Tag: ರಫೇಲ್ ಒಪ್ಪಂದ

  • ಬಡವರನ್ನು ಲೂಟಿ ಮಾಡಿದವರು ಈಗ ದೇಶ ಕೊಳ್ಳೆ ಹೊಡೆಯಲು ಒಂದಾಗಿದ್ದಾರೆ: ಇರಾನಿ

    ಬಡವರನ್ನು ಲೂಟಿ ಮಾಡಿದವರು ಈಗ ದೇಶ ಕೊಳ್ಳೆ ಹೊಡೆಯಲು ಒಂದಾಗಿದ್ದಾರೆ: ಇರಾನಿ

    ಹೈದರಾಬಾದ್: ಕುಟುಂಬದ ಲಾಭಕ್ಕಾಗಿ ಬಡವರನ್ನು ಲೂಟಿ ಮಾಡಿದವರು ಈಗ ದೇಶವನ್ನು ಕೊಳ್ಳೆ ಹೊಡೆಯಲು ಮಹಾಘಟಬಂಧನ್ ಮಾಡಿದ್ದಾರೆ ಎಂದು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

    ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸಂಘಟಿಸುವ ನಿಟ್ಟಿನಲ್ಲಿ ಮಾತನಾಡಿದ ಅವರು, ಬಡವರ ಅಭಿವೃದ್ಧಿಗೆ ಮೋದಿ ಸರ್ಕಾರ ಮಾಡಿರುವ ಕೆಲಸವನ್ನು ವಿರೋಧ ಪಕ್ಷಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಈ ಕಾರಣಕ್ಕಾಗಿ ವಿರೋಧಿಗಳೆಲ್ಲ ಒಂದಾಗಿದ್ದಾರೆಂದು ಅವರು ದೂರಿದರು.

    ಯಾರು ಭ್ರಷ್ಟಾಚಾರ ಹಾಗೂ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೋ ಅವರು ಪ್ರಧಾನ ಸೇವಕರಾದ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುತ್ತಿದ್ದಾರೆ. ಇಲ್ಲಿಯವರೆಗೆ ಆಡಳಿತ ನಡೆಸಿದ ಕಾಂಗ್ರೆಸ್ಸಿನ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದರು.

    ಗಾಂಧಿ ಕುಟುಂಬದ ಅಳಿಯ ರಾಬರ್ಟ್ ವಾದ್ರಾ ಅವರ ಅಕ್ರಮ ಆಸ್ಥಿಗಳಿಕೆ ವಿಚಾರವಾಗಿ ಪ್ರತಿಕಿಯಿಸಿ, ಶ್ರೀಮಂತರ ಮಧ್ಯೆ ವಾಸಿಸುತ್ತ ವರ್ಷಗಳಿಂದ ಬಡವರನ್ನು ಕೊಳ್ಳೆಹೊಡೆಯುತ್ತ ಬಂದಿದ್ದಾರೆ. ಅವರ ಕುಟುಂಬದ ಅಳಿಯ ಲಂಡನ್‍ನಲ್ಲಿ ಸಾಕಷ್ಟು ಆಸ್ತಿ ಖರೀದಿಸಿದ್ದಾರೆ. ಹೀಗಿರುವಾಗ ಇಂತವರು ಪ್ರಧಾನಮಂತ್ರಿಗಳ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಫೇಲ್ ಒಪ್ಪಂದದಲ್ಲಿ 30 ಸಾವಿರ ಕೋಟಿ ಕಳ್ಳತನ: ರಾಹುಲ್ ಗಾಂಧಿ

    ರಫೇಲ್ ಒಪ್ಪಂದದಲ್ಲಿ 30 ಸಾವಿರ ಕೋಟಿ ಕಳ್ಳತನ: ರಾಹುಲ್ ಗಾಂಧಿ

    – ನಾನು ಬಡಬಡಿಸುತ್ತಿದ್ದೇನೆ ಅಂತ ನಿಮಗೆ ಅನಿಸುತ್ತಿದೆಯೇ?
    – ಮೋದಿ ವಿರುದ್ಧ ಮತ್ತೆ ಕಿಡಿಕಾರಿದ ರಾಹುಲ್ ಗಾಂಧಿ

    ನವದೆಹಲಿ: ರಫೇಲ್ ಡಿಲ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 30 ಸಾವಿರ ಕೋಟಿ ರೂ. ಕಳ್ಳತನ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಫೇಲ್ ಹಗರಣದಲ್ಲಿ ಪ್ರಧಾನಿ ಮೋದಿ ಮತ್ತು ಪ್ರಧಾನ ಮಂತ್ರಿ ಕಚೇರಿ ಭಾಗಿಯಾಗಿದೆ ಎಂಬ ಮಾಧ್ಯಮವೊಂದರ ತನಿಖಾ ವರದಿಯನ್ನು ಇಟ್ಟುಕೊಂಡು ಆರೋಪಿಸಿದ್ದಾರೆ. ಇದನ್ನು ಓದಿ: ಸೈನಿಕರಿಗೆ ಬುಲೆಟ್ ಪ್ರೂಫ್ ಜಾಕೆಟ್ ನೀಡಲು ಆಗದವರು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾತನಾಡುತ್ತಾರೆ: ಮೋದಿ 

    ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಹಗರಣ ನಡೆದಿದೆ ಅಂತ ಸುಮಾರು ದಿನಗಳಿಂದ ಆರೋಪ ಮಾಡುತ್ತಾ ಬಂದಿದ್ದೇವೆ. ಮಾಧ್ಯಮದ ವರದಿಯ ಪ್ರಕಾರ ಪ್ರಧಾನಿ ಮೋದಿ ವಂಚನೆ ಮಾಡಿರುವುದು ಸ್ಪಷ್ಟವಾಗುತ್ತದೆ. ಅದನ್ನು ಉದ್ಯಮಿ ಅನಿಲ್ ಅಂಬಾನಿ ಅವರಿಗೆ ನೀಡಿದ್ದಾರೆ. ಈ ಒಪ್ಪಂದಲ್ಲಿ ಪ್ರಧಾನಿ ಮೋದಿ ಏಕೆ ಭಾಗಿಯಾಗಿದ್ದಾರೆ. ಉದ್ಯಮಿ ಅನಿಲ್ ಅಂಬಾನಿ ಅವರಿಗಾಗಿಯೇ ಭಾಗಿಯಾಗಿದ್ದಾರೇ ಹೊರತು, ದೇಶದ ಜನತೆ, ಸೈನಿಕರಿಗಾಗಿ ಅಲ್ಲ. ಈ ಮೂಲಕ ಚೌಕಿದಾರ ಒಬ್ಬ ಕಳ್ಳ ಎನ್ನುವುದು ಸಾಬೀತಾಗುತ್ತದೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ಮೋದಿ ಅವರು ಸುಳ್ಳು ಹೇಳುತ್ತಲೇ ಇದ್ದಾರೆ ಎಂದು ಕುಟುಕಿದರು.

    ಪ್ರಧಾನಿ ಮೋದಿ ಅವರು ಫ್ರಾನ್ಸ್ ಜೊತೆಗೆ ಮಾತುಕತೆ ನಡೆಸಿದ್ದಾರೆ. ಆದರೆ ನಮ್ಮ ದೇಶದ ವಾಯು ಪಡೆಯ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿಲ್ಲ. ಅನಿಲ್ ಅಂಬಾನಿ ಅವರಿಗೆ ಗುತ್ತಿಗೆ ಸಿಗಬೇಕು ಅಂತ ಹೇಳಿದ್ದಾರೆ ಎಂದು ಫ್ರಾನ್ಸ್ ನ ಮಾಜಿ ಅಧ್ಯಕ್ಷರು ಬಹಿರಂಗಪಡಿಸಿದ್ದಾರೆ ಎಂದು ರಾಹುಲ್ ಗಾಂಧಿ ಅಂತಾ ಹೇಳಿದರು.

    ಎನ್‍ಡಿಎ ಅಧಿಕಾರ ಅವಧಿಯಲ್ಲಿ ಒಂದೇ ಒಂದು ರಕ್ಷಣಾ ಒಪ್ಪಂದ ಪ್ರಾಮಾಣಿಕವಾಗಿ ನಡೆದಿಲ್ಲ. ಗೋವಾ ಸಿಎಂ ಮನೋಹರ್ ಪರೀಕರ್ ಭೇಟಿ ಮಾಡಿದಾಗ ರಫೆಲ್ ಒಪ್ಪಂದದ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಅವರ ಆರೋಗ್ಯ ವಿಚಾರಿಸಿ ಬಂದೆ. ನಾನು ಬಡಬಡಿಸುತ್ತಿದ್ದೇನೆ ಅಂತ ನಿಮಗೆ ಅನಿಸುತ್ತಿದೆಯೇ? ನನ್ನಲ್ಲಿರುವ ಗುಣಗಳನ್ನು ಹಾಗೂ ಪ್ರಧಾನಿ ಮೋದಿ ಅವರ ಗುಣಗಳನ್ನು ನೋಡಿ. ಯಾರು ಬಡಬಡಿಸುತ್ತಿದ್ದಾರೆ ಎನ್ನುವುದು ಅರ್ಥವಾಗುತ್ತದೆ ಎಂದು ತಿರುಗೇಟು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಫೇಲ್ ಚರ್ಚೆಗೆ ಹೆದರಿ ಪ್ರಧಾನಿ ಮನೆಯಲ್ಲಿದ್ದಾರೆ: ರಾಹುಲ್ ಗಾಂಧಿ

    ರಫೇಲ್ ಚರ್ಚೆಗೆ ಹೆದರಿ ಪ್ರಧಾನಿ ಮನೆಯಲ್ಲಿದ್ದಾರೆ: ರಾಹುಲ್ ಗಾಂಧಿ

    ನವದೆಹಲಿ: ಇಂದು ಲೋಕಸಭೆಯಲ್ಲಿ ರಫೇಲ್ ಒಪ್ಪಂದದ ಕುರಿತಾಗಿ ಚರ್ಚೆ ನಡೆಸಲಾಯ್ತು. ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹೊಸ ವರ್ಷದಂದು ಪ್ರಧಾನಿ ಮೋದಿಯವರು ನೀಡಿದ ಸಂದರ್ಶನದಲ್ಲಿ ಸಿದ್ಧಪಡಿಸಲಾಗಿತ್ತು. ಅದೊಂದು ಸ್ಕ್ರಿಪ್ಟ್ ಸಂದರ್ಶನವಾಗಿದ್ದು, ಅಲ್ಲಿ ರಫೇಲ್ ವಿಚಾರವಾಗಿ ಕೇಳಲ್ಪಟ್ಟ ಪ್ರಶ್ನೆಗಳಿಗೆ ಮೋದಿಯವರು ಉತ್ತರಿಸಿಲ್ಲ. ಲೋಕಸಭೆಯಲ್ಲಿ ನಮ್ಮನ್ನು ಎದುರಿಸುವ ಸಾಮರ್ಥ್ಯ ಅವರಿಗಿಲ್ಲ. ಹಾಗಾಗಿ ಮನೆಯ ಕೋಣೆಯೊಂದರಲ್ಲಿ ಅವಿತುಕೊಂಡು ಕುಳಿತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಇಂದು ಲೋಕಸಭೆಯ ಸದನದಲ್ಲಿಯೂ ಪ್ರಧಾನಿಗಳು ಭಾಗಿಯಾಗಿಲ್ಲ. ಇತ್ತ ರಾಹುಲ್ ಗಾಂಧಿ ಮಾತನಾಡುತ್ತಿರುವ ವೇಳೆ ಕಾಂಗ್ರೆಸ್ ಸೇರಿದಂತೆ ಇತರೆ ವಿಪಕ್ಷ ನಾಯಕರು ಕಾಗದದಿಂದ ಮಾಡಿದ ವಿಮಾನಗಳು ಬಿಜೆಪಿಯತ್ತ ಹಾರಿಸುವ ಮೂಲಕ ಆಕ್ರೋಶ ಹೊರಹಾಕಿದರು. ಕಾಗದದ ವಿಮಾನ ಹಾರಿಸಿದ್ದರಿಂದ ಗರಂ ಆದ ಸ್ಪೀಕರ್ ಸುಮಿತ್ರಾ ಮಹಾಜನ್, ಚಿಕ್ಕವರಿದ್ದಾಗ ನೀವು ವಿಮಾನ ಹಾರಿಸಿಲ್ವಾ? ಈ ರೀತಿ ಮಾಡಕೂಡದು ಎಂದು ಎಚ್ಚರಿಕೆ ನೀಡಿದರು.

    ರಾಹುಲ್ ಗಾಂಧಿ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಅರುಣ್ ಜೇಟ್ಲಿ, ರಫೇಲ್ ಒಪ್ಪಂದದ ಮೊತ್ತ ಯುಪಿಎ ಸರ್ಕಾರಕ್ಕಿಂತ ಕಡಿಮೆ ಇದೆ. ಈಗಾಗಲೇ ಆಗಸ್ಟ್ ವೆಸ್ಟಲ್ಯಾಂಡ್ ಹಗರಣದಲ್ಲಿ ನಿಮ್ಮ ಬಣ್ಣ ಬಯಲಾಗಿದೆ ಎಂದು ತಿರುಗೇಟು ನೀಡಿದರು.

    ಸರ್ಕಾರದ ಆಡಳಿತದ ಮೇಲೆ ಪ್ರಶ್ನೆ ಮಾಡೋದು ನನ್ನ ಕೆಲಸ. ಮೋದಿಯವರು ಸುಮಾರು ಒಂದೂವರೆ ಗಂಟೆಗಳ ಕಾಲದ ಸಂದರ್ಶನದಲ್ಲಿ ಹಲವು ವಿಚಾರಗಳನ್ನು ಮಾತಾಡಿದ್ದಾರೆ. ಎಲ್ಲಿಯೂ ರಫೇಲ್ ವಿಚಾರವಾಗಿ ಪ್ರಶ್ನೆಗಳನ್ನು ಕೇಳಲಿಲ್ಲ. ಇಡೀ ದೇಶವೇ ರಫೇಲ್ ಬಗ್ಗೆ ಪ್ರಶ್ನೆ ಕೇಳುತ್ತಿದೆ. ಇದೂವರೆಗೂ ಮಾತ್ರ ಪ್ರಧಾನಿಗಳು ಉತ್ತರ ನೀಡುತ್ತಿಲ್ಲ ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೇಶದ ಜನತೆಯ ದಾರಿತಪ್ಪಿಸಿದ ರಾಹುಲ್‍ಗೆ ಮುಖಭಂಗ: ಆರ್. ಅಶೋಕ್

    ದೇಶದ ಜನತೆಯ ದಾರಿತಪ್ಪಿಸಿದ ರಾಹುಲ್‍ಗೆ ಮುಖಭಂಗ: ಆರ್. ಅಶೋಕ್

    ಹುಬ್ಬಳ್ಳಿ: ರಫೇಲ್ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಸ್ವಗತಾರ್ಹವಾದುದು. ಈ ವಿಚಾರದಲ್ಲಿ ರಾಹುಲ್ ಗಾಂಧಿ ದೇಶದ ಜನತೆಯ ದಾರಿ ತಪ್ಪಿಸುವ ಕೆಲಸಕ್ಕೆ ಕೈ ಹಾಕಿದ್ದರು. ಆದರೆ ಈಗ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿಗೆ ದೊಡ್ಡ ಮುಖಭಂಗವಾಗಿದೆ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ.

    ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಇದುವರೆಗೂ ಯಾವುದೇ ಕಪ್ಪು ಚುಕ್ಕೆ ಇಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವರ ವರ್ಚಸ್ಸು ಕುಂದಿಸುವ ಯತ್ನ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಆದೇಶದಿಂದ ಕಾಂಗ್ರೆಸ್ ಗೆ ಅವಮಾನವಾಗಿದೆ. ಇನ್ನು ಮುಂದಾದರೂ ಸೈನಿಕರು ಹಾಗೂ ದೇಶದ ಭದ್ರತೆ ಬಗ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ರಫೆಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಯಾವುದೇ ಸಂಶಯ ವಿಚಾರಗಳಿಲ್ಲವೆಂದು ಸುಪ್ರೀಂ ಸ್ಪಷ್ಟಪಡಿಸಿದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ : ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?

    ದೇಶದ ಬಗ್ಗೆ ದೇಶದ ರಕ್ಷಣಾ ವ್ಯವಸ್ಥೆ ಬಗ್ಗೆ ರಾಹುಲ್ ಗಾಂಧಿಯವರು ಹಗುರವಾಗಿ ಮಾತನಾಡುವುದನ್ನು ಮೊದಲು ನಿಲ್ಲಿಸಲಿ. ರಾಹುಲ್ ಗಾಂಧಿ ದೇಶದ ಜನರು ಹಾಗೂ ಸೈನಿಕರ ಬಳಿ ಕ್ಷಮಾಪಣೆ ಕೇಳಬೇಕು. ಇದನ್ನೇ ಹಗರಣ ಎಂಬಂತೆ ಕಾಂಗ್ರೆಸ್ಸಿನವರು ಬಿಂಬಿಸಿದ್ದರು. ಮೋದಿಯವರ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಇನ್ನಾದರೂ ಕಾಂಗ್ರೆಸ್ಸಿನವರು ದೇಶದ ಭದ್ರತೆ ಹಾಗೂ ದೇಶದ ಹಿತರಕ್ಷಣೆಗೆ ಗೌರವ ನೀಡಬೇಕು. ರಾಫೆಲ್ ಡೀಲ್ ನಲ್ಲಿ ಕಾಂಗ್ರೆಸ್ ಆಡಿದ ನಾಟಕಕ್ಕೆ ಇಂದು ತೆರೆ ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ : ಸುಳ್ಳು ಹೇಳೋ ಮಂದಿಯ ಕೆನ್ನೆಗೆ ಬಾರಿಸಿದಂತಿದೆ ರಫೇಲ್ ತೀರ್ಪು: ಕೈ ವಿರುದ್ಧ ಶಾ ಕಿಡಿ

    ಮಂತ್ರಿ ಮಂಡಲ ರಚನೆ ವಿಚಾರಕ್ಕೆ ಪ್ರತಿಕ್ರಯಿಸಿ, ಪದೇ ಪದೇ ಮಂತ್ರಿ ಮಂಡಲ ರಚನೆ ಮಾಡುತ್ತೇವೆಂದು ಹೇಳುತ್ತಿದ್ದಾರೆ. ನಿಮ್ಮ ಸರ್ಕಾರ ಎಷ್ಟು ಗಟ್ಟಿಯಾಗಿದೆ ಎಂಬುದನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಮಂತ್ರಿ ಮಂಡಲ ರಚನೆ ಮಾಡಿದ ದಿನವೇ ಈ ಸರ್ಕಾರದ ನಟ್ಟು ಬೋಲ್ಟು ಕಳಚಿ ಬೀಳುತ್ತವೆ. ಜಾರಕಿಹೊಳಿ ಹಾಗೂ ಅವರ ತಂಡ ಬಿಜೆಪಿಗೆ ಬರುವುದಾದರೆ ಬರಲಿ. ನಮ್ಮ ಪಕ್ಷದ ನಿಲುವುಗಳನ್ನು ಒಪ್ಪುವುದಾದರೆ ಬಿಜೆಪಿಗೆ ಬರಲಿ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಚ್‍ಎಎಲ್ ಕುರಿತ 4 ಪ್ರಶ್ನೆಗಳಿಗೆ ಉತ್ತರಿಸಿ ರಾಹುಲ್ ಜೀ: ಕರ್ನಾಟಕ ಬಿಜೆಪಿಯಿಂದ ಸವಾಲು

    ಎಚ್‍ಎಎಲ್ ಕುರಿತ 4 ಪ್ರಶ್ನೆಗಳಿಗೆ ಉತ್ತರಿಸಿ ರಾಹುಲ್ ಜೀ: ಕರ್ನಾಟಕ ಬಿಜೆಪಿಯಿಂದ ಸವಾಲು

    ಬೆಂಗಳೂರು: ರಫೇಲ್ ಒಪ್ಪಂದವನ್ನು ಖಾಸಗಿ ಸಂಸ್ಥೆಗೆ ನೀಡಿ ಮೋದಿ ಸರ್ಕಾರ ಭ್ರಷ್ಟಾಚಾರ ಎಸಗಿದೆ ಎಂದು ಆರೋಪಿಸಿದ ಬೆನ್ನಲ್ಲೇ ಕರ್ನಾಟಕ ಬಿಜೆಪಿ ರಾಹುಲ್ ಗಾಂಧಿ ಮುಂದೆ 4 ಪ್ರಶ್ನೆಗಳನ್ನು ಕೇಳಿ ಉತ್ತರಿಸಿ ಎಂದು ಬಹಿರಂಗ ಸವಾಲು ಎಸೆದಿದೆ.

    ರಾಹುಲ್ ಗಾಂಧಿ ಅನಧಿಕೃತವಾಗಿ ಸಂವಾದ ನಡೆಸುವ ಮೂಲಕ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡರಾದ ಶಾಸಕ ಸಿಟಿ ರವಿ, ಮುಖಂಡ ಅಶ್ವತ್ಥ ನಾರಾಯಣ್ ಅವರು ಈ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

    ಬಿಜೆಪಿಯ 4 ಪ್ರಶ್ನೆಗಳು
    1. ಜನವರಿ 2012ರಲ್ಲಿ, ಭಾರತೀಯ ವಾಯು ಸೇನೆಗಾಗಿ 126 ಎಂಎಂ ಆರ್‍ಸಿಎ ವಿಮಾನಗಳನ್ನು ಖರೀದಿಸುವುದಕ್ಕಾಗಿ ದಸಾಲ್ಟ್ ಏವಿಯೇಷನ್ ಸಂಸ್ಥೆಯನ್ನು ಯುಪಿಎ ಸರ್ಕಾರ ಎಲ್1 ಎಂದು ಘೋಷಿಸಿತ್ತು. ಆದರೆ 2014 ರ ವರೆಗೂ ಒಪ್ಪಂದವನ್ನು ಅಂತಿಮಗೊಳಿಸಿರಲಿಲ್ಲ. ಇದು ರಾಷ್ಟ್ರದ ಸುರಕ್ಷತೆಯೊಂದಿಗೆ ಯುಪಿಎ ಸರ್ಕಾರ ಮಾಡಿಕೊಂಡ ರಾಜಿಯಲ್ಲವೇ?

    2. ನೀವು ಇಂದು ಎಚ್‍ಎಎಲ್ ನೌಕರರೊಂದಿಗೆ ಸಂವಾದ ಕಾರ್ಯಕ್ರಮ ಆಗಮಿಸಿದ್ದೀರಿ. ಆದರೆ ಯುಪಿಎ ಸರ್ಕಾರವಿದ್ದಾಗ 2012-2014 (ಅವಧಿಯೊಗಳಗೆ) ದಸಾಲ್ಟ್ ಮತ್ತು ಎಚ್‍ಎಎಲ್ ನಡುವಿನ ರಫೇಲ್ ಕುರಿತ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಪ್ರಯತ್ನಿಸದೇ ಇದ್ದದ್ದು ನೀವು ಎಚ್‍ಎಎಲ್ ಗೆ ಮಾಡಿದ ದ್ರೋಹವಲ್ಲವೇ? ಈ ಮೂಲಕ ನಿಮ್ಮ ಸರ್ಕಾರ ಎಚ್‍ಎಎಲ್ ಗೆ ದ್ರೋಹ ಬಗೆದು ಅವರನ್ನು ರಫೇಲ್ ಒಪ್ಪಂದದಿಂದ ಆಚೆ ದೂಡಿದೆ ಅಲ್ಲವೇ?

    3. ಯುಪಿಎ ಸರ್ಕಾರ 126ಎಂಎಂಆರ್‍ಸಿಎ ಖರೀದಿಗೆ 2007ರಲ್ಲೇ ಪ್ರಸ್ತಾಪ (ಆರ್‍ಎಫ್‍ಪಿ) ಹೊರಡಿಸಿತ್ತು. ಆದರೆ 2014ರಲ್ಲಿ ನಿಮ್ಮ ಸರ್ಕಾರದ ಪತನದವರೆಗೂ, ರಫೇಲ್ ಒಪ್ಪಂದವನ್ನು ಅಂತಿಮಗೊಳಿಸದೇ ಭಾರತದೊಂದಿಗೆ ಇಂತಹ ಒಪ್ಪಂದಗಳನ್ನು ಕೈಗೊಳ್ಳವುದು ಕಠಿಣ ಎಂಬಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಜೊತೆ ವ್ಯವಹಾರ ನಡೆಸುವ ರೀತಿ ಕುರಿತು ದುರಭಿಪ್ರಾಯವನ್ನು ಮೂಡಿಸಿದ್ದು ಯಾಕೆ?

    4. ಸಾರ್ವಜನಿಕ ಸಭೆಗಳಲ್ಲಿ ರಫೇಲ್ ಖರೀದಿ ಕುರಿತ ಸುಳ್ಳು ಮತ್ತು ಅಸಮಂಜಸ ಹೇಳಿಕೆಗಳನ್ನು ಕೊಡುತ್ತಾ ಬಂದಿದ್ದೀರಿ. ನೀವು ಹೊರಡಿಸಿದ 2007ರ ಆರ್‍ಎಫ್‍ಪಿ ಪ್ರಕಾರ ಗ್ರೀನ್ ವಿಮಾನ ದರ 737 ಕೋಟಿ ರೂ.ಗಳು, 2015 ರಲ್ಲಿ ಅದೇ ಗ್ರೀನ್ ರಫೇಲ್ ವಿಮಾನಕ್ಕೆ ಎನ್‍ಡಿಎ ಸರ್ಕಾರ ಅಂತಿಮಗೊಳಿಸಿದ್ದು 670 ಕೋಟಿ ರೂ., ಅಂದರೆ 9% ಕಡಿಮೆ ದರ. ಈ ಎಲ್ಲಾ ಸತ್ಯಗಳನ್ನು ಮುಚ್ಚಿಟ್ಟು ದೇಶದ ಜನತೆಯನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದೀರಲ್ಲವೇ?

     

  • ನಟಿ ರಮ್ಯಾ ವಿರುದ್ಧ ಎಫ್‍ಐಆರ್ ದಾಖಲು!

    ನಟಿ ರಮ್ಯಾ ವಿರುದ್ಧ ಎಫ್‍ಐಆರ್ ದಾಖಲು!

    ಲಕ್ನೋ: ರಫೇಲ್ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಮಂಡ್ಯ ಮಾಜಿ ಸಂಸದೆ ರಮ್ಯಾ, ಪ್ರಧಾನಿ ಮೋದಿ ಅವರನ್ನು ಟೀಕಿಸಿ ಅಪೇಕ್ಷರ್ಹ ಫೋಟೋವನ್ನು ಟ್ವೀಟ್ ಮಾಡಿದ್ದಕ್ಕೆ ಉತ್ತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಲಕ್ನೋ ಮೂಲ ವಕೀಲರಾದ ಸೈಯದ್ ರಿಜ್ವಾನ್ ಅಹ್ಮದ್ ಮಂಗಳವಾರ ಗೌಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸದ್ಯ ರಮ್ಯಾ ಅವರ ವಿರುದ್ಧ ಐಪಿಸಿ ಸೆಕ್ಷನ್ 67 (ಮಾಹಿತಿ ತಂತ್ರಜ್ಞಾನದ ಕಾಯ್ದೆ), 2008 ಮತ್ತು ಸೆಕ್ಷನ್ 124ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ರಫೇಲ್ ಒಪ್ಪಂದ ಕುರಿತು ರಮ್ಯಾ ಸೆಪ್ಟೆಂಬರ್ 24 ರಂದು ಮೋದಿ ಅವರ ಮೇಣದ ಪ್ರತಿಮೆಯ ಫೋಟೋ ಟ್ವೀಟ್ ಮಾಡಿದ್ದರು. ಈ ಫೋಟೋದಲ್ಲಿ ಮೋದಿ ಸ್ವತಃ ತಮ್ಮ ಪ್ರತಿಮೆ ಮೇಲೆ ಕಳ್ಳ ಎಂದು ಬರೆಯುವಂತೆ ಚಿತ್ರಿಸಲಾಗಿದೆ. ಈ ಫೋಟೋಗೆ ಕಳ್ಳ ಪ್ರಧಾನಿ ಸುಮ್ಮನಿದ್ದಾರೆ (#ChorPMChupHai) ಎಂಬ ಹ್ಯಾಷ್ ಟ್ಯಾಗನ್ನು ರಮ್ಯಾ ಬಳಸಿ ಟ್ವೀಟ್ ಮಾಡಿದ್ದರು.

    ರಮ್ಯಾ ಮಾಡಿದ ಟ್ವಿಟ್ ನಲ್ಲಿ ನರೇಂದ್ರ ಮೋದಿ ವಿರುದ್ಧ ದ್ವೇಷ ಕಾರುವ ಅಂಶವಿದೆ ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಿಜ್ವಾನ್ ಅಹ್ಮದ್ ದೂರು ನೀಡಿದ್ದರು.

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡ ರಫೇಲ್ ಒಪ್ಪಂದ ಕುರಿತು ಮೋದಿ ಸರ್ಕಾರದ ವಿರುದ್ಧ ಅರೋಪಗಳ ಸುರಿಮಳೆ ಮಾಡಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ 2012ರಲ್ಲಿ ಫ್ರಾನ್ಸ್’ನ ಡಸಾಲ್ಟ್ ಏವಿಯೇಶನ್ ಸಂಸ್ಥೆಯೊಂದಿಗೆ 126 ಮಧ್ಯಮ ಶ್ರೇಣಿಯ ಬಹುಮುಖಿ ಯುದ್ಧ ವಿಮಾನಗಳ (ಎಂಎಂಆರ್’ಸಿಎ-ಮೀಡಿಯಂ ಮಲ್ಟಿ ರೋಲ್ ಕಾಂಬಾಟ್ ಏರ್’ಕ್ರಾಫ್ಟ್) ಖರೀದಿಗೆ ಒಪ್ಪಂದ ಮಾಡಿಕೊಟ್ಟಿತ್ತು. ಮಾತುಕತೆಯ ನಿಯಮಗಳ ಪ್ರಕಾರ ಡಸಾಲ್ಟ್ ಏವಿಯೇಶನ್ ಸಂಸ್ಥೆಯು 18 ರಫೇಲ್ ಜೆಟ್‍ಗಳನ್ನು ಹಾರಾಡಲು ಸನ್ನದ್ಧವಾಗಿರುವ ಸ್ಥಿತಿಯಲ್ಲಿ ಭಾರತಕ್ಕೆ ಪೂರೈಸಬೇಕು ಹಾಗೂ ಭಾರತದ ಎಚ್‍ಎಎಲ್‍ನೊಂದಿಗೆ ಉಳಿದ 108 ಯುದ್ಧ ವಿಮಾನಗಳನ್ನು ಭಾರತದಲ್ಲಿಯೇ ತಯಾರಿಸಬೇಕೆನ್ನುವ ಷರತ್ತನ್ನು ಹಾಕಿತ್ತು ಎಂದು ರಾಹುಲ್ ಆರೋಪಿಸಿದ್ದಾರೆ.

    ಕಾಂಗ್ರೆಸ್ ಆರೋಪಗಳನ್ನು ಅಲ್ಲಗೆಳೆದಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಮಾತನಾಡಲು ಯಾವುದೇ ವಿಷಯಗಳು ಸಿಗಲಿಲ್ಲ. ಹೀಗಾಗಿ ಅವರು ರಫೇಲ್ ಒಪ್ಪಂದದಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಹೇಳಲು ಮುಂದಾಗಿದೆ. ಆದರೆ ನಮ್ಮದು ದೇಶಕಂಡ ಅತ್ಯಂತ ಸ್ವಚ್ಛ ಹಾಗೂ ಭ್ರಷ್ಟಾಚಾರ ಮುಕ್ತ ಸರ್ಕಾರ ಎಂಬುದು ಜನರಿಗೆ ಗೊತ್ತಿದೆ. ಹತಾಶಾ ಮನೋಭಾವನೆಗೆ ತಲುಪಿರುವ ಕಾಂಗ್ರೆಸ್ ನಮ್ಮ ಸರ್ಕಾರದಿಂದ ಕಲಿಯಬೇಕಾದ ಪಾಠಗಳು ಸಾಕಷ್ಟು ಇವೆ ಎಂದು ಹೇಳಿದ್ದರು.

    ಎಚ್‍ಎಎಲ್ ಸಂಸ್ಥೆಗೆ ರಫೇಲ್ ಯುದ್ಧ ವಿಮಾನಗಳನ್ನು ನಿರ್ಮಿಸುವ ಸಾಮಥ್ರ್ಯವಿಲ್ಲವೆಂಬುದೇ ಪ್ರಮುಖ ಕಾರಣ. ಅಲ್ಲದೇ ಎಚ್‍ಎಎಲ್‍ನಲ್ಲಿ ಉತ್ಪಾದನೆಯಾಗುವ ವಿಮಾನಗಳ ವೆಚ್ಚವು ಫ್ರಾನ್ಸ್ ನಲ್ಲಿ ತಯಾರಾಗುವ ವಿಮಾನಗಳ ವೆಚ್ಚಕ್ಕಿಂತ ದುಬಾರಿಯಾಗಿತ್ತು. ಸಂಸ್ಥೆಗೆ ವಿಮಾನಗಳ ಉತ್ಪಾದನೆಗೆ ಬೇಕಾಗುವ ಸಂಪನ್ಮೂಲಗಳ ಬಗ್ಗೆ ಅಂದಿನ ಕೇಂದ್ರ ಸರ್ಕಾರ ತಲೆ ಕೆಡಿಸಿಕೊಂಡಿರಲಿಲ್ಲ. ಇದಲ್ಲದೇ 2013ರ ರಕ್ಷಣಾ ಸಚಿವ ಎ.ಕೆ.ಆಂಟನಿಯವರು ಪದೇ ಪದೇ ಯುದ್ಧ ವಿಮಾನಗಳ ಖರೀದಿ ಮಾತುಕತೆಯಲ್ಲಿ ಮಧ್ಯ ಪ್ರವೇಶಿಸುತ್ತಿದ್ದರಿಂದ ಫ್ರಾನ್ಸ್ ಕಂಪೆನಿಯು ಜಂಟಿ ತಯಾರಿಕೆಗೆ ಹಿಂದೇಟು ಹಾಕಿತು ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭವಿಷ್ಯದ ಪ್ರಧಾನಿ ರಾಹುಲ್ ಗಾಂಧಿಗೆ ಮೋದಿ ಹೆದರಿದ್ದಾರೆ: ಪಾಕ್ ಮಾಜಿ ಸಚಿವ

    ಭವಿಷ್ಯದ ಪ್ರಧಾನಿ ರಾಹುಲ್ ಗಾಂಧಿಗೆ ಮೋದಿ ಹೆದರಿದ್ದಾರೆ: ಪಾಕ್ ಮಾಜಿ ಸಚಿವ

    ನವದೆಹಲಿ: ಕಾಶ್ಮೀರದ ಪೊಲೀಸ್ ಅಧಿಕಾರಿಗಳನ್ನು ಉಗ್ರರು ಹತ್ಯೆ ಮಾಡಿದ ಬಳಿಕ ಭಾರತ ಪಾಕಿಸ್ತಾನ ನಡುವಿನ ಮಾತುಕತೆ ರದ್ದು ಮಾಡಿರುವ ಕುರಿತು ಪಾಕ್ ಮಾಜಿ ಸಚಿವ ರೆಹಮಾನ್ ಮಲಿಕ್ ಕಿಡಿಕಾರಿದ್ದು, ಭಾರತದ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಅವರಿಗೆ ಮೋದಿ ಹೆದರಿದ್ದಾರೆ ಎಂದು ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುದೊಡ್ಡ ಹಗರಣ ಎಂದು ರಫೇಲ್ ಒಪ್ಪಂದ ಕುರಿತು ಆರೋಪಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿರ ವೀಡಿಯೋ ಹಂಚಿಕೊಂಡಿರುವ ರೆಹಮಾನ್ ಮಲಿಕ್, ಮೋದಿ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ಟ್ವಿಟ್ಟರಿನಲ್ಲಿ ರಾಹುಲ್ ಗಾಂಧಿ ಅವರ ಪತ್ರಿಕಾಗೋಷ್ಠಿಯ ವೀಡಿಯೋ ಪೋಸ್ಟ್ ಮಾಡಿ, ರಾಹುಲ್ ಅವರನ್ನು ನಿಂದನೆ ಮಾಡುವವರು ಈ ವೀಡಿಯೋ ನೋಡಿ. ರಾಹುಲ್ ಒಬ್ಬ ಲೀಡರ್, ನಾನು ಹೇಳಿದ್ದನ್ನೇ ಅವರು ಹೇಳುತ್ತಿದ್ದಾರೆ. ಇದನ್ನು ನೋಡಿದ ಬಳಿಕವಾದರು ನನ್ನ ಬಳಿ ಕ್ಷಮೆ ಕೇಳಿ ಎಂದು ಹೇಳಿದ್ದಾರೆ.

    ಈ ವೀಡಿಯೋ ಪೋಸ್ಟ್ ಮಾಡುವ ಮುನ್ನ ಮತ್ತೊಂದು ಟ್ವೀಟ್ ಮಾಡಿರುವ ಮಲಿಕ್, ರಾಹುಲ್ ಗಾಂಧಿ ನಿಮ್ಮ ಮುಂದಿನ ಪ್ರಧಾನಿ. ಪ್ರಧಾನಿ ಮೋದಿ, ರಾಹುಲ್‍ರನ್ನು ಕಂಡು ಹೆದರಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಸರಣಿ ಟ್ವೀಟ್ ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿರುವ ಮಲಿಕ್, ನನ್ನ ಕೆಲ ಟ್ವೀಟ್‍ಗಳು ಭಾರತವನ್ನು ಅಲುಗಾಡುವಂತೆ ಮಾಡಿದ್ದು ನನಗೆ ಸಂತಸ ತಂದಿದೆ. ನಾನು ಟ್ವೀಟ್ ಮಾಡುವ ಮೊದಲು ಪ್ರಧಾನಿ ಮೋದಿ ಹಾಗೂ ಆರ್‍ಎಸ್‍ಎಸ್ ಕೃತ್ಯಗಳ ಬಗ್ಗೆ ಕೆಲ ಭಾರತೀಯರಿಗೆ ಅರಿವೆ ಇರಲಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆಯೂ ಭಾರತದ ರಕ್ಷಣಾ ಸೇನೆ ಮುಖ್ಯಸ್ಥ ಬಿಪಿನ್ ರಾವತ್‍ರನ್ನು ಟಾರ್ಗೆಟ್ ಮಾಡಿದ್ದ ಮಲಿಕ್, ಬಿಪಿನ್ ಒಬ್ಬ ಸೋಮಾರಿ ಎಂದು ಆರೋಪಿಸಿದ್ದರು.

    ಮಲಿಕ್ ಶೇರ್ ಮಾಡಿರುವ ವೀಡಿಯೋದಲ್ಲಿ ರಾಹುಲ್ ಗಾಂಧಿ ರಫೇಲ್ ಒಪ್ಪಂದದಲ್ಲಿ ಪ್ರಧಾನಿ ಮೋದಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಮೋದಿ ರಫೇಲ್ ಒಪ್ಪಂದ ಮಾಡುವ ವೇಳೆ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗೋವಾದಲ್ಲಿ ಮೀನು ಖರೀದಿ ಮಾಡುತ್ತಿದ್ದರು ಎಂದು ವ್ಯಂಗ್ಯವಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

     

  • ರಫೇಲ್ ಡೀಲ್ ಬಗ್ಗೆ ಸುಮ್ನೆ ಮಾತಾಡ್ಬೇಡಿ- ಕಾಂಗ್ರೆಸ್ ನಾಯಕರಿಗೆ ರಿಲಯನ್ಸ್ ನೋಟಿಸ್

    ರಫೇಲ್ ಡೀಲ್ ಬಗ್ಗೆ ಸುಮ್ನೆ ಮಾತಾಡ್ಬೇಡಿ- ಕಾಂಗ್ರೆಸ್ ನಾಯಕರಿಗೆ ರಿಲಯನ್ಸ್ ನೋಟಿಸ್

    ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಬಹುದೊಡ್ಡ ಹಗರಣ ನಡೆದಿದ್ದು, ಹಗರಣದಲ್ಲಿ ಸಂಸ್ಥೆ ಭಾಗಿಯಾಗಿದೆ ಎಂದು ಆರೋಪ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ರಿಲಯನ್ಸ್ ನೋಟಿಸ್ ಜಾರಿ ಮಾಡಿದೆ.

    ರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧಿಸಿದಂತೆ ಸಂಸ್ಥೆಯ ಕುರಿತು ಆರೋಪ ಮಾಡುವ ವೇಳೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಲು ತಿಳಿಸಿರುವ ಸಂಸ್ಥೆ, ಈ ಕುರಿತು ಕಾನೂನು ಕ್ರಮ ಜರುಗಿಸುವ ಕುರಿತು ಎಚ್ಚರಿಕೆ ನೀಡಿದೆ.

    ರಫೇಲ್ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ತಪ್ಪು ಮಾಹಿತಿ ನೀಡಿದ್ದಾರೆ. ಅವರು ಮಾಡುತ್ತಿರುವ ಆರೋಪ ನಿರಾಧಾರವಾಗಿದೆ ಎಂದು ರಿಲಯನ್ಸ್ ಸಂಸ್ಥೆ ಈ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಆರೋಪದ ಕುರಿತು ರಿಲಯನ್ಸ್ ಸಂಸ್ಥೆಯ ಅಧ್ಯಕ್ಷ ಅನಿಲ್ ಅಂಬಾನಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದ ಬಳಿಕ ಕಾನೂನು ಕ್ರಮಕ್ಕೆ ಸಂಸ್ಥೆ ಮುಂದಾಗಿದೆ.

    ಈ ಸಂಬಂಧ ಟ್ವೀಟ್ ಮೂಲಕ ಉತ್ತರಿಸಿರುವ ಕಾಂಗ್ರೆಸ್ ನಾಯಕ ಜೈವೀರ್ ಶೇರ್‍ಗಿಲ್, ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು, ಇಂತಹ ಬೆದರಿಕೆಗಳಿಗೆಲ್ಲ ಮಣಿಯುವುದಿಲ್ಲ. ದೇಶದ ತೆರಿಗೆದಾರನಾದ ನಾನು ಸರ್ಕಾರ ಯಾಕೆ 42 ಸಾವಿರ ಕೋಟಿ ರೂ. ಹೆಚ್ಚು ಹಣ ನೀಡಿತು ಎಂಬುದನ್ನು ತಿಳಿಯುವ ಅಧಿಕಾರ ನನಗಿದೆ ಎಂದು ಬರೆದುಕೊಂಡಿದ್ದಾರೆ.

    ಕಾಂಗ್ರೆಸ್ ಆರೋಪ:
    ಎನ್‍ಡಿಎ ಅಧಿಕಾರ ಅವಧಿಯಲ್ಲಿ ಮಾಡಲಾದ ರಫೇಲ್ ಒಪ್ಪಂದದಿಂದ ದೇಶದ 41 ಸಾವಿರ ಕೋಟಿ ರೂ. ನಷ್ಟವಾಗಿದ್ದು, ಸರ್ಕಾರಿ ಸ್ವಾಮ್ಯದ ಹಿಂದುಸ್ಥಾನ್ ಏರೊನಾಟಿಕಲ್ಸ್ ಕಂಪೆನಿಗೆ ನೀಡಿದ್ದ ಒಪ್ಪಂದವನ್ನು ಯಾವುದೇ ಕಾರಣ ನೀಡದೆ ಖಾಸಗಿ ಕಂಪೆನಿಗೆ ನೀಡಿ ಕೇಂದ್ರ ಸರ್ಕಾರ ಅಕ್ರಮ ಎಸಗಿದೆ ಎಂದು ಆರೋಪಿಸಿದೆ. ಈ ಕುರಿತು ಕಳೆದ ಬಾರಿ ಸಂಸತ್ ನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿ ಆರೋಪಗಳ ಸುರಿಮಳೆಗೈದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv