Tag: ಯೋಗಾಸನ

  • ಬೆನ್ನುನೋವೆ? – ನಿತ್ಯ ಈ 5 ಯೋಗಾಸನ ಮಾಡಿ ಪರಿಹಾರ ಕಂಡುಕೊಳ್ಳಿ..

    ಬೆನ್ನುನೋವೆ? – ನಿತ್ಯ ಈ 5 ಯೋಗಾಸನ ಮಾಡಿ ಪರಿಹಾರ ಕಂಡುಕೊಳ್ಳಿ..

    ಧುನಿಕ ಜೀವನಶೈಲಿಯಲ್ಲಿ ಬಹುತೇಕ ಮಂದಿಗೆ ಬೆನ್ನುನೋವು (Back Pain) ಕಾಣಿಸಿಕೊಳ್ಳುವುದು ಸಹಜ. ಹೆಚ್ಚಿನ ಸಮಯ ಕಂಪ್ಯೂಟರ್‌ ಮುಂದೆ ಕುಳಿತುಕೊಳ್ಳುವುದು, ದೈಹಿಕ ವ್ಯಾಯಾಮ ಇಲ್ಲದಿರುವುದು, ಸರಿಯಾದ ಭಂಗಿಯಲ್ಲಿ ಕೂರದೇ ಇರುವುದು ಬೆನ್ನುನೋವಿಗೆ ಕಾರಣವಾಗುತ್ತದೆ. ಈ ರೀತಿಯ ಹವ್ಯಾಸಗಳಿಂದ ಬೆನ್ನುಮೂಳೆ ಸಂಕುಚಿತಗೊಳ್ಳುತ್ತದೆ. ಬೆನ್ನಿನ ಮೇಲೆ ಒತ್ತಡ ಹೆಚ್ಚಾಗಿ, ಬೆನ್ನಿನ ಸ್ನಾಯುಗಳು ದುರ್ಬಲವಾಗುತ್ತವೆ. ಐಟಿ ಕಂಪನಿಗಳ ಉದ್ಯೋಗಿಗಳಲ್ಲಿ ಬೆನ್ನುನೋವು ಹೆಚ್ಚು ಕಾಣಿಸಿಕೊಳ್ಳುತ್ತದೆ. ಏಕೆಂದರೆ, ಅವರು ಹೆಚ್ಚಿನ ಸಮಯ ಕಂಪ್ಯೂಟರ್‌ ಮುಂದೆಯೇ ಕಳೆಯುತ್ತಾರೆ.

    ಬೆನ್ನುನೋವು ಉಪಶಮನಕ್ಕೆ ಹಲವಾರು ಪರಿಹಾರಗಳಿವೆ. ನೈಸರ್ಗಿಕವಾಗಿ ಪರಿಹಾರ ಬೇಕೆನ್ನುವವರು ಕೆಲವು ಯೋಗಾಸನಗಳನ್ನು ಮಾಡುವುದು ಒಳಿತು. ಇಲ್ಲಿ ತಿಳಿಸುವ ಐದು ಯೋಗಾಸನಗಳನ್ನು (Yogasana) ಪ್ರತಿ ನಿತ್ಯ ಅಭ್ಯಾಸ ಮಾಡಿದರೆ, ಬೆನ್ನುನೋವಿಗೆ ಪರಿಹಾರ ಸಿಗಲಿದೆ. ಇದನ್ನೂ ಓದಿ: ದೋಹಾ ಡೈಮಂಡ್ ಲೀಗ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ

    1. ಸುಪ್ತ ಪಾದಂಗುಷ್ಠಾಸನ
    ಒಂದು ಕಾಲನ್ನು ಚಾಚಿ ಇನ್ನೊಂದು ಕಾಲನ್ನು ಆಧಾರವಾಗಿಟ್ಟುಕೊಂಡಾಗ, ನರಮಂಡಲವು ಶಾಂತವಾಗುತ್ತದೆ. ಬೆನ್ನುಮೂಳೆಯು ಸ್ವಲ್ಪಮಟ್ಟಿಗೆ ಕುಗ್ಗುತ್ತದೆ. ಸ್ಯಾಕ್ರಮ್ ನಿಧಾನವಾಗಿ ಮತ್ತೆ ಜೋಡಿಸಲ್ಪಡುತ್ತದೆ. ಎತ್ತಿದ ಕಾಲಿಗೆ ಆಧಾರವಾಗಿ ಯೋಗ ಪಟ್ಟಿಯನ್ನು ಬಳಸುವುದರಿಂದ ಬೆನ್ನಿನ ಮೇಲಿನ ಯಾವುದೇ ಒತ್ತಡ ಇದ್ದರೂ ಕಡಿಮೆಯಾಗುತ್ತದೆ.

    2.ವಿಪರೀತ ಕರಣಿ
    ಈ ಭಂಗಿಯು ಸೊಂಟದ ಪ್ರದೇಶದಲ್ಲಿ ಸೂಕ್ಷ್ಮವಾದ ಎಳೆತವನ್ನು ಸೃಷ್ಟಿಸುತ್ತದೆ. ಊದಿಕೊಂಡ ಅಂಗಾಂಶಗಳಿಂದ ರಕ್ತ ಚಲನೆಯಾಗುತ್ತದೆ. ಉರಿಯೂತ ಕಡಿಮೆಯಾಗುತ್ತದೆ. ಜೊತೆಗೆ ಸೊಂಟವು ಮೃದುವಾಗುತ್ತದೆ. ಸೊಂಟದ ಕೆಳಗೆ ಮಡಿಸಿದ ಕಂಬಳಿ ಚಿಕಿತ್ಸಕ ಲಿಫ್ಟ್ ಅನ್ನು ನೀಡಬಹುದು. ಇದನ್ನೂ ಓದಿ: 40,000 ಫ್ಯಾನ್ಸ್‌ಗಳಿಂದ ವೈಟ್ ಜೆರ್ಸಿಯಲ್ಲಿ `ಕಿಂಗ್ ಕೊಹ್ಲಿ’ಗೆ ಗೌರವ

    3.ಸಾಲಂಬ ಭುಜಂಗಾಸನ
    ದಿಂಬನ್ನು ಬಳಸಿ ಈ ಆಸನ ಮಾಡುವುದರಿಂದ ದೇಹವು ಬೆಂಬಲಿತ ಲಿಫ್ಟ್ ಅನ್ನು ಅನುಭವಿಸಲು ಅನುವು ಮಾಡಿಕೊಡುತ್ತದೆ. ಇದು ಎದೆಗೂಡಿನ ಬೆನ್ನುಮೂಳೆಯನ್ನು ಜಾಗೃತಗೊಳಿಸುತ್ತದೆ. ಆಗಾಗ್ಗೆ ಬಾಗುವಿಕೆಯಿಂದ ಗಟ್ಟಿಯಾಗುತ್ತದೆ. ನೋವನ್ನು ಉಂಟುಮಾಡದೇ ಕೆಳ ಬೆನ್ನನ್ನು ಬಲಪಡಿಸುತ್ತದೆ.

    4.ಅರ್ಧ ಜಠರ ಪರಿವರ್ತನಾಸನ
    ಈ ಭಂಗಿಯಲ್ಲಿ, ಎದೆಯು ಮೇಲ್ಮುಖವಾಗಿ ಇರುವಾಗ ಮೊಣಕಾಲುಗಳು ಒಂದು ಬದಿಗೆ ಬೀಳುತ್ತವೆ. ಚಲನೆ ಕಡಿಮೆ, ಆದರೆ ಪರಿಣಾಮವು ಅಗಾಧವಾಗಿರುತ್ತದೆ. ಬೆನ್ನುಮೂಳೆಯ ಸ್ನಾಯುಗಳು ಮೃದುವಾಗುವಂತೆ ಮಾಡುತ್ತದೆ. ತಂತುಕೋಶವು ಒತ್ತಡವನ್ನು ಬಿಡುಗಡೆ ಮಾಡುತ್ತದೆ. ಇದನ್ನೂ ಓದಿ: ‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!

    5.ಆನಂದ ಬಾಲಾಸನ
    ಈ ಭಂಗಿಯಲ್ಲಿ ನಿಧಾನವಾಗಿ ಆಕಡೆ ಈಕಡೆ ತೂಗಾಡುವಾಗ ಬೆನ್ನು ನೆಲಕ್ಕೆ ಮಸಾಜ್ ಮಾಡಿಕೊಳ್ಳುತ್ತದೆ. ಸ್ಯಾಕ್ರೊಲಿಯಾಕ್ ಕೀಲುಗಳನ್ನು ನಿರ್ಲಕ್ಷಿಸಿ, ಅವುಗಳಿಗೆ ಬೇಕಾದ ಸ್ಥಳಾವಕಾಶ ಸಿಗುತ್ತದೆ. ಮಲಗುವಾಗ ಮಕ್ಕಳು ಸಹಜವಾಗಿ ಹಿಗ್ಗುತ್ತವೆ. ಅದೇ ರೀತಿಯ ಅನುಭವವನ್ನು ಈ ಆಸನ ನೀಡುತ್ತದೆ.

  • ಯೋಗಾ ಯೋಗ – ಶರೀರ, ಮನಸ್ಸಿನ ಆರೋಗ್ಯದ ಕೊಂಡಿ ಯೋಗ

    ಯೋಗಾ ಯೋಗ – ಶರೀರ, ಮನಸ್ಸಿನ ಆರೋಗ್ಯದ ಕೊಂಡಿ ಯೋಗ

    – ಯೋಗದ ಮಹತ್ವ ನಿಮಗೆಷ್ಟು ಗೊತ್ತು?

    ಪ್ರತಿ ವರ್ಷ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನ (International Yoga Day) ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಾನಸಿಕ ಒತ್ತಡ, ದೈಹಿಕ ಸೌಂದರ್ಯ ಮತ್ತು ಸಮತೋಲನ, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಸಲುವಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ಪ್ರಖ್ಯಾತಿ ಪಡೆದಿದ್ದು, ಪ್ರತಿ ವರ್ಷವೂ ಜಾಗೃತಿ ಮೂಡಿಸುವ ಉದ್ದೇಶದಿಂದ ಒಂದೊಂದು ವಸ್ತು ವಿಷಯಗಳನ್ನ ಆಯ್ಕೆ ಮಾಡಲಾಗುತ್ತದೆ. ಈ ಬಾರಿ `ವಸುದೈವ ಕುಟುಂಬಕಂ’ ಥೀಮ್ ಅನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

    ಈ ಯೋಗವನ್ನು ಭಾರತವು ವಿಶ್ವಕ್ಕೆ ನೀಡಿದ ಮಹತ್ವದ ಕೊಡುಗೆಯಾಗಿದೆ. ಹೌದು. 6,000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವೂ ಆಗಿರುವ ಯೋಗವು ದೇಹ ಮತ್ತು ಮನಸ್ಸನ್ನು ಸಂಪರ್ಕಿಸುವ ಪ್ರಾಚೀನ ಕಲೆಯೂ ಆಗಿದೆ. ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಅಭ್ಯಾಸ ಮಾಡುವ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನ ಪ್ರತಿವರ್ಷ ಆಚರಿಸಲಾಗುತ್ತದೆ.

    2015 ಜೂನ್ 21ರಂದು ಮೊದಲ ಬಾರಿಗೆ ಯೋಗ ದಿನವನ್ನ ಆಚರಿಸಲಾಯಿತು. ರಾಷ್ಟ್ರ ರಾಜಧಾನಿಯ ರಾಜಪಥದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಹೊಸ ದಾಖಲೆಯನ್ನೂ ಬರೆಯಿತು. 2015 ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸ್ಮರಣಾರ್ಥವಾಗಿ ಭಾರತೀಯ ರಿಸರ್ವ್ ಬ್ಯಾಂಕ್ 10 ರೂಪಾಯಿಯ ನಾಣ್ಯವನ್ನೂ ಸಹ ಬಿಡುಗಡೆ ಮಾಡಿತು.

    ವಿಶ್ವ ಯೋಗದಿನದ ಐತಿಹಾಸಿಕ ಕ್ಷಣ ನೆನಪಿದೆಯಾ?
    ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕರಡು ಪ್ರಸ್ತಾವನೆಯನ್ನ 2014ರ ಡಿಸೆಂಬರ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ, ಭಾರತದ ಖಾಯಂ ಪ್ರತಿನಿಧಿಯಾಗಿರುವ ಅಶೋಕ್ ಕುಮಾರ್ ಮಂಡಿಸಿದ್ದರು. ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು, ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದವು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಪ್ರಸ್ತಾವನೆಗೆ ಅನುಮೋದನೆಯನ್ನು ನೀಡಿದ್ದವು.

    ಮೊದಲ ಯೋಗ ದಿನ ಆಚರಣೆ ನಡೆದಿದ್ದು ಯಾವಾಗ?
    2015ರ ಜೂನ್ 21ರಂದು ಚೊಚ್ಚಲ ಅಂತಾರಾಷ್ಟ್ರೀಯ ಯೋಗ ದಿನವನ್ನ ಆಚರಿಸಲಾಯಿತು. ಆಯುಶ್ ಸಚಿವಾಲಯದ ನೇತೃತ್ವದಲ್ಲಿ ರಾಜಪಥದಲ್ಲಿ ವಿಜೃಂಭಣೆಯಿಂದ ಯೋಗದಿನವನ್ನ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ 84 ರಾಷ್ಟ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, 21 ಯೋಗ ಆಸನಗಳನ್ನ ಅಭ್ಯಸಿಸಿದ್ದರು.

    ಯೋಗದ ಮಹತ್ವ ನಿಮಗೆಷ್ಟು ಗೊತ್ತು?
    ಯೋಗದಿಂದ ಹೆಚ್ಚು ಆರೋಗ್ಯ ಪ್ರಯೋಜನಗಳು ಇವೆ ಎಂಬ ಕಾರಣಕ್ಕೆ ಇಂದು ಅನೇಕ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿವೆ. ಯೋಗವು ಮನಸ್ಸು, ದೇಹ ಎಲ್ಲದರ ಶುದ್ಧೀಕರಣಕ್ಕೆ ನೆರವಾಗುತ್ತದೆ. ಯೋಗವು ನಮ್ಮನ್ನ ನೈಜತೆಯ ಹತ್ತಿರಕ್ಕೆ ಕರೆದೊಯ್ಯುತ್ತದೆ. ಯೋಗವು ವ್ಯಾಯಮ ಮಾತ್ರವಲ್ಲದೇ ನಿಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಕೊಳ್ಳಲು ನೆರವಾಗುತ್ತದೆ. ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹವಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನ ಸುಧಾರಿಸಲು ಸಹಾಯ ಮಾಡುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನ ಒಗ್ಗೂಡಿಸುತ್ತದೆ. ಹಾಗೆಯೇ ಪ್ರಕೃತಿ ಮತ್ತು ಮನುಷ್ಯನ ನಡುವೆ ಸಾಮರಸ್ಯ ಮೂಡಿಸುವ ಜೊತೆಗೆ ಮನುಷ್ಯನಲ್ಲಿ ಸಕಾರಾತ್ಮಕ ಭಾವನೆಯುಂಟು ಮಾಡಲು ಸಹಕರಿಸುತ್ತದೆ.

    ಜೂನ್ 21 ರಂದೇ ಯೋಗ ದಿನಾಚರಣೆ ಏಕೆ?
    ಜೂನ್ 21 ಉತ್ತರ ಗೋಳಾರ್ಧದ ವರ್ಷದ ಅತಿ ದೀರ್ಘವಾದ ದಿನವಾಗಿದೆ. ಈ ದಿನವನ್ನು ಬೇಸಿಗೆ ಆಯನ ಸಂಕ್ರಾಂತಿ ದಿನವೆಂದು ಅಂದರೆ ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನವೆಂದು ಕರೆಯಲಾಗುತ್ತದೆ. ಯೋಗದ ದೃಷ್ಟಿಕೋನದಲ್ಲಿ ಇದು ಅತ್ಯಂತ ಹೆಚ್ಚು ಮಹತ್ವ ಪಡೆದಿದೆ. ಇದು ದಕ್ಷಿಣಯಾನಕ್ಕೆ ಪರಿವರ್ತನೆ ಎಂದು ಗುರುತಿಸಲಾಗುತ್ತದೆ. ದಕ್ಷಿಣ ಯಾನವನ್ನ ಆಧ್ಯಾತ್ಮಿಕ ಅಭ್ಯಾಸಗಳಿಗೆ ನೈಸರ್ಗಿಕ ಬೆಂಬಲವೆಂದು ಪರಿಗಣಿಸಲಾಗುತ್ತದೆ. ಆದಿ ಕಾಲದಲ್ಲಿ ಸೂರ್ಯಾಭಿಮುಖವಾಗಿ ದೃಷ್ಟಿ ನೆಟ್ಟು ದಿವ್ಯ ಶಕ್ತಿ ಉದ್ದೀಪನಗೊಳಿಸುತ್ತದೆ ಎಂದು ಈ ದಿನವನ್ನು ನಂಬಲಾಗಿದೆ. ಬೇಸಿಗೆ ಆಯನ ಸಂಕ್ರಾAತಿಯ ಬಳಿಕ ಮೊದಲ ಹುಣ್ಣಿಮೆಯನ್ನ ಗುರು ಪೂರ್ಣಿಮೆ ಎಂದು ಕರೆಯಲಾಗುತ್ತದೆ.

  • ಮೋದಿ ಯೋಗಕ್ಕೆ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ- ಇಲ್ಲಿದೆ ಕಾರ್ಯಕ್ರಮದ ವಿವರ

    ಮೋದಿ ಯೋಗಕ್ಕೆ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ- ಇಲ್ಲಿದೆ ಕಾರ್ಯಕ್ರಮದ ವಿವರ

    ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸಿದ್ಧತೆಗಳು ಬಿರುಸು ಪಡೆದು ಕೊಂಡಿವೆ. ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಈ ಕಾರ್ಯಕ್ರಮದ ಮೊದಲ ಹಂತದ ರೂಪು ರೇಷೆಗಳು ಸಿದ್ಧವಾಗಿವೆ. ಈ ಮಧ್ಯೆ ಕಾರ್ಯದಲ್ಲಿ ಪಾಲ್ಗೊಳ್ಳುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.

    ಹೌದು. ಮೈಸೂರು ಅರಮನೆ ಮುಂಭಾಗ ಜೂನ್ 21 ರಂದು ಪ್ರಧಾನ ಮಂತ್ರಿಗಳು ಯೋಗ ಮಾಡಲಿದ್ದಾರೆ. ಪ್ರಧಾನಿಗಳ ಜೊತೆ 15 ಸಾವಿರ ಜನ ಯೋಗ ಮಾಡಲಿದ್ದು ಇದಕ್ಕಾಗಿ ಸಿದ್ಧತೆಗಳು ನಡೆದಿವೆ. ಅಂದು ಬೆಳಗ್ಗೆ 6.30 ಕ್ಕೆ ಯೋಗ ಆರಂಭವಾಗಲಿದೆ. ಒಟ್ಟು ಮುಕ್ಕಾಲು ಗಂಟೆ 21 ಯೋಗದ ಆಸನಗಳನ್ನು ಮಾಡಲಾಗುತ್ತದೆ.

    ಪ್ರಧಾನಿಗಳು ಯೋಗ ಆರಂಭಿಸುವ ಒಂದು ಗಂಟೆ ಮುನ್ನ ಅಂದರೆ ಬೆಳಗ್ಗೆ 5.30 ರ ಒಳಗೆ ನೋಂದಣಿ ಮಾಡಿ ಕೊಂಡಿರುವ ಯೋಗಪಟುಗಳು ಅರಮನೆ ಒಳಗೆ ಬರಬೇಕು. ಸರಿಯಾಗಿ 5.30 ಕ್ಕೆ ಅರಮನೆಯ ಎಲ್ಲಾ ದ್ವಾರಗಳು ಬಂದ್ ಆಗುತ್ತವೆ. ನೋಂದಣಿಯಾದ ಪ್ರತಿಯೊಬ್ಬ ಯೋಗಪಟುವಿಗೂ ಯೋಗ ಮ್ಯಾಟ್, ಶೂ ಇಡುವ ಬಾಕ್ಸ್, ಮೊಬೈಲ್ ಇಟ್ಟುಕೊಳ್ಳಲು ಪ್ರತ್ಯೇಕ ಕವರ್ ಅನ್ನು ಕೇಂದ್ರದ ಆಯುಷ್ ಇಲಾಖೆಯೆ ನೀಡಲಿದೆ. ಅಲ್ಲದೆ ಅರಮನೆ ಆವರಣದಲ್ಲಿ ಯೋಗ ಮಾಡಲು ನೋಂದಣಿ ಮಾಡುವವರು ಕೊರೊನಾ ಎರಡನೇ ಡೋಸ್ ಕಡ್ಡಾಯವಾಗಿ ಪಡೆದಿರಬೇಕು. ಯೋಗ ದಿನಕ್ಕೂ 72 ಗಂಟೆ ಮುಂಚಿನ ಕರೋನಾ ನೆಗಟಿವ್ ರೀಪೋರ್ಟ್ ಕಡ್ಡಾಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಇದನ್ನೂ ಓದಿ: ವಿಶ್ವವೇ ಮುಸ್ಲಿಮರಿಗೆ ಕ್ಷಮೆ ಕೇಳ್ಬೇಕು – 500 ವೆಬ್‌ಸೈಟ್ಸ್ ಹ್ಯಾಕ್, ಪ್ರವಾದಿ ಅವಹೇಳನಕ್ಕಿದೆಯಾ ಲಿಂಕ್?

    ಒಟ್ಟು 15 ಸಾವಿರ ಜನರಲ್ಲಿ 12 ಸಾವಿರ ಸ್ಥಳೀಯರು, 1 ಸಾವಿರ ವಿವಿಧ ರಾಜ್ಯಗಳ ಪ್ರತಿನಿಧಿಗಳು, ಒಂದು ಸಾವಿರ ಆಯುಷ್ ಇಲಾಖೆ ಹಾಗೂ ಕೇಂದ್ರದ ವಿವಿಧ ಇಲಾಖೆ ಅಧಿಕಾರಿಗಳು, ಒಂದು ಸಾವಿರ ಕೇಂದ್ರ ವೈದ್ಯಕೀಯ ವಿಭಾಗದ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ. 12 ಸಾವಿರ ಸ್ಥಳೀಯರ ಆಯ್ಕೆ ಪ್ರಕ್ರಿಯೆ ಕೂಡ ಮುಗಿದಿದೆ. ಇದರಲ್ಲಿ ಪೌರಕಾರ್ಮಿಕರು, ಆಟೋ ಚಾಲಕರು, ತೃತೀಯ ಲಿಂಗಿಗಳು, ಯೋಗ ಒಕ್ಕೂಟಗಳಲ್ಲಿನ ಯೋಗ ಪಟುಗಳು, ರಾಜ್ಯ ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿ, ಹೋಟೆಲ್ ಸಿಬ್ಬಂದಿ, ಪೊಲೀಸ್ ಇಲಾಖೆ ಹೀಗೆ ಎಲ್ಲಾ ಕಾರ್ಮಿಕ ವರ್ಗ, ಎಲ್ಲಾ ಸ್ಥರದ ಜನರನ್ನು ಸೇರಿಸಿ ಕೊಳ್ಳಲಾಗಿದೆ. ಅವರ ಕೋವಿಡ್ ಲಸಿಕಾ ವರದಿಗಳನ್ನು ಪಡೆಯಲಾಗಿದೆ. ಅವರ ಪಾಸ್ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ.

    ಅರಮನೆ ಒಳಗೆ ಒಟ್ಟು 17 ಬ್ಲಾಕ್ ಮಾಡಲಾಗುತ್ತದೆ. ಪ್ರತಿ ಬ್ಲಾಕ್ ನಲ್ಲೂ 100 ಜನ ಯೋಗ ಮಾಡಲಿದ್ದಾರೆ. ಪಾಸ್ ಗಳಲ್ಲೆ ಯಾವ ಬ್ಲಾಕ್ ಗೆ ಹೋಗಬೇಕು ಎಂಬ ಸೂಚನೆ ಇರಲಿದೆ. ಒಟ್ಟು 120 ಮೊಬೈಲ್ ಶೌಚಾಲಯದ ವ್ಯವಸ್ಥೆ ಆಗಲಿದೆ. ಇಡೀ ಕಾರ್ಯಕ್ರಮದ ನಿರ್ವಹಣೆಯನ್ನು ಕೇಂದ್ರದ ಆಯುಷ್ ಇಲಾಖೆಯೆ ಮಾಡಲಿದೆ. ಆಹ್ವಾನ ಪತ್ರಿಕೆ ಮತ್ತು ವೇದಿಕೆ ನಿರ್ಮಾಣದ ಜವಾಬ್ದಾರಿ ಮಾತ್ರ ರಾಜ್ಯ ಸರಕಾರ ನಿರ್ವಹಿಸಲಿದೆ. ಇದನ್ನೂ ಓದಿ: ಕೋವಿಡ್‌ನಿಂದ ಹಳೆಯದೆಲ್ಲಾ ಮರೆತುಹೋಗಿದೆ ಎಂದ ದಿಲ್ಲಿ ಆರೋಗ್ಯ ಸಚಿವ – ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್‌

    ಕೇಂದ್ರ ಸರಕಾರ ಕ್ವಾಲಿಟಿ ಮುಖ್ಯ ಹೊರತು ಕ್ವಾಂಟಿಟಿ ಮುಖ್ಯವಲ್ಲ ಎಂದು ಸ್ಪಷ್ಟವಾಗಿ ಜಿಲ್ಲಾಡಳಿತಕ್ಕೆ ಸಂದೇಶ ರವಾನಿಸಿದೆ. ಹೀಗಾಗಿ ಬೇಕಾಬಿಟ್ಟಿ ಜನರನ್ನು ಸೇರಿಸದೆ ಯೋಗವನ್ನು ಕ್ರಮ ಬದ್ದವಾಗಿ ಮಾಡುವವರನ್ನೆ ಗುರುತಿಸಿ ಯೋಗ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ.

  • ಯೋಗಾಸನ ಪಾಠ ಮಾಡಿದ ಸ್ಯಾಂಡಲ್‍ವುಡ್ ಮೋಹಕ ತಾರೆ

    ಯೋಗಾಸನ ಪಾಠ ಮಾಡಿದ ಸ್ಯಾಂಡಲ್‍ವುಡ್ ಮೋಹಕ ತಾರೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಮ್ಯಾ ಅಭಿಮಾನಿಗಳಿಗೆ ಯೋಗಾಸನದ ಪಾಠ ಮಾಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಇದು ಏನು ಎಂದು ನೀವು ಆಶ್ಚರ್ಯ ಪಡುತ್ತಿದ್ದೀರಾ? ಇದು ಸೂರ್ಯ ನಮಸ್ಕಾರದ ಕುರಿತಾಗಿ ನನ್ನ ವಿವರಣೆಯಾಗಿದೆ. ನಾನು ಬೆಳಿಗ್ಗೆ ಯೋಗಾಸನವನ್ನು ಮಾಡುತ್ತಿದ್ದಾಗ ಈ ಆಸನಗಳು ಜೀವನಕ್ಕೆ ಹೋಲುತ್ತವೆ ಎಂದು ನಾನು ಅರಿತುಕೊಂಡೆ. ಹೀಗಾಗಿ ನನ್ನ ಆಲೋಚನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಚಿತ್ರವನ್ನು ನಾನು ಬಿಡಿಸಿದ್ದೇನೆ. ನನಗೆ ಚಿತ್ರ ಬಿಡಿಸಲು ಬರುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:   ತಾಯಿ ಆಗಲು ಸಮಂತಾ ಬಯಸಿದ್ರು-ನಿರ್ದೇಶಕರ ಪುತ್ರಿ ಬಿಚ್ಚಿಟ್ಟರು ವಿಚ್ಛೇದನದ ಗುಟ್ಟು

     

    View this post on Instagram

     

    A post shared by Ramya/Divya Spandana (@divyaspandana)

    ಈ ಆಸನದಂತೆಯೇ ಜೀವನವು ಏರಿಳಿತಗಳನ್ನು ಹೊಂದಿದೆ. ಜೀವನವು ನಿರಂತರ ಬದಲಾವಣೆಯ ಚಲನೆಯಾಗಿದೆ. ಯೋಗಾಸನವು ಜೀವನವನ್ನು ಪೂರ್ಣವಾಗಿ ಬದುಕಲು, ಸಮತೋಲನ, ಸಮಚಿತ್ತತೆಯನ್ನು ಕಂಡುಕೊಳ್ಳಲು ನೆರವಾಗುತ್ತದೆ. ನಾನು ಯೋಗಾಸನವನ್ನು ಕೆಲವೇ ತಿಂಗಳುಗಳಿಂದ ಮಾಡುತ್ತಿದ್ದೇನೆ. ಆದರೆ ನಾನು ಅದನ್ನು ಪ್ರೀತಿಸುತ್ತೇನೆ. ನನ್ನ ಬಗ್ಗೆ ಚೆನ್ನಾಗಿ ಯೋಚಿಸಲು, ಗಮನಿಸಲು ಮತ್ತು ಅರ್ಥಮಾಡಿಕೊಳ್ಳಲು ಇದು ನನಗೆ ಹೆಚ್ಚಿನ ಶಕ್ತಿ ನೀಡಿದೆ. ನಾನು ನನ್ನ ಶಿಕ್ಷಕರಿಗೆ ತುಂಬಾ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡು ಅಭಿಮಾನಿಗಳಿಗೆ ಯೋಗದ ಕುರಿತಾಗಿ ಪಾಠ ಮಾಡಿದ್ದಾರೆ. ಸೂರ್ಯ ನಮಸ್ಕಾರದ ಕೆಲವು ರೇಖಾ ಚಿತ್ರಗಳನ್ನು ತಾವೇ ಬಿಡಿಸಿ ಇನ್‍ಸ್ಟಾಗ್ರಾಮ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ಸುದೀಪ್ ನಿಮಗೆ ವಯಸ್ಸು ಆಗೋದೇ ಇಲ್ವಾ: ರಮ್ಯಾ

    ಸ್ಯಾಂಡಲ್‍ವುಡ್‍ನ ಮೋಹಕ ತಾರೆ ರಮ್ಯಾ ಅವರು ಸಿನಿಮಾದಿಂದ ದೂರವಾಗಿರಬಹುದು. ಆದರೆ ಅವರು ಸೋಶಿಯಲ್ ಮೀಡಿಯಾ ಮೂಲಕವಾಗಿ ಅಭಿಮಾನಿಗಳೊಂದಿಗೆ ನಿರಂತರ ಸಂರ್ಪದಲ್ಲಿದ್ದಾರೆ. ಇದೀಗ ಯೋಗಾಸನ ಪಾಠ ಮಾಡಿದ್ದಾರೆ. ಅಭಿಮಾನಿಗಳು ರಮ್ಯಾ ಅವರಿಗೆ ಯೋಗಾಸನದ ಕುರಿತಾಗಿ ಇರುವ ಪ್ರೀತಿಯನ್ನು ಕಂಡು ಕಾಮೆಂಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ಯೋಗ ಮಾಡಲು ಹೋಗಿ ಟ್ರೋಲ್‍ಗೊಳಗಾದ ನಟಿ ರಾಖಿ ಸಾವಂತ್

    ಯೋಗ ಮಾಡಲು ಹೋಗಿ ಟ್ರೋಲ್‍ಗೊಳಗಾದ ನಟಿ ರಾಖಿ ಸಾವಂತ್

    ಮುಂಬೈ: ಒಂದಲ್ಲ ಒಂದು ವಿಚಾರದಲ್ಲಿ ವಿವಾದ ಎಬ್ಬಿಸುತ್ತಿರುವ ಡ್ರಾಮಾ ಕ್ವೀನ್ ರಾಖಿ ಸಾವಂತ್ ಇದೀಗ ತಮ್ಮ ಯೋಗಾಸನದಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೋಲ್ ಆಗಿದ್ದಾರೆ.

    ಹೌದು. ತರಬೇತುದಾರರ ಸಹಾಯದಿಂದ ರಾಖಿ ಯೋಗಾಸನವೊಂದನ್ನು ಮಾಡಿದ್ದಾರೆ. ಇದರ ವೀಡಿಯೋವನ್ನು ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವೀಡಿಯೋ ಇದೀಗ ಟ್ರೋಲಿಗರ ಬಾಯಿಗೆ ಆಹಾರ ಸಿಕ್ಕಂತಾಗಿದೆ. ವೀಡಿಯೋದಲ್ಲಿ ರಾಖಿ, ಚರ್ಮದ ಬಣ್ಣದ ಸ್ಪೋಟ್ರ್ಸ್ ಬ್ರಾ ಧರಿಸಿದ್ದಾರೆ. ಆದರೆ ಆಕೆ ಬ್ರಾ ಧರಿಸಿಯೇ ಇಲ್ಲವೆಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.

     

    View this post on Instagram

     

    A post shared by Rakhi Sawant (@rakhisawant2511)

    ಈ ಹಿಂದೆ ನಟಿ ಕಂಗನಾ ರಣಾವತ್ ಅವರಿಗೆ ರಾಖಿ ಮನವಿ ಮಾಡಿದ್ದರು. ಕಂಗನಾ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ರಾಖಿ, ಕಂಗನಾಜೀ ನಿಮ್ಮ ಬಳಿ ಕೋಟ್ಯಂತರ ರೂಪಾಯಿ ಹಣವನ್ನ ದೇಶಸೇವೆಗಾಗಿ ಬಳಸಿ ಎಂದು ಹೇಳಿದ್ದರು. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಕೂಡ ಶೇರ್ ಮಾಡಿಕೊಂಡಿದ್ದರು. ಇದಕ್ಕೂ ಮೊದಲು ತರಕಾರಿ ಖರೀದಿಗಾಗಿ ಮಾರುಕಟ್ಟೆಗೆ ಬಂದಿದ್ದ ರಾಖಿ ಪಿಪಿಇ ಕಿಟ್ ಧರಿಸಿದ್ದರು. ಆದರೆ ವೀಡಿಯೋ ನೋಡಿದ ನೆಟ್ಟಿಗರು ನಿಮ್ಮ ಪಿಪಿಇ ಕಿಟ್ ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ್ದರು.

     

    View this post on Instagram

     

    A post shared by Rakhi Sawant (@rakhisawant2511)

    ರಾಖಿ ಸಾವಂತ್ ಅವರು ಬಿಗ್ ಬಾಸ್ ಸೀಸನ್ 14ರಲ್ಲಿ ಸ್ಪರ್ಧಿಸಿದ್ದರು. ಆದರೆ ಅರ್ದಧಲ್ಲಿಯೇ ಸ್ಪರ್ಧೆ ಕೈ ಬಿಟ್ಟಿದ್ದರು. ಆ ಬಳಿಕ ತಮ್ಮ ತಾಯಿಗೆ ಚಿಕಿತ್ಸೆ ಮಾಡಿದ್ದು, ರಾಖಿ ತಾಯಿ ಚಿಕಿತ್ಸೆಗೆ ಸಲ್ಮಾನ್ ಖಾನ್ ಕೂಡ ನೆರವು ನೀಡಿದ್ದರು. ಇದನ್ನೂ ಓದಿ: ನಾನು 5ಜಿ ವಿರೋಧಿ ಅಲ್ಲ, ಅದರ ಸಮಸ್ಯೆಗಳನ್ನು ತಡೆಯಬೇಕು: ಜೂಹಿ ಚಾವ್ಲಾ

     

    View this post on Instagram

     

    A post shared by Rakhi Sawant (@rakhisawant2511)

     

  • ಒಡತಿಯೊಂದಿಗೆ ಯೋಗ ಮಾಡಿದ ಕ್ಯೂಟ್ ಶ್ವಾನ – ವೀಡಿಯೋ ವೈರಲ್

    ಒಡತಿಯೊಂದಿಗೆ ಯೋಗ ಮಾಡಿದ ಕ್ಯೂಟ್ ಶ್ವಾನ – ವೀಡಿಯೋ ವೈರಲ್

    ಶ್ವಾನವೊಂದು ತನ್ನ ಒಡತಿಯೊಂದಿಗೆ ಯೋಗಾಭ್ಯಾಸ ಮಾಡುತ್ತಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಎಲ್ಲರ ಮನಗೆಲ್ಲುತ್ತಿದೆ.

    ವೀಡಿಯೋದಲ್ಲಿ ಶ್ವಾನವು ತನ್ನ ಒಡತಿ ಜೊತೆ ಯೋಗಾಸನದ ಮ್ಯಾಟ್ ಹಾಸಿಕೊಂಡು ಅವರ ಪಕ್ಕದಲ್ಲಿ ನಿಂತು ಯೋಗ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಈ ವೀಡಿಯೋವನ್ನು ಮೇರಿ ಹಾಗೂ ಸೀಕ್ರೆಟ್ ಎಂಬವರು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕೆಲವು ಸರಳ ಬೆಳಗಿನ ಡೊಗಾ. ಸೀಕ್ರೆಟ್(ಶ್ವಾನ) ಕೊನೆಯದಾಗಿ ಪೋಸ್ ನೀಡಿದೆ. ಮೊದಲಿಗೆ ಒಂದು ಬದಿಯಲ್ಲಿ ಇನ್ನೊಂದಕ್ಕೆ ಸುತ್ತಿಕೊಳ್ಳದೆ ತನ್ನ ಪಂಜಗಳನ್ನು ಹಿಡಿದಿಡಲು ಕಷ್ಟಪಟ್ಟಿತು. ಆದರೆ ಸಮತೋಲನವನ್ನು ಹೇಗೆ ಉಳಿಸಿಕೊಳ್ಳಬೇಕೆಂದು ಇದೀಗ ಶ್ವಾನ ಕಲಿತುಕೊಂಡಿದೆ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.

     

    View this post on Instagram

     

    A post shared by Mary & Secret (@my_aussie_gal)

    ವೀಡಿಯೋದಲ್ಲಿ 6 ವರ್ಷದ ಸೀಕ್ರೆಟ್, ಮಕ್ಕಳಂತೆ ಯೋಗಾಸನದ ಭಂಗಿಗಳನ್ನು ತೋರಿಸಿದೆ. ಕೋಬ್ರಾ ಪೋಸ್, ಡೌನ್‍ವಾರ್ಡ್ ಡಾಗ್, ಮೂರು ಕಾಲಿನಲ್ಲಿ ನಿಂತುಕೊಂಡು ಯೋಗ ಮಾಡಿದೆ. ಅಲ್ಲದೆ ಮೆಲೋಡಿ ಪಿಯಾನೋ ಮ್ಯೂಸಿಕ್‍ನನ್ನು ಹಿನ್ನೆಲೆಯಲ್ಲಿ ಪ್ಲೇ ಆಗುತ್ತಿರುವುದವುದನ್ನು ಕೇಳಬಹುದಾಗಿದೆ.

    ಅಮೆರಿಕದ ಮಾಜಿ ವೃತ್ತಿಪರ ಬಾಸ್ಕೆಟ್ ಬಾಲ್ ಆಟಗಾರ ರೆಕ್ಸ್ ಚಾಪ್ಮನ್‍ರವರು ಕೂಡ ಈ ವೀಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಲ್ಲಿಯವರೆಗೂ ಈ ವೀಡಿಯೋಗೆ ಸೋಶಿಯಲ್ ಮೀಡಿಯಾದಲ್ಲಿ 4 ಮಿಲಿಯನ್ ವ್ಯೂಸ್ ಬಂದಿದೆ.

  • ಹುಬ್ಬಳ್ಳಿಯಲ್ಲಿ ಉಪರಾಷ್ಟ್ರಪತಿಯಿಂದ ಯೋಗಾಸನ

    ಹುಬ್ಬಳ್ಳಿಯಲ್ಲಿ ಉಪರಾಷ್ಟ್ರಪತಿಯಿಂದ ಯೋಗಾಸನ

    ಹುಬ್ಬಳ್ಳಿ: ಇಲ್ಲಿನ ರೇಲ್ವೆ ಮೈದಾನದಲ್ಲಿ ನಡೆಯುತ್ತಿರುವ ಯೋಗಗುರು ಬಾಬಾ ರಾಮ್ ದೇವ್ ಅವರ ಯೋಗ ಚಿಕಿತ್ಸೆ ಮತ್ತು ಧ್ಯಾನ ಶಿಬಿರದಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರು ಭಾಗವಹಿಸಿ ಸ್ವತಃ ತಾಡಾಸನ ಪ್ರದರ್ಶಿಸಿದರು.

    ಉಪರಾಷ್ಟ್ರಪತಿಗಳ ಸಮ್ಮುಖದಲ್ಲಿ ಬಾಬಾ ರಾಮ್ ದೇವ್ ಅವರು ವೃಕ್ಷಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಮಂಡೂಕಾಸನ, ಧನುರಾಸನ, ಮರ್ಕಟಾಸನ, ಭುಜಂಗಾಸನ ಮತ್ತಿತರ ಯೋಗಾಸನಗಳನ್ನು ಪ್ರದರ್ಶಿಸಿದರು.

    ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಬೀದರ್ ಸಂಸದ ಭಗವಂತ ಖೂಬಾ, ವಿಆರ್‍ಎಲ್ ಸಮೂಹ ಸಂಸ್ಥೆಗಳ ಎಂ.ಡಿ ಆನಂದ್ ಸಂಕೇಶ್ವರ, ಪತಂಜಲಿ ಯೋಗ ಸಮಿತಿಯ ಭವರಲಾಲ ಆರ್ಯ ಸೇರಿದಂತೆ ಗಣ್ಯರು ವೇದಿಕೆಯಲ್ಲಿದ್ದರು.

  • ವಿಷ್ಣು ದಶಾವತಾರ, ಹನುಮಾನ್ ನಮಸ್ಕಾರದ ಮೂಲಕ ಪೇಜಾವರ ಶ್ರೀಗಳಿಗೆ ಯೋಗ ನಮನ

    ವಿಷ್ಣು ದಶಾವತಾರ, ಹನುಮಾನ್ ನಮಸ್ಕಾರದ ಮೂಲಕ ಪೇಜಾವರ ಶ್ರೀಗಳಿಗೆ ಯೋಗ ನಮನ

    ಉಡುಪಿ: ಪೇಜಾವರ ಶ್ರೀಗಳು ಕೊನೆಯ ದಿನಗಳಲ್ಲಿ ಪಾದರಸದಂತೆ ಓಡಾಡಿದ ಯತಿಶ್ರೇಷ್ಠರು. ವಯಸ್ಸು 89 ಆದರೂ ಅವರ ಮನಸ್ಸು 29ರ ಯುವಕನಂತಿತ್ತು. ದಿನವೊಂದಕ್ಕೆ ಒಂದೂವರೆ ಸಾವಿರ ಕಿಲೋ ಮೀಟರ್ ಪ್ರಯಾಣಿಸಿದರೂ ದಣಿಯದ ದೇಹ. ಶ್ರೀಗಳು ಛಾಪು ಮೂಡಿಸದ ಕ್ಷೇತ್ರವಿಲ್ಲ. ಇಷ್ಟೆಲ್ಲದಕ್ಕೆ ಕಾರಣ ಅವರ ನಿರಂತರ ಯೋಗ. ವೃಂದಾವನಸ್ಥ ಶ್ರೀಗಳಿಗೆ ಉಡುಪಿಯಲ್ಲಿ ಕಠಿಣ ಯೋಗದ ಮೂಲಕವೇ ನಮನ ಅರ್ಪಿಸಲಾಯಿತು.

    ವೃಂದಾವನಸ್ಥರಾದ ಪೇಜಾವರ ಶ್ರೀಗಳನ್ನು ಸನ್ಯಾಸಿ ಅಂತ ತಗೊಂಡರೆ ಸನ್ಯಾಸಿ. ಸಾಮಾಜಿಕ ಕ್ರಾಂತಿಕಾರಿ ಅಂತ ನೋಡಿದರೆ ಅದಕ್ಕೂ ಸಲ್ಲುತ್ತಾರೆ. ರಾಜಕೀಯ ನಾಯಕರಿಗೆ ರಾಜಗುರು. ಪೇಜಾವರ ಶ್ರೀಗಳು ಪರಿಸರ ಕಾಳಜಿಯನ್ನೂ ಹೊಂದಿದ್ದರು. ಶ್ರೀಗಳ ಬಹುಮುಖಿ ವ್ಯಕ್ತಿತ್ವಕ್ಕೆ ಕಾರಣ ಅವರು ಪ್ರಾತಃಕಾಲ 4ಗಂಟೆಗೆ ಎದ್ದು ಅಭ್ಯಾಸ ಮಾಡುತ್ತಿದ್ದ ಯೋಗಾಸನ.

    ಯೋಗಪಟುವಾಗಿದ್ದ ಪೇಜಾವರ ಶ್ರೀಗಳಿಗೆ ಉಡುಪಿಯಲ್ಲಿ ವಿಭಿನ್ನ ರೀತಿಯ ಯೋಗ ನುಡಿನಮನ ನಡೆಯಿತು. ಕೃಷ್ಣಮಠದ ರಾಜಾಂಗಣದಲ್ಲಿ ವೈಕುಂಠ ಏಕಾದಶಿ ಸಂದರ್ಭ ಕಠಿಣ ವಿಷ್ಣು ದಶಾವತಾರ ಯೋಗ ಮತ್ತು ಹನುಮಾನ್ ನಮಸ್ಕಾರ ಆಸನಗಳನ್ನು ಪ್ರದರ್ಶನ ಮಾಡಲಾಯಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ನೂರಾರು ಸದಸ್ಯರು ಯೋಗ ನಮನ ಸಲ್ಲಿಸಿದರು. ವಿಷ್ಣುವಿನ ಮತ್ಸ್ಯ, ಕೂರ್ಮ, ನರಸಿಂಹ ಅವತಾರಗಳನ್ನು ಯೋಗಾಸನ ಭಂಗಿಯ ಮೂಲಕ ಮಾಡಿ ಹರಿಪಾದ ಸೇರಿದ ವಿಶ್ವೇಶತೀರ್ಥ ಸ್ವಾಮೀಜಿಗಳಿಗೆ ಗೌರವ ಅರ್ಪಣೆ ಮಾಡಲಾಯಿತು.

    ವಿಶ್ವಾದ್ಯಂತ ಸಪ್ತ ನಮಸ್ಕಾರದಲ್ಲಿ ಸೂರ್ಯ ನಮಸ್ಕಾರ ಮಾತ್ರ ಪ್ರಸಿದ್ಧಿ ಪಡೆದಿದೆ. ಶಿವ ನಮಸ್ಕಾರ, ಗಣಪತಿ ನಮಸ್ಕಾರ, ಹಿಮಾಲಯ ಗಣಪತಿ ನಮಸ್ಕಾರ, ದುರ್ಗಾ ನಮಸ್ಕಾರಗಳೆಂಬ ನಾಲ್ಕು ನಮಸ್ಕಾರ ಬಹಳ ಕಠಿಣ ಆಸನಗಳಿವೆ. ಶ್ರೀ ಪತಂಜಲಿ ಯೋಗ ಸಮಿತಿ, ತಜ್ಞರಯ, ವೈದ್ಯರು ಸಮಾಲೋಚನೆ ಮಾಡಿ ಉಡುಪಿಯಲ್ಲಿ ಕಷ್ಟಕರ ಆಸನ ಪ್ರದರ್ಶಿಸಲಾಯಿತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ನೂರಾರು ಯೋಗಪಟುಗಳು ಪಾಲ್ಗೊಂಡರು. ಪೇಜಾವರಶ್ರೀ ಗಳೇ 15 ವರ್ಷಗಳ ಹಿಂದೆ ಎಸ್‍ಪಿವೈಎಸ್‍ಎಸ್ ಸಂಘಟನೆಯ ಯೋಗವನ್ನು ಆಶೀರ್ವದಿಸಿದ್ದರಂತೆ. ಪರ್ಯಾಯ ಸಂದರ್ಭದಲ್ಲಿ ಯೋಗಾಭ್ಯಾಸದಲ್ಲೂ ತೊಡಗಿಸಿಕೊಂಡಿದ್ದರಿಂದ ವೃಂದಾವನಸ್ಥರಾದ ಪೇಜಾವರ ಶ್ರೀಗಳಿಗೆ ಯೋಗನಮನ ಸಲ್ಲಿಸಲಾಯಿತು.

    ಸಂಘಟಕಿ ಭವಾನಿ ಮಾತನಾಡಿ, ಪೇಜಾವರ ಶ್ರೀಗಳ ಜೊತೆ ನಮ್ಮ ಸಂಸ್ಥ 15 ವರ್ಷದಿಂದ ಸಂಪರ್ಕದಲ್ಲಿದೆ. ನಮ್ಮ ಯೋಗ ತರಗತಿಗಳಿಗೆ ಆಶೀರ್ವಾದ ನೀಡಿ, ಪ್ರೋತ್ಸಾಹಿಸಿದ್ದಾರೆ. ಅವರಿಗೆ ನಾವು ಮಾಡುತ್ತಿರುವ ದೊಡ್ಡ ನುಡಿನಮನ ಅಂದರೆ ಯೋಗಾಭ್ಯಾಸ ಎಂದರು.

    ವಿಭಾಗ ಮುಖ್ಯಸ್ಥ ಅಣ್ಣಾ ಲಕ್ಷ್ಮೀನಾರಾಯಣ ಮಾತನಾಡಿ, ಬಹಳ ಕಠಿಣ ಯೋಗದ ಪ್ರದರ್ಶನ ಇದು. ನಮ್ಮ ಸಮಿತಿಯೇ ಕಂಡುಕೊಂಡ ಭಂಗಿಗಳು ಇವು. ದೇವರು ಧ್ಯಾನ, ದೇಹ ದಂಡನೆ ಮೂಲಕ ಆರೋಗ್ಯ ಕಾಪಾಡುವ ವಿಧಾನ ಇದು. ಶ್ರೀಗಳು ಕೊನೆಯವರೆಗೂ ಯೋಗಾಭ್ಯಾಸ ಮಾಡಿದ್ದರಿಂದ ಚುರುಕಾಗಿ ಓಡಾಡುತ್ತಿದ್ದರು ಎಂದು ಹೇಳಿದರು.

    ಯೋಗ ಪಟುಗಳು ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾಂಜಲಿ, ದೀಪನಮನವನ್ನೂ ಸಲ್ಲಿಸಿದರು. ಉಚಿತ ಯೋಗ ಶಿಕ್ಷಣ ನೀಡಿ, ಯೋಗ ಶಿಕ್ಷಕರನ್ನು ಹುಟ್ಟುಹಾಕುತ್ತಿರುವ ಈ ಸಂಸ್ಥೆ ಸಂಸ್ಕಾರ ,ಸಂಸ್ಕೃತಿ ಜೊತೆ ಉದ್ಯೋಗವನ್ನು ನೀಡುತ್ತಿದೆ.

  • ಹಲವು ಭಂಗಿಗಳಲ್ಲಿ ಮಾಜಿ ಪ್ರಧಾನಿ ಎಚ್‍ಡಿಡಿಯಿಂದ ಯೋಗಾಸನ

    ಹಲವು ಭಂಗಿಗಳಲ್ಲಿ ಮಾಜಿ ಪ್ರಧಾನಿ ಎಚ್‍ಡಿಡಿಯಿಂದ ಯೋಗಾಸನ

    – ಮಧ್ಯಂತರ ಚುನಾವಣೆ ಬಗ್ಗೆ ಹೊಸ ಬಾಂಬ್
    – ಕಾಂಗ್ರೆಸ್ ವಿರುದ್ಧ ಎಚ್‍ಡಿಡಿ ಅಸಮಾಧಾನ

    ಬೆಂಗಳೂರು: ಇಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಕೂಡ ಯೋಗಾಸನ ಮಾಡಿದ್ದಾರೆ. ಪದ್ಮನಾಭ ನಗರದ ನಿವಾಸದಲ್ಲಿ ಯೋಗ ಅಭ್ಯಾಸ ಮಾಡಿದ್ದು, ಯಾರ ಸಹಾಯವೂ ಇಲ್ಲದೇ ಈ ವಯಸ್ಸಿನಲ್ಲಿಯೂ ಹಲವು ಭಂಗಿಗಳಲ್ಲಿ ಯೋಗಾಸನ ಮಾಡಿದ್ದಾರೆ.

    ಇದೇ ವೇಳೆ ಮಾತನಾಡಿದ ಮಾಜಿ ಪ್ರಧಾನಿ, ಯೋಗವನ್ನು ಪ್ರಾಚೀನ ಕಾಲದಿಂದಲೂ ಋಷಿ-ಮುನಿಗಳು ಮಾಡುತ್ತಿದ್ದಾರೆ. ನಾನು ವಿದ್ಯಾರ್ಥಿಯಾಗಿದ್ದಾಗ ಸೂರ್ಯ ನಮಸ್ಕಾರ ಮಾಡುತ್ತಿದ್ದೆ. ಅದು ಆರೋಗ್ಯಕ್ಕೆ ಒಳ್ಳೆಯದು, ಮಹಾತ್ಮ ಗಾಂಧೀಜಿಯವರು ಯೋಗದ ಮಹತ್ವ ಸಾರಿದ್ದರು. ನರೇಂದ್ರ ಮೋದಿಯವರು ಹೆಚ್ಚು ಯೋಗಕ್ಕೆ ದೇಶವಿದೇಶಗಳಲ್ಲಿ ಹೆಚ್ಚು ಪ್ರಚಾರ ಮಾಡಿದ್ದರು. ಹೀಗಾಗಿ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ರಾಜಕಾರಣದಲ್ಲಿ ಅನೇಕ ಏಳು ಬೀಳು ಇರುತ್ತೆ. ನನ್ನ ಜೊತೆಯಲ್ಲೇ ಇದ್ದು ಬೆಳೆದವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಆದರೆ ನಾನು ಧೃತಿಗೆಡದೆ ಮುಂದೆ ಬಂದಿದ್ದೇನೆ. ಮೈತ್ರಿ ಸರ್ಕಾರ ಮಾಡಲೇಬೇಕು ಅಂತ ನಂಗೇನು ಇರಲಿಲ್ಲ. ದೆಹಲಿ ನಾಯಕರು ಬಂದು ನಿಮ್ಮ ಮಗನನ್ನ ಮುಖ್ಯಮಂತ್ರಿ ಮಾಡಬೇಕು ಎಂದು ಹೇಳಿದ್ದರು. ಆದರೆ ಈಗ ಸಾರ್ವತ್ರಿಕ ಚುನಾವಣೆ ನಂತರ ಹೈಕಮಾಂಡ್ ಸ್ವಲ್ಪ ಶಕ್ತಿ ಕಳೆದುಕೊಂಡಿದೆ. ಸರ್ಕಾರ ಎಷ್ಟು ದಿನ ಇರುತ್ತೋ ಗೊತ್ತಿಲ್ಲ. ಅದು ಕಾಂಗ್ರೆಸ್ ಮುಖಂಡರ ಕೈಯಲ್ಲಿ ಇದೆ. ಜೆಡಿಎಸ್ ಜೊತೆ ಹೊರಟರೆ ಕಾಂಗ್ರೆಸ್ ಪಕ್ಷ ಹೋಗುತ್ತೆ ಅನ್ನೋ ಸಂಕಟ ಇದೆ. ಹೀಗಾಗಿ ನಮ್ಮ ಮಂತ್ರಿ ಸ್ಥಾನವನ್ನೂ ತೆಗೆದುಕೊಂಡಿದ್ದಾರೆ. ಎಲ್ಲ ಸಹಿಸಿಕೊಂಡು ಹೋಗುತ್ತಿದ್ದೇನೆ ಎಂದು ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇನ್ನೂ ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ಸಂಶಯವಿಲ್ಲ ಎಂದು ದೇವೇಗೌಡರು ಹೊಸ ಬಾಂಬ್ ಸಿಡಿಸಿದ್ದಾರೆ. ಬಿಎಸ್‍ವೈ ಸಿಎಂ ಆಗಬಾರದು ಎಂದು ಕಾಂಗ್ರೆಸ್ ನವರು ಬಂದು ಚರ್ಚೆ ಮಾಡದೇ ಸರ್ಕಾರ ರಚನೆಗೆ ಮುಂದಾಗಿದ್ದರು. ಎಚ್‍ಡಿಕೆ ಅವರನ್ನೇ ಸಿಎಂ ಮಾಡಿ ಎಂದರು. ಈಗ ನಮ್ಮ ಒಂದು ಮಂತ್ರಿ ಸ್ಥಾನವನ್ನೂ ಕಾಂಗ್ರೆಸ್ಸಿಗೆ ಸರೆಂಡರ್ ಮಾಡಿದ್ದೀವಿ. ಎಲ್ಲವನ್ನು ಸಹಿಸಿಕೊಂಡು ಹೋಗುತ್ತಿದ್ದೇನೆ. ನಾನೇನಾದರೂ ಮಾತಾಡಿದ್ನಾ ಎಂದು ಪ್ರಶ್ನೆ ಮಾಡಿದರು.

    ಹಾಲಿ ಸಂಸದರಿರುವ ಕ್ಷೇತ್ರ ನಮಗೆ ಬೇಡ ಎಂದಿದ್ದೆ. ತುಮಕೂರು ಕ್ಷೇತ್ರವನ್ನು ನಾವು ಕೇಳಲೇ ಇಲ್ಲ. ಆದರೂ ಆ ಕ್ಷೇತ್ರವನ್ನೇ ಕೊಟ್ಟಿದ್ದರು. ನಾವು ಕಾಂಗ್ರೆಸ್ ಸೋತಿರುವ ಕ್ಷೇತ್ರವನ್ನೇ ಕೊಡಿ ಎಂದು ಕೇಳಿದ್ವಿ. ಆದರೆ ಮೈಸೂರಿಗೋಸ್ಕರ ತುಮಕೂರು ಕ್ಷೇತ್ರ ಕೊಟ್ಟರು ಎಂದು ಕಾಂಗ್ರೆಸ್ ವಿರುದ್ಧ ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಹೆಚ್ಚು ತೂಕವಿರುವ ಯುವತಿ ಮಾಡೋ ಸ್ಟಂಟ್ ನಿಮಗೆ ಸಾಧ್ಯವೇ! – ವಿಡಿಯೋ ನೋಡಿ

    ಹೆಚ್ಚು ತೂಕವಿರುವ ಯುವತಿ ಮಾಡೋ ಸ್ಟಂಟ್ ನಿಮಗೆ ಸಾಧ್ಯವೇ! – ವಿಡಿಯೋ ನೋಡಿ

    – ಯೋಗಾಸನದ ಮೂಲಕವೇ ಫಾಲೋವರ್ಸ್ ಹೆಚ್ಚಿಸಿಕೊಂಡ್ಲು ದೆಹಲಿ ಬೆಡಗಿ

    ನವದೆಹಲಿ: ಯೋಗಾಸನ ಹಾಗೂ ವಿವಿಧ ರೀತಿಯ ಸ್ಟಂಟ್ ಗಳ ಪೋಸ್ಟ್ ಮೂಲಕವೇ ಯುವತಿಯೊಬ್ಬರು ಫೇಸ್‍ಬುಕ್ ಹಾಗೂ ಇನ್ ಸ್ಟಾಗ್ರಾಮ್ ನಲ್ಲಿ ಅಭಿಮಾನಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದ್ದಾರೆ.

    ನವದೆಹಲಿ ನಿವಾಸಿ ಮೋನಿಕಾ ಸಾಹು ಯೋಗಾಸನ ಹಾಗೂ ಸ್ಟಂಟ್‍ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹೆಚ್ಚು ತೂಕ ಹೊಂದಿರುವ ಮೋನಿಕಾ ಯೋಗಾಸನದ ಮೂಲಕ, ನಾನು ಆಕ್ಟೀವ್ ಆಗಿದ್ದೇನೆ ಎಂದು ತೋರಿಸಿಕೊಟ್ಟಿದ್ದಾರೆ. ಇನ್ ಸ್ಟಾಗ್ರಾಮ್ ಖಾತೆ ಮೂಲಕ ವಿಡಿಯೋ ಹಂಚಿಕೊಂಡಿರುವ ಮೋನಿಕಾ ಅವರನ್ನು ನವೆಂಬರ್ 16ರವರೆಗೆ ಒಟ್ಟು 33.3 ಸಾವಿರ ಜನರು ಫಾಲೋ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಫೇಸ್ ಬುಕ್‍ನಲ್ಲಿ 1.3 ಸಾವಿರಕ್ಕೂ ಅಧಿಕ ಜನ ಫಾಲೋವರ್ಸ್ ಇದ್ದಾರೆ.

    ಭಾರವಾದ ದೇಹವಿದ್ದರೂ ಮೋನಿಕಾ ಸಾಹಸ ರೀತಿಯ ಯೋಗಾಸನ ಮಾಡುತ್ತಾರೆ. ಈ ಮೂಲಕ ಹಂತ ಹಂತವಾಗಿ ತಮ್ಮ ದೇಹದ ತೂಕ ಕಡಿಮೆ ಮಾಡಿಕೊಂಡು, ಸೌಂದರ್ಯ ಹೆಚ್ಚಿಸಿಕೊಂಡಿದ್ದಾರೆ. ಸತತ ಪ್ರಯತ್ನದಿಂದ ಮೋನಿಕಾ ಯೋಗಾಸದಲ್ಲಿ ಪಳಗಿದ್ದು, ಈಗ ಅನೇಕ ನೆಟ್ಟಿಗರ ಮೆಚ್ಚುಗೆ ಗಿಟ್ಟಿಸಿಕೊಂಡಿದ್ದಾರೆ.

    ಸಾಮಾನ್ಯರು ಮಾಡಲು ಸಾಧ್ಯವಾಗದ ಯೋಗಾಸನ, ಸ್ಟಂಟ್‍ಗಳನ್ನು ಮೋನಿಕಾ ಮಾಡುತ್ತಾರೆ. ಜೊತೆಗೆ ತನ್ನ ಆತ್ಮೀಯರಿಗೂ ಯೋಗಾಭ್ಯಾಸ ಮಾಡಿಸುತ್ತಿದ್ದಾರೆ. ಕಾಲು ಅಗಲಿಸಿ ನೆಲಕ್ಕೆ ನೇರವಾಗಿ ಕೂರುವುದಕ್ಕೆ ಸಾಮಾನ್ಯರು ಭಾರೀ ಕಷ್ಟಪಡಬೇಕಾಗುತ್ತದೆ. ಆದರೆ ಮೋನಿಕಾ ಯಾವುದೇ ಕಷ್ಟಪಡದೇ ಈ ಆಸನವನ್ನು ಮಾಡುತ್ತ, ಹೆಜ್ಜೆ ಹಾಕುತ್ತಾರೆ.

    ಆರೋಗ್ಯಯುತ ಜೀವನಕ್ಕೆ ಪ್ರೇರಣೆ ನೀಡುವುದು ನನ್ನ ಉದ್ದೇಶ. ಹೆಚ್ಚು ತೂಕವಿದ್ದರೂ, ಯೋಗಾಸನದ ಮೂಲಕ ಚಟುವಟಿಕೆಯಿಂದ ಇರಬಹುದು ಎನ್ನುವುದಕ್ಕೆ ನಾನೇ ಉದಾಹರಣೆ. ನನ್ನ ಸ್ನೇಹಿತರಿಗೂ ಇದನ್ನು ಕಲಿಸಿಕೊಡುತ್ತಿರುವೆ ಎಂದು ಇನ್ ಸ್ಟಾಗ್ರಾಮ್ ಪೋಸ್ಟ್‍ನಲ್ಲಿ ಮೋನಿಕಾ ಹೇಳಿಕೊಂಡಿದ್ದಾರೆ.

    ಮೋನಿಕಾ ಅವರು, ತಾವು ಮಾಡುವ ಆಸನ ಹಾಗೂ ಸ್ಟಂಟ್‍ಗಳ ಮಾಹಿತಿ ನೀಡಿ, ವಿಡಿಯೋ ಪೋಸ್ಟ್ ಮಾಡುತ್ತಿದ್ದಾರೆ. ಈ ಮೂಲಕ ಅನೇಕ ಮಂದಿ ಅವರನ್ನು ಅನುಕರಣೆ ಮಾಡಿ, ತಾವು ಮಾಡಲು ಯತ್ನಿಸುತ್ತಾರೆ. ಈ ಮೂಲಕ ಮೋನಿಕಾ ತಮ್ಮ ಅಭಿಮಾನಿಗಳ ಗೆದ್ದಿದ್ದಾರೆ.

    ಓದುತ್ತಲೇ ಹೇಗೆ ಆಸನ ಮಾಡಬಹುದು. ಗೃಹಿಣಿಯರು, ಮಹಿಳೆಯರು ಮೇಕಪ್ ಮಾಡುಕೊಳ್ಳುತ್ತಲೇ ಯೋಗ ಮಾಡಬಹುದು. ಮೊಬೈಲ್ ಹಾಗೂ ಲ್ಯಾಪ್‍ಟಾಪ್ ಬಳಕೆ, ವಸ್ತುಗಳನ್ನು ಜೋಡಿಸುವುದು ಹೀಗೆ ವಿವಿಧ ಕೆಲಸಗಳಲ್ಲಿ ತಾವು ಹೇಗೆಲ್ಲ ಯೋಗಾಸನ ಮಾಡುತ್ತಾರೆ ಎನ್ನುವುದನ್ನು ಮೋನಿಕಾ ವಿಡಿಯೋ ಮೂಲಕ ತೋರಿಸಿಕೊಟ್ಟಿದ್ದಾರೆ.

    https://www.instagram.com/p/BpQvO8Hl3xE/

    https://www.instagram.com/p/BpD-iIBlD_8/

    https://www.instagram.com/p/BmX3-kFgzHM/

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews