Tag: ಯುವ

  • ‘ಯುವ’ ಚಿತ್ರದ ಪ್ರೀ ರಿಲೀಸ್ ಇವೆಂಟ್: ಫೋಟೋ ಗ್ಯಾಲರಿ

    ‘ಯುವ’ ಚಿತ್ರದ ಪ್ರೀ ರಿಲೀಸ್ ಇವೆಂಟ್: ಫೋಟೋ ಗ್ಯಾಲರಿ

    ರಾಜಕುಮಾರ, ಕೆಜಿಎಫ್, ಕಾಂತಾರದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ ‘ಯುವ’ (Yuva) ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ (Yuvaraj Kumar) ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.

    ಹೊಸಪೇಟೆಯ ಪುನೀತ್ ರಾಜಕುಮಾರ್ ಮೈದಾನದಲ್ಲಿ ಅದ್ದೂರಿಯಾಗಿ ಈ ವರ್ಣರಂಜಿತ ಸಮಾರಂಭ ನಡೆಯಿತು.  ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್, ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಷ್ ಆನಂದರಾಮ್, ನಾಯಕ ಯುವ ರಾಜಕುಮಾರ್, ಚಿತ್ರದಲ್ಲಿ ನಟಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಹಿತ, ಗಿರಿರಾಜ್, ರಾಘು ಶಿವಮೊಗ್ಗ ಮುಂತಾದವರು ಭಾಗವಹಿಸಿದ್ದರು. ಚಿತ್ರದ ಅನೇಕ ತಂತ್ರಜ್ಞರು ಸಹ ಉಪಸ್ಥಿತರಿದ್ದರು.

    ಯುವ ಚಿತ್ರ ಆಗಲು ಅಶ್ವಿನಿ ಪುನೀತ್ ರಾಜಕುಮಾರ್ ಅವರೆ ಕಾರಣ.‌ ಅವರು ವಿಜಯ್ ಕಿರಗಂದೂರ್ ಅವರಿಗೆ ಫೋನ್ ಮಾಡಿ ನಮ್ಮ ಗುರು(ಯುವ ರಾಜಕುಮಾರ್) ವನ್ನು ನಿಮ್ಮ ಸಂಸ್ಥೆಯ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿಸಿ ಎಂದರು. ವಿಜಯ್ ಕಿರಗಂದೂರ್ ಅವರು ಒಪ್ಪಿ ಈ ಚಿತ್ರ ನಿರ್ಮಾಣ ಮಾಡಿದರು. ಯುವ  ರಾಜಕುಮಾರ್ ಕೂಡ ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ಯುವ ಅವರು ಓಡುವ ಸನ್ನಿವೇಶವನ್ನು ಚಿತ್ರದ ಮೊದಲ ಸನ್ನಿವೇಶವಾಗಿ ಚಿತ್ರಿಸಿಕೊಳ್ಳಲಾಗಿದೆ. ಕಾರಣ, ಯುವ ಅವರು ಯಾವಾಗಲೂ ಚಿತ್ರರಂಗದಲ್ಲಿ ಓಡುವ ಕುದುರೆಯಾಗಿರಲಿ ಎಂದು. ಇನ್ನು ನನ್ನ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ. ಇದೇ ಮಾರ್ಚ್ 29 ರಂದು ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಬಂದು ಚಿತ್ರ ನೋಡಿ ಪ್ರೋತ್ಸಾಹಿಸಿ. ಈ ಸಂದರ್ಭದಲ್ಲಿ ನಾನು ನಿರ್ಮಾಪಕ ವಿಜಯ್ ಕಿರಗಂದೂರ್ ಅವರಿಗೆ, ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ, ನನ್ನ ತಂಡಕ್ಕೆ ಹಾಗೂ ವಿಶೇಷವಾಗಿ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

    ನಾನು ಮೊದಲು ನನ್ನ‌ ಚಿಕ್ಕಪ್ಪ ಪುನೀತ್ ರಾಜಕುಮಾರ್ ಹಾಗೂ ಚಿಕ್ಕಮ್ಮ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮಾತನಾಡಿದ ಯುವ ರಾಜಕುಮಾರ್, ಏಕೆಂದರೆ ನನ್ನನ್ನು ನಾಯಕನನ್ನಾಗಿ ಮಾಡಿ ಎಂದು ಅವರಿಬ್ಬರು ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಸರ್ ಗೆ ಹೇಳಿದ್ದಾರೆ. ಅವರಿಂದಲೇ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರದಲ್ಲಿ ನಟಿಸಲು ಸಾಧ್ಯವಾಗಿದೆ. ನಿರ್ಮಾಪಕರಾದ ವಿಜಯ್ ಕಿರಗಂದೂರ್ ಹಾಗೂ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ನಾನು ಚಿರ ಋಣಿ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಹಿರಿಯ ನಟರಾದ ಅಚ್ಯುತಕುಮಾರ್, ಸುಧಾರಾಣಿ ಮುಂತಾದವರಿಂದ ಸಾಕಷ್ಟು ಕಲಿತಿದ್ದೇನೆ‌. ನಾಯಕಿಯಾಗಿ ಸಪ್ತಮಿ ಗೌಡ ಅಭಿನಯಿಸಿದ್ದಾರೆ. ಇಡೀ ತಂಡದ ಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ. ನನ್ನ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು.

    ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್ ಮುಂತಾದವರು ಯುವ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಈ ಸಮಾರಂಭದಲ್ಲಿ ಕರ್ನಾಟಕದ ಹೆಸರಾಂತ ಕಲಾವಿದರ ಗಾಯನ, ನೃತ್ಯ ಮುಂತಾದ ಮನೋರಂಜನಾ ಕಾರ್ಯಕ್ರಮಗಳು ಸಹ ಅದ್ಭುತವಾಗಿ ಮೂಡಿಬಂತು.

  • ‘ಬೊಂಬೆ ಹೇಳುತೈತೆ’ ಸಾಂಗ್ ಕೇಳುತ್ತಿದ್ದಂತೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಕಣ್ಣೀರು

    ‘ಬೊಂಬೆ ಹೇಳುತೈತೆ’ ಸಾಂಗ್ ಕೇಳುತ್ತಿದ್ದಂತೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಕಣ್ಣೀರು

    ದೊಡ್ಮನೆ ಕುಡಿ ಯುವರಾಜ್‌ಕುಮಾರ್ ಅವರು ‘ಯುವ’ (Yuva) ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಇದೇ ಮಾರ್ಚ್ 29ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಮಾ.23ರಂದು ಹೊಸಪೇಟೆಯಲ್ಲಿ ಯುವ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಈ ವೇಳೆ, ಬೊಂಬೆ ಹೇಳುತೈತೆ ಸಾಂಗ್ ಕೇಳಿ ಪುನೀತ್ ಪತ್ನಿ ಅಶ್ವಿನಿ ಕಣ್ಣೀರಿಟ್ಟಿದ್ದಾರೆ.

    ಗಾಯಕ ವಿಜಯ್ ಪ್ರಕಾಶ್ ಅವರು ‘ರಾಜಕುಮಾರ’ ಸಿನಿಮಾದ ‘ಬೊಂಬೆ ಹೇಳುತೈತೆ’ ಹಾಡು ಹಾಡುತ್ತಿದ್ದ ವೇಳೆ ವೇದಿಕೆ ಎದುರಿಗೆ ಕೂತಿದ್ದ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಬಳಿಕ ವೇದಿಕೆಯಲ್ಲಿ ಅವರು ಮಾತು ಆರಂಭಿಸುತ್ತಿದ್ದಂತೆಯೇ ಅಭಿಮಾನಿಗಳ ಅಪ್ಪು ಜಯಘೋಷ ಮುಗಿಲು ಮುಟ್ಟಿದೆ. ನಂತರ ಮಾತನಾಡಿದ ಅಶ್ವಿನಿ (Ashwini Puneethrajkumar) ಅವರು, ‘ಯುವ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಹಾರೈಸಿದ್ದಾರೆ. ಯುವ ಹೊಸ ಜರ್ನಿಗೆ ಶುಭಹಾರೈಸಿದ್ದಾರೆ.

    ಇನ್ನೂ ಇದೇ ವೇಳೆ, ಯುವ ಸಿನಿಮಾ ಶುರುವಾಗಿದ್ದು ಹೇಗೆ ಎಂದು ನಿರ್ದೇಶಕ ಸಂತೋಷ್ ಆನಂದ್‌ರಾಮ್ ರಿವೀಲ್ ಮಾಡಿದ್ದಾರೆ. ಅಶ್ವಿನಿ ಅವರು ಯುವನನ್ನು ವಿಜಯ್ ಕಿರಗಂದೂರು ಲಾಂಚ್ ಮಾಡಬೇಕು ಎಂದು ಹೇಳುತ್ತಾರೆ. ಆ ನಂತರ ವಿಜಯ್ ಅವರು ನನಗೆ ತಿಳಿಸಿದ್ದರು. ನೀನು ಯುವನನ್ನು ಲಾಂಚ್ ಮಾಡಬೇಕು ಅಂತ. ಅಂದಿನ ಒಂದು ಫೋನ್ ಕರೆ ಇವತ್ತು ಇಲ್ಲಿವರೆಗೂ ಕರೆದುಕೊಂಡು ಬಂದಿದೆ. ವಿಜಯ್ ಕಿರಗಂದೂರು ಸರ್ ಕೂಡ ಒಂದೇ ಮಾತು ಹೇಳಿದ್ದು, ಗುರು (ಯುವ) ಲಾಂಚ್ ಮಾಡುವುದು ಒಂದು ಜವಾಬ್ದಾರಿಯಾಗಿ ತೆಗೆದುಕೊಳ್ಳಬೇಕು. ನಾವು ಸಿನಿಮಾವನ್ನು ನಿಲ್ಲಿಸಬೇಕು ಅಂತ ಹೇಳಿರೋದನ್ನು ಸ್ಮರಿಸಿದ್ದರು. ಇದನ್ನೂ ಓದಿ:ಬಾಲಿವುಡ್‌ನಲ್ಲಿ ರಿಮೇಕ್ ಆಗಲಿದೆ ‘ಉಪ್ಪೇನಾ’ ಚಿತ್ರ- ನಾಯಕಿ ಯಾರು?

    ಅಂದಹಾಗೆ, ಯುವಗೆ ಜೋಡಿಯಾಗಿ ಸಪ್ತಮಿ ಗೌಡ (Sapthami Gowda) ನಟಿಸಿದ್ದಾರೆ. ಚಿತ್ರದಲ್ಲಿ ಅಚ್ಯುತ್ ಕುಮಾರ್, ಸುಧಾರಾಣಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಯುವ ಚಿತ್ರದ ಹಾಡು, ಟ್ರೈಲರ್ ಸಿಕ್ಕಾಪಟ್ಟೆ ಮೋಡಿ ಮಾಡಿದೆ. ರಿಲೀಸ್‌ಗೆ ಅಭಿಮಾನಿಗಳು ಕಾಯುತ್ತಿದ್ದಾರೆ.

  • ನಮ್ಮ ಚಿಕ್ಕಪ್ಪ ಇಲ್ಲೇ ಇದ್ದಾರೆ, ನನ್ನ ಶಕ್ತಿಯಾಗಿ ನಿಂತಿದ್ದಾರೆ- ‘ಯುವ’ ಭಾವುಕ

    ನಮ್ಮ ಚಿಕ್ಕಪ್ಪ ಇಲ್ಲೇ ಇದ್ದಾರೆ, ನನ್ನ ಶಕ್ತಿಯಾಗಿ ನಿಂತಿದ್ದಾರೆ- ‘ಯುವ’ ಭಾವುಕ

    ‘ಯುವ’ (Yuva) ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ಹೊಸೆಪೇಟೆಯಲ್ಲಿ ಅದ್ಧೂರಿಯಾಗಿ ನಡೆದಿದೆ. ‘ಯುವ’ ಸಿನಿಮಾದ ಇವೆಂಟ್‌ನಲ್ಲಿ ನಾನು ಹೋದ ಕಡೆಯೆಲ್ಲಾ ಅಪ್ಪು ಮಗ ಬಂದ ಅಂತ ಕರೆಯುತ್ತಾರೆ ಎಂದು ಅಪ್ಪುರನ್ನು (Puneeth Rajkumar)  ಸ್ಮರಿಸಿ ಯುವರಾಜ್‌ಕುಮಾರ್ ಭಾವುಕರಾಗಿದ್ದಾರೆ.

    ‘ಯುವ’ ಚಿತ್ರದ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್‌ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಇಡೀ ಕುಟುಂಬ ಹಾಜರಿ ಹಾಕುವ ಮೂಲಕ ಸಾಥ್ ನೀಡಿದ್ದರು. ಯುವರಾಜ್‌ಕುಮಾರ್ ಅಪ್ಪುಗೆ ಮಗನಿದ್ದಂತೆ, ‘ಯುವ’ ಅಪ್ಪು ಮಗನೇ ಎಂದು ರಾಘಣ್ಣ (Raghavendra Rajkumar) ಭಾವುಕರಾದರು. ರಾಘಣ್ಣ ಮಾತಿಗೆ ಹೊಸಪೇಟೆ ಜನತೆ ಖುಷಿಪಟ್ಟರು.

    ನಮ್ಮ ತಂದೆನೇ ಹೇಳಿಬಿಟ್ರು ಅಪ್ಪು ಮಗ ಅಂತ. ನಾನು ಎಲ್ಲೇ ಹೋದರೂ ಜನ ಅಪ್ಪು ಮಗ ಬಂದ. ಅಪ್ಪು ಮಗ ಬಂದ ಅಂತ ಹೇಳುತ್ತಾರೆ. ನನಗೆ ಎಷ್ಟು ಸಂತೋಷ ಆಗುತ್ತದೆ ಗೊತ್ತಾ? ಎಂದು ಯುವ ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ಚಿಕ್ಕಪ್ಪ ಇಲ್ಲೇ ಇದ್ದಾರೆ. ಅವರು ನನ್ನ ಶಕ್ತಿಯಾಗಿ ನನ್ನ ಜೊತೆ ನಿಂತಿದ್ದಾರೆ. ಅವರು ನನ್ನ ಕೈ ಹಿಡಿದು ನಡೆಸುತ್ತಿದ್ದಾರೆ. ಇಲ್ಲಿವರೆಗೂ ಕರೆದುಕೊಂಡು ಬಂದು ನಿಮ್ಮ ಮಡಿಲಿಗೆ ಹಾಕಿದ್ದಾರೆ. ಇನ್ಮುಂದೆ ನೀವು ಹೇಗೆ ಹೇಳ್ತಿರೋ ಹಾಗೆ ಎಂದು ಯುವ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

    ಸುಮಾರು ಜನ ಹೇಳುತ್ತಾರೆ. ಏನು ರಾಜ್‌ಕುಮಾರ್ ಕುಟುಂಬ. ಅವರಿಗೇನು ಎಲ್ಲಾ ಸುಲಭ. ಯಾಕೆ ಓದುತ್ತಾರೆ? ಸುಮ್ಮನೆ ಅವರ ತಂದೆ ತಾಯಿ ಹೆಸರು ಕೇಳಿದರೆ ಸಾಕು ಸಿನಿಮಾಗೆ ಬರುತ್ತಾರೆ ಅಂತ. ಆದರೆ, ಅದು ಅಷ್ಟು ಈಸಿಯಾಗಿಲ್ಲ. ನನ್ನ ಸುಮಾರು ವರ್ಷದ ಕನಸು ನಾನು ಇಲ್ಲಿ ಬಂದು ನಿಲ್ಲಬೇಕು ಅಂತ. ಚಿಕ್ಕ ವಯಸ್ಸಿನಿಂದಲೇ ಎಲ್ಲರೂ ಡಿಸೈಡ್ ಮಾಡಿಬಿಟ್ಟರು. ನೀನು ಆ್ಯಕ್ಟರ್ ಆಗ್ತೀಯಾ ಅಂತ. ನನಗೆ ಎಲ್ಲರೂ ನನ್ನ ಫ್ಯೂಚರ್ ಡಿಸೈಡ್ ಮಾಡ್ತಿದ್ದಾರೆ ಅಂದ್ರೆ, ನಾನೇನು ಮಾಡಲಿ. ನನ್ನ ಆಸೆಯೇನು? ಅದಕ್ಕೆ ನಾನು ಸಿನಿಮಾ ಚಿತ್ರರಂಗವೇ ಬೇಡ ಅಂದೆ. ಆದರೆ, ನನ್ನ ಮನಸ್ಸಿನಲ್ಲಿ ಸಿನಿ ಚಿತ್ರರಂಗಕ್ಕೆ ಬರಬೇಕು ಅನ್ನೋ ಆಸೆಯಿತ್ತು ಎಂದಿದ್ದಾರೆ. ನನ್ನ ಆಸೆ ನಾನು ಬಿಡಲ್ಲ. ಕಷ್ಟಪಟ್ಟು ಪ್ರಾಕ್ಟೀಸ್ ಮಾಡಿದೆ ಎಂದು ಯುವ ಮಾತನಾಡಿದ್ದಾರೆ.

     

    View this post on Instagram

     

    A post shared by Hombale Films (@hombalefilms)

    ನಿಮ್ಮ ಮುಂದೆ ಬಂದು ನಿಲ್ಲಬೇಕು ಅಂದರೆ, ಏನಾದ್ರೂ ಒಂದು ಕಾನ್ಫಿಡೆನ್ಸ್ ಇರಬೇಕಲ್ವಾ? ಏನೂ ಮಾಡದೇ ಏನು ಬಂದು ಕಿತ್ತಾಕ್ಲಿ ಇಲ್ಲಿ? ನೀವು ಬಂದು ಕೇಳಲ್ವಾ? ನಿಮಗೆ ಹಕ್ಕಿಲ್ವಾ? ಇವತ್ತು ನಮ್ಮ ಇಡೀ ಮನೆ. ಇಡೀ ಕುಟುಂಬ ನಡೆಯುತ್ತಿರೋದೇ ನಿಮ್ಮಿಂದ. ಇದು ಸತ್ಯವಾದ ಮಾತು. ನಿಮ್ಮೆಲ್ಲರಿಗೂ ಗೊತ್ತು, ನನಗೆ ಬೇರೆ ಕೆಲಸ ಇಲ್ಲ. ನಮಗೆ ಗೊತ್ತಿರೋದೇ ಸಿನಿಮಾ. ನಿಮ್ಮೆಲ್ಲರಿಗೆ ಸಂತೋಷ ಹಾಗೂ ಪ್ರೀತಿ ಕೊಡುವುದೇ ಜವಾಬ್ದಾರಿ ಎಂದು ಯುವ ಹೇಳಿದ್ದಾರೆ.

    ನಮ್ಮ ಚಿಕ್ಕಪ್ಪ ಯಾವಾಗಲೋ ಹೇಳಿದ್ರಂತೆ ವಿಜಯ್ ಕಿರಗಂದೂರು ಸರ್‌ಗೆ ನೀವು ಗುರು ಸಿನಿಮಾ ಮಾಡಬೇಕು ಅಂತ. ಆ ಮೇಲೆ ನಮ್ಮ ಆಂಟಿ ಹೇಳಿದ್ರು. ನೀವೇ ಗುರುನಾ ಲಾಂಚ್ ಮಾಡಬೇಕು ಅಂತ. ಆ ಮೇಲೆ ಎಷ್ಟೋ ಜನ ಸಂತೋಷ್ ಸರ್‌ಗೆ ನೀವು `ಯುವ’ ಜೊತೆ ಸಿನಿಮಾ ಮಾಡಿ ಅಂತ. ಅದು ನನಗೆ ಗೊತ್ತು. ಈ ಸಿನಿಮಾ ಆಗಿದ್ದೇ ನಿಮ್ಮಿಂದ. ನೀವೇ ಕರೆದುಕೊಂಡು ಬಂದಿದ್ದೀರ. ನೀವೇ ನಿಲ್ಲಿಸಿದ್ದೀರ. ಇಲ್ಲಿಂದ ನೀವು ಹೇಗೆ ಕರಕೊಂಡು ಹೋಗ್ತೀರಾ ಅದು ನಿಮಗೆ ಬಿಟ್ಟಿದ್ದು, ನನಗೆ ದಾರಿ ಕಾಣದೇ ಇರುವ ಸಂದರ್ಭದಲ್ಲಿ ಹೊಂಬಾಳೆ ಸಂಸ್ಥೆ ಸಾಥ್ ನೀಡಿದ್ದಾರೆ ಎಂದು ಯುವ ರಾಜ್‌ಕುಮಾರ್ (Yuva Rajkumar) ಮಾತನಾಡಿದ್ದಾರೆ.

    ಅಂದಹಾಗೆ, ‘ಯುವ’ ಸಿನಿಮಾ ಇದೇ ಮಾರ್ಚ್ 29ಕ್ಕೆ ರಿಲೀಸ್ ಆಗುತ್ತಿದೆ. ಯುವಗೆ ನಾಯಕಿಯಾಗಿ ಕಾಂತಾರ ಬೆಡಗಿ ಸಪ್ತಮಿ ಗೌಡ ನಟಿಸಿದ್ದಾರೆ. ಚಿತ್ರದಲ್ಲಿ ಸುಧಾರಾಣಿ, ಅಚ್ಯುತ್ ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ.

  • ಹೊಸಪೇಟೆಯಲ್ಲಿ ‘ಯುವ’ ಪ್ರಿ ರಿಲೀಸ್ ಇವೆಂಟ್: ಚಿತ್ರರಂಗ ಭಾಗಿ

    ಹೊಸಪೇಟೆಯಲ್ಲಿ ‘ಯುವ’ ಪ್ರಿ ರಿಲೀಸ್ ಇವೆಂಟ್: ಚಿತ್ರರಂಗ ಭಾಗಿ

    ಯುವ ರಾಜ್ ಕುಮಾರ್ ನಟನೆಯ, ಸಂತೋಷ್ ಆನಂದ್ ರಾವ್ ನಿರ್ದೇಶನದ ‘ಯುವ’ ಚಿತ್ರದ ಪ್ರಿ ರಿಲೀಸ್ ಇವೆಂಟ್ (Pre Release Event) ನಾಳೆ ಸಂಜೆ ಹೊಸಪೇಟೆಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಅದಕ್ಕಾಗಿ ಸರ್ವ ಸಿದ್ಧತೆಯನ್ನೂ ಮಾಡಿಕೊಂಡಿದೆ. ಕನ್ನಡ ಸಿನಿಮಾ ರಂಗದ ಅನೇಕ ತಾರೆಯರು ಈ ಇವೆಂಟ್ ನಲ್ಲಿ ಭಾಗಿ ಆಗುತ್ತಿದ್ದು, ರಸಮಂಜರಿ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ.

    ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್, ರಿಷಬ್ ಶೆಟ್ಟಿ, ಸಪ್ತಮಿ ಗೌಡ ಸೇರಿದಂತೆ ಅನೇಕ ನಟ ನಟಿಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದು, ವಿಜಯ ಪ್ರಕಾಶ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಾವಿರಾರು ಅಭಿಮಾನಿಗಳು ಭಾಗಿಯಾಗಲಿದ್ದಾರೆ.

    ನಾನಾ ಕಾರಣಗಳಿಂದಾಗಿ ಯುವ ಸಿನಿಮಾ ಕುತೂಹಲ ಮೂಡಿಸಿದೆ. ನಿನ್ನೆಯಷ್ಟೇ ಮಧ್ಯಾಹ್ನ 1 ಗಂಟೆ 1 ನಿಮಿಷಕ್ಕೆ ಯುವ ಸಿನಿಮಾದ ಟ್ರೈಲರ್ (Trailer) ಬಿಡುಗಡೆ ಮಾಡಿದೆ ಹೊಂಬಾಳೆ ಫಿಲ್ಮ್ಸ್. ಇಡೀ ಟ್ರೈಲರ್ ತುಂಬಾ ಯುವರಾಜ್ ಕುಮಾರ್ ಆರ್ಭಟ, ಅಪ್ಪ-ಮಗನ ಸೆಂಟಿಮೆಂಟ್ ಮತ್ತು ಕಾಲೇಜು ಗುದ್ದಾಟಗಳನ್ನು ಕಾಣಬಹುದಾಗಿದೆ. ಮೇಲ್ನೋಟಕ್ಕೆ ಇದೊಂದು ನಾರ್ಮಲ್ ಕಥೆ ಅಂತ ಅನಿಸುತ್ತಿದ್ದರೂ, ಅದನ್ನು ಹೇಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನುವ ಕುತೂಹಲವಂತೂ ಇದ್ದೇ ಇದೆ. ಒಂದು ರೀತಿಯಲ್ಲಿ ಟ್ರೈಲರ್ ತುಂಬಾ ತುಂಬಿಕೊಂಡಿದ್ದಾರೆ ಯುವರಾಜ್ ಕುಮಾರ್. ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಯುವ (Yuva) ಸಿನಿಮಾದ ಬಿಡುಗಡೆಗಡೆ ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ ಚಿತ್ರತಂಡ. ಈ ಸಿನಿಮಾದ ಮೂಲಕ ಯುವರಾಜ್ ಕುಮಾರ್ (Yuvraj Kumar) ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಹಾಗಾಗಿ ಅದ್ಧೂರಿಯಾಗಿಯೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಯುವ ಸಿನಿಮಾದ ಟ್ರೈಲರ್ (Trailer) ಈಗಾಗಲೇ ರಿಲೀಸ್ ಆಗಿದೆ.

     

    ಯುವ ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ – ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನು ನಿರೀಕ್ಷಿಸುವುದಿಲ್ಲ. ಕುಟುಂಬದಲ್ಲಿ ಅಪ್ಪನ ಪಾತ್ರ ಬಹಳ ದೊಡ್ಡದು. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ನಮ್ಮ ಚಿತ್ರದ ‘ಅಪ್ಪುಗೆ’ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು.

  • ‘ಯುವ’ ಟ್ರೈಲರ್ ರಿಲೀಸ್: ಪಕ್ಕಾ ಲೋಕಲ್ ಎಂದು ಅಬ್ಬರಿಸಿದ ಯುವರಾಜ್

    ‘ಯುವ’ ಟ್ರೈಲರ್ ರಿಲೀಸ್: ಪಕ್ಕಾ ಲೋಕಲ್ ಎಂದು ಅಬ್ಬರಿಸಿದ ಯುವರಾಜ್

    ಅಂದುಕೊಂಡಂತೆ ಇಂದು ಮಧ್ಯಾಹ್ನ 1 ಗಂಟೆ 1 ನಿಮಿಷಕ್ಕೆ ಯುವ ಸಿನಿಮಾದ ಟ್ರೈಲರ್ (Trailer) ಬಿಡುಗಡೆ ಮಾಡಿದ ಹೊಂಬಾಳೆ ಫಿಲ್ಮ್ಸ್. ಇಡೀ ಟ್ರೈಲರ್ ತುಂಬಾ ಯುವರಾಜ್ ಕುಮಾರ್ ಆರ್ಭಟ, ಅಪ್ಪ-ಮಗನ ಸೆಂಟಿಮೆಂಟ್ ಮತ್ತು ಕಾಲೇಜು ಗುದ್ದಾಟಗಳನ್ನು ಕಾಣಬಹುದಾಗಿದೆ. ಮೇಲ್ನೋಟಕ್ಕೆ ಇದೊಂದು ನಾರ್ಮಲ್ ಕಥೆ ಅಂತ ಅನಿಸುತ್ತಿದ್ದರೂ, ಅದನ್ನು ಹೇಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನುವ ಕುತೂಹಲವಂತೂ ಇದ್ದೇ ಇದೆ. ಒಂದು ರೀತಿಯಲ್ಲಿ ಟ್ರೈಲರ್ ತುಂಬಾ ತುಂಬಿಕೊಂಡಿದ್ದಾರೆ ಯುವರಾಜ್ ಕುಮಾರ್.

    ಯುವ (Yuva) ಸಿನಿಮಾದ ಬಿಡುಗಡೆಗಡೆ ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ ಚಿತ್ರತಂಡ. ಈ ಸಿನಿಮಾದ ಮೂಲಕ ಯುವರಾಜ್ ಕುಮಾರ್ (Yuvraj Kumar) ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಹಾಗಾಗಿ ಅದ್ಧೂರಿಯಾಗಿಯೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಯುವ ಸಿನಿಮಾದ ಟ್ರೈಲರ್ (Trailer) ಈಗಾಗಲೇ ರಿಲೀಸ್ ಆಗಿದೆ. ಪ್ರಿರಿಲೀಸ್ ಇವೆಂಟ್ ಮತ್ತು ಚಿತ್ರ ರಿಲೀಸ್ ಕುರಿತಂತೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

    ಯುವ ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ – ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನು ನಿರೀಕ್ಷಿಸುವುದಿಲ್ಲ. ಕುಟುಂಬದಲ್ಲಿ ಅಪ್ಪನ ಪಾತ್ರ ಬಹಳ ದೊಡ್ಡದು. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ನಮ್ಮ ಚಿತ್ರದ ‘ಅಪ್ಪುಗೆ’ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

    ಅಪ್ಪನ ಕುರಿತಾದ ಹಾಡಾಗಿರುವುದರಿಂದ ಈ ಹಾಡನ್ನು ವಂದಿತ ಅವರಿಂದ ಬಿಡುಗಡೆ ಮಾಡಿಸೋಣ ಅಂದುಕೊಂಡೆವು‌. ಹಾಡು ಬಿಡುಗಡೆ ಮಾಡಿಕೊಟ್ಟ ವಂದಿತ ಅವರಿಗೆ ಧನ್ಯವಾದ. ಮಾರ್ಚ್ 23 ರಂದು ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು.

     

    ಈ ಚಿತ್ರದ ಕಥೆಗೂ ಹಾಗೂ ನನ್ನ ಜೀವನದ ಕಥೆಗೂ ಸುಮಾರು ವಿಷಯಗಳು ಹೋಲುತ್ತದೆ ಎಂದು ಮಾತು ಆರಂಭಿಸಿದ ನಾಯಕ ಯುವ ರಾಜಕುಮಾರ್, ತಂದೆ – ಮಗನ ಸಂಬಂಧ ಬೇರೆ ರೀತಿಯದೆ ಸಂಬಂಧ. ತಂದೆಯ ಜವಾಬ್ದಾರಿ ನಮಗೆ ಅರ್ಥವಾಗುವುದೇ ಇಲ್ಲ.  ನಾವು ದುಡಿಯುವುದಕ್ಕೆ ಶುರು ಮಾಡಿದಾಗ ನಮಗೆ ತಂದೆಯ ಜವಾಬ್ದಾರಿ ತಿಳಿಯುತ್ತಾ ಹೋಗುತ್ತದೆ. ಈ ಚಿತ್ರದಲ್ಲಿ ಅಚ್ಯುತಕುಮಾರ್ ಅವರು ನನ್ನ ತಂದೆ ಪಾತ್ರ ಮಾಡಿದ್ದಾರೆ‌. ಅವರೊಂದಿಗೆ ಕೆಲವು ಸನ್ನಿವೇಶಗಳಲ್ಲಿ ನಟಿಸಬೇಕಾದರೆ ನನಗೆ ನಮ್ಮ ಅಪ್ಪ ಕಣ್ಣ ಮುಂದೆ ಬರುತ್ತಿದ್ದರು. ಅಂತಹ ಅಪ್ಪ – ಮಗನ ನಡುವಿನ ಸಂಬಂಧವನ್ನು ಬಣ್ಣಿಸುವ ಈ “ಅಪ್ಪುಗೆ” ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ ಎಂದರು.

  • ಮಾ.21ಕ್ಕೆ ‘ಯುವ’ ಚಿತ್ರದ ಟ್ರೈಲರ್:  23ಕ್ಕೆ ಪ್ರಿರಿಲೀಸ್ ಇವೆಂಟ್

    ಮಾ.21ಕ್ಕೆ ‘ಯುವ’ ಚಿತ್ರದ ಟ್ರೈಲರ್: 23ಕ್ಕೆ ಪ್ರಿರಿಲೀಸ್ ಇವೆಂಟ್

    ಯುವ (Yuva) ಸಿನಿಮಾದ ಬಿಡುಗಡೆಗಡೆ ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ ಚಿತ್ರತಂಡ. ಈ ಸಿನಿಮಾದ ಮೂಲಕ ಯುವರಾಜ್ ಕುಮಾರ್ (Yuvraj Kumar) ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಹಾಗಾಗಿ ಅದ್ಧೂರಿಯಾಗಿಯೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಯುವ ಸಿನಿಮಾದ ಟ್ರೈಲರ್ (Trailer), ಪ್ರಿರಿಲೀಸ್ ಇವೆಂಟ್ ಮತ್ತು ಚಿತ್ರ ರಿಲೀಸ್ ಕುರಿತಂತೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

    ಯುವ ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ – ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನು ನಿರೀಕ್ಷಿಸುವುದಿಲ್ಲ. ಕುಟುಂಬದಲ್ಲಿ ಅಪ್ಪನ ಪಾತ್ರ ಬಹಳ ದೊಡ್ಡದು. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ನಮ್ಮ ಚಿತ್ರದ ‘ಅಪ್ಪುಗೆ’ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

    ಅಪ್ಪನ ಕುರಿತಾದ ಹಾಡಾಗಿರುವುದರಿಂದ ಈ ಹಾಡನ್ನು ವಂದಿತ ಅವರಿಂದ ಬಿಡುಗಡೆ ಮಾಡಿಸೋಣ ಅಂದುಕೊಂಡೆವು‌. ಹಾಡು ಬಿಡುಗಡೆ ಮಾಡಿಕೊಟ್ಟ ವಂದಿತ ಅವರಿಗೆ ಧನ್ಯವಾದ. ಇನ್ನು ಮಾರ್ಚ್ 21 ರಂದು ಯುವ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಮಾರ್ಚ್ 23 ರಂದು ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು.

    ಈ ಚಿತ್ರದ ಕಥೆಗೂ ಹಾಗೂ ನನ್ನ ಜೀವನದ ಕಥೆಗೂ ಸುಮಾರು ವಿಷಯಗಳು ಹೋಲುತ್ತದೆ ಎಂದು ಮಾತು ಆರಂಭಿಸಿದ ನಾಯಕ ಯುವ ರಾಜಕುಮಾರ್, ತಂದೆ – ಮಗನ ಸಂಬಂಧ ಬೇರೆ ರೀತಿಯದೆ ಸಂಬಂಧ. ತಂದೆಯ ಜವಾಬ್ದಾರಿ ನಮಗೆ ಅರ್ಥವಾಗುವುದೇ ಇಲ್ಲ.  ನಾವು ದುಡಿಯುವುದಕ್ಕೆ ಶುರು ಮಾಡಿದಾಗ ನಮಗೆ ತಂದೆಯ ಜವಾಬ್ದಾರಿ ತಿಳಿಯುತ್ತಾ ಹೋಗುತ್ತದೆ. ಈ ಚಿತ್ರದಲ್ಲಿ ಅಚ್ಯುತಕುಮಾರ್ ಅವರು ನನ್ನ ತಂದೆ ಪಾತ್ರ ಮಾಡಿದ್ದಾರೆ‌. ಅವರೊಂದಿಗೆ ಕೆಲವು ಸನ್ನಿವೇಶಗಳಲ್ಲಿ ನಟಿಸಬೇಕಾದರೆ ನನಗೆ ನಮ್ಮ ಅಪ್ಪ ಕಣ್ಣ ಮುಂದೆ ಬರುತ್ತಿದ್ದರು. ಅಂತಹ ಅಪ್ಪ – ಮಗನ ನಡುವಿನ ಸಂಬಂಧವನ್ನು ಬಣ್ಣಿಸುವ ಈ “ಅಪ್ಪುಗೆ” ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ ಎಂದರು.

    ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. “ಅಪ್ಪುಗೆ” ಮೂರನೇ ಹಾಡಾಗಿ ಬಿಡುಗಡೆಯಾಗಿದೆ. ಅಪ್ಪ – ಮಗನ ಸಂಬಂಧದ ಈ ಹಾಡು ತುಂಬಾ ಚೆನ್ನಾಗಿದೆ. ಈ ಹಾಡು ಕೇಳಿದಾಗಲ್ಲೆಲ್ಲಾ ನನಗೆ ನಮ್ಮ ತಂದೆ ನೆನಪಾಗುತ್ತಾರೆ ಎಂದು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಭಾವುಕರಾದರು.  ಯುವ ಚಿತ್ರದ ಆಡಿಯೋ ಹಕ್ಕನ್ನು ನಮ್ಮ ಆನಂದ್ ಆಡಿಯೋ ಸಂಸ್ಥೆಗೆ ನೀಡಿರುವುದಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸಂಸ್ಥೆ ಆರಂಭವಾಗಿ 25 ವರ್ಷಗಳಾಗುತ್ತಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಆನಂದ್ ಆಡಿಯೋ ಶ್ಯಾಮ್.

  • ಅಪ್ಪುಗೆ ಹಾಡಿಗೆ ‘ಯುವ’ ಫ್ಯಾನ್ಸ್ ಫಿದಾ: ಮಾರ್ಚ್ 21 ರಂದು ಚಿತ್ರದ ಟ್ರೈಲರ್

    ಅಪ್ಪುಗೆ ಹಾಡಿಗೆ ‘ಯುವ’ ಫ್ಯಾನ್ಸ್ ಫಿದಾ: ಮಾರ್ಚ್ 21 ರಂದು ಚಿತ್ರದ ಟ್ರೈಲರ್

    ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ ಯುವ (Yuva)  ಚಿತ್ರದ ‘ಅಪ್ಪುಗೆ’ (Appuge) ಹಾಡು (Song) ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

    ಯುವ ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ – ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನು ನಿರೀಕ್ಷಿಸುವುದಿಲ್ಲ. ಕುಟುಂಬದಲ್ಲಿ ಅಪ್ಪನ ಪಾತ್ರ ಬಹಳ ದೊಡ್ಡದು. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ನಮ್ಮ ಚಿತ್ರದ “ಅಪ್ಪುಗೆ” ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಅಪ್ಪನ ಕುರಿತಾದ ಹಾಡಾಗಿರುವುದರಿಂದ ಈ ಹಾಡನ್ನು ವಂದಿತ ಅವರಿಂದ ಬಿಡುಗಡೆ ಮಾಡಿಸೋಣ ಅಂದುಕೊಂಡೆವು‌. ಹಾಡು ಬಿಡುಗಡೆ ಮಾಡಿಕೊಟ್ಟ ವಂದಿತ ಅವರಿಗೆ ಧನ್ಯವಾದ. ಇನ್ನು ಮಾರ್ಚ್ 21 ರಂದು ಯುವ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಮಾರ್ಚ್ 23 ರಂದು ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು.

    ಈ ಚಿತ್ರದ ಕಥೆಗೂ ಹಾಗೂ ನನ್ನ ಜೀವನದ ಕಥೆಗೂ ಸುಮಾರು ವಿಷಯಗಳು ಹೋಲುತ್ತದೆ ಎಂದು ಮಾತು ಆರಂಭಿಸಿದ ನಾಯಕ ಯುವ ರಾಜಕುಮಾರ್, ತಂದೆ – ಮಗನ ಸಂಬಂಧ ಬೇರೆ ರೀತಿಯದೆ ಸಂಬಂಧ. ತಂದೆಯ ಜವಾಬ್ದಾರಿ ನಮಗೆ ಅರ್ಥವಾಗುವುದೇ ಇಲ್ಲ.  ನಾವು ದುಡಿಯುವುದಕ್ಕೆ ಶುರು ಮಾಡಿದಾಗ ನಮಗೆ ತಂದೆಯ ಜವಾಬ್ದಾರಿ ತಿಳಿಯುತ್ತಾ ಹೋಗುತ್ತದೆ. ಈ ಚಿತ್ರದಲ್ಲಿ ಅಚ್ಯುತಕುಮಾರ್ ಅವರು ನನ್ನ ತಂದೆ ಪಾತ್ರ ಮಾಡಿದ್ದಾರೆ‌. ಅವರೊಂದಿಗೆ ಕೆಲವು ಸನ್ನಿವೇಶಗಳಲ್ಲಿ ನಟಿಸಬೇಕಾದರೆ ನನಗೆ ನಮ್ಮ ಅಪ್ಪ ಕಣ್ಣ ಮುಂದೆ ಬರುತ್ತಿದ್ದರು. ಅಂತಹ ಅಪ್ಪ – ಮಗನ ನಡುವಿನ ಸಂಬಂಧವನ್ನು ಬಣ್ಣಿಸುವ ಈ “ಅಪ್ಪುಗೆ” ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ ಎಂದರು.

    ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. “ಅಪ್ಪುಗೆ” ಮೂರನೇ ಹಾಡಾಗಿ ಬಿಡುಗಡೆಯಾಗಿದೆ. ಅಪ್ಪ – ಮಗನ ಸಂಬಂಧದ ಈ ಹಾಡು ತುಂಬಾ ಚೆನ್ನಾಗಿದೆ. ಈ ಹಾಡು ಕೇಳಿದಾಗಲ್ಲೆಲ್ಲಾ ನನಗೆ ನಮ್ಮ ತಂದೆ ನೆನಪಾಗುತ್ತಾರೆ ಎಂದು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಭಾವುಕರಾದರು.  ಯುವ ಚಿತ್ರದ ಆಡಿಯೋ ಹಕ್ಕನ್ನು ನಮ್ಮ ಆನಂದ್ ಆಡಿಯೋ ಸಂಸ್ಥೆಗೆ ನೀಡಿರುವುದಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸಂಸ್ಥೆ ಆರಂಭವಾಗಿ 25 ವರ್ಷಗಳಾಗುತ್ತಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಆನಂದ್ ಆಡಿಯೋ ಶ್ಯಾಮ್.

    ಛಾಯಾಗ್ರಾಹಕ ಶ್ರೀಶ ಕುದುವಳ್ಳಿ, ಸಂಕಲನಕಾರ ಆಶಿಕ್ ಕುಸುಗೊಳ್ಳಿ ಹಾಗೂ ಕಾರ್ಯಕಾರಿ ನಿರ್ಮಾಪಕ ಯೋಗಿ ಜಿ ರಾಜ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಹಾಡು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು

  • ಅಪ್ಪು ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಮನವಿ ಮಾಡಿದ ರಾಘಣ್ಣ

    ಅಪ್ಪು ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಮನವಿ ಮಾಡಿದ ರಾಘಣ್ಣ

    ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ 49ನೇ ವರ್ಷದ ಹುಟ್ಟುಹಬ್ಬವನ್ನು (Birthday)  ಅಭಿಮಾನಿಗಳು ಅದ್ಧೂರಿಯಾಗಿ ಸೆಲೆಬ್ರೇಟ್ ಮಾಡುತ್ತಿದ್ದಾರೆ. ಅಭಿಮಾನಿಗಳ ಜೊತೆ ಅಪ್ಪು ಕುಟುಂಬ ಕೂಡ ಪುನೀತ್ ಸಮಾಧಿಯ ದರ್ಶನ ಪಡೆದಿದ್ದಾರೆ. ಈ ವೇಳೆ, ಪುನೀತ್ ಸ್ಥಾನವನ್ನು ಯಾರು ತುಂಬೋಕೆ ಆಗಲ್ಲ. ಆದರೆ ಯುವನನ್ನು ಬೆಳೆಸಿ, ಹರಸಿ ಎಂದು ರಾಘಣ್ಣ (Raghavendra Rajkumar) ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದ್ದಾರೆ.

    ನಮ್ಮೆಲ್ಲರ ಪವರ್ ಅಪ್ಪು ಅನ್ನೋ ಮ್ಯಾರಥಾನ್. ಓಡೋದು ಅಂದರೆ ಪುನೀತ್‌ಗೆ ತುಂಬಾ ಇಷ್ಟ. ಉತ್ತಮ ಆರೋಗ್ಯಕ್ಕಾಗಿ ಓಡಬೇಕು ಎಂದು ರಾಘಣ್ಣ ಫ್ಯಾನ್ಸ್‌ಗೆ ಆರೋಗ್ಯದ ಬಗ್ಗೆ ಕಿವಿ ಮಾತು ಹೇಳಿದ್ದಾರೆ. ಇದನ್ನೂ ಓದಿ:ಸಹೋದರ ಅಪ್ಪುಗೆ ವಿಶೇಷವಾಗಿ ಶುಭಕೋರಿದ ಶಿವಣ್ಣ

    ಪುನೀತ್ ಬರ್ತ್‌ಡೇ ದಿನವನ್ನು ಅಪ್ಪು ಸ್ಫೂರ್ತಿ ದಿನವನ್ನಾಗಿ ಸರಿಯಾಗಿ ಆಚರಿಸಿ, ಇದು ಅಭಿಮಾನಿಗಳ ಹುಟ್ಟುಹಬ್ಬ ಎಂದು ರಾಘಣ್ಣ ಮಾತನಾಡಿದ್ದಾರೆ. ಇನ್ನೂ ಒಳ್ಳೆಯ ಕೆಲಸ ಮಾಡಲು ಅಪ್ಪುಗೆ ಆಯುಷ್ಯ ಸಾಲಲಿಲ್ಲ ಎಂದು ರಾಘಣ್ಣ ಭಾವುಕರಾಗಿದ್ದಾರೆ. ಪ್ರೀತಿಯಿಂದ ಜನರಿಗೆ ಏನು ಹಂಚ್ತಿರಾ ಹಂಚಿ. ಅಲ್ಲಿ ಅಪ್ಪು ಕಾಣ್ತಾರೆ ಎಂದು ರಾಘಣ್ಣ ಮಾತನಾಡಿದ್ದಾರೆ. ಸ್ಫೂರ್ತಿ ದಿನ ಬಂದರೆ ಮಕ್ಕಳು ಖುಷಿಯಾಗಬೇಕು. ಈ ದಿನವನ್ನ ಅಪ್ಪುಗಾಗಿ ಗಿಡ ನೆಡಿ, ಉಚಿತ ಶಿಕ್ಷಣ ನೀಡಿ ಸಮಾಜಮುಖಿ ಕೆಲಸ ಮಾಡಿ ಎಂದು ರಾಘಣ್ಣ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಪುನೀತ್ ಸ್ಥಾನವನ್ನು ಯಾರು ತುಂಬೋಕೆ ಆಗಲ್ಲ. ಆದರೆ ಅಪ್ಪುರಂತೆಯೇ ಮಗ ಯುವನನ್ನು ಬೆಳೆಯಿಸಿ ಹಾರೈಸಿ ಎಂದು ರಾಘಣ್ಣ ಮಾತನಾಡಿದ್ದಾರೆ.

    ಈ ವೇಳೆ, ಚಿಕ್ಕ ವಯಸ್ಸಿನಿಂದಲೇ ನನ್ನ ಚಿಕ್ಕಪ್ಪ ನನಗೆ ಸ್ಫೂರ್ತಿ ಎಂದು ಯುವ ಮಾತನಾಡಿದ್ದಾರೆ.
    ಚಿಕ್ಕಮ್ಮ ಅಶ್ವಿನಿ ಪುನೀತ್‌ರಾಜ್‌ಕುಮಾರ್ ಊರಲ್ಲಿ ಇಲ್ಲ ಎಂದು ಯುವ ಮಾತನಾಡಿದ್ದಾರೆ. 3 ದಿನದ ಹಿಂದೆ ಜಾಕಿ ಚಿತ್ರವನ್ನ ನೋಡ್ಕೊಂಡು ಬಂದೆ. ಬಹಳ ಖುಷಿಯಾಯ್ತು ಎಂದು ಯುವ ಮಾತನಾಡಿದ್ದಾರೆ.

  • ‘ಯುವ’ ಸಿನಿಮಾದ ಸ್ಟೋರಿ ಏನು?: ಗುಟ್ಟು ಬಿಚ್ಚಿಟ್ಟ ನಿರ್ದೇಶಕ

    ‘ಯುವ’ ಸಿನಿಮಾದ ಸ್ಟೋರಿ ಏನು?: ಗುಟ್ಟು ಬಿಚ್ಚಿಟ್ಟ ನಿರ್ದೇಶಕ

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಯುವ ಸಿನಿಮಾದ ಕಥೆ (Story) ಏನು ಎನ್ನುವುದಕ್ಕೆ ಸಂಕ್ಷಿಪ್ತವಾಗಿ ಉತ್ತರಿಸಿದ್ದಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್. ತಂದೆ ಮಗನ ಸೆಂಟಿಮೆಂಟ್ ಜೊತೆಗೆ ಮಧ್ಯಮ ವರ್ಗದ ಕುಟುಂಬದ ಕಥೆಯು ಸಿನಿಮಾದಲ್ಲಿದೆಯಂತೆ. ಅದನ್ನು ಎಲ್ಲ ಜನರಿಗೂ ಮನ ಮುಟ್ಟುವಂತೆ ಹೇಳಿರುವುದಾಗಿ ಅವರು ಹೇಳಿದರು.

    ಈ ನಡುವೆ ಯುವರಾಜ್ ಕುಮಾರ್ (Yuvraj Kumar) ಮುಖ್ಯ ಭೂಮಿಕೆಯಲ್ಲಿ ಮೂಡಿ ಬಂದಿರುವ ಯುವ (Yuva) ಚಿತ್ರದ ಮತ್ತೊಂದು ಹಾಡು ನಿನ್ನೆ ಬಿಡುಗಡೆ ಆಗಿದೆ. ‘ಅಪ್ಪುಗೆ’ (Appuge) ಹೆಸರಿನಲ್ಲಿ ಮೂಡಿ ಬಂದಿರುವ ಈ ಹಾಡಿನ ಲಿರಿಕಲ್ ವಿಡಿಯೋವನ್ನು ಪುನೀತ್ ರಾಜ್ ಕುಮಾರ್ ಪುತ್ರಿ ವಂದಿತಾ ಬಿಡುಗಡೆ ಮಾಡಿದ್ದಾರೆ.

    ಅಪ್ಪುಗೆ ಮೇಲೆ ಚಿತ್ರಿತವಾದ ವಿಶೇಷ ಹಾಡು ಇದಾಗಿದ್ದು, ಸಂತೋಶ್ ಆನಂದ್ ರಾಮ್ (Santhosh Anand Ram) ನಿರ್ದೇಶನದಲ್ಲಿ, ಹೊಂಬಾಳೆ ಫಿಲಂಸ್ ನಲ್ಲಿ ಬ್ಯಾನರ್ ಅಡಿ ವಿಜಯ್ ಕಿರಗಂದೂರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.  ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಈ ಹಾಡು ಬಿಡುಗಡೆ ಆಗಿದೆ.

    ಲಿರಿಕಲ್ ವಿಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಯುವರಾಜ್, ನಿರ್ದೇಶಕ ಸಂತೋಷ್ ಆನಂದ್ ರಾಮ್, ಅಪ್ಪು ಮಗಳು ವಂದಿತಾ (Vandita) ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ತಂದೆ ಮಗನ ಬಾಂಧ್ಯವದ ಹಾಡು ಇದಾಗಿದ್ದು, ಯುವ ಸಿನಿಮಾದ ಬಹುಮುಖ್ಯ ಘಟ್ಟದಲ್ಲಿ ಹಾಡು ಇರಲಿದೆ. ಈ ಹಾಡನ್ನು ಬಿಡುಗಡೆ ಮಾಡಿದ ವಂದಿತಾಗೆ ಚಿತ್ರತಂಡದಿಂದ ಅಪ್ಪು ಫೋಟೋ ಉಡುಗೊರೆಯಾಗಿ ನೀಡಲಾಯಿತು. ಅಪ್ಪನ ಫೋಟೋ ನೋಡಿ ವಂದಿತಾ ಭಾವುಕರಾದರು.

     

    ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿ ಬಂದಿತ್ತು, ವಿಜಯ್ ಪ್ರಕಾಶ್ ಗೀತೆಗೆ ಧ್ವನಿಯಾಗಿದ್ದಾರೆ. ಈ ಹಾಡಿನ ಸಾಹಿತ್ಯ ಸಂತೋಷ್ ಆನಂದ್ ರಾವ್ ಅವರ ಬರವಣಿಗೆಯಲ್ಲಿ ಮೂಡಿ ಬಂದಿದೆ.

  • ‘ಅಪ್ಪುಗೆ’ ಹಾಡು ರಿಲೀಸ್ ಮಾಡಿದ ಪುನೀತ್ ಪುತ್ರಿ ವಂದಿತಾ

    ‘ಅಪ್ಪುಗೆ’ ಹಾಡು ರಿಲೀಸ್ ಮಾಡಿದ ಪುನೀತ್ ಪುತ್ರಿ ವಂದಿತಾ

    ಯುವರಾಜ್ ಕುಮಾರ್ (Yuvraj Kumar) ಮುಖ್ಯ ಭೂಮಿಕೆಯಲ್ಲಿ ಮೂಡಿ ಬಂದಿರುವ ಯುವ (Yuva) ಚಿತ್ರದ ಮತ್ತೊಂದು ಹಾಡು ಇಂದು ಬಿಡುಗಡೆ ಆಗಿದೆ. ‘ಅಪ್ಪುಗೆ’ (Appuge) ಹೆಸರಿನಲ್ಲಿ ಮೂಡಿ ಬಂದಿರುವ ಈ ಹಾಡಿನ ಲಿರಿಕಲ್ ವಿಡಿಯೋವನ್ನು ಪುನೀತ್ ರಾಜ್ ಕುಮಾರ್ ಪುತ್ರಿ ವಂದಿತಾ ಇಂದು ಬಿಡುಗಡೆ ಮಾಡಿದರು.

    ಅಪ್ಪುಗೆ ಮೇಲೆ ಚಿತ್ರಿತವಾದ ವಿಶೇಷ ಹಾಡು ಇದಾಗಿದ್ದು, ಸಂತೋಶ್ ಆನಂದ್ ರಾಮ್ (Santhosh Anand Ram) ನಿರ್ದೇಶನದಲ್ಲಿ, ಹೊಂಬಾಳೆ ಫಿಲಂಸ್ ನಲ್ಲಿ ಬ್ಯಾನರ್ ಅಡಿ ವಿಜಯ್ ಕಿರಗಂದೂರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.  ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಈ ಹಾಡು ಬಿಡುಗಡೆ ಆಗಿದೆ.

    ಲಿರಿಕಲ್ ವಿಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಯುವರಾಜ್, ನಿರ್ದೇಶಕ ಸಂತೋಷ್ ಆನಂದ್ ರಾಮ್, ಅಪ್ಪು ಮಗಳು ವಂದಿತಾ (Vandita) ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ತಂದೆ ಮಗನ ಬಾಂಧ್ಯವದ ಹಾಡು ಇದಾಗಿದ್ದು, ಯುವ ಸಿನಿಮಾದ ಬಹುಮುಖ್ಯ ಘಟ್ಟದಲ್ಲಿ ಹಾಡು ಇರಲಿದೆ. ಈ ಹಾಡನ್ನು ಬಿಡುಗಡೆ ಮಾಡಿದ ವಂದಿತಾಗೆ ಚಿತ್ರತಂಡದಿಂದ ಅಪ್ಪು ಫೋಟೋ ಉಡುಗೊರೆಯಾಗಿ ನೀಡಲಾಯಿತು. ಅಪ್ಪನ ಫೋಟೋ ನೋಡಿ ವಂದಿತಾ ಭಾವುಕರಾದರು.

     

    ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿ ಬಂದಿತ್ತು, ವಿಜಯ್ ಪ್ರಕಾಶ್ ಗೀತೆಗೆ ಧ್ವನಿಯಾಗಿದ್ದಾರೆ. ಈ ಹಾಡಿನ ಸಾಹಿತ್ಯ ಸಂತೋಷ್ ಆನಂದ್ ರಾವ್ ಅವರ ಬರವಣಿಗೆಯಲ್ಲಿ ಮೂಡಿ ಬಂದಿದೆ.