Tag: ಯೋಗಿ ಆದಿತ್ಯನಾಥ

  • ಮಹಿಳೆಯರ ಸುರಕ್ಷತೆಗೆ ಏನು ಮಾಡದ ಯೋಗಿ ತೀರ್ಥಯಾತ್ರೆಗೆ ಹೊರಡಲಿ: ಜಯಾ ಬಚ್ಚನ್

    ಮಹಿಳೆಯರ ಸುರಕ್ಷತೆಗೆ ಏನು ಮಾಡದ ಯೋಗಿ ತೀರ್ಥಯಾತ್ರೆಗೆ ಹೊರಡಲಿ: ಜಯಾ ಬಚ್ಚನ್

    ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಲ್ಲಾ ಬಿಟ್ಟು ತೀರ್ಥಯಾತ್ರೆಗೆ ಹೊರಡಲಿ. ಮಹಿಳೆಯರ ಸುರಕ್ಷತೆ, ಅಭಿವೃದ್ಧಿ ಬಗ್ಗೆ ಏನೂ ಮಾಡಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ವಾಗ್ಧಾಳಿ ಮಾಡಿದ್ದಾರೆ.

    ಉತ್ತರ ಪ್ರದೇಶ ಚುನಾವಣೆ ಪ್ರಯುಕ್ತ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿ, ಉತ್ತರ ಪ್ರದೇಶದ ಹೆಣ್ಣು ಮಕ್ಕಳ ನೋವನ್ನು ಅರ್ಥ ಮಾಡಿಕೊಳ್ಳುವಲ್ಲಿ ಮುಖ್ಯಮಂತ್ರಿ ವಿಫಲರಾಗಿದ್ದಾರೆ.ಅವರು ತೀರ್ಥಯಾತ್ರೆಗೆ ಹೋಗುವುದು ಉತ್ತಮ ಎಂದು ವ್ಯಂಗ್ಯವಾಡಿದ್ದಾರೆ.

    ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಅವರ ಅಭಿವೃದ್ಧಿ ಬಗ್ಗೆ ಕೇವಲ ಮಾತಿನಲ್ಲಿ ಮನೆ ಕಟ್ಟುವ ಬಿಜೆಪಿ ನಾಯಕರು, ಆ ಪಕ್ಷದ ಒಬ್ಬರೇ ಒಬ್ಬ ಸಂಸದರು ಸಂಸತ್ತಿನಲ್ಲಿ ಚರ್ಚೆ ಮಾಡಿಲ್ಲ. ಯೋಗಿ ಆದಿತ್ಯನಾಥ ಅವರ ಸರ್ಕಾರ ಅವಧಿಯಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಎನ್‍ಸಿಆರ್‌ಬಿ(National Crime Records Bureau) ಹೇಳಿದೆ. ಇದು ನಾಚೆಕೆಗೇಡಿನ ವಿಚಾರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೈಡನ್ ದೌರ್ಬಲ್ಯದಿಂದಲೇ ಈ ಅನಾಹುತವಾಗಿದೆ: ಟ್ರಂಪ್

    ಬ್ರಿಟಿಷರು ಭಾರತಕ್ಕೆ ಬಂದು ಇಲ್ಲಿನ ಸಂಪತ್ತು ದೋಚಿ ಹೋಗಿದ್ದಾರೆ. ಆದರೆ ಇದೀಗ ಅಧಿಕಾರ ನಡೆಸುವವರು ಬ್ರಿಟಿಷರ ಮತ್ತೊಂದು ರೂಪವಾಗಿದ್ದಾರೆ ಎಂದು ಉತ್ತರ ಪ್ರದೇಶ ಆಡಳಿತ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್

  • ಯೋಗಿ ಸರ್ಕಾರದಿಂದ 16.5 ಲಕ್ಷ ಯುವಕರು ಉದ್ಯೋಗದಿಂದ ವಂಚಿತ: ಪ್ರಿಯಾಂಕಾ ಗಾಂಧಿ

    ಯೋಗಿ ಸರ್ಕಾರದಿಂದ 16.5 ಲಕ್ಷ ಯುವಕರು ಉದ್ಯೋಗದಿಂದ ವಂಚಿತ: ಪ್ರಿಯಾಂಕಾ ಗಾಂಧಿ

    ನವದೆಹಲಿ: ಉತ್ತರ ಪ್ರದೇಶದಲ್ಲಿ ಉದ್ಯೋಗ ಹಾಗೂ ಶಿಕ್ಷಣದ ಸಮಸ್ಯೆಯ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದರು.

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಪ್ರದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ 16.5 ಲಕ್ಷ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ ಹಾಗೂ ನಾಲ್ಕು ಕೋಟಿ ಜನರು ಉದ್ಯೋಗದ ಭರವಸೆಯನ್ನು ಕಳೆದುಕೊಂಡಿದ್ದಾರೆ. ಆದರೆ ಈ ಬಗ್ಗೆ ಉತ್ತರಪ್ರದೇಶದಲ್ಲಿ ಯಾರು ಮಾತನಾಡುವುದಿಲ್ಲ. ಏಕೆಂದರೆ ಈ ಬಗ್ಗೆ ಯಾರು ಮಾತನಾಡುತ್ತಿಲ್ಲ ಎಂದು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ಯೋಗಿ ಸರ್ಕಾರವು ಈ 5 ವರ್ಷದಲ್ಲಿ ಬಜೆಟ್‍ನಲ್ಲಿ ಶಿಕ್ಷಣಕ್ಕೆ ಅಧಿಕ ಒತ್ತನ್ನು ನೀಡಿಲ್ಲ. ಬಜೆಟ್ ಹೆಚ್ಚು ಇದ್ದರೆ, ಯುವಕರು ಉನ್ನತ ವಿಶ್ವವಿದ್ಯಾಲಯಗಳು, ಇಂಟರ್ ನೆಟ್, ವಿದ್ಯಾರ್ಥಿ ವೇತನಗಳು, ಗ್ರಂಥಾಲಯಗಳು ಮತ್ತು ಹಾಸ್ಟೆಲ್‍ಗಳನ್ನು ಬಳಸಿಕೊಳ್ಳಬಹುದಾಗಿತ್ತು. ಈ ರೀತಿ ವಂಚನೆ ಮಾಡಿದ ಸರ್ಕಾರಕ್ಕೆ ನಿಮ್ಮ ಮತದ ಮೂಲಕ ಉತ್ತರ ಕೊಡಬಹುದು ಎಂದು ಯುವಕರಲ್ಲಿ ಮನವಿ ಮಾಡಿಕೊಂಡರು. ಇದನ್ನೂ ಓದಿ: ಕ್ಯೂನಲ್ಲಿ ನಿಂತೆ 16 ಸಾವಿರ ರೂಪಾಯಿ ಸಂಪಾದಿಸುತ್ತಾನೆ

    ಪಂಚರಾಜ್ಯಗಳ ಚುನಾವಣೆಗೆ ಕೆಲವೇ ದಿನ ಬಾಕಿ ಇದ್ದು, ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಪ್ರಚಾರವನ್ನು ಪ್ರಾರಂಭಿಸಿದೆ. ಉತ್ತರ ಪ್ರದೇಶದಲ್ಲಿ ಫೆ.10 ರಿಂದ ಮಾ.7ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾ. 10ರಂದು ಫಲಿತಾಂಶ ಹೊರಬೀಳಲಿದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ – 17ರ ಹುಡುಗ ಅರೆಸ್ಟ್

  • ರಾಹುಲ್ ಗಾಂಧಿ ಲಖೀಂಪುರ್ ಭೇಟಿಗೆ ಅವಕಾಶವಿಲ್ಲವೆಂದ ಯೋಗಿ ಸರ್ಕಾರ

    ರಾಹುಲ್ ಗಾಂಧಿ ಲಖೀಂಪುರ್ ಭೇಟಿಗೆ ಅವಕಾಶವಿಲ್ಲವೆಂದ ಯೋಗಿ ಸರ್ಕಾರ

    ಲಕ್ನೋ: ಉತ್ತರಪ್ರದೇಶದಲ್ಲಿ ಕೇಂದ್ರ ಸಚಿವರ ಮಗ ಕಾರು ಹತ್ತಿಸಿ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಲು ನಿರ್ಧರಿಸಿತ್ತು. ಆದರೆ ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿ ಭೇಟಿಗೆ ಅವಕಾಶವಿಲ್ಲ ಎಂದಿದೆ.

    ಉತ್ತರ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 144 ಸೆಕ್ಷನ್ ಜಾರಿ ಮಾಡಿದೆ. ಇದಲ್ಲದೆ ಕಾಂಗ್ರೆಸ್ ಪಕ್ಷ, ಬಿಜೆಪಿ ನೇತೃತ್ವದ ಸರ್ಕಾರದ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇಂದು ರಾಹುಲ್ ಸಹಿತ ಕಾಂಗ್ರೆಸ್ ನಿಯೋಗ ಭೇಟಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಉತ್ತರ ಪ್ರದೇಶ ಸರ್ಕಾರಕ್ಕೆ ಅವಕಾಶ ಕೊಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಉತ್ತರ ಪ್ರದೇಶ ಸರ್ಕಾರ ಅವಕಾಶ ನಿರಾಕರಿಸಿದೆ. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    ಈ ಮೊದಲು ಲಖೀಂಪುರ್ ಖೇರಿ ಭೇಟಿಗೆ ಮುಂದಾದ ಪ್ರಿಯಾಂಕಾ ಗಾಂಧಿ ಅವರನ್ನು ಯೋಗಿ ಸರ್ಕಾರ 2 ದಿನ ಗೃಹ ಬಂಧನದಲ್ಲಿಟ್ಟಿದ್ದು, ಪ್ರಿಯಾಂಕಾ ವಿರುದ್ಧ ಎಫ್‍ಐಆರ್ ದಾಖಲಿಸಿದೆ. ಆದರೆ ಪ್ರಿಯಾಂಕಾ ಗೃಹ ಬಂಧನದಲ್ಲಿಟ್ಟಿರುವ ಪೊಲೀಸರ ಕ್ರಮದ ಬಗ್ಗೆ ಖಂಡನೆ ವ್ಯಕ್ತವಾಗಿದೆ. ಸ್ವತಃ ಪ್ರಿಯಾಂಕಾ ಗಾಂಧಿ ಟ್ವಿಟ್ಟರ್ ಮೂಲಕ ವೀಡಿಯೋ ಒಂದನ್ನು ಹರಿಬಿಟ್ಟಿದ್ದಾರೆ. ಇದೀಗ ಸೀತಾಪುರದಲ್ಲಿ ಇಂಟರ್‍ ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

     

  • ಕಾಂಗ್ರೆಸ್ ಹಣ, ಹೆಣದ ಮೇಲೆ ರಾಜಕೀಯ ಮಾಡುತ್ತೆ – ಪ್ರಹ್ಲಾದ್ ಜೋಶಿ

    ಕಾಂಗ್ರೆಸ್ ಹಣ, ಹೆಣದ ಮೇಲೆ ರಾಜಕೀಯ ಮಾಡುತ್ತೆ – ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಕೋವಿಡ್ ನಿರ್ವಹಣೆ ವಿಚಾರವಾಗಿ ಕಾಂಗ್ರೆಸ್ ಸುಳ್ಳು ಆರೋಪಗಳನ್ನ ಮಾಡುತ್ತಿದೆ. ಕಾಂಗ್ರೆಸ್ ನವರು ಹಣ ಮತ್ತು ಹೆಣದ ಮೇಲೆ ರಾಜಕೀಯ ಮಾಡುತ್ತಾರೆ. ನಮ್ಮ ದೇಶದಲ್ಲಿ ಹೊರತು ಬೇರೆ ಯಾವುದೇ ದೇಶದಲ್ಲಿ ಕೋವಿಡ್ ವಿಚಾರದಲ್ಲಿ ರಾಜಕಾರಣ ಮಾಡಿಲ್ಲವೆಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಹುಬ್ಬಳ್ಳಿಯಲ್ಲಿಂದು ಯಂಗ್ ಇಂಡಿಯಾ ಸಂಸ್ಥೆ ಅನುಷ್ಠಾನಕ್ಕೆ ತಂದ ಸ್ವಯಂಚಾಲಿತ ಮಾಸ್ಕ್ ಮಷೀನ್ ಉದ್ಘಾಟನೆ ಮಾಡಿ ಮಾತನಾಡಿದ ಜೋಶಿ ಅವರು, ಕಾಂಗ್ರೆಸ್ ಆಡಳಿತ ಇರುವ ರಾಜಸ್ಥಾನ ಮತ್ತು ಪಂಜಾಬ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್ ವೇಸ್ಟ್ ಆಗಿದೆ. ಆದರೂ ಕೋವಿಡ್ ನಿರ್ವಹಣೆ ವಿಚಾರವಾಗಿ ಕಾಂಗ್ರೆಸ್ ನಾಯಕರು ವ್ಯರ್ಥ ಆರೋಪಗಳನ್ನು ಮಾಡುತ್ತಿದ್ದಾರೆ. ನೂರಾರು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಪಕ್ಷಕ್ಕೆ ಎರಡು ವರ್ಷವಾದರೂ ತಮ್ಮ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ನವರು ಕೇವಲ ಬೇಜಾವಾಬ್ದಾರಿತನದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಒಬ್ಬ ಅಸಮರ್ಥ ನಾಯಕನಾಗಿದ್ದಾನೆ. ಹೀಗಾಗಿ ಆ ಪಕ್ಷ ಅವನತಿಯತ್ತ ಸಾಗಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ :ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು: ಜೋಶಿ

    ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ ಆಗಿದೆ. ಯೋಗಿ ಆದಿತ್ಯನಾಥ್ ಅವರು ಒಳ್ಳೆಯ ನಾಯಕ. ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಯೋಗಿ ಆದಿತ್ಯನಾಥ್‍ರನ್ನು ಸರ್ಮಥನೆ ಮಾಡಿಕೊಂಡರು. ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿ, ಈ ಬಗ್ಗೆ ನಮ್ಮ ಮಟ್ಟದಲ್ಲಿ ಚರ್ಚೆ ಆಗುವುದಿಲ್ಲ. ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಯಾವಾಗ ಅವಶ್ಯಕತೆ ಇದೆ ಅವಾಗ ಕೇಂದ್ರದ ನಾಯಕರು ವಿಸ್ತರಣೆ ಮಾಡುತ್ತಾರೆ ಎಂದರು.

  • ತಾಳ್ಮೆಯಿಂದಿರಿ, ಲೋಕಸಭಾ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣಕ್ಕೆ ಬದ್ಧ: ಯೋಗಿ ಆದಿತ್ಯನಾಥ್

    ತಾಳ್ಮೆಯಿಂದಿರಿ, ಲೋಕಸಭಾ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣಕ್ಕೆ ಬದ್ಧ: ಯೋಗಿ ಆದಿತ್ಯನಾಥ್

    ಲಕ್ನೋ: ಮುಂಬರುವ ಲೋಕಸಭಾ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣ ಮಾಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

    ಸೋಮವಾರ ಅಯೋಧ್ಯೆಯಲ್ಲಿ ನಡೆದ `ಸಂತ ಸಮ್ಮೇಳನದಲ್ಲಿ’ ಪಾಲ್ಗೊಂಡ ಅವರು, 2019ರ ಲೋಕಸಭಾ ಚುನಾವಣೆಯೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತದೆ. ನಾವು ಪ್ರಪಂಚದಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ನ್ಯಾಯಾಂಗ, ಶಾಸಕಾಂಗ ತಮ್ಮದೇ ಆದ ಅಧಿಕಾರವನ್ನು ಹೊಂದಿವೆ. ಆದ್ದರಿಂದ ಇವುಗಳನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ. ಸಾಧು-ಸಂತರು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಡಿ ಎಂದು ಹೇಳಿದ್ದಾರೆ.

    ಮರ್ಯಾದಾ ಪುರುಷೋತ್ತಮ ಶ್ರೀರಾಮ ಬ್ರಹ್ಮಾಂಡದ ಒಡೆಯನಾಗಿದ್ದಾನೆ. ಅವನ ದಯೆಯಿಂದ ಅಯೋಧ್ಯೆಯಲ್ಲಿ ರಾಮಮಂದಿರ ಶತಸಿದ್ಧ. ಇದರ ಬಗ್ಗೆ ಯಾವುದೇ ಗೊಂದಲವಿಲ್ಲ. ಈ ಬಗ್ಗೆ ಸಾಧು-ಸಂತರಲ್ಲಿ ಅನುಮಾನವಿದ್ದು, ಪ್ರಪಂಚವು ಆಶಾವಾದದ ಮೇಲೆ ನಿಂತಿದೆ. ಆದ್ದರಿಂದ ಎಲ್ಲರೂ ಸ್ವಲ್ಪ ಸಮಯದವರೆಗೆ ತಾಳ್ಮೆ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ಪ್ರಕರಣ – ಅಡ್ವಾಣಿ, ಉಮಾಭಾರತಿ ಸೇರಿ 12 ಮಂದಿಗೆ ಜಾಮೀನು

    ಬಿಜೆಪಿಯ ಮಾಜಿ ಸಂಸದ ರಾಮ್ ವಿಲಾಸ್ ವೆಂದಾತಿಯವರು ಹೇಳಿದ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಮೊಗಲ್ ಚಕ್ರವರ್ತಿ ಬಾಬರನು ಯಾವುದೇ ಹಿಂದೂ ದೇವಾಲಯಗಳನ್ನು ಕೆಡವಲು ಯಾವ ನ್ಯಾಯಾಲಯಗಳ ಅಪ್ಪಣೆ ಕೇಳಿದ್ದಿಲ್ಲ. ಹೀಗಾಗಿ ನ್ಯಾಯಾಲಯದ ಅಪ್ಪಣೆ ಕೇಳದೆ 1992ರಲ್ಲಿ ಬಾಬ್ರಿ ಮಸೀದಿಯನ್ನು ಒಡೆದು ಹಾಕಲಾಗಿದೆ. ಅಲ್ಲದೇ ಸ್ಥಳದಲ್ಲಿ ಸಿಕ್ಕ ರಾಮನ ಮೂರ್ತಿಯಿಂದ ಪ್ರೇರೇಪಣೆಗೊಂಡು ಒಂದೇ ದಿನದಲ್ಲಿ ದೇವಾಲಯ ನಿರ್ಮಾಣಕ್ಕೆ ಮುಂದಾದ ವಿಚಾರವನ್ನು ಪ್ರಸ್ತಾಪಿಸಿದ್ರು. ಇದನ್ನೂ ಓದಿ: ಮೋದಿ ಸರ್ಕಾರದ ಅವಧಿ ಪೂರ್ಣವಾಗುವ ಮೊದಲೇ ರಾಮ ಮಂದಿರ ನಿರ್ಮಾಣ!

    ಇದೇ ವೇಳೆ ವಿಶ್ವ ಹಿಂದೂ ಪರಿಷತ್ ರಾಮ ಮಂದಿರ ನಿರ್ಮಾಣ ಕುರಿತು ಪ್ರಸ್ತಾಪಿಸಿ, ಮುಂದಿನ ಮೂರ್ನಾಲ್ಕು ತಿಂಗಳುಗಳಲ್ಲಿ ರಾಮ ಮಂದಿರ ವಿಚಾರವಾಗಿ ಸುಪ್ರೀಂ ಕೋರ್ಟ್ ಯಾವುದೇ ತೀರ್ಮಾನ ತೆಗೆದುಕೊಳ್ಳದಿದ್ದರೆ, ಭವಿಷ್ಯದ ಉಳಿವಿಗಾಗಿ ಮತ್ತೊಮ್ಮೆ ರಾಮಮಂದಿರ ನಿರ್ಮಾಣ ಚಳುವಳಿಯನ್ನು ಪ್ರಾರಂಭಿಸಬೇಕೆಂದು ಸಾಧು-ಸಂತರಿಗೆ ಕರೆ ನೀಡಿದ್ರು. ಇದೇ ಗುರುವಾರ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ಮುಂದುವರೆಯಲಿದೆ. ಈ ಮೊದಲು ನಡೆದ ವಿಚಾರಣೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಶಂಕೆ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರುಗಳಾದ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಹಾಗೂ ಇನ್ನೂ ಅನೇಕ ಮುಖಂಡರನ್ನು ಕೋರ್ಟ್ ವಿಚಾರಣೆ ನಡೆಸಿತ್ತು. ಇದನ್ನೂ ಓದಿ:ರಾಮಮಂದಿರ ಕಟ್ಟೋವರೆಗೂ ನಿದ್ರಿಸಬೇಡಿ, ನಾನೂ ನಿದ್ರಿಸಲ್ಲ- ಪೇಜಾವರ ಶ್ರೀ

  • ಮದರಸಾಗಳಿಂದ ಎಂಜಿನಿಯರ್, ಡಾಕ್ಟರ್ ತಯಾರಾಗ್ತಿಲ್ಲ, ಭಯೋತ್ಪಾದಕರ ಉತ್ಪಾದನೆ ಆಗ್ತಿದೆ: ಶಿಯಾ ವಕ್ಫ್ ಬೋರ್ಡ್

    ಮದರಸಾಗಳಿಂದ ಎಂಜಿನಿಯರ್, ಡಾಕ್ಟರ್ ತಯಾರಾಗ್ತಿಲ್ಲ, ಭಯೋತ್ಪಾದಕರ ಉತ್ಪಾದನೆ ಆಗ್ತಿದೆ: ಶಿಯಾ ವಕ್ಫ್ ಬೋರ್ಡ್

    ನವದೆಹಲಿ: ದೇಶದಲ್ಲಿರುವ ಮದರಸಾಗಳಿಂದ ಎಂಜಿನಿಯರ್ ಹಾಗೂ ಡಾಕ್ಟರ್ ಗಳು ತಯಾರಾಗುತ್ತಿಲ್ಲ. ಬದಲಾಗಿ ಭಯೋತ್ಪಾದಕರ ಉತ್ಪಾದನೆ ಕೇಂದ್ರವಾಗುತ್ತಿದೆ ಎಂದು ಶಿಯಾ ವಕ್ಫ್ ಬೋರ್ಡ್ ಹೇಳಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

    ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಶಿಯಾ ಕೇಂದ್ರ ವಕ್ಫ್ ಬೋರ್ಡ್ ಮುಖ್ಯಸ್ಥ ವಾಸೀಂ ರಿಜ್ವಿ ಈ ವಿಚಾರವಾಗಿ ಪತ್ರ ಬರೆದಿದ್ದು, ಎಲ್ಲ ಮದರಸಾಗಳನ್ನು ಶಿಕ್ಷಣ ಇಲಾಖೆಯ ಅಡಿಯಲ್ಲಿ ತರುವಂತೆ ಮನವಿ ಮಾಡಿದ್ದಾರೆ.

    ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವಾಸೀಂ ರಿಜ್ವಿ, ದೇಶದಲ್ಲಿರುವ ಎಷ್ಟು ಮದರಸಾಗಳು ಎಂಜಿನಿಯರ್, ಡಾಕ್ಟರ್, ಐಎಎಸ್ ಅಧಿಕಾರಗಳನ್ನು ತಯಾರಿಸಿವೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಕೆಲ ಮದರಸಾಗಳು ಭಯೋತ್ಪಾದಕರನ್ನು ಮಾತ್ರ ಉತ್ಪಾದಿಸುತ್ತಿವೆ ಎಂದು ಆರೋಪಿಸಿದ್ದಾರೆ. ತಮ್ಮ ಪತ್ರದಲ್ಲಿ ಅವರು ಮದರಸಾಗಳು ಸಿಬಿಎಸ್‍ಸಿ, ಐಸಿಎಸ್‍ಸಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಬೇಕು. ಮುಸ್ಲಿಂಯೇತರ ವಿದಾರ್ಥಿಗಳಿಗೆ ಧಾರ್ಮಿಕ ಶಿಕ್ಷಣವನ್ನು ಐಚ್ಛಿಕ ವಿಷಯವನ್ನಾಗಿ ಓದಲು ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದ್ದಾರೆ.

    ಮುಂದೆ ದೇಶವನ್ನು ಸದೃಢಗೊಳಿಸಲು ನಾನು ಈ ವಿಚಾರದ ಬಗ್ಗೆ ಪ್ರಧಾನಿ ಮೋದಿ ಮತ್ತು ಯೋಗಿಗೆ ಪತ್ರ ಬರೆದಿದ್ದೇನೆ ಎಂದು ರಿಜ್ವಿ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಪತ್ರದಲ್ಲಿ ಭಯೋತ್ಪದಕರನ್ನು ತಯಾರಿಸುತ್ತಿರುವ ಕೆಲವು ಮದರಸಾಗಳ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ವಾಸೀಂ ರಿಜ್ವಿ ಅವರ ಈ ಪತ್ರ ಹಲವು ಮುಸ್ಲಿಂ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಆಲ್ ಇಂಡಿಯಾ ಮಜ್ಲಿಸ್-ಇ-ಇಥೇಹಾದುಲ್ ಮುಸಲ್ಮಿನ್(ಎಐಎಂಐಎಂ) ಸಂಘಟನೆ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ರಿಜ್ವಿ ಅವರನ್ನು ಅವಕಾಶವಾದಿ ಹಾಗೂ ಮೂರ್ಖ ವ್ಯಕ್ತಿ ಎಂದು ಟೀಕಿಸಿದ್ದಾರೆ. ಅವಕಾಶವಾದಿಯಾಗಿರುವ ರಿಜ್ವಿ ತನ್ನನ್ನು ಆರ್ ಎಸ್‍ಎಸ್ ಗೆ ಮಾರಾಟ ಮಾಡಿಕೊಂಡಿದ್ದಾರೆ. ಒಂದು ವೇಳೆ ರಿಜ್ವಿ ಬಳಿ ಸಾಕ್ಷ್ಯವಿದ್ದರೆ ಅದನ್ನು ಗೃಹ ಇಲಾಖೆ ನೀಡಲಿ. ಅದನ್ನು ಬಿಟ್ಟು ಈ ರೀತಿ ಮೂರ್ಖ ಹೇಳಿಕೆ ನೀಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆ ಉತ್ತರಾಖಂಡ ಸರ್ಕಾರ ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಹಾಕುವಂತೆ ಆದೇಶ ನೀಡಿತ್ತು. ಆದರೆ ಸರ್ಕಾರದ ಆದೇಶ ಷರಿಯಾ ಕಾನೂನಿಗೆ ವಿರುದ್ಧ ಎಂದು ಮುಸ್ಲಿಂ ಸಂಸ್ಥೆಗಳನ್ನು ವಿರೋಧಿಸಿತ್ತು. ಅಷ್ಟೇ ಅಲ್ಲದೇ ಯಾವುದೇ ಸರ್ಕಾರವು ಈ ರೀತಿಯ ಆದೇಶವನ್ನು ನೀಡಿಲ್ಲ ಎಂದು ಹೇಳಿತ್ತು.

    ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು ಮೋದಿ ದೇಶದ ಪ್ರಧಾನಿಯಾಗಿದ್ದಾರೆ. ನಮ್ಮ ಪುಸ್ತಕಗಳಲ್ಲಿಯೂ ಮಹಾನ್ ವ್ಯಕ್ತಿಗಳ ಭಾವಚಿತ್ರಗಳನ್ನು ಅಳವಡಿಸಿಕೊಳ್ಳುವುದು ಮುಖ್ಯ. ಅದ್ದರಿಂದ ಸರ್ಕಾರ ಆದೇಶಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ ಎಂದು ಪ್ರಶ್ನಿಸಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

  • ಸಿದ್ದರಾಮಯ್ಯ ತಲೆತಿರುಕ, ಹುಚ್ಚನಂತೆ ಮಾತನಾಡ್ತಾನೆ: ಬಿಎಸ್‍ವೈ

    ಸಿದ್ದರಾಮಯ್ಯ ತಲೆತಿರುಕ, ಹುಚ್ಚನಂತೆ ಮಾತನಾಡ್ತಾನೆ: ಬಿಎಸ್‍ವೈ

    ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ತಲೆತಿರುಕ ಬಾಯಿಗೆ ಬಂದಂತೆ ಹುಚ್ಚನಂತೆ ಮಾತನಾಡುತ್ತಾನೆ, ಯೋಗಿ ಆದಿತ್ಯನಾಥ್ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

    ಕೋಟೆನಾಡು ನಡೆಯುತ್ತಿರುವ ಬಿಜೆಪಿ ಪರಿವರ್ತನಾ ಯಾತ್ರೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋಮಾಂಸ ಮಾತ್ರವಲ್ಲ ಸಿಎಂ ಸಿದ್ದರಾಮಯ್ಯ ತಿನ್ನದೆ ಇರೋದು ಏನಿದೆ? ಜೈಲಿಗೆ ಹೋಗಿ ಬಂದವರೆಂದು ಪದೇ ಪದೇ ಸಿಎಂ ಹೇಳಿದರೆ ಜನ ಬಡಿಗೆ ತೆಗೆದುಕೊಳ್ಳುತ್ತಾರೆ. ಆಗ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ ಎಚ್ಚರವಿರಲಿ ಎಂದರು.

    ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದ್ದು, ಕೊಲೆ ಸುಲಿಗೆ ಅತ್ಯಾಚಾರ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ದಾನಮ್ಮ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ದಲಿತರು ವಿಜಯಪುರ ಚಲೋ ಹೋರಾಟವನ್ನು ತಡೆಯುತ್ತಿರುವ ಸರ್ಕಾರದ ನಿರ್ಧಾರ ತಪ್ಪಾಗಿದೆ. ಅವರಿಗೆ ಶಾಂತಿಯುತ ಹೋರಾಟಕ್ಕೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

    ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ರೈತ ಪರ ನಿಲ್ಲುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿಲ್ಲ. ಮುಂಬರುವ ಚುನಾವಣೆಯಲ್ಲಿ 224 ಕ್ಷೇತ್ರದಲ್ಲಿ ನಾವು ಸ್ಪರ್ಧಿಸುತ್ತೇವೆ 150 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬಿಜೆಪಿಯಿಂದ ಧರ್ಮಾಧಾರಿತ ರಾಜಕೀಯ ಎಂದಿರುವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು, ಯಾವುದೇ ಪಕ್ಷದ ಜೊತೆ ನಾವು ಹೊಂದಾಣಿಕೆ ಮಾಡಿಕೊಳ್ಳಲ್ಲ. ಜೆಡಿಎಸ್‍ನ ಆ ಪುಣ್ಯಾತ್ಮನ ಬಗ್ಗೆ ನಾನು ಮಾತನಾಡಲ್ಲ. ಬೃಹಸ್ಪತಿಗಳ ಬಗ್ಗೆ ಮಾತನಾಡಲು ಏನಿಲ್ಲ. ನಾವು ಧರ್ಮವನ್ನು ಮುಂದಿಟ್ಟುಕೊಂಡು ಪರಿವರ್ತನಾ ಯಾತ್ರೆ ಮಾಡುತ್ತಿಲ್ಲ. ರಾಜ್ಯದ ಜನರ ಸಾಮಾಜಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಯಾತ್ರೆ ನಡೆಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬೂಟಾಟಿಕೆಗೆ ಖಾವಿ ಹಾಕ್ತಾನೆ, ಯೋಗಿ ಯಾವತ್ತಾದ್ರೂ ಸಗಣಿ ಹೊತ್ತಿದ್ದಾನಾ: ಸಿಎಂ ಸಿದ್ದರಾಮಯ್ಯ

  • ಗೋವುಗಳ ಎಣಿಕೆಗಾಗಿ ಸರ್ವೆ ನಡೆಸಲು ಮುಂದಾದ ಯೋಗಿ ಸರ್ಕಾರ

    ಗೋವುಗಳ ಎಣಿಕೆಗಾಗಿ ಸರ್ವೆ ನಡೆಸಲು ಮುಂದಾದ ಯೋಗಿ ಸರ್ಕಾರ

    ಲಕ್ನೋ: ಉತ್ತರ ಪ್ರದೇಶ ರಾಜ್ಯದ ಯೋಗಿ ಆದಿತ್ಯನಾಥ್ ಸರ್ಕಾರ ಗೋವುಗಳ ಎಣಿಕೆಗಾಗಿ ಸರ್ವೆ ನಡೆಸಲು ಮುಂದಾಗಿದೆ. ಮಂಗಳವಾರ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಕ್ಯಾಬಿನೇಟ್ ಮೀಟಿಂಗ್ ನಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.

    ಗೋವುಗಳ ಎಣಿಕೆಯ ಸಮೀಕ್ಷೆಗಾಗಿ ಯೋಗಿ ಸರ್ಕಾರ ಒಟ್ಟು 7.86 ಕೋಟಿ ರೂ. ಹಣವನ್ನು ಮೀಸಲಿರಿಸಿದೆ. ಗೋವುಗಳ ಸರ್ವೆ ಜೊತೆ ಜೊತೆಯಲ್ಲಿ ಎಮ್ಮೆ, ಹಂದಿ, ಮೇಕೆ ಮತ್ತು ಕುರಿಗಳ ಎಣಿಕೆ ಕಾರ್ಯ ನಡೆಯಲಿದೆ.

    2012ರ ಸರ್ವೆ ಪ್ರಕಾರ ಉತ್ತರ ಪ್ರದೇಶ ರಾಜ್ಯದ ಜನಸಂಖ್ಯೆ 2.5 ಕೋಟಿಯಿದ್ದರೆ, 3.6 ಕೋಟಿ ಎಮ್ಮೆಗಳು, 1.55 ಕೋಟಿ ಕುರಿಗಳು ಮತ್ತು 13.34 ಲಕ್ಷ ಹಂದಿಗಳು ಇದ್ದವು ಎಂದು ಅಂಕಿ ಅಂಶಗಳು ಹೇಳುತ್ತವೆ. ಈ ಬಾರಿ ನಡೆಯುವ ಸರ್ವೆ ಮೂಲಕ ಸದ್ಯ ಎಷ್ಟು ಹಸುಗಳು ಮತ್ತು ಕರುಗಳು ರಾಜ್ಯದಲ್ಲಿವೆ ಎಂಬುದು ನಿಖರವಾಗಿ ತಿಳಿಯಲಿದೆ ಎಂದು ರಾಜ್ಯ ಸರ್ಕಾರದ ವಕ್ತಾರರೊಬ್ಬರು ತಿಳಿಸಿದ್ದಾರೆ.

    ಇನ್ನೂ ಇದೇ ಕ್ಯಾಬಿನೆಟ್ ನಲ್ಲಿ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯವನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲು ಚಿಂತನೆ ನಡೆಸಲಾಗಿದೆ. ಪ್ರಾಣಿಗಳ ಮೇಳವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮೇಳದಲ್ಲಿ ಎಲ್ಲ ಸಾಕು ಪ್ರಾಣಿಗಳಿಗೆ ಉಚಿತ ಚಿಕಿತ್ಸೆಯೊಂದಿಗೆ ವಿಮೆಯನ್ನು ಮಾಡಿಸಲಾಗುತ್ತದೆ. ವಿಮೆಯ ಪ್ರೀಮಿಯಂನ್ನು ಹಸುಗಳು ಮಾಲೀಕರು ಪಡೆದುಕೊಳ್ಳಲಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮತ್ತು ರಾಜ್ಯ ಸರ್ಕಾರದ ವಕ್ತಾರರಾದ ಸಿದ್ಧಾರ್ಥನಾಥ್ ಸಿಂಗ್ ಹೇಳಿದ್ದಾರೆ.