Tag: ಯುಪಿ ಪೊಲೀಸ್

  • ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

    ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

    – ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವವರ ಬೇಟೆಗಿಳಿದ ಯೋಗಿ ಸರ್ಕಾರ

    ಲಕ್ನೋ: ಉತ್ತರ ಪ್ರದೇಶದಲ್ಲಿ `ಆಪರೇಷನ್ ಬುಲ್ಡೋಜರ್’ ಬಳಿಕ ಈಗ `ಆಪರೇಷನ್ ಲಂಗ್ಡಾ’ (Operation Langda) ಸದ್ದು ಮಾಡಿದೆ. ರಾಜ್ಯದಲ್ಲಿ ಕ್ರಿಮಿನಲ್‌ಗಳು, ರೇಪಿಸ್ಟ್‌ಗಳು, ಕೊಲೆಗಾರರು, ದರೋಡೆಕೋರರ ವಿರುದ್ಧ ಸಮರ ಸಾರಿರುವ ಉತ್ತರ ಪ್ರದೇಶ ಪೊಲೀಸರು 8 ನಗರಗಳಲ್ಲಿ 24 ಗಂಟೆಯಲ್ಲಿ 11 ಜನರಿಗೆ ಗುಂಡೇಟು ಹೊಡೆದಿದ್ದಾರೆ.

    ಅಪರಾಧ ಕೃತ್ಯ ನಿಯಂತ್ರಣಕ್ಕೆ ಪೊಲೀಸರು ಆರಂಭಿಸಿರುವ ವಿಶೇಷ ಕಾರ್ಯಾಚರಣೇಯೇ ಆಪರೇಷನ್ ಲಂಗ್ಡಾ. ಪದೇ ಪದೇ ಅಪರಾಧ ಕೃತ್ಯ ಎಸಗುವವರು, ಕ್ರಿಮಿನಲ್‌ಗಳು, ರೌಡಿಗಳು, ಪರೋಡಿಗಳಿಗೆ ಗುಂಡೇಟು ಹೊಡೆಯುವ ಮೂಲಕ ಪೊಲೀಸರು ಭೀತಿ ಹುಟ್ಟಿಸಿದ್ದಾರೆ. ಆಪರೇಷನ್ ಲಂಗ್ಡಾ ಕಾರ್ಯಾಚರಣೆಯಲ್ಲಿ ಕ್ರಿಮಿನಲ್ಸ್‌ಗಳನ್ನು ಕೊಲ್ಲುವುದಿಲ್ಲ. ಬದಲಿಗೆ ಅವರ ಕಾಲಿಗೆ ಗುಂಡೇಟು ಹೊಡೆದು ಅರೆಸ್ಟ್ ಮಾಡಲಾಗುತ್ತದೆ. ಇದನ್ನೂ ಓದಿ: Hassan | ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

    ಬಂಧಿತರೆಲ್ಲರೂ ಉತ್ತರ ಪ್ರದೇಶ ಪೊಲೀಸರ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವವರೇ ಆಗಿದ್ದಾರೆ. ಈ ಎನ್‌ಕೌಂಟರ್ ವೇಳೆ ಕೆಲ ಕ್ರಿಮಿನಲ್‌ಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

    ಗುಂಡೇಟು ತಿಂದವರು ಯಾರು?
    * ಲಖನೌದಲ್ಲಿ ರೇಪ್ ಆರೋಪಿ.
    * ಘಾಜಿಯಾಬಾದ್‌ನಲ್ಲಿ ಕೊಲೆಗಾರ.
    * ಶಾಮ್ಲಿಯಲ್ಲಿ ಗೋವು ಅಕ್ರಮ ಸಾಗಾಟಗಾರ.
    * ಝಾನ್ಸಿಯಲ್ಲಿ ಕ್ರಿಮಿನಲ್.
    * ಬುಲಂದ್‌ಶಹರ್‌ನಲ್ಲಿ ಅತ್ಯಾಚಾರಿ.
    * ಬಾಘಪತ್‌ನಲ್ಲಿ ದರೋಡೆಕೋರ.
    * ಬಲಿಯಾದಲ್ಲಿ ಎಸ್ಕೇಪ್ ಆಗ್ತಿದ್ದ ಕ್ರಿಮಿನಲ್.
    * ಆಗ್ರಾದಲ್ಲಿ ಕಳ್ಳ.
    * ಜಲೌನ್‌ನಲ್ಲಿ ದರೋಡೆಕೋರ.
    * ಉನ್ನಾವೋದಲ್ಲಿ ರೌಡಿಶೀಟರ್.

  • ಡುಮ್ಮ ಅಂದಿದ್ದಕ್ಕೆ ಅತಿಥಿಗಳಿಗೆ ಗುಂಡಿಕ್ಕಿದ ಭೂಪ

    ಡುಮ್ಮ ಅಂದಿದ್ದಕ್ಕೆ ಅತಿಥಿಗಳಿಗೆ ಗುಂಡಿಕ್ಕಿದ ಭೂಪ

    ಲಕ್ನೋ (ಗೋರಖ್‌ಪುರ): ತನ್ನನ್ನು ಡುಮ್ಮ, ಬೊಬ್ಬು ಎಂದು ಕರೆದಿದ್ದಕ್ಕೆ ಕೋಪಗೊಂಡ ಯುವಕ, ಇಬ್ಬರು ಅತಿಥಿಗಳ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರ (Gorakhpur) ಜಿಲ್ಲೆಯಲ್ಲಿ ನಡೆದಿದೆ.

    ಘಟನೆ ನಡೆದ ಮರುದಿನ ಖಜ್ನಿ ಪೊಲೀಸ್ ಠಾಣೆಯಲ್ಲಿ (Khajni police Station) ದೂರು ದಾಖಲಾಗಿದ್ದು, ನಂತರ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಬೆಲ್‌ಘಾಟ್ ಪ್ರದೇಶದ ನಿವಾಸಿ ಅರ್ಜುನ್ ಚೌಹಾಣ್ ಬಂಧಿತ ಆರೋಪಿ. ಇದನ್ನೂ ಓದಿ: ನಾಗ್ರೋಟಾದಲ್ಲಿ ಭಾರತೀಯ ಸೇನೆ & ಶಂಕಿತ ಉಗ್ರರ ನಡುವೆ ಗುಂಡಿನ ಚಕಮಕಿ

    ಅಷ್ಟಕ್ಕೂ ಆಗಿದ್ದೇನು?
    ಅರ್ಜುನ್‌ ಇತ್ತೀಚೆಗೆ ತನ್ನ ಚಿಕ್ಕಪ್ಪನೊಂದಿಗೆ ದೇವಸ್ಥಾನವೊಂದರಲ್ಲಿ ನಡೆಯುತ್ತಿದ್ದ ಔತಣಕೂಟಕ್ಕೆ ಹೋಗಿದ್ದ. ಈ ವೇಳೆ ಮಂಜರಿಯಾದ ಅನಿಲ್ ಚೌಹಾಣ್ ಮತ್ತು ಶುಭಮ್ ಚೌಹಾಣ್ ಎಂಬ ಇಬ್ಬರು ಅತಿಥಿಗಳು ತಾನು ಡುಮ್ಮ, ಬೊಜ್ಜು ಅಂತ ಸಿಕ್ಕಾಪಟ್ಟೆ ಅಪಹಾಸ್ಯ ಮಾಡುತ್ತಿದ್ದರು. ಇದರಿಂದ ಕೋಪಗೊಂಡ ಅರ್ಜುನ್‌ ತನ್ನ ಸ್ನೇಹಿತ ಆಸಿಫ್‌ ಖಾನ್‌ ಜೊತೆಗೆ ಆ ಇಬ್ಬರು ಅತಿಥಿಗಳನ್ನ ಹಿಂಬಾಲಿಸಿದ್ದ. ಗೋರಖ್‌ಪುರದ ತೆನುವಾ ಟೋಲ್ ಪ್ಲಾಜಾ ಬಳಿ ಕಾರು ನಿಲ್ಲಿಸಿ, ಇಬ್ಬರನ್ನೂ ಹೊರಗೆಳೆದು ಗುಂಡು ಹಾರಿಸಿ ಪರಾರಿಯಾಗಿದ್ದ ಎಂದು ದಕ್ಷಿಣ ಎಸ್ಪಿ ಜಿತೇಂದ್ರ ಕುಮಾರ್‌ ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು ಚೀನಾ ಖಂಡಿಸುತ್ತದೆ: ಅಜಿತ್‌ ದೋವಲ್‌ಗೆ ಫೋನ್‌ ಕರೆಯಲ್ಲಿ ಚೀನಾ ಸ್ಪಷ್ಟನೆ

    ಗುಂಡೇಟು ಬಿದ್ದಿದ್ದ ಇಬ್ಬರನ್ನೂ ಅಲ್ಲಿನ ದಾರಿಹೋಕರು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದರು, ಹೆಚ್ಚುವರಿ ಚಿಕಿತ್ಸೆಗಾಗಿ ಅವರನ್ನ ಗೋರಖ್‌ ಪುರ ಜಿಲ್ಲಾ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಶುಭಂ ಚೌಹಾಣ್ ಅವರ ತಂದೆಯ ದೂರಿನ ಆಧಾರದ ಮೇಲೆ, ಎಫ್‌ಐಆರ್ ದಾಖಲಿಸಲಾಗಿದ್ದು, ಶುಕ್ರವಾರ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢ ಸಾವು – ಕಾವೇರಿ ನದಿಯಲ್ಲಿ ಶವ ಪತ್ತೆ

  • ವಯಸ್ಸಾಯಿತು ಇನ್ಯಾವಾಗ ಮದ್ವೆ ಆಗ್ತೀಯಾ? ಅಂತ ರೇಗಿಸಿದ್ದಕ್ಕೆ ಅತ್ತಿಗೆಯನ್ನೇ ಕೊಂದ

    ವಯಸ್ಸಾಯಿತು ಇನ್ಯಾವಾಗ ಮದ್ವೆ ಆಗ್ತೀಯಾ? ಅಂತ ರೇಗಿಸಿದ್ದಕ್ಕೆ ಅತ್ತಿಗೆಯನ್ನೇ ಕೊಂದ

    ಲಕ್ನೋ: ವಯಸ್ಸಾಯಿತು ಇನ್ನೂ ಯಾವಾಗ ನೀನು ಮದ್ವೆ (Marriage) ಆಗೋದು ಅಂತ ಪದೇ ಪದೇ ತಮಾಷೆ ಮಾಡುತ್ತಿದ್ದಕ್ಕೆ ತನ್ನ ಅತ್ತಿಗೆಯನ್ನೇ ಕೊಂದಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬಂದಾ ಪಟ್ಟಣದಲ್ಲಿ ನಡೆದಿದೆ.

    ಕೊಲೆ ಆರೋಪಿಯನ್ನು ಸುನೀಲ್‌ ಹಾಗೂ ಕೊಲೆಯಾದ ಆತನ ಅತ್ತಿಗೆಯನ್ನು (Sister in Law) ಆಶಾದೇವಿ ಎಂದು ಗುರುತಿಸಲಾಗಿದೆ. ಆಶಾದೇವಿ ತನ್ನ ಮೈದುನನೊಂದಿಗೆ ಆಗಾಗ್ಗೆ ಮದುವೆ ವಿಚಾರವಾಗಿ ತಮಾಷೆ ಮಾಡುತ್ತಲೇ ಇದ್ದಳು. ಇದರಿಂದ ಮನನೊಂದಿದ್ದ ಮೈದುನ ಆಕೆಯನ್ನು ಕೊಂದೇಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಟ್ರಂಪ್‌, ಸೋತ ಹ್ಯಾರಿಸ್‌ಗೆ ರಾಹುಲ್‌ ಗಾಂಧಿ ಪತ್ರ

    ಮಾಹಿತಿ ಪ್ರಕಾರ, ಕೊಲೆಯಾದ ಮಹಿಳೆ ಹಾಗೂ ಆತನ ಮೈದುನ ಬಂದಾ ಪಟ್ಟಣದ ನಿವಾಸಿಗಳು. ಆಶಾದೇವಿ ಸುನೀಲ್‌ಗೆ ಆಗಾಗ್ಗೆ ಮದುವೆ ವಿಷಯದಲ್ಲಿ ತಮಾಷೆ ಮಾಡುತ್ತಿದ್ದಳು. ಅಷ್ಟೇ ಅಲ್ಲ, ನನಗೆ ಆಗಾಗ್ಗೆ ಹಣ ಕೊಡ್ತಾನೆ ಅಂತ ಸುನೀಲ್‌ ತಾಯಿ ಮುಂದೆ ಹೇಳಿದ್ದಳು. ಇದರಿಂದ ಸುನೀಲ್‌ ತಾಯಿ ಅಸಮಾಧಾನಗೊಂಡಿದ್ದರು. ಬಳಿಕ ತನ್ನ ಅತ್ತಿಗೆಗೆ ತಮಾಷೆ ಮಾಡುವುದನ್ನು ನಿಲ್ಲಿಸುವಂತೆ ಹೇಳಿದ್ದ. ಆದರೂ ಆಶಾ ತಮಾಷೆ ಮುಂದುವರಿಸಿದ್ದಳು. ಇದರಿಂದ ಬೇಸತ್ತ ಸುನೀಲ್‌ ಆಕೆಯನ್ನ ಕೊಂದೇ ಬಿಟ್ಟಿದ್ದಾನೆ ಎನ್ನಲಾಗಿದೆ.

    ಸ್ಕೆಚ್‌ ಹಾಕಿದ್ದು ಹೇಗೆ?
    ಇದೇ ನವೆಂಬರ್‌ 3ರ ರಾತ್ರಿ ಸುನೀಲ್‌ ಟೆರೇಸ್‌ ಮೇಲಿಂದ ತನ್ನ ಅತ್ತಿಗೆ ಮಲಗಿದ್ದ ಕೊಠಡಿಗೆ ನುಗ್ಗಿದ್ದಾನೆ. ನಿದ್ರೆ ಮಾಡುತ್ತಿದ್ದ ಆಶಾಳ ತಲೆಗೆ ದೊಣ್ಣೆಯಿಂದ ಬಲವಾಗಿ ಹೊಡೆದು ಪ್ರಜ್ಞೆ ತಪ್ಪಿಸಿದ್ದಾನೆ. ಬಳಿಕ ಆಕೆಯನ್ನ ಹೊರಗೆ ಎಳೆದೊಯ್ದು, ಇಟ್ಟಿಗೆಯಿಂದ ತಲೆಯನ್ನ ಜಜ್ಜಿ, ಕಾಲಿನಿಂದ ಚೆನ್ನಾಗಿ ತುಳಿದು ಕೊಲೆ ಮಾಡಿದ್ದಾನೆ. ನಂತರ ಕಸದ ರಾಶಿಯಿಂದ ಆಕೆಯ ದೇಹವನ್ನ ಮುಚ್ಚಿಟ್ಟು, ಯಾರಿಗೂ ತಿಳಿಯದಂತೆ ಮನೆಗೆ ಬಂದಿದ್ದಾನೆ. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

    ಘಟನೆ ನಡೆದ ಮರುದಿನ ಆಶಾಳ ಮಗು ಮನೆಯಲ್ಲಿ ಅಳುತ್ತಿದ್ದುದ್ದನ್ನು ಕಂಡು ಮನೆಯವರು ಗಾಬರಿಯಾಗಿದ್ದಾರೆ. ಆಶಾ ಇಲ್ಲದಿರುವುದು ಗೊತ್ತಾದಾಗ ಆಕೆಯನ್ನ ಹುಡುಕಲು ಪ್ರಾರಂಭಿಸಿದ್ದಾರೆ. ಬಳಿಕ ಮನೆಯಿಂದ ಸ್ವಲ್ಪ ದೂರದಲ್ಲಿದ್ದ ಕಸದ ಗುಡ್ಡೆಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಬಳಿಕ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ.

    ಬಳಿಕ ಆರೋಪಿ ಕೊಲೆಗೆ ಬಳಸಿದ್ದ ದೊಣ್ಣೆ ಮತ್ತು ಇಟ್ಟಿಗೆಯನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯನ್ನು ಯಶಸ್ವಿಯಾಗಿ ಪತ್ತೆ ಮಾಡಿದ ತಂಡಕ್ಕೆ ಎಸ್ಪಿ ಅಂಕುರ್ ಅಗರ್ವಾಲ್ 10,000 ರೂ. ಬಹುಮಾನ ನೀಡಿದ್ದಾರೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿರೋ ಕ್ಷೇತ್ರದಲ್ಲಿ ಸಿದ್ದರಾಮಯ್ಯ, ಡಿಕೆಶಿ ಭಾವಚಿತ್ರ ಇರುವ 30 ರೇಶನ್ ಕಿಟ್‌ಗಳು ಜಪ್ತಿ

  • ಹೋಟೆಲ್‌ ರೂಮಿನಲ್ಲಿ ಪರಪುರುಷರೊಂದಿಗೆ ಸರಸ – ಪತಿ ಕೈಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಡಾಕ್ಟರ್‌ ಪತ್ನಿ; ಮುಂದೇನಾಯ್ತು?

    ಹೋಟೆಲ್‌ ರೂಮಿನಲ್ಲಿ ಪರಪುರುಷರೊಂದಿಗೆ ಸರಸ – ಪತಿ ಕೈಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಡಾಕ್ಟರ್‌ ಪತ್ನಿ; ಮುಂದೇನಾಯ್ತು?

    ಲಕ್ನೋ: ಹೋಟೆಲ್‌ನ ರೂಮಿನಲ್ಲಿ (Hotel Room) ತನ್ನ ಇಬ್ಬರು ಪ್ರೇಮಿಗಳೊಂದಿಗೆ ಸರಸವಾಡುತ್ತಿದ್ದ ಪತ್ನಿ, ಪತಿ ಕೈಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ನಡೆದಿದೆ.

    ತನ್ನ ಹೆಂಡತಿಯ ಚಟುವಟಿಕೆಗಳ ಬಗ್ಗೆ ಅನುಮಾನ ಹೊಂದಿದ್ದ ವೈದ್ಯ, ಗುರುವಾರ ರಾತ್ರಿ ಹೋಟೆಲ್ ಕೊಠಡಿಗೆ ನುಗ್ಗಿದ್ದರು. ಇಬ್ಬರು ಪುರುಷರ ಜತೆ ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ಆಕೆಯನ್ನು ಹಿಡಿದಿದ್ದರು. ಇದರಿಂದ ಕುಪಿತರಾದ ವೈದ್ಯನ ಕುಟುಂಬದವರು ಹಾಗೂ ಇಬ್ಬರು ವ್ಯಕ್ತಿಗಳ ನಡುವೆ ಮಾರಾಮಾರಿ ನಡೆದಿದೆ. ಮಹಿಳೆ ಹಾಗೂ ಆಕೆಯ ಇಬ್ಬರು ಗೆಳೆಯರ ಮೇಲೆ ವೈದ್ಯನ ಕುಟುಂಬದವರು ಹಲ್ಲೆ ನಡೆಸಿದ್ದಾರೆ. ಈ ಕುರಿತ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಪಿಒಕೆ ನಿವಾಸಿಗಳ ಮೇಲೆ ಪಾಕ್ ದಬ್ಬಾಳಿಕೆ – ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ

    ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು (UP Police) ವೈದ್ಯ ಹಾಗೂ ಆತನ ಪತ್ನಿ, ಜೊತೆಗಿದ್ದ ಇಬ್ಬರು ಪುರುಷರನ್ನೂ ಬಂಧಿಸಿದ್ದಾರೆ. ಈ ವೇಳೆ ತನ್ನ ಹೆಂಡತಿ ಇಬ್ಬರು ಪುರುಷರೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಆರೋಪಿಸಿ ದೂರು ದಾಖಲಿಸಿದ್ದಾನೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಎಸ್ಪಿ ಕಚೇರಿ ಎದುರು ಪೊಲೀಸ್ ಪೇದೆಗಳಿಂದಲೇ ಪ್ರತಿಭಟನೆ – ಕಾರಣ ಏನು?

    ಏನಿದು ಘಟನೆ?
    ಪೊಲೀಸರ ಪ್ರಕಾರ, ದಂಪತಿ ಕೌಟುಂಬಿಕ ಕಲಹದಿಂದಾಗಿ ಕಳೆದ ಒಂದು ವರ್ಷದಿಂದಲೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಈ ವೇಳೆ ಮಹಿಳೆ ಹೋಟೆಲ್‌ನಲ್ಲಿ ಇಬ್ಬರು ಪುರುಷರೊಂದಿಗೆ ಅನೈತಿಕ ಚಟುವಟಿಕೆಗೆ ಮುಂದಾಗಿದ್ದಾಳೆ. ಇದೇ ಸಮಯದಲ್ಲಿ ಪತಿಯ ಕಣ್ಣಿಗೆ ಬಿದ್ದಿದ್ದಾಳೆ. ಬಳಿಕ ಇಬ್ಬರು ಪುರುಷರೊಂದಿಗೂ ವಾಗ್ವಾದ ಏರ್ಪಟ್ಟಿದ್ದು, ಪತಿ ಹಲ್ಲೆ ನಡೆಸಿದ್ದಾನೆ.

    ಮಹಿಳೆ ಕೂಡ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಳು ಎಂದು ಹೇಳಲಾಗಿದೆ. ಈಕೆಯೊಂದಿಗೆ ಇದ್ದ ಇಬ್ಬರು ಪುರುಷರಲ್ಲಿ ಒಬ್ಬ ಗಾಜಿಯಾಬಾದ್‌ ಮತ್ತೋರ್ವ ಬುಲಂದ್‌ಶಹರ್‌ ನಿವಾಸಿಯಾಗಿದ್ದ. ಸದ್ಯ ಮಹಿಳೆ ಸೇರಿ ಮೂವರನ್ನು ಬಂಧಿಸಿರುವ ಪೊಲೀಸರು ವೈದ್ಯ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ವೋಟ್‌ ಬ್ಯಾಂಕ್‌ ಛಿದ್ರವಾಗುತ್ತೆ ಅಂತ ಮುಂಬೈ ದಾಳಿಕೋರರ ಮೇಲೆ ಕಾಂಗ್ರೆಸ್‌ ಕ್ರಮ ತೆಗೆದುಕೊಳ್ಳಲಿಲ್ಲ: ಮೋದಿ

  • ಬಾಯಿಂದ ಬಾಯಿಗೆ ಎಂಜಲು ನೀರು ಉಗಿದುಕೊಂಡು ಚೆಲ್ಲಾಟ – ಪ್ರೇಮಿಗಳಿಗೆ ಶುರುವಾಯ್ತು ಪೀಕಲಾಟ

    ಬಾಯಿಂದ ಬಾಯಿಗೆ ಎಂಜಲು ನೀರು ಉಗಿದುಕೊಂಡು ಚೆಲ್ಲಾಟ – ಪ್ರೇಮಿಗಳಿಗೆ ಶುರುವಾಯ್ತು ಪೀಕಲಾಟ

    ಲಕ್ನೋ: ಇತ್ತೀಚೆಗೆ ಪ್ರೀತಿಯ (Love) ಪರಿಭಾಷೆಯೇ ಬದಲಾಗಿದೆ. ಪ್ರೀತಿಯ ಹುಟ್ಟಿನ ರೀತಿಯೂ ಬದಲಾಗಿದೆ. ಪ್ರೀತಿ ಎಂಬುದು ಹೇಳಿ ಕೇಳಿ ಹುಟ್ಟುವುದಿಲ್ಲ. ಇದರ ಹುಟ್ಟಿಗೆ ದಿನಾಂಕ, ಸಮಯ ಬೇಕಿಲ್ಲ. ಪ್ರೀತಿಯ ಭಾವ ಮನಸ್ಸಿನೊಳಗೆ ಮೂಡಿದಾಗ ಹೊಟ್ಟೆಯೊಳಗೆ ಕಚಗುಳಿ ಇಟ್ಟಂತಾಗುವುದು ಸುಳ್ಳಲ್ಲ. ಅದರಲ್ಲೂ ಮಾಡರ್ನ್ ಪ್ರೇಮಿಗಳಿಗೆ (Lovers) ಮೊದಲ ನೋಟದಲ್ಲೇ ಪ್ರೀತಿ ಚಿಗುರುತ್ತದೆ. ಇಂತ ಪ್ರೇಮಿಗಳ ನಡುವೆ ಕೆಲವರು ಹುಚ್ಚುತನದಿಂದ ಪೆಚ್ಚಾಗಿ ಪೇಚಿಗೆ ಸಿಲುಕುತ್ತಾರೆ. ಉತ್ತರ ಪ್ರದೇಶದಲ್ಲಿ (Uttar Pradesh) ನಡೆದ ಘಟನೆಯೊಂದು ಇದಕ್ಕೆ ತಾಜಾ ಉದಾಹರಣೆಯಾಗಿದೆ.

    ಹೌದು. ಉತ್ತರ ಪ್ರದೇಶದ ನೋಯ್ಡಾದ ಪಾರ್ಕ್‌ವೊಂದರಲ್ಲಿ (Noida Park) ಪ್ರೇಮಿಗಳಿಬ್ಬರು ಅತಿರೇಖದ ವರ್ತನೆ ತೋರಿದ್ದು, ವಿವಾದಕ್ಕೆ ಕಾರಣವಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಪ್ರೇಮಿಗಳ ವಿರುದ್ಧ ನೆಟ್ಟಿಗರು ಸಿಡಿದಿದ್ದಾರೆ. ಇದನ್ನೂ ಓದಿ: Delhi Metro: ಮೆಟ್ರೋ ರೈಲಿನಲ್ಲಿ ಲಿಪ್‌ ಲಾಕ್‌ ಮಾಡಿದ ಪ್ರೇಮಿಗಳು – ವೀಡಿಯೋ ವೈರಲ್‌ 

    ನೋಯ್ಡಾದಲ್ಲಿರುವ ವಾನ್‌ವೇದ್‌ ಪಾರ್ಕ್‌ನಲ್ಲಿ ಚಿತ್ರೀಕರಿಸಿದ ವೀಡಿಯೋದಲ್ಲಿ, ಯುವಕ ಮೊದಲು ತನ್ನ ಪ್ರೇಯಸಿಗೆ ಉಂಗುರ ತೊಡಿಸಿದ್ದಾನೆ. ನಂತರ ಆಕೆ ತನ್ನ ಪ್ರೀತಿ ವ್ಯಕ್ತಪಡಿಸಿಲು ತನ್ನ ಬಾಯಿಂದ ಎಂಜಲು ನೀರನ್ನು ತನ್ನ ಪ್ರೇಮಿ ಬಾಯಿಗೆ ಉಗುಳಿದ್ದಾಳೆ. ಅದಕ್ಕೆ ಪ್ರತಿಯಾಗಿ ಯುವಕನೂ ಅದೇ ರೀತಿ ಮಾಡಿದ್ದಾನೆ. ಇದು ಅಸಭ್ಯ ವರ್ತನೆಯಂತೆ ತೋರಿದು, ವೀಡಿಯೋ ಸದ್ದು ಮಾಡುತ್ತಿದ್ದಂತೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

    ಕೆಲ ದಿನಗಳ ಹಿಂದೆ ದೆಹಲಿಯ ಮೆಟ್ರೋದಲ್ಲಿ (Delhi Metro) ಪ್ರೇಮಿಗಳಿಬ್ಬರು ಲಿಪ್‌ ಲಾಕ್‌ ಮಾಡಿದ್ದ ದೃಶ್ಯ ಕಂಡುಬಂದಿತ್ತು. ಇದೀಗ ಪಾರ್ಕ್‌ಗಳಲ್ಲಿ ಹೀಗೆ ಆದ್ರೆ, ಸಭ್ಯಸ್ಥರು ಓಡಾಡುವುದು ಹೇಗೆ? ಹೇಳುವವರು ಕೇಳುವವರು ಇಲ್ಲದಂತಾಗಿದೆ ಪೊಲೀಸರು ಕ್ರಮ ಕೈಗೊಂಡು ಬಿಸಿ ಮುಟ್ಟಿಸಬೇಕು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಝಿಕಾ ಆತಂಕ; ಚಿಕ್ಕಬಳ್ಳಾಪುರದ 5 ಗ್ರಾಮಗಳಲ್ಲಿ ಅಲರ್ಟ್‌ – 31 ಮಂದಿ ಗರ್ಭಿಣಿಯರಿಗೆ ರಕ್ತ ಪರೀಕ್ಷೆ

    ಅಲ್ಲದೇ ವೀಡಿಯೋವನ್ನು ಟ್ಬಿಟ್ಟರ್‌ ಎಕ್ಸ್‌ ಖಾತೆಯಲ್ಲಿ ನೋಯ್ಡಾದ ಉಪ ಪೊಲೀಸ್‌ ಆಯುಕ್ತರಿಗೆ ಟ್ಯಾಗ್‌ ಮಾಡಲಾಗಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದರಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು, ನೋಯ್ಡಾದ ಸೆಕ್ಟರ್-113 ಠಾಣೆಗೆ ಮತ್ತು ಸೈಬರ್‌ ಸೆಲ್‌ ವಿಭಾಗಕ್ಕೆ ಸೂಚಿಸಿದ್ದಾರೆ. ಪಾರ್ಕ್‌ನಲ್ಲಿ ಚೆಲ್ಲಾಟವಾಡಿದ ಪ್ರೇಮಿಗಳಿಗೆ ಈಗ ಪೀಕಲಾಟ ಶುರುವಾಗಿದೆ. ಇದನ್ನೂ ಓದಿ: ರಾಜಕೀಯ ಪ್ರೇರಿತವಾಗಿ ನೀಡಿರುವ ನೋಟಿಸ್‌ ಹಿಂಪಡೆಯಿರಿ: EDಗೆ ಕೇಜ್ರಿವಾಲ್‌ ಪ್ರತಿಕ್ರಿಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತಿಯನ್ನ ಮಂಚಕ್ಕೆ ಕಟ್ಟಿಹಾಕಿ ಕೊಂದು, ಐದು ತುಂಡುಗಳಾಗಿ ಕತ್ತರಿಸಿ ಎಸೆದ ಪತ್ನಿ!

    ಪತಿಯನ್ನ ಮಂಚಕ್ಕೆ ಕಟ್ಟಿಹಾಕಿ ಕೊಂದು, ಐದು ತುಂಡುಗಳಾಗಿ ಕತ್ತರಿಸಿ ಎಸೆದ ಪತ್ನಿ!

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಮಹಿಳೆಯೊಬ್ಬಳು ತನ್ನ ಪತಿಯನ್ನ ಮಂಚಕ್ಕೆ ಕಟ್ಟಿಹಾಕಿ ಕೊಂದು, 5 ತುಂಡುಗಳಾಗಿ ಕತ್ತರಿಸಿ ಬಿಸಾಡಿರುವ ಘಟನೆ ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನಡೆದಿದೆ. ಬಳಿಕ ತನಿಖೆಯಲ್ಲಿ (Investigation) ತಾನೇ ಕೊಂದಿರುವುದಾಗಿ ತಪ್ಪೊಪ್ಪಿಕೊಂಡ ನಂತರ ಪೊಲೀಸರು ಬಂಧಿಸಿದ್ದಾರೆ.

    ಮೃತರನ್ನ ಗಜ್ರೌಲಾ ಪ್ರದೇಶದ ಶಿವನಗರ ನಿವಾಸಿ ರಾಮ್ ಪಾಲ್ (55) ಎಂದು ಗುರುತಿಸಲಾಗಿದೆ. ದುಲಾರೊ ದೇವಿ ಆರೋಪಿಯಾಗಿದ್ದಾಳೆ. ಇದನ್ನೂ ಓದಿ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ನಲ್ಲಿ ನೀಡಿದ ಚಪಾತಿ ಊಟದಲ್ಲಿ ಜಿರಳೆ ಪತ್ತೆ – ಪ್ರಯಾಣಿಕ ಶಾಕ್‌!

    ರಾಮ್‌ಪಾಲ್‌ ಪತ್ನಿ ದುಲಾರೊ ದೇವಿ ಕೆಲ ದಿನಗಳಿಂದ ಪತಿಯ ಸ್ನೇಹಿತನೊಂದಿಗೆ ವಾಸವಿದ್ದಳು. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಗ್ರಾಮಕ್ಕೆ ಹಿಂದಿರುಗಿದಾಗ ಪತಿ ಕಾಣೆಯಾಗಿರುವ ಬಗ್ಗೆ ಮಗನಿಗೆ ತಿಳಿಸಿದ್ದಾಳೆ. ನಂತರ ಮಗ ಪೊಲೀಸ್‌ ಠಾಣೆಗೆ (UP Police) ದೂರು ನೀಡಿದ್ದಾನೆ. ಕೇಸ್‌ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುವ ವೇಳೆ ಪತ್ನಿ ಮೇಲೆ ಅನುಮಾನಗೊಂಡು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾಳೆ. ಇದನ್ನೂ ಓದಿ: ಸಾಲ ಮಾಡಿ ಲಾಟರಿ ಟಿಕೆಟ್ ಖರೀದಿಸಿದ ಪೌರಕಾರ್ಮಿಕ ಮಹಿಳೆಯರಿಗೆ 10 ಕೋಟಿ ರೂ. ಬಂಪರ್

    ಪತಿ ರಾತ್ರಿ ಮಲಗಿದ್ದಾಗ ಮಂಚಕ್ಕೆ ಕಟ್ಟಿಹಾಕಿ ಕೊಂದು, ಕೊಡಲಿಯಿಂದ ದೇಹದ ಭಾಗಗಳನ್ನ ಕತ್ತರಿಸಿ ಹತ್ತಿರದ ಕಾಲುವೆಯಲ್ಲಿ (Canal) ಬಿಸಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ನಂತರ ಪತ್ನಿಯನ್ನ ಬಂಧಿಸಿದ ಪೊಲೀಸರು ರಾಮ್‌ಪಾಲ್‌ ದೇಹದ ಭಾಗಗಳನ್ನ ಕಾಲುವೆಯಿಂದ ಹೊರತೆಗೆಯಲು ಕಾರ್ಯಚರಣೆ ನಡೆಸುತ್ತಿದ್ದಾರೆ. ಮೃತರ ರಕ್ತಸಿಕ್ತ ಬಟ್ಟೆ ಹಾಗೂ ಹಾಸಿಗೆ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತರಕಾರಿ ತರ್ತೀನಿ ಅಂತಾ ಮಾರ್ಕೆಟ್‌ಗೆ ಹೋದ ಮಹಿಳೆ ಪ್ರಿಯಕರನೊಂದಿಗೆ ಪರಾರಿ – ಗಂಡನ ಪಾಡು ಕೇಳೋರಿಲ್ಲ

    ತರಕಾರಿ ತರ್ತೀನಿ ಅಂತಾ ಮಾರ್ಕೆಟ್‌ಗೆ ಹೋದ ಮಹಿಳೆ ಪ್ರಿಯಕರನೊಂದಿಗೆ ಪರಾರಿ – ಗಂಡನ ಪಾಡು ಕೇಳೋರಿಲ್ಲ

    ಲಕ್ನೋ: ಮಾರ್ಕೆಟ್‌ಗೆ ಹೋಗಿ ತರಕಾರಿ ತಗೊಂಡು ಬರ್ತೀನಿ ಅಂತಾ ಹೋದ ನವವಿವಾಹಿತೆ (Newlu Married Women) ಮದುವೆಯಾದ ಒಂದೇ ವಾರಕ್ಕೆ ಗಂಡನನ್ನ ಬಿಟ್ಟು ಪ್ರಿಯಕರನೊಂದಿಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ (Uttar Pradeh) ಕಲಿಂಜರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಮೇ 31 ರಂದು ಮದುವೆಯಾಗಿದ್ದ (Marriage) ಮಹಿಳೆ ಒಂದೇ ವಾರಕ್ಕೆ ಗಂಡನನ್ನ ಬಿಟ್ಟು ಪರಾರಿಯಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕುಟುಂಬಸ್ಥರನ್ನು ಭೇಟಿ ಮಾಡಬೇಕೆಂಬ ನೆಪದಲ್ಲಿ ತವರು ಮನೆಗೆ ಬಂದಿದ್ದ ಆಕೆ, ಮನೆಗೆ ಸಾಮಾನು ತರ್ತೀನಿ ಅಂತಾ ಮಾರುಕಟ್ಟೆಗೆ ಹೋದವಳೇ ತನ್ನ ಪ್ರಿಯಕರನೊಂದಿಗೆ ಎಸ್ಕೇಪ್‌ ಆಗಿದ್ದಾಳೆ. ಜೊತೆಗೆ ತವರು ಮನೆಯಲ್ಲಿದ್ದ ಚಿನ್ನಾಭರಣವನ್ನೆಲ್ಲಾ ದೋಚಿಕೊಂಡು ಹೋಗಿದ್ದಾಳೆ ಎಂಬುದು ತಿಳಿದುಬಂದಿದೆ.

    ಮಗಳು ಮನೆಗೆ ಬಾರದೇ ಇದ್ದಾಗ ಆತಂಕಕ್ಕೊಳಗಾದ ಪೋಷಕರು ಫೋನ್‌ ಮಾಡಿದ್ದಾರೆ. ಫೋನ್‌ ಸ್ವಿಚ್‌ ಆಫ್‌ ಆಗಿರುವುದು ಕಂಡು ಹುಡುಕಾಟ ನಡೆಸಿದ್ದಾರೆ. ನಂತರ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿರುವುದು ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಕೇಸ್‌ ದಾಖಲಿಸಿಕೊಂಡ ಪೊಲೀಸರು (Police) ಮಹಿಳೆ ಹಾಗೂ ಆಕೆಯ ಗೆಳೆಯನಿಗಾಗಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಇದನ್ನೂ ಓದಿ: Indonesia Open 2023: ಐತಿಹಾಸಿಕ ಜಯ ತಂದ ಮೊದಲ ಭಾರತೀಯ ಜೋಡಿ, ಸಾತ್ವಿಕ್‌ಸಾಯಿರಾಜ್, ಚಿರಾಗ್‌ಗೆ ಪ್ರಶಸ್ತಿ

    ಆ ದಿನ ನಡೆದಿದ್ದೇನು?
    ಪರಾರಿಯಾದ ಮಹಿಳೆಗೆ ಕಳೆದ ಮೇ 31 ರಂದು ಮದುವೆ ಮಾಡಿಸಲಾಗಿತ್ತು. ಜೂನ್‌ 6 ರಂದು ತನ್ನ ತವರಿಗೆ ಮರಳಿದ್ದಳು. ಜೂನ್‌ 11ರಂದು ಮನೆಗೆ ಸಾಮಾನು ಖರೀದಿಸುವ ನೆಪದಲ್ಲಿ ಮಾರುಕಟ್ಟೆಗೆ ಹೋದ ಅವಳು ವಾಪಸ್‌ ಮನೆಗೆ ಬಂದಿರಲಿಲ್ಲ. ಸಂಜೆಯಾದರೂ ಮಗಳು ಮನೆಗೆ ಬಾರದಿದ್ದಾಗ ಆತಂಕಗೊಂಡ ಪೋಷಕರು ತೀವ್ರ ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ಭಾರತೀಯ ಸೇನೆಗಾಗಿ ಮಹಿಂದ್ರಾ ಗ್ರೂಪ್‍ನಿಂದ ನೂತನ ಶಸ್ತ್ರಸಜ್ಜಿತ ವಾಹನ ನಿರ್ಮಾಣ

    ನಂತರ ಅವಳು ಪ್ರಿಯಕರನೊಂದಿಗೆ ಓಡಿ ಹೋಗಿರುವುದು ತಿಳಿದು ಬಂದಿತು. ಆಕೆ ಬರಿಗೈನಲ್ಲಿ ಓಡಿ ಹೋಗಿರಲಿಲ್ಲ. ಮನೆಯಲ್ಲಿದ್ದ ಚಿನ್ನಾಭರಣವನ್ನೂ ದೋಚಿಕೊಂಡು ಹೋಗಿದ್ದಳು. ಆ ಹುಡುಗ ಬೇರೆ ಯಾರೂ ಅಲ್ಲ ತನ್ನ ಸಹೋದರನ ಕಡೆಯ ಸಂಬಂಧಿಯಾಗಿದ್ದ. ಬಳಿಕ ಪೋಷಕರ ದೂರಿನ ಮೇರೆಗೆ ಕೇಸ್‌ ದಾಖಲಿಸಿಕೊಂಡ ಪೊಲೀಸರು ಓಡಿಹೋದ ಇಬ್ಬರಿಗಾಗಿ ಬಲೆ ಬೀಸಿದ್ದಾರೆ.

  • ಕೈಕೊಟ್ಟ ಪ್ರಿಯತಮ – ನೇಣು ಬಿಗಿದುಕೊಂಡು MBBS ವಿದ್ಯಾರ್ಥಿನಿ ಆತ್ಮಹತ್ಯೆ

    ಕೈಕೊಟ್ಟ ಪ್ರಿಯತಮ – ನೇಣು ಬಿಗಿದುಕೊಂಡು MBBS ವಿದ್ಯಾರ್ಥಿನಿ ಆತ್ಮಹತ್ಯೆ

    ಲಕ್ನೋ: 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು (Medical Student) ಹಾಸ್ಟೆಲ್‌ ರೂಮಿನಲ್ಲಿ ಸೀಲಿಂಗ್‌ ಫ್ಯಾನ್‌ಗೆ (Ceiling Fan) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನಲ್ಲಿ ನಡೆದಿದೆ.

    3ನೇ ವರ್ಷದ MBBS ವಿದ್ಯಾರ್ಥಿನಿ ದಿವ್ಯ ಜ್ಯೋತಿ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಕನೂಜ್‌ ಜಿಲ್ಲೆಯ ನಿವಾಸಿ. ಗಾಜಿಯಾಬಾದ್‌ ಮೋದಿನಗರ ಟೌನ್‌ನ ಸೂರ್ಯ ಕಾಲೊನಿಯಲ್ಲಿ ವಾಸವಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಹೈದರಾಬಾದ್ ಯುವತಿ ಲಂಡನ್‌ನಲ್ಲಿ ಭೀಕರ ಕೊಲೆ

    ಜ್ಯೋತಿ ಸ್ನೇಹಿತೆ ದಿವ್ಯಜ್ಯೋತಿಯನ್ನ ಭೇಟಿ ಮಾಡಲು ರೂಮಿನ ಬಳಿ ತೆರಳಿದಾಗ ಬಾಗಿಲು ಮುಚ್ಚಿರುವುದು ಕಂಡುಬಂದಿದೆ. ಎಷ್ಟು ಬಾರಿ ಬಾಗಿಲು ಬಡಿದರೂ ಉತ್ತರವಿಲ್ಲ, ಜ್ಯೋತಿ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿದರೂ ಆಕೆ ಉತ್ತರಿಸಲಿಲ್ಲ. ಇದರಿಂದ ಅನುಮಾನಗೊಂಡ ಸ್ನೇಹಿತರು ಕೂಡಲೇ ಮನೆ ಮಾಲೀಕರಿಗೆ ವಿಷಯ ತಿಳಿಸಿದ್ದಾರೆ. ಬಾಗಿಲು ಒಡೆದು ನೋಡಿದಾಗ ಜ್ಯೋತಿ ಸೀಲಿಂಗ್‌ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ಕಣ್ಣು ಕಿತ್ತು, ಕತ್ತು ಕೊಯ್ದು ನರ್ಸಿಂಗ್‌ ವಿದ್ಯಾರ್ಥಿನಿಯ ಕೊಲೆ – ಕರಾಳ ರಾತ್ರಿಯಲ್ಲಿ ನಡೆದಿದ್ದೇನು?

    ಪೊಲೀಸರು ತಪಾಸಣೆ ನಡೆಸಿದಾಗ, ಲವ್‌ ಬ್ರೇಕಪ್‌ ಆಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿರುವ ಡೆತ್‌ ನೋಟ್‌ ಪತ್ತೆಯಾಗಿದೆ. ನಂತರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಡಿಸಿಪಿ ರವಿಕುಮಾರ್‌ ಮಾಹಿತಿ ನೀಡಿದ್ದಾರೆ.

  • 5, 6 ವರ್ಷದ ಬಾಲಕಿಯರ ಮೇಲೆ ಸಂಬಂಧಿಕನಿಂದಲೇ ರೇಪ್‌ – ಆರೋಪಿ ಎಸ್ಕೇಪ್‌

    ಲಕ್ನೋ: ಮದುವೆ ಸಮಾರಂಭವೊಂದರಲ್ಲಿ (Marriage Party) ಇಬ್ಬರು ಬಾಲಕಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಲಕ್ನೋದ ಬಿಜ್ನೋರ್ ಗ್ರಾಮದಲ್ಲಿ ನಡೆದಿದೆ.

    ಶೆರ್ಕೋಟ್ ಪೊಲೀಸ್ ಠಾಣಾ (Sherkot police station) ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ʻಬರಾತ್‌ʼ ಮದುವೆ ಪಾರ್ಟಿಗೆ ತೆರಳಿದ್ದ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದ್ದು, ಸಂತ್ರರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಣಿಪುರ ಮತ್ತೆ ಧಗ ಧಗ – ಅಮಿತ್‌ ಶಾ ಭೇಟಿಗೆ ಮುನ್ನ ಮತ್ತೊಂದು ಅಟ್ಯಾಕ್‌, ಐವರ ಸಾವು

    ಲಕ್ನೋದ ಶೆರ್ಕೋಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮದುವೆ ಪಾರ್ಟಿಯಲ್ಲಿ ಇಬ್ಬರು ಬಾಲಕಿಯರು ಡಿಜೆ ನುಡಿಸುವುದನ್ನ ಆನಂದಿಸುತ್ತಿದ್ದರು, ಇದ್ದಕ್ಕಿದ್ದಂತೆ ಕಣ್ಮರೆಯಾಗಿಬಿಟ್ಟರು. ತಕ್ಷಣ ಸ್ಥಳೀಯರೆಲ್ಲಾ ಬಾಲಕಿಯರನ್ನ ಹುಡುಕಲು ಪ್ರಾರಂಭಿಸಿದರು. ನಂತರ ಪಾರ್ಟಿ ನಡೆಯುತ್ತಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲೇ ಇದ್ದ ಕಾಡಿನಲ್ಲಿ ಅರೆಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿತು. ಬಾಲಕಿಯರನ್ನು ಪತ್ತೆಹಚ್ಚಿದ ಪೊಲೀಸರು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರು. ಇದನ್ನೂ ಓದಿ: ಕುಡಿಯುವ ನೀರಿನ ಘಟಕದಲ್ಲಿ ಮೋರಿ ನೀರು ಪೂರೈಕೆ- ಜನರ ಆರೋಗ್ಯದಲ್ಲಿ ಏರುಪೇರು

    CRIME COURT

    ಈ ಕುರಿತು ಪ್ರತಿಕ್ರಿಯಿಸಿರುವ ಎಸ್ಪಿ ನೀರಜ್‌ ಕುಮಾರ್‌ ಜದೌನ್‌, ಸಂತ್ರಸ್ತ ಬಾಲಕಿಯರಲ್ಲಿ ಒಬ್ಬರಿಗೆ 6 ವರ್ಷ ಮತ್ತೊಬ್ಬರಿಗೆ 5 ವರ್ಷ ತುಂಬಿದೆ. ಮಕ್ಕಳನ್ನು ಅವರ ಸಂಬಂಧಿಕನೊಬ್ಬ ಅಪಹರಿಸಿ ಅತ್ಯಾಚಾರವೆಸಗಿದ್ದಾನೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್‌ ಮತ್ತು ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

  • ಎಸ್‍ಪಿಗೆ ಪತ್ರ ಬರೆದ ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ಸಂದೀಪ್

    ಎಸ್‍ಪಿಗೆ ಪತ್ರ ಬರೆದ ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ಸಂದೀಪ್

    – ನಮ್ಮಿಬ್ಬರ ಮಧ್ಯೆ ಗೆಳತನವಿತ್ತು
    – ಯುವತಿ ತಾಯಿ, ಸೋದರನ ಮೇಲೆ ಗಂಭೀರ ಆರೋಪ

    ಲಕ್ನೋ: ಹತ್ರಾಸ್ ಪ್ರಕರಣದದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಸಂದೀಪ್ ಎಸ್‍ಪಿಗೆ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಪತ್ರದಲ್ಲಿ ತಾನು ನಿರ್ದೋಷಿಯಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಸಂದೀಪ್ ಒತ್ತಾಯಿಸಿದ್ದಾನೆ. ಸೆಪ್ಟೆಂಬರ್ 7ರಂದು ಜೈಲಿನಿಂದಲೇ ಹತ್ರಾಸ್ ಎಸ್‍ಪಿಗೆ ಪತ್ರ ಬರೆದಿರುವ ಸಂದೀಪ್, ಬಂಧಿತ ಇನ್ನುಳಿದ ಮೂವರು ಸಹ ನಿರಪರಾಧಿಗಳು. ಆಕೆಯ ತಾಯಿ ಮತ್ತು ಸೋದರನ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದ್ದಾನೆ.

    ಪತ್ರದಲ್ಲಿ ಏನಿದೆ?: 19 ವರ್ಷದ ಯುವತಿ ಜೊತೆ ನನ್ನ ಸ್ನೇಹವಿತ್ತು. ಆದ್ರೆ ನಮ್ಮಿಬ್ಬರ ಸ್ನೇಹ ಕುಟುಂಬಸ್ಥರಿಗೆ ಇಷ್ಟವಿರಲಿಲ್ಲ. ಘಟನೆಯ ದಿನ ನಾನು ಸ್ಥಳದಲ್ಲಿದ್ದೆ. ಆದ್ರೆ ಯುವತಿ ತಾಯಿ ಮತ್ತು ಸೋದರ ನನ್ನನ್ನು ಮನೆಗೆ ಕಳುಹಿಸಿದರು. ನಂತರ ನನ್ನನ್ನ ಆರೋಪಿಯೆಂದು ಬಂಧಿಸಿ ಜೈಲಿಗೆ ಕರೆತರಲಾಯ್ತು. ಯುವತಿಯ ಮೇಲೆ ಆಕೆ ತಾಯಿ ಮತ್ತು ಸೋದರ ಹಲ್ಲೆ ನಡೆಸಿದ್ದರಿಂದ ಅವಳು ಸಾವನ್ನಪ್ಪಿದ್ದಾಳೆ. ನಮ್ಮ ಮೇಲೆ ಸುಳ್ಳು ಕೇಸ್ ದಾಖಲಿಸಿ ಜೈಲಿನಲ್ಲಿರಿಸಲಾಗಿದೆ.

    ನಮ್ಮಿಬ್ಬರ ಮಧ್ಯೆ ಸ್ನೇಹವಿತ್ತು: ಸಾವನ್ನಪ್ಪಿರುವ ಯುವತಿ ಒಳ್ಳೆಯವಳಾಗಿದ್ದರಿಂದ ಆಕೆಯ ಜೊತೆ ನನ್ನ ಸ್ನೇಹವಿತ್ತು. ಇಬ್ಬರು ಫೋನ್ ನಲ್ಲಿ ಮಾತನಾಡುತ್ತಿದ್ದೇವು. ಹೊಲದಲ್ಲಿ ನನ್ನ ಜೊತೆಗಿನ ಸ್ನೇಹದ ವಿಚಾರವಾಗಿ ಆಕೆಯ ಮೇಲೆ ಕುಟುಂಬಸ್ಥರು ಹಲ್ಲೆ ನಡೆಸಿರುವ ವಿಚಾರ ನನಗೆ ತಿಳಿಯಿತು. ಹಲ್ಲೆ ಆರೋಪದಿಂದ ತಪ್ಪಿಸಿಕೊಳ್ಳಲು ಯುವತಿಯ ತಾಯಿ ಮತ್ತು ಸೋದರ ನಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದರಿಂದ ಸೆಪ್ಟೆಂಬರ್ 20ರಿಂದ ನಾವು ಜೈಲಿನಲ್ಲಿದ್ದೇವೆ. ನಿರಪರಾಧಿಗಳಾದ ನಮಗೆ ನ್ಯಾಯ ನೀಡಬೇಕೆಂದು ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇವೆ ಎಂದು ಸಂದೀಪ್ ಪತ್ರದಲ್ಲಿ ಹೇಳಿದ್ದಾನೆ. ಇನ್ನುಳಿದ ಬಂಧಿತ ರವಿ, ರಾಮು ಮತ್ತು ಲವಕುಶ್ ಅವರ ಸಹಿ ಈ ಪತ್ರದಲ್ಲಿದೆ.

    ಎರಡು ಫೋನ್, 104 ಕಾಲ್: ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿ ಸಂದೀಪ್ ಫೋನ್ ಟ್ರ್ಯಾಕ್ ಮಾಡಿರುವ ಪೊಲೀಸರು, ಆರೋಪಿಯು ಯುವತಿಯೊಂದಿಗೆ ನಿರಂತರವಾಗಿ ದೂರವಾಣಿ ಸಂಪರ್ಕದಲ್ಲಿದ್ದ. ಸಂತ್ರಸ್ತೆಯ ಸಹೋದರನ ಹೆಸರಿನಲ್ಲಿ ಸಂದೀಪ್ ಗೆ ಒಂದೇ ಫೋನ್ ನಂಬರಿನಿಂದ ನಿಯಮಿತವಾಗಿ ಕರೆಗಳು ಬರುತ್ತಿದ್ದವು. ಈ ದೂರವಾಣಿ ಸಂಭಾಷಣೆಗಳು 2019 ಅಕ್ಟೋಬರ್ 13ರಿಂದ ಪ್ರಾರಂಭವಾಗಿವೆ. ಸಂತ್ರಸ್ತೆ ನೆಲೆಸಿದ್ದ ಹಳ್ಳಿ ಬೂಲ್ ಗಾಹಿಯಿಂದ ಕೇವಲ 2 ಕಿ.ಮೀ ದೂರದಲ್ಲಿರುವ ಚಂದಪಾ ಪ್ರದೇಶದಲ್ಲಿರುವ ಸೆಲ್ ಟವರ್ ಗಳಿಂದ ಹೆಚ್ಚಿನ ಕರೆಗಳನ್ನು ಮಾಡಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಇದನ್ನೂ ಓದಿ: ಹತ್ರಾಸ್‌ ಕೇಸ್‌ –  ಸಂಚಲನ ಸೃಷ್ಟಿ‌ಸಿದ್ದ ವೆಬ್‌ಸೈಟ್‌ ದಿಢೀರ್‌ ಬಂದ್

    ಎರಡು ಫೋನ್ ನಂಬರ್ ಗಳ ನಡುವೆ 62 ಔಟ್ ಗೋಯಿಂಗ್ ಮತ್ತು 42 ಇನ್ ಕಮಿಂಗ್ ಕಾಲ್ ಗಳು ಬಂದಿದ್ದು, ಒಟ್ಟು 104 ಬಾರಿ ಸಂಪರ್ಕಸಿರುವುದು ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆರೋಪಿ ನಡುವೆ ನಿರಂತರ ಸಂಪರ್ಕ ಇತ್ತು ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿಹತ್ರಾಸ್ ಯುವತಿ ಮೇಲೆ ಅತ್ಯಾಚಾರವಾಗಿಲ್ಲ – ಶಾಕಿಂಗ್ ಹೇಳಿಕೆ ನೀಡಿದ ಐಜಿ

    ಏನಿದು ಪ್ರಕರಣ?: ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದರು. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ಸೆ.29ರಂದು ಮೃತಪಟ್ಟಿದ್ದಳು. ಇದನ್ನೂ ಓದಿ: ಕೊನೆ ಬಾರಿ ಮಗಳ ಮುಖ ತೋರಿಸಲಿಲ್ಲ: ಹತ್ರಾಸ್ ಸಂತ್ರಸ್ತೆ ತಾಯಿ

    ಯುವತಿ ಸಾವನ್ನಪ್ಪಿದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ಮಧ್ಯೆ ಉತ್ತರಪ್ರದೇಶದ ಪೊಲೀಸರು ಯುವತಿಯ ಕುಟುಂಬಕ್ಕೆ ತಿಳಿಯದಂತೆ ಮೃತದೇಹವನ್ನು ಅಸ್ಪತ್ರೆಯಿಂದ ಶಿಫ್ಟ್ ಮಾಡಿದ್ದಾರೆ ಎಂದು ಸಹೋದರ ಗಂಭೀರವಾಗಿ ಆರೋಪ ಮಾಡಿದ್ದರು. ಯುವತಿಯ ತಂದೆ ಹಾಗೂ ಸಹೋದರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನಮಗೆ ಗೊತ್ತಾಗಂದೆ ಪೊಲೀಸರು ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು ಸಾಗಿಸಿದ್ದಾರೆ ಎಂದು ಕೂಡ ಸಹೋದರ ದೂರಿದ್ದರು. ಇದನ್ನೂ ಓದಿ: ಹತ್ರಾಸ್ ಆರೋಪಿಗಳಿರೋ ಜೈಲಿಗೆ ಬಿಜೆಪಿ ಸಂಸದ ಭೇಟಿ