Tag: ರಕ್ತ ಚಂದನ

  • ಮೇಲುಗಡೆ ಟೊಮೆಟೊ ಬಾಕ್ಸ್‌ ಕೆಳಗಡೆ ರಕ್ತಚಂದನ ಸಾಗಾಟ – ಐವರು ಅರೆಸ್ಟ್‌

    ಮೇಲುಗಡೆ ಟೊಮೆಟೊ ಬಾಕ್ಸ್‌ ಕೆಳಗಡೆ ರಕ್ತಚಂದನ ಸಾಗಾಟ – ಐವರು ಅರೆಸ್ಟ್‌

    ಬೆಂಗಳೂರು: ರಕ್ತಚಂದನ(Red Sandalwood) ದಿಮ್ಮಿಗಳನ್ನು ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿ ಕೋಟ್ಯಂತರ ರೂಪಾಯಿ ಮೌಲ್ಯದ 1.5 ಟನ್ ರಕ್ತಚಂದನ ದಿಮ್ಮಿಯನ್ನು ವಶ ಪಡಿಸಲಾಗಿದೆ.

    ಸಿದ್ಧರಾಜು, ಪ್ರಜ್ವಲ್, ಲೋಕೇಶ್‌, ದೇವರಾಜ್, ಗೋವಿಂದ ಸ್ವಾಮಿ ಬಂಧಿತ ಆರೋಪಿಗಳು. ಮಹಾಲಕ್ಷ್ಮಿ ಲೇಔಟ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರ ಕಣ್ತಪ್ಪಿಸಲು ಬೊಲೇರೋ ವಾಹನದಲ್ಲಿ ರಕ್ತಚಂದನ ದಿಮ್ಮಿಗಳ ಮೇಲೆ ಟೊಮೆಟೊ ಬಾಕ್ಸ್ ಹಾಕಿ ಸಾಗಾಟ ಮಾಡುತ್ತಿದ್ದರು.

    ಮಂಡ್ಯದ ದೇವಲಾಪುರ ಕಾಡಿನಿಂದ ರಕ್ತಚಂದನ ಮರಗಳನ್ನ ಕಳ್ಳತನ ಮಾಡಿದ್ದ ಗ್ಯಾಂಗ್‌ ತಮಿಳುನಾಡು ಭಾಗಕ್ಕೆ ಸಾಗಿಸುವ ವೇಳೆ ಅರೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಕನ್ನಡದ ಹೆಸರಲ್ಲಿ ರೋಲ್‌ಕಾಲ್‌: ಪ್ರೂವ್ ಮಾಡಿದರೆ ನೇಣಿಗೇರುವೆ ಎಂದ ರೂಪೇಶ್ ರಾಜಣ್ಣ

    ಆರೋಪಿಗಳ ಪೈಕಿ ಗೋವಿಂದ ಸ್ವಾಮಿ ಮೇಲೆ ಆಂಧ್ರ ಪ್ರದೇಶ, ತಮಿಳುನಾಡು ಭಾಗದಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿವೆ.

    Live Tv
    [brid partner=56869869 player=32851 video=960834 autoplay=true]

  • ಪುಷ್ಪ ಸಿನಿಮಾ ಮಾದರಿಯಲ್ಲಿ ದರೋಡೆ – ಇಬ್ಬರು ಹೆಡ್ ಕಾನ್‍ಸ್ಟೇಬಲ್ ಸಸ್ಪೆಂಡ್

    ಪುಷ್ಪ ಸಿನಿಮಾ ಮಾದರಿಯಲ್ಲಿ ದರೋಡೆ – ಇಬ್ಬರು ಹೆಡ್ ಕಾನ್‍ಸ್ಟೇಬಲ್ ಸಸ್ಪೆಂಡ್

    ಬೆಂಗಳೂರು: ಇತ್ತೀಚೆಗೆ ತೆರೆ ಕಂಡ ತೆಲುಗು ಭಾಷೆಯ ಪುಷ್ಪ ಸಿನಿಮಾದ ಮಾದರಿಯಲ್ಲೇ ಸ್ಮಗ್ಲರ್ ಗಳಿಂದಲೇ ಪೊಲೀಸರು ದರೋಡೆ ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ದರೋಡೆ ಮಾಡಿಸಿ ಸಿಕ್ಕಿಬಿದ್ದ ಇಬ್ಬರು ಹೆಡ್ ಕಾನ್‍ಸ್ಟೇಬಲ್‍ಗಳನ್ನು ಅಮಾನತು ಮಾಡಲಾಗಿದೆ.

    ಗಿರಿನಗರ ಹೆಡ್ ಕಾನ್‍ಸ್ಟೇಬಲ್ ಮೋಹನ್, ಮಹದೇವಪುರ ಹೆಡ್ ಕಾನ್‍ಸ್ಟೇಬಲ್ ಮಮತೇಶ್ ಗೌಡ ಅಮಾನತುಗೊಂಡಿದ್ದಾರೆ. ಇವರಿಬ್ಬರು 2018 ರಿಂದ ಸಿಸಿಬಿಯಲ್ಲಿದ್ದರು. ಕಳೆದ ಒಂದು ತಿಂಗಳ ಹಿಂದಷ್ಟೇ ಸಿಸಿಬಿಯಿಂದ ಗಿರಿನಗರ ಹಾಗೂ ಮಹಾದೇವಪುರ ಠಾಣೆಗೆ ವರ್ಗಾವಣೆಯಾಗಿದ್ದರು. ಸಿಸಿಬಿಯಲ್ಲಿ ಇದ್ದ ವೇಳೆ ರಕ್ತ ಚಂದನದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದರು. ಹೀಗಾಗಿ ಅವರಿಬ್ಬರಿಗೆ ರಕ್ತಚಂದನ ದರೋಡೆ ಅಡ್ಡೆ ಹಾಗೂ ಗ್ಯಾಂಗ್‍ಗಳ ಬಗ್ಗೆ ತಿಳಿದಿತ್ತು. ಇದನ್ನೂ ಓದಿ: ವೊಡಾಫೋನ್‌ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ

    ಮೋಹನ್, ಮಮತೇಶ್ ಡಿಸೆಂಬರ್ 15 ರಂದು ಕಾರಿನಲ್ಲಿ ಹೊಸಕೋಟೆ ಸಂತೆ ಸರ್ಕಲ್ ಬಳಿ ದಾಳಿ ಮಾಡಿದ್ದರು. ಈ ವೇಳೆ ಟಾಟಾ ಏಸ್‍ನಲ್ಲಿ ತರುತ್ತಿದ್ದ ರಕ್ತ ಚಂದನವನ್ನು ಸೀಜ್ ಮಾಡಿದ್ದರು. ಅವರು ಸೀಜ್ ಮಾಡಿದ ರಕ್ತಚಂದನದ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ. ಆದರೆ 5 ದಿನಗಳ ನಂತರ ಸ್ಥಳೀಯರು ಹೊಸಕೋಟೆ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಹೊಸಕೋಟೆ ಪೊಲೀಸರು ಎಫ್‍ಐಆರ್ ಹಾಕಿ, ಹುಡುಕುತ್ತಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಇಬ್ಬರೂ ಪರಾರಿಯಾಗಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್, ಮಮತೇಶ್ ಅವರನ್ನು ಅಮಾನತು ಮಾಡಲಾಗಿದೆ. ಐಜಿಪಿ ಚಂದ್ರಶೇಖರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಅಮಾನತುಗೊಂಡು 20 ದಿನ ಕಳೆದರೂ ಹೆಡ್ ಕಾನ್‍ಸ್ಟೇಬಲ್‍ಗಳ ಬಂಧನವಾಗಿಲ್ಲ.

    ಕೃತ್ಯ ಹೇಗೆ ಎಸಗುತ್ತಿದ್ದರು?
    ಮೋಹನ್, ಮಮತೇಶ್‍ಗೆ ಸಿಸಿಬಿಯಲ್ಲಿದ್ದ ವೇಳೆ ರಕ್ತ ಚಂದನದ ಸ್ಮಗ್ಲಿಂಗ್ ಅಡ್ಡೆಗಳ ಪರಿಚಯ ಆಗುತ್ತದೆ. ಅಲ್ಲದೇ ಆಂಧ್ರದಲ್ಲಿ ರಕ್ತಚಂದನದ ಮರಕಡಿಯಲು ಬೆಂಗಳೂರಿನಿಂದ ಕೂಲಿಗೆ ಜನ ಹೋಗುತ್ತಿರುತ್ತಾರೆ. ಅಂತಹವರನ್ನು ಮೋಹನ್, ಮಮತೇಶ್ ಪೊಲೀಸ್ ಬಾತ್ಮೀದಾರರಾಗಿ ಬಳಸಿಕೊಳ್ಳುತ್ತಿರುತ್ತಾರೆ. ರಕ್ತಚಂದನದ ಮರ ಕಡಿಯಲು ಬೆಂಗಳೂರಿನಿಂದ ಹೋದವರು ಮರ ಕಡಿದು ಲಾರಿಗೆ ತುಂಬಿಸುತ್ತಿದ್ದಂತೆ, ಲಾರಿಯ ನಂಬರ್ ಹಾಗೂ ಲಾರಿಯಲ್ಲಿ ಎಷ್ಟು ಲೋಡ್ ಇದೆ? ವಾಹನ ಎಲ್ಲಿಗೆ ಹೋಗುತ್ತದೆ ಎಂಬ ಬಗ್ಗೆ ಮಾಹಿತಿಯನ್ನು ಸ್ಮಗ್ಲರ್‌ ಗಳು ಈ ಇಬ್ಬರು ಪೊಲೀಸರಿಗೆ ನೀಡುತ್ತಿದ್ದರು. ಇದನ್ನೂ ಓದಿ: ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ – ಮೋದಿ ಟ್ವಿಟ್ಟರ್‌ ಖಾತೆ ಹ್ಯಾಕ್‌

    ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ ರಕ್ತ ಚಂದನ ವಶಕ್ಕೆ ಪಡೆಯುತ್ತಿದ್ದರು. ನಂತರ ಅದನ್ನು ಯಾರಿಗೂ ತೋರಿಸದೇ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ರೀತಿ ಹಣಗಳಿಸಿರುವ ಆರೋಪದ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.

  • 4.5 ಕೋಟಿ ಮೌಲ್ಯದ 9 ಟನ್ ರಕ್ತ ಚಂದನ ಜಪ್ತಿ

    4.5 ಕೋಟಿ ಮೌಲ್ಯದ 9 ಟನ್ ರಕ್ತ ಚಂದನ ಜಪ್ತಿ

    ಬೆಂಗಳೂರು: ಲಾಕ್‍ಡೌನ್ ವೇಳೆ ವಿದೇಶಕ್ಕೆ ರಪ್ತು ಮಾಡಲು ರಕ್ತ ಚಂದನ ಶೇಖರಿಸಿಟ್ಟಿದ್ದ ಅಡ್ಡೆ ಮೇಲೆ ಸಿಸಿಬಿ ದಾಳಿ ಮಾಡಿ ಇಬ್ಬರನ್ನು ಬಂಧಿಸಿದೆ.

    ಹುಳಿಮಾವು ಬಳಿಯ ಗೋಡೌನ್ ಬಳಿ ಅಕ್ರಮವಾಗಿ ರಕ್ತ ಚಂದನವನ್ನು ಶೇಖರಿಸಿ ಮಾರಾಟ ಮಾಡಲು ಯತ್ನಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಸಿಸಿಬಿ ಎಸಿಪಿ ಪರಮೇಶ್ವರ್ ನೇತೃತ್ವದ ತಂಡ ದಾಳಿ ನಡೆಸಿತ್ತು.

     

    ದಾಳಿ ವೇಳೆ ಆರೋಪಿಗಳಾದ ಆನಂದ್ ಕುಮಾರ್, ಅನಿಲ್ ಎಂಬುವರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವಿದೇಶಕ್ಕೆ ಸರಬರಾಜು ಮಾಡಲು ಬನ್ನೇರುಘಟ್ಟ ಹೊಮ್ಮದೇವನಹಳ್ಳಿ ಗೋಡನ್ ನಲ್ಲಿ ಇಟ್ಟಿರುವುದಾಗಿ ಮಾಹಿತಿ ಸಿಕ್ಕಿತ್ತು. ಇದನ್ನೂ ಓದಿ: ಗೋವಾದಿಂದ ಕೊರೊನಾ ನೆಗೆಟಿವ್ ವರದಿ ಇಲ್ಲದೆ ರಾಜ್ಯಕ್ಕೆ ಬಂದ ವರ- ಪೊಲೀಸರಿಂದ ನಿಶ್ಚಿತಾರ್ಥಕ್ಕೆ ಅವಕಾಶ

    ವಿದೇಶದಲ್ಲಿ ಸರಬಾರಾಜು ಮಾಡಲು ಬೆಂಗಳೂರಿನಲ್ಲಿ ಡೀಲರ್ ಗಳನ್ನು ಹುಡುಕುತ್ತಿದ್ದಾಗಿ ಬಾಯಿಬಿಟ್ಟಿದ್ದಾರೆ. ವಿದೇಶದಲ್ಲಿ ರಕ್ತಚಂದನಕ್ಕೆ ಬಹು ಬೇಡಿಕೆ ಇದೆ. ಅದ್ದರಿಂದ ಪಕ್ಕದ ಆಂಧ್ರದ ಚಿತ್ತೂರು ಜಿಲ್ಲೆ ಅರಣ್ಯ ಪ್ರದೇಶದಿಂದ ಕಳ್ಳಸಾಗಣಿಕೆ ಮಾಡಿಕೊಂಡು ಬಂದು ಬೆಂಗಳೂರಿನಲ್ಲಿ ಶೇಖರಣೆ ಮಾಡಿದ್ದಾಗಿ ಒಪ್ಪಿಕೊಂಡಿದ್ದರು.

    ಚೀನಾದಲ್ಲಿ ಸುಗಂಧ ದ್ರವ್ಯ ವಸ್ತುಗಳು, ಗೃಹ ಬಳಕೆ ವಸ್ತುಗಳ ಬಳಕೆಗೆ ಇದನ್ನು ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ.

  • 2 ಕೋಟಿ ಮೌಲ್ಯದ ರಕ್ತಚಂದನ ವಶ

    2 ಕೋಟಿ ಮೌಲ್ಯದ ರಕ್ತಚಂದನ ವಶ

    – ಹಡಗಿನ ಮೂಲಕ ವಿದೇಶಕ್ಕೆ ಸಾಗಿಸುವ ಮಾಸ್ಟರ್ ಪ್ಲಾನ್ ವಿಫಲ

    ಮಂಗಳೂರು: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಬರೋಬ್ಬರಿ 2 ಕೋಟಿ ರೂ. ಮೌಲ್ಯದ ರಕ್ತಚಂದನವನ್ನು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಎಸ್ಟೇಟ್‍ನ ಕಟ್ಟಡವೊಂದರಲ್ಲಿ ಅಕ್ರಮವಾಗಿ ರಕ್ತಚಂದನವನ್ನು ದಾಸ್ತಾನು ಇರಿಸಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಣಂಬೂರು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 4 ಸಾವಿರ ಕೆಜಿ ರಕ್ತಚಂದನ ಪತ್ತೆಯಾಗಿದೆ.

    ರಕ್ತಚಂದನವನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಶೇಖ್ ತಬ್ರೇಜ್ (35), ರಾಕೇಶ್ ಶೆಟ್ಟಿ (44), ಲೋಹಿತ್ (36), ಫಾರೂಕ್ (45), ಹುಸೇನ್ ಕುಂಞ (46) ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಈ ರಕ್ತ ಚಂದನವನ್ನು ಮಂಗಳೂರಿನ ಎನ್‍ಎಂಪಿಟಿ ಬಂದರು ಮೂಲಕ ವಿದೇಶಕ್ಕೆ ಸಾಗಿಸಲು ತಯಾರಿ ನಡೆಸಿದ್ದು, ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಆರೋಪಿಗಳಿಂದ ರಕ್ತಚಂದನ, ಬ್ರೀಝಾ, ಮಾರುತಿ ಕಾರು ಸಹಿತ ಒಟ್ಟು 2.20 ಕೋಟಿ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 3.5 ಕೋಟಿ ರೂ. ಮೌಲ್ಯದ ರಕ್ತ ಚಂದನ ಕಳ್ಳ ಸಾಗಣೆ: 13 ಮಂದಿ ಅರೆಸ್ಟ್

    3.5 ಕೋಟಿ ರೂ. ಮೌಲ್ಯದ ರಕ್ತ ಚಂದನ ಕಳ್ಳ ಸಾಗಣೆ: 13 ಮಂದಿ ಅರೆಸ್ಟ್

    – 10 ವರ್ಷಗಳ ಬಳಿಕ ಬಲೆಗೆ ಬಿದ್ದ ಕಿಂಗ್‍ಫಿನ್

    ಬೆಂಗಳೂರು: 3.5 ಕೋಟಿ ರೂ. ಮೌಲ್ಯದ ರಕ್ತ ಚಂದನ ಕಳ್ಳ ಸಾಗಣೆ ಮಾಡುತ್ತಿದ್ದ 13 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್, ರಕ್ತ ಚಂದನ ಕಳ್ಳ ಸಾಗಣೆಯ ಕಿಂಗ್ ಫಿನ್ ರಶೀದ್ ಕಳೆದ ಹತ್ತು ವರ್ಷಗಳಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ. ಆದರೆ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಆರೋಪಿಗಳನ್ನು ಬಂಧಿಸಲು ಕಳೆದ ಎರಡು ತಿಂಗಳಿಂದ ಕಾರ್ಯಚರಣೆ ನಡೆಸಲಾಗಿದ್ದು, ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

    ಬಂಧಿತರು ಅಂತರ್ ರಾಜ್ಯ ಕಳ್ಳರಾಗಿದ್ದಾರೆ. ರಶೀದ್ ಅಂಡ್ ಟೀಂ ರಕ್ತ ಚಂದನವನ್ನು ಚೆನ್ನೈ ಹಾಗೂ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದರು. ಈ ಜಾಲವನ್ನು ಪತ್ತೆ ಹಚ್ಚಿ, ಆರೋಪಿಗಳನ್ನು ಬಂಧಿಸಿದ್ದೇವೆ. ಆರೋಪಿಗಳಿಂದ 3.5 ಕೋಟಿ ರೂ. ಮೌಲ್ಯದ 4 ಸಾವಿರ ಕೆಜಿ ರಕ್ತಚಂದನ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

    ಸಿಸಿಬಿ ಪೊಲೀಸ್ ಸಿಬ್ಬಂದಿ ಯಶಸ್ವಿಯಾಗಿ ಕಾರ್ಯಾಚಣೆ ನಡೆಸಿದ್ದಾರೆ. ಹೀಗಾಗಿ ಅವರಿಗೆ 2 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

    ಇದೇ ವೇಳೆ ಮಾತನಾಡಿದ ಸಿಸಿಬಿ ಪೊಲೀಸ್ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್ ಅವರು, ರಶೀದ್ ಮೇಲೆ ವಿವಿಧ ಪ್ರಕರಣ ದಾಖಲಾಗಿವೆ. ರಶೀದ್ ಮುಂಬೈ, ಚೆನ್ನೈಗೆ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ. ಈ ತಂಡದ ಮತ್ತೊಬ್ಬ ಪ್ರಮುಖ ಆರೋಪಿ ಜುಬೇರ್ ಮೂಲತಃ ಕಟ್ಟಿಗೇನ ಹಳ್ಳಿಯ ನಿವಾಸಿಯಾಗಿದ್ದು, ಎಚ್‍ಎಎಲ್‍ನಲ್ಲಿ ವಾಸಿಸುತ್ತಿದ್ದಾನೆ. ಹುಸ್ಕೂರ್ ಗೇಟ್ ಬಳಿ ಎರಡು ಗೋದಾಮು ನಿರ್ಮಾಣ ಮಾಡಿದ್ದು, ಅಲ್ಲಿ ಅಕ್ರಮವಾಗಿ ರಕ್ತ ಚಂದನವನ್ನು ಸಂಗ್ರಹಿಸುತ್ತಿದ್ದ ಎಂದು ಮಾಹಿತಿ ನೀಡಿದರು.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ನೆರೆಯ ರಾಜ್ಯದಲ್ಲಿ ಪರಿಶೀಲನೆ ನಡೆಸಲಾಗುತ್ತಿತ್ತು. ಇದರಿಂದಾಗಿ ಆರೋಪಿಗಳು ರಕ್ತ ಚಂದನ ಸಾಗಣೆ ಮಾಡುವುದನ್ನು ನಿಲ್ಲಿಸಿದ್ದರು. ಈ ಮೂಲಕ ಬೇರೆ ಬೇರೆ ಜಾಗ, ಗೋದಾಮುಗಳಲ್ಲಿ ಭಾರೀ ಪ್ರಮಾಣದ ರಕ್ತ ಚಂದನ ಸಿಕ್ಕಿದೆ ಎಂದು ತಿಳಿಸಿದರು.

    ಆರೋಪಿಗಳು ಈಗಾಗಲೇ ಚೆನ್ನೈ, ಮುಂಬೈ ಹಾಗೂ ಆಂಧ್ರಪ್ರದೇಶಕ್ಕೆ ಸ್ವಲ್ಪ ಪ್ರಮಾಣದ ರಕ್ತ ಚಂದನವನ್ನು ಸಾಗಿಸಿದ್ದಾರೆ. ಹೀಗಾಗಿ ಅಲ್ಲಿನ ಅಧಿಕಾರಿಗಳ ಜೊತೆಗೆ ಸಂಪರ್ಕ ಸಾಧಿಸಿ, ಅದನ್ನು ಮರಳಿ ತರಲಾಗುತ್ತದೆ ಎಂದರು.