Tag: ರಣಾಕ್ಷ

  • ಕಾಮಿಡಿ ಕಿಲಾಡಿ ರಘು ನಟನೆಯ ‘ರಣಾಕ್ಷ’: ಟ್ರೈಲರ್ ರಿಲೀಸ್

    ಕಾಮಿಡಿ ಕಿಲಾಡಿ ರಘು ನಟನೆಯ ‘ರಣಾಕ್ಷ’: ಟ್ರೈಲರ್ ರಿಲೀಸ್

    ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು (Raghu) ನಾಯಕನಾಗಿ ನಟಿಸಿರುವ,  ದೇವರು, ದೆವ್ವದ ನಡುವಿನ ಸಂಘರ್ಷದ ಸುತ್ತ ನಡೆಯೋ  ಸಸ್ಪೆನ್ಸ್ , ಥ್ರಿಲ್ಲರ್  ಜಾನರ್ ಚಿತ್ರ “ರಣಾಕ್ಷ” (Ranaksha). ಕೆ.ರಾಘವ ಅವರ ನಿರ್ದೇಶನವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು‌.  ಈ ಸಂದರ್ಭದಲ್ಲಿ ನಿರ್ಮಾಪಕ ರಾಮು  ಮಾತನಾಡುತ್ತಾ 6ರಿಂದ  80 ವರ್ಷದವರೂ ಕೂತು ನೋಡುವಂಥ, ಹಳ್ಳಿ ಸೊಗಡಿನ ಕೌಟುಂಬಿಕ  ಕಥಾನಕ ಇರೋ ಚಿತ್ರವಿದು.  ಸಿನಿಮಾ ನೋಡಿ ನೀವೆಲ್ಲ‌ ಗೆಲ್ಲಿಸಿದರೆ, ವರ್ಷಕ್ಕೆ ಒಂದೆರಡು ಸಿನಿಮಾ ಮಾಡುವ ಆಸೆಯಿದೆ. ಕುಚುಕು ಸ್ನೇಹಿತ ಉಮಾಮಹೇಶ್ವರ ನಮ್ಮಜೊತೆಗಿದ್ದಾರೆ‌.  ಹಣ ಗಳಿಸೋ ಉದ್ದೇಶದಿಂದ ಈ ಸಿನಿಮಾ ಮಾಡಿಲ್ಲ‌. ರಘು ತುಂಬಾ ಚೆನ್ನಾಗಿ ಪಾತ್ರ ಮಾಡಿದ್ದಾರೆ. ಸಕಲೇಶಪುರದಲ್ಲಿ ಶೂಟ್ ಮಾಡುವಾಗ ತುಂಬಾ ಪೆಟ್ಡು ತಿಂದಿದ್ದಾರೆ. ಅಲ್ಲದೆ  ಇಬ್ಬರು ಹೊಸ ಹುಡುಗಿಯರು ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಆಲಾಪ್ ಮಾತು ಕಮ್ಮಿ, ಆದರೆ ಅದ್ಬುತವಾಗಿ ಮ್ಯೂಸಿಕ್ ಮಾಡಿದ್ದಾರೆ ಎಂದರು.

    ನಂತರ  ನಿರ್ದೇಶಕ ರಾಘವ ಮಾತನಾಡಿ ಇದು ನನ್ನ ಎರಡನೇ ಚಿತ್ರ. ಕಲಾವಿದನಾಗಿ ಬಂದವನು ನಿರ್ದೇಶಕನಾಗಿದ್ದೇನೆ. ಪ್ರೊಡ್ಯೂಸರ್ ಗೆ ಒಂದು ಲೈನ್ ಹೇಳಿದಾಗ ಏನೂ ಕೇಳದೆ ಒಪ್ಪಿದರು. “ರಣಾಕ್ಷ” ಎಂದರೆ ಹದ್ದಿನಂತೆ ಕಣ್ಣಿಟ್ಟು ಕಾಯುವವನು ಎಂದರ್ಥ. ಫ್ಯಾಮಿಲಿ ಹಿನ್ನೆಲೆಯಲ್ಲಿ ನಡೆಯುವ ಸಸ್ಪೆನ್ಸ್ , ಥ್ರಿಲ್ಲರ್ ಚಿತ್ರ. ದೇವರು ದೆವ್ವ ಎರಡರ ನಡುವಿನ ಸಂಘರ್ಷವೇ ಚಿತ್ರದ ಕಾನ್ಸೆಪ್ಟ್.  ಯಾವುದೇ  ಮಂತ್ರ , ತಂತ್ರ , ಶಕ್ತಿ  ಏನೇ ಸಮಸ್ಯೆ ಎದುರಾದರೂ ಅದನ್ನು ಎದುರಿಸುವುದಕ್ಕೆ ಮನುಷ್ಯನೇ ಬರಬೇಕು ಅದು ಹೇಗೆ ಎಂಬುದನ್ನು ಚಿತ್ರದಲ್ಲಿ ಹೇಳಿದ್ದೇವೆ.  ರಘು ನನಗೆ ಬಹಳ ವರ್ಷದ ಗೆಳೆಯ, ನಿನಗೆ ಹೀರೋ ಮಾಡ್ತೇನೆ ಅಂದಾಗ ಕಾಮಿಡಿ ಮಾಡಬೇಡಿ  ಅಂದರು. ತುಂಬಾ ಶ್ರಮವಹಿಸಿ  ಒಂದು ವಿಭಿನ್ನ ಚಿತ್ರವನ್ನು ನಿಮ್ಮ ಮುಂದೆ ತರುತ್ತಿದ್ದೇವೆ ಎಂದು ಹೇಳಿದರು.

    ಕಾಮಿಡಿ ಕಿಲಾಡಿಗಳು ಮೂಲಕ ಜನಪ್ರಿಯವಾದ ನಟ   ಸೀರುಂಡೆ ರಘು ಮಾತನಾಡುತ್ತಾ ನಾನು ಕೂಡ ಮಾಧ್ಯಮದಲ್ಲಿ ಕೆಲಸ ಮಾಡಿದವನು, ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ  ಅಭಿನಯಿಸಿ, ಮೊದಲಬಾರಿಗೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. 4 ಜನ ಸ್ನೇಹಿತರ ಜೊತೆ ಸಾಗುವ ಪಾತ್ರ. ಕೊನೆಯಲ್ಲಿ ಅದೇನೆಂದು ರಿವೀಲ್ ಆಗುತ್ತೆ. ನಿಮ್ಮೆಲ್ಲರ ಪ್ರೀತಿ ಸಹಕಾರವಿರಲಿ ಎಂದು ಕೇಳಿಕೊಂಡರು. ನಾಯಕಿ ರಕ್ಷಾ ಮಾತನಾಡುತ್ತಾ ನಾನು ಮುಗ್ಧ  ಹಳ್ಳಿ ಹುಡುಗಿಯ ಪಾತ್ರ ಮಾಡಿದ್ದೇನೆ ಇದು ನನ್ನ ಮೊದಲ ಚಿತ್ರ ಎಂದರು.

    ಚಿತ್ರಕ್ಕೆ ಸಂಗೀತ ನೀಡಿರುವ ವಿಶಾಲ್ ಆಲಾಪ್ ಮಾತನಾಡಿ ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿವೆ. ಸಂಗೀತ ನೀಡುವುದು ನನಗೆ ಚಾಲೆಂಜ್ ಆಗಿತ್ತು. ಪ್ರತಿ ಹಾಡು ವಿಭಿನ್ನವಾಗಿ ಮೂಡಿ ಬಂದಿದೆ ಎಂದರು.  ಸಕಲೇಶಪುರ, ಹೊನ್ನಾವರ, ಮೂಡಬಿದ್ರೆ, ಕಾರ್ಕಳ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಮೂರು ಸಾಹಸ ದೃಶ್ಯಗಳಿವೆ.  ಶೀಘ್ರದಲ್ಲೇ ರಣಾಕ್ಷ  ಬೆಳ್ಳಿಪರದೆ ಮೇಲೆ ಮೂಡಿಬರಲಿದೆ.

  • ಕಾಮಿಡಿ ಕಿಲಾಡಿ ಖ್ಯಾತಿಯ ರಘು ನಟನೆಯ ‘ರಣಾಕ್ಷ’ ಟೀಸರ್ ರಿಲೀಸ್

    ಕಾಮಿಡಿ ಕಿಲಾಡಿ ಖ್ಯಾತಿಯ ರಘು ನಟನೆಯ ‘ರಣಾಕ್ಷ’ ಟೀಸರ್ ರಿಲೀಸ್

    ಯುವ ಪ್ರತಿಭೆಗಗಳ ತಂಡವೇ  ಸೇರಿ  ಮಾಡಿರುವ ಸಸ್ಪೆನ್ಸ್ , ಥ್ರಿಲ್ಲರ್  ಚಿತ್ರ ‘ರಣಾಕ್ಷ’ (Ranaksha).  ಈ ಚಿತ್ರದ  ಹಾಡುಗಳು ಹಾಗೂ ಟೀಸರ್ ಅನ್ನು ಸಾಹಿತಿ, ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ಬಿಡುಗಡೆ ಮಾಡಿದರು. ನಂತರ ಮಾತನಾಡುತ್ತಾ ‘ನಿರ್ದೇಶಕ ರಾಘವ ನನಗೆ ಬಹಳ ವರ್ಷದ ಗೆಳೆಯರು, ನಾನು ಈ ಚಿತ್ರದ ಬಗ್ಗೆ ಯಾವುದೇ ನಿರೀಕ್ಷೆ ಇಟ್ಕೊಂಡು ಇಲ್ಲಿಗೆ ಬಂದಿರಲಿಲ್ಲ, ಆದರೆ ಟೀಸರ್ (Teaser) ಹಾಗೂ ಹಾಡುಗಳನ್ನು ನೋಡಿದ ಮೇಲೆ ತಂಡದ ಶ್ರಮ ಕಾಣುತ್ತದೆ. ಈ ರಣಾಕ್ಷ ಟೈಟಲ್ಲೇ  ಸ್ಟ್ರಾಂಗ್ ಇದೆ. ಮೊದಲೆಲ್ಲಾ  ಸಿನಿಮಾಗಳು ಹೆಚ್ಚು ಇರಲಿಲ್ಲ, ಹಾಡುಗಳು ಕೂಡ ಕಮ್ಮಿ ಇತ್ತು, ಪದೇ ಪದೇ ಅದೇ ಹಾಡನ್ನು ಆಕಾಶವಾಣಿ ಹಾಗೂ ಸಮಾರಂಭಗಳಲ್ಲಿ  ಕೇಳಿದಾಗ ಸದಾ ನೆನಪಿಗೆ ಬರುತ್ತಿತ್ತು, ಈಗ ವರ್ಷಕ್ಕೆ ಸುಮಾರು 300  ಚಿತ್ರಗಳು ಬರುತ್ತಿವೆ. ಇನ್ನು ಎಷ್ಟು ಹಾಡುಗಳು ಬಂದಿರಬೇಕು ಯೋಚಿಸಿ. ಅದರಲ್ಲೂ ಈ ಚಿತ್ರದ ಹಾಡುಗಳು ನೋಡಿದಾಗ ಬಹಳ ಖುಷಿ ಎನಿಸಿತು. ಯಾಕೆಂದರೆ ನೋಡಿದ ಮೂರು ಹಾಡುಗಳು ಹೊಸತನದ ಸದ್ದನ್ನ ಮೂಡಿಸುತ್ತದೆ. ಸಂಗೀತ ನಿರ್ದೇಶಕ ವಿಶಾಲ್ ಅಲಾಪ್ ಕೆಲಸ ಸೊಗಸಾಗಿದೆ. ಅದೇ ರೀತಿ  ಗಾಯಕರಿಗೂ ಕೂಡ ಉತ್ತಮ ಭವಿಷ್ಯವಿದೆ.  ಪೂರ್ಣ ಪ್ರಮಾಣದ ನಾಯಕನಾಗಿ ಬೆಳ್ಳಿ ಪರದೆಗೆ ಬರುತ್ತಿರುವ ರಘು, ನಾಯಕಿಯರಾದ ರಕ್ಷಾ ಹಾಗೂ ರೋಹಿ ಸೇರಿದಂತೆ ಇಡೀ ಚಿತ್ರತಂಡಕ್ಕೆ ಯಶಸ್ಸು ಸಿಗಲಿ’ ಎಂದು ಶುಭ ಕೋರಿದರು. ಇನ್ನು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಮೋಹನ್ ರಾವ್ ನಾಲ್ವಡೆ, ರಮೇಶ್ ಗೌಡ , ಗಿರೀಶ್ ಗೌಡ,   ಲಕ್ಷ್ಮಣ್ ಪಡಿಮನಿ ಸೇರಿದಂತೆ ಎಲ್ಲರೂ ಚಿತ್ರತಂಡದಕ್ಕೆ ಶುಭ ಹಾರೈಸಿದರು.

    ಚಿತ್ರದ ನಿರ್ದೇಶಕ ರಾಘವ ಮಾತನಾಡುತ್ತಾ ‘ರಣಾಕ್ಷ ಎಂದರೆ ಹದ್ದಿನಂತೆ ಕಣ್ಣಿಟ್ಟು ಕಾಯುವವನು ಎಂದರ್ಥ, ಇದೊಂದು ಸಸ್ಪೆನ್ಸ್ , ಥ್ರಿಲ್ಲರ್ ಕಥೆ ಒಳಗೊಂಡ ಚಿತ್ರ , ಯಾವುದೇ  ಮಂತ್ರ , ತಂತ್ರ , ಶಕ್ತಿ  ಏನೇ ಸಮಸ್ಯೆ ಎದುರಾದರೂ ಅದನ್ನು ಎದುರಿಸುವುದಕ್ಕೆ ಮನುಷ್ಯನೇ ಬರಬೇಕು ಅದು ಹೇಗೆ.. ಏನು.. ಎಂಬುದನ್ನು ಚಿತ್ರದಲ್ಲಿ ನೋಡಬೇಕು, ಬಹಳ ಶ್ರಮವಹಿಸಿ  ಒಂದು ವಿಭಿನ್ನ ಚಿತ್ರವನ್ನು ನಿಮ್ಮ ಮುಂದೆ ತರುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹ , ಸಹಕಾರ ನಿರಂತರವಾಗಿ ಇರಲಿ ಎಂದು ಕೇಳಿಕೊಂಡರು.  ನಿರ್ಮಾಪಕ ರಾಮು  ಮಾತನಾಡುತ್ತಾ ನನಗೂ ಸಿನಿಮಾ ಮಾಡಬೇಕೆಂಬ ಆಸೆ ಇತ್ತು. ಯಾಕೆಂದರೆ ಒಂದು ಚಿತ್ರ ಮಾಡಿದರೆ ನಮಗೊಂದು ಹೆಸರು ಬರುತ್ತೆ ಅಂತ, ಈ  ಚಿತ್ರವನ್ನು ನೋಡಿ ನೀವೆಲ್ಲ‌ ಗೆಲ್ಲಿಸಿದರೆ, ವರ್ಷಕ್ಕೆ ಒಂದೆರಡು ಸಿನಿಮಾ ಮಾಡುವ ಆಸೆ ಇದೆ ಎಂದರು.

    ಕಾಮಿಡಿ ಕಿಲಾಡಿ ಮೂಲಕ ಜನರ ಗಮನವನ್ನು ಸೆಳೆದ ಪ್ರತಿಭೆ  ನಾಯಕ ಸೀರುಂಡೆ ರಘು (Raghu) ಮಾತನಾಡುತ್ತಾ ನಾನು ಕೂಡ ಮಾಧ್ಯಮದಲ್ಲಿ ಕ್ಯಾಮೆರಾ ಟ್ರೈಪಾಡ್ ಹಿಡಿದುಕೊಂಡು ಬಂದವನು , ನಂತರ ಕಾಮಿಡಿ ಕಿಲಾಡಿಯಲ್ಲಿ ಕಾಣಿಸಿಕೊಂಡೆ , ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ  ಅಭಿನಯಿಸಿದ್ದು, ಈ ಚಿತ್ರದಲ್ಲಿ ಹೀರೋ ಅನ್ನುವುದಕ್ಕಿಂತ ಕಥಾ ನಾಯಕನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಮೊದಲ ಬಾರಿಗೆ ಲೀಡ್ ರೋಲ್ ಮಾಡ್ತಿರುವೆ. 4 ಜನ ಸ್ನೇಹಿತರ ಜೊತೆ ಸಾಗುವ ಪಾತ್ರ. ನನಗೆ ಅವಕಾಶ ನೀಡಿರುವ ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಧನ್ಯವಾದಗಳು. ನಾನು ಹೀರೋ ಆಗಿ ಅಭಿನಯಿಸುತ್ತಿದ್ದೇನೆ. ಬೇರೆ ಪಾತ್ರಗಳನ್ನು ಮಾಡುವುದಿಲ್ಲ ಎಂದು ಭಾವಿಸಿ ಕೆಲವೊಂದು ಅವಕಾಶಗಳು  ದೂರವಾಗಿತ್ತು , ನಾನೊಬ್ಬ ಕಲಾವಿದ. ಯಾವ ಪಾತ್ರವಾದ್ರು ಮಾಡುವುದಷ್ಟೇ ನನ್ನ ಕೆಲಸ. ಮೊದಲ ಬಾರಿಗೆ ಕಾಮಿಡಿ ಬಿಟ್ಟು ಕ್ಲಾಸ್ ಹಾಗೂ ಮಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ನಿಮ್ಮೆಲ್ಲರ ಪ್ರೀತಿ ಸಹಕಾರವಿರಲಿ ಎಂದು ಕೇಳಿಕೊಂಡರು.  ನಾಯಕಿ ರಕ್ಷಾ ಮಾತನಾಡುತ್ತಾ ನಾನು ಮುಗ್ಧ  ಹಳ್ಳಿ ಹುಡುಗಿಯ ಪಾತ್ರ ಮಾಡಿದ್ದೇನೆ ಇದು ನನ್ನ ಮೊದಲ ಚಿತ್ರ ಎಂದರು. ಮತ್ತೊಬ್ಬ ನಟಿ ರೋಹಿ ಮಾತನಾಡುತ್ತಾ ಅವಕಾಶ ಕೊಟ್ಟ ನಿರ್ಮಾಪಕ , ನಿರ್ದೇಶಕರಿಗೆ ಧನ್ಯವಾದಗಳು ನಮ್ಮ ಚಿತ್ರ ನೋಡಿ ಎಂದು ಕೇಳಿಕೊಂಡರು.

     

    ಚಿತ್ರಕ್ಕೆ ಸಂಗೀತ ನೀಡಿರುವ ವಿಶಾಲ್ ಆಲಾಪ್ ಮಾತನಾಡುತ್ತಾ ಈ ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿವೆ. ಸಂಗೀತ ನೀಡುವುದು ನನಗೆ ಚಾಲೆಂಜ್ ಆಗಿದ್ದು , ಬಹಳ ವಿಭಿನ್ನವಾಗಿ ಸಾಂಗ್ ಕಂಪೋಸ್ ಮಾಡಿದ್ದೇವೆ. ಒಂದೊಂದು ಹಾಡು ವಿಭಿನ್ನವಾಗಿ ಮೂಡಿ ಬಂದಿದೆ. ಗಾಯಕರು  ಕೂಡ ಬಹಳ ಸೊಗಸಾಗಿ ಹಾಡಿದ್ದಾರೆ ಎಂದರು.  ಚಿತ್ರದ ಛಾಯಾಗ್ರಹಕ ದೀಪಕ್ ಕುಮಾರ್ ಮಾತನಾಡುತ್ತಾ ನನಗೆ ಈ ಚಿತ್ರದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ಜಾನಿ ಮಾಸ್ಟರ್ ಮೂಲಕ , ಬಹಳ ಕಷ್ಟಪಟ್ಟು ಈ ಚಿತ್ರವನ್ನು ಚಿತ್ರೀಕರಣ ಮಾಡಿದ್ದೇವೆ ಎಂದರು. ಸಕಲೇಶಪುರ, ಹೊನ್ನಾವರ, ಮೂಡಬಿದ್ರೆ, ಕಾರ್ಕಳ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ , ಚಿತ್ರದಲ್ಲಿ ಮೂರು ಸಾಹಸ ದೃಶ್ಯಗಳಿದ್ದು, ಚಿತ್ರವೀಗ  ಸೆನ್ಸರ್ ಹಂತಕ್ಕೆ ಹೋಗಿದೆ, ಅತಿ ಶೀಘ್ರದಲ್ಲಿ ಬೆಳ್ಳಿ ಪರದೆ ಮೇಲೆ ಮೂಡಿಬರಲಿದೆ.

  • ಕಾಮಿಡಿಯಿಂದ ‘ಥ್ರಿಲ್ಲರ್’ನತ್ತ ಸೀರುಂಡೆ ರಘು

    ಕಾಮಿಡಿಯಿಂದ ‘ಥ್ರಿಲ್ಲರ್’ನತ್ತ ಸೀರುಂಡೆ ರಘು

    ಈ‌ ಹಿಂದೆ ಮರೆಯದೆ ಕ್ಷಮಿಸು ಎಂಬ ಚಿತ್ರ ನಿರ್ದೇಶಿಸಿದ್ದ ಕೆ.ರಾಘವ ಅವರ ನಿರ್ದೇಶನದ ಮತ್ತೊಂದು ಚಿತ್ರ ರಣಾಕ್ಷ (Ranaksha). ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ (First Look) ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಚಲನಚಿತ್ರ  ವಾಣಿಜ್ಯಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಮೊದಲನೋಟಕ್ಕೆ ಚಾಲನೆ ನೀಡಿದರು. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ಕಿರುತೆರೆಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು (Seerunde Raghu), ರಕ್ಷಾ ಹನುಮಂತು ಹಾಗೂ ರೋಹಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೆವಿಆರ್. ಪಿಕ್ಚರ್ಸ್ ಮೂಲಕ ಹೆಚ್.ಎಸ್.ರಾಮು ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಶೋಭಾ ಶಿವಾಜಿರಾವ್ ಸಹ ನಿರ್ಮಾಪಕರಾಗಿದ್ದಾರೆ.

    ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ರಾಘವ ಚಿತ್ರದ ಕುರಿತಂತೆ ಮಾತನಾಡುತ್ತ ರಣಾಕ್ಷ ಎಂದರೆ ಹದ್ದಿನಂತೆ ಕಣ್ಣಿಟ್ಟು ಕಾಯುವವನು ಎಂದರ್ಥ, ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಜೊತೆಗೆ ಮಾಸ್ ಎಂಟರ್ಟೈನರ್ ಚಿತ್ರ. ಮೊದಲ ಬಾರಿಗೆ ರಘು ಕಾಮಿಡಿ ಬಿಟ್ಟು, ಕ್ಲಾಸ್, ಮಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ ರಕ್ಷಾ ಪಾತ್ರ ವಿಶೇಷವಾಗಿದೆ. ಇಡೀ ಕಥೆ ಒಬ್ಬ ಹುಡುಗಿ ಮೇಲೆ ನಿಂತಿರುತ್ತೆ. ಸಕಲೇಶಪುರ, ಹೊನ್ನಾವರ, ಮೂಡಬಿದ್ರೆ, ಕಾರ್ಕಳ ಸುತ್ತಮುತ್ತ ಶೂಟಿಂಗ್ ನಡೆಸಿದ್ದೇವೆ. ಚಿತ್ರದಲ್ಲಿ 3 ಹಾಡು, 3 ಸಾಹಸ ದೃಶ್ಯಗಳಿವೆ. ವಿಶಾಲ್ ಆಲಾಪ್ ಮ್ಯೂಸಿಕ್, ದೀಪಕ್ ಕುಮಾರ್ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಚಿತ್ರವೀಗ ರಿರೆಕಾರ್ಡಿಂಗ್ ಹಂತದಲ್ಲಿದ್ದು, ಫೆಬ್ರವರಿಗೆ ರಿಲೀಸ್ ಮಾಡೋ ಪ್ಲಾನಿದೆ. ಸದ್ಯದಲ್ಲೇ ಆಡಿಯೋ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

    ನಿರ್ಮಾಪಕ ರಾಮು ಮಾತನಾಡುತ್ತ ನಿರ್ದೇಶಕರು ಕಥೆ ಹೇಳಿದ ಶೈಲಿ, ಕಾನ್ಸೆಪ್ಟ್ ನನಗೆ ತುಂಬಾ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ನನಗೆ ತಂದೆ ಸ್ಥಾನದಲ್ಲಿ ನಿಂತು ಹನುಮಂತರಾಯಪ್ಪ ಅವರು ಸಪೋರ್ಟ್ ಮಾಡಿದರು. ತುಂಬಾ ಪ್ರೀತಿಯಿಂದ ಈ ಸಿನಿಮಾ ಮಾಡಿದ್ದೇವೆ. ಜನತೆ ನಮ್ಮನ್ನು ಗೆಲ್ಲಿಸಿದರೆ ಮತ್ತಷ್ಟು ಹೊಸತನದ ಸಿನಿಮಾಗಳನ್ನು ಮಾಡಲು ಸಹಾಯವಾಗುತ್ತದೆ ಎಂದರು. ನಾಯಕ ಸೀರುಂಡೆ ರಘು ಮಾತನಾಡುತ್ತ ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸೈಡ್ ರೋಲ್ ಮಾಡಿದ್ದೆ. ಮೊದಲಬಾರಿಗೆ ಲೀಡ್ ರೋಲ್ ಮಾಡ್ತಿರುವೆ. 4 ಜನ ಸ್ನೇಹಿತರ ಜೊತೆ ಸಾಗುವ ಪಾತ್ರ ಎಂದರು.

     

    ನಾಯಕಿ ರಕ್ಷಾ ಮಾತನಾಡಿ ನನ್ನದು ಮುಗ್ಧ ಹಳ್ಳಿ ಹುಡುಗಿಯ ಪಾತ್ರೆ ಎಂದರೆ, ಮತ್ತೊಬ್ಬ ನಟಿ ರೋಹಿ ಮಾತನಾಡಿ ಮೊದಲಬಾರಿಗೆ  ಕ್ಯಾಮೆರಾ ಎದುರಿಸಿರುವುದಾಗಿ ಹೇಳಿದರು. ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್ ಮಾತನಾಡಿ ನಿರ್ದೇಶಕರು ಚಿತ್ರಕ್ಕೆ ತುಂಬಾ ಎಫರ್ಟ್ ಹಾಕಿರುವುದು ತೆರೆಮೇಲೆ ಕಾಣಿಸುತ್ತೆ. ಕಲಾವಿದರೂ ಅದಕ್ಕೆ ತಕ್ಕಂತೆ ಅಭಿನಯಿಸಿದ್ದಾರೆ ಎಂದರು. ಛಾಯಾಗ್ರಾಹಕ ದೀಪಕ್, ಉಮೇಶ್ ಬಣಕಾರ್, ಹನುಮಂತರಾಯಪ್ಪ, ವೆಂಕಟೇಶ್ ಚಿತ್ರದ ಕುರಿತಂತೆ ಮಾತನಾಡಿದರು.