Tag: ರಕುಲ್ ಪ್ರೀತ್ ಸಿಂಗ್

  • ರಕುಲ್ ಮದುವೆಗೆ ಶುಭ ಹಾರೈಸಿದ ಪಿಎಂ ನರೇಂದ್ರ ಮೋದಿ

    ರಕುಲ್ ಮದುವೆಗೆ ಶುಭ ಹಾರೈಸಿದ ಪಿಎಂ ನರೇಂದ್ರ ಮೋದಿ

    ಬಾಲಿವುಡ್ ನಟಿ ರಕುಲ್ ಪ್ರೀತ್‌ ಸಿಂಗ್ (Rakul Preet Singh) ಮತ್ತು ಜಾಕಿ ಭಗ್ನಾನಿ (Jackky Bhagnani) ಜೋಡಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶುಭ ಹಾರೈಸಿದ್ದಾರೆ. ಇದೇ ಫೆ.21ರಂದು ಗೋವಾದಲ್ಲಿ ಅದ್ಧೂರಿಯಾಗಿ ಈ ಜೋಡಿ ಮದುವೆ ಆಗಿತ್ತು. ಮದುವೆಗೆ ಮೋದಿ ಶುಭ ಹಾರೈಸಿ ಪತ್ರ ಬರೆದಿದ್ದಾರೆ. ಅದನ್ನು ರಕುಲ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ಈ ಜೋಡಿಯ ಎರಡು ಸಂಪ್ರದಾಯದಂತೆ ವಿವಾಹ (Marriage) ನಡೆದಿದೆ. ಸಿಖ್ ಮತ್ತು ಸಿಂಧಿ ಶೈಲಿಯಲ್ಲಿ ರಕುಲ್- ಜಾಕಿ ಮದುವೆಯಾಗಿದ್ದಾರೆ ಎನ್ನಲಾಗಿದೆ. ಮದುವೆಯ ಶಾಸ್ತ್ರವೆಲ್ಲ ಫೆ.19ರಿಂದಲೇ ಆರಂಭವಾಗಿತ್ತು. ಫೆ.21ರಂದು ಗುರುಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ರಕುಲ್- ಜಾಕಿ ಜೋಡಿ ಮದುವೆಯಾಗಿದ್ದಾರೆ.

    ರಕುಲ್ ಮದುವೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್, ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ, ಅರ್ಜುನ್ ಕಪೂರ್ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದಾರೆ. ಇತ್ತೀಚೆಗಷ್ಟೇ 31ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ವೇಳೆ ತಮ್ಮ ವೈಯಕ್ತಿಕ ಜೀವನದ ಕುರಿತಾಗಿ ಕೆಲವು ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ತಮ್ಮ ಜನ್ಮದಿನವನ್ನು ಭರ್ಜರಿಯಾಗಿ ನಟಿ ರಕುಲ್ ಪ್ರೀತ್ ಸಿಂಗ್ ಸೆಲೆಬ್ರೇಟ್ ಮಾಡಿದ್ದರು.

     

    ಈ ಸಮಯದಲ್ಲಿ ರಕುಲ್ ಪ್ರೀತಿ ಸಿಂಗ್ ಅವರ ಬಾಯ್‌ಫ್ರೆಂಡ್ ನಟ- ನಿರ್ಮಾಪಕ ಜಾಕಿ ಭಗ್ನಾನಿ ಫೋಟೋ ಶೇರ್ ಮಾಡಿ, ನೀನಿಲ್ಲದೆ ದಿನಗಳು ಎಂದಿನಂತೆ ದಿನಗಳಾಗಿರುವುದಿಲ್ಲ. ನೀನಿಲ್ಲದೆ ಎಂಥಾ ರುಚಿಕರ ತಿನಿಸನ್ನೂ ಆಸ್ವಾದಿಸಲಾಗುವುದಿಲ್ಲ. ನನ್ನ ಪಾಲಿಗೆ ಜಗತ್ತೇ ಆಗಿರುವ ಪ್ರೀತಿಯ ಪ್ರಿಯತಮೆಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಈ ದಿನ ನಿಮ್ಮಂತೆಯೇ ಸುಂದರವಾಗಿರಲಿ, ನಿಮ್ಮ ನಗುವಿನಂತೆಯೇ ಪ್ರಜ್ವಲಿಸಲಿ. ಹ್ಯಾಪಿ ಬರ್ತ್‌ಡೇ ಮೈ ಲವ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಆಗಲೇ ಮದುವೆ ವಿಚಾರವನ್ನೂ ಅವರು ಪ್ರಸ್ತಾಪಿಸಿದ್ದರು. ಥ್ಯಾಂಕ್ಯು ಮೈ ಲವ್. ಈ ವರ್ಷ ನನಗೆ ಸಿಕ್ಕ ಅತ್ಯುತ್ತಮ ಉಡುಗೊರೆ ನೀವೇ. ನನ್ನ ಬದುಕಿಗೆ ಬಣ್ಣಗಳನ್ನು ತುಂಬಿದ ನಿಮಗೆ ಧನ್ಯವಾದಗಳು. ನನ್ನನ್ನ ಸದಾ ನಗುವಂತೆ ಮಾಡುವ ನಿಮಗೆ ಧನ್ಯವಾದಗಳು ಎಂದು ಜಾಕಿ ಭಗ್ನಾನಿ ಅವರನ್ನು ಉಲ್ಲೇಖಿಸಿ ಸೋಷಿಯಲ್ ಮೀಡಿಯಾದಲ್ಲಿ ರಕುಲ್ ಪ್ರೀತ್ ಸಿಂಗ್ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಬಾಯ್‌ಫ್ರೆಂಡ್ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

  • ಮದುವೆ ನಂತರ ಮೊದಲ ಬಾರಿಗೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡ ರಕುಲ್ ದಂಪತಿ

    ಮದುವೆ ನಂತರ ಮೊದಲ ಬಾರಿಗೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡ ರಕುಲ್ ದಂಪತಿ

    ನ್ನಡದ ‘ಗಿಲ್ಲಿ’ ನಟಿ ರಕುಲ್ ಪ್ರೀತ್‌ ಸಿಂಗ್ (Rakul Preet Singh) ಮತ್ತು ಜಾಕಿ ಭಗ್ನಾನಿ (Jackky Bhagnani) ಜೋಡಿ ಇದೇ ಫೆ.21ರಂದು ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾದರು. 5 ವರ್ಷಗಳ ಡೇಟಿಂಗ್‌ ನಂತರ ಮದುವೆಯ ಮುದ್ರೆ ಒತ್ತಿದ್ದರು. ಇದೀಗ ಮದುವೆ ಬಳಿಕ ಮೊದಲ ಬಾರಿಗೆ ಕ್ಯಾಮೆರಾ ಕಣ್ಣಿಗೆ ರಕುಲ್ ದಂಪತಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಬರಲಿದೆ ‘ಜೈಲರ್ ಪಾರ್ಟ್ 2’- ತಲೈವಾ ಫ್ಯಾನ್ಸ್‌ಗೆ ಗುಡ್‌ ನ್ಯೂಸ್

    ಜಾಕಿ ಭಗ್ನಾನಿ ಸಹೋದರ ನಿಕ್ಕಿ ಜೊತೆ ನವಜೋಡಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ವಧು ರಕುಲ್ ಮಾಡ್ರನ್ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮದುವೆ ನಂತರ ಮೊದಲ ಬಾರಿಗೆ ಕ್ಯಾಮೆರಾ ಎದುರಿಗೆ ರಕುಲ್ ಜೋಡಿ ಬಂದಿದ್ದಾರೆ.

    ‘ನನ್ನದು ಮತ್ತು ಎಂದೆಂದಿಗೂ’ ಎಂದು ಅಡಿಬರಹ ನೀಡಿದ್ದು, ಪತಿ ಜೊತೆಗಿನ ಮದುವೆಯ ಸುಂದರ ಫೋಟೋಗಳನ್ನು ರಕುಲ್ ಶೇರ್ ಮಾಡಿದ್ದರು. ಕ್ರೀಮ್- ಗೋಲ್ಡನ್ ಉಡುಗೆಯಲ್ಲಿ ರಕುಲ್ ದಂಪತಿ ಮಿಂಚಿದ್ದಾರೆ. ನವಜೋಡಿಗೆ ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ.

    ಎರಡು ಸಂಪ್ರದಾಯದಂತೆ ವಿವಾಹ ನಡೆದಿದೆ. ಸಿಖ್ ಮತ್ತು ಸಿಂಧಿ ಶೈಲಿಯಲ್ಲಿ ರಕುಲ್- ಜಾಕಿ ಮದುವೆಯಾಗಿದ್ದಾರೆ ಎನ್ನಲಾಗಿದೆ. ಮದುವೆಯ ಶಾಸ್ತ್ರವೆಲ್ಲ ಫೆ.19ರಿಂದಲೇ ಆರಂಭವಾಗಿತ್ತು. ಫೆ.21ರಂದು ಗುರುಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ರಕುಲ್- ಜಾಕಿ ಜೋಡಿ ಮದುವೆಯಾಗಿದ್ದಾರೆ.

    ರಕುಲ್ ಮದುವೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್, ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ, ಅರ್ಜುನ್ ಕಪೂರ್ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದಾರೆ. ಇದನ್ನೂ ಓದಿ:ಸಮಂತಾ ನಿಜವಾದ ವಯಸ್ಸು ಎಷ್ಟು? ಮೆಟಾಬಾಲಿಕ್ ಏಜ್‌ ಅಂದ್ರೆ ಏನು? – ಖಾಸಗಿ ವಿಚಾರ ಬಾಯ್ಬಿಟ್ಟ ನಟಿ

    ಇತ್ತೀಚೆಗಷ್ಟೇ 31ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ವೇಳೆ ತಮ್ಮ ವೈಯಕ್ತಿಕ ಜೀವನದ ಕುರಿತಾಗಿ ಕೆಲವು ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ತಮ್ಮ ಜನ್ಮದಿನವನ್ನು ಭರ್ಜರಿಯಾಗಿ ನಟಿ ರಕುಲ್ ಪ್ರೀತ್ ಸಿಂಗ್ ಸೆಲೆಬ್ರೇಟ್ ಮಾಡಿದ್ದರು.

    ಈ ಸಮಯದಲ್ಲಿ ರಕುಲ್ ಪ್ರೀತಿ ಸಿಂಗ್ ಅವರ ಬಾಯ್‌ಫ್ರೆಂಡ್ ನಟ- ನಿರ್ಮಾಪಕ ಜಾಕಿ ಭಗ್ನಾನಿ ಫೋಟೋ ಶೇರ್ ಮಾಡಿ, ನೀನಿಲ್ಲದೆ ದಿನಗಳು ಎಂದಿನಂತೆ ದಿನಗಳಾಗಿರುವುದಿಲ್ಲ. ನೀನಿಲ್ಲದೆ ಎಂಥಾ ರುಚಿಕರ ತಿನಿಸನ್ನೂ ಆಸ್ವಾದಿಸಲಾಗುವುದಿಲ್ಲ. ನನ್ನ ಪಾಲಿಗೆ ಜಗತ್ತೇ ಆಗಿರುವ ಪ್ರೀತಿಯ ಪ್ರಿಯತಮೆಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಈ ದಿನ ನಿಮ್ಮಂತೆಯೇ ಸುಂದರವಾಗಿರಲಿ, ನಿಮ್ಮ ನಗುವಿನಂತೆಯೇ ಪ್ರಜ್ವಲಿಸಲಿ. ಹ್ಯಾಪಿ ಬರ್ತ್‌ಡೇ ಮೈ ಲವ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಆಗಲೇ ಮದುವೆ ವಿಚಾರವನ್ನೂ ಅವರು ಪ್ರಸ್ತಾಪಿಸಿದ್ದರು. ಥ್ಯಾಂಕ್ಯು ಮೈ ಲವ್. ಈ ವರ್ಷ ನನಗೆ ಸಿಕ್ಕ ಅತ್ಯುತ್ತಮ ಉಡುಗೊರೆ ನೀವೇ. ನನ್ನ ಬದುಕಿಗೆ ಬಣ್ಣಗಳನ್ನು ತುಂಬಿದ ನಿಮಗೆ ಧನ್ಯವಾದಗಳು. ನನ್ನನ್ನ ಸದಾ ನಗುವಂತೆ ಮಾಡುವ ನಿಮಗೆ ಧನ್ಯವಾದಗಳು ಎಂದು ಜಾಕಿ ಭಗ್ನಾನಿ ಅವರನ್ನು ಉಲ್ಲೇಖಿಸಿ ಸೋಷಿಯಲ್ ಮೀಡಿಯಾದಲ್ಲಿ ರಕುಲ್ ಪ್ರೀತ್ ಸಿಂಗ್ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಬಾಯ್‌ಫ್ರೆಂಡ್ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

    ಸ್ಯಾಂಡಲ್‌ವುಡ್, ಬಾಲಿವುಡ್ ಸಿನಿಮಾಗಳಲ್ಲಿ ರಕುಲ್ ಪ್ರೀತಿ ಸಿಂಗ್ ನಟಿಸಿದ್ದಾರೆ. ಕನ್ನಡದ ‘ಗಿಲ್ಲಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಕುಲ್ ಕಿಕ್ 2, ಸರೈನೋಡು, ನಾನಕು ಪ್ರೇಮತೋ, ಸ್ಪೇಡರ್ ಮುಂತಾದ ಹಿಟ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದಾರೆ.

  • ಗೋವಾದಲ್ಲಿ ನಟಿ ರಕುಲ್ ಮದುವೆ: ಪ್ರೀತಿಸಿದ ಹುಡುಗನ ಕೈ ಹಿಡಿದ ನಟಿ

    ಗೋವಾದಲ್ಲಿ ನಟಿ ರಕುಲ್ ಮದುವೆ: ಪ್ರೀತಿಸಿದ ಹುಡುಗನ ಕೈ ಹಿಡಿದ ನಟಿ

    ಗಿಲ್ಲಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ರಕುಲ್ ಪ್ರೀತಿ ಸಿಂಗ್ (Rakul Preet Singh) ಫೆ.21ರಂದು ಗೋವಾದಲ್ಲಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಾಲಿವುಡ್ ನ ಅನೇಕ ನಟಿಯರು ವಿದೇಶಗಳಲ್ಲಿ ಮದುವೆ ಪ್ಲ್ಯಾನ್ ಮಾಡಿದ್ದರೆ, ರಕುಲ್ ಮಾತ್ರ ಗೋವಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು ಮತ್ತು ಆಪ್ತರಿಗೆ ಈಗಾಗಲೇ ಆಹ್ವಾನ ಕೂಡ ನೀಡಲಾಗಿದೆ.

    ಮೊನ್ನೆಯಷ್ಟೇ 31ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ವೇಳೆ ತಮ್ಮ ವೈಯಕ್ತಿಕ ಜೀವನದ ಕುರಿತಾಗಿ ಕೆಲವು ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ತಮ್ಮ ಜನ್ಮದಿನವನ್ನು ಭರ್ಜರಿಯಾಗಿ ನಟಿ ರಕುಲ್ ಪ್ರೀತ್ ಸಿಂಗ್ ಸೆಲೆಬ್ರೇಟ್ ಮಾಡಿದ್ದರು.

    ಈ ಸಮಯದಲ್ಲಿ ರಕುಲ್ ಪ್ರೀತಿ ಸಿಂಗ್ ಅವರ ಬಾಯ್‍ಫ್ರೆಂಡ್ ನಟ, ನಿರ್ಮಾಪಕ ಜ್ಯಾಕಿ ಭಗ್ನಾನಿ ನೀನಿಲ್ಲದೆ ದಿನಗಳು ಎಂದಿನಂತೆ ದಿನಗಳಾಗಿರುವುದಿಲ್ಲ. ನೀನಿಲ್ಲದೆ ಎಂಥಾ ರುಚಿಕರ ತಿನಿಸನ್ನೂ ಆಸ್ವಾದಿಸಲಾಗುವುದಿಲ್ಲ. ನನ್ನ ಪಾಲಿಗೆ ಜಗತ್ತೇ ಆಗಿರುವ ಪ್ರೀತಿಯ ಪ್ರಿಯತಮೆಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಈ ದಿನ ನಿಮ್ಮಂತೆಯೇ ಸುಂದರವಾಗಿರಲಿ, ನಿಮ್ಮ ನಗುವಿನಂತೆಯೇ ಪ್ರಜ್ವಲಿಸಲಿ. ಹ್ಯಾಪಿ ಬರ್ತ್‌ಡೇ ಮೈ ಲವ್ ಎಂದು ಇನ್‌ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದರು. ಆಗಲೇ ಮದುವೆ ವಿಚಾರವನ್ನೂ ಅವರು ಪ್ರಸ್ತಾಪಿಸಿದ್ದರು. ಥ್ಯಾಂಕ್ಯು ಮೈ ಲವ್. ಈ ವರ್ಷ ನನಗೆ ಸಿಕ್ಕ ಅತ್ಯುತ್ತಮ ಉಡುಗೊರೆ ನೀವೇ. ನನ್ನ ಬದುಕಿಗೆ ಬಣ್ಣಗಳನ್ನು ತುಂಬಿದ ನಿಮಗೆ ಧನ್ಯವಾದಗಳು. ನನ್ನನ್ನ ಸದಾ ನಗುವಂತೆ ಮಾಡುವ ನಿಮಗೆ ಧನ್ಯವಾದಗಳು ಎಂದು ಜ್ಯಾಕಿ ಭಗ್ನಾನಿ ಅವರನ್ನು ಉಲ್ಲೇಖಿಸಿ ಇನ್‌ಸ್ಟಾಗ್ರಾಮ್‍ನಲ್ಲಿ ನಟಿ ರಕುಲ್ ಪ್ರೀತ್ ಸಿಂಗ್ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಬಾಯ್ ಫ್ರೆಂಡ್ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದೇ ಗೆಳೆಯನ ಜೊತೆಯೆ ನಟಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ.

    ಸ್ಯಾಂಡಲ್‍ವುಡ್, ಬಾಲಿವುಡ್ ಸಿನಿಮಾಗಳಲ್ಲಿ ರಕುಲ್ ಪ್ರೀತಿ ಸಿಂಗ್ ನಟಿಸಿದ್ದಾರೆ. ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಕಿಕ್ 2, ಸರೈನೋಡು, ನಾನಕು ಪ್ರೇಮತೋ, ಸ್ಪೈಡರ್ ಮುಂತಾದ ಹಿಟ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದಾರೆ.

  • ಮಾಲ್ಡೀವ್ಸ್ ನಲ್ಲಿ ಮೈಮರೆತು ಬಿಕಿನಿಯಲ್ಲಿ ಕುಣಿದ ರಕುಲ್ ಪ್ರೀತ್ ಸಿಂಗ್

    ಮಾಲ್ಡೀವ್ಸ್ ನಲ್ಲಿ ಮೈಮರೆತು ಬಿಕಿನಿಯಲ್ಲಿ ಕುಣಿದ ರಕುಲ್ ಪ್ರೀತ್ ಸಿಂಗ್

    ಬಾಲಿವುಡ್ (Bollywood) ನ ಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್ ಸದ್ಯ ಮಾಲ್ಡೀವ್ಸ್ (Maldives) ಪ್ರವಾಸದಲ್ಲಿ ಇದ್ದಾರೆ. ಸಮುದ್ರದ ದಂಡೆಯಲ್ಲಿ ಮೈಮರೆತು ಬಿಕಿನಿಯಲ್ಲಿ (Bikini) ಕುಣಿದಿದ್ದಾರೆ. ಆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲೂ ಶೇರ್ ಮಾಡಿದ್ದಾರೆ. ಅರಿಶಿಣ ಬಣ್ಣದ ಬಿಕಿನಿ ಧರಿಸಿರುವ ರಕುಲ್ ಪ್ರೀತ್ ಸಮುದ್ರಕ್ಕೂ ಬಿಸಿ ಮುಟ್ಟಿಸುವಷ್ಟು ಹಾಟ್ ಹಾಟ್ ಆಗಿ ಕಂಡಿದ್ದಾರೆ.

    ಈ ಹಿಂದೆ ಡೇಟಿಂಗ್ ವಿಚಾರವಾಗಿ ರಕುಲ್ ಪ್ರೀತ್ ಸಿಂಗ್ (Rakul Preet Singh)  ಸಾಕಷ್ಟು ಸುದ್ದಿಯಲ್ಲಿದ್ದರು. ಅವರ ಬಾಯ್‍ಫ್ರೆಂಡ್ ನಟ, ನಿರ್ಮಾಪಕ ಜ್ಯಾಕಿ ಭಗ್ನಾನಿ ‘ನೀನಿಲ್ಲದೆ ದಿನಗಳು ಎಂದಿನಂತೆ ದಿನಗಳಾಗಿರುವುದಿಲ್ಲ. ನೀನಿಲ್ಲದೆ ಎಂಥಾ ರುಚಿಕರ ತಿನಿಸನ್ನೂ ಆಸ್ವಾದಿಸಲಾಗುವುದಿಲ್ಲ. ನನ್ನ ಪಾಲಿಗೆ ಜಗತ್ತೇ ಆಗಿರುವ ಪ್ರೀತಿಯ ಪ್ರಿಯತಮೆಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಈ ದಿನ ನಿಮ್ಮಂತೆಯೇ ಸುಂದರವಾಗಿರಲಿ, ನಿಮ್ಮ ನಗುವಿನಂತೆಯೇ ಪ್ರಜ್ವಲಿಸಲಿ. ಹ್ಯಾಪಿ ಬರ್ತ್‌ಡೇ ಮೈ ಲವ್’ ಎಂದು ಇನ್‌ಸ್ಟಾಗ್ರಾಮ್‍ನಲ್ಲಿ ಬರೆದುಕೊಳ್ಳುವ ಮೂಲಕ ಪ್ರೀತಿಯನ್ನು ಒಪ್ಪಿಕೊಂಡಿದ್ದರು. ಇದನ್ನೂ ಓದಿ:ಕನ್ನಡ ಚಿತ್ರರಂಗಕ್ಕೆ ಜೆಕೆ ಗುಡ್‌ ಬೈ- ಅಷ್ಟಕ್ಕೂ ಆಗಿದ್ದೇನು.?

    ಥ್ಯಾಂಕ್ಯು ಮೈ ಲವ್. ಈ ವರ್ಷ ನನಗೆ ಸಿಕ್ಕ ಅತ್ಯುತ್ತಮ ಉಡುಗೊರೆ ನೀವೇ. ನನ್ನ ಬದುಕಿಗೆ ಬಣ್ಣಗಳನ್ನು ತುಂಬಿದ ನಿಮಗೆ ಧನ್ಯವಾದಗಳು. ನನ್ನನ್ನ ಸದಾ ನಗುವಂತೆ ಮಾಡುವ ನಿಮಗೆ ಧನ್ಯವಾದಗಳು ಎಂದು ಜ್ಯಾಕಿ ಭಗ್ನಾನಿ ಅವರನ್ನು ಉಲ್ಲೇಖಿಸಿ ಇನ್‌ಸ್ಟಾಗ್ರಾಮ್‍ನಲ್ಲಿ ನಟಿ ರಕುಲ್ ಪ್ರೀತ್ ಸಿಂಗ್ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಬಾಯ್ ಫ್ರೆಂಡ್ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

     

    ಸ್ಯಾಂಡಲ್‍ವುಡ್, ಬಾಲಿವುಡ್ ಸಿನಿಮಾಗಳಲ್ಲಿ ರಕುಲ್ ಪ್ರೀತಿ ಸಿಂಗ್ ನಟಿಸಿದ್ದಾರೆ. ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಕಿಕ್ 2, ಸರೈನೋಡು, ನಾನಕು ಪ್ರೇಮತೋ, ಸ್ಪೈಡರ್ ಮುಂತಾದ ಹಿಟ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದಾರೆ.

  • ‘ಅಯಲಾನ್’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ : ಶಿವಕಾರ್ತಿಕೇಯನ್ ಹೀರೋ

    ‘ಅಯಲಾನ್’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ : ಶಿವಕಾರ್ತಿಕೇಯನ್ ಹೀರೋ

    ತಮಿಳು ಚಿತ್ರರಂಗದ ಖ್ಯಾತ ನಟ ಶಿವಕಾರ್ತಿಕೇಯನ್ (Shivakarthikeyan) ತುಂಬಾ ಪರಿಶ್ರಮಪಟ್ಟು ಚಿತ್ರರಂಗದಲ್ಲಿ ಎತ್ತರಕ್ಕೆ ಬೆಳೆದವರು. ರಿಯಾಲಿಟಿ ಶೋಗಳಿಂದ ಗುರುತಿಸಿಕೊಂಡು ನಂತರ ಕಾಲಿವುಡ್ ನಲ್ಲಿ ಕಾಮಿಡಿಯನ್ ಆಗಿ, ನಟನಾಗಿ, ಬರಹಗಾರನಾಗಿ, ನಿರ್ಮಾಪಕನಾಗಿ ತಮ್ಮದೇ ರೀತಿಯಲ್ಲಿ ಛಾಪೂ ಮೂಡಿಸಿದ್ದಾರೆ. ಮಾಸ್ ಆಗಿ ತಮಿಳು ಸಿನಿಪ್ರಿಯರನ್ನು ರಂಜಿಸುತ್ತಿರುವ ಶಿವಕಾರ್ತಿಕೇಯನ್ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ‘ಅಯಲಾನ್’ (Ayalaan) ಬಿಡುಗಡೆಗೆ (released) ಹೊಸ್ತಿಲಿನಲ್ಲಿ ನಿಂತಿದೆ.

    ಆರ್.ರವಿಕುಮಾರ್ ಕಥೆ ಬರೆದು ನಿರ್ದೇಶಿಸುತ್ತಿರುವ ಅಯಲಾನ್ ಸಿನಿಮಾ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ. ಬೆಳಕಿನ ಹಬ್ಬ ದೀಪಾವಳಿಗೆ ವಿಶ್ವದಾದ್ಯಂತ ಚಿತ್ರ ರಿಲೀಸ್ ಆಗಲಿದೆ. 24ಎಎಂ ಸ್ಟುಡಿಯೋಸ್ ನಡಿ ಆರ್. ಡಿ. ರಾಜ ಅದ್ಧೂರಿಯಾಗಿ ನಿರ್ಮಿಸಿರುವ ಫ್ಯಾಂಟಸಿ ಎಂಟರ್ ಟೈನರ್ ಅಲಯಾನ್ ಸಿನಿಮಾವನ್ನು ಕೆಜೆಆರ್ ಸ್ಟುಡಿಯೋನ ಕೋಟಪಾಡಿ ಜೆ ರಾಜೇಶ್ ವರ್ಲ್ಡ್ ವೈಡ್ ಬಿಡುಗಡೆ ಮಾಡಲಿದೆ. ಇದನ್ನೂ ಓದಿ:ತಮಿಳಿನಲ್ಲಿ ಸದ್ದು ಮಾಡುತ್ತಿದ್ದಾರೆ ಕನ್ನಡದ ಮತ್ತೋರ್ವ ನಟ ಸರ್ದಾರ್ ಸತ್ಯ

    ಹೇಳಿಕೇಳಿ ಅಲಯಾನ್ ಫ್ಯಾಂಟಿಸಿ ಎಂಟಟ್ರೈನರ್ ಸಿನಿಮಾ. ಹೀಗಾಗಿ ಗುಣಮಟ್ಟದಲ್ಲಿ ಯಾವುದೇ ರೀತಿ ರಾಜಿಯಾಗದೇ ಅದ್ಭುತ ಸಿಜಿ ವರ್ಕ್ ಸಿನಿಮಾದಲ್ಲಿರಲಿದೆ. ಭಾರತೀಯ ಚಿತ್ರರಂಗದಲ್ಲಿ 4500+ VFX ಶಾಟ್‌ಗಳನ್ನು ಹೊಂದಿರುವ ಮೊದಲ ಪೂರ್ಣ-ಉದ್ದದ ಲೈವ್-ಆಕ್ಷನ್ ಸಿನಿಮಾ ಎಂಬ ಹೆಗ್ಗಳಿಕೆಗೂ ಅಲಯಾನ್ ಪಾತ್ರವಾಗಿದೆ. ಅದ್ಭುತ ಸಿಜಿ ಕೆಲಸ ಹಿಂದಿನ ಕೃರ್ತ ಫ್ಯಾಂಟಮ್ FX ಸಂಸ್ಥೆ. ಹಾಲಿವುಡ್ ಹಲವು ಚಿತ್ರಗಳಿಗೆ ಸಿಜಿ ವರ್ಕ್ ಮಾಡಿರುವ ಈ ಕಂಪನಿ ಈಗ ಅಲಯಾನ್ ಚಿತ್ರಕ್ಕೂ ಕೈ ಜೋಡಿಸಿದೆ. ಇನ್ನೂ ಈ ಚಿತ್ರದಲ್ಲಿ ಶಿವಕಾರ್ತಿಕೇಯನ್ ಗೆ ಜೋಡಿಯಾಗಿ ಕನ್ನಡದ ಗಿಲ್ಲಿ ಸಿನಿಮಾ ಬ್ಯೂಟಿ ರಕುಲ್ ಪ್ರೀತ್ ಸಿಂಗ್  (Rakul Preet Singh) ನಟಿಸಿದ್ದು, ಕರುಣಾಕರನ್, ಯೋಗಿ ಬಾಬು, ಶರದ್ ಕೇಳ್ಕರ್, ಇಶಾ ಕೊಪ್ಪಿಕರ್, ಬಾನುಪ್ರಿಯಾ, ಬಾಲಸರವಣನ್ ಸೇರಿದಂತೆ ಹಲವರು ತಾರಾಬಳಗ ಚಿತ್ರದ ಭಾಗವಾಗಿದ್ದಾರೆ. ಆಸ್ಕರ್ ವಿಜೇತ ಮ್ಯೂಸಿಕ್ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ನಿರ್ದೇಶನ ಅಲಯಾನ್ ಚಿತ್ರಕ್ಕಿದೆ.

  • ರಾಣಾ, ರಕುಲ್, ರವಿತೇಜ, ಚಾರ್ಮಿಗೆ ಜಾರಿ ನಿರ್ದೇಶನಾಲಯದ ನೋಟಿಸ್

    ರಾಣಾ, ರಕುಲ್, ರವಿತೇಜ, ಚಾರ್ಮಿಗೆ ಜಾರಿ ನಿರ್ದೇಶನಾಲಯದ ನೋಟಿಸ್

    – 2017ರ ಡ್ರಗ್ಸ್ ಕೇಸ್, ಸೆ.2 ರಿಂದ 22ರೊಳಗೆ ವಿಚಾರಣೆ

    ನವದೆಹಲಿ: ನಾಲ್ಕು ವರ್ಷದ ಹಿಂದಿನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾವಿದರಾದ ರಕುಲ್ ಪ್ರೀತ್ ಸಿಂಗ್, ರಾಣಾ ದಗ್ಗುಬಾಟಿ, ರವಿ ತೇಜ ಮತ್ತು ಚಾರ್ಮಿ ಕೌರ್ ಸೇರಿದಂತೆ 10 ಜನರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ವರದಿಯಾಗಿದೆ.

    ಸೆಪ್ಟೆಂಬರ್ 6ಕ್ಕೆ ರಕುಲ್ ಪ್ರೀತ್ ಸಿಂಗ್, ಸೆಪ್ಟೆಂಬರ್ 8ಕ್ಕೆ ರಾಣಾ ದಗ್ಗುಬಾಟಿ ಮತ್ತು ಸೆಪ್ಟೆಂಬರ್ 9ರಂದು ರವಿತೇಜ ಹೈದರಬಾದ್ ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಕಲಾವಿದ ಜೊತೆ ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರಿಗೆ ಆಗಸ್ಟ್ 31ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ರವಿತೇಜ ಡ್ರೈವರ್ ಮತ್ತು ‘ಎಫ್’ ಕ್ಲಬ್ ನ ‘ಜಿಎಂ’ ಹೆಸರಿನ ವ್ಯಕ್ತಿಗೂ ನೋಟಿಸ್ ನೀಡಲಾಗಿದೆ. ಇವರೆಲ್ಲರ ವಿಚಾರಣೆ ಸೆಪ್ಟೆಂಬರ್ 2ರಿಂದ 22ರೊಳಗೆ ನಡೆಯಲಿದೆ.

    12 ಲಕ್ಷ ಮೌಲ್ಯದ ಡ್ರಗ್ಸ್, 12 ಕೇಸ್:
    2017ರಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ತೆಲಂಗಾಣದ ಅಬಕಾರಿ ಇಲಾಖೆ, 12 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡು ಒಟ್ಟು 12 ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿತ್ತು. ಇದೇ ಪ್ರಕರಣದಲ್ಲಿ ಟಾಲಿವುಡ್ ಕಲಾವಿದರ ಹೆಸರು ಕೇಳಿ ಬಂದರೂ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಎಸ್‍ಐಟಿ ಯಾರನ್ನೂ ಆರೋಪಿಗಳೆಂದು ಪರಿಗಣಿಸಿರಲಿಲ್ಲ. ಆದ್ರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿತ್ತು. ಇದನ್ನೂ ಓದಿ: ಸುಶಾಂತ್ ಕೇಸ್ – ಎನ್‍ಸಿಬಿಯಿಂದ 30 ಸಾವಿರ ಪುಟಗಳ ಚಾರ್ಚ್‍ಶೀಟ್ ಸಲ್ಲಿಕೆ

    62 ಜನರ ಕೂದಲು, ಉಗುರು ಮಾದರಿ ಸಂಗ್ರಹ:
    2017 ಜುಲೈನಲ್ಲಿ ಎಸ್‍ಐಟಿ ಟಾಲಿವುಡ್ ಕಲಾವಿದರು ಸೇರಿದಂತೆ 62 ಜನರ ಕೂದಲು ಮತ್ತು ಉಗುರು ಮಾದರಿಯನ್ನು ಸಂಗ್ರಹಿಸಿತ್ತು. ಆದ್ರೆ ಈ ವರದಿಯಲ್ಲಿ ಎಸ್‍ಐಟಿಗೆ ಯಾವ ಸುಳಿವು ಸಿಕ್ಕಿರಲಿಲ್ಲ. ಇದೇ ಪ್ರಕರಣದಲ್ಲಿ ಸೌಥ್ ಆಫ್ರಿಕಾ ಮೂಲದ ರಾಫೇಲ್ ಎಲೆಕ್ಸ್ ವಿಕ್ಟರ್ ಎಂಬಾತನನ್ನು ಬಂಧಿಸಲಾಗಿತ್ತು. ಈತ ಮುಂಬೈ ಮತ್ತು ಹೈದರಾಬಾದ್ ನಲ್ಲಿ ಡ್ರಗ್ಸ್ ಮಾರಾಟದಲ್ಲಿ ತೊಡಗಿಕೊಂಡಿದ್ದನು. ಆರೋಪಿ ವಿರುದ್ಧ ಎಸ್‍ಐಟಿ ಚಾರ್ಜ್ ಶೀಟ್ ಸಹ ಸಲ್ಲಿಸಿದೆ. ಇದನ್ನೂ ಓದಿ: ಅರ್ಜುನ್ ರಾಂಪಾಲ್‍ಗೆ ಮತ್ತೆ ಡ್ರಗ್ಸ್ ಕಂಟಕ – ಎನ್‍ಸಿಬಿಯಿಂದ ನೋಟಿಸ್

    2019ರ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣದಲ್ಲಿ ರಕುಲ್ ಪ್ರೀತ್ ಸಿಂಗ್ ಹೆಸರು ಕೇಳಿಬಂದಿತ್ತು. ಈ ಸಂಬಂಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಟೀಂ ವಿಚಾರಣೆ ನಡೆಸಿ, ಕೆಲ ಮಾಹಿತಿ ಪಡೆದುಕೊಂಡಿತ್ತು. ಆದ್ರೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿರಲಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಮತ್ತು ಸಾರಾ ಅಲಿ ಖಾನ್ ಸಹ ವಿಚಾರಣೆ ಎದುರಿಸಿದ್ದರು. ಇದನ್ನೂ ಓದಿ: ಭಾರತಿ ಸಿಂಗ್ ಡ್ರಗ್ಸ್ ಪ್ರಕರಣ- ಇಬ್ಬರು ಎನ್‍ಸಿಬಿ ಅಧಿಕಾರಿಗಳ ಅಮಾನತು

  • ರಕುಲ್ ಪ್ರೀತ್ ಸಿಂಗ್‍ಗೆ ಕೊರೊನಾ ಸೋಂಕು

    ರಕುಲ್ ಪ್ರೀತ್ ಸಿಂಗ್‍ಗೆ ಕೊರೊನಾ ಸೋಂಕು

    ಮುಂಬೈ: ಬಾಲಿವುಡ್ ಸುಂದರಿ ರಕುಲ್ ಪ್ರೀತ್ ಸಿಂಗ್ ಕೊರೊನಾ ಸೋಂಕು ತಗುಲಿದ್ದು, ಹೋಮ್ ಐಸೋಲೇಶನ್ ನಲಿದ್ದಾರೆ. ತಮಗೆ ಸೋಂಕು ತಗುಲಿರುವ ಬಗ್ಗೆ ರಕುಲ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ನನಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ಐಸೋಲೇಟ್ ಆಗಿದ್ದು, ಆರೋಗ್ಯವಾಗಿದ್ದೇನೆ. ಶೀಘ್ರದಲ್ಲಿಯೇ ಗುಣಮುಖಳಾಗಿ ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿರುವವರು ಕೊರೊನಾ ಪರೀಕ್ಷೆಗೆ ಒಳಗಾಗಿ ರಕುಲ್ ಪ್ರೀತ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.

    ಇಂದು ಬೆಳಗ್ಗೆ ನಟಿ ಕೋವಿಡ್ ಸೋಂಕು ತಗುಲಿರುವ ಬಗ್ಗೆ ಬರೆದುಕೊಂಡಿದ್ದು, ಗುಣಮುಖರಾದ ಬಳಿಕ ಮೇಡೇ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಕೆಲ ದಿನಗಳ ಹಿಂದೆ ಮಾಲ್ಡಿವ್ಸ್ ನಲ್ಲಿ ಕುಟುಂಬಸ್ಥರ ಜೊತೆ ರಜಾ ದಿನಗಳನ್ನ ಕಳೆದು ಭಾರತಕ್ಕೆ ಹಿಂದಿರುಗಿದ್ದರು.

  • ದೀಪಿಕಾ, ಶ್ರದ್ಧಾ, ಸಾರಾ, ರಕುಲ್ ಮೊಬೈಲ್ ವಶಕ್ಕೆ: ಎನ್‍ಸಿಬಿ

    ದೀಪಿಕಾ, ಶ್ರದ್ಧಾ, ಸಾರಾ, ರಕುಲ್ ಮೊಬೈಲ್ ವಶಕ್ಕೆ: ಎನ್‍ಸಿಬಿ

    ಮುಂಬೈ: ವಿಚಾರಣೆಗೆ ಹಾಜರಾಗಿದ್ದ ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್ ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎನ್‍ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ತಿಳಿಸಿದೆ. ಆರಂಭದಲ್ಲಿ ದೀಪಿಕಾ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ ಖಾಸಗಿ ಮಾಧ್ಯಮಗಳು ವರದಿ ಮಾಡಿದ್ದವು. ಆದ್ರೆ ಈ ಬಗ್ಗೆ ಎನ್‍ಸಿಬಿ ಅಧಿಕೃತ ಹೇಳಿಕೆಯನ್ನ ನೀಡಿದೆ.

    ಇತ್ತ ವಿಚಾರಣೆಗೆ ಹಾಜರಾಗಿದ್ದ ಕರೀಷ್ಮಾ ಕಪೂರ್, ಜಯಾ ಸಾಹಾ ಮತ್ತು ಸಿಮೋನ್ ಖಂಬಟ್ಟಾರ ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್‍ಸಿಬಿ ಸ್ಪಷ್ಟಪಡಿಸಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ನಟಿಯರಿಗೆ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಮುನ್ನ ದೀಪಿಕಾ ಮತ್ತು ಶ್ರದ್ಧಾ ಕಪೂರ್ ವಾಟ್ಸಪ್ ಸಂಭಾಷಣೆಯ ಮಾಹಿತಿ ಲೀಕ್ ಆಗಿತ್ತು. ರಕುಲ್ ಪ್ರೀತ್ ಸಿಂಗ್ ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದರು. ಇನ್ನುಳಿದ ಮೂವರು ಶನಿವಾರ ಎನ್‍ಸಿಬಿ ವಿಚಾರಣೆ ಎದುರಿಸಿದ್ದಾರೆ.

    ವಿಚಾರಣೆ ವೇಳೆ ದೀಪಿಕಾ ಡ್ರಗ್ಸ್ ಚಾಟ್ ನಡೆಸಿರೋದು ಸತ್ಯ ಎಂದು ಒಪ್ಪಿಕೊಂಡಿದ್ದು, ಅಧಿಕಾರಿಗಳ ಇನ್ನುಳಿದ ಪ್ರಶ್ನೆಗಳಿಗೆ ಸಮರ್ಪಲ ಉತ್ತರ ನೀಡಿಲ್ಲ ಎನ್ನಲಾಗಿದೆ. ಇತ್ತ ಶ್ರದ್ಧಾ ಕಪೂರ್ ಸಹ ವಾಟ್ಸಪ್ ನಲ್ಲಿ ನಡೆಸಿರುವ ಸಂಭಾಷಣೆ ಒಪ್ಪಿಕೊಂಡಿದ್ದು, ಡ್ರಗ್ಸ್ ಸೇವನೆಯ ಆರೋಪವನ್ನ ತಳ್ಳಿ ಹಾಕಿದ್ದಾರೆ ಎನ್ನಲಾಗಿದೆ. ಇತ್ತ ಸಾರಾ ಅಲಿಖಾನ್ ಸಹ ಕೇದಾರನಾಥ್ ಸಿನಿಮಾದಿಂದ ಸುಶಾಂತ್ ಹತ್ತಿರವಾಗಿದ್ದರಿಂದ ಆತನ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದೇನೆ. ಸ್ಮೋಕ್ ಮಾಡಿದ್ದೇನೆಯೇ ಹೊರತು ಡ್ರಗ್ಸ್ ಸೇವಿಸಿಲ್ಲ ಎಂದು ಸಾರಾ ಹೇಳಿಕೆ ದಾಖಲಿಸಿದ್ದಾರೆ ಅಂತ ಮಾಧ್ಯಮಗಳು ಪ್ರಕಟಿಸಿವೆ. ಇದನ್ನೂ ಓದಿ: ಡ್ರಗ್ಸ್ ಸೇವಿಸಲ್ಲ, ಸ್ಮೋಕ್ ಮಾಡ್ತೀನಿ: ಸಾರಾ ಅಲಿ ಖಾನ್

    ಸುಶಾಂತ್ ಸಿಂಗ್ ರಜಪೂತ್ ಜೊತೆಗಿನ ಸ್ನೇಹ, ಥೈಲ್ಯಾಂಡ್ ಪ್ರವಾಸ ಮತ್ತು ಡ್ರಗ್ಸ್ ಚಾಟ್, ಸೇವನೆ ಕುರಿತಾಗಿ ಶ್ರದ್ಧಾ ಕಪೂರ್ ಅವರನ್ನ ಪ್ರಶ್ನೆ ಮಾಡಲಾಗಿದೆ. ವಿಚಾರಣೆ ವೇಳೆ ಡ್ರಗ್ಸ್ ಸೇವನೆಯ ಆರೋಪವನ್ನ ಶ್ರದ್ಧಾ ತಳ್ಳಿ ಹಾಕಿದ್ದಾರೆ. ಸಿಬಿಡಿ ಆಯಿಲ್ ಗೆ ಸಂಬಂಧಿಸಿದಂತೆ ಜಯಾ ಸಾಹಾ ಜೊತೆ ತಾವು ಚಾಟ್ ನಡೆಸಿರೋದನ್ನ ಶ್ರದ್ಧಾ ಒಪ್ಪಿಕೊಂಡಿದ್ದಾರೆ. ಚಿಚೋರೆ ಸಿನಿಮಾಗಾಗಿ ಸುಶಾಂತ್ ಫಾರ್ಮ್ ಹೌಸ್ ನಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಆದ್ರೆ ಶ್ರದ್ಧಾ ಕಪೂರ್ ನೀಡಿರುವ ಉತ್ತರಗಳಲ್ಲಿ ತನಿಖಾಧಿಕಾರಿಗಳಿಗೆ ಸ್ಪಷ್ಟತೆ ಲಭ್ಯವಾಗಿಲ್ಲ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆರು ಗಂಟೆಯ ವಿಚಾರಣೆ ಎದುರಿಸಿದ ಶ್ರದ್ಧಾ ಕಪೂರ್ ಹೊರ ಬಂದಿದ್ದಾರೆ. ಇದನ್ನೂ ಓದಿ: ಐದೂವರೆ ಗಂಟೆ ದೀಪಿಕಾಗೆ ಎನ್‍ಸಿಬಿ ಡ್ರಿಲ್-ಡ್ರಗ್ಸ್ ವ್ಯೂಹದಿಂದ ಹೊರ ಬರ್ತಾರಾ?

    ಕ್ಷಿತಿಜ್ ಪ್ರಸಾದ್ ಅರೆಸ್ಟ್: ಇಂದು ವಿಚಾರಣೆಗೆ ಹಾಜರಾಗಿದ್ದ ಧರ್ಮ ಪ್ರೊಡೆಕ್ಷನ್ ಎಕ್ಸ್ ಕ್ಯೂಟಿವ್ ಪ್ರೊಡ್ಯೂಸರ್ ಕ್ಷಿತಿಜ್ ಪ್ರಸಾದ್ ಎಂಬವರನ್ನ ಎನ್‍ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆ ವೇಳೆ ತನಿಖೆ ಸಹಕರಿಸದ ಹಿನ್ನೆಲೆ ಕ್ಷಿತಿಜ್ ಬಂಧನವಾಗಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ- ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ

  • ದೀಪಿಕಾ, ಶ್ರದ್ಧಾ, ರಕುಲ್, ಸಾರಾಗೆ ಎನ್‍ಸಿಬಿ ಸಮನ್ಸ್

    ದೀಪಿಕಾ, ಶ್ರದ್ಧಾ, ರಕುಲ್, ಸಾರಾಗೆ ಎನ್‍ಸಿಬಿ ಸಮನ್ಸ್

    ಮುಂಬೈ: ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ರಕುಲ್ ಪ್ರೀತ್ ಸಿಂಗ್ ಮತ್ತು ಸಾರಾ ಅಲಿ ಖಾನ್ ಗೆ ಎನ್‍ಸಿಬಿ ಸಮನ್ಸ್ ನೀಡಿರೋದು ಅಧಿಕೃತವಾಗಿ ದೃಢಪಟ್ಟಿದೆ. ಮೃತ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ಸಮನ್ಸ್ ನೀಡಿದೆ.

    ನಾಲ್ವರು ನಟಿಯರು ಮತ್ತು ಫ್ಯಾಶನ್ ಡಿಸೈನರ್ ಸಿಮೋನ್ ಖಂಬಟ್ಟಾ ಎನ್‍ಸಿಬಿ ಈ ವಾರ ಸಮನ್ಸ್ ನೀಡಲು ಸಿದ್ಧತೆ ನಡೆಸಿಕೊಂಡಿದೆ ಕೆಲವು ದಿನಗಳ ಹಿಂದೆ ರಿವೀಲ್ ಆಗಿದೆ. ಸಮನ್ಸ್ ನೀಡಿರೋದು ಖಚಿತವಾಗಿದ್ದು, ಯಾವ ದಿನ ವಿಚಾರಣೆಗೆ ಹಾಜರಾಗಲು ಎನ್‍ಸಿಬಿ ಸೂಚಿಸಿದೆ.

    ಸೆಪ್ಟೆಂಬರ್ 24ಕ್ಕೆ ಸಿಮೋನ್ ಖಂಬಟ್ಟಾ, ರಕುಲ್ ಪ್ರೀತ್ ಸಿಂಗ್, ಸೆಪ್ಟೆಂಬರ್ 25ಕ್ಕೆ ದೀಪಿಕಾ ಪಡುಕೋಣೆ ಮತ್ತು ಸೆಪ್ಟೆಂಬರ್ 26ಕ್ಕೆ ಶ್ರದ್ಧಾ ಕಪೂರ್ ಹಾಗೂ ಸಾರಾ ಅಲಿ ಖಾನ್ ವಿಚಾರಣೆಗೆ ಹಾಜರಾಗಬೇಕಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧಿತಳಾಗಿರುವ ರಿಯಾ ಚಕ್ರವರ್ತಿ ಹೇಳಿಕೆಯನ್ನಾಧರಿಸಿ ಎನ್‍ಸಿಬಿ ಸಮನ್ಸ್ ನೀಡಿದೆ ಎನ್ನಲಾಗಿದೆ. ರಿಯಾ ವಿಚಾರಣೆ ವೇಳೆ ಡ್ರಗ್ಸ್ ಸೇವನೆ ಮಾಡುತ್ತಿದ್ದ ಸುಮಾರು 25 ತಾರೆಯರ ಹೆಸರು ಹೇಳಿದ್ದಾರೆ ಎಂದು ವರದಿಯಾಗಿದೆ.

    ಎರಡು ದಿನಗಳ ಹಿಂದೆ ಡ್ರಗ್ಸ್ ಖರೀದಿಗಾಗಿ ದೀಪಿಕಾ ಮತ್ತು ಶ್ರದ್ಧಾ ಕಪೂರ್ ವಾಟ್ಸಪ್ ಚಾಟ್ ಮಾಹಿತಿಯನ್ನು ಖಾಸಗಿ ವಾಹಿನಿ ಬಿತ್ತರಿಸಿತ್ತು. ಇತ್ತ ರಕುಲ್ ಪ್ರೀತ್ ಸಿಂಗ್ ಮಾಧ್ಯಮಗಳಿಂದ ತಮ್ಮ ತೇಜೋವಧೆ ಆಗುತ್ತಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ಇದನ್ನೂ ಓದಿ: ಮಾಲ್ ಇದೆಯಾ? ಡ್ರಗ್ಸ್ ಜಾಲದಲ್ಲಿ ಬಿಟೌನ್ ಪದ್ಮಾವತಿ ದೀಪಿಕಾ

    ಖಾಸಗಿ ಕಂಪನಿಯ ಮ್ಯಾನೇಜರ್ ಕರೀಷ್ಮಾ ಎಂಬವರ ಬಳಿ ಮಾಲ್ ಇದೆಯಾ ಎಂದು ದೀಪಿಕಾ ಕೇಳಿರುವ ವಾಟ್ಸಪ್ ಚಾಟ್ ಸ್ಕ್ರೀನ್‍ಶಾಟ್ ರಿವೀಲ್ ಆಗಿತ್ತು ಹ್ಯಾಶ್ ಕೇಳಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿತ್ತು. ಆದ್ರೆ ಇದುವರೆಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಿಕಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಡ್ರಗ್ಸ್ ಚಾಟ್‍ನಲ್ಲಿ ದೀಪಿಕಾ ಹೆಸ್ರು- ಹೈ ಸೊಸೈಟಿಯ ಮಕ್ಕಳು ಮಾಲ್ ಕೇಳ್ತಾರೆ ಎಂದ ಕಂಗನಾ

  • ಈ ವಾರ ಸಾರಾ, ಶ್ರದ್ಧಾ, ರಕುಲ್‍ಗೆ ಎನ್‍ಸಿಬಿ ಸಮನ್ಸ್?

    ಈ ವಾರ ಸಾರಾ, ಶ್ರದ್ಧಾ, ರಕುಲ್‍ಗೆ ಎನ್‍ಸಿಬಿ ಸಮನ್ಸ್?

    ಮುಂಬೈ: ಈ ವಾರ ಬಾಲಿವುಡ್ ತಾರೆಯರಾದ ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್, ರಕುಲ್ ಪ್ರೀತ್ ಸಿಂಗ್ ಮತ್ತು ಫ್ಯಾಶನ್ ಡಿಸೈನರ್ ಸಿಮೋನ್ ಖಂಭಾಟಾರಿಗೆ ಸಮನ್ಸ್ ನೀಡಲು ಎನ್‍ಸಿಬಿ ಸಿದ್ಧತೆ ನಡೆಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಮಾಧ್ಯಮಗಳಿಂದ ತೇಜೋವಧೆ – ದೆಹಲಿ ಹೈಕೋರ್ಟ್‌ ಮೊರೆ ಹೋದ ರಾಕುಲ್‌

    ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಿಯಾ ಚಕ್ರವರ್ತಿ ಹೇಳಿಕೆಯನ್ನಾಧರಿಸಿ ಎನ್‍ಸಿಬಿ ಸಮನ್ಸ್ ನೀಡಲಿದೆ ಎನ್ನಲಾಗಿದೆ. ವಿಚಾರಣೆ ವೇಳೆ ರಿಯಾ ಚಕ್ರವರ್ತಿ ನಾಲ್ವರ ಹೆಸರು ಹೇಳಿದ್ದಾರೆ ಎಂದು ಹೇಳಲಾಗಿದೆ. ರಿಯಾ, ಸಾರಾ ಮತ್ತು ರಕುಲ್ ಒಂದೇ ಜಿಮ್ ಗೆ ತೆರಳುತ್ತಿದ್ದರು. ಹೀಗಾಗಿ ಮೂವರ ಮಧ್ಯೆ ಸ್ನೇಹ ಗಾಢವಾಗಿತ್ತು. ತನಿಖೆ ವೇಳೆ ಎನ್‍ಸಿಬಿಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದ್ದರಿಂದ ಸಾರಾ, ರಕುಲ್ ಜೊತೆಗೆ ಶ್ರದ್ಧಾ ಕಪೂರ್ ಅವರಿಗೂ ಸಮನ್ಸ್ ಹೋಗುವ ಸಾಧ್ಯತೆಗಳಿವೆ. ಡ್ರಗ್ ಪೆಡ್ಲರ್ ರಾಹಿಲ್ ವಿಶ್ರಾಮ್ ಎಂಬಾತನ ಬಂಧನವಾಗಿದ್ದು, ಈತನಿಂದಲೂ ಸಾಕಷ್ಟು ಮಾಹಿತಿ ಲಭ್ಯವಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಾರಾ, ರಾಕುಲ್ ಡ್ರಗ್ ಸೇವಿಸ್ತಿದ್ದಾರೆ – ಬಾಲಿವುಡ್‍ನಲ್ಲಿ ಬಿರುಗಾಳಿ ಎಬ್ಬಿಸಿದ ರಿಯಾ

    ತನ್ನ ಪರಿಚಯಕ್ಕೂ ಮೊದಲು ಸುಶಾಂತ್ ಗಾಂಜಾ ಸೇವನೆ ಮಾಡ್ತಿದ್ದರು. ಕೇದಾರನಾಥ್ ಚಿತ್ರೀಕರಣ ವೇಳೆಯೂ ಸುಶಾಂತ್ ಹೆಚ್ಚು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು. ಡ್ರಗ್ಸ್ ತೆಗೆದುಕೊಳ್ಳುವದರಿಂದ ಹೆಚ್ಚು ಹಸಿವು ಆಗುತ್ತದೆ. ಕೇದಾರನಾಥ್ ಸಿನಿಮಾ ಬಳಿಕ ಸುಶಾಂತ್ ಮತ್ತು ಸಾರಾ ತೂಕ ಹೆಚ್ಚಾಗಿತ್ತು ಎಂದು ರಿಯಾ ವಿಚಾರಣೆಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಾರಾ, ರಿಯಾ, ಸುಶಾಂತ್ ಸೇರಿ ತೋಟದ ಮನೆಯಲ್ಲಿ ಪಾರ್ಟಿ ಮಾಡ್ತಿದ್ರು: ಮ್ಯಾನೇಜರ್- ಗಾಂಜಾ, ಡ್ರಿಂಕ್ಸ್ ಎಲ್ಲ ಬರುತ್ತಿತ್ತು

    ಸದ್ಯ ಈ ನಾಲ್ವರಿಗೂ ಎನ್‍ಸಿಬಿ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಿ ಹೆಚ್ಚಿನ ಮಾಹಿತಿ ಕಲೆ ಹಾಕಲು ಎಲ್ಲ ಕಾನೂನು ರೀತಿಯ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ಸುಶಾಂತ್ ಒಡೆತನದ ಲೋನಾವಾಲಾ ಫಾರ್ಮ್‍ಹೌಸ್ ನಲ್ಲಿ ನಡೆಯುತ್ತಿದ್ದ ಪಾರ್ಟಿಗಳಲ್ಲಿ ಈ ನಾಲ್ವರು ಭಾಗಿಯಾಗುತ್ತಿದ್ದರಂತೆ. ಸುಶಾಂತ್ ಫಾರ್ಮ್‍ಹೌಸ್ ನಲ್ಲಿ ಗಾಂಜಾ ಸೇವನೆಗೆ ಬಳಸಲಾಗುವ ಕೆಲ ವಸ್ತುಗಳ ಸಹ ಲಭ್ಯವಾಗಿವೆ. ಇದನ್ನೂ ಓದಿ: ಸೆಟ್‍ನಲ್ಲಿ ನಟ, ನಿರ್ದೇಶಕರಿಗೆ ನಾವು ಹೆಂಡ್ತೀರ ರೀತಿ ವರ್ತಿಸಬೇಕು: ಕಂಗನಾ

    ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಡ್ರಗ್ಸ್ ಆಯಾಮವನ್ನ ಪಡೆದುಕೊಂಡಿದ್ದರಿಂದ ಎನ್‍ಸಿಬಿ ತನಿಖೆಗೆ ಇಳಿದಿತ್ತು. ತನಿಖೆಯ ಆಳಕ್ಕೆ ಹೋದಂತೆ ದೊಡ್ಡ ದೊಡ್ಡ ಸ್ಟಾರ್ ಗಳ ಹೆಸರು ಮುನ್ನಲೆಗೆ ಬರುತ್ತಿವೆ. ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗೂ ಆತನ ಇಬ್ಬರ ಸಹಚರರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಇದನ್ನೂ ಓದಿ: ನನ್ನ ಕನಸಿನ ಮೇಲೆ ನಡೆಸಿದ ಅತ್ಯಾಚಾರವಿದು- ಫೋಟೋ ಶೇರ್ ಮಾಡಿದ ಕಂಗನಾ

    ಹೈಕೋರ್ಟ್ ಮೊರೆ ಹೋದ ರಕುಲ್: ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ತನ್ನ ಹೆಸರು ಪ್ರಕಟಣೆಗೆ ತಡೆ ನೀಡಬೇಕೆಂದು ಕೋರಿ ನಟಿ ರಕುಲ್ ಪ್ರೀತ್ ಸಿಂಗ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಮಾಧ್ಯಮಗಳು ರಿಯಾ ಚಕ್ರವರ್ತಿ ಹೇಳಿಕೆಯನ್ನು ಆಧಾರಿಸಿ ಡ್ರಗ್ಸ್ ಪ್ರಕರಣದಲ್ಲಿ ತನ್ನ ಕಕ್ಷಿದಾರರ ಹೆಸರನ್ನು ಪ್ರಕಟಿಸುತ್ತಿವೆ. ಈ ರೀತಿ ಸುದ್ದಿ ಪ್ರಸಾರ ಮಾಡುತ್ತಿರುವುದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮಾರ್ಗಸೂಚಿಯ ಉಲ್ಲಂಘನೆಯಾಗಿದೆ. ಹೀಗಾಗಿ ನ್ಯಾಯಾಲಯ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಕುಲ್ ಪರ ವಕೀಲರು ಮನವಿ ಮಾಡಿದ್ದರು. ಇದನ್ನೂ ಓದಿ: ಫ್ಯಾನ್, ಬೆಡ್ ಇಲ್ಲ- ಇಂದ್ರಾಣಿ ಪಕ್ಕದಲ್ಲೇ ರಿಯಾ ಜೈಲುವಾಸ

    ನ್ಯಾ.ನವೀನ್ ಚಾವ್ಲಾ ಅವರಿದ್ದ ಏಕಸದಸ್ಯ ಪೀಠದಲ್ಲಿ ಇಂದು ರಾಕುಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ರಾಕುಲ್ ಪರ ವಕೀಲರು, ಡ್ರಗ್ಸ್ ಪ್ರಕರಣದಲ್ಲಿ ರಾಕುಲ್‍ಗೆ ಸಂಬಂಧವಿದೆ ಎಂದು ದುರುದ್ದೇಶಪೂರ್ವಕವಾಗಿ ಸುದ್ದಿ ಪ್ರಸಾರವಾಗಿದೆ. ಯಾವುದೋ ಫೋಟೋ, ವಿಡಿಯೋಗಳಿಗೆ ಡ್ರಗ್ಸ್ ಪ್ರಕರಣವನ್ನು ಜೋಡಿಸಿ ತೇಜೋವಧೆ ಮಾಡಲಾಗುತ್ತಿದೆ. ಇದು ಸಂವಿಧಾನ ಪರಿಚ್ಛೇದ 21ರ ಅಡಿ ಬರುವ ಖಾಸಗಿತನದ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಕೇಂದ್ರ ಸರ್ಕಾರ, ಪ್ರಸಾರ ಭಾರತಿ, ಸುದ್ದಿ ಪ್ರಸಾರ ಸಂಘಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ಮುಂದೂಡಿದೆ.