Tag: ರಜಪೂತ

  • ಕುದುರೆಯೇರಿ ಸವಾರಿ ಹೊರಟಿದ್ದ ದಲಿತ ಯುವಕನ ಬರ್ಬರ ಹತ್ಯೆ!

    ಕುದುರೆಯೇರಿ ಸವಾರಿ ಹೊರಟಿದ್ದ ದಲಿತ ಯುವಕನ ಬರ್ಬರ ಹತ್ಯೆ!

    ಅಹಮದಾಬಾದ್: ಕುದುರೆ ಏರಿ ಸವಾರಿ ಹೊರಟಿದ್ದ ದಲಿತ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಆಘತಕಾರಿ ಘಟನೆಯೊಂದು ಗುಜರಾತಿನ ಭಾವ್ ನಗರ್ ಜಿಲ್ಲೆಯಲ್ಲಿ ನಡೆದಿದೆ.

    21 ವರ್ಷದ ಪ್ರದೀಪ್ ರಾಥೋಡ್ ಮೃತ ದುರ್ದೈವಿ ಯುವಕ. ಘಟನೆಗೆ ಸಂಬಂಧಿಸಿದಂತೆ ಗುರುವಾರ ಸಂಜೆ ಭಾವ್ ನಗರ್ ಜಿಲ್ಲೆಯ ಉಮ್ರಾಲ ತಾಲೂಕಿನ ಟಿಂಬಿ ಗ್ರಾಮದಲ್ಲಿ ಮೂವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ ಎಎಂ ಸೈಯದ್ ತಿಳಿಸಿದ್ದಾರೆ.

    ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ಅಲ್ಲದೇ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದೇವೆ. ಪ್ರದೀಪ್ ಶವಪತ್ತೆಯಾದ ಪ್ರದೇಶದಲ್ಲಿ ಸಾವಿಗೂ ಮುನ್ನ ಕುದುರೆ ಮೇಲೆ ಕುಳಿತು ಸವಾರಿ ನಡೆಸುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಘಟನೆ ಸಂಬಂಧ ಹಳೆ ದ್ವೇಷ ಹಾಗೂ ಪ್ರೀತಿ-ಪ್ರೇಮ ಹೀಗೆ ವಿವಿಧ ರೀತಿಯಲ್ಲಿ ತನಿಖೆ ನಡೆಸಲಾಗುವುದು ಅಂತ ಅವರು ತಿಳಿಸಿದ್ದಾರೆ.

    ಮಗನನ್ನು ಕಳೆದುಕೊಂಡ ತಂದೆ ಕುಲ್ ಭಾಯ್ ರಾಥೋಡ್ ಉಮ್ರಾಲ್ ಪೊಲೀಸರಿಗೆ ದೂರು ನೀಡಿದ್ದು, ನನ್ನ ಮಗ ಇತ್ತೀಚೆಗೆ ಕುದುರೆಯೊಂದನ್ನು ಖರೀದಿಸಿದ್ದನು. ಆ ಬಳಿಕ ಕೆಲ ಮೇಲ್ವರ್ಗದ ಜನ ಮಗನ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊಂಚು ಹಾಕುತ್ತಿದ್ದರು. ಅಲ್ಲದೇ ಕುದುರೆ ಮಾರದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದರು ಎಂಬುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

    ಗುರುವಾರ ಮಗ ತನ್ನ ಕುದುರೆಯೊಂದಿಗೆ ಫಾರ್ಮ್ ಹೌಸ್ ಹೋಗಿದ್ದನು. ಬಳಿಕ ಸಂಜೆ ಅಲ್ಲಿಂದ ಕರೆ ಮಾಡಿ ರಾತ್ರಿಯ ಊಟಕ್ಕೆ ಮನೆಗೆ ಬರುತ್ತೇನೆ ಅಂತ ಹೇಳಿದ್ದನು. ಆದ್ರೆ ರಾತ್ರಿಯಾದ್ರೂ ಆತ ಮನೆಗೆ ಬರಲಿಲ್ಲ. ಹೀಗಾಗಿ ನಾವು ಆತನ ಹುಡುಕಾಟ ಶುರುಮಾಡಿದೆವು. ಈ ವೇಳೆ ಆತ ಫಾರ್ಮ್ ಹೌಸ್ ಗೆ ಹೋಗೋ ಮಾರ್ಗದ ಬದಿಯಲ್ಲೆ ಕೊಲೆಯಾಗಿ ಹೋಗಿದ್ದನು. ಕುದುರೆಯೊಂದಿಗೆ ತನ್ನ ಮನೆಗೆ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ಕೆಲ ರಜಪೂತ ವ್ಯಕ್ತಿಗಳು ಹರಿತವಾದ ಆಯುಧಗಳನ್ನು ಬಳಸಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಅಂತ ಪ್ರದೀಪ್ ತಂದೆ ತಮ್ಮ ದುಃಖ ತೋಡಿಕೊಂಡಿದ್ದಾರೆ.

    ಘಟನೆಗೆ ಕಾರಣವಾದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವೆಂದಲ್ಲಿ ಮನಗ ಶವಸಂಸ್ಕಾರ ಮಾಡುವುದಿಲ್ಲ ಎಂದು ಪ್ರದೀಪ್ ಪೋಷಕರು ಹಾಗೂ ಕುಟುಂಬಸ್ಥರು ಆಗ್ರಹಿಸಿದ್ದಾರೆ.

  • ವಿವಾದಗಳ ನಡುವೆ ಪದ್ಮಾವತಿ ರಿಲೀಸ್ ದಿನಾಂಕ ಬದಲಾಯ್ತು-ಸೆನ್ಸಾರ್ ಮಂಡಳಿಯಲ್ಲಿ ಅರ್ಜಿ ರಿಜೆಕ್ಟ್

    ವಿವಾದಗಳ ನಡುವೆ ಪದ್ಮಾವತಿ ರಿಲೀಸ್ ದಿನಾಂಕ ಬದಲಾಯ್ತು-ಸೆನ್ಸಾರ್ ಮಂಡಳಿಯಲ್ಲಿ ಅರ್ಜಿ ರಿಜೆಕ್ಟ್

    ಮುಂಬೈ: ವಿವಾದಗಳಿಂದ ಸುದ್ದಿಯಾಗಿದ್ದ ಬಾಲಿವುಡ್‍ನ ಪದ್ಮಾವತಿ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸೆನ್ಸಾರ್ ಬೋರ್ಡ್ ನಲ್ಲಿ ಪದ್ಮಾವತಿ ಸಿನಿಮಾದ ಅರ್ಜಿ ತಿರಸ್ಕೃತವಾಗಿದ್ದು, ಚಿತ್ರತಂಡ ಅನಿವಾರ್ಯ ಕಾರಣಗಳಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಆದರೆ ಯಾವ ದಿನದಂದು ಸಿನಿಮಾ ತೆರೆಕಾಣಲಿದೆ ಎಂಬುದನ್ನು ಚಿತ್ರತಂಡ ಸ್ಪಷ್ಟಪಡಿಸಿಲ್ಲ.

    ಕಳೆದ ಮೂರು ದಿನಗಳಿಂದ ಸಿನಿಮಾದ ರಿಲೀಸ್ ದಿನವನ್ನು ಮುಂದೂಡಲಾಗಿದೆ ಎಂದು ಹೇಳಲಾಗಿತ್ತಿತ್ತು. ಆದರೆ ಅಧಿಕೃತವಾಗಿ ದೃಢಪಟ್ಟಿರಲಿಲ್ಲ. ಇಂದು ಬಾಲಿವುಡ್ ಸಿನಿ ಮಾರುಕಟ್ಟೆ ವಿಶ್ಲೇಷಕ ತರಣ್ ಆದರ್ಶ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ.

    ಸೆನ್ಸಾರ್ ಬೋರ್ಡ್ ಹೇಳಿದ್ದೇನು?:
    ಸೆನ್ಸಾರ್ ಬೋರ್ಡ್ ಸಿನಿಮಾಗೆ ಅನುಮತಿ ಕೋರಿ ಚಿತ್ರತಂಡ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಚಿತ್ರತಂಡ ಅವಶ್ಯಕ ಮಾಹಿತಿಯನ್ನು ಅರ್ಜಿಯಲ್ಲಿ ದಾಖಲಿಸದೇ ಅಪೂರ್ಣವಾದ ಮಾಹಿತಿಯನ್ನು ಸಲ್ಲಿಸಿದೆ. ಇನ್ನೂ ಸಿನಿಮಾ ರಜಪೂತ ನಾಡಿದ ಧೀರ ಮಹಿಳೆ ರಾಣಿ ಪದ್ಮಾವತಿ ಐತಿಹಾಸಿಕ ಕಥೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ಬಳಸಲಾಗಿರುವ ದೃಶ್ಯಗಳಿಗೆ ಸೂಕ್ತ ಸಾಕ್ಷ್ಯಗಳನ್ನು ನೀಡಿಲ್ಲ ಎಂದು ಸೆನ್ಸಾರ್ ಬೋರ್ಡ್ (ಸಿಬಿಎಫ್‍ಸಿ) ತಿಳಿಸಿ ಅರ್ಜಿಯನ್ನು ತಿರಸ್ಕರಿಸಿದೆ.

    ಪದ್ಮಾವತಿ ಸಿನಿಮಾ ನಿರ್ಮಾಣ ಸಂಸ್ಥೆ ವೈಕಾಮ್ 18ಮೋಷನ್ ದಿನಾಂಕ ಮೂಂದೂಡಿರುವ ಬಗ್ಗೆ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ಹಾಗಾದರೆ ನಿರ್ಮಾಣ ಸಂಸ್ಥೆ ಮಾಧ್ಯಮಗಳಿಗೆ ತಿಳಿಸಿದ್ದು ಹೀಗೆ

    “ಪದ್ಮಾವತಿ ಸಿನಿಮಾವನ್ನು ಡಿಸೆಂಬರ್ 1ರಂದು ತೆರೆಕಾಣಲು ಸಕಲ ತಯಾರಿಗಳನ್ನು ಮಾಡಿಕೊಂಡಿತ್ತು. ರಜಪೂತ ಸಂಸ್ಥಾನದ ಶೌರ್ಯ, ಘನತೆ ಮತ್ತು ಸಂಪ್ರದಾಯಿಕ ಎಲ್ಲ ವೈಭವವನ್ನು ಚಿತ್ರಕಥೆಯನ್ನು ಸಿನಿಮಾ ಒಳಗೊಂಡಿದೆ. ಚಿತ್ರಕಥೆ ನೋಡುಗರಿಗೆ ಹೆಮ್ಮೆಯನ್ನುಂಟು ಮಾಡಲಿದ್ದು, ಭಾರತೀಯರ ಸಾಹಸ ಪರಾಕ್ರಮವನ್ನು ಚಿತ್ರ ಒಳಗೊಂಡಿದೆ. ನಾವು ದೇಶದ ನಾಗರಿಕರಾಗಿದ್ದು, ದೇಶದ ಶಾಸನಬದ್ಧ ಕಾನೂನುಗಳನ್ನು ಪಾಲನೆ ಮಾಡುವುದರ ಜೊತೆಗೆ ಗೌರವ ನೀಡಬೇಕು. ಸೆನ್ಸಾರ್ ಬೋರ್ಡ್ ಸಿನಿಮಾಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಒದಗಿಸುವಂತೆ ತಿಳಿಸಿದೆ. ಹಾಗಾಗಿ ಬೋರ್ಡ್ ಕೇಳಿರುವ ದಾಖಲಾತಿಗಳನ್ನು ಒದಗಿಸಲು ಕಾಲಾವಕಾಶ ಬೇಕಾಗುತ್ತದೆ. ಹಾಗಾಗಿ ಸಿನಿಮಾ ತೆರೆಕಾಣುವ ದಿನಾಂಕವನ್ನು ಮುಂದೂಡಲಾಗಿದೆ. ಆದಷ್ಟು ಬೇಗ ಸಿನಿಮಾ ರಿಲೀಸ್ ದಿನಾಂಕವನ್ನು ಅಭಿಮಾನಿಗಳಿಗೆ ತಿಳಿಸಲಾಗುತ್ತದೆ. ನಮ್ಮ ಬ್ಯಾನರ್ ಅಡಿಯಲ್ಲಿ `ಟಾಯ್ಲೆಟ್ ಏಕ್ ಪ್ರೇಮ್ ಕಥಾ’, ಭಾಗ್ ಮಿಲ್ಕಾ ಭಾಗ್, ಕ್ವೀನ್ ಸೇರಿದಂತೆ ಯಶಸ್ವಿ ಸಿನಿಮಾಗಳು ತೆರೆಕಂಡಿವೆ.” ಎಂದು ತಿಳಿಸಿದೆ.


    ಏನಿದು ವಿವಾದ?: ಪದ್ಮಾವತಿ ಸಿನಿಮಾ ಸೆಟ್ಟೇರಿದಾಗಿನಿಂದಲೂ ವಿವಾದವು ಹುಟ್ಟಿಕೊಂಡಿದೆ. ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮಾತ್ರ ಪದ್ಮಾವತಿ ನಡುವೆ ರೊಮ್ಯಾಂಟಿಕ್ ಸೀನ್ ಗಳಿವೆ. ಇನ್ನೂ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ರಾಣಿ ಪದ್ಮಾವತಿ ಕುರಿತಾಗಿ ಸಿನಿಮಾ ಮಾಡಲಿದ್ದೇನೆಂದು ಬನ್ಸಾಲಿ ಹೇಳಿಕೊಂಡಾಗ ಹಲವು ಟೀಕೆಗಳು ವ್ಯಕ್ತವಾಗಿದ್ದವು. ಆರಂಭದಲ್ಲಿ ಚಿತ್ರೀಕರಣದ ವೇಳೆ ರಜಪೂತ್ ಕರ್ಣಿ ಸೇನಾದ ಸದಸ್ಯನೋರ್ವ ಬನ್ಸಾಲಿ ಅವರ ಕಪಾಳಕ್ಕೆ ಹೊಡೆದಿದ್ದನು. ಇನ್ನೂ ಮಹಾರಾಷ್ಟ್ರದ ಕೋಲಾಪುರದಲ್ಲಿ ಚಿತ್ರೀಕರಣದ ಸೆಟ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ವೇಳೆ ಯಾರಿಗೂ ಯಾವುದೇ ಅಪಾಯವಾಗಿರಲಿಲ್ಲ.

    ಬಿಜೆಪಿ, ಕಾಂಗ್ರೆಸ್ಸಿನಿಂದ ವಿರೋಧ: ಪದ್ಮಾವತಿ ಸಿನಿಮಾವನ್ನು ಗುಜರಾತಿನಲ್ಲಿ ಚುನಾವಣೆ ಬಳಿಕ ರಿಲೀಸ್ ಮಾಡಬೇಕು ಇಲ್ಲವೇ ಸಿನಿಮಾವನ್ನು ರಾಜ್ಯದಲ್ಲಿ ಬ್ಯಾನ್ ಮಾಡೋದು ಒಳ್ಳೆಯದು. ಸದ್ಯ ರಾಜ್ಯದಲ್ಲಿ ಚುನಾವಣೆಯ ಕಾವು ಹೆಚ್ಚಾಗಿರುವುದರಿಂದ ಸಿನಿಮಾದಿಂದಾಗಿ ಗಲಾಟೆಗಳು ಉಂಟಾಗಬಹುದು. ಒಂದು ವೇಳೆ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದ್ದರೆ ರಜಪೂತ ಮತ್ತು ಕ್ಷತ್ರೀಯ ಸಮುದಾಯದ ಜನತೆಯ ಭಾವನೆಗೆ ಧಕ್ಕೆ ಉಂಟಾಗುತ್ತದೆ ಎಂದು ಬಿಜೆಪಿ ವಕ್ತಾರ ಜಡೇಜಾ ತಿಳಿಸಿದ್ದಾರೆ. ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ. ಹೀಗಾಗಿ ಜನರ ಭಾವನೆಗೆ ಧಕ್ಕೆ ಬಂದಿರುವ ವಿಚಾರವನ್ನು ತೆಗೆದು ಹಾಕಬೇಕೆಂದು ರಾಜಸ್ಥಾನದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

    ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯ ಸರ್ಕಾರಗಳು ಈಗಾಗಲೇ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವೆ ಸ್ಮೃತಿ ಇರಾನಿ ಅವರಿಗೆ ಸಿನಿಮಾ ಬಿಡುಗಡೆ ಕುರಿತು ಸ್ಪಷ್ಟಣೆ ಕೇಳಿ ಪತ್ರವನ್ನು ಬರೆದಿವೆ. ಸಿನಿಮಾ ಬಿಡುಗಡೆ ಆಗುವುದರಿಂದ ಯಾವುದೇ ಸಮುದಾಯದ ಜನರಿಗೆ ನೋವುಂಟು ಆಗಬಾರದು. ಈ ಹಿನ್ನೆಲೆಯಲ್ಲಿ ಪದ್ಮಾವತಿ ಸಿನಿಮಾ ಒಳಗೊಂಡಿರುವ ಕಥಾ ಹಂದರವನ್ನು ಪರಿಶೀಲಿಸಲು ಹಿರಿಯ ಇತಹಾಸ ತಜ್ಞರು, ಸಿನಿಮಾ ನಿರ್ಮಾಪಕರು ಒಳಗೊಂಡಿರುವ ಸಮಿತಿ ರಚಿಸಲಾಗುತ್ತಿದೆ ಎಂದು ಮಾಧ್ಯಮಗಳು ಪ್ರಕಟಿಸಿವೆ.

    ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮತ್ತು ಪದ್ಮಾವತಿ ನಡುವೆ ಯಾವುದೇ ರೊಮ್ಯಾಂಟಿಕ್ ಸೀನ್ ಗಳಿಲ್ಲ ಎಂದು ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಸ್ಪಷ್ಟನೆ ನೀಡಿದ್ದಾರೆ. ಸಿನಿಮಾದಲ್ಲಿ ಪದ್ಮಾವತಿಯಾಗಿ ದೀಪಿಕಾ ಪಡುಕೋಣೆ. ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ರಣ್‍ವೀರ್ ಸಿಂಗ್ ಮತ್ತು ರಾವಲ್ ರತನ್ ಸಿಂಗ್ ಪಾತ್ರದಲ್ಲಿ ಶಾಹಿದ್ ಕಪೂರ್ ನಟಿಸಿದ್ದಾರೆ.

     

     

    https://twitter.com/deepikapadukone/status/917215585942904832

    https://twitter.com/deepikapadukone/status/910668862336544768

    https://twitter.com/deepikapadukone/status/910673498376364033

  • ಪದ್ಮಾವತಿ ರಿಲೀಸ್ ಆಗುವ ಥಿಯೇಟರ್‍ಗೆ ಬೆಂಕಿ ಹಾಕ್ತೀವಿ: ಬಿಜೆಪಿ ಶಾಸಕ

    ಪದ್ಮಾವತಿ ರಿಲೀಸ್ ಆಗುವ ಥಿಯೇಟರ್‍ಗೆ ಬೆಂಕಿ ಹಾಕ್ತೀವಿ: ಬಿಜೆಪಿ ಶಾಸಕ

    ಹೈದರಾಬಾದ್: ಬಾಲಿವುಡ್ ನ `ಪದ್ಮಾವತಿ’ ಸಿನಿಮಾ ಯಾವ ಚಿತ್ರಮಂದಿರಗಳಲ್ಲಿ ತೆರೆಕಾಣುವುದೋ ಅಲ್ಲಿ ಬೆಂಕಿ ಹಚ್ಚುತ್ತೇವೆ ಎಂದು ಬಿಜೆಪಿ ಎಂಎಲ್‍ಎ ಟಿ.ರಾಜಾ ಸಿಂಗ್ ಸಿಕಂದರಾಬಾದ್ ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

    ಪ್ರತಿಯೊಬ್ಬ ರಜಪೂತ ವ್ಯಕ್ತಿ ಪದ್ಮಾವತಿ ಸಿನಿಮಾವನ್ನು ವಿರೋಧ ಮಾಡುತ್ತಿದ್ದಾರೆ. ಒಂದು ವೇಳೆ ಸಿನಿಮಾ ಬಿಡುಗಡೆಯಾದರೆ ಚಿತ್ರದಲ್ಲಿನ ಅಂಶಗಳಿಂದ ರಜಪೂತ ಭಾವನೆಗಳಿಗೆ ಧಕ್ಕೆಯುಂಟಾಗುತ್ತದೆ. ಈಗಾಗಲೇ ಗುಜರಾತಿನಲ್ಲಿ ಕ್ಷತ್ರೀಯ ಹಾಗು ರಜಪೂತ ಸಮುದಾಯದ ಮುಖಂಡರು ಚಿತ್ರ ಬಿಡುಗಡೆಗೂ ಮುನ್ನ ಖಾಸಗಿಯಾಗಿ ತೋರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಸಿನಿಮಾದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಈ ಬಗ್ಗೆ ಯಾವುದೇ ಪ್ರತಿಕ್ರಿಯನ್ನು ನೀಡಿಲ್ಲ. ಹಾಗಾಗಿ ತೆಲಂಗಾಣ ರಾಜ್ಯದಲ್ಲಿ ಸಿನಿಮಾ ಪ್ರದರ್ಶನಕ್ಕೆ ನಮ್ಮ ವಿರೋಧವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಚಿತ್ರದ ನಿರ್ದೇಶಕರು ರಜಪೂತ ಮಹಿಳೆಯರಿಗೆ ಅಗೌರವ ತೋರಿಸುವ ಮೂಲಕ ಹಣ ಸಂಪಾದನೆಯಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾದಲ್ಲಿ ಭಾರತೀಯ ಇತಿಹಾಸವನ್ನು ಸಂಪೂರ್ಣವಾಗಿ ತಿರುಚಲಾಗಿದ್ದು, ಇದರಿಂದಾಗಿ ಭಾರತೀಯ ಹಿಂದೂ ಸಂಸ್ಕೃತಿಗೆ ಧಕ್ಕೆ ತರಲಾಗುತ್ತಿದೆ. ಚಿತ್ರ ಬಿಡುಗಡೆಗೆ ಭಯವಿದ್ದ ಕಾರಣ ಬನ್ಸಾಲಿ ಈ ಮೊದಲೇ ತಮ್ಮ ಸಿನಿಮಾ ಮೇಲೆ ವಿಮೆ ಮಾಡಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: ಪದ್ಮಾವತಿ ರಂಗೋಲಿ ವಿವಾದ- 48 ಗಂಟೆ ಸಮಯದಲ್ಲಿ ಬಿಡಿಸಿದ್ದ ರಂಗೋಲಿಯನ್ನು ಅಳಿಸಿದ್ದ ಆರೋಪಿಗಳ ಅರೆಸ್ಟ್ 

    ಏನಿದು ವಿವಾದ?: ಪದ್ಮಾವತಿ ಸಿನಿಮಾ ಸೆಟ್ಟೇರಿದಾಗಿನಿಂದಲೂ ವಿವಾದವು ಹುಟ್ಟಿಕೊಂಡಿದೆ. ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮಾತ್ರ ಪದ್ಮಾವತಿ ನಡುವೆ ರೊಮ್ಯಾಂಟಿಕ್ ಸೀನ್ ಗಳಿವೆ. ಇನ್ನೂ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಸಿನಿಮಾದಲ್ಲಿ ಯಾವುದೇ ರೀತಿ ಅಲ್ಲಾವುದ್ದೀನ್ ಖಿಲ್ಜಿ ಮತ್ತು ಪದ್ಮಾವತಿ ನಡುವೆ ಸೀನ್ ಗಳಿಲ್ಲ ಎಂದು ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಸ್ಪಷ್ಟನೆ ನೀಡಿದ್ದಾರೆ.

    ಸಿನಿಮಾದಲ್ಲಿ ಪದ್ಮಾವತಿಯಾಗಿ ದೀಪಿಕಾ ಪಡುಕೋಣೆ ಎಲ್ಲರನ್ನು ಸೆಳೆಯಲಿದ್ದಾರೆ. ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ರಣ್‍ವೀರ್ ಸಿಂಗ್ ಮತ್ತು ರಾವಲ್ ರತನ್ ಸಿಂಗ್ ಪಾತ್ರದಲ್ಲಿ ಶಾಹಿದ್ ಕಪೂರ್ ನಟಿಸಿದ್ದಾರೆ. ಪದ್ಮಾವತಿ ಡಿಸೆಂಬರ್ 1ರಂದು ದೇಶಾದ್ಯಂತ ತೆರೆಕಾಣಲಿದೆ.

    ಇದನ್ನೂ ಓದಿ: ಪದ್ಮಾವತಿ ಸಿನಿಮಾ ಬ್ಯಾನ್ ಮಾಡೋದು ಸೂಕ್ತ ಎಂದ ಬಿಜೆಪಿ 

     

  • ಪದ್ಮಾವತಿ ಸಿನಿಮಾ ಬ್ಯಾನ್ ಮಾಡೋದು ಸೂಕ್ತ ಎಂದ ಬಿಜೆಪಿ

    ಪದ್ಮಾವತಿ ಸಿನಿಮಾ ಬ್ಯಾನ್ ಮಾಡೋದು ಸೂಕ್ತ ಎಂದ ಬಿಜೆಪಿ

    ಗಾಂಧಿನಗರ: ಭಾರತೀಯ ಸಿನಿಮಾ ಲೋಕದ ಬಹು ನಿರೀಕ್ಷಿತ ಚಿತ್ರ ಎಂದು ಹೇಳಲಾಗುವ `ಪದ್ಮಾವತಿ’ಯ ವಿವಾದ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇತ್ತೀಚೆಗೆ ಕಾಂಗ್ರೆಸ್ ತೊರೆದಿದ್ದ ಗುಜರಾತಿನ ಹಿರಿಯ ನಾಯಕ ಶಂಕರ್ ಸಿನ್ಹ ವಾಘೇಲಾ ಸಿನಿಮಾದ ವಿರುದ್ಧ ಹರಿಹಾಯ್ದಿದ್ದರು. ಆದರೆ ಇದೀಗ ಸ್ಥಳೀಯ ಬಿಜೆಪಿ ಸಿನಿಮಾವನ್ನು ಚುನಾವಣೆ ಬಳಿಕ ರಿಲೀಸ್ ಮಾಡಬೇಕು ಅಥವಾ ಬ್ಯಾನ್ ಮಾಡವುದು ಸೂಕ್ತ ಎಂದು ತಿಳಿಸಿದೆ.

    ಬಿಡುಗಡೆಗೂ ಮುನ್ನ ನಮಗೆ ನಮಗೆ ಪ್ರತ್ಯೇಕವಾಗಿ ಸಿನಿಮಾ ತೋರಿಸಬೇಕು. ಇದರಿಂದ ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮತ್ತು ಪದ್ಮಾವತಿ ನಡುವೆ ಯಾವುದೇ ದೃಶ್ಯಗಳಿಲ್ಲ ಎಂಬುವುದು ಖಚಿತವಾಗುತ್ತದೆ. ಇದರಿಂದ ವಿಧಾನಸಭೆ ಕ್ಷೇತ್ರದ ಚುನಾವಣೆ ಸಮಯದಲ್ಲಿ ರಾಜ್ಯದಲ್ಲಿ ಶಾಂತಿ ನೆಲಸುವಂತೆ ಆಗುತ್ತದೆ ಎಂದು ಸ್ಥಳೀಯ ರಜಪೂತ ನಾಯಕರು ಚುನಾವಣಾ ಆಯೋಗ ಮತ್ತು ಗುಜರಾತ ಚುನಾವಣಾ ಆಯುಕ್ತರಿಗೆ ಪತ್ರವೊಂದನ್ನು ಬರೆದಿದ್ದಾರೆ.

    ಪದ್ಮಾವತಿ ಸಿನಿಮಾವನ್ನು ಗುಜರಾತಿನಲ್ಲಿ ಚುನಾವಣೆ ಬಳಿಕ ರಿಲೀಸ್ ಮಾಡಬೇಕು ಇಲ್ಲವೇ ಸಿನಿಮಾವನ್ನು ರಾಜ್ಯದಲ್ಲಿ ಬ್ಯಾನ್ ಮಾಡೋದು ಒಳ್ಳೆಯದು. ರಜಪೂತ ಮತ್ತು ಕ್ಷತ್ರೀಯ ಸಮುದಾಯದ ಮುಖಂಡರು ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಚುನಾವಣೆಯ ಕಾವು ಹೆಚ್ಚಾಗಿರುವುದರಿಂದ ಸಿನಿಮಾದಿಂದಾಗಿ ಗಲಾಟೆಗಳು ಉಂಟಾಗಬಹುದು. ಒಂದು ವೇಳೆ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದ್ದರೆ ರಜಪೂತ ಮತ್ತು ಕ್ಷತ್ರೀಯ ಸಮುದಾಯದ ಜನತೆಯ ಭಾವನೆಗೆ ಧಕ್ಕೆ ಉಂಟಾಗುತ್ತದೆ ಎಂದು ಬಿಜೆಪಿ ವಕ್ತಾರ ಜಡೇಜಾ ತಿಳಿಸಿದ್ದಾರೆ.

    ಇದನ್ನೂ ಓದಿ: ಪದ್ಮಾವತಿ ರಂಗೋಲಿ ವಿವಾದ- 48 ಗಂಟೆ ಸಮಯದಲ್ಲಿ ಬಿಡಿಸಿದ್ದ ರಂಗೋಲಿಯನ್ನು ಅಳಿಸಿದ್ದ ಆರೋಪಿಗಳ ಅರೆಸ್ಟ್

    ರಾಣಿ ಪದ್ಮಾವತಿ ಕುರಿತಾಗಿ ಸಿನಿಮಾ ಮಾಡಲಿದ್ದೇನೆಂದು ಬನ್ಸಾಲಿ ಹೇಳಿಕೊಂಡಾಗ ಹಲವು ಟೀಕೆಗಳು ವ್ಯಕ್ತವಾಗಿದ್ದವು. ಆರಂಭದಲ್ಲಿ ಚಿತ್ರೀಕರಣದ ವೇಳೆ ರಜಪೂತ್ ಕರ್ಣಿ ಸೇನಾದ ಸದಸ್ಯನೋರ್ವ ಬನ್ಸಾಲಿ ಅವರ ಕಪಾಳಕ್ಕೆ ಹೊಡೆದಿದ್ದನು. ಇನ್ನೂ ಮಹಾರಾಷ್ಟ್ರದ ಕೋಲಾಪುರದಲ್ಲಿ ಚಿತ್ರೀಕರಣದ ಸೆಟ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ವೇಳೆ ಯಾರಿಗೂ ಯಾವುದೇ ಅಪಾಯವಾಗಿರಲಿಲ್ಲ.

    ಸಿನಿಮಾದಲ್ಲಿ ಯವುದೇ ರೀತಿ ಅಲ್ಲಾವುದ್ದೀನ್ ಖಿಲ್ಜಿ ಮತ್ತು ಪದ್ಮಾವತಿ ನಡುವೆ ಸೀನ್ ಗಳಿಲ್ಲ ಎಂದು ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಸ್ಪಷ್ಟಣೆ ನೀಡಿದ್ದಾರೆ. ಸಿನಿಮಾದಲ್ಲಿ ಪದ್ಮಾವತಿಯಾಗಿ ದೀಪಿಕಾ ಪಡುಕೋಣೆ ಎಲ್ಲರನ್ನು ಸೆಳೆಯಲಿದ್ದಾರೆ. ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ರಣ್‍ವೀರ್ ಸಿಂಗ್ ಮತ್ತು ರಾವಲ್ ರತನ್ ಸಿಂಗ್ ಪಾತ್ರದಲ್ಲಿ ಶಾಹಿದ್ ಕಪೂರ್ ನಟಿಸಿದ್ದಾರೆ. ಪದ್ಮಾವತಿ ಡಿಸೆಂಬರ್ 1ರಂದು ದೇಶಾದ್ಯಂತ ತೆರೆಕಾಣಲಿದೆ.

    ಗುಜರಾತ್ ನಲ್ಲಿ ಡಿಸೆಂಬರ್ 9ರಂದು ಮೊದಲ ಹಂತದ ಚುನಾವಣೆ ನಡೆದರೆ, ಡಿಸೆಂಬರ್ 18 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.