Tag: ಯೋಧ

  • ಪ್ರತಿ ಟಿಬೆಟಿಯನ್ ಕುಟುಂಬದ ಓರ್ವ ಚೀನಾ ಸೇನೆಗೆ ಸೇರ್ಪಡೆ

    ಪ್ರತಿ ಟಿಬೆಟಿಯನ್ ಕುಟುಂಬದ ಓರ್ವ ಚೀನಾ ಸೇನೆಗೆ ಸೇರ್ಪಡೆ

    ನವದೆಹಲಿ: ಪ್ರತಿ ಟಿಬೆಟಿಯನ್ ಕುಟುಂಬದ ಓರ್ವ ಚೀನಾ ಸೇನೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಕಗಳು ತಿಳಿಸಿವೆ.

    ಇತ್ತೀಚಿನ ಪೂರ್ವಲಡಾಖ್ ಸಂಘರ್ಷದಲ್ಲಿ ಭಾರತದ ವಿಶೇಷ ಪಡೆಯ ಸಿಬ್ಬಂದಿಯಿಂದ ಭರ್ಜರಿ ಏಟು ತಿಂದಿದ್ದ ಚೀನಾ, ಮುಂದಿನದಿನಗಳಲ್ಲಿ ಇಂಥ ಮುಖಭಂಗ ತಪ್ಪಿಸಲು ಟಿಬೆಟಿಯನ್ ಯೋಧರನ್ನು ಬಳಸಿಕೊಳ್ಳಲು ನಿಧರಿಸಿದೆ. ತನ್ನ ವಶದಲ್ಲಿರುವ ಟಿಬೆಟ್‍ನಲ್ಲಿ ಪ್ರತಿ ಕುಟುಂಬದ ಓರ್ವ ಸದಸ್ಯ ಚೀನಾ ಸೇನೆ ಸೇರುವುದನ್ನು ಕಡ್ಡಾಯ ಮಾಡಿದೆ ಎಂದು ಮೂಲಗಳು ತಿಳಿಸಿವೆ.

    ಪೂರ್ವ ಲಡಾಖ್ ಸಂಘರ್ಷದ ವೇಳೆ ಭಾರತ ತನ್ನ ಸೆಷಲ್ ಫ್ರಂಟಿಯರ್ಸ್ ಪಡೆಯನ್ನು ನಿಯೋಜಿಸಿತ್ತು. ವಲಸಿಗ ಟಿಬೆಟಿಯನ್ ಸಮುದಾಯದವರನ್ನೇ ಆಯ್ದು ರಚಿಸಿರುವ ಈ ಪಡೆ ಲಡಾಖ್‍ನ ಅತ್ಯಂತ ಸಂಕಷ್ಟಮಯ ವಾತಾವರಣವನ್ನೂ ಸುಲಭವಾಗಿ ಎದುರಿಸಬಲ್ಲದು. ಹೀಗಾಗಿಯೇ ಪೂರ್ವ ಲಡಾಖ್‍ನಲ್ಲಿ ಚೀನಾಯೋಧರು ಹಿನ್ನಡೆ ಅನುಭವಿಸಿದ್ದರು.

    ಮೊದಲ ಹಂತದಲ್ಲಿ 100ಕ್ಕೂ ಹೆಚ್ಚು ಟಿಬೆಟ್ ಯುವಕರನ್ನು ಆಯ್ದು ಅವರಿಗೆ ವಿಶೆಷ ತರಬೇತಿ ನೀಡಿದ್ದ ಚೀನಾ, ಇದೀಗ ಇಂಥ ಯೋಧರ ಸಂಖ್ಯೆಯನ್ನು ದೊಡ್ಡ ಮಟ್ಟದಲ್ಲಿ ಹೆಚ್ಚಿಸಲು ನಿರ್ಧರಿಸಿದೆ ಎನ್ನಲಾಗಿದೆ.

  • 5 ವರ್ಷದಲ್ಲಿ ಹುತಾತ್ಮರಾದ ಯೋಧರು ಎಷ್ಟು? ಲೋಕಸಭೆಯಲ್ಲಿ ಕೇಂದ್ರ ಉತ್ತರ

    5 ವರ್ಷದಲ್ಲಿ ಹುತಾತ್ಮರಾದ ಯೋಧರು ಎಷ್ಟು? ಲೋಕಸಭೆಯಲ್ಲಿ ಕೇಂದ್ರ ಉತ್ತರ

    ನವದೆಹಲಿ: ಕಳೆದ ಐದು ವರ್ಷದಲ್ಲಿ ಹುತಾತ್ಮರಾದ ಯೋಧರ ಸಂಖ್ಯೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಸದನಕ್ಕೆ ತಿಳಿಸಿತು. 2019ರಲ್ಲಿಯೇ ಅತಿ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.

    ಕೇಂದ್ರ ಗೃಹಇಲಾಖೆ ರಾಜ್ಯಮಂತ್ರಿ ನಿತ್ಯಾನಂದ್ ರಾಯ್ ಸದನಕ್ಕೆ ಮಾಹಿತಿ ನೀಡಿದರು. 2016g ರಿಂದ 2020ರ ಅವಧಿಯಲ್ಲಿ ಒಟ್ಟು 355 ಯೋಧರು ಹುತಾತ್ಮರಾಗಿದ್ದಾರೆ. ಸಿಆರ್ ಪಿಎಫ್ 209, ಅಸ್ಸಾಂ ರೈಫಲ್ಸ್ 37, ಬಿಎಸ್‍ಎಫ್ 78, ಐಟಿಬಿಪಿ 16, ಎಸ್‍ಎಸ್‍ಬಿ 8 ಮತ್ತು ಸಿಐಎಸ್‍ಎಫ್ 7 ಯೋಧರು ವೀರ ಮರಣ ಹೊಂದಿದ್ದಾರೆ.  ಇದನ್ನೂ ಓದಿ: 75 ವರ್ಷ, 75 ಗ್ರಾಮ, 75 ಗಂಟೆ – ಆಗಸ್ಟ್ 15ಕ್ಕೆ ಸಂಸದರಿಗೆ ಮೋದಿ ಟಾಸ್ಕ್

    ಅಸ್ಸಾಂ ಮತ್ತು ಮಿಜೊರಾಂ ಗಡಿ ವಿವಾದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೇಂದ್ರ ಸರ್ಕಾರ ಲಿಖಿತ ರೂಪದಲ್ಲಿ ಸದನಕ್ಕೆ ನೀಡಿತು. ಅಸ್ಸಾಂ ಮತ್ತು ಮಿಜೊರಾಂ ರೀತಿಯಲ್ಲಿ ಆರು ರಾಜ್ಯಗಳಲ್ಲಿ ಗಡಿ ವಿವಾದಗಳಿವೆ. ಇನ್ನು ಕೆಲವು ರಾಜ್ಯಗಳಲ್ಲಿ ಕ್ಷೇತ್ರಗಳಿಗೆ ಸಂಬಂಧಿಸಿದ ವಿವಾದಗಳು ಇತ್ಯರ್ಥವಾಗಬೇಕಿದೆ. ಇದನ್ನೂ ಓದಿ: ನಾನು ರಾಜ್ಯ ಬಿಜೆಪಿ ಉಪಾಧ್ಯಕ್ಷನಾಗಿ ಮಾತ್ರ ಕೆಲಸ ಮಾಡ್ತೇನೆ: ವಿಜಯೇಂದ್ರ

    ಸೋಮವಾರ ಅಸ್ಸಾಂ ಮತ್ತು ಮಿಜೊರಾಂ ರಾಜ್ಯಗಳ ನಡುವೆ ಸಂಬಂಧಿಸಿದ ಗಡಿ ಜಗಳ ಹಿಂಸಾಚಾರಕ್ಕೆ ತಿರುಗಿತ್ತು. ಎರಡೂ ರಾಜ್ಯಗಳ ಪೊಲೀಸರು ಮತ್ತು ಜನರು ಪರಸ್ಪರ ಹೊಡೆದಾಟಕ್ಕೆ ಮುಂದಾಗಿ, ಗುಂಡಿನ ದಾಳಿ ಸಹ ನಡೆದಿತ್ತು. ಈ ಗುಂಡಿನ ದಾಳಿಯಲ್ಲಿ ಒಟ್ಟು ಆರು ಪೊಲೀಸರು ಹುತಾತ್ಮರಾಗಿದ್ದಾರೆ. ಇದನ್ನೂ ಓದಿ: 20 ತಿಂಗಳಾದ್ರೂ ಜಾರಿಗೆ ಬರದ ಸಿಎಎ – ಇನ್ನೂ 6 ತಿಂಗಳು ಸಮಯ ಕೇಳಿದ ಕೇಂದ್ರ

  • ಛತ್ತೀಸ್‍ಗಢದಲ್ಲಿ ನಕ್ಸಲರ ಗುಂಡಿಗೆ ಗದಗ ಯೋಧ ಹುತಾತ್ಮ

    ಛತ್ತೀಸ್‍ಗಢದಲ್ಲಿ ನಕ್ಸಲರ ಗುಂಡಿಗೆ ಗದಗ ಯೋಧ ಹುತಾತ್ಮ

    ಗದಗ: ನಕ್ಸಲ್ ರ ಗುಂಡಿನ ದಾಳಿಗೆ ಜಿಲ್ಲೆಯ ಯೋಧ ವೀರಮರಣವನ್ನಪ್ಪಿರುವ ಘಟನೆ ಛತ್ತೀಸ್‍ಗಢದಲ್ಲಿ ನಡೆದಿದೆ.

    ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋಜನೂರ ಗ್ರಾಮದ ಯೋಧ ಲಕ್ಷ್ಮಣ್ ಗೌರಣ್ಣವರ(31) ಹತಾತ್ಮರಾಗಿದ್ದಾರೆ. ಛತ್ತೀಸ್‍ಗಢ ಗಡಿ ಭಾಗದಲ್ಲಿ ನಕ್ಸಲರು ಹಾಗೂ ಯೋಧರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ನಕ್ಸಲರ ಗುಂಡು ಕನ್ನಡಿಗನ ಎದೆ ಹೊಕ್ಕಿದ್ದು, ಸ್ಥಳದಲ್ಲೇ ಹತಾತ್ಮರಾಗಿದ್ದಾರೆ.

    ಲಕ್ಷ್ಮಣ್ ಕಳೆದ 12 ವರ್ಷಗಳಿಂದ ಬಿಎಸ್‍ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. 2 ತಿಂಗಳ ಹಿಂದಷ್ಟೇ ಊರಿಗೆ ಬಂದು ಹೋಗಿದ್ದರು. ಇದೀಗ ಮತ್ತೆ ಶವವಾಗಿ ತಾಯಿನಾಡಿಗೆ ಯೋಧನ ಪಾರ್ಥಿವ ಶರೀರ ಬರಲಿದೆ. ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ತಾಲೂಕು ಹಾಗೂ ಜಿಲ್ಲಾಡಳಿತಕ್ಕೆ ಪಾರ್ಥಿವ ಶರೀರ ಬರುವ ಸಮಯದ ಮಾಹಿತಿ ತಿಳಿದು ಬಂದಿಲ್ಲ. ನಾಳೆ ಸಂಜೆ ವೇಳೆಗೆ ಗೋಜನೂರು ಗ್ರಾಮದಲ್ಲಿ ಸರ್ಕಾರಿ ಸಕಲ ಗೌರವಗಳೊಂದಿಗೆ ವೀರಯೋಧನ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ.

  • ಚಿಕಿತ್ಸೆ ಫಲಕಾರಿಯಾಗದೇ ಯೋಧ ಸಾವು – ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

    ಚಿಕಿತ್ಸೆ ಫಲಕಾರಿಯಾಗದೇ ಯೋಧ ಸಾವು – ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

    ಕೋಲಾರ: ಅನಾರೊಗ್ಯ ಪೀಡಿತ ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಹುಲ್ಕೂರು ಗ್ರಾಮದ 52 ವರ್ಷದ ಪ್ರಕಾಶ್ ಹೆಚ್.ಆರ್. ಮೃತ ಯೋಧ.

    ಯೋಧ ಪ್ರಕಾಶ್ ಮೂರು ದಿನಗಳಿಂದ ಉಸಿರಾಟದ ತೊಂದರೆ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಜಯದೇಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕಳೆದ 28 ವರ್ಷಗಳಿಂದ ಸಿ.ಆರ್.ಪಿ.ಎಪ್ ನಲ್ಲಿ ಕೆಲಸ ಮಾಡುತಿದ್ದ ಪ್ರಕಾಶ್ ಅವರು ಜಮ್ಮುಕಾಶ್ಮೀರ, ನಗಾತ್, ಅರುಣಾಚಲ ಪ್ರದೇಶ ಇನ್ನಿತರ ಸ್ಥಳಗಳಲ್ಲಿ ದೇಶ ಸೇವೆ ಸಲ್ಲಿಸಿದ್ದರು. ಯಲಹಂಕ ಸಿಆರ್.ಪಿ.ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

    ಇನ್ನೂ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಯನ್ನ ಸ್ವಗ್ರಾಮವಾದ ಹುಲ್ಕೂರು ಗ್ರಾಮದಲ್ಲಿ ನಡೆಸಲಾಗಿದೆ. ಯೋಧನ ಸಾವಿಗೆ ಕೋಲಾರ ಜಿಲ್ಲೆಯ ಜನ ಕಂಬನಿ ಮಿಡಿದಿದ್ದು, ಕೆಜಿಎಫ್ ಪೊಲಿಸರು ಗೌರವ ವಂದನೆ ಸಲ್ಲಿಸಿದರು.

  • ನಾಗಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧ ಹುತಾತ್ಮ

    ನಾಗಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧ ಹುತಾತ್ಮ

    ಬೆಳಗಾವಿ: ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಯೋಧ ವೀರಮರಣ ಹೊಂದಿದ್ದಾರೆ.

    ಗೋಕಾಕ್ ತಾಲೂಕಿನ ಶಿವಾಪುರ ಕೊಣ್ಣೂರ ಗ್ರಾಮದ 38 ವರ್ಷದ ಮಂಜುನಾಥ ಅಪ್ಪಣ್ಣ ಗೌಡಣ್ಣವರ ಹುತಾತ್ಮರಾಗಿದ್ದಾರೆ. ನಾಗಾಲ್ಯಾಂಡ್ ಗಡಿಯಲ್ಲಿ ಗಸ್ತು ತಿರುಗುವಾಗ ಮಂಜುನಾಥ ಚಲಾಯಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ನಲ್ಲಿ ನೇಮಕಗೊಂಡು 18 ವರ್ಷಗಳಿಂದ ನಾಗಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಕರ್ತವ್ಯಕ್ಕೆ ಹೋಗುವಾಗ ಅರಣ್ಯದಲ್ಲಿ ಅಪಘಾತ ಸಂಭವಿಸಿದೆ. ಯೋಧನ ಪಾರ್ಥಿವ ಶರೀರ ಸೋಮವಾರ ಸಂಜೆ 6 ಗ0ಟೆಗೆ ಗೋವಾ ಮಾರ್ಗವಾಗಿ ಸ್ವಗ್ರಾಮಕ್ಕೆ ಬರಲಿದೆ. ಪಾರ್ಥೀವ ಶರೀರವನ್ನು ಗೋವಾದಿಂದ ಗೋಕಾಕ್ ತಾಲೂಕಿನ ಕೊಣ್ಣೂರು ಶಿವಾಪೂರ ಗ್ರಾಮಕ್ಕೆ ಕೊಂಡೊಯ್ಯಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

  • ಮಗನನ್ನ ಅಪ್ಪನಂತೆ ಸೈನಿಕನನ್ನಾಗಿ ಮಾಡ್ತೀನಿ – ಸ್ವಗ್ರಾಮದಲ್ಲಿ ವೀರಯೋಧನಿಗೆ ಅಂತಿಮ ನಮನ

    ಮಗನನ್ನ ಅಪ್ಪನಂತೆ ಸೈನಿಕನನ್ನಾಗಿ ಮಾಡ್ತೀನಿ – ಸ್ವಗ್ರಾಮದಲ್ಲಿ ವೀರಯೋಧನಿಗೆ ಅಂತಿಮ ನಮನ

    – ಹುತಾತ್ಮ ಯೋಧನ ಪತ್ನಿ ಶಪಥ

    ವಿಜಯಪುರ: ರಕ್ಷಕ್ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ಕಾಶಿರಾಯ ಅವರ ಅಂತ್ಯಕ್ರಿಯೆಯನ್ನು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಇಂದು ಸರ್ಕಾರಿ ಗೌರವದೊಂದಿಗೆ ನಡೆಸಲಾಯಿತು.

    ವೀರ ಯೋಧ ಕಾಶಿರಾಯ ಬೊಮ್ಮನಹಳ್ಳಿ ಪಾರ್ಥಿವ ಶರೀರ ಸ್ವಾಗ್ರಾಮಕ್ಕೆ ತರಲಾಗಿತ್ತು. ಪುಲ್ವಾಮಾದಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಕಾಶಿರಾಯ ಬೊಮ್ಮನಹಳ್ಳಿ ಸಾವನ್ನಪ್ಪಿದ್ದರು. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಸ್ವಗ್ರಾಮದಲ್ಲಿ ಜೈಕಾರಗಳೊಂದಿಗೆ ದೇಶಪ್ರೇಮಿಯ ಪಾರ್ಥಿವ ಶರೀರ ಸ್ವಾಗತಿಸಿ, ಉಕ್ಕಲಿ ಗ್ರಾಮದ ಸರಕಾರಿ ಗಂಡು ಮಕ್ಕಳ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

    ಈ ವೇಳೆ ಮಗನನ್ನ ಅಪ್ಪನಂತೆ ಸೈನಿಕ ಮಾಡುವೆ ಎಂದು ಹುತಾತ್ಮ ಯೋಧನ ಪತ್ನಿ ಸಂಗೀತಾ ಪಾರ್ಥಿವ ಶರೀರದ ಎದುರು ನಿಂತು ಶಪಥ ಮಾಡಿದ್ದಾರೆ. ಅವರ ಅಪ್ಪ ಅವನನ್ನ ಸ್ಟ್ರಾಂಗ್ ಮಾಡು ಎನ್ನುತ್ತಿದ್ದರು. ನಾನು ಅವರ ಮಗನನ್ನ ಸ್ಟ್ರಾಂಗ್ ಮಾಡುತ್ತೇನೆ. ಅವರ ಅಪ್ಪ ಹೇಳಿದಂತೆ ಅವನನ್ನು ಸೈನಿಕ ಮಾಡುತ್ತೇನೆ ಎಂದು ಹೇಳುತ್ತಾ ಹುತಾತ್ಮ ಯೋಧನ ಶವದ ಪೆಟ್ಟಿಗೆ ಮೇಲೆ ಬಿದ್ದು ಪತ್ನಿ ಸಂಗೀತಾ ಕಣ್ಣೀರು ಹಾಕಿದ್ದಾರೆ.

    ಪತ್ನಿ ಹಾಗೂ ತಾಯಿಗೆ ಯೋಧನ ಪಾರ್ಥಿವ ಶರೀರದ ಮೇಲೆ ಹಾಕಿದ್ದ ರಾಷ್ಟ್ರ ಧ್ವಜ ಹಸ್ತಾಂತರ ಮಾಡಲಾಯಿತು. ಪತ್ನಿ, ಇಬ್ಬರು ಮಕ್ಕಳು ತಾಯಿ ಹಾಗೂ ಸಹೋದರರು, ಯೋಧರು ಪಾರ್ಥೀವ ಶರೀರಕ್ಕೆ ಸೆಲ್ಯೂಟ್ ಹೊಡೆದು ಗೌರವ ಸಲ್ಲಿಸಿದರು. ಸೇನೆ ಹಾಗೂ ಸ್ಥಳೀಯ ಪೊಲೀಸರಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಲಿಂಗಾಯತ ವಿಧಿವಿಧಾನ ಮೂಲಕ ನಡೆದ ಅಂತ್ಯಕ್ರಿಯೆ ನಡೆಸಲಾಯಿತು.

    ಯರನಾಳದ ಮಠದ ಶ್ರೀ ಸಂಗನಬಸವ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಅಂತ್ಯಕ್ರಿಯೆ ವಿಧಿವಿಧಾನ ನಡೆಸಲಾಯಿತು. ಬಸವನಬಾಗೇವಾಡಿ ಮತಕ್ಷೇತ್ರದ ಶಾಸಕ ಶಿವಾನಂದ ಪಾಟೀಲ್, ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ, ಜಿಲ್ಲಾಧಿಕಾರಿ ಸುನೀಲ್‍ಕುಮಾರ್, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಸೇರಿದಂತೆ ಸಾವಿರಾರು ದೇಶಭಕ್ತರು ಅಂತ್ಯಕ್ರಿಯೆಯೆಲ್ಲಿ ಭಾಗಿಯಾಗಿದ್ದರು.

  • ಪುಲ್ವಾಮಾದಲ್ಲಿ ವಿಜಯಪುರದ ಯೋಧ ಹುತಾತ್ಮ

    ಪುಲ್ವಾಮಾದಲ್ಲಿ ವಿಜಯಪುರದ ಯೋಧ ಹುತಾತ್ಮ

    ವಿಜಯಪುರ: ಪುಲ್ವಾಮಾದಲ್ಲಿ ಉಗ್ರರು ಮತ್ತು ಭಾರತೀಯ ಸೇನೆ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ ವಿಜಯಪುರದ ಯೋಧ ಕಾಶೀರಾಯ್ ಬೊಮ್ಮನಹಳ್ಳಿ (35) ಹುತಾತ್ಮರಾಗಿದ್ದಾರೆ.

    ಕಾಶೀರಾಯ್ ಅವರು ಬಸವಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ನಿವಾಸಿ. ಸೇನಾಧಿಕಾರಿಗಳು ಕಾಶೀರಾಯ್ ಹುತಾತ್ಮರಾಗಿರುವ ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ನಾಳೆ ಹುತಾತ್ಮ ಯೋಧ ಕಾಶೀರಾಯ್ ಪಾರ್ಥಿವ ಶರೀರ ತಲುಪುವ ನಿರೀಕ್ಷೆಗಳಿವೆ. ವಿಷಯ ತಿಳಿಯುತ್ತಲೇ ಇಡೀ ಗ್ರಾಮದಲ್ಲಿ ಮೌನ ಆವರಿಸಿದೆ.

    ತಂದೆ, ತಾಯಿ, ಪತ್ನಿ, ಓರ್ವ ಗಂಡು ಮಗು, ಓರ್ವ ಹೆಣ್ಣು ಮಗು ಹಾಗೂ ಇಬ್ಬರು ಸಹೋದರರನ್ನ ಕಾಶೀರಾಯ್ ಅಗಲಿದ್ದಾರೆ. ಗ್ರಾಮದಲ್ಲಿಯೇ ಸರ್ಕಾರಿ ಸಕಲ ಗೌರವಗಳೊಂದಿಗೆ ನಡೆಯಲಿರುವ ಹುತಾತ್ಮ ಯೋಧನ ಅಂತ್ಯಕ್ರಿಯೆ ನಡೆಯಲಿದೆ.

  • ಪತ್ನಿಗೆ ವೀಡಿಯೋ ಕಾಲ್ ಮಾಡಿ ಬೇಗ ಬರ್ತೇನೆಂದ ಗುಂಡ್ಲುಪೇಟೆಯ ಯೋಧ- ಕೆಲವೇ ಗಂಟೆಗಳಲ್ಲಿ ಸಾವು

    ಪತ್ನಿಗೆ ವೀಡಿಯೋ ಕಾಲ್ ಮಾಡಿ ಬೇಗ ಬರ್ತೇನೆಂದ ಗುಂಡ್ಲುಪೇಟೆಯ ಯೋಧ- ಕೆಲವೇ ಗಂಟೆಗಳಲ್ಲಿ ಸಾವು

    ಚಾಮರಾಜನಗರ: ಪತ್ನಿಗೆ ವೀಡಿಯೋ ಕಾಲ್ ಮಾಡಿ, ಆದಷ್ಟು ಬೇಗ ಮರಳಿ ಬರುತ್ತೇನೆಂದು ಹೇಳಿ ಫೋನ್ ಕಟ್ ಮಾಡಿದ್ದಾರೆ. ಬಳಿಕ ಕೆಲವೇ ಗಂಟೆಗಳಲ್ಲಿ ಹೃದಯಾಘಾತದಿಂದ ಗುಂಡ್ಲುಪೇಟೆಯ ಯೋಧ ಕೊನೆಯುಸಿರೆಳೆದಿದ್ದಾರೆ.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಣ್ಣೂರು ಕೇರಿ ಗ್ರಾಮದ ಶಿವಕುಮಾರ್(31) ಮೃತ ಸಿಆರ್ ಪಿಎಫ್ ಯೋಧ. ಹೃದಯಾಘಾತದಿಂದ ದೆಹಲಿಯಲ್ಲಿ ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಪತ್ನಿಗೆ ವೀಡಿಯೋ ಕಾಲ್ ಮಾಡಿ, ಆದಷ್ಟು ಬೇಗ ಮತ್ತೆ ಮನೆಗೆ ಬರುತ್ತೇನೆಂದು ಸಮಾಧಾನ ಹೇಳಿ ಫೋನ್ ಕಟ್ ಮಾಡಿದ್ದು, ಬಳಿಕ 3 ಗಂಟೆಗಳಲ್ಲಿ ಹೃದಯಾಘಾತವಾಗಿದೆ. ಯೋಧನನ್ನು ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಮೃತ ಯೋಧನಿಗೆ ಎರಡು ಮಕ್ಕಳಿದ್ದು, ಇಂದು ರಾತ್ರಿ ಶಿವಕುಮಾರ್ ಪಾರ್ಥಿವ ಶರೀರ ಹುಟ್ಟೂರಿಗೆ ಬರುವ ಸಾಧ್ಯತೆ ಇದೆ.

    ಯೋಧ ಶಿವಕುಮಾರ್ ಕಳೆದ 8 ವರ್ಷಗಳಿಂದ ಸಿಆರ್ ಪಿಎಫ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸ್ತುತ ದೆಹಲಿಯಲ್ಲಿ ನಿಯೋಜನೆಗೊಂಡಿದ್ದರು. ಕೊರೊನಾ ಸಮಯದಲ್ಲಿ ಮೂರು ತಿಂಗಳು ರಜೆ ತೆಗೆದುಕೊಂಡು ಊರಿಗೆ ಬಂದಿದ್ದ ಶಿವಕುಮಾರ್, ಕಳೆದ 8 ದಿನಗಳ ಹಿಂದೆಯಷ್ಟೇ ಕರ್ತವ್ಯಕ್ಕೆ ಮರಳಿದ್ದರು.

  • ಯೋಧನ ಕುಟುಂಬದ ಮೇಲೆ ಹಲ್ಲೆ – ಜಿಲ್ಲಾಧಿಕಾರಿಗಳ ಮೊರೆ ಹೋದ ಸೈನಿಕ

    ಯೋಧನ ಕುಟುಂಬದ ಮೇಲೆ ಹಲ್ಲೆ – ಜಿಲ್ಲಾಧಿಕಾರಿಗಳ ಮೊರೆ ಹೋದ ಸೈನಿಕ

    ಬೆಳಗಾವಿ: ಯೋಧರೊಬ್ಬರ ಮನೆಯ ಮೇಲೆ ಕಲ್ಲುಗಳನ್ನು ಎಸೆದು ಮನೆಯ ಪೀಠೋಪಕರಣಗಳನ್ನು ಧ್ವಂಸ ಮಾಡಿರುವ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

    ಬೆಳಗಾವಿ ಮಹಾನಗರದಿಂದ ಒಂದು ಕಿಲೋ ಮೀಟರ್ ದೂರದಲ್ಲಿರುವ ಗೌಂಡವಾಡ ಗ್ರಾಮದಲ್ಲಿ ಕರ್ತವ್ಯನಿರತರಾಗಿರುವ ಯೋಧ ದೀಪಕ್ ಪಾಟೀಲ್ ಎಂಬವರ ಮನೆಯ ಮೇಲೆ ಹಲ್ಲೆ ನಡೆಸಲಾಗಿದೆ. ಮನೆಯಲ್ಲಿದ್ದ ಫ್ರಿಡ್ಜ್ – ಟಿವಿ ಸೇರಿದಂತೆ ಇತರ ವಸ್ತುಗಳನ್ನು ಧ್ವಂಸ ಮಾಡಿ ಇಡೀ ಕುಟುಂಬವನ್ನು ಊರಿನವರು ಬಹಿಷ್ಕಾರ ಹಾಕಿದ್ದಾರೆ.

    ಸದ್ಯ ಈ ಕಿರುಕಳ ಸಹಿಸಲಾರದೆ ದೇಶ ಕಾಯುವ ಯೋಧನ ಕುಟುಂಬ ಕಾಕತಿ ಪೊಲೀಸ್ ಠಾಣೆಗೆ ಮೊರೆ ಹೋಗಿದ್ದರೂ ಅಲ್ಲಿನ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅಲ್ಲದೆ ಮಕ್ಕಳು ದಿನಸಿ ಅಂಗಡಿಗೆ ಹೋಗಿ ಬಿಸ್ಕತ್ತು ಕೊಡಿ ಎಂದರೆ ಅಂಗಡಿಯವರು ನಮ್ಮಲ್ಲಿ ಬಿಸ್ಕತ್ತು ಇಲ್ಲ ಎಂದು ಮಕ್ಕಳಿಗೆ ಹೇಳಿ ಮರಳಿ ಕಳಿಸುತ್ತಾರೆ. ನಂತರ ಮಕ್ಕಳು ಅಮ್ಮನ ಬಳಿ ಬಂದು ಅಳುತ್ತಾರೆ. ಜೊತೆಗೆ ದೀಪಕ್ ಪಾಟೀಲ್‍ರವರ ದ್ವಿಚಕ್ರ ವಾಹನಕ್ಕೂ ಗ್ರಾಮಸ್ಥರು ಬೆಂಕಿ ಇಟ್ಟಿರುವುದಾಗಿ ಆರೋಪಿಸಿದ್ದಾರೆ.

    ಯೋಧ ದೀಪಕ್ ಸಂಬಂಧಿ ಅಶೋಕ್ ಪಾಟೀಲ್ ಅವರಿಗೆ ಸೇರಿದ ಐದು ಎಕರೆ ಜಮೀನು ವಿವಾದದಲ್ಲಿದ್ದು, ಗ್ರಾಮಸ್ಥರಿಗೂ ಹಾಗೂ ಯೋಧನ ಕುಟುಂಬಕ್ಕೆ ಜಗಳವಾಗಿದೆ ಎಂದು ಹೇಳಲಾಗುತ್ತಿದೆ. ಈಗ ಯೋಧ ನ್ಯಾಯಕ್ಕಾಗಿ ಬೆಳಗಾವಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಕೋಕ್ ಬಾಟಲ್ ಕೆಳಗಿಟ್ಟ ರೊನಾಲ್ಡೊ- ಕಂಪನಿಗೆ 29 ಸಾವಿರ ಕೋಟಿ ನಷ್ಟ

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಆಕ್ಸಿಜನ್‍ಗಾಗಿ ಅಂಗಲಾಚಿದ್ದ ಸೈನಿಕನ ತಾಯಿಗೆ ಬೆಡ್ ವ್ಯವಸ್ಥೆ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಆಕ್ಸಿಜನ್‍ಗಾಗಿ ಅಂಗಲಾಚಿದ್ದ ಸೈನಿಕನ ತಾಯಿಗೆ ಬೆಡ್ ವ್ಯವಸ್ಥೆ

    ಕಲಬುರಗಿ: ಸೈನಿಕರೊಬ್ಬರ ಸೋಂಕಿತ ತಾಯಿಗೆ ಕೊನೆಗೂ ಆಕ್ಸಿಜನ್ ಸಿಕ್ಕಿದೆ.

    ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ಸಂಜೀವ್ ರಾಠೋಡ್ ಅವರ 65 ವರ್ಷದ ತಾಯಿಗೆ ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಅವರು ಪಾಣೆಗಾಂವ್ ಮನೆಯಲ್ಲಿಯೇ ಹೋಂ ಐಸೋಲೇಟ್ ಆಗಿದ್ದರು. ಇಂದು ಅವರು ಸ್ಯಾಚುರೇಷನ್ ಕಡಿಮೆಯಾಗಿ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸೈನಿಕ ಸಂಜೀವ್ ಅವರು ಅಸಹಾಯಕತೆಯಿಂದ ಕಾಶ್ಮೀರದಿಂದಲೇ ಆಕ್ಸಿಜನ್ ಗಾಗಿ ಮನವಿ ಮಾಡುತ್ತಾ ಕಣ್ಣೀರು ಹಾಕಿದ್ದರು.

     ನನ್ನ ತಾಯಿಗೆ ಆಕ್ಸಿಜನ್ ಕೊಡಿಸಿ ಅಂತ ಕಲಬುರಗಿಯ ಪಾಣೆಗಾಂವ್ ಮೂಲದ ಸಿಆರ್‍ಪಿಎಫ್ ಯೋಧ ಸಂಜೀವ್ ರಾಥೋಡ್ ಫೇಸ್‍ಬುಕ್ ಲೈವ್‍ನಲ್ಲಿ ಕಣ್ಣೀರಿನ ಮನವಿ ಮಾಡಿಕೊಂಡಿದ್ರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಪಬ್ಲಿಕ್ ಟಿವಿಯಲ್ಲಿಂದು ಸಂಜೆ 5 ಗಂಟೆಗೆ ಸುದ್ದಿ ಪ್ರಸಾರ ಮಾಡಲಾಗಿತ್ತು. ಪಬ್ಲಿಕ್ ಟಿವಿ ವರದಿ ಬಳಿಕ ಕಲಬುರಗಿ ಜಿಲ್ಲಾಧಿಕಾರಿ ವಿವಿ ಜ್ಯೋತ್ಸ್ನಾ, ಯೋಧನ ತಾಯಿ ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

    ಈ ಸಂಬಂಧ ಮತ್ತೊಂದು ವೀಡಿಯೋ ಮಾಡಿರುವ ಸಂಜೀವ್, ನಾನು ಸೀಶಿಯಲ್ ಮೀಡಿಯಾದಲ್ಲಿ ವೀಡಿಯೋ ಹಾಕಿದ್ದೆ. ನಮ್ಮ ತಾಯಿಯವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ನನ್ನ ವೀಡಿಯೋ ನೋಡಿ ಪಬ್ಲಿಕ್ ಟಿವಿಯವರು ಸ್ಪಂದಿಸಿದರು. ಅಲ್ಲದೆ ಕಲಬುರಗಿ ಡಿಸಿ ಜ್ಯೋತ್ಸ್ನಾ ಅವರು ತಕ್ಷಣ ಮೆಡಿಕಲ್ ಟೀಂ ಕಳುಹಿಸಿ ತಾಯಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೀಗಾಗಿ ಪಬ್ಲಿಕ್ ಟಿವಿ ಹಾಗೂ ಡಿಸಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.