Tag: ರನಿಲ್ ವಿಕ್ರಮಸಿಂಘೆ

  • ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಬಂಧನ

    ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಬಂಧನ

    ಕೊಲಂಬೊ: ಸರ್ಕಾರಿ ನಿಧಿ ದುರುಪಯೋಗದ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ಅವರನ್ನು ಬಂಧಿಸಲಾಗಿದೆ.

    ಅಧ್ಯಕ್ಷರಾಗಿದ್ದಾಗ ಖಾಸಗಿ ವಿದೇಶ ಪ್ರವಾಸಕ್ಕಾಗಿ ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಕ್ರಮಸಿಂಘೆ ಅವರನ್ನು ಶುಕ್ರವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿದೆ. ಇದನ್ನೂ ಓದಿ: ಪುಟಿನ್‌-ಝೆಲೆನ್ಸ್ಕಿ ಮೊದಲು ನೇರ ಮಾತುಕತೆ ನಡೆಸಬೇಕು – ಬ್ರೋಕರ್‌ ಕೆಲಸದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧಾರ

    2023 ರ ಸೆಪ್ಟೆಂಬರ್‌ನಲ್ಲಿ ಬ್ರಿಟಿಷ್ ವಿಶ್ವವಿದ್ಯಾಲಯವೊಂದರಲ್ಲಿ ನಡೆದ ತಮ್ಮ ಪತ್ನಿ ಪ್ರೊಫೆಸರ್ ಮೈತ್ರೀ ವಿಕ್ರಮಸಿಂಘೆ ಅವರ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು, ಇಂಗ್ಲೆಂಡ್‌ಗೆ ಪ್ರಯಾಣಿಸಲು ಸಾರ್ವಜನಿಕ ಹಣವನ್ನು ಬಳಸಿದ್ದಾರೆ ಎಂದು ವಿಕ್ರಮಸಿಂಘೆ ಅವರ ಮೇಲೆ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಾವು ಅವರನ್ನು ಕೊಲಂಬೊ ಫೋರ್ಟ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುತ್ತಿದ್ದೇವೆ ಎಂದು ಅಧಿಕಾರಿ ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ವೈಯಕ್ತಿಕ ಉದ್ದೇಶಗಳಿಗಾಗಿ ರಾಜ್ಯದ ಸಂಪನ್ಮೂಲಗಳನ್ನು ಬಳಸಿದ್ದಕ್ಕಾಗಿ ಅವರ ಮೇಲೆ ಆರೋಪ ಹೊರಿಸಲಾಗಿದೆ.

    ಪೊಲೀಸರು ಈ ಹಿಂದೆ ಅವರ ಸಿಬ್ಬಂದಿಯನ್ನು ಪ್ರಯಾಣ ವೆಚ್ಚದ ಬಗ್ಗೆ ಪ್ರಶ್ನಿಸಿದ್ದರು. 2023 ರಲ್ಲಿ ಹವಾನಾದಲ್ಲಿ ನಡೆದ G77 ಶೃಂಗಸಭೆಯಲ್ಲಿ ಭಾಗವಹಿಸಿದ್ದ ವಿಕ್ರಮಸಿಂಘೆ ಅವರು ಲಂಡನ್‌ಗೆ ಹಿಂತಿರುಗುವಾಗ ಅಲ್ಲಿ ತಂಗಿದ್ದರು. ಯುಕೆ ರಾಜಧಾನಿಯಲ್ಲಿ ಅವರು ಮತ್ತು ಅವರ ಪತ್ನಿ ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

    ವಿಕ್ರಮಸಿಂಘೆ ಅವರು ತಮ್ಮ ಪತ್ನಿಯ ಪ್ರಯಾಣ ವೆಚ್ಚವನ್ನು ಅವರೇ ಭರಿಸುತ್ತಿದ್ದರು. ಯಾವುದೇ ರಾಜ್ಯ ನಿಧಿಯನ್ನು ಬಳಸಲಾಗಿಲ್ಲ ಎಂದು ವಾದಿಸಿದ್ದರು. ಆದಾಗ್ಯೂ, ವಿಕ್ರಮಸಿಂಘೆ ಅವರು ಖಾಸಗಿ ಭೇಟಿಗಾಗಿ ಸರ್ಕಾರಿ ಹಣವನ್ನು ಬಳಸಿಕೊಂಡಿದ್ದಾರೆ. ಅವರ ಅಂಗರಕ್ಷಕರಿಗೂ ರಾಜ್ಯದಿಂದ ವೇತನ ನೀಡಲಾಗಿದೆ ಎಂದು ಸಿಐಡಿ ಆರೋಪಿಸಿದೆ.

  • ಪ್ರತಿಭಟನಾ ಶಿಬಿರ ಧ್ವಂಸಗೊಳಿಸಿದ ಶ್ರೀಲಂಕಾ ಭದ್ರತಾ ಪಡೆ

    ಪ್ರತಿಭಟನಾ ಶಿಬಿರ ಧ್ವಂಸಗೊಳಿಸಿದ ಶ್ರೀಲಂಕಾ ಭದ್ರತಾ ಪಡೆ

    ಕೊಲಂಬೊ: ಶ್ರೀಲಂಕಾದ ಭದ್ರತಾ ಪಡೆಗಳು ಶುಕ್ರವಾರ ರಾಜಧಾನಿಯಲ್ಲಿನ ಪ್ರಮುಖ ಸರ್ಕಾರಿ ವಿರೋಧಿ ಪ್ರತಿಭಟನಾ ಶಿಬಿರವನ್ನು ಧ್ವಂಸಗೊಳಿಸಿದೆ.

    sri lanka

    ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾ ಸ್ಥಿತಿ ಗಂಭೀರವಾಗಿದ್ದು, ಸರ್ಕಾರದ ವಿರುದ್ಧವೇ ಜನರು ಆಕ್ರೋಶಗೊಂಡು ಹಿಂಸಾಚಾರದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆಗಳು ಮತ್ತು ಪೊಲೀಸ್ ವಿಶೇಷ ಕಾರ್ಯಪಡೆಯ ಕಮಾಂಡೋಗಳು ಜನರ ಮೇಲೆ ಲಾಠಿ ಪ್ರಯೋಗಿಸಿ ಸ್ಥಿತಿಯನ್ನು ಶಾಂತಿಗೆ ತರಲು ಪ್ರಯತ್ನ ಮಾಡಿದ್ದಾರೆ. ಅದಕ್ಕೆ ಸರ್ಕಾರದ ವಿರೋಧಿ ಪ್ರತಿಭಟನಾ ಶಿಬಿರವನ್ನು ಭದ್ರತಾ ಪಡೆ ಧ್ವಂಸ ಮಾಡಿದೆ. ಇದನ್ನೂ ಓದಿ: ನಲಪಾಡ್ ಮಾಡಿರೋ ಕೃತ್ಯಕ್ಕೂ ನಮಗೂ ಸಂಬಂಧವಿಲ್ಲ: ಅಶೋಕ್ ಪಟ್ಟಣ

    ಕೊಲಂಬೊದಲ್ಲಿನ ಸಮುದ್ರ ಮುಂಭಾಗದ ಅಧ್ಯಕ್ಷೀಯ ಸಚಿವಾಲಯವನ್ನು ಮುತ್ತಿಗೆ ಹಾಕುವ ಜನರ ಮೇಲೆ ಸ್ವಯಂಚಾಲಿತ ಆಕ್ರಮಣಕಾರಿ ರೈಫಲ್‍ಗಳಿಂದ ದಾಳಿ ಮಾಡಲು ಸಿಬ್ಬಂದಿ ಸಜ್ಜಾಗಿದ್ದರು. ವಸಾಹತುಶಾಹಿ ಕಟ್ಟಡದ ಹೊರಗೆ ನೂರಾರು ಸೈನಿಕರು ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಗೇಡ್‍ಗಳು ಮತ್ತು ಡೇರೆಗಳನ್ನು ಹಾಕಲಾಗಿತ್ತು. ಆದರೂ ಸಹ ಪ್ರತಿಭಟನಾಕಾರರು ಅದನ್ನು ಮೀರಿ ಆವರಣದ ಮೆಟ್ಟಿಲುಗಳ ಮೇಲೆ ಬಂದರು. ಪರಿಣಾಮ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಗಿತ್ತು.

    ಹೊಸ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಹಳೆಯ ಸ್ನೇಹಿತನನ್ನು ಪ್ರಧಾನಿಯಾಗಿ ಮತ್ತು ಉಚ್ಚಾಟಿತ ರಾಷ್ಟ್ರದ ಮುಖ್ಯಸ್ಥರ ವಕೀಲರನ್ನು ವಿದೇಶಾಂಗ ಸಚಿವರನ್ನಾಗಿ ನೇಮಿಸುವ ಕೆಲವೇ ಗಂಟೆಗಳ ಮೊದಲು ಈ ಘಟನೆ ನಡೆದಿದೆ. ಇದನ್ನೂ ಓದಿ:  2 ವರ್ಷಗಳ ನಂತರ ಸೋಫಾದಲ್ಲಿ ಪತ್ತೆಯಾದ ಮಹಿಳೆ ಅಸ್ಥಿಪಂಜರ 

    ಸಿಂಗಾಪುರದಿಂದ ಪಲಾಯನ ಮಾಡಿದ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಸ್ಥಾನಕ್ಕೆ ಬುಧವಾರ ವಿಕ್ರಮಸಿಂಘೆ ಅವರನ್ನು ಆಯ್ಕೆ ಮಾಡಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರ

    ಶ್ರೀಲಂಕಾ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರ

    ಕೊಲಂಬೋ: ರನಿಲ್ ವಿಕ್ರಮಸಿಂಘೆ ಗುರುವಾರ ಶ್ರೀಲಂಕಾದ 9ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

    ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಬುಧವಾರ ಅಧ್ಯಕ್ಷೀಯ ಚುನಾವಣೆಯಲ್ಲಿ 134 ಮತಗಳನ್ನು ಪಡೆಯುವ ಮೂಲಕ ಬಹುಮತದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ರನಿಲ್ ವಿಕ್ರಮ ಸಿಂಘೆ ವಿರುದ್ಧ ಭಾರೀ ಪ್ರತಿಭಟನೆ ನಡೆಯುತ್ತಿದ್ದರೂ ಇದರ ನಡುವೆಯೇ ಅವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಪ್ರಧಾನಿಯಾಗಿದ್ದಾಗ ಪ್ರತಿಭಟನಾಕಾರರು ಅವರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿ, ಬೆಂಕಿ ಹಚ್ಚಿ, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಇದನ್ನೂ ಓದಿ: ಬ್ಯಾಂಕ್ ಮುಂದೆ ಪ್ರತಿಭಟನೆ – ಜನರನ್ನು ಚದುರಿಸಲು ಯುದ್ಧ ಟ್ಯಾಂಕರ್ ನಿಲ್ಲಿಸಿದ ಚೀನಾ

     

    ಬುಧವಾರ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಬಳಿಕ ವಿಕ್ರಮಸಿಂಘೆ, ಸಂಸತ್ತಿನ ಸಂಕೀರ್ಣದ ಒಳಗಡೆ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಬೇಕೆಂದು ಸ್ಪೀಕರ್ ಅವರಿಗೆ ಮನವಿಯಿಟ್ಟರು. ಶ್ರೀಲಂಕಾವನ್ನು ಈ ಭೀಕರ ಬಿಕ್ಕಟ್ಟಿನಿಂದ ಪಾರು ಮಾಡಲು ಎಲ್ಲಾ ಪಕ್ಷಗಳೊಂದಿಗೆ ಕೆಲಸ ಮಾಡುವುದಾಗಿ ಪ್ರತಿಪಕ್ಷಗಳಿಗೆ ಭರವಸೆ ನೀಡಿದರು. ಇದನ್ನೂ ಓದಿ: ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾ ಅಧ್ಯಕ್ಷರಾಗಿ ರನಿಲ್‌ ವಿಕ್ರಮಸಿಂಘೆ ಆಯ್ಕೆ

    ಶ್ರೀಲಂಕಾ ಅಧ್ಯಕ್ಷರಾಗಿ ರನಿಲ್‌ ವಿಕ್ರಮಸಿಂಘೆ ಆಯ್ಕೆ

    ಕೊಲಂಬೊ: ಆರ್ಥಿಕ ಬಿಕ್ಕಟ್ಟಿನ ನಡುವೆ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಗೆ ನಡೆದ ಮತದಾನದಲ್ಲಿ ರನಿಲ್‌ ವಿಕ್ರಮಸಿಂಘೆ ಬಹುಮತದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ಅಧ್ಯಕ್ಷ ಸ್ಥಾನಕ್ಕೆ ಗೊಟಬಯಾ ರಜಪಕ್ಸೆ ಅವರು ರಾಜೀನಾಮೆ ನೀಡಿದ ನಂತರ ಹಂಗಾಮಿ ಅಧ್ಯಕ್ಷರಾಗಿ ರನಿಲ್‌ ವಿಕ್ರಮಸಿಂಘೆ ನೇಮಕಗೊಂಡಿದ್ದರು. ನಂತರ ನಡೆದ ಚುನಾವಣೆಯಲ್ಲಿ ಶ್ರೀಲಂಕಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ಬೆಂಗಳೂರು ಮಹಿಳೆ ಅಮೆರಿಕದಿಂದ ಏರ್‌ಲಿಫ್ಟ್‌ – 26 ಗಂಟೆ ಪ್ರಯಾಣಕ್ಕೆ 1 ಕೋಟಿ ವೆಚ್ಚ

    ಆರು ಬಾರಿ ಪ್ರಧಾನಿಯಾಗಿರುವ ವಿಕ್ರಮಸಿಂಘೆ ಅವರು 225 ಸದಸ್ಯರ ಸಂಸತ್ತಿನಲ್ಲಿ ಅತಿದೊಡ್ಡ ಬಣವಾದ ರಾಜಪಕ್ಸೆಗಳ ಎಸ್‌ಎಲ್‌ಪಿಪಿಯಿಂದ ಬೆಂಬಲಿತರಾಗಿರುವುದರಿಂದ ಅವರನ್ನು ಮುಂಚೂಣಿಯಲ್ಲಿ ಪರಿಗಣಿಸಲಾಗಿದೆ.

    ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಅವರು, ದೇಶವು ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿದೆ. ನಮ್ಮ ಮುಂದೆ ದೊಡ್ಡ ಸವಾಲುಗಳಿವೆ ಎಂದು ಹೇಳಿದರು. ಇದನ್ನೂ ಓದಿ: ಕೊಲೊಂಬೊದಲ್ಲಿ ನಡೆದ ದಾಳಿಯಲ್ಲಿ ಭಾರತೀಯ ಅಧಿಕಾರಿಗೆ ಗಂಭೀರ ಗಾಯ

    Live Tv
    [brid partner=56869869 player=32851 video=960834 autoplay=true]

  • ಕೊಲೊಂಬೊದಲ್ಲಿ ನಡೆದ ದಾಳಿಯಲ್ಲಿ ಭಾರತೀಯ ಅಧಿಕಾರಿಗೆ ಗಂಭೀರ ಗಾಯ

    ಕೊಲೊಂಬೊದಲ್ಲಿ ನಡೆದ ದಾಳಿಯಲ್ಲಿ ಭಾರತೀಯ ಅಧಿಕಾರಿಗೆ ಗಂಭೀರ ಗಾಯ

    ಕೊಲೊಂಬೊ: ಲಂಕಾ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು, ಈ ಸಂದರ್ಭದಲ್ಲಿ ಶ್ರೀಲಂಕಾಕ್ಕೆ ನಿಯೋಜನೆಗೊಂಡಿರುವ ಭಾರತೀಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಗಂಭೀರ ಗಾಯವಾದ ಘಟನೆ ನಡೆದಿದೆ.

    ಭಾರತೀಯ ವೀಸಾ ಕೇಂದ್ರದ ನಿರ್ದೇಶಕ ವಿವೇಕ್ ವರ್ಮಾ ಗಾಯಗೊಂಡವರು. ಈ ಬಗ್ಗೆ ಕೊಲೊಂಬೊದಲ್ಲಿರುವ ಭಾರತೀಯ ಹೈಕಮಿಷನ್ ಮಾಹಿತಿ ನೀಡಿದೆ. ಘಟನೆ ಸಂಬಂಧಿಸಿ ಹೈಕಮಿಷನ್‍ನ ಹಿರಿಯ ಅಧಿಕಾರಿಗಳು ಭಾರತೀಯ ಪ್ರಜೆ ಮತ್ತು ಭಾರತೀಯ ವೀಸಾ ಕೇಂದ್ರದ ನಿರ್ದೇಶಕ ವಿವೇಕ್ ವರ್ಮಾ ಅವರನ್ನು ಭೇಟಿಯಾದರು. ಅವರು ಕೊಲಂಬೊ ಬಳಿ ನಡೆದ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

    ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಶಾಂತಿ ಮೂಡಿದೆ. ಈ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿರುವ ಭಾರತೀಯ ಪ್ರಜೆಗಳು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಜಾಗೃತರಾಗಿರಬೇಕು. ಅದಕ್ಕೆ ಅನುಗುಣವಾಗಿ ತಮ್ಮ ಚಲನವಲನ ಮತ್ತು ಚಟುವಟಿಕೆಗಳನ್ನು ಯೋಜಿಸಲು ವಿನಂತಿಸಲಾಗಿದೆ. ಅಗತ್ಯವಿದ್ದಾಗ ನೀವು ನಮ್ಮನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಗೊಟಬಯ ರಾಜಪಕ್ಸೆಗೆ ಶಾಕ್ ಕೊಟ್ಟ ಸಿಂಗಾಪುರ – ದೇಶ ಬಿಟ್ಟು ಹೊರಡಿ ಎಂದು ಖಡಕ್ ಸೂಚನೆ

    ಇಂದು ನಡೆಯಲಿರುವ ಪ್ರಮುಖ ಚುನಾವಣೆಗೆ ಮುನ್ನ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ತುರ್ತು ಪರಿಸ್ಥಿತಿ ಹೇರಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ಭಾರತ ಮತ್ತು ಶ್ರೀಲಂಕಾದ ಜನರ ನಡುವಿನ ಸಂಬಂಧವು ಯಾವಾಗಲೂ ಸೌಹಾರ್ದಯುತ ಮತ್ತು ಸ್ನೇಹಪರವಾಗಿದೆ ಎಂದು ಭಾರತೀಯ ಹೈಕಮಿಷನ್ ಟ್ವೀಟ್‍ನಲ್ಲಿ ತಿಳಿಸಿದೆ. ಇದನ್ನೂ ಓದಿ: ಮೊದಲು ಎಲೆಕ್ಷನ್ ಆಗಲಿ, ಆ ಮೇಲೆ ಪೈಪೋಟಿ ಮಾಡಲಿ: ಲಕ್ಷ್ಮಿ ಹೆಬ್ಬಾಳ್ಕರ್

    Live Tv
    [brid partner=56869869 player=32851 video=960834 autoplay=true]

  • ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೊಟಬಯ ರಾಜಪಕ್ಸೆ

    ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೊಟಬಯ ರಾಜಪಕ್ಸೆ

    ಕೊಲಂಬೊ: ಪ್ರತಿಭಟನಾಕಾರರು ಹೆಚ್ಚುತ್ತಿರುವ ಒತ್ತಡದ ನಡುವೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದರು.

    ಈ ಹಿಂದೆ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಮಾಧ್ಯಮದವರೊಂದಿಗೆ ಮಾತನಾಡಿ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಅವರು ಜುಲೈ 13 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಘೋಷಿಸಿದ್ದರು. ಆದರೆ ಶನಿವಾರದಂದು ಅಧ್ಯಕ್ಷರ ಭವನಕ್ಕೆ ಸಾವಿರಾರು ಜನರು ನುಗ್ಗಿ ದಾಂಧಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದೇ ರಾಜೀನಾಮೆ ನೀಡಿದ್ದಾರೆ.

    ಈ ಹಿಂದೆ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಕೂಡ ತಮ್ಮ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು. ಆದರೆ ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದಿರುವ ಶ್ರೀಲಂಕಾ ಜನ ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಷ್ಟ್ರಪತಿ ಹಾಗೂ ಪ್ರಧಾನಿ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಅವರ ನಿವಾಸಗಳನ್ನು ಒತ್ತುವರಿ ಮಾಡಿಕೊಂಡಿಕೊಳ್ಳುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.

    ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಅಧಿಕೃತ ನಿವಾಸ ಟೆಂಪಲ್ ಟ್ರೀ ಅನ್ನು ಆಕ್ರಮಿಸಿಕೊಂಡಿರುವ ಪ್ರತಿಭಟನಾಕಾರರು ಅಲ್ಲಿಯೇ ಮೊಕ್ಕಾಂ ಹೂಡಿ, ಅವರ ಮನೆಯ ಆವರಣದಲ್ಲಿಯೇ ಅಡುಗೆ ಮಾಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್‌ ವಿಕ್ರಮಸಿಂಘೆ ರಾಜೀನಾಮೆ

    ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಪ್ರತಿಭಟನಾಕಾರನೋರ್ವ, ನಾವು ಪ್ರಧಾನಿ ಮನೆಯೊಳಗಿದ್ದೇವೆ. ಪ್ರತಿಭಟನಾಕಾರರಾದ ನಾವೆಲ್ಲರೂ ಒಟ್ಟಿಗೆ ಸೇರಿ ಅಡುಗೆ ಮಾಡುತ್ತಿದ್ದೇವೆ. ನಾವು ಪಿಎಂ ವಿಕ್ರಮಸಿಂಘೆ ಮತ್ತು ಅಧ್ಯಕ್ಷ ರಾಜಪಕ್ಸೆ ಅವರ ರಾಜೀನಾಮೆಗಾಗಿ ಹೋರಾಟ ನಡೆಸುತ್ತಿದ್ದೇವೆ. ಅವರು ರಾಜೀನಾಮೆ ನೀಡಿದಾಗ ನಂತರ ಈ ಮನೆಯನ್ನು ತೊರೆಯುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲೇ ಅಡುಗೆ ಮಾಡಿ ತಿಂದ ಪ್ರತಿಭಟನಾಕಾರರು

    ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಟೆಂಪಲ್ ಟ್ರೀ ನಿವಾಸದಲ್ಲಿ ಪ್ರತಿಭಟನಾಕಾರರು ಕೇರಂ ಆಟ ಆಡುವುದು, ಆರಾಮವಾಗಿ ಮಲಗಿರುವುದು ಮತ್ತು ಡುವುದು, ಅಡುಗೆ ಮಾಡುವುದು ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾ ಪ್ರಧಾನಿ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು

    ಶ್ರೀಲಂಕಾ ಪ್ರಧಾನಿ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು

    ಕೊಲಂಬೊ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿದ್ದಾರೆ.

    ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟು ದಿನೇ ದಿನೇ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರು ತಮ್ಮ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಸಾವಿರಾರು ಪ್ರತಿಭಟನಾಕಾರರು ರಾಜಪಕ್ಸೆಯವರ ನಿವಾಸಕ್ಕೆ ಮುತ್ತಿಗೆ ಹಾಕಿ ಸ್ವಿಮ್ಮಿಂಗ್ ಪೂಲ್‍ನಲ್ಲಿ ಈಜಿದ್ದರು. ಇದನ್ನೂ ಓದಿ: ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್‌ ವಿಕ್ರಮಸಿಂಘೆ ರಾಜೀನಾಮೆ

    ಇದೀಗ ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ. ಈಗಾಗಲೇ ರನಿಲ್ ವಿಕ್ರಮಸಿಂಘೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಗಾಗಿ ಪಕ್ಷದ ನಾಯಕರ ಶಿಫಾರಸನ್ನು ಸ್ವೀಕರಿಸಿ, ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ. ಇದಕ್ಕೆ ಅನುಕೂಲವಾಗುವಂತೆ ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದರು. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್‌ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್‌ ವಿಕ್ರಮಸಿಂಘೆ ರಾಜೀನಾಮೆ

    ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್‌ ವಿಕ್ರಮಸಿಂಘೆ ರಾಜೀನಾಮೆ

    ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾದಲ್ಲಿ ಜನತೆ ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದ್ದು, ದೇಶದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ದ್ವೀಪ ರಾಷ್ಟ್ರ ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಅಧ್ಯಕ್ಷರ ಭವನಕ್ಕೆ ನುಗ್ಗಿ ಜನರು ದಾಂಧಲೆ ನಡೆಸಿದರು. ಇದರ ಬೆನ್ನಲ್ಲೇ ರನಿಲ್‌ ವಿಕ್ರಮಸಿಂಘೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದಲ್ಲಿ ಅರಾಜಕತೆ ವಾತಾವರಣ ಸೃಷ್ಟಿಯಾಗಿದೆ. ದೇಶದ ಜನತೆ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದೆ. ಪರಿಣಾಮವಾಗಿ ಮಹಿಂದಾ ರಾಜಪಕ್ಸೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ ರನಿಲ್‌ ವಿಕ್ರಮಸಿಂಘೆ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆರ್ಥಿಕ ದುಸ್ಥಿತಿಯಿಂದ ಕಂಗೆಟ್ಟಿರುವ ದೇಶಕ್ಕೆ ಅನೇಕ ಕಡೆಯಿಂದ ಸಾಲ ಹಾಗೂ ಇನ್ನಿತರ ಸೌಲಭ್ಯಕ್ಕಾಗಿ ರನಿಲ್‌ ಪ್ರಯತ್ನಿಸಿದರು. ಆದರೆ ಆಡಳಿತದಲ್ಲಿ ಸುಧಾರಣೆ ತರುವುದು ಕಷ್ಟ ಎಂಬುದನ್ನು ಅರಿತು ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್‌ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ

    ರಾಜಪಕ್ಸೆ ಮನೆತನದ ಆಡಳಿತದ ವಿರುದ್ಧ ಶ್ರೀಲಂಕಾದಲ್ಲಿ ಜನಾಕ್ರೋಶ ವ್ಯಕ್ತವಾಗಿದೆ. ಪರಿಣಾಮವಾಗಿ ಇಂದು ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ನಿವಾಸಕ್ಕೆ ನುಗ್ಗಿ ಜನ ದಾಂಧಲೆ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ನಿವಾಸಕ್ಕೆ ಲಗ್ಗೆಯಿಟ್ಟ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಈಜಾಡಿದರು. ಅಧ್ಯಕ್ಷರ ನಿವಾಸದ ಸೋಫಾ, ಬೆಡ್‌ ಮೇಲೆ ಬಿದ್ದು ಹೊರಳಾಡಿದರು. ಅಡುಗೆ ಮನೆಗೆ ನುಗ್ಗಿ ದಾಂಧಲೆ ಸೃಷ್ಟಿಸಿದರು.

    ಪ್ರತಿಭಟನಾಕಾರರ ಆಕ್ರೋಶದಿಂದ ಹೆದರಿದ ಗೊಟಬಯ ಅವರು ಪರಾರಿಯಾದರು. ಈ ಎಲ್ಲಾ ಘಟನೆಗಳು ನಡೆದ ನಂತರ ರನಿಲ್‌ ವಿಕ್ರಮಸಿಂಘೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯಾವುದೇ ದೇಶ ನಮಗೆ ಹಣ ನೀಡುತ್ತಿಲ್ಲ, ಆದರೆ ಭಾರತ ನೀಡುತ್ತಿದೆ: ಲಂಕಾ ಪ್ರಧಾನಿ

    ಯಾವುದೇ ದೇಶ ನಮಗೆ ಹಣ ನೀಡುತ್ತಿಲ್ಲ, ಆದರೆ ಭಾರತ ನೀಡುತ್ತಿದೆ: ಲಂಕಾ ಪ್ರಧಾನಿ

    ಕೊಲಂಬೊ: ಯಾವುದೇ ದೇಶ ನಮಗೆ ಇಂಧನ ಹಾಗೂ ಕಲ್ಲಿದ್ದಲು ಕೊಳ್ಳಲು ಹಣ ನೀಡುತ್ತಿಲ್ಲ. ಆದರೆ ಭಾರತ ನೀಡುತ್ತಿದೆ ಎಂದು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಕೃತಜ್ಞತೆ ಸಲ್ಲಿಸಿದ್ದಾರೆ.

    ತೀವ್ರಗತಿಯ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಗೆ ಭಾರತವನ್ನು ಹೊರತುಪಡಿಸಿ ಯಾವುದೇ ದೇಶಗಳು ಹಣ ನೀಡುತ್ತಿಲ್ಲ. ಭಾರತ ನಮಗೆ ತ್ವರಿತವಾಗಿ ಸಹಾಯ ಮಾಡಲು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಮ್‌ಎಫ್)ಗೆ ಒತ್ತಾಯಿಸುತ್ತಿದೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆಯ ಸಹೋದರ ಸಂಸತ್ ಸ್ಥಾನಕ್ಕೆ ರಾಜೀನಾಮೆ

    1948ರಲ್ಲಿ ದ್ವೀಪರಾಷ್ಟ್ರ ಬ್ರಿಟನ್‌ನಿಂದ ಸ್ವಾತಂತ್ರ್ಯ ಪಡೆದ ಬಳಿಕ ಇದೇ ಮೊದಲ ಬಾರಿಗೆ ಅತ್ಯಂತ ಕೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದೀಗ ಶ್ರೀಲಂಕಾ ವಾಷಿಂಗ್ಟನ್ ಮೂಲದ ಸಂಸ್ಥೆಯೊಂದಿಗೆ ಸಾಲವನ್ನು ಕೇಳಲು ಐಎಮ್‌ಎಫ್ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿದೆ. ಇದನ್ನೂ ಓದಿ: ಭಾರತದಲ್ಲಿ ಮತ್ತೆ ಕೊರೊನಾ ಸ್ಫೋಟ- ದೈನಂದಿನ ಪ್ರಕರಣಗಳಲ್ಲಿ 39% ಜಿಗಿತ

    ತೀವ್ರ ಆರ್ಥಿಕ ಬಿಕ್ಕಟ್ಟಿನ ಸಂದರ್ಭ ಭಾರತ ಶ್ರೀಲಂಕಾಗೆ ಸಾವಿರಾರು ಟನ್‌ಗಳಷ್ಟು ಡೀಸೆಲ್ ಹಾಗೂ ಪೆಟ್ರೋಲ್ ಅನ್ನು ನೀಡಿ, ಇಂಧನ ಕೊರತೆಯನ್ನು ನಿವಾರಿಸಲು ಸಹಾಯ ಮಾಡಿದೆ. ಭಾರತದಿಂದ ಇನ್ನೂ ಹೆಚ್ಚಿನ ಸಹಾಯವನ್ನು ಕೇಳಲು ನಮ್ಮಿಂದ ಸಾಧ್ಯವಿಲ್ಲ. ಭಾರತ ನಮಗೆ ಸಹಾಯ ಮಾಡುವುದಕ್ಕೂ ಮೊದಲು ನಾವು ಅವರಿಗೆ ಏನು ಸಹಾಯ ಮಾಡಿದ್ದೇವೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ವಿಕ್ರಮಸಿಂಘೆ ಕಷ್ಟದ ಪರಿಸ್ಥಿತಿಯಲ್ಲಿ ಭಾರತದ ಸಹಾಯಕ್ಕೆ ಪ್ರತಿಕ್ರಿಯಿಸಿದ್ದಾರೆ.

  • ಭಾರತದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲು ಬಯಸುತ್ತೇವೆ : ವಿಕ್ರಮಸಿಂಘೆ

    ಭಾರತದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲು ಬಯಸುತ್ತೇವೆ : ವಿಕ್ರಮಸಿಂಘೆ

    ಕೊಲಂಬೊ: ಶ್ರೀಲಂಕಾದ ನೂತನ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ತಮ್ಮ ಅವಧಿಯಲ್ಲಿ ಭಾರತದೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಜೊತೆಗೆ ದೇಶವು ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ದೇಶಕ್ಕೆ ಆರ್ಥಿಕ ನೆರವು ನೀಡಿದ ಭಾರತಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

    ಗುರುವಾರ ಶ್ರೀಲಂಕಾದ 26ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸಾಲದ ಸುಳಿಯಲ್ಲಿ ಸಿಲುಕಿರುವ ದೇಶದ ಆರ್ಥಿಕತೆಯನ್ನು ಸ್ಥಿರಗೊಳಿಸಲು ಮತ್ತು ರಾಜಕೀಯ ಪ್ರಕ್ಷುಬ್ಧತೆಗೆ ಅಂತ್ಯ ಹಾಡುವು ಭಾಗವಾಗಿ ಶ್ರೀಲಂಕಾದಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

    ಪ್ರಮಾಣ ವಚನ ಸ್ವೀಕರಿಸಿದ ನಂತರ ನಿನ್ನೆ ರಾತ್ರಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ನಮಗೆ ಭಾರತದೊಂದಿಗೆ ಉತ್ತಮ ಬಾಂಧವ್ಯದ ಅಗತ್ಯವಿದೆ. ನಾನು ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಆರ್ಥಿಕ ಬಿಕ್ಕಟ್ಟನ್ನು ನಿವಾರಿಸುವುದರ ಕಡೆಗಷ್ಟೇ ನಮ್ಮ ಗಮನ. ಜನರಿಗೆ ಪೆಟ್ರೋಲ್, ಡೀಸೆಲ್ ಮತ್ತು ವಿದ್ಯುತ್ ಪೂರೈಕೆಯನ್ನು ಖಾತ್ರಿಪಡಿಸಲು ಬಯಸುತ್ತೇನೆ ಎಂದು ಹೇಳಿದರು.  ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

    ಭಾರತವು ಈ ವರ್ಷದ ಜನವರಿಯಿಂದ ಶ್ರೀಲಂಕಾಕ್ಕೆ ಸಾಲಗಳು, ಕ್ರೆಡಿಟ್ ಲೈನ್‍ಗಳು ಮತ್ತು ಕ್ರೆಡಿಟ್ ಸ್ವಾಪ್‍ಗಳಂತಹ ಹಲವು ರೂಪಗಳಲ್ಲಿ 3 ಶತಕೋಟಿಗಿಂತ ಹೆಚ್ಚು ನೆರವು ನೀಡಿದೆ. ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ಅನುಗುಣವಾಗಿ ರಚನೆಯಾದ ಶ್ರೀಲಂಕಾದ ಹೊಸ ಸರ್ಕಾರದೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಭಾರತ ಗುರುವಾರ ಹೇಳಿದೆ. ದ್ವೀಪ ರಾಷ್ಟ್ರದ ಜನರ ಬಗೆಗಿನ ಭಾರತದ ಬದ್ಧತೆ ಮುಂದುವರೆಯಲಿದೆ ಎಂದು ಹೇಳಿತ್ತು.