ನವದೆಹಲಿ: ಟ್ರಂಪ್ ಸುಂಕ (Tariff) ಸಮರಕ್ಕೆ ತಿರುಗೇಟು ನೀಡುವ ನಿಟ್ಟಿನಲ್ಲಿ ಅಮೆರಿಕದ ಶಸ್ತ್ರಾಸ್ತ್ರ, ವಿಮಾನ ಖರೀದಿಸುವ ಯೋಜನೆಯನ್ನು ಭಾರತ ಸ್ಥಗಿತಗೊಳಿಸಿದೆ ಎಂಬ ಸುದ್ದಿ ಸುಳ್ಳು ಎಂದು ರಕ್ಷಣಾ ಸಚಿವಾಲಯ (Defence Ministry) ಸ್ಪಷ್ಟಪಡಿಸಿದೆ.
ಡೊನಾಲ್ಡ್ ಟ್ರಂಪ್ (Donald Trump) ಭಾರತೀಯ ಸರಕುಗಳ ಮೇಲೆ ಹೆಚ್ಚುವರಿಯಾಗಿ 25% ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ ನಂತರ ಭಾರತ ಅಮೆರಿಕದಿಂದ ರಕ್ಷಣಾ ಖರೀದಿಯನ್ನು ಸ್ಥಗಿತಗೊಳಿಸಿದೆ ಎಂಬ ಮಾಧ್ಯಮ ವರದಿಗಳನ್ನು ಸಚಿವಾಲಯ ನಿರಾಕರಿಸಿದೆ. ಇದನ್ನೂ ಓದಿ: ಟ್ರಂಪ್ ಸುಂಕ ಶಾಕ್ ಬೆನ್ನಲ್ಲೇ ಈ ವರ್ಷ ಭಾರತಕ್ಕೆ ಪುಟಿನ್ ಭೇಟಿ
The news reports on India pausing the talks related to defence purchases with the US are false and fabricated. It is clarified that the various cases of procurement are being progressed as per the extant procedures: Defence Ministry officials pic.twitter.com/2GalSZ59iU
ಅಮೆರಿಕದ ಹೊಸ ಶಸ್ತ್ರಾಸ್ತ್ರಗಳು ಮತ್ತು ವಿಮಾನಗಳನ್ನು ಖರೀದಿಸುವ ಯೋಜನೆಯನ್ನು ಭಾರತ ಸ್ಥಗಿತಗೊಳಿಸಿದೆ ಎಂಬ ಸುದ್ದಿಗಳು ಹರಡಿದ್ದವು. ಈ ವರದಿಗಳೆಲ್ಲ ಸುಳ್ಳು. ಖರೀದಿಯು ಕಾರ್ಯವಿಧಾನಗಳ ಪ್ರಕಾರವೇ ಮುಂದುವರಿಯಲಿದೆ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕೆಲವು ಖರೀದಿಗಳ ಕುರಿತು ಘೋಷಣೆಗಾಗಿ ಮುಂಬರುವ ವಾರಗಳಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಅಮೆರಿಕಗೆ ಕಳುಹಿಸುವ ಭಾರತದ ಯೋಜನೆಗಳನ್ನು ಸಹ ರದ್ದುಗೊಳಿಸಲಾಗಿದೆ ಎಂದು ಕೂಡ ವರದಿಗಳು ಪ್ರಕಟವಾಗಿದ್ದವು. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಶಾಕ್ – ಆಮದುಗಳ ಮೇಲೆ 50% ಸುಂಕ ವಿಧಿಸಿದ ಟ್ರಂಪ್
ರಷ್ಯಾದಿಂದ ತೈಲ ಖರೀದಿಸಿದ್ದಕ್ಕಾಗಿ ಭಾರತದ ವಿರುದ್ಧ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಷ್ಯಾ ಜೊತೆಗಿನ ತೈಲ ಖರೀದಿಯನ್ನು ನಿಲ್ಲಿಸದಿದ್ದರೆ ಭಾರಿ ದಂಡ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಅದರಂತೆ ಆ.1ರಿಂದಲೇ ಜಾರಿಗೆ ಬರುವಂತೆ ಭಾರತದ ಮೇಲೆ 25% ಟ್ಯಾರಿಫ್ ವಿಧಿಸಿಸಿರುವುದಾಗಿ ಘೋಷಿದ್ದರು. ಬಳಿಕ ಮತ್ತೆ 25% ಹೆಚ್ಚುವರಿ ಟ್ಯಾರಿಫ್ ಘೋಷಿಸಿದ್ದರು.
ಅಮೆರಿಕ, ಭಾರತೀಯ ರಫ್ತಿನ ಮೇಲಿನ ಒಟ್ಟು ಸುಂಕವನ್ನು ಶೇ.50 ಕ್ಕೆ ಏರಿಸಿತು. ಇದು ಯಾವುದೇ ಯುಎಸ್ ವ್ಯಾಪಾರ ಪಾಲುದಾರರಲ್ಲಿ ಅತ್ಯಧಿಕವಾಗಿದೆ.
– ಇನ್ನೊಂದೇ ವರ್ಷದಲ್ಲಿ ನೆಕ್ಸ್ಟ್ ಜನರೇಷನ್ ʻಬ್ರಹ್ಮೋಸ್ʼ ಮಿಸೈಲ್ ಸಿದ್ಧ
ನವದೆಹಲಿ: ಭಾರತ-ಪಾಕಿಸ್ತಾನ ನಡುವಿನ ಸಂಘರ್ಷ ತೀವ್ರಗೊಂಡಿರುವ ಹೊತ್ತಿನಲ್ಲೇ ಭಾರತ ರಕ್ಷಣಾ ವಲಯದ ಸಾಮರ್ಥ್ಯ ಬಲಪಡಿಸುವ ನಿಟ್ಟಿನಲ್ಲಿ ಬಹುದೊಡ್ಡ ಹೆಜ್ಜೆಯನ್ನಿಟ್ಟಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರಿಂದು ಉತ್ತರ ಪ್ರದೇಶದ ಲಕ್ನೋದಲ್ಲಿರುವ ಡಿಫೆನ್ಸ್ ಕಾರಿಡಾರ್ನಲ್ಲಿ ನಿರ್ಮಿಸಲಾಗಿರುವ ʻಬ್ರಹ್ಮೋಸ್ʼ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಉತ್ಪಾದನಾ ಘಟಕವನ್ನು (BrahMos Production Unit) ವರ್ಚುವಲ್ ಮೂಲಕ ಉದ್ಘಾಟಿಸಿದರು.
आज जिस ब्रह्मोस फैसिलिटी का उद्घाटन हम कर रहे हैं, इस फैसिलिटी की शुरुआत से ही लगभग 500 Direct और 1000 Indirect रोजगार सृजित होंगे, यह भी कहीं न कहीं उस इकोसिस्टम के कारण ही संभव हो पाया है, जो श्री योगी आदित्यनाथ जी ने यहां डेवलप किया है: माननीय रक्षा मंत्री श्री @rajnathsingh… pic.twitter.com/ThHlQJb0pA
ರಕ್ಷಣಾ ವಲಯದ ಸಾಮರ್ಥ್ಯ ಹೆಚ್ಚಿಸಲು ನಿರ್ಮಿಸಲಾಗಿರುವ ಈ ಘಟಕವು ವಾರ್ಷಿಕವಾಗಿ 80 ರಿಂದ 100 ಕ್ಷಿಪಣಿಗಳನ್ನು ಉತ್ಪಾದಿಸುವ ಗುರಿ ಹೊಂದಿದೆ. ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ʻಬ್ರಹ್ಮೋಸ್’ (BrahMos) ವಿಶ್ವದ ಅತ್ಯಂತ ವೇಗದ ಮತ್ತು ವಿನಾಶಕಾರಿ ಕ್ಷಿಪಣಿಗಳಲ್ಲಿ ಒಂದಾಗಿದೆ ಎಂಬುದೇ ವಿಶೇಷ. ಹಾಗಾಗಿ ಕ್ಷಿಪಣಿ ಉತ್ಪಾದನಾ ಘಟಕವು ಉತ್ತರ ಪ್ರದೇಶದ ರಕ್ಷಣಾ ವಲಯಕ್ಕೆ ಮಾತ್ರವಲ್ಲದೇ, ಇಡೀ ಭಾರತದ ರಕ್ಷಣಾ ವಲಯಕ್ಕೆ ಬಲ ತುಂಬಲಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಮುಂದುವರಿಯುತ್ತದೆ – ಭಾರತೀಯ ವಾಯುಸೇನೆ ಅಧಿಕೃತ ಘೋಷಣೆ
आज जो ब्रह्मोस फैसिलिटी शुरू हो रही है, मैं समझता हूं, वह यूपी डिफेंस कॉरिडोर का गौरव होगा। यह सिर्फ उत्तर प्रदेश का ही नहीं, बल्कि देश का सबसे बड़ा ब्रह्मोस Integration and Testing Facility Center है।
2018ರ ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ರಕ್ಷಣಾ ಕೈಗಾರಿಕಾ ಕಾರಿಡಾರ್ ಉಪಕ್ರಮದ ಭಾಗವಾಗಿ ಉತ್ಪಾದನಾ ಘಟಕವನ್ನು ಘೋಷಿಸಲಾಯಿತು. ಇದಕ್ಕೆ 2021 ರಲ್ಲಿ ಅಡಿಪಾಯ ಹಾಕಲಾಗಿತ್ತು. ಇದು ಭಾರತ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ರಷ್ಯಾದ ಸರ್ಕಾರಿ ಸಂಸ್ಥೆ NPO ಮಶಿನೋಸ್ಟ್ರೋನಿನ್ಯಾ ನಡುವಿನ ಜಂಟಿ ಉದ್ಯಮವಾಗಿದೆ. ಇದರಲ್ಲಿ ಭಾರತದ ಪಾಲು ಶೇ.50.5 ಮತ್ತು ರಷ್ಯಾದ ಪಾಲು ಶೇ.49.5 ರಷ್ಟಿದೆ ಎಂದು ವರದಿಗಳು ತಿಳಿಸಿವೆ.
लगभग ₹30,000 करोड़ का निवेश उत्तर प्रदेश के अंदर डिफेंस सेक्टर में होने जा रहा है… pic.twitter.com/tEdHQ3BAgl
ಈ ಘಟಕವನ್ನು ಸುಮಾರು 300 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದಕ್ಕಾಗಿ ಯುಪಿ ರಾಜ್ಯ ಸರ್ಕಾರವು ಲಕ್ನೋದಲ್ಲಿ 80 ಹೆಕ್ಟೇರ್ ಭೂಮಿಯನ್ನು ಉಚಿತವಾಗಿ ನೀಡಿದೆ. ಸುಮಾರು 3 ವರ್ಷಗಳ ದಾಖಲೆ ಸಮಯದ ಬಳಿಕ ಘಟಕ ನಿರ್ಮಾಣ ಪೂರ್ಣಗೊಂಡಿದ್ದು, ರಾಜ್ಯದ ಮೊದಲ ಹೈಟೆಕ್ ರಕ್ಷಣಾ ಉತ್ಪಾದನಾ ಕೇಂದ್ರ ಇದಾಗಲಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರ | ಲಷ್ಕರ್ ಮುಖ್ಯಸ್ಥ ಸೇರಿ 140 ಉಗ್ರರು ಉಡೀಸ್
ಈ ಘಟಕದಲ್ಲಿ ಬ್ರಹ್ಮೋಸ್ ಕ್ಷಿಪಣಿ ಜೊತೆಗೆ ಇತರ ರಕ್ಷಣಾ ಉತ್ಪನ್ನಗಳು ಹಾಗೂ ಏರೋಸ್ಪೇಸ್ ತಂತ್ರಜ್ಞಾನಕ್ಕೆ ಸಂಬಂಧಿಸಿದ ಉಪಕರಣಗಳನ್ನೂ ತಯಾರಿಸಲಾಗುತ್ತದೆ. ಸುಮಾರು 500 ಮುಖ್ಯ ಇಂಜಿನಿಯರ್ಗಳು ಮತ್ತು ತಾಂತ್ರಿಕ ಸಿಬ್ಬಂದಿ ಕೆಲಸ ನಿರ್ವಹಿಸಲಿದ್ದು, ಸಾವಿರಾರು ಮಂದಿ ಸಹ ಸಿಬ್ಬಂದಿಗಳೂ ಸಹ ಇರಲಿದ್ದಾರೆ. ಇದನ್ನೂ ಓದಿ: 6 ವರ್ಷಗಳ ಬಳಿಕ ಪುಲ್ವಾಮಾ ದಾಳಿಯಲ್ಲಿ ತನ್ನ ಪಾತ್ರ ಒಪ್ಪಿಕೊಂಡ ಕುತಂತ್ರಿ ಪಾಕ್
1 ವರ್ಷದಲ್ಲಿ ನೆಕ್ಸ್ಟ್ ಜನರೇಷನ್ ಮಿಸೈಲ್ ಸಿದ್ಧ:
ಸದ್ಯಕ್ಕೆ ವಾರ್ಷಿಕವಾಗಿ 80 ರಿಂದ 100 ಬ್ರಹ್ಮೋಸ್ ಮಿಸೈಲ್ ತಯಾರಿಸುವ ಗುರಿಯನ್ನು ಘಟಕ ಹಾಕಿಕೊಂಡಿದೆ. ಜೊತೆಗೆ ಇನ್ನೊಂದು ವರ್ಷದಲ್ಲಿ ಮುಂದಿನ ತಲೆಮಾರಿನ ಕ್ಷಿಪಣಿ ಸಿದ್ಧಪಡಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ. ಪ್ರಸ್ತುತ ಬ್ರಹ್ಮೋಸ್ ಕ್ಷಿಪಣಿ 2,900 ಕೆಜಿ ತೂಗುತ್ತದೆ. ಆದ್ರೆ ಮುಂದಿನ ಪೀಳಿಗೆಯ ಬ್ರಹ್ಮೋಸ್ ಕ್ಷಿಪಣಿ 1,290 ಕೆಜಿ ತೂಕ ಹೊಂದಿರಲಿದ್ದು, ದಾಳಿಯ ವ್ಯಾಪ್ತಿಯು 300 ಕಿಮೀ ಗಿಂತಲೂ ಹೆಚ್ಚಿರಲಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: Ceasefire | ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯುವಂತೆ ಕಾಂಗ್ರೆಸ್ ಆಗ್ರಹ
ಪಾಕ್ಗೆ ನಡುಕ ಶುರುವಾಗಿದ್ದೇಕೆ?
2022ರ ಮಾರ್ಚ್ 9ರ ಸಂಜೆಯ ವೇಳೆ ಹರಿಯಾಣದ ಸಿರ್ಸಾದಿಂದ ಬ್ರಹ್ಮೋಸ್ ಕ್ಷಿಪಣಿ ಆಕಸ್ಮಿಕವಾಗಿ ಉಡಾವಣೆಯಾಗಿ ಕೇವಲ 3 ನಿಮಿಷ 44 ಸೆಕೆಂಡ್ನಲ್ಲಿ 124 ಕಿಮೀ ಕ್ರಮಿಸಿ ಪಾಕಿಸ್ತಾನದ ಭೂ ಪ್ರದೇಶದ ಒಳಗಡೆ ಬಿದ್ದಿತ್ತು. ಈ ಘಟನೆಯಿಂದ ಯಾವುದೇ ಸಾವು, ನೋವು ಸಂಭವಿಸದೇ ಇದ್ದರೂ ಈ ಕ್ಷಿಪಣಿಯನ್ನು ತಡೆಯಲು ಪಾಕಿಸ್ತಾನದಿಂದ ಸಾಧ್ಯವಾಗಿರಲಿಲ್ಲ. ಇದೀಗ ಯುದ್ಧದ ಛಾಯೆ ಕವಿದಿರುವ ಹೊತ್ತಿನಲ್ಲೇ ಭಾರತ ಬ್ರಹ್ಮೋಸ್ ಕ್ಷಿಪಣಿ ಘಟಕ ಉದ್ಘಾಟಿಸುತ್ತಿರುವುದು ಪಾಕ್ಗೆ ನಡುಕ ಉಂಟಾಗುವಂತೆ ಮಾಡಿದೆ. ಇದನ್ನೂ ಓದಿ: ಪಾಕ್ನ ಶೆಲ್ ತುಣುಕು ಅಮ್ಮನ ಮುಖವನ್ನೇ ಸೀಳಿತು – ʻಪಬ್ಲಿಕ್ ಟಿವಿʼ ಬಳಿ ಬಾರಾಮುಲ್ಲಾ ಜನರ ಅಳಲು
ನವದೆಹಲಿ: ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯೊಂದಿಗೆ ಮುನ್ನುಗ್ಗುತ್ತಿರುವ ಭಾರತ ಶತ್ರು ಸೇನೆಗಳ ಹುಟ್ಟಡಗಿಸಲು ಸೂಕ್ತ ತಯಾರಿ ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಭಾರತ ಸ್ವದೇಶಿ ನಿರ್ಮಿತ ಆಯುಧಗಳನ್ನೇ ಸೇನೆಗೆ ಸೇರ್ಪಡೆಗೊಳಿಸಲು ಒಂದಾದ ಮೇಲೊಂದು ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕೆಲದಿನಗಳ ಹಿಂದೆಯಷ್ಟೇ ಚೀನಾ ಮತ್ತು ಪಾಕ್ ಗಡಿಯಲ್ಲಿ ಭಾರತ ಗಸ್ತು ಹೆಚ್ಚಿಸಲು 156 ಲಘು ಯುದ್ಧ ಹೆಲಿಕಾಪ್ಟರ್ಗಳ ಖರೀದಿಗೆ ಒಪ್ಪಿಗೆ ಸೂಚಿಸಿತ್ತು. ಇದೀಗ ರಕ್ಷಣಾ ಸಚಿವಾಲಯವು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಜೊತೆಗೆ ಸು-30ಎಂಕೆಐ (Su-30MKI) ವಿಮಾನಗಳಿಗಾಗಿ 240 ಏರೋ ಎಂಜಿನ್ಗಳ (Aero Engines) ತಯಾರಿಕೆಗಾಗಿ 26,000 ಕೋಟಿ ರೂ.ಗಳ ಮಹತ್ವದ ಒಪ್ಪಂದಕ್ಕೆ ಸೋಮವಾರ ಸಹಿ ಹಾಕಿದೆ.
ಆತ್ಮನಿರ್ಭರ್ ಭಾರತ್ ಉಪಕ್ರಮಕ್ಕೆ ಉತ್ತೇಜನ ನೀಡುವ ಸಲುವಾಗಿ, ರಕ್ಷಣಾ ಸಚಿವಾಲಯವು 26,000 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದೆ. ಏರೋ-ಎಂಜಿನ್ಗಳನ್ನು HALನ ಕೊರಾಪುಟ್ ವಿಭಾಗವು ತಯಾರಿಸಲಿದೆ. ಈ ಮೂಲಕ ಹೆಚ್ಎಎಲ್ Su-30MKI ಕಾರ್ಯಾಚರಣೆಯ ಸಾಮರ್ಥ್ಯವನ್ನು ಉಳಿಸಿಕೊಳ್ಳುವಲ್ಲಿ ಭಾರತೀಯ ವಾಯುಪಡೆಗೆ ಸಹಾಯ ಮಾಡುವ ನಿರೀಕ್ಷೆಯಿದೆ. ಇದನ್ನೂ ಓದಿ: SEBEX 2: ಭಾರತದಿಂದ ಪರಮಾಣು ರಹಿತ ಬಾಂಬ್ ಅಭಿವೃದ್ಧಿ – ಶತ್ರು ರಾಷ್ಟ್ರಗಳಲ್ಲಿ ಹೆಚ್ಚಿದ ನಡುಕ!
ಒಪ್ಪಂದದ ಪ್ರಕಾರ, ಹೆಚ್ಎಎಲ್ ವರ್ಷಕ್ಕೆ 30 ಏರೋ-ಎಂಜಿನ್ಗಳನ್ನು ಪೂರೈಸುತ್ತದೆ. ಮುಂದಿನ 8 ವರ್ಷಗಳ ಅವಧಿಯಲ್ಲಿ ಎಲ್ಲಾ 240 ಎಂಜಿನ್ಗಳನ್ನು ಪೂರೈಕೆ ಮಾಡಲಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಈ ಯೋಜನೆಯ ಮುಕ್ತಾಯದ ವೇಳೆಗೆ ಒಟ್ಟು ಶೇ.54 ರಷ್ಟಿರುವ ಸ್ವದೇಶಿ ಉತ್ಪನ್ನವನ್ನು ಶೇ.64ಕ್ಕೆ ಹೆಚ್ಚಿಸುವ ಗುರಿಯನ್ನು ಹೆಚ್ಎಎಲ್ ಹೊಂದಿದೆ. ಇದನ್ನೂ ಓದಿ: ಭಾರತೀಯ ಸೇನೆಗೆ ಹೆಚ್ಚಿದ ಬಲ – ಶತ್ರು ಸೇನೆಗಳಿಗೆ ನಡುಕ!
ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯೊಂದಿಗೆ ಮುನ್ನುಗ್ಗುತ್ತಿರುವ ಭಾರತ ಶತ್ರು ಸೇನೆಗಳ ಹುಟ್ಟಡಗಿಸಲು ಸೂಕ್ತ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಭಾರತ ಸ್ವದೇಶಿ ನಿರ್ಮಿತ ಆಯುಧಗಳನ್ನೇ ಸೇನೆಗೆ ಸೇರ್ಪಡೆಗೊಳಿಸಲು ಸಿದ್ಧತೆ ನಡೆಸಿದೆ. ಕೆಲ ದಿನಗಳ ಹಿಂದೆಯಷ್ಟೇ ಭಾರತ ಅಗ್ನಿ-5 (AGNI – 5) ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಪ್ರಯೋಗ ನಡೆಸಿತ್ತು. 5,000 ಕಿಮೀ ದೂರದಲ್ಲಿರುವ ಗುರಿಯನ್ನು ತಲುಪಿ ಶತ್ರುಗಳನ್ನು ಕೊಲ್ಲುವ ಸಾಮರ್ಥ್ಯದ ಈ ಕ್ಷಿಪಣಿಯನ್ನು ರಕ್ಷಣಾ ಸಚಿವಾಲಯ ಸೇನೆಗೆ ಸೇರಿಸುವ ಸಿದ್ಧತೆ ನಡೆಸಿದೆ. ಅಲ್ಲದೇ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವದೇಶಿ ನಿರ್ಮಿತ ಆಧುನಿಕ ತಂತ್ರಜ್ಞಾನ ಒಳಗೊಂಡಿರುವ ʻನಾಗಾಸ್ತ್ರʼವನ್ನು (ಆತ್ಮಹತ್ಯಾ ಡ್ರೋನ್) (Suicide Drone) ಭಾರತೀಯ ಸೇನೆಗೆ ಸೇರಿಸುವ ತಯಾರಿ ನಡೆದಿದೆ. ಇದಾದ ಒಂದೆರಡು ದಿನಗಳಲ್ಲೇ ಚೀನಾ ಮತ್ತು ಪಾಕ್ ಗಡಿಯಲ್ಲಿ ಭಾರತ ಗಸ್ತು ಹೆಚ್ಚಿಸಲು 156 ಲಘು ಯುದ್ಧ ಹೆಲಿಕಾಪ್ಟರ್ಗಳ ಖರೀದಿಗೆ ಮುಂದಾಗಿದೆ.
ಹಾಗಾದ್ರೆ ಭಾರತದ ರಕ್ಷಣಾ ವಲಯದಲ್ಲಿ (India’s Defense Sector) ಆಗುತ್ತಿರುವ ಬೆಳವಣಿಗೆಗಳು ಏನು? ಸೇನಾ ಸಾಮರ್ಥ್ಯ ಹೆಚ್ಚಿಸಲು ಯಾವೆಲ್ಲ ಕ್ರಮಗಳನ್ನು ಮತ್ತು ಏಕೆ ಕೈಗೊಳ್ಳಲಾಗುತ್ತಿದೆ? ಅನ್ನೋ ಬಗ್ಗೆ ತಿಳಿಯೋಣ…
ಚೀನಾ-ಪಾಕ್ಗೆ ಠಕ್ಕರ್ ಕೊಡಲು ಪ್ಲ್ಯಾನ್:
ಇತ್ತೀಚೆಗೆ ಚೀನಾ, ಭಾರತದ ಸಿಕ್ಕಿಂನಿಂದ ಸುಮಾರು 150 ಕಿಮೀ ಮೀಟರ್ಗಳಷ್ಟು ದೂರದ ಪ್ರದೇಶದಲ್ಲಿ 150ಕ್ಕೂ ಹೆಚ್ಚು ಅತ್ಯಾಧುನಿಕ ಫೈಟರ್ ಜೆಟ್ಗಳನ್ನ ನಿಯೋಜಿಸಿದೆ. ಅಲ್ಲದೇ ಚೀನಾ ನೆರವಿನಿಂದಲೇ ಎದುರಾಳಿ ಪಾಕಿಸ್ತಾನ ಗಡಿ ಭಾಗದಲ್ಲಿ ಭದ್ರತೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳಿಗೆ ಠಕ್ಕರ್ ಕೊಡಲು ಭಾರತ ಸಹ ತನ್ನ ಸೇನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಮುಂದಾಗಿದೆ. ಅದಕ್ಕಾಗಿ ಭಾರತೀಯ ಸೇನೆಗೆ 90 ಮತ್ತು ಭಾರತೀಯ ವಾಯುಸೇನೆಗೆ 66 ಲಘು ಯುದ್ಧ ಹೆಲಿಕಾಪ್ಟರ್ಗಳ (ಪ್ರಚಂಡ್) ಖರೀದಿಗಾಗಿ ಪ್ರಸ್ತಾವನೆ ಸಲ್ಲಿಸಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಡೆಟ್ಗೆ (HAL) 45,000 ಕೋಟಿ ರೂ.ಗೆ ಟೆಂಡರ್ ನೀಡಿದೆ. `ಪ್ರಚಂಡ್ʼ ಹೇಲಿಕಾಪ್ಟರ್ (Prachand Helicopter) 5,000 ಮೀಟರ್ (16,400 ಅಡಿ) ಎತ್ತರದಲ್ಲಿ ಲ್ಯಾಂಡಿಂಗ್ ಮತ್ತು ಟೇಕಾಫ್ ಮಾಡುವ ಸಾಮರ್ಥ್ಯ ಹೊಂದಿದ್ದು, ಸಿಯಾಚಿನ್ ಹಿಮನದಿ ಮತ್ತು ಪೂರ್ವ ಲಡಾಖ್ ನಂತಹ ಎತ್ತರದ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಸೂಕ್ತವಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಅಣ್ವಸ್ತ್ರಗಳ ಬಲ ಹೆಚ್ಚಿಸಿಕೊಂಡ ಭಾರತ:
ಹೌದು. ವಿಶ್ವದ 9 ರಾಷ್ಟ್ರಗಳು 2023ರಲ್ಲಿ ಅಣ್ವಸ್ತ್ರಗಳನ್ನು (Nuclear Weapons) ಆಧುನಿಕರಣಗೊಳಿಸುವುದರ ಜೊತೆಗೆ ಹೊಸ ಪರಮಾಣು ಸಾಮರ್ಥ್ಯದ ಶಸ್ತ್ರಾಸ್ತ್ರ ವ್ಯವಸ್ಥೆ ನಿಯೋಜಿಸಿವೆ. ಅಮೆರಿಕ, ರಷ್ಯಾ, ಫ್ರಾನ್ಸ್, ಚೀನಾ, ದಕ್ಷಿಣ ಕೊರಿಯಾ, ಇಸ್ರೇಲ್ ಅಲ್ಲದೇ ಭಾರತವೂ ಸಹ ಈ ರಾಷ್ಟ್ರಗಳ ಪಟ್ಟಿಯಲ್ಲಿದೆ. ಜಾಗತಿಕ ಮಟ್ಟದಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವ ವಿಚಾರದಲ್ಲಿ ಮುನ್ನುಗ್ಗುತ್ತಿರುವ ಭಾರತ ಅಣ್ವಸ್ತ್ರಗಳ ಸಾಮರ್ಥ್ಯವನ್ನೂ ಹೆಚ್ಚಿಸಿಕೊಳ್ಳುತ್ತಿರುವುದು ಗಮನಾರ್ಹವಾಗಿದೆ. ಸದ್ಯ ಅತಿಹೆಚ್ಚು ಅಣ್ವಸ್ತ್ರಗಳನ್ನು ಹೊಂದಿರುವ ವಿಶ್ವದ ಅಗ್ರ ರಾಷ್ಟ್ರಗಳ ಪೈಕಿ ಭಾರತ 4ನೇ ಸ್ಥಾನಕ್ಕೆ ಏರಿಕೆ. ಅಮೆರಿಕ 5,044, ರಷ್ಯಾ 5,580, ಚೀನಾ 476, ಭಾರತ 172, ಪಾಕಿಸ್ತಾನ 170, ಇಸ್ರೇಲ್ 90, ಉತ್ತರ ಕೊರಿಯಾ 50 ಪರಮಾಣು ಅಸ್ತ್ರಗಳನ್ನು ಒಳಗೊಂಡಿವೆ.
ಶತ್ರುಗಳಲ್ಲಿ ನಡುಕ ಹುಟ್ಟಿಸಿದ ನಾಗಾಸ್ತ್ರ:
ನಾಗಾಸ್ತ್ರ-1 ಡ್ರೋನ್ (Nagastra – 1) ಅನ್ನು ಅತ್ಯಂತ ನಿಖರವಾದ ದಾಳಿ ನಡೆಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾಗಿದ್ದು, ಜಿಪಿಎಸ್ ನಿರ್ದೇಶನದ ನೆರವಿನಿಂದ ಗುರಿಯ ಕೇವಲ 2 ಮೀಟರ್ ವ್ಯಾಪ್ತಿಯಲ್ಲಿ ನಿಖರ ದಾಳಿ ನಡೆಸಬಲ್ಲದು. ಅಲ್ಲದೇ ಇದು ಸ್ಥಿರ ರೆಕ್ಕೆಗಳನ್ನು ಹೊಂದಿದ್ದು, ಓರ್ವ ವ್ಯಕ್ತಿಯೇ ಕೊಂಡೊಯ್ಯುವಷ್ಟು ಹಗುರವಾಗಿದೆ. ಕೇವಲ 9 ಕೆಜಿ ತೂಕ ಹೊಂದಿದ್ದು, ಗರಿಷ್ಠ 30 ನಿಮಿಷಗಳಷ್ಟು ಕಾಲ ಹಾರಾಟ ನಡೆಸುವ ಸಾಮರ್ಥ್ಯ ಹೊಂದಿದೆ. ಡ್ರೋನ್ ಹೊಂದಿರುವ ಎಲೆಕ್ಟ್ರಿಕ್ ಪ್ರೊಪಲ್ಷನ್ ವ್ಯವಸ್ಥೆಯ ಕಾರಣದಿಂದ, ಇದು ಅತ್ಯಂತ ಕನಿಷ್ಠ ಪ್ರಮಾಣದ ಸದ್ದನ್ನು ಹೊರಹೊಮ್ಮಿಸುತ್ತದೆ. ಡ್ರೋನ್ 200 ಮೀಟರ್ಗಳಿಗಿಂತ ಎತ್ತರದಲ್ಲಿ ಹಾರಾಟ ನಡೆಸುವಾಗ ಅದನ್ನು ಗುರುತಿಸುವುದು ಶತ್ರುಗಳಿಗೆ ಕಷ್ಟಕರವಾಗುತ್ತದೆ.
ನಾಗಾಸ್ತ್ರ ಆತ್ಮಹತ್ಯಾ ಡ್ರೋನ್:
ನಾಗಾಸ್ತ್ರವನ್ನು ಆತ್ಮಹತ್ಯಾ ಡ್ರೋನ್ಗಳೆಂದೂ (ಸುಸೈಡ್ ಡ್ರೋನ್) ಕರೆಯಲಾಗುತ್ತದೆ. ಇವುಗಳು ಒಂದು ಬಾರಿ ಮಾತ್ರವೇ ಪ್ರಯೋಗಿಸಬಲ್ಲ ಆಯುಧಗಳಾಗಿವೆ. ನೇರವಾಗಿ ತಮ್ಮ ಗುರಿಯೆಡೆಗೆ ಸಾಗಿ, ತಮ್ಮನ್ನು ತಾವು ಸ್ಫೋಟಿಸಿಕೊಳ್ಳುತ್ತವೆ. ಇದು ಸರಿಯಾದ ಗುರಿಯನ್ನು ಗುರುತಿಸುವ ತನಕ ಮೇಲ್ಭಾಗದಲ್ಲಿ ಹಾರಾಡುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ಅವಕಾಶ ಸಿಕ್ಕ ತಕ್ಷಣವೇ ಗುರಿಯ ಮೇಲೆ ದಾಳಿ ನಡೆಸುತ್ತವೆ. ಒಂದು ವೇಳೆ ಗುರಿಯನ್ನು ಗುರುತಿಸಲು ಸಾಧ್ಯವಾಗದಿದ್ದರೆ, ದಾಳಿ ಯೋಜನೆ ರದ್ದುಗೊಳಿಸಿದರೆ, ಗಾಳಿಯಲ್ಲಿ ಅಡ್ಡಾಡುವ ಡ್ರೋನ್ ಅನ್ನು ಮರಳಿ ಹಿಂದಕ್ಕೆ ಕರೆಸಿಕೊಳ್ಳಬಹುದು. ಅದಕ್ಕಾಗಿ ಅನುಕೂಲಕರ ಲ್ಯಾಂಡಿಂಗ್ ಮಾಡಲು ಪ್ಯಾರಾಚುಟ್ ರಿಕವರಿ ವ್ಯವಸ್ಥೆಯನ್ನೂ ಹೊಂದಿದೆ. ಇದರಿಂದಾಗಿ ಡ್ರೋನ್ ಮರುಬಳಕೆಗೆ ಲಭ್ಯವಾಗುತ್ತದೆ.
ಇಷ್ಟೇ ಅಲ್ಲ, ಕಳೆದ ವರ್ಷವೂ ಸಹ ಭಾರತದ ರಕ್ಷಣಾ ಸಚಿವಾಲಯ ಸುಮಾರು 45,000 ಕೋಟಿ ರೂ. ಮೌಲ್ಯದ ವಿವಿಧ ಆಯುಧಗಳ ಖರೀದಿಗೆ ಒಪ್ಪಿಗೆ ಸೂಚಿಸಿತ್ತು. ಧ್ರುವಾಸ್ತ್ರ ಕ್ಷಿಪಣಿಗಳು, ಭಾರತ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಿರ್ಮಾಣದ 12 ಸುಖೋಯ್-30 MKI ಯುದ್ಧ ವಿಮಾನಗಳು, ಆರ್ಟಿಲರಿ ಗನ್ಗಳು ಮತ್ತು ರೇಡಾರ್ಗಳನ್ನ ಕ್ಷಿಪ್ರವಾಗಿ ಸಾಗಿಸಲು ಅತ್ಯವಶ್ಯಕವಾದ ಹೈ ಮೊಬಿಲಿಟಿ ವೆಹಿಕಲ್ ಹಾಗೂ ಗನ್ ಟೋವಿಂಗ್ ವೆಹಿಕಲ್ಸ್ಗಳನ್ನ ಖರೀದಿಸಲು ಅನುಮೋದನೆ ನೀಡಿತ್ತು.
ಗಾಳಿಯಿಂದ ಭೂಮಿಗೆ ದಾಳಿ ನಡೆಸುವ ʻಧ್ರುವಾಸ್ತ್ರʼ:
ಭಾರತದ ದೇಶೀಯ ನಿರ್ಮಾಣದ ಹೆಲಿಕಾಪ್ಟರ್ ಲಾಂಚ್ಡ್ ನಾಗ್ (ಹೆಲಿನಾ) ಆ್ಯಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ (ATGM) ಎಲ್ಲ ಪರೀಕ್ಷೆಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಹೆಲಿನಾ ಭಾರತೀಯ ಭೂಸೇನೆಯ ಆವೃತ್ತಿಯಾದರೆ, ಭಾರತೀಯ ವಾಯುಪಡೆಯ ಆವೃತ್ತಿಯನ್ನ ಧ್ರುವಾಸ್ತ್ರ ಎಂದು ಕರೆಯಲಾಗುತ್ತದೆ. ಈ ಧ್ರುವಾಸ್ತ್ರವೂ ತನ್ನ ಆರಂಭಿಕ ಪ್ರಾಯೋಗಿಕ ಪರೀಕ್ಷೆಗಳನ್ನ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಧ್ರುವಾಸ್ತ್ರ ಅವಳಿ ಲಾಂಚರ್ಗಳನ್ನ ಹೊಂದಿದ್ದು, ಒಟ್ಟು 8 ಕ್ಷಿಪಣಿಗಳನ್ನ ಒಯ್ಯುವ ಸಾಮರ್ಥ್ಯ ಹೊಂದಿದೆ. ಇದರ ಕ್ಷಿಪಣಿ ಗರಿಷ್ಠ 4 ಕಿಮೀ ಗಳಷ್ಟು ಎತ್ತರದಿಂದ ಉಡಾವಣೆಗೊಳಿಸಬಹುದಾಗಿದೆ. ಪ್ರತಿ ಗಂಟೆಗೆ 70 ಕಿಮೀ ಗಳಷ್ಟು ವೇಗದಲ್ಲಿ ನಿಖರವಾಗಿ ದಾಳಿ ನಡೆಸಬಲ್ಲದು. ಧ್ರುವಾಸ್ತ್ರ ಕ್ಷಿಪಣಿ 43 ಕೆಜಿ ತೂಕ ಹೊಂದಿರಲಿದೆ. ಇದು ಇದರ ಮೂಲ ವಿನ್ಯಾಸವಾದ ನಾಗ್ ಕ್ಷಿಪಣಿಯಷ್ಟೇ ತೂಕ ಹೊಂದಿದೆ. ಇದರ ಸಿಡಿತಲೆ 8 ಕೆಜಿಗಳಷ್ಟು ತೂಕವಿದೆ. ಇದು ಅಂದಾಜು 1.85 – 1.9 ಮೀಟರ್ (6 ಅಡಿ) ಉದ್ದವಿದ್ದು, 0.16-0.2 ಮೀಟರ್ (8 ಇಂಚ್) ಅಗಲ ಇರಲಿದೆ. ಧ್ರುವಾಸ್ತ್ರ ಸಹ ಈಗಾಗಲೇ ಪ್ರಾಯೋಗಿಕ ಪರೀಕ್ಷೆಗಳನ್ನ ಯಶಸ್ವಿಗೊಳಿಸಿದ್ದು, ಸೇನೆಗೆ ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ನವದೆಹಲಿ/ಪ್ಯಾರಿಸ್: ಈ ಹಿಂದೆ ಫ್ರಾನ್ಸ್ನಿಂದ (France) 36 ರಫೇಲ್ ಯುದ್ಧ ವಿಮಾನಗಳನ್ನ (Rafale Fighter Jet) ಖರೀದಿ ಮಾಡಿದ್ದ ಭಾರತ ಸರ್ಕಾರ ಇದೀಗ, ಇನ್ನೂ 26 ಯುದ್ಧ ವಿಮಾನಗಳನ್ನು ಖರೀದಿಸಲು ಚಿಂತನೆ ನಡೆಸಿದೆ.
ಭಾರತೀಯ ರಕ್ಷಣಾ ಪಡೆಗಳು ಸಚಿವಾಲಯದ ಮುಂದೆ ರಫೇಲ್ ಖರೀದಿಸುವ ಪ್ರಸ್ತಾವನೆಯನ್ನಿಟ್ಟಿವೆ. ಈ ವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಫ್ರಾನ್ಸ್ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಭಾರತ ಸರ್ಕಾರವು 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಫೇಲ್ ಡೀಲ್ – ಆಫ್ಸೆಟ್ ನಿಯಮವನ್ನೇ ಕೈಬಿಟ್ಟ ಸರ್ಕಾರ
ರಫೇಲ್ ಯುದ್ಧ ವಿಮಾನಗಳ ಜೊತೆಗೆ ಭಾರತವು ಫ್ರಾನ್ಸ್ನಿಂದ 3 ಸ್ಕಾರ್ಪೀನ್ ವರ್ಗದ ಸಾಂಪ್ರದಾಯಿಕ ಜಲಾಂತರ್ಗಾಮಿ (Submarines) ನೌಕೆಗಳನ್ನೂ ಖರೀದಿಸಲಿದೆ. 26 ರಫೇಲ್ ಮತ್ತು ಸ್ಕಾರ್ಪೀನ್ ವರ್ಗದ 3 ಸಬ್ಮರೀನ್ಗಳ ಖರೀದಿಗೆ ಭಾರತವು ಸುಮಾರು 90 ಸಾವಿರ ಕೋಟಿ ರೂ. ವೆಚ್ಚ ಮಾಡಲಿದೆ ಎಂದು ಹೇಳಲಾಗುತ್ತಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಫೆಲ್ ಯುದ್ಧ ವಿಮಾನ ಖರೀದಿ – ಸುಸೇನ್ ಗುಪ್ತಾ ಮೇಲೆ ಲಂಚ ಸ್ವೀಕಾರ ಆರೋಪ
ಮೂಲಗಳ ಪ್ರಕಾರ, ಭಾರತೀಯ ನೌಕಾ ಪಡೆಯು ನಾಲ್ಕು ಟ್ರೈನರ್ ಏರ್ಕ್ರಾಫ್ಟ್ಗಳ ಸಹಿತ 22 ಸಿಂಗಲ್ ಸೀಟೆಡ್ (ಏಕ ಆಸನಗಳನ್ನು ಒಳಗೊಂಡ) ರಫೇಲ್ ಯುದ್ಧ ವಿಮಾನಗಳನ್ನು ಹೊಂದಲಿದೆ. ದೇಶಾದ್ಯಂತ ಭದ್ರತಾ ಸವಾಲುಗಳ ದೃಷ್ಟಿಯಿಂದ ಭಾರತೀಯ ನೌಕಾಪಡೆಯು ಕೊರತೆ ಎದುರಿಸುತ್ತಿರುವ ಕಾರಣ ಈ ಯುದ್ಧ ವಿಮಾನಗಳು ಮತ್ತು ಜಲಾಂತರ್ಗಾಮಿ ನೌಕೆಗಳ ಖರೀದಿಗೆ ಸರ್ಕಾರದ ಮೇಲೆ ರಕ್ಷಣಾಪಡೆಗಳು ಒತ್ತಡ ಹೇರುತ್ತಿದೆ ಎಂದು ತಿಳಿದುಬಂದಿದೆ.
ವಿಮಾನಗಳನ್ನು ಹೊತ್ತೊಯ್ಯುವ ಐಎನ್ಎಸ್ ವಿಕ್ರಮಾದಿತ್ಯ ಮತ್ತು ವಿಕ್ರಾಂತ್ (INS Vikrant), ಮಿಗ್-19 ಫೈಟರ್ಜೆಟ್ಗಳನ್ನು ನಿರ್ವಹಣೆ ಮಾಡುತ್ತಿದೆ. ಈ ಎರಡೂ ಯುದ್ಧ ಹಡಗುಗಗಳಿಗೆ ರಫೇಲ್ ಯುದ್ಧವಿಮಾನಗಳ ಅಗತ್ಯವಿದೆ. ಈ ಮಧ್ಯೆ, ಸ್ಕಾರ್ಪೀನ್ ಕ್ಲಾಸ್ ಸಬ್ಮರೀನ್ಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ. ಪ್ರಾಜೆಕ್ಟ್-75ರ ಭಾಗವಾಗಿ ನೌಕಾಪಡೆಯು ಈ ಜಲಾಂತರ್ಗಾಮಿಗಳನ್ನ ಮುಂಬೈನ ಮಜಗಾಂವ್ ಡಾಕ್ಯಾರ್ಡ್ನಲ್ಲಿ ನಿರ್ಮಾಣಗೊಳ್ಳಲಿವೆ.
26 ರಫೇಲ್ ಮತ್ತು ಸ್ಕಾರ್ಪೀನ್ ವರ್ಗದ 3 ಸಬ್ಮರೀನ್ಗಳ ಖರೀದಿಗೆ ಭಾರತವು ಸುಮಾರು 90 ಸಾವಿರ ಕೋಟಿ ರೂ. ವೆಚ್ಚ ಮಾಡಲಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಪೂರ್ಣ ಮಾತುಕತೆ ಒಪ್ಪಂದ ಮುಕ್ತಾಯಗೊಂಡ ನಂತರ ಅಂತಿಮ ವೆಚ್ಚ ಸ್ಪಷ್ಟವಾಗಲಿದೆ. ಈ ನಡುವೆ ಭಾರತವು ಈ ಒಪ್ಪಂದಲ್ಲಿ ರಿಯಾಯಿತಿ ಪಡೆದುಕೊಳ್ಳುವ ಸಾಧ್ಯತೆಗಳಿವೆ ಎಂದೂ ಹೇಳಲಾಗಿದೆ.
ಲಂಡನ್: ಉಕ್ರೇನ್ಗೆ (Ukraine) ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ ಎಂದು ಬ್ರಿಟನ್ (UK) ರಕ್ಷಣಾ ಸಚಿವಾಲಯ ಹೇಳಿದೆ.
ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಬೆನ್ ವ್ಯಾಲೆಸ್ ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಯುದ್ಧ ವಿಮಾಗಳನ್ನು ಪೂರೈಸುವ ಪ್ರಕ್ರಿಯೆಯಲ್ಲಿ ನಾವು ಸ್ಪಷ್ಟವಾಗಿದ್ದೇವೆ. `ಯಾವುದನ್ನೂ ಆಳಬೇಡಿ, ಯಾವುದನ್ನೂ ತಳ್ಳಿಹಾಕಬೇಡಿ’ ಅನ್ನೋದು ಕಳೆದ ವರ್ಷದಲ್ಲಿ ನಾನು ಕಲಿತ ಒಂದು ವಿಷಯ. ರಷ್ಯಾದ ಆಕ್ರಮಣ ಹಿಮ್ಮೆಟ್ಟಿಸಲು ಸಹಾಯ ಮಾಡುವಂತೆ ಅಮೆರಿಕ ನಿರ್ಮಿತ ಎಫ್-16 ಯುದ್ಧ ವಿಮಾನಗಳ ಸಹಾಯ ಕೋರಿದೆ.
ಈ ನಡುವೆ ಅಮೆರಿಕ (US) ಉಕ್ರೇನ್ಗೆ ಎಫ್-16 ಯುದ್ಧವಿಮಾನಗಳ (F16 Fighter Jets) ವಿತರಣೆಯನ್ನು ತಳ್ಳಿಹಾಕಿದೆ. ಆದ್ರೆ ಪೋಲೆಂಡ್ ಸೇರಿದಂತೆ ಇತರ ಮಿತ್ರ ರಾಷ್ಟ್ರಗಳು ಉಕ್ರೇನ್ಗೆ ನೆರವು ನೀಡಲು ಮುಕ್ತವಾಗಿವೆ. ಇದರೊಂದಿಗೆ ಕೇವಲ ಜೆಟ್ಗಳಷ್ಟೇ ಅಲ್ಲ, ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಪರೀಕ್ಷಿಸಲು ನಾನು ತುಂಬಾ ಮುಕ್ತವಾಗಿದ್ದೇನೆ ಎಂದು ವ್ಯಾಲೆಸ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕೂಡಲೇ ವಿದ್ಯುತ್ ದರ ಏರಿಸಿ – ಪಾಕ್ಗೆ ಐಎಂಎಫ್ ಶಾಕ್: PoK ಜನತೆಗೆ ನೀಡಿದ್ದ ಸಬ್ಸಿಡಿ ಬಂದ್
ಯುಕೆಯ ಟೈಫೂನ್ ಮತ್ತು F-35 ಫೈಟರ್ ಜೆಟ್ಗಳು (F-35 Fighter Jet) ಅತ್ಯಾಧುನಿಕವಾಗಿವೆ. ಆದರೆ ಅದನ್ನು ಹೇಗೆ ಹಾರಾಟ ನಡೆಸಬೇಕು ಅನ್ನೋದನ್ನ ತಿಳಿದುಕೊಳ್ಳುವುದಕ್ಕೆ ತಿಂಗಳುಗಟ್ಟಲೆ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ಅವುಗಳನ್ನು ಸದ್ಯದಲ್ಲೇ ಉಕ್ರೇನ್ಗೆ ಕಳುಹಿಸುವುದು ಪ್ರಾಯೋಗಿಕವಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕರಿಗೆ ಏಕೆ ಬಾಗಿಲು ತೆರೆದರು? – ಆತ್ಮಾಹುತಿ ಬಾಂಬ್ ದಾಳಿಗೆ ನವಾಜ್ ಷರೀಫ್ ಪುತ್ರಿ ಖಂಡನೆ
ಕಳೆದ ವರ್ಷ ಹಿಂದಿನ ಪ್ರಧಾನಿಯಾಗಿದ್ದ ಬೋರಿಸ್ ಜಾನ್ಸನ್ ಉಕ್ರೇನ್ಗೆ ಭೇಟಿ ನೀಡಿದ್ದರು. ಈ ವೇಳೆ ಯುದ್ಧಪೀಡಿತ ಉಕ್ರೇನ್ಗೆ ಬ್ರಿಟನ್ ಹೊಸದಾಗಿ 1.3 ಶತಕೋಟಿ ಪೌಂಡ್ (12 ಸಾವಿರ ಕೋಟಿ ರೂ.) ಮಿಲಿಟರಿ ಸಹಾಯ ನೀಡುವುದಾಗಿ ನೀಡಿದ್ದರು. ರಿಷಿ ಸುನಾಕ್ (Rishi Sunak) ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಉಕ್ರೇನ್ಗೆ ಭೇಟಿ ನೀಡಿ ರಕ್ಷಣಾ ನೆರವು ನೀಡುವ ಬಗ್ಗೆ ಮಾತುಕತೆ ನಡೆಸಿದ್ದರು. ಈ ವೇಳೆ ಅಮೆರಿಕ ನಿರ್ಮಿತ F-16 ಯುದ್ಧವಿಮಾನ ಸೇರಿದಂತೆ ಇತರ ಯುದ್ಧ ಸಾಮಗ್ರಿಗಳ ನೆರವು ನೀಡುವುದಾಗಿ ಭರವಸೆ ನೀಡಿದ್ದರು.
ಬ್ರಿಟನ್ ಸರ್ಕಾರ 2023ರ ಜನವರಿಯಲ್ಲೂ ಸಹ ಉಕ್ರೇನ್ಗೆ ಸಹಾಯ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಮಾರ್ಚ್ ಅಂತ್ಯದ ವೇಳೆಗೆ 14 ಚಾಲೆಂಜರ್-2 ಟ್ಯಾಂಕರ್ಗಳನ್ನು ಕಳುಹಿಸುವ ಗುರಿ ಹೊಂದಿದೆ. ಉಕ್ರೇನ್ ರಷ್ಯಾದ ಪಡೆಗಳನ್ನು ಹಿಮೆಟ್ಟಿಸಲು ತಕ್ಷಣವೇ ಶಸ್ತ್ರಾಸ್ತ್ರಗಳ ಅಗತ್ಯವಿದ್ದು, ಈ ಟ್ಯಾಂಕರ್ಗಳು ಸುಲಭವಾಗಿ ಶಸ್ತ್ರಾಸ್ತ್ರ ಒಯ್ಯಲಿವೆ ಎಂದು ಅಭಯ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಲಕ್ನೋ: ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ (Sania Mirza) ಬಳಿಕ ಅದೇ ಹೆಸರಿನ ಯುವತಿಯೊಬ್ಬರು ಇದೀಗ ಭಾರತದ ಕೀರ್ತಿ ಪತಾಕೆ ಹಾರಿಸಲು ಸಜ್ಜಾಗಿದ್ದಾರೆ.
ಹೌದು. ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ (NDA) ಪರೀಕ್ಷೆಯಲ್ಲಿ ಸಾನಿಯಾ ಮಿರ್ಜಾ ಅವರು 149ನೇ ರ್ಯಾಂಕ್ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಉತ್ತರ ಪ್ರದೇಶದ ಮಿರ್ಜಾಪುರದ ಸಾನಿಯಾ, ಭಾರತದ ಮೊದಲ ಮುಸ್ಲಿಂ ಫೈಟರ್ ಪೈಲಟ್ (Woman Fighter Pilot) ಎನಿಸಿಕೊಳ್ಳಲಿದ್ದಾರೆ.
ಎನ್ಡಿಎ ಪರೀಕ್ಷೆಯಲ್ಲಿ (NDA Exams) ಮಹಿಳೆಯರಿಗೆ ಮೀಸಲಿಟ್ಟ 19 ಸೀಟುಗಳಲ್ಲಿ ಸಾನಿಯಾ 2ನೇ ಸ್ಥಾನ ಪಡೆದಿದ್ದಾರೆ. ಅವನಿ ಚತುರ್ವೇದಿ ಅವರು ಮೊದಲ ಮಹಿಳಾ ಫೈಟರ್ ಪೈಲಟ್ ಎಂಬ ಖ್ಯಾತಿಗೆ ಭಾಜನರಾಗಿದ್ದರು. ಅವರ ಜತೆಗೆ ಮೋಹನಾ ಸಿಂಗ್ ಜಿತರ್ವಾಲ್ ಮತ್ತು ಭಾವನಾ ಕಾಂತ್ ಕೂಡ ಯುದ್ಧ ವಿಮಾನಗಳನ್ನು ಹಾರಿಸಿದ ಮಹಿಳೆಯರ ಸಾಲಿನಲ್ಲಿ ಸೇರಿದ್ದಾರೆ.
ಯಾರಿದು ಸಾನಿಯಾ ಮಿರ್ಜಾ?
ಸಣ್ಣ ಗ್ರಾಮದಿಂದ ಬಂದ ಸಾನಿಯಾ ಮಿರ್ಜಾ, ತಮ್ಮ ಗ್ರಾಮದ ಪಂಡಿತ್ ಚಿಂತಾಮಣಿ ದುಬೆ ಅಂತರ್ ಕಾಲೇಜಿನಲ್ಲಿ ಪ್ರೌಢಶಾಲೆ ಶಿಕ್ಷಣ ಪೂರೈಸಿದ್ದರು. 10ನೇ ತರಗತಿ ಬಳಿಕ ಮಿರ್ಜಾಪುರದ ಗುರು ನಾನಕ್ ಬಾಲಕಿಯರ ಅಂತರ್ ಕಾಲೇಜಿನಲ್ಲಿ 12ನೇ ತರಗತಿ ಪೂರ್ಣಗೊಳಿಸಿದರು. 12ನೇ ತರಗತಿಯಲ್ಲಿ ಉತ್ತರ ಪ್ರದೇಶ ಪರೀಕ್ಷಾ ಮಂಡಳಿಯಲ್ಲಿ ಮಿರ್ಜಾಪುರಕ್ಕೆ ಟಾಪರ್ ಆಗಿದ್ದರು. 2022ರ ಏಪ್ರಿಲ್ನಲ್ಲಿ ಎನ್ಡಿಎ ಪರೀಕ್ಷೆಗೆ ಹಾಜರಾದ ಸಾನಿಯಾ, ಇದೀಗ 149ನೇ ರ್ಯಾಂಕ್ ಪಡೆಯುವ ಮೂಲಕ ದೇಶವೇ ಮೆಚ್ಚುವ ಸಾಧನೆ ಮಾಡಿದ್ದಾರೆ.
ಸಾನಿಯಾ ಅವರು ಡಿ. 27ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಎನ್ಡಿಎ ಖಾಡಕ್ವಲ್ಸಾವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ನಿರೀಕ್ಷೆಯಂತೆ ನಡೆದರೆ ಸಾನಿಯಾ ಮಿರ್ಜಾ ಅವರು ಭಾರತೀಯ ವಾಯುಪಡೆಯ ಯುದ್ಧ ವಿಮಾನದ ಮೊದಲ ಮುಸ್ಲಿಂ ಪೈಲಟ್ ಎನಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ
ಈ ಕುರಿತು ಮಾತನಾಡಿರುವ ಸಾನಿಯಾ `ನಾನು ಪೈಲಟ್ ಲೆಫ್ಟಿನೆಂಟ್ ಅವನಿ ಚತುರ್ವೇದಿ ಅವರನ್ನು ಯಟ್ಯೂಬ್ನಲ್ಲಿ ನೋಡಿದ ನಂತರ ಅವರಿಂದ ಬಹಳ ಸ್ಫೂರ್ತಿ ಪಡೆದಿದ್ದೇನೆ. ಅವರನ್ನು ನೋಡಿಯೇ ನಾನು ಎನ್ಡಿಎ ಸೇರಿರುವುದು. ಯುವ ಪೀಳಿಗೆ ಮುಂದೊಮ್ಮೆ ನನ್ನಿಂದ ಕೂಡ ಪ್ರೇರಣೆ ಪಡೆಯಲಿದೆ ಎಂಬ ಆಶಯ ನನ್ನದು’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿವೃತ್ತ ಪ್ರಾಧ್ಯಾಪಕಿ ಶೆಲ್ಲಿ ದೆಹಲಿ ಮೇಯರ್ ಅಭ್ಯರ್ಥಿಯಾಗಿ ಘೋಷಣೆ
Mirzapur's Sania Mirza will became first Muslim woman fighter pilot after securing 149th rank in NDA exam
"I was very much inspired by Flight Lieutenant Avani Chaturvedi & seeing her I decided to join NDA. I hope younger generation will someday get inspired by me: Sania Mirza pic.twitter.com/6SMKIi2g5m
ಏನಿದು ಯೋಜನೆ?
ಈ ವರ್ಷದ ಆರಂಭದಲ್ಲಿ ರಕ್ಷಣಾ ಸಚಿವಾಲಯವು ಐಎಎಫ್ನಲ್ಲಿ (IAF) ಮಹಿಳಾ ಪೈಲಟ್ಗಳನ್ನು ನಿಯೋಜಿಸುವ ತನ್ನ ಪ್ರಾಯೋಗಿಕ ಯೋಜನೆಯನ್ನು ಶಾಶ್ವತಗೊಳಿಸಲು ನಿರ್ಧರಿಸಿತು. ರಕ್ಷಣಾ ಸಚಿವಾಲಯವು ಮಹಿಳೆಯರೂ ಫೈಟರ್ ಪೈಲಟ್ಗಳಾಗಿ ವಾಯುಪಡೆ ಸೇರಲು 2015ರಲ್ಲಿ ಅನುಮತಿಸಿತ್ತು. ನಂತರ `ಫೈಟರ್ ಸ್ಟ್ರೀಮ್ ಆಫ್ ಫ್ಲೈಯಿಂಗ್ʼ ಬ್ರಾಂಚ್ನಲ್ಲಿ ಮಹಿಳಾ ಎಸ್ಎಸ್ಸಿ ಅಧಿಕಾರಿಗಳನ್ನು ಸೇರಿಸುವ ಯೋಜನೆ 2016ರಲ್ಲಿ ಪ್ರಾರಂಭವಾಯಿತು.
Live Tv
[brid partner=56869869 player=32851 video=960834 autoplay=true]
ನವಹದೆಲಿ: ದೇಶವು ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು, ‘ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಮೊದಲ ವಿಮಾನವಾಹಕ ಯುದ್ಧನೌಕೆ ‘ವಿಕ್ರಾಂತ್’ ಅನ್ನು ಸೆಪ್ಟೆಂಬರ್ 2ರಂದು ಪ್ರಧಾನಿ ನರೇಂದ್ರ ಮೋದಿ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆ ಮಾಡಲಿದ್ದಾರೆ.
ಕೊಚ್ಚಿಯ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (ಸಿಎಸ್ಎಲ್) 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ತಯಾರಿಸಲಾದ ಯುದ್ಧ ನೌಕೆ ವಿಕ್ರಾಂತ್ ಅನ್ನು ಈಗಾಗಲೇ ಭಾರತೀಯ ನೌಕಾಪಡೆಗೆ ಹಸ್ತಾಂತರಿಸಲಾಗಿದ್ದು, ಅಂದು ಪ್ರಧಾನಿ ಅಧೀಕೃತವಾಗಿ ಸೇರ್ಪಡೆಗೊಳಿಸಲಿದ್ದಾರೆ. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಸ್ಥಾನವನ್ನು ಗಮನಾರ್ಹವಾಗಿ ಬಲಪಡಿಸುವ ನಿಟ್ಟಿನಲ್ಲಿ ಈ ನೌಕೆ ಕಾರ್ಯ ನಿರ್ವಹಿಸಲಿದೆ. ವಿಕ್ರಾಂತ್ ಕಳೆದ ಜುಲೈನಲ್ಲಿ ತನ್ನ ಅಂತಿಮ ಹಂತದ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ವಿಕ್ರಾಂತ್ ನಿರ್ಮಾಣವನ್ನು 2009ರ ಫೆಬ್ರವರಿ 28ರಿಂದ ಕೊಚ್ಚಿಯ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಪ್ರಾರಂಭಿಸಲಾಯಿತು. 2020ರ ಡಿಸೆಂಬರ್ ನಲ್ಲಿ ಸಿಎಸ್ಎಲ್ ನಡೆಸಿದ ಜಲಾನಯನ ಪ್ರಯೋಗಗಳಲ್ಲಿ ವಿಮಾನವಾಹಕ ನೌಕೆ ಸಂಪೂರ್ಣವಾಗಿ ಯಶಸ್ವಿಯಾಗಿದೆ. 40 ಸಾವಿರ ಟನ್ ತೂಕದ ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ವಿಕ್ರಾಂತ್ ಎಲ್ಲಾ 4 ಸಮುದ್ರ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಮೊದಲ ಪರೀಕ್ಷೆಯು ಕಳೆದ ವರ್ಷ ಆಗಸ್ಟ್ 21ರಂದು ಪೂರ್ಣಗೊಂಡಿತು. 2ನೇಯದು ಅಕ್ಟೋಬರ್ 21ರಂದು ಮತ್ತು 3ನೇ ಪರೀಕ್ಷೆಯು ಈ ವರ್ಷ ಜನವರಿ 22 ರಂದು ಪೂರ್ಣಗೊಂಡಿತು. ವಿಕ್ರಾಂತ್ ಕೊನೆಯ ಮತ್ತು 4ನೇ ಸಮುದ್ರ ಪ್ರಯೋಗಗಳು ಮೇ ತಿಂಗಳಲ್ಲಿ ಪ್ರಾರಂಭವಾಗಿದ್ದು ಇದು ಈ ತಿಂಗಳ ಆರಂಭದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿತು.
ಇದು MiG-29K ಫೈಟರ್ ಜೆಟ್ಗಳು, Kamov-31, MH-60R ಬಹು-ಪಾತ್ರ ಹೆಲಿಕಾಪ್ಟರ್ಗಳ ಜೊತೆಗೆ ಸ್ಥಳೀಯವಾಗಿ ನಿರ್ಮಿಸಲಾದ ಲಘು ಹೆಲಿಕಾಪ್ಟರ್ಗಳು (ALH) ಮತ್ತು ಲಘು ಯುದ್ಧ ವಿಮಾನ (LCA) ಸೇರಿದಂತೆ ಸುಮಾರು 30 ವಿಮಾನಗಳನ್ನು ಸಾಗಿಸಬಲ್ಲ ಸಾಮರ್ಥ್ಯ ಹೊಂದಿದೆ. ಇದು Kamov Ka-31 ಏರ್ಬೋರ್ನ್ ಅರ್ಲಿ ವಾರ್ನಿಂಗ್ ಅನ್ನು ಅಳವಡಿಸಲಾಗಿದೆ. ವಿಕ್ರಾಂತ್ ಅನ್ನು ಸೇನೆಗೆ ಸೇರಿಸುವ ಮೂಲಕ ಭಾರತವು ಸ್ಥಳೀಯವಾಗಿ ವಿಮಾನನೌಕೆ ವಿನ್ಯಾಸಗೊಳಿಸುವ ಮತ್ತು ಸ್ಥಾಪಿಸುವ ಸಾಮರ್ಥ್ಯ ಹೊಂದಿರುವ ರಾಷ್ಟ್ರಗಳ ಗುಂಪಿಗೆ ಸೇರಿದೆ.
ವಿಕ್ರಾಂತ್ ವಿಶೇಷತೆ ಏನು?
ಹಿಂದೂ ಮಹಾಸಾಗರ ಪ್ರದೇಶದಲ್ಲಿ (ಐಓಆರ್) ಭಾರತದ ಸ್ಥಾನವನ್ನು ಮತ್ತು ನೀಲಿಜಲ ನೌಕಾಪಡೆಯ ಅನ್ವೇಷಣೆಯನ್ನು ಹೆಚ್ಚಿಸಲು ಕಾರ್ಯನಿರ್ವಹಿಸುತ್ತದೆ.
2,300 ವಿಭಾಗಗಳನ್ನು ಹೊಂದಿದ್ದು, ಮಹಿಳಾ ಅಧಿಕಾರಿಗಳಿಗೆ ಸ್ಥಳಾವಕಾಶ ಕಲ್ಪಿಸಲು ವಿಶೇಷ ಕ್ಯಾಬಿನ್ಗಳನ್ನು ಒಳಗೊಂಡಂತೆ 1,700 ಸಿಬ್ಬಂದಿಗಾಗಿ ವಿನ್ಯಾಸ ಮಾಡಲಾಗಿದೆ.
ನೌಕೆಯು 262 ಮೀಟರ್ ಉದ್ದ, 62 ಮೀಟರ್ ಅಗಲ ಮತ್ತು 59 ಮೀಟರ್ ಎತ್ತರವಿದೆ. ಇದರ ನಿರ್ಮಾಣಕಾರ್ಯ 2009ರಲ್ಲಿ ಆರಂಭಗೊಂಡಿತ್ತು.
8 ಪವರ್ ಜನರೇಟರ್ಗಳನ್ನು ಒಳಗೊಂಡಿದ್ದು, ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿರುವ ಆಸ್ಪತ್ರೆಯನ್ನೂ ಇದೇ ಸಂಕಿರ್ಣದಲ್ಲಿ ನಿರ್ಮಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: MIG-21 ತರಬೇತಿ ವಿಮಾನದಲ್ಲಿ ಹಾರಾಟ ನಡೆಸುತ್ತಿದ್ದ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್ಗಳು ನಿನ್ನೆ ನಡೆದ ಅಪಘಾತದಿಂದ ಮೃತಪಟ್ಟಿದ್ದಾರೆ.
#WATCH | Rajasthan: A MiG-21 fighter aircraft of the Indian Air Force crashed near Barmer district. Further details regarding the pilots awaited pic.twitter.com/5KfO24hZB6
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ಮಿಗ್-21 ವಿಮಾನಗಳನ್ನು `ಹಾರುವ ಶವಪೆಟ್ಟಿಗೆ’ ಎಂದು ಕರೆದಿದ್ದಾರೆ. ಈ ವಿಮಾನವನ್ನು ಸೇವೆಯಿಂದ ತೆಗೆದು ಹಾಕೋದು ಯಾವಾಗ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತೀಯ ವಾಯುಪಡೆಯ ವಿಮಾನ ಪತನ – ಇಬ್ಬರು ಪೈಲಟ್ ದುರ್ಮರಣ
ಗುರುವಾರ ರಾತ್ರಿ ನಡೆದ ಘಟನೆಯಿಂದ ಇಡೀ ದೇಶ ಬೆಚ್ಚಿಬಿದ್ದಿದೆ ಹಾಗೂ ದುಃಖಿತವಾಗಿದೆ. ಇತ್ತೀಚಿನ ಕೆಲವು ವರ್ಷಗಳಲ್ಲಿ ಮಿಗ್-21 ವಿಮಾನಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಈ ವಿಮಾನವು ಇಲ್ಲಿಯ ವರೆಗೆ 200 ಪೈಲೆಟ್ಗಳನ್ನು ಬಲಿ ಪಡೆದಿವೆ. ಈ ಹಾರುವ ಶವಪೆಟ್ಟಿಗೆಯನ್ನು ನಮ್ಮ ವಾಯುಪಡೆಯಿಂದ ಯಾವಾಗ ತೆಗೆದುಹಾಕಲಾಗುತ್ತದೆ? ಸಂಸತ್ತು ಯೋಚಿಸಬೇಕು, ನಾವು ನಮ್ಮ ಮಕ್ಕಳಿಗಾದರೆ ಈ ವಿಮಾನವನ್ನು ಹಾರಿಸಲು ಬಿಡುತ್ತೇವೆಯೇ ಎಂದು ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತ್ನಿ ಹೇಳಿಕೆ ವಿವಾದ – ದ್ರೌಪದಿ ಮುರ್ಮುಗೆ ಪತ್ರ ಬರೆದು ಕ್ಷಮೆಯಾಚಿಸಿದ ಅಧೀರ್
कल बाड़मेर में हुई घटना से पूरा देश स्तब्ध व शोकाकुल है!
कुछ वर्षों से MiG-21 लगातार हादसों का शिकार हो रहा है। यह अकेला लगभग 200 पायलटों की जान ले चुका है।
ಏನಿದು ಘಟನೆ?
ನಿನ್ನೆ ರಾಜಾಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ (IAF) ವಿಮಾನ ಪತನಗೊಂಡು ವಿಂಗ್ ಕಮಾಂಡರ್ ಎಂ.ರಾಣಾ ಮತ್ತು ಫೈಟ್ ಲೆಫ್ಟಿನೆಂಟ್ ಅದ್ವಿತೀಯ ಬಾಲ್ ಮೃತಪಟ್ಟಿದ್ದಾರೆ. ಜಿಲ್ಲೆಯ ಬೇಟೂದಲ್ಲಿನ ಭೀಮಡಾ ಗ್ರಾಮದ ಬಳಿ ಅಪಘಾತಕ್ಕೀಡಾಗಿ, ಅಲ್ಲಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿದ್ದವು. ಅಲ್ಲಿನ ಸ್ಥಿತಿಗತಿಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಐಎಎಫ್ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೇಶ ಸೇವೆಯ ವೇಳೆ ತಮ್ಮ ಜೀವ ಬಲಿದಾನ ಮಾಡಿದರೆ ಅಗ್ನಿವೀರರಿಗೆ 1 ಕೋಟಿ ರೂ. ಪರಿಹಾರ ಸಿಗಲಿದೆ. ಅಲ್ಲದೆ ಭವಿಷ್ಯದಲ್ಲಿ ಇದರ ಸಂಖ್ಯೆಯೂ 1.25 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ರಕ್ಷಣಾ ಸಚಿವಾಲಯದ ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ತಿಳಿಸಿದ್ದಾರೆ.
ಅಗ್ನಿಪಥ್ ಯೋಜನೆ ವಿರುದ್ಧ ಸೇನಾ ಆಕಾಂಕ್ಷಿಗಳು ನಡೆಸುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಮಧ್ಯೆ, ಯೋಜನೆ ಕುರಿತು ಮನವರಿಕೆ ಮಾಡಿಕೊಡಲು ಕೇಂದ್ರ ಸರ್ಕಾರ ಪ್ರಯತ್ನಿಸಿದೆ. ಕೆಲವು ವಿನಾಯಿತಿ ಮತ್ತು ಸವಲತ್ತುಗಳನ್ನು ಘೋಷಿಸಿದ್ದ ಗೃಹ ಸಚಿವಾಲಯ, ಪ್ರತಿಭಟನಾಕಾರರ ಆಕ್ರೋಶವನ್ನು ತಣ್ಣಗಾಗಿಸಲು ಪ್ರಯತ್ನಿಸಿದೆ. ಆದರೆ ಪ್ರತಿಭಟನೆಯ ಕಿಚ್ಚು ಕಡಿಮೆಯಾಗಿಲ್ಲ ಈ ಹಿನ್ನೆಲೆಯಲ್ಲಿ ಯೋಜನೆಯಲ್ಲಿರುವ ವಿವಿಧ ಸೌಲಭ್ಯ ಹಾಗೂ ಮೀಸಲಾತಿ ಬಗೆಗೆ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಅಗ್ನಿಫಥ್ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ
ಈ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೆಫ್ಟಿನೆಂಟ್ ಜನರಲ್ ಬನ್ಸಿ ಪೊನ್ನಪ್ಪ, ಜುಲೈ 24 ರಂದು ಪರೀಕ್ಷೆ ನಡೆಯಲಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಅಗ್ನಿವೀರರ ಮೊದಲ ಬ್ಯಾಚ್ ನೇಮಕವಾಗಲಿದೆ. ಇದರಲ್ಲಿ 25,000 ಯುವಕರನ್ನು ಅಯ್ಕೆ ಮಾಡಲಾಗುವುದು. 2023ರ ಫೆಬ್ರವರಿಯಲ್ಲಿ 2ನೇ ಬ್ಯಾಚ್ ನೇಮಕವಾಗಲಿದ್ದು ಇದರಲ್ಲಿ 40,000 ಜನರನ್ನು ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇಂದು ಅತಿಹೆಚ್ಚು ಸೈನಿಕರು 30ರ ವಯೋಮಾನದಲ್ಲಿದ್ದಾರೆ. ಆದರೆ ಸೇನೆಯ ಮೂರೂ ವಿಭಾಗಗಳಿಂದ ಪ್ರತಿ ವರ್ಷವೂ ಸುಮಾರು 17,600 ಮಂದಿ ಅವಧಿಗೆ ಮುನ್ನವೇ ನಿವೃತ್ತಿ ಪಡೆಯುತ್ತಿದ್ದಾರೆ. ನಿವೃತ್ತಿ ಬಳಿಕ ಏನು ಮಾಡುತ್ತೀರಿ? ಎಂದು ಯಾರೂ ಕೂಡ ಅವರನ್ನು ಕೇಳಲು ಹೋಗಿಲ್ಲ. ಅಗ್ನಿವೀರರು ಕೂಡ ಹಾಲಿ ಸೇವೆಯಲ್ಲಿರುವ ಸಾಮಾನ್ಯ ಸೈನಿಕರಂತೆಯೇ ಸಿಯಾಚಿನ್ ಹಾಗೂ ಇತರೆ ಕೆಲವು ಪ್ರದೇಶಗಳಲ್ಲಿ ಅದೇ ಭತ್ಯೆ ಪಡೆಯಲಿದ್ದಾರೆ. ಸೇವಾ ಪರಿಸ್ಥಿತಿಗಳಲ್ಲಿ ಅವರ ನಡುವೆ ಯಾವುದೇ ತಾರತಮ್ಯ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ನೇಮಕಾತಿ ಪ್ರಮಾಣದಲ್ಲಿ ಹೆಚ್ಚಳ: 4-5 ವರ್ಷಗಳಲ್ಲಿ ತಮ್ಮ ಸೈನಿಕರ ನೇಮಕಾತಿ 50 – 60,000 ಆಗಲಿದೆ. ಕ್ರಮೇಣ 90,000 ದಿಂದ 1 ಲಕ್ಷಕ್ಕೆ ಏರಿಕೆಯಾಗಲಿದೆ. ಯೋಜನೆಯನ್ನು ವಿಶ್ಲೇಷಣೆಗೆ ಒಳಪಡಿಸಲು ಸಣ್ಣ ಪ್ರಮಾಣದಲ್ಲಿ ಆರಂಭ ಮಾಡುತ್ತಿದೆ ಎಂದು ವಿವರಿಸಿದ್ದಾರೆ.