Tag: ಯೋಗಿ

  • ‘ಸಿದ್ಲಿಂಗು 2’ನಲ್ಲಿ ಡಬಲ್ ಮೀನಿಂಗ್ ಇರಲ್ಲ: ಪ್ರಾಮೀಸ್ ಎಂದ ನಟ ಯೋಗಿ

    ‘ಸಿದ್ಲಿಂಗು 2’ನಲ್ಲಿ ಡಬಲ್ ಮೀನಿಂಗ್ ಇರಲ್ಲ: ಪ್ರಾಮೀಸ್ ಎಂದ ನಟ ಯೋಗಿ

    ಲೂಸ್ ಮಾದ ಖ್ಯಾತಿಯ ಯೋಗಿ  ಮತ್ತೊಂದು ಬಾರಿ ಸಿಂದ್ಲಿಂಗು ಜೊತೆ ಅಭಿಮಾನಿಗಳ ಎದುರು ನಿಂತಿದ್ದಾರೆ. ಬರೋಬ್ಬರಿ ಹನ್ನೆರಡು ವರ್ಷಗಳ ಹಿಂದೆ ಸಿಂದ್ಲಿಂಗು ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ಯೋಗಿ, ಈಗ ಮತ್ತೆ ಸಿದ್ಲಿಂಗು 2 ಮೂಲಕ ರಂಜಿಸಲು ಸಜ್ಜಾಗುತ್ತಿದ್ದಾರೆ. ಆ ಸಿದ್ಲಿಂಗು ಚಿತ್ರದಲ್ಲಿ ಅಲ್ಲಲ್ಲಿ ಡಬಲ್ ಮೀನಿಂಗ್ ಇದ್ದರೂ, ಈ ಸಿದ್ಲಿಂಗು ಹಾಗೆ ಇರುವುದಿಲ್ಲ ಎಂದು ಅಭಿಮಾನಿಗಳಿಗೆ ಪ್ರಾಮೀಸ್ ಮಾಡಿದ್ದಾರೆ.

    ಕನ್ನಡದ ಪ್ರತಿಭಾವಂತ ನಿರ್ದೇಶಕ ವಿಜಯ್ ‍ಪ್ರಸಾದ್ ಮತ್ತೊಂದು ಸಿದ್ಲಿಂಗು ಕಥೆ ಹೇಳಲು ಮುಂದಾಗಿದ್ದಾರೆ. ಈ ಹಿಂದೆ ಲೂಸ್ ಮಾದ ಯೋಗಿ (Yogi)  ಮತ್ತು ರಮ್ಯಾ ಅವರನ್ನು ಆಯ್ಕೆ ಮಾಡಿಕೊಂಡು ಸಿದ್ಲಿಂಗು ಕಥೆ ಹೇಳಿದ್ದರು ವಿಜಯ್ ಪ್ರಸಾದ್. ಇದೀಗ ರಮ್ಯಾ ಬದಲು ಸೋನು ಗೌಡ (Sonu Gowda) ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿ ಸಿದ್ಲಿಂಗು 2 (Sidlingu 2) ಚಿತ್ರದ ಕಥೆ ಹೇಳುತ್ತಿದ್ದಾರೆ.

    ಮೊನ್ನೆಯಷ್ಟೇ ಸಿನಿಮಾಗೆ ಮುಹೂರ್ತವಾಗಿದೆ. ಸಿಂಪಲ್ ಆಗಿ ಆದ ಮುಹೂರ್ತ ಸಮಾರಂಭದಲ್ಲಿ ಚಿತ್ರದ ನಾಯಕ ಯೋಗಿ, ನಾಯಕಿ ಸೋನು ಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಿದ್ಲಿಂಗು ಸಿನಿಮಾದ ಕೊನೆಯಲ್ಲಿ ನಾಯಕಿ ಸಾವನ್ನಪ್ಪುತ್ತಾಳೆ. ಹಾಗಾಗಿ ಸಿದ್ಲಿಂಗು 2 ಸಿನಿಮಾದ ಕಥೆಯು ಹೇಗೆ ಶುರುವಾಗಬಹುದು ಎನ್ನುವ ಕುತೂಹಲವಿದೆ.

     

    2012ರಲ್ಲಿ ಸಿದ್ಲಿಂಗು ತೆರೆಗೆ ಬಂದಿತ್ತು. ಮೊದಲ ಬಾರಿಗೆ ರಮ್ಯಾ ಜೊತೆ ಯೋಗಿ ನಟಿಸಿದ್ದರಿಂದ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಸಿನಿಮಾ ಕೂಡ ಗೆದ್ದಿತ್ತು. ಮತ್ತೆ ಹನ್ನೆರಡು ವರ್ಷಗಳ ನಂತರ ವಿಜಯ್ ಪ್ರಸಾದ್ (Vijay Prasad) ದೇ ಹೆಸರಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಏನೆಲ್ಲ ವಿಷಯಗಳನ್ನು ಈ ಚಿತ್ರ ಹೊತ್ತು ತರಲಿದೆ ಎನ್ನುವುದನ್ನು ಕಾದು ನೋಡಬೇಕು.

  • ‘ಸಿದ್ಲಿಂಗು 2’ ಚಿತ್ರಕ್ಕೆ ಮುಹೂರ್ತ: ಅಂದು ರಮ್ಯಾ, ಇಂದು ಸೋನು ಗೌಡ ನಾಯಕಿ

    ‘ಸಿದ್ಲಿಂಗು 2’ ಚಿತ್ರಕ್ಕೆ ಮುಹೂರ್ತ: ಅಂದು ರಮ್ಯಾ, ಇಂದು ಸೋನು ಗೌಡ ನಾಯಕಿ

    ನ್ನಡದ ಪ್ರತಿಭಾವಂತ ನಿರ್ದೇಶಕ ವಿಜಯ್ ‍ಪ್ರಸಾದ್ ಮತ್ತೊಂದು ಸಿದ್ಲಿಂಗು ಕಥೆ ಹೇಳಲು ಮುಂದಾಗಿದ್ದಾರೆ. ಈ ಹಿಂದೆ ಲೂಸ್ ಮಾದ ಯೋಗಿ (Yogi)  ಮತ್ತು ರಮ್ಯಾ ಅವರನ್ನು ಆಯ್ಕೆ ಮಾಡಿಕೊಂಡು ಸಿದ್ಲಿಂಗು ಕಥೆ ಹೇಳಿದ್ದರು ವಿಜಯ್ ಪ್ರಸಾದ್. ಇದೀಗ ರಮ್ಯಾ ಬದಲು ಸೋನು ಗೌಡ (Sonu Gowda) ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿ ಸಿದ್ಲಿಂಗು 2 (Sidlingu 2) ಚಿತ್ರದ ಕಥೆ ಹೇಳುತ್ತಿದ್ದಾರೆ.

    ನಿನ್ನೆಯಷ್ಟೇ ಸಿನಿಮಾಗೆ ಮುಹೂರ್ತವಾಗಿದೆ. ಸಿಂಪಲ್ ಆಗಿ ಆದ ಮುಹೂರ್ತ ಸಮಾರಂಭದಲ್ಲಿ ಚಿತ್ರದ ನಾಯಕ ಯೋಗಿ, ನಾಯಕಿ ಸೋನು ಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಿದ್ಲಿಂಗು ಸಿನಿಮಾದ ಕೊನೆಯಲ್ಲಿ ನಾಯಕಿ ಸಾವನ್ನಪ್ಪುತ್ತಾಳೆ. ಹಾಗಾಗಿ ಸಿದ್ಲಿಂಗು 2 ಸಿನಿಮಾದ ಕಥೆಯು ಹೇಗೆ ಶುರುವಾಗಬಹುದು ಎನ್ನುವ ಕುತೂಹಲವಿದೆ.

     

    2012ರಲ್ಲಿ ಸಿದ್ಲಿಂಗು ತೆರೆಗೆ ಬಂದಿತ್ತು. ಮೊದಲ ಬಾರಿಗೆ ರಮ್ಯಾ ಜೊತೆ ಯೋಗಿ ನಟಿಸಿದ್ದರಿಂದ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಸಿನಿಮಾ ಕೂಡ ಗೆದ್ದಿತ್ತು. ಮತ್ತೆ ಹನ್ನೆರಡು ವರ್ಷಗಳ ನಂತರ ವಿಜಯ್ ಪ್ರಸಾದ್ (Vijay Prasad) ದೇ ಹೆಸರಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಏನೆಲ್ಲ ವಿಷಯಗಳನ್ನು ಈ ಚಿತ್ರ ಹೊತ್ತು ತರಲಿದೆ ಎನ್ನುವುದನ್ನು ಕಾದು ನೋಡಬೇಕು.

  • ಮಾ.12ರಿಂದ ಕಿರುತೆರೆ ತಾರೆಯರ ಕ್ರಿಕೆಟ್: ಯಾರ ತಂಡದಲ್ಲಿ ಯಾರಿದ್ದಾರೆ?

    ಮಾ.12ರಿಂದ ಕಿರುತೆರೆ ತಾರೆಯರ ಕ್ರಿಕೆಟ್: ಯಾರ ತಂಡದಲ್ಲಿ ಯಾರಿದ್ದಾರೆ?

    ಎನ್ 1 ಕ್ರಿಕೆಟ್ (Cricket) ಅಕಾಡೆಮಿ ಆಯೋಜಿಸುವ ಕಿರುತೆರೆ ತಾರೆಯರ ಟೆಲಿವಿಷನ್ (Television) ಪ್ರೀಮಿಯರ್ ಲೀಗ್ (Leagu) ಸೀಸನ್ -2 ಇದೇ ತಿಂಗಳು ನಡೆಯುತ್ತಿದೆ. ಈಗಾಗಲೇ ತಂಡದ ನಾಯಕರು, ಆಟಗಾರರ ಪಟ್ಟಿ ಬಿಡುಗಡೆ ಮಾಡಿರುವ ಆಯೋಜಕರು ಇದೀಗ ಸೀಸನ್ -2 ಟ್ರೋಫಿ ಹಾಗೂ ಜೆರ್ಸಿ ಅನಾವರಣ ಮಾಡಿದ್ದಾರೆ.

    ಟಿಪಿಎಲ್ ಟ್ರೋಫಿ ಹಾಗೂ ಜೆರ್ಸಿ ಅನಾವರಣ ಕಾರ್ಯಕ್ರಮದಲ್ಲಿ ನಟ ವಿನೋದ್ ಪ್ರಭಾಕರ್, ರಣಜಿ ಆಟಗಾರರಾದ ಶರತ್ ಶ್ರೀನಿವಾಸ್, ಅರ್ಜುನ್ ಹೊಯ್ಸಳ, ದೇಗ ನಿಶ್ಚಲ್, ಬಿ.ಯು.ಶಿವಕುಮಾರ್, ಅನಿರುದ್ಧ್ ಜೋಶಿ ಹಾಗೂ ಭಾರತ ತಂಡವನ್ನು ಪ್ರತಿನಿಧಿಸಿರುವ ಮತ್ತು ರಣಜಿ ಆಟಗಾರ ಅಭಿಮನ್ಯು ಮಿಥುನ್ ಭಾಗಿಯಾಗಿ ಟಿಪಿಎಲ್ ಸೀಸನ್-2ಗೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಖುಷಿ ದಾಂಪತ್ಯದ ಬಗ್ಗೆ ಸೀಕ್ರೆಟ್ ಬಿಚ್ಚಿಟ್ಟ ನಟಿ ರಾಧಿಕಾ ಪಂಡಿತ್

    ಮಾರ್ಚ್ 12ರಿಂದ 15ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಟಿಪಿಎಲ್ ಸೀಸನ್ -2 ನಡೆಯುತ್ತಿದೆ. ಮೊದಲ ಸೀಸನ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದರಿಂದ ಸೀಸನ್ -2 ನಡೆಸಲು ಎನ್ 1 ಕ್ರಿಕೆಟ್ ಅಕಾಡೆಮಿ ಆಯೋಜಕ ಸುನೀಲ್ ಕುಮಾರ್.ಬಿ.ಆರ್ ನಿರ್ಧರಿಸಿದ್ದು, ಈ ಬಾರಿಯೂ ಅದ್ದೂರಿಯಾಗಿ, ಕಲರ್ ಫುಲ್ ಆಗಿ ಟಿಪಿಎಲ್ ಸೀಸನ್ -2 ನಡೆಯಲಿದೆ.

    ಟಿಪಿಎಲ್ ಸೀಸನ್ -2 ಬೆಂಗಳೂರಿನ ಅಶೋಕ ರೈಸಿಂಗ್ ಸ್ಟಾರ್ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆಯಲಿದೆ. ದಿ ಪರ್ಪಲ್ ರಾಕ್ ಪ್ಯಾಂಥರ್ಸ್, ಅಶ್ವಸೂರ್ಯ ರಿಯಾಲಿಟೀಸ್, ಎನಿಎಲ್ಪ್ ಟೂರ್ನಿವಲ್, ಇನ್ಸೇನ್ ಕ್ರಿಕೆಟ್ ಟೀಂ, ದಿ ಬುಲ್ ಸ್ಕ್ವಾಡ್, ಆಕ್ಸ್ ಫರ್ಡ್ ವಿನ್ ಟೀಂ ಎಂಬ ಆರು ತಂಡಗಳಿದ್ದು, ಲೂಸ್ ಮಾದ ಯೋಗಿ, ಮಂಜು ಪಾವಗಡ, ಹರ್ಷ ಸಿ.ಎಂ ಗೌಡ, ರವಿಶಂಕರ್ ಗೌಡ, ಶರತ್ ಪದ್ಮನಾಭ್, ಸಾಗರ್ ಬಿಳಿಗೌಡ  ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.

    ಪ್ರತಿತಂಡಕ್ಕೂ ಓನರ್ ಹಾಗೂ ಸೆಲೆಬ್ರೆಟಿ ಅಂಬಾಸಿಡರ್ ಇರಲಿದ್ದು, ‘ದಿ ಪರ್ಪಲ್ ರಾಕ್ ಪ್ಯಾಂಥರ್ಸ್’ ತಂಡದ ಮಾಲಿಕತ್ವವನ್ನು ಗಣೇಶ್ ಪಾಪಣ್ಣ, ಯತೀಶ್ ವೆಂಕಟೇಶ್ ವಹಿಸಿಕೊಂಡಿದ್ದು, ರಂಜಿತ್ ಕುಮಾರ್ ‘ಅಶ್ವಸೂರ್ಯ ರಿಯಾಲಿಟೀಸ್’, ಮೊಹಮ್ಮದ್ ಜಾಕೀರ್ ಹುಸೇನ್ ಮತ್ತು ಪೂಜಾ ಶ್ರೀ ‘ಎನಿಎಲ್ಪ್ ಟೂರ್ನಿವಲ್’, ಫೈಜಾನ್ ಖಾನ್ ‘ಇನ್ಸೇನ್ ಕ್ರಿಕೆಟ್ ಟೀಂ’, ಮೊನೀಶ್ ‘ದಿ ಬುಲ್ ಸ್ಕ್ವಾಡ್’, ಅನಿಲ್ ಬಿ.ಆರ್,ದೇವನಾಥ್.ಡಿ, ರವಿ.ಜಿ.ಎಸ್  ‘ಆಕ್ಸ್ ಫರ್ಡ್ ವಿನ್ ಟೀಂ’ ಮಾಲಿಕತ್ವ ವಹಿಸಿಕೊಂಡಿದ್ದಾರೆ. ಐಶ್ವರ್ಯ ಸಿಂದೋಗಿ, ವಿರಾನಿಕ ಶೆಟ್ಟಿ, ರಾಶಿಕ ಶೆಟ್ಟಿ, ಸೊಹಾರ್ಧ, ಗಾನವಿ ಸುರೇಶ್, ಸೀಮಾ ವಸಂತ್, ಅದ್ವಿತಿ ಶೆಟ್ಟಿ, ಶ್ವೇತ ಪ್ರಸಾದ್, ಲಿಖಿತಾ ಅನಂತ್, ಯಶಸ್ವಿನಿ, ಆಶಿಕಾ ಗೌಡ, ಶ್ವೇತ ಕೊಗ್ಲೂರ್ ಟಿಪಿಎಲ್ ಸೀಸನ್ -2 ಅಂಬಾಸಿಡರ್ ಪಟ್ಟಿಯಲ್ಲಿದ್ದಾರೆ.

  • TPL-2: ಮಾರ್ಚ್ 12 ರಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ -2

    TPL-2: ಮಾರ್ಚ್ 12 ರಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ -2

    ನ್ 1 ಕ್ರಿಕೆಟ್ (Cricket) ಅಕಾಡೆಮಿ ವತಿಯಿಂದ ಕಳೆದ ಬಾರಿ ಅದ್ದೂರಿಯಾಗಿ ಆರಂಭಗೊಂಡಿದ್ದ ಟಿಪಿಎಲ್ (TPL) ಇದೀಗ ಸೀಸನ್ -2 ಕ್ಕೆ ರೆಡಿಯಾಗಿದೆ. ಮಾರ್ಚ್ ನಲ್ಲಿ ಟೆಲಿವಿಷನ್ (Television) ಪ್ರೀಮಿಯರ್ ಲೀಗ್ ಸೀಸನ್-2 ಆರಂಭವಾಗುತ್ತಿದೆ. ಸೀಸನ್ 2ಕ್ಕೆ ವೇದಿಕೆ ಸಜ್ಜಾಗುತ್ತಿದ್ದು ಮಾರ್ಚ್ 12,13,14,15ರಂದು ಒಟ್ಟು ನಾಲ್ಕು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.

    ಎನ್ 1 ಕ್ರಿಕೆಟ್ ಅಕಾಡೆಮಿ ಆಯೋಜಕರಾದ ಬಿ.ಆರ್. ಸುನಿಲ್ ಕುಮಾರ್ ಮಾತನಾಡಿ, ಕಳೆದ ವರ್ಷದಿಂದ ಟಿಪಿಎಲ್ ಆರಂಭಿಸಿದ್ದೇವೆ. ಮೊದಲ ಸೀಸನ್ ಯಶಸ್ವಿಯಾಗಿತ್ತು. ಇದೀಗ ಎರಡನೇ ಸೀಸನ್ ನಡೆಸಲು ಎಲ್ಲಾ ತಯಾರಿ ನಡೆಯುತ್ತಿದೆ. ಮಾರ್ಚ್ ಎರಡನೇ ವಾರ ಟಿಪಿಎಲ್ ಸೀಸನ್ 2 ನಡೆಯಲಿದೆ. ಈ ಬಾರಿ ಡೇ ಅಂಡ್ ನೈಟ್ ಪಂದ್ಯಾವಳಿ ನಡೆಯಲಿದೆ. ತಂಡ, ನಾಯಕರ ಆಯ್ಕೆ ಎಲ್ಲವೂ ನಡೆದಿದೆ. ಮಾರ್ಚ್ 7ರಂದು ಜೆರ್ಸಿ ಲಾಂಚ್ ಮಾಡಲಿದ್ದೇವೆ. ಟಿಪಿಎಲ್ ಟ್ರೋಫಿ ಗೆದ್ದ ತಂಡದ ಸದಸ್ಯರಿಗೆ ಪರ್ಪಲ್ ರಾಕ್ ಎಂಟರ್ಟೈನರ್ಸ್ ದ್ವಿಚಕ್ರ ವಾಹನವನ್ನು ನೀಡುತ್ತಿದೆ. ಕಳೆದ ಬಾರಿ ಟೂರ್ನಮೆಂಟ್ ಮುಗಿದ ಮೇಲೆ ಪ್ರೊಡಕ್ಷನ್ ಮ್ಯಾನೇಜರ್ ಪಾರ್ಥ ಅವರಿಗೆ ಧನ ಸಹಾಯ ಮಾಡಿದ್ದೇವು. ಈ ಬಾರಿಯೂ ಕೂಡ ಹಿರಿಯ ಕಲಾವಿದರಿಗೆ ಸಹಾಯ ಧನ ನೀಡಲು ಚಿಂತನೆ ಮಾಡಿದ್ದೇವೆ ಎಂದು ಬಿ. ಆರ್. ಸುನೀಲ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: `ಆಚಾರ್ಯ’ ಚಿತ್ರಕ್ಕಾಗಿ ನಿರ್ಮಿಸಿದ್ದ 20 ಕೋಟಿ ವೆಚ್ಚದ ಸೆಟ್ ಬೆಂಕಿಗಾಹುತಿ

    ಬೆಂಗಳೂರಿನ ಅಶೋಕ ರೈಸಿಂಗ್ ಸ್ಟಾರ್ ಕ್ರಿಕೆಟ್ ಗ್ರೌಂಡ್ ನಲ್ಲಿ ಟಿಪಿಎಲ್ ಸೀಸನ್ -2 ನಡೆಯಲಿದೆ. ದಿ ಪರ್ಪಲ್ ರಾಕ್ ಪ್ಯಾಂಥರ್ಸ್, ಅಶ್ವಸೂರ್ಯ ರಿಯಾಲಿಟೀಸ್, ಆ್ಯನಿಲೀಪ್ ಟೂರ್ನಿವಲ್, ಇನ್ಸೇನ್ ಕ್ರಿಕೆಟ್ ಟೀಂ, ದಿ ಬುಲ್ ಸ್ಕ್ವಾಡ್, ಆಕ್ಸ್ ಫರ್ಡ್ ವಿನ್ ಟೀಂ ಎಂಬ ಆರು ತಂಡಗಳಿದ್ದು, ಲೂಸ್ ಮಾದ ಯೋಗಿ, ಮಂಜು ಪಾವಗಡ, ಹರ್ಷ ಸಿ.ಎಂ ಗೌಡ, ರವಿಶಂಕರ್ ಗೌಡ, ಶರತ್ ಪದ್ಮನಾಭ್, ಸಾಗರ್ ಬಿಳಿಗೌಡ ಒಂದೊಂದು ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.

    ಪ್ರತಿತಂಡಕ್ಕೂ ಓನರ್ ಹಾಗೂ ಸೆಲೆಬ್ರೆಟಿ ಅಂಬಾಸಿಡರ್ ಗಳಿರಲಿದ್ದು, ‘ದಿ ಪರ್ಪಲ್ ರಾಕ್ ಪ್ಯಾಂಥರ್ಸ್’ ತಂಡದ ಮಾಲಿಕತ್ವವನ್ನು ಗಣೇಶ್ ಪಾಪಣ್ಣ, ಯತೀಶ್ ವೆಂಕಟೇಶ್ ವಹಿಸಿಕೊಂಡಿದ್ದು, ರಂಜಿತ್ ಕುಮಾರ್ ‘ಅಶ್ವಸೂರ್ಯ ರಿಯಾಲಿಟೀಸ್’, ಮೊಹಮ್ಮದ್ ಜಾಕೀರ್ ಹುಸೇನ್ ಮತ್ತು ಪೂಜಾ ಶ್ರೀ ‘ಆನಿಹೆಲ್ಪ್ ಟೂರ್ನಿವಲ್’, ಫೈಜಾನ್ ಖಾನ್ ‘ಇನ್ಸೇನ್ ಕ್ರಿಕೆಟ್ ಟೀಂ’, ಮೊನೀಶ್ ‘ದಿ ಬುಲ್ ಸ್ಕ್ವಾಡ್’, ಅನಿಲ್ ಬಿ.ಆರ್,ದೇವನಾಥ್.ಡಿ, ರವಿ.ಜಿ.ಎಸ್  ‘ಆಕ್ಸ್ ಫರ್ಡ್ ವಿನ್ ಟೀಂ’ ಮಾಲಿಕತ್ವ ವಹಿಸಿಕೊಂಡಿದ್ದಾರೆ. ಐಶ್ವರ್ಯ ಸಿಂದೋಗಿ, ವಿರಾನಿಕ ಶೆಟ್ಟಿ, ರಾಶಿಕ ಶೆಟ್ಟಿ, ಸೊಹಾರ್ಧ, ಗಾನವಿ ಸುರೇಶ್, ಸೀಮಾ ವಸಂತ್, ಅದ್ವಿತಿ ಶೆಟ್ಟಿ, ಶ್ವೇತ ಪ್ರಸಾದ್, ಲಿಖಿತಾ ಅನಂತ್, ಯಶಸ್ವಿನಿ, ಆಶಿಕಾ ಗೌಡ, ಶ್ವೇತ ಕೊಗ್ಲೂರ್ ಟಿಪಿಎಲ್ ಸೀಸನ್ -2 ಅಂಬಾಸಿಡರ್ ಪಟ್ಟಿಯಲ್ಲಿದ್ದಾರೆ.

  • ಭಯ ಪಡಬೇಡಿ: ಈ ವಾರ ಬರೋಬ್ಬರಿ 20 ಸಿನಿಮಾಗಳು ರಿಲೀಸ್

    ಭಯ ಪಡಬೇಡಿ: ಈ ವಾರ ಬರೋಬ್ಬರಿ 20 ಸಿನಿಮಾಗಳು ರಿಲೀಸ್

    ವರ್ಷ ಚಿತ್ರೋದ್ಯಮದ ಮತ್ತೊಂದು ದಾಖಲೆಯ ವಾರಕ್ಕೆ ಸಿದ್ಧವಾಗುತ್ತಿದೆ. ಕರ್ನಾಟಕದಲ್ಲಿ ಈ ವಾರ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿ ಬರೋಬ್ಬರಿ 20ಕ್ಕೂ ಹೆಚ್ಚು ಚಿತ್ರಗಳು (Movie) ಬಿಡುಗಡೆ ಆಗುತ್ತಿವೆ. ಕನ್ನಡದಲ್ಲೇ ಆರು ಚಿತ್ರಗಳು ಈ ಶುಕ್ರವಾರ ತೆರೆ ಕಾಣುತ್ತಿವೆ. ಲೂಸ್ ಮಾದ ಯೋಗಿ, ಡಾಲಿ ಧನಂಜಯ್ ಸಿನಿಮಾಗಳು ಇದರಲ್ಲಿ ಸೇರಿವೆ. ವರ್ಷಾಂತ್ಯಕ್ಕೆ ಈ ಪ್ರಮಾಣದಲ್ಲಿ ಸಿನಿಮಾಗಳು ರಿಲೀಸ್ ಆಗುತ್ತಿರುವುದು ನಿಜಕ್ಕೂ ಅಭಿಮಾನಿಗಳ ಪಾಲಿಗೆ ಸಂಭ್ರಮವೋ ಸಂಕಟವೋ ಗೊಂದಲವಾಗಿದೆ.

    ಡಾಲಿ ಧನಂಜಯ್ (Dhananjay) ನಟನೆಯ ‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’, ಲೂಸ್ ಮಾದ ಯೋಗೀಶ್ (Yogi) ನಟನೆಯ ‘ನಾನು ಮತ್ತು ಸರೋಜ’, ಯೋಗರಾಜ್ ಭಟ್ ಅವರ ಬ್ಯಾನರ್ ನಿಂದ ತಯಾರಾದ ‘ಪದವಿ ಪೂರ್ವ’, ಹೊಸ ತಂಡದ ‘ಮೇಡ್ ಇನ್ ಇಂಡಿಯಾ’, ‘ಜೋರ್ಡನ್’, ‘ದ್ವಿಪಾತ್ರ’ ಚಿತ್ರಗಳು ಈ ವಾರ ತೆರೆಗೆ ಬರಲು ಸಿದ್ಧವಾಗಿವೆ. ಈ ಕನ್ನಡ ಚಿತ್ರಗಳು ಈ ವಾರ ಬಿಡುಗಡೆ ಆಗುತ್ತಿರುವ ಇತರ ಭಾಷೆಯ ಚಿತ್ರಗಳ ಜೊತೆ ಪೈಪೋಟಿಗೆ ಇಳಿಯಲಿವೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಅರವಿಂದ್‌ಗಾಗಿ ಬೇಡಿಕೆಯಿಟ್ಟ ದಿವ್ಯಾ ಉರುಡುಗ

    ಸ್ಟಾರ್ ನಟ ನಟಿಯರ ಚಿತ್ರಗಳಾದ ತಮಿಳಿನ ಖ್ಯಾತ ನಟಿ ತ್ರಿಶಾ (Trisha) ನಟನೆಯ ‘ರಾಂಗಿ’, ಐಶ್ವರ್ಯ ರಾಜೇಶ್ ನಟನೆಯ ‘ದ ಗ್ರೇಟ್ ಇಂಡಿಯನ್ ಕಿಚನ್, ಬಾಲಿವುಡ್ ನ ವೇದ್, ಟಾಲಿವುಡ್ ನ ಆದಿ ಸಾಯಿಕುಮಾರ್ ನಟನೆಯ ‘ಟಾಪ್ ಗೇರ್’, ಧನಂಜಯ್ ನಟನೆಯ ತೆಲುಗು ಅವತರಣಿಕೆ ‘ಒನ್ಸ್ ಅಪಾನ್ ಎ ಟೈಮ್ ಇನ್ ದೇವರಕೊಂಡ’ ಹೀಗೆ ಇಪ್ಪತ್ತಕ್ಕೂ ಹೆಚ್ಚು ಚಿತ್ರಗಳು ಈ ವಾರ ಕರ್ನಾಟಕದಲ್ಲಿ ಬಿಡುಗಡೆ (Release) ಆಗುತ್ತಿವೆ.

    ಈಗಾಗಲೇ ರಿಲೀಸ್ ಆಗಿರುವ ಶಿವರಾಜ್ ಕುಮಾರ್ ನಟನೆಯ ವೇದ ಚಿತ್ರ ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡುತ್ತಿವೆ. ಕಳೆದ ಕೆಲ ವಾರಗಳಿಂದ ರಿಲೀಸ್ ಆಗಿರುವ ಹಲವು ಚಿತ್ರಗಳು ಥಿಯೇಟರ್ ನಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿವೆ. ಹಾಗಾಗಿ ಈ ಪ್ರಮಾಣದ ಸಂಖ್ಯೆಯ ಚಿತ್ರಗಳು ಥಿಯೇಟರ್ ಎಲ್ಲಿಂದ ತರೋದು ಎನ್ನುವುದು ವಿತರಕರ ತಲೆನೋವು ಆಗಿದೆ. ಸಿಕ್ಕಷ್ಟು ಚಿತ್ರಮಂದಿರಗಳಲ್ಲಿ ನಿರ್ಮಾಪಕ ತಮ್ಮ ಚಿತ್ರಗಳನ್ನು ಬಿಡುಗಡೆ ಮಾಡಿ, ಹೊಸ ವರ್ಷವನ್ನು ಸ್ವಾಗತಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೆಡ್ ಬುಷ್ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿದ ಡಾಲಿ ಧನಂಜಯ್

    ಹೆಡ್ ಬುಷ್ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿದ ಡಾಲಿ ಧನಂಜಯ್

    ಬೆಂಗಳೂರು ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ “ಹೆಡ್ ಬುಷ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರದ ಚಿತ್ರೀಕರಣ ನಡೆದಿದೆ. ಡಾಲಿ ಧನಂಜಯ ಜಯರಾಜ್ ಅವರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ : ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್ ನಲ್ಲೂ ರಶ್ಮಿಕಾ ಹವಾ

    1970 ರ ಬೆಂಗಳೂರಿನ ಭೂಗತ ಜಗತ್ತನ್ನು ಶೂನ್ಯ ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ಆ ಕಾಲಕ್ಕೆ ಸರಿಹೊಂದುವ ಅನೇಕ ಸೆಟ್ ಗಳನ್ನು ಹಾಕಲಾಗಿದೆ. ಫಿಲಂ ಮೇಕಿಂಗ್ ನಲ್ಲಿ ಎಂ ಎಸ್ ಸಿ ಪದವಿ ಪಡೆದಿರುವ ಶೂನ್ಯ, ರಕ್ಷಿತ್ ಶೆಟ್ಟಿ ಅವರ ಬಳಿ ಅಸೋಸಿಯೇಟ್ ಆಗಿ ಕಾರ್ಯ ನಿರ್ವಹಿಸಿ ಅನುಭವ ಪಡೆದಿದ್ದಾರೆ.  ಅಷ್ಟೇ ಅಲ್ಲದೇ, ಶೂನ್ಯ  ಫಿಲಂ ಮೇಕಿಂಗ್ ಕುರಿತು ಸಂಶೋಧನೆ ಕೂಡ ನಡೆಸಿದ್ದಾರೆ. ಇದನ್ನೂ ಓದಿ : ಬಾಲಿವುಡ್ ಎಂದರೆ ಭಾರತೀಯ ಸಿನಿಮಾರಂಗವಲ್ಲ: ಮೆಗಾಸ್ಟಾರ್ ಚಿರಂಜೀವಿಗೂ ಆಗಿತ್ತು ಅವಮಾನ

    ಡಾಲಿ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರನ್, ಲೂಸ್ ಮಾದ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ

    ಅದ್ಭುತ ಹಾಡುಗಳಿಗೆ ಚರಣ್ ರಾಜ್ ಸಂಗೀತ ನಿರ್ದೇಶನವಿದೆ. ಸುನೊಜ್ ವೇಲಾಯಧನ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ಕಲಾ ನಿರ್ದೇಶಕರು ಬಾದಲ್ ನಂಜುಂಡಸ್ವಾಮಿ.

  • ಮೈಕಲ್ ಅಂಡ್ ಮಾರ್ಕೊನಿ ಸಿನಿಮಾದಲ್ಲಿ ಪ್ರಶಾಂತ್ ಸಿದ್ದಿ ವಿಶೇಷ ಪಾತ್ರ

    ಮೈಕಲ್ ಅಂಡ್ ಮಾರ್ಕೊನಿ ಸಿನಿಮಾದಲ್ಲಿ ಪ್ರಶಾಂತ್ ಸಿದ್ದಿ ವಿಶೇಷ ಪಾತ್ರ

    ಹಿಂದೆ ಸ್ಟಾರ್ ಕನ್ನಡಿಗ ಸಿನಿಮಾ ಮಾಡಿದ್ದ ತಂಡವು ಇದೀಗ ‘ಮೈಕಲ್ ಅಂಡ್ ಮಾರ್ಕೊನಿ’‌ ಎಂಬ ಮತ್ತೊಂದು ಚಿತ್ರವನ್ನು ಕೈಗೆತ್ತಿಕೊಂಡಿದ್ದು, ಇದರಲ್ಲಿ ನಟ ಪ್ರಶಾಂತ್ ಸಿದ್ದಿ ವಿಭಿನ್ನ ಪಾತ್ರ ನಿರ್ವಹಿಸುತ್ತಿದ್ದಾರೆ. ಬ್ಲಾಕ್ ಬಿಲ್ಲಿ ಎಂಬ ಪಾತ್ರವನ್ನು ಅವರು ಪೋಷಣೆ‌ ಮಾಡುತ್ತಿದ್ದು, ಈಗಷ್ಟೇ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಬ್ಲಾಕ್ ಬಿಲ್ಲಿ ಕ್ಯಾರೆಕ್ಟರ್ ನಂಬರ್ 18, ಏರಿಯಾ ನಂಬರ್-51 ಅಂತ ಬರೆದು ಕುತೂಹಲ ಮೂಡಿಸಿದೆ ಚಿತ್ರತಂಡ. ಇದನ್ನೂ ಓದಿ : ಬಾಗ್ಲು ತೆಗಿ ಮೇರಿ ಜಾನ್ ಹಾಡಿಗೆ ಗಲ್ಫ್ ಕನ್ನಡಿಗರ ಬಹುಪರಾಕ್: ಹಾಡೂ ಬೊಂಬಾಟ್ ಹಿಟ್

    ಸ್ಟಾರ್ ಕನ್ನಡಿಗ ಸಿನಿಮಾದ ನಿರ್ದೇಶನದ ಜವಾಬ್ದಾರಿ ಹೊತ್ತು ಜೊತೆಗೆ ಬಣ್ಣ ಹಚ್ಚಿದ್ದ ಮಂಜುನಾಥ್ ವಿ ಆರ್ ಮೈಕಲ್ ಅಂಡ್ ಮಾರ್ಕೊನಿ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಶ್ರೀ ಮಂಜುನಾಥ್ ಪಿಕ್ಚರ್ಸ್ ನಡಿ ನಿರ್ಮಾಣವಾಗ್ತಿರುವ ಈ ಸಿನಿಮಾಗೆ ಹರೀಶ್ ಜೋಡಿ ಬಂಡವಾಳ ಹೂಡಿದ್ದಾರೆ. ಇದನ್ನೂ ಓದಿ : ಹಾಲಿವುಡ್ ಗೆ ಹಾರಿದ ಸುದೀಪ್ ನಟನೆಯ ವಿಕ್ರಾಂತ್ ರೋಣ

    ಪಕ್ಕ ಗ್ಯಾಂಗ್ ಸ್ಟಾರ್ ಕಥೆಯುಳ್ಳ, ರಾ ಥೀಮ್ ಕಾನ್ಸೆಪ್ಟ್ ನಲ್ಲಿ ತಯಾರಾಗುತ್ತಿರುವ ಮೈಕಲ್ ಅಂಡ್ ಮಾರ್ಕೊನಿ ಸಿನಿಮಾದ ಟೈಟಲ್ ಅನ್ನು ನಟರಾಕ್ಷಸ ಡಾಲಿ ಧನಂಜಯ್ ಮೆಚ್ಚಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ರಿಲೀಸ್ ಮಾಡಿದ್ದಾರೆ. ಲೂಸ್ ಮಾದ ಯೋಗಿ ತಂಡಕ್ಕೆ ಹಾರೈಸಿದ್ದಾರೆ.

  • ಶೀಘ್ರವೇ ಅಲಹಾಬಾದ್ ಹೆಸರು ಪ್ರಯಾಗ್‍ರಾಜ್ ಆಗುತ್ತೆ: ಯೋಗಿ

    ಶೀಘ್ರವೇ ಅಲಹಾಬಾದ್ ಹೆಸರು ಪ್ರಯಾಗ್‍ರಾಜ್ ಆಗುತ್ತೆ: ಯೋಗಿ

    ಲಕ್ನೋ: ಅಲಹಾಬಾದ್ ಜಿಲ್ಲೆಯ ಹೆಸರನ್ನ ಶೀಘ್ರವೇ ಪ್ರಯಾಗ್‍ರಾಜ್ ಎಂದು ಬದಲಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

    ಮುಂದಿನ ವರ್ಷ ನಡೆಯಲಿರುವ ಮಹಾ ಕುಂಭ ಮೇಳದ ಚರ್ಚೆಯಲ್ಲಿ ಮಾತನಾಡಿದ ಯೋಗಿ ಅವರು, ನನಗೆ ಅಖಾಡ ಪರಿಷದ್ ಮತ್ತು ಇತರೆ ಕೆಲವರು ಅಲಹಾಬಾದ್ ಜಿಲ್ಲೆಯಲ್ಲಿ ಪ್ರಯಾಗ್‍ರಾಜ್ ಎಂದು ಬದಲಿಸುವಂತೆ ಪ್ರಸ್ತಾವನೆ ನೀಡಿದ್ದಾರೆ. ರಾಜ್ಯಪಾಲರದ ರಾಮ್ ನಾಯಕ್ ಸಹ ಈ ನಿರ್ಧಾರಕ್ಕೆ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಶೀಘ್ರವೇ ಸರ್ಕಾರ ಅಲಹಾಬಾದ್ ಹೆಸರನ್ನು ಪ್ರಯಾಗ್‍ರಾಜ್ ಎಂದು ಬದಲಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

    ಕುಂಭ ಮೇಳದ ತಯಾರಿಯ ಬಗ್ಗೆ ಮಾತನಾಡಿದ ಮುಖ್ಯ ಮಂತ್ರಿಯವರು, ಜಗತ್ತಿನ ಮೂಲೆ ಮೂಲೆಯಿಂದ ಭಕ್ತರು ಈ ಕುಂಭ ಮೇಳದಲ್ಲಿ ಭಾಗವಹಿಸಲಿದ್ದಾರೆ. ದೇಶದ 6 ಲಕ್ಷ ಹಳ್ಳಿಗಳಿಂದ ಭಕ್ತರು ಭಾಗವಹಿಸಲಿದ್ದು, ಡಿಸೆಂಬರ್ ತಿಂಗಳಿನೊಳಗೆ ಎಲ್ಲಾ ಉಳಿದ ಕೆಲಸಗಳನ್ನ ಮುಗಿಸಲಿದ್ದೇವೆ ಎಂದು ತಿಳಿಸಿದರು.

    ಕುಂಭ ಮೇಳಕ್ಕೆ ಬರುವ ಭಕ್ತರಿಗೆ ಅನುಕೂಲವಾಗಲು ಹಾಲಿನ ಬೂತ್ ಗಳು, ಎಟಿಎಂ ಮೆಷಿನ್‍ಗಳು, ನೀರಿನ ಟ್ಯಾಂಕರ್ ಗಳು, ಬ್ಯಾಂಕ್ ಗಳು, ಮೊಬೈಲ್ ಟವರ್‍ಗಳನ್ನ ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಪ್ರಯಾಗ್ ಎನ್ನುವುದು ಕುಂಭಮೇಳ ನಡೆಯುವ ಪವಿತ್ರ ಪ್ರದೇಶವಾಗಿದೆ. ಇದು ಗಂಗೆ, ಯಮುನೆ ಮತ್ತು ಸರಸ್ವತಿ ನದಿಗಳ ಸಂಗಮಸ್ಥಳ. ಈ ಕಾರಣಕ್ಕಾಗಿ ಅಲಹಾಬಾದ್ ಅನ್ನು `ಪ್ರಯಾಗ್‍ರಾಜ್’ ಎಂದು ನಾಮಕರಣ ಮಾಡುತ್ತಿದ್ದೇವೆ ಎಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಈಗಾಗಲೇ ಕುಂಭ ಮೇಳದ ಬ್ಯಾನ ರ್‍ಗಳಲ್ಲಿ ಅಲಹಾಬಾದ್ ಬದಲು ಪ್ರಯಾಗ್‍ರಾಜ್ ಎಂದು ಬರೆಯಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಣ್ಣಾವ್ರ ಅಭಿಮಾನಿ, ಕಾವೇರಿ ನನ್ನ ತಾಯಿ ಅಂದಿದ್ದ ಕನ್ನಡ ನಟನನ್ನು ಹೊರದಬ್ಬಿದ ತಮಿಳು ಚಿತ್ರರಂಗ

    ಅಣ್ಣಾವ್ರ ಅಭಿಮಾನಿ, ಕಾವೇರಿ ನನ್ನ ತಾಯಿ ಅಂದಿದ್ದ ಕನ್ನಡ ನಟನನ್ನು ಹೊರದಬ್ಬಿದ ತಮಿಳು ಚಿತ್ರರಂಗ

    ಬೆಂಗಳೂರು: ಅಣ್ಣಾವ್ರ ಅಭಿಮಾನಿ ಹಾಗೂ ಕಾವೇರಿ ನನ್ನ ತಾಯಿ ಎಂದಿದ್ದ ಕನ್ನಡ ನಟನನ್ನು ತಮಿಳು ಚಿತ್ರರಂಗ ಹೊರದಬ್ಬಿದೆ.

    ಕನ್ನಡ ನಟ ಯೋಗಿ ತಮಿಳಿನ ‘ಪಾರ್ತಿಬನ್ ಕಾದಲ್’ ಚಿತ್ರಕ್ಕೆ ನಾಯಕನಾಗಿ ಆಯ್ಕೆಯಾಗಿದ್ದರು. ಈ ಚಿತ್ರದ ಮೋಷನ್ ಪೋಸ್ಟರ್ ಕೂಡ ಚೆನ್ನೈಯಲೇ ಬಿಡುಗಡೆಯಾಗಿತ್ತು. ಆದೆ ಕಾರ್ಯಕ್ರಮ ಮುಗಿದ ಮೇಲೆ ತಮಿಳು ಪತ್ರಕರ್ತರು ಸಿನಿಮಾ ತಂಡವನ್ನು ಪ್ರಶ್ನೆ ಮಾಡಲು ಶುರು ಮಾಡಿದ್ದಾರೆ. ಸಿನಿಮಾದ ಬಗ್ಗೆ ಪ್ರಶ್ನೆ ಮುಗಿದ ಬಳಿಕ ಕಾವೇರಿ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದ್ದಾರೆ.

    ಈ ಪ್ರಶ್ನೆಗೆ ಸಾರ್ ನಮ್ಗೆ ನೀರಿಲ್ಲ ನಿಮಗೆ ಬೇಕು ಅಂದ್ರೆ ಹೇಗೆ, ಮಂಡ್ಯ ಅಂತಾ ಊರಿದೆ ಅಲ್ಲಿ ಎಷ್ಟು ಕಷ್ಟಪಡ್ತಾರೆ ಜನ ಅಂತಾ ನೀವೇ ನೋಡಿ ಅಂತಾ ಯೋಗಿ ಉತ್ತರಿಸಿದ್ದರು. ಅಷ್ಟಕ್ಕೆ ಮುಗಿಸದೇ ಪ್ರರ್ತಕರ್ತರು ನಿಮಗೆ ರಾಜ್‍ಕುಮಾರ್ ಇಷ್ಟನೋ ಅಥವಾ ರಜನಿಕಾಂತ್ ಅನ್ನೋ ಪ್ರಶ್ನೆ ಕೇಳಿದ್ದರು. ಇದಕ್ಕೆ ಯೋಗಿ ನನಗೆ ಅಣ್ಣಾವ್ರೇ ಇಷ್ಟ ಎಂದು ಉತ್ತರಿಸಿದ್ದಾರೆ.

    ಯೋಗಿ ಅವರ ಈ ಮಾತುಗಳನ್ನು ಹಿಡಿದುಕೊಂಡು ಕನ್ನಡ ನಟನ ಅಭಿಪ್ರಾಯ ಬೇರೆ ಮಾಡಲು ಅಲ್ಲಿನ ಮಾಧ್ಯಮ ಪ್ರಯತ್ನಿಸಿತ್ತು. ಇದರ ಪರಿಣಾಮವಾಗಿ ಪಾರ್ತಿಬನ್ ಕಾದಲ್ ಸಿನಿಮಾದಿಂದ ಯೋಗಿ ಅವರನ್ನು ಗೇಟ್‍ಪಾಸ್ ನೀಡಿದ್ದಾರೆ. ಅಷ್ಟೇ ಅಲ್ಲದೇ ಈ ರೀತಿ ಮಾತಾನಾಡಬಾರದಿತ್ತು ಎಂದು ನಿರ್ಮಾಪಕರು ಬುದ್ಧಿ ಮಾತು ಹೇಳಿ ಯೋಗಿಯನ್ನು ಹೊರದಬ್ಬಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ.

    ‘ಅಯೋಗ್ಯ’ ಚಿತ್ರದ ನೀನಾಸಂ ಸತೀಶ್ ಕೂಡ ಹೈದರಾಬಾದ್ ನಲ್ಲಿ ಸಿನಿಮಾ ಪ್ರದರ್ಶನಕ್ಕೆ ಆದ ಕಿರಿಕ್ ಬಗ್ಗೆ ವಿವರಿಸಿದ್ದಾರೆ. ತೆಲುಗಿನ ‘ಗೀತಾ ಗೋವಿಂದಂ’ ಚಿತ್ರವನ್ನು ಕನ್ನಡಿಗರು ಬ್ಲಾಕ್ ಬ್ಲಾಸ್ಟರ್ ಹಿಟ್ ಮಾಡಿದ್ದಾರೆ. ಕನ್ನಡಿಗರು ತಮಿಳು ಚಿತ್ರವನ್ನು ಗೆಲ್ಲಿಸುತ್ತಾರೆ. ಭಾಷೆಯ ಹಂಗಿಲ್ಲದೇ ಕಲೆಯನ್ನು ಗೌರವಿಸುತ್ತಾರೆ. ಆದರೆ ಕನ್ನಡಿಗರಿಗೆ ತಮಿಳು ಚಿತ್ರರಂಗ ಕೊಡುವ ಮರ್ಯಾದೆ ಇದೇನಾ ಎಬ ಪ್ರಶ್ನೆ ಎದುರಾಗಿದೆ. ಇಂತಹ ಘಟನೆ ನಡೆದರೂ ಪದೇ ಪದೇ ವಾಣಿಜ್ಯ ಮಂಡಳಿ ಮೌನವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲೂಸ್ ಮಾದ ಯೋಗಿಯ ಬದುಕು ಬದಲಿಸುವ ದುನಿಯಾ!

    ಲೂಸ್ ಮಾದ ಯೋಗಿಯ ಬದುಕು ಬದಲಿಸುವ ದುನಿಯಾ!

    ಬೆಂಗಳೂರು: ದಶಕದ ಹಿಂದೆ ತೆರೆಗೆ ಬಂದು ಬರೀ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ, ನೆರೆಯ ರಾಜ್ಯದವರೂ ಕರ್ನಾಟಕದತ್ತ ತಿರುಗಿನೋಡುವಂತೆ ಮಾಡಿದ ಸಿನಿಮಾ ದುನಿಯಾ. ಆ ಚಿತ್ರವನ್ನು ಸ್ವತಃ ಯೋಗಿ ಅವರ ತಂದೆ ಸಿದ್ದರಾಜು ನಿರ್ಮಿಸಿದ್ದರು. ದುನಿಯಾ ಸಿನಿಮಾ ಆದಾಗಿನ್ನೂ ಮೀಸೆ ಕೂಡಾ ನೆಟ್ಟಗೆ ಚಿಗುರದ ಯೋಗಿಗೆ ಲೂಸ್ ಮಾದ ಎಂಬ ಬಿರುದನ್ನು ನೀಡಿತ್ತು. ನಂತರ ಯೋಗಿ ನಾಯಕನಟನಾಗಿ ಕೂಡಾ ಎಂಟ್ರಿ ನೀಡಿ ಲೂಸ್ ಮಾದ ಎನ್ನುವ ಅದೇ ಹೆಸರಿನಿಂದ ಚಿತ್ರರಸಿಕರ ಮನೆಮಾತಾಗಿದ್ದು ಇತಿಹಾಸ. ಈಗ ಲೂಸ್ ಮಾದನ ಪಾಲಿಗೆ ‘ಯೋಗಿ ದುನಿಯಾ’ ಚಿತ್ರರಂಗದಲ್ಲಿ ಮರುಹುಟ್ಟು ನೀಡಿದೆ.

    ಯೋಗಿಯನ್ನು ಜನ ನೋಡಲು ಇಷ್ಟ ಪಡುವುದು ಒಬ್ಬ ಸಾದಾ ಸೀದಾ ಹುಡುಗನ ಪಾತ್ರದಲ್ಲಿ. ಮಧ್ಯಮ ಮತ್ತು ಕೆಳಮಧ್ಯಮ ವರ್ಗದ ಯುವಕರ ಪ್ರತಿನಿಧಿಯನ್ನಾಗಿ ಯೋಗಿ ಸ್ಥಾನ ಗಿಟ್ಟಿಸಿರೋ ಕಾರಣದಿಂದಲೋ ಏನೋ `ಯೋಗಿ ದುನಿಯಾ’ ಅವರ ಪಾಲಿಗೆ ಹೆಚ್ಚು ಆಪ್ತವನ್ನಾಗಿಸಿದೆ.

    ಬೆಂಗಳೂರಿನ ಎಲ್ಲ ಪ್ಲಸ್ಸು ಮೈನಸ್ಸುಗಳನ್ನೂ ಬಾಚಿಕೊಂಡು ಕುಂತಂತೆ ಕಾಣುವ ಮೆಜೆಸ್ಟಿಕ್ ಏರಿಯಾದಲ್ಲೇ ನಡೆಯುವ ಘಟನೆಗಳು ಯೋಗಿ ದುನಿಯಾದ ಸರಕು. ಟ್ರಾವಲ್ಸ್ ಏಜೆನ್ಸಿಯಲ್ಲಿ ಕೆಲಸ ಮಾಡಿಕೊಂಡು ಜೊತೆಗೆ ಕ್ರಿಕೆಟ್ ಬೆಟ್ಟಿಂಗನ್ನು ಉಪಕಸುಬಾಗಿಸಿಕೊಂಡ ಹುಡುಗ ಯೋಗಿ. ಇನ್ನು ಆ ಏರಿಯಾದಲ್ಲೇ ಓಡಾಡುತ್ತಾ ಗಿರಾಕಿಗಳಿಗಾಗಿ ಹಂಬಲಿಸುವ ಹುಡುಗಿ ಶೀಲಾ ಆಗಿ ಹಿತಾ ಚಂದ್ರಶೇಖರ್ ನಟಿಸಿದ್ದಾರೆ.

    ಬದುಕಿಗಾಗಿ ವೇಶ್ಯಾವೃತ್ತಿ ನಿಭಾಯಿಸುತ್ತಿದ್ದಾರೂ ಆಕೆಗೂ ಮನಸ್ಸಿದೆ, ಪ್ರೀತಿಗಾಗಿ ಪರಿತಪಿಸೋ ಹೃದಯವಿದೆ ಅನ್ನೋದನ್ನು ನಿರ್ದೇಶಕ ಹರಿ ಮನಮುಟ್ಟುವಂತೆ ಚಿತ್ರಿಸಿದ್ದಾರೆ. ತಾನು ಜೀವಕ್ಕಿಂತಾ ಹೆಚ್ಚು ಪ್ರೀತಿಸುತ್ತಿರುವ ಹುಡುಗಿ ಇಂಥಾ ಕರಾಳ ದಂಧೆಯ ಭಾಗವಾಗಿದ್ದಾಳೆ ಅನ್ನೋ ಕಟುಸತ್ಯ ತಿಳಿದಾಗ ಹುಡುಗ ಅದನ್ನು ಯಾವ ರೀತಿ ಸ್ವೀಕರಿಸುತ್ತಾನೆ. ತನಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಬೆಟ್ಟಿಂಗ್ ಮಾಫಿಯಾದ ಪಾಲುದಾರನಾದ ಹುಡುಗನ ಬದುಕು ಎಲ್ಲಿಗೆ ಮುಟ್ಟುತ್ತದೆ ಇಂಥ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಬೇಕಿದ್ದರೆ ಒಮ್ಮೆ ಯೋಗಿ ದುನಿಯಾವನ್ನು ನೋಡಲೇಬೇಕು.

    ಬಹುತೇಕ ರಾತ್ರಿಹೊತ್ತಲ್ಲೇ ನಡೆಯುವ ಕಥೆ ಇದು. ಅದೂ ಮೆಜೆಸ್ಟಿಕ್ ಏರಿಯಾದಲ್ಲಿ ಜರುಗುವ ಕತೇ ಇದಾದ್ದರಿಂದ ಅದನ್ನು ತೆರೆ ಮೇಲೆ ಕಟ್ಟಿಕೊಡೋದು ಸುಲಭದ ಮಾತಲ್ಲ. ನಿರ್ದೇಶಕ ಹರಿ ಸೇರಿದಂತೆ ಛಾಯಾಗ್ರಾಹಕರು ಕೂಡಾ ಚಿತ್ರವನ್ನು ಸಮರ್ಥವಾಗಿ ಕಟ್ಟಿಕೊಡುವಲ್ಲಿ ಗೆದ್ದಿದ್ದಾರೆ. ಇನ್ನೊಂಚೂರು ಕಥೆಯಲ್ಲಿ ಸ್ಪೀಡು ಇದ್ದಿದ್ದರೆ ಮತ್ತಷ್ಟು ಚೆಂದ ಇರುತ್ತಿತ್ತು. ಯೋಗಿ, ಹಿತಾ ಅಭಿನಯವಂತೂ ತೀರಾ ನೈಜವಾಗಿ ಮೂಡಿಬಂದಿದೆ. ಬದುಕಿನ ಬೇರೆ ಕೋನಗಳನ್ನು ತೆರೆದಿಟ್ಟಿರುವ ಯೋಗಿ ದುನಿಯಾ ಸಿನಿಮಾ ಪ್ರೇಮಿಗಳ ಪಾಲಿಗೆ ಒಂದು ಕೊಡುಗೆಯಾಗಿದೆ.