Tag: ಯುವಕ ಸಾವು

  • ಕೆರೆಯಲ್ಲಿ ಸಿಲುಕಿದ್ದ ಪಕ್ಷಿ ರಕ್ಷಿಸಲು ಹೋಗಿ ಪ್ರಾಣಬಿಟ್ಟ ಯುವಕ!

    ಕೆರೆಯಲ್ಲಿ ಸಿಲುಕಿದ್ದ ಪಕ್ಷಿ ರಕ್ಷಿಸಲು ಹೋಗಿ ಪ್ರಾಣಬಿಟ್ಟ ಯುವಕ!

    ಶಿವಮೊಗ್ಗ: ಕೆರೆಯ ಮಧ್ಯದಲ್ಲಿ ಸಿಲುಕಿದ್ದ ಪಕ್ಷಿಯನ್ನು ರಕ್ಷಿಸಲು ಹೋಗಿ ಯುವಕ ಮೃತಪಟ್ಟರುವ ಘಟನೆ ಇಲ್ಲಿನ ಬೊಮ್ಮನಕಟ್ಟೆ ಕೆರೆಯಲ್ಲಿ ನಡೆದಿದೆ.

    ಮೃತ ಯುವಕನನ್ನು ಮಹದೇವ (23) ಎಂದು ಗುರುತಿಸಲಾಗಿದೆ.

    ಕೆರೆಯ ಸಮೀಪ ಹೋಗುತ್ತಿದ್ದ ಯುವಕ ಮಹದೇವ ಕೆರೆಯ ಮಧ್ಯದಲ್ಲಿ ಪಕ್ಷಿಯೊಂದು ಸಿಲುಕಿಕೊಂಡಿರುವುದನ್ನು ಗಮನಿಸಿದ್ದಾನೆ. ತಕ್ಷಣವೇ ತನ್ನಿಬ್ಬರು ಸ್ನೇಹಿತರ ಸಹಾಯದೊಂದಿಗೆ ಕೆರೆಗೆ ಇಳಿದಿದ್ದಾನೆ. ಆದರೆ ಕೆರೆಯಲ್ಲಿ ಹೂಳು ತುಂಬಿಕೊಂಡಿದ್ದ ಹಿನ್ನೆಲೆಯಲ್ಲಿ ಮಹದೇವನ ಸ್ನೇಹಿತರು ನೀರಿಗಿಳಿಯಲು ಹಿಂಜರಿದಿದ್ದಾರೆ. ಆದರೆ ಮಹದೇವ ಪಕ್ಷಿಯನ್ನು ರಕ್ಚಿಸಲು ಮುಂದಾಗಿದ್ದಾನೆ. ಈ ವೇಳೆ ಕೆರೆಯಲ್ಲಿ ಸಿಲುಕಿಕೊಂಡು ಮೃತಪಟ್ಟಿದ್ದಾನೆ. ಇದನ್ನೂ ಓದಿ: ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ

    ಸ್ನೇಹಿತ ಮುಳುಗುತ್ತಿರುವುದನ್ನು ಗಮನಿಸಿದ ಸ್ನೇಹಿತರು ಸ್ಥಳದಲ್ಲಿದ್ದ ಸೀರೆ ಹಾಗೂ ಹಗ್ಗ ತಂದು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಆದರೆ ಎಷ್ಟೇ ಪ್ರಯತ್ನಪಟ್ಟರು ಮಹದೇವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ತೆಲಂಗಾಣ: ಊಟ ಮುಗಿಸಿ ಬರುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಯಾದಗಿರಿಯ ಯುವಕರಿಬ್ಬರು ಸಾವು!

    POLICE

    ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಯುವಕನ‌ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಯುವಕನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ 67 ಮಂದಿಗೆ ರೇಬೀಸ್!

    ಯುವಕನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ 67 ಮಂದಿಗೆ ರೇಬೀಸ್!

    ಮಂಗಳೂರು: ರೇಬೀಸ್ ವೈರಾಣುವಿನಿಂದ ಮೃತಪಟ್ಟ ಯುವಕನ ಅಂತ್ಯಸಂಸ್ಕಾರಕ್ಕೆ ಹೋಗಿ ಇಡೀ ಊರಿನ ಜನ ರೇಬೀಸ್ ಚುಚ್ಚುಮದ್ದು ಪಡೆದುಕೊಳ್ಳಬೇಕಾದ ಸ್ಥಿತಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಇಚ್ಲಂಪಾಡಿ ಎಂಬಲ್ಲಿ ಎದುರಾಗಿದೆ.

    ಯುವಕ ಆಶಿತ್ ಆಗಸ್ಟ್ 22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದನು. ಈತನ ಮೃತದೇಹವನ್ನು ಮನೆ ಮಂದಿಗೆ ನೀಡುವ ಸಂದರ್ಭದಲ್ಲಿ, ರೇಬೀಸ್ ವೈರಾಣುವಿನಿಂದ ಯುವಕ ಮೃತಪಟ್ಟಿದ್ದಾನೆ ಎನ್ನುವ ಕಾರಣ ನೀಡಲಾಗಿತ್ತು. ಅಲ್ಲದೆ ಮೃತದೇಹವನ್ನು ಯಾವುದೇ ಕಾರಣಕ್ಕೂ ತೆರೆಯಬಾರದು ಎಂದು ಸೂಚನೆಯನ್ನೂ ಸಹ ವೈದ್ಯರು ನೀಡಿದ್ದರು. ಆದರೆ ಮನೆ ಮಂದಿ ಸಂಪ್ರದಾಯದಂತೆ ಅಂತ್ಯಸಂಸ್ಕಾರವನ್ನು ನಿರ್ವಹಿಸಿದ್ದರು.

    ಈ ಸಂದರ್ಭದಲ್ಲಿ ಪ್ಯಾಕ್ ಮಾಡಿದ್ದ ಮೃತದೇಹವನ್ನು ಬಿಚ್ಚಲಾಗಿದ್ದು, ಮೃತದೇಹದಿಂದ ರಕ್ತ ಮನೆಯ ಪ್ರದೇಶದಲ್ಲಿ ಚೆಲ್ಲಿತ್ತು. ಈ ಸಂದರ್ಭದಲ್ಲಿ ಮೃತ ಯುವಕನ ಸಂಬಂಧಿಕರು ಹಾಗೂ ಊರವರು ಭಾಗಿಯಾಗಿದ್ದರು. ಸಾವು ರೇಬೀಸ್ ರೋಗದಿಂದ ಸಂಭವಿಸಿದೆ ಎನ್ನುವ ವಿಚಾರವೀಗ ಊರವರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಇದೀಗ ಊರಿಡೀ ಆತಂಕಕ್ಕೆ ಕಾರಣವಾಗಿದೆ. ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ 67 ಮಂದಿ ನೆಲ್ಯಾಡಿ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಆ್ಯಂಟಿ ರೇಬೀಸ್ ಚುಚ್ಚುಮದ್ದನ್ನು ಪಡೆದಿದ್ದಾರೆ. ಕೆಲವು ಮಂದಿ ಖಾಸಗಿ ಚಿಕಿತ್ಸಾಲಯದಲ್ಲೂ ಇಂಜೆಕ್ಷನ್ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಅಂತ್ಯಸಂಸ್ಕಾರದ ವೇಳೆ ಮೃತದೇಹದಿಂದ ರಕ್ತ ಹಾಗೂ ಎಂಜಲು ಚೆಲ್ಲಿದ್ದಲ್ಲಿ ಇದರಿಂದ ರೇಬೀಸ್ ವೈರಾಣು ಹರಡುವ ಸಾಧ್ಯತೆಯಿದೆ ಎಂದು ನೆಲ್ಯಾಡಿ ಸರ್ಕಾರಿ ಆರೋಗ್ಯ ಕೇಂದ್ರದ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಆಶಿತ್ ಮನೆಗೆ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publict

  • ಬಿರುಗಾಳಿಯೊಂದಿಗೆ ಭಾರೀ ಮಳೆ- ಮರದ ಕೊಂಬೆ ಬಿದ್ದು ಯುವಕ ಸಾವು

    ಬಿರುಗಾಳಿಯೊಂದಿಗೆ ಭಾರೀ ಮಳೆ- ಮರದ ಕೊಂಬೆ ಬಿದ್ದು ಯುವಕ ಸಾವು

    ಚಿಕ್ಕಬಳ್ಳಾಪುರ: ಭಾರೀ ಬಿರುಗಾಳಿಗೆ ಬೃಹತ್ ಗಾತ್ರದ ಅರಳಿ ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ, ಯುವಕನೊರ್ವ ಮೃತಪಟ್ಟ ಘಟನೆ ಗೌರಿಬಿದನೂರಿನಲ್ಲಿ ನಡೆದಿದೆ.

    ಹಿರೇಬಿದನೂರು ನಿವಾಸಿ ಅಂಜುಂ (20) ಮೃತ ಯುವಕ. ಗೌರಿಬಿದನೂರು-ಚಿಕ್ಕಬಳ್ಳಾಪುರ ಮಾರ್ಗದ ಸುಮಂಗಲಿ ಕಲ್ಯಾಣ ಮಂಟಪದ ಸಮೀಪದಲ್ಲಿ ಘಟನೆ ನಡೆದಿದೆ.

    ಅರಳಿ ಮರವು ಸುಮಾರು ನೂರು ವರ್ಷದ ಮರವಾಗಿದ್ದು, ಬಿರುಗಾಳಿಗೆ ಮೊದಲ ಬಾರಿ ಕೊಂಬೆ ಬಿದ್ದಾಗ ಯಾವುದೇ ಪ್ರಾಣ ಹಾನಿಯಾಗಿರಲಿಲ್ಲ. ಆದರೆ, ತೂಗು ಬಿದ್ದಿದ್ದ ಮತ್ತೊಂದು ಕೊಂಬೆ ಮುರಿದು ಬಿದ್ದ ಪರಿಣಾಮ ಕೆಳಗೆ ಹೋಗುತ್ತಿದ್ದ ಅಂಜುಂ ಸಿಲುಕಿಕೊಂಡಿದ್ದಾರೆ. ಗಂಭೀರವಾಗಿ ಗಾಯವಾಗಿದ್ದ ಅಂಜುಂನನ್ನು ಬೆಂಗಳೂರಿನ ನಿಮ್ಹಾನ್ಸ್ ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಂಜುಂ ಮೃತಪಟ್ಟಿದ್ದಾರೆ.

    ಮೃತ ಅಂಜುಂ ಸಂಬಂಧಿಕರು, ಸ್ನೇಹಿತರು, ಗೌರಿಬಿದನೂರು-ಚಿಕ್ಕಬಳ್ಳಾಪುರ ಮಾರ್ಗದ ರಸ್ತೆ ಸಂಚಾರ ತಡೆದು, ಪ್ರತಿಭಟನೆ ನಡೆಸಿದ್ದು, ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದರು. ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷ ಪ್ರತಿಭಟನಾಕಾರರ ಮನವೊಲಿಸಿ, ಪರಿಹಾರ ಕೊಡಿಸವುದಾಗಿ ಭರವಸೆ ನೀಡಿದ್ದರಿಂದ ಮೃತನ ಸಂಬಂಧಿಕರು ಪ್ರತಿಭಟನೆ ವಾಪಾಸ್ ಪಡೆದಿದರು.

  • ಅನುಮತಿ ಇಲ್ಲದೆ ಮೆರವಣಿಗೆ – ಪೊಲೀಸರ ಲಾಠಿ ಏಟಿಗೆ ಕೈ ಕಾರ್ಯಕರ್ತ ಬಲಿ

    ಅನುಮತಿ ಇಲ್ಲದೆ ಮೆರವಣಿಗೆ – ಪೊಲೀಸರ ಲಾಠಿ ಏಟಿಗೆ ಕೈ ಕಾರ್ಯಕರ್ತ ಬಲಿ

    ಚಿಕ್ಕಬಳ್ಳಾಪುರ: ಅನುಮತಿಯಿಲ್ಲದೆ ಮೆರವಣಿಗೆ ಮಾಡಿ ರಸ್ತೆಯನ್ನು ತಡೆದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಪರಿಣಾಮ ಓರ್ವ ಯುವಕ ಮೃತ ಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಎಂಜಿ ರಸ್ತೆಯಲ್ಲಿ ನಡೆದಿದೆ.

    ವಿನಯ್(27) ಪೊಲೀಸ್ ಲಾಠಿ ಏಟಿಗೆ ಬಲಿಯಾದ ಯುವಕ. ಈತ ಜಿಲ್ಲೆಯ ಕಾಂಗ್ರೆಸ್ ಮುಖಂಡ ನವೀನ್ ಕಿರಣ್ ಬೆಂಬಲಿಗ ಎನ್ನಲಾಗಿದೆ.

    ಇಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಕೆಪಿಸಿಸಿ ವತಿಯಿಂದ ಚುನಾವಣಾ ವೀಕ್ಷಕರು ಆಗಮಿಸಿದ್ದರು. ಹೀಗಾಗಿ ನವೀನ್ ಕಿರಣ್ ತಮ್ಮ ಬೆಂಬಲಿಗರ ಜೊತೆ ಕೆಪಿಸಿಸಿ ಚುನಾವಣಾ ವೀಕ್ಷಕರ ಎದುರು ಶಕ್ತಿ ಪ್ರದರ್ಶನ ನಡೆಸಿದ್ದರು. ಆದರೆ ಕೇವಲ ಹಾಲಿ ಶಾಸಕ ಸುಧಾಕರ್ ಬೆಂಬಲಿಗರನ್ನು ಮಾತ್ರ ಚುನಾವಣಾ ವೀಕ್ಷಕರ ಬಳಿ ಬಿಟ್ಟ ಪೊಲೀಸರು ನವೀನ್ ಕಿರಣ್ ಬೆಂಬಲಿಗರಿಗೆ ಅವಕಾಶ ಕೊಡಲಿಲ್ಲ. ಇದರಿಂದ ನಗರದ ಸಿದ್ದೇಶ್ವರ ಸರ್ಕಲ್ ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಚುನಾವಣಾ ವೀಕ್ಷಕರು ವಾಪಾಸ್ಸಾದ ಬೆನ್ನಲ್ಲೇ ನವೀನ್ ಕಿರಣ್ ಬೆಂಬಲಿಗರು ಎಂಜಿ ರಸ್ತೆ ಮೂಲಕ ಮೆರವಣಿಗೆ ನಡೆಸಿದರು. ಚಿಕ್ಕಬಳ್ಳಾಪುರ ಎಸ್ಪಿ ಕಾರ್ತಿಕ್ ರೆಡ್ಡಿ ಪೊಲೀಸರಿಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದ್ದರು.

    ಈ ವೇಳೆ ನಗರದ ಪ್ರಮುಖ ರಸ್ತೆಯಾಗಿರುವ ಎಂಜಿ ರಸ್ತೆಯಲ್ಲಿ ಹೆಚ್ಚಿನ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಮೆರವಣಿಗೆ ನಡೆಸಿದವರನ್ನು ಚದುರಿಸಲು ಪೊಲೀಸರು ಹಿಗ್ಗಾ ಮುಗ್ಗಾ ಲಾಠಿ ಬೀಸಿದ್ದಾರೆ. ಡಿವೈಎಸ್ಪಿ ಪ್ರಭುಶಂಕರ್ ನೇತೃತ್ವದಲ್ಲಿ ಲಾಠಿ ಪ್ರಹಾರ ನಡೆಸಲಾಗಿತ್ತು. ಈ ವೇಳೆ ವಿನಯ್ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಿಸದೇ ವಿನಯ್ ಮೃತಪಟ್ಟಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ವಿನಯ್ ಸಾವಿನ ಹಿನ್ನೆಲೆ ಪ್ರತಿಭಟನಕಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.