Tag: ರಜಾ ಅರ್ಜಿ

  • ಮಹಾರಾಷ್ಟ್ರ ರಾಜಕೀಯ ಡ್ರಾಮಾ ನೋಡಿ ಅನಾರೋಗ್ಯಕ್ಕೀಡಾದ ಪ್ರೊಫೆಸರ್ – ರಜಾ ಅರ್ಜಿ ವೈರಲ್

    ಮಹಾರಾಷ್ಟ್ರ ರಾಜಕೀಯ ಡ್ರಾಮಾ ನೋಡಿ ಅನಾರೋಗ್ಯಕ್ಕೀಡಾದ ಪ್ರೊಫೆಸರ್ – ರಜಾ ಅರ್ಜಿ ವೈರಲ್

    ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಆದ ಹೈಡ್ರಾಮಾ ನೋಡಿ ಅನಾರೋಗ್ಯಕ್ಕೀಡಾಗಿದ್ದೇನೆ, ಶಾಕ್‍ಗೆ ಒಳಗಾಗಿದ್ದೇನೆ ಎಂದು ಪ್ರೊಫೆಸರ್‌ರೊಬ್ಬರು ಬರೆದ ರಜಾ ಅರ್ಜಿ ಈಗ ಎಲ್ಲೆಡೆ ಸಖತ್ ವೈರಲ್ ಆಗಿದೆ.

    ಚಂದ್ರಪುರದಿಂದ ಸುಮಾರು 43 ಕಿ.ಮೀ ದೂರವಿರುವ ಗಡ್ಚಂದೂರ್ ಕಾಲೇಜಿನ ಇಂಗ್ಲಿಷ್ ಪ್ರೊಫೆಸರ್ ಝಹೀರ್ ಸಯ್ಯದ್ ಅವರು ಈ ರೀತಿ ರಜಾ ಅರ್ಜಿ ಬರೆದಿದ್ದಾರೆ. ಶನಿವಾರ ಬೆಳಗ್ಗೆ ಟಿವಿ ನೋಡುತ್ತಿದ್ದಾಗ ಮಹಾರಾಷ್ಟ್ರ ರಾಜಕೀಯದಲ್ಲಿ ನಡೆದ ಹೈಡ್ರಾಮಾದ ಸುದ್ದಿ ಪ್ರಸಾರವಾಗಿತ್ತು. ಇದನ್ನು ನೋಡಿ ನನಗೆ ಶಾಕ್ ಆಯ್ತು. ಇದರಿಂದ ನಾನು ಅನಾರೋಗ್ಯಕ್ಕೀಡಾದೆ. ಹೀಗಾಗಿ ನನಗೆ ಕಾಲೇಜಿಗೆ ಬರಲು ಆಗುತ್ತಿಲ್ಲ ರಜಾ ನೀಡಿ ಎಂದು ಪ್ರಾಂಶುಪಾಲರಿಗೆ ಪ್ರೊಫೆಸರ್ ಅರ್ಜಿ ಬರೆದಿದ್ದರು. ಇದನ್ನೂ ಓದಿ:ಫಡ್ನವಿಸ್, ಅಜಿತ್ ಪವಾರ್ ಪದಗ್ರಹಣಕ್ಕೆ ಬಂದಿದ್ದ ಎನ್‍ಸಿಪಿ ಶಾಸಕ ನಾಪತ್ತೆ

    ಪ್ರೊಫೆಸರ್ ರಜಾ ಅರ್ಜಿ ನೋಡಿದ ಪ್ರಾಂಶುಪಾಲರು, ಅರ್ಜಿಯಲ್ಲಿದ್ದ ಕಾರಣವನ್ನು ಒಪ್ಪದೆ ರಜೆ ನೀಡಲು ತಿರಸ್ಕರಿಸಿದ್ದಾರೆ. ಆದರೆ ಈ ರಜಾ ಅರ್ಜಿ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಓರ್ವ ವ್ಯಕ್ತಿ ಅನಾರೋಗ್ಯಕ್ಕೀಡಾಗುವ ರೀತಿ ಮಹಾರಾಷ್ಟ್ರ ರಾಜಕೀಯದಲ್ಲಿ ಹೈಡ್ರಾಮಾ ನಡೆಯುತ್ತಿದೆ. ಇದ್ದಕ್ಕಿದ್ದ ಹಾಗೆ ಬಿಜೆಪಿ ಎನ್‍ಸಿಪಿ ಜೊತೆಗೂಡಿ ಸರ್ಕಾರ ರಚನೆ ಮಾಡುತ್ತಿರುವುದು ಅನೇಕರಿಗೆ ಅಚ್ಚರಿಗೊಳಿಸಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಕಂಡು ಕೇಳರಿಯದ `ಮಹಾ’ ನಾಟಕದ ಸೂತ್ರಧಾರಿ ಯಾರು?

    ಶನಿವಾರ ಮಹಾರಾಷ್ಟ್ರ ಸಿಎಂ ಆಗಿ ಎರಡನೇ ಬಾರಿಗೆ ದೇವೆಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ್ದರು. ಅವರ ಜೊತೆಗೆ ಎನ್‍ಸಿಪಿ ನಾಯಕ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ವಿಚಾರ ಕೇಳಿ ಸ್ವತಃ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೇ ಶಾಕ್ ಪಟ್ಟು, ವಿರೋಧಿಸಿದ್ದರು. ಅಲ್ಲದೆ ಶಿವಸೇನೆ ಜೊತೆಗೂಡಿ ಸುದ್ದಿಗೋಷ್ಠಿಯನ್ನೂ ನಡೆಸಿ, ಬಿಜೆಪಿ ಬೆಂಬಲ ನೀಡುತ್ತಿರುವುದು ಅಜಿತ್ ಪವಾರ್ ಅವರ ವೈಯಕ್ತಿಕ ವಿಚಾರವೇ ಹೊರೆತು ಎನ್‍ಸಿಪಿದಲ್ಲ ಎಂದು ಶರದ್ ಪವಾರ್ ಹೇಳಿದ್ದರು.

  • ಲೀವ್ ಲೆಟರ್ ತರದಿದ್ದಕ್ಕೆ 10ರ ಬಾಲಕಿಗೆ ಥಳಿಸಿದ್ದ ಶಿಕ್ಷಕ ಅಮಾನತು

    ಲೀವ್ ಲೆಟರ್ ತರದಿದ್ದಕ್ಕೆ 10ರ ಬಾಲಕಿಗೆ ಥಳಿಸಿದ್ದ ಶಿಕ್ಷಕ ಅಮಾನತು

    ಮುಂಬೈ: ಎರಡು ದಿನದ ರಜಾ ಅರ್ಜಿಯನ್ನು ತರದಕ್ಕೆ 10 ವರ್ಷದ ಬಾಲಕಿಗೆ ಚೆನ್ನಾಗಿ ಥಳಿಸಿದ್ದ ಮುಂಬೈ ಶಾಲೆಯೊಂದರ ತರಗತಿ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.

    ಈ ಘಟನೆ ನಗರದ ಮುನ್ಸಿಪಲ್ ಕಾರ್ಪೋರೇಷನ್ ನಡೆಸಲ್ಪಡುವ ಸಾಯಿ ಜೀವನ್ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದಿದೆ. ಘಟನೆಯಿಂದ ಅಮನಾತಾದ ಶಿಕ್ಷಕನನ್ನು ಶ್ರೀಕೃಷ್ಣ ಕೆಂಜಾಲೆ ಎಂದು ಗುರುತಿಸಲಾಗಿದೆ.

    ಏನಿದು ಘಟನೆ?: 5ನೇ ತರಗತಿಯಲ್ಲಿ ಓದುತ್ತಿದ್ದ ಬಿಹಾದ ಮೂಲದ ವಿದ್ಯಾರ್ಥಿನಿ ಹೊಟ್ಟೆ ನೋವು ಅಂತ ಎರಡು ದಿನ ಶಾಲೆಗೆ ಹೋಗಿರಲಿಲ್ಲ. ಆದ್ರೆ ರಜೆ ಕಳೆದು ಶಾಲೆಗೆ ಹೋಗಬೇಕಿದ್ರೆ ಆಕೆ ರಜೆಯ ಅರ್ಜಿಯನ್ನು ತೆದುಕೊಂಡು ಹೋಗಲು ಮರೆತಿದ್ದಳು. ಇದರಿಂದ ಸಿಟ್ಟುಗೊಂಡ ಶಿಕ್ಷಕ ಆಕೆಗೆ ಶಿಕ್ಷೆಯಾಗಿ ಚೆನ್ನಾಗಿ ಥಳಿಸಿದ್ದಾರೆ. ಪರಿಣಾಮ ಬಾಲಕಿಯ ಬಲಗೈಯಲ್ಲಿ ಬಾಸುಂಡೆ ಬಂದಿದೆ.

    ಬುಧವಾರ ಈ ಘಟನೆ ನಡೆದಿದ್ದು, ಬಾಲಕಿಯ ತಂದೆ ಕಟ್ಟಡ ಕಾರ್ಮಿಕರಾಗಿದ್ದು ಈ ವಿಚಾರವನ್ನು ಪಾಲಿಕೆ ಸದಸ್ಯ ರಾಹುಲ್ ಜಾಧವ್ ಅವರಿಗೆ ತಿಳಿಸಿದ್ದಾರೆ. ಕೂಡಲೇ ಜಾಧವ್ ಅವರು ಪುಣೆ ನಗರಾಯುಕ್ತರಿಗೆ ವಿಷಯ ತಿಳಿಸುತ್ತಾರೆ. ಜಾಧವ್ ಮಾಹಿತಿಯಂತೆ ಅವರು ಚಿಕಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದ್ರೆ ಘಟನೆಯ ಬಗ್ಗೆ ಬಾಲಕಿ ಅಥವಾ ಆಕೆಯ ತಂದೆ ಯಾವುದೇ ದೂರು ದಾಖಲಿಸಿಲ್ಲ ಎಂಬುದಾಗಿ ವರದಿಯಾಗಿದೆ.

    ಸದ್ಯ ಬಾಲಕಿ ನಗರದ ಯಶ್ವಂತ್ ರಾವ್ ಚೌಹಾಣ್ ಮೆಮೊರಿಯಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾಳೆ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇನೆ. ಅಷ್ಟಕ್ಕೂ ಈ ಘಟನೆ ನಡೆದ ದಿನ ಪ್ರಾಂಶುಪಾಲರು ಗೈರಾಗಿದ್ದರು. ಸದ್ಯ ಪ್ರಕರಣ ಸಂಬಂಧ ಶಿಕ್ಷಕನನ್ನು ಶಾಲೆಯಿಂದ ಅಮಾನತು ಮಾಡಿದ್ದೇವೆ ಅಂತ ಶಿಕ್ಷಣಾಧಿಕಾರಿ ಬಿ ಎಸ್ ಅವಾರಿ ತಿಳಿಸಿದ್ದಾರೆ.