನಾಡಿದ ಯೋಗಿ ಅವರು, ನನಗೆ ಅಖಾಡ ಪರಿಷದ್ ಮತ್ತು ಇತರೆ ಕೆಲವರು ಅಲಹಾಬಾದ್ ಜಿಲ್ಲೆಯಲ್ಲಿ ಪ್ರಯಾಗ್‍ರಾಜ್ ಎಂದು ಬದಲಿಸುವಂತೆ ಪ್ರಸ್ತಾವನೆ ನೀಡಿದ್ದಾರೆ. ರಾಜ್ಯಪಾಲರದ ರಾಮ್ ನಾಯಕ್ ಸಹ ಈ ನಿರ್ಧಾರಕ್ಕೆ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಶೀಘ್ರವೇ ಸರ್ಕಾರ ಅಲಹಾಬಾದ್ ಹೆಸರನ್ನು ಪ್ರಯಾಗ್‍ರಾಜ್ ಎಂದು ಬದಲಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

    ಕುಂಭ ಮೇಳದ ತಯಾರಿಯ ಬಗ್ಗೆ ಮಾತನಾಡಿದ ಮುಖ್ಯ ಮಂತ್ರಿಯವರು, ಜಗತ್ತಿನ ಮೂಲೆ ಮೂಲೆಯಿಂದ ಭಕ್ತರು ಈ ಕುಂಭ ಮೇಳದಲ್ಲಿ ಭಾಗವಹಿಸಲಿದ್ದಾರೆ. ದೇಶದ 6 ಲಕ್ಷ ಹಳ್ಳಿಗಳಿಂದ ಭಕ್ತರು ಭಾಗವಹಿಸಲಿದ್ದು, ಡಿಸೆಂಬರ್ ತಿಂಗಳಿನೊಳಗೆ ಎಲ್ಲಾ ಉಳಿದ ಕೆಲಸಗಳನ್ನ ಮುಗಿಸಲಿದ್ದೇವೆ ಎಂದು ತಿಳಿಸಿದರು.

    ಕುಂಭ ಮೇಳಕ್ಕೆ ಬರುವ ಭಕ್ತರಿಗೆ ಅನುಕೂಲವಾಗಲು ಹಾಲಿನ ಬೂತ್ ಗಳು, ಎಟಿಎಂ ಮೆಷಿನ್‍ಗಳು, ನೀರಿನ ಟ್ಯಾಂಕರ್ ಗಳು, ಬ್ಯಾಂಕ್ ಗಳು, ಮೊಬೈಲ್ ಟವರ್‍ಗಳನ್ನ ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಪ್ರಯಾಗ್ ಎನ್ನುವುದು ಕುಂಭಮೇಳ ನಡೆಯುವ ಪವಿತ್ರ ಪ್ರದೇಶವಾಗಿದೆ. ಇದು ಗಂಗೆ, ಯಮುನೆ ಮತ್ತು ಸರಸ್ವತಿ ನದಿಗಳ ಸಂಗಮಸ್ಥಳ. ಈ ಕಾರಣಕ್ಕಾಗಿ ಅಲಹಾಬಾದ್ ಅನ್ನು `ಪ್ರಯಾಗ್‍ರಾಜ್’ ಎಂದು ನಾಮಕರಣ ಮಾಡುತ್ತಿದ್ದೇವೆ ಎಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಈಗಾಗಲೇ ಕುಂಭ ಮೇಳದ ಬ್ಯಾನ ರ್‍ಗಳಲ್ಲಿ ಅಲಹಾಬಾದ್ ಬದಲು ಪ್ರಯಾಗ್‍ರಾಜ್ ಎಂದು ಬರೆಯಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv