Tag: ಯೂಟ್ಯೂಬ್ ವೀಡಿಯೋ

  • 10 YouTube ಚಾನೆಲ್‌ನ ವೀಡಿಯೋಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ

    10 YouTube ಚಾನೆಲ್‌ನ ವೀಡಿಯೋಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ

    ನವದೆಹಲಿ: ಸಮುದಾಯಗಳ (Religious Communities) ನಡುವೆ ದ್ವೇಷ ಹರಡಲು ನಕಲಿ ಸುದ್ದಿ ಪ್ರಸಾರ ಮಾಡುತ್ತಿದ್ದ 10 ಚಾನಲ್‌ಗಳ (YouTube Channels) 45 ಯುಟ್ಯೂಬ್ ವೀಡಿಯೋ (YouTube Videos) ಗಳನ್ನ ಕೇಂದ್ರ ಸರ್ಕಾರ (Central Government) ನಿಷೇಧಿಸಿದೆ.

    ಉದಾಹರಣೆಗೆ ಕೆಲವು ಸಮುದಾಯಗಳ ಧಾರ್ಮಿಕ ಹಕ್ಕುಗಳನ್ನು ಸರ್ಕಾರ ಕಸಿದುಕೊಳ್ಳುವುದು, ಸಮುದಾಯದ ವಿರುದ್ಧ ಹಿಂಸಾತ್ಮಕ ಬೆದರಿಕೆ ಹಾಕುವುದು ಅಥವಾ ದೇಶದಲ್ಲಿ ಅಂತರ್ಯುದ್ಧ ಘೋಷಣೆಯಂತಹ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದ್ದ ವೀಡಿಯೋಗಳನ್ನ ನಿರ್ಬಂಧಿಸುವಂತೆ ಆದೇಶಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ (Anurag Thakur) ಇಂದು ಆದೇಶಿಸಿದ್ದಾರೆ. ಇದನ್ನೂ ಓದಿ: ಸುಳ್ಳು ಮತ್ತು ದೇಶದ್ರೋಹ ಸುದ್ದಿಗಳ ಪ್ರಕಟ – 8 ಯೂಟ್ಯೂಬ್ ಚಾನಲ್‍ಗಳು ನಿಷೇಧ

    10 ಚಾನೆಲ್‌ಗಳಲ್ಲಿ ಪ್ರಸಾರವಾಗಿದ್ದ ಈ 45 ವೀಡಿಯೋಗಳು ಸಮಯದಾಯಗಳ ನಡುವೆ ದ್ವೇಷ ಹುಟ್ಟಿಸುವಂತವಾಗಿದ್ದವು, ತಪ್ಪು ಕಲ್ಪನೆಯನ್ನು ಹೊಂದಿದ್ದವು. ಒಟ್ಟಾರೆ 1.30 ಕೋಟಿಗೂ ಅಧಿಕ ಮಂದಿ ಈ ವೀಡಿಯೋಗಳನ್ನ ವೀಕ್ಷಿಸಿದ್ದರು. ಕೆಲವು ಸಮುದಾಯಗಳ ಧಾರ್ಮಿಕ ಹಕ್ಕುಗಳನ್ನು ಗೌರವಿಸುವ ಉದ್ದೇಶದಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಎಪಿ ಶಾಸಕ ಅಮಾನತುಲ್ಲಾ ಖಾನ್‍ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

    ಬ್ಲಾಕ್ ಮಾಡಲಾಗಿರುವ ವೀಡಿಯೋಗಳ ಪೈಕಿ ಕೆಲವು ವೀಡಿಯೋಗಳು ಅಗ್ನಿಪಥ್ ಯೋಜನೆ, ಭಾರತೀಯ ಸೇನೆ ಬಗ್ಗೆ ತಪ್ಪು ಮಾಹಿತಿ ಪ್ರಸಾರ ಮಾಡುವಂತವಾಗಿದ್ದವು. ಜಮ್ಮು ಮತ್ತು ಕಾಶ್ಮೀರ (Jammu and Kashmir)  ಹಾಗೂ ಲಡಾಖ್ (Ladakh) ನಡುವಿನ ಗಡಿ ರೇಖೆಯನ್ನು ತಪ್ಪಾಗಿ ಬಿಂಬಿಸಿದ ರೀತಿಯಲ್ಲಿ ವೀಡಿಯೋ ಪ್ರಸಾರ ಮಾಡಲಾಗಿತ್ತು. ಈ ವಿಷಯಗಳು ಅತಿಸೂಕ್ಷ್ಮ ಹಾಗೂ ಸುಳ್ಳು ಎಂಬುದು ಗೊತ್ತಾಗಿತ್ತು ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

    ಮಾಹಿತಿ ತಂತ್ರಜ್ಞಾನ ನಿಯಮ-2021ರ ಅಡಿಯಲ್ಲಿ ಈ ವೀಡಿಯೊಗಳನ್ನು ಬ್ಲಾಕ್ ಮಾಡಲು ಸೆಪ್ಟೆಂಬರ್ 23ರಂದು ಆದೇಶ ಹೊರಡಿಸಲಾಗಿತ್ತು ಎಂದೂ ಪ್ರಕಟಣೆ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • YouTube ನೋಡ್ಕೊಂಡು ಪತ್ನಿಗೆ ಡೆಲಿವರಿ ಮಾಡಿಸಿದ- ಮುಂದೆ ಆಗಿದ್ದೇನು ಗೊತ್ತಾ?

    YouTube ನೋಡ್ಕೊಂಡು ಪತ್ನಿಗೆ ಡೆಲಿವರಿ ಮಾಡಿಸಿದ- ಮುಂದೆ ಆಗಿದ್ದೇನು ಗೊತ್ತಾ?

    ಹೈದರಾಬಾದ್: ಯೂಟ್ಯೂಬ್ ವೀಡಿಯೋ ನೋಡ್ಕೊಂಡು ಪತ್ನಿಗೆ ಡೆಲಿವರಿ ಮಾಡಿಸಿದ್ದಾನೆ. ಮಗು ಸಾವನ್ನಪಿದ್ದು, ಹೆಂಡತಿ ತೀವ್ರ ರಕ್ತಸ್ರಾವದಿಂದ ಐಸಿಯುಗೆ ಶಿಫ್ಟ್ ಆಗಿದ್ದಾಳೆ. ಪತಿ ಪೊಲೀಸ್ ಅತಿಥಿ ಆಗಿರುವ ವಿಚಿತ್ರ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ಲೋಕನಾಥನ್ ಬಂಧಿತ ಆರೋಪಿ ಪತಿಯಾಗಿದ್ದಾನೆ. ತಮಿಳುನಾಡಿನ ನಿವಾಸಿಯಾಗಿರುವ ಈತನನ್ನು ರಾಣಿಪೇಟೆಯ ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬ್ ನೋಡ್ಕೊಂಡು ಪತ್ನಿಗೆ ಡೆಲಿವರಿ ಮಾಡಿಸಿ ಮಗು ಸಾವಿಗೆ ಕಾರಣನಾಗಿದ್ದಾನೆ.

    2020ರಲ್ಲಿ ಲೋಕನಾಥನ್ ಮತ್ತು ಗೋಮತಿ ಮದುವೆಯಾಗಿದ್ದರು. ಡಿಸೆಂಬರ್ 13ರಂದು ಗೋಮತಿಗೆ ಹೆರಿಗೆ ಆಗಬೇಕಿತ್ತು. ಆದರೆ ಡಿಸೆಂಬರ್ 18ರಂದು ಆಕೆಗೆ ಹೆರಿಗೆ ನೋವಿನ ವೇದನೆ ಕಾಣಿಸಿಕೊಂಡಿತ್ತು. ಆಗ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇಚ್ಛಿಸದ ಲೋಕನಾಥನ್ ಯೂಟ್ಯೂಬ್ ವೀಡಿಯೋಗಳನ್ನು ನೋಡಿಕೊಂಡು ಅಲ್ಲಿ ತಿಳಿಸಿದಂತೆ ತಾನೇ ಮನೆಯಲ್ಲಿ ಹೆರಿಗೆ ಮಾಡಿಸಲು ನಿರ್ಧರಿಸಿದ್ದಾನೆ. ಲೋಕನಾಥನ್ ಸಹೋದರಿ ಗೀತಾ ಕೂಡಾ ಇವರಿಗೆ ಸಹಾಯ ಮಾಡಲು ಜೊತೆಗಿದ್ದಳು. ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಮಗಳು – ತಾಳಿ ಕಿತ್ತು, ಜುಟ್ಟು ಹಿಡಿದು ಧರ, ಧರನೇ ಎಳೆದಾಡಿದ ತಂದೆ

    ಮಗು ಜನಿಸುವಾಗಲೇ ಮೃತಪಟ್ಟಿತ್ತು. ಗೋಮತಿಗೆ ವಿಪರೀತ ರಕ್ತಸ್ರಾವ ಆಗಲು ಶುರುವಾಯಿತು. ನಂತರ ಆಕೆಯನ್ನು ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಲೋಕನಾಥನ್ ಕರೆದುಕೊಂಡು ಹೋದರು. ಆದರೆ ಅಲ್ಲಿನ ವೈದ್ಯರು ಆಕೆಯನ್ನು ದೊಡ್ಡ ಆಸ್ಪತ್ರೆಗೆ ಶಿಫ್ಟ್ ಮಾಡಲು ತಿಳಿಸಿದರು. ಸದ್ಯ ಗೋಮತಿ ವೆಲ್ಲೂರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮಗುವನ್ನು ಕಳೆದುಕೊಂಡ, ಪತ್ನಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇತ್ತ ಲೋಕನಾಥನ್ ಪೊಲೀಸರ ಅತಿಥಿಯಾಗಿದ್ದಾನೆ. ಇದನ್ನೂ ಓದಿ:  ಪತ್ನಿ ನೆರವಿನಿಂದ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ- ಸಂತ್ರಸ್ತೆ ವಿದೇಶಕ್ಕೆ ಹೋದ್ರೂ ಬಿಟ್ಟಿಲ್ಲ ಆತನ ಕಾಮದಾಟ

    ಪಿಎಂಕೆ ನಾಯಕ ಡಾ ಅನ್ಬುಮಣಿ ರಾಮದಾಸ್ ಈ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೆರಿಗೆ ಎನ್ನುವುದು ಬಹಳ ಕಷ್ಟವಾದ ವಿಚಾರ. ಒಂದು ಸಣ್ಣ ತಪ್ಪು ಕೂಡಾ ತಾಯಿ ಮತ್ತು ಮಗುವಿನ ಜೀವಕ್ಕೇ ಕುತ್ತುತರ ಬಹುದಾಗಿದೆ. ಜ್ಯೂಸ್, ಮ್ಯಾಗಿ ಮಾಡಿ ಕೊಟ್ಟಂತೆ ಅಲ್ಲ, ಯೂಟ್ಯೂಬ್ ವೀಡಿಯೋ ನೋಡಿಕೊಂಡು ಮಾಡಲು ಎಂದು ಟ್ವೀಟ್ ಮಾಡಿದ್ದಾರೆ.

  • ವೀರ್ ದಾಸ್‍ಗೆ ಪ್ರದರ್ಶನ ನೀಡಲು ಬಿಡುವುದಿಲ್ಲ: ನರೋತ್ತಮ್ ಮಿಶ್ರಾ

    ವೀರ್ ದಾಸ್‍ಗೆ ಪ್ರದರ್ಶನ ನೀಡಲು ಬಿಡುವುದಿಲ್ಲ: ನರೋತ್ತಮ್ ಮಿಶ್ರಾ

    ಮುಂಬೈ: ನಾನು ಎರಡು ರೀತಿಯ ಭಾರತದಿಂದ ಬಂದಿದ್ದೇನೆ ಎಂದು ಹೇಳುವ ಮೂಲಕ ಸಂಕಷ್ಟಕ್ಕೆ ಸಿಲುಕಿರುವ ಹಾಸ್ಯನಟ ವೀರ್ ದಾಸ್ ಅವರಿಗೆ ರಾಜ್ಯದಲ್ಲಿ ಯಾವುದೇ ಪ್ರದರ್ಶನ ನೀಡಲು ಅವಕಾಶ ನೀಡಲಾಗುವುದಿಲ್ಲ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

    vir das

    ಅಮೇರಿಕಾದಲ್ಲಿ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿದ್ದ ವೀರ್ ದಾಸ್ ಅವರು ಆ ವೀಡಿಯೋವನ್ನು ತಮ್ಮ ಯೂಟ್ಯೂಬ್‍ನಲ್ಲಿ ಹಂಚಿಕೊಂಡಿದ್ದರು. ಮಹಿಳೆಯನ್ನು ಗೌರವಿಸುವ, ರಾತ್ರಿಯಲ್ಲಿ ಮಹಿಳೆ ಮೇಲೆ ಅತ್ತಾಚಾರ ಮಾಡುವ ದೇಶದಿಂದ ನಾನು ಬಂದಿದ್ದೇನೆ. ಅಲ್ಲಿ ಮಾಸ್ಕ್ ಹಾಕಿಕೊಂಡು ಮಕ್ಕಳು ಕೈ ಮುಗುಯುವಾಗ, ನಾಯಕರು ಮಾಸ್ಕ್ ಇಲ್ಲದೇ ಅಪ್ಪಿಕೊಳ್ಳುತ್ತಾರೆ. ಅತಿ ದೊಡ್ಡ ಜನಸಂಖ್ಯೆ ಇರುವ ರಾಷ್ಟ್ರದಿಂದ ಬಂದಿದ್ದೇನೆ. 75 ವರ್ಷದ ಮುದುಕರಿಂದ 150 ವರ್ಷದ ಹಳೆಯದಾದ ಐಡಿಯಾಗಳನ್ನು ಕೇಳಲಾಗುತ್ತದೆ ಎಂದು ವೀರ್ ದಾಸ್ ವೀಡಿಯೋದಲ್ಲಿ ಹೇಳಿದ್ದರು. ಇದನ್ನೂ ಓದಿ: ಅವಳಿ ಮಕ್ಕಳಿಗೆ ಪೋಷಕರಾದ ನಟಿ ಪ್ರೀತಿ ಜಿಂಟಾ ದಂಪತಿ

    ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ವೀರ್ ದಾಸ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಈ ಬಗ್ಗೆ ವೀರ್ ದಾಸ್ ಅವರು, ಭಾರತ ದೇಶವನ್ನು ಅವಮಾನಗೊಳಿಸಬೇಕೆಂಬ ಉದ್ದೇಶವನ್ನು ನಾನು ಹೊಂದಿಲ್ಲ. ವಿಭಿನ್ನವಾದಂತಹ ಕೆಲಸಗಳನ್ನು ಮಾಡುವ ಎರಡು ಪ್ರತ್ಯೇಕ ಭಾರತದ ದ್ವಂದ್ವತೆಯನ್ನು ಅಲ್ಲಿ ವಿವರಿಸಲಾಗಿದೆ. ಯಾವುದೇ ದೇಶದಲ್ಲಿಯೂ ಬೆಳಕು ಮತ್ತು ಕತ್ತಲೆ, ಒಳ್ಳೆಯದು ಮತ್ತು ಕೆಟ್ಟದ್ದು ಇರುತ್ತದೆ. ಅದೇನೂ ಗುಟ್ಟಲ್ಲ. ನಾವು ಶ್ರೇಷ್ಠರು ಎಂಬುದನ್ನು ಎಂದಿಗೂ ಮರೆಯಬಾರದು ಎಂದು ಮನವಿ ಮಾಡಿದ್ದರು. ನಮ್ಮನ್ನು ಶ್ರೇಷ್ಠರು ಎಂದು ಹೇಳುವುದರ ಮೇಲೆ ಕೇಂದ್ರೀಕರಿಸುವುದನ್ನು ಎಂದಿಗೂ ನಿಲ್ಲಿಸಬಾರದು. ನಾವೆಲ್ಲರೂ ಪ್ರೀತಿಸುವ, ನಂಬುವ ಮತ್ತು ಹೆಮ್ಮೆಪಡುವ ದೇಶಕ್ಕೆ ದೇಶಭಕ್ತಿಯ ಚಪ್ಪಾಳೆ ಹೊಡೆಯುತ್ತೇವೆ ಎಂದು ಸ್ಪಷ್ಟನೆ ನೀಡಿದ್ದರು. ಇದಕ್ಕೆ ಟಿಎಂಸಿ ಸದಸ್ಯರಾದ ಮಹುವಾ ಮೊಯಿತ್ರಾ ಮತ್ತು ಕಾಂಗ್ರೆಸ್ ನಾಯಕರಾದ ಕಪಿಲ್ ಸಿಬಲ್ ಮತ್ತು ಶಶಿ ತರೂರ್ ಅವರು ಬೆಂಬಲ ನೀಡಿದ್ದರು. ಇದನ್ನೂ ಓದಿ:  ಫ್ಯಾಮಿಲಿ ಜೊತೆಗೆ ಜಾಲಿ ಮೂಡ್‍ನಲ್ಲಿ ಶ್ವೇತಾ ಚೆಂಗಪ್ಪ

    ಸದ್ಯ ಈ ಕುರಿತಂತೆ ನರೋತ್ತಮ್ ಮಿಶ್ರಾ ಅವರು, “ಅಂತಹ ಹಾಸ್ಯಗಾರರಿಗೆ ರಾಜ್ಯದಲ್ಲಿ ಹಾಸ್ಯ ಪ್ರದರ್ಶನ ನೀಡಲು ನಾವು ಅನುಮತಿ ನೀಡುವುದಿಲ್ಲ. ಅವರು ಕ್ಷಮೆಯಾಚಿಸಿದರೆ, ನಾವು ಅದರ ಬಗ್ಗೆ ಯೋಚಿಸುತ್ತೇವೆ ಎಂದು ತಿಳಿಸಿದ್ದಾರೆ. ಇದೇ ಭಾರತವನ್ನು “ಅವಮಾನ” ಮಾಡಲು ಪ್ರಯತ್ನಿಸುವ ಕೆಲವು ಹಾಸ್ಯಗಾರರಿದ್ದಾರೆ ಮತ್ತು ಅವರಿಗೆ ಕಪಿಲ್ ಸಿಬಲ್ ಮತ್ತು ಇತರ ಕಾಂಗ್ರೆಸ್ ಜನರಂತಹ ಕೆಲವು ಬೆಂಬಲಿಗರಿದ್ದಾರೆ ಎಂದು ಕಿಡಿಕಾರಿದರು.