Tag: ರಫೇಲ್

  • ʼಪಾಕ್‌ ಸೆರೆ ಹಿಡಿದʼ ರಫೇಲ್‌ ಪೈಲಟ್‌ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!

    ʼಪಾಕ್‌ ಸೆರೆ ಹಿಡಿದʼ ರಫೇಲ್‌ ಪೈಲಟ್‌ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ (Squadron Leader Shivangi Singh) ಅವರ ಜೊತೆ ಫೋಟೋ ತೆಗೆಸಿಕೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಟಾಂಗ್‌ ಕೊಟ್ಟಿದ್ದಾರೆ.

    ಸಶಸ್ತ್ರ ಪಡೆಗಳ ಅಧ್ಯಕ್ಷೆ ಮತ್ತು ಸುಪ್ರೀಂ ಕಮಾಂಡರ್ ಆಗಿರುವ 67 ವರ್ಷದ ದ್ರೌಪದಿ ಮುರ್ಮು ಅವರು ಇಂದು ಹರ್ಯಾಣದ ಅಂಬಾಲಾ ವಾಯುನೆಲೆಗೆ ತೆರಳಿ ರಫೇಲ್‌ ಯುದ್ಧ ವಿಮಾನದಲ್ಲಿ (Rafale Fighter Jet) ಹಾರಾಟ ನಡೆಸಿದರು. ಹಾರಾಟ ನಡೆಸಿದ ಬಳಿಕ ಶಿವಾಂಗಿ ಸಿಂಗ್ ಅವರ ಜೊತೆ ದ್ರೌಪದಿ ಮುರ್ಮು ಫೋಟೋ ಕ್ಲಿಕ್ಕಿಸಿದರು.


    ಯಾರಿದು ಶಿವಾಂಗಿ ಸಿಂಗ್‌?
    ಆಪರೇಷನ್‌ ಸಿಂಧೂರದ (Operation Sindoor) ಸಮಯದಲ್ಲಿ ಪಾಕಿಸ್ತಾನ (Pakistan) ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿತ್ತು. ಅದರಲ್ಲಿ ಶಿವಾಂಗಿ ಸಿಂಗ್ ಅವರನ್ನು ನಾವು ಸೆರೆ ಹಿಡಿದಿದ್ದೇವೆ ಎಂದು ಹೇಳಿತ್ತು. ಪತನಗೊಂಡ ರಫೇಲ್‌ ಯುದ್ಧ ವಿಮಾನದಿಂದ ಹಾರಿದ್ದ ಶಿವಾಂಗಿ ಸಿಂಗ್‌ ಅವರನ್ನು ನಾವು ಸೆರೆ ಹಿಡಿದಿದ್ದೇವೆ ಎಂದು ಹೇಳಿತ್ತು. ಇದನ್ನೂ ಓದಿರಫೇಲ್‌ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

    ಭಾರತ ಇದಕ್ಕೆ ಪ್ರತಿಕ್ರಿಯಿಸಿ ನಮ್ಮ ಯಾವುದೇ ಪೈಲಟ್‌ಗಳನ್ನು ಪಾಕಿಸ್ತಾನ ಸೆರೆ ಹಿಡಿದಿಲ್ಲ. ಕಾರ್ಯಾಚರಣೆ ನಡೆಸಿ ನಮ್ಮ ಎಲ್ಲಾ ಪೈಲಟ್‌ಗಳು ಸುರಕ್ಷಿತವಾಗಿ ಮರಳಿದ್ದಾರೆ ಎಂದು ತಿಳಿಸಿತ್ತು.

    2023ರ ಏಪ್ರಿಲ್ 8ರಂದು ಅಸ್ಸಾಂನ ತೇಜ್‌ಪುರ ಏರ್‌ಬೇಸ್‌ನಲ್ಲಿ ಸುಖೋಯ್ -30 ಯುದ್ಧ ವಿಮಾನದಲ್ಲಿ ದ್ರೌಪದಿ ಮುರ್ಮು ಹಾರಾಟ ನಡೆಸಿದ್ದರು. ಇದಕ್ಕೂ ಮುನ್ನ ಭಾರತದ ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್ ಮತ್ತು ಅಬ್ದುಲ್ ಕಲಾಂ ಅವರು ಸುಖೋಯ್-30 ಫೈಟರ್ ಜೆಟ್‌ಗಳಲ್ಲಿ ಹಾರಾಟ ನಡೆಸಿದ್ದರು.

    `ಆಪರೇಷನ್ ಸಿಂಧೂರ’ದ (Operation Sindoor) ವೇಳೆ ಅಂಬಾಲಾ ಏರ್‌ಬೇಸ್‌ನಿಂದ ಟೇಕಾಫ್ ಆದ ನಮ್ಮ ಫೈಟರ್ ಜೆಟ್‌ಗಳು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿದ್ದವು.

  • ಆಪರೇಷನ್‌ ಸಿಂಧೂರದಲ್ಲಿ ಭಾರತೀಯ ಸೇನೆ ರಫೇಲ್‌ ಯುದ್ಧ ವಿಮಾನ ಕಳೆದುಕೊಂಡಿಲ್ಲ: ಡಸಾಲ್ಟ್‌ ಏವಿಯೇಷನ್‌ ಸ್ಪಷ್ಟನೆ

    ಆಪರೇಷನ್‌ ಸಿಂಧೂರದಲ್ಲಿ ಭಾರತೀಯ ಸೇನೆ ರಫೇಲ್‌ ಯುದ್ಧ ವಿಮಾನ ಕಳೆದುಕೊಂಡಿಲ್ಲ: ಡಸಾಲ್ಟ್‌ ಏವಿಯೇಷನ್‌ ಸ್ಪಷ್ಟನೆ

    ನವದೆಹಲಿ: ಆಪರೇಷನ್ ಸಿಂಧೂರದ ಸಮಯದಲ್ಲಿ ಭಾರತೀಯ ವಾಯುಸೇನೆ ರಫೇಲ್ ಯುದ್ಧ ವಿಮಾನವೊಂದು ಕಳೆದುಕೊಂಡಿದೆ ಎಂದು ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್‌ನ ಸಿಇಒ ಎರಿಕ್ ಟ್ರಾಪಿಯರ್ ಹೇಳಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಈ ವರದಿಯನ್ನು ಡಸಾಲ್ಟ್ ಏವಿಯೇಷನ್ ನಿರಾಕರಿಸಿದೆ.

    ಈ ಹಿಂದೆ ಪ್ರಕಟವಾದ ಕೆಲವು ವರದಿಗಳಲ್ಲಿ ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್‌ನ ಸಿಇಒ ಎರಿಕ್ ಟ್ರಾಪಿಯರ್ ಭಾರತೀಯ ವಾಯುಸೇನೆ ರಫೇಲ್ ಯುದ್ಧ ವಿಮಾನವೊಂದು ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ರಫೇಲ್ ವಿಮಾನದ ನಷ್ಟವು ಯಾವುದೇ ಯುದ್ಧ ಕಾರ್ಯಾಚರಣೆಯ ಸಂದರ್ಭದಲ್ಲಿ ಸಂಭವಿಸಿಲ್ಲ. ಆದರೆ, ಘಟನೆಯ ಖಚಿತ ಕಾರಣಗಳ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಬಹಿರಂಗವಾಗಿಲ್ಲ ಎಂದು ಹೇಳಿದ್ದಾರೆ ಎಂದು ವರದಿಯಾಗಿತ್ತು.

    ಆದರೆ ಈ ಬಗ್ಗೆ ಡಸಾಲ್ಟ್ ಏವಿಯೇಷನ್ ಮಾಧ್ಯಮ ಪ್ರಕಟಣೆ ಹೊರಡಿಸುವ ಮೂಲಕ ಸ್ಪಷ್ಟನೆ ನೀಡಿದೆ. ಎರಿಕ್ ಟ್ರ್ಯಾಪಿಯರ್ ಇಂತಹ ಯಾವುದೇ ಕಾರ್ಯಾಚರಣೆಯ ಅಥವಾ ತಾಂತ್ರಿಕ ಹೇಳಿಕೆಗಳನ್ನು ನೀಡಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

  • 3 ರಫೇಲ್‌ ಸೇರಿ 5 ಯುದ್ಧ ವಿಮಾನಗಳನ್ನ ಪಾಕ್‌ ಹೊಡೆದಿದೆ – ಐಎಎಫ್‌ ಅಧಿಕಾರಿ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ವಾಗ್ದಾಳಿ

    3 ರಫೇಲ್‌ ಸೇರಿ 5 ಯುದ್ಧ ವಿಮಾನಗಳನ್ನ ಪಾಕ್‌ ಹೊಡೆದಿದೆ – ಐಎಎಫ್‌ ಅಧಿಕಾರಿ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ವಾಗ್ದಾಳಿ

    ನವದೆಹಲಿ: ಕಳೆದ ಮೇ 7ರಂದು ನಡೆದ ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆ ಕುರಿತು ಇಂಡೋನೇಷ್ಯಾದಲ್ಲಿರುವ ಭಾರತೀಯ ವಾಯು ಸೇನೆ (IAF) ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ಭಾರೀ ಕೋಲಾಹಲ ಎಬ್ಬಿಸಿದೆ.

    ʻಮೇ 7ರ ʻಆಪರೇಷನ್ ಸಿಂಧೂರʼ ಕಾರ್ಯಾಚರಣೆ ವೇಳೆ ಭಾರತೀಯ ವಾಯು ಸೇನೆಯ ಯುದ್ಧ ವಿಮಾನಗಳನ್ನು (Fighter Gets) ಪಾಕಿಸ್ತಾನವು ಹೊಡೆದುರುಳಿಸಿದೆ. ರಾಜಕೀಯ ನಾಯಕತ್ವವು ನಿರ್ಬಂಧ ಹೇರಿದ್ದರಿಂದಲೇ ನಾವು ವಿಮಾನಗಳನ್ನು ಕಳೆದುಕೊಳ್ಳಬೇಕಾಯಿತುʼ ಎಂದು ವಾಯುಸೇನೆ ಅಧಿಕಾರಿಯೊಬ್ಬರು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಗಗನಯಾತ್ರಿ ಶುಭಾಂಶು ಜೊತೆಗೆ ಮೋದಿ ಸಂವಾದ – 16 ಬಾರಿ ಸೂರ್ಯೋದಯ, ಸೂರ್ಯಾಸ್ತ ನೋಡ್ತಿದ್ದೇವೆ ಎಂದ ಶುಕ್ಲಾ

    ಇಂಡೋನೇಷ್ಯಾದ (Indonesian) ವಿಶ್ವವಿದ್ಯಾಲಯವೊಂದರಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಭಾರತೀಯ ವಾಯು ಸೇನೆಯ ಕ್ಯಾಪ್ಟನ್ ಶಿವಕುಮಾ‌ರ್ ಹಿಂದೆ ಮಾತನಾಡಿದ್ದರು. ಈ ಬಗ್ಗೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿತ್ತು. ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್ ಬಳಿ ಕೇಂದ್ರ ಸರ್ಕಾರದಿಂದ NIMHANS ಪಾಲಿಟ್ರೌಮಾ ಘಟಕಕ್ಕೆ ಅನುಮೋದನೆ

    ವಾಯು ಸೇನೆಯ ಅಧಿಕಾರಿ ಹೇಳಿದ್ದೇನು?
    ಏಪ್ರಿಲ್‌ 22ರ ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನೇರ ಮಿಲಿಟರಿ ದಾಳಿಯಾಗಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತು. ಈ ಸಮಯದಲ್ಲಿ ಭಾರತೀಯ ವಾಯು ಸೇನೆಯ 5 ಯುದ್ಧ ವಿಮಾನಗಳನ್ನು ಪಾಕಿಸ್ತಾನವು ಹೊಡೆದುರುಳಿಸಿದೆ. ಮೂರು ರಫೇಲ್‌ಗಳು, 1 ಮಿಗ್-29 ಮತ್ತು ಸುಖೋಯ್ -30 ಯುದ್ಧ ವಿಮಾನಗಳು ಹಾಗೂ ಒಂದು ಯುದ್ಧತಂತ್ರದ ಡ್ರೋನ್‌ ಅನ್ನು ಕಳೆದುಕೊಳ್ಳಬೇಕಾಯಿತು. ರಾಜಕೀಯ ನಾಯಕತ್ವವು ನಿರ್ಬಂಧ ಹೇರಿದ್ದರಿಂದಲೇ ನಾವು ವಿಮಾನಗಳನ್ನು ಕಳೆದುಕೊಳ್ಳಬೇಕಾಯಿತು. ಇದನ್ನೂ ಓದಿ: Operation Sindoor | ತಲೆ ಕೆಡಿಸಿಕೊಂಡು ʻಸಿಂಧೂರʼ ಅರ್ಥ ಹುಡುಕಾಡ್ತಿದೆ ಪಾಕ್‌ – ಗೂಗಲ್‌ನಲ್ಲಿ ಟ್ರೆಂಡ್‌

    operation sindoor India intercepts Pakistans Fatah ballistic missile fired at Delhi

    ಭಾರತವು ಹಲವು ವಿಮಾನಗಳನ್ನು ಕಳೆದುಕೊಂಡಿದೆ. ಅವರು ಈ ಮಾತನ್ನು ಒಪ್ಪದೇ ಇರಬಹುದು. ಆದ್ರೆ ನಾವು ಕೆಲವು ವಿಮಾನಗಳನ್ನು ಕಳೆದುಕೊಂಡಿದ್ದೇವೆ. ಅದು ಮಿಲಿಟರಿ ನೆಲೆಗಳ ಮೇಲೆ ಮತ್ತು ವಾಯುರಕ್ಷಣಾ ವ್ಯವಸ್ಥೆಗಳ ಮೇಲೆ ದಾಳಿ ಮಾಡದಂತೆ ರಾಜಕೀಯ ನಾಯಕತ್ವವು ನಿರ್ಬಂಧ ಹೇರಿದ್ದರಿಂದಾಗಿದೆ. ಇದಾದ ಬಳಿಕ ನಾವು ನಮ್ಮ ತಂತ್ರಗಳನ್ನ ಸಂಪೂರ್ಣ ಬದಲಾಯಿಸಿದೆವು. ಅವರ ಮಿಲಿಟರಿ ನೆಲೆಗಳು, ವಾಯುರಕ್ಷಣಾ ವ್ಯವಸ್ಥೆಗಳ ಮೇಲೆ ದಾಳಿ ಮಾಡಿ ನಾಶಪಡಿಸಿದೆವು. (ಮಿಲಿಟರಿ ಭಾಷೆಯಲ್ಲಿ SEAD ಮತ್ತು DEAD ಎಂದು ಕರೆಯಲಾಗುತ್ತದೆ). ಮೇ 8, 9, 10ರಂದು ಸಂಪೂರ್ಣ ಹಿಡಿತ ಸಾಧಿಸಲಾಯಿತು ಎಂದು ಹೇಳಿರುವುದಾಗಿ ವರದಿಯಾಗಿದೆ. ಕ್ಯಾಪ್ಟನ್ ಶಿವಕುಮಾ‌ರ್ ಅವರು ಹೇಳಿದ್ದಾರೆ ಎನ್ನಲಾದ ಹೇಳಿಕೆ ಕುರಿತು ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    s 500 air defence system

    ಈ ವರದಿಯನ್ನು ತನ್ನ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌ ನಾಯಕರು, ಕೇಂದ್ರ ಸರ್ಕಾರವು ದೇಶದ ಜನರ ದಾರಿ ತಪ್ಪಿಸುವ ಕೆಲಸ ಮಾಡಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಸಂವಿಧಾನದ ಪೀಠಿಕೆ ರಾಷ್ಟ್ರದ ಆತ್ಮ, ತಿದ್ದುಪಡಿಯಿಂದ ಸಂವಿಧಾನದ ಆಶಯಕ್ಕೆ ಧಕ್ಕೆಯಾಗಿದೆ: ಜಗದೀಪ್ ಧನ್ಕರ್ ಕಳವಳ

    ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷಗಳ ಸಭೆ ಕರೆದು ಅದರ ನೇತೃತ್ವ ವಹಿಸಿಕೊಳ್ಳಲು ಯಾಕೆ ನಿರಾಕರಿಸುತ್ತಿದ್ದಾರೆ. ಪಹಲ್ಗಾಮ್‌ ದಾಳಿ ಮತ್ತು ʻಆಪರೇಷನ್ ಸಿಂಧೂರʼದ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು ಎನ್ನುವ ವಿರೋಧ ಪಕ್ಷಗಳ ಆಗ್ರಹವನ್ನು ಯಾಕಾಗಿ ಒಪ್ಪಿಕೊಳ್ಳುತ್ತಿಲ್ಲ? ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

    ದೇಶದ ಭದ್ರತೆಯ ವಿಚಾರದಲ್ಲಿ ರಾಜಿ ಮಾಡಿಕೊಂಡಿದ್ದೇವೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ. ಇದನ್ನು ಭಾರತದ ಜನರ ಎದುರು ಕಾಂಗ್ರೆಸ್ ತೆರೆದಿಡುತ್ತದೆ ಎಂದು ಅವರು ಭಯಭೀತರಾಗಿದ್ದಾರೆ. ಅದಕ್ಕಾಗಿಯೇ ವಿಶೇಷ ಅಧಿವೇಶನ ಕರೆಯುತ್ತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ S-400 ಯಶಸ್ವಿ ಕಾರ್ಯಾಚರಣೆ; S-500 ರಕ್ಷಣಾ ವ್ಯವಸ್ಥೆ ಖರೀದಿಗೂ ಆಸಕ್ತಿ ತೋರಿದ ಭಾರತ

  • ರಫೇಲ್‌ ಬಗ್ಗೆ ಸುಳ್ಳು ಹೇಳಿ ಜಗತ್ತಿನ ಮುಂದೆ ಮತ್ತೆ ಬೆತ್ತಲಾದ ಪಾಕಿಸ್ತಾನ!

    ರಫೇಲ್‌ ಬಗ್ಗೆ ಸುಳ್ಳು ಹೇಳಿ ಜಗತ್ತಿನ ಮುಂದೆ ಮತ್ತೆ ಬೆತ್ತಲಾದ ಪಾಕಿಸ್ತಾನ!

    ಇಸ್ಲಾಮಾಬಾದ್‌: ಪದೇ ಪದೇ ಸುಳ್ಳು ಹೇಳುತ್ತಾ ಬಂದಿರುವ ಪಾಕಿಸ್ತಾನ (Pakistan) ಮತ್ತೆ ಜಗತ್ತಿನ ಮುಂದೆ ಬೆತ್ತಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡಿದ ಸುಳ್ಳು ಸುದ್ದಿಯನ್ನೇ (Fake News) ನಿಜವೆಂದು ನಂಬಿ ಪಾಕಿಸ್ತಾನ ಭಾರತದ 5 ಜೆಟ್‌ ವಿಮಾನವನ್ನು ಹೊಡೆದು ಹಾಕಿದೆ ಎಂದು ಹೇಳಿದೆ.

    ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆ ವೇಳೆ ಪಾಕಿಸ್ತಾನ ಭಾರತದ 5 ಜೆಟ್‌ ವಿಮಾನಗಳನ್ನು ಹೊಡೆದು ಹಾಕಿದೆ ಎಂಬ ವಿಡಿಯೋಗಳನ್ನು ಪಾಕ್‌ ಬೆಂಬಲಿತ ವ್ಯಕ್ತಿಗಳು ಹಂಚಿಕೊಳ್ಳುತ್ತಿದ್ದಾರೆ. ಭಾರತ ಈ ಸುದ್ದಿಗಳನ್ನು ಸುಳ್ಳು ಎಂದು ಹೇಳಿದರೂ ಪಾಕ್‌ ಈ ಸುದ್ದಿ ನಿಜ ಎಂದು ವಾದಿಸುತ್ತಿದೆ. ಇದನ್ನೂ ಓದಿ: ಲಾಹೋರ್‌ನಲ್ಲಿ ಅಲ್ಲೋಲ ಕಲ್ಲೋಲ – ಮಿಲಿಟರಿ ವಿಮಾನ ನಿಲ್ದಾಣದ ಬಳಿ ಮೂರು ಸ್ಫೋಟ

     

    ವಿದೇಶಿ ಮಾಧ್ಯಮದ ಜೊತೆ ಪಾಕ್‌ ರಕ್ಷಣಾ ಸಚಿವ ಖವಾಜಾ ಆಸಿಫ್ (Khawaja Asif) ಮಾತನಾಡುತ್ತಿದ್ದರು. ಈ ವೇಳೆ ಪಾಕ್‌ 5 ವಿಮಾನಗಳನ್ನು ಹೊಡೆದ ಬಗ್ಗೆ ಸಾಕ್ಷಿ ಎಲ್ಲಿದೆ ಎಂದು ಕೇಳಲಾಯಿತು. ಇದಕ್ಕೆ ಅವರು, ಭಾರತೀಯ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ನಮ್ಮ ಮಾಧ್ಯಮಗಳಲ್ಲಿ ಪ್ರಕಟವಾಗಿಲ್ಲ. ಈ ಜೆಟ್‌ಗಳ ಅವಶೇಷಗಳು ಭಾರತ ಆಕ್ರಮಿತ ಕಾಶ್ಮೀರದಲ್ಲಿ ಬಿದ್ದಿವೆ ಎಂದು ಹೇಳಿದರು.

    ನಾನು ಸಾಮಾಜಿಕ ಮಾಧ್ಯಮದಲ್ಲಿ ಬಂದಿರುವ ಬಗ್ಗೆ ಮಾತನಾಡುವುದಿಲ್ಲ. ನಾನು ನಿರ್ದಿಷ್ಟವಾಗಿ ಪುರಾವೆಗಳು, ವಿವರಗಳನ್ನು ಕೇಳುತ್ತಿದ್ದೇನೆ. ನೀವು ಆರೋಪಿಸುತ್ತಿರುವಂತೆ ಈ ರಫೇಲ್ ಜೆಟ್‌ಗಳನ್ನು ಹೊಡೆದುರುಳಿಸಲು ಯಾವುದೇ ಚೀನೀ ಉಪಕರಣಗಳನ್ನು ಬಳಸಲಾಗಿದೆಯೇ ಎಂದು ಆಂಕರ್‌ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಲೂಚ್ ಹೋರಾಟಗಾರರಿಂದ  ಸೇನಾ ವಾಹನದ ಮೇಲೆ ಐಇಡಿ ದಾಳಿ – 12 ಪಾಕ್ ಸೈನಿಕರು ಸಾವು

    ಈ ಪ್ರಶ್ನೆಗೆ ಉತ್ತರ ನೀಡದ ಅವರು, ಭಾರತ ಫ್ರಾನ್ಸ್‌ನಿಂದ ವಿಮಾನಗಳನ್ನು ಖರೀದಿಸಬಹುದಾದರೆ, ಪಾಕಿಸ್ತಾನವು ಚೀನಾದಿಂದ ಖರೀದಿಸಬಹುದು ಎಂದು ಪ್ರತಿಕ್ರಿಯಿಸಿದರು.

    ನಮ್ಮಲ್ಲಿ ಚೀನಾ ಉಪಕರಣಗಳು ಇಲ್ಲ. ಆದರೆ ಚೀನಾದ ವಿಮಾನಗಳಿವೆ. ಅವುಗಳನ್ನು ಈಗ ಇಸ್ಲಾಮಾಬಾದ್‌ನಲ್ಲಿ ತಯಾರಿಸಲಾಗುತ್ತಿದೆ ಮತ್ತು ಜೋಡಿಸಲಾಗುತ್ತಿದೆ. ಭಾರತವು ಫ್ರಾನ್ಸ್‌ನಿಂದ ವಿಮಾನಗಳನ್ನು ಖರೀದಿಸಿ ಬಳಸಬಹುದಾದರೆ ನಾವು ಚೀನಾ, ರಷ್ಯಾ, ಯುಎಸ್ ಅಥವಾ ಯುಕೆಯಿಂದ ವಿಮಾನಗಳನ್ನು ಸಹ ಖರೀದಿಸಬಹುದು. ಅವರ 3 ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಅವರು ಈಗಾಗಲೇ ಒಪ್ಪಿಕೊಂಡಿದ್ದಾರೆ ಎಂದು ಅವರು ಸುಳ್ಳು ಹೇಳಿಕೊಂಡರು.

    ಜೆಟ್‌ಗಳನ್ನು ಉರುಳಿಸಲು ಚೀನಾದ ಸಲಕರಣೆಗಳನ್ನು ಬಳಸಲಾಗಿದೆಯೇ ಎಂದು ಆಂಕರ್ ಮತ್ತೆ ಅವರಿಗೆ ಮರು ಪ್ರಶ್ನೆ ಹಾಕಿದಾಗ ಡಾಗ್‌ ಫೈಟ್‌(ಎರಡು ಯುದ್ಧ ವಿಮಾನಗಳ ಕಾದಾಟ) ಮಾಡುವಾಗ ವಿಮಾನಗಳನ್ನು ಹೊಡೆದು ಹಾಕಲಾಗಿದೆ ಎಂದು ಹೇಳಿದರು.

  • ಬಾಲಾಕೋಟ್‌, ಬ್ರಹ್ಮೋಸ್‌ ಬಳಿಕ ʻಆಪರೇಷನ್‌ ಸಿಂಧೂರʼ – ಪಾಕ್‌ ನಂಬಿದ್ದ ʻಮೇಡ್‌ ಇನ್‌ ಚೈನಾʼ ರೆಡಾರ್‌ ಫೇಲ್‌

    ಬಾಲಾಕೋಟ್‌, ಬ್ರಹ್ಮೋಸ್‌ ಬಳಿಕ ʻಆಪರೇಷನ್‌ ಸಿಂಧೂರʼ – ಪಾಕ್‌ ನಂಬಿದ್ದ ʻಮೇಡ್‌ ಇನ್‌ ಚೈನಾʼ ರೆಡಾರ್‌ ಫೇಲ್‌

    ಇಸ್ಲಾಮಾಬಾದ್‌: ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರ (PoK)ದ ಉಗ್ರ ತಾಣಗಳ ಮೇಲೆ ಭಾರತ ನಡೆಸಿದ ಏರ್‌ಸ್ಟ್ರೈಕ್‌ ಬಳಿಕ ಪಾಕಿಸ್ತಾನದ ರೆಡಾರ್‌ (Pakistans Radar) ಮತ್ತು ವಾಯು ರಕ್ಷಣಾ ವ್ಯವಸ್ಥೆಯ ಮೂಲಸೌಕರ್ಯದ ವಿಶ್ವಾಸಾರ್ಹತೆ ಮತ್ತೊಮ್ಮೆ ಬಟಾಬಯಲಾಗಿದೆ.

    ಪಾಕಿಸ್ತಾನಕ್ಕೆ ಸರಬರಾಜು ಮಾಡಿದ ಚೀನಾ ನಿರ್ಮಿತ ರೆಡಾರ್‌ (Chinese Radars) ವ್ಯವಸ್ಥೆಗಳು ಭಾರತೀಯ ಸೇನೆಯ ವಾಯುದಾಳಿಯನ್ನು ಪತ್ತೆಹಚ್ಚುವಲ್ಲಿ ವಿಫಲವಾಗಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. 2022ರ ಮಾರ್ಚ್‌ನಲ್ಲಿಯೂ ಭಾರತದ ಬ್ರಹ್ಮೋಸ್‌ ಕ್ಷಿಪಣಿಯ ಆಕಸ್ಮಿಕ ದಾಳಿಯನ್ನ ಪತ್ತೆಹಚ್ಚುವಲ್ಲಿ ಪಾಕಿಸ್ತಾನದ ರೆಡಾರ್‌ ವ್ಯವಸ್ಥೆ ವಿಫಲವಾಗಿತ್ತು. ಇದೀಗ ʻಆಪರೇಷನ್‌ ಸಿಂಧೂರʼ ಸಂದರ್ಭದಲ್ಲೂ ಭಾರತೀಯ ಕ್ಷಿಪಣಿಗಳನ್ನು ಪತ್ತೆ ಹಚ್ಚುವಲ್ಲಿ ವಿಫಲವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ | ಉಗ್ರರ ಶವಗಳನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸಿದ ಭಿಕಾರಿಸ್ತಾನ್‌!

    ಚೀನಾದ ರೆಡಾರ್‌ ವಿಫಲ
    ಮೇ 7ರಂದು ದೇಶಾದ್ಯಂತ ಮಾಕ್‌ ಡ್ರಿಲ್‌ ನಡೆಸಲು ಭಾರತೀಯ ಕೇಂದ್ರ ಸಚಿವಾಲಯ ಕರೆ ಕೊಟ್ಟಿತ್ತು, ಇಂದು ಸೂರ್ಯೋದಯಕ್ಕೂ ಮುನ್ನವೇ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರ ತಾಣಗಳ ಮೇಲೆ ದಾಳಿ ನಡೆಸಿ ಯಾರೂ ಊಹಿಸದ ರೀತಿಯಲ್ಲಿ ಪಾಕ್‌ಗೆ ಶಾಕ್‌ ಕೊಟ್ಟಿದೆ. ಆದ್ರೆ ಪಾಕಿಸ್ತಾನವು ತನ್ನ ರಕ್ಷಣಾ ವ್ಯವಸ್ಥೆಗೆ ಅಳವಡಿಸಿಕೊಂಡಿರುವ ಚೀನಾದ ತಂತ್ರಜ್ಞಾನ ಆಧರಿತ ರೆಡಾರ್‌ ವ್ಯವಸ್ಥೆಯು ಸೂಕ್ತ ಸಮಯದಲ್ಲಿ ಕ್ಷಿಪಣಿಗಳನ್ನ ಪತ್ತೆ ಹಚ್ಚಲು ಸಾಧ್ಯವಾಗದೇ ಬಹುದೊಡ್ಡ ವೈಫಲ್ಯ ಅನುಭವಿಸಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚೀನಾದ ರಕ್ಷಣಾ ಉತ್ಪನ್ನಗಳ ಬಗ್ಗೆ ಪ್ರಶ್ನೆ ಮಾಡುವಂತಾಗಿದೆ. ಇದನ್ನೂ ಓದಿ: ವಾಯುನೆಲೆ ನಿರ್ಬಂಧ – ಮೇ 10ರವರೆಗೆ 165ಕ್ಕೂ ಹೆಚ್ಚು ಇಂಡಿಗೋ ವಿಮಾನ ಬಂದ್

    ಪಾಕಿಸ್ತಾನದ ವಾಯುರಕ್ಷಣಾ ವ್ಯವಸ್ಥೆಯಲ್ಲಿ ಲೋಪ ಸಂಭವಿಸಿದ್ದು ಇದೇ ಮೊದಲಲ್ಲ, 2019ರ ಬಾಲಾಕೋಟ್‌ ಸರ್ಜಿಕಲ್‌ ಸ್ಟ್ರೈಕ್‌ ಸಂದರ್ಭದಲ್ಲೂ ಇದೇ ರೀತಿ ಪಾಕಿಸ್ತಾನದ ರಾಡಾರ್‌ ವ್ಯವಸ್ಥೆಯಲ್ಲಿ ಲೋಪ ಸಂಭವಿಸಿತ್ತು. ಆಗ ಪಾಕಿಸ್ತಾನ ಚೀನಾ ನಿರ್ಮಿತ ರಾಡಾರ್‌ಗಳ ಮೊರೆ ಹೋಗಿತ್ತು. ಮೊದಲ ಬ್ಯಾಚ್‌ನ 6 ರೆಡಾರ್‌ ಸಿಸ್ಟಂಗಳನ್ನು 2015 ಮತ್ತು 2016ರಲ್ಲಿ ಚೀನಾ ಪಾಕ್‌ಗೆ ಹಸ್ತಾಂತರ ಮಾಡಿತ್ತು. ಅಷ್ಟೇ ಅಲ್ಲದೇ ಚೀನಾದಿಂದ ಪಾಕ್‌ 9 LY-80 LOMADS (ಕಡಿಮೆ ಮತ್ತು ಮಧ್ಯಮ ಎತ್ತರದ ವಾಯು ರಕ್ಷಣಾ ವ್ಯವಸ್ಥೆಗಳು) ಖರೀದಿಸಿತ್ತು. ಇದನ್ನು ವಿಶ್ವದ ಅತ್ಯಂತ ಮುಂದುವರಿದ ರಕ್ಷಣಾ ವ್ಯವಸ್ಥೆಗಳಲ್ಲಿ ಒಂದು ಎಂದು ಚೀನಾ ಬುರುಡೆ ಬಿಟ್ಟಿತ್ತು. ಇದೀಗ ʻಆಪರೇಷನ್‌ ಸಿಂಧೂರʼ ತಡೆಯುವಲ್ಲಿ ವಿಫಲವಾದ ಬಳಿಕ ಪಾಕ್‌ ನಿರೀಕ್ಷೆ ಸುಳ್ಳಾಗಿದೆ.  ಇದನ್ನೂ ಓದಿ: JEM ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್‌ ಅಜರ್‌ ಕುಟುಂಬದ 10 ಜನ ಸೇರಿ 14 ಮಂದಿ ಹತ್ಯೆ

    ಭಾರತದ ಸೂಪರ್‌ಸಾನಿಕ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳ ತೀವ್ರ ವೇಗ ಮತ್ತು ಎತ್ತರದ ಕಾರಣದಿಂದಾಗಿ ರೆಡಾರ್‌ಗಳಿಗೆ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ ಎನ್ನುವುದು ಬ್ರಹ್ಮೋಸ್‌ ಕ್ಷಿಪಣಿ ಪ್ರಕರಣದಿಂದ ಬೆಳಕಿಗೆ ಬಂದಿತ್ತು. ರಿಯಲ್‌ ಟೈಂನಲ್ಲಿ ರೆಡಾರ್‌ಗಳಿಗೆ ಪತ್ತೆ ಹಚ್ಚಲು ಸಾಧ್ಯವಿಲ್ಲ ಎನ್ನುವುದನ್ನು ಅರಿತ ಭಾರತ ಇಂದು ರಫೇಲ್‌ ವಿಮಾನ ಮೂಲಕ ಕ್ಷಿಪಣಿಯನ್ನು ಹಾರಿಸಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ. ಇದನ್ನೂ ಓದಿ: ಸಿಂಧೂರ ಅಳಿಸಿದವರಿಗೆ ನಾರಿ ಶಕ್ತಿಯಿಂದಲೇ ಭಾರತ ಉತ್ತರ – ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಬಗ್ಗೆ ಗೊತ್ತಾ?

    ರಿಪೇರಿ ಮಾಡದ ಚೀನಾ:
    ಇಲ್ಲಿಯವರೆಗೆ ಪಾಕಿಸ್ತಾನ LY-80 ರಕ್ಷಣಾ ವ್ಯವಸ್ಥೆಯಲ್ಲಿನ 388 ದೋಷಗಳ ಸುದೀರ್ಘ ಪಟ್ಟಿಯನ್ನು ಚೀನಾಕ್ಕೆ ಹಸ್ತಾಂತರಿಸಿದೆ, ಅವುಗಳಲ್ಲಿ 103 ಹೊಸದಾಗಿ ಪಟ್ಟಿಮಾಡಲಾದ ದೋಷಗಳಾಗಿದ್ದು, 255 ದೋಷಗಳನ್ನು ತಕ್ಷಣವೇ ಪರಿಹರಿಸಬೇಕಾದ ಅಗತ್ಯವಿದೆ ಎಂದು ಪಾಕ್‌ ಬೇಡಿಕೊಂಡಿತ್ತು. ಆದರೆ ಚೀನಾ ಸರಿಯಾಗಿ ರಿಪೇರಿ ಮಾಡಿಕೊಟ್ಟಿಲ್ಲ ಎಂದು ವರದಿಗಳು ಹೇಳಿವೆ.  ಇದನ್ನೂ ಓದಿ: Operation Sindoor | ತಲೆ ಕೆಡಿಸಿಕೊಂಡು ʻಸಿಂಧೂರʼ ಅರ್ಥ ಹುಡುಕಾಡ್ತಿದೆ ಪಾಕ್‌ – ಗೂಗಲ್‌ನಲ್ಲಿ ಟ್ರೆಂಡ್‌

    ಏನಿದು ಬ್ರಹ್ಮೋಸ್‌ ಕೇಸ್‌?
    2022ರ ಮಾರ್ಚ್‌ 9ರ ಸಂಜೆಯ ವೇಳೆ ಹರ್ಯಾಣದ ಸಿರ್ಸಾದಿಂದ ಬ್ರಹ್ಮೋಸ್‌ ಕ್ಷಿಪಣಿ ಆಕಸ್ಮಿಕವಾಗಿ ಉಡಾವಣೆಯಾಗಿ ಕೇವಲ 3 ನಿಮಿಷ 44 ಸೆಕೆಂಡ್‌ನಲ್ಲಿ 124 ಕಿ.ಮೀ ಕ್ರಮಿಸಿ ಪಾಕಿಸ್ತಾನದ ಭೂ ಪ್ರದೇಶದ ಒಳಗಡೆ ಬಿದ್ದಿತ್ತು. ಈ ಘಟನೆಯಿಂದ ಯಾವುದೇ ಸಾವು, ನೋವು ಸಂಭವಿಸದೇ ಇದ್ದರೂ ಈ ಕ್ಷಿಪಣಿಯನ್ನು ತಡೆಯಲು ಪಾಕಿಸ್ತಾನದಿಂದ ಸಾಧ್ಯವಾಗಿರಲಿಲ್ಲ. ಈ ವಿಷಯವನ್ನು ಇಟ್ಟುಕೊಂಡು ಪಾಕಿಸ್ತಾನ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಭಾರತ ತಾಂತ್ರಿಕ ಸಮಸ್ಯೆಯಿಂದ ಈ ಕ್ಷಿಪಣಿ ಉಡಾವಣೆಯಾಗಿದೆ ಎಂದು ಹೇಳಿ ವಿಷಾದ ವ್ಯಕ್ತಪಡಿಸಿ ತನಿಖೆ ನಡೆಸುವುದಾಗಿ ಹೇಳಿತ್ತು. ತನಿಖೆಯ ಬಳಿಕ ವಾಯುಸೇನೆಯ ಇಮೇಜ್‌ಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿಂಗ್‌ ಕಮಾಂಡರ್‌ ಅಭಿನವ್‌ ಶರ್ಮಾ ಅವರನ್ನು ಸೇವೆಯಿಂದಲೇ ವಜಾಗೊಳಿಸಿತ್ತು. ಈ ಕ್ಷಿಪಣಿ ಪ್ರಕರಣದಿಂದ ಭಾರತ ಸರ್ಕಾರಕ್ಕೆ 24 ಕೋಟಿ ರೂ. ನಷ್ಟವಾಗಿತ್ತು.

  • 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಹಿ; ಭಾರತ-ಫ್ರಾನ್ಸ್ ಮಧ್ಯೆ 63,000 ಕೋಟಿ ಮೆಗಾ ಡೀಲ್‌

    26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಹಿ; ಭಾರತ-ಫ್ರಾನ್ಸ್ ಮಧ್ಯೆ 63,000 ಕೋಟಿ ಮೆಗಾ ಡೀಲ್‌

    ನವದೆಹಲಿ: ಭಾರತ ಸರ್ಕಾರವು (India Government) ಫ್ರಾನ್ಸ್‌ನಿಂದ (France) 26 ರಫೇಲ್ ಎಂ ಯುದ್ಧ ವಿಮಾನಗಳನ್ನು (Rafale – M Fighter Jets) ಖರೀದಿಸುವ 63,000 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದವು ಭಾರತದ ನೌಕಾಪಡೆಯ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಲಿದೆ.

    Rafale

    ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ (Dassault Aviation) ಕಂಪನಿಯು ಭಾರತೀಯ ನೌಕಾಪಡೆಗಾಗಿ 26 ರಫೇಲ್ ಯುದ್ಧ ವಿಮಾನಗಳನ್ನು ಪೂರೈಸಲಿದೆ. ಇದರಲ್ಲಿ 22 ಸಿಂಗಲ್ ಸೀಟರ್ ಹಾಗೂ 4 ಡಬಲ್ ಸೀಟರ್ ಯುದ್ಧ ವಿಮಾನಗಳು ಒಳಗೊಂಡಿದೆ. 2031ರ ವೇಳೆಗೆ 26 ಯುದ್ಧ ವಿಮಾನಗಳು ಪೂರ್ಣ ಪ್ರಮಾಣದಲ್ಲಿ ಭಾರತಕ್ಕೆ ಪೂರೈಕೆ ಆಗುವ ನಿರೀಕ್ಷೆಯಿದೆ. ಈ ವಿಮಾನಗಳಿಂದ ಭಾರತದ ರಕ್ಷಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಾಗಲಿದೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿ| ಚೀನಾ ಲಿಂಕ್‌ ಬಗ್ಗೆ ತನಿಖೆಗೆ ಇಳಿದ ಎನ್‌ಐಎ!

    IAF Rafale main

    ರಫೇಲ್ ಮೆರೈನ್ ವಿಮಾನಗಳು ವಿಶ್ವದ ಮುಂದುವರಿದ ಫೈಟರ್‌ ಜೆಟ್‌ಗಳಲ್ಲಿ (Fighter Jet) ಒಂದಾಗಿದೆ. ಪ್ರಸ್ತುತ ಫ್ರಾನ್ಸ್‌ ನೌಕಾಪಡೆ ಮಾತ್ರ ಈ ಜೆಟ್ ಅನ್ನು ಹೊಂದಿದೆ. ಆಧುನಿಕ ತಂತ್ರಜ್ಞಾನ ಮತ್ತು ಸುಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಹೊಂದಿದ್ದು, ಇವು ಭಾರತದ ಸಾಗರ ಗಡಿಗಳ ಸುರಕ್ಷತೆಯನ್ನು ಖಚಿತಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ಈ ಖರೀದಿ ಪ್ರಕ್ರಿಯೆಯು ದೀರ್ಘಕಾಲದ ಮಾತುಕತೆಗಳ ನಂತರ ಅಂತಿಮಗೊಂಡಿದ್ದು, ರಕ್ಷಣಾ ಸಚಿವಾಲಯವು ಈ ಒಪ್ಪಂದಕ್ಕೆ ಅಧಿಕೃತವಾಗಿ ಸಹಿಹಾಕಿದೆ. ಇದನ್ನೂ ಓದಿ: ಭಾರತ – ಪಾಕ್‌ ನಡುವೆ ಉದ್ವಿಗ್ನತೆ ಮೇಲೆ ಚೀನಾ ನಿಗಾ – ಪಾಕಿಸ್ತಾನದ ಈ ಬೇಡಿಕೆಗೆ ಬೆಂಬಲ

    Rafale IAF 2

    2016 ರಲ್ಲಿ ಭಾರತೀಯ ವಾಯುಪಡೆಗೆ ರಫೇಲ್‌ ಯುದ್ಧ ವಿಮಾನ ಖರೀದಿ ಸಂಬಂಧ 59,000 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ಒಪ್ಪಂದಂತೆ 36 ರಫೇಲ್‌ ಯುದ್ಧ ವಿಮಾನಗಳು ಈಗಾಗಲೇ ಭಾರತದ ವಾಯುಸೇನೆಯ ಬತ್ತಳಿಕೆಯನ್ನು ಸೇರಿದೆ.

    ಈ ಯುದ್ಧ ವಿಮಾನಗಳನ್ನು ವಿಮಾನವಾಹಕ ನೌಕೆಗಳಾದ ಐಎನ್‌ಎಸ್ ವಿಕ್ರಾಂತ್ ಮತ್ತು ಐಎನ್‌ಎಸ್ ವಿಕ್ರಮಾದಿತ್ಯ ಅಲ್ಲಿ ನಿಯೋಜಿಸಲಾಗುವುದು ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ. ಇದನ್ನೂ ಓದಿ: Pahalgam Attack | AK-47, M4 ರೈಫಲ್‌ ಹೊತ್ತು, ದಟ್ಟ ಕಾಡಿನಲ್ಲಿ 22 ಗಂಟೆ ನಡೆದುಕೊಂಡೇ ಬಂದಿದ್ದ ಉಗ್ರರು

  • 26 ರಫೇಲ್ ಯುದ್ಧ ವಿಮಾನ ಖರೀದಿ – ಭಾರತ ಫ್ರಾನ್ಸ್ ಮಧ್ಯೆ 63,000 ಕೋಟಿ ಡೀಲ್‌ಗೆ ಅನುಮೋದನೆ

    26 ರಫೇಲ್ ಯುದ್ಧ ವಿಮಾನ ಖರೀದಿ – ಭಾರತ ಫ್ರಾನ್ಸ್ ಮಧ್ಯೆ 63,000 ಕೋಟಿ ಡೀಲ್‌ಗೆ ಅನುಮೋದನೆ

    ನವದೆಹಲಿ : ಭಾರತ ಸರ್ಕಾರವು (India Government) ಫ್ರಾನ್ಸ್‌ನಿಂದ (France) 26 ರಫೇಲ್ ಮೆರೈನ್ ಯುದ್ಧ ವಿಮಾನಗಳನ್ನು (Rafale Marine Fighter Jets) ಖರೀದಿಸುವ ಬೃಹತ್ ಒಪ್ಪಂದಕ್ಕೆ ಅಂತಿಮ ಅನುಮೋದನೆ ನೀಡಿದೆ. ಈ ಒಪ್ಪಂದದ ಮೌಲ್ಯ 63,000 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಎಂದು ಅಂದಾಜಿಸಲಾಗಿದೆ. ಈ ಒಪ್ಪಂದವು ಭಾರತದ ನೌಕಾಪಡೆಯ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಲಿದೆ.

    ಈ ಒಪ್ಪಂದದ ಅಡಿಯಲ್ಲಿ, ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ (Dassault Aviation) ಕಂಪನಿಯು ಭಾರತೀಯ ನೌಕಾಪಡೆಗಾಗಿ 26 ರಫೇಲ್ ಯುದ್ಧ ವಿಮಾನಗಳನ್ನು ಪೂರೈಸಲಿದೆ,‌ ಇದರಲ್ಲಿ 22 ಸಿಂಗಲ್, 4 ಡಬಲ್ ಸೀಟರ್ ವಿಮಾನಗಳು ಒಳಗೊಂಡಿದೆ. ಈ ವಿಮಾನಗಳಿಂದ ಭಾರತದ ರಕ್ಷಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಾಗಲಿದೆ. ಇದನ್ನೂ ಓದಿ: ದೇಶ ತೊರೆಯಿರಿ ಅಥವಾ ಜೈಲು ಶಿಕ್ಷೆ ಅನುಭವಿಸಿ: ವಿದೇಶಿ ಭಯೋತ್ಪಾದಕರಿಗೆ ಅಮೆರಿಕ ಎಚ್ಚರಿಕೆ

    ರಫೇಲ್ ಮೆರೈನ್ ವಿಮಾನಗಳು ಆಧುನಿಕ ತಂತ್ರಜ್ಞಾನ ಮತ್ತು ಸುಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಹೊಂದಿದ್ದು, ಇವು ಭಾರತದ ಸಾಗರ ಗಡಿಗಳ ಸುರಕ್ಷತೆಯನ್ನು ಖಚಿತಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ಈ ಖರೀದಿ ಪ್ರಕ್ರಿಯೆಯು ದೀರ್ಘಕಾಲದ ಮಾತುಕತೆಗಳ ನಂತರ ಅಂತಿಮಗೊಂಡಿದ್ದು, ರಕ್ಷಣಾ ಸಚಿವಾಲಯವು ಈ ಒಪ್ಪಂದವನ್ನು ಅಧಿಕೃತವಾಗಿ ದೃಢೀಕರಿಸಿದೆ.

    ಈ ಒಪ್ಪಂದದ ಭಾಗವಾಗಿ, ತರಬೇತಿ, ದುರಸ್ತಿ, ಮತ್ತು ತಾಂತ್ರಿಕ ಸಹಾಯವನ್ನು ಒಳಗೊಂಡಂತೆ ಹಲವು ಸೌಲಭ್ಯಗಳನ್ನು ಫ್ರಾನ್ಸ್ ಒದಗಿಸಲಿದೆ. ಈ ಯುದ್ಧ ವಿಮಾನಗಳ ಸೇರ್ಪಡೆಯು ಭಾರತೀಯ ನೌಕಾಪಡೆಯ ಆಧುನೀಕರಣದಲ್ಲಿ ಮಹತ್ವದ ಮೈಲಿಗಲ್ಲು ಎಂದು ರಕ್ಷಣಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಈ ಒಪ್ಪಂದವು ಭಾರತದ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಮತ್ತು ಆಧುನಿಕೀಕರಣದ ದಿಕ್ಕಿನಲ್ಲಿ ಮತ್ತೊಂದು ಪ್ರಗತಿಯನ್ನು ಸೂಚಿಸುತ್ತದೆ. ಇದನ್ನೂ ಓದಿ: ಸತತ 2ನೇ ಬಾರಿ ರೆಪೋ ದರ ಕಡಿತ – ಇಳಿಕೆಯಾಗಲಿದೆ ಗೃಹ ಸಾಲ, ಇಎಂಐ

    ಈ ಒಪ್ಪಂದವು ರಕ್ಷಣಾ ವಲಯಕ್ಕೆ ಮಾತ್ರವಲ್ಲದೆ, ಭಾರತೀಯ ಕಾರ್ಯತಂತ್ರದ ಶಕ್ತಿಗೆ ಹೊಸ ದಿಕ್ಕನ್ನು ನೀಡುತ್ತದೆ. ಇದು ವಾಯುಪಡೆ ಮತ್ತು ನೌಕಾಪಡೆಯ ಸಾಮರ್ಥ್ಯಗಳನ್ನು ಹೆಚ್ಚಿಸುವುದಲ್ಲದೆ, ಚೀನಾ ಮತ್ತು ಪಾಕಿಸ್ತಾನದಂತಹ ಶಕ್ತಿಗಳ ವಿರುದ್ಧ ಹೋರಾಟಕ್ಕೆ ಭಾರತಕ್ಕೆ ಇನ್ನಷ್ಟು ಶಕ್ತಿ ನೀಡಲಿದೆ.

    2016 ರಲ್ಲಿ ಭಾರತೀಯ ವಾಯುಪಡೆಗೆ ರಫೇಲ್‌ ಯುದ್ಧ ವಿಮಾನ ಖರೀದಿ ಸಂಬಂಧ 59,000 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ಒಪ್ಪಂದಂತೆ 36 ರಫೇಲ್‌ ಯುದ್ಧ ವಿಮಾನಗಳು ಈಗಾಗಲೇ ಭಾರತದ ವಾಯುಸೇನೆಯ ಬತ್ತಳಿಕೆಯನ್ನು ಸೇರಿದೆ.

    ಒಪ್ಪಂದಕ್ಕೆ ಸಹಿ ಹಾಕಿದ 37 ರಿಂದ 65 ತಿಂಗಳೊಳಗೆ ಡಸಾಲ್ಟ್‌ ಕಂಪನಿ ಭಾರತಕ್ಕೆ ಯುದ್ಧ ವಿಮಾನಗಳನ್ನು ಹಸ್ತಾಂತರಿಸಬೇಕಾಗುತ್ತದೆ. ಎಲ್ಲಾ ಎಲ್ಲಾ ಜೆಟ್‌ಗಳು 2030-31 ರ ವೇಳೆಗೆ ವಿತರಣೆಯಾಗುವ ಸಾಧ್ಯತೆಯಿದೆ.

  • Rafale Deal: 90,000 ಕೋಟಿ ವೆಚ್ಚ, 26 ರಫೇಲ್‌ ಖರೀದಿಸಲು ಭಾರತ ಸರ್ಕಾರ ಮೆಗಾ ಪ್ಲ್ಯಾನ್‌!

    Rafale Deal: 90,000 ಕೋಟಿ ವೆಚ್ಚ, 26 ರಫೇಲ್‌ ಖರೀದಿಸಲು ಭಾರತ ಸರ್ಕಾರ ಮೆಗಾ ಪ್ಲ್ಯಾನ್‌!

    ನವದೆಹಲಿ/ಪ್ಯಾರಿಸ್‌: ಈ ಹಿಂದೆ ಫ್ರಾನ್ಸ್‌ನಿಂದ (France) 36 ರಫೇಲ್‌ ಯುದ್ಧ ವಿಮಾನಗಳನ್ನ (Rafale Fighter Jet) ಖರೀದಿ ಮಾಡಿದ್ದ ಭಾರತ ಸರ್ಕಾರ ಇದೀಗ, ಇನ್ನೂ 26 ಯುದ್ಧ ವಿಮಾನಗಳನ್ನು ಖರೀದಿಸಲು ಚಿಂತನೆ ನಡೆಸಿದೆ.

    ಭಾರತೀಯ ರಕ್ಷಣಾ ಪಡೆಗಳು ಸಚಿವಾಲಯದ ಮುಂದೆ ರಫೇಲ್‌ ಖರೀದಿಸುವ ಪ್ರಸ್ತಾವನೆಯನ್ನಿಟ್ಟಿವೆ. ಈ ವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಫ್ರಾನ್ಸ್‌ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಭಾರತ ಸರ್ಕಾರವು 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಫೇಲ್‌ ಡೀಲ್‌ – ಆಫ್‌ಸೆಟ್‌ ನಿಯಮವನ್ನೇ ಕೈಬಿಟ್ಟ ಸರ್ಕಾರ

    ರಫೇಲ್ ಯುದ್ಧ ವಿಮಾನಗಳ ಜೊತೆಗೆ ಭಾರತವು ಫ್ರಾನ್ಸ್‌ನಿಂದ 3 ಸ್ಕಾರ್ಪೀನ್ ವರ್ಗದ ಸಾಂಪ್ರದಾಯಿಕ ಜಲಾಂತರ್ಗಾಮಿ (Submarines) ನೌಕೆಗಳನ್ನೂ ಖರೀದಿಸಲಿದೆ. 26 ರಫೇಲ್ ಮತ್ತು ಸ್ಕಾರ್ಪೀನ್ ವರ್ಗದ 3 ಸಬ್‌ಮರೀನ್‌ಗಳ ಖರೀದಿಗೆ ಭಾರತವು ಸುಮಾರು 90 ಸಾವಿರ ಕೋಟಿ ರೂ. ವೆಚ್ಚ ಮಾಡಲಿದೆ ಎಂದು ಹೇಳಲಾಗುತ್ತಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಫೆಲ್ ಯುದ್ಧ ವಿಮಾನ ಖರೀದಿ – ಸುಸೇನ್ ಗುಪ್ತಾ ಮೇಲೆ ಲಂಚ ಸ್ವೀಕಾರ ಆರೋಪ

    ಮೂಲಗಳ ಪ್ರಕಾರ, ಭಾರತೀಯ ನೌಕಾ ಪಡೆಯು ನಾಲ್ಕು ಟ್ರೈನರ್ ಏರ್‌ಕ್ರಾಫ್ಟ್‌ಗಳ ಸಹಿತ 22 ಸಿಂಗಲ್ ಸೀಟೆಡ್ (ಏಕ ಆಸನಗಳನ್ನು ಒಳಗೊಂಡ) ರಫೇಲ್ ಯುದ್ಧ ವಿಮಾನಗಳನ್ನು ಹೊಂದಲಿದೆ. ದೇಶಾದ್ಯಂತ ಭದ್ರತಾ ಸವಾಲುಗಳ ದೃಷ್ಟಿಯಿಂದ ಭಾರತೀಯ ನೌಕಾಪಡೆಯು ಕೊರತೆ ಎದುರಿಸುತ್ತಿರುವ ಕಾರಣ ಈ ಯುದ್ಧ ವಿಮಾನಗಳು ಮತ್ತು ಜಲಾಂತರ್ಗಾಮಿ ನೌಕೆಗಳ ಖರೀದಿಗೆ ಸರ್ಕಾರದ ಮೇಲೆ ರಕ್ಷಣಾಪಡೆಗಳು ಒತ್ತಡ ಹೇರುತ್ತಿದೆ ಎಂದು ತಿಳಿದುಬಂದಿದೆ.

    ವಿಮಾನಗಳನ್ನು ಹೊತ್ತೊಯ್ಯುವ ಐಎನ್‌ಎಸ್ ವಿಕ್ರಮಾದಿತ್ಯ ಮತ್ತು ವಿಕ್ರಾಂತ್ (INS Vikrant), ಮಿಗ್-19 ಫೈಟರ್‌ಜೆಟ್‌ಗಳನ್ನು ನಿರ್ವಹಣೆ ಮಾಡುತ್ತಿದೆ. ಈ ಎರಡೂ ಯುದ್ಧ ಹಡಗುಗಗಳಿಗೆ ರಫೇಲ್ ಯುದ್ಧವಿಮಾನಗಳ ಅಗತ್ಯವಿದೆ. ಈ ಮಧ್ಯೆ, ಸ್ಕಾರ್ಪೀನ್ ಕ್ಲಾಸ್ ಸಬ್‌ಮರೀನ್‌ಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ. ಪ್ರಾಜೆಕ್ಟ್-75ರ ಭಾಗವಾಗಿ ನೌಕಾಪಡೆಯು ಈ ಜಲಾಂತರ್ಗಾಮಿಗಳನ್ನ ಮುಂಬೈನ ಮಜಗಾಂವ್ ಡಾಕ್‌ಯಾರ್ಡ್‌ನಲ್ಲಿ ನಿರ್ಮಾಣಗೊಳ್ಳಲಿವೆ.

    26 ರಫೇಲ್ ಮತ್ತು ಸ್ಕಾರ್ಪೀನ್ ವರ್ಗದ 3 ಸಬ್‌ಮರೀನ್‌ಗಳ ಖರೀದಿಗೆ ಭಾರತವು ಸುಮಾರು 90 ಸಾವಿರ ಕೋಟಿ ರೂ. ವೆಚ್ಚ ಮಾಡಲಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಪೂರ್ಣ ಮಾತುಕತೆ ಒಪ್ಪಂದ ಮುಕ್ತಾಯಗೊಂಡ ನಂತರ ಅಂತಿಮ ವೆಚ್ಚ ಸ್ಪಷ್ಟವಾಗಲಿದೆ. ಈ ನಡುವೆ ಭಾರತವು ಈ ಒಪ್ಪಂದಲ್ಲಿ ರಿಯಾಯಿತಿ ಪಡೆದುಕೊಳ್ಳುವ ಸಾಧ್ಯತೆಗಳಿವೆ ಎಂದೂ ಹೇಳಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತದ ವಾಯುನೆಲೆಯಲ್ಲಿ ಫ್ರಾನ್ಸ್ ರಫೇಲ್‌ ಲ್ಯಾಂಡಿಂಗ್‌

    ಭಾರತದ ವಾಯುನೆಲೆಯಲ್ಲಿ ಫ್ರಾನ್ಸ್ ರಫೇಲ್‌ ಲ್ಯಾಂಡಿಂಗ್‌

    ನವದೆಹಲಿ: ಫ್ರಾನ್ಸಿನ ಮೂರು ರಫೇಲ್‌ ಯುದ್ಧ ವಿಮಾನಗಳು ತಮಿಳುನಾಡಿನ ಸೂಲೂರ್‌ನಲ್ಲಿರುವ ವಾಯುನೆಯಲ್ಲಿ ನಿಲುಗಡೆಯಾಗಿತ್ತು.

    ಮೂರು ರಫೇಲ್ ಜೆಟ್‌ ಒಳಗೊಂಡಂತೆ ಫ್ರೆಂಚ್ ವಾಯು ಪಡೆ ತಂಡವು ಪೆಸಿಫಿಕ್ ಸಾಗರದಲ್ಲಿ ನಡೆಸುತ್ತಿರುವ ಮೆಗಾ ಮಿಲಿಟರಿ ಕಾರ್ಯಾಚರಣೆಯ ಭಾಗವಾಗಿ ಸೂಲೂರಿನಲ್ಲಿ ಲ್ಯಾಂಡ್‌ ಆಗಿತ್ತು.

    ಮಿಲಿಟರಿ ಸಹಕಾರವನ್ನು ಹೆಚ್ಚಿಸಲು ಫ್ರಾನ್ಸ್ ಮತ್ತು ಭಾರತವು 2018 ರಲ್ಲಿ ಪರಸ್ಪರ ಲಾಜಿಸ್ಟಿಕ್ಸ್ ಬೆಂಬಲ ನೀಡಲು ಸಹಿ ಹಾಕಿತ್ತು. ಈ ಒಪ್ಪಂದಂತೆ ಫ್ರಾನ್ಸ್‌ ವಿಮಾನಗಳು ಭಾರತದಲ್ಲಿ ಲ್ಯಾಂಡ್‌ ಆಗಿವೆ.

    ಫ್ರೆಂಚ್ ವಾಯು ಮತ್ತು ಬಾಹ್ಯಾಕಾಶ ಪಡೆ ಇಂಡೋ-ಪೆಸಿಫಿಕ್‌ನಲ್ಲಿ ʼಪೆಗೇಸ್ 22ʼ ಹೆಸರಿನಲ್ಲಿ ಆಗಸ್ಟ್ 10 ರಿಂದ ಸೆಪ್ಟೆಂಬರ್ 18 ರವರೆಗೆ ಕಾರ್ಯಾಚರಣೆಯನ್ನು ನಡೆಸುತ್ತಿದೆ.

    72 ಗಂಟೆಯ ಒಳಗಡೆ( ಆಗಸ್ಟ್‌10 -12ರ ಒಳಗಡೆ) ಫ್ರಾನ್ಸ್‌ ಸೇನೆಯನ್ನು ಮೆಟ್ರೋಪಾಲಿಟನ್‌ ಫ್ರಾನ್ಸ್‌ನಿಂದ ನ್ಯೂ ಕ್ಯಾಲೆಡೋನಿಯಾಗೆ ನಿಯೋಜಿಸುವುದು ಈ ಕಾರ್ಯಾಚರಣೆಯ ಮೊದಲ ಹಂತವಾಗಿತ್ತು. ಫ್ರಾನ್ಸ್‌ ವಸಾಹತು ಆಗಿರುವ ನ್ಯೂ ಕ್ಯಾಲೆಡೋನಿಯಾ ಆಸ್ಟ್ರೇಲಿಯಾದ ಸಿಡ್ನಿಯಿಂದ 2 ಸಾವಿರ ಕಿ.ಮೀ ದೂರದಲ್ಲಿದೆ. ಇದನ್ನೂ ಓದಿ: ಈಗ ಚುನಾವಣೆ ನಡೆದರೆ ಎನ್‌ಡಿಎಗೆ 286, ಕರ್ನಾಟಕದಲ್ಲಿ ಬಿಜೆಪಿಗೆ 13 ಸ್ಥಾನ

    16,600 ಕಿಮೀ. ದೂರವನ್ನು ಕ್ರಮಿಸಲು ಫ್ರಾನ್ಸ್‌ ವಾಯುಪಡೆಯ ತಾಂತ್ರಿಕ ನಿಲುಗಡೆ ಮಾಡಿತ್ತು. ಆಗಸ್ಟ್ 10 ರ ಸಂಜೆ ಸೂಲೂರಿನಲ್ಲಿ ಲ್ಯಾಂಡಿಂಗ್ ಆದ ವಿಮಾನಗಳು ಆಗಸ್ಟ್ 11 ರ ಮುಂಜಾನೆ ಇಂಧನ ತುಂಬಿದ ಬಳಿಕ ಕ್ಯಾಲೆಡೋನಿಯಾಕ್ಕೆ ತೆರಳಿದೆ.

    ಫ್ರೆಂಚ್ ವಾಯುಪಡೆ ʼಪೆಗೇಸ್ 22ʼ ಬಳಿಕ ಆಗಸ್ಟ್ 17 ರಿಂದ ಸೆಪ್ಟೆಂಬರ್ 10 ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ʼಪಿಚ್ ಬ್ಲ್ಯಾಕ್ʼ ಸಮರಾಭ್ಯಾಸದಲ್ಲಿ ಭಾಗಿಯಾಗಲಿದೆ. ಭಾರತ ಸೇರಿದಂತೆ ಆಸ್ಟ್ರೇಲಿಯಾ, ಜಪಾನ್, ಅಮೆರಿಕ, ಜರ್ಮನಿ, ಇಂಡೋನೇಷ್ಯಾ, ಸಿಂಗಾಪುರ, ಇಂಗ್ಲೆಂಡ್‌, ದಕ್ಷಿಣ ಕೊರಿಯಾ ದೇಶಗಳು ಈ ಡ್ರಿಲ್‌ನಲ್ಲಿ ಭಾಗವಹಿಸಲಿವೆ.

    Live Tv
    [brid partner=56869869 player=32851 video=960834 autoplay=true]

  • ಬಿಟ್ ಕಾಯಿನ್ ಎಂದರೇನು? ನಮ್ಮಂತವರಿಗೆ ಸಿದ್ದರಾಮಯ್ಯನವರು ವಿವರಿಸಲಿ: ಪ್ರತಾಪ್ ಸಿಂಹ

    ಬಿಟ್ ಕಾಯಿನ್ ಎಂದರೇನು? ನಮ್ಮಂತವರಿಗೆ ಸಿದ್ದರಾಮಯ್ಯನವರು ವಿವರಿಸಲಿ: ಪ್ರತಾಪ್ ಸಿಂಹ

    ಮೈಸೂರು: ಬಿಟ್ ಕಾಯಿನ್ ಎಂದರೇನು? ಇದರ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿದೆ ಅದನ್ನು ನಮ್ಮಂತವರಿಗೆ ಮಹಾನ್ ಆರ್ಥಿಕ ತಜ್ಞ ಸಿದ್ದರಾಮಯ್ಯನವರು ವಿವರಿಸಲಿ, ಆರೋಪ ಮಾಡಿದವರು ಅವರೇ ನಮಗೆ ತಿಳಿಸಿಕೊಡಲಿ. ನನಗೆ ಆ ಬಗ್ಗೆ ಮಾಹಿತಿ ಇಲ್ಲ, ಹಾಗಾಗಿ ಕೇಳುತ್ತಿದ್ದೇನೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆರೋಪ ಮಾಡುತ್ತಿರುವುದರೊಂದಿಗೆ, ಕಾಂಗ್ರೆಸ್ ಮಾಧ್ಯಮಗಳ ಮೂಲಕ ನಿರೀಕ್ಷಣಾ ಜಾಮೀನು ಹಾಕುತ್ತಿದೆ. ಈ ಪ್ರಕರಣದಲ್ಲಿ ಗಂಭೀರವಾಗಿ ತನಿಖೆ ಮಾಡಿದರೆ, ಕಾಂಗ್ರೆಸ್‍ನವರೇ ಇದರಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ. ಈಗಾಗಲೇ ಮೊದಲ ಚಾರ್ಜ್ ಶೀಟ್‍ನಲ್ಲಿ ಕಾಂಗ್ರೆಸ್ ಮುಖಂಡರ ಮಕ್ಕಳ ಹೆಸರೆ ಉಲ್ಲೇಖ ಆಗಿದೆ. ಹೀಗಾಗಿ ಕಾಂಗ್ರೆಸ್ ನವರಿಗೆ ಭಯ ಶುರುವಾಗಿ ನಿರೀಕ್ಷಣಾ ಜಾಮೀನು ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣದಲ್ಲಿ ನನ್ನ ಹೆಸ್ರು ಬೇಕಾದ್ರೆ ಹೇಳಲಿ: ಡಿ.ಕೆ ಶಿವಕುಮಾರ್

    ರಫೇಲ್ ವಿಚಾರದಲ್ಲು ಕಾಂಗ್ರೆಸ್‍ನ ಅಮ್ಮ, ಮಗಾ ಹೀಗೆ ಮಾಡಿದರು. ತಾವು ಡೀಲ್ ಮಾಡಿಕೊಂಡು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದರು. ಈಗ ಅವರ ಡೀಲ್ ಬಯಲಾಗಿದೆ. ರಾಜ್ಯದಲ್ಲು ಅದೇ ತಂತ್ರವನ್ನು ಕಾಂಗ್ರೆಸ್ ಪ್ರಯೋಗಿಸುತ್ತಿದೆ. ಈ ಪ್ರಕರಣವು ಕಾಂಗ್ರೆಸ್ ಕೊರಳಿಗೆ ಸುತ್ತಿಕೊಳ್ಳುತ್ತಿದೆ. ಇದರಿಂದ ಕಾಂಗ್ರೆಸ್ ಬಿಜೆಪಿ ಮೇಲೆ ಮೊದಲೇ ಆರೋಪ ಮಾಡುತ್ತಿದ್ದಾರೆ. ನಮಗೆ ಬಿಟ್ ಕಾಯಿನ್ ಬಗ್ಗೆ ಮಹಾನ್ ಆರ್ಥಿಕಾ ತಜ್ಞರಾಗಿರುವ ಸಿದ್ದರಾಮಯ್ಯನವರು ನಮಗೆಲ್ಲರಿಗೂ ತಿಳಿಸಿಕೊಡಲಿ. ಬಸವರಾಜ ಬೊಮ್ಮಾಯಿ ಅವರ ಯಶಸ್ವಿ ಆಡಳಿತ ಸಹಿಸದೆ ಹೀಗೆ ಸುಳ್ಳು, ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ