Tag: ಯೋಧ

  • ಕಾಶ್ಮೀರದಲ್ಲಿ ಪಾಕ್ ಸೈನಿಕರ ಗುಂಡಿನ ದಾಳಿ: ಯೋಧ, ಪತ್ನಿ ಸಾವು – ಮಕ್ಕಳಿಗೆ ಗಾಯ

    ಕಾಶ್ಮೀರದಲ್ಲಿ ಪಾಕ್ ಸೈನಿಕರ ಗುಂಡಿನ ದಾಳಿ: ಯೋಧ, ಪತ್ನಿ ಸಾವು – ಮಕ್ಕಳಿಗೆ ಗಾಯ

     

    ಶ್ರೀನಗರ: ಕಾಶ್ಮೀರದ ಪೂಂಚ್ ಸೆಕ್ಟರ್‍ನಲ್ಲಿ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಸೈನಿಕರು ಗಡಿ ನಿಯಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಓರ್ವ ಸೈನಿಕ ಹಾಗೂ ಅವರ ಪತ್ನಿ ಮೃತಪಟ್ಟಿದ್ದಾರೆ.

    ಇಲ್ಲಿನ ಚಕ್ಕಾ ದಾ ಭಾಗ್ ಹಾಗೂ ಖರ್ರಿ ಕರ್ಮಾರಾ ಪ್ರದೇಶದ ಗ್ರಾಮಗಳಲ್ಲಿರುವ ಭಾರತೀಯ ನೆಲೆಗಳನ್ನ ಗುರಿಯಾಗಿಸಿಕೊಂಡು ಇಂದು ಬೆಳಿಗ್ಗೆ 6.30ರ ವೇಳೆಗೆ ಪಾಕ್ ಸೇನೆ ಮಾರ್ಟರ್ ಶೆಲ್ ದಾಳಿ ನಡೆಸಿದೆ.

    ಘಟನೆಯಲ್ಲಿ ಯೋಧ ಮೊಹಮ್ಮದ್ ಶೌಕತ್ ಹಾಗೂ ಅವರ ಪತ್ನಿ ಸಾಫಿಯಾ ಬೀ ಮೃತಪಟ್ಟಿದ್ದು, ಅವರ ಇಬ್ಬರು ಮಕ್ಕಳಿಗೆ ಗಂಭಿರವಾಗಿ ಗಾಯವಾಗಿದೆ.

    ಅಪ್ರಚೋದಿತ ದಾಳಿಗೆ ಭಾರತೀಯ ಸೈನಿಕರು ಕೂಡ ಪ್ರತ್ಯುತ್ತರ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಸೇನಾ ಮೂಲಗಳ ಮಾಹಿತಿಯ ಪ್ರಕಾರ ಪಾಕಿಸ್ತಾನಿ ಸೈನಿಕರು 82 ಎಮ್‍ಎಮ್ ಹಾಗೂ 120 ಎಮ್‍ಎಮ್ ನ ಮಾರ್ಟರ್ ಶೆಲ್‍ಗಳನ್ನ ಬಳಸುತ್ತಿದ್ದಾರೆ. ಗುಪ್ತಚರ ಮಾಹಿತಿಯ ಪ್ರಕಾರ ಪಾಕಿಸ್ತಾನ ಈ ದಾಳಿಯನ್ನ ಬಳಸಿಕೊಂಡು ಉಗ್ರರನ್ನು ಗಡಿಯಿಂದ ಮತ್ತೊಂದು ಭಾಗಕ್ಕೆ ಕಳಿಸಬೇಕೆಂದಿದೆ ಎನ್ನಲಾಗಿದೆ.

  • ಕಾಶ್ಮೀರದ ಅನಂತ್‍ನಾಗ್‍ನಲ್ಲಿ ಯೋಧರು, ಉಗ್ರರ ನಡುವೆ ಗುಂಡಿನ ಚಕಮಕಿ- ಓರ್ವ ಮಹಿಳೆ ಸಾವು

    ಕಾಶ್ಮೀರದ ಅನಂತ್‍ನಾಗ್‍ನಲ್ಲಿ ಯೋಧರು, ಉಗ್ರರ ನಡುವೆ ಗುಂಡಿನ ಚಕಮಕಿ- ಓರ್ವ ಮಹಿಳೆ ಸಾವು

    ಶ್ರೀನಗರ: ಯೋಧರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮೂವರು ನಾಗರೀಕರಿಗೆ ಗಾಯವಾಗಿರುವ ಘಟನೆ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದಿದೆ.

    ಗುಂಡಿನ ದಾಳಿಗೆ ಬಲಿಯಾದ ಮಹಿಳೆಯನ್ನು 44 ವರ್ಷದ ತಾಹಿರಾ ಬೇಗಂ ಎಂದು ಗುರುತಿಸಲಾಗಿದೆ. ಜಮ್ಮು-ಕಾಶ್ಮೀರದ ಬ್ಯಾಟ್ಪೊರಾ ಗ್ರಾಮದ ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿರುವ ಮಾಹಿತಿ ಪಡೆದ ಭದ್ರತಾ ಪಡೆ ಇಂದು ಉಗ್ರರ ಸೆರೆಗಾಗಿ ಕಾರ್ಯಾಚರಣೆ ನಡೆಸಿದ್ದು, ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.

    ಕಾಶ್ಮೀರದ ಪೊಲೀಸ್ ಅಧಿಕಾರಿ ಫೆರೋಜ್ ಅಹಮದ್ ದಾರ್ ಸೇರಿದಂತೆ ಐವರು ಪೊಲೀಸರ ಹತ್ಯೆಯ ಹಿಂದಿದ್ದಾನೆ ಎನ್ನಲಾದ ಲಷ್ಕರ್-ಇ-ತೋಯ್ಬಾ ಸಂಘಟನೆಯ ಉಗ್ರ ಬಶೀರ್ ಲಷ್ಕರಿ ಆ ಮನೆಯಲ್ಲಿ ಅಡಗಿದ್ದಾನೆ ಎಂದು ಯೋಧರಿಗೆ ಮಾಹಿತಿ ಸಿಕ್ಕಿತ್ತು. ಲಷ್ಕರಿ ಹಾಗೂ ಆತನ ಮತ್ತೊಬ್ಬ ಸಹಚರ ಇನ್ನೂ ಮನೆಯಲ್ಲೇ ಅಡಗಿರುವುದಾಗಿ ವರದಿಯಾಗಿದೆ.

    ಶೋಧ ಕಾರ್ಯಾರಚಣೆ ವೇಳೆ ಉಗ್ರರು ಅಲ್ಲಿನ ನಿವಾಸಿಗಳನ್ನು ಮಾನವ ರಕ್ಷೆಯಾಗಿ ಬಳಸಿ ಗುಂಡಿನ ದಾಳಿ ಆರಂಭಿಸಿದ ಪರಿಣಾಮ ತಾಹಿರಾ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಅಂತಾ ಅಧಿಕಾರಿಗಳು ತಿಳಿಸಿದ್ದಾರೆ.

    ಈವರೆಗೆ 17 ನಿವಾಸಿಗಳನ್ನ ಮನೆಯಿಂದ ಸ್ಥಳಾಂತರಿಸಲಾಗಿದ್ದು, ಭದ್ರತಾ ಪಡೆಯ ಕಾರ್ಯಾಚರಣೆ ಮುಂದುವರೆದಿದೆ.

  • ಜು.1ರಂದು ಸಪ್ತಪದಿ ತುಳಿಯಬೇಕಿದ್ದ ಯೋಧ ಜ್ವರಕ್ಕೆ ಬಲಿ- ಬಳ್ಳಾರಿಯಲ್ಲಿ ಮನಕಲಕುವ ಘಟನೆ

    ಜು.1ರಂದು ಸಪ್ತಪದಿ ತುಳಿಯಬೇಕಿದ್ದ ಯೋಧ ಜ್ವರಕ್ಕೆ ಬಲಿ- ಬಳ್ಳಾರಿಯಲ್ಲಿ ಮನಕಲಕುವ ಘಟನೆ

    ಬಳ್ಳಾರಿ: ಜುಲೈ 1 ರಂದು ಮದುವೆಯಾಗಿ ಸಪ್ತಪದಿ ತುಳಿಯಬೇಕಾಗಿದ್ದ ಯೋಧರೊಬ್ಬರು ಇಂದು ತ್ರೀವ ಜ್ವರದಿಂದ ಮೃತಪಟ್ಟ ಮನಕಲಕುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

    ಹೂವಿನಹಡಗಲಿ ತಾಲೂಕಿನ ಬಸರಳ್ಳಿ ಗ್ರಾಮದ 30 ವರ್ಷದ ಯೋಧ ಹನುಮಂತಪ್ಪ ಕೊರ್ಲಗಟ್ಟಿ ಮೃತ ದುರ್ದೈವಿಯಾಗಿದ್ದು, ಇವರು ಜಾರ್ಖಂಡನ ಸೆಂಟ್ರಲ್ ಆರ್ಮಡ್ ಪೊಲೀಸ್ ಪೋರ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

    ಮೃತ ಯೋಧರಿಗೆ ಮದುವೆ ನಿಗದಿಯಾಗಿತ್ತು. ಹೀಗಾಗಿ ಊರಿಗೆ ಊರೇ ಯೋಧರ ಮದುವೆಯ ತಯಾರಿಯಲ್ಲಿ ಓಡಾಡುತ್ತಿತ್ತು. ಆದ್ರೆ ವಿಧಿ ಮಾತ್ರ ಆ ಯೋಧರನ್ನೆ ಬಲಿ ತೆಗೆದುಕೊಂಡಿದೆ.

    ಜುಲೈ 1 ರಂದು ಸಪ್ತಪದಿ ತುಳಿಯಬೇಕಾಗಿದ್ದ ಹನುಂತಪ್ಪ ತ್ರೀವ ಜ್ವರದಿಂದ ಬಳಲುತ್ತಿದ್ದರು. ಮದುವೆ ಸಂಭ್ರಮದಲ್ಲಿ ಓಡಾಡುತ್ತಿದ್ದ ಯೋಧ ಹನುಮಂತಪ್ಪರಿಗೆ ಜ್ವರ ತ್ರೀವವಾಗುತ್ತಿದ್ದಂತೆ ಗದಗ ಜಿಲ್ಲೆಯ ಮುಂಡರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯಲಾಗುತ್ತಿತ್ತು. ಆದ್ರೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

    ಮದುವೆ ಸಂಭ್ರಮದಲ್ಲಿದ್ದ ಯೋಧ ಹನುಂತಪ್ಪ ಮನೆಯಲ್ಲೀಗ ಶೋಕ ಮಡುಗಟ್ಟಿದೆ. ಅಲ್ಲದೇ ಇಡೀ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

     

  • ಭೇಟಿ ವೇಳೆ ನನಗೆ ಯಾವುದೇ ವಿಶೇಷ ವ್ಯವಸ್ಥೆ ಬೇಡ: ಅಧಿಕಾರಿಗಳಿಗೆ ಯುಪಿ ಸಿಎಂ ಸೂಚನೆ

    ಭೇಟಿ ವೇಳೆ ನನಗೆ ಯಾವುದೇ ವಿಶೇಷ ವ್ಯವಸ್ಥೆ ಬೇಡ: ಅಧಿಕಾರಿಗಳಿಗೆ ಯುಪಿ ಸಿಎಂ ಸೂಚನೆ

    ಲಕ್ನೋ: ರಾಜ್ಯದ ಪ್ರದೇಶಗಳಿಗೆ ಭೇಟಿ ನೀಡುವ ವೇಳೆ ನನಗೆ ಯಾವುದೇ ವಿಶೇಷ ವ್ಯವಸ್ಥೆಗಳನ್ನು ಮಾಡಬೇಡಿ ಅಂತಾ ಉತ್ತರಪ್ರದೆಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದ್ದಾರೆ.

    ರಾಜ್ಯದ ಜನತೆಯನ್ನು ಗೌರವಿಸಿದ್ರೆ ಸಾಕು. ಅದೇ ಮುಖ್ಯಮಮಂತ್ರಿಗೆ ಗೌರವ ಸೂಚಿಸಿದಂತಾಗುತ್ತದೆ. ಹೀಗಾಗಿ ಪರಿಶೀಲನೆ ಅಥವಾ ರಾಜ್ಯ ಪ್ರವಾಸಕ್ಕೆ ತೆರಳುವ ವೇಳೆ ಯಾವುದೇ ವಿಶೇಷ ಆಯೋಜನೆಗಳನ್ನು ಮಾಡಬೇಡಿ ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

    ಇತ್ತೀಚೆಗಷ್ಟೇ ಹುತಾತ್ಮ ಬಿಎಸ್‍ಎಫ್ ಯೋಧರೊಬ್ಬರ ಮನೆಗೆ ಯೋಗಿ ಆದಿತ್ಯನಾಥ್ ಭೇಟಿ ನೀಡಿದ್ದರು. ಈ ವೇಳೆ ಅವರ ಮನೆಯಲ್ಲಿ ಸೋಫಾ, ಎಸಿ, ಕಾರ್ಪೆಟ್ ಗಳನ್ನು ತಂದು ಅಧಿಕಾರಿಗಳು ಹಾಕಿದ್ದರು. ಸಿಎಂ ಮನೆಯಿಂದ ತೆರಳಿದ ತಕ್ಷಣವೇ ಅವುಗಳನ್ನು ಅಲ್ಲಿಂದ ತೆರವುಗೊಳಿಸಿದ್ದರು. ಅಲ್ಲದೇ ಸಿಎಂ ಭೇಟಿ ನೀಡುವ ಹಿನ್ನೆಲೆಯಲ್ಲಿ ಕುಶಿನಗರ ಜಿಲ್ಲಾಡಳಿತ ಅಲ್ಲಿನ ಬುಡಕಟ್ಟು ಜನಾಂದ ಮಂದಿಗೆ ಸೋಪು-ಶಾಂಪು ನೀಡಿ ಸ್ನಾನ ಮಾಡಿಕೊಂಡು ಶುಚಿಯಾಗಿ ಬರುವಂತೆ ಸೂಚಿಸಲಾಗಿತ್ತು. ಈ ಎಲ್ಲಾ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸಿಎಂ ಗಮನಕ್ಕೆ ಬಂದಿದೆ. ವರದಿಗಳನ್ನು ನೋಡಿದ ಯೋಗಿ ಆದಿತ್ಯನಾಥ್ ವಿಶೇಷ ಸಿದ್ಧತೆಗಳನ್ನು ಮಾಡದಂತೆ ಆದೇಶಿಸಿದ್ದಾರೆ.

  • ರಜೆ ಮೇಲೆ ಸ್ವಗ್ರಾಮಕ್ಕೆ ಅಗಮಿಸಿದ್ದ ಯೋಧ ಹೃದಯಾಘಾತದಿಂದ ಸಾವು

    ರಜೆ ಮೇಲೆ ಸ್ವಗ್ರಾಮಕ್ಕೆ ಅಗಮಿಸಿದ್ದ ಯೋಧ ಹೃದಯಾಘಾತದಿಂದ ಸಾವು

    ಬಳ್ಳಾರಿ: ರಜೆ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದ್ದ ಯೋಧರೊಬ್ಬರು ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ.

    ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ನಿವಾಸಿ ಹಾಲಪ್ಪ ಮೃತ ಯೋಧ ರಜೆ ತೆಗೆದುಕೊಂಡು ಸೋಮವಾರ ಗ್ರಾಮಕ್ಕೆ ಆಗಮಿಸಿದ್ದ ಹಾಲಪ್ಪ ಇಂದು ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

    ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ಯೋಧ ಹಾಲಪ್ಪ ಅವರ ಅಂತ್ಯಕ್ರಿಯೆಯನ್ನು ನಡೆಸಲಾಯಿತು. ಅಂತ್ಯಕ್ರಿಯೆಗೂ ಮುನ್ನ ಮೃತ ಯೋಧನ ಶರೀರವನ್ನು ಗ್ರಾಮದ ತುಂಬೆಲ್ಲಾ ಮೆರವಣಿಗೆ ಮಾಡಲಾಯಿತು. ಯೋಧನ ಅಂತ್ಯಕ್ರಿಯೆಗೆ ಸಾವಿರಾರು ಜನ ಆಗಮಿಸಿ ನಮನ ಸಲ್ಲಿಸುವ ಮೂಲಕ ಯೋಧ ಹಾಲಪ್ಪ ಅವರಿಗೆ ಗೌರವ ಸಲ್ಲಿಸಿದರು.

     

  • ಹುತಾತ್ಮ ಯೋಧನ ಮನೆಗೆ ಸಿಎಂ ಆದಿತ್ಯನಾಥ್ ಭೇಟಿ- ಸೋಫಾ, ಎಸಿಯೂ ಬಂದ್ವು, ಹೋದ್ವು

    ಹುತಾತ್ಮ ಯೋಧನ ಮನೆಗೆ ಸಿಎಂ ಆದಿತ್ಯನಾಥ್ ಭೇಟಿ- ಸೋಫಾ, ಎಸಿಯೂ ಬಂದ್ವು, ಹೋದ್ವು

    ಶ್ರೀನಗರ: ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನದ ದಾಳಿಗೆ ಹುತಾತ್ಮರಾದ ಯೋಧ ಪ್ರೇಮ್‍ಸಾಗರ್ ಅವರ ಮನೆಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿದ ವೇಳೆ ಅವರಿಗಾಗಿ ವಿಶೇಷ ವ್ಯವಸ್ಥೆಗಳನ್ನ ಮಾಡಲಾಗಿದ್ದು, ಇದರಿಂದ ನಮಗೆ ಅವಮಾನವಾಗಿದೆ ಅಂತ ಪ್ರೇಮ್ ಸಾಗರ್ ಕುಟುಂಬದವರು ಹೇಳಿದ್ದಾರೆ.

    ಜಮ್ಮು ಕಾಶ್ಮೀರದ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಸೈನಿಕರ ಪೈಶಾಚಿಕ ಕೃತ್ಯದಿಂದ ಶಿರಚ್ಛೇಧನಗೊಂಡಿದ್ದ ಯೋಧ ಪ್ರೇಮ್ ಸಾಗರ್ ಅವರ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದರು. ದಿಯೋರಿಯಾದ ಸಣ್ಣ ಗ್ರಾಮದಲ್ಲಿ ಸುಮಾರು 24 ಗಂಟೆಗಳಿಗೂ ಹೆಚ್ಚಿನ ಕಾಲ ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡದೇ ಆಕ್ರೋಶ ವ್ಯಕ್ತಪಡಿಸಿದ್ರು. ಸಿಎಂ ಯೋಗಿ ಆದಿತ್ಯನಾಥ್ ಫೋನ್‍ನಲ್ಲಿ ಕುಟುಂಬದವರೊಂದಿಗೆ ಮಾತನಾಡಿದ ಬಳಿಕ ಅಂತ್ಯಸಂಸ್ಕಾರ ಮಾಡಲಾಗಿತ್ತು.

    ಭಾನುವಾರದಂದು ಯೋಗಿ ಆದಿತ್ಯನಾಥ್ ದಿಯೋರಿಯಾದಲ್ಲಿರುವ ಪ್ರೇಮ್‍ಸಾಗರ್ ಅವರ ಮನೆಗೆ ಭೇಟಿ ನೀಡಿದ್ದರು. ಸಿಎಂ ಬರುವುದಕ್ಕೂ ಮೊದಲು ಮನೆಗೆ ಬಂದ ಅಧಿಕಾರಿಗಳು ಎಸಿ ಅಳವಡಿಸಿದ್ರು, ಸೋಫಾ ಹಾಕಿದ್ರು, ಕಾರ್ಪೆಟ್ ಹಾಕಿದ್ರು. ಯಾವುದೇ ಕಾರಣಕ್ಕೂ ಕರೆಂಟ್ ಕಟ್ ಆಗಬಾರದು ಅಂತಾ ಜನರೇಟರ್ ವ್ಯವಸ್ಥೆ ಮಾಡಿದ್ರು. ಅತ್ತ ಸಿಎಂ ಹೋಗ್ತಿದ್ದಂತೆ ಅಧಿಕಾರಿಗಳು ಮನೆಯಲ್ಲಿ ಅಳವಡಿಸಿದ್ದ ಎಸಿ, ಸೋಫಾ, ಕುರ್ಚಿ, ಜನರೇಟರ್ ಎಲ್ಲವನ್ನೂ ಎತ್ತಿಕೊಂಡು ಹೋದ್ರು ಅಂತ ಪ್ರೇಮ್ ಸಾಗರ್ ಅವರ ಪುತ್ರ ಈಶ್ವರ್ ಹೇಳಿದ್ದಾರೆ.

    ಹುತಾತ್ಮ ಯೋಧ ಪ್ರೇಮ್‍ಸಾಗರ್ ಅವರ ಸಹೋದರ ಕೂಡ ಬಿಎಸ್‍ಎಫ್‍ನಲ್ಲಿ ಕೆಲಸ ಮಾಡುತ್ತಿದ್ದು, ಈ ಘಟನೆಯಿಂದ ನಮಗೆ ಅವಮಾನವಾಗಿದೆ ಎಂದಿದ್ದಾರೆ.

    ಪ್ರೇಮ್ ಸಾಗರ್ ಅವರಿಗೆ 40 ಸಾವಿರ ರೂ. ಸಂಬಳ ಬರುತ್ತಿತ್ತು. ಪ್ರೇಮ್‍ಸಾಗರ್ ಕುಟುಂಬಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಹಣಕಾಸಿನ ನೆರವು ನೀಡುವ ಭರವಸೆ ನೀಡಿದ್ದರು. ಜೊತೆಗೆ ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು ಎಂದು ವರದಿಯಾಗಿದೆ.

    ಮೇ 1ರಂದು ನಡೆದಿದ್ದ ಗುಂಡಿನ ಕಾಳಗದಲ್ಲಿ ಗಡಿ ಭದ್ರತಾ ಪಡೆಯ ಮುಖ್ಯ ಕಾನ್ಸ್ ಸ್ಟೇಬಲ್ ಆಗಿದ್ದ ಪ್ರೇಮ್ ಸಾಗರ್ ಹಾಗೂ ಯೋಧ ಪರಮ್‍ಜಿತ್ ಸಿಂಗ್ ವೀರಮರಣವನ್ನಪ್ಪಿದ್ದರು. ಪಾಕಿಸ್ತಾನದ ಯೋಧರು ಇವರ ಶಿರಚ್ಛೇದನ ಮಾಡಿ ವಿಕೃತಿ ಮೆರೆದಿದ್ದರು. ತನ್ನ ತಂದೆಯ ಸಾವಿಗೆ ಪ್ರತೀಕಾರವಾಗಿ 50 ತಲೆಗಳು ಬೇಕು ಎಂದು ಪ್ರೇಮ್‍ಸಾಗರ್ ಅವರ ಪುತ್ರಿ ಹೇಳಿದ್ದರು.

  • ಮುಂದಿನ ವಾರ ರಜೆ ಮೇಲೆ ಬರೋದಾಗಿ ಹೇಳಿದ್ದ ಹಾವೇರಿ ಯೋಧ ಹುತಾತ್ಮ

    ಮುಂದಿನ ವಾರ ರಜೆ ಮೇಲೆ ಬರೋದಾಗಿ ಹೇಳಿದ್ದ ಹಾವೇರಿ ಯೋಧ ಹುತಾತ್ಮ

    ಹಾವೇರಿ: ಮುಂದಿನ ವಾರ ರಜೆ ಮೇಲೆ ಊರಿಗೆ ಬರೋದಾಗಿ ಹೇಳಿದ್ದ, ಯೋಧ ಇಂದು ಶವವಾಗಿ ಮನೆಗೆ ಬಂದಿದ್ದಾರೆ.

    ಆಹಾರ ಅರಸಿ ಬನ್ನೇರುಘಟ್ಟ ಅರಣ್ಯ ಕಾಡಿಗೆ ಬಂದಿದ್ದ ಕಾಡಾನೆ ದಾಳಿಗೆ ಇಬ್ಬರು ಸಿಆರ್ ಪಿಎಫ್ ಯೋಧರು ಭಾನುವಾರ ಬಲಿಯಾಗಿದ್ದರು. ಕಾಡಾನೆ ದಾಳಿಗೆ ಮೃತಪಟ್ಟ ಪುಟ್ಟಪ್ಪ ಅವರ ಪಾರ್ಥಿವ ಶರೀರ ಇಂದು ಜಿಲ್ಲೆಯ ಸವಣೂರು ತಾಲೂಕಿನ ಶಿರಬಡಗಿ ಸ್ವಗ್ರಾಮ ಬಂದು ತಲುಪಿದೆ.

    ಪುಟ್ಟಪ್ಪ ಅವರ ಸಾವಿನಿಂದ ಶಿರಬಡಗಿ ಗ್ರಾಮ ದುಃಖದಲ್ಲಿ ಮುಳುಗಿದೆ. 2005 ರಲ್ಲಿ ಸಿಆರ್ ಪಿಎಫ್ ಗೆ ಸೇರಿದ್ದ ಪುಟ್ಟಪ್ಪ, ಎರಡು ವರ್ಷಗಳ ಹಿಂದೆ ಬನ್ನೇರುಘಟ್ಟ ಶಿಬಿರ ಸೇರಿದ್ದರು. ಪುಟ್ಟಪ್ಪ ಅವರು ತಂದೆ, ತಾಯಿ, ಪತ್ನಿ ಮೂವರು ಮಕ್ಕಳು ಹಾಗೂ ಸಹೋದರರನ್ನು ಅಗಲಿ ಬಾರದ ಲೋಕಕ್ಕೆ ತೆರಳಿದ್ದಾರೆ.

    ಇದನ್ನೂ ಓದಿ: ಆಹಾರ ಅರಸಿ ಸಿಆರ್‍ಪಿಎಫ್ ಕ್ಯಾಂಪ್‍ಗೆ ಬಂದ ಕಾಡಾನೆಗಳ ದಾಳಿಗೆ ಇಬ್ಬರು ಯೋಧರು ಹುತಾತ್ಮ

    ಶಿರಬಡಗಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಪುಟ್ಟಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ತಾಲೂಕು ಆಡಳಿತವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ.

     

  • ಅಪ್ಪನ ಸಾವಿಗೆ ಪ್ರತೀಕಾರವಾಗಿ 50 ತಲೆಗಳು ಬೇಕು: ಪಾ(ಪಿ)ಕಿಗಳಿಂದ ಶಿರಚ್ಛೇದನಗೊಂಡ ಯೋಧನ ಮಗಳ ಮಾತು

    ಅಪ್ಪನ ಸಾವಿಗೆ ಪ್ರತೀಕಾರವಾಗಿ 50 ತಲೆಗಳು ಬೇಕು: ಪಾ(ಪಿ)ಕಿಗಳಿಂದ ಶಿರಚ್ಛೇದನಗೊಂಡ ಯೋಧನ ಮಗಳ ಮಾತು

    ನವದೆಹಲಿ: ನನ್ನ ತಂದೆಯ ಸಾವಿಗೆ ಪ್ರತೀಕಾರವಾಗಿ 50 ತಲೆಗಳು ಬೇಕು ಎಂದು ಪಾಕಿಸ್ತಾನದ ಸೈನಿಕರ ಪೈಶಾಚಿಕ ಕೃತ್ಯದಿಂದ ಹುತಾತ್ಮರಾದ ಯೋಧರೊಬ್ಬರ ಮಗಳು ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿದ್ದಾರೆ.

    ಸೋಮವಾರದಂದು ಪಾಕಿಸ್ತಾನದ ಸೈನಿಕರು ಕಾಶ್ಮೀರದಲ್ಲಿ ಭಾರತದೊಳಗೆ ನುಗ್ಗಿ ಇಬ್ಬರು ಯೋಧರನ್ನು ಕೊಂದು ಅವರ ಶಿರಚ್ಛೇದನ ಮಾಡಿದ್ದರು. ಮೃತರಲ್ಲಿ ಬಿಎಸ್‍ಎಫ್ ಯೋಧ ಪ್ರೇಮ್ ಸಾಗರ ಕೂಡ ಒಬ್ಬರಾಗಿದ್ದು, ಅವರ ಮಗಳು ತನ್ನ ತಂದೆಯ ಬಲಿದಾನಕ್ಕೆ ಭಾರತ ಹೇಗೆ ಪ್ರತೀಕಾರ ತೀರಿಸಿಕೊಳ್ಳಬೇಕು ಎಂಬುದನ್ನ ಈ ಮಾತುಗಳ ಮೂಲಕ ಹೇಳಿದ್ದಾರೆ.

    ಪಾಕಿಸ್ತಾನಿ ಸೈನಿಕರ ಈ ಅಮಾನವೀಯ ಕೃತ್ಯಕ್ಕೆ ಹುತಾತ್ಮರಾದ ಮತ್ತೊಬ್ಬ ಯೋಧ ಪರಮ್‍ಜೀತ್ ಸಿಂಗ್ ಅವರ ಮೃತದೇಹವನ್ನು ಇಂದು ಪಂಜಾಬ್‍ನ ಸ್ವಗ್ರಾಮ ಟಾರ್ನ್ ಟರಾನ್‍ಗೆ ಕೊಂಡೊಯ್ಯಲಾಯ್ತು. ಆಕ್ರೋಶಗೊಂಡ ಪರಮ್‍ಜೀತ್ ಅವರ ಸಂಬಂಧಿಕರು, ನಾವು ಅವರ ಮುಖವನ್ನು ನೋಡುವವರೆಗೂ ದೇಹವನ್ನು ಅಂತ್ಯಕ್ರಿಯೆ ಮಾಡುವುದಿಲ್ಲ. ಯಾರ ದೇಹ ಇದು? ಬಾಕ್ಸ್‍ನೊಳಗೆ ಮುಚ್ಚಲಾಗಿದೆ ಎಂದು ರಾಷ್ಟ್ರಧ್ವಜವನ್ನು ಹೊದಿಸಿದ್ದ ಶವಪೆಟ್ಟಿಗೆಯನ್ನು ತೋರಿಸುತ್ತಾ ಹೇಳಿ ದುಃಖಿತರಾದ್ರು. ನಮಗೆ ದೇಹವನ್ನು ತೋರುಸುತ್ತಿಲ್ಲವಲ್ಲ ಯಾಕೆ? ಎಂದು ಪ್ರಶ್ನಿಸಿದ್ರು.

    ಸೋಮವಾರ ಬೆಳಿಗ್ಗೆ 8.30ರ ವೇಳೆಗೆ ಪೂಂಚ್ ಸೆಕ್ಟರ್‍ನ ಗಡಿ ನಿಯಂತ್ರಣಾ ರೇಖೆಯ ಬಳಿ ಭಾರತೀಯ ಯೋಧರು ಎರಡು ಪೋಸ್ಟ್‍ಗಳ ನಡುವೆ ಗಸ್ತು ತಿರುಗುತ್ತಿದ್ದ ವೇಳೆ ಅವರ ಮೇಲೆ ಪಾಕಿಸ್ತಾನಿಗಳು ಮಾರ್ಟರ್ ಬಾಂಬ್‍ಗಳಿಂದ ದಾಳಿ ನೆಡೆಸಿದ್ದರು. ಈ ವೇಳೆ ಇಬ್ಬರು ಯೋಧರು ರಕ್ಷಣೆಗಾಗಿ ಓಡಿದ್ರು. ಇನ್ನುಳಿದ ಇಬ್ಬರ ಮೇಲೆ ಪಾಕಿಸ್ತಾನಿಗಳು ದಾಳಿ ಮಾಡಿ ಶಿರಚ್ಛೇದನ ಮಾಡಿದ್ದರು.

  • ಮೋದಿ ಕ್ರಮ ಕೈಗೊಳ್ಳದಿದ್ರೆ ನಾನೇ ಸೇಡು ತೀರಿಸ್ಕೊಳ್ತೀನಿ: ಕುಪ್ವಾರದಲ್ಲಿ ಹುತಾತ್ಮ ಯೋಧನ ತಾಯಿ

    ಮೋದಿ ಕ್ರಮ ಕೈಗೊಳ್ಳದಿದ್ರೆ ನಾನೇ ಸೇಡು ತೀರಿಸ್ಕೊಳ್ತೀನಿ: ಕುಪ್ವಾರದಲ್ಲಿ ಹುತಾತ್ಮ ಯೋಧನ ತಾಯಿ

    ನವದೆಹಲಿ: ಮೋದಿ ಕ್ರಮ ಕೂಗೊಳ್ಳಲು ವಿಫಲರಾದ್ರೆ ನಾನೇ ನನ್ನ ಮಗನ ಸಾವಿಗೆ ಸೇಡು ತೀರಿಸಿಕೊಳ್ತೀನಿ ಎಂದು ಕುಪ್ವಾರದಲ್ಲಿ ಹುತಾತ್ಮರಾದ ಯೋಧರೊಬ್ಬರ ತಾಯಿ ಹೇಳಿಕೆ ನೀಡಿದ್ದಾರೆ.

    ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕ್ಯಾಪ್ಟನ್ ಸೇರಿ ಮೂವರು ಯೋಧರು ಗುರುವಾರದಂದು ಹುತಾತ್ಮರಾಗಿದ್ದರು. ಕ್ಯಾಪ್ಟನ್ ಆಯುಷ್ ಯಾದವ್, ಜೆಸಿಒ ಭೂಪ್ ಸಿಂಗ್ ಗುಜ್ಜರ್ ದುಸ್ಸಾ ಹಾಗೂ ನಾೈಕ್ ವೆಂಕಟ್ ರಮಣ್ ಹುತಾತ್ಮರಾದ ಸೈನಿಕರು. ಇಬ್ಬರು ಉಗ್ರರನ್ನು ಸೇನಾ ಪಡೆ ಹೊಡೆದುರುಳಿಸಿತ್ತು.

    25 ವರ್ಷದ ಮಗ ಆಯುಷ್ ಯಾದವ್ ಉಗ್ರರ ದಾಳಿಗೆ ಬಲಿಯಾಗಿರೋದ್ರಿಂದ ಮನನೊಂದ ತಾಯಿ, ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿಯನ್ನ ಒತ್ತಾಯಿಸಿದ್ದಾರೆ. ಒಂದು ವೇಳೆ ಪ್ರಧಾನಿಯವರಿಗೆ ಕ್ರಮ ಕೈಗೊಳ್ಳಲು ಸಾಧ್ಯವಾಗದಿದ್ರೆ ನಾನೇ ಮಗನ ಸಾವಿನ ಸೇಡು ತೀರಿಸುತ್ತೇನೆ ಅಂತಾ ತಿಳಿಸಿದ್ದಾರೆ.

    ಆಯುಷ್ ಯಾದವ್ ತಂದೆ ಅರುಣ್ ಕಂಟ್ ಯಾದವ್ ಕೂಡ ಉಗ್ರರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದು, ಈ ರೀತಿ ನಮ್ಮ ಮಕ್ಕಳು ಹತ್ಯೆಯಾಗೋದನ್ನ ಎಲ್ಲಿಯತನಕ ನೋಡಿಕೊಂಡಿರಲು ಸಾಧ್ಯ? ಎಂದಿದ್ದಾರೆ. ಅಲ್ಲದೆ ಮಾನವ ಹಕ್ಕುಗಳ ಹೋರಾಟಗಾರರ ಬಗ್ಗೆ ಕಿಡಿಕಾರಿದ ಅವರು, ಇಂತಹ ಘಟನೆಗಳ ಬಗ್ಗೆ ಅವರು ತುಟಿ ಬಿಚ್ಚಲ್ಲ. ಸೈನಿಕರು ಪ್ರತೀಕಾರ ತೀರಿಸಿಕೊಂಡಾಗ ಮಾನವ ಹಕ್ಕುಗಳ ಹೋರಾಟಗಾರರು ದೂರುತ್ತಾರೆ. ಆದ್ರೆ ಈ ಘಟನೆ ಅವರಿಗೇನೂ ಅಲ್ಲ. ಜೀಪ್‍ಗೆ ವ್ಯಕ್ತಿಯನ್ನು ಕಟ್ಟಿದಾಗ ಅದರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ, ತನಿಖೆಗಳು ನಡೆಯುತ್ತದೆ, ಕ್ರಮ ಕೈಗೊಳ್ತಾರೆ ಅಂತ ಅಸಮಾಧಾನ ವ್ಯಕ್ತಪಡಿಸಿದ್ರು.

    ನನ್ನ ಅಣ್ಣನ ಮಗಳು ಮತ್ತು ಆಕೆಯ ಗಂಡ ಇಬ್ಬರೂ ಮೇಜರ್‍ಗಳಾಗಿದ್ದಾರೆ. ನನ್ನ ಮಗ ಬದುಕಿದ್ದರೆ ಮುಂದೊಂದು ದಿನ ಆತನೂ ಮೇಜರ್ ಆಗ್ತಿದ್ದ ಅಂತಾ ಯಾದವ್ ಹೇಳಿದ್ರು.

    ದೇಶದಲ್ಲಿ ಯಾವ ರೀತಿಯ ವಾತಾವರಣ ಇದೆ ಅಂತ ನೀವು ನೋಡಬಹುದು. ಬಲವಾದ ನೀತಿ ಇಲ್ಲದಿದ್ರೆ ಮತ್ತು ಸೂಕ್ತ ಕ್ರಮ ಕೈಗೊಳ್ಳದಿದ್ರೆ ಇದು ಮುಂದುವರೆಯುತ್ತದೆ. ಸೈನಿಕರು ಹುತಾತ್ಮರಾಗುತ್ತಾರೆ. ಇದಕ್ಕೆ ಏನಾದ್ರೂ ಮಾಡಲೇಬೇಕು. ಬೇರೆ ಯಾರ ಮಕ್ಕಳಿಗೂ ಈ ರೀತಿ ಆಗಬಾರದು ಅಂತ ಯಾದವ್ ಮರುಗಿದ್ರು.

  • ಗೆಲುವನ್ನು ಸುಕ್ಮಾ ಯೋಧರಿಗೆ ಅರ್ಪಿಸಿದ ಬಿಜೆಪಿ- ಸಂಭ್ರಮಾಚರಣೆ ಬೇಡವೆಂದು ನಿರ್ಧಾರ

    ಗೆಲುವನ್ನು ಸುಕ್ಮಾ ಯೋಧರಿಗೆ ಅರ್ಪಿಸಿದ ಬಿಜೆಪಿ- ಸಂಭ್ರಮಾಚರಣೆ ಬೇಡವೆಂದು ನಿರ್ಧಾರ

    ನವದೆಹಲಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯ ಮತಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ. ಹೀಗಾಗಿ ಬಿಜೆಪಿ ಗೆಲುವು ಬಹುತೇಕ ಖಚಿತವಾಗಿದ್ದು, ಆದ್ರೆ ಈ ಗೆಲುವನ್ನು ಆಚರಿಸದೇ ಇರಲು ಬಿಜೆಪಿ ನಿರ್ಧರಿಸಿದೆ.

    ಕಳೆದ ಸೋಮವಾರ ಸುಕ್ಮಾದಲ್ಲಿ ಯೋಧರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು. ಈ ವೇಳೆ ಸುಮಾರು 25 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಹೀಗಾಗಿ ಬಿಜೆಪಿಗೆ ದೊರೆತ ಜಯವನ್ನು ಆಚರಿಸಲ್ಲ ಅಂತಾ ದೆಹಲಿಯ ಬಿಜೆಪಿ ಮುಖಂಡ ಮನೋಜ್ ತಿವಾರಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ದೆಹಲಿಯಲ್ಲಿ ಸಿಕ್ಕ ಈ ವಿಜಯವನ್ನು ಮಡಿದ ಹುತಾತ್ಮರಿಗೆ ಗೌರವ ಸಲ್ಲಿಸುವ ಮೂಲಕ ಸೈನಿಕರಿಗೆ ಅರ್ಪಿಸುವುದಾಗಿ ಅವರು ಹೇಳಿದ್ದಾರೆ.

    ಸದ್ಯ ಒಟ್ಟು 270 ಸ್ಥಾನಗಳಲ್ಲಿ ಬಿಜೆಪಿ 180ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮೂರನೇ ಬಾರಿ ಮೂರು ಪಾಲಿಕೆಯ ಗದ್ದುಗೆಯನ್ನು ಏರಲಿದೆ.