Tag: ರಂಜಿನಿ ರಾಘವನ್

  • ಸ್ವಪ್ನಮಂಟಪ: ಶೂಟಿಂಗ್ ಮುಗಿಸಿದ ಬರಗೂರು ರಾಮಚಂದ್ರಪ್ಪ

    ಸ್ವಪ್ನಮಂಟಪ: ಶೂಟಿಂಗ್ ಮುಗಿಸಿದ ಬರಗೂರು ರಾಮಚಂದ್ರಪ್ಪ

    ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ. ‘ಸ್ವಪ್ನಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.

    ‘ಸ್ವಪ್ನಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ , ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಈ ಸಾಮಾಜಿಕ ಚಿತ್ರದಲ್ಲಿ ಸ್ವಪ್ನಮಂಟಪವನ್ನು ನಿರ್ಮಾಣ ಮಾಡಿದ ರಾಜ-ರಾಣಿ ಯರ ಕಥನವನ್ನೂ ಹಿನ್ನೋಟ ತಂತ್ರದಲ್ಲಿ ಸೇರಿಸಿರುವುದು ಒಂದು ವಿಶೇಷ.

    ನಾಯಕ ಮತ್ತು ನಾಯಕಿಯ ಪಾತ್ರದಲ್ಲಿ ಕ್ರಮವಾಗಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಒಂದು ವಿಶೇಷ. ಜೊತೆಗೆ ಸುಂದರರಾಜ್, ಶೋಭಾರಾಘವೇಂದ್ರ, ರಜನಿ, ಮಹಾಲಕ್ಷ್ಮೀ, ಸುಂದರರಾಜ ಅರಸು, ರಾಜಪ್ಪದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿರಮೇಶ್, ಗುಂಡಿ ರಮೇಶ್ ಮುಂತಾದವರು ತಾರಾಗಣದಲ್ಲಿ ಇದ್ದಾರೆ.

     

    ಬಾಬುನಾಯ್ಕ್ ನಿರ್ಮಾಣ ಮತ್ತು ಬರಗೂರರ ನಿರ್ದೇಶನದ ಈ ಚಿತ್ರವು ನಾಗರಾಜ ಆದವಾನಿ ಛಾಯಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್ ಸಹನಿರ್ದೇಶಕರಾಗಿದ್ದಾರೆ.

  • ಶೂಟಿಂಗ್ ಮುಗಿಸಿ ಬರ್ತಿದ್ದ ರಂಜನಿ ರಾಘವನ್‍ಗೆ ರಾತ್ರಿ ಏನಾಯ್ತಂತೆ ಗೊತ್ತಾ?

    ಶೂಟಿಂಗ್ ಮುಗಿಸಿ ಬರ್ತಿದ್ದ ರಂಜನಿ ರಾಘವನ್‍ಗೆ ರಾತ್ರಿ ಏನಾಯ್ತಂತೆ ಗೊತ್ತಾ?

    ಬೆಂಗಳೂರು: ಕನ್ನಡತಿ ಧಾರಾವಾಹಿ ಖ್ಯಾತಿಯ ನಟಿ ರಂಜನಿ ರಾಘವನ್‍ರವರು ಶೂಟಿಂಗ್ ಮುಗಿಸಿ ಬರುತ್ತಿದ್ದ ವೇಳೆ ನಿನ್ನೆ ರಾತ್ರಿ ತಮಗಾದ ಅನುಭವವನ್ನು ವೀಡಿಯೋ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ವೀಡಿಯೋದಲ್ಲಿ ನಟಿ ರಂಜನಿ ರಾಘವನ್‍ ಕತ್ತಲಿನಲ್ಲಿ ಗೂಡ್ಸ್ ಗಾಡಿ ಹತ್ತಿ, ಸುಂದರವಾಗಿ ಕಾಣಿಸುತ್ತಿದ್ದ ಲೈಟಿಂಗ್‍ನನ್ನು ತೋರಿಸುತ್ತಾ, ಈ ವೀಡಿಯೋವನ್ನು ನೋಡುತ್ತಿರುವವರಿಗೆ ನನ್ನ ತಲೆಯಲ್ಲಿ ಏನು ಓಡುತ್ತಿದೆ ಎಂಬುವುದನ್ನು ಲೇಟಾಗಿ ಹೇಳುತ್ತೇನೆ. ನಾನು ಒಳಗೆ ಭಯದಿಂದ ಒದ್ದಾಡುತ್ತಿದ್ದೇನೆ. ಆದರೆ ಮೇಲ್ನೋಟಕ್ಕೆ ಹೊರಗಡೆ ನಗುತ್ತಿದ್ದೇನೆ ಎಂದು ಹೇಳಿದ್ದಾರೆ.

    ನಂತರ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಈ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದು, ಇದು ನೈಜ ಘಟನೆ ಆಧರಿತ ಥ್ರಿಲ್ಲರ್ ಕತೆ! ಇದರಲ್ಲಿ ಬರುವ ಎಲ್ಲಾ ಪಾತ್ರಗಳು ಕಾಲ್ಪನಿಕವಲ್ಲ, ನಮ್ಮ ಅನುಭವ. ಇದಕ್ಕೆ ಈ ವೀಡಿಯೋ ಸಾಕ್ಷಿ ಎಂದು ನಟಿ ರಂಜನಿ ಕ್ಯಾಪ್ಷನ್‍ನಲ್ಲಿ ಬರೆಯುವ ಮೂಲಕ ಕಥೆ ಹೇಳಲು ಆರಂಭಿಸಿದ್ದಾರೆ. ಇದನ್ನು ಓದಿ: ಕ್ರೇಜಿಸ್ಟಾರ್‌ಗೆ 59ನೇ ಜನ್ಮದಿನದ ಸಂಭ್ರಮ – ಪ್ರೀತಿಯ ಅಪ್ಪನಿಗೆ ಮನೋರಂಜನ್‍ನಿಂದ ವಿಶ್

    ರಂಜನಿ ಹೇಳಿದ್ದು ಏನು?
    ಜೊತೇಲಿದ್ದೋನಿಗೆ ನನ್ನ ಭಯ ಗೊತ್ತಾಗ್ದೇ ಇರ್ಲಿ ಅಂತ ಇಂಗ್ಲೀಶ್‍ನಲ್ಲಿ ಮಾತಾಡಿರೋದು, ಬೈಕೋಬೇಡಿ!

    ಏನಾಯ್ತು ಗೊತ್ತಾ? ಇವತ್ತು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಬೇಗ ಮುಗಿದಿತ್ತು. ನಮ್ ಟೀಮ್ ದಿನ್ನೂ ಶೂಟ್ ಮುಗ್ದಿರ್ಲಿಲ್ಲ (ಅಂದ್ರೆ ನಮ್ ಸೀನ್ಸ್ ಮುಗ್ದಿತ್ತು ಪ್ಯಾಕ್ ಅಪ್ ಆಗಿರ್ಲಿಲ್ಲ) ಎಲ್ಲಾರೂ ಬರುವುದಕ್ಕೆ ಇನ್ನೂ ಸಮಯ ಇತ್ತು, ಒಟ್ಟಿಗೆ ವಾಪಸ್ ಹೋಟೆಲ್‍ಗೆ ಹೋಗೋಕೆ ಕಾಯ್ತಾ ಹಾಗೇ ಏನೋ ಮಾತಾಡ್ತಾ ಕೂತಿದ್ದೆ. “ಹೇ ಗಾಡಿ ಇದೆ ಬರ್ತೀರಾ?” ಎಂದು ಕಿರಣ್ ರಾಜ್ ಕೇಳಿದರು. ನೋಡಿದರೆ ಒಂದು ಲಗೇಜ್ ಗಾಡಿ ನಿಂತಿತ್ತು, ಇದರಲ್ಲಿ ಹೋಗೋಣ ಮಜಾ ಇರುತ್ತೆ ಅಂತ ನಾನು ಏನೂ ಯೋಚನೆ ಮಾಡದೇ ಗಾಡಿ ಹತ್ತಿದೆ.

    ಸಾರಾ ಅಣ್ಣಯ್ಯ ಕೂಡ ಆಲ್ ರೆಡಿ ಗಾಡಿ ಹತ್ತಿದ್ರು. ಬೇಗ ರೂಮ್ ತಲುಪುತ್ತೇವೆ, ಸುತ್ತ ಮುತ್ತ ಜಾಗನ ಓಪನ್ ಗಾಡೀಲಿ ಎಕ್ಸ್ಪ್ಲೋರ್ ಮಾಡ್ಬೋದು ಅಂತ ಜೋಶ್ ಅಲ್ಲಿ ಹೊರಟ್ವಿ. ಗಾಡಿ ಗಡ ಗಡ ಅಂತ ಶಬ್ದ ಮಾಡ್ತಾ ಸೆಟ್ ಇಂದ ಒಂದೆರಡು ಕಿಲೋ ಮೀಟರ್ ದೂರ ಬಂತು. “ಏನ್ ಗೊತ್ತಾ? ಇವ್ರು ಎಲ್ಲಿಗ್ ಕಕೊರ್ಂಡ್ ಹೋಗ್ತಿದ್ದಾರೆ? ನನ್ ಮೈಮೇಲೇ ಮಿನಿಮಮ್ ಮೂರು ಲಕ್ಷ ಚಿನ್ನ ಇದೆ” ಕಿರಣ್ ಗುಟ್ಟಾಗಿ ಹೇಳಿದ್ ತಕ್ಷಣ ನನ್ ಎದೆ ಧಸಕ್ ಅನಿಸಿತು. ನೋಡಿದರೆ ಗಾಡಿ ಎಲ್ಲೋ ಆಫ್ ರೋಡ್ ಹೋಗ್ತಿದೆ. ಗಾಡಿಯಲ್ಲಿ ಒಬ್ಬ ಕನ್ನಡ ಮಾತಾಡೋನಿದ್ದ ಅಂತ ಅವನ ಹತ್ತಿರ ಮಾತಾಡಿಕೊಂಡು ಹೊರಟಿದ್ವಿ ನೋಡಿದ್ರೆ ಸ್ವಲ್ಪ ಹೊತ್ತಿನ ಮೇಲೆ ಗೊತ್ತಾಯ್ತು ಅವನು ಕುಡಿದಿದ್ದ ಅಂತ. ಇದನ್ನು ಓದಿ: ಶಿವರಾಜ್‍ಕುಮಾರ್ ಬಳಿ ಸಹಾಯಕ್ಕೆ ಅಂಗಲಾಚಿದ ನಟಿ ವಿಜಯಲಕ್ಷ್ಮಿ

    ರಾಮೋಜಿ ಫಿಲ್ಮ್ ಸಿಟಿಯ ಮಾಮೂಲಿ ರೋಡ್ ಬಿಟ್ಟು ಕತ್ತಲೇಲಿ ನಮ್ಮನ್ನ ಎಲ್ಲಿಗೆ ಕಕೊರ್ಂಡ್ ಹೋಗ್ತಿದ್ದಾರೆ? ಮುಂದೆ ಕೂತಿರೋ ಡ್ರೈವರ್ ಗೊತ್ತಿರೀದಿರ್ಲಿ ಅವರ ಮುಖಾನೂ ನೋಡಿಲ್ಲ! ನಮೆಗೇನಾದ್ರು ಮಾಡ್ಬಿಡ್ತಾರಾ? ಹೊರ ರಾಜ್ಯದಲ್ಲಿ, ಗೊತ್ತಿಲ್ದೇರೋ ಗಾಡೀಲಿ ಗೊತ್ತೂ ಗುರಿ ಇಲ್ದೇ ಹೊರಟಿದ್ದೀವಿ, ಏನಪ್ಪಾ ಗತಿ ಅಂತ ಹೆದರಿಕೊಂಡು ಈ ವಿಡಿಯೋ ಮಾಡಿದ್ದು, ಕ್ರೈಮ್ ಇನ್ವೆಸ್ಟಿಗೇಶನ್ ನಡೀವಾಗ ಪ್ರೂಫ್‍ಗೇ ಅಂತ ವೀಡೀಯೋ ಸಿಗುತ್ತಲ್ಲ? ಆತರ! ಟೈಟಲ್ ಕಾರ್ಡ್ ಚೇಂಜ್ ಮಾಡಿ ಅಂತ ಎಲ್ರೂ ಕೇಳ್ತಿದ್ರು, ಟೈಟಲ್ ಕಾರ್ಡ್ ಅಲ್ಲಿರೋರನ್ನ ಚೇಂಜ್ ಮಾಡೋ ಪರಿಸ್ಥಿತಿ ತಂದುಕೊಂಡು ಬಿಟ್ವಾ ಗುರು ಅಂತ ಹೆವೀ ಭಯ ಆಯ್ತು. ಮುಂದೇನಾಯ್ತು? ಭಾಗ ಎರಡರಲ್ಲಿ ನಿರೀಕ್ಷಿಸಿ! ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

    ಒಟ್ಟಾರೆ ಈ ಸಸ್ಪೆನ್ಸ್ ಥ್ರಿಲ್ಲರ್ ಸ್ಟೋರಿ ಇಲ್ಲಿಗೆ ಮುಗಿದಿಲ್ಲ ಇದರ ಮುಂದುವರೆದ ಭಾಗ ಇನ್ನೂ ಇದೆ ಎಂದು ರಂಜನಿ ರಾಘವನ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ. ಸದ್ಯ ಈ ಕಥೆಯ ಮುಂದುವರೆದ ಭಾಗದಲ್ಲಿ ಏನು ಹೇಳಬಹುದು ಎಂದು ಕಾದುನೋಡಬೇಕಾಗಿದೆ.

  • ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಪುಟ್ಟಗೌರಿ

    ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಪುಟ್ಟಗೌರಿ

    ಬೆಂಗಳೂರು: ಬಿಗ್ ಬಾಸ್ ಮನೆಗೆ ‘ಪುಟ್ಟಗೌರಿ ಮದುವೆ’ ಧಾರಾವಾಹಿ ಖ್ಯಾತಿಯ ನಟಿ ರಂಜಿನಿ ರಾಘವನ್ ಎಂಟ್ರಿ ಕೊಟ್ಟಿದ್ದಾರೆ

    ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ರಂಜಿನಿ ಬಿಗ್ ಮನೆಯನ್ನು ಪ್ರವೇಶಿಸಿದ್ದಾರೆ. ಈ ವೇಳೆ ಸ್ಪರ್ಧಿಗಳು ರಂಜಿನಿ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ ರಂಜಿನಿ ಸ್ಪರ್ಧಿಗಳಿಗೆ ಕರ್ನಾಟಕ ಜಿಲ್ಲೆಯ ಬಗ್ಗೆ ಪಾಠ ಮಾಡಿದ್ದಾರೆ. ಜೊತೆಗೆ ಸ್ಪರ್ಧಿಗಳು ಮಾಡಿದ ಅಕ್ಷರ ತಪ್ಪುಗಳನ್ನು ಸರಿಪಡಿಸಿದ್ದಾರೆ. ರಂಜಿನಿ ಜೊತೆ ಮನೆಯ ಸದಸ್ಯರು ಖುಷಿಯಿಂದ ಕಾಲ ಕಳೆದಿರುವುದು ಪ್ರೋಮೋದಲ್ಲಿ ಕಾಣಬಹುದು.

    ಈ ಕಾರ್ಯಕ್ರಮ ಶುರುವಾಗುವ ಮೊದಲು ರಂಜಿನಿ ಅವರಿಗೆ ಬಿಗ್ ಬಾಸ್ ಆಫರ್ ನೀಡಲಾಗಿತ್ತು. ಆದರೆ ಸಿನಿಮಾ ಹಾಗೂ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಕಾರಣ ರಂಜನಿ ಈ ಆಫರ್ ಅನ್ನು ನಿರಾಕರಿಸಿದರು. ಆದರೆ ಈಗ ರಂಜಿನಿ ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಎಂಟ್ರಿ ಕೊಡುವುದರ ಮೂಲಕ ಎಲ್ಲರಿಗೂ ಸರ್ಪ್ರೈಸ್ ನೀಡಿದ್ದಾರೆ. ಸದ್ಯ ರಂಜಿನಿ ಅವರು ತಮ್ಮ ಧಾರಾವಾಹಿಯನ್ನು ಪ್ರಮೋಟ್ ಮಾಡಲು ಬಿಗ್ ಮನೆಗೆ ಪ್ರವೇಶಿಸಿದ್ದಾರೆ.

    ರಂಜಿನಿ, ಪುಟ್ಟಗೌರಿ ಮದುವೆ ಧಾರಾವಾಹಿ ನಂತರ ಕನ್ನಡತಿ ಸೀರಿಯಲ್ ಮೂಲಕ ಕಿರುತೆರೆಗೆ ರೀ-ಎಂಟ್ರಿ ಮಾಡುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ರಂಜಿನಿ ಕನ್ನಡ ಉಪನ್ಯಾಸಕಿಯಾಗಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಇದೇ ಸೋಮವಾರದಿಂದ ಶುರುವಾಗಲಿದೆ.

  • ಕಿರುತೆರೆ ವೀಕ್ಷಕರಿಗೆ ಬಿಗ್ ಶಾಕಿಂಗ್ ನ್ಯೂಸ್

    ಕಿರುತೆರೆ ವೀಕ್ಷಕರಿಗೆ ಬಿಗ್ ಶಾಕಿಂಗ್ ನ್ಯೂಸ್

    ಬೆಂಗಳೂರು: ಕಿರುತೆರೆ ವೀಕ್ಷಕರಿಗೆ ಒಂದು ಬಿಗ್ ಶಾಕಿಂಗ್ ನ್ಯೂಸ್ ಕಾದಿದೆ. ಇನ್ನೊಂದೇ ತಿಂಗಳು ನಿಮಗೆ ಪುಟ್ಟಗೌರಿಯ ದರ್ಶನ ದೊರೆಯಲಿದೆ.

    ಪುಟ್ಟಗೌರಿ ಎಂದೇ ನಟಿ ರಂಜಿನಿ ರಾಘವನ್ ಜನರ ಮನಸ್ಸನ್ನು ಗೆದ್ದಿದ್ದರು. ಆದರೆ ಈಗ ಅವರು ಪುಟ್ಟಗೌರಿ ಧಾರಾವಾಹಿಯಿಂದ ಹೊರಬರುತ್ತಿದ್ದಾರೆ. ರಂಜಿನಿ ತಮ್ಮ ನಾಲ್ಕುವರೆ ವರ್ಷಗಳ ಸೀರಿಯಲ್ ಜರ್ನಿಗೆ ಬ್ರೇಕ್ ಹಾಕಲಿದ್ದಾರೆ. ಸದ್ಯ ಈ ತಿಂಗಳ ಕೊನೆಯವರೆಗೆ ಮಾತ್ರ ರಂಜಿನಿ ಪುಟ್ಟಗೌರಿ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಕನ್ನಡ ಪ್ರೇಕ್ಷಕರಿಗೆ ಪುಟ್ಟಗೌರಿ ಕಡೆಯಿಂದ ಗುಡ್ ನ್ಯೂಸ್

    ಪುಟ್ಟಗೌರಿ ಮದುವೆ ಕಿರುತೆರೆಯಲ್ಲಿ ನಂಬರ್ 1 ಧಾರಾವಾಹಿ ಆಗಿತ್ತು. ರಂಜಿನಿ ಒಂದು ಎಪಿಸೋಡ್‍ಗೆ ಸುಮಾರು 7 ರಿಂದ 8 ಸಾವಿರ ಸಂಭಾವನೆ ಪಡೆಯುತ್ತಿದ್ದರು. ಅಲ್ಲದೇ ಕನ್ನಡ ನಟಿಯರಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಕನ್ನಡದ ಕಿರುತೆರೆ ನಟಿ ಎಂದು ಕರೆಸಿಕೊಳ್ಳುತ್ತಿದ್ದರು.

    ರಂಜಿನಿ ರಾಘವನ್ ಪುಟ್ಟಗೌರಿ ಧಾರಾವಾಹಿಗಾಗಿ ಕುದುರೆ ಸವಾರಿ ಸಹ ಕಲಿತಿದ್ದರು. ಅಲ್ಲದೇ ಪುಟ್ಟುಗೌರಿ ಮದುವೆ ಧಾರಾವಾಹಿಯಲ್ಲಿ ನಡುವೆಯೇ ‘ರಾಜಹಂಸ’ ಚಿತ್ರದಲ್ಲಿ ನಟಿಸಿದ್ದರು. ಸದ್ಯ ಈಗ ರಂಜಿನಿ ಪುಟ್ಟಗೌರಿ ಧಾರಾವಾಹಿಯಿಂದ ಹೊರಬಂದಿದ್ದು, ಎಲ್ಲರಿಗೂ ಅನುಮಾನ ಹುಟ್ಟಿಸಿದೆ. ರಂಜಿನಿ ಬಿಗ್ ಬಾಸ್ ಮನೆಗೆ ಹೋಗಲು ಸೀರಿಯಲ್ ತೊರೆದರಾ ಎಂಬ ಅನುಮಾನ ಶುರುವಾಗಿದೆ. ಇದೇ ಅಕ್ಟೋಬರ್ 21ರಿಂದ ಬಿಗ್ ಬಾಸ್ ರಿಯಾಲಿಟಿ ಶೋ ಶುರುವಾಗುತ್ತಿದೆ. ಬಿಗ್ ಬಾಸ್ ಮನೆಗೆ ಹೋಗುವುದರ ಬಗ್ಗೆ ರಂಜಿನಿ ಗುಟ್ಟು ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಹುಟ್ಟು ಹಾಕಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ರಂಜಿನಿ ಸಿನಿಮಾದತ್ತ ಗಮನ ಹರಿಸುವ ಸಲುವಾಗಿ ಧಾರಾವಾಹಿಯಿಂದ ಹೊರಬಂದಿದ್ದೇನೆ ಎಂದು ಹೇಳಿದ್ದಾರೆ. ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂಬಂಧಿ ಮನೋಜ್ ನಟನೆಯ ‘ಟಕ್ಕರ್’ ಚಿತ್ರದಲ್ಲಿ ರಂಜಿನಿ ನಾಯಕಿಯಾಗಿ ನಟಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭರ್ಜರಿ ರೆಸ್ಪಾನ್ಸ್- ಕೋಟಿಯ ಕದ ತಟ್ಟಿದ ರಾಜಹಂಸ

    ಭರ್ಜರಿ ರೆಸ್ಪಾನ್ಸ್- ಕೋಟಿಯ ಕದ ತಟ್ಟಿದ ರಾಜಹಂಸ

    ಬೆಂಗಳೂರು: ಕಳೆದ ಶುಕ್ರವಾರ ಬಿಡುಗಡೆಗೊಂಡ ಹೊಸಬರ ಚಿತ್ರ `ರಾಜಹಂಸ’ ಗೆ ಪ್ರೇಕ್ಷಕ ಅಭಿಮಾನಿಗಳಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡು ಮುನ್ನಗ್ಗುತ್ತಿದೆ. ಈಗಾಗಲೇ ಕೇವಲ ಮೂರು ದಿನಗಳಲ್ಲಿ ಸಿನಿಮಾ 1 ಕೋಟಿ ರೂ. ಹಣವನ್ನು ಗಳಿಸಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

    ರವಿವಾರದಿಂದ ಪ್ರೇಕ್ಷಕರ ಮೆಚ್ಚುಗೆ ಗಳಿಸುವ ಮೂಲಕ ಸಿನಿಮಾ ದಿನದಿಂದ ದಿನಕ್ಕೆ ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಪುಟ್ಟಗೌರಿ ಖ್ಯಾತಿಯ ರಂಜಿನಿ ರಾಘವನ್ ತಮ್ಮ ಅಭಿಮಾನಿ ಬಳಗವನ್ನು ಸೆಳೆಯುವಲ್ಲಿ ಸಫಲರಾಗಿದ್ದಾರೆ. ಧಾರವಾಹಿ ಮೂಲಕವೇ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದು, ಚಿತ್ರದ ಗೆಲುವಿಗೆ ಕಾರಣವೆಂದು ಎಂದು ಹೇಳಬಹುದಾಗಿದೆ.

    ರಾಜ್ಯದಲ್ಲಿ ನೂರಕ್ಕೂ ಹೆಚ್ಚು ಥಿಯೇಟರ್ ನಲ್ಲಿ ತೆರೆ ಕಂಡಿರುವ ರಾಜಹಂಸ ಚಲನ ಚಿತ್ರ ಬಾಡಿಗೆ ಸೇರಿ ಒಟ್ಟು 2.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಹೊಸಬರ ಚಿತ್ರವಾದ ನಮ್ಮನ್ನು ಅಭಿಮಾನಿಗಳು ಮೆಚ್ಚಿದ್ದಕ್ಕೆ ಚಿತ್ರತಂಡ ಸಂತಸ ವ್ಯಕ್ತಪಡಿಸಿದೆ

    ಇನ್ನೂ ಸಿನಿಮಾದಲ್ಲಿ ರಂಜಿನಿ (ಹಂಸಾಕ್ಷಿ)ಗೆ ಜೊತೆಯಾಗಿ ಗೌರಿಶಿಕರ್ ನಾಯಕರಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಶ್ರೀಧರ್, ಬಿ.ಸಿ.ಪಾಟೀಲ್, ಯಮುನಾ, ತಬಲಾ ನಾಣಿ, ವಿಜಯ್ ಚಂಡೂರ್, ಬುಲೆಟ್ ಪ್ರಕಾಶ್ ಸೇರಿದಂತೆ 70ಕ್ಕೂ ಹೆಚ್ಚು ಕಲಾವಿದರು ನಟಿಸಿದ್ದಾರೆ. ನಾಯಕನ ತಂದೆಯಾಗಿ ನಟ ಶ್ರೀಧರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ.

    ಸಿನಿಮಾದಲ್ಲಿ ಒಟ್ಟು 6 ಹಾಡುಗಳಿವೆ. ಈಗಾಗಲೇ ಹಾಡುಗಳು ಎಲ್ಲರ ಮನದಲ್ಲಿ ಗುನುಗುಟ್ಟುತ್ತಿವೆ. ಬಾರಮ್ಮ ಬಾರಮ್ಮ ಭಾರತಿ, ಮುಲಾ ಮುಲಾ ಸೇರಿದಂತೆ ಎಲ್ಲ ಹಾಡುಗಳು ಸಿನಿರಸಿಕರ ಮನ ಸೆಳೆಯುತ್ತಿದ್ದು, ಯುಟ್ಯೂಬ್ ನಲ್ಲಿ ಟ್ರೆಂಡ್ ಸೃಷ್ಟಿ ಮಾಡಿವೆ. ರಘು ದೀಕ್ಷಿತ್ ಹಾಡಿರುವ ಹಾಡನ್ನು ಉತ್ತರ ಭಾರತದ ಒಟ್ಟು 8 ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನೂ ಬಾರಮ್ಮ ಬಾರಮ್ಮ ಹಾಡು ಚಂದನ್ ಶೆಟ್ಟಿ ಧ್ವನಿಯಲ್ಲಿ ಮೂಡಿಬಂದಿದೆ.

     

     

  • ‘ರಾಜಹಂಸ’ದ ಹೀರೋ ರಾಜಸ್ಥಾನ ಪೊಲೀಸ್ ವಶಕ್ಕೆ – ಅಲ್ಲಿಂದ ವಾಪಸ್ ಬಂದ ಕತೆ ಓದಿ!

    ‘ರಾಜಹಂಸ’ದ ಹೀರೋ ರಾಜಸ್ಥಾನ ಪೊಲೀಸ್ ವಶಕ್ಕೆ – ಅಲ್ಲಿಂದ ವಾಪಸ್ ಬಂದ ಕತೆ ಓದಿ!

    ಬೆಂಗಳೂರು: ಕನ್ನಡದ `ರಾಜಹಂಸ’ ಸಿನಿಮಾದ ನಾಯಕ ನಟ ಗೌರಿ ಶಿಕರ್ ಅವರನ್ನು ಜೈಪುರದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡು ನಂತರ ಬಿಡುಗಡೆಗೊಳಿಸಿದ್ರಂತೆ. ಹೌದು, ರಾಜಹಂಸದ ಚಿತ್ರತಂಡ ಚಿತ್ರೀಕರಣಕ್ಕಾಗಿ ರಾಜಸ್ಥಾನದ ಜೈಪುರ ನಗರಕ್ಕೆ ತೆರಳಿತ್ತು. ಈ ವೇಳೆ ಜೈಪುರನ ಐತಿಹಾಸಿಕ ಕೋಟೆಯ ಒಳಭಾಗದಲ್ಲಿ ಚಿತ್ರೀಕರಣ ಮುಗಿಸಿಕೊಂಡು ಬರುವಾಗ ಪೊಲೀಸರು ನಾಯಕ ಗೌರಿಶಿಕರ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ನಂತರ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ವಾಪಸ್ ಕಳುಹಿಸಿದ್ದಾರೆ.

    ಏನಾಗಿತ್ತು?: ಜೈಪುರ ಕೋಟೆಯಲ್ಲಿ ಶೂಟಿಂಗ್ ಮುಗಿದ ಬಳಿಕ ಚಿತ್ರತಂಡ ಹೊರ ನಡೆದಿತ್ತು. ಕೊನೆಯಲ್ಲಿ ಉಳಿದ ನಾಯಕ ನಟ ಗೌರಿ ಶಿಕರ್‍ ಹೊರ ಹೋಗುವಷ್ಟರಲ್ಲಿ ಇಡೀ ಚಿತ್ರತಂಡ ಹೊರಟಿತ್ತು. ಇನ್ನೇನು ಹೊರಡುವಷ್ಟರಲ್ಲಿ ಬಂದ ಪೊಲೀಸರು ಕೋಟೆಯ ಪ್ರವೇಶದ ಟಿಕೆಟ್ ಕೇಳಿದ್ದಾರೆ. ಈ ವೇಳೆ ಗೌರಿ ಶಿಖರ್ ತಾವು ಸಿನಿಮಾ ಶೂಟಿಂಗ್ ಗಾಗಿ ಬಂದು ಚಿತ್ರತಂಡದ ಸದಸ್ಯರು ಮುಂದೆ ಹೋಗಿದ್ದು, ಹಾಗಾಗಿ ತಮ್ಮ ಬಳಿ ಟಿಕೆಟ್ ಇಲ್ಲವೆಂದು ತಿಳಿಸಿದ್ದಾರೆ.

    ಗೌರಿಶಿಕರ್ ತಾವು ಬಂದ ಉದ್ದೇಶವನ್ನು ಪೊಲೀಸರಿಗೆ ತಿಳಿಸಿದ್ರೂ, ಬೇರೆ ಭಾಷೆಯಾಗಿದ್ದರಿಂದ ಅರ್ಥವಾಗಿಲ್ಲ. ಹಾಗಾಗಿ ನನ್ನನ್ನು ನಾಲ್ಕು ಗಂಟೆಗಳ ಕಾಲ ಠಾಣೆಯಲ್ಲಿ ಕೂರಿಸಲಾಯಿತು. ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಬಂದಾಗ ಮೊಬೈಲ್ ನಲ್ಲಿ ಸಿನಿಮಾದ ಟೀಸರ್ ತೋರಿಸಿದಾಗ ನನ್ನನ್ನು ಬಿಟ್ಟು ಬಿಟ್ಟರು ಎಂದು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ನಟ ಗೌರಿಶಿಕರ್ ಹೇಳಿದ್ದಾರೆ.

    ಇದನ್ನೂ ಓದಿ: ನಿಮ್ಗೆ ಸೆಲ್ಫೀ ಕ್ರೇಝ್ ಇದ್ರೆ ಸೆಪ್ಟೆಂಬರ್ 8ಕ್ಕೆ ‘ರಾಜಹಂಸ’ ನೋಡಿ

    ಪೀ..ಪೀ..ಸಾಂಗ್ ಕೇಳಿ: ಈಗಾಗಲೇ ಟ್ರೇಲರ್ ಮತ್ತು ಹಾಡುಗಳಿಂದ ಗಮನ ಸೆಳೆದಿರುವ `ರಾಜಹಂಸ’ ಯುಟ್ಯೂಬ್ ನಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದೆ. ಹಳ್ಳಿ ಬೇರುಗಳು ಮತ್ತು ನಗರದ ಚಿಗುರುಗಳು ಜೊತೆಗೂಡಿ ಹ್ಯಾಪಿ ಅನ್ನೋ ಪೀಪಿ ಊದ್ತಾ ಕುಣಿದು ಕುಪ್ಪಳಿಸೋ ಪಕ್ಕಾ ಫ್ಯಾಮಿಲಿ ಹಾಡು ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ ತನ್ನ ಸಂಗೀತದ ಅಲೆಗಳನ್ನು ಹರಿಸಿದೆ. ಜಾತ್ರೆಯ ಸನ್ನಿವೇಶವನ್ನು ಒಳಗೊಂಡಿರುವ ಪೀ..ಪೀ.. ಹಾಡಿನಲ್ಲಿ ಸಿನಿಮಾದ ಇಡೀ ಚಿತ್ರತಂಡ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.

    ನಗರದ ಹುಡುಗ ಮತ್ತು ಹಳ್ಳಿ ಹುಡುಗಿಯ ಕುಟುಂಬಸ್ಥರು ದೇವರ ಸನ್ನಿಧಿಯಲ್ಲಿ ಒಂದಾಗಿ ಪೂಜೆ ಸಲ್ಲಿಸುವ ವಿಶೇಷ ಹಾಡು ಇದಾಗಿದೆ. ಹಾಡಿನ ಲಿರಿಕ್ಸ್ ಮಾತ್ರ ಅರ್ಥಪೂರ್ಣವಾಗಿದ್ದು, ಗ್ರಾಮೀಣ ಮತ್ತು ನಗರದ ಜೀವನ ಶೈಲಿಯನ್ನು ಹೇಳುತ್ತದೆ. ಹಾಡಿನ ಸಂಗೀತವೂ ಚೆನ್ನಾಗಿದ್ದು ಕೇಳುಗರನ್ನು ಸಹ ನಾಲ್ಕು ಸ್ಟೆಪ್ ಹಾಕುವಂತೆ ಮಾಡುತ್ತದೆ.

    ಧಾರಾವಾಹಿ ಮೂಲಕ ಕನ್ನಡಿಗರ ಮನೆ ಮಾತಾಗಿರುವ ಪುಟ್ಟ ಗೌರಿ (ರಂಜಿನಿ ರಾಘವನ್) ಮೊದಲ ಬಾರಿಗೆ ಬೆಳ್ಳಿ ಪರದೆಯಲ್ಲಿ ಮಿಂಚಲಿದ್ದಾರೆ. ಇನ್ನೂ ಸಿನಿಮಾದಲ್ಲಿ ರಂಜಿನಿ (ಹಂಸಾಕ್ಷಿ)ಗೆ ಜೊತೆಯಾಗಿ ಗೌರಿಶಿಕರ್ ನಾಯಕರಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಶ್ರೀಧರ್, ಬಿ.ಸಿ.ಪಾಟೀಲ್, ಯಮುನಾ, ತಬಲಾ ನಾಣಿ, ವಿಜಯ್ ಚಂಡೂರ್, ಬುಲೆಟ್ ಪ್ರಕಾಶ್ ಸೇರಿದಂತೆ 70ಕ್ಕೂ ಹೆಚ್ಚು ಕಲಾವಿದರು ನಟಿಸಿದ್ದಾರೆ. ನಾಯಕನ ತಂದೆಯಾಗಿ ನಟ ಶ್ರೀಧರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

    ಇದನ್ನೂ ಓದಿ:  ಸೀನು, ಲವ್ ಎರಡನ್ನೂ ಕಂಟ್ರೋಲ್ ಮಾಡೋದು ಹೇಗೆ?

    ಸಿನಿಮಾದಲ್ಲಿ ಒಟ್ಟು 6 ಹಾಡುಗಳಿವೆ. ಈಗಾಗಲೇ ಹಾಡುಗಳು ಎಲ್ಲರ ಮನದಲ್ಲಿ ಗುನುಗುಟ್ಟುತ್ತಿವೆ. ಬಾರಮ್ಮ ಬಾರಮ್ಮ ಭಾರತಿ, ಮುಲಾ ಮುಲಾ ಸೇರಿದಂತೆ ಎಲ್ಲ ಹಾಡುಗಳು ಸಿನಿರಸಿಕರ ಮನ ಸೆಳೆಯುತ್ತಿದ್ದು, ಯುಟ್ಯೂಬ್ ನಲ್ಲಿ ಟ್ರೆಂಡ್ ಸೃಷ್ಟಿ ಮಾಡಿವೆ. ರಘು ದೀಕ್ಷಿತ್ ಹಾಡಿರುವ ಹಾಡನ್ನು ಉತ್ತರ ಭಾರತದ ಒಟ್ಟು 8 ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನೂ ಬಾರಮ್ಮ ಬಾರಮ್ಮ ಹಾಡು ಚಂದನ್ ಶೆಟ್ಟಿ ಧ್ವನಿಯಲ್ಲಿ ಮೂಡಿಬಂದಿದೆ. ಸಿನಿಮಾ ಸೆಪ್ಟೆಂಬರ್ 8ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಿಗೆ ಲಗ್ಗೆಯಿಡಲಿದೆ.