Tag: ಯುವ ದಸರಾ

  • ಮೈಸೂರಲ್ಲಿ ಯುವದಸರಾಗೆ ಅದ್ಧೂರಿ ಚಾಲನೆ – ಶ್ರೇಯಾ ಘೋಷಾಲ್ ಹಾಡಿಗೆ ಹುಚ್ಚೆದ್ದು ಕುಣಿದ ಯುವಜನ

    ಮೈಸೂರಲ್ಲಿ ಯುವದಸರಾಗೆ ಅದ್ಧೂರಿ ಚಾಲನೆ – ಶ್ರೇಯಾ ಘೋಷಾಲ್ ಹಾಡಿಗೆ ಹುಚ್ಚೆದ್ದು ಕುಣಿದ ಯುವಜನ

    ಮೈಸೂರು: ದಸರಾ ಮಹೋತ್ಸವದ ಅಂತವಾಗಿ ನಡೆದ ಯುವ ದಸರಾ (Yuva dasara) ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್‌ರಾಜ್‌ಕುಮಾರ್ ಅದ್ಧೂರಿ ಚಾಲನೆ ನೀಡಿದರು. ಮೊದಲ ದಿನವೇ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಹಾಡಿಮ ಮೂಲಕ ಮೋಡಿ ಮಾಡಿದರು. ಮಳೆ ಭೀತಿ ನಡುವೆಯೂ ಯುವ ಸಮೂಹ ಹುಚ್ಚೆದ್ದು ಕುಣಿಯುತ್ತಿತ್ತು.

    ಮಹಾರಾಜು ಕಾಲೇಜು ಮೈದಾನದ ಬಳಿ ಟ್ರಾಫಿಕ್ ದಟ್ಟಣೆ ನಿವಾರಿಸಲು ಇದೇ ಮೊದಲ ಬಾರಿಗೆ ಮೈಸೂರಿನ ಉತ್ತನಹಳ್ಳಿ ಸಮೀಪ ಯುವ ದಸರಾ ಆಯೋಜಿಸಲಾಗಿದೆ. ಇದನ್ನೂ ಓದಿ: ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್‌ಗೆ ಕೇಂದ್ರ ಸರ್ಕಾರ ಬಿಗ್ ಶಾಕ್ – ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರದ್ದು

    ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಲ್ ಅವರ ʻಸುನ್ ರಹಾ ಹೇನʼ ಗೀತೆಯ ಮೂಲಕ ಕಾರ್ಯಕ್ರಮ ಆರಂಭಿಸಿದರು. ಯುವ ದಸರಾ ಕಾರ್ಯಕ್ರಮದ ಮೊದಲ ದಿನ ದರ್ಶನ್‌ ನಟನೆಯ ʻಚಕ್ರವರ್ತಿʼ ಚಿತ್ರದ ʻಒಂದು ಮಳೆ ಬಿಲ್ಲುʼ, ಕೊಟ್ಟಿಗೊಬ್ಬ-2 ಚಿತ್ರದ ʻಸಾಲುತಿಲ್ಲವೇ ಸಾಲುತಿಲ್ಲವೇʼ, ಸಂಜು ವೆಡ್ಸ್ ಗೀತಾ ಚಿತ್ರದ ʻಗಗನವೇ ಬಾಗಿʼ ಗೀತೆ ಹಾಡುವ ಮೂಲಕ ಯುವಜನರನ್ನ ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಇದನ್ನೂ ಓದಿ: BBK 11: ಬಿಗ್ ಬಾಸ್ ಮನೆಯಿಂದ ಯಮುನಾ ಔಟ್

  • ಯುವ ದಸರಾದಲ್ಲಿ ಅಪ್ಪು ನಮನ- ಗಂಧದ ಗುಡಿ ಟೀಸರ್ ನೋಡಿ ಕಣ್ಣೀರಿಟ್ಟ ಅಶ್ವಿನಿ

    ಯುವ ದಸರಾದಲ್ಲಿ ಅಪ್ಪು ನಮನ- ಗಂಧದ ಗುಡಿ ಟೀಸರ್ ನೋಡಿ ಕಣ್ಣೀರಿಟ್ಟ ಅಶ್ವಿನಿ

    – ಪುನೀತ್ ಹಾಡಿಗೆ ಸೊರೆಗೊಂಡ ಪ್ರೇಕ್ಷಕರ ಕಣ್ಮನ

    ಮೈಸೂರು: ಅಭಿಮಾನಿಗಳ ಆರಾಧ್ಯದೈವ, ಕೋಟಿ ಹೃದಯಗಳ ಒಡೆಯ, ನಗುವಿನ ಪರಮಾತ್ಮ, ಕನ್ನಡದ ಕಂದ, ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ಕುಮಾರ್ (Dr. Puneeth Raj Kumar). ಈ ಹೆಸರು ಕೇಳಿದ್ದೇನೆ ರೋಮಾಂಚನವಾಗುತ್ತೆ. ಹೀಗಿರುವಾಗ ಮೈಸೂರಿನ ಯುವ ದಸರಾ (Yuva Dasara) ದಲ್ಲಿ ಇಡೀ ರಾತ್ರಿ ಅಪ್ಪುಮಯವಾಗಿತ್ತು.

    ಅಪ್ಪು.. ಅಪ್ಪು.. ಅಪ್ಪು.. ಎಲ್ಲೇ ನೋಡಿದ್ರೂ ಅಪ್ಪು.. ಎಲ್ಲೇ ಕೇಳಿದ್ರೂ ಅಪ್ಪು. ಕರ್ನಾಟಕ ರತ್ನ.. ಕನ್ನಡದ ಕಂದ.. ಡಾ. ಪುನೀತ್ ರಾಜ್‍ಕುಮಾರ್ ಅಗಲಿ 11 ತಿಂಗಳೇ ಕಳೆದಿದೆ. ಆದರೂ ಅಪ್ಪುವಿನ ಮೇಲಿನ ಅಭಿಮಾನ, ಪ್ರೀತಿ ಮಾತ್ರ ಕಿಂಚಿತ್ತು ಕಡಿಮೆ ಆಗಿಲ್ಲ. ಅದ್ದೂರಿ ಮೈಸೂರು ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಈ ಬಾರಿಯ 6 ದಿನಗಳ ಕಾರ್ಯಕ್ರಮ ನಡೆಯಲಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಮೇಳೈಸಿದ ದಸರಾ ವೈಭವ – ರಂಗೋಲಿ ಸ್ಪರ್ಧೆಯಲ್ಲಿ ಮಿಂಚಿದ ನಾರಿಯರು

    ‘ಅಪ್ಪು ನಮನ’ ಹೆಸರಲ್ಲಿ ಉದ್ಘಾಟಿಸಲಾಗಿದೆ. ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ (Ashwini Puneeth Raj Kumar), ರಾಘಣ್ಣ, ದೀಪ ಬೆಳಗುವ ಮೂಲಕ ಚಾಲನೆ ಕೊಟ್ಟರು. ಯುವ ದಸರಾಗೆ ಚಾಲನೆ ಸಿಕ್ಕೊಡನೆ ಕೂಗಿ ಬಂದಿದ್ದು ಒಂದೇ ಕೂಗು ಅದು ಅಪ್ಪು.. ಅಪ್ಪು.. ಒಂದ್ಕಡೆ ಅಪ್ಪು ಹಾಡುಗಳಿಗೆ ಕಲಾವಿದರು ನೃತ್ಯ ಮಾಡ್ತಿದ್ರೇ ಇನ್ನೊಂದೆಡೆ ಯುವಕರು ಅಪ್ಪು ಭಾವಚಿತ್ರ ಹಿಡಿದು, ಮೊಬೈಲ್ ಟಾರ್ಚ್ ಹಾಕಿಕೊಂಡು ಕುಣಿದು ಕುಪ್ಪಳಿಸಿದ್ರು. ಇದನ್ನೂ ಓದಿ: ಪ್ರಮೋದಾ ದೇವಿ ಮುಂದೆ ಮಂಡಿಯೂರಿ ನಮಸ್ಕರಿಸಿದ ಸುಧಾಮೂರ್ತಿ – ಫೋಟೋ ವೈರಲ್

    ಅನುಶ್ರೀ (Anushree) ನಿರೂಪಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ಕೊಟ್ಟಿತ್ತು. ಸಂಗೀತ ನಿರ್ದೇಶಕ ಗುರುಕಿರಣ್, ಗಾಯಕ ವಿಜಯ್ ಪ್ರಕಾಶ್, ಕುನಾಲ್ ಗಾಂಜಾವಾಲ, ಚೈತ್ರ, ಅನುರಾಧ ಭಟ್‍ರವರ ಗಾಯನ ಎಲ್ಲರ ಮನ ಸೆಳೆಯಿತು. ಅಪ್ಪು ಚಿತ್ರದ ಹಾಡಿಗೆ ನೃತ್ಯ ನೆರೆದಿದ್ದವರನ್ನು ಹುಚ್ಚೆದ್ದು ಕುಣಿಯುವಂತೆ ಮಾಡ್ತು. ಕಾರ್ಯಕ್ರಮದಲ್ಲಿ ಅಪ್ಪುವಿನ ಕನಸು ಗಂಧದಗುಡಿ ಟೀಸರ್ ಪ್ರಸಾರ ವೇಳೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಭಾವುಕರಾಗಿ ಕಣ್ಣೀರಿಟ್ಟರು. ಇದು ಎಂಥವರನ್ನು ಒಮ್ಮೆ ಮೌನವಾಗಿರುವಂತೆ ಮಾಡ್ತು.

    Live Tv
    [brid partner=56869869 player=32851 video=960834 autoplay=true]

  • ಚಂದನ್‍ ಶೆಟ್ಟಿ ತನ್ನ ಲವ್ ಕೇಸ್‌ನ್ನ ಮೈಸೂರು ದಸರಾದಲ್ಲಿ ತಂದ ಹಾಕಿ ತಲೆನೋವು ಕೊಟ್ಟ: ವಿ.ಸೋಮಣ್ಣ

    ಚಂದನ್‍ ಶೆಟ್ಟಿ ತನ್ನ ಲವ್ ಕೇಸ್‌ನ್ನ ಮೈಸೂರು ದಸರಾದಲ್ಲಿ ತಂದ ಹಾಕಿ ತಲೆನೋವು ಕೊಟ್ಟ: ವಿ.ಸೋಮಣ್ಣ

    ಮೈಸೂರು: ಗಾಯಕ ಚಂದನ್‍ ಶೆಟ್ಟಿ ತನ್ನ ಲವ್ ಕೇಸ್‌ನ್ನ ಮೈಸೂರು ದಸರಾದಲ್ಲಿ ತಂದ ಹಾಕಿ ತಲೆನೋವು ಕೊಟ್ಟ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಚಂದನ್ ಶೆಟ್ಟಿ ಚಿಕ್ಕವನಿದ್ದಾಗಿನಿಂದ ನನಗೆ ಗೊತ್ತು. ಅವನ ಲವ್ ಕೇಸ್ ಅನ್ನು ಮೈಸೂರು ಯುವ ದಸರಾದಲ್ಲಿ ತಂದು ಹಾಕಿಬಿಟ್ಟ. ಅವನು ಎಲ್ಲಾದರೂ ಮಜಾ ತಗೋಬಹುದಿತ್ತು. ಅದನ್ನ ಬಿಟ್ಟು ವೇದಿಕೆ ಮೇಲೆ ಪ್ರಪೋಸ್ ಮಾಡಿ ನನಗೆ ಹಿಂಸೆ ಕೊಡುತ್ತಿದ್ದಾನೆ. ಇದು ಯಾರಿಗೆ ಬೇಕಿತ್ತು ಎಂದು ವ್ಯಂಗ್ಯವಾಡಿದರು.

    ಚಂದನ್ ಶೆಟ್ಟಿ ಫೋನ್ ಮಾಡಿ ತಪ್ಪಾಗಿದೆ ಎಂದು ಕೇಳಿಕೊಂಡ. ಆಗ ನಾನು, ಅಲ್ಲೋ ಚಂದನ್ ಶನಿದೇವರ ತರ ಬಂದು ಹೆಗಲು ಏರಿಬಿಟ್ಟೆಲ್ಲೋ. ನನ್ನ ಒಳ್ಳೆತನ ನೀನು ದೂರುಪಯೋಗ ಮಾಡಿಕೊಂಡೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದೆ. ಅವರ ತಾಯಿ ಕೂಡ ಫೋನ್ ಮಾಡಿ ಅರ್ಧ ಗಂಟೆ ಮಾತನಾಡಿ ಪಿಟೀಲು ಕೂಯ್ದರು ಎಂದು ಹೇಳಿದರು.

    ಯುವ ದಸರಾ ವೇದಿಕೆ ಚಂದನ್ ಶೆಟ್ಟಿ ತನ್ನ ಗೆಳತಿ ನಿವೇದಿತಾ ಗೌಡಗೆ ಪ್ರಪೋಸ್ ಮಾಡಿದ ಸುದ್ದಿ ಕೇಳಿದಾಗಿನಿಂದ ಮನಸ್ಸಿಗೆ ಸಮಾಧಾನ ಸಿಗುತ್ತಿಲ್ಲ. ಇಂತಹ ಘಟನೆಗಳಿಗೆ ನಾವೇ ಹೊಣೆ ಆಗುತ್ತೇವೆ. ಹೀಗಾಗಿ ನಿನ್ನೆ ರಾತ್ರಿ ಚಾಮುಂಡಿ ತಾಯಿ ದರ್ಶನ ಮಾಡಿ, ಇದಕ್ಕೊಂದು ಪರಿಹಾರ ನೀಡಮ್ಮ ಅಂತ ಬೇಡಿಕೊಂಡಿದ್ದೇನೆ. ನಾನು ನಿಂತಿದ್ದನ್ನು ಕಂಡು ಜನರು ಬೈಯಲು ಶುರು ಮಾಡಿದರು. ಹೀಗಾಗಿ ಅಲ್ಲಿಂದ ಹೊರಗೆ ಬಂದೆ ಎಂದು ಸುದ್ದಿಗೋಷ್ಠಿನಲ್ಲಿ ನಗೆ ಹರಿಸಿದರು.

    ಚಂದನ್‍ಶೆಟ್ಟಿ ಗೌರವ ಧನ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆ ಕೇಳುತ್ತಿದ್ದಂತೆ, ತಂದೆ ಅಕ್ಟೋಬರ್ 8ರ ವರೆಗೆ ಆ ವಿಚಾರ ಬಿಟ್ಟುಬಿಡಿ. ಮೊದಲು ದಸರಾ ಮುಗಿಯಲಿ ಆಮೇಲೆ ಎಲ್ಲವನ್ನೂ ವಿಚಾರ ಮಾಡೋಣ. ಚಂದನ್ ಶೆಟ್ಟಿ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.

  • ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದೆಂಬ ರೂಲ್ಸ್ ಇದ್ಯಾ? ಪ್ರಮೋದ್ ಮುತಾಲಿಕ್

    ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದೆಂಬ ರೂಲ್ಸ್ ಇದ್ಯಾ? ಪ್ರಮೋದ್ ಮುತಾಲಿಕ್

    ಉಡುಪಿ: ದಸರಾ ವೇದಿಕೆಯಲ್ಲಿ ಪ್ರಪೊಸ್ ಮಾಡಬಾರದು ಎಂಬ ನಿಯಮವಿದೆಯೇ? ಇದ್ದರೆ ತೋರಿಸಿ ಎಂದು ಸಚಿವ ಸೋಮಣ್ಣಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ.

    ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಮತ್ತು ನಟಿ ನಿವೇದಿತಾ ಗೌಡ, ಪ್ರಪೋಸ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪ್ರಮೋದ್ ಮುತಾಲಿಕ್ ಮಾತನಾಡಿದರು. ಸರ್ಕಾರಿ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದೆಂಬ ನಿಯಮ ಎಲ್ಲಿದೆ? ಅನಾವಶ್ಯಕವಾಗಿ ಇದನ್ನು ಎಳೆಯಬೇಡಿ. ಚಂದನ್ ಶೆಟ್ಟಿ ಮತ್ತು ನಿವೇದಿತಾ ಮೇಲೆ ಕೇಸು ಹಾಕಿದ್ದು ತಪ್ಪು. ಸಂದರ್ಭ ಬಂದಿದೆ ಪ್ರಪೋಸ್ ಮಾಡಿದ್ದಾರೆ, ಒಪ್ಪಿಕೊಂಡಿದ್ದಾರೆ, ಸುದ್ದಿಯಾಗಿದೆ. ಅದನ್ನೇ ಬಹಳ ದೊಡ್ಡ ಅಪರಾಧ ಎಂದು ಬಿಂಬಿಸುವುದು ಸರಿಯಲ್ಲ ಎಂದರು.

    ಚಂದನ್ ನಿವೇದಿತಾರನ್ನು ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ ಎಂದಿರುವ ಸಚಿವ ಸೋಮಣ್ಣಗೆ ತಿರುಗೇಟು ನೀಡಿದ ಮುತಾಲಿಕ್, ನೂರಕ್ಕೆ ನೂರು ಚಂದನ್ ಮತ್ತು ನಿವೇದಿತಾಗೆ ಸಮಸ್ಯೆಯಾಗಲ್ಲ. ಇಬ್ಬರ ಮೇಲೆ ಚಾಮುಂಡೇಶ್ವರಿ ಆಶೀರ್ವಾದ ಇದೆ. ಇಷ್ಟಕ್ಕೂ ವೇದಿಕೆಯಲ್ಲಿ ಇಂತದ್ದು ಮಾಡಬಾರದು, ಇಂತದ್ದು ಮಾಡಬೇಕೆಂಬ ನಿಯಮಗಳಿದ್ದರೆ ಸೋಮಣ್ಣ ಅವರು ಹೇಳಲಿ. ಹೆಚ್ಚು ಎಳೆಯದೆ ಪ್ರಕರಣ ಮುಗಿಸಿಬಿಡಿ. ಕೇಸು ವಾಪಾಸ್ ಪಡೆಯಿರಿ. ಯುವ ಜೋಡಿಯ ದಾಂಪತ್ಯ ಜೀವನ ಸುಖಕರವಾಗಿ ನಡೆಯುತ್ತದೆ ಎಂದು ಮುತಾಲಿಕ್ ಹಾರೈಸಿದರು.

  • ತಪ್ಪಾಗಿದ್ದರೆ ಕ್ಷಮೆ ಇರಲಿ, ಸರ್ಪ್ರೈಸ್ ಕೊಡಲು ಈ ರೀತಿ ಮಾಡಿದೆ: ಚಂದನ್ ಶೆಟ್ಟಿ

    ತಪ್ಪಾಗಿದ್ದರೆ ಕ್ಷಮೆ ಇರಲಿ, ಸರ್ಪ್ರೈಸ್ ಕೊಡಲು ಈ ರೀತಿ ಮಾಡಿದೆ: ಚಂದನ್ ಶೆಟ್ಟಿ

    – 2020ರೊಳಗೆ ಚಂದನ್-ನಿವೇದಿತಾ ಕಲ್ಯಾಣ

    ಬೆಂಗಳೂರು: ತಪ್ಪಾಗಿದ್ದರೆ ಕ್ಷಮೆ ಇರಲಿ, ಪ್ರೇಮ ನಿವೇದನೆ ಮಾಡಿಕೊಳ್ಳಲು ಒಳ್ಳೆಯ ದಿನ ಅಂದುಕೊಂಡು, ನನ್ನ ಜೀವನದಲ್ಲಿ ಸಹ ಪ್ರಮುಖ ದಿನ ಎಂದುಕೊಂಡು ಮೈಸೂರಿನ ಯುವ ದಸರಾದಲ್ಲಿ ಈ ರೀತಿ ಮಾಡಿದೆ ಎಂದು ಗಾಯಕ ಚಂದನ್ ಶೆಟ್ಟಿ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ.

    ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಖಂಡನೆ ವ್ಯಕ್ತವಾದ ಹಿನ್ನೆಲೆ ಪಬ್ಲಿಕ್ ಟಿವಿ ಜೊತೆ ಮಾತನಾಡಿ ಚಂದನ್ ಶೆಟ್ಟಿ ಕ್ಷಮೆಯಾಚಿಸಿದ್ದಾರೆ. ನನಗನ್ನಿಸಿದ್ದನ್ನು ನಾನು ಹೇಳಿದೆ, ಈ ಕುರಿತು ತಪ್ಪಾಗಿದ್ದಲ್ಲಿ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ಶುಕ್ರವಾರದ ಆ ಕಾರ್ಯಕ್ರಮಕ್ಕೆ ಸೇರಿದವರಲ್ಲಿ ಬಹುತೇಕರು ನಮ್ಮ ಹಿತೈಶಿಗಳು. ಸರ್ಪ್ರೈಸ್ ಕೊಡಬೇಕು ಎಂದುಕೊಂಡು, ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದೆ ಎಂದು ತಿಳಿಸಿದರು.

    ಆಗ ನನ್ನ ಹಾಗೂ ಅಲ್ಲಿ ಸೇರಿದ್ದ ಪ್ರತಿಯೊಬ್ಬರ ಮನಸ್ಸಿನಲ್ಲಿ ಖುಷಿ ಇತ್ತು. ಅಂತಹ ದೊಡ್ಡ ಕಾರ್ಯಕ್ರಮದಲ್ಲಿ ಸರ್ಪ್ರೈಸ್ ನೀಡುವುದರ ಜೊತೆಗೆ ನಮ್ಮಿಬ್ಬರ ಕುರಿತ ಊಹಾಪೋಹಗಳಿಗೆ ಸ್ಪಷ್ಟನೆ ನೀಡಬೇಕಾಗಿತ್ತು. ಈ ರೂಮರ್ಸ್‍ಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ವೇದಿಕೆಯ ಮೇಲೆ ಪ್ರಪೋಸ್ ಮಾಡಿದೆ. ನಾನೂ ಮೈಸೂರಿನಲ್ಲಿಯೇ ಓದಿದವನು, ಹೀಗಾಗಿ ದಸರಾದಲ್ಲಿ ಪ್ರಪೋಸ್ ಮಾಡಿದೆ ಎಂದು ತಮ್ಮ ನಿಲುವನ್ನು ತಿಳಿಸಿದ್ದಾರೆ.

    ಈಗಾಗಲೇ ಪ್ರಪೋಸ್ ಮಾಡಿಯಾಗಿದೆ. ಹೆಚ್ಚು ಕಾಯಿಸಲು ನನಗೆ ಇಷ್ಟ ಇಲ್ಲ. ಹೀಗಾಗಿ 2020ರೊಳಗೆ ಮದುವೆಯಾಗುವ ಕುರಿತು ಯೋಜನೆ ರೂಪಿಸಿದ್ದೇವೆ ಎಂದು ಇದೇ ವೇಳೆ ತಮ್ಮ ಮದುವೆಯ ಕುರಿತ ಗುಟ್ಟು ಬಿಚ್ಚಿಟ್ಟರು.

    ಯುವ ದಸರಾ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ-ನಿವೇದಿತಾಗೌಡ ಎಂಗೇಜ್ ಆಗಿದ್ದು, ಝಗಮಗಿಸುವ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಬೆರಳಿಗೆ ಉಂಗುರ ತೊಡಿಸಿ ನಿನ್ನನ್ನೇ ಮದುವೆಯಾಗುತ್ತೇನೆಂದು ಘೋಷಿಸಿದ್ದಾರೆ.

    ಪ್ರಪೋಸ್‍ಗೂ ಮುನ್ನ ಚಂದನ್‍ಶೆಟ್ಟಿ ಬಿಗ್‍ಬಾಸ್ ಮನೆಯಲ್ಲಿ ನಿವೇದಿತಾ ಗೌಡ ಅವರಿಗೆ ಬರೆದಿದ್ದ `ಗೊಂಬೆ ಗೊಂಬೆ’ ಎಂಬ ಸಾಂಗ್ ಹಾಡಿದರು. ಇದಕ್ಕೆ ವೇದಿಕೆಯ ಮೇಲೆ ನಿವೇದಿತಾಗೌಡ ಅವರು ಸಹ ಸ್ಟೆಪ್ ಹಾಕಿದರು.

    ಬಿಗ್ ಬಾಸ್ ಮನೆಯಲ್ಲಿನ 105 ದಿನಗಳಲ್ಲಿ ನಮ್ಮಿಬ್ಬರ ನಡುವೆ ಸಾಕಷ್ಟು ಮಾತುಕತೆ ನಡೆದಿದೆ. 105 ದಿನಗಳಲ್ಲಿ ನಿವೇದಿತಾ ನನ್ನನ್ನು ಅರ್ಥ ಮಾಡಿಕೊಂಡಷ್ಟು ಯಾರು ಮಾಡಿಕೊಳ್ಳಲಿಲ್ಲ. ಹಾಗಾಗಿ ನನ್ನ ಜೀವನದಲ್ಲಿ ನಿವೇದಿತಾ ಮುಂದಿನ ದಿನಗಳಲ್ಲಿ ಜೊತೆಯಾಗಿರಲಿ ಎಂದು ಇಂದು ನಿಮ್ಮೆಲ್ಲರ ಸಾಕ್ಷಿಯಾಗಿ ಪ್ರೇಮ ನಿವೇದನೆಯನ್ನ ಸಲ್ಲಿಸುತ್ತಿದ್ದೇನೆ ಎಂದು ಮೊಳಕಾಲೂರಿ ಉಂಗುರ ಹಿಡಿದು ವಿಲ್ ಯು ಮ್ಯಾರಿ ಮೀ ಎಂದು ಚಂದನ್ ಪ್ರಪೋಸ್ ಮಾಡಿದ್ದರು.

    ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗಿದ್ದು, ಇಂತಹ ಖಾಸಗಿ ಕಾರ್ಯಕ್ರಮಗಳಿಗೆ ಯುವ ದಸರಾ ವೇದಿಕೆಯೇ ಆಗಬೇಕಿತ್ತಾ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

    ಸೆಲೆಬ್ರಿಟಿ ಜೋಡಿಯ ನಡೆಯ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಯೋಜಕರನ್ನು ಪ್ರಶ್ನಿಸುತ್ತಿದ್ದಾರೆ. ವಾಟ್ಸಪ್, ಫೇಸ್‍ಬುಕ್‍ನಲ್ಲಿ ಯುವದಸರಾ ವೇದಿಕೆ ಕಾರ್ಯಕ್ರಮ ಟೀಕೆಗೆ ಗುರಿಯಾಗಿದೆ. ನಾವೇನು ದಸರಾ ನೋಡಲು ಬಂದಿದ್ದೇವಾ ಅಥವಾ ನಿಶ್ಚಿತಾರ್ಥ ನೋಡಲು ಬಂದಿದ್ದೇವಾ ಎಂದು ನೆಟ್ಟಿಗರು ಕಿಡಿಕಾರುತ್ತಿದ್ದಾರೆ.

    ಸಚಿವ ವಿ.ಸೋಮಣ್ಣ ಹೆಸರನ್ನು ಹೇಳಿ ಸಹ ಟೀಕೆ ಮಾಡುತ್ತಿದ್ದಾರೆ. ನೆರೆ ಪರಿಹಾರಕ್ಕೆ ದುಡ್ಡಿಲ್ಲ ಅಂತಾರೆ ನಿಶ್ವಿತಾರ್ಥ ಮಾಡೋಕೆ ದುಡ್ಡೆಲ್ಲಿಂದ ಬಂತು? ಸಚಿವ ಸೋಮಣ್ಣರ ಕರಾಮತ್ತು ದಸರಾದಲ್ಲಿ ಎಂಗೇಜ್ಮೆಂಟು. ಯುವ ದಸರಾದಲ್ಲಿ ನಿಶ್ಚಿತಾರ್ಥ, ದಸರಾದಲ್ಲಿ ಮದುವೆ ಆಹಾರ ಮೇಳದಲ್ಲಿ ಬೀಗರ ಊಟ ಎಂಬಿತ್ಯಾದಿ ಸಾಲುಗಳನ್ನು ಸ್ಟೇಟಸ್ ಹಾಗೂ ಪೋಸ್ಟ್ ಹಾಕುತ್ತಿದ್ದಾರೆ. ಈ ಮೂಲಕ ಸರ್ಕಾರ ಹಾಗೂ ಯುವದಸರಾ ಉಪಸಮಿತಿ ಮಾಡಿದ್ದು ಸರೀಯೇ ಎಂದು ಪ್ರಶ್ನಿಸಿದ್ದಾರೆ.

  • ಯುವದಸರಾ ವೇದಿಕೆಯಲ್ಲಿ ಒಂದಾದ ಬಿಗ್‍ಬಾಸ್ ಜೋಡಿ – ನಿವೇದಿತ ಗೌಡಗೆ ಉಂಗುರ ತೊಡಿಸಿದ ಚಂದನ್ ಶೆಟ್ಟಿ

    ಯುವದಸರಾ ವೇದಿಕೆಯಲ್ಲಿ ಒಂದಾದ ಬಿಗ್‍ಬಾಸ್ ಜೋಡಿ – ನಿವೇದಿತ ಗೌಡಗೆ ಉಂಗುರ ತೊಡಿಸಿದ ಚಂದನ್ ಶೆಟ್ಟಿ

    ಮೈಸೂರು: ಯುವ ದಸರಾ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ-ನಿವೇದಿತಾಗೌಡ ಎಂಗೇಜ್ ಆಗಿದ್ದಾರೆ. ಝಗಮಗಿಸುವ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಬೆರಳಿಗೆ ಉಂಗುರ ತೊಡಿಸಿ ನಿನ್ನನ್ನೇ ಮದುವೆಯಾಗುತ್ತೇನೆಂದು ಘೋಷಿಸಿದ್ದಾರೆ. ಸಾವಿರಾರು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರೇಮ ನಿವೇದನೆ ಮಾಡಿದ್ದು ಯುವಜನತೆ ಬಿಗ್‍ಬಾಸ್ ಜೋಡಿಗೆ ಜೈಹಾರ ಹಾಕಿದರು.

    ಪ್ರಪೋಸ್ ಗೂ ಮುನ್ನ ಚಂದನ್‍ಶೆಟ್ಟಿ ಬಿಗ್‍ಬಾಸ್ ಮನೆಯಲ್ಲಿ ನಿವೇದಿತಾ ಗೌಡ ಅವರಿಗೆ ಬರೆದಿದ್ದ ‘ಗೊಂಬೆ ಗೊಂಬೆ’ ಎಂಬ ಸಾಂಗ್ ಹಾಡಿದರು. ಇದಕ್ಕೆ ವೇದಿಕೆಯ ಮೇಲೆ ನಿವೇದಿತಾಗೌಡ ಅವರು ಸಹ ಸ್ಟೇಪ್ ಹಾಕಿದರು.

    ಪ್ರಪೋಸ್ ಗೆ ಮುನ್ನ ವೇದಿಕೆಯಲ್ಲಿ ಮಾತನಾಡಿದ್ದ ಚಂದನ್, ಇಂದು ನಿಮ್ಮ ಮುಂದೆ ಹೇಳುತ್ತಿರುವ ಮಾತುಗಳನ್ನು ನಿವೇದಿತಾಗೆ ವಿದೇಶದ ಸುಂದರ ತಾಣದಲ್ಲಿ ಹೇಳಲು ಪ್ಲಾನ್ ಮಾಡಿಕೊಂಡಿದ್ದೆ. ಇಂದು ಬೆಳಗ್ಗೆ ಇಷ್ಟು ದೊಡ್ಡ ವೇದಿಕೆಯಲ್ಲಿ, ನನ್ನನ್ನು ಇಷ್ಟಪಡುವ ಜನರ ಮುಂದೆ ಹೇಳೋದು ಉತ್ತಮ. ಕಾರ್ಯಕ್ರಮಕ್ಕೆ ನನ್ನ ಪೋಷಕರು, ನಿವೇದಿತಾ ತಂದೆ-ತಾಯಿ ಸಹ ಬಂದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ನಾನು ಮತ್ತು ನಿವೇದಿತಾ ಬರೋಬ್ಬರಿ 105 ದಿನಗಳನ್ನು ಜೊತೆಯಾಗಿ ಕಳೆದಿದ್ದೇವೆ ಎಂದರು.

    105 ದಿನಗಳಲ್ಲಿ ನಮ್ಮಿಬ್ಬರ ಸಾಕಷ್ಟು ಮಾತುಕತೆ ನಡೆದಿದೆ. 105 ದಿನಗಳಲ್ಲಿ ನಿವೇದಿತಾ ನನ್ನನ್ನು ಅರ್ಥ ಮಾಡಿಕೊಂಡಷ್ಟು ಯಾರು ಮಾಡಿಕೊಳ್ಳಲಿಲ್ಲ. ಹಾಗಾಗಿ ನನ್ನ ಜೀವನದಲ್ಲಿ ನಿವೇದಿತಾ ಮುಂದಿನ ದಿನಗಳಲ್ಲಿ ಜೊತೆಯಾಗಿರಲಿ ಎಂದು ಇಂದು ನಿಮ್ಮೆಲ್ಲರ ಸಾಕ್ಷಿಯಾಗಿ ಪ್ರೇಮ ನಿವೇದನೆಯನ್ನ ಸಲ್ಲಿಸುತ್ತಿದ್ದೇನೆ ಎಂದು ಮೊಳಕಾಲೂರಿ ಉಂಗುರ ಹಿಡಿದು ವಿಲ್ ಯು ಮ್ಯಾರಿ ಮೀ ಎಂದು ಚಂದನ್ ಪ್ರಪೋಸ್ ಮಾಡಿದರು.

  • ದಸರಾದ ಮೊದಲ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಚಾಲನೆ

    ದಸರಾದ ಮೊದಲ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಚಾಲನೆ

    ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಮೊದಲ ಕಾರ್ಯಕ್ರಮ ಯುವ ಸಂಭ್ರಮಕ್ಕೆ ಚಾಲನೆ ಸಿಕ್ಕಿದೆ. ನಟ ಗೋಲ್ಡನ್ ಸ್ಟಾರ್ ಗಣೇಶ್ ದೀಪ ಬೆಳಗಿಸಿ, ನಗಾರಿ ಬಾರಿಸುವ ಮೂಲಕ ಯುವ ಸಂಭ್ರಮಕ್ಕೆ ಚಾಲನೆ ನೀಡಿದ್ದಾರೆ.

    ಯುವ ಸಂಭ್ರಮದ ಕಾರ್ಯಕ್ರಮದ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಶುರುವಾಗುತ್ತದೆ. ಈ ಮೊದಲ ಕಾರ್ಯಕ್ರಮಕ್ಕೆ ನಟ ಗೋಲ್ಡನ್ ಸ್ಟಾರ್ ಗಣೇಶ್ ದೀಪ ಬೆಳಗಿಸಿ, ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದ್ದಾರೆ.

    ನಟ ಗಣೇಶ್ ಅವರಿಗೆ ಸಚಿವ ವಿ.ಸೋಮಣ್ಣ, ಶಾಸಕ ನಾಗೇಂದ್ರ, ಸಂದೇಶ್ ನಾಗರಾಜ್ ಸೇರಿ ಹಲವು ಅಧಿಕಾರಿ ವರ್ಗ ಸಾಥ್ ನೀಡಿತು. ಇದಾದ ಬಳಿಕ ನಟ ಗಣೇಶ್ ಯುವ ಮನಸ್ಸುಗಳಿಗೆ ತಮ್ಮ ಚಿತ್ರದ ಡೈಲಾಗ್ ಹಾಗೂ ಹಾಡುಗಳನ್ನು ಹಾಡಿ ರಂಜಿಸಿದರು.

    ವೇದಿಕೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಯುವ ಸಂಭ್ರಮದ ದರ್ಬಾರ್ ಶುರುವಾಗಿದೆ. ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹಾರ ಮಾಡುವ ನೃತ್ಯ ರೂಪಕ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿತ್ತು. ವಿಶೇಷ ಮಕ್ಕಳ ಪ್ರವಾಹದ ಥೀಮ್ ಹಾಗೂ ಜಾನಪದ ಸಾಹಿತ್ಯದ ಮಹದೇಶ್ವರ ಸ್ವಾಮಿಯ ಗೀತೆಯೊಂದಿಗಿನ ಕಂಸಾಳೆ ನೃತ್ಯ ಯುವಕ ಯುವತಿಯರು ಭಕ್ತಿಭಾವದಲ್ಲಿ ತೇಲುವಂತೆ ಮಾಡಿತು.

    ಮೊದಲ ದಿನದ ದಸರಾ ಯುವ ಸಂಭ್ರಮಕ್ಕೆ ಗೋಲ್ಡನ್ ಟಚ್ ಮೂಲಕ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ. ಇಂದು ದಸರಾ ಯುವ ಸಂಭ್ರಮದ ವಿಶೇಷ ವಿಭಿನ್ನ ಕಾರ್ಯಕ್ರಮಗಳು ನಡೆಯಲಿದ್ದು, ಯುವಮನಸ್ಸುಗಳನ್ನ ಮತ್ತಷ್ಟು ರಂಜಿಸಲಿದೆ.

  • ಪಿ.ವಿ.ಸಿಂಧುರಿಂದ ಯುವ ದಸರಾ ಉದ್ಘಾಟನೆ- ಸಿಎಂ ಆಹ್ವಾನ

    ಪಿ.ವಿ.ಸಿಂಧುರಿಂದ ಯುವ ದಸರಾ ಉದ್ಘಾಟನೆ- ಸಿಎಂ ಆಹ್ವಾನ

    ಬೆಂಗಳೂರು: ಯುವ ದಸರಾ ಉದ್ಘಾಟನೆ ಮಾಡುವಂತೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಪದಕ ಗೆದ್ದ ಪಿ.ವಿ.ಸಿಂಧು ಅವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ.

    ಈ ಕುರಿತು ಪತ್ರ ಬರೆದಿರುವ ಸಿಎಂ ಯಡಿಯೂರಪ್ಪ ಅವರು, ಕರ್ನಾಟಕ ಸರ್ಕಾರವು ವಿಶ್ವವಿಖ್ಯಾತ ದಸರಾ ಹಬ್ಬವನ್ನು ನಡೆಸುತ್ತಿದೆ. ಒಂಬತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ದೇಶ-ವಿದೇಶದಿಂದ ಲಕ್ಷಂತಾರ ಜನರು ಮೈಸೂರಿಗೆ ಭೇಟಿ ನೀಡುತ್ತಾರೆ. 410ನೇ ದಸರಾ ಸಂಭ್ರಮಕ್ಕೆ ವಿವಿಧ ಕ್ಷೇತ್ರದ ಸಾಧಕರು, ಶ್ರೇಷ್ಠ ವ್ಯಕ್ತಿಗಳು ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

    ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಪದಕ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದೀರಿ. ಲಕ್ಷಾಂತರ ಯುವ ಕ್ರೀಡಾ ಪ್ರತಿಭೆಗಳಿಗೆ ಸ್ಫೂರ್ತಿಯಾಗಿರುವ ನೀವು ಅಕ್ಟೋಬರ್ 1ರಂದು ಯುವ ದಸರಾವನ್ನು ಉದ್ಘಾಟನೆ ಮಾಡಬೇಕು. ನಿಮ್ಮಿಂದ ಯುವ ದಸರಾ ಉದ್ಘಾಟನೆ ಆಗಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ ಎಂದು ಸಿಎಂ ಯಡಿಯೂರಪ್ಪ, ಪಿ.ವಿ.ಸಿಂಧು ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

    ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಪದಕ ಗೆದ್ದ ಪಿ.ವಿ.ಸಿಂಧು ಅವರಿಗೆ ಸಿಎಂ ಬಿ.ಎಸ್‍.ಯಡಿಯೂರಪ್ಪನವರ ನೇತೃತ್ವದ ಸರ್ಕಾರವು 10 ಲಕ್ಷ ರೂ. ಬಹುಮಾನ ಘೋಷಿಸಿತ್ತು.

    ಈ ಬಾರಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ಕನ್ನಡದ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ. ಸೆಪ್ಟೆಂಬರ್ 29ರಂದು ಬೆಳಗ್ಗೆ ಸುಮಾರು 9.30ರ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಕೆ ಮಾಡಲಾಗುತ್ತದೆ. ಚಾಮುಂಡಿಬೆಟ್ಟದ ದೇವಾಲಯದ ಆವರಣದಲ್ಲಿ ಚಾಮುಂಡೇಶ್ವರಿ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಮಾಡಲಾಗುತ್ತದೆ.

    ಸಿಎಂ ಯಡಿಯೂರಪ್ಪ ಅವರು ಸೆಪ್ಟೆಂಬರ್ 29ರಂದು ಸಂಜೆ 7.30ಕ್ಕೆ ಅರಮನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ಅಕ್ಟೋಬರ್ 8ರಂದು 2.15ರಿಂದ 2.58ರ ಮಕರ ಲಗ್ನದಲ್ಲಿ ನಂದಿ ಪೂಜೆ ಮಾಡಲಾಗುತ್ತದೆ. ಅದೇ ದಿನ ಸಂಜೆ 4.31ರಿಂದ 4.57ರವರೆಗೆ ಕುಂಭ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲಾಗುತ್ತದೆ.

  • ಯುವ ದಸರಾಗೆ ಪಾಸ್ ಕೇಳುತ್ತಿದ್ದ ನಾನಿಂದು ಅದೇ ವೇದಿಕೆ ಮೇಲೆ ನಿಂತಿದ್ದೇನೆ: ಯಶ್

    ಯುವ ದಸರಾಗೆ ಪಾಸ್ ಕೇಳುತ್ತಿದ್ದ ನಾನಿಂದು ಅದೇ ವೇದಿಕೆ ಮೇಲೆ ನಿಂತಿದ್ದೇನೆ: ಯಶ್

    ಮೈಸೂರು: ರಾಕಿಂಗ್ ಸ್ಟಾರ್ ಯಶ್ ಮೈಸೂರಿನ ಯುವ ದಸರಾ ಕಾರ್ಯಕ್ರಮದಲ್ಲಿ ತಮ್ಮ ಹಳೆಯ ಕಾಲದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಯುವ ದಸರಾದ ಕಡೆಯ ದಿನದ ಸ್ಯಾಂಡಲ್ ವುಡ್ ನೈಟ್ಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯಶ್ ತಾನು ಹುಡುಗನಾಗಿದ್ದ ಕಾಲಕ್ಕೆ ಜಾರಿಕೊಂಡು ಹಿಂದಿನ ಕಾಲದ ಎಲ್ಲ ನೆನಪುಗಳನ್ನು ಸ್ಮರಿಸಿಕೊಂಡರು.

    ಹುಡುಗನಾಗಿದ್ದಾಗ ಯುವ ದಸರಾದ ಪಾಸ್ ಬೇಕು ಎನ್ನುತ್ತಿದ್ದ ನಾನು, ಇಂದು ಅದೇ ವೇದಿಕೆ ಮೇಲೆ ನಿಂತಿದ್ದೇನೆ. ಇದಕ್ಕೆಲ್ಲಾ ನಿಮ್ಮ ಪ್ರೀತಿ ಪ್ರೋತ್ಸಾಹವೇ ಕಾರಣ ಎಂದಿದ್ದಾರೆ.

    ಯಶ್ ವೇದಿಕೆ ಏರುತ್ತಿದ್ದಂತೆ, ನಾನ್ ಸ್ಟಾಪ್ ಶಿಳ್ಳೆ, ಚಪ್ಪಾಳೆಗಳ ಸುರಿಮಳೆಯಾಯಿತು. ಸಿಂಪಲ್ಲಾಗಿ ಕುರ್ತಾ ಧರಿಸಿ ಬಂದಿದ್ದ ಅವರು ಎಲ್ಲರ ಗಮನ ಸೆಳೆದರು. ಯಶ್ ವೇದಿಕೆ ಬರುತ್ತಿದ್ದಂತೆ, ಅವರನ್ನು ಮಾತನಾಡಲು ಬಿಡದೆ ಯುವಜನತೆ ಸೌಂಡ್ ಹೆಚ್ಚಿಸಿ, ಕುಣಿದು ಕುಪ್ಪಳಿಸಿದರು.

    ಈ ವೇಳೆ ಮಾತನಾಡಿದ ಅವರು, ನಾನು ಹುಡುಗನಾಗಿದ್ದಾಗ ಇದೇ ಯುವ ದಸರಾದ ಪಾಸ್ ಬೇಕು ಎಂದು ಕೇಳಿಕೊಳ್ಳುತ್ತಿದ್ದೆ. ಆದರೆ ಇಂದು ಇದೇ ವೇದಿಕೆಯ ಮೇಲೆ ನಿಂತಿದ್ದೇನೆ. ಇದಕ್ಕೆಲ್ಲ ನಿಮ್ಮ ಪ್ರೀತಿ, ಪ್ರೋತ್ಸಾಹವೇ ಕಾರಣ. ನನಗೆ ಮೈಸೂರಿಗೆ ಬರುವುದೆಂದರೆ ತುಂಬಾ ಖುಷಿ. ಸಾಕಷ್ಟು ಊರು, ದೇಶ ನೋಡಿದ್ದೇನೆ, ಆದರೆ ಮೈಸೂರಂತ ಊರನ್ನು ಎಲ್ಲಿಯೂ ಇಲ್ಲ. ನನಗೆ ಮೈಸೂರಿಗೆ ಬಂದ್ರೆ ನನ್ನ ಹಳೆಯ ನೆನಪುಗಳು ಕಣ್ಣ ಮುಂದೆ ಬರುತ್ತವೆ ಎಂದು ತಮ್ಮ ಸಂತೋಷ ಹಂಚಿಕೊಂಡರು.

    ನನ್ನ ಹೆಂಡತಿಗೆ ಯಾವಾಗಲೂ ನಮ್ಮೂರು ದಸರಾದಲ್ಲಿ ಸಿಂಗಾರಗೊಂಡಿರುತ್ತೆ ಅಂತಾ ಹೇಳುತ್ತಿದ್ದೆ. ಅಂತ ದಸರಾದಲ್ಲಿ ಭಾಗಿಯಾಗಿರುವುದಕ್ಕೆ ತುಂಬಾ ಖುಷಿಯಾಗಿದೆ. ಈ ಬಾರಿಯ ದಸರಾ ಅದ್ಧೂರಿಯಾಗಿದೆ. ಎಲ್ಲಾ ವ್ಯವಸ್ಥೆ ಸೂಪರ್. ಸಚಿವರಾದ ಸಾ.ರಾ.ಮಹೇಶ್‍ರವರು 6 ತಿಂಗಳ ಮೊದಲೇ ನನಗೆ ಬನ್ನಿ ಎಂದು ಆಹ್ವಾನ ಮಾಡಿದ್ದರು. ನಮ್ಮದೇ ಸರ್ಕಾರ ಬರುತ್ತೆ ಎಂದೂ ಹೇಳಿದ್ದರು ಎಂದು ವಿವರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸುರಿಯುತ್ತಿದ್ದ ಮಳೆಯಲ್ಲೂ ಯುವ ದಸರಾದಲ್ಲಿ ವಿದ್ಯಾರ್ಥಿಗಳ ಮಸ್ತ್ ಮಸ್ತ್ ಡ್ಯಾನ್ಸ್

    ಸುರಿಯುತ್ತಿದ್ದ ಮಳೆಯಲ್ಲೂ ಯುವ ದಸರಾದಲ್ಲಿ ವಿದ್ಯಾರ್ಥಿಗಳ ಮಸ್ತ್ ಮಸ್ತ್ ಡ್ಯಾನ್ಸ್

    ಮೈಸೂರು: ಸಂಡೇಯ ರಜೆಯಲ್ಲಿ ಫುಲ್ ಎಂಜಾಯ್ ಮಾಡಬೇಕು ಅನ್ನೋರಿಗೆ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಯುವ ದಸರಾ ಅಕ್ಷರಶಃ ರಾತ್ರಿ ಮನರಂಜನೆಯ ಔತಣವನ್ನೆ ಉಣ ಬಡಿಸಿತು. ಸುರಿಯುತ್ತಿದ್ದ ಮಳೆಯಲ್ಲೂ ಯುವ ದಸರಾದಲ್ಲಿ ವಿದ್ಯಾರ್ಥಿಗಳು ಮಸ್ತ್ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ.

    ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮ ರಾತ್ರಿ ಅಕ್ಷರಶಃ ಸಂಗೀತದ ಕಂಪು ಸೂಸಿತ್ತು. ಈ ಸಂಗೀತ ಕಂಪಿಗೆ ಖ್ಯಾತ ಹಿನ್ನೆಲೆ ಗಾಯಕರಾದ ಎಸ್.ಪಿ ಬಾಲಸುಬ್ರಹ್ಮಣ್ಯಂ ಹಾಗೂ ಅರ್ಮಾನ್ ಮಲ್ಲಿಕ್ ಕಾರಣರಾದರು. ವೇದಿಕೆಗೆ ಎಂಟ್ರಿ ಕೊಟ್ಟಾಗಿನಿಂದ ಕನ್ನಡ ಹಿಂದಿ ಚಲನಚಿತ್ರಗಳ ಮೆಲೋಡಿ ಹಾಡುಗಳನ್ನು ಪ್ರಸ್ತುತ ಪಡಿಸಿದರು.

    ಇಬ್ಬರು ಘಟಾನುಘಟಿ ಗಾಯಕರ ಕಂಠಸಿರಿಗೆ ಯುವ ಜನತೆ ಶಿಳ್ಳೆ ಚಪ್ಪಾಳೆ ಹೊಡೆದು ಕುಣಿದು ಕುಪ್ಪಳಿಸಿದರು. ವೇದಿಕೆಯ ಹೊರ ಭಾಗದಲ್ಲಿ ತುಂತುರು ಮಳೆ ಬರುತ್ತಿದ್ದರು, ಕೂಡ ಸಂಗೀತ ಮಾಂತ್ರಿಕನ ಹಾಡಿಗೆ ತಮ್ಮನ್ನೇ ತಾವು ಮರೆತರು. ಇವರಷ್ಟೇ ಅಲ್ಲ ಗಾಯಕಿ ಅನುರಾಧ ಭಟ್ ಧ್ವನಿಯಲ್ಲಿ ಮೂಡಿ ಬಂದ ‘ಅಪ್ಪ ಐ ಲವ್ ಯು ಪಾ’ ಹಾಡಿಗಂತು ಜನ ಚಪ್ಪಾಳೆ ತಟ್ಟಿ ಹುರಿದುಂಬಿಸಿದರು.

    ಇದಕ್ಕೂ ಮೊದಲು ನಡೆದ ಕಾಲೇಜು ವಿದ್ಯಾರ್ಥಿಗಳ ನೃತ್ಯ ಕಾರ್ಯಕ್ರಮ ಎಲ್ಲರನ್ನು ಕೈ ಕಾಲು ಕುಣಿಸುವಂತೆ ಮಾಡಿತು. ಇದಾದ ಬಳಿಕ ವೇದಿಕೆ ಮೇಲೆ ನಾರಿ ಮಣಿಯರ ರ‍್ಯಾಂಪ್‍ ವಾಕ್ ಪಡ್ಡೆ ಹೈಕಳನ್ನು ನಿದ್ದೆ ಕೆಡಿಸಿತು. ಅರಮನೆ ಆವರಣದಲ್ಲಿ ಪೊಲೀಸ್ ಬ್ಯಾಂಡ್ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. 500ಕ್ಕೂ ಹೆಚ್ಚು ಕಲಾವಿದರು 38 ಪೊಲೀಸ್ ಬ್ಯಾಂಡ್ ತಂಡಗಳು ವಿವಿಧ ರಚನೆಯ ಗೀತೆಗಳನ್ನು ನುಡಿಸಿದರು. ಕರ್ನಾಟಕ ಶಾಸ್ತ್ರೀಯ ವಾಂದ್ಯ ವೃಂದ ಹಾಗೂ ಇಂಗ್ಲೀಷ್ ಬ್ಯಾಂಡ್ ನಡುವಿನ ಜುಗಲ್ ಬಂದಿ ಸಂಗೀತಾಸಕ್ತರಿಗೆ ಮುದ ನೀಡಿತು.

    ಸದ್ಯ ದಿನಕ್ಕೊಂದು ಕಾರ್ಯಕ್ರಮ ದಸರಾ ಮಹೋತ್ಸವದ ರಂಗು ಹೆಚ್ಚಿಸುತ್ತಿದೆ. ಇಂದು ಕೂಡ ವಿವಿಧ ಕಾರ್ಯಕ್ರಮಗಳು ಸಾಂಸ್ಕೃತಿಕ ನಗರಿಯಲ್ಲಿ ಮೇಳೈಸಲಿದೆ.

    ದಸರಾ ಇಂದಿನ ಕಾರ್ಯಕ್ರಮಗಳು (15.10.2018)

    1. ಬೆಳಗ್ಗೆ 9 ಕ್ಕೆ ದಸರಾ ದರ್ಶನ. ಸ್ಥಳ : ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗ
    2. ಬೆಳಗ್ಗೆ 11 ಕ್ಕೆ ಜಾನಪದ ಸಿರಿ. ಸ್ಥಳ : ಜೆಕೆ ಮೈದಾನ
    3. ಅರಮನೆ ವೇದಿಕೆ : ಶ್ರೀ ವಿದ್ಯಾಭೂಷಣ ಅವರಿಂದ ಸಂಗೀತ ಕಾರ್ಯಕ್ರಮ. ರಾತ್ರಿ 8.30 ಕ್ಕೆ
    4. ಮಹಿಳಾ ದಸರಾ : ಮಂಗಳ ಮುಖಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ. ಮಧ್ಯಾಹ್ನ 3 ಕ್ಕೆ
    5. ಯುವ ದಸರಾ : ಸ್ಯಾಂಡಲ್‍ವುಡ್ ನಟ – ನಟಿಯರಿಂದ ಕಾರ್ಯಕ್ರಮ. ರಾತ್ರಿ 8 ಕ್ಕೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv