Tag: ರಣದೀಪ್ ಹೂಡ

  • ಸಾವರ್ಕರ್ ಪತ್ನಿ ಪಾತ್ರಕ್ಕೆ ನಯಾಪೈಸ್ ಸಂಭಾವನೆ ಪಡೆಯದ ಅಂಕಿತಾ

    ಸಾವರ್ಕರ್ ಪತ್ನಿ ಪಾತ್ರಕ್ಕೆ ನಯಾಪೈಸ್ ಸಂಭಾವನೆ ಪಡೆಯದ ಅಂಕಿತಾ

    ಬಿಗ್ ಬಾಸ್ ಸ್ಪರ್ಧಿ ಹಾಗೂ ಹೆಸರಾಂತ ನಟಿ ಅಂಕಿತಾ ಲೋಖಂಡೆ (Ankita Lokhande) ದುಡ್ಡು ತಗೆದುಕೊಳ್ಳದೇ ಯಾವುದೇ ಕೆಲಸ ಮಾಡುವುದಿಲ್ಲ ಎನ್ನುವ ಮಾತಿತ್ತು. ಆದರೆ, ಅವರು ಅದನ್ನು ಸುಳ್ಳು ಮಾಡಿದ್ದಾರೆ. ವೀರ ಸಾವರ್ಕರ್ ಸಿನಿಮಾಗಾಗಿ ಅವರು ಸಂಭಾವನೆಯಾಗಿ ನಯಾಪೈಸೆ ಕೂಡ ಪಡೆದಿಲ್ಲವೆಂದು ನಿರ್ಮಾಪಕರು ತಿಳಿಸಿದ್ದಾರೆ. ಸಾವರ್ಕರ್ ಪತ್ನಿ ಪಾತ್ರ ಅಂದಾಗ, ನನ್ನದೊಂದು ಬೇಡಿಕೆ ಇದೆ ಅದಕ್ಕೆ ಒಪ್ಪಿದರೆ ಮಾತ್ರ ಪಾತ್ರ ಮಾಡುತ್ತೇನೆ ಎಂದರಂತೆ ಅಂಕಿತಾ.

    ನಟಿ ಇಟ್ಟ ಬೇಡಿಕೆ ಏನಿರಬಹುದು ಎನ್ನುವ ಗೊಂದಲ ನಿರ್ಮಾಪಕರಿಗೆ ಆಗಿತ್ತಂತೆ. ಆದರೆ, ಈ ಸಿನಿಮಾಗಾಗಿ ನಾನು ಯಾವುದೇ ಸಂಭಾವನೆ ಪಡೆಯುವುದಿಲ್ಲ. ಉಚಿತವಾಗಿ ನಟಿಸುತ್ತೇನೆ. ಅದಕ್ಕೆ ಒಪ್ಪಿದರೆ ಮಾತ್ರ ಪಾತ್ರ ಮಾಡುತ್ತೇನೆ ಅಂದರಂತೆ ಅಂಕಿತಾ. ಇದು ನಟಿ ಬದ್ಧತೆ ಎಂದು ನಿರ್ಮಾಪಕರು ಹೇಳಿದ್ದಾರೆ.

    ನಾನಾ ಕಾರಣಗಳಿಂದ ಅತೀ ನಿರೀಕ್ಷೆ ಮೂಡಿಸಿದ್ದ ‘ಸ್ವಾತಂತ್ರ ವೀರ್ ಸಾವರ್ಕರ್’ (Savarkar) ಸಿನಿಮಾ ಇತ್ತೀಚೆಷ್ಟೇ ಬಿಡುಗಡೆ ಆಗಿದೆ. ಆದರೆ, ಅಂದುಕೊಂಡಷ್ಟು ಚಿತ್ರಕ್ಕೆ ಪ್ರತಿಕ್ರಿಯೆ ಸಿಕ್ಕಿಲ್ಲ ಎನ್ನುವುದು ಬಾಕ್ಸ್ ಆಫೀಸಿಗೆ (Box Office) ಹರಿದು ಬಂದ ಹಣವೇ ಹೇಳುತ್ತಿದೆ. ಮೊದಲ ದಿನದ ಕಲೆಕ್ಷನ್ 1.15 ಲಕ್ಷ ರೂಪಾಯಿ ಬಂದಿತ್ತು. ನಂತರದ ದಿನಗಳಲ್ಲಿ ಅಷ್ಟೇನೂ ಈ ಪ್ರಮಾಣ ಏರಿಲ್ಲ.

    ವಿವಾದಿತ ಚಿತ್ರಗಳು ಬಂದಾಗ ಜನರು ಅದನ್ನು ಮುಗಿಬಿದ್ದು ನೋಡಿ ಬಾಕ್ಸ್ ಆಫೀಸ್ ಕೂಡ ತುಂಬಿಸಿದ್ದಾರೆ. ಅದರಲ್ಲೂ ದಿ ಕಾಶ್ಮೀರ ಫೈಲ್ಸ್, ದಿ ಕೇರಳ ಸ್ಟೋರಿ ಚಿತ್ರಗಳನ್ನು ಸಖತ್ತಾಗಿಯೇ ಪ್ರೇಕ್ಷಕರಿಗೆ ಪ್ರಮೋಟ್ ಮಾಡಿದರು. ಆದರೆ, ವೀರ ಸಾವರ್ಕರ್ ಚಿತ್ರವನ್ನು ಅಷ್ಟಾಗಿ ಪ್ರೇಕ್ಷಕರು ಅಪ್ಪಿಕೊಂಡಿಲ್ಲ.

     

    ರಣ್ ದೀಪ್ ಹೂಡ (Randeep Hooda) ನಿರ್ದೇಶನದ ಹಾಗೂ ನಟನೆಯಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಿರ್ದೇಶಕರ ಕೆಲಸವನ್ನು ಪ್ರೇಕ್ಷಕ ಮೆಚ್ಚಿಕೊಂಡಿದ್ದಾನೆ.  ರಣ್ ದೀಪ್ ಈ ಸಿನಿಮಾದಲ್ಲಿ ಸಾವರ್ಕರ್ ಪಾತ್ರ ಮಾಡಿದ್ದರೆ, ಅವರ ಪತ್ನಿಯಾಗಿ ಅಂಕಿತಾ ಲೋಖಂಡೆ ನಟಿಸಿದ್ದಾರೆ. ಕಲಾ ನಿರ್ದೇಶಕರು ಆ ಕಾಲವನ್ನು ಚಿತ್ರದಲ್ಲಿ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಆದರೂ, ಪ್ರೇಕ್ಷಕ ಮಾತ್ರ ತುಂಬಿದ ಪ್ರದರ್ಶನಕ್ಕೆ ಸಾಕ್ಷಿಯಾಗಿಲ್ಲ.

  • ಬಾಲಿವುಡ್ ನಲ್ಲಿ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ

    ಬಾಲಿವುಡ್ ನಲ್ಲಿ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ

    ವೀರ ಸಾವರ್ಕರ್ ನಿಲುವಿನ ಬಗ್ಗೆ ದೇಶಾದ್ಯಂತ ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಈ ಸಂದರ್ಭದಲ್ಲಿ ಅವರ ಬಯೋಪಿಕ್ ಸಿನಿಮಾವಾಗಿ ಮೂಡಿ ಬರುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಗೆಲುವು ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ ಸೇರಿದಂತೆ ಹಲವು ಚಿತ್ರಗಳ ನಿರ್ಮಾಣಕ್ಕೆ ಮುನ್ನುಡಿ ಬರೆದಿದೆ. ಇದನ್ನೂ ಓದಿ : ಕದ್ದುಮುಚ್ಚಿ ಮದುವೆ ಆಗಿಲ್ಲ, ಬಾಡಿಗೆ ತಾಯಿ ಸುಳ್ಳು : ನಯನತಾರಾ

    ಭಾರತೀಯ ಸಿನಿಮಾ ರಂಗದಲ್ಲಿ ಸದ್ಯ ಬಯೋಪಿಕ್ ಟ್ರೆಂಡ್ ಭರ್ಜರಿಯಾಗಿದೆ. ಅದರಲ್ಲೂ ವಿವಾದಿತ ವ್ಯಕ್ತಿಗಳ ಮೇಲಿನ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲೂ ಸಖತ್ ಸದ್ದು ಮಾಡುತ್ತಿವೆ. ಹೀಗಾಗಿ ಇಂದು ಬಾಲಿವುಡ್ ನಲ್ಲಿ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಅನೌನ್ಸ್ ಆಗಿದೆ. ಇದನ್ನೂ ಓದಿ:  ಕಾದಂಬರಿ ಆಧರಿತ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ

    ಮಹೇಶ್ ಮಾಂಜ್ರೇಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಸಾವರ್ಕರ್ ಪಾತ್ರವನ್ನು ಬಾಲಿವುಡ್ ಖ್ಯಾತ ನಟ ರಣದೀಪ್ ಹೂಡ ಮಾಡಲಿದ್ದಾರೆ. ಆನಂದ್ ಪಂಡಿತ್ ಮತ್ತು ಸಂದೀಪ್ ಸಿಂಗ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವುದು ವಿಶೇಷ. ಇದನ್ನೂ ಓದಿ : ಅನಿಲ್ ಕಪೂರ್ ಈ ಫೋಟೋ ಹಾಕಬಾರದಿತ್ತು: ಕಿವಿ ಹಿಂಡಿದ ಅಭಿಮಾನಿಗಳು

    ಈ ಕುರಿತು ಮಾತನಾಡಿರುವ ರಣದೀಪ್ ಹೂಡ “ಇಂಥದ್ದೊಂದು ಪಾತ್ರ ನನಗೆ ಸಿಕ್ಕಿದ್ದು ಮತ್ತು ವೀರ ಸಾವರ್ಕರ್ ಪಾತ್ರವನ್ನು ನಾನೂ ಮಾಡುತ್ತಿರುವುದು ನನಗೆ ಸಿಕ್ಕಿರುವ ದೊಡ್ಡ ಗೌರವವಿದು’ ಎಂದಿದ್ದಾರೆ.ಮುಂದುವರೆದು ಮಾತನಾಡಿರುವ ಅವರು, “ವಿನಾಯಕ ದಾಮೋದರ ಸಾವರ್ಕರ್ ಕುರಿತಾಗಿ ಈಗಾಗಲೇ ಸಾಕಷ್ಟು ತಪ್ಪು ಕಲ್ಪನೆಗಳನ್ನು ಬಿತ್ತಲಾಗಿದೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಷ್ಟೋ ಮಹಾತ್ಮರ ಚರಿತ್ರೆಗಳು ಜನರಿಗೆ ತಲುಪಿಲ್ಲ. ಹಾಗೂ ಸಾವರ್ಕರ್ ಸಾಧನೆಯ ಬಗ್ಗೆ ಈ ಹೊತ್ತಿನಲ್ಲಿ ಜನರಿಗೆ ತಿಳಿಸಬೇಕಾಗಿದ್ದು ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸಿನಿಮಾ ಸಹಾಯವಾಗಲಿದೆ’ ಎಂದಿದ್ದಾರೆ ಹೂಡ. ಇದನ್ನೂ ಓದಿ : ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ

    ಸಾವರ್ಕರ್ ಕುರಿತಾಗಿ ಈಗಲೂ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಅವರ ಹೋರಾಟಗಳ ಬಗ್ಗೆ ಅನುಮಾನ ವ್ಯಕ್ತ ಪಡಿಸಲಾಗುತ್ತಿದೆ. ಸಾವರ್ಕರ್ ಸಾಧನೆಯನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂಬ ಆರೋಪ ಕೂಡ ಇದೆ. ಹಾಗಾಗಿ ಈ ಸಿನಿಮಾ ಮಹತ್ವ ಪಡೆದುಕೊಳ್ಳಲಿದೆ.