Tag: ರಂದೀಪ್

  • ಅಡ್ಡಕತ್ತರಿಯಲ್ಲಿ ಐಎಎಸ್ ಅಧಿಕಾರಿ: ಸಿಎಂ-ರೋಹಿಣಿ ಸಿಂಧೂರಿ ನಡುವಿನ ತಿಕ್ಕಾಟದಲ್ಲಿ ಅತಂತ್ರರಾದ ಡಿ.ರಂದೀಪ್

    ಅಡ್ಡಕತ್ತರಿಯಲ್ಲಿ ಐಎಎಸ್ ಅಧಿಕಾರಿ: ಸಿಎಂ-ರೋಹಿಣಿ ಸಿಂಧೂರಿ ನಡುವಿನ ತಿಕ್ಕಾಟದಲ್ಲಿ ಅತಂತ್ರರಾದ ಡಿ.ರಂದೀಪ್

    ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ರೋಹಿಣಿ ಸಿಂಧೂರಿ ನಡುವಿನ ತಿಕ್ಕಾಟದಲ್ಲಿ ಐಎಎಸ್ ಅಧಿಕಾರಿ ಡಿ.ರಂದೀಪ್ ಅತಂತ್ರರಾಗಿದ್ದಾರೆ. ಮೈಸೂರಿನಲ್ಲೂ ಇರಲಾರದೆ ಹಾಸನಕ್ಕೂ ತೆರಳಲಾಗದೆ ನಿರ್ಗಮಿತ ಡಿಸಿ ರಂದೀಪ್ ಕಂಗಾಲಾಗಿದ್ದಾರೆ.

    ವಾರದ ಹಿಂದೆ ಐಎಎಸ್ ಅಧಿಕಾರಿಗಳ ವರ್ಗವಣೆಯಲ್ಲಿ ಹಾಸನ ಡಿಸಿಯಾಗಿ ಡಿ.ರಂದೀಪ್ ವರ್ಗಾವಣೆಯಾಗಿದ್ದರು. ಹಾಸನದ ಡಿಸಿ ರೋಹಿಣಿ ಸಿಂಧೂರಿಯವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಆದ್ರೆ ತಮ್ಮ ವರ್ಗಾವಣೆಯನ್ನ ಪ್ರಶ್ನಿಸಿ ರೋಹಿಣಿ ಸಿಂಧೂರಿ ತಡೆಯಾಜ್ಞೆ ತಂದಿದ್ದು, ಮಾರ್ಚ್ 21ರವರೆಗು ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರೆಯುವಂತೆ ತಡೆಯಾಜ್ಞೆ ಆದೇಶಿಸಿದೆ.

    ಆದ್ರೆ ಅತ್ತ ಮೈಸೂರಿಗೆ ನೂತನ ಜಿಲ್ಲಾಧಿಕಾರಿ ಶಿವಕುಮಾರ್ ಆಗಮಿಸಿದ್ದು, ರಂದೀಪ್‍ಗೆ ಮೈಸೂರೂ ಇಲ್ಲದೆ ಹಾಸನವೂ ಇಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಐಎಎಸ್ ಅಧಿಕಾರಿಗೇ ತಮ್ಮ ಕೆಲಸದ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ತಿಲ್ಲ. ಹೀಗಾಗಿ ಡಿಪಿಆರ್‍ಗೆ ನಿರ್ಗಮಿತ ಡಿಸಿ ಡಿ.ರಂದೀಪ್ 2 ಪತ್ರವನ್ನು ಬರೆದಿದ್ದು, ಐಎಎಸ್ ಅಧಿಕಾರಿಯ ಪತ್ರಕ್ಕೂ ಹಿರಿಯ ಅಧಿಕಾರಿಗಳು ಸ್ಪಂದಿಸಿಲ್ಲ.

    ಈ ಹಿನ್ನೆಲೆಯಲ್ಲಿ ಅತ್ತ ಇತ್ತ ಎಲ್ಲಿಯೂ ಇಲ್ಲದೆ ಡಿ.ರಂದೀಪ್ ಖಾಲಿ ಕುಳಿತಿದ್ದಾರೆ. ಸದ್ಯ ಮೈಸೂರಿನ ತಮ್ಮ ಅಧಿಕೃತ ನಿವಾಸದಲ್ಲಿ ನೆಚ್ಚಿನ ನಾಯಿಗಳೊಂದಿಗೆ ಕಾಲ ಕಳೆಯುತ್ತಿದ್ದಾರೆ. ಶೀಘ್ರದಲ್ಲೇ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕೃತ ನಿವಾಸ ಬಿಟ್ಟುಕೊಡಬೇಕಿದೆ.

    ಮಾರ್ಚ್ 21ರವರೆಗು ಐಎಎಸ್ ಅಧಿಕಾರಿ ಡಿ.ರಂದೀಪ್ ಅತಂತ್ರವಾಗಿಯೇ ಇರುವ ಪರಿಸ್ಥಿತಿ ಎದುರಾಗಿದೆ.

  • ಸತ್ತವರ ಓಟುಗಳನ್ನು ಹಾಕಿ ನನ್ನ ಗೆಲ್ಲಿಸಿದ್ದಾರೆ ಎಂದಿದ್ದ ಸಿಎಂ ವಿರುದ್ಧ ವರ್ಷವಾದ್ರೂ ಇಲ್ಲ ತನಿಖೆ- ಕಾನೂನು ಮರೆತ್ರಾ ಮೈಸೂರು ಡಿಸಿ?

    ಸತ್ತವರ ಓಟುಗಳನ್ನು ಹಾಕಿ ನನ್ನ ಗೆಲ್ಲಿಸಿದ್ದಾರೆ ಎಂದಿದ್ದ ಸಿಎಂ ವಿರುದ್ಧ ವರ್ಷವಾದ್ರೂ ಇಲ್ಲ ತನಿಖೆ- ಕಾನೂನು ಮರೆತ್ರಾ ಮೈಸೂರು ಡಿಸಿ?

    ಮೈಸೂರು: ಸತ್ತವರ ಓಟುಗಳನ್ನು ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ ಎಂದಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ವರ್ಷವಾದ್ರೂ ಯಾವುದೇ ಕ್ರಮ ಕೈಗೊಳ್ಳದೆ ಮೈಸೂರು ಜಿಲ್ಲಾಧಿಕಾರಿ ರಂದೀಪ್ ಕಾನೂನು ಮರೆತರಾ ಎಂಬ ಪ್ರಶ್ನೆ ಎದ್ದಿದೆ.

    ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ, ಸತ್ತವರ ಓಟುಗಳನ್ನು ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ ಅಂದಿದ್ರು. ಇದು ಭಾರಿ ವಿವಾದಕ್ಕೆ ಕಾರಣವಾದ ಬಳಿಕ ಸಾಮಾಜಿಕ ಕಾರ್ಯರ್ತ ಮರಿಲಿಂಗೇಗೌಡ ಮಾಲಿಪಾಟೀಲ್ ಸಿಎಂ ಶಾಸಕತ್ವ ರದ್ದುಪಡಿಸಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ರು.

    ಅದರಂತೆ 2016ರ ಅಕ್ಟೋಬರ್ ತಿಂಗಳಲ್ಲಿ ತನಿಖೆ ನಡೆಸುವಂತೆ ಚುನಾವಣಾ ಆಯೋಗ ಡಿಸಿಗೆ ಪತ್ರ ಬರೆದಿತ್ತು. ಆದ್ರೆ ಮೈಸೂರು ಡಿಸಿ ರಂದೀಪ್ ತನಿಖೆ ನಡೆಸದೆ ಉಪವಿಭಾಗಾಧಿಕಾರಿಗೆ ಪತ್ರ ಬರೆದಿದ್ರು. ಉಪವಿಭಾಗಾಧಿಕಾರಿಯೂ ಕೂಡ ತಹಶೀಲ್ದಾರ್ ಗೆ ಪತ್ರ ಬರೆದು ಸುಮ್ಮನಾಗಿದ್ದಾರೆ. ಒಟ್ನಲ್ಲಿ ದೂರು ನೀಡಿ ವರ್ಷವಾದ್ರೂ ಡಿಸಿ ಕೈಕಟ್ಟಿ ಕುಳಿತಿರೋದು ಯಾಕೆ ಅನ್ನೋ ಪ್ರಶ್ನೆ ಮೂಡಿದೆ.

  • ಹುಣಸೂರು ಹನುಮ ಜಯಂತಿ ಪ್ರಕರಣ: ಪರಿಸ್ಥಿತಿ ನಿಯಂತ್ರಣಕ್ಕೆ ಕನಿಷ್ಠ ಬಲ ಪ್ರಯೋಗವಾಯ್ತು ಎಂದು ಡಿಸಿ ಸ್ಪಷ್ಟನೆ

    ಹುಣಸೂರು ಹನುಮ ಜಯಂತಿ ಪ್ರಕರಣ: ಪರಿಸ್ಥಿತಿ ನಿಯಂತ್ರಣಕ್ಕೆ ಕನಿಷ್ಠ ಬಲ ಪ್ರಯೋಗವಾಯ್ತು ಎಂದು ಡಿಸಿ ಸ್ಪಷ್ಟನೆ

    ಮೈಸೂರು: ಹುಣಸೂರಿನಲ್ಲಿ ಹನುಮ ಜಯಂತಿ ವೇಳೆ ಗಲಭೆ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಡಳಿತ ಘಟನೆ ಕುರಿತು ಸ್ಪಷ್ಟೀಕರಣ ನೀಡಿದೆ.

    ಜಿಲ್ಲಾಧಿಕಾರಿ ಡಿ.ರಂದೀಪ್ ಇಡೀ ಘಟನೆಯ ಸಂಪೂರ್ಣ ವಿವರ ನೀಡಿದ್ದು, ಜಯಂತಿ ಆಚರಣೆಯ ಸಂದರ್ಭದಲ್ಲಿ ತೆಗೆದುಕೊಂಡ ಕ್ರಮಗಳ ಮಾಹಿತಿ ಬಹಿರಂಗಪಡಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಗೃಹ ಕಾರ್ಯದರ್ಶಿಗಳ ನಡುವಿನ ಪತ್ರವ್ಯವಹಾರದ ಮಾಹಿತಿಯೂ ಬಹಿರಂಗವಾಗಿದೆ.

    ಮೆರವಣಿಗೆಗೆ ಅವಕಾಶವೇ ನೀಡಿಲ್ಲ ಅಂತ ಆರೋಪ ಮಾಡೋದು ಸರಿಯಲ್ಲ. ಎಲ್ಲವೂ ಕಾನೂನಿನ ರೀತಿಯಲ್ಲೆ ನಡೆದಿದೆ. ಆದ್ರೆ ಹನುಮ ಜಯಂತಿ ವೇಳೆ ನಿಗದಿತ ಸ್ಥಳದಿಂದ ನಿಗದಿತ ಸಮಯಕ್ಕೆ ಮೆರವಣಿಗೆ ಹೊರಟಿಲ್ಲ. ಪರಿಣಾಮ ಸ್ಥಳದಲ್ಲಿ ಹೆಚ್ಚಿನ ಜನ ಸೇರುವಂತಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಅಲ್ಲಿನ ಉಪವಿಭಾಗಾಧಿಕರಿಗಳು ಪೊಲೀಸರಿಗೆ ಮನವಿ ಮಾಡಿದ್ದಾರೆ. ಆಗ ಪೊಲೀಸರು ಕನಿಷ್ಠ ಬಲಪ್ರಯೋಗಿಸಿ ಗುಂಪು ಚದುರಿಸಿದ್ದಾರೆ. ಈ ಎಲ್ಲಾ ಕ್ರಮಗಳನ್ನ ಸಾರ್ವಜನಿಕ ಹಿತಾಸಕ್ತಿಯಿಂದ ತೆಗೆದುಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಿ. ರಂದೀಪ್ ಸ್ಪಷ್ಟೀಕರಣ ನೀಡಿದ್ದಾರೆ.

    ಈದ್ ಮಿಲಾದ್, ಹನುಮಜಯಂತಿ ಮೆರವಣಿಗೆಗೆ ತೆಗೆದುಕೊಂಡಿದ್ದ ಕ್ರಮಗಳ ಬಗ್ಗೆ ಜಿಲ್ಲಾಡಳಿತ ಮೂರು ದಾಖಲೆಗಳನ್ನ ಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ. ನಂತರ ಹನುಮಜಯಂತಿ ವಿಚಾರವಾಗಿ ಮೇಲ್ಮನವಿ ಸಲ್ಲಿಕೆ ಹಾಗೂ ಅದಕ್ಕೆ ಗೃಹಕಾರ್ಯದರ್ಶಿಗಳಿಂದ ಬಂದ ಉತ್ತರದ ಮಾಹಿತಿಯನ್ನೂ ಬಿಡುಗಡೆ ಮಾಡಿದ್ದು, ದಾಖಲೆಗಳ ಸಮೇತ ಜಿಲ್ಲಾಡಳಿತ ಸ್ಪಷ್ಟೀಕರಣ ನೀಡಿದೆ.