Tag: ಯುವರತ್ನ ಸಿನಿಮಾ

  • ಮಾರ್ಚ್ 17ಕ್ಕೆ `ಯುವರತ್ನ’ ಸಿನಿಮಾ ಮತ್ತೆ ತೆರೆಗೆ

    ಮಾರ್ಚ್ 17ಕ್ಕೆ `ಯುವರತ್ನ’ ಸಿನಿಮಾ ಮತ್ತೆ ತೆರೆಗೆ

    ನ್ನಡ ಚಿತ್ರರಂಗದಲ್ಲಿ ಮಾರ್ಚ್ 17ಕ್ಕೆ ಎರಡೆರಡು ಸಂಭ್ರಮ. ಒಂದು ಅಪ್ಪು ಅವರ ಹುಟ್ಟುಹಬ್ಬ ಮತ್ತೊಂದು `ಕಬ್ಜ’ ಸಿನಿಮಾ ಬಹುಭಾಷೆಗಳಲ್ಲಿ ತೆರೆಕಾಣುತ್ತಿದೆ. ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ 49ನೇ ವರ್ಷದ ಹುಟ್ಟುಹಬ್ಬವನ್ನ (Birthday) ಅದ್ದೂರಿಯಾಗಿ ಆಚರಿಸಲು ಅಪ್ಪು ಫ್ಯಾನ್ಸ್ ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ: ಲೈಗರ್ ಬ್ಯೂಟಿ ಜೊತೆ ಹಸೆಮಣೆ ಏರಲಿದ್ದಾರೆ `ಆಶಿಕಿ 2′ ಹೀರೋ

    ಪುನೀತ್ ರಾಜ್‌ಕುಮಾರ್ ಅವರು ಅಗಲಿ 2 ವರ್ಷಗಳಾಗಿದೆ. ಆದರೆ ಅವರ ನೆನಪು ಮಾತ್ರ ಇನ್ನೂ ಮಾಸಿಲ್ಲ. ಕಳೆದ ವರ್ಷದಂತೆ ಈ ಬಾರಿ ಕೂಡ ಅಪ್ಪು ಫ್ಯಾನ್ಸ್ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಮಾರ್ಚ್ 17ರಂದು ಏನೆಲ್ಲಾ ವಿಶೇಷತೆಗಳು ಇರುತ್ತೆ ಅನ್ನೋದರ ಮಾಹಿತಿ ಇಲ್ಲಿದೆ.

    ಅಪ್ಪು ಹುಟ್ಟುಹಬ್ಬಕ್ಕೆ ಬೆಂಗಳೂರಿನ ಜೆಪಿ ನಗರದ ಸಿದ್ಧಲಿಂಗೇಶ್ವರ ಚಿತ್ರಮಂದಿರ ವಿಶೇಷವಾಗಿ ರೆಡಿಯಾಗಿದೆ. ನಾಳೆ ಅಪ್ಪು ಅಭಿನಯದ `ಯುವರತ್ನ’ (Yuvaratna) ಸಿನಿಮಾವನ್ನು ವಿಶೇಷವಾಗಿ ಉಚಿತ ಪ್ರದರ್ಶನ ಮಾಡಲಾಗುತ್ತಿದೆ. ಯುವರತ್ನ ಸಿನಿಮಾ ರಾತ್ರಿ 9.30ಕ್ಕೆ ವಿಶೇಷ ಪ್ರದರ್ಶನ ಮಾಡಲಾಗುತ್ತೆ. ಆ ಬಳಿಕ ರಾತ್ರಿ 12 ಗಂಟೆಗೆ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಲಾಗುತ್ತದೆ. ಮಾರ್ಚ್ 12ರ ಬೆಳಗ್ಗೆ 9 ಗಂಟೆಗೆ ರಕ್ತದಾನ ಶಿಬಿರವನ್ನು ಅಪ್ಪು ಫ್ಯಾನ್ಸ್ ಹಮ್ಮಿಕೊಂಡಿದ್ದಾರೆ. ಜೆಪಿ ನಗರದ ದೊಡ್ಮನೆ ಅಭಿಮಾನಿಗಳ ಸಂಘ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಾರೆ. ಉಳಿದಂತೆ ಹಲವೆಡೆ ಅಪ್ಪು ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗುತ್ತೆ.

    ಅಪ್ಪು ನಟನೆಯ ಕೊನೆಯ ಸಾಕ್ಷ್ಯಚಿತ್ರ `ಗಂಧದಗುಡಿ’ ಮಾರ್ಚ್ 17ರಂದು ಒಟಿಟಿಗೆ ಲಗ್ಗೆ ಇಡುತ್ತಿದೆ. ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗಲಿದೆ. ಜೊತೆಗೆ ಅದೇ ದಿನ `ಕಬ್ಜ’ ಚಿತ್ರ ಕೂಡ ತೆರೆ ಕಾಣುತ್ತಿದ್ದು, ಚಿತ್ರತಂಡವು ಸಿನಿಮಾವನ್ನ ಪುನೀತ್‌ಗೆ ಅರ್ಪಣೆ ಮಾಡ್ತಿದ್ದಾರೆ.

  • ದಸರಾಗೆ ಯುವರತ್ನ ತಂಡದಿಂದ ಗಿಫ್ಟ್

    ದಸರಾಗೆ ಯುವರತ್ನ ತಂಡದಿಂದ ಗಿಫ್ಟ್

    ಬೆಂಗಳೂರು: ದಸರಾ ಹಬ್ಬದ ಖಷಿಯನ್ನು ಯುವರತ್ನ ಚಿತ್ರತಂಡ ಇಮ್ಮಡಿಗೊಳಿಸಿದ್ದು, ನಟ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗೆ ಉಡುಗೊರೆ ನೀಡಿದೆ.

    ತುಂಬಾ ದಿನಗಳ ಬಳಿಕ ಯುವರತ್ನ ಸಿನಿಮಾದ ಕುರಿತು ಅಪ್‍ಡೇಟ್ ಲಭ್ಯವಾಗಿದ್ದು, ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದ್ದು, ಪುನೀತ್ ರಾಜ್‍ಕುಮಾರ್ ರಗಡ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಗಡ್ಡ ಧಾರಿಯಾಗಿ ಸರಪಳಿಗಳ ಮಧ್ಯೆ ಅಪ್ಪು ನಿಂತಿದ್ದು, ಮಾಸ್ ಲುಕ್ ನೀಡಿದ್ದಾರೆ. ಇದರಿಂದಾಗಿ ಸಿನಿಮಾ ಕುರಿತು ಅಭಿಮಾನಿಗಳ ನಿರೀಕ್ಷೆ ಇನ್ನೂ ಹೆಚ್ಚಿದೆ.

    ಇತ್ತೀಚೆಗಷ್ಟೇ ಚಿತ್ರತಂಡ ಪುನೀತ್ ರಾಜ್‍ಕುಮಾರ್ ಅವರ ಬಿಯರ್ಡ್ ಲುಕ್ ವೈರಲ್ ಆಗಿತ್ತು. ಇದು ಅಭಿಮಾನಿಗಳಿಗೆ ತುಂಬಾ ಇಷ್ಟವಾಗಿತ್ತು. ಇದನ್ನರಿತ ಚಿತ್ರತಂಡ ಇದೀಗ ಇದೀಗ ಗಡ್ಡಧಾರಿಯಾಗಿ ನಿಂತಿರುವ ಯುವರತ್ನನ ರಗಡ್ ಲುಕ್ ಪೋಸ್ಟರ್ ನ್ನೇ ಬಿಡುಗಡೆ ಮಾಡಿದ್ದಾರೆ. ಇದೀಗ ಇದನ್ನೂ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ. ಪೋಸ್ಟರ್ ವೈರಲ್ ಆಗಿದೆ.

    ದಸರಾ ಪೋಸ್ಟರ್ ಬಿಡುಗಡೆ ಕುರಿತು ಚಿತ್ರದ ನಿರ್ದೇಶಕ ಸಂತೋಷ್ ಆನಂದ್‍ರಾಮ್ ಅವರು ಶುಕ್ರವಾರವೇ ತಿಳಿಸಿದ್ದರು. ಅದರಂತೆ ಪೋಸ್ಟರ್ ಬಿಡುಗಡೆಯಾಗಿದ್ದು, ಇದನ್ನು ಸಂತೋಷ್ ಆನಂದ್‍ರಾಮ್ ಹಂಚಿಕೊಂಡಿದ್ದಾರೆ. ಪವರ್ ರೀಡಿಫೈನ್‍ಡ್ ಸಮಸ್ತ ಕನ್ನಡ ಕುಲಕೋಟಿಗೆ ಆಯುಧ ಪೂಜೆ ಹಾಗೂ ವಿಜಯದಶಮಿಯ ಶುಭಾಶಯಗಳು ತಾಯಿ ಚಾಮುಂಡೇಶ್ವರಿ ಸದಾ ನಮ್ಮನ್ನು ಕಾಯಲಿ, ಮುನ್ನಡೆಸಲಿ ಎಂದು ಬರೆದು ಪೋಸ್ಟರ್ ಟ್ವೀಟ್ ಮಾಡಿದ್ದಾರೆ. ಟ್ವೀಟ್ ಮಾಡುತ್ತಿದ್ದಂತೆ ಪೋಸ್ಟರ್ ವೈರಲ್ ಆಗಿದೆ.

    ಯುವರತ್ನ ಚಿತ್ರೀಕರಣ ಸಂಪೂರ್ಣವಾಗಿ ಪೂರ್ಣಗೊಂಡಿದ್ದು, ಸಂತೋಷ್ ಆನಂದ್‍ರಾಮ್ ಅವರೇ ಈ ಹಿಂದೆ ಖಚಿತಪಡಿಸಿದ್ದರು. ಯುವರತ್ನ ಚಿತ್ರೀಕರಣ ಮುಕ್ತಾಯವಾಯಿತು. ನನ್ನ ಬೆನ್ನುತಟ್ಟಿ ಸಿನಿಮಾವನ್ನು ಯಶಸ್ವಿ ಆಗಿ ಮುಗಿಸಿಕೊಟ್ಟ ಪುನೀತ್ ಸರ್ ಗೆ,ವಿಜಯ್ ಸರ್ ಗೆ, ವೆಂಕಟ್ ಸರ್ ಗೆ, ಶಿವು ಸರ್ ಗೆ ನನ್ನ ಡೈರೆಕ್ಷನ್ ಟೀಮ್‍ಗೆ ಹಾಗೂ ಹೊಂಬಾಳೆ ಕುಟುಂಬಕ್ಕೆ ನನ್ನ ಹೃದಯಪೂರ್ವಕ ಧನ್ಯವಾದಗಳು ನನ್ನ ತಂಡ ನನ್ನ ಶಕ್ತಿ ಎಂದು ಬರೆದುಕೊಂಡಿದ್ದರು.

    ಇತರ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಬೇಕು ಎಂಬ ಅಭಿಮಾನಿಗಳ ಒತ್ತಾಯದ ಕುರಿತು ಸಹ ಆನಂದ್‍ರಾಮ್ ಈ ಹಿಂದೆ ಟ್ವೀಟ್ ಮಾಡಿ, ಇತರ ಭಾಷೆಗಳಲ್ಲೂ ಯುವರತ್ನ ಸಿನಿಮಾ ಬಿಡುಗಡೆ ಮಾಡಬೇಕು ಎಂದು ಹೆಚ್ಚು ಜನ ಕೇಳುತ್ತಿದ್ದು, ಶೀಘ್ರವೇ ನಿರ್ಮಾಪಕರು ಈ ಬಗ್ಗೆ ಅಪ್‍ಡೇಟ್ ನೀಡುತ್ತಾರೆ. ಪಬ್ಲಿಸಿಟಿ ಓಪನ್ ಆಗುತ್ತಿದ್ದಂತೆ ಎಲ್ಲ ಮಾಹಿತಿ ರಿವೀಲ್ ಆಗಲಿದೆ. ಸಿನಿಮಾ ಭರ್ಜರಿಯಾಗಿಯೇ ಬಿಡುಗಡೆಯಾಗಲಿದೆ ಎಂಬುದರ ಕುರಿತು ನಾನು ಭರವಸೆ ನಿಡುತ್ತೇನೆ ಎಂದಿದ್ದಾರೆ.

    ಕೊರೊನಾ ಭೀತಿ ಎದುರಾಗದಿದ್ದಲ್ಲಿ ಏಪ್ರಿಲ್ 3ಕ್ಕೆ ಯುವರತ್ನ ಸಿನಿಮಾ ಬಿಡುಗಡೆಯಾಗುತ್ತಿತ್ತು. ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಂತೋಷ್ ಆನಂದರಾಮ್ ಅವರು ಈ ಹಿಂದೆ ಸ್ಪಷ್ಟನೆ ನೀಡಿದ್ದರು. ಬಹುನಿರೀಕ್ಷಿತ ಯುವರತ್ನ ಸಿನಿಮಾ ಮೇ 21ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ನಮ್ಮ ಪವರ್ ಸ್ಟಾರ್ ಸ್ವಾಗತಿಸಲು ಸಜ್ಜಾಗಿ ಎಂದು ಟ್ವೀಟ್ ಮಾಡಿದ್ದರು. ಆದರೆ ಮತ್ತೆ ಲಾಕ್‍ಡೌನ್ ಆದ ಪರಿಣಾಮ ಮುಂದೂಡಲಾಗಿದ್ದು, ಇನ್ನೂ ರಿಲೀಸ್ ದಿನಾಂಕವನ್ನು ಚಿತ್ರತಂಡ ಬಹಿರಂಗಪಡಿಸಿಲ್ಲ.