Tag: ರಮಾನಾಥ್ ರೈ

  • ಕೊಲ್ಲೂರು ದೇಗುಲದಿಂದ ಬರ್ತಿದ್ದ ಒಂದು ಹಿಡಿ ಅಕ್ಕಿಯನ್ನೂ ನಿಲ್ಲಿಸಿರಲಿಲ್ಲ, ಆದ್ರೂ ಪ್ರತಿಭಟಿಸಿದ್ರು: ರಮಾನಾಥ ರೈ

    ಕೊಲ್ಲೂರು ದೇಗುಲದಿಂದ ಬರ್ತಿದ್ದ ಒಂದು ಹಿಡಿ ಅಕ್ಕಿಯನ್ನೂ ನಿಲ್ಲಿಸಿರಲಿಲ್ಲ, ಆದ್ರೂ ಪ್ರತಿಭಟಿಸಿದ್ರು: ರಮಾನಾಥ ರೈ

    – ಬಿಜೆಪಿ ಸರ್ಕಾರ ಮಕ್ಕಳಿಗೆ ನೀಡಿದ್ದು ಪೊಟ್ಟು ಸೈಕಲ್

    ಮಂಗಳೂರು: ಅಂದು ನಾವು ಮಕ್ಕಳಿಗೆ ಕೊಡುವ ಅನ್ನವನ್ನ ನಿಲ್ಲಿಸಿರಲಿಲ್ಲ. ದೇವಸ್ಥಾನದ ಹಣ ದುರುಪಯೋಗ ಆಗಬಾರದೆಂದು ತಡೆದಿದ್ವಿ. ನಾನು ಕೊಲ್ಲೂರು ದೇವಸ್ಥಾನ (Kolluru Temple) ದಿಂದ ಬರುತ್ತಿದ್ದ ಒಂದು ಹಿಡಿ ಅಕ್ಕಿಯನ್ನ ನಿಲ್ಲಿಸಿರಲಿಲ್ಲ. ಆದರೂ ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ರು ಎಂದು ಮಾಜಿ ಸಚಿವ ರಮಾನಾಥ ರೈ (Ramanatha Rai) ಯವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ರಾಜ್ಯ ಸರ್ಕಾರದ ಪ್ರತಿಷ್ಠಿತ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರದ ಅಸಹಕಾರ ವಿರೋಧಿಸಿ ನಗರದ ಕ್ಲಾಕ್ ಟಾವರ್ ಸರ್ಕಲ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಯುತ್ತಿದೆ. ಊಟದ ತಟ್ಟೆಗಳನ್ನು ಹಿಡಿದುಕೊಂಡು ತಟ್ಟೆ ಬಡಿಯುತ್ತಾ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರು, ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದ ಕೇಂದ್ರ ಬಿಜೆಪಿ ಸರ್ಕಾರ (BJP Government) ಬಡವರಿಗೆ ದ್ರೋಹ ಮಾಡುತ್ತಿದೆ ಎಂದು ಆರೋಪ ಮಾಡಿದರು. ಇದನ್ನೂ ಓದಿ; ಸರ್ಕಾರದಿಂದ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಬರುತ್ತಿದ್ದ ಅನುದಾನ ಕಟ್: ರಮಾನಾಥ ರೈ ಹೀಗಂದ್ರು!

    ಈ ವೇಳೆ ಮಾತನಾಡಿದ ರಮಾನಾಥ ರೈ, ಈ ಹಿಂದೆ ನಾನು ಅಧಿಕಾರದಲ್ಲಿದ್ದಾಗ ಮಕ್ಕಳಿಗೆ ಕೊಡುವ ಅನ್ನ ನಿಲ್ಲಿಸಿದ್ದೇನೆಂದು ಬಿಜೆಪಿಯವರು ಪ್ರತಿಭಟಿಸಿದ್ದರು. ನನ್ನ ವಿರುದ್ಧ ಅನ್ನದ ಬಟ್ಟಲು ತಟ್ಟಿ ಪ್ರತಿಭಟಿಸಿದ್ರು. ಅಂದು ನಾವು ಮಕ್ಕಳಿಗೆ ಕೊಡುವ ಅನ್ನವನ್ನೂ ನಿಲ್ಲಿಸಿರಲಿಲ್ಲ. ದೇವಸ್ಥಾನದ ಹಣ ದುರುಪಯೋಗ ಆಗಬಾರದೆಂದು ತಡೆದಿದ್ದೆವು. ನಾನು ಕೊಲ್ಲೂರು ದೇವಸ್ಥಾನದಿಂದ ಬರುತ್ತಿದ್ದ ಒಂದು ಹಿಡಿ ಅಕ್ಕಿಯನ್ನ ಕೂಡ ನಿಲ್ಲಿಸಿರಲಿಲ್ಲ. ಆದರೂ ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ರು. ಈಗ ನಮ್ಮ ಸರ್ಕಾರದ ಅನ್ನ ಭಾಗ್ಯ ಯೋಜನೆಗೆ ವಿರೋಧ ಮಾಡಲಾಗಿದೆ. ಕೇಂದ್ರ ಸರ್ಕಾರ (Central Government) ಈ ಯೋಜನೆಯನ್ನ ತಡೆದು ಬಡವರಿಗೆ ದ್ರೋಹ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಸಿಯೂಟ, ಶರತ್ ಮಡಿವಾಳ ಹತ್ಯೆ ಕುರಿತ ಆರೋಪಕ್ಕೆ ರಮಾನಾಥ ರೈ ಬೇಸರ

    ನಮಗೆ 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಾಗಿದೆ. ನಮ್ಮ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕೆಂದೆ ಈ ರೀತಿ ಮಾಡಲಾಗಿದೆ. ಯಡಿಯೂರಪ್ಪ ನೇತೃತ್ವದ ಸರ್ಕಾರ ಶಾಲಾ ಮಕ್ಕಳಿಗೆ ಸೈಕಲ್ ನೀಡಿತ್ತು. ಆದರೆ ಒಂದು ವರ್ಷದಲ್ಲಿ ಸೈಕಲ್ (Cycle) ಮೂಲೆ ಸೇರಿತ್ತು. ಬಿಜೆಪಿ ಸರ್ಕಾರ ಮಕ್ಕಳಿಗೆ ನೀಡಿದ್ದು ಪೊಟ್ಟು ಸೈಕಲ್. ಬಿಜೆಪಿ ನಾಯಕರು ನೀಡಿದ್ದ ಭರವಸೆಯನ್ನು ಈವರೆಗೆ ಈಡೇರಿಸಲು ಸಾಧ್ಯವಾಗಿಲ್ಲ. ಹೊರ ದೇಶದಲ್ಲಿರುವ ಕಪ್ಪು ಹಣವನ್ನು ಈವರೆಗೂ ತರಲು ಇವರಿಗೆ ಸಾಧ್ಯವಾಗಿಲ್ಲ. ಈ ಬಿಜೆಪಿ ನಾಯಕರು ಆತ್ಮಹತ್ಯೆ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ – ಸರ್ಕಾರದ ವಿರುದ್ಧ ಅಶೋಕ್‌ ಕಿಡಿ

  • ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಮಾಜಿ ಸಚಿವ ರಮಾನಾಥ್ ರೈ

    ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಮಾಜಿ ಸಚಿವ ರಮಾನಾಥ್ ರೈ

    ಮಂಗಳೂರು: ಬಂಟ್ವಾಳ (Bantwal) ದಲ್ಲಿ ನನಗೆ ಸಣ್ಣ ಅಂತರದ ಸೋಲಾಗಿದೆ. ನನಗಿಂತಲೂ ಪಕ್ಷದಲ್ಲಿ ಹಿರಿಯರಿದ್ದಾರೆ. ಆದರೆ ನನಗೆ ವಯಸ್ಸಾಯಿತೆಂದು ನನ್ನ ಸ್ಪರ್ಧೆಗೆ ನಮ್ಮಲ್ಲಿ ಅಪಸ್ವರ ಬಂತು. ಹಾಗಾಗಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯೋ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಮಾಜಿ ಸಚಿವ ರಮಾನಾಥ್ ರೈ (Ramanath Rai) ಹೇಳಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‍ (Congress) ಗೆ ದ.ಕ ಜಿಲ್ಲೆಯಲ್ಲಿ ಹಿನ್ನಡೆಯಾಗಿದೆ. ಗೆದ್ದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾಂಗ್ರೆಸ್ ಮೇಲೆ ವಿಶ್ವಾಸವನ್ನಿಟ್ಟು ಜನ ಮತ ನೀಡಿದ್ದಾರೆ. ಜಿಲ್ಲೆಯಲ್ಲಿ ಸೋತರೂ ರಾಜ್ಯದಲ್ಲಿ ಸರ್ಕಾರ ನಮ್ಮದೇ ಇದೆ. ಜಿಲ್ಲೆಯಲ್ಲಿ ಕಾರ್ಯಕರ್ತರು ಎದೆಗುಂದಬಾರದು. ನಾನು ಕಡೆಯ ಬಾರಿ ಚುನಾವಣೆ ಸ್ಪರ್ಧೆ ಮಾಡೋದಾಗಿ ಹೇಳಿದ್ದೆ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಪಕ್ಷದ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿರುತ್ತೇನೆ ಎಂದು ಹೇಳಿದರು.

    ಬಿಜೆಪಿ (BJP) ರಾಜ್ಯದಲ್ಲಿ ಸ್ಪಷ್ಟ ಬಹುಮತವನ್ನು ಯಾವತ್ತೂ ಪಡೆದಿಲ್ಲ. ಜನಸಂಘ ಇರುವಾಗಲೂ ಬಾಹ್ಯ ಬೆಂಬಲದಿಂದಲೇ ಗೆದ್ದಿದ್ದರು. ಜಿಲ್ಲೆಯಲ್ಲಿ ಸೋತರೂ ಗೆದ್ದರೂ ಪಕ್ಷವನ್ನು ಪ್ರಬಲವಾಗಿ ಕಟ್ಟಿದ್ದೇವೆ. ರಾಜ್ಯದ ಜನ ಯಾವತ್ತೂ ಬಿಜೆಪಿಗೆ ಬೆಂಬಲ ನೀಡಿಲ್ಲ. ಇದು ಬಸವಣ್ಣ (Basavanna) ಹುಟ್ಟಿದ ನಾಡು, ಇಲ್ಲಿ ಜ್ಯಾತ್ಯಾತೀತ ನಿಲುವಿನ ಜನರಿಗೆ ಜನ ಮಣೆ ಹಾಕುತ್ತಾರೆ. ಭವಿಷ್ಯದಲ್ಲಿ ಬಿಜೆಪಿ ಖಂಡಿತಾ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ ಎಂದು ಭವಿಷ್ಯ ನುಡಿದರು.

    ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನವನ್ನು ರಾಜ್ಯದಲ್ಲಿ ಕಾಂಗ್ರೆಸ್ ಗಳಿಸಲಿದೆ. ಗ್ಯಾರಂಟಿ ಕಾರ್ಯಕ್ರಮ ಪ್ರಮಾಣವಚನ ಸ್ವೀಕಾರವಾದ ತಕ್ಷಣ ಅನುಷ್ಠಾನಕ್ಕೆ ಬರಲಿದೆ. ಕಾಂಗ್ರೆಸ್‍ನ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚು ಪ್ರಯೋಜನ ತಂದಿದೆ ಎಂದರು. ಇದನ್ನೂ ಓದಿ: ಬಿಎಸ್‍ವೈ ಕಣ್ಣೀರು ಹಾಕಿ ರಾಜೀನಾಮೆ ಕೊಟ್ಟು ಬಂದಾಗಿನಿಂದ ಇಂಪ್ಯಾಕ್ಟ್ ಆಯ್ತು: ಶೆಟ್ಟರ್

    ಪಾರ್ಟಿ ವಿರುದ್ಧ ನಾನು ಈವರೆಗೂ ಒಂದು ಶಬ್ದದ ಅಪಸ್ವರವನ್ನು ಎತ್ತಿಲ್ಲ. ಪಕ್ಷದ ಋಣವನ್ನು ಜೀವನ ಪರ್ಯಂತ ತೀರಿಸುತ್ತೇನೆ. ಸೋಲಿನ ಅವಲೋಕನವನ್ನು ಮಾಡಿದ್ದೇನೆ. ಚುನಾವಣೆ ಅನ್ನೋದು ನಾವು ಗ್ರಹಿಸಿದ ರೀತಿ ಅಗೋದಿಲ್ಲ. ಚುನಾವಣೆ ಗೆಲ್ಲುವ ವಿಶ್ವಾಸದಲ್ಲಿದ್ದೆ, ಸಮೀಕ್ಷೆಗಳೂ ಗೆಲ್ಲುವ ರೀತಿ ಇತ್ತು. ಸೋಲಿನ ಬಗ್ಗೆ ಅವಲೋಕನ ಮಾಡುತ್ತಿದ್ದೇನೆ. ಮಂಗಳೂರು, ಪುತ್ತೂರು ಹೊರತುಪಡಿಸಿ ಬೇರೆ ಎಲ್ಲಾ ಕಡೆ ಹಿನ್ನಡೆಯಾಗಿದೆ ಎಂದು ತಿಳಿಸಿದರು.

  • ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಬೇಕು: ರಮಾನಾಥ್ ರೈ ಮನವಿ

    ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಬೇಕು: ರಮಾನಾಥ್ ರೈ ಮನವಿ

    ಬೆಂಗಳೂರು: ಬಂಟರು ಅಂದ್ರೆ ಶ್ರೀಮಂತರಲ್ಲ. ಬಂಟ ಸಮುದಾಯದಲ್ಲೂ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಹೀಗಾಗಿ ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಮಾಜಿ ಸಚಿವ ರಮಾನಾಥ್ ರೈ ಮನವಿ ಮಾಡಿಕೊಂಡರು.

    ಬೆಂಗಳೂರು ಬಂಟರ ಸಂಘದಿಂದ ಆಯೋಜಿಸಿದ್ದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸ್ಮಾರಕ ಕ್ರೀಡಾ ಮತ್ತು ಸಾಂಸ್ಕøತಿಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಹಿರಿಯ ರಾಜಕಾರಣಿ ರಮಾನಾಥ್ ರೈ ಅವರಿಗೆ ದಿ.ಡಾ.ಜೀವರಾಜ್ ಆಳ್ವ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಿದರು. ಇದನ್ನೂ ಓದಿ: ಆಸ್ಕರ್ 2022 ರೆಡ್ ಕಾರ್ಪೆಟ್‍ನಲ್ಲಿ ಮಿಂಚಿದ ತಾರೆಯರು: ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ

    ಈ ಸಂದರ್ಭದಲ್ಲಿ ಮಾತನಾಡಿದ ರಮಾನಾಥ್ ರೈ, ಬಂಟ ಸಮುದಾಯ ಎಲ್ಲ ಕ್ಷೇತ್ರದಲ್ಲೂ ಗುರುತಿಸಿಕೊಂಡಿದೆ. ಜೊತೆಗೆ ಎಲ್ಲ ಸಮಾಜದ ವಿಶ್ವಾಸವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಆದ್ರೂ ಕೂಡ ಬಂಟ ಸಮುದಾಯದಲ್ಲಿ ಸಾಕಷ್ಟು ಮಂದಿ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಅವರಿಗೆ ಸೂಕ್ತ ನ್ಯಾಯ ಸಿಗಬೇಕು. ಆದ್ರಿಂದ ಬೆಂಗಳೂರು ಬಂಟರ ಸಂಘದ ಮೂಲಕ ಬಂಟ ಸಮುದಾಯವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಮನವಿ ಮಾಡಿದರು.

    ಕರ್ನಾಟಕ ರಾಜ್ಯದಲ್ಲಿ ಬಂಟ ಸಮಾಜ 3-ಬಿ ಪ್ರವರ್ಗದಲ್ಲಿದೆ. ಆದ್ರೆ ಕೇಂದ್ರದಲ್ಲಿ ಸಾಮಾನ್ಯ ವರ್ಗದಲ್ಲಿದೆ. ಹೀಗಾಗಿ ಬಂಟ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು. ಸರ್ಕಾರದ ಸೌಲಭ್ಯಗಳು ಬಂಟ ಸಮುದಾಯಕ್ಕೂ ಸಿಗಬೇಕು ಎಂಬುದು ಈ ಬೇಡಿಕೆಯ ಉದ್ದೇಶವಾಗಿದೆ.

    ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬಂದಿದ್ದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ.ನಾರಾಯಣ್ ಸ್ವಾಮಿ ಅವರು ಮಾತನಾಡಿದ್ದು, ಬೆಂಗಳೂರು ಬಂಟರ ಸಂಘದ ಮನವಿಗೆ ಸಕಾರತ್ಮಕವಾಗಿ ಸ್ಪಂದಿಸಿದರು.

    ಬೆಂಗಳೂರು ಬಂಟರ ಸಂಘದ ಬೇಡಿಕೆಯನ್ನು ಸೂಕ್ತ ರೀತಿಯಲ್ಲಿ ಈಡೇರಿಸುವ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಕೇಂದ್ರ ಸಚಿವ ವಿ.ನಾರಾಯಣ್ ಸ್ವಾಮಿ ಭರವಸೆ ನೀಡಿದ್ರು. ಕೇಂದ್ರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಆಯುಕ್ತರು ಮತ್ತು ಸಚಿವರ ಜೊತೆ ಭೇಟಿ ಮಾಡಿ ಚರ್ಚೆ ಮಾಡೋಣ. ನಿಮ್ಮ ಜೊತೆ ನಾನು ಇರುತ್ತೇನೆ. ಬಂಟ ಸಮುದಾಯದ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ಕೊಟ್ಟರು.

    ಇದೇ ವೇಳೆ ಉದ್ಯಮಿ ಸರ್ವೋತ್ತಮ ಶೆಟ್ಟಿ ಅವರಿಗೆ ದಿ.ಡಾ.ಡಿ.ಕೆ.ಚೌಟ ಸ್ಮಾರಕ ಸಾಂಸ್ಕøತಿಕ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತ್ತು. ಇನ್ನುಳಿದಂತೆ ಬೆಂಗಳೂರು ಬಂಟರ ಸಂಘದ ವತಿಯಿಂದ ನಡೆದ ವಿವಿಧ ಸಾಂಸ್ಕøತಿಕ ಸ್ಪರ್ಧಾ ವಿಜೇತರಿಗೆ, ಕ್ರೀಡಾ ಸಾಧನಾ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಪ್ರಶಸ್ತಿ ನೀಡಲಾಯಿತ್ತು. ಈ ವೇಳೆ ಸುಮಾರು 170 ಮಂದಿಗೆ ಪ್ರಶಸ್ತಿ ನೀಡಲಾಯ್ತು.  ಇದನ್ನೂ ಓದಿ: SSLC ಪರೀಕ್ಷೆಗೆ ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಪರೀಕ್ಷಾ ಸಿಬ್ಬಂದಿಯಿಂದ ಮನವೊಲಿಕೆ

    ಕಾರ್ಯಕ್ರಮದಲ್ಲಿ ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಯ ಅಧ್ಯಕ್ಷರಾದ ಕೆ.ಸಿ.ಶೆಟ್ಟಿ, ಮುಂಬೈ ಬಂಟರ ಸಂಘದ ಉಪಾಧ್ಯಕ್ಷರಾದ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಆರ್.ಉಪೇಂದ್ರ ಶೆಟ್ಟಿ, ಕಾರ್ಯದರ್ಶಿ ಎಮ್.ಮಧುಕರ ಶೆಟ್ಟಿ, ಕ್ರೀಡಾ ಸಮಿತಿಯ ಚೇರ್ ಪರ್ಸನ್ ರಾಧಾಕೃಷ್ಣ ಶೆಟ್ಟಿ, ಸಾಂಸ್ಕøತಿಕ ಸಮಿತಿಯ ಚೇರ್ ಪರ್ಸನ್ ವಿಜಯ್ ಜೆ.ಶೆಟ್ಟಿ ಹಾಲಾಡಿ ಮೊದಲಾದವರು ಉಪಸ್ಥಿತರಿದ್ದರು.

  • ಮೋದಿ, ಇಮ್ರಾನ್ ಖಾನ್ ಒಂದೇ ತಾಯಿಯ ಮಕ್ಕಳು: ರಮಾನಾಥ್ ರೈ

    ಮೋದಿ, ಇಮ್ರಾನ್ ಖಾನ್ ಒಂದೇ ತಾಯಿಯ ಮಕ್ಕಳು: ರಮಾನಾಥ್ ರೈ

    ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಒಂದೇ ತಾಯಿಯ ಮಕ್ಕಳು. ಇಬ್ಬರೂ ಅವರವರ ಲಾಭಕ್ಕಾಗಿ ದೇಶವನ್ನು ಬಯ್ಯುತ್ತಾರೆ ಎಂದು ಕಾಂಗ್ರೆಸ್ ನಾಯಕ ರಮಾನಾಥ್ ರೈ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

    ಮೋದಿ ಹಾಗೂ ಇಮ್ರಾನ್ ಖಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ರಮಾನಾಥ್ ರೈ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ಮುಗಿಸಿ ಹೋಗುತ್ತಿದ್ದ ವೇಳೆ, ಮೋದಿ ಹಾಗೂ ಇಮ್ರಾನ್ ಖಾನ್ ಒಂದೇ ತಾಯಿಯ ಮಕ್ಕಳು ಎಂದು ರಮಾನಾಥ್ ರೈ ಅವರು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

    ಮೋದಿ ಹಾಗೂ ಇಮ್ರಾನ್ ಖಾನ್ ಇಬ್ಬರೂ ತಮ್ಮ ಲಾಭಕ್ಕಾಗಿ ದೇಶವನ್ನು ಬಯ್ಯುತ್ತಾರೆ. ಇಮ್ರಾನ್ ಖಾನ್ ವೋಟ್‍ಗಾಗಿ ಭಾರತವನ್ನು ಬಯ್ಯುತ್ತಾನೆ. ಮೋದಿ ವೋಟ್‍ಗಾಗಿ ಪಾಕಿಸ್ತಾನವನ್ನು ಬಯ್ಯುತ್ತಾರೆ. ಇಬ್ಬರು ಒಂದೇ ರೀತಿಯ ಜನ. ಅವನು ಹೇಗೋ ಸರಿಯಿಲ್ಲ, ಇವರು ಅದೇ ದಾರಿಯಲ್ಲಿದ್ದಾರೆ ಎಂದು ಟೀಕಿಸಿದ್ದಾರೆ.

  • ಮಹಾತ್ಮನಿಗೆ ಬೈದವರು ಬಿಜೆಪಿ ಅಧ್ಯಕ್ಷರಾದರು: ನಳಿನ್ ಕಿವಿ ಹಿಂಡಿದ ರೈ

    ಮಹಾತ್ಮನಿಗೆ ಬೈದವರು ಬಿಜೆಪಿ ಅಧ್ಯಕ್ಷರಾದರು: ನಳಿನ್ ಕಿವಿ ಹಿಂಡಿದ ರೈ

    -ಭೂತಾನಿಗೆ ಹೋಗೋ ಪ್ರಧಾನಿಗೆ ಬೆಳಗಾವಿ ನೆರೆ ನೋಡೋಕೆ ಟೈಂ ಇಲ್ವಾ?
    -ಬಿಜೆಪಿಯಿಂದ ಕರಾವಳಿಗೆ ಅನ್ಯಾಯ

    ಉಡುಪಿ: ಸಂಸದ ನಳೀನ್ ಕುಮಾರ್ ಕಟೀಲ್‍ಗೆ ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಮಾಜಿ ಸಚಿವ ರಮನಾಥ್ ರೈ ವ್ಯಂಗ್ಯವಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ರಮನಾಥ್ ರೈ ನಳಿನ್ ಕುಮಾರ್ ಕಟೀಲ್ ಮಹಾತ್ಮ ಗಾಂಧೀಜಿ ಬಗ್ಗೆ ಅವಹೇಳನ ಮಾಡಿದ್ದಕ್ಕೆ ಈ ಸ್ಥಾನಮಾನ ಸಿಕ್ಕಿದೆ ಆಕ್ರೋಶ ಹೊರಹಾಕಿದರು.

    ಮಹಾತ್ಮಾ ಗಾಂಧೀಜಿ ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಕ್ಕೆ ಮೋದಿ, ಅಮಿತ್ ಶಾ ಇದನ್ನು ಸಹಿಸಲ್ಲ ಅಂತ ಅಂದು ಹೇಳಿದ್ದರು. ಆದ್ರೆ ಅಂತಹ ನಳಿನ್ ಕುಮಾರ್ ಕಟೀಲ್‍ಗೆ ಈಗ ಪ್ರಮೋಷನ್ ಆಗಿದೆ. ಮಹಾತ್ಮ ಗಾಂಧೀಜಿ ಅವರಿಗೆ ಅಪಮಾನ ಮಾಡಿದಕ್ಕೆ ಅಧ್ಯಕ್ಷಗಿರಿ ಸಿಕ್ಕಿದೆ. ಭಾರತೀಯ ಜೂಟ್ ಪಾರ್ಟಿಗೆ ಮಾತ್ರ ಇಂತಹ ಶಕ್ತಿ ಇರುವುದು ಎಂದು ವ್ಯಂಗ್ಯವಾಡಿದ್ರು.

    ಜನ ನಳಿನ್ ಕುಮಾರ್ ಕಟೀಲ್ ಮುಖ ನೋಡಿ ವೋಟು ಕೊಟ್ಟಿಲ್ಲ. ಮೇಲಿನ ಮುಖ ನೋಡಿ ಮತ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ಮೇಲೆ ನೋಡುತ್ತಲೆ ನಿಂತಿದ್ದಾರೆ. ಇನ್ನು ಕೂಡಾ ಕೆಳಗೆ ನೋಡಿಲ್ಲ. ಆದ್ರೆ ಈಗ ಆಕಾಶ ನೋಡುವ ಪರಿಸ್ಥಿತಿ ಇಲ್ಲಿನ ಜನರಿಗಾಗಿದೆ ಎಂದ್ರು. ನಳಿನ್ ಕುಮಾರ್ ಕಟೀಲ್ ಯಾವುದೇ ಸಾಧನೆ ಮಾಡಿದ ಚರಿತ್ರೆ ಇತಿಹಾಸ ಇಲ್ಲ ಎಂದು ಟೀಕೆ ಮಾಡಿದ್ರು.

    ಪ್ರಧಾನಿಗಳಿಗೆ ಟೈಮ್ ಇಲ್ವಾ?
    ಕರ್ನಾಟಕದ ನೆರೆ ವೀಕ್ಷಣೆ ಮಾಡಲು ಪ್ರಧಾನಮಂತ್ರಿಗಳಿಗೆ ಟೈಮ್ ಇಲ್ಲ. ಭೂತಾನ್ ಗೆ ಹೋಗಿ ಅಲ್ಲಿನ ಮಕ್ಕಳ ಬೆನ್ನು ತಟ್ಟಲು ಟೈಂ ಇದೆ ಅಂತ ಕಾಂಗ್ರೆಸ್ ನಾಯಕ ರಮಾನಾಥ ರೈ ಚಾಟಿ ಬೀಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ನೆರೆ ಪರಿಸ್ಥಿತಿ ನಿಭಾಯಿಸೋದು ರಾಜ್ಯದ ಜೊತೆ ಕೇಂದ್ರದ ಹೊಣೆಗಾರಿಕೆ ಎಂದಿದ್ದಾರೆ.

    ಪ್ರಧಾನಿ ಮೋದಿ ಭೂತಾನ್ ಗೆ ಹೋಗಿ ಮಕ್ಕಳ ಬೆನ್ನು ತಟ್ಟಿದ್ರೆ ದೊಡ್ಡ ಸುದ್ದಿಯಾಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ. ಪ್ರವಾಹ ಪೀಡಿತ ಜನರ ಕಣ್ಣೀರು ಒರೆಸುವುದು ಅವರ ಆದ್ಯತೆಯಾಗಬೇಕಿತ್ತು ಎಂದು ಟೀಕಿಸಿದ್ರು. ಮೋದಿ ಸರ್ಕಾರ ಪ್ರಚಾರದಲ್ಲೇ ಮಗ್ನವಾಗಿದೆ. ಬಿಜೆಪಿ ಜನಹಿತದ ಕಡೆ ಗಮನ ಕೊಡುತ್ತಿಲ್ಲ. ಮೋದಿಯ ಮಾರ್ಕೆಟಿಂಗ್ ಮಾಡುವ ಬಗ್ಗೆ ಮಾತ್ರ ತಲೆಕೆಡಿಸಿಕೊಂಡಿದೆ ಎಂದು ರೈ ಕಿಡಿಕಾರಿದ್ದಾರೆ.

    ಕರಾವಳಿಗೆ ಅನ್ಯಾಯ:
    ಬುದ್ಧಿವಂತರ ಜಿಲ್ಲೆಯಲ್ಲಿ ಯೋಗ್ಯ ಇಬ್ಬರನ್ನು ಮಂತ್ರಿ ಮಾಡುವುದಕ್ಕೆ ಬಿಜೆಪಿಗೆ ಸಾದ್ಯ ಆಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುದ್ಧಿವಂತರು ಯಾರು ಇಲ್ಲ ಎಂದು ಬಿಜೆಪಿ ತೀರ್ಮಾನಿಸಿದೆ. ಬಿಜೆಪಿ ಸರ್ಕಾರ ಅನ್ಯಾಯ ಮಾಡುತ್ತಲೆ ಬಂದಿದೆ. ಎರಡು ಜಿಲ್ಲೆಯನ್ನು ಕಡೆಗಣಿಸಿದ್ದಾರೆ. ಮುಂದಿನ ಚುನಾವಣೆ ಲೆಕ್ಕಚಾರದಲ್ಲಿ ಸಚಿವ ಸ್ಥಾನ ಹಂಚಿಕೆ ಮಾಡಿದ್ದಾರೆ. ಬಿಜೆಪಿಯ ಈ ಲೆಕ್ಕಾಚಾರ ಉಲ್ಟಾ ಆಗುತ್ತದೆ ಎಂದು ರಮನಾಥ್ ರೈ ಭವಿಷ್ಯ ನುಡಿದರು.

  • ಮಂಗ್ಳೂರು `ಕೈ’ ನಾಯಕರಲ್ಲಿ ವೇಣುಗೋಪಾಲ್ ಮನವಿ!

    ಮಂಗ್ಳೂರು `ಕೈ’ ನಾಯಕರಲ್ಲಿ ವೇಣುಗೋಪಾಲ್ ಮನವಿ!

    ನವದೆಹಲಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಟ್ಟಿ ರಿಲೀಸ್ ಮಾಡಿದ್ದು, ಇತ್ತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಪೈಪೋಟಿ ಜೋರಾಗಿದೆ. ಸಚಿವ ಯುಟಿ. ಖಾದರ್ ನೇತೃತ್ವದಲ್ಲಿ ಟಿಕೆಟ್ ಗಾಗಿ ಜಿಲ್ಲಾ ನಾಯಕರು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು ಕೈ ನಾಯಕರಲ್ಲಿ ಮನವಿ ಮಾಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೇ ಅಭ್ಯರ್ಥಿ ಆದ್ರೂ ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಅಭ್ಯರ್ಥಿ ಗೆಲ್ಲಿಸಬೇಕಿದೆ ಎಂದು ವೇಣುಗೋಪಾಲ್ ಕೈ ನಾಯಕರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಎಲ್ಲ ನಾಯಕರು ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

    ವೇಣುಗೋಪಾಲ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, ಮಂಗಳೂರು ಕಾಂಗ್ರೆಸ್ ಅಭ್ಯರ್ಥಿ ವಿಚಾರದ ಕುರಿತು ವೇಣುಗೋಪಾಲ್ ಬಳಿ ಒಗ್ಗಟ್ಟು ಪ್ರದರ್ಶನ ಮಾಡಿದ್ದೇವೆ. ವರಿಷ್ಠರ ಬಳಿ ಪಕ್ಷದ ಮುಖಂಡರು ಸಭೆ ಅಗಿದೆ. ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭ್ಯರ್ಥಿ ಗೆಲ್ಲಿಸಬೇಕಿದೆ. ಹಾಲಿ ಸಂಸದರ ವೈಫಲ್ಯದಿಂದ ಅಭಿವೃದ್ಧಿ ಕುಂಠಿತವಾಗಿದೆ. ವೇಣುಗೋಪಾಲ್ ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ. ಮೈತ್ರಿ ಸರಕಾರ ಅಭಿವೃದ್ಧಿ ಮಾಡಿದೆ.

    ಇದೇ ವೇಳೆ ಮಾಜಿ ಸಚಿವ ರಮಾನಾಥ್ ರೈ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಸಂಸದರಿದ್ದಾಗ ಮಂಗಳೂರು ಅಭಿವೃದ್ಧಿಯಾಗಿತ್ತು. ಬಿಜೆಪಿ ಸಂಸದರಿದ್ದಾಗ ಯಾವುದೇ ಅಭಿವೃದ್ಧಿಯಾಗಿಲ್ಲ. ಸಂಪೂರ್ಣವಾಗಿ ಕೆಲಸಗಳು ತಟಸ್ಥವಾಗಿದೆ. ಯಾವ ಅಭ್ಯರ್ಥಿಗೆ ಟಿಕೆಟ್ ನೀಡಿದ್ರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ಬಿಜೆಪಿ ಸೋಲಿಸುವುದೇ ನಮ್ಮ ಹೋರಾಟವಾಗಿದೆ. ದೇಶದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

    ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ನಾವೆಲ್ಲ ಟಿಕೆಟ್ ಆಕಾಂಕ್ಷಿಗಳು. ನಮ್ಮಲ್ಲಿ ಒಗ್ಗಟ್ಟಿದ್ರೆ ಬದಲಾವಣೆ ಸಾಧ್ಯ. ಸಂಘಪರಿವಾರವೇ ಹಾಲಿ ಸಂಸದರನ್ನು ಕಳಪೆ ಎಂದು ಹೇಳಿದೆ. ವಿಜಯಾ ಬ್ಯಾಂಕ್ ನ್ನು ಬರೋಡಾ ಬ್ಯಾಂಕ್ ಜೊತೆ ಹೊಂದಾಣಿಕೆ ಮಾಡ್ತಿದ್ದಾರೆ. ಮಂಗಳೂರು ಏರ್ ಪೋರ್ಟ್ ಖಾಸಗಿ ಕಂಪನಿಗೆ ನೀಡಿದೆ. ನಾವೆಲ್ಲ ಒಗ್ಗಟ್ಟಾಗಿ ಚುನಾವಣೆ ಮಾಡ್ತೇವೆ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಿದ್ದೇವೆ. ಸದ್ಯ ಮಂಗಳೂರಿನಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಸಂಸದ ನಳಿನ್ ಕುಮಾರ್ ಅಶಾಂತಿ ವಾತವರಣ ಸೃಷ್ಟಿ ಮಾಡಿದ್ದಾರೆ ಎಂದು ಹೇಳಿದ್ರು.

    https://www.youtube.com/watch?v=srybZEOyHLQ

  • ಯಕ್ಷಗಾನದ ಸಂಭಾಷಣೆಯಲ್ಲಿ ನರೇಂದ್ರ ಹೆಸರು ಉಲ್ಲೇಖ- ಕಲಾವಿದರಿಂದ ಮುಚ್ಚಳಿಕೆ ಬರೆಸಿಕೊಂಡ ಪೊಲೀಸರು

    ಯಕ್ಷಗಾನದ ಸಂಭಾಷಣೆಯಲ್ಲಿ ನರೇಂದ್ರ ಹೆಸರು ಉಲ್ಲೇಖ- ಕಲಾವಿದರಿಂದ ಮುಚ್ಚಳಿಕೆ ಬರೆಸಿಕೊಂಡ ಪೊಲೀಸರು

    ಮಂಗಳೂರು: ಯಕ್ಷಗಾನದ ಸಂಭಾಷಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹೆಸರು ಉಲ್ಲೇಖಿಸಿ ಸಂಭಾಷಣೆ ನಡೆಸಿದ್ದು ವಿವಾದಕ್ಕೆ ಕಾರಣವಾಗಿದ್ದು, ಕಲಾವಿದರನ್ನು ಠಾಣೆಗೆ ಕರೆಸಿಕೊಂಡು ಮುಚ್ಚಳಿಕೆ ಬರೆಸಿಕೊಂಡ ಪೊಲೀಸರ ವಿರುದ್ಧ ಹಿಂದೂ ಪರ ಸಂಘಟನೆಗಳು ಕಿಡಿಕಾರಿವೆ.

    ಛತ್ರಪತಿ ಶಿವಾಜಿ ಮಹಾರಾಜನ ಕಥೆಯುಳ್ಳ ಪ್ರಸಂಗದ ಯಕ್ಷಗಾನ ನಡೆಯುತ್ತಿದ್ದಾಗ ಶಿವಾಜಿಯ ಗುರು ಸಮರ್ಥ ರಾಮದಾಸನ ಪಾತ್ರ ಮಾಡಿದ್ದ ಕಲಾವಿದ ಗಣರಾಜ ಭಟ್ ಬಡೆಕ್ಕಿಲ,”ಭಾರತದ ಸ್ವಚ್ಛತೆಗಾಗಿ ನರೇಂದ್ರನಂತೆ ನೀನು ಕೇಸರಿಯ ತಂಡ ಕಟ್ಟಬೇಕು. ರಾತ್ರಿ ವೇಳೆ ಗೋವುಗಳನ್ನು ಕದ್ದೊಯ್ಯುವ ದುಷ್ಟರನ್ನು ಸದೆಬಡಿಯಲು ಜಾಗರಣ ನಿಲ್ಲುವಂತೆ ತರುಣ ಪಡೆಯನ್ನು ಜಾಗರಣ ವೇದಿಕೆಯ ರೂಪದಲ್ಲಿ ಕಟ್ಟಬೇಕಿದೆ” ಎನ್ನುವ ಉಪದೇಶವನ್ನು ಶಿವಾಜಿಗೆ ಹೇಳುತ್ತಾರೆ. ಇದನ್ನು ಓದಿ: ಇವನರ್ವ, ಇವನರ್ವ ಎಂದು ಡೈಲಾಗ್ ಹೇಳಿದ್ದಕ್ಕೆ ಯಕ್ಷಗಾನ ಹಾಸ್ಯ ಕಲಾವಿದ ಅಮಾನತು!

    ಕಥೆಯ ರೂಪವನ್ನು ಈಗಿನ ರಾಜಕೀಯ ಸನ್ನಿವೇಶಕ್ಕೆ ತಕ್ಕಂತೆ ಬದಲಿಸಿಕೊಂಡು ಪ್ರಧಾನಿ ಮತ್ತು ಹಿಂದೂ ಸಂಘಟನೆಯ ಹೆಸರು ಹೇಳಿದ್ದು ಬಿಜೆಪಿ ವಿರೋಧಿಗಳ ಕಣ್ಣು ಕೆಂಪಾಗಿಸಿದ್ದು ಕಾಂಗ್ರೆಸ್ಸಿಗರಿಂದ ಆಕ್ಷೇಪ ಕೇಳಿಬಂದಿದೆ. ಇದರಿಂದಾಗಿ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

    ಈ ಬಗ್ಗೆ ಮಾಹಿತಿ ಪಡೆದ ಮಾಜಿ ಸಚಿವ ರಮಾನಾಥ ರೈ ದಕ್ಷಿಣ ಕನ್ನಡ ಎಸ್‍ಪಿಗೆ ಫೋನ್ ಮಾಡಿ ಕಲಾವಿದರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಆದರೆ ಲಿಖಿತವಾಗಿ ಯಾವುದೇ ದೂರು ಸಲ್ಲಿಸಿಲ್ಲ. ಇದನ್ನೇ ನೆಪ ಮಾಡಿಕೊಂಡ ಪುತ್ತೂರು ಠಾಣೆ ಪೊಲೀಸರು ಕಲಾವಿದ ಗಣರಾಜ ಭಟ್ಟರನ್ನು ಠಾಣೆಗೆ ಕರೆಸಿ, ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

    ಈ ಯಕ್ಷಗಾನ ಕೆಲವು ದಿನಗಳ ಹಿಂದೆ ಪುತ್ತೂರು ತಾಲೂಕಿನ ದೇಂತಡ್ಕದಲ್ಲಿ ನಡೆದಿತ್ತು. ಇದೀಗ ರಮಾನಾಥ್ ರೈ ಅವರ ಫೋನ್ ಕರೆಗೆ ಪೊಲೀಸರು ಕಲಾವಿದನನ್ನು ಠಾಣೆಗೆ ಕರೆಸಿ, ವಿಚಾರಣೆ ನಡೆಸಿದ್ದು ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ನನಗೆ ಸೋಂಬೇರಿ ಅಂದವರನ್ನ ಜನ ಕಾಡಿಗೆ ಕಳಿಸಿದ್ದಾರೆ: ನಳೀನ್ ಕುಮಾರ್ ತಿರುಗೇಟು

    ನನಗೆ ಸೋಂಬೇರಿ ಅಂದವರನ್ನ ಜನ ಕಾಡಿಗೆ ಕಳಿಸಿದ್ದಾರೆ: ನಳೀನ್ ಕುಮಾರ್ ತಿರುಗೇಟು

    ಮಂಗಳೂರು: ಸಂಸದ ಕಟೀಲ್ ಸೋಂಬೇರಿ ಎಂಬ ರಮಾನಾಥ ರೈ ಹೇಳಿಕೆಗೆ ಸಂಸದ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

    ಮಂಗಳೂರಿನಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಯಾರು ಸೋಂಬೇರಿ ಎಂಬುದನ್ನ ಕಳೆದ ಚುನಾವಣೆಯಲ್ಲಿ ಜನರು ತೋರಿಸಿದ್ದಾರೆ. ಜನರು ಅವರನ್ನ ಕಾಡಿಗೆ ಕಳುಹಿಸಿದ್ದಾರೆ. ಕಳೆದ 30 ವರ್ಷಗಳಲ್ಲಿ ತಾನು ಸಚಿವನಾಗಿದ್ದೇನೆ ಎನ್ನುವುದು ಅವರ ಸಾಧನೆ. ಎಲ್ಲಾ ವಿಷಯದಲ್ಲಿ ರಮಾನಾಥ ರೈ ಸರ್ವಜ್ಞ ಎಂದು ತಿಳಿದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

    ಸಂಸದ ನಳಿನ್ ಕುಮಾರ್ ಕಟೀಲ್ ಓರ್ವ ಸೋಮಾರಿ, ಇಂತಹ ಲೋಕಸಭಾ ಸದಸ್ಯರನ್ನು ನಾನು ನೋಡಿಲ್ಲ. ಯಾರೋ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ತಾವೇ ಮಾಡಿದ್ದಾಗಿ ನಳಿನ್ ಕುಮಾರ್ ಹೇಳುತ್ತಿದ್ದಾರೆ. ನಳಿನ್ ಅವರಿಗೆ ಕೆಲಸ ಮಾಡುವ ವಿಧಾನವೇ ಗೊತ್ತಿಲ್ಲ. ಹೀಗಾಗಿ ಕೋಮು ಪ್ರಚೋದನೆ ಭಾಷಣ ಮಾಡುವುದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳದೆ ಅದಕ್ಕೆ ಮತ್ತಷ್ಟು ಎಣ್ಣೆ ಸುರಿದು ಗಲಾಟೆ ಮಾಡಿಸುವುದು ಮಾತ್ರ ಅವರಿಗೆ ಗೊತ್ತಿದೆ ಎಂದು ಮಾಜಿ ಅರಣ್ಯ ಸಚಿವ ರಮಾನಾಥ ರೈ ವ್ಯಂಗ್ಯವಾಡಿದ್ದರು.

  • ಅರಣ್ಯ ಸಚಿವರಿಂದ ಮರ ಕಡಿಯಲು ಅಸ್ತ್ರ- ಯಾರ ಅನುಮತಿಯೂ ಇಲ್ಲದೇ ಕಡಿಯಬಹುದಂತೆ ವೃಕ್ಷ!

    ಅರಣ್ಯ ಸಚಿವರಿಂದ ಮರ ಕಡಿಯಲು ಅಸ್ತ್ರ- ಯಾರ ಅನುಮತಿಯೂ ಇಲ್ಲದೇ ಕಡಿಯಬಹುದಂತೆ ವೃಕ್ಷ!

    – ರೈ ವಿರುದ್ಧ ರಾಹುಲ್‍ಗೆ ದೂರು

    ಬೆಂಗಳೂರು: ಕಾಡಿನ ರಕ್ಷಣೆ ಮಾಡಬೇಕಾದ ಅರಣ್ಯ ಸಚಿವ ರಮಾನಾಥ್ ರೈ ಟಿಂಬರ್ ಮಾಫಿಯಾಗೆ ತೆರೆಮರೆಯಲ್ಲಿ ಬೆಂಬಲ ನೀಡ್ತಿದ್ದಾರೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದೆ. ಈ ಹಿಂದೆ ನಗರದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಕೈ ಹಾಕಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪರಿಸರ ಪ್ರೇಮಿಗಳು ಸಿಡಿದೆದ್ದಿದ್ರು. ಮರ ಕಡಿಯಲಾಗುತ್ತೆ ಮತ್ತು ಪರಿಸರ ನಾಶವಾಗುತ್ತೆ ಅನ್ನೋ ಕೂಗು ಗಟ್ಟಿಯಾದಾಗ ಸರ್ಕಾರ ಈ ಯೋಜನೆಯನ್ನ ಕೈಬಿಟ್ಟಿತ್ತು.

    ಈಗ ಸದ್ದಿಲ್ಲದೇ 50ಕ್ಕೂ ಹೆಚ್ಚು ಜಾತಿಯ ಮರಗಳನ್ನು ಯಾರ ಅನುಮತಿಗೂ ಕಾಯದೆ ಕಡಿಯಬಹುದು ಅಂತಾ ಮರಗಳ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತಂದು ಆದೇಶ ಹೊರಡಿಸಲು ಸಜ್ಜಾಗಿದೆ. ಅಲ್ಲದೇ ಇದಕ್ಕಾಗಿ ಮಸೂದೆಯನ್ನು ಮಂಡಿಸಲಾಗಿದೆ. ಹಳ್ಳಿಯ ರೈತರ ಹಿತದೃಷ್ಟಿಯಿಂದ ಈ ಕಾಯ್ದೆ ಅಂತಾ ಅರಣ್ಯ ಸಚಿವ ರಮಾನಾಥ್ ರೈ ಮರ ಕಡಿಯಲು ಅಸ್ತ್ರ ಹಿಡಿದಿದ್ದಾರೆ. ಸರ್ಕಾರ ಗುಲ್‍ಮೋಹರ್, ಆಫ್ರಿಕನ್ ಟ್ಯೂಲಿಪ್, ಲಕ್ಷ್ಮಿತರು ಮರ, ನುಗ್ಗೇಕಾಯಿ ಮರ, ಬಾಗೇಮರ ಸೇರಿದಂತೆ ಐವತ್ತಕ್ಕೂ ಹೆಚ್ಚು ಜಾತಿಯ ಮರಗಳ ಹೆಸರನ್ನು ಲಿಸ್ಟ್ ಮಾಡಿಕೊಂಡಿದೆ.

    ಈ ಸಂಬಂಧ ರಮಾನಾಥ್ ರೈ ವಿರುದ್ಧ ಪರಿಸರ ಪ್ರೇಮಿಗಳು ಸಿಡಿದೆದ್ದಿದ್ದಾರೆ. ಈ ಕಾಯ್ದೆ ಜಾರಿಯಾದ್ರೆ ದೊಡ್ಡ ಹೋರಾಟವಾಗಲಿದೆ. ನಿಮ್ಮ ಸಚಿವರಿಗೆ ಬುದ್ಧಿ ಹೇಳಿ ಅಂತಾ ಪರಿಸರ ಪ್ರೇಮಿ ನಿಶಾಂತ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.

    ಸರ್ಕಾರ ಟಿಂಬರ್ ಮಾಫಿಯಾಗೆ ಕುಮ್ಮಕ್ಕು ಕೊಡೋಕೆ ಈ ಕಾಯ್ದೆ ಜಾರಿಗೊಳಿಸಲು ಮುಂದಾಗಿದೆ ಅನ್ನೋ ಅನುಮಾನ ಮೂಡಿದೆ.

  • ಶಾಸಕ ಸುನೀಲ್ ಕುಮಾರ್ ಒಬ್ಬ ಉಗ್ರಗಾಮಿ – ಕಾರ್ಕಳದಲ್ಲೇ ರಮಾನಾಥ ರೈ ವಾಗ್ದಾಳಿ

    ಶಾಸಕ ಸುನೀಲ್ ಕುಮಾರ್ ಒಬ್ಬ ಉಗ್ರಗಾಮಿ – ಕಾರ್ಕಳದಲ್ಲೇ ರಮಾನಾಥ ರೈ ವಾಗ್ದಾಳಿ

    ಉಡುಪಿ: ಶಾಸಕ, ವಿಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್ ಒಬ್ಬ ಉಗ್ರಗಾಮಿ ಎಂದು ಸಚಿವ ರಮಾನಾಥ ರೈ ವಿವಾದತ್ಮಾಕ ಹೇಳಿಕೆ ನೀಡಿದ್ದಾರೆ.

    ಜಿಲ್ಲೆಯ ಕಾರ್ಕಳದ ಅತ್ತೂರು ಚರ್ಚ್‍ಗೆ ಬಂದಿದ್ದ ಸಚಿವ ರಮಾನಾಥ ರೈ ಅವರು, ಶಾಸಕ ಸುನೀಲ್ ಒಬ್ಬ ರ್ಯಾಡಿಕಲ್ ವ್ಯಕ್ತಿತ್ವದ ಶಾಸಕ ಎಂದು ಸುನೀಲ್ ಕುಮಾರ್ ಅವರ ಸ್ವ-ಕ್ಷೇತ್ರದಲ್ಲೇ ವಾಗ್ದಾಳಿ ನಡೆಸಿದರು.

    ನನ್ನ ಕ್ಷೇತ್ರಕ್ಕೆ ಬಂದು ಸುನೀಲ್ ಕುಮಾರ್ ವೃಥಾರೋಪ ಮಾಡಿದ್ದಾರೆ. ಎಷ್ಟೇ ಮಾತನಾಡಿದರೂ ನನ್ನನ್ನು ಸುನೀಲ್ ಕುಮಾರ್ ಗೆ ಏನೂ ಮಾಡಲು ಆಗಲ್ಲ. ಅವನ ಮಾತುಗಳಲ್ಲಿ ಎಲ್ಲವೂ ಸುಳ್ಳೇ ಇತ್ತು. ಸತ್ಯ ಕಾಣುವುದಿಲ್ಲ. ಸುನೀಲ್ ಗೆ ಕನಿಷ್ಠ ಜ್ಞಾನವೂ ಇಲ್ಲ. ಜನಪ್ರತಿನಿಧಿಯಾಗಿ ಹೇಗೆ ವರ್ತಿಸಬೇಕು ಎಂದು ಅವನಿಗೆ ಗೊತ್ತೇ ಇಲ್ಲ ಎಂದು ಏಕವಚನದಲ್ಲಿ ಬೈಗುಳಗಳ ಸುರಿಮಳೆಗೈದರು.

    ದೇವರೊಬ್ಬನೇ ಎಂದು ನಾನು ತಿಳಿದುಕೊಂಡಿದ್ದೇನೆ. ನನಗೆ ಬೇಧಭಾವ ಇಲ್ಲ. ದೇವರ ಮೇಲೆ ನಂಬಿಕೆ, ಗೌರವ ಇದ್ದವರು ಇಂತಹ ಸಣ್ಣತನದ ಮಾತುಗಳನ್ನು ಹೇಳಬಾರದು. ನನಗೆ ನನ್ನ ತಂದೆ ರಾಮೇಶ್ವರದಲ್ಲಿ ರಮಾನಾಥ ಎಂದು ಹೆಸರಿಟ್ಟಿದ್ದಾರೆ. ನಾನೇನೂ ಹಿಂದೂ ವಿರೋಧಿಯಲ್ಲ. ಕೋಮು ಸೂಕ್ಷ್ಮ ಪ್ರದೇಶವಾದ ಬಂಟ್ವಾಳದಲ್ಲಿ ಪ್ರಚೋದನಾತ್ಮಕ ಭಾಷಣ ಸರಿಯಲ್ಲ ಎಂದು ಹೇಳಿದರು.

    ಸುನೀಲ್ ಕುಮಾರ್ ಮನಸ್ಸಲ್ಲಿ ಬರೀ ಮತೀಯವಾದ ತುಂಬಿಕೊಂಡಿದೆ. ಮನಸ್ಸಲ್ಲಿ ಇದ್ದದ್ದು ಮಾತಿನ ಮೂಲಕ ಬಾಯಲ್ಲಿ ಬಂದಿದೆ. ಈ ಬಾರಿ ಚುನಾವಣೆಯಲ್ಲಿ ನನ್ನ ಕ್ಷೇತ್ರದ ಜನ ಇದಕ್ಕೆ ಸರಿಯಾಗಿಯೇ ಉತ್ತರ ಕೊಡುತ್ತಾರೆ ಎಂದು ಹೇಳಿದರು. ಅಲ್ಲದೇ ಹುಲಿ ಯೋಜನೆಯ ಭಯ ಹುಟ್ಟಿಸಿ ಸುನೀಲ್ ಕಾರ್ಕಳದಲ್ಲಿ ಶಾಸಕರಾದರು. ಜೋಳಿಗೆ ಹಿಡಿದು ಬಂದಿದ್ದ ಸುನೀಲ್ ಇಂದು ಎಷ್ಟು ಸಂಪತ್ತು ಮಾಡಿದ್ದಾರೆ ಎಂದು ಗೊತ್ತಿದೆ ಎಂದು ಮಾತಿನ ಚಾಟಿ ಬೀಸಿದರು.

    ನನ್ನ ಜಾತ್ಯಾತೀತ ನಿಲುವನ್ನು ಸುನೀಲ್ ಕುಮಾರ್ ಪ್ರಶ್ನಿಸಬಾರದು. ಆರು ಬಾರಿ ಒಬ್ಬ ಒಂದು ಕ್ಷೇತ್ರದಿಂದ ಗೆದ್ದಿದ್ದಾನೆ ಎಂದರೆ ಆ ವ್ಯಕ್ತಿಯನ್ನು ಜನ ಮತ್ತೆ ಮತ್ತೆ ಯಾಕೆ ಆರಿಸುತ್ತಾರೆ ಎಂದು ತಿಳಿದುಕೊಳ್ಳುವ ಸಾಮಾನ್ಯ ಪರಿಜ್ಞಾನವೂ ಶಾಸಕರಿಗೆ ಇಲ್ಲ ಎಂದರು.