Tag: ಯುವಬ್ರಿಗೇಡ್

  • ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ: ಯುವಬ್ರಿಗೇಡ್ ಕಾರ್ಯಕರ್ತನ ಪತ್ನಿ ಆರೋಪ

    ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ: ಯುವಬ್ರಿಗೇಡ್ ಕಾರ್ಯಕರ್ತನ ಪತ್ನಿ ಆರೋಪ

    ಮೈಸೂರು: ನನ್ನ ಗಂಡ ಹತ್ತು ಜನ ಬಂದರೂ ಹೆದರಲ್ಲ. ನನ್ನ ಗಂಡನ ಹತ್ಯೆ ವೈಯಕ್ತಿಕ ಕಾರಣಕ್ಕೆ ನಡೆದಿಲ್ಲ. ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ ಎಂದು ಯುವ ಬ್ರಿಗೇಡ್ (Yuva Brigade) ಕಾರ್ಯಕರ್ತ ದಿವಂಗತ ವೇಣುಗೋಪಾಲ್ (L.Venugopal) ಪತ್ನಿ ಪೂರ್ಣಿಮಾ ಆರೋಪಿಸಿದ್ದಾರೆ.

    ಮೈಸೂರಿನ (Mysuru) ಟಿ.ನರಸೀಪುರದಲ್ಲಿ (T.Narasipura) ಜುಲೈ 8ರಂದು ನಡೆದ ಹನುಮ ಜಯಂತಿ (Hanuma Jayanthi) ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿದ್ದು, ಜಗಳದಲ್ಲಿ ಯುವಬ್ರಿಗೇಡ್ ಸಕ್ರಿಯ ಕಾರ್ಯಕರ್ತನಾಗಿದ್ದ ವೇಣುಗೋಪಾಲ್ ನಾಯಕ್ ಅವರನ್ನು ದುಷ್ಕರ್ಮಿಗಳು ಬಾಟಲಿಯಿಂದ ಇರಿದು ಹತ್ಯೆಗೈದಿದ್ದರು. ಇದನ್ನೂ ಓದಿ: ಕೇಂದ್ರ ಕೊಡುವ ಅಕ್ಕಿಯಲ್ಲೂ ಕಡಿತ; ಅನ್ನಭಾಗ್ಯವಲ್ಲ ಇದು ಕನ್ನ ಭಾಗ್ಯ – ಬೊಮ್ಮಾಯಿ

    ಈ ಕುರಿತು ಮಾತನಾಡಿದ ವೇಣುಗೋಪಾಲ್ ಪತ್ನಿ, ನಾನು, ವೇಣುಗೋಪಾಲ್ ಪ್ರೀತಿಸಿ ಮದುವೆ ಆಗಿದ್ದೆವು. ನಾವು ಮೂರು ವರ್ಷಗಳಿಂದ ಹನುಮ ಜಯಂತಿ ಆಚರಣೆ ಮಾಡುತ್ತಿದ್ದೇವೆ. ನನ್ನ ಗಂಡನ ಬಳಿ ಹಣ ಇಲ್ಲ, ಅಧಿಕಾರ ಇಲ್ಲ. ಆದರೂ ಅದ್ಧೂರಿಯಾಗಿ ಹನುಮ ಜಯಂತಿ ಆಚರಣೆ ಮಾಡಿದ್ದೆವು. ಅದನ್ನು ಸಹಿಸದೆ ಕೊಲೆ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಂದ್ರಯಾನ-3 ಯಶಸ್ವಿ ಆಗಲೆಂದು ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ವಿಜ್ಞಾನಿಗಳು

    ನನ್ನ ಗಂಡನ ಸಾವಿಗೆ ನ್ಯಾಯ ಬೇಕು. ಇಲ್ಲವಾದರೇ ನಾನು ನನ್ನ ಮಗಳು, ಗಂಡ ಸತ್ತಂತೆಯೇ ಸಾಯುತ್ತೇವೆ. ಇಂದು ನನ್ನ ಗಂಡನನ್ನು ಸಾಯಿಸಿದ್ದಾರೆ. ಮುಂದಿನ ವರ್ಷ ನಾನು ಹನುಮ ಜಯಂತಿ ಮಾಡುತ್ತೇನೆ. ಆಗ ನನ್ನನ್ನು ಸಾಯಿಸುತ್ತಾರೆ. ಅದರ ಮುಂದಿನ ವರ್ಷ ನನ್ನ ಮಗಳು ಹನುಮ ಜಯಂತಿ ಮಾಡಿದರೆ ಆಗ ಅವಳನ್ನೂ ಸಾಯಿಸುತ್ತಾರೆ. ಅಲ್ಲಿಗೆ ಹಿಂದೂ ಧರ್ಮವೂ ಸಾಯುತ್ತದೆ. ನನ್ನ ಗಂಡನ ಏಳಿಗೆ ಸಹಿಸದೆ ಕೊಲೆ ಮಾಡಿದ್ದಾರೆ. ಆರೋಪಿಗಳಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ದೇಶವ್ಯಾಪಿ ಮುಂಗಾರು ಕುಂಠಿತ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಾಥಮಿಕ ಮಾಹಿತಿ ಇಲ್ಲದೇ ಸೂಲಿಬೆಲೆ ಸುಳ್ಳು ಹೇಳ್ತಿದ್ದಾರೆ: ಬೋಸ್ ಕಿಡಿ

    ಪ್ರಾಥಮಿಕ ಮಾಹಿತಿ ಇಲ್ಲದೇ ಸೂಲಿಬೆಲೆ ಸುಳ್ಳು ಹೇಳ್ತಿದ್ದಾರೆ: ಬೋಸ್ ಕಿಡಿ

    ಮೈಸೂರು: ಯುವ ಬ್ರಿಗೇಡ್ (Yuva Brigade) ಸಂಚಾಲಕ ವೇಣುಗೋಪಾಲ್ (Venugopal Murder Case) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆಯವರು ಪ್ರಾಥಮಿಕ ಮಾಹಿತಿ ಇಲ್ಲದೇ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಹದೇವಪ್ಪ ಪುತ್ರ ಸುನೀಲ್ ಬೋಸ್ (Sunil Bose) ತೀಕ್ಷ್ಣ ತಿರುಗೇಟು ನೀಡಿದ್ದಾರೆ.

    ವೇಣುಗೋಪಾಲ್ ಹತ್ಯೆಯ ಹಿಂದೆ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಕೈವಾಡ ಇದೆ ಎಂಬ ಚಕ್ರವರ್ತಿ (Chakravarti Sulibele) ಆರೋಪಕ್ಕೆ ಪ್ರತಿಕ್ರಿಯಿಸಿದ ಬೋಸ್, ಚಕ್ರವರ್ತಿ ಸೂಲಿಬೆಲೆಗೆ ತಲೆ ಸರಿ ಇಲ್ಲ. ಅವರಿಗೆ ಮೊದಲು ಉತ್ತಮ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಅಗತ್ಯತೆ ಇದೆ. ಸುಳ್ಳಿನಿಂದಲೇ ಜೀವನ ಕಟ್ಟಿಕೊಂಡಿರುವ ವ್ಯಕ್ತಿ ಅವರು. ಈ ಕೊಲೆ ಪ್ರಕರಣದಲ್ಲಿಯೂ ಸುಳ್ಳು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಕೊಲೆ ವಿಚಾರದಲ್ಲಿ ಸೂಲಿಬೆಲೆಗೆ ಪ್ರಾಥಮಿಕ ಮಾಹಿತಿ ಇಲ್ಲ. ಸತ್ತಿರುವ ಯುವಕ ನಾಯಕ ಸಮುದಾಯದ ವ್ಯಕ್ತಿ. ಆದರೆ ಸೂಲಿಬೆಲೆ ಅವರನ್ನ ದಲಿತ ಸಮುದಾಯ ಎಂದು ಸುಳ್ಳು ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

    ವೈಯಕ್ತಿಕ ವಿಚಾರಕ್ಕೆ ಮಾಡುವ ಕೊಲೆಗೆ ಒಬ್ಬ ವ್ಯಕ್ತಿ ಅಥವಾ ಪಕ್ಷ ಹೇಗೆ ಹೊಣೆಗಾರರಾಗುತ್ತಾರೆ. ವೈಯಕ್ತಿಕ ಗಲಭೆಗಳು, ಕೃತ್ಯಗಳಿಗೆ ನಾವು ಹೊಣೆಗಾರರಾಗಲು ಸಾಧ್ಯವಿಲ್ಲ. ಬಿಜೆಪಿ ಕಾರ್ಯಕರ್ತನೊಬ್ಬ ಈ ರೀತಿ ಘಟನೆಯಲ್ಲಿ ಭಾಗಿಯಾದ್ರೆ ಅದರ ಹೊಣೆಯನ್ನ ಬಿಜೆಪಿ ಹೊರುತ್ತಾ..?. ಇಂತಹ ಸಾವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಪಕ್ಷದ ಅನೇಕ ಕಾರ್ಯಕರ್ತರು ನಮ್ಮ ಜೊತೆ ಫೋಟೋ ತೆಗೆಸಿಕೊಂಡಿರುತ್ತಾರೆ. ನಾನು ಈ ಭಾಗದ ಮುಖಂಡ. ಅವರು ಮಾಡುವ ವೈಯಕ್ತಿಕ ತಪ್ಪಿಗೆ ನಾವು ಹೇಗೆ ಪ್ರೇರಣೆಯಾಗುತ್ತೇವೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ವೇಣುಗೋಪಾಲ್‌ ಹತ್ಯೆಯ ಹಿಂದೆ ಮಹದೇವಪ್ಪ ಪುತ್ರ ಸುನಿಲ್‌ ಬೋಸ್‌ ಕೈವಾಡ: ಸೂಲಿಬೆಲೆ

    ಪ್ರಕರಣದ 4ನೇ ಆರೋಪಿ ಬಿಜೆಪಿ (BJP) ಪಾಲಿಕೆ ಸದಸ್ಯೆಯ ತಮ್ಮ. ಇದನ್ನು ನೋಡಿ ಬಿಜೆಪಿಯವರೇ ಹೇಳಿಕೊಟ್ಟಿದ್ದಾರೆ ಎಂದು ನಾನು ಪ್ರಶ್ನಿಸಿದರೆ ಅದು ಹೇಗಿರುತ್ತದೆ ಹೇಳಿ. ನೀನು ಕೊಲೆ ಮಾಡು, ನಾವು ರಾಜಕಾರಣ ಮಾಡುತ್ತೇವೆ ಎಂದು ಆತನಿಗೆ ಹೇಳಿಕೊಟ್ಟಿದ್ರಾ ಎಂದು ನಾನು ಪ್ರಶ್ನಿಸುತ್ತೇನೆ. ಈ ಪ್ರಶ್ನೆಗೆ ಅವರು ಉತ್ತರಿಸಲು ಸಾಧ್ಯನಾ..?. ಸಾವಿನಲ್ಲಿ ರಾಜಕಾರಣ ಯಾರೂ ಮಾಡಬಾರದು. ಬಿಜೆಪಿಯವರು ಶವದ ಮೇಲೆ ರಾಜಕಾರಣ ಮಾಡಲು ಹೊರಟಿದ್ದಾರೆ. ಬಿಜೆಪಿಗೆ ಸದಾ ಕಾಲ ಇಂತ ಕೊಲೆ ಗಲಭೆಗಳ ಬಗ್ಗೆ ಆಸಕ್ತಿ ಜಾಸ್ತಿ ಎಂದು ಗರಂ ಆದರು.

    ನಾನು ಈ ಕೊಲೆಯನ್ನ ನಾನು ಖಂಡಿಸುತ್ತೇನೆ. ಸರಿಯಾದ ನಿಟ್ಟಿನಲ್ಲಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ನಮ್ಮ ತಂದೆ ಮಹದೇವಪ್ಪ ಕೂಡ ಸೂಚನೆ ನೀಡಿದ್ದಾರೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]