Tag: ಯೇಸುದಾಸ್

  • ಅಯ್ಯಪ್ಪನ ದರ್ಶನಕ್ಕೆ ಮಹಿಳೆಯರು ಹೋಗ್ಬಾರ್ದು: ಯೇಸುದಾಸ್

    ಅಯ್ಯಪ್ಪನ ದರ್ಶನಕ್ಕೆ ಮಹಿಳೆಯರು ಹೋಗ್ಬಾರ್ದು: ಯೇಸುದಾಸ್

    – ಅಯ್ಯಪ್ಪ ಅಲ್ಲ, ಭಕ್ತರ ಮನಸ್ಸು ವಿಚಲಿತವಾಗುತ್ತೆ

    ಕೊಚ್ಚಿ: ಶಬರಿಮಲೆ ಅಯ್ಯಪ್ಪನ ಸನ್ನಿಧಾನಕ್ಕೆ ಮಹಿಳೆಯರು ಹೋಗ ಬೇಕಾ? ಬೇಡ್ವಾ? ಎಂಬ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಹೀಗಿರುವಾಗ, ಮಣಿಕಂಠನ ದರ್ಶನಕ್ಕೆ ಮಹಿಳಾ ಭಕ್ತರು ಹೋಗಬಾರದು ಎಂದು ಖ್ಯಾತ ಗಾಯಕ ಕೆಜೆ ಯೇಸುದಾಸ್ ಹೇಳಿದ್ದಾರೆ.

    ಸ್ವತಃ ಅಯ್ಯಪ್ಪನ ಭಕ್ತರಾಗಿರುವ ಯೇಸುದಾಸ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಮಹಿಳೆಯರು ಅಯ್ಯಪ್ಪನ ದರ್ಶನಕ್ಕೆ ಹೋಗಬಾರದು ಎಂದಿದ್ದಾರೆ. ಅಲ್ಲದೆ ಇದಕ್ಕೆ ಕಾರಣವನ್ನೂ ನೀಡಿದ್ದಾರೆ. ಮಹಿಳೆಯರು ದೇವಾಲಯಕ್ಕೆ ಆಗಮಿಸುವುದರಿಂದ ಭಕ್ತರ ಮನಸ್ಸು ವಿಚಲಿತವಾಗಲಿದೆ. ಅಯ್ಯಪ್ಪನ ಸನ್ನಿಧಾನಕ್ಕೆ ಸುಂದರ ಯುವತಿಯೊಬ್ಬಳು ಆಧುನಿಕ ಯುಗದ ಉಡುಗೆ ಧರಿಸಿ ಹೋದರೆ ಅಯ್ಯಪ್ಪ ಕಣ್ತೆರೆದು ನೋಡಲ್ಲ. ಆದರೆ, ಅಯ್ಯಪ್ಪನ ಭಕ್ತರು ಆಕೆಯನ್ನು ನೋಡುತ್ತಾರೆ. ಇದು ಸರಿಯಲ್ಲ ಎಂದಿದ್ದಾರೆ.

    ದೇಗುಲಕ್ಕೆ ಆಗಮಿಸುವ ಭಕ್ತರ ಉದ್ದೇಶವೇ ಬದಲಾಗಲಿದೆ. ಹೀಗಾಗಿ, ಮಹಿಳೆಯರು ಅಯ್ಯಪ್ಪನ ದೇಗುಲಕ್ಕೆ ಹೋಗಬಾರದು. ಅಯ್ಯಪ್ಪ ಭಕ್ತರನ್ನು ಪ್ರಚೋದಿಸಬೇಡಿ ಎಂಬುದಷ್ಟೇ ನನ್ನ ಮನವಿ ಎಂದು ಹೇಳಿದರು. ಅಂದಹಾಗೇ ಶಬರಿಮಲೆಯಲ್ಲಿ ನಿತ್ಯ ದೇಗುಲದ ಬಾಗಿಲು ಮುಚ್ಚುವ ಸಂದರ್ಭದಲ್ಲಿ ಯೇಸುದಾಸ್ ಹಾಡಿರುವ ‘ಹರಿವರಾಸನಂ’ ಹಾಡು ಧ್ವನಿವರ್ಧಕದಲ್ಲಿ ಕೇಳಿಸುತ್ತದೆ.

  • ಕೊಲ್ಲೂರಮ್ಮನ ಸನ್ನಿಧಿಯಲ್ಲಿ ಯೇಸುದಾಸ್ 78 ನೇ ಹುಟ್ಟಹಬ್ಬ ಆಚರಣೆ

    ಕೊಲ್ಲೂರಮ್ಮನ ಸನ್ನಿಧಿಯಲ್ಲಿ ಯೇಸುದಾಸ್ 78 ನೇ ಹುಟ್ಟಹಬ್ಬ ಆಚರಣೆ

    ಉಡುಪಿ: ಕೊಲ್ಲೂರಮ್ಮನ ಮುಂದೆ ಸಂಗೀತ ಸೇವೆ ನೀಡಿ ಗಾನ ಗಂಧರ್ವ -ಸಂಗೀತ ಮಾಂತ್ರಿಕ ಕೆ.ಜೆ.ಯೇಸುದಾಸ್ ತನ್ನ 78 ನೇ ಹುಟ್ಟುಹಬ್ಬವನ್ನು ಧಾರ್ಮಿಕವಾಗಿ ಆಚರಿಸಿಕೊಂಡರು.

    ಎಪ್ಪತ್ತೆಂಟನೇ ವಸಂತಕ್ಕೆ ಕಾಲಿಟ್ಟ ಯೇಸುದಾಸ್, ಪ್ರತಿ ವರ್ಷ ತನ್ನ ಹುಟ್ಟುಹಬ್ಬವನ್ನು ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಆಚರಿಸುತ್ತಾರೆ. ತಾಯಿ ಮೂಕಾಂಬಿಕೆಯ ದರ್ಶನ ಮಾಡಿದ ಅವರು, ಕುಟುಂಬ ಸಮೇತರಾಗಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

    ದೇವಸ್ಥಾನದ ಪ್ರಾಂಗಣದಲ್ಲಿರುವ ಎಲ್ಲಾ ಗುಡಿಗಳಿಗೆ ಭೇಟಿಕೊಟ್ಟು ಅರ್ಚನೆಯನ್ನು ನೆರವೇರಿಸಿದರು. ಬಳಿಕ ಯಜ್ಞ ಶಾಲೆಯಲ್ಲಿ ಚಂಡಿಕಾ ಹೋಮದಲ್ಲಿ ಭಾಗಿಯಾದರು. ದೇವಿ ಮೂಕಾಂಬಿಕೆಯ ಸನ್ನಿಧಿಯ ಒಳ ಭಾಗದಲ್ಲಿ ಯೇಸುದಾಸ್ ಸಂಗೀತ ಸೇವೆಯನ್ನು ದೇವಿಗೆ ಅರ್ಪಿಸಿದರು. ಪ್ರತಿ ವರ್ಷದಂತೆ ದೇವಸ್ಥಾನದ ಪ್ರಾಂಗಣದಲ್ಲಿ ಸಂಗೀತ ಸೇವೆ ನೀಡುವ ಮೂಲಕ ದೇವರ ನಾಮ ಹಾಡಿದರು.

    ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ಬಂದಿದ್ದ ಸಾವಿರಾರು ಮಂದಿ ದೇವರ ದರ್ಶನದ ಜೊತೆ ಸಂಗೀತ ಕ್ಷೇತ್ರದ ಮಹಾನ್ ಕಲಾವಿದರ ಹುಟ್ಟುಹಬ್ಬದಲ್ಲಿ ಭಾಗಿಯಾದರು. ನೆಚ್ಚಿನ ಕಲಾವಿದನಿಗೆ ಶುಭಾಶಯಗಳನ್ನು ಕೋರಿದರು.

  • ಉಡುಪಿ: ಶ್ರೀಕೃಷ್ಣ ಮಠದಲ್ಲಿ ಯೇಸುದಾಸ್ ಗಾನಸುಧೆ

    ಉಡುಪಿ: ಶ್ರೀಕೃಷ್ಣ ಮಠದಲ್ಲಿ ಯೇಸುದಾಸ್ ಗಾನಸುಧೆ

    ಉಡುಪಿ: ಶ್ರೀಕೃಷ್ಣನ ಅಪ್ಪಟ ಅಭಿಮಾನಿ, ಪದ್ಮವಿಭೂಷಣ ಗಾಯಕ ಕೆ.ಜೆ. ಯೇಸುದಾಸ್ ಉಡುಪಿಯಲ್ಲಿ ತಮ್ಮ ಗಾಯನದ ಮೂಲಕ ಸಾವಿರಾರು ಸಂಗೀತಾಭಿಮಾನಿಗಳನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸುಮಾರು ಎರಡು ಗಂಟೆಗಳ ಕಾಲ ನಿರಂತರ ಗಾನಸುಧೆಯನ್ನು ಯೇಸುದಾಸ್ ಹರಿಸಿದರು.

    ಮೊದಲು ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೇ ಹಾಡಿದ ಯೇಸುದಾಸ್, ನಂತರ ದೇವರ ಕೀರ್ತನೆಗಳನ್ನು ಹಾಡಿದರು. ತಮಗಿಷ್ಟದ ಆರಾಧ್ಯ ದೇವರು ಶ್ರೀಕೃಷ್ಣನ ನಾಮಗಳನ್ನು ಹಾಡಿದರು. ಇದಕ್ಕೂ ಮೊದಲು ಶ್ರೀಕೃಷ್ಣಮಠಕ್ಕೆ ಆಗಮಿಸಿದ ಅವರು ಕಡೆಗೋಲು ಕೃಷ್ಣನ ದರ್ಶನ ಮಾಡಿದರು. ಕುಟುಂಬ ಸಮೇತ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಪರ್ಯಾಯ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

    ಪ್ರತೀ ವರ್ಷ ಯೇಸುದಾಸ್ ಅವರು ಹುಟ್ಟುಹಬ್ಬದ ಸಂದರ್ಭದಲ್ಲಿ ಕೃಷ್ಣಮಠಕ್ಕೆ ಭೇಟಿಕೊಡುವ ವಾಡಿಕೆ ಇಟ್ಟುಕೊಂಡಿದ್ದಾರೆ. ಸದ್ಯ ಪೇಜಾವರ ಪರ್ಯಾಯ ನಡೆಯುತ್ತಿದ್ದು, ಸ್ವಾಮೀಜಿಗಳ ಮೇಲಿನ ಗೌರವದಿಂದ ಉಡುಪಿಯಲ್ಲಿ ಕಾರ್ಯಕ್ರಮ ನೀಡಲು ಯೇಸುದಾಸ್ ಒಪ್ಪಿದ್ದರು. ಯೇಸುದಾಸ್ ಅವರ ಬಳಗ ಕರ್ನಾಟಕ ಸಂಗೀತ ಅಭಿಮಾನಿಗಳನ್ನು ಕೆಲಕಾಲ ಸಂಗೀತ ಲೋಕದಲ್ಲಿ ತೇಲಾಡಿಸಿತು.