Tag: ಯುವರತ್ನ

  • ಜೇಮ್ಸ್ ಚಿತ್ರಕ್ಕೆ ಸ್ಟಾರ್ ನಟ ಎಂಟ್ರಿ

    ಜೇಮ್ಸ್ ಚಿತ್ರಕ್ಕೆ ಸ್ಟಾರ್ ನಟ ಎಂಟ್ರಿ

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಒಂದರ ಹಿಂದೆ ಒಂದರೆ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಯುವರತ್ನ ಸಿನಿಮಾದ ಚಿತ್ರೀಕರಣ ಅಂತಿಮ ಹಂತ ತಲುಪುತ್ತಿದ್ದಂತೆ ಇದೀಗ ಜೇಮ್ಸ್ ಚಿತ್ರದ ಶೂಟಿಂಗ್ ಆರಂಭಿಸಲಾಗುತ್ತಿದೆ. ಅಲ್ಲದೆ ಸಿನಿಮಾ ಅಂಗಳದಿಂದ ಮತ್ತೊಂದು ಸುದ್ದಿ ಹೊರ ಬಿದ್ದಿದೆ.

    ಯುವರತ್ನ ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ಲಾಕ್‍ಡೌನ್ ವೇಳೆ ಬಿಡುವು ಪಡೆದಿದ್ದರು. ಯುವರತ್ನ ಸಿನಿಮಾದ ಶೂಟಿಂಗ್ ಬಹುತೇಕ ಮುಗಿದಿದೆ ಎನ್ನಲಾಗಿದ್ದು, ಹೀಗಾಗಿಯೇ ಅಪ್ಪು ಜೇಮ್ಸ್ ಸಿನಿಮಾದ ಚಿತ್ರೀಕರಣದತ್ತ ಮುಖ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತ ಅಭಿಮಾನಿಗಳು ಯುವರತ್ನ ಸಿನಿಮಾ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ.

    ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್‍ನಲ್ಲಿ ಯುವರತ್ನ ತೆರೆಗೆ ಅಪ್ಪಳಿಸಬೇಕಿತ್ತು. ಆದರೆ ಕೊರೊನಾ ಮಹಾಮಾರಿಯಿಂದಾಗಿ ಚಿತ್ರೀಕರಣ ಸ್ಥಗಿತಗೊಂಡಿತು. ಹೀಗಾಗಿ ಸಿನಿಮಾ ಬಿಡುಗಡೆ ತಡವಾಗಿದೆ. ಶೂಟಿಂಗ್ ಅಂತಿಮ ಹಂತದಲ್ಲಿದ್ದು, ಇದೇ ವೇಳೆ ಜೇಮ್ಸ್ ಚಿತ್ರದ ಶೂಟಿಂಗ್ ಆರಂಭಿಸಲಾಗುತ್ತಿದೆ. ಚಿತ್ರೀಕರಣಕ್ಕೆ ಭರದಿಂದ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇನ್ನೂ ವಿಶೇಷ ಎಂಬಂತೆ ಟಾಲಿವುಡ್ ಪ್ರಸಿದ್ಧ ನಟರೊಬ್ಬರು ಜೇಮ್ಸ್ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.

    ತೆಲುಗು ನಟ ಶ್ರೀಕಾಂತ್ ಅವರು ಜೇಮ್ಸ್ ಚಿತ್ರ ತಂಡ ಸೇರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಕುರಿತು ಚಿತ್ರ ತಂಡ ಖಚಿತಪಡಿಸಿಲ್ಲ. ಜೇಮ್ಸ್ ಸಿನಿಮಾದಲ್ಲಿ ಪುನೀತ್ ನಟಿಸುತ್ತಿದ್ದಾರೆ ಎಂಬುದದನ್ನು ಹೊರತುಪಡಿಸಿ ಉಳಿದಂತೆ ಯಾವ ಕಲಾವಿದರು ಭಾಗವಹಿಸಲಿದ್ದಾರೆ ಎಂಬ ಕುರಿತು ಈ ವರೆಗೆ ಮಾಹಿತಿ ಹೊರ ಬಿದ್ದಿಲ್ಲ. ಇದೀಗ ಟಾಲಿವುಡ್ ಸ್ಟಾರ್ ಶ್ರೀಕಾಂತ್ ಎಂಟ್ರಿ ಸಹ ಸರ್ಪ್ರೈಸ್ ಆಗಿದೆ. ಶ್ರೀಕಾಂತ್ ಅವರು ಈ ಹಿಂದೆ ದಿ ವಿಲನ್ ಸೇರಿದಂತೆ ಕನ್ನಡದ ಮೂರ್ನಾಲ್ಕು ಸಿನಿಮಾಗಳಲ್ಲಿ ಸಹ ಕಾಣಿಸಿಕೊಂಡಿದ್ದಾರೆ.

    ಜೇಮ್ಸ್ ಚಿತ್ರೀಕರಣ ಈಗಾಗಲೇ ಭರದಿಂದ ಸಾಗಿದ್ದು, ತೆಲುಗು ಫೈಟ್ ಮಾಸ್ಟರ್ ಗಳಾದ ರಾಮ್-ಲಕ್ಷ್ಮಣ್ ಅವರು ಸಹ ಚಿತ್ರ ತಂಡ ಸೇರಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಂದಹಾಗೆ ಈ ಚಿತ್ರವನ್ನು ಚೇತನ್ ಕುಮಾರ್ ನಿರ್ದೇಶಿಸುತ್ತಿದ್ದು, ಕಿಶೋರ್ ಪತಿಕೊಂಡ ನಿರ್ಮಿಸುತ್ತಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು, ಶ್ರೀಷಾ ಕುದುವಲ್ಲಿ ಛಾಯಾಗ್ರಹಣವಿದೆ.

  • ಪಕ್ಕದಲ್ಲಿ ಫೆರಾರಿ ಹೋದ್ರು ತಲೆಕೆಡಿಸಿಕೊಳ್ಳಲ್ಲ: ಯುವರತ್ನ ಪುನೀತ್ ರಾಜ್‍ಕುಮಾರ್

    ಪಕ್ಕದಲ್ಲಿ ಫೆರಾರಿ ಹೋದ್ರು ತಲೆಕೆಡಿಸಿಕೊಳ್ಳಲ್ಲ: ಯುವರತ್ನ ಪುನೀತ್ ರಾಜ್‍ಕುಮಾರ್

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿಗಳಿಗೆ ‘ಯುವರತ್ನ’ ಸಿನಿಮಾ ತಂಡ ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದೆ.

    ಈ ವಿಚಾರವಾಗಿ ಕಳೆದ ಎರಡು ದಿನಗಳ ಹಿಂದೆ ಟ್ವೀಟ್ ಮಾಡಿದ್ದ ಯುವರತ್ನ ಸಿನಿಮಾದ ನಿರ್ದೇಶಕ ಸಂತೋಷ್ ಅನಂದರಾಮ್ ಅವರು, ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿ ಬಳಗಕ್ಕೆ ಇದು ಸಮರ್ಪಣೆ. ಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್ ಜೊತೆಗೆ ಒಂದು ಡೈಲಾಗ್ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು.

    ಈ ಇಂದು ಹತ್ತು ಗಂಟೆಗೆ ಟ್ವೀಟ್ ಮಾಡಿರುವ ಸಂತೋಷ್ ಅನಂದರಾಮ್ ಅವರು, ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಪೋಸ್ಟರ್ ಅಲ್ಲಿ ಅಪ್ಪು ಕಣ್ಣಿಗೆ ಕನ್ನಡಕ ಹಾಕಿಕೊಂಡು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ನಾನ್ ಯಾವತ್ತು ಬೇರೆಯವರ ರೂಟ್‍ನಲ್ಲಿ ಟ್ರಾವೆಲ್ ಆಗಲ್ಲ, ನಮ್ದೇ ದಾರಿ ನಮ್ದೇ ಸವಾರಿ. ಪಕ್ಕದಲ್ಲಿ ಫೆರಾರಿ ಹೋದ್ರು ತಲೆಕೆಡಿಸಿಕೊಳ್ಳಲ್ಲ ಎಂದು ಡೈಲಾಗ್ ಬರೆಯಲಾಗಿದೆ. ಈ ಪೋಸ್ಟರ್ ಅನ್ನು ಅಪ್ಪು ಕೂಡ ತಮ್ಮ ಟ್ವಿಟ್ಟರ್ ಅಲ್ಲಿ ಹಾಕಿಕೊಂಡಿದ್ದಾರೆ.

    ಕೊರೊನಾ ಭೀತಿ ಎದುರಾಗದಿದ್ದಲ್ಲಿ ಏಪ್ರಿಲ್ 3ಕ್ಕೆ ಯುವರತ್ನ ಸಿನಿಮಾ ಬಿಡುಗಡೆಯಾಗುತ್ತಿತ್ತು. ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಂತೋಷ್ ಆನಂದರಾಮ್ ಅವರು ಈ ಹಿಂದೆ ಸ್ಪಷ್ಟನೆ ನೀಡಿದ್ದರು. ಬಹುನಿರೀಕ್ಷಿತ ಯುವರತ್ನ ಸಿನಿಮಾ ಮೇ 21ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ನಮ್ಮ ಪವರ್ ಸ್ಟಾರ್ ಸ್ವಾಗತಿಸಲು ಸಜ್ಜಾಗಿ ಎಂದು ಟ್ವೀಟ್ ಮಾಡಿದ್ದರು. ಆದರೆ ಮತ್ತೆ ಲಾಕ್‍ಡೌನ್ ಆದ ಪರಿಣಾಮ ಮುಂದೂಡಲಾಗಿದ್ದು, ಇನ್ನೂ ರಿಲೀಸ್ ದಿನಾಂಕವನ್ನು ಚಿತ್ರತಂಡ ಬಹಿರಂಗಪಡಿಸಿಲ್ಲ.

    `ರಾಜಕುಮಾರ` ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಿಸಿದ ಸಂತೋಷ್ ಆನಂದ್ ರಾಮ್ ಅವರೇ `ಯುವರತ್ನ` ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾದಲ್ಲಿ ಪವರ್ ಸ್ಟಾರ್ ಗೆ ಜೋಡಿಯಾಗಿ ಸಯೇಷ ಸೈಗಲ್ ಕಾಣಿಸಿಕೊಳ್ಳಲಿದ್ದು, ಇದರ ಜೊತೆಗೆ ಸೋನು, ಡಾಲಿ ಧನಂಜಯ್, ವಸಿಷ್ಠ ಸಿಂಹ ಸಿನಿಮಾದಲ್ಲಿ ನಟಿಸಲಿದ್ದಾರೆ.

  • ವರಮಹಾಲಕ್ಷ್ಮಿ ಹಬ್ಬಕ್ಕೆ ಅಪ್ಪು ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್

    ವರಮಹಾಲಕ್ಷ್ಮಿ ಹಬ್ಬಕ್ಕೆ ಅಪ್ಪು ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್

    ಬೆಂಗಳೂರು: ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಹಾಗೂ ಸಂತೋಷ್ ಆನಂದ್‍ರಾಮ್ ಕಾಂಬಿನೇಷನ್ ಸಿನಿಮಾ ‘ಯುವರತ್ನ’ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ವೈರಸ್ ಎಂಬ ಮಹಾಮಾರಿಯಿಂದಾಗಿ ಅನಿವಾರ್ಯವಾಗಿ ಮುಂದೂಡಲಾಗಿದೆ.

    ಈ ಮಧ್ಯೆ ನಿರ್ದೇಶಕ ಸಂತೋಷ್ ಅವರು ಟ್ವೀಟ್ ಮಾಡಿ, ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿ ಬಳಗಕ್ಕೆ ಇದು ಸಮರ್ಪಣೆ ಎಂದು ಬರೆದುಕೊಂಡಿದ್ದಾರೆ.

    ಕೊರೊನಾ ಭೀತಿ ಎದುರಾಗದಿದ್ದಲ್ಲಿ ಏಪ್ರಿಲ್ 3ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿತ್ತು. ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಂತೋಷ್ ಆನಂದರಾಮ್ ಅವರು ಈ ಹಿಂದೆ ಸ್ಪಷ್ಟನೆ ನೀಡಿದ್ದರು. ಬಹುನಿರೀಕ್ಷಿತ ಯುವರತ್ನ ಸಿನಿಮಾ ಮೇ 21ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ನಮ್ಮ ಪವರ್ ಸ್ಟಾರ್ ಸ್ವಾಗತಿಸಲು ಸಜ್ಜಾಗಿ ಎಂದು ಟ್ವೀಟ್ ಮಾಡಿದ್ದರು. ಆದರೆ ಮತ್ತೆ ಲಾಕ್‍ಡೌನ್ ಆದ ಪರಿಣಾಮ ಮುಂದೂಡಲಾಗಿದ್ದು, ಇನ್ನೂ ರಿಲೀಸ್ ದಿನಾಂಕವನ್ನು ಚಿತ್ರತಂಡ ಬಹಿರಂಗಪಡಿಸಿಲ್ಲ.

    ಒಟ್ಟಿನಲ್ಲಿ ಯುವರಚಿತ್ನ ಸಿನಿಮಾ ಬಿಡುಗಡೆ ಕುರಿತು ಭಾರೀ ಕುತೂಹಲ ಮೂಡಿದ್ದು, ಅಭಿಮಾನಿಗಳು ಬಿಡುಗಡೆ ದಿನಾಂಕದ ಘೋಷಣೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.

  • ಖುಷಿ ತರದ ಈ ಬಾರಿಯ ‘ಯುವರತ್ನ’ನ ಅಪ್‍ಡೇಟ್

    ಖುಷಿ ತರದ ಈ ಬಾರಿಯ ‘ಯುವರತ್ನ’ನ ಅಪ್‍ಡೇಟ್

    ಬೆಂಗಳೂರು: ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ ಚಿತ್ರದ ಕಲಾವಿದರು, ತಂತ್ರಜ್ಞರು ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದರಿಂದ ಸಿನಿಮಾ ಕೆಲಸಗಳು ಕುಂಟುತ್ತಾ ಸಾಗುತ್ತಿವೆ. ಚಂದನವನದ ಬಹು ನಿರೀಕ್ಷಿತ ಯುವರತ್ನ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ.

    ಯುವರತ್ನ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಟ್ವೀಟ್ ಮಾಡಿದ್ದು, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೆಲಸಗಳು ನೆಡೆಯುತ್ತಿಲ್ಲ. ಚೆನ್ನೈ ಮತ್ತು ಮುಂಬೈ ಲಾಕ್‍ಡೌನ್ ನಲ್ಲಿವೆ.ಪರಿಸ್ಥಿತಿ ಹದವಾಗುವವರೆಗೂ ಯುವರತ್ನ ಹಾಡುಗಳು ಬರುವುದು ಕಷ್ಟ. ಸಂಗೀತ ನಿರ್ದೇಶಕ ಥಾಮನ್ ಅವರು ಚೆನ್ನೈನ ಲಾಕ್‍ಡೌನ್ ನಲ್ಲಿ ಸಿಲುಕಿದ್ದಾರೆ. ಹಾಗಾಗಿ ಅಭಿಮಾನಿಗಳು ದಯವಿಟ್ಟು ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

    ಯುವರತ್ನ ಸಿನಿಮಾ ಸೆಟ್ಟೇರಿದಾಗಿನಿಂದಲೂ ಗಾಂಧಿನಗರದಲ್ಲಿ ಸದ್ದು ಮಾಡುತ್ತಾ ಬಂದಿರುವ ಸಿನಿಮಾ. ಕೊರೊನಾ ಆತಂಕದಿಂದ ಸಿನಿಮಾದ ಚಿತ್ರೀಕರಣಕ್ಕೂ ಚಿತ್ರತಂಡ ಬ್ರೇಕ್ ಹಾಕಿದೆ. ಇದೀಗ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ರೂ ಕಲಾವಿದರು ನೆರೆಯ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದಾರೆ. ತಮಿಳುನಾಡಿನ ಚೆನ್ನೈ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟಿಸುತ್ತಿರುವ ‘ಯುವರತ್ನ’ ಸಿನಿಮಾ ಬಾರೀ ನಿರೀಕ್ಷೆ ಹುಟ್ಟುಹಾಕಿದೆ. ಯುವರತ್ನ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಹಾಡೊಂದರ ಚಿತ್ರೀಕರಣಕ್ಕಾಗಿ ಚಿತ್ರತಂಡ ಯುರೋಪ್‍ಗೆ ತೆರಳಲು ಪ್ಲಾನ್ ಮಾಡಿಕೊಂಡಿತ್ತು. ಯುರೋಪ್‍ನ ಸ್ಲೋವೇನಿಯಾದಲ್ಲಿ ಹಾಡಿನ ಚಿತ್ರೀಕರಣ ಮಾಡಲು ಚಿತ್ರತಂಡ ಮುಂದಾಗಿತ್ತು.

    ಯುವರತ್ನ ಚಿತ್ರತಂಡ ಹಾಡೊಂದರ ಚಿತ್ರೀಕರಣಕ್ಕಾಗಿ ಚಿತ್ರತಂಡ ಯುರೋಪ್‍ಗೆ ತೆರಳಲು ಪ್ಲಾನ್ ಮಾಡಿಕೊಂಡಿತ್ತು. ಯುರೋಪ್‍ನ ಸ್ಲೋವೇನಿಯಾದಲ್ಲಿ ಹಾಡಿನ ಚಿತ್ರೀಕರಣ ಮಾಡಲು ಚಿತ್ರತಂಡ ಮುಂದಾಗಿತ್ತು. 3-4 ದಿನಗಳ ಕಾಲ ಯುರೋಪಿನಲ್ಲೇ ಚಿತ್ರತಂಡ ತಂಗಲು ಪ್ಲಾನ್ ಮಾಡಿದ್ದ ಹಿನ್ನೆಲೆ ಟಿಕೆಟ್, ಹೋಟೆಲ್ ಎಲ್ಲವೂ ಬುಕ್ ಮಾಡಲಾಗಿತ್ತು. ಆದರೆ ಮಹಾಮಾರಿ ಕೊರೊನಾ ಭೀತಿಯಿಂದ ‘ಯುವರತ್ನ’ನ ಯುರೋಪ್ ಪ್ರವಾಸ ರದ್ದು ಮಾಡಿದೆ. ಹಣ ಹೋದರೆ ಹೋಗಲಿ ಕೊರೊನಾ ಸಹವಾಸ ಬೇಡಪ್ಪ ಎಂದು ಚಿತ್ರತಂಡ ಸುಮ್ಮನಾಗಿದೆ.

    ‘ರಾಜಕುಮಾರ` ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಿಸಿದ ಸಂತೋಷ್ ಆನಂದ್ ರಾಮ್ ಅವರೇ `ಯುವರತ್ನ` ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾದಲ್ಲಿ ಪವರ್ ಸ್ಟಾರ್ ಗೆ ಜೋಡಿಯಾಗಿ ಸಯೇಷ ಸೈಗಲ್ ಕಾಣಿಸಿಕೊಳ್ಳಲಿದ್ದು, ಇದರ ಜೊತೆಗೆ ಸೋನು, ಡಾಲಿ ಧನಂಜಯ್, ವಸಿಷ್ಠ ಸಿಂಹ ಸಿನಿಮಾದಲ್ಲಿ ನಟಿಸಲಿದ್ದಾರೆ.

  • ಬಾಕ್ಸಿಂಗ್ ರಿಂಗ್‍ನಲ್ಲಿ ಅಪ್ಪು, ಯುವರತ್ನದ ಹೊಸ ಸ್ಟಿಲ್ ರಿವೀಲ್

    ಬಾಕ್ಸಿಂಗ್ ರಿಂಗ್‍ನಲ್ಲಿ ಅಪ್ಪು, ಯುವರತ್ನದ ಹೊಸ ಸ್ಟಿಲ್ ರಿವೀಲ್

    ಬೆಂಗಳೂರು: ಬಹುನಿರೀಕ್ಷಿತ ಯುವರತ್ನ ಸಿನಿಮಾ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿರುವಾಗಲೇ ಲಾಕ್‍ಡೌನ್ ಘೋಷಣೆಯಾಯಿತು. ಬಳಿಕ ಚಿತ್ರ ತಂಡ ಹೆಚ್ಚು ಅಪ್‍ಡೇಟ್ ನೀಡುತ್ತಿದ್ದು, ಇತ್ತೀಚೆಗಷ್ಟೇ ಚಿತ್ರದ ಎರಡನೇ ಹಂತದ ಡಬ್ಬಿಂಗ್ ಕಾರ್ಯ ಆರಂಭಿಸಿರುವುದಾಗಿ ತಿಳಿಸಿತ್ತು. ಇದೀಗ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಹೌದು ಸಿನಿಮಾ ಚಟುವಟಿಕೆಗಳು ನಿಂತರೂ ಚಿತ್ರ ತಂಡ ಸಾಮಾಜಿಕ ಜಾಲತಾಣಗಳ ಮೂಲಕ ಆಗಾಗ ಅಪ್‍ಡೇಟ್‍ಗಳನ್ನು ನೀಡುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಎರಡನೇ ಹಂತದ ಡಬ್ಬಿಂಗ್ ಕಾರ್ಯ ಪ್ರಾರಂಭವಾಗಿರುವುದಾಗಿ ತಿಳಿಸಿತ್ತು. ಚಿತ್ರದ ನಿರ್ದೇಶಕ ಸಂತೋಷ್ ಆನಂದರಾಮ್ ಟ್ವೀಟ್ ಮಾಡಿ ಎರಡನೇ ಹಂತದ ಡಬ್ಬಿಂಗ್ ಪ್ರಾರಂಭವಾಗಿರುವ ಕುರಿತು ಮಾಹಿತಿ ನೀಡಿದ್ದರು.

    ಇದೀಗ ಚಿತ್ರ ತಂಡ ಮತ್ತೊಂದು ಸುದ್ದಿಯನ್ನು ಹೊರ ಬಿಟ್ಟಿದ್ದು, ಹೊಸ ಸ್ಟಿಲ್ ಬಿಡುಗಡೆ ಮಾಡಿದೆ. ಹೌದು ಯುವರತ್ನ ಸಿನಿಮಾದ ‘ಪವರ್ ಆಫ್ ಯೂತ್’ ಹಾಡಿನ ಸ್ಟಿಲ್ ಒಂದನ್ನು ಬಿಡುಗಡೆ ಮಾಡಿದ್ದು, ಸಂತೋಷ್ ಆನಂದರಾಮ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಕಂಡ ಅಭಿಮಾನಿಗಳು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಕಮೆಂಟ್‍ಗಳ ಮೂಲಕ ಅಭಿಪ್ರಾಯ ತಿಳಿಸುತ್ತಿದ್ದಾರೆ.

    ಈ ಸ್ಟಿಲ್ ತುಂಬಾ ವಿಶೇಷವಾಗಿದ್ದು, ಅಪ್ಪು ಬಾಕ್ಸಿಂಗ್ ರಿಂಗ್‍ನಲ್ಲಿ ಸ್ಟೈಲಿಶ್ ಆಗಿ ನಿಂತಿದ್ದಾರೆ. ಹಿಂದೆ ಹಸಿರು ಬಣ್ಣದ ಲೈಟ್‍ಗಳಿದ್ದು, ಸಂಭ್ರಮಿಸುತ್ತಿರುವ ಭಂಗಿಯಲ್ಲಿ ಅಪ್ಪು ಪೋಸ್ ನೀಡಿದ್ದಾರೆ. ಅಲ್ಲದೆ ಅಪ್ಪು ಇತ್ತೀಚೆಗೆ ಫುಲ್ ವರ್ಕೌಟ್ ಮಾಡುವುದರಲ್ಲಿ ನಿರತರಾಗಿದ್ದು, ಈ ಸ್ಟಿಲ್‍ನಲ್ಲಿ ಸಹ ಸಣ್ಣಗಾದಂತೆ ಕಾಣುತ್ತಿದ್ದಾರೆ. ಹಾಡಿನ ಚಿತ್ರೀಕರಣದ ಸಮಯದಲ್ಲಿ ಈ ಫೋಟೋ ತೆಗೆದಿದ್ದು, ಹಿಂದೆ ನೃತ್ಯ ಕಲಾವಿದರೂ ಇದ್ದಾರೆ.

    ಇದೀಗ ಅಪ್ಪು ಸ್ಟಿಲ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಈ ಹಿಂದೆ ಸಹ ಪುನೀತ್ ಅವರ ಸಿನಿಮಾದಲ್ಲಿನ ಲುಕ್, ಟ್ವಿಟ್ಟರ್‍ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿತ್ತು. ಈಗಾಗಲೇ ಚಿತ್ರದ ಡೈಲಾಗ್ ಟೀಸರ್ ಬಿಡುಗಡೆಯಾಗಿದ್ದು, ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

  • ಮೇ 21ಕ್ಕೆ ಯುವರತ್ನ ಬಿಡುಗಡೆ- ನಿರ್ದೇಶಕ ಆನಂದರಾಮ್ ಸ್ಪಷ್ಟನೆ

    ಮೇ 21ಕ್ಕೆ ಯುವರತ್ನ ಬಿಡುಗಡೆ- ನಿರ್ದೇಶಕ ಆನಂದರಾಮ್ ಸ್ಪಷ್ಟನೆ

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ ಯುವರತ್ನ ಸಿನಿಮಾ ಬಿಡುಗಡೆ ಕುರಿತು ಭಾರೀ ಕುತೂಹಲ ಮೂಡಿದ್ದು, ಅಭಿಮಾನಿಗಳು ಬಿಡುಗಡೆ ದಿನಾಂಕದ ಘೋಷಣೆಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಕೊರೊನಾ ಭೀತಿ ಎದುರಾಗದಿದ್ದಲ್ಲಿ ಏಪ್ರಿಲ್ 3ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿತ್ತು. ಆದರೆ ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಂತೋಷ್ ಆನಂದರಾಮ್ ಅವರು ಸ್ಪಷ್ಟನೆ ನೀಡಿದ್ದಾರೆ.

    ಹಲವು ದಿನಗಳಿಂದ ಯುವರತ್ನ ಸಿನಿಮಾದ ಬಿಡುಗಡೆ ದಿನಾಂಕದ ಕುರಿತು ಹೆಚ್ಚು ಚರ್ಚೆ ನಡೆಯುತ್ತಿದೆ. ಇದರ ಮಧ್ಯೆಯೇ ಸಿನಿಮಾದ ನಿರ್ದೇಶಕ ಸಂತೋಶ್ ಆನಂದರಾಮ್ ಟ್ವೀಟ್ ಮೂಲಕ ಮಾಹಿತಿ ನೀಡಿ ಬಿಡುಗಡೆ ದಿನಾಂಕದ ಕುರಿತು ಸುಳಿವು ನೀಡಿದ್ದರು. ಆದರೆ ಈ ಕೆಲಸವನ್ನು ಕಿಡಿಗೇಡಿಗಳು ಮಾಡಿದ್ದಾರೆ ಎಂಬುದು ನಂತರ ತಿಳಿದಿದೆ. ನಂತರ ಸಂತೋಷ್ ಅವರು ಇದಕ್ಕೆ ಸ್ಪಷ್ಟನೆಯನ್ನು ಸಹ ನೀಡಿದ್ದಾರೆ. ಹೀಗಾಗಿ ಯುವರತ್ನ ಯಾವಾಗ ಬಿಡುಗಡೆಯಾಗಲಿದೆ ಎಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ.

    ಸಿನಿಮಾ ಬಿಡುಗಡೆ ಕುರಿತು ಸಂತೋಷ್ ಆನಂದರಾಮ್ ಹೆಸರಿನಲ್ಲಿ ಟ್ವೀಟ್ ಮಾಡಲಾಗಿತ್ತು. ಯುವರತ್ನನಿಗಾಗಿ ಕಾಯುತ್ತಿರುವ ಎಲ್ಲ ಪವರ್ ಸ್ಟಾರ್ ಅಭಿಮಾನಿಗಳಿಗೆ ಬಿಗ್ ಸರ್‍ಪ್ರೈಸ್. ಬಹುನಿರೀಕ್ಷಿತ ಯುವರತ್ನ ಸಿನಿಮಾ ಮೇ 21ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ನಮ್ಮ ಪವರ್ ಸ್ಟಾರ್ ಸ್ವಾಗತಿಸಲು ಸಜ್ಜಾಗಿ ಎಂದು ಟ್ವೀಟ್ ಮಾಡಿದ್ದರು. ಇದರಿಂದಾಗಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದರು. ಆದರೆ ಈ ಸುದ್ದಿ ಸುಳ್ಳು ಎಂಬುದು ನಂತರ ತಿಳಿದಿದೆ. ಸ್ವತಃ ಸಂತೋಷ್ ಆನಂದರಾಮ್ ಅವರೇ ಸರಣಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

    ಇದು ತಪ್ಪು ಮಾಹಿತಿ ಇನ್ನೂ 2 ಹಾಡುಗಳ ಚಿತ್ರೀಕರಣವಿದೆ. ಅಲ್ಲದೆ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಪಕ್ಕಾ ಮುಗಿದ ಮೇಲೆ ಬಿಡುಗಡೆ ದಿನಾಂಕವನ್ನು ಹೊಂಬಾಳೆ ಫಿಲಂಸ್ ತಿಳಿಸುತ್ತದೆ. ಯುವರತ್ನ ಬಿಗ್ಗೆಸ್ಟ್ ರಿಲೀಸ್ ಆಗಿದ್ದು, ಪಬ್ಲಿಸಿಟಿ, ಆಡಿಯೋ-ಟ್ರೈಲರ್ ರಿಲೀಸ್ ಎಲ್ಲದಕ್ಕೂ ಪ್ಲಾನ್ ಇದೆ. ಹೀಗಾಗಿ ದಿನಾಂಕ ನಿಗದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಈ ಟ್ವೀಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಮತ್ತೆ ಟ್ವೀಟ್ ಮಾಡಿದ್ದು, ಯುವರತ್ನ ಬಳಸಿಕೊಂಡು ಕೆಲವರು ಫೂಲ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ನಾನು ಪ್ರತಿಕ್ರಿಯಿಸಿದೆ. ಯುವರತ್ನ ನಮ್ಮೆಲ್ಲರಿಗೂ ದೊಡ್ಡಮಟ್ಟದ್ದಾಗಿದೆ ಎಂದು ಮೂರನೇ ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

    ಈ ಕುರಿತು ಹೊಂಬಾಳೆ ಫಿಲಂಸ್ ಆಗಲಿ ಅಥವಾ ಪುನೀತ್ ರಾಜ್‍ಕುಮಾರ್ ಆಗಲಿ ಮಾಹಿತಿ ಖಚಿತಪಡಿಸಿಲ್ಲ. ಕೊರೊನಾ ವಿರುದ್ಧದ ಹೋರಾಟದ ಭಾಗವಾಗಿ ಪುನೀತ್ ರಾಜ್‍ಕುಮಾರ್ ಸಹಾಯ ಹಸ್ತ ಚಾಚಿದ್ದು, ಇತ್ತೀಚೆಗಷ್ಟೇ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ.ಗಳ ಚೆಕ್ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನೀಡಿದ್ದರು.

    ಇತ್ತೀಚೆಗೆ ಪುನೀತ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಚಿತ್ರ ತಂಡ ಡೈಲಾಗ್ ಟೀಸರ್‍ನ್ನು ಉಡುಗೊರೆಯಾಗಿ ನೀಡಿತ್ತು. ಯುವರತ್ನ ಚಿತ್ರತಂಡ ಡೈಲಾಗ್ ಟೀಸರ್ ಬಿಡುಗಡೆ ಮಾಡಿದರೆ, ಜೇಮ್ಸ್ ಚಿತ್ರತಂಡ ಸಹ ಮೋಷನ್ ಪೋಸ್ಟರ್ ರಿಲೀಸ್ ಮಾಡಿತ್ತು. ಯುವರತ್ನದ ಡೈಲಾಗ್ ಟೀಸರ್ ಯುವ ಸಮೂಹವನ್ನು ಸೆಳೆದಿತ್ತು. ಹೀಗಾಗಿ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಜ್ ಹುಟ್ಟಿಕೊಂಡಿದೆ.

  • ಹುಟ್ಟುಹಬ್ಬದ ಮುನ್ನವೇ ‘ಯುವರತ್ನ’ನಿಗೆ ಸ್ಪೆಷಲ್ ಗಿಫ್ಟ್

    ಹುಟ್ಟುಹಬ್ಬದ ಮುನ್ನವೇ ‘ಯುವರತ್ನ’ನಿಗೆ ಸ್ಪೆಷಲ್ ಗಿಫ್ಟ್

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಇನ್ನೇನು 1 ದಿನ ಬಾಕಿ ಇದೆ. ಆದರೆ ಜನ್ಮದಿನ ಮುನ್ನವೇ ‘ಯುವರತ್ನ’ ಚಿತ್ರತಂಡ ಅಪ್ಪುಗೆ ಗಿಫ್ಟ್ ಕೊಟ್ಟಿದೆ.

    ಪುನೀತ್ ಹುಟ್ಟುಹಬ್ಬದ ಹಿನ್ನೆಲೆ ಅಭಿಮಾನಿಗಳಲ್ಲಿ ಸಂಭ್ರಮ ಜೋರಾಗಿದೆ. ಈಗಾಗಲೇ ತಮ್ಮ ನೆಚ್ಚಿನ ಹೀರೋಗೆ ಅಭಿನಂದನೆಗಳ ಮಹಾಪೂರವನ್ನೇ ಅಭಿಮಾನಿಗಳು ಹರಿಸಿದ್ದಾರೆ. ಪುನೀತ್ ಸಿನಿಮಾಗಳ ವಿವಿಧ ಪೋಸ್ಟರ್ ಗಳನ್ನು ರೆಡಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಖುಷಿ ಪಡುತ್ತಿದ್ದಾರೆ.

    ಈ ಮಧ್ಯೆ ಪುನೀತ್ ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳಿಗೆ ಉಡುಗೊರೆ ನೀಡಲು ಚಿತ್ರರಂಗ ಕೂಡ ಸಜ್ಜಾಗಿದೆ. ಇತ್ತ ‘ಯುವರತ್ನ’ ಚಿತ್ರತಂಡ ಇಂದು ಸಂಜೆ ಚಿತ್ರದ ಡೈಲಾಗ್ ಟೀಸರ್ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ. ಅತ್ತ ಅಪ್ಪು ಹುಟ್ಟುಹಬ್ಬದ ದಿನದಂದು ‘ಜೇಮ್ಸ್’ ಚಿತ್ರತಂಡ ಕೂಡ ಮೋಷನ್ ಪೋಸ್ಟರ್ ರಿಲೀಸ್ ಮಾಡಲು ಮುಂದಾಗಿದ್ದು, ಅಭಿಮಾನಿಗಳಿಗೆ ಡಬಲ್ ಖುಷಿ ನೀಡಲು ಸಿದ್ಧತೆ ನಡೆಸಿದೆ.

    ‘ಯುವರತ್ನ’ ಸಿನಿಮಾದ ಎರಡನೆಯ ಟೀಸರ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ಚಿತ್ರತಂಡ, ಅದಕ್ಕೂ ಮೊದಲೇ ಪವರ್ ಸ್ಟಾರ್ ಗಾಗಿ ‘ಯುವರತ್ನ’ದ ಪವರ್‌ಫುಲ್ ಸಿಡಿಪಿ (ಕಾಮನ್ ಡಿಸ್‍ಪ್ಲೇ ಪಿಕ್ಚರ್) ಬಿಡುಗಡೆ ಮಾಡಿದೆ. ಈ ಸಿಡಿಪಿಯನ್ನ ಪುನೀತ್ ಅಭಿಮಾನಿಗಳು ತಮ್ಮ ಫ್ಯಾನ್ ಪೇಜ್‍ಗಳಲ್ಲಿ ಶೇರ್ ಮಾಡಿಕೊಂಡು ಖುಷಿ ಪಟ್ಟಿದ್ದಾರೆ.

    ಪುನೀತ್ 18 ವರ್ಷಗಳ ಹಿಂದೆ ಮೊದಲು ನಾಯಕರಾಗಿ ನಟಿಸಿದ್ದ ‘ಅಪ್ಪು’ ಚಿತ್ರದ ಗೆಟಪ್‍ನಲ್ಲಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಯುವರತ್ನ ಚಿತ್ರತಂಡ ಮಾಹಿತಿ ನೀಡಿತ್ತು. ಆ ಸಿನಿಮಾವನ್ನು ನೆನಪಿಸುವ ಲುಕ್‍ನಲ್ಲಿಯೇ ಚಿತ್ರತಂಡ ಸಿಡಿಪಿ ಶೇರ್ ಮಾಡಿಕೊಂಡಿದೆ. ಕರ್ನಾಟಕದ ಧ್ವಜದ ಎರಡು ಬಣ್ಣಗಳ ನಡುವೆ ಪುನೀತ್ ಅವರ ವಿವಿಧ ಸಿನಿಮಾಗಳ ಕಟೌಟ್ ಹಾಗೂ ಪೋಸ್ಟರ್ ಚಿತ್ರಗಳನ್ನು ಬಳಸಿ ಸಿಡಿಪಿಯನ್ನ ಚಿತ್ರತಂಡ ರೆಡಿಮಾಡಿದೆ. ಜೊತೆಗೆ ಸಿಡಿಪಿಯಲ್ಲಿ ‘ಹ್ಯಾಪಿ ಬರ್ಥ್ ಡೇ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್’ ಎಂದು ಶುಭ ಹಾರೈಸಲಾಗಿದ್ದು, ಪುನೀತ್‍ಗೆ ಬಾಕ್ಸ್ ಆಫೀಸ್ ಬಾದ್‍ಷಾ ಎಂಬ ಬಿರುದು ನೀಡಿ ಶ್ಲಾಘಿಸಲಾಗಿದೆ.

    ನಿರ್ದೇಶಕ ಸಂತೋಷ್ ಆನಂದರಾಮ್ ಈ ಹೊಸ ಪ್ರೊಫೈಲ್ ಪಿಕ್ಚರ್ ರಿಲೀಸ್ ಮಾಡಿದ್ದಾರೆ. ‘ಯುವರತ್ನ’ ಚಿತ್ರದ ಡೈಲಾಗ್ ಪೋಸ್ಟರ್ ಸೋಮವಾರ ಸಂಜೆ 6.03ಕ್ಕೆ ಬಿಡುಗಡೆಯಾಗಲಿದ್ದು, ಇದು ಪವರ್ ಪ್ಯಾಕ್ಡ್ ಡೈಲಾಗ್ ಟೀಸರ್ ಎಂದು ಚಿತ್ರತಂಡ ತಿಳಿಸಿದೆ. ಅಷ್ಟೇ ಅಲ್ಲದೇ ಇದು ಪವರ್ ಸ್ಟಾರ್ ಅವರ ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳಿಗೆ ಡೆಡಿಕೇಟ್ ಮಾಡುತ್ತಿರುವುದಾಗಿ ಹೇಳಿಕೊಂಡಿದೆ.

  • ‘ರಾಬರ್ಟ್’ ನಂತ್ರ ‘ಯುವರತ್ನ’ನಿಗೂ ತಟ್ಟಿದ ಕೊರೊನಾ ಭೀತಿ

    ‘ರಾಬರ್ಟ್’ ನಂತ್ರ ‘ಯುವರತ್ನ’ನಿಗೂ ತಟ್ಟಿದ ಕೊರೊನಾ ಭೀತಿ

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನೇ ಆತಂಕಕ್ಕೀಡುಮಾಡಿದೆ. ಚೀನಾದಲ್ಲಿ ಮರಣಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ ಸುಮಾರು 77 ದೇಶಗಳಲ್ಲಿ ಹರಡಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಈ ಕೊರೊನಾ ಎಫೆಕ್ಟ್ ಸ್ಯಾಂಡಲ್‍ವುಡ್‍ಗೂ ತಟ್ಟಿದ್ದು, ‘ರಾಬರ್ಟ್’ ಚಿತ್ರತಂಡದ ಬಳಿಕ ‘ಯುವರತ್ನ’ ಚಿತ್ರತಂಡ ಕೂಡ ವಿದೇಶದಲ್ಲಿ ನಡೆಯಬೇಕಿದ್ದ ಶೂಟಿಂಗ್ ರದ್ದು ಮಾಡಿದೆ.

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟಿಸುತ್ತಿರುವ `ಯುವರತ್ನ` ಸಿನಿಮಾ ಬಾರೀ ನಿರೀಕ್ಷೆ ಹುಟ್ಟುಹಾಕಿದೆ. ಯುವರತ್ನ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಹಾಡೊಂದರ ಚಿತ್ರೀಕರಣಕ್ಕಾಗಿ ಚಿತ್ರತಂಡ ಯುರೋಪ್‍ಗೆ ತೆರಳಲು ಪ್ಲಾನ್ ಮಾಡಿಕೊಂಡಿತ್ತು. ಯುರೋಪ್‍ನ ಸ್ಲೋವೇನಿಯಾದಲ್ಲಿ ಹಾಡಿನ ಚಿತ್ರೀಕರಣ ಮಾಡಲು ಚಿತ್ರತಂಡ ಮುಂದಾಗಿತ್ತು.

    3-4 ದಿನಗಳ ಕಾಲ ಯುರೋಪಿನಲ್ಲೇ ಚಿತ್ರತಂಡ ತಂಗಲು ಪ್ಲಾನ್ ಮಾಡಿದ್ದ ಹಿನ್ನೆಲೆ ಟಿಕೆಟ್, ಹೋಟೆಲ್ ಎಲ್ಲವೂ ಬುಕ್ ಮಾಡಲಾಗಿತ್ತು. ಆದರೆ ಮಹಾಮಾರಿ ಕೊರೊನಾ ಭೀತಿಯಿಂದ `ಯುವರತ್ನ`ನ ಯುರೋಪ್ ಪ್ರವಾಸ ರದ್ದು ಮಾಡಿದೆ. ಹಣ ಹೋದರೆ ಹೋಗಲಿ ಕೊರೊನಾ ಸಹವಾಸ ಬೇಡಪ್ಪ ಎಂದು ಚಿತ್ರತಂಡ ಸುಮ್ಮನಾಗಿದೆ.

    ಕೆಲವು ದಿನಗಳ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ‘ರಾಬರ್ಟ್’ ಚಿತ್ರತಂಡವು ಶೂಟಿಂಗ್‍ಗಾಗಿ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿತ್ತು. ಆದರೆ ವಿಶ್ವಾದ್ಯಂತ ಹರಡುತ್ತಿರುವ ಕೊರೊನಾ ಭೀತಿಗೆ ವಿದೇಶ ಪ್ರವಾಸವನ್ನು ಚಿತ್ರತಂಡ ರದ್ದು ಮಾಡಿತ್ತು. ಇದೇ ಬೆನ್ನಲ್ಲೇ ಯುವರತ್ನ ಚಿತ್ರತಂಡ ಕೂಡ ವಿದೇಶದಲ್ಲಿ ನಡೆಯಬೇಕಿದ್ದ ಶೂಟಿಂಗ್ ಪ್ಲಾನ್ ರದ್ದುಮಾಡಿದೆ. ಅದೇ ರೀತಿ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರುವ ‘ಅರ್ಜುನ್ ಗೌಡ’ ಸಿನಿಮಾ ತಂಡ ಕೂಡ ವಿದೇಶದಲ್ಲಿ ಮಾಡಬೇಕಿದ್ದ ಶೂಟಿಂಗ್ ಕ್ಯಾನ್ಸಲ್ ಮಾಡಿದೆ.

    ಈ ಹಿಂದೆ `ರಾಜಕುಮಾರ` ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಿಸಿದ ಸಂತೋಷ್ ಆನಂದ್ ರಾಮ್ ಅವರೇ `ಯುವರತ್ನ` ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾದಲ್ಲಿ ಪವರ್ ಸ್ಟಾರ್ ಗೆ ಜೋಡಿಯಾಗಿ ಸಯೇಷ ಸೈಗಲ್ ಕಾಣಿಸಿಕೊಳ್ಳಲಿದ್ದು, ಇದರ ಜೊತೆಗೆ ಸೋನು, ಡಾಲಿ ಧನಂಜಯ್, ವಸಿಷ್ಠ ಸಿಂಹ ಸಿನಿಮಾದಲ್ಲಿ ನಟಿಸಲಿದ್ದಾರೆ.

    ಬುಧವಾರ ಬೆಳಗ್ಗೆಯವರೆಗೆ ಭಾರತದಲ್ಲಿ 438 ಮಂದಿ ಕೊರೊನಾ ಶಂಕಿತರೆಂದು ವರದಿಯಾಗಿದೆ. ಅದರಲ್ಲಿ 225 ಜನರ ಮೇಲೆ 28 ದಿನಗಳ ಕಾಲ ತೀವ್ರ ನಿಗಾ ವಹಿಸಲಾಗಿತ್ತು. 189 ಮಂದಿ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ. 89 ಮಂದಿಯನ್ನು ಪ್ರತ್ಯೇಕ ಸ್ಥಳದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 118 ಮಂದಿ ಕೊರೊನಾ ಪರೀಕ್ಷೆ ಮಾಡಿಸಿದ್ದು, 103 ಜನರ ವರದಿಯಲ್ಲಿ ನೆಗೆಟಿವ್ ಬಂದಿದ್ದು, 4 ಮಂದಿಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

  • ಯುವರತ್ನನ ಬೈಕ್ ಚೇಸಿಂಗ್ ಸಾಹಸ!

    ಯುವರತ್ನನ ಬೈಕ್ ಚೇಸಿಂಗ್ ಸಾಹಸ!

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ನಿನ ಎರಡನೇ ಚಿತ್ರ ಯುವರತ್ನ. ಈ ಚಿತ್ರವೀಗ ಅಂತಿಮ ಘಟ್ಟದಲ್ಲಿದೆ. ಸಾಮಾನ್ಯವಾಗಿ ಒಂದು ಸೂಪರ್ ಹಿಟ್ ಸಿನಿಮಾ ಕೊಟ್ಟ ನಟ ಮತ್ತು ನಿರ್ದೇಶಕ ಮತ್ತೊಂದು ಚಿತ್ರದಲ್ಲಿ ಒಂದಾದರೆ ಅದರ ಬಗ್ಗೆ ಅಗಾಧ ಪ್ರಮಾಣದಲ್ಲಿಯೇ ನಿರೀಕ್ಷೆಗಳು ಮೂಡಿಕೊಳ್ಳುತ್ತವೆ. ಹಾಗೆಂದ ಮೇಲೆ ರಾಜಕುಮಾರ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟ ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ನಿನಲ್ಲಿ ಮೂಡಿ ಬರುತ್ತಿರುವ ಯುವರತ್ನ ಚಿತ್ರದ ಬಗ್ಗೆ ಕಾತರ ಮೂಡದಿರಲು ಸಾಧ್ಯವೇ ಇಲ್ಲ. ಇದೀಗ ಯುವರತ್ನ ಸಿನಿಮಾ ಕಡೆಯಿಂದ ಇಂಟರೆಸ್ಟಿಂಗ್ ಆದೊಂದು ಸಂಗತಿ ಹೊರ ಬಿದ್ದಿದೆ.

    ಯುವರತ್ನ ಚಿತ್ರದ ಬಗ್ಗೆ ಇಂಚಿಂಚು ಮಾಹಿತಿಗಳಿಗಾಗಿ ಪ್ರೇಕ್ಷಕರು ಕಾದು ಕೂತಿದ್ದಾರೆ. ಅಪ್ಪು ಅಭಿಮಾನಿಗಳಲ್ಲಂತೂ ಈ ಕಾತರ ತುಸು ಹೆಚ್ಚೇ ಇದೆ. ಆದರೆ ಇದರ ಕಥೆಯ ಬಗ್ಗೆಯಾಗಲಿ, ಇನ್ನಿತರ ವಿಚಾರಗಳ ಬಗ್ಗೆಯೇ ಆಗಲಿ ಚಿತ್ರತಂಡ ಗೌಪ್ಯತೆ ಕಾಪಾಡಿಕೊಂಡೇ ಸಾಗಿ ಬಂದಿದೆ. ತಾರಾಗಣಕ್ಕೆ ಕಲಾವಿದರನ್ನು ವೆಲ್‍ಕಮ್ ಮಾಡುವ ಮೂಲಕವಷ್ಟೇ ಈ ಸಿನಿಮಾ ಬಗ್ಗೆ ಒಂದಷ್ಟು ಅಂಶಗಳು ಜಾಹೀರಾಗುತ್ತಿದ್ದವು. ಆದರೆ ಆ ಪಾತ್ರಗಳ ಬಗ್ಗೆ ಯಾವುದೇ ಮಾಹಿತಿಯನ್ನೂ ಚಿತ್ರತಂಡ ಬಿಟ್ಟು ಕೊಡುತ್ತಿರಲಿಲ್ಲ. ಆದರೀಗ ಚಿತ್ರತಂಡವೇ ಒಂದು ಮಹತ್ತರ ವಿಚಾರವನ್ನು ಜಾಹೀರು ಮಾಡಿದೆ.

    ಅದರನ್ವಯವಾಗಿ ಹೇಳೋದಾದರೆ, ಯುವರತ್ನ ಚಿತ್ರದಲ್ಲಿ ಮೈನವಿರೇಳಿಸುವಂಥಾ ಬೈಕ್ ಚೇಸಿಂಗ್ ಸೀನುಗಳಿರಲಿವೆಯಂತೆ. ಈ ಚಿತ್ರದಲ್ಲಿ ಪುನೀತ್ ಕಾಲೇಜು ವಿದ್ಯಾರ್ಥಿಯಾಗಿ ನಟಿಸಿದ್ದಾರೆಂಬ ವಿಚಾರ ಈಗಾಗಲೇ ಗೊತ್ತಾಗಿದೆ. ಇಲ್ಲಿ ಶಿಕ್ಷಣ ಮಾಫಿಯಾ ಬಗೆಗಿನ ಕಥೆಯಿದೆ ಎಂಬ ಸಣ್ಣ ಸುಳಿವೂ ಹರಿದಾಡುತ್ತಿದೆ. ಇದೀಗ ಬೈಕ್ ಚೇಸಿಂಗ್ ಸೀನಿದೆ ಎಂಬ ಅಂಶ ಹೊರ ಬಿದ್ದಿರೋದು ಇಲ್ಲಿ ಪಕ್ಕಾ ಆಕ್ಷನ್ ಸೀನುಗಳೂ ಇವೆಯೆಂಬುದರ ಸಂಕೇತ. ಪವರ್ ಸ್ಟಾರ್ ಚಿತ್ರಗಳೆಂದ ಮೇಲೆ ಅದರಲ್ಲಿ ಆಕ್ಷನ್ ದೃಷ್ಯಾವಳಿಗಳು ಇದ್ದೇ ಇರುತ್ತವೆ. ಯುವರತ್ನದಲ್ಲಿ ಆ ಅಂಶಗಳು ಹೆಚ್ಚೇ ಇರಲಿವೆಯಂತೆ. ಅಂದಹಾಗೆ, ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಮುಹೂರ್ತ ಕಂಡಿದ್ದ ಯುವರತ್ನ ಚಿತ್ರವೀಗ ಚಿತ್ರೀಕರಣದ ಅಂತಿಮ ಘಟ್ಟದಲ್ಲಿದೆ.

  • ಯುವರತ್ನ ಟೀಸರ್‌ಗೆ ನಟ ಸಂಜಯ್ ದತ್ ಮೆಚ್ಚುಗೆ

    ಯುವರತ್ನ ಟೀಸರ್‌ಗೆ ನಟ ಸಂಜಯ್ ದತ್ ಮೆಚ್ಚುಗೆ

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ `ಯುವರತ್ನ’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಯೂಟ್ಯೂಬ್‍ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಇದೀಗ ಈ ಚಿತ್ರದ ಟೀಸರ್ ನೋಡಿ ಬಾಲಿವುಡ್ ನಟ ಸಂಜಯ್ ದತ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಸಂಜಯ್ ತಮ್ಮ ಟ್ವಿಟ್ಟರಿನಲ್ಲಿ ಟೀಸರ್ ಲಿಂಕ್ ಹಂಚಿಕೊಂಡು ಅದಕ್ಕೆ, “ಯುವರತ್ನ ಟೀಸರ್ ನೋಡಲು ಅದ್ಭುತವಾಗಿದೆ” ಎಂದು ಬರೆದುಕೊಂಡು ಇಡೀ ಚಿತ್ರತಂಡಕ್ಕೆ ಶುಭಶಾಯ ತಿಳಿಸಿದ್ದಾರೆ. ರಗ್ಬಿ ಆಟದ ಸುತ್ತ ಯುವರತ್ನ ಸಿನಿಮಾದ ಟೀಸರ್ ಮಾಡಲಾಗಿದೆ. ಇದನ್ನೂ ಓದಿ: ‘ಯುವರತ್ನ’ ಟೀಸರ್ ರಿಲೀಸ್ – ರಗ್ಬಿ ಆಟಗಾರನಾದ ಪುನೀತ್

    ಹೊಂಬಾಳೆ ಫಿಲಂ ಯೂಟ್ಯೂಬ್ ಚಾನಲ್‍ನಲ್ಲಿ `ಯುವರತ್ನ’ ಟೀಸರನ್ನು ರಿಲೀಸ್ ಮಾಡಿದೆ. ಟೀಸರಿನಲ್ಲಿ ಪುನೀತ್ ರಗ್ಬಿ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ಹೊಂಬಾಳೆ ಫಿಲಂನಲ್ಲಿ ನಿರ್ಮಾಣ ಮಾಡುತ್ತಿದೆ. ಇದೇ ಸಂಸ್ಥೆಯ `ಕೆಜಿಎಫ್ 2′ ಸಿನಿಮಾದ ಮೂಲಕ ಸಂಜಯ್ ದತ್ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದಾರೆ.

    ಟೀಸರ್ ನಲ್ಲಿ ಪುನೀತ್ “ಈ ದುನಿಯಾದಲ್ಲಿ ಮೂರು ತರ ಗಂಡಸರಿಸುತ್ತಾರೆ. ನಿಯಮವನ್ನು ಫಾಲೋ ಮಾಡೋನು, ನಿಯಮವನ್ನು ಬ್ರೇಕ್ ಮಾಡೋನು, ಮೂರನೇಯವನು ನನ್ನ ತರ ರೂಲ್ ಮಾಡೋನು” ಎಂಬ ಮಾಸ್ ಡೈಲಾಗ್ ಹೇಳಿದ್ದಾರೆ. ರಗ್ಬಿ ಆಟದ ಮೃದಾನದಲ್ಲಿ ಪುನೀತ್ ಖಡಕ್ ಆಟಗಾರನಾಗಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಆಟವನ್ನು ಗೆಲ್ಲುತ್ತಾರೆ.

    ಸದ್ಯ ಈ ಟೀಸರ್ ಬಿಡುಗಡೆಯಾದ ಒಂದು ದಿನದಲ್ಲೇ ಯೂಟ್ಯೂಬ್‍ನಲ್ಲಿ ನಂಬರ್ 1 ಟ್ರೆಂಡಿಂಗ್‍ನಲ್ಲಿದೆ. ಇದುವರೆಗೂ 8.9 ಲಕ್ಷಕ್ಕೂ ಅಧಿಕ ವೀವ್ಸ್ ಕಂಡಿದ್ದು, 81 ಸಾವಿರಕ್ಕೂ ಮಂದಿ ಲೈಕ್ಸ್ ಮಾಡಿದ್ದಾರೆ. ಸಿನಿಮಾ ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ. ಬಹು ವರ್ಷಗಳ ಬಳಿಕ ಯುವರತ್ನ ಸಿನಿಮಾದಲ್ಲಿ ಪುನೀತ್ ಕಾಲೇಜು ಯುವಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಮೊದಲ ಬಾರಿಗೆ ನಟಿ ಸಯೇಷಾ ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ.