Tag: ಯೋಗಾಸ

  • ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಮಂಗಳೂರಿನ ವಿನಂತಿ ಹರಿಕಾಂತ

    ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಮಂಗಳೂರಿನ ವಿನಂತಿ ಹರಿಕಾಂತ

    ಮಂಗಳೂರು:  ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಮಂಗಳೂರಿನ ವಿನಂತಿ ಹರಿಕಾಂತ ದಾಖಲೆ ಬರೆಯುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಸಾಧನೆಗೆ ವಯಸ್ಸಿನ ಹಂಗಿಲ್ಲ ಎನ್ನುವುದಕ್ಕೆ ಅದೆಷ್ಟೋ ನಿದರ್ಶನಗಳನ್ನು ನಾವು ಗಮನಿಸುತ್ತೇವೆ. ಸಣ್ಣ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರವರೆಗೆ ಅನೇಕರು ಎಲ್ಲರ ಮೂಗಿನ ಮೇಲೆ ಬೆರಳಿಡುವಂತೆ ಸಾಧನೆ ಮಾಡಿದ್ದಾರೆ. ಈ ಸಾಲಿಗೆ ಮಂಗಳೂರಿನ 5ರ ಪೋರಿಯೊಬ್ಬಳು ಸೇರ್ಪಡೆಗೊಂಡಿದ್ದಾಳೆ. ಮಂಗಳೂರಿನ 5ರ ಬಾಲಕಿ ವಿನಂತಿ ಹರಿಕಾಂತ ಯೋಗದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ದಾಖಲೆ ಬರೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾಳೆ.

    ವಿನಂತಿ ಹರಿಕಾಂತ ತನ್ನ 5ನೇ ವಯಸ್ಸಿನಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾಳೆ. ಈಕೆ ಸಣ್ಣಂದಿನಿಂದಲೇ ಯೋಗಾಸನದಲ್ಲಿ ಆಸಕ್ತಿ ಹೊಂದಿದ್ದು, 100ಕ್ಕಿಂತ ಹೆಚ್ಚಿನ ಯೋಗಾಸನ ಭಂಗಿಗಳನ್ನು ಸರಾಗವಾಗಿ ಮಾಡುತ್ತಾಳೆ. ಇದೀಗ `ಉತ್ರಾಸನ ಭಂಗಿ’ಯಲ್ಲಿ ದೀರ್ಘ ಕಾಲದವರೆಗೆ ಅಂದರೆ 5 ನಿಮಿಷ, 15 ಸೆಕೆಂಡ್ ಕಾಲ ತಟಸ್ಥವಾಗಿ ಉಳಿದು ಅದ್ಭುತ ಸಾಧನೆಯನ್ನು ಮಾಡಿದ್ದಾಳೆ. ಈಕೆಯ ಸಾಧನೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನ ಗರಿಮೆಯ ಕಿರೀಟ ಮುಡಿಗೇರಿದೆ. ಇದನ್ನೂ ಓದಿ: ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ: ಹೆಬ್ಬಾರ್

    ಈಕೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ 20 ವರ್ಷಗಳಿಂದ ಮಂಗಳೂರಿನ ಕೊಣಾಜೆ ಸಮೀಪದ ಅಸೈಗೋಳಿಯಲ್ಲಿರುವ ಕೆಎಸ್ಆರ್ಪಿ 7ನೇ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿರುವ   ಈಶ್ವರ ಹರಿಕಾಂತ ಹಾಗೂ ಆರತಿ ಹರಿಕಾಂತ ದಂಪತಿಯ ಪುತ್ರಿಯಾಗಿದ್ದಾಳೆ. ಈಕೆ ಯೋಗಾಸನದಲ್ಲಿ ಮಾತ್ರ ಅಲ್ಲದೆ ನೃತ್ಯ, ಸಂಗೀತ, ಚಿತ್ರ ಕಲೆ ಹೀಗೆ ಅನೇಕ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆಯಾಗಿದ್ದಾಳೆ. ಇದೀಗ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ದಾಖಲೆ ಬರೆದು ಸಾಧನೆ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ.

  • ಪೇಜಾವರಶ್ರೀಗಳಿಗೆ ನಾಳೆ ಯೋಗ ಗೌರವ- ಅಪರೂಪದ ವಿಷ್ಣುದಶಾವತಾರ, ಹನುಮಾನ್ ನಮಸ್ಕಾರಕ್ಕೆ ಸಿದ್ಧತೆ

    ಪೇಜಾವರಶ್ರೀಗಳಿಗೆ ನಾಳೆ ಯೋಗ ಗೌರವ- ಅಪರೂಪದ ವಿಷ್ಣುದಶಾವತಾರ, ಹನುಮಾನ್ ನಮಸ್ಕಾರಕ್ಕೆ ಸಿದ್ಧತೆ

    ಉಡುಪಿ: ವೃಂದಾವನಸ್ಥರಾದ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಗಳಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಸೋಮವಾರ ಉಡುಪಿಯಲ್ಲಿ ವಿಭಿನ್ನವಾಗಿ ಯೋಗ ನಮನ ಅರ್ಪಣೆ ಮಾಡಲಿದೆ.

    ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೃಷ್ಣಮಠದ ರಾಜಾಂಗಣದಲ್ಲಿ ವಿಷ್ಣು ದಶಾವತಾರ ನಮಸ್ಕಾರ ಯೋಗ ಮತ್ತು ಹನುಮಾನ ನಮಸ್ಕಾರ ನಡೆಯಲಿದೆ. ಈ ಮೂಲಕ ಶ್ರೀಗಳಿಗೆ ನುಡಿನಮನ ಸಲ್ಲಿಸಲಾಗುವುದು ಎಂದು ಸಂಸ್ಥೆಯ ಉಡುಪಿ ಸಂಚಾಲಕಿ ಭವಾನಿ ಭಟ್ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸಪ್ತ ನಮಸ್ಕಾರದಲ್ಲಿ ಸೂರ್ಯ ನಮಸ್ಕಾರ, ಶಿವ ಗಣಪತಿ ನಮಸ್ಕಾರ, ಹಿಮಾಲಯ ಗಣಪತಿ ನಮಸ್ಕಾರ, ದುರ್ಗಾ ನಮಸ್ಕಾರಗಳಿವೆ. ಈ ಪೈಕಿ ಎರಡು ನಮಸ್ಕಾರವನ್ನು ಪೇಜಾವರ ಶ್ರೀಗಳಿಗೆ ಅರ್ಪಣೆ ಮಾಡಲಿದ್ದೆವೆ. ಜೊತೆಗೆ ವೈದ್ಯರ ಜೊತೆ ಸಮಾಲೋಚನೆ ಮಾಡಿ ಅಭಿಪ್ರಾಯ ಪಡೆದು ಹನುಮಾನ್ ನಮಸ್ಕಾರ ಪ್ರದರ್ಶನ ಮಾಡಲಿದ್ದು, ಇದು ಬಹಳ ಅಪರೂಪದ ಯೋಗವಾಗಿದೆ ಎಂದರು.

    ಮೊತ್ತ ಮೊದಲ ಬಾರಿಗೆ ಪ್ರದರ್ಶನ ನಡೆಯಲಿದೆ. ಸೋಮವಾರ ವೈಕುಂಠ ಏಕಾದಶಿ ದಿನ. ದಕ್ಷಿಣ ಕನ್ನಡ, ಉಡುಪಿಯ 500 ಯೋಗ ಬಂಧುಗಳು ಪಾಲೊಳ್ಳುತ್ತಾರೆ. ಶ್ರೀಗಳ ಆಶೀರ್ವಾದ ಪಡೆಯುವ ಉದ್ದೇಶದಿಂದ ಇದನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಸಂಸ್ಥೆ ಕೇವಲ ಯೋಗ ಪ್ರದರ್ಶನ, ತರಗತಿ ಮಾಡುವುದಿಲ್ಲ. ಯೋಗ ಶಿಕ್ಷಣ ತರಬೇತಿ ಮಾಡುತ್ತೇವೆ. ಮುಂದೆ ಯೋಗ ಶಿಕ್ಷಕನನ್ನಾಗಿ ಮಾಡುತ್ತೇವೆ ಎಂದು ಮಂಗಳೂರಿನ ಅಣ್ಣಾ ಲಕ್ಷ್ಮೀನಾರಾಯಣ ಮಾಹಿತಿ ನೀಡಿದರು. ಜಗನ್ನಾಥ ಲಲಿತಾ ಕೆದ್ಲಾಯ, ಶ್ಯಾಮಲಾ ಯೋಗ ನಮನದ ಮಾಹಿತಿ ನೀಡಿದರು.