Tag: ಯೋಗೇಶ್ವರ್

  • ಹೆಚ್‌ಡಿಡಿಯನ್ನು ಭೇಟಿ ಮಾಡಿ ಚರ್ಚಿಸಿದ ಯೋಗೇಶ್ವರ್‌

    ಹೆಚ್‌ಡಿಡಿಯನ್ನು ಭೇಟಿ ಮಾಡಿ ಚರ್ಚಿಸಿದ ಯೋಗೇಶ್ವರ್‌

    ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರನ್ನು (HD Devegowda) ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ (CP Yogeshwar) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭಾನುವಾರ ಸಂಜೆ ಪದ್ಮನಾಭನಗರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ಮಾಡಿದ್ದಾರೆ.

    ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್‌ (BJP-JDS) ಮೈತ್ರಿ ಮಾಡಿಕೊಂಡಿರುವ ಕಾರಣ ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎನ್ನುವ ಕುತೂಹಲ ಮೂಡಿದೆ. ಈ ಹಿನ್ನೆಲೆಯಲ್ಲಿ ಯೋಗೇಶ್ವರ್‌ ಭೇಟಿ ಮಹತ್ವ ಪಡೆದುಕೊಂಡಿದೆ.  ಇದನ್ನೂ ಓದಿ: ಮೋದಿ 3ನೇ ಬಾರಿ ಪ್ರಧಾನಿಯಾಗೋದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ – ಹೆಚ್‌ಡಿಕೆ

    ವಿಧಾನಸಭಾ ಚುನಾವಣೆಯಲ್ಲಿ ರಾಮನಗರದ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಯೋಗೇಶ್ವರ್‌ ಸೋತಿದ್ದರು.

    ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕುಣಿಗಲ್‌, ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ, ಆನೇಕಲ್‌, ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ ಕ್ಷೇತ್ರಗಳು ವ್ಯಾಪ್ತಿಗೆ ಬರುತ್ತದೆ. 8 ಕ್ಷೇತ್ರಗಳ ಪೈಕಿ ಐದರಲ್ಲಿ ಕಾಂಗ್ರೆಸ್‌ ಇದ್ದರೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್‌ ಶಾಸಕ ಹೆಚ್‌ಡಿ ಕುಮಾರಸ್ವಾಮಿ ಇದ್ದಾರೆ.

    2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಒಟ್ಟು 28 ಕ್ಷೇತ್ರಗಳಲ್ಲಿ 25ರಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದಿತ್ತು. ಡಿಕೆ ಸುರೇಶ್‌ ಅವರು ರಾಜ್ಯದ ಏಕೈಕ ಕಾಂಗ್ರೆಸ್‌ ಸಂಸದರಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: 200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!

  • ಹಳೇ ಮೈಸೂರು ಮೇಲೆ ಕಣ್ಣು – ಏ.30ಕ್ಕೆ ಕುಮಾರಸ್ವಾಮಿ ಅಡ್ಡದಲ್ಲಿ ಮೋದಿ ಸಮಾವೇಶ

    ಹಳೇ ಮೈಸೂರು ಮೇಲೆ ಕಣ್ಣು – ಏ.30ಕ್ಕೆ ಕುಮಾರಸ್ವಾಮಿ ಅಡ್ಡದಲ್ಲಿ ಮೋದಿ ಸಮಾವೇಶ

    ರಾಮನಗರ: ಹಳೇ ಮೈಸೂರು (Old Mysuru) ಭಾಗದಲ್ಲಿ ಬಿಜೆಪಿ (BJP) ಹೆಚ್ಚು ಸ್ಥಾನ ಗೆಲ್ಲಲು ಪ್ಲ್ಯಾನ್‌ ಮಾಡಿದ್ದು ಏ.30ರಂದು ಚನ್ನಪಟ್ಟಣಕ್ಕೆ(Channapatna) ಪ್ರಧಾನಿ ಮೋದಿ (PM Narendra Modi) ಆಗಮಿಸಲಿದ್ದಾರೆ.

    ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ 30 ಎಕರೆಯಲ್ಲಿ ಜಾಗದಲ್ಲಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದು ಸುಮಾರು 10ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

    ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳನ್ನು ಒಳಗೊಂಡಂತೆ ಸಮಾವೇಶ ನಡೆಯಲಿದ್ದು ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: ಅವಳಿ ಸಹೋದರಿಯರ ವಿಶೇಷ ಸಾಧನೆ – ಇಬ್ಬರು ಸಹೋದರಿಯರಿಗೂ ಸಮಾನ ಅಂಕ

    ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚನ್ನಪಟ್ಟಣ ಬಿಜೆಪಿ ಅಭ್ಯರ್ಥಿ ಯೋಗೇಶ್ವರ್‌, ಕೋಲಾರದಲ್ಲಿ (Kolara) ಸಮಾವೇಶ ಮುಗಿಸಿ ಮಧ್ಯಾಹ್ನ 2 ಗಂಟೆಗೆ ಚನ್ನಪಟ್ಟಣಕ್ಕೆ ಮೋದಿ ಆಗಮಿಸಲಿದ್ದಾರೆ. ಚನ್ನಪಟ್ಟಣದಲ್ಲಿ ಸಮಾವೇಶಕ್ಕೆ ಅವಕಾಶ ಕೊಟ್ಟಿದ್ದು ಖುಷಿ ತಂದಿದೆ. ರಾಮನಗರ ರಾಜಕೀಯ ಇತಿಹಾಸದಲ್ಲಿ ಇದೊಂದು ಅದ್ಬುತ ಕಾರ್ಯಕ್ರಮ ಆಗಲಿದೆ ಎಂದು ತಿಳಿಸಿದರು.

    ಈ ಬಾರಿಯ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಲೇಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ಕನಕಪುರದಲ್ಲಿ ಡಿಕೆ ಶಿವಕುಮಾರ್‌ ವಿರುದ್ಧ ಆರ್‌.ಅಶೋಕ್‌ ಮತ್ತು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಅವರನ್ನು ನಿಲ್ಲಿಸಿದೆ.

    ಏಪ್ರಿಲ್‌ ಕೊನೆಯ ವಾರದಿಂದ ಮೇ 7ರವರೆಗಿನ ಅವಧಿಯಲ್ಲಿ ಸುಮಾರು ಏಳು ದಿನಗಳ ಕಾಲ ಪ್ರಚಾರ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗುವ ಸಾಧ್ಯತೆಯಿದೆ. ಸುಮಾರು 20ಕ್ಕೂ ಹೆಚ್ಚು ಸಮಾವೇಶವನ್ನು ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಜಗದೀಶ್‌ ಶೆಟ್ಟರ್‌, ಲಕ್ಷ್ಮಣ ಸವದಿ ಸೇರಿದಂತೆ ಕೆಲ ಹಿರಿಯ ನಾಯಕರು ಕಾಂಗ್ರೆಸ್‌ ಸೇರ್ಪಡೆ, ಕೆಲವು ಕಡೆ ಟಿಕೆಟ್‌ ನಿರಾಕರಿಸಿದ್ದರಿಂದ ಕೆಲ ಕ್ಷೇತ್ರಗಳನ್ನು ಭಾರೀ ಸವಾಲು ಎದುರಿಸುತ್ತಿರುವ ಕಾರಣ ಬಿಜೆಪಿ ಈ ಬಾರಿ ಮೋದಿ ಕಾರ್ಯಕ್ರಮ ಹೆಚ್ಚು ಆಯೋಜಿಸಲು ಚಿಂತನೆ ನಡೆಸಿದೆ.

     

    ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿರುವುದರಿಂದ ಪ್ರತಿ 12-14 ಕ್ಷೇತ್ರಗಳಿಗೆ ಒಂದರಂತೆ ಬೃಹತ್ ಸಮಾವೇಶ (Modi Rally) ನಡೆಸಲು ಸಿದ್ಧತೆ ನಡೆದಿದೆ. ರಾಜ್ಯವನ್ನು 6 ಭಾಗವನ್ನಾಗಿ ವಿಂಗಡಿಸಿರುವ ಬಿಜೆಪಿ ಪ್ರದೇಶವಾರು, ಕಾಂಗ್ರೆಸ್ (Congress), ಜೆಡಿಎಸ್ (JDS) ಭದ್ರಕೋಟೆಯಲ್ಲಿ ಹೆಚ್ಚು ಸಮಾವೇಶ ಆಯೋಜಿಸಲಿದೆ. ಪ್ರತಿ ಭಾಗದಲ್ಲಿ ಕನಿಷ್ಠ 3 ಕಾರ್ಯಕ್ರಮ ಆಯೋಜಿಸುವ ಸಾಧ್ಯತೆಯಿದೆ.

  • ಒಂದೇ ಹಕ್ಕಿಗೆ ಗುರಿಯಿಟ್ಟ ಡಿಕೆ ಬ್ರದರ್ಸ್, ಬಿಜೆಪಿ ಬ್ರದರ್ಸ್ ಆಟದ ಗೆಲುವು ಯಾರಿಗಣ್ಣೋ?

    ಒಂದೇ ಹಕ್ಕಿಗೆ ಗುರಿಯಿಟ್ಟ ಡಿಕೆ ಬ್ರದರ್ಸ್, ಬಿಜೆಪಿ ಬ್ರದರ್ಸ್ ಆಟದ ಗೆಲುವು ಯಾರಿಗಣ್ಣೋ?

    ಬೆಂಗಳೂರು: ಒಂದೇ ಅಡ್ಡ. ಒಂದೇ ಆಟ. ಸೋಲು-ಗೆಲುವು ಉಳಿದವರು ಕಂಡಂತೆ. ಒಂದು ಕಡೆ ದಳಪತಿ ಒಂಟಿ. ಇನ್ನೊಂದು ಕಡೆ “ಚನ್ನಪಟ್ಟಣದ ಬೊಂಬೆ” ಆಡಿಸಲು ಒಂದಾಗುತ್ತಿವೆ ಮೂರು ಶಕ್ತಿ.

    ರಾಮನಗರದಲ್ಲಿ(Ramanagara) ಗೌಡರ ಗುದ್ದಾಟ ಮತ್ತೆ ಶುರುವಾಗಿದೆ. ಕುಮಾರಸ್ವಾಮಿ(HD Kumaraswamy) ಹಳೇ ಮೈಸೂರು(Old Mysuru) ಅಶ್ವಮೇಧ ಕಟ್ಟಿ ಹಾಕಲು ಡಿಕೆ ಬ್ರದರ್ಸ್ ಮತ್ತು ಬಿಜೆಪಿ ಬ್ರದರ್ಸ್ ಟೊಂಕ ಕಟ್ಟಿ ನಿಂತತೆ ಕಾಣುತ್ತಿದೆ.  ಇದನ್ನೂ ಓದಿ: ಮತ್ತೆ ಸಿಪಿವೈ Vs ಎಚ್‌ಡಿಕೆ – ಕಲ್ಲು, ಮೊಟ್ಟೆ ಎಸೆತ, ಲಾಠಿ ಚಾರ್ಜ್‌, ಜೆಡಿಎಸ್‌ ಕಾರ್ಯಕರ್ತರು ವಶಕ್ಕೆ

    HD Kumaraswamy at Bidadi Farm House

    ವಿಧಾನಸಭೆ ಅಧಿವೇಶನದಲ್ಲಿ ಕುಮಾರಸ್ವಾಮಿ ವರ್ಸಸ್ ಅಶ್ವತ್ಥನಾರಾಯಣ್(Ashwath Narayan) ನಡುವೆ ರಾಮನಗರ ಸೇಡು ಪ್ರತಿಧ್ವನಿಸಿ ಸಖತ್ ಸದ್ದು ಮಾಡಿತ್ತು. ಈಗ ಚನ್ನಪಟ್ಟಣದಲ್ಲಿ ಯೋಗೇಶ್ವರ್‌ ವರ್ಸಸ್ ಕುಮಾರಸ್ವಾಮಿ ನಡುವೆ ಗುದ್ದಾಟ ನಡೆದಿದೆ. ಈ ಎರಡು ವೈಯುಕ್ತಿಕ ಸಮರಗಳನ್ನು ಬ್ಯಾಕ್ ಸೀಟಲ್ಲಿ ಕುಳಿತು ನೋಡುತ್ತಿರುವ ಡಿಕೆ ಬ್ರದರ್ಸ್ ಆಸಲಿ ಆಟಕ್ಕೆ ಕಾಯುತ್ತಿದ್ದಾರೆ. ಇದನ್ನೂ ಓದಿ: ನಾನು ಬ್ಲ್ಯಾಕ್‌ ಇದ್ದೇನೆ, ಆದ್ರೆ ಬ್ಲ್ಯಾಕ್‌ ಮೇಲರ್ ಅಲ್ಲ: ಹೆಚ್‌ಡಿಕೆ ಪಂಚ್

    ಅಂದಹಾಗೆ ರಾಮನಗರ ಜಿಲ್ಲೆಯ ರಾಜಕೀಯ ಅಖಾಡದ ಗುಣವೇ ಜಿದ್ದು ಜಿದ್ದು ಜಿದ್ದು. ಇತಿಹಾಸವೂ ಕೂಡ ಹಾಗೆ ಇದೆ. 1985ರಲ್ಲಿ ಸಾತನೂರು ಕ್ಷೇತ್ರದಲ್ಲಿ ದೇವೇಗೌಡರ ಎದುರು ಡಿಕೆಶಿ ಸೋಲುತ್ತಾರೆ. 1999ರಲ್ಲಿ ಅದೇ ಡಿಕೆಶಿ ಕುಮಾರಸ್ವಾಮಿ ಅವರನ್ನು ಸೋಲಿಸ್ತಾರೆ. 2013ರ ಬೆಂಗಳೂರು ಗ್ರಾಮಾಂತರ ಲೋಕಸಭಾ ಉಪಚುನಾವಣೆಯಲ್ಲಿ ಡಿ.ಕೆ.ಸುರೇಶ್ ವಿರುದ್ಧ ಅನಿತಾ ಕುಮಾರಸ್ವಾಮಿ ಸೋಲುತ್ತಾರೆ. ಅಷ್ಟೇ ಏಕೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರನ್ನ ಕುಮಾರಸ್ವಾಮಿ ಸೋಲಿಸುತ್ತಾರೆ. ಈ ಎಲ್ಲಾ ಚುನಾವಣೆಗಳು‌ ವೈಯುಕ್ತಿಕ ಜಿದ್ದಾಜಿದ್ದಿನ ಮೇಲೆ ನಡೆದಿದ್ದವು ಎಂಬುದು ಇತಿಹಾಸ.

    ಈ ನಡುವೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ವೀಕ್ ಮಾಡಲು ಕಾಂಗ್ರೆಸ್, ಬಿಜೆಪಿ ಎರಡೂ ಪ್ಲ್ಯಾನ್ ಮಾಡುತ್ತಿವೆ.‌ ರಾಮನಗರ ಜಿಲ್ಲೆಯಲ್ಲೇ ಕುಮಾರಸ್ವಾಮಿ ಅವರನ್ನ ಕಟ್ಟಿ ಹಾಕಿದ್ರೆ ಉಳಿದ ಕಡೆಗಳಲ್ಲಿ ನಾವು ಆಟ ಆಡಬಹುದೆಂಬ ಲೆಕ್ಕಚಾರ ಮಾಡಿಕೊಂಡಿವೆ ಎನ್ನಲಾಗಿದೆ.

    ಒಟ್ಟಿನಲ್ಲಿ 2023ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದ ರಣರೋಚಕ ರಾಜಕಾರಣವೇ ಸ್ಟಾರ್ ವಾರ್‌ಗೆ  ವೇದಿಕೆಯಾಗುವ ಸಾಧ್ಯತೆ ಇದ್ದು, ಯಾರು ಸಕ್ಸಸ್? ಯಾರು ಫೆಲ್ಯೂರ್ ಆಗ್ತಾರೆ ಎನ್ನುವದನ್ನು ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಅಂದು ಭಾರೀ ಟೀಕೆ – ಇಂದು ಯೋಗೇಶ್ವರ್ ಪರ ರೇಣುಕಾಚಾರ್ಯ ಸಾಫ್ಟ್

    ಅಂದು ಭಾರೀ ಟೀಕೆ – ಇಂದು ಯೋಗೇಶ್ವರ್ ಪರ ರೇಣುಕಾಚಾರ್ಯ ಸಾಫ್ಟ್

    ಬೆಂಗಳೂರು: ಈ ಹಿಂದೆ ಯೋಗೇಶ್ವರ್ ವಿರುದ್ಧ ಕಿಡಿಕಾರಿದ್ದ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಈಗ ಸಾಫ್ಟ್ ಆಗಿದ್ದಾರೆ.

    ಯೋಗೇಶ್ವರ್ ದೆಹಲಿಗೆ ಹೋಗಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕ್ಷೇತ್ರದ ಕೆಲಸ, ವೈಯಕ್ತಿಕ ಕೆಲಸಕ್ಕಾಗಿ ಶಾಸಕರು ದೆಹಲಿಗೆ ಹೋದರೇ ತಪ್ಪೇನಿದೆ? ಶಾಸಕರು ಮಂತ್ರಿ ಸ್ಥಾನ ಕೇಳೋದ್ರಲ್ಲಿ ತಪ್ಪೇನಿದೆ? ಆದರೆ ಅಂತಿಮವಾಗಿ ಸಚಿವ ಸ್ಥಾನ ಕೊಡುವುದು ಸಿಎಂ ಹಾಗೂ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಉತ್ತರಿಸಿದ್ದಾರೆ.

    ಈ ಹಿಂದೆ ಯೋಗೇಶ್ವರ್ ವಿರುದ್ಧ ರೇಣುಕಾಚಾರ್ಯ, ಸೋತವರು ಮಂತ್ರಿ ಸ್ಥಾನಕ್ಕಾಗಿ ದೆಹಲಿ ಅಲೆಯುತ್ತಿದ್ದಾರೆಂದು ಟೀಕೆ ಮಾಡಿದ್ದರು. ಆದರೆ ಈ ಬಾರಿ ದೆಹಲಿಗೆ ಹೋದರೆ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ಯೋಗೇಶ್ವರ್ ಅವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ : ನೀರಜ್ ಹೆಸರಿನವರಿಗೆ ಉಚಿತ ಪೆಟ್ರೋಲ್ ಕೊಟ್ಟ ಬಂಕ್ ಮಾಲೀಕ!

    ನಾನು ಯಾವತ್ತೂ ಮಂತ್ರಿ ಸ್ಥಾನಕ್ಕೆ ಲಾಬಿ ಮಾಡಿಲ್ಲ. ನನಗೆ ಪಕ್ಷ ಸ್ಥಾನ ನೀಡಿದ್ದು ಮೂರು ಬಾರಿ ಶಾಸಕನಾಗಿದ್ದೇನೆ. ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ. ದಾವಣಗೆರೆ ಜಿಲ್ಲೆ ಮಧ್ಯ ಕರ್ನಾಟಕ ಒಂದು ಭಾಗವಾಗಿರುವ ಕಾರಣ ಜಿಲ್ಲೆಗೆ ಒಂದು ಸಚಿವ ಸ್ಥಾನ ಕೊಟ್ಟರೆ ಶೈಕ್ಷಣಿಕವಾಗಿ ಜಿಲ್ಲೆ ಇನ್ನೂ ಅಭಿವೃದ್ಧಿಯಾಗಲಿದೆ. ಮುಂದೆ ಜಿಲ್ಲೆಗೆ ಮಂತ್ರಿ ಸ್ಥಾನ ಕೊಡುವುದು, ಬಿಡುವುದರ ಬಗ್ಗೆ ಸಿಎಂ ಹಾಗೂ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

    ದಾವಣಗೆರೆ ಹೊನ್ನಾಳಿ ಅವಳಿ ನಗರವಾಗಿದೆ. ಯಡಿಯೂರಪ್ಪ 2008-09ರಲ್ಲಿ ಹೊನ್ನಾಳಿಗೆ ಸಂಪರ್ಕ ಸೇತುವೆ ಕೊಟ್ಟಿದ್ದರು. ರಾಜ್ಯಧ್ಯಕ್ಷರು, ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ, ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ್ ಬಳಿ ಅವಕಾಶ ಕೊಡಿ ಅಂತಾ ಕೇಳಿದ್ದೆ. ವರಿಷ್ಠರ ಮೇಲೆ ನಮಗೆ ಯಾವುದೇ ನೋವಿಲ್ಲ. ಮೂರಿ ಬಾರಿ ಶಾಸಕನಾಗಿದ್ದೇನೆ. ನಿಗಮದ ಅಧ್ಯಕ್ಷನಾಗಿದ್ದೆ, ಸಚಿವನಾಗಿದ್ದೆ. ನಾನು ಈಗ ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ, ಮಾಡುವುದಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

  • ನೀನು ಮರಿಯಾನೆಯೂ ಅಲ್ಲಾ, ಏನೂ ಅಲ್ಲಾ – ಯೋಗೇಶ್ವರ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ

    ನೀನು ಮರಿಯಾನೆಯೂ ಅಲ್ಲಾ, ಏನೂ ಅಲ್ಲಾ – ಯೋಗೇಶ್ವರ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ

    ದಾವಣಗೆರೆ: ಯೋಗೇಶ್ವರ್‍ ಗೆ ಸಿಎಂ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಪಕ್ಷಾಂತರಿ ರಾಜಕೀಯದ ಬಗ್ಗೆ ಮಾತನಾಡುವಾಗ ನನಗೆ ಅಸಹ್ಯವಾಗುತ್ತಿದೆ. ನೀನು ಮರಿಯಾನೆಯೂ ಅಲ್ಲಾ. ಏನೂ ಅಲ್ಲಾ ಎಂದು ಸಿ.ಪಿ.ಯೋಗೇಶ್ವರ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

    ಹೊನ್ನಾಳಿ ತಾಲೂಕಿನ ಬಸವನಹಳ್ಳಿಯಲ್ಲಿ ಮಾತನಾಡಿದ ರೇಣುಕಾಚಾರ್ಯ ಅವರು, ಯೋಗೇಶ್ವರ್ ಸಿಎಂ ಯಡಿಯೂರಪ್ಪರ ಬಗ್ಗೆ ಮಾತನಾಡಲು ಯಾವುದೇ ಅಧಿಕಾರವಿಲ್ಲ. ಅವರ ವಿರುದ್ಧ ಮಾತನಾಡಿದರೆ ಬಿಜೆಪಿ ಪಕ್ಷದ ಬಗ್ಗೆ ಮಾತನಾಡಿದಂತೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯದ ನಾಲ್ವರಿಗೆ ಮಂತ್ರಿಗಿರಿ – ಆಯ್ಕೆಗೆ ಮಾನದಂಡ ಏನು?

    ಇದೇ ಸಂದರ್ಭದಲ್ಲಿ ಶಾಸಕ ಯತ್ನಾಳ್‍ಗೆ ಪರೋಕ್ಷವಾಗಿ ಟಾಂಗ್ ನೀಡಿದ ಅವರು, ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ದೊಡ್ಡವರಾಗ್ತೀವಿ ಎಂದು ಕೆಲವರು ಅಂದುಕೊಂಡಿದ್ದಾರೆ. ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ಬಿಜೆಪಿ ಬಗ್ಗೆ ಮಾತನಾಡಿದಂತೆ. ಅವರಿಗೆ ನಾಲಿಗೆಗೂ, ಮೆದುಳಿಗೂ ಸಂಬಂಧ ಇಲ್ಲ. ಬುದ್ಧಿ ಸ್ಥಿಮಿತ ಇಲ್ಲ ಎಂದು ಅರ್ಥ. ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ಸಹಿಸುವುದಿಲ್ಲ ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದರು.

    ನಾಯಕತ್ವದ ವಿರುದ್ಧ ಮಾತನಾಡುವವರ ಬಗ್ಗೆ ವರಿಷ್ಠರು ತುರ್ತಾಗಿ ಕ್ರಮ ಕೈಗೊಳ್ಳಬೇಕು. ನಾಳೆ ಬೆಂಗಳೂರಿನಲ್ಲಿ ಸಿಎಂ ಹಾಗೂ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡುತ್ತೇನೆ, ಯಡಿಯೂರಪ್ಪ ಕುಟುಂಬ ರಾಜಕಾರಣ ಎಂದೂ ಮಾಡಿಲ್ಲ. ಯಡಿಯೂರಪ್ಪ ಭ್ರಷ್ಟಾಚಾರ ಮಾಡಿದ್ದರೆ ಅದನ್ನು ಬಹಿರಂಗಪಡಿಸಲಿ ಎಂದರು.

  • ನಕಲಿ ಪರೀಕ್ಷೆ ಬರೆದವರು ಆತ್ಮಾವಲೋಕನ ಮಾಡಿಕೊಳ್ಳಬೇಕು: ರೇಣುಕಾಚಾರ್ಯ ಟಾಂಗ್

    ನಕಲಿ ಪರೀಕ್ಷೆ ಬರೆದವರು ಆತ್ಮಾವಲೋಕನ ಮಾಡಿಕೊಳ್ಳಬೇಕು: ರೇಣುಕಾಚಾರ್ಯ ಟಾಂಗ್

    ತುಮಕೂರು: ನಕಲಿ ಪರೀಕ್ಷೆ ಬರೆದವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಚಿವ ಯೋಗೇಶ್ವರ್‌ಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ‘ಬಾಬಾ ಕಾ ಡಾಬಾ’ ಖ್ಯಾತಿಯ ಕಾಂತಾ ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?

    ತುಮಕೂರಿನ ಸಿದ್ದಗಂಗಾ ಮಠಕ್ಕೆ ಬೇಟಿ ಕೊಟ್ಟು ಮಾಧ್ಯಮದವರೊಂದಿಗೆ ಮಾತನಾಡಿದವರು, ಇನ್ನೂ ಎರಡು ವರ್ಷಗಳ ಕಾಲ ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ರೀತಿಯ ಅನುಮಾನ ಬೇಡ. ಆದರೆ ಯಾರೋ ದೆಹಲಿಗೆ ಹೋಗಿ ಪರೀಕ್ಷೆ ಬರೆದು ಬಂದಿದ್ದೆನೇ, ಫಲಿತಾಂಶಕ್ಕಾಗಿ ಕಾಯುತಿದ್ದೇನೆ ಅಂತಾರೆ. ಅಂಥವರು ನಕಲಿ ಪರೀಕ್ಷೆ ಬರೆದವರು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಸಚಿವ ಸಿಪಿ ಯೋಗೇಶ್ವರ್‌ಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ನಮ್ಮ ಪಕ್ಷ ಅಧಿಕಾರಕ್ಕೆ ಬರಲ್ಲ: ಎಸ್.ಆರ್.ಶ್ರೀನಿವಾಸ್

    ಯೋಗೇಶ್ವರ್ ಅವರದ್ದು ನಕಲಿ ಪರೀಕ್ಷೆಯಾಗಿದ್ದು, ಅವರ ಪರಿಕ್ಷೆ ಹಣೆಬರಹ ಅವರಿಗೆ ಗೊತ್ತಿದೆ. ಆದರೆ ಹೈಕಮಾಂಡ್ ಯಡಿಯೂರಪ್ಪ ಮಾಡಿದ ಒಳ್ಳೆ ಕೆಲಸ ಬಗ್ಗೆ ಹೆಚ್ಚಿನ ಅಂಕ ನೀಡಿದ್ದಾರೆ. ಮುಂದಿನ ಚುನಾವಣಾ ಯಡಿಯೂರಪ್ಪ ನೇತೃತ್ವದಲ್ಲೇ ನಡೆಯಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೈಸೂರಿಗೆ ಬಸ್ ಸಂಚಾರ ಆರಂಭ

    ಈಗಾಗಲೇ ರಾಜ್ಯವಸ್ತುವಾರಿ ಅರುಣ್ ಸಿಂಗ್ ಬಂದು ಚರ್ಚೆ ನಡೆಸಿ ಸಿಎಂ ಬದಲಾವಣೆ ಮಾತೇ ಇಲ್ಲ ಅಂದಿದ್ದಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯನೋ ಯಡಿಯೂರಪ್ಪ ಸಿಎಂ ಹಾದಿಯಲ್ಲಿ ಮುಂದುವರೆಯೋದು ಅಷ್ಟೇ ಸತ್ಯ ಎಂದು ಎಂ.ಪಿ.ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಸಿಎಂ ವಿರುದ್ಧ ಸಿಪಿವೈ, ಬೆಲ್ಲದ್, ಯತ್ನಾಳ್ ಚಾರ್ಜ್‍ಶೀಟ್ ಏನು?

    ಸಿಎಂ ವಿರುದ್ಧ ಸಿಪಿವೈ, ಬೆಲ್ಲದ್, ಯತ್ನಾಳ್ ಚಾರ್ಜ್‍ಶೀಟ್ ಏನು?

    ಬೆಂಗಳೂರು: ಸಿಎಂ ಬಿಎಸ್‍ವೈ ವಿರುದ್ಧ 4 ಶಾಸಕರು ತಿರುಗಿ ಬಿದ್ದಿದ್ದಾರೆ. ಈ ಶಾಸಕರು ಇಂದು ಉಸ್ತುವಾರಿ ಅರುಣ್ ಸಿಂಗ್‍ಗೆ ದೂರು ನೀಡುವ ಸಾಧ್ಯತೆಯಿದೆ.

    ರಾಮನಗರದ ಸಿ.ಪಿ.ಯೋಗೇಶ್ವರ್, ಧಾರವಾಡ ಪಶ್ಚಿಮ ಕ್ಷೇತ್ರದ ಅರವಿಂದ ಬೆಲ್ಲದ್, ಮೈಸೂರಿನ ವಿಶ್ವನಾಥ್, ವಿಜಯಪುರದ ಶಾಸನ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

    ಯೋಗೇಶ್ವರ್ ಚಾರ್ಜ್‍ಶೀಟ್ ಏನು?
    ಸರ್ಕಾರ ಅಧಿಕಾರಕ್ಕೆ ತರುವಲ್ಲಿ ನನ್ನ ಪಾತ್ರ ದೊಡ್ಡದಾಗಿದ್ದರೂ ಬಹಳ ಸತಾಯಿಸಿ ಎಂಎಲ್‍ಸಿ ಮತ್ತು ಸಚಿವ ಸ್ಥಾನ ನೀಡಿದ್ದಾರೆ. ಆದರೆ ಈವರೆಗೂ ರಾಮನಗರ ಜಿಲ್ಲಾ ಉಸ್ತುವಾರಿ ಕೊಟ್ಟಿಲ್ಲ. ರಾಮನಗರದಲ್ಲಿ ಡಿಕೆಶಿ, ಚನ್ನಪಟ್ಟಣದಲ್ಲಿ ಎಚ್ಡಿಕೆಗೆ ಬಿಎಸ್‍ವೈ ಹೊಂದಾಣಿಕೆಯಿದೆ. ಡಿಕೆಶಿ, ಎಚ್‍ಡಿಕೆ ಕೇಳುವ ಅಧಿಕಾರಿಗಳನ್ನು ಸಿಎಂ ವರ್ಗ ಮಾಡ್ತಾರೆ. ನಾನು ಹೆಸರಿಗೆ ಮಾತ್ರ ಮಿನಿಸ್ಟರ್. ಜಿಲ್ಲೆಯಲ್ಲಿ ಡಿಕೆಶಿ, ಎಚ್ಡಿಕೆಯದ್ದೇ ಹವಾ. ಡಿಕೆಶಿ, ಎಚ್‍ಡಿಕೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ದೊಡ್ಡ ಅಡ್ಡಿಯಾಗಿದ್ದಾರೆ. ಸರ್ಕಾರದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಹೆಚ್ಚಾಗಿದ್ದು ಪ್ರತಿಯೊಂದಕ್ಕೂ ಯಡಿಯೂರಪ್ಪ ಬದಲು ವಿಜಯೇಂದ್ರ ಬಳಿ ಹೋಗುವ ಪರಿಸ್ಥಿತಿ ಇದೆ.

    ಯತ್ನಾಳ್ ಚಾರ್ಜ್‍ಶೀಟ್ ಏನು?
    ಬಿಎಸ್‍ವೈ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು ಸರ್ಕಾರ, ಸಚಿವರ ಇಲಾಖೆಗಳಲ್ಲಿ ವಿಜಯೇಂದ್ರ ಹಸ್ತಕ್ಷೇಪ ಜಾಸ್ತಿಯಿದೆ. ಯಡಿಯೂರಪ್ಪ ಏಕಪಕ್ಷೀಯ ನಿರ್ಧಾರಗಳು ಪಕ್ಷದ ಇಮೇಜ್‍ಗೆ ಧಕ್ಕೆಯಾಗಿದ್ದು, ಬಿಎಸ್‍ವೈಗೆ ಆರೋಗ್ಯ, ವಯಸ್ಸು ಸಪೋರ್ಟ್ ಮಾಡ್ತಿಲ್ಲ. ಯಡಿಯೂರಪ್ಪ ಬದಲಿಗೆ ಸಿಎಂ ಸ್ಥಾನ ಬೇರೆಯವರಿಗೆ ಕೊಡಿ.

    ಅರವಿಂದ ಬೆಲ್ಲದ್ ಚಾರ್ಜ್‍ಶೀಟ್ ಏನು?
    ಯಡಿಯೂರಪ್ಪ ನಾಯಕತ್ವ ಮೊದಲಿನಂತಿಲ್ಲ. ಎಲ್ಲಕ್ಕೂ ಮಗನ ಮೇಲೆ ಅವಲಂಬಿತರಾಗಿದ್ದಾರೆ. ಪಕ್ಷ ನಿಷ್ಟರನ್ನು ದೂರ ಇಟ್ಟು, ವಲಸಿಗರಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಕೋವಿಡ್‍ನಿಂದಾಗಿ ಸಿಎಂ ಜನಪ್ರಿಯತೆ ಕಮ್ಮಿಯಾಗಿದ್ದು ಬಿಎಸ್‍ವೈ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಅಧಿಕಾರ ಕೈತಪ್ಪುತ್ತೆ, ಸ್ಥಾನಗಳೂ ಕಡಿಮೆ ಬರಬಹುದು. ಪಕ್ಷದ ಹಿತಕ್ಕಾಗಿ ಈಗಲೇ ಪರ್ಯಾಯ ಪರಿಹಾರ ಕಂಡುಕೊಳ್ಳಬೇಕು. ನಾನು ಸಿಎಂ ಸ್ಥಾನಕ್ಕೆ ಯೋಗ್ಯನಾಗಿದ್ದು ನನಗೂ ಸಮುದಾಯದ ಬಲ, ಶಾಸಕರ ಬೆಂಬಲವೂ ಇದೆ.

    ವಿಶ್ವನಾಥ್ ಚಾರ್ಜ್‍ಶೀಟ್ ಏನು?
    ಸಿಎಂ ಯಡಿಯೂರಪ್ಪನವರಿಗೆ ವಯಸ್ಸಾಗಿದ್ದು ಬದಲಾವಣೆ ಮಾಡಬೇಕು. ಅವರ ಕೆಲಸಗಳಿಗೆ ವಯಸ್ಸು ಅಡ್ಡಿ ಆಗುತ್ತಿದೆ. ಹೀಗಾಗಿ ಬದಲಾವಣೆ ಮಾಡಿ ಬೇರೆಯವರಿಗೆ ಸಿಎಂ ಸ್ಥಾನ ನೀಡಬೇಕು. ಇದನ್ನೂ ಓದಿ: ಬಿಜೆಪಿಯಲ್ಲಿ ಬಿಕ್ಕಟ್ಟು – ಬಿಎಸ್‍ವೈ ಪರ, ವಿರೋಧ ಯಾರು? ತಟಸ್ಥ ಬಣದಲ್ಲಿ ಯಾರಿದ್ದಾರೆ?

  • ಬಕೆಟ್ ಹಿಡಿಯುವವರಿಗೆ ಸಚಿವ ಸ್ಥಾನ ಕೊಡಲಾಗಿದೆ: ಅಪ್ಪಚ್ಚು ರಂಜನ್ ಆಕ್ರೋಶ

    ಬಕೆಟ್ ಹಿಡಿಯುವವರಿಗೆ ಸಚಿವ ಸ್ಥಾನ ಕೊಡಲಾಗಿದೆ: ಅಪ್ಪಚ್ಚು ರಂಜನ್ ಆಕ್ರೋಶ

    ಮಡಿಕೇರಿ: ಸಚಿವ ಸಂಪುಟ ವಿಸ್ತರಣೆ ಸಂದರ್ಭ ಕೊಡಗು ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನಗೊಂಡಿರುವ ಶಾಸಕ ಅಪ್ಪಚ್ಚು ರಂಜನ್ ಕೊನೆಗೂ ಮೌನ ಮುರಿದಿದ್ದಾರೆ. ಬಕೆಟ್ ಹಿಡಿಯುವವರಿಗೆ ಸಚಿವಸ್ಥಾನ ಕೊಡಲಾಗಿದೆ ಎನ್ನುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಮಡಿಕೇರಿಯಲ್ಲಿ ಕೋವಿಶೀಲ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಜಿಲ್ಲಾಸ್ಪತ್ರೆಗೆ ಆಗಮಿಸಿ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಪ್ರಾಮಾಣಿಕವಾಗಿ ಸಂಘದ ಮಾತು ಕೇಳಿಕೊಂಡು ತಲೆಯಾಡಿಸುತ್ತಾ ಸುಮ್ಮನೆ ಇದ್ದ ನಮ್ಮನ್ನು ಕಡೆಗಣಿಸಲಾಗಿದೆ. ಪಕ್ಷದ ವಿಚಾರ ಬೀದಿಗೆ ಬರಬಾರದು ಎಂದು ಸುಮ್ಮನೆ ಇದ್ದೆವು. ಇನ್ನು ಹತ್ತು ದಿನಗಳು ಕಳೆಯಲಿ ಬಳಿಕ ಕೇಂದ್ರ ನಾಯಕರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದು ಪಕ್ಷದ ವಿರುದ್ಧ ಗುಡುಗಿದ್ದಾರೆ.

    ಹಾಗೆ ಎಂಎಲ್ ಸಿ ವಿಶ್ವನಾಥ್ ಹೇಳಿರುವುದು ಸರಿಯಾಗಿಯೇ ಇದೆ. ಸೈನಿಕನಿಂದಲೇ ವಿಶ್ವನಾಥ್ ಸೋತಿದ್ದಾರೆ. ಚುನಾವಣೆ ಸಂದರ್ಭ ಹುಣಸೂರು ಉಸ್ತುವಾರಿಯನ್ನು ನಾನೇ ಹೊತ್ತಿದ್ದೆ. ಆ ವೇಳೆ ಎಲ್ಲವನ್ನೂ ನಾನು ಚೆನ್ನಾಗಿ ನೋಡಿದ್ದೇನೆ. ಚುನಾವಣೆಗೆ ಎರಡು ದಿನ ಇರುವಾಗ ಏನೆಲ್ಲಾ ನಡೆಯಿತು ಎನ್ನುವುದು ನನಗೆ ಗೊತ್ತಿದೆ. ಸೈನಿಕನಿಂದಾಗಿಯೇ ವಿಶ್ವನಾಥ್ ಸೋತಿರುವುದು ಅವರ ಸೋಲಿಗೆ ಕಾರಣವಾದವರಿಗೆ ಸಚಿವಸ್ಥಾನ ನೀಡಿರುವುದು ದುರಂತ ಎಂದು ಹೇಳುವ ಮೂಲಕ ವಿಶ್ವನಾಥ್ ಪರ ಬ್ಯಾಟಿಂಗ್ ಮಾಡಿದ್ದಲ್ಲದೆ, ಸಚಿವ ಯೋಗೇಶ್ವರ್ ವಿರುದ್ಧ ಕಿಡಿಕಾರಿದ್ದಾರೆ.

    ಬಿಜೆಪಿಯ ಬೆಳವಣಿಗಾಗಿ ದುಡಿದವರನ್ನು ಕಡೆಗಣಿಸಲಾಗುತ್ತಿದೆ. ಇನ್ನು ಶಾಸಕ ಜಮೀರ್ ಅಹ್ಮದ್ ಕ್ಷೇತ್ರಕ್ಕೆ 200 ಕೋಟಿ ರೂಪಾಯಿ ಅನುದಾನ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪದಿಂದ ನಲುಗಿ ಹೋಗಿದೆ. ಬೇರೆ ಬೇರೆ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಆ ಜಿಲ್ಲೆಗಳಿಗೆ ಹೆಚ್ಚಿನ ಅನುದಾನ ಕೊಡುವ ಬದಲು ಬೆಂಗಳೂರು ನಗರದ ಕ್ಷೇತ್ರಕ್ಕೆ ಅಷ್ಟೊಂದು ಅನುದಾನವನ್ನು ಕೊಡುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

  • ಸಚಿವ ಸ್ಥಾನಕ್ಕೆ ಯೋಗೇಶ್ವರ್ ಯೋಗ್ಯನಲ್ಲ – ಅರುಣ್‍ಸಿಂಗ್‍ಗೆ ದೂರು ಸಲ್ಲಿಸಿದ ರೇಣುಕಾಚಾರ್ಯ

    ಸಚಿವ ಸ್ಥಾನಕ್ಕೆ ಯೋಗೇಶ್ವರ್ ಯೋಗ್ಯನಲ್ಲ – ಅರುಣ್‍ಸಿಂಗ್‍ಗೆ ದೂರು ಸಲ್ಲಿಸಿದ ರೇಣುಕಾಚಾರ್ಯ

    – ರಾಜ್ಯ ಉಸ್ತುವಾರಿ ಮುಂದೆ ದೂರಿನ ಸುರಿಮಳೆಗೈದ ಶಾಸಕ

    ನವದೆಹಲಿ: ಸಚಿವ ಸ್ಥಾನ ಸಿಗದೆ ನಿರಾಸೆಯಾಗಿರುವ ಶಾಸಕ ರೇಣುಕಾಚಾರ್ಯ ಇಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿಜೆಪಿಯ ಹೈಕಮಾಂಡ್‍ನತ್ತ ತೆರಳಿ ಇತರ ನಾಯಕರ ಭೇಟಿಗೂ ಪ್ರಯತ್ನಿಸಿದ್ದಾರೆ.

    ದೆಹಲಿಯ ಜಿಆರ್‍ಜಿ ರಸ್ತೆಯಲ್ಲಿರುವ ಅರುಣ್ ಸಿಂಗ್ ನಿವಾಸದಲ್ಲಿ ಭೇಟಿಯಾದ ಶಾಸಕ ರೇಣುಕಾಚಾರ್ಯ, ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

    ದೆಹಲಿಯಲ್ಲಿ ಅರುಣ್ ಸಿಂಗ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತಾನಾಡಿದ ರೇಣುಕಾಚಾರ್ಯ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಸುಮಾರು 45 ನಿಮಿಷ ಚರ್ಚೆ ಮಾಡಿದ್ದೇನೆ. ನನ್ನ ಬಗ್ಗೆ ಅನೇಕ ವಿಚಾರಗಳನ್ನು ಅವರು ಸಂಗ್ರಹ ಮಾಡಿದ್ದಾರೆ. ನಾನು ನಾಯಕತ್ವದ ವಿರುದ್ಧ ದೂರು ನೀಡಿಲ್ಲ. ಕರಾವಳಿ, ಮಧ್ಯ ಕರ್ನಾಟಕ, ಉತ್ತರ ಕರ್ನಾಟಕಕ್ಕೆ ಸಾಮಾಜಿಕವಾಗಿ ಅನ್ಯಾಯವಾಗಿದೆ. ಆ ಬಗ್ಗೆ ಗಮನಕ್ಕೆ ತಂದಿದ್ದೇನೆ ಎಂದರು.

    ನಿನ್ನೆ ಕೆಲವರನ್ನು ಭೇಟಿ ಮಾಡಿ ಕೆಲ ಮಾಹಿತಿಯನ್ನು ನೀಡಿದ್ದೇನೆ. ಯೋಗೇಶ್ವರ್ ವಿರುದ್ಧ ದೂರು ಕೊಟ್ಟಿದ್ದೇನೆ. ಭ್ರಷ್ಟಾಚಾರ ಮಾಡಿದವರು ಸಚಿವರಾಗಿದ್ದಾರೆ. ಇದರಿಂದ ಜನರಿಗೆ ಮೋಸವಾಗಿದೆ. ಸೂಕ್ತ ವ್ಯಕ್ತಿಗಳಿಗೆ ಸೂಕ್ತ ದಾಖಲೆ ನೀಡಿದ್ದೇನೆ ಎಂದು ಆಕ್ರೋಶ ಹೊರಹಾಕಿದರು.

    ನಾನು ರಮೇಶ್ ಜಾರಕಿಹೋಳಿ ಯೋಗೇಶ್ವರ್ ವಿಶ್ವಾಸದ ಬಗ್ಗೆ ಅಡ್ಡಿಪಡಿಸುವುದಿಲ್ಲ. ಅವರು ಯೋಗೇಶ್ವರ್ ವಕ್ತಾರರಂತೆ ಕೆಲಸ ಮಾಡಬಾರದು. ಯೋಗೇಶ್ವರ್ ಪುತ್ರಿ ಹೆಸರನಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾರೆ. ಇತ್ತಿಚೇಗೆ 50 ಕೋಟಿ ಆಸ್ತಿ ಖರೀದಿ ಮಾಡಿದ್ದಾರೆ. ಮನೆ ಸೇರಿದಂತೆ ಹಲವು ಕಾರು ಖರೀದಿಸಿರುವುದು ನನ್ನ ಗಮನಕ್ಕೆ ಬಂದಿದೆ. ಯೋಗೇಶ್ವರ್ ಅವರಿಂದ ಬಿಜೆಪಿಗೆ ಯಾವುದೇ ಕೊಡುಗೆ ಇಲ್ಲ. ಅವರು ಹಲವು ಪಕ್ಷಗಳೊಂದಿಗೆ ಸೇರಿ ನಂತರ ಬಿಜೆಪಿಗೆ ಬಂದಿದ್ದಾರೆ. ಡಿಕೆಶಿ ಜೊತೆಗೆ ಸೇರಿ ಕಾಂಗ್ರೆಸ್ ಸೇರಲು ಹೋಗಿದ್ದರು ಎಂದು ಯೋಗೇಶ್ವರ್ ವಿರುದ್ಧ ಕಿಡಿಕಾರಿದರು.

    ಬಿಡದಿಯಲ್ಲಿ 50 ಎಕರೆ ಆಸ್ತಿ ಮಾಡಿದ್ದಾರೆ. ದೀಪಾವಳಿ ವೇಳೆ ಹೊಸ ಕಾರು ಖರೀದಿ ಮಾಡಿದ್ದಾರೆ. ಮಗಳಿಗಾಗಿ ಹೊಸ ಮನೆ ತೆಗೆದುಕೊಂಡಿದ್ದಾರೆ. ಹಲವು ಹಗರಣದಲ್ಲಿ ಕೈಜೋಡಿಸಿದ್ದಾರೆ ಎಂದು ಸಚಿವ ಯೋಗೇಶ್ವರ್ ವಿರುದ್ಧ ಸಮರ ಸಾರಿರುವ ರೇಣುಕಾಚಾರ್ಯ ಮೆಗಾ ಸಿಟಿ ಹಗರಣಗಳ ದಾಖಲೆ ಹಿಡಿದು ಹೈಕಮಾಂಡ್ ನಾಯಕರ ಭೇಟಿ ಮಾಡುತ್ತಿದ್ದಾರೆ.