Tag: ಯುವಕನ ಕೊಲೆ

  • ತಮ್ಮ ಪಕ್ಷದ ಕಾರ್ಯಕರ್ತನ ಉಳಿಸಲಾಗದ ಸರ್ಕಾರ, ರಾಜ್ಯದ ಜನತೆಯನ್ನು ರಕ್ಷಿಸಲು ಸಾಧ್ಯವೇ: ಹೆಚ್‌ಡಿಕೆ

    ತಮ್ಮ ಪಕ್ಷದ ಕಾರ್ಯಕರ್ತನ ಉಳಿಸಲಾಗದ ಸರ್ಕಾರ, ರಾಜ್ಯದ ಜನತೆಯನ್ನು ರಕ್ಷಿಸಲು ಸಾಧ್ಯವೇ: ಹೆಚ್‌ಡಿಕೆ

    ಬೆಂಗಳೂರು: ತಮ್ಮ ಪಕ್ಷದ ಕಾರ್ಯಕರ್ತನ ಉಳಿಸಲಾಗದ ಸರ್ಕಾರ, ರಾಜ್ಯದ ಜನತೆಯನ್ನು ರಕ್ಷಿಸಲು ಸಾಧ್ಯವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆಯಾದ ಯುವಕನ ಕುಟುಂಬ ಹೇಳಿದೆ ಆತನ ಕೊಲೆಗೆ ಎರಡು ವರ್ಷದಿಂದ ಸಂಚು ಎಂದಿದ್ದಾರೆ. ಹಾಗಾದರೆ ಸರ್ಕಾರ ಏನು ಮಾಡುತ್ತಿತ್ತು. ಅಮಾಯಕರ ಬಲಿ ಪಡೆದು ರಾಜಕೀಯ ಮಾಡುತ್ತಿದ್ದಾರೆ. ನಾನು ಹಲವು ದಿನಗಳ ಹಿಂದೆನೇ ಹೇಳಿದ್ದೆ. ರಾಜ್ಯದಲ್ಲಿ ನಡೆಯುತ್ತಿರುವ ಘಟನಾವಳಿಗಳು ಯಾವ ಹಂತಕ್ಕಾದರೂ ಹೋಗಬಹುದು ಎಂದ ಅವರು, ಚುನಾವಣೆಗೆ ವರ್ಷವಿರುವಾಗ ಇಂತಹ ಘಟನೆ ನಡೆದಿದೆ ಅಂದರೆ ಏನು ಅರ್ಥ. ಇಂತಹ ಘಟನೆಗಳು ನಾಂದಿಯಾಗ್ತಾ ಇದೆಯಾ ಎಂಬ ಆತಂಕ ಶುರುವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ಎರಡು ವರ್ಷದ ಹಿಂದೆಯೇ ಹತ್ಯೆಗೆ ಚಿಂತನೆ ನಡೆದಿದೆ ಎಂದು ಅವರ ಕುಟುಂಬ ಸಂಬಂಧಿಕರು ಹೇಳುತ್ತಿದ್ದರು. 10ಲಕ್ಷ ಘೋಷಿಸಿದ್ದರು ಎಂದು ಹೇಳಿದ್ದಾರೆ. ಎರಡು ವರ್ಷಗಳ ಹಿಂದೆಯೇ ಇದು ಹೊರಬಿದ್ದಿದೆ. ಇದು ಬಿಜೆಪಿ ನಾಯಕರಿಗೆ ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿದ ಅವರು, ನಿಮ್ಮ ಸದಸ್ಯನನ್ನು ರಕ್ಷಣೆ ಮಾಡಲು ನಿಮಗೆ ಆಗಲಿಲಲ್ವೇ ಎಂದು ಪ್ರಶ್ನಿಸಿದರು.

    ಇದು ಸ್ಯಾಂಪಲ್ಲೋ ಏನೋ ಗೊತ್ತಿಲ್ಲ. ಟ್ರೈಲರ್ ಬಿಡ್ತಾರೆ ಮುಂದೆ ಪಿಚ್ಚರ್ ಬಿಡುತ್ತಾರೆ. ಇದನ್ನು ನೋಡಿದರೆ ಪ್ರಾರಂಭಿಕ ಅನ್ನಿಸುತ್ತದೆ. ಸರ್ಕಾರ ಇದನ್ನು ಮೊದಲೇ ಅರ್ಥ ಮಾಡಿಕೊಳ್ಳಬೇಕು. ಡಿಕೆಶಿ ಪ್ರಚೋದನೆ ಮಾಡುತ್ತಾರೆ ಎನ್ನುವುದನ್ನು ಹೇಳುತ್ತಿರಾ. ಅದನ್ನು ಹೇಗೆ ಕಟ್ ಮಾಡಬೇಕು ಅಂತ ನಿಮಗೆ ಗೊತ್ತಿಲ್ವಾ? ಯಾಕೆ ನೀವು ಸುಮ್ಮನಾಗಿದ್ದು ಎಂದು ವಾಗ್ದಾಳಿ ನಡೆಸಿದರು.

    ನಮ್ಮ ಶಾಸಕರು ಪ್ರತಿಭಟನೆ ಮಾಡಿದ್ದಾರೆ. ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಿದ್ದಾರೆ. ರಾಜ್ಯದ ಪ್ರಮುಖ ವಿಚಾರಗಳ ಚರ್ಚೆಗೆ ಅವಕಾಶ ಸಿಗಲಿಲ್ಲ. ಇವತ್ತು, ನಾಳೆ ಸದನ ಮುಂದೂಡಬಹುದು. ಬಜೆಟ್ ಅಧಿವೇಶನದವರೆಗೆ ಮುಂದೂಡಬಹುದು. ಬೆಳಗಾವಿಯಲ್ಲೂ ಮತಾಂತರ ನಿಷೇಧ ಕಾಯ್ದೆ ತಂದರು. ಯಾವುದೇ ಸಮಸ್ಯೆ ಚರ್ಚೆಯಿಲ್ಲದೆ ಮುಕ್ತಾಯವಾಯಿತು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಈ ಕೊಲೆ ಮಾಡಿಸಿರುವುದೇ ಈಶ್ವರಪ್ಪ – ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

    ಈಗಿನ ಸದನವೂ ನೀವೇ ನೋಡುತ್ತಿದ್ದೀರ. ಶಿಕ್ಷಣ ಕ್ಷೇತ್ರದ ಸಮಸ್ಯೆ ಬಗ್ಗೆ ಹಿಂದೆಯೇ ಹೇಳಿದ್ದೆ. ಅಮಾಯಕ ಮಕ್ಕಳ ಬಲಿಯಾಗಬಹುದು ಎಂದಿದ್ದೆ. ಈಗ ಶಿವಮೊಗ್ಗದಲ್ಲಿ ಅಮಾಯಕ ಯುವಕನ ಬಲಿಯಾಗಿದೆ. ಮುಖಂಡರು ಆ ಯುವಕನ ಮನೆಗೆ ಹೋಗುವುದು. ಸಾಂತ್ವನ ಹೇಳುವುದು ಮಾಡುತ್ತಿರೆ. 3 ದಿನ ಆದ ಮೇಲೆ ಅತ್ತ ಯಾರೂ ಸುಳಿಯಲ್ಲ. ಆ ಅಮಾಯಕನ ಕುಟುಂಬದ ಬಗ್ಗೆ ಕೇಳುವವರಿರಲ್ಲ. ಮಕ್ಕಳು ತಮ್ಮ ಕುಟುಂಬದ ಬಗ್ಗೆ ಯೋಚಿಸಬೇಕು. ತಮ್ಮ ಕುಟುಂಬದ ಬಗ್ಗೆ ಯಾರೂ ನೋಡಲ್ಲ. ಇದನ್ನು ಮಕ್ಕಳು ಅರ್ಥ ಮಾಡಿಕೊಂಡರೆ ಸಾಕು ಎಂದು ಮನವಿ ಮಾಡಿದರು.

  • ಯಾರೂ ಘಟನೆಯನ್ನು ದುರ್ಬಳಕೆ ಮಾಡಿಕೊಳ್ಳಬೇಡಿ: ಡಿಕೆಶಿ ಮನವಿ

    ಯಾರೂ ಘಟನೆಯನ್ನು ದುರ್ಬಳಕೆ ಮಾಡಿಕೊಳ್ಳಬೇಡಿ: ಡಿಕೆಶಿ ಮನವಿ

    ಬೆಂಗಳೂರು: ಶಿವಮೊಗ್ಗದಲ್ಲಿ ಯುವಕನ ಕೊಲೆಗೆ ಸಂಬಂಧಿಸಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ರಕ್ಷಣೆ ನೀಡದೇ ಕೂಡಲೇ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒತ್ತಾಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಯಾವುದಕ್ಕೆ ಆಗಿದೆ ಎನ್ನುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ಆದರೆ ಘಟನೆ ಕುರಿತು ತನಿಖೆ ಆಗಬೇಕು. ಈಗಾಗಲೇ ಶಾಸಕ ಸಂಗಮೇಶ್ ಬಳಿ ಮಾಹಿತಿ ಪಡೆಯುತ್ತಿದ್ದೇನೆ. ಎಲ್ಲರೂ ಶಾಂತಿ ಕಾಪಾಡಬೇಕು. ಯಾರೂ ಈ ಘಟನೆಯನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದರು.

    ಕುವೆಂಪು ಶಾಂತಿಯ ತೋಟ ಎಂದಿದ್ದಾರೆ. ಶಿವಮೊಗ್ಗ ಶಾಂತಿಯಿಂದಿರಬೇಕು, ರಾಜ್ಯ ಶಾಂತಿಯಿಂದ ಇರಬೇಕು ಎಂದು ಹೇಳಿದ್ದರು. ಆದರೆ ಇಲ್ಲಿಂದಲೇ ಶಾಂತಿ ಕದಡುತ್ತಿದೆ. ಈ ರೀತಿ ಆಗಬಾರದು. ನಮ್ಮ ದೇಶ ಶಾಂತಿಯಿಂದ ಇರಬೇಕು. ಇದಕ್ಕಾಗಿಯೇ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ನಾವು ಹೋರಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಯುವಕನ ಬರ್ಬರ ಹತ್ಯೆ – ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ

    ಈಗಾಗಲೇ ಶಿವಮೊಗ್ಗದಲ್ಲಿ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಪರಿಸ್ಥಿತಿ ನಿಯಂತ್ರಿಸಲು ಗುಂಪುಗೂಡಿದ್ದ ಯುವಕರನ್ನು ಪೊಲೀಸರು ಮನೆಯತ್ತ ವಾಪಸ್ ಕಳುಹಿಸಿದ್ದಾರೆ ಮತ್ತು ಮುಂಜಾಗ್ರತಾ ಕ್ರಮವಾಗಿ ತಕ್ಷಣದಿಂದಲೇ ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದನ್ನೂ ಓದಿ:  ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಆರಗ ಜ್ಞಾನೇಂದ್ರ